Richest Comedian: ಭಾರತದ ಶ್ರೀಮಂತ ಕಾಮಿಡಿ ನಟ ಇವರೇ! - Vistara News

ಸಿನಿಮಾ

Richest Comedian: ಭಾರತದ ಶ್ರೀಮಂತ ಕಾಮಿಡಿ ನಟ ಇವರೇ!

ಯಾರು ಭಾರತದ ಅತ್ಯಂತ ಶ್ರೀಮಂತ ಕಾಮಿಡಿ ನಟ? ಯುವ ಕಾಮಿಡಿಯನ್‌ಗಳನ್ನೂ ಮೀರಿಸಿ ಮಿಂಚಿದ್ದಾರೆ ಈತ. ಯಾರು ಅಂತ ನೋಡಿ.

VISTARANEWS.COM


on

richest comedian in india
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾಮಿಡಿಗೆ ಅತ್ಯುತ್ತಮ ಟೈಮಿಂಗ್‌ ಬೇಕು; ಕಾಮಿಡಿಯನ್‌ಗಳಾಗಿ (comedian) ಸದಾಕಾಲ ಬೇಡಿಕೆಯಲ್ಲಿ ಇರುವವರು, ಗೆಲ್ಲುವವರು ವಿರಳ. ಹೀಗೆ ಇದ್ದುಕೊಂಡು ಕಾಸು ಮಾಡುವುದೂ ಕಷ್ಟ. ಒಂದು ಕಾಲದಲ್ಲಿ ಬೆಳ್ಳಿತೆರೆಯ ಹೀರೋ ಮಾತ್ರ ಹಣ ಮಾಡುತ್ತಿದ್ದ. ಇಂದು ಕಾಮಿಡಿಯನ್‌ಗಳು ಸಹ ಉತ್ತಮ ಗಳಿಕೆ ಮಾಡುತ್ತಿದ್ದಾರೆ. ಈ ಹಾಸ್ಯನಟರು ಸಿನಿಮಾಗಳಲ್ಲಿ ಸಣ್ಣದಾದರೂ ಮಹತ್ವದ ಪಾತ್ರ ಪಡೆಯುವುದರಲ್ಲಿ ಅನುಮಾನವಿಲ್ಲ. ಇವರಲ್ಲಿ ಕೆಲವರು ನಾಯಕ ಮತ್ತು ನಾಯಕಿಯರಿಗಿಂತ ಹೆಚ್ಚು ಹಣವನ್ನು ಗಳಿಸುತ್ತಾರೆ ಅಂದರೆ ಆಶ್ಚರ್ಯ ಪಡಬೇಡಿ.

ಹಾಗಾದರೆ ಯಾರು ಭಾರತದ ಅತ್ಯಂತ ಶ್ರೀಮಂತ ಕಾಮಿಡಿ ನಟ? ಚಾಲ್ತಿಯಲ್ಲಿರುವ ಯುವ ಕಾಮಿಡಿಯನ್‌ಗಳನ್ನೂ ಮೀರಿಸಿ ತಮ್ಮ ಹೆಸರಿನಲ್ಲಿ ದಾಖಲೆ ಬರೆದುಕೊಂಡಿರುವ ಅವರೇ ತೆಲುಗಿನ ಹಾಸ್ಯಬ್ರಹ್ಮ ಬ್ರಹ್ಮಾನಂದಂ.

ಬ್ರಹ್ಮಾನಂದಂ (Brahmanandam)

ತೆಲುಗು ದಿಗ್ಗಜ ನಟ ಬ್ರಹ್ಮಾನಂದಂ ದಕ್ಷಿಣ ಚಿತ್ರರಂಗದಲ್ಲಿ ಮಾತ್ರವಲ್ಲದೆ ದೇಶಾದ್ಯಂತ ಚಿರಪರಿಚಿತ. ಕೆನ್ನಿಗಂಟಿ ಬ್ರಹ್ಮಾನಂದಂ ಅವರು ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ತಮ್ಮ ಚಿಂತನಶೀಲ ಹಾಸ್ಯದಿಂದ ಅವರನ್ನು ರಂಜಿಸುವ ಅವಕಾಶವನ್ನು ಎಂದಿಗೂ ಕಳೆದುಕೊಳ್ಳುವುದಿಲ್ಲ. ಮೂಲಗಳ ಪ್ರಕಾರ ಬ್ರಹ್ಮಾನಂದಂ ಪ್ರತಿ ಚಿತ್ರಕ್ಕೆ 1-2 ಕೋಟಿ ರೂ. ಸಂಭಾವನೆ ಪಡೆಯುತ್ತಾರೆ ಎನ್ನಲಾಗುತ್ತದೆ. ಅವರ ಸ್ವಂತ ಆಸ್ತಿ ಮೌಲ್ಯ ಸುಮಾರು 350 ಕೋಟಿ ರೂ.

ಕಪಿಲ್ ಶರ್ಮಾ (Kapil sharma)

ಸ್ಟ್ಯಾಂಡ್-ಅಪ್ ಕಾಮಿಡಿಯಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ನಟ ಕಪಿಲ್ ಶರ್ಮಾ ಇಂದು ಭಾರತದ ಅತ್ಯಂತ ಜನಪ್ರಿಯ ಕಲಾವಿದರಲ್ಲಿ ಒಬ್ಬರು. ತಮ್ಮ ಶಾಣ್ಯಾತನದಿಂದ ಪ್ರೇಕ್ಷಕರನ್ನು ಖುಷಿಪಡಿಸುವ ಕಪಿಲ್ ಶರ್ಮಾ ಕೆಲವು ಚಿತ್ರಗಳಲ್ಲಿಯೂ ಕಾಣಿಸಿಕೊಂಡಿದ್ದಾರೆ. ವರದಿಗಳ ಪ್ರಕಾರ, ಕಪಿಲ್ ಶರ್ಮಾ ಅವರು ಸುಮಾರು 300 ಕೋಟಿ ಆಸ್ತಿ ಹೊಂದಿದ್ದಾರೆ.

ಜಾನಿ ಲಿವರ್ (Johnny lever)

1990ರ ದಶಕದ ಅನೇಕ ಚಲನಚಿತ್ರಗಳಲ್ಲಿ ಪ್ರೇಕ್ಷಕರನ್ನು ನಗಿಸಿದ ಪ್ರಸಿದ್ಧ ಹಿಂದಿ ಚಲನಚಿತ್ರ ಹಾಸ್ಯನಟ ಜಾನಿ ಲಿವರ್ ಇನ್ನೂ ಬಹಳಷ್ಟು ಜನಪ್ರಿಯ. ವರದಿಗಳ ಪ್ರಕಾರ, ಜಾನಿ ಲಿವರ್ ಪ್ರಸ್ತುತ 225 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ.

ಪರೇಶ್ ರಾವಲ್ (Paresh Rawal)

ಇವರು ಭಾರತದ ಶ್ರೀಮಂತ ಹಾಸ್ಯನಟರ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ. ತಮ್ಮ ಅದ್ಭುತ ಅಭಿನಯ ಮತ್ತು ಹಾಸ್ಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ ಪರೇಶ್ ರಾವಲ್ ಹಿಂದಿ ಮತ್ತು ಗುಜರಾತಿ ಚಿತ್ರಗಳಲ್ಲಿ ಬಹುಬೇಡಿಕೆಯವರು. ಹೇರಾ ಫೇರಿ ಮತ್ತು ಫಿರ್ ಹೇರಾ ಫೇರಿ ಚಿತ್ರಗಳಿಂದ ಹಾಸ್ಯ ಪಾತ್ರಗಳಿಗಾಗಿ ಪ್ರಾಮುಖ್ಯ ಪಡೆದ ಪರೇಶ್ ರಾವಲ್ ಅವರ ಆಸ್ತಿಯ ನಿವ್ವಳ ಮೌಲ್ಯ ಸುಮಾರು 93 ಕೋಟಿ.

ರಾಜಪಾಲ್ ಯಾದವ್ (Rajpal Yadav)

ರಾಜ್‌ಪಾಲ್ ಯಾದವ್ ಅವರು ಚುಪ್ ಚುಪ್ ಕೆ, ಭೂಲ್ ಭುಲೈಯಾ, ಮತ್ತು ಭೂಲ್ ಭುಲೈಯಾ 2 ಚಿತ್ರಗಳ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ರಾಜ್‌ಪಾಲ್ ಯಾದವ್ ಪ್ರಸ್ತುತ 50 ಕೋಟಿ ಮೌಲ್ಯದ ಆಸ್ತಿಯ ಒಡೆಯ.

ಇದನ್ನೂ ಓದಿ: Sanju Basayya: ರಿಜಿಸ್ಟರ್‌ ಮ್ಯಾರೇಜ್‌ ಆದ ʻಕುಳ್ಳ ಮಿಂಡ್ರಿʼ ಖ್ಯಾತಿಯ ಕಾಮಿಡಿ ಕಿಲಾಡಿ ಸಂಜು; ಕುಟುಂಬದ ಒಪ್ಪಿಗೆ ಅಷ್ಟೇ ಬಾಕಿ ಅಂತು ಜೋಡಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Meghana Gaonkar : ಮೇಘನಾ ಗಾಂವ್ಕರ್​ಗೆ ಖುಷಿಗೆ ʼದಿ ಜಡ್ಜ್‌ಮೆಂಟ್‌ʼ ಕಾರಣ, ಯಾಕೆ ಗೊತ್ತಾ?

Meghana Gaonkar: ಈಗಾಗಲೇ ಬಿಡುಗಡೆಯಾಗಿರುವ ʼದ ಜಡ್ಜ್‌ಮೆಂಟ್‌ʼ ಸಿನಿಮಾ ಪೋಸ್ಟರ್‌, ಫಸ್ಟ್‌ಲುಕ್‌, ಟೀಸರ್‌ ಮತ್ತು ಟ್ರೇಲರ್‌ಗಳಲ್ಲಿ ನಟಿ ಮೇಘನಾ ಗಾಂವ್ಕರ್‌ ಪಾತ್ರ ಗಮನ ಸೆಳೆಯುತ್ತಿದ್ದು, ತಮ್ಮ ಹೊಸ ಸಿನಿಮಾ ಮತ್ತು ಹೊಸ ಪಾತ್ರದ ಬಗ್ಗೆ ಮೇಘನಾ ಗಾಂವ್ಕರ್‌ ಒಂದಷ್ಟು ಮಾತನಾಡಿದ್ದಾರೆ.

VISTARANEWS.COM


on

meghana Goankar
Koo

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಇಲ್ಲಿಯವರೆಗೆ ಲವ್‌, ರೊಮ್ಯಾನ್ಸ್‌ ಮತ್ತು ಕಾಮಿಡಿ ಶೈಲಿಯ ಸಿನಿಮಾಗಳಲ್ಲೇ ಹೆಚ್ಚಾಗಿ ಕಾಣಿಸಿಕೊಂಡಿದ್ದ ನಟಿ ಮೇಘನಾ ಗಾಂವ್ಕರ್‌ (Meghana Gaonkar), ಈ ಬಾರಿ ಲೀಗಲ್‌-ಥ್ರಿಲ್ಲರ್‌ ಶೈಲಿಯ ʼದ ಜಡ್ಜ್‌ಮೆಂಟ್‌ʼ ಸಿನಿಮಾದಲ್ಲಿ ಹೊಸಥರದ ಪಾತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ʼದ ಜಡ್ಜ್‌ಮೆಂಟ್‌ʼ ಸಿನಿಮಾ ಪೋಸ್ಟರ್‌, ಫಸ್ಟ್‌ಲುಕ್‌, ಟೀಸರ್‌ ಮತ್ತು ಟ್ರೇಲರ್‌ಗಳಲ್ಲಿ ನಟಿ ಮೇಘನಾ ಗಾಂವ್ಕರ್‌ ಪಾತ್ರ ಗಮನ ಸೆಳೆಯುತ್ತಿದ್ದು, ತಮ್ಮ ಹೊಸ ಸಿನಿಮಾ ಮತ್ತು ಹೊಸ ಪಾತ್ರದ ಬಗ್ಗೆ ಮೇಘನಾ ಗಾಂವ್ಕರ್‌ ಒಂದಷ್ಟು ಮಾತನಾಡಿದ್ದಾರೆ.

1) ʼದ ಜಡ್ಜ್‌ಮೆಂಟ್‌ʼ ಸಿನಿಮಾಕ್ಕೆ ಎಂಟ್ರಿಯಾಗಿದ್ದು ಹೇಗೆ?

ನಿಜಾ ಹೇಳಬೇಕೆಂದರೆ, ʼದ ಜಡ್ಜ್‌ಮೆಂಟ್‌ʼ ಸಿನಿಮಾಕ್ಕೆ ಕೊನೆಯದಾಗಿ ಸೇರ್ಪಡೆಯಾಗಿದ್ದೇ ನಾನು. ಇನ್ನೇನು ನಾನು ಮಾಡಬೇಕಾದ ಪಾತ್ರದ ಶೂಟಿಂಗ್‌ ಮಾಡೋದಕ್ಕೆ ನಾಲ್ಕೈದು ದಿನಗಳಷ್ಟೇ ಇದೆ ಎನ್ನುವಾಗ ಈ ಸಿನಿಮಾದ ಆಫರ್‌ ಬಂತು. ಆ ನಂತರ ಒಂದೇ ದಿನದಲ್ಲಿ ಆ ಆಫರ್‌ನ ನಾನೂ ಒಪ್ಪಿಕೊಂಡೆ. ಹೀಗೆ ʼದ ಜಡ್ಜ್‌ಮೆಂಟ್‌ʼ ಸಿನಿಮಾಕ್ಕೆ ಎಂಟ್ರಿಯಾದೆ.

2) ʼದ ಜಡ್ಜ್‌ಮೆಂಟ್‌ʼ ಸಿನಿಮಾ ಒಪ್ಪಿಕೊಳ್ಳಲು ಕಾರಣ?

ಇಲ್ಲಿಯವರೆಗೆ ನಾನು ಮಾಡಿರುವ ಪಾತ್ರಗಳದ್ದು, ಒಂದು ತೂಕವಾದರೆ, ʼದ ಜಡ್ಜ್‌ಮೆಂಟ್‌ʼ ಸಿನಿಮಾದ ಪಾತ್ರದ್ದು ಇನ್ನೊಂದು ತೂಕ. ನಾನು ಇಲ್ಲಿಯವರೆಗೆ ಮಾಡಿರುವ ಪಾತ್ರಗಳಿಗಿಂತ ವಿಭಿನ್ನವಾದ ಪಾತ್ರ ʼದ ಜಡ್ಜ್‌ಮೆಂಟ್‌ʼ ಸಿನಿಮಾದಲ್ಲಿದೆ. ಸಿನಿಮಾದ ಕಥೆ, ಪಾತ್ರ, ಕಲಾವಿದರು ಮತ್ತು ತಂತ್ರಜ್ಞರ ತಂಡ ಎಲ್ಲವೂ ಇಷ್ಟವಾಯಿತು. ಹೀಗಾಗಿ ಖುಷಿಯಿಂದ ಈ ಸಿನಿಮಾ ಒಪ್ಪಿಕೊಂಡೆ.

3) ʼದ ಜಡ್ಜ್‌ಮೆಂಟ್‌ʼ ಸಿನಿಮಾದಲ್ಲಿ ನಿಮ್ಮ ಪಾತ್ರ ಹೇಗಿದೆ?

ಈ ಸಿನಿಮಾದಲ್ಲಿ ನಾನು ಪ್ರೊಫೆಸರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ರವಿಚಂದ್ರನ್‌ ಸರ್‌ ಅವರಿಗೆ ಜೋಡಿಯಾಗಿ ಅಭಿನಯಿಸಿದ್ದೇನೆ. ಇಂದಿನ ಜನರೇಶನ್‌ನ ಮಹಿಳೆಯರು ಹೇಗೆ ಸ್ವತಂತ್ರವಾಗಿ ಬದುಕಲು ಬಯಸುತ್ತಾರೋ, ಅಂಥದ್ದೇ ಒಂದು ಪಾತ್ರ ಇದಾಗಿದೆ. ನನ್ನ ಪಾತ್ರ ಮತ್ತು ಸಿನಿಮಾದಲ್ಲಿ ನಾನಿರುವ ಸನ್ನಿವೇಶಗಳು ಹೆಚ್ಚಾಗಿ ಮನೆಯಲ್ಲೇ ನಡೆಯುತ್ತದೆ. ತುಂಬ ಎಮೋಶನ್‌ ಕ್ಯಾರಿ ಮಾಡುವಂಥ ಪಾತ್ರ ಇದಾಗಿದೆ.

4) ಮೊದಲ ಬಾರಿಗೆ ರವಿಚಂದ್ರನ್‌ ಅವರೊಂದಿಗೆ ಅಭಿನಯಿಸಿದ್ದು ಹೇಗಿತ್ತು?

ಮೊದಲ ಬಾರಿಗೆ ರವಿಚಂದ್ರನ್‌ ಅವರಂಥ ಲೆಜೆಂಡರಿ ಸ್ಟಾರ್‌ ಜೊತೆ ಅಭಿನಯಿಸುವ ಅವಕಾಶ ಸಿಕ್ಕಿರುವುದಕ್ಕೆ ತುಂಬ ಖುಷಿಯಿದೆ. ನಾನು ಈ ಸಿನಿಮಾ ಒಪ್ಪಿಕೊಳ್ಳಲು ಇದೂ ಕೂಡ ಒಂದು ಕಾರಣ. ಕೆಲ ವರ್ಷಗಳ ಹಿಂದೆ ರವಿಚಂದ್ರನ್‌ ಅವರೊಂದಿಗೆ ಅಭಿನಯಿಸುವ ಅವಕಾಶ ಬಂದಿದ್ದರೂ, ಕಾರಣಾಂತರಗಳಿಂದ ಅದು ಸಾಧ್ಯವಾಗಿರಲಿಲ್ಲ. ʼದ ಜಡ್ಜ್‌ಮೆಂಟ್‌ʼ ಸಿನಿಮಾದಲ್ಲಿ ಅದು ನೆರವೇರಿದೆ. ರವಿಚಂದ್ರನ್‌ ಅವರೊಂದಿಗೆ ಕೆಲಸ ಮಾಡಿದ್ದು, ನಿಜಕ್ಕೂ ಖುಷಿಕೊಟ್ಟಿದೆ.

ಇದನ್ನೂ ಓದಿ: Sandalwood Movie : ಸಿಂಹಗುಹೆಯಲ್ಲಿ ವಿಡಿಯೋ ಪೆನ್ ಡ್ರೈವ್ ಸದ್ದು!

5) ನಿಮ್ಮ ಪ್ರಕಾರ ʼದ ಜಡ್ಜ್‌ಮೆಂಟ್‌ʼ ಅಂದ್ರೇನು?

ಇದೊಂದು ಕಂಪ್ಲೀಟ್‌ ಕೋರ್ಟ್‌ ರೂಂ ಡ್ರಾಮಾ ಇರುವ ಲೀಗಲ್‌-ಥ್ರಿಲ್ಲರ್‌ ಸಿನಿಮಾ. ನನ್ನ ಪ್ರಕಾರ ಕನ್ನಡದಲ್ಲಿ ಇಂಥ ಸಿನಿಮಾಗಳು ಬಂದಿದ್ದು ತುಂಬ ವಿರಳ. ಅಂಥ ವಿರಳ ಸಿನಿಮಾಗಳ ಸಾಲಿಗೆ ಸೇರುವ ಸಿನಿಮಾ ʼದ ಜಡ್ಜ್‌ಮೆಂಟ್‌ʼ. ಒಂದಷ್ಟು ನೈಜ ಘಟನೆಗಳನ್ನು ಆಧರಿಸಿ ಅದನ್ನು ಸಿನಿಮಾ ರೂಪದಲ್ಲಿ ತೆರೆಗೆ ತಂದಿದ್ದಾರೆ ನಿರ್ದೇಶಕ ಗುರುರಾಜ ಕುಲಕರ್ಣಿ (ನಾಡಗೌಡ). ಇಂದಿನ ಕಾನೂನು, ನ್ಯಾಯ ವ್ಯವಸ್ಥೆ ಎಲ್ಲದರ ಚಿತ್ರಣ ಈ ಸಿನಿಮಾದಲ್ಲಿದೆ. ಇದೊಂದು ಲೀಗಲ್‌-ಥ್ರಿಲ್ಲರ್‌ ಶೈಲಿಯ ಸಿನಿಮಾವಾಗಿರುವುದರಿಂದ, ಇದಕ್ಕಿಂತ ಹೆಚ್ಚಾಗಿ ಸಿನಿಮಾದ ಬಗ್ಗೆ ಹೆಚ್ಚೇನೂ ಹೇಳಲಾರೆ.

6) ಸಿನಿಮಾದಲ್ಲಿ ನಿಮ್ಮ ಪಾತ್ರಕ್ಕೆ ತಯಾರಿ ಹೇಗಿತ್ತು?

ಯಾವುದೇ ಸಿನಿಮಾದ ಪಾತ್ರವಾದರೂ, ಅದಕ್ಕೆ ಅದರದ್ದೇ ಆದ ಒಂದಷ್ಟು ತಯಾರಿ ಇದ್ದೇ ಇರುತ್ತದೆ. ಈ ಸಿನಿಮಾದಲ್ಲಿ ನನ್ನ ಪಾತ್ರ ತುಂಬ ಗಂಭೀರವಾಗಿದೆ. ಮನಸ್ಸಿನ ಭಾವನೆಗಳನ್ನು ಮಾತಿಗಿಂತ ಹೆಚ್ಚಾಗಿ ಭಾವನೆಗಳ ಮೂಲಕವೇ ತೋರಿಸಬೇಕಾಗಿತ್ತು. ಕಡಿಮೆ ಡೈಲಾಗ್ಸ್‌ನಲ್ಲಿ ಹೆಚ್ಚು ಅಭಿನಯಕ್ಕೆ ಸ್ಕೋಪ್‌ ಇರುವಂಥ ಪಾತ್ರ ಇದಾಗಿತ್ತು. ನಿರ್ದೇಶಕ ಗುರುರಾಜ್‌ ಕುಲಕರ್ಣಿ ಸಿನಿಮಾದ ಪ್ರತಿ ಪಾತ್ರಗಳು, ಸನ್ನಿವೇಶಗಳು ಹೇಗೆ ಬರಬೇಕು ಎಂಬುದನ್ನು ಕಲಾವಿದರಿಗೆ ಅರ್ಥೈಸಿ ಅವರಿಂದ ಅಭಿನಯ ತೆಗೆಸುತ್ತಿದ್ದರು.

7) ನಿರ್ದೇಶಕರು ಮತ್ತು ಚಿತ್ರತಂಡದ ಬಗ್ಗೆ ಏನು ಹೇಳುವಿರಿ?

ʼದ ಜಡ್ಜ್‌ಮೆಂಟ್‌ʼ ಸಿನಿಮಾದ ನಿರ್ದೇಶಕ ಗುರುರಾಜ್‌ ಮೂಲತಃ ಸಾಫ್ಟ್‌ವೇರ್‌ ಹಿನ್ನೆಲೆಯಿಂದ ಸಿನಿಮಾಕ್ಕೆ ಬಂದವರು. ಸಾಕಷ್ಟು ವಿಷಯಗಳ ಬಗ್ಗೆ ಅವರಿಗೆ ಆಳವಾದ ಜ್ಞಾನವಿದೆ. . ಬಿಗ್‌ ಕಾಸ್ಟಿಂಗ್‌, ಬಿಗ್‌ ಬಜೆಟ್‌ ಇಟ್ಟುಕೊಂಡು ಅಂದುಕೊಂಡಂತೆ, ಪ್ಲಾನ್‌ ಪ್ರಕಾರ ಇಡೀ ಸಿನಿಮಾವನ್ನು ನಿರ್ದೇಶಕರು ಮತ್ತು ಚಿತ್ರತಂಡ ಅಚ್ಚುಕಟ್ಟಾಗಿ ತೆರೆಮೇಲೆ ತರುತ್ತಿದೆ. ತುಂಬ ಪ್ಯಾಶನೇಟ್‌ ಆಗಿ ಎಲ್ಲರೂ ಸೇರಿ ಒಂದೊಳ್ಳೆ ಸಿನಿಮಾ ಮಾಡಿದ್ದೇವೆ.

8) ʼದ ಜಡ್ಜ್‌ಮೆಂಟ್‌ʼ ಮೇಲೆ ನಿಮ್ಮ ನಿರೀಕ್ಷೆ ಹೇಗಿದೆ?

ನನ್ನ ಪ್ರಕಾರ, ʼದ ಜಡ್ಜ್‌ಮೆಂಟ್‌ʼ ಮಾಮೂಲಿ ಎಂಟರ್‌ಟೈನ್ಮೆಂಟ್‌ ಸಿನಿಮಾಗಳ ಸಾಲಿಗೆ ಅಥವಾ ಯಾವುದೋ ಒಂದು ವರ್ಗಕ್ಕೆ ಸೇರುವ ಸಿನಿಮಾವಲ್ಲ. ಕನ್ನಡದ ಮಟ್ಟಿಗೆ ತುಂಬ ಅಪರೂಪವಾಗಿರುವ ಲೀಗಲ್‌-ಥ್ರಿಲ್ಲರ್‌ ಶೈಲಿಯಲ್ಲಿ ಸಿನಿಮಾ ಬಂದಿದೆ. ಇದರಲ್ಲೊಂದು ಒಳ್ಳೆಯ ವಿಷಯವಿದೆ. ಅದನ್ನು ಮನಮುಟ್ಟುವಂತೆ ನಿರ್ದೇಶಕರು ತೆರೆಮೇಲೆ ಹೇಳಿದ್ದಾರೆ. ಆಡಿಯನ್ಸ್‌ಗೆ ಖಂಡಿತವಾಗಿಯೂ ʼದ ಜಡ್ಜ್‌ಮೆಂಟ್‌ʼ ಒಂದು ಒಳ್ಳೆಯ ಅನುಭವ ಕೊಟ್ಟು, ಇಷ್ಟವಾಗಲಿದೆ ಎಂಬ ವಿಶ್ವಾಸವಿದೆ.

Continue Reading

ಪ್ರಮುಖ ಸುದ್ದಿ

Sandalwood Movie : ಸಿಂಹಗುಹೆಯಲ್ಲಿ ವಿಡಿಯೋ ಪೆನ್ ಡ್ರೈವ್ ಸದ್ದು!

Sandalwood Movie : ಸಸ್ಪೆನ್ಸ್, ಕ್ರೈಂ, ಮರ್ಡರ್ ಮಿಸ್ಟ್ರಿ ಕಥೆ ಇರುವ ನಮ್ಮ ಚಿತ್ರದಲ್ಲಿ ಹೊರಗಡೆ ನಡೆಯುತ್ತಿರುವ ವಿಚಾರಗಳೇ ಇರಬಹುದು ಎನಿಸಿದರೂ ಅದು ಕಾಕತಾಳೀಯ. ವರ್ಷದ ಹಿಂದೆಯೇ ನಮ್ಮ ಚಿತ್ರ ಸೆನ್ಸಾರ್​ ಆಗಿತ್ತು. ಹೀರೋ‌ನೇ ಅಂಥಾ ವಿಡಿಯೋ‌ ಮಾಡ್ತಾನಾ;? ಯಾರು ಯಾಕೆ ಮಾಡ್ತಾನೆ ಅನ್ನೋದೇ ಸಸ್ಪೆನ್ಸ್ ಎಂದು ನಿರ್ದೇಶಕ ಎಸ್‌ಜಿಆರ್ ಹೇಳಿದ್ದಾರೆ.

VISTARANEWS.COM


on

Sandalwood Movie
Koo

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನೇ ಹೋಲುವ ಝಲಕ್ ಒಳಗೊಂಡ ಸಿಂಹಗುಹೆ ಚಿತ್ರದ (Sandalwood Movie) ಟೀಸರ್ ಇದೀಗ ಭಾರೀ ಸದ್ದು ಮಾಡುತ್ತಿದೆ. ಅಶ್ಲೀಲ ವಿಡಿಯೋ ಪ್ರಕರಣ, ಪೆನ್ ಡ್ರೈವ್ ನಂಥ ವಿಚಾರಗಳೂ ಈ ಟೀಸರ್ ನಲ್ಲಿದೆ. ಈಗಾಗಲೇ ಬಿಡುಗಡೆಯಾದ ಈ ಟೀಸರ್ ಹಲವಾರು ಪ್ರಶ್ನೆ ಹಾಗು ಕುತೂಹಲ ಹುಟ್ಟು ಹಾಕಿದೆ. ಸಮರ್ಥ, ತಾಜಾ ಚಿತ್ರಗಳ ನಂತರ ಎಸ್‌.ಜಿ.ಆರ್. ಅವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಸಿಂಹಗುಹೆ ಚಿತ್ರದ ಟೀಸರ್ ಸದ್ಯ ಒಂದಷ್ಟು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ನಿರ್ದೇಶಕ ಎಸ್‌ಜಿಆರ್ ಮಾತನಾಡಿ, ಸಸ್ಪೆನ್ಸ್, ಕ್ರೈಂ, ಮರ್ಡರ್ ಮಿಸ್ಟ್ರಿ ಕಥೆ ಇರುವ ನಮ್ಮ ಚಿತ್ರದಲ್ಲಿ ಹೊರಗಡೆ ನಡೆಯುತ್ತಿರುವ ವಿಚಾರಗಳೇ ಇರಬಹುದು ಎನಿಸಿದರೂ ಅದು ಕಾಕತಾಳೀಯ. ವರ್ಷದ ಹಿಂದೆಯೇ ನಮ್ಮ ಚಿತ್ರ ಸೆನ್ಸಾರ್​ ಆಗಿತ್ತು. ಹೀರೋ‌ನೇ ಅಂಥಾ ವಿಡಿಯೋ‌ ಮಾಡ್ತಾನಾ;? ಯಾರು ಯಾಕೆ ಮಾಡ್ತಾನೆ ಅನ್ನೋದೇ ಸಸ್ಪೆನ್ಸ್.

ಇನ್ನು ಅನೇಕ ವಿಚಾರಗಳು ಚಿತ್ರದಲ್ಲಿವೆ. ಸಮಾಜದಲ್ಲಿ ಹೇಗಿರಬೇಕು, ಹೇಗಿರಬಾರದು ಅಂತ ಮೆಸೇಜ್ ಹೇಳಿದ್ದೇವೆ. ಮೊಬೈಲ್ ನಿಂದ ಏನೇನಾಗುತ್ತೆ ಅನ್ನೋದೂ ಚಿತ್ರದಲ್ಲಿದೆ.ಹಾಸನ, ಸಕಲೇಶಪುರ, ಮೂಡಿಗೆರೆ ಸುತ್ತಮುತ್ತ ಚಿತ್ರದ ಚಿತ್ರೀಕರಣ ನಡೆಸಿದ್ದೇವೆ. ಚಿತ್ರವೀಗ ಬಿಡುಗಡೆಗೆ ರೆಡಿ ಇದ್ದು, ಜೂನ್ ವೇಳೆಗೆ ರಿಲೀಸ್ ಮಾಡುವ ಪ್ಲಾನಿದೆ ಎಂದು ಹೇಳಿದರು.

ಸಹ ನಿರ್ಮಾಪಕ ಕೃಷ್ಣ ಮಾತನಾಡಿ, ಡೈರೆಕ್ಟರ್ ಬಂದು ಒಂಟಿ ಮನೆಯಲ್ಲಿ ಈ ಥರ ನಡೆಯುತ್ತೆ ಅಂತ ಹೇಳಿದರು. ಕಥೆ ಇಂಟರೆಸ್ಟಿಂಗ್ ಆಗಿದೆ ಅಂತ ನಿರ್ಮಾಣಕ್ಕೆ ಮುಂದಾದೆವು ಎಂದರು.

ಇದನ್ನೂ ಓದಿ: A: Film by Upendra : ರೀ ರಿಲೀಸ್ ನಲ್ಲೂ ದಾಖಲೆ ನಿರ್ಮಿಸಿದ ಉಪೇಂದ್ರ ನಿರ್ದೇಶನದ “A”

ಸಂಗೀತ ನಿರ್ದೇಶಕ ಸತೀಶ್ ಆರ್ಯನ್ ಮಾತನಾಡಿ, ನಾನು ಚಿತ್ರದ ಸಾಂಗ್, ಆರ್.ಆರ್. ಮಾಡಿದ್ದೇನೆ. ನಾನೂ ಸಹ 2 ಹಾಡುಗಳನ್ನು ಹಾಡಿದ್ದೇನೆ. ಈಗಾಗಲೇ ರಿಲೀಸ್ ಆಗಿರುವ ಸಾಂಗ್ ವೈರಲ್ ಆಗಿದೆ‌ ಎಂದರು.

ನಟಿ ಅನುರಾಧಾ ಮಾತನಾಡಿ, ಈವರೆಗೆ ಸಣ್ಣಪುಟ್ಟ ರೋಲ್ ಮಾಡಿಕೊಂಡಿದ್ದೆ. ಇದೇ ಫಸ್ಟ್ ಟೈಂ ಸೆಕೆಂಡ್ ಲೀಡ್ ಮಾಡಿದ್ದೇನೆ. ಹಳ್ಳಿ ಹುಡುಗಿ ನಾಯಕನ ಲವರ್ ಪಾತ್ರ ಎಂದರು. ನಾಯಕ ರವಿ ಶಿರೂರ್ ಅವರು ಅಭಿನಯದೊಂದಿಗೆ ನಿರ್ಮಾಣದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ. ನಿವಿಶ್ಕಾ ಪಾಟೀಲ್ ಚಿತ್ರದ ನಾಯಕಿಯಾಗಿದ್ದಾರೆ. ಎ.ಸಿ. ಮಹೇಂದರ್ ಅವರ ಛಾಯಾಗ್ರಹಣ, ಶಿವನಂಜೇಗೌಡ ಅವರ ಸಾಹಿತ್ಯ, ಸೈ ರಮೇಶ್ ಅವರ ಕೊರಿಯೋಗ್ರಫಿ ಈ ಚಿತ್ರಕ್ಕಿದೆ,

Continue Reading

ಪ್ರಮುಖ ಸುದ್ದಿ

A: Film by Upendra : ರೀ ರಿಲೀಸ್ ನಲ್ಲೂ ದಾಖಲೆ ನಿರ್ಮಿಸಿದ ಉಪೇಂದ್ರ ನಿರ್ದೇಶನದ “A”

A: Film by Upendra: ಈ ಚಿತ್ರಕ್ಕೆ ನಾನು ನಾಯಕಿಯಾಗಿ ಆಯ್ಕೆಯಾಗಿದ್ದು ನಿಜಕ್ಕೂ ಆಶ್ಚರ್ಯ. ನಾನು ಆಗ ಓದುತ್ತದೆ. ನ್ಯೂಯಾರ್ಕ್ ನಲ್ಲಿದೆ. ನನ್ನ ಫೋಟೊ ನೋಡಿದ ಉಪೇಂದ್ರ ಅವರು ನಾಯಕಿಯಾಗಿ ಆಯ್ಕೆ ಮಾಡಿದರು. ನಿಜವಾಗಲೂ ಉಪೇಂದ್ರ ಅವರು ಬರೀ ಕರ್ನಾಟಕ ಅಷ್ಟೇ ಅಲ್ಲ. ಇಡೀ ದೇಶ ಕಂಡ ಅತ್ಯಂತ ಪ್ರತಿಭಾವಂತ ನಿರ್ದೇಶಕ ಎಂದು ಹೇಳಿದ್ದಾರೆ.

VISTARANEWS.COM


on

A: Film by Upendra
Koo

ಬೆಂಗಳೂರು: ಉಪೇಂದ್ರ ನಾಯಕರಾಗಿ ನಟಿಸಿ, ನಿರ್ದೇಶಿಸಿದ್ದ “A” (A: Film by Upendra) ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ . ಈ ಚಿತ್ರ ತೆರೆಕಂಡು 26 ವರ್ಷಗಳಾಗಿದೆ. ಹಿಂದಿನ ವಾರ ಈ ಚಿತ್ರ ಕರ್ನಾಟಕದಾದ್ಯಂತ ರೀ ರಿಲೀಸ್ ಕೂಡ ಆಗಿ ಜನರ ಮನ ಗೆಲ್ಲುತ್ತಿದೆ. ಈ ಸಂತಸವನ್ನು ನಾಯಕಿ ಚಾಂದಿನಿ ಸೇರಿದಂತೆ “A” ಚಿತ್ರತಂಡದ ಸದಸ್ಯರು ಮಧ್ಯಮದ ಮುಂದೆ ಹಂಚಿಕೊಂಡರು.

26 ವರ್ಷಗಳ ಹಿಂದೆ ಇಡೀ ದೇಶದಲ್ಲಿ ಸಂಚಲನ ಮೂಡಿಸಿದ ಚಿತ್ರ ಉಪೇಂದ್ರ ನಿರ್ದೇಶನದ “A” ಎಂದು ಮಾತನಾಡಿದ ನಾಯಕಿ ಚಾಂದಿನಿ, ಈ ಚಿತ್ರ ಇತ್ತೀಚೆಗೆ ರೀ ರಿಲೀಸ್ ಆಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಬಹಳ ಸಂತೋಷವಾಗಿದೆ. ಈ ಚಿತ್ರಕ್ಕೆ ನಾನು ನಾಯಕಿಯಾಗಿ ಆಯ್ಕೆಯಾಗಿದ್ದು ನಿಜಕ್ಕೂ ಆಶ್ಚರ್ಯ. ನಾನು ಆಗ ಓದುತ್ತದೆ. ನ್ಯೂಯಾರ್ಕ್ ನಲ್ಲಿದೆ. ನನ್ನ ಫೋಟೊ ನೋಡಿದ ಉಪೇಂದ್ರ ಅವರು ನಾಯಕಿಯಾಗಿ ಆಯ್ಕೆ ಮಾಡಿದರು. ನಿಜವಾಗಲೂ ಉಪೇಂದ್ರ ಅವರು ಬರೀ ಕರ್ನಾಟಕ ಅಷ್ಟೇ ಅಲ್ಲ. ಇಡೀ ದೇಶ ಕಂಡ ಅತ್ಯಂತ ಪ್ರತಿಭಾವಂತ ನಿರ್ದೇಶಕ ಎಂದು ಹೇಳಿದ್ದಾರೆ.

ಮುಂದುವರಿದ ಅವರು, ಉಪೇಂದ್ರ ಅವರಿಂದ ಮೊದಲ ಚಿತ್ರದಲ್ಲೇ ನಾನು ಸಾಕಷ್ಟು ಕಲಿತಿದ್ದೇನೆ. ಮೊದಲ ಚಿತ್ರದ ಚಿತ್ರೀಕರಣದ ಅನುಭವ ಈಗಲೂ ಕಣ್ಣ ಮುಂದೆ ಇದೆ. ನಾನು “A” ಚಿತ್ರದ ನಂತರ ಕನ್ನಡ ಸೇರಿದಂತೆ ದೇಶದ ವಿವಿಧ ಭಾಷೆಗಳ ಜನಪ್ರಿಯ ಚಿತ್ರಗಳಲ್ಲಿ ನಟಿಸಿದ್ದೇನೆ. ಆದರೆ ನನ್ನನ್ನು ಎಲ್ಲರೂ ಗುರುತಿಸುವುದು “A” ಚಿತ್ರದ ನಾಯಕಿ ಅಂತ. ಅಷ್ಟು ಹೆಸರು ತಂದುಕೊಟ್ಟಿದೆ ನನಗೆ ಈ ಚಿತ್ರ. ಈ ಸಂದರ್ಭದಲ್ಲಿ ನಿರ್ದೇಶಕರಿಗೆ, ನಿರ್ಮಾಪಕರಿಗೆ ಧನ್ಯವಾದ ತಿಳಿಸುತ್ತೇನೆ. ಮತ್ತೊಂದು ಮುಖ್ಯವಾದ ವಿಷಯವೆಂದರೆ ಈ ಜನಪ್ರಿಯ ಚಿತ್ರವನ್ನು ಇನ್ನಷ್ಟು ಮುಂದುವರೆಸುವುದು ನನ್ನ ಹಂಬಲ. ಹಾಗಾಗಿ ‘A’ ಚಿತ್ರದ ಮುಂದುವರೆದ ಭಾಗ ಮಾಡುವುದಕ್ಕೆ ತೀರ್ಮಾನ ಮಾಡಿದ್ದೇನೆ. ಕಥೆ ಮತ್ತು ಚಿತ್ರಕಥೆಯನ್ನು ನಾನೇ ಬರದಿದ್ದೇನೆ. ನಿರ್ಮಾಪಕ ಮಂಜುನಾಥ್, ಸಂಗೀತ ನಿರ್ದೇಶಕ ಗುರುಕಿರಣ್‍ ಮುಂತಾದವರು ಜೊತೆಗಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Chow Chow Bath : ‘ಚೌ ಚೌ ಬಾತ್’ ಸಿನಿಬಜಾರ್​​ ಡಿಜಿಟಲ್ ಥಿಯೇಟರ್​​ನಲ್ಲಿ ಬಿಡುಗಡೆ

ಇನ್ನೊಂದು ವಿಷಯ ಬಾಕಿ ಇದೆ. ನಾವೆಲ್ಲರೂ ಹೋಗಿ ಉಪೇಂದ್ರ ಅವರ ಬಳಿ ಈ ಚಿತ್ರವನ್ನು ನೀವೇ ನಿರ್ದೇಶಿಸಬೇಕು ಹಾಗೂ ನಾಯಕರಾಗೂ ನಟಿಸಬೇಕು ಎಂದು ಮನವಿ ಮಾಡುವುದು. ಸದ್ಯದಲ್ಲೇ ಅವರನ್ನು ಭೇಟಿ ಮಾಡುತ್ತೇವೆ‌. ಅವರು ಒಪ್ಪುತ್ತಾರೋ ಇಲ್ಲವೋ ಗೊತ್ತಿಲ್ಲ. ಆದರೆ, ಈ ಸಿನಿಮಾ ಮಾಡಬೇಕೆಂದು ತೀರ್ಮಾನ ಮಾಡಿದ್ದೇವೆ. ಸದ್ಯದಲ್ಲೇ ಚಿತ್ರ ಪ್ರಾರಂಭವಾಗಲಿದೆ. ಆ ಚಿತ್ರದಲ್ಲಿದ್ದ ಬಹುತೇಕ ಚಿತ್ರತಂಡದ ಸದಸ್ಯರು ಈ ಚಿತ್ರದಲ್ಲೂ ಇರುತ್ತಾರೆ ಎಂದು ಚಾಂದಿನಿ ಹೇಳಿದರು.

ಚಿತ್ರ ಆರಂಭವಾದಗಿನಿಂದ ಹಿಡಿದು ಬಿಡುಗಡೆಯಾಗುವವರೆಗಿನ ಮಾಹಿತಿಯನ್ನು ನಿರ್ಮಾಪಕ ಮಂಜುನಾಥ್ ನೀಡಿದರು. ಹಾಡುಗಳ ಕುರಿತು ಗುರುಕಿರಣ್ ಮಾತನಾಡಿದರು. ವಿ.ಮನೋಹರ್, ಗುರುದತ್ತ್, ಲೋಕಿ, ರಾಜಾರಾಮ್, ಜೋಶಿ ಮುಂತಾದ ಚಿತ್ರತಂಡದ ಸದಸ್ಯರು ಹಾಗೂ ವಿತರಕ ಶಂಕರ್ ಸಮಾರಂಭದಲ್ಲಿ ಭಾಗಿಯಾಗಿದ್ದರು. ಉಪೇಂದ್ರ ಅವರು ವಿದೇಶದಲ್ಲಿರುವುದರಿಂದ ವಿಡಿಯೋ ಮೂಲಕ ಖುಷಿ ಹಂಚಿಕೊಂಡರು.

Continue Reading

ಪ್ರಮುಖ ಸುದ್ದಿ

Chow Chow Bath : ‘ಚೌ ಚೌ ಬಾತ್’ ಸಿನಿಬಜಾರ್​​ ಡಿಜಿಟಲ್ ಥಿಯೇಟರ್​​ನಲ್ಲಿ ಬಿಡುಗಡೆ

Chow Chow Bath: ಸಿನಿ ಬಜಾರ್ ನಲ್ಲಿ ಬಿಡುಗಡೆಗೊಂಡ ಮೊದಲ ದಿನವೇ ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಣೆ ಪಡೆದುಕೊಂಡಿದೆ. ಇನ್ನು ಐವತ್ತು ದಿನಗಳ ಕಾಲ ಈ ಸಿನಿಮಾ ಸಿನಿ ಬಜಾರಿನಲ್ಲಿ ಪ್ರದರ್ಶನ ಕಾಣಲಿದೆ. ಆರಂಭದಿಂದಲೂ ಚೌ ಚೌ ಬಾತ್ ಬಗ್ಗೆ ಉತ್ತಮ ಅಭಿಪ್ರಾಯ ಮೂಡಿಕೊಂಡಿತ್ತು.

VISTARANEWS.COM


on

'Chow Chow Bath'
Koo

ಬೆಂಗಳೂರು: ಕೇಂಜ ಚೇತನ್​ ಕುಮಾರ್ ನಿರ್ದೇಶನದ ಚೌ ಚೌ ಬಾತ್’ (Chow Chow Bath) ಈ ವರ್ಷ ಬಿಡುಗಡೆಗೊಂಡಿರುವ ಚೆಂದದ ಚಿತ್ರಗಳಲ್ಲೊಂದಾಗಿ ಗುರುತಿಸಿಕೊಂಡಿದೆ. ಒಂದಷ್ಟು ಪ್ರಯೋಗಾತ್ಮಕ ಅಂಶಗಳು, ಪ್ರೇಕ್ಷಕರನ್ನೇ ತನ್ನೊಳಗಿಳಿಸಿಕೊಂಡು ಕರೆದೊಯ್ಯುವ ಗುಣದ ದೃಷ್ಯದಿಂದ ಕಳೆಗಟ್ಟಿಕೊಂಡಿದ್ದ ಚಿತ್ರ `ಚೌ ಚೌ ಬಾತ್’. ಅತ್ಯತ್ತಮ ವಿಮರ್ಶೆ ಪಡೆದಿದ್ದ ಈ ಸಿನಿಮಾವನ್ನು ನೋಡಿದ ಪ್ರೇಕ್ಷಕರೆಲ್ಲ ಥ್ರಿಲ್ ಆಗಿದ್ದರು. ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿಯೂ ಪ್ರದರ್ಶನಗೊಂಡಿದ್ದ ಚೌ ಚೌ ಬಾತ್ ಇದೀಗ ಸಿನಿ ಬಜಾರ್​ ಎಂಬ ಡಿಜಿಟಲ್ ಥಿಯೇಟರಿನಲ್ಲಿ ಬಿಡುಗಡೆಗೊಂಡಿದೆ.

ಸಿನಿ ಬಜಾರ್ ನಲ್ಲಿ ಬಿಡುಗಡೆಗೊಂಡ ಮೊದಲ ದಿನವೇ ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಣೆ ಪಡೆದುಕೊಂಡಿದೆ. ಇನ್ನು ಐವತ್ತು ದಿನಗಳ ಕಾಲ ಈ ಸಿನಿಮಾ ಸಿನಿ ಬಜಾರಿನಲ್ಲಿ ಪ್ರದರ್ಶನ ಕಾಣಲಿದೆ. ಆರಂಭದಿಂದಲೂ ಚೌ ಚೌ ಬಾತ್ ಬಗ್ಗೆ ಉತ್ತಮ ಅಭಿಪ್ರಾಯ ಮೂಡಿಕೊಂಡಿತ್ತು. ಈ ಕಾರಣದಿಂದಲೇ ಈ ಸಿನಿಮಾ ಯಶ ಕಂಡಿದ್ದೀಗ ಇತಿಹಾಸ. ನಿರ್ದೇಶಕ ಕೇಂಜ ಚೇತನ್ ಕುಮಾರ್ ಅಂಥಾದ್ದೊಂದು ಸಮ್ಮೋಹಕ ಶೈಲಿಯಲ್ಲಿ ಈ ಚಿತ್ರವನ್ನು ಕಟ್ಟಿಕೊಟ್ಟಿದ್ದರು.

ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದ ಪ್ರೇಕ್ಷಕರಿಂದಲೇ ಈ ಚಿತ್ರ ಮೆಚ್ಚುಗೆ ಗಳಿಸಿಕೊಂಡಿತ್ತು. ಇಂಥಾ ಸದಭಿಪ್ರಾಯ ಕೇಳಿ ಸಿನಿಮಾ ಮಂದಿರಗಳಲ್ಲಿ ನೋಡಬೇಕಂದುಕೊಂಡು ಸಾಧ್ಯವಾಗದವರು, ಸಿನಿ ಬಜಾರ್ ಡಾಟ್ ಕಾಮ್ ನಲ್ಲಿ ಚೌ ಚೌ ಬಾತ್ ನ ಅಸಲೀ ಸವಿಯನ್ನು ಆಸ್ವಾದಿಸುವ ಅವಕಾಶವೀಗ ಒದಗಿ ಬಂದಿದೆ.

ಇದನ್ನೂ ಓದಿ: Maarige Daari : ‘ಮಾರಿಗೆ ದಾರಿ” ಫಸ್ಟ್ ಲುಕ್ ಟೀಸರ್ ಬಿಡುಗಡೆ, ಇಲ್ಲಿದೆ ವಿಡಿಯೊ

ಇದು ಹೈಪರ್ ಲಿಂಕ್ ರೊಮ್ಯಾಂಟಿಕ್ ಜಾನರಿನ ಚಿತ್ರ. ಕನ್ನಡದ ಮಟ್ಟಿಗಿದು ಅಪರೂಪದ ಜಾನರ್. ಮೂರು ವಿಭಿನ್ನ ಪ್ರೇಮ ಕಥನಗಳನ್ನು ತೆರೆದಿಡುವ ಚೌ ಚೌ ಬಾತ್ ಎಲ್ಲ ವರ್ಗದ ಪ್ರೇಕ್ಷಕರನ್ನೂ ಸೆಳೆಯುವಂತಿದೆ. ಹೀಗೊಂದು ಅಭಿಪ್ರಾಯ ನೋಡಿದವರಿಂದಲೇ ಮೂಡಿಕೊಂಡಿದೆ. ಸನಾತನಯ್ ಪಿಕ್ಚರ್ಸ್ ಮತ್ತು ಕಾಮನಧೇನು ಫಿಲಂಸ್ ಅರ್ಪಿಸುವ ಈ ಚಿತ್ರ ಹಾರಿಜಾನ್ ಮೂವೀಸ್ ಬ್ಯಾನರಿನಡಿಯಲ್ಲಿ ನಿರ್ಮಾಣಗೊಂಡಿದೆ. ಹೇಮಂತ್ ಜೋಯಿಸ್ ಸಂಗೀತ ನಿರ್ದೇಶನ, ರುದ್ರಮುನಿ ಬೆಳಗೆರೆ ಛಾಯಾಗ್ರಹಣ, ಪ್ರಮೋದ್ ಮರವಂತೆ ಗೀತ ಸಾಹಿತ್ಯವಿದೆ. ಸಾಗರ್ ಗೌಡ, ಸಂಕಲ್ಪ್ ಶರ್ಮಾ, ಸುಶ್ಮಿತಾ ಭಟ್, ಅರುಣಾ ಬಾಲರಾಜ್, ಧನುಶ್ ಬೈಕಂಪಾಡಿ, ಗೀತಾ ಬಂಗೇರ, ಪ್ರಕರ್ಷ ಶಾಸ್ತ್ರಿ ಮುಂತಾದವರ ತಾರಾಗಣವನ್ನು ಈ ಸಿನಿಮಾ ಒಳಗೊಂಡಿದೆ. ಸತೀಶ್ ಎಸ್.ಬಿ, ಸಂಕಲ್ಪ್ ಶರ್ಮಾ, ಪೂರ್ಣಚಂದ್ರ, ದ ಜೋಯ್ಸ್ ಪ್ರಾಜೆಕ್ಟ್, ಅಶೋಕ್ ಡಿ ಶೆಟ್ಟಿ, ಓಂ ಸ್ಟುಡಿಯೋ ಸಹ ನಿರ್ಮಾಣದೊಂದಿಗೆ `ಚೌ ಚೌ ಬಾತ್’ ಚಿತ್ರ ಮೂಡಿ ಬಂದಿದೆ.

Continue Reading
Advertisement
road Accident
ತುಮಕೂರು16 seconds ago

Road Accident: ಬೈಕ್‌ಗಳ ಅಪಘಾತ; ಮಗನ ಕಣ್ಣೆದುರೇ ರಕ್ತಕಾರಿ ತಾಯಿ ಮೃತ್ಯು; ಮೂವರು ಗಂಭೀರ

lok sabha election 2024 supreme court
ಪ್ರಮುಖ ಸುದ್ದಿ3 mins ago

Lok Sabha Election 2024: ಬೂತ್‌ವಾರು ಮತದಾನ ವಿವರ ನೀಡಬೇಕಿಲ್ಲ: ಸುಪ್ರೀಂ ಕೋರ್ಟ್‌

meghana Goankar
ಸಿನಿಮಾ9 mins ago

Meghana Gaonkar : ಮೇಘನಾ ಗಾಂವ್ಕರ್​ಗೆ ಖುಷಿಗೆ ʼದಿ ಜಡ್ಜ್‌ಮೆಂಟ್‌ʼ ಕಾರಣ, ಯಾಕೆ ಗೊತ್ತಾ?

Hardik Pandya & Natasa Stankovic
ಕ್ರೀಡೆ21 mins ago

Hardik Pandya & Natasa Stankovic: ಹಾರ್ದಿಕ್​ ಪಾಂಡ್ಯಗೆ ಕೈ ಕೊಟ್ಟರೇ ಪತ್ನಿ ನತಾಶಾ!

Sandalwood Movie
ಪ್ರಮುಖ ಸುದ್ದಿ28 mins ago

Sandalwood Movie : ಸಿಂಹಗುಹೆಯಲ್ಲಿ ವಿಡಿಯೋ ಪೆನ್ ಡ್ರೈವ್ ಸದ್ದು!

Bank fraud Scam in Urban Co operative Bank of Karwar
ಕರ್ನಾಟಕ56 mins ago

Bank fraud: ಕಾರವಾರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ‌ ಹಗರಣ! 54 ಸಾವಿರ ಕೋಟಿ ರೂ. ಗುಳುಂ; ಮ್ಯಾನೇಜರ್ ಸಾವಿಂದ ಹೊರಬಂತು ಅವ್ಯವಹಾರ!

RR vs SRH
ಕ್ರೀಡೆ1 hour ago

RR vs SRH: ಹೈದರಾಬಾದ್-ರಾಜಸ್ಥಾನ್ ನಡುವಣ ಇಂದಿನ ಕ್ವಾಲಿಫೈಯರ್​ ಪಂದ್ಯಕ್ಕೆ ಮಳೆ ಕಾಟ ಇದೆಯೇ?

COMEDK UGET Result 2024 Out
ಶಿಕ್ಷಣ1 hour ago

COMEDK UGET Result 2024: ಕಾಮೆಡ್‌ ಕೆ ಫಲಿತಾಂಶ ಪ್ರಕಟ; ಬೆಂಗಳೂರಿನ ಬಾಲಸತ್ಯ ಸರವಣನ್ ಫಸ್ಟ್‌ ರ‍್ಯಾಂಕ್‌

Rotary June Run
ಪ್ರಮುಖ ಸುದ್ದಿ2 hours ago

Rotary June Run: ರೋಟರಿಯಿಂದ ಬೆಂಗಳೂರಿನಲ್ಲಿ ಜೂನ್​ 9ರಂದು ಮ್ಯಾರಥಾನ್​; ವಿಸ್ತಾರ ನ್ಯೂಸ್‌ ಸಹಯೋಗ

Flight Turbulence
ವಿದೇಶ3 hours ago

Flight Turbulence: ನೀವಿದ್ದ ವಿಮಾನ ಪ್ರಕ್ಷುಬ್ಧತೆಗೊಳಗಾದರೆ ಏನು ಮಾಡುತ್ತೀರಿ? ಇಲ್ಲಿದೆ ಪೈಲಟ್‌ಗಳ ಸಲಹೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ1 day ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ7 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌