Twitter shut down: ಭಾರತ ಸರ್ಕಾರ ಟ್ವಿಟರ್‌ ಮುಚ್ಚುವ ಬೆದರಿಕೆ‌ ಹಾಕಿತ್ತು ಎಂದ ಜಾಕ್‌ ಡೋರ್ಸೆ, ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಏನು? - Vistara News

ದೇಶ

Twitter shut down: ಭಾರತ ಸರ್ಕಾರ ಟ್ವಿಟರ್‌ ಮುಚ್ಚುವ ಬೆದರಿಕೆ‌ ಹಾಕಿತ್ತು ಎಂದ ಜಾಕ್‌ ಡೋರ್ಸೆ, ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಏನು?

ಭಾರತದಲ್ಲಿ ಟ್ವಿಟರ್‌ ಅನ್ನು ಮುಚ್ಚುವುದಾಗಿ (Twitter shut down) ಬೆದರಿಕೆ ಹಾಕಲಾಗಿತ್ತು ಎಂದು ಟ್ವಿಟರ್‌ ಮಾಜಿ ಸಿಇಒ ಜಾಕ್‌ ಡೋರ್ಸಿ (Twitter shut down) ಆಪಾದಿಸಿದ್ದಾರೆ. ʼʼಇದು ಅಪ್ಪಟ ಸುಳ್ಳುʼʼ ಎಂದು ಕೇಂದ್ರ ಉದ್ಯಮಶೀಲತೆ ಮತ್ತು ಸಹಕಾರಿ ಸಚಿವರಾದ ರಾಜೀವ್‌ ಚಂದ್ರಶೇಖರ್‌ (Rajiv chandrashekhar) ಪ್ರತಿಕ್ರಿಯಿಸಿದ್ದಾರೆ.

VISTARANEWS.COM


on

jack dorsey rajiv chandrashekhar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸ ದಿಲ್ಲಿ: ಭಾರತದಲ್ಲಿ ಸಾಮಾಜಿಕ ಜಾಲತಾಣಗಳ ನಿರ್ವಹಣೆ ಬಗ್ಗೆ ಟ್ವಿಟರ್‌ ಮಾಜಿ ಸಿಇಒ ಜಾಕ್‌ ಡೋರ್ಸಿ ಮಾಡಿರುವ ಆಪಾದನೆಯೊಂದು ಈಗ ಬಿರುಗಾಳಿಗೆ ಕಾರಣವಾಗಿದೆ. ಭಾರತದಲ್ಲಿ ಟ್ವಿಟರ್‌ ಅನ್ನು ಮುಚ್ಚುವುದಾಗಿ (Twitter shut down) ಬೆದರಿಕೆ ಹಾಕಲಾಗಿತ್ತು ಎಂದು ಜಾಕ್‌ ಡೋರ್ಸಿ (Twitter shut down) ಆಪಾದಿಸಿದ್ದಾರೆ. ʼʼಇದು ಅಪ್ಪಟ ಸುಳ್ಳುʼʼ ಎಂದು ಕೇಂದ್ರ ಉದ್ಯಮಶೀಲತೆ ಸಹಕಾರಿ ಸಚಿವ ರಾಜೀವ್‌ ಚಂದ್ರಶೇಖರ್‌ (Rajiv chandrashekhar) ಹೇಳಿದ್ದಾರೆ.

ಜಾಕ್‌ ಡೋರ್ಸಿ ಒಂದು ಸಂದರ್ಶನದ ಸಮಯದಲ್ಲಿ ಈ ಮಾತನ್ನು ಹೇಳಿದ್ದರು. ಯಾವುದಾದರೂ ವಿದೇಶಿ ಸರ್ಕಾರಗಳಿಂದ ಒತ್ತಡವನ್ನು ಎದುರಿಸಿದ್ದೀರಾ ಎಂದು ಅವರನ್ನು ಪ್ರಶ್ನಿಸಲಾಗಿತ್ತು. “ಉದಾಹರಣೆಗೆ, ಭಾರತದಲ್ಲಿ ರೈತರ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭ ಅಂಥ ಕೆಲವು ಸೂಚನೆ ನಮಗೆ ಕೊಡಲಾಗಿತ್ತು. ಸರ್ಕಾರವನ್ನು ಟೀಕಿಸುತ್ತಿದ್ದ ಕೆಲವು ಪತ್ರಕರ್ತರ ಟ್ವೀಟ್‌ಗಳನ್ನು ತೆಗೆಯಲು ಹೇಳಲಾಗಿತ್ತು. ಇಲ್ಲವಾದರೆ ʼಭಾರತದಲ್ಲಿ ನಾವು ಟ್ವಿಟರ್ ಅನ್ನು ಮುಚ್ಚುತ್ತೇವೆ’ ʼನಿಮ್ಮ ಉದ್ಯೋಗಿಗಳ ಮನೆಗಳ ಮೇಲೆ ನಾವು ರೈಡ್‌ ಮಾಡುತ್ತೇವೆ’ ಎಂದು ಬೆದರಿಸಲಾಗಿತ್ತು. ರೈಡ್‌ ಕೂಡ ನಡೆಯಿತು. ಇದು ಪ್ರಜಾಪ್ರಭುತ್ವ ರಾಷ್ಟ್ರವೆನಿಸಿದ ಭಾರತದಲ್ಲಿ ನಡೆದದ್ದುʼʼ ಎಂದು ಡೋರ್ಸಿ ಹೇಳಿದ್ದರು.

ಇದಕ್ಕೆ ಟ್ವಿಟರ್‌ನಲ್ಲಿ ಪೋಸ್ಟ್‌ ಮೂಲಕ ಉತ್ತರ ನೀಡಿರುವ ಸಚಿವ ರಾಜೀವ್‌ ಚಂದ್ರಶೇಖರ್‌, ʼʼಇದೊಂದು ಅಪ್ಪಟ ಸುಳ್ಳುʼʼ ಎಂದಿದ್ದಾರೆ. ʼʼಜಾಕ್‌ ಡೋರ್ಸಿ ಆಡಳಿತದಡಿಯಲ್ಲಿ ಟ್ವಿಟರ್‌ ಭಾರತೀಯ ಕಾನೂನುಗಳನ್ನು ಸತತವಾಗಿ ಉಲ್ಲಂಘಿಸುತ್ತಿತ್ತು. 2020ರಿಂದ 2022ರವರೆಗೆ ಕಾನೂನು ಉಲ್ಲಂಘನೆ ಮಾಡುತ್ತಲೇ ಇದ್ದ ಅವರು 2022ರ ಬಳಿಕವೇ ಅದನ್ನು ಪಾಲಿಸಲು ಆರಂಭಿಸಿದರು. ಆದರೆ ಇದಕ್ಕಾಗಿ ಯಾರೂ ಅವರನ್ನು ಜೈಲಿಗೆ ಹಾಕಲಿಲ್ಲ ಅಥವಾ ಟ್ವಿಟರ್‌ ಅನ್ನು ಶಟ್‌ಡೌನ್‌ ಮಾಡಲಿಲ್ಲ. ಡೋರ್ಸಿಯ ಆಡಳಿತ ಭಾರತೀಯ ಸಾರ್ವಭೌಮ ಕಾನೂನುಗಳನ್ನು ಪಾಲಿಸುವಲ್ಲಿ ಸಮಸ್ಯೆ ಹೊಂದಿತ್ತು. ಭಾರತದ ಕಾನೂನು ತನಗೆ ಅನ್ವಯವಾಗುವುದಿಲ್ಲ ಎಂದು ಅದು ಹೇಳುತ್ತಿತ್ತು. ಭಾರತದಲ್ಲಿ ಕಾರ್ಯಾಚರಿಸುವ ಎಲ್ಲ ಸಂಸ್ಥೆಗಳು ಇಲ್ಲಿ ಕಾನೂನನ್ನು ಪಾಲಿಸಬೇಕುʼʼ ಎಂದು ರಾಜೀವ್‌ ಚಂದ್ರಶೇಖರ್‌ ಹೇಳಿದ್ದಾರೆ.

ʼʼ2021ರ ಜನವರಿಯಲ್ಲಿ ನಡೆದ ರೈತರ ಪ್ರತಿಭಟನೆಗಳ ಸಂದರ್ಭದಲ್ಲಿ ಸಾಕಷ್ಟು ಅಪಪ್ರಚಾರ, ಸುಳ್ಳು ಮಾಹಿತಿಯ ಪ್ರವಾಹವಿತ್ತು. ನರಮೇಧ ನಡೆಯುತ್ತಿದೆ ಎಂದೆಲ್ಲ ಸುಳ್ಳು ಹೇಳಲಾಗಿತ್ತು. ಈ ತಪ್ಪು ಮಾಹಿತಿಯನ್ನು ತೆಗೆದುಹಾಕಲು ಸರ್ಕಾರ ಒತ್ತಾಯಿಸಿತ್ತು. ಯಾಕೆಂದರೆ ನಕಲಿ ಸುದ್ದಿಗಳು ಪರಿಸ್ಥಿತಿಯನ್ನು ಇನ್ನಷ್ಟು ಉಲ್ಬಣಗೊಳಿಸುವಂತಿದ್ದವು. ಜಾಕ್ ಆಡಳಿತದಲ್ಲಿ ಟ್ವಿಟರ್‌ನಲ್ಲಿ ಪಕ್ಷಪಾತದ ನಡವಳಿಕೆ ಇತ್ತು. ಅಮೆರಿಕದಲ್ಲಿ ಇದೇ ರೀತಿಯ ಘಟನೆಗಳು ನಡೆದಾಗ ಅವರು ಅಂಥ ಮಾಹಿತಿ ತೆಗೆದುಹಾಕಿದ್ದರು. ಆದರೆ ಭಾರತದಲ್ಲಿ ತಪ್ಪು ಮಾಹಿತಿ ತೆಗೆದುಹಾಕಲು ಒಪ್ಪಲಿಲ್ಲ. ಆದರೂ ಯಾರೂ ಅವರ ಮೇಲೆ ದಾಳಿ ಮಾಡಲಿಲ್ಲ ಅಥವಾ ಜೈಲಿಗೆ ಕಳುಹಿಸಲಿಲ್ಲ. ಭಾರತೀಯ ಕಾನೂನುಗಳನ್ನು ಅವರು ಅನುಸರಿಸಬೇಕು ಎಂಬುದರ ಮೇಲೆ ಮಾತ್ರ ನಮ್ಮ ಗಮನ ಇತ್ತು. ಜಾಕ್‌ ಡೋರ್ಸಿ ಅವರ ಅನಿಯಂತ್ರಿತ, ಸ್ಪಷ್ಟವಾದ ಪಕ್ಷಪಾತ ಮತ್ತು ತಾರತಮ್ಯದ ನಡವಳಿಕೆ ಮತ್ತು ಅಧಿಕಾರದ ದುರುಪಯೋಗದ ಬಗ್ಗೆ ಸಾರ್ವಜನಿಕ ಡೊಮೇನ್‌ನಲ್ಲಿ ಸಾಕಷ್ಟು ಪುರಾವೆಗಳಿವೆ. ಡೋರ್ಸೆಯ ಅಡಳಿತದಲ್ಲಿ ಟ್ವಿಟರ್ ಕೇವಲ ಭಾರತೀಯ ಕಾನೂನನ್ನು ಉಲ್ಲಂಘಿಸಿದ್ದು ಮಾತ್ರವಲ್ಲ, ಪಕ್ಷಪಾತಿಯಾಗಿ ನಮ್ಮ ಸಂವಿಧಾನದ ಆರ್ಟಿಕಲ್ 14,‌ 19ಗಳನ್ನು ಉಲ್ಲಂಘಿಸಿ, ನಿರಂಕುಶವಾದ ರೀತಿಯಲ್ಲಿ ತಪ್ಪು ಮಾಹಿತಿಯನ್ನು ಆಯುಧವಾಗಿ ಬಳಸುವಂತೆ ಸಹಾಯ ಮಾಡಿತುʼʼ ಎಂದು ಆರ್‌ಸಿ ಆರೋಪಿಸಿದ್ದಾರೆ.

ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಾಮಾಜಿಕ ಮೀಡಿಯಾಗಳಿಗೆ ನಮ್ಮ ಸರ್ಕಾರದ ನೀತಿಗಳು ಸ್ಪಷ್ಟವಾಗಿವೆ. ಸುರಕ್ಷಿತತೆ ಮತ್ತು ವಿಶ್ವಾಸಾರ್ಹತೆಯ ಜತೆಗೆ ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳಲು ಇಲ್ಲಿನ ಕಾನೂನುಗಳನ್ನು ಅವರು ಅನುಸರಿಸಬೇಕು ಎಂದು ರಾಜೀವ್‌ ಚಂದ್ರಶೇಖರ್‌ ಆಗ್ರಹಿಸಿದ್ದಾರೆ.

ಇದನ್ನೂ ಓದಿ: Hindenburg : ಟ್ವಿಟರ್‌ ಸಂಸ್ಥಾಪಕ ಜಾಕ್‌ ಡೋರ್ಸೆ ಕಂಪನಿ ಬ್ಲಾಕ್ ವಿರುದ್ಧ ಹಿಂಡೆನ್‌ಬರ್ಗ್‌ ಸ್ಫೋಟಕ ವರದಿ ಪ್ರಕಟ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Physical Abuse & Murder: ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಬರ್ಬರವಾಗಿ ಕೊಲೆ; ದೃಶ್ಯಂ ಸಿನಿಮಾ ರೀತಿಯಲ್ಲಿ ಎಸ್ಕೇಪ್‌ಗೆ ಯತ್ನ

Physical Abuse & Murder: ಮಧ್ಯಪ್ರದೇಶದ ಬುರ್ಹಾನ್ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಗೌರವ್‌ ಅಲಿಯಾಸ್‌ ಕುಶಾಲ್‌ ಎಂಬ ಯುವಕ ಪುಟ್ಟ ಬಾಲಕಿಯ ಮೇಲೆ ಕ್ರೌರ್ಯ ಮೆರೆದಿದ್ದು, ಬಳಿಕ ಉಸಿರುಗಟ್ಟಿಸಿ ಕೊಂದಿದ್ದಾನೆ. ಇದಕ್ಕೂ ಮುನ್ನ ಗೌರವ್‌ ತನ್ನ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋವೊಂದನ್ನು ನೋಡಿದ್ದ. ಅದನ್ನು ನೋಡಿದ ನಂತರ ಆತನಿಗೆ ತನ್ನ ಮೇಲೆ ನಿಯಂತ್ರಣ ಇಲ್ಲದಂತಾಗಿತ್ತು. ಹೀಗಾಗಿ ಅವನು ಮನೆಯ ಹೊರಗೆ ಆಟವಾಡುತ್ತಿದ್ದ ಆರು ವರ್ಷದ ಬಾಲಕಿಯನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಂತರ ತನ್ನ ಕೃತ್ಯ ಎಲ್ಲಿ ಬಯಲಾಗುತ್ತದೋ ಎಂಬ ಭಯದಲ್ಲಿ ಬಾಲಕಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.

VISTARANEWS.COM


on

physical abuse & murder
Koo

ಮಧ್ಯಪ್ರದೇಶ: ಆಧುನಿಕ ಕಾಲಘಟ್ಟ, ಬದಲಾದ ತಂತ್ರಜ್ಞಾನವು (Technology) ಒಂದೆಡೆ ಒಲಿತನ್ನು ಮಾಡುತ್ತಿದ್ದರೆ, ಮತ್ತೊಂದೆಡೆ ಸಮಾಜ, ಮೌಲ್ಯಗಳ ಅಧಃಪತನಕ್ಕೆ ಕಾರಣವಾಗುತ್ತಿದೆ. ಹಿಂದೆ ಸಿನಿಮಾಗಳನ್ನು ಮನೋರಂಜನೆಗಾಗಿ, ಸಾಮಾಜಿಕ ಮೌಲ್ಯಗಳ ಅರಿವಿಗಾಗಿ ನೋಡುತ್ತಿದ್ದ ಕಾಲಘಟ್ಟವೊಂದಿತ್ತು. ಆದರೆ ಈಗ ಅದೇ ಸಿನಿಮಾದಿಂದ ಪ್ರೇರಿತರಾಗಿ ಅಪರಾಧ ಕೃತ್ಯಗಳನ್ನು ಎಸಗುತ್ತಿರುವ ಘಟನೆಗಳು ಆಗಾಗ ಕಣ್ಣೆದುರು ಬರುತ್ತಿರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ ಮಧ್ಯಪ್ರದೇಶದಲ್ಲಿ 21ವರ್ಷದ ಯುವಕನೋರ್ವ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸೆದು ಕೊಲೆಗೈದು(Physical Abuse & Murder) ಬಳಿಕ ದೃಶ್ಯಂ(Drishyam) ಸಿನಿಮಾ ಶೈಲಿನಲ್ಲಿ ಪೊಲೀಸರಿಂದ ಎಸ್ಕೇಪ್‌ ಆಗಲು ಯತ್ನಿಸಿದ್ದಾನೆ.

ಘಟನೆ ವಿವರ:

ಮಧ್ಯಪ್ರದೇಶದ ಬುರ್ಹಾನ್ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಗೌರವ್‌ ಅಲಿಯಾಸ್‌ ಕುಶಾಲ್‌ ಎಂಬ ಯುವಕ ಪುಟ್ಟ ಬಾಲಕಿಯ ಮೇಲೆ ಕ್ರೌರ್ಯ ಮೆರೆದಿದ್ದು, ಬಳಿಕ ಉಸಿರುಗಟ್ಟಿಸಿ ಕೊಂದಿದ್ದಾನೆ. ಇದಕ್ಕೂ ಮುನ್ನ ಗೌರವ್‌ ತನ್ನ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋವೊಂದನ್ನು ನೋಡಿದ್ದ. ಅದನ್ನು ನೋಡಿದ ನಂತರ ಆತನಿಗೆ ತನ್ನ ಮೇಲೆ ನಿಯಂತ್ರಣ ಇಲ್ಲದಂತಾಗಿತ್ತು. ಹೀಗಾಗಿ ಅವನು ಮನೆಯ ಹೊರಗೆ ಆಟವಾಡುತ್ತಿದ್ದ ಆರು ವರ್ಷದ ಬಾಲಕಿಯನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಂತರ ತನ್ನ ಕೃತ್ಯ ಎಲ್ಲಿ ಬಯಲಾಗುತ್ತದೋ ಎಂಬ ಭಯದಲ್ಲಿ ಬಾಲಕಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.

ದೃಶ್ಯಂ ಶೈಲಿಯಲ್ಲಿ ಎಸ್ಕೇಪ್‌ ಆಗಲು ಪ್ಲ್ಯಾನ್‌

ಬಾಲಕಿಯನ್ನು ಕೊಲೆ ಮಾಡಿದ ಬಳಿಕ ಗೌರವ್‌ ಬಾಲಿವುಡ್‌ ಖ್ಯಾತ ಸಿನಿಮಾ ದೃಶ್ಯಂ ಶೈಲಿಯಲ್ಲೇ ಎಸ್ಕೇಪ್‌ ಆಗಲು ಯತ್ನಿಸಿದ್ದಾನೆ. ಕೃತ್ಯ ಎಸಗಿದ ನಂತರ ಆತ ನೇರವಾಗಿ ಜಿಮ್‌ಗೆ ಹೋಗಿದ್ದಾನೆ. ಅಲ್ಲಿಂದ ನೇರವಾಗಿ ಒಂದು ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳಿದ್ದಾನೆ. ಅಲ್ಲಿ ಸುಮಾರು ಹೊತ್ತು ಕಳೆದಿದ್ದಾನೆ. ಹೀಗೆ ಘಟನೆ ವೇಳೆ ತಾನು ಆ ಸ್ಥಳದಲ್ಲೇ ಇರಲಿಲ್ಲ ಎಂಬುದನ್ನು ಪೊಲೀಸರಿಗೆ ನಂಬಿಸುವ ಪ್ರಯತ್ನ ಮಾಡಿದ್ದ. ಮಗುವಿನ ಮೃತ ಸಿಗುತ್ತಿದ್ದಂತೆ ಪೊಲೀಸರು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದು, ಆಕೆಯ ಮೇಲೆ ಅತ್ಯಾಚಾರ ನಡೆದಿತ್ತು ಎಂಬುದು ಸ್ಪಷ್ಟವಾಗಿತ್ತು. ಅನುಮಾನದ ಮೇರೆ ಯುವಕನನ್ನು ವಿಚಾರಣೆಗೊಳಪಡಿಸಿದಾಗ ಕೃತ್ಯ ಎಸಗಿರುವ ಬಗ್ಗೆ ಬಾಯ್ಬಿಟ್ಟಿದ್ದಾನೆ. ಅದ್ಯ ಗೌರವ್‌ನನ್ನು ಅರೆಸ್ಟ್‌ ಮಾಡಲಾಗಿದ್ದು, ಆತನ ವಿರುದ್ಧ ಪೋಕ್ಸೋ ಕಾಯಿದೆಯಲ್ಲಿ ಕೇಸ್‌ ದಾಖಲಿಸಲಾಗಿದೆ.

ಇದನ್ನೂ ಓದಿ: Viral Video: ಸುಡುವ ಮರಳಿನಲ್ಲಿ ಹಪ್ಪಳ ಸುಟ್ಟ ಬಿಎಸ್‌ಎಫ್‌ ಯೋಧ; ಎಲ್ಲೆಡೆ ಇದೇ ವಿಡಿಯೋ ವೈರಲ್‌

ಮಹಾರಾಷ್ಟ್ರದಲ್ಲೂ ಎರಡು ದಿನಗಳ ಹಿಂದೆ ಇಂತಹದ್ದೇ ಒಂದು ಘಟನೆ ಬೆಳಕಿಗೆ ಬಂದಿದ್ದು, 13 ವರ್ಷದ ಬಾಲಕನೊಬ್ಬ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳನ್ನು ನೋಡಿ 15 ವರ್ಷದ ಅಕ್ಕನ ಮೇಲೆಯೇ ಅತ್ಯಾಚಾರ ಎಸಗಿದ್ದಾನೆ. ಕಳೆದ ಡಿಸೆಂಬರ್‌ನಲ್ಲಿ ಅಕ್ಕ ಹಾಗೂ ತಮ್ಮ ಒಟ್ಟಿಗೆ ಕುಳಿತು ಮೊಬೈಲ್‌ನಲ್ಲಿ ನೀಲಿ ಚಿತ್ರಗಳನ್ನು ವೀಕ್ಷಿಸಿದ್ದಾರೆ. ಇದಾದ ಬಳಿಕ ಇಬ್ಬರೂ ಸೆಕ್ಸ್‌ ಮಾಡಲು ಪ್ರಯತ್ನಿಸಿದ್ದಾರೆ. ಇನ್ನು ಜನವರಿಯಲ್ಲಿ ಬಾಲಕನು ಮತ್ತೆ ವಿಡಿಯೊಗಳನ್ನು ನೋಡಿದ್ದು, ಅದಾದ ನಂತರ ಅಕ್ಕ ಬೇಡ ಎಂದರೂ ಕೇಳದೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದ ಬಳಿಕ ಬಾಲಕಿಯ ಋತುಸ್ರಾವ ಆಗಿಲ್ಲ. ಇದರಿಂದ ಗಾಬರಿಗೊಂಡ ಬಾಲಕಿಯು ತನ್ನ ತಾಯಿಗೆ ವಿಷಯ ತಿಳಿಸಿದ್ದಾಳೆ. ನಂತರ ಅವರು ಆಸ್ಪತ್ರೆಗೆ ತೆರಳಿ ಗರ್ಭಪಾತ ಮಾಡಿಸಲು ಮುಂದಾಗಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ಕ್ರೈಂ

Prajwal Revanna Case: ಪ್ರಜ್ವಲ್‌ ಪಾಸ್‌ಪೋರ್ಟ್‌ ರದ್ದತಿಗಾಗಿ ಪಿಎಂಗೆ ಸಿದ್ದರಾಮಯ್ಯ ಇನ್ನೊಂದು ಪತ್ರ; ಚುರುಕಾದ ವಿದೇಶಾಂಗ ಇಲಾಖೆ

Prajwal Revanna Case: ರಾಜ್ಯ ಸರ್ಕಾರದ ಪತ್ರ ಆಧರಿಸಿ ಕೆಲಸಕ್ಕೆ ಆರಂಬಿಸಿರುವ ಕೇಂದ್ರ ವಿದೇಶಾಂಗ ಇಲಾಖೆ, ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್‌ ರದ್ದು ಮಾಡುವ ಪ್ರಕ್ರಿಯೆ ಆರಂಭಿಸಿದೆ. ಪಾಸ್‌ಪೋರ್ಟ್ ಆಕ್ಟ್ 1967ರ ಸೆಕ್ಷನ್ 10(3)(h) ಅಡಿ ಪಾಸ್‌ಪೋರ್ಟ್ ರದ್ದು ಮಾಡಿ. ಭಾರತಕ್ಕೆ ವಾಪಸ್ ಕರೆ ತರಲು ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿ ಪತ್ರದ ಮೂಲಕ ಕೇಂದ್ರದ ಸಹಕಾರವನ್ನು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ.

VISTARANEWS.COM


on

Prajwal Revanna case Siddaramaiah writes to PM narendra Modi
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ (Prajwal Revanna Case) ಕೇಂದ್ರ ಸರಕಾರದ ವಿರುದ್ಧ ರಾಜತಾಂತ್ರಿಕ ಸಮರದ ಹಾದಿ ಹಿಡಿದಿರುವ ಕರ್ನಾಟಕ ಸರ್ಕಾರ, ಇನ್ನೊಂದು ಪತ್ರವನ್ನು ರವಾನಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅವರಿಗೆ ಮತ್ತೊಂದು ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ (CM Siddaramaiah), ಪ್ರಜ್ವಲ್ ರೇವಣ್ಣನ ರಾಜತಾಂತ್ರಿಕ ಪಾಸ್‌ಪೋರ್ಟ್ (Diplomatic passport) ರದ್ದು ಮಾಡಿ ಎಂದು ಮನವಿ ಮಾಡಿದ್ದಾರೆ.

ರಾಜ್ಯ ಸರ್ಕಾರದ ಪತ್ರ ಆಧರಿಸಿ ಕೆಲಸಕ್ಕೆ ಆರಂಬಿಸಿರುವ ಕೇಂದ್ರ ವಿದೇಶಾಂಗ ಇಲಾಖೆ, ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್‌ ರದ್ದು ಮಾಡುವ ಪ್ರಕ್ರಿಯೆ ಆರಂಭಿಸಿದೆ. ಪಾಸ್‌ಪೋರ್ಟ್ ಆಕ್ಟ್ 1967ರ ಸೆಕ್ಷನ್ 10(3)(h) ಅಡಿ ಪಾಸ್‌ಪೋರ್ಟ್ ರದ್ದು ಮಾಡಿ. ಭಾರತಕ್ಕೆ ವಾಪಸ್ ಕರೆ ತರಲು ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿ ಪತ್ರದ ಮೂಲಕ ಕೇಂದ್ರದ ಸಹಕಾರವನ್ನು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ. ಎಸ್‌ಐಟಿ ಹೊರಡಿಸಿದ ಆರೆಸ್ಟ್‌ ವಾರೆಂಟ್‌ ಸಮೇತ ಪತ್ರದ ಜೊತೆಗೆ ಲಗತ್ತಿಸಲಾಗಿದೆ.

ಪ್ರಕರಣ ಪ್ರಧಾನ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಹಾಲಿ ಸಂಸದ ಹಾಗೂ ಮಾಜಿ ಪ್ರಧಾನಿಗಳ ಕುಟುಂಬದ ಸದಸ್ಯನಾಗಿದ್ದು, ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಪ್ರಯಾಣ ಮಾಡಿದ್ದಾರೆ. FIR ದಾಖಲಾಗುವ ಕೆಲ ಗಂಟೆಗಳಿಗೆ ಮುನ್ನ ದೇಶ ತೊರೆದಿದ್ದಾರೆ. ಅವರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಒತ್ತಾಯ ಪೂರ್ವಕವಾಗಿ ವಿಡಿಯೋ ಮಾಡಿರುವ ಆರೋಪಗಳಿವೆ. ಇಂತಹ ಆರೋಪಿ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಕಾನೂನು ಕ್ರಮಗಳಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಆರೋಪಿ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಿ. ಈ ವಿಚಾರವನ್ನು ಅತ್ಯಂತ ಗಂಭೀರ ಎಂದು ಪರಿಗಣಿಸಿ. ಸಾರ್ವಜನಿಕ ಹಿತಾಸಕ್ತಿ ಕಾರಣಕ್ಕಾಗಿ ಪಾಸ್‌ಪೋರ್ಟ್ ರದ್ದುಗೊಳಿಸಿ ಭಾರತಕ್ಕೆ ಬರುವಂತೆ ಮಾಡಿ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

ಇದು ಸಿಎಂ ಕೇಂದ್ರಕ್ಕೆ ಎರಡನೇ ಬಾರಿ ಬರೆಯುತ್ತಿರುವ ಪತ್ರವಾಗಿದೆ. ಈ ಹಿಂದೆಯೂ ಒಮ್ಮೆ ಅವರು ಪತ್ರ ಬರೆದಿದ್ದರು. ಪ್ರಕರಣದ ಪ್ರಮುಖ ಆರೋಪಿ ಜೆಡಿಎಸ್‌ ಸಂಸದರಾಗಿದ್ದು, ಜೆಡಿಎಸ್‌ ಜತೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಯನ್ನು ಮುಜುಗರ ಹಾಗೂ ಇಕ್ಕಟ್ಟಿಗೆ ಸಿಕ್ಕಿಸುವುದು ಈ ಪತ್ರಗಳ ಉದ್ದೇಶವಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಈ ಬಾರಿ ವಿದೇಶಾಂಗ ಇಲಾಖೆ ಪ್ರಕ್ರಿಯೆ ಚುರುಕುಗೊಳಿಸಿರುವುದರಿಂದ, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್‌ಗೆ ನಿಜವಾಗಿಯೂ ಸಂಕಷ್ಟ ಎದುರಾಗಿದೆ. ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದು ಮಾಡಿದರೆ ಪ್ರಜ್ವಲ್‌ ವಿದೇಶ ಯಾನ ಕಷ್ಟವಾಗಲಿದೆ. ಚಾಲ್ತಿಯಲ್ಲಿಲ್ಲದ ಪಾಸ್‌ಪೋರ್ಟ್‌ ಬಳಸಿದರೆ ಅಧಿಕಾರಿಗಳು ಅವರನ್ನು ಬಂಧಿಸಿ ಭಾರತಕ್ಕೆ ಹಸ್ತಾಂತರಿಸಲು ಸುಲಭವಾಗಲಿದೆ. ಇದರೊಂದಿಗೆ ಪ್ರಜ್ವಲ್‌ಗೆ ಪಲಾಯನದ ದಾರಿಗಳು ಬಂದ್‌ ಆಗಿವೆ.

ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ವಿದೇಶದಲ್ಲಿ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ನಗರದ 42ನೇ ಎಸಿಎಂಎಂ ಕೋರ್ಟ್‌, ಇತ್ತೀಚೆಗೆ ಸಂಸದನ ವಿರುದ್ಧ ಬಂಧನ ವಾರಂಟ್‌ ಹೊರಡಿಸಿ, ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡಲು ಅನುಮತಿ ನೀಡಿತ್ತು. ಹೀಗಾಗಿ‌ ಪ್ರಜ್ವಲ್ ಪಾಸ್‌ ಪೋರ್ಟ್ ರದ್ದು ಮಾಡುವಂತೆ ಕೋರಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಎಸ್‌ಐಟಿ ಪತ್ರ ಬರೆದಿದೆ.

ಈ ಕೂಡಲೇ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪಾಸ್ ಪೋರ್ಟ್ ರದ್ದು ಮಾಡಬೇಕು ಎಂದು ಮನವಿ ಮಾಡಿರುವ ಎಸ್‌ಐಟಿ, ಲುಕ್ ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ಎಲ್ಲವನ್ನೂ ಪತ್ರದ ಜತೆ ಟ್ಯಾಗ್ ಮಾಡಿದೆ. ಜತೆಗೆ ಪ್ರಜ್ವಲ್ ವಿರುದ್ಧದ ಪ್ರಕರಣಗಳ ಬಗ್ಗೆ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡಿದ್ದು, ಸಂಸದ ಯಾವ ದೇಶದಲ್ಲಿ ಇದ್ದಾನೆ ಎಂಬ ಮಾಹಿತಿ ನೀಡುವಂತೆ ಮನವಿ ಮಾಡಿದೆ.

ಇದನ್ನೂ ಓದಿ: Prajwal Revanna Case: 400 ಮಹಿಳೆಯರ ಮೇಲೆ ಪ್ರಜ್ವಲ್‌ ಮಾಸ್‌ ರೇಪ್‌ ಆರೋಪ; ರಾಹುಲ್ ಗಾಂಧಿ ವಿರುದ್ಧ ಡಿಜಿಗೆ ಜೆಡಿಎಸ್‌ ದೂರು

Continue Reading

ಕ್ರೈಂ

Physical Abuse: ಹಿಂದು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಮುಸ್ಲಿಂ ಯುವಕರಿಗೆ ಜೀವಾವಧಿ ಶಿಕ್ಷೆ

Physical Abuse: ಎರಡು ವರ್ಷಗಳ ಹಿಂದೆ ಅಪ್ರಾಪ್ತ ಹಿಂದು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಮೊಹಮ್ಮದ್ ಜಾಫರ್ ಅನ್ಸಾರಿ, ಮೊಹಮ್ಮದ್ ಜಿಬ್ರಿಲ್, ಮೊಹಮ್ಮದ್ ಅಹ್ಮದ್ ಮತ್ತು ಅಖ್ತರ್ ಅನ್ಸಾರಿಗೆ ಬಿಹಾರದ ಮಧುಬನಿ ಜಿಲ್ಲಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಮಧುಬನಿಯ ಹರ್ಲಾಖಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2022ರ ಸೆಪ್ಟೆಂಬರ್ 5ರಂದು ಈ ಘಟನೆ ನಡೆದಿತ್ತು. 16 ವರ್ಷದ ಸಂತ್ರಸ್ತೆ ಮೇಲೆ ಎರಗಿದ ಈ ನಾಲ್ವರು ಸಾಮೂಹಿಕ ಅತ್ಯಚಾರ ಎಸಗಿದ್ದರು.

VISTARANEWS.COM


on

Physical Abuse
Koo

ಪಟ್ನ: ಎರಡು ವರ್ಷಗಳ ಹಿಂದೆ ಅಪ್ರಾಪ್ತ ಹಿಂದು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ (Physical Abuse) ಎಸಗಿದ್ದ ನಾಲ್ವರಿಗೆ ಬಿಹಾರದ ಮಧುಬನಿ ಜಿಲ್ಲಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಮೊಹಮ್ಮದ್ ಜಾಫರ್ ಅನ್ಸಾರಿ, ಮೊಹಮ್ಮದ್ ಜಿಬ್ರಿಲ್, ಮೊಹಮ್ಮದ್ ಅಹ್ಮದ್ ಮತ್ತು ಅಖ್ತರ್ ಅನ್ಸಾರಿ ಇವರೇ ಶಿಕ್ಷೆಗೆ ಗುರಿಯಾದ ಅಪರಾಧಿಗಳು. ಜತೆಗೆ ನ್ಯಾಯಾಲಯವು ಅಪರಾಧಿಗಳಿಗೆ ತಲಾ 25,000 ರೂ.ಗಳ ದಂಡವನ್ನೂ ವಿಧಿಸಿದೆ (Crime News).

ಮಧುಬನಿಯ ಹರ್ಲಾಖಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2022ರ ಸೆಪ್ಟೆಂಬರ್ 5ರಂದು ಈ ಘಟನೆ ನಡೆದಿತ್ತು. 16 ವರ್ಷದ ಸಂತ್ರಸ್ತೆ ಮೇಲೆ ಎರಗಿದ ಈ ನಾಲ್ವರು ಸಾಮೂಹಿಕ ಅತ್ಯಚಾರ ಎಸಗಿದ್ದರು.

ಘಟನೆಯ ವಿವರ

ಅಂದು ಸಂತ್ರಸ್ತೆ ತನ್ನ ಸಹೋದರನೊಂದಿಗೆ ಕಸೆರಾ ಗ್ರಾಮದ ಜಾತ್ರೆಗೆ ಹೋಗಿದ್ದಳು. ಸ್ವಲ್ಪ ಸಮಯದ ನಂತರ ಆಕೆ ಸಮೀಪದ ಶಾಲೆಯೊಂದರ ಶೌಚಾಲಯಕ್ಕೆ ತೆರಳಿದ್ದಳು. ಈ ವೇಳೆ ಮೊಹಮ್ಮದ್ ಜಾಫರ್ ಅನ್ಸಾರಿ, ಮೊಹಮ್ಮದ್ ಜಿಬ್ರಿಲ್, ಮೊಹಮ್ಮದ್ ಅಹ್ಮದ್ ಮತ್ತು ಅಖ್ತರ್ ಅನ್ಸಾರಿ ಕೂಡ ಅಲ್ಲಿಗೆ ಆಗಮಿಸಿದ್ದರು. ಶೌಚಾಲಯದಿಂದ ಹೊರಬಂದ ಆಕೆಯನ್ನು ಬಲವಂತವಾಗಿ ಶಾಲೆಯ ಛಾವಣಿಗೆ ಕರೆದೊಯ್ದರು. ಅಲ್ಲಿ ಅವರು ಸರದಿಯಂತೆ ಸಾಮೂಹಿಕ ಅತ್ಯಾಚಾರ ಎಸಗಿದರು. ಬಾಲಕಿಯ ಕೂಗು ಕೇಳಿದ ಸ್ಥಳೀಯರು ಜಮಾಯಿಸಲು ಆರಂಭಿಸುತ್ತಿದ್ದಂತೆ ತಾವು ಸಿಕ್ಕಿಬೀಳುತ್ತೇವೆ ಎಂಬ ಭಯದಿಂದ ಈ ಎಲ್ಲ ನಾಲ್ಕು ಅಪರಾಧಿಗಳು ಅಲ್ಲಿಂದ ತಲೆ ಮರೆಸಿಕೊಂಡಿದ್ದರು. ಬಳಿಕ ಸ್ಥಳೀಯರು ಬೆನ್ನಟ್ಟಿ ಜಾಫರ್ ಅನ್ಸಾರಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು.

ತನಿಖೆ ವೇಳೆ ಮೊಹಮ್ಮದ್ ಜಿಬ್ರಿಲ್, ಮೊಹಮ್ಮದ್ ಅಹ್ಮದ್ ಮತ್ತು ಅಖ್ತರ್ ಅನ್ಸಾರಿ ಅವರೂ ಕೃತ್ಯದಲ್ಲಿ ಭಾಗಿಯಾಗಿರುವುದು ಕಂಡು ಬಂದಿತ್ತು. ಬಳಿಕ ಅಧಿಕಾರಿಗಳು ದಾಳಿ ನಡೆಸಿ ಮೂವರನ್ನೂ ಬಂಧಿಸಿದ್ದರು. ಘಟನೆ ನಡೆದ ಮಾರನೇ ದಿನ ಅಂದರೆ 2022ರ ಸೆಪ್ಟೆಂಬರ್‌ 6ರಂದು ಅಪರಾಧಿಗಳ ವಿರುದ್ಧ ಬಾಲಕಿಯ ತಾಯಿ ದೂರು ದಾಖಲಿಸಿದ್ದರು. ಇದರ ಆಧಾರದಲ್ಲಿ ನಾಲ್ವರ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 376 (ಡಿ) ಮತ್ತು ಪೋಕ್ಸೊ ಕಾಯ್ದೆಯಡಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸಿದ್ದರು.

ಸಂತ್ರಸ್ತೆಯ ಸಹೋದರಿಯ ಮೇಲೂ ನಡೆದಿತ್ತು ದೌರ್ಜನ್ಯ

ʼʼನ್ಯಾಯಾಲಯವು ತನ್ನ ತೀರ್ಪಿನಲ್ಲಿ ಎಲ್ಲ ಅಪರಾಧಿಗಳನ್ನು ಅವರ ಕೊನೆಯ ಉಸಿರಿರುವವರೆಗೂ ಜೈಲಿನಲ್ಲಿಡಲು ಆದೇಶಿಸಿದೆ. ಒಂದೂವರೆ ವರ್ಷಗಳ ಕಾಲ ನಡೆದ ವಿಚಾರಣೆಯ ಸಮಯದಲ್ಲಿ, ಅಪರಾಧಿಗಳು ಅನೇಕ ಬಾರಿ ವಕೀಲರನ್ನು ಬದಲಾಯಿಸಿದ್ದಾರೆ. ಆದಾಗ್ಯೂ ಅವರಿಗೆ ಯಾವುದೇ ಪ್ರಯೋಜನ ಸಿಗಲಿಲ್ಲ. ಕೊನೆಗೂ ಅಪರಾಧಿಗಳಿಗೆ ಶಿಕ್ಷೆಯಾಗಿದೆʼʼ ಎಂದು ಸಂತ್ರಸ್ತೆಯ ಪರ ವಕೀಲರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ 5 ಲಕ್ಷ ರೂ. ಪರಿಹಾರ ಪಾವತಿಸುವಂತೆಯೂ ಬಿಹಾರ ಸರ್ಕಾರಕ್ಕೆ ಕೋರ್ಟ್‌ ಸೂಚಿಸಿದೆ. ʼʼದೌರ್ಭಾಗ್ಯ ಎಂದರೆ ಸಂತ್ರಸ್ತೆಯ ಸಹೋದರಿಯ ಮೇಲೂ ಸಾಮೂಹಿಕ ಅತ್ಯಾಚಾರ ನಡೆದಿದೆ. ಈ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಜೂನ್‌ನಲ್ಲಿ ಕೈಗೆತ್ತಿಕೊಳ್ಳಲಿದೆʼʼ ಎಂದು ವಕೀಲರು ಹೇಳಿದ್ದಾರೆ.

ಇದನ್ನೂ ಓದಿ: Physical Abuse & Murder: ಬಾಲಕಿ ಮೇಲೆ ಅತ್ಯಾಚಾರ, ಸಜೀವ ದಹನ ಕೇಸ್‌; ಹಂತಕರಿಗೆ ಮರಣದಂಡನೆ

Continue Reading

ಕ್ರೈಂ

ಎಐ ತಂತ್ರಜ್ಞಾನದಿಂದ ಹಿಂದು ಯುವತಿಯ ಅಶ್ಲೀಲ ವಿಡಿಯೊ ಸೃಷ್ಟಿಸಿ ಇಸ್ಲಾಂಗೆ ಮತಾಂತರಗೊಳಿಸಲು ಯತ್ನ: ಫೈಜಲ್ ವಿರುದ್ಧ ದೂರು

Cyber Crime: ಉತ್ತರ ಪ್ರದೇಶದ ಬರೇಲಿಯಲ್ಲಿ ಹಿಂದು ವಿದ್ಯಾರ್ಥಿನಿಯನ್ನು ಬೆದರಿಸಿ ಇಸ್ಲಾಂಗೆ ಮತಾಂತರಗೊಳಿಸಲು ಮುಂದಾದ ಆಘಾತಕಾರಿ ಘಟನೆ ನಡೆದಿದೆ. ಮತಾಂತರಗೊಂಡು ಮದುವೆಯಾಗುವಂತೆ ಫೈಜಲ್ ಮತ್ತು ಅಮೀನ್ ಅವರಿಂದ ಬೆದರಿಕೆಗಳು ಬರುತ್ತಿವೆ ಎಂದು ವಿದ್ಯಾರ್ಥಿನಿ ತಿಳಿಸಿದ್ದಾಳೆ. ಈ ಸಂಬಂಧ ಮೇ 20ರಂದು ಸಂತ್ರಸ್ತೆಯ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

VISTARANEWS.COM


on

Cyber Crime
Koo

ಬೆಂಗಳೂರು: ಉತ್ತರ ಪ್ರದೇಶದ ಬರೇಲಿಯಲ್ಲಿ ಹಿಂದು ವಿದ್ಯಾರ್ಥಿನಿಯನ್ನು ಬೆದರಿಸಿ ಇಸ್ಲಾಂಗೆ ಮತಾಂತರಗೊಳಿಸಲು ಮುಂದಾದ ಆಘಾತಕಾರಿ ಘಟನೆ ನಡೆದಿದೆ. ಮತಾಂತರಗೊಂಡು ಮದುವೆಯಾಗುವಂತೆ ಫೈಜಲ್ ಮತ್ತು ಅಮೀನ್ ಅವರಿಂದ ಬೆದರಿಕೆಗಳು ಬರುತ್ತಿವೆ ಎಂದು ವಿದ್ಯಾರ್ಥಿನಿ ತಿಳಿಸಿದ್ದಾಳೆ. ಆರೋಪಿಗಳು ಎಐ ತಂತ್ರಜ್ಞಾನ (AI tool) ಬಳಸಿಕೊಂಡು ವಿದ್ಯಾರ್ಥಿನಿಯ ಅಶ್ಲೀಲ ವಿಡಿಯೊವನ್ನು ರಚಿಸಿದ್ದು, ಇದನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಒಡ್ಡಿ ಮತಾಂತರ ನಡೆಸಲು ಯತ್ನಿಸುತ್ತಿದ್ದಾರೆ. ಈ ಸಂಬಂಧ ಮೇ 20ರಂದು ಸಂತ್ರಸ್ತೆಯ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ (Cyber Crime).

ಬರೇಲಿಯ ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತನ್ನ ಮಗಳು ಕಾಲೇಜು ವಿದ್ಯಾರ್ಥಿನಿಯಾಗಿದ್ದು, ಈ ಘಟನೆಯಿಂದ ಆಘಾತಕ್ಕೊಳಗಾಗಿದ್ದಾಳೆ ಎಂದು ಆಕೆಯ ತಂದೆ ತಿಳಿಸಿದ್ದಾರೆ. ʼʼಮೇ 7ರಂದು ಫೈಜಲ್ ಮಗಳ ವಾಟ್ಸ್‌ಆ್ಯಪ್‌ ನಂಬರ್‌ಗೆ ʼಹಾಯ್ʼ ಎನ್ನುವ ಸಂದೇಶ ಕಳುಹಿಸಿದ್ದ. ಅಪರಿಚಿತ ನಂಬರ್‌ ಆಗಿರುವುದರಿಂದ ಮಗಳು ಇದಕ್ಕೆ ಪ್ರತಿಕ್ರಿಯೆ ನೀಡಿರಲಿಲ್ಲ. ಹೀಗಾಗಿ ಆತ ಕರೆ ಮಾಡಿ ಬಲವಂತವಾಗಿ ಮಾತನಾಡಲು ಪ್ರಯತ್ನಿಸಿದ್ದ. ಈ ವೇಳೆ ಫೈಜಲ್ ತಾನು ಆಕೆಯನ್ನು ಇಷ್ಟಪಡುವುದಾಗಿ ಹೇಳಿದ್ದ. ಜತೆಗೆ ಇಸ್ಲಾಂಗೆ ಮತಾಂತರವಾಗು. ಆಗ ನಾನು ಯಾವಾಗಲೂ ನಿನ್ನನ್ನು ಸಂತೋಷವಾಗಿರಿಸುತ್ತೇನೆ ಎಂದು ಹೇಳಿದ್ದʼʼ ಎನ್ನುವುದು ಸಂತ್ರಸ್ತೆಯ ತಂದೆ ನೀಡಿದ ವಿವರಣೆ.

ʼʼಇದನ್ನು ಕೇಳಿದ ನಂತರ ಮಗಳು ಯಾವುದೇ ಪ್ರತಿಕ್ರಿಯೆ ನೀಡದೆ ಫೋನ್ ಸಂಪರ್ಕ ಕಡಿತಗೊಳಿಸಿದ್ದಳು. ಮೇ 19ರಂದು ಮತ್ತೆ ಆಕೆಗೆ ಅದೇ ಸಂಖ್ಯೆಯಿಂದ ಮತ್ತೊಮ್ಮೆ ಮೆಸೇಜ್‌ ಬಂದಿದೆ. ಆಕೆ ಯಾರೆಂದು ಕೇಳಿದಾಗ ವಿಡಿಯೊ ಫೈಜಲ್‌ ಕರೆ ಮಾಡಲು ಆರಂಭಿಸಿದ್ದ. ಆಕೆ ರಿಸೀವ್‌ ಮಾಡದೇ ಇದ್ದಾಗ ಅಶ್ಲೀಲ ಸಂದೇಶಗಳು ಮತ್ತು ಅಶ್ಲೀಲ ವಿಡಿಯೊಗಳನ್ನು ಕಳುಹಿಸಿದ್ದ. ಇದಕ್ಕೆ ಆಕ್ಷೇಪ ಸಲ್ಲಿಸಿದಾಗ ಆತ ಮನೆಗೆ ಬಂದು ಅಪಹರಿಸುವುದಾಗಿ ಬೆದರಿಕೆ ಹಾಕಿದ್ದ. ಮಾತ್ರವಲ್ಲ ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿಯೂ ಹೆದರಿಸಿದ್ದʼʼ ಎಂದು ವಿದ್ಯಾರ್ಥಿನಿಯ ತಂದೆ ದೂರಿನಲ್ಲಿ ತಿಳಿಸಿದ್ದಾರೆ.

ಜತೆಗೆ ಫೈಜಲ್‌, ಮತಾಂತರಗೊಳ್ಳಲಿದಿದ್ದರೆ ಎಐ ತಂತ್ರಜ್ಞಾನ ಬಳಿಸಿ ಯುವತಿಯ ಅಶ್ಲೀಲ ಫೋಟೊ, ವಿಡಿಯೊ ರಚಿಸುವುದಾಗಿಯೂ ಬೆದರಿಕೆ ಹಾಕಿದ್ದಾನೆ. ಇದು ಹೊರ ಬಂದರೆ ಮತ್ತೆ ಆಕೆಗೆ ತಲೆ ಎತ್ತು ನಡೆಯಲೂ ಸಾಧ್ಯವಿಲ್ಲ ಎಂದು ಹೇಳಿದ್ದಾಗಿ ದೂರಿನಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: Attempting to Convert: ಯೋಗಿ ನಾಡಿನಲ್ಲಿ ಮತಾಂತರಕ್ಕೆ ಯತ್ನ; ಪಾದ್ರಿ ಸೇರಿ 10 ಮಂದಿಯ ಬಂಧನ

ಇದಾದ ಬಳಿಕ ಸಂತ್ರಸ್ತೆ ತಮ್ಮ ಮನೆಯವರಿಗೆ ವಿಷಯ ತಿಳಿಸಿದ್ದಳು. ತನಿಖೆ ನಡೆಸಿದಾಗ ಬೆದರಿಕೆಯ ಕರೆ ಬಂದ ಫೋನ್‌ ನಂಬರ್‌ ಬರೇಲಿಯ ಭೋಜಿಪುರ ಪೊಲೀಸ್ ಠಾಣೆ ಪ್ರದೇಶದಲ್ಲಿ ವಾಸಿಸುವ ಫೈಜಲ್‌ನದ್ದು ಎಂದು ತಿಳಿದು ಬಂತು. ಹೆಚ್ಚಿನ ವಿಚಾರಣೆ ವೇಳೆ ಪ್ರಕರಣದಲ್ಲಿ ಫೈಜಲ್‌ನ ತಂದೆ ಅಮೀನ್‌ನ ಕೈವಾಡ ಇರುವುದು ಕೂಡ ಕಂಡುಬಂತು. ಇಬ್ಬರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಂತ್ರಸ್ತೆಯ ತಂದೆ ಆಗ್ರಹಿಸಿದ್ದಾರೆ.

Continue Reading
Advertisement
RCB Funny Memes
ಕ್ರೀಡೆ9 mins ago

RCB Funny Memes: ಕೊನೆಗೊಂಡ ಆರ್​ಸಿಬಿಯ ಹೊಸ ಅಧ್ಯಾಯ; ಟ್ರೋಲ್​, ಮೀಮ್ಸ್​ಗಳ ಮೂಲಕವೇ ತಿರುಗೇಟು ಕೊಟ್ಟ ಚೆನ್ನೈ ಅಭಿಮಾನಿಗಳು

Hamas Terrorists
ವಿದೇಶ12 mins ago

ಎಲ್ಲೆ ಮೀರಿದ ಹಮಾಸ್‌ ಉಗ್ರರ ಅಟ್ಟಹಾಸ; ಗಾಯಗೊಂಡ ಇಸ್ರೇಲಿ ಮಹಿಳಾ ಸೈನಿಕರ ಮೇಲೆ ಲೈಂಗಿಕ ದೌರ್ಜನ್ಯ: ಭಯಾನಕ ವಿಡಿಯೊ ಇಲ್ಲಿದೆ

PM Narendra Modi
Lok Sabha Election 202421 mins ago

PM Narendra Modi: ಪ್ರಧಾನಿ ಮೋದಿ ರ್‍ಯಾಲಿಯಲ್ಲಿ ಜನವೋ…ಜನ! ಅದ್ಬುತ ದೃಶ್ಯ ಕ್ಯಾಮೆರಾದಲ್ಲಿ ಸೆರೆ-ವಿಡಿಯೋ ವೈರಲ್‌

Murder Case
ಬೆಳಗಾವಿ22 mins ago

Murder case : ಮಕ್ಕಳ ಎದುರೇ ಪತ್ನಿಗೆ ಸಲಾಕೆಯಿಂದ ಹೊಡೆದು ಕೊಂದು ಪರಾರಿಯಾದ ಪತಿ

gold rate today kiara
ಚಿನ್ನದ ದರ39 mins ago

Gold Rate Today: ಚಿನ್ನ ಕೊಳ್ಳಲು ಇಂದೇ ಸುದಿನ, ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ!

hotel oterra bomb hoax
ಕ್ರೈಂ57 mins ago

bomb Hoax: ಶಾಲೆ, ದೇವಸ್ಥಾನದ ಬಳಿಕ ರಾಜಧಾನಿಯ ಪ್ರತಿಷ್ಠಿತ ಹೋಟೆಲ್‌ಗೂ ಬಾಂಬ್‌ ಬೆದರಿಕೆ

T20 World Cup 2024
ಕ್ರೀಡೆ59 mins ago

T20 World Cup 2024: ಇನ್ನೆರಡು ದಿನದಲ್ಲಿ ಮಿನಿ ವಿಶ್ವಕಪ್​ ಸಮರಕ್ಕೆ ರೋಹಿತ್​, ಕೊಹ್ಲಿ ಸೇರಿ ಮೊದಲ ಬ್ಯಾಚ್​ ನ್ಯೂಯಾರ್ಕ್​ಗೆ ಪ್ರಯಾಣ

physical abuse & murder
ಕ್ರೈಂ1 hour ago

Physical Abuse & Murder: ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಬರ್ಬರವಾಗಿ ಕೊಲೆ; ದೃಶ್ಯಂ ಸಿನಿಮಾ ರೀತಿಯಲ್ಲಿ ಎಸ್ಕೇಪ್‌ಗೆ ಯತ್ನ

cylinder blast in Tumkur
ತುಮಕೂರು1 hour ago

Cylinder Blast: ಗ್ಯಾಸ್‌ ಸಿಲಿಂಡರ್ ಸ್ಫೋಟ; 7 ದಿನ ನರಳಾಡಿ ಪ್ರಾಣಬಿಟ್ಟ ಇಬ್ಬರು ಗಾಯಾಳುಗಳು

Kalki 2898 AD
ಸಿನಿಮಾ1 hour ago

Kalki 2898 AD: ʼಕಲ್ಕಿʼ ಚಿತ್ರದ ನಾಯಕ ಭೈರವನ ಆಪ್ತ ಗೆಳೆಯ ಬುಜ್ಜಿ ಯಾರು? ಈ ವಿಡಿಯೊ ನೋಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ7 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 day ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌