MRF share price History create Now the price of MRF 1 share is Rs 1 lakhMRF share price : ಇತಿಹಾಸ ಸೃಷ್ಟಿಸಿದ ಎಂಆರ್‌ಎಫ್‌, 1 ಷೇರಿನ ದರ 1 ಲಕ್ಷ ರೂ.

ಪ್ರಮುಖ ಸುದ್ದಿ

MRF share price : ಇತಿಹಾಸ ಸೃಷ್ಟಿಸಿದ ಎಂಆರ್‌ಎಫ್‌, 1 ಷೇರಿನ ದರ 1 ಲಕ್ಷ ರೂ.

MRF share price ಟೈರ್‌ ಉತ್ಪಾದಕ ಎಂಆರ್‌ಎಫ್‌ನ ಪ್ರತಿ ಷೇರಿನ ದರ ದಾಖಲೆಯ 1 ಲಕ್ಷ ರೂ.ಗೆ ಏರಿಕೆಯಾಗಿದೆ. ವಿವರ ಇಲ್ಲಿದೆ.

VISTARANEWS.COM


on

MRF Tyres
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ದೇಶದ ಷೇರು ಮಾರುಕಟ್ಟೆ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಟೈರ್‌ ಉತ್ಪಾದಕ ಎಂಆರ್‌ಎಫ್‌ (MRF share price) ಕಂಪನಿಯ ಷೇರು ದರ 1 ಲಕ್ಷ ರೂ.ಗೆ ಏರಿಕೆಯಾಗಿ ಇತಿಹಾಸ ನಿರ್ಮಿಸಿದೆ. ಬಿಎಸ್‌ಇನಲ್ಲಿ ಬೆಳಗ್ಗೆ ಪ್ರತಿ ಎಂಆರ್‌ಎಫ್‌ ಷೇರಿನ ದರ 100,300 ರೂ.ಗೆ ಏರಿತು. ಕಳೆದ 52 ವಾರಗಳಲ್ಲಿಯೇ ಇದು ಗರಿಷ್ಠ ಎತ್ತರವಾಗಿದೆ.

ಈ ಹಿಂದೆ ಮೇನಲ್ಲಿ ಎಂಆರ್‌ಎಫ್‌ (Madras Rubber Factory) ಷೇರಿನ ದರ 100,00 ರೂ.ಗಳ ಗಡಿಗೆ 66.50 ರೂ. ಕೊರತೆ ದಾಖಲಿಸಿತ್ತು. ಭಾರತದ ಷೇರು ಮಾರುಕಟ್ಟೆಯಲ್ಲಿ ಅತ್ಯಂತ ದುಬಾರಿ ಷೇರು ಎಂಆರ್‌ಎಫ್‌ನದ್ದಾಗಿದೆ. ಹಾಗಾದರೆ ಎಂಆರ್‌ಎಫ್‌ ಷೇರು ದರ ಏಕೆ ದುಬಾರಿಯಾಗಿದೆ? ಸಾಮಾನ್ಯವಾಗಿ ಷೇರನ್ನು ವಿಭಜಿಸಿದಾಗ ಪ್ರತಿ ಷೇರಿನ ದರ ಕಡಿಮೆಯಾಗುತ್ತದೆ. ಆದರೆ ಎಂಆರ್‌ಎಫ್‌ ಎಂದೂ ತನ್ನ ಷೇರನ್ನು ವಿಭಜಿಸಿಲ್ಲ. ಹೀಗಾಗಿ ಅದು ದುಬಾರಿಯಾಗಿದೆ.

ಚೆನ್ನೈ ಮೂಲದ ಎಂಆರ್‌ಎಫ್‌ ಕಂಪನಿಯು ಒಟ್ಟು 42,41,143 ಷೇರುಗಳನ್ನು ಹೊಂದಿದೆ. ಇದರಲ್ಲಿ 30,60,312 ಷೇರುಗಳನ್ನು ಸಾರ್ವಜನಿಕ ಹೂಡಿಕೆದಾರರು ಹೊಂದಿದ್ದಾರೆ. ಅಂದರೆ 72.16% ಆಗುತ್ತದೆ. ಪ್ರವರ್ತಕರು 11,80,831 ಷೇರುಗಳನ್ನು ಹೊಂದಿದ್ದಾರೆ. ಒಟ್ಟು ಈಕ್ವಿಟಿಯಲ್ಲಿ 27.84% ಪಾಲು ಹೊಂದಿದ್ದಾರೆ. ಪ್ರತಿ ಷೇರಿನ ದರ ದುಬಾರಿಯಾಗಿರುವುದರಿಂದ ಎಂಆರ್‌ಎಫ್‌ನಲ್ಲಿ ರಿಟೇಲ್‌ ಹೂಡಿಕೆದಾರರ ಸಂಖ್ಯೆ 40,000 ಆಗಿದೆ. ಕಳೆದ ಮೂರು ತಿಂಗಳಿನಲ್ಲಿ ಎಂಆರ್‌ಎಫ್‌ ಷೇರು ದರ 20% ಏರಿಕೆಯಾಗಿದೆ.

ಹನಿವೆಲ್‌ ಆಟೊಮೇಶನ್‌ ಷೇರು ದರ 41,152 ರೂ,ನಷ್ಟಿದೆ. ಪೇಜ್‌ ಇಂಡಸ್ಟ್ರೀಸ್‌, ಶ್ರೀ ಸಿಮೆಂಟ್‌, 3ಎಂ ಇಂಡಿಯಾ, ಅಬೋಟ್‌ ಇಂಡಿಯಾ, ನೆಸ್ಲೆ, ಬಾಷ್‌ ಷೇರು ದರಗಳೂ ದುಬಾರಿಯಾಗಿವೆ.

10 ವರ್ಷದ ಹಿಂದೆ 10,000 ರೂ: ಎಂಆರ್‌ಎಫ್‌ ಷೇರು ದರ 2012ರ ಫೆಬ್ರವರಿ 21ರಂದು 10,000 ರೂ. ಇತ್ತು. ಅಂದು ಯಾರಾದರೂ 10 ಸಾವಿರಕ್ಕೆ ಒಂದು ಷೇರು ಖರೀದಿಸಿರುತ್ತಿದ್ದರೆ ಈಗ ಅದರ ಬೆಲೆ 1 ಲಕ್ಷ ರೂ. ಆಗಿರುತ್ತಿತ್ತು. ಆದರೆ ಎಂಆರ್‌ಎಫ್‌ ಷೇರು 90,000 ರೂ.ನಿಂದ 1 ಲಕ್ಷ ರೂ.ಗೆ ಏರಿಕೆಯಾಗಲು 2 ವರ್ಷ ತೆಗೆದುಕೊಂಡಿತ್ತು. 2021ರ ಜನವರಿ 20ರಂದು ಮೊದಲ ಬಾರಿಗೆ ಷೇರು 90,000 ರೂ.ಗೆ ಏರಿತ್ತು. ಎಂಆರ್‌ಎಫ್‌ ಷೇರುದಾರರಿಗೆ ಡಿವಿಡೆಂಡ್‌ ವಿತರಿಸಿದೆ. ಆದರೆ ಬೋನಸ್‌ ಷೇರು ಕೊಟ್ಟಿಲ್ಲ. 2022-23ರಲ್ಲಿ ಪ್ರತಿ ಷೇರಿಗೆ 175 ರೂ. ಡಿವಿಡೆಂಡ್‌ ನೀಡಿತ್ತು.

ಎಂಆರ್‌ಎಫ್‌ ಕಳೆದ ಜನವರಿ-ಮಾರ್ಚ್‌ ತ್ರೈಮಾಸಿಕದಲ್ಲಿ 410 ಕೋಟಿ ರೂ. ನಿವ್ವಳ ಲಾಭ ಗಳಿಸಿತ್ತು. 161% ಏರಿಕೆ ದಾಖಲಿಸಿತ್ತು. 2013-17ರ ತನಕ ಸತತ 5 ವರ್ಷ ಎಂಆರ್‌ಎಫ್‌ ಧನಾತ್ಮಕ ಫಲಿತಾಂಶ ಕೊಟ್ಟಿತ್ತು. ಅಂದರೆ ಲಾಭ ಗಳಿಸಿತ್ತು. ಎಂಆರ್‌ಎಫ್‌ ಟೈರ್‌ ಕಂಪನಿಯನ್ನು 77 ವರ್ಷಗಳ ಹಿಂದೆ ತಮಿಳುನಾಡಿನಲ್ಲಿ ಸ್ಥಾಪಿಸಲಾಗಿತ್ತು. ಕಂಪನಿಯಲ್ಲಿ 18,000 ಮಂದಿ ಉದ್ಯೋಗಿಗಳು ಇದ್ದಾರೆ. ಕೊಟ್ಟಾಯಂ, ಪುದುಚೇರಿ, ಪೆರಂಬದೂರು, ತಿರುವೊಟ್ಟಿಯೂರ್‌, ಮೇದಕ್‌, ಅಂಕೇನಪಳ್ಳಿಯಲ್ಲಿ ಉತ್ಪಾದನಾ ಘಟಕ ಹೊಂದಿದೆ. 1997ರಲ್ಲಿ ಎಂಆರ್‌ಎಫ್‌ ತನ್ನ ಮೊದಲ ಫಾರ್ಮುಲಾ 3 ಕಾರನ್ನು ನಿರ್ಮಿಸಿತ್ತು.

ಇದನ್ನೂ ಓದಿ: UAE investment in India : ಭಾರತದಲ್ಲಿ 4ನೇ ದೊಡ್ಡ ಹೂಡಿಕೆದಾರನಾಗಿ ಹೊರಹೊಮ್ಮಿದ ಅರಬ್‌ ರಾಷ್ಟ್ರ ಯುಎಇ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IND vs USA: ಅಪಾಯಕಾರಿ ಅಮೆರಿಕ ಸವಾಲಿಗೆ ಸಡ್ಡು ಹೊಡೆದೀತೇ ಟೀಮ್​ ಇಂಡಿಯಾ?

IND vs USA: ಸಂಪೂರ್ಣ ಬೌಲಿಂಗ್​ ಟ್ರ್ಯಾಕ್ ಆಗಿರುವ ನಸ್ಸೌ ಪಿಚ್​ನಲ್ಲಿ ಬ್ಯಾಟಿಂಗ್​ ನಡೆಸುವುದು ಅಷ್ಟು ಸುಲಭವಲ್ಲ. 100 ರನ್​ ಬಾರಿಸಿದರೂ ಇದನ್ನು ತಡೆದು ನಿಲ್ಲಿಸುವ ಸಾಮರ್ಥ್ಯ ಬೌಲರ್​ಗಳಿಗಿದೆ. ಪಿಚ್​ನಲ್ಲಿ ಬಿರುಕು ಇರುವ ಕಾರಣ ಚೆಂಡಿನ ಚಲನೆ ಯಾವ ರೀತಿ ಇರುತ್ತದೆ ಎನ್ನುವುದನ್ನು ಅರಿತುಕೊಳ್ಳುವಲ್ಲಿ ಬ್ಯಾಟರ್​ಗಳು ವಿಫಲರಾಗುತ್ತಿದ್ದಾರೆ.

VISTARANEWS.COM


on

IND vs USA
Koo

ನ್ಯೂಯಾರ್ಕ್​: ಪ್ರಸಕ್ತ ಸಾಗುತ್ತಿರುವ ಟಿ20 ವಿಶ್ವಕಪ್​ ಟೂರ್ನಿಯ(T20 World Cup 2024) ಲೀಗ್​ ಹಂತದ ಪಂದ್ಯದಲ್ಲಿ ಸತತ 2 ಪಂದ್ಯಗಳನ್ನು ಗೆದ್ದು ಅಜೇಯ ಓಟ ಕಾಯ್ದುಕೊಂಡಿರುವ ಭಾರತ ಮತ್ತು ಅಮೆರಿಕ(IND vs USA) ನಾಳೆ ನಡೆಯುವ ಪಂದ್ಯದಲ್ಲಿ ಕಣಕ್ಕಿಳಿಯಲಿವೆ. ಇತ್ತಂಡಗಳ ನಡುವಣ ಮೊದಲ ಕ್ರಿಕೆಟ್​ ಮುಖಾಮುಖಿ ಇದಾಗಿದೆ.

ಸವಾಲು ಸುಲಭದಲ್ಲ


ಅಮೆರಿಕ ತಂಡ ಕ್ರಿಕೆಟ್​ ಶಿಶು ಆಗಿದ್ದರೂ ಕೂಡ ತಂಡದಲ್ಲಿ ಆಡುವ ಆಟಗಾರರಿಗೆ ಕ್ರಿಕೆಟ್​ ಹೊಸದಲ್ಲ. ಎಲ್ಲರು ಅನುಭವಿ ಆಟಗಾರರು. ಈ ತಂಡದ ವಿಶೇಷವೆಂದರೆ ಭಾರತ, ಪಾಕಿಸ್ತಾನ, ನ್ಯೂಜಿಲ್ಯಾಂಡ್​, ಕೆನಡಾ ಸೇರಿ ಹಲವು ದೇಶಗಳ ಕ್ರಿಕೆಟಿಗರು ಈ ತಂಡದಲ್ಲಿ ಕಾಣಿಸಿಕೊಂಡಿರುವುದು. ಬಹುಪಾಲು ಭಾರತೀಯ ಆಟಗಾರರೇ ನೆಚ್ಚಿಕೊಂಡಿದ್ದಾರೆ. ಕನ್ನಡಿಗ ನಾಸ್ತುಷ್‌ ಕೆಂಜಿಗೆ, 2010ರಲ್ಲಿ ಭಾರತ ಪರ 19 ವಿಶ್ವಕಪ್​ ಆಡಿದ್ದ ಎಡಗೈ ವೇಗದ ಬೌಲರ್ ಸೌರಭ್ ನೇತ್ರವಲ್ಕರ್, ನಾಯಕ ಮೊನಾಂಕ್ ಪಟೇಲ್ ತಂಡದ ಪ್ರಮುಖ ಆಟಗಾರರಾಗಿದ್ದಾರೆ.

ವಿಸ್ಫೋಟಕ ಬ್ಯಾಟಿಂಗ್​ಗೆ ಹೆಸರುವಾಸಿಯಾದ ಆರನ್ ಜೋನ್ಸ್ ಕೂಡ ಉತ್ತಮ ಬ್ಯಾಟಿಂಗ್​ ಫಾರ್ಮ್​ನಲ್ಲಿದ್ದಾರೆ. ಹೀಗಾಗಿ ಭಾರತ ಯಾವುದೇ ಕಾರಣಕ್ಕೂ ಎದುರಾಳಿಗಳನ್ನು ಕಡೆಗಣಿಸುವಂತಿಲ್ಲ. ಈಗಾಗಲೇ ಪಾಕಿಸ್ತಾನಕ್ಕೂ ಅಮೆರಿಕ ನೀರು ಕುಡಿಸಿದೆ. ಹೀಗಾಗಿ ಅತಿಯಾದ ಆತ್ಮವಿಶ್ವಾಸದಿಂದ ಈ ಸವಾಲನ್ನು ಹಗುರವಾಗಿ ಕಂಡೆರೆ ಭಾರತಕ್ಕೂ ಸೋಲು ಕಟ್ಟಿಟ್ಟ ಬುತ್ತಿ! ಎನ್ನಲಡ್ಡಿಯಿಲ್ಲ.

ಗೆದ್ದರೆ ಸೂಪರ್​-8 ಪ್ರವೇಶ


ಉಭಯ ತಂಡಗಳ ಪೈಕಿ ಯಾರೇ ಗೆದ್ದರೂ ಕೂಡ ‘ಎ’ ವಿಭಾಗದಿಂದ ಮೊದಲ ತಂಡವಾಗಿ ಸೂಪರ್​-8 ಹಂತಕ್ಕೆ ಪ್ರವೇಶ ಪಡೆಯಲಿದ್ದಾರೆ. ಈಗಾಗಲೇ ‘ಡಿ’ ವಿಭಾಗದಿಂದ ದಕ್ಷಿಣ ಆಫ್ರಿಕಾ ಸೂಪರ್​-8 ಹಂತಕ್ಕೆ ಪ್ರವೇಶ ಪಡೆದಿದೆ. ಒಂದು ಗ್ರೂಪ್​ನಿಂದ ಕೇವಲ 2 ತಂಡಗಳು ಮಾತ್ರ ಈ ಹಂತಕ್ಕೇರುತ್ತದೆ.

ಇದನ್ನೂ ಓದಿ IND vs PAK: ಟ್ರ್ಯಾಕ್ಟರ್ ಮಾರಿ ಭಾರತ-ಪಾಕ್​ ಪಂದ್ಯ ವೀಕ್ಷಿಸಿ ಕಣ್ಣೀರು ಹಾಕಿದ ಅಭಿಮಾನಿ

ಮಳೆ ಭೀತಿ


ಭಾನುವಾರ ಇಲ್ಲೇ ನಡೆದಿದ್ದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿತ್ತು. ಇದೀಗ ನಾಳೆ ನಡೆಯುವ ಪಂದ್ಯಕ್ಕೂ ಮಳೆ ಕಾಟ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಯುವೆದರ್‌ನ ಮುನ್ಸೂಚನೆಯ ಪ್ರಕಾರ ಅಮೆರಿಕದ ಕಾಲಮಾನದ ಪ್ರಕಾರ ಮಧ್ಯಾಹ್ನದ ವೇಳೆ ಶೇ. 40 ಪ್ರತಿಶತದಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ. ಭಾರತದಲ್ಲಿ ಈ ಪಂದ್ಯ ರಾತ್ರಿ 8 ಗಂಟೆಗೆ ಪ್ರಸಾರವಾಗುತ್ತದೆ. ಮಳೆಯಿಂದ ಪಂದ್ಯ ರದ್ದುಗೊಂಡರೆ ಉಭಯ ತಂಡಗಳಿಗೂ ತಲಾ 1 ಅಂಕ ನೀಡಲಾಗುತ್ತದೆ. ಏಕೆಂದರೆ ಲೀಗ್​ ಪಂದ್ಯಗಳಿಗೆ ಮೀಸಲು ದಿನ ಇಲ್ಲ. ಒಂದೊಮ್ಮೆ ಭಾರತ ಮತ್ತು ಅಮೆರಿಕ ಪಂದ್ಯ ಮಳೆಯಿಂದ ರದ್ದಾದರೆ ಪಾಕಿಸ್ತಾನ ಲೀಗ್​ನಿಂದ ಹೊರಬೀಳಲಿದೆ. ಈಗಾಗಲೇ 4 ಅಂಕಗಳಿಸಿರುವ ಭಾರತ ಮತ್ತು ಅಮೆರಿಕಗೆ ಈ ಒಂದು ಅಂಕದಿಂದ ಒಟ್ಟು ಅಂಕ 5 ಆಗಲಿದೆ. ಪಾಕ್​ ಮುಂದಿನ 2 ಪಂದ್ಯಗಳನ್ನು ಗೆದ್ದರೂ ಕೂಡ 4 ಅಂಕ ಮಾತ್ರ ಆಗಲಿದೆ. ಹೀಗಾಗಿ ಪಾಕ್​ ಹೊರಬೀಳಲಿದೆ.

ಪಿಚ್​ ರಿಪೋರ್ಟ್​


ಸಂಪೂರ್ಣ ಬೌಲಿಂಗ್​ ಟ್ರ್ಯಾಕ್ ಆಗಿರುವ ನಸ್ಸೌ ಪಿಚ್​ನಲ್ಲಿ ಬ್ಯಾಟಿಂಗ್​ ನಡೆಸುವುದು ಅಷ್ಟು ಸುಲಭವಲ್ಲ. 100 ರನ್​ ಬಾರಿಸಿದರೂ ಇದನ್ನು ತಡೆದು ನಿಲ್ಲಿಸುವ ಸಾಮರ್ಥ್ಯ ಬೌಲರ್​ಗಳಿಗಿದೆ. ಪಿಚ್​ನಲ್ಲಿ ಬಿರುಕು ಇರುವ ಕಾರಣ ಚೆಂಡಿನ ಚಲನೆ ಯಾವ ರೀತಿ ಇರುತ್ತದೆ ಎನ್ನುವುದನ್ನು ಅರಿತುಕೊಳ್ಳುವಲ್ಲಿ ಬ್ಯಾಟರ್​ಗಳು ವಿಫಲರಾಗುತ್ತಿದ್ದಾರೆ. ಇದುವರೆಗೂ ಇಲ್ಲಿ ನಡೆದ ಪಂದ್ಯದಲ್ಲಿ 120 ರನ್​ಗಳ ಗಡಿ ದಾಟಿಲ್ಲ.

ಸಂಭಾವ್ಯ ತಂಡ


ಅಮೆರಿಕ:
ಸ್ಟೀವನ್ ಟೇಲರ್, ಮೊನಾಂಕ್ ಪಟೇಲ್ (ನಾಯಕ), ಆಂಡ್ರೀಸ್ ಗೌಸ್, ಆರನ್ ಜೋನ್ಸ್, ನಿತೀಶ್ ಕುಮಾರ್, ಕೋರಿ ಆಂಡರ್ಸನ್, ಹರ್ಮೀತ್ ಸಿಂಗ್, ಜಸ್ದೀಪ್ ಸಿಂಗ್, ನಾಸ್ತುಷ್‌ ಕೆಂಜಿಗೆ, ಸೌರಭ್ ನೇತ್ರವಲ್ಕರ್, ಅಲಿ ಖಾನ್.

ಭಾರತ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್, ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.

Continue Reading

ಕರ್ನಾಟಕ

Actor Darshan: ಕೊಲೆ ಕೇಸ್‌ನಲ್ಲಿ ದರ್ಶನ್‌ ಬಂಧನ; ನಟಿ ಸಂಜನಾಗೆ ಶಾಕ್‌, ರಕ್ಷಿತಾ ಹಾರ್ಟ್‌ಬ್ರೇಕ್, ದೇವರಲ್ಲಿ ಪ್ರಾರ್ಥನೆ!

Actor Darshan: ನಟ ದರ್ಶನ್‌ ಅವರನ್ನು ಕೊಲೆ ಕೇಸ್‌ನಲ್ಲಿ ಬಂಧಿಸಿದ ಹಿನ್ನೆಲೆಯಲ್ಲಿ ಸ್ಯಾಂಡಲ್‌ವುಡ್‌ ನಟಿಯರಾದ ಸಂಜನಾ ಗಲ್ರಾಣಿ ಹಾಗೂ ರಕ್ಷಿತಾ ಪ್ರೇಮ್‌ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ದರ್ಶನ್‌ ಅವರು ಸಂಕಷ್ಟದಿಂದ ಪಾರಾಗಲಿ ಎಂದು ದೇವರಲ್ಲಿ ಪೂಜೆ, ಪ್ರಾರ್ಥನೆ ಮಾಡುತ್ತೇನೆ ಎಂಬುದಾಗಿ ಸಂಜನಾ ಗಲ್ರಾಣಿ ಹೇಳಿದ್ದಾರೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್‌ ನಟ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Actor Darshan) ಅವರನ್ನು ಪೊಲೀಸರು ಬಂಧಿಸಿರುವ ಸುದ್ದಿಯು ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಗೆಳತಿ ಪವಿತ್ರಾ ಗೌಡ (Pavitra Gowda) ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ್ದಕ್ಕೆ ರೇಣುಕಾಸ್ವಾಮಿ ಅವರನ್ನು ದರ್ಶನ್‌ ಹಾಗೂ ಅವರ ಸ್ನೇಹಿತರು ಹತ್ಯೆ ಮಾಡಿದ್ದಾರೆ ಎನ್ನಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 13 ಜನರನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೇ, ದರ್ಶನ್‌ ಬಂಧನದ ಹಿನ್ನೆಲೆಯಲ್ಲಿ ಸ್ಯಾಂಡಲ್‌ವುಡ್‌ ನಟಿಯರಾದ ಸಂಜನಾ ಗಲ್ರಾಣಿ (Sanjana Galrani) ಹಾಗೂ ರಕ್ಷಿತಾ ಪ್ರೇಮ್‌ (Rakshita Prem) ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ದರ್ಶನ್‌ ಅವರನ್ನು ಪೊಲೀಸರು ಬಂಧಿಸುತ್ತಲೇ ಸಂಜನಾ ಗಲ್ರಾಣಿ ಅವರು ವಿಡಿಯೊ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ. “ನಟ ದರ್ಶನ್‌ ಅವರ ಬಂಧನದಿಂದ ನನಗೆ ಶಾಕ್‌ ಆಗಿದೆ. ಇದು ಬಂಧನ ಆಗಿರದೆ, ಕೇವಲ ವಿಚಾರಣೆ ಆಗಿರಲಿ. ಕೂಡಲೇ ದರ್ಶನ್‌ ಅವರು ಸಂಕಷ್ಟದಿಂದ ಪಾರಾಗಲಿ ಎಂದು ದೇವರಲ್ಲಿ ಪೂಜೆ, ಪ್ರಾರ್ಥನೆ ಮಾಡುತ್ತೇನೆ” ಎಂಬುದಾಗಿ ಸಂಜನಾ ಗಲ್ರಾಣಿ ಹೇಳಿದ್ದಾರೆ. ಇನ್ನು ರಕ್ಷಿತಾ ಪ್ರೇಮ್‌ ಅವರು, ಹಾರ್ಟ್‌ ಬ್ರೇಕ್‌ ಆಗಿರುವ ಎಮೋಜಿ ಪೋಸ್ಟ್‌ ಮಾಡಿದ್ದು, “ಹೇಳಲು ತುಂಬ ಇದೆ. ಆದರೆ, ಏನೂ ಹೇಳಲು ಆಗುತ್ತಿಲ್ಲ” ಎಂದು ಪೋಸ್ಟ್‌ ಹಂಚಿಕೊಂಡಿದ್ದಾರೆ.

ನಟ ದರ್ಶನ್‌, ಗೆಳತಿ ಪವಿತ್ರಾ ಗೌಡ, ಅಭಿಮಾನಿಗಳ ಸಂಘದ ಚಿತ್ರದುರ್ಗ ಜಿಲ್ಲಾಧ್ಯಕ್ಷ ರಾಘವೇಂದ್ರ ಅಲಿಯಾ ರಘು ದರ್ಶನ್‌ ಸೇರಿ 13 ಜನರನ್ನು ಬಂಧಿಸಿರುವ ಪೊಲೀಸರು ಇಂದು ಸಂಜೆಯೊಳಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಇದಕ್ಕಾಗಿ, ಪೊಲೀಸ್‌ ಠಾಣೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದೆ. ಈಗಾಗಲೇ ದರ್ಶನ್‌ ಹಾಗೂ ಪವಿತ್ರಾ ಗೌಡ ಅವರ ತಪಾಸಣೆ ಮುಗಿದಿದೆ. ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲು ಪೊಲೀಸರು ಸಿದ್ಧತೆ ಕೈಗೊಳ್ಳುತ್ತಿದ್ದಾರೆ.

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಜೂನ್‌ 8ರಂದು ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಸುಮ್ಮನಹಳ್ಳಿಯ ರಾಜಕಾಲುವೆ ಬಳಿ ಅಪರಿಚಿತ ಶವ ಪತ್ತೆಯಾಗಿತ್ತು. ಜೂನ್‌ 9ರ ಭಾನುವಾರ ರಾಜಕಾಲುವೆ ಬಳಿ ಶವ ಪತ್ತೆಯಾಗಿತ್ತು. ಬೀದಿ ನಾಯಿಗಳು ಕಸ ಎಳೆದಾಡುವಾಗ ಶವ ಪತ್ತೆಯಾಗಿತ್ತು. ಇದಾದ ಬಳಿಕ ಅದೇ ದಿನ ರಾಮ್‌ ದೋರ್‌ ಎಂಬ ಸೆಕ್ಯುರಿಟಿ ಗಾರ್ಡ್‌ ಪೊಲೀಸರಿಗೆ ದೂರು ನೀಡಿದ್ದರು. ಇದಾದ ನಂತರ ಪೊಲೀಸರು ತನಿಖೆ ನಡೆಸಿದ್ದರು.

ಇದನ್ನೂ ಓದಿ: Actor Darshan : ದರ್ಶನ್​ಗೆ ಮರಣದಂಡನೆಯಾಗಲಿ; ಸ್ಯಾಂಡಲ್​ವುಡ್​ ಕ್ವೀನ್​ ರಮ್ಯಾ ಒತ್ತಾಯ

Continue Reading

ಪ್ರಮುಖ ಸುದ್ದಿ

Actor Darshan : ದರ್ಶನ್​ಗೆ ಮರಣದಂಡನೆ ಶಿಕ್ಷೆಯಾಗಲಿ! ನಟಿ ರಮ್ಯಾ ಟ್ವೀಟ್‌

Actor Darshan: ಸೆಕ್ಷನ್ 302 ರ ಅಡಿಯಲ್ಲಿ, ನಟ ದರ್ಶನ್​ಗೆ ಜೀವಾವಧಿ ಶಿಕ್ಷೆ ಅಥವಾ ಶಿಕ್ಷೆಯಾಗಲಿ. ಬೇರೆ ಯಾವುದೇ ಹಣದ ಪ್ರಭಾವ ಮತ್ತು ಭಾರತೀಯ ಕಾನೂನು ವ್ಯವಸ್ಥೆಯನ್ನು ಅಣಕಿಸುವಂತಾಗಬಾರದು. ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ಸಿಗುತ್ತದೆ ಎಂದು ಭಾವಿಸುತ್ತೇನೆ ಎಂದು ರಮ್ಯಾ ಟ್ವೀಟ್ ಮಾಡಿದ್ದಾರೆ.

VISTARANEWS.COM


on

Actor Darshan
Koo

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿರುವ ನಟ ದರ್ಶನ್​ಗೆ (Actor Darshan) ಮರಣದಂಡನೆಯಾಗಲಿ ಎಂಬ ಆಶಯವನ್ನು ಸ್ಯಾಂಡಲ್​ವುಡ್​ ಕ್ವೀನ್​ ರಮ್ಯಾ ವ್ಯಕ್ತಪಡಿಸಿದ್ದಾರೆ! ಕೊಲೆ ಪ್ರಕರಣದ ಕುರಿತು ಎಕ್ಸ್​ನಲ್ಲಿ ಪೋಸ್ಟ್​​ ಮಾಡಿರುವ ರಮ್ಯಾ ಐಪಿಸಿ ಸೆಕ್ಷನ್​ 302ರನ್ನು ಉಲ್ಲೇಖಿಸಿ ಅದರ ಅನ್ವಯ ದರ್ಶನ್​ಗೆ ಕಠಿಣ ಶಿಕ್ಷೆಯಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಕೊಲೆಯಾಗಿರುವ ವ್ಯಕ್ತಿಯ ಪರವಾಗಿ ನಿಂತಿರುವ ರಮ್ಯಾ, ದರ್ಶನ್​ಗೆ ಇಂಡಿಯನ್ ಪಿನಲ್​ ಕೋಡ್​ 302ರ ಪ್ರಕಾರ ಯಾವ ಪ್ರಕಾರಣದ ಶಿಕ್ಷೆಯಾಗುತ್ತದೆ ಎಂಬ ಬಗ್ಗೆ ಟ್ವೀಟ್ ಮಾಡಿದ್ದಾರೆ. ಈ ಸೆಕ್ಷನ್​ 302ರಲ್ಲಿ ಕೊಲೆ ಆರೋಪ ಸಾಬೀತಾದರೆ ಅವರಿಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ ಎಂಬ ಮಾಹಿತಿ ಇರುವ ಪೋಸ್ಟ್‌ ಅನ್ನು ರಮ್ಯಾ ರೀಟ್ವೀಟ್‌ ಮಾಡಿದ್ದಾರೆ.

ಸೆಕ್ಷನ್ 302 ರ ಅಡಿಯಲ್ಲಿ ನಟ ದರ್ಶನ್​ಗೆ ಜೀವಾವಧಿ ಶಿಕ್ಷೆ ಅಥವಾ ಶಿಕ್ಷೆಯಾಗಬೇಕು. ಬೇರೆ ಯಾವುದೇ ಹಣದ ಪ್ರಭಾವ ಮತ್ತು ಭಾರತೀಯ ಕಾನೂನು ವ್ಯವಸ್ಥೆಯನ್ನು ಅಣಕಿಸುವಂತಾಗಬಾರದು. ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂಬ ಟ್ವೀಟ್‌ ಅನ್ನು ರಮ್ಯಾ ಮರು ಪೋಸ್ಟ್‌ ಮಾಡಿದ್ದಾರೆ.

ರಮ್ಯಾ ಈ ಹಿಂದೆಯೂ ಸ್ಟಾರ್ ನಟರ ನಡವಳಿಕೆಯ ಬಗ್ಗೆ ಆಕ್ಷೇಪ ಎತ್ತಿದ್ದರು. ಹಿಂದೆ ದರ್ಶನ್​ಗೆ ಚಪ್ಪಲಿ ಎಸೆತ ಪ್ರಕರಣ ನಡೆದಾಗ ಸ್ಪಂದಿಸಿದ್ದ ಅವರು, ಅಭಿಮಾನಿಗಳು ಹಾಗೂ ನಟರಿಗೆ ಬುದ್ಧಿ ಹೇಳಬೇಕಾಗಿದೆ ಎಂದು ಹೇಳಿದ್ದರು.

ನಟ ದರ್ಶನ್‌ ಅರೆಸ್ಟ್‌; ಪೊಲೀಸರು ಹೇಳಿದ್ದೇನು?

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ (28) ಎಂಬವರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಸ್ಯಾಂಡಲ್‌ವುಟ್‌ ನಟ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ (Actor Darshan) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನಲ್ಲಿರುವ (Mysore) ದರ್ಶನ್‌ ಅವರ ತೋಟದ ಮನೆಯಲ್ಲಿ ಬೆಂಗಳೂರಿನ ಪೊಲೀಸರು ದರ್ಶನ್‌ ಅವರನ್ನು ಬಂಧಿಸಿದ್ದಾರೆ. ನಟನನ್ನು ಬಂಧಿಸಿರುವ (Actor Darshan Arrested) ಪೊಲೀಸರು ಬೆಂಗಳೂರಿಗೆ ಕರೆದುಕೊಂಡು ಬರುತ್ತಿದ್ದಾರೆ. ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.

ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಜೂನ್‌ 8ರಂದು ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಬಳಿಕ ಶವವನ್ನು ಎಸೆದು ಹೋಗಿದ್ದರು. ಬೆಂಗಳೂರಿನ ಆರ್‌.ಆರ್‌.ನಗರದ ಸುಮ್ಮನಹಳ್ಳಿಯ ರಾಜಕಾಲುವೆ ಬಳಿ ಜೂನ್‌ 9ರಂದು ಬೀದಿ ನಾಯಿಗಳು ಕಸ ಎಳೆದಾಡುವಾಗ ಶವ ಪತ್ತೆಯಾಗಿತ್ತು. ಇದಾದ ಬಳಿಕ ಅದೇ ದಿನ ರಾಮ್‌ ದೋರ್‌ ಎಂಬ ಸೆಕ್ಯುರಿಟಿ ಗಾರ್ಡ್‌ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಆಗಮಿಸಿದ ವೇಳೆ ಶವದ ಮುಖ, ತಲೆ, ಕಿವಿಗೆ ರಕ್ತಗಾಯವಾಗಿರುವುದು ಕಂಡು ಬಂದಿತ್ತು. ಯಾರೋ‌ ಕೊಲೆ ಮಾಡಿ ತಂದು ಬಿಸಾಡಿರೋ ಅನುಮಾನದ ಮೇಲೆ ಪೊಲೀಸರು ದೂರು ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದರು. ಈ ವೇಳೆ ಇದು ರೇಣುಕಾಸ್ವಾಮಿ ಶವ ಎನ್ನುವುದು ತಿಳಿದು ಬಂದಿತ್ತು.

ಇದನ್ನೂ ಓದಿ: Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

ಈ ಪ್ರಕರಣದಲ್ಲಿ ಸೋಮವಾರ ಗಿರಿನಗರ ಮೂಲದ ಮೂವರು ಆರೋಪಿಗಳು ಸರೆಂಡರ್ ಆಗಿದ್ದರು. ಹಣಕಾಸು ವಿಚಾರವಾಗಿ ಕೊಲೆ ಮಾಡಿದ್ದಾಗಿ ಹೇಳಿದ್ದರು. ಪೊಲೀಸರಿಗೆ ಅನುಮಾನ ಬಂದು ತೀವ್ರ ವಿಚಾರಣೆ ಮಾಡಿದ್ದರ ಈ ವೇಳೆ ದರ್ಶನ್ ಹೆಸರು ಬಾಯಿ ಬಿಟ್ಟಿದ್ದಾರೆ. ಸದ್ಯ ಈ ಪ್ರಕರಣದಲ್ಲಿ ದರ್ಶನ್‌ ಅವರ ಪಾತ್ರದ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹಸಚಿವ ಜಿ.ಪರಮೇಶ್ವರ್‌ ಮಾಹಿತಿ ಕಲೆ ಹಾಕುತ್ತಿದ್ದಾರೆ. ʼʼತನಿಖೆ ನಡೆಸಿದ ಬಳಿಕ ಕೊಲೆಯಲ್ಲಿ ದರ್ಶನ್‌ ಪಾತ್ರದ ಬಗ್ಗೆ ತಿಳಿದು ಬರಲಿದೆ. ಈ ಬಗ್ಗೆ ಪೊಲೀಸರು ವಿಚಾರಣೆ ಕೈಗೆತ್ತಿಕೊಂಡಿದ್ದಾರೆ. ಸದ್ಯ ಏನನ್ನೂ ಹೇಳಲು ಆಗುವುದಿಲ್ಲʼʼ ಎಂದು ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಕೊಲೆಗೆ ಕಾರಣ

ರೇಣುಕಾಸ್ವಾಮಿ ಪವಿತ್ರಗೌಡಗೆ ಮೆಸೇಜ್ ಮಾಡುತ್ತಿದ್ದ. ಈ ವಿಷಯ ತಿಳಿದು ದರ್ಶನ್ ಆಪ್ತರು ನಕಲಿ ಅಕೌಂಟ್ ತೆರೆದಿದ್ದರು. ಬಳಿಕ ರೇಣುಕಾಸ್ವಾಮಿ ಜತೆ ಚಾಟಿಂಗ್ ನಡೆಸಲಾಗಿತ್ತು. ಬಳಿಕ ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿಕೊಂಡು ಬಂದು ಹಲ್ಲೆ ನಡೆಸಲಾಗಿತ್ತು. ಈ ವೇಳೆ ಆತ ಸಾವನ್ನಪ್ಪಿದ್ದ. ಆತ ಮೃತಪಟ್ಟಿರುವುದು ಗೊತ್ತಾಗುತ್ತಿದ್ದಂತೆ ದರ್ಶನ್‌ ಆಪ್ತರು ಸ್ಕಾರ್ಪಿಯೋ ಕಾರಿನಲ್ಲಿ ಶವವನ್ನು ತಂದು ಬಿಸಾಡಿ ಹೋಗಿದ್ದರು. ಬಳಿಕ ಪೊಲೀಸರಿಗೆ ಕಾಲ್‌ ಮಾಡಿ ತಪ್ಪಾಗಿದೆ ಸರ್ ಅಂದಿದ್ದರು. ಬಳಿಕ ಬಂದು ಮೂವರು ಪೊಲೀಸರ ಮುಂದೆ ಶರಣಾಗಿದ್ದರು ಎನ್ನಲಾಗಿದೆ.

ದರ್ಶನ್‌ ಅವರನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ ನಟ ದರ್ಶನ್‌ ಅವರ ಗೆಳತಿಯೂ ಆದ ನಟಿ (Pavithra Gowda) ಅವರನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ರೇಣುಕಾಸ್ವಾಮಿ ಹತ್ಯೆಯ ಹಿಂದೆ ಒಳಸಂಚು ರೂಪಿಸಿದ ಆರೋಪದಲ್ಲಿ ಬೆಂಗಳೂರಿನ ಅನ್ನಪೂರ್ಣೇಶ್ವರ ನಗರ ಠಾಣೆಯ ಪೊಲೀಸರು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ರೇಣುಕಾಸ್ವಾಮಿ ಯಾರು?

ಚಿತ್ರದುರ್ಗ ಮೂಲದವನಾದ ರೇಣುಕಾಸ್ವಾಮಿ ಎಂಬ 28 ವರ್ಷದ ಯುವಕನು ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಈತನು ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ದರ್ಶನ್‌ ಹಾಗೂ ಅವರ ಆಪ್ತರು ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ದರ್ಶನ್‌ ಸೇರಿ 10 ಮಂದಿಯನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ರೇಣುಕಾಸ್ವಾಮಿಗೆ ಕಳೆದ ವರ್ಷವೇ ಸಹನಾ ಎಂಬ ಯುವತಿ ಜತೆ ಮದುವೆಯಾಗಿದೆ ಎಂದು ಹೇಳಲಾಗುತ್ತಿದೆ. ರೇಣುಕಾಸ್ವಾಮಿ ಕೂಡ ದರ್ಶನ್‌ ಅಭಿಮಾನಿಯಾಗಿದ್ದ ಎನ್ನಲಾಗಿದೆ.

Continue Reading

ದೇಶ

Parliament Session 2024: ಜೂನ್‌ 24ರಿಂದ ಸಂಸತ್‌ ವಿಶೇಷ ಅಧಿವೇಶನ; ಸ್ಪೀಕರ್‌ ಆಯ್ಕೆ ಸೇರಿ ಏನೆಲ್ಲ ತೀರ್ಮಾನ?

Parliament Session 2024: ಜೂನ್‌ 24 ಹಾಗೂ ಜೂನ್‌ 25ರಂದು ನೂತನ ಸಂಸದರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಜೂನ್‌ 26ರಂದು ಲೋಕಸಭೆ ಸ್ಪೀಕರ್‌ ಆಯ್ಕೆಗೆ ಚುನಾವಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಒಟ್ಟು 8 ದಿನಗಳವರೆಗೆ ವಿಶೇಷ ಅಧಿವೇಶನ ನಡೆಯಲಿದೆ.

VISTARANEWS.COM


on

Parliament Session 2024
Koo

ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಕೂಟವು ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಿದೆ. ನರೇಂದ್ರ ಮೋದಿ (Narendra Modi) ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ 71 ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಇದರ ಬೆನ್ನಲ್ಲೇ, ಜೂನ್‌ 24ರಿಂದ ಜುಲೈ 3ರವರೆಗೆ ಸಂಸತ್ ವಿಶೇಷ ಅಧಿವೇಶನ (Parliament Session 2024) ಕರೆಯಲಾಗಿದೆ. ವಿಶೇಷ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಆಯ್ಕೆ ಸೇರಿ ಹಲವು ತೀರ್ಮಾನಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ.

ಜೂನ್‌ 24ರಿಂದ ಸಂಸತ್‌ ವಿಶೇಷ ಅಧಿವೇಶನ ಆರಂಭವಾಗುತ್ತದೆ. ಜೂನ್‌ 24 ಹಾಗೂ ಜೂನ್‌ 25ರಂದು ನೂತನ ಸಂಸದರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಜೂನ್‌ 26ರಂದು ಲೋಕಸಭೆ ಸ್ಪೀಕರ್‌ ಆಯ್ಕೆಗೆ ಚುನಾವಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಒಟ್ಟು 8 ದಿನಗಳವರೆಗೆ ವಿಶೇಷ ಅಧಿವೇಶನ ನಡೆಯಲಿದೆ ಎಂದು ತಿಳಿದುಬಂದಿದೆ. ಆದಾಗ್ಯೂ, ಯಾವುದೇ ವಿಧೇಯಕಗಳ ಮಂಡನೆ ಕುರಿತು ಮಾಹಿತಿ ಲಭ್ಯವಾಗಿಲ್ಲ.

Parliament Winter session will held from December 4 to 22

ಖಾತೆ ಹಂಚಿಕೆಯಲ್ಲಿ ಮೋದಿ ಪಾರಮ್ಯ

ಸಚಿವರಿಗೆ ಖಾತೆ ಹಂಚಿಕೆಯಲ್ಲೂ ನರೇಂದ್ರ ಮೋದಿ ಅವರೇ ಪ್ರಾಬಲ್ಯ ಮೆರೆದಿದ್ದಾರೆ. ಕೇಂದ್ರ ಗೃಹ ಖಾತೆಯನ್ನು ಅಮಿತ್‌ ಶಾ ಅವರಿಗೆ, ಹಣಕಾಸು ಖಾತೆಯನ್ನು ನಿರ್ಮಲಾ ಸೀತಾರಾಮನ್‌, ರಕ್ಷಣಾ ಖಾತೆಯನ್ನು ರಾಜನಾಥ್‌ ಸಿಂಗ್‌ ಹಾಗೂ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಖಾತೆಯನ್ನು ನಿತಿನ್‌ ಗಡ್ಕರಿ ಅವರಿಗೇ ನೀಡುವ ಮೂಲಕ ನರೇಂದ್ರ ಮೋದಿ ಅವರು ಮೊದಲಿನಂತೆಯೇ ಬಿಜೆಪಿ ಬಳಿಯೇ ಉಳಿಸಿಕೊಳ್ಳುವ ಮೂಲಕ ಚಾಣಾಕ್ಷತನ ಮೆರೆದಿದ್ದಾರೆ. ಅಷ್ಟೇ ಅಲ್ಲ, ಮೈತ್ರಿ ಸರ್ಕಾರದ ಮೇಲೆಯೂ ತಮ್ಮ ಹಿಡಿತ ಇದೆ ಎಂಬುದನ್ನು ಅವರು ಸಾಬೀತುಪಡಿಸಿದ್ದಾರೆ.

ಮೈತ್ರಿ ಸರ್ಕಾರ ರಚನೆಗೂ ಮೊದಲು, ನಿತೀಶ್‌ ಕುಮಾರ್‌ ಹಾಗೂ ಟಿಡಿಪಿ ಸೇರಿ ಮೈತ್ರಿ ಪಕ್ಷಗಳಿಗೇ ಪ್ರಮುಖ ನಾಲ್ಕು ಖಾತೆಗಳಲ್ಲಿ ಒಂದಷ್ಟನ್ನು ಮೋದಿ ನೀಡಬೇಕಾಗುತ್ತದೆ. ಅದರಲ್ಲೂ ಗೃಹ ಖಾತೆ ಹಾಗೂ ಹಣಕಾಸು ಖಾತೆಗಳನ್ನು ಮಿತ್ರಪಕ್ಷಗಳಿಗೆ ಬಿಟ್ಟುಕೊಡಬೇಕಾಗುತ್ತದೆ ಎಂಬುದಾಗಿ ಹೇಳಲಾಗುತ್ತಿತ್ತು. ಆದರೆ, ಮೊದಲ ಹಾಗೂ ಎರಡನೇ ಅವಧಿಯಂತೆ, ಮೂರನೇ ಅವಧಿಯಲ್ಲೂ ನರೇಂದ್ರ ಮೋದಿ ಅವರು ಪ್ರಮುಖ ಖಾತೆಗಳನ್ನು ಬಿಜೆಪಿ ಬಳಿಯೇ ಉಳಿಸಿಕೊಳ್ಳುವ ಮೂಲಕ ತಮ್ಮ ಹಿಡಿತವನ್ನು ಸಾಬೀತುಪಡಿಸಿದ್ದಾರೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: Narendra Modi: ಮೊದಲ ಕ್ಯಾಬಿನೆಟ್‌ ಸಭೆಯಲ್ಲಿ ಪ್ರಧಾನಿ ಮೋದಿ ಸಚಿವರಿಗೆ ಹೇಳಿದ ಕಿವಿ ಮಾತು ಇದು

Continue Reading
Advertisement
Mohan Bhagwat
ದೇಶ6 mins ago

Mohan Bhagwat: ಜನ ಸೇವಕ ಎಂದಿಗೂ ಅಹಂಕಾರಿ ಆಗಿರುವುದಿಲ್ಲ: ಮೋಹನ್‌ ಭಾಗವತ್‌

Lifetime achievement felicitation ceremony for retired Judge Chandrashekharaiah on June 29 in Bengaluru
ಬೆಂಗಳೂರು26 mins ago

Bengaluru News: ಬೆಂಗಳೂರಿನಲ್ಲಿ ಜೂ. 29ರಂದು ನಿವೃತ್ತ ನ್ಯಾ. ಚಂದ್ರಶೇಖರಯ್ಯಗೆ ಅಭಿನಂದನೆ

murder case
ಮೈಸೂರು30 mins ago

Murder case : ಹಿರಿಯ ಸ್ವಾಮೀಜಿ ಕೊಂದ‌ ಆರೋಪಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Womens Commission president Dr Nagalakshmi Chaudhary visit bisaadihatti village
ತುಮಕೂರು32 mins ago

Koratagere News: ಗ್ರಾಮೀಣ ಹೆಣ್ಣುಮಕ್ಕಳಿಗೆ ಮೂಲಸೌಕರ್ಯ ಒದಗಿಸುವುದು ಮೊದಲ ಆದ್ಯತೆ: ಮಹಿಳಾ ಆಯೋಗದ ಅಧ್ಯಕ್ಷೆ

IND vs USA
ಕ್ರೀಡೆ37 mins ago

IND vs USA: ಅಪಾಯಕಾರಿ ಅಮೆರಿಕ ಸವಾಲಿಗೆ ಸಡ್ಡು ಹೊಡೆದೀತೇ ಟೀಮ್​ ಇಂಡಿಯಾ?

Chandrababu Naidu
ದೇಶ47 mins ago

Chandrababu Naidu: ಆಂಧ್ರ ಪ್ರದೇಶದ ರಾಜಧಾನಿ ಅಮರಾವತಿ; ಚಂದ್ರಬಾಬು ನಾಯ್ಡು ಘೋಷಣೆ

Contaminated water
ಕರ್ನಾಟಕ58 mins ago

Contaminated Water: ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ವಾಂತಿ, ಭೇದಿಯಿಂದ 35 ಜನ ಅಸ್ವಸ್ಥ; ಕಲುಷಿತ ನೀರು ಸೇವನೆ ಶಂಕೆ

Actor Darshan
ಕರ್ನಾಟಕ58 mins ago

Actor Darshan: ಕೊಲೆ ಕೇಸ್‌ನಲ್ಲಿ ದರ್ಶನ್‌ ಬಂಧನ; ನಟಿ ಸಂಜನಾಗೆ ಶಾಕ್‌, ರಕ್ಷಿತಾ ಹಾರ್ಟ್‌ಬ್ರೇಕ್, ದೇವರಲ್ಲಿ ಪ್ರಾರ್ಥನೆ!

Actor Darshan gets a series of questions from the police
ಸಿನಿಮಾ1 hour ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಪ್ರಮುಖ ಸುದ್ದಿ1 hour ago

Actor Darshan : ದರ್ಶನ್​ಗೆ ಮರಣದಂಡನೆ ಶಿಕ್ಷೆಯಾಗಲಿ! ನಟಿ ರಮ್ಯಾ ಟ್ವೀಟ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan gets a series of questions from the police
ಸಿನಿಮಾ1 hour ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 hours ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ5 hours ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ24 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

ಟ್ರೆಂಡಿಂಗ್‌