ಹಳ್ಳಿ ಹುಡುಗ, ಈಗ ಅಂತಾರಾಷ್ಟ್ರೀಯ ನಿಧಿ: ಅಜಿತ್ ದೋವಲ್​​ರನ್ನು ಹೊಗಳಿದ ಯುಎಸ್​ ರಾಯಭಾರಿ - Vistara News

ದೇಶ

ಹಳ್ಳಿ ಹುಡುಗ, ಈಗ ಅಂತಾರಾಷ್ಟ್ರೀಯ ನಿಧಿ: ಅಜಿತ್ ದೋವಲ್​​ರನ್ನು ಹೊಗಳಿದ ಯುಎಸ್​ ರಾಯಭಾರಿ

ಯುನೈಟೆಡ್​ ಸ್ಟೇಟ್ಸ್​ ಮತ್ತು ಭಾರತದ ನಡುವಿನ ಸೌಹಾರ್ಧದ ಬುನಾದಿ ಬಲಿಷ್ಠವಾಗಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಎರಿಕ್​ ಗಾರ್ಸೆಟ್ಟಿ ಅವರು, ಭಾರತವನ್ನು ಅಮೆರಿಕ ಪ್ರೀತಿಸುತ್ತದೆ ಎಂದು ಹೇಳಿದರು.

VISTARANEWS.COM


on

Eric Garcetti And National Security Advisor Ajit Doval
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾರತಕ್ಕೆ ಅಮೆರಿಕದ ರಾಯಭಾರಿಯಾಗಿರುವ ಎರಿಕ್​ ಗಾರ್ಸೆಟ್ಟಿ ಅವರು ನಮ್ಮ ದೇಶದ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿರುವ (NSA)ಅಜಿತ್​ ದೋವಲ್ (NSA Ajit Doval)​ ಅವರನ್ನು ಹೊಗಳಿದ್ದಾರೆ. ‘ಅಜಿತ್ ದೋವಲ್​ ಒಬ್ಬರು ಅಂತಾರಾಷ್ಟ್ರೀಯ ನಿಧಿ’ ಎಂದು ಬಣ್ಣಿಸಿದ್ದಾರೆ. ಎರಿಕ್ ಗಾರ್ಸೆಟ್ಟಿ ಅವರು ಇದೇ ಮಾರ್ಚ್​ ತಿಂಗಳಲ್ಲಿ ಭಾರತಕ್ಕೆ ಅಮೆರಿಕದ ನೂತನ ರಾಯಭಾರಿಯಾಗಿ ನಿಯೋಜಿತಗೊಂಡಿದ್ದಾರೆ. ಅವರು ಮಂಗಳವಾರ ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ ‘ಅಜಿತ್ ದೋವಲ್ ಅವರು ಉತ್ತರಾಖಂಡ್​​ನ ಹಳ್ಳಿಯೊಂದರಲ್ಲಿ ಹುಟ್ಟಿ ಬೆಳೆದವರು. ಅಂಥ ಹಳ್ಳಿ ಹುಡುಗನೊಬ್ಬ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಪ್ಪಟ ನಿಧಿಯಾಗಿದ್ದಾರೆ. ಅವರು ಬರೀ ಭಾರತ ದೇಶದ ಸಂಪತ್ತಷ್ಟೇ ಅಲ್ಲ’ ಎಂದು ಹೇಳಿದ್ದಾರೆ.

ಯುನೈಟೆಡ್​ ಸ್ಟೇಟ್ಸ್​ ಮತ್ತು ಭಾರತದ ನಡುವಿನ ಸೌಹಾರ್ಧದ ಬುನಾದಿ ಬಲಿಷ್ಠವಾಗಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಎರಿಕ್​ ಗಾರ್ಸೆಟ್ಟಿ ಅವರು ‘ಭಾರತ-ಅಮೆರಿಕ ಸೌಹಾರ್ಧ ಸಂಬಂಧಕ್ಕೆ ಬಲವಾದ ಅಡಿಪಾಯವಿದೆ. ಅಮೆರಿಕದ ಪ್ರಜೆಗಳನ್ನು ಭಾರತ ಪ್ರೀತಿಸುತ್ತದೆ, ಭಾರತವನ್ನು ಅಮೆರಿಕ ಪ್ರೀತಿಸುತ್ತದೆ ಎಂದು ಹೇಳಿದರು. ಹಾಗೇ, ಡಿಜಿಟಲ್ ಪಾವತಿ ವ್ಯವಸ್ಥೆ ಮತ್ತು ಹಣಕಾಸು ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಪ್ರಗತಿಯ ಬಗ್ಗೆಯೂ ಗಾರ್ಸೆಟ್ಟಿ ಸಂತಸ ವ್ಯಕ್ತಪಡಿಸಿದರು. ‘ಭಾರತ ಡಿಜಿಟಲ್ ಪೇಮೆಂಟ್​ ಮತ್ತು ಫೈನಾನ್ಸಿಯಲ್​ ಟೆಕ್ನಾಲಜಿ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸುತ್ತಿರುವುದನ್ನು ಗಮನಿಸುತ್ತಿದ್ದೇನೆ. ಇದು ಜಗತ್ತನ್ನೇ ಬೆರಗುಗೊಳಿಸಿದೆ. ಒಂದು ಹಳ್ಳಿಯಲ್ಲಿ ಚಹಾ ಮಾರಾಟ ಮಾಡುವ ಮಹಿಳೆ ಕೂಡ ಇಂದು ಡಿಜಿಟಲ್ ಪಾವತಿ ವ್ಯವಸ್ಥೆ ಅಳವಡಿಸಿಕೊಂಡಿದ್ದಾರೆ. ಸರ್ಕಾರದಿಂದ ನೇರವಾಗಿ ಸವಲತ್ತು ಪಡೆಯುತ್ತಿದ್ದಾಳೆ. ಸರ್ಕಾರ ಕೊಡುವ ಸಂಪೂರ್ಣ ಹಣ ಅವಳಿಗೇ ಸಿಗುತ್ತಿದೆ‘ ಎಂದರು.

ಇದನ್ನೂ ಓದಿ: Video: ಅಮೆರಿಕದಲ್ಲೂ ರಾಹುಲ್ ಗಾಂಧಿ ಟ್ರಕ್​ನಲ್ಲಿ ಪ್ರಯಾಣ; ಡ್ರೈವರ್​ ಜತೆ ಚರ್ಚೆ, ಮೂಸೇವಾಲಾ ಹಾಡು

78ವರ್ಷದ ಅಜಿತ್ ದೋವಲ್​ ಅವರು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಕೆಲಸ ಮಾಡುತ್ತಿದ್ದಾರೆ. 2014ರಿಂದಲೂ ಇದೇ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಹಲವು ಸರ್ಜಿಕಲ್ ಸ್ಟ್ರೈಕ್​, ರಾಷ್ಟ್ರೀಯ, ಅಂತಾರಾಷ್ಟ್ರೀಯ ಬೇಹುಗಾರಿಕಾ ಕೆಲಸಗಳಲ್ಲಿ ಮಾಸ್ಟರ್​ ಮೈಂಡ್​. ದೇಶದ ಭದ್ರತೆಗೆ ಧಕ್ಕೆ ಬಂದಾಗ, ಗಲಭೆಗಳಾದಾಗ, ಹೊರಗಿನ ಶತ್ರುಗಳ ಉಪಟಳ ಜಾಸ್ತಿಯಾದಾಗ ಅವುಗಳ ನಿಯಂತ್ರಣದಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತಾರೆ. ಚುರುಕು ಮತಿಯ ಅಜಿತ್ ದೋವಲ್​ ಅಂತಾರಾಷ್ಟ್ರೀಯ ಮಟ್ಟದಲ್ಲೂ ಖ್ಯಾತಿಗಳಿಸಿದ್ದಾರೆ ಎಂಬುದಕ್ಕೆ ಇದೀಗ ಅಮೆರಿಕ ರಾಯಭಾರಿ ಆಡಿರುವ ಮಾತುಗಳೇ ಸಾಕ್ಷಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

NEET UG: ನೀಟ್‌ ಅಕ್ರಮ: ಪರೀಕ್ಷೆಯನ್ನುರದ್ದುಗೊಳಿಸುವುದು ಸಮಂಜಸವಲ್ಲ ಎಂದ ಕೇಂದ್ರ

NEET UG: ನೀಟ್‌ ಅಕ್ರಮದ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಇಂದು ವಿಚಾರಣೆ ನಡೆದಿದ್ದು, ಕೇಂದ್ರ ಸರ್ಕಾರ ಈ ಬಗ್ಗೆ ತನ್ನ ಅಫಿಡವಿಟ್‌ ಸಲ್ಲಿಸಿದೆ. 2024 ರ ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವುದು ಗಂಭೀರವಾಗಿ ಅಪಾಯಕ್ಕೆ ಕಾರಣವಾಗುತ್ತದೆ. ಈ ಪರೀಕ್ಷೆಗೆ ಲಕ್ಷಾಂತರ ಪ್ರಾಮಾಣಿಕ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಅವರಿಗೆ ಇದರಿಂದ ಅನ್ಯಾಯ ಆಗುತ್ತದೆ. ದೇಶವ್ಯಾಪಿ ಈ ಅಕ್ರಮ ನಡೆಯದೇ ಇರುವಾಗ ಪರೀಕ್ಷೆ ರದ್ದುಗೊಳಿಸುವುದು ಸರಿಯಾದ ಕ್ರಮವಲ್ಲ ಎಂದಿದ್ದಾರೆ.

VISTARANEWS.COM


on

Neet UG
Koo

ಹೊಸದಿಲ್ಲಿ: ಪದವಿಪೂರ್ವ ವೈದ್ಯಕೀಯ ಕೋರ್ಸ್​ಗಳ ಪ್ರವೇಶಕ್ಕಾಗಿ ನಡೆಸಲಾಗುವ ಸ್ಪರ್ಧಾತ್ಮಕ ನೀಟ್ ಪರೀಕ್ಷೆಯಲ್ಲಿ (NEET UG) ನಡೆದಿರುವ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ(Central Government) ತನ್ನ ನಿಲುವನ್ನು ಸುಪ್ರೀಂಕೋರ್ಟ್‌(Supreme Court)ಗೆ ತಿಳಿಸಿದ್ದು, ಈಗಾಗಲೇ ನಡೆದಿರುವ ಪರೀಕ್ಷೆಯನ್ನು ಅಮಾನ್ಯಗೊಳಿಸುವುದಾಗಲಿ ಅಥವಾ ಮರು ಪರೀಕ್ಷೆ ನಡೆಸುವ ಉದ್ದೇಶವಾಗಲೀ ಸರ್ಕಾರಕ್ಕಿಲ್ಲ ಎಂದು ಹೇಳಿದೆ. ಅದೂ ಅಲ್ಲದೇ ಬರೋಬ್ಬರಿ 24ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದ ಈ ಪರೀಕ್ಷೆಯಲ್ಲಿ ಅಷ್ಟು ದೊಡ್ಡ ಮಟ್ಟದಲ್ಲಿ ಈ ಅಕ್ರಮ ನಡೆದಿಲ್ಲ ಎಂದು ಸ್ಪಷ್ಟಪಡಿಸಿದೆ.

ನೀಟ್‌ ಅಕ್ರಮದ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಇಂದು ವಿಚಾರಣೆ ನಡೆದಿದ್ದು, ಕೇಂದ್ರ ಸರ್ಕಾರ ಈ ಬಗ್ಗೆ ತನ್ನ ಅಫಿಡವಿಟ್‌ ಸಲ್ಲಿಸಿದೆ. 2024 ರ ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವುದು ಗಂಭೀರವಾಗಿ ಅಪಾಯಕ್ಕೆ ಕಾರಣವಾಗುತ್ತದೆ. ಈ ಪರೀಕ್ಷೆಗೆ ಲಕ್ಷಾಂತರ ಪ್ರಾಮಾಣಿಕ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಅವರಿಗೆ ಇದರಿಂದ ಅನ್ಯಾಯ ಆಗುತ್ತದೆ. ದೇಶವ್ಯಾಪಿ ಈ ಅಕ್ರಮ ನಡೆಯದೇ ಇರುವಾಗ ಪರೀಕ್ಷೆ ರದ್ದುಗೊಳಿಸುವುದು ಸರಿಯಾದ ಕ್ರಮವಲ್ಲ ಎಂದಿದ್ದಾರೆ.

ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ (NEET PG 2024) ದಿನಾಂಕವನ್ನು ರಾಷ್ಟ್ರೀಯ ಪರೀಕ್ಷಾ ಮಂಡಳಿ (National Board of Examinations) ಪ್ರಕಟಿಸಿದೆ. ಆಗಸ್ಟ್ 11ರಂದು ಎರಡು ಪಾಳಿಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಜೂನ್ 23ರಂದು ನಿಗದಿಯಾಗಿದ್ದ ನೀಟ್-ಪಿಜಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಯುಜಿ ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆ ಸೇರಿದಂತೆ ವಿವಿಧ ವಿವಾದ ಭುಗಿಲೆದ್ದ ಹಿನ್ನಲೆಯಲ್ಲಿ ಜೂನ್‌ 22ರಂದು ಪರೀಕ್ಷೆ ಮುಂದೂಡಿ ಪ್ರಕಟಣೆ ಹೊರಡಿಸಲಾಗಿತ್ತು. ವೈದ್ಯಕೀಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ಹಲವು ದೂರುಗಳು ದಾಖಲಾಗಿದ್ದವು. ಸಾಮಾಜಿಕ ಮಾಧ್ಯಮಗಳ ಮೂಲಕ ಆಕಾಂಕ್ಷಿಗಳಿಗೆ ಹಣಕ್ಕಾಗಿ ಪ್ರಶ್ನೆ ಪತ್ರಿಕೆಯನ್ನು ನೀಡುವ ಆಮಿಷ ಒಡ್ಡಲಾಗಿದೆ ಎಂದು ದೂರಲಾಗಿತ್ತು. ಹೀಗಾಗಿ ಪರೀಕ್ಷೆಯನ್ನೇ ರದ್ದು ಮಾಡಲಾಗಿತ್ತು.

ನೀಟ್-ಪಿಜಿ ಪ್ರವೇಶ ಪರೀಕ್ಷೆಯ ಸಮಗ್ರತೆಯನ್ನು ಕಾಪಾಡಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿತ್ತು. ಪರೀಕ್ಷಾ ಪ್ರಕ್ರಿಯೆಗಳ ನ್ಯಾಯಸಮ್ಮತತೆಯನ್ನು ಖಚಿತಪಡಿಸಿಕೊಳ್ಳಲು ಸಮಗ್ರ ಮೌಲ್ಯಮಾಪನ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವಾಲಯ ಸಮರ್ಥನೆ ನೀಡಿತ್ತು.
ಕೊನೇ ಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ಉಂಟಾದ ಅನಾನುಕೂಲತೆಗೆ ಆರೋಗ್ಯ ಸಚಿವಾಲಯವು ವಿಷಾದಿಸುತ್ತದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಪರೀಕ್ಷಾ ಪ್ರಕ್ರಿಯೆ ಪಾವಿತ್ರ್ಯವನ್ನು ಕಾಪಾಡಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವಾಲ ಪ್ರಕಟಣೆ ಹೊರಡಿಸಿ ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟಿಸುವುದಾಗಿ ಹೇಳಿತ್ತು.

ಡಾರ್ಕ್​ನೆಟ್​​ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಯುಜಿಸಿ-ನೆಟ್ ರದ್ದುಗೊಳಿಸಿದ ನಂತರ ಮುಂದೂಡಲ್ಪಟ್ಟ ಎರಡನೇ ಸ್ಪರ್ಧಾತ್ಮಕ ಪರೀಕ್ಷೆ ಇದಾಗಿದೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (UG) ಅಕ್ರಮಗಳು ನಡೆದಿವೆ ಎಂಬ ಆರೋಪದ ಬಗ್ಗೆಯೂ ವಿವಾದವಿದೆ. ಜೂನ್‌ 21ರಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಜೂನ್ 25ರಿಂದ ನಡೆಯಬೇಕಿದ್ದ ಸಿಎಸ್ಐಆರ್-ಯುಜಿಸಿ-ನೆಟ್ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಘೋಷಿಸಿತ್ತು.

ಇದನ್ನೂ ಓದಿ:Self Harming: ಮೊದಲ ರಾತ್ರಿಯ ಟೆನ್ಶನ್‌ಗೆ ವರ ಆತ್ಮಹತ್ಯೆ? ಉತ್ತರ ಪ್ರದೇಶದಲ್ಲೊಂದು ವಿಲಕ್ಷಣ ಘಟನೆ

Continue Reading

ಪ್ರಮುಖ ಸುದ್ದಿ

T20 World Cup :​ ವಿಜಯೋತ್ಸವದ ಕ್ಷಣಗಳನ್ನು ಉಲ್ಲೇಖಿಸಿ ಬಿಸಿಸಿಐಗೆ ಕುಟುಕಿದ ಆದಿತ್ಯ ಠಾಕ್ರೆ

T20 World Cup : ಟಿ20 ವಿಶ್ವ ಕಪ್​ ಗೆದ್ದುಕೊಂಡು ವೆಸ್ಟ್​ ಇಂಡೀಸ್​ನಿಂದ ಬಂದ ಭಾರತ ತಂಡದ ಆಟಗಾರರಿಗೆ ಅಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಲಕ್ಷಾಂತರ ಮಂದಿ ಸೇರಿದ್ದರು. ಮುಂಬೈನಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮ ಸ್ಟೇಡಿಯಮ್​ನ ಹೊರಗೂ ಹಾಗೂ ಒಳಗೂ ಲಕ್ಷಾಂತರ ಮಂದಿಯ ಕೂಡುವಿಕೆಗೆ ಸಾಕ್ಷಿಯಾಗಿತ್ತು. ಇದನ್ನು ಉಲ್ಲೇಖಿಸಿ ಬಿಸಿಸಿಐಗೆ ಪರೋಕ್ಷವಾಗಿ ಕುಟುಕಿದ್ದಾರೆ ಆದಿತ್ಯ ಠಾಕ್ರೆ.

VISTARANEWS.COM


on

T20 World Cup
Koo

ನವದೆಹಲಿ: ಐಸಿಸಿ ಏಕದಿನ ವಿಶ್ವಕಪ್ 2023 ರ ಫೈನಲ್ ಪಂದ್ಯವನ್ನು ಮುಂಬೈನಲ್ಲಿ ಆಯೋಜಿಸದೆ ಗುಜರಾತ್​​ನ ಅಹಮದಾಬಾದ್​ನಲ್ಲಿರುವ ವಿಶ್ವ ವಿಖ್ಯಾತ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಡಿಸಿರುವ ಬಗ್ಗೆ ಕ್ರಿಕೆಟ್ ಮುಂಬೈ ಅಭಿಮಾನಿಗಳಿಗೆ ಬೇಸರವಿತ್ತು. ಕ್ರಿಕೆಟ್​​ ಕಾಶಿಯಾಗಿರುವ ವಾಂಖೆಡೆ ಸ್ಟೇಡಿಯಮ್​ನಲ್ಲೇ ಪಂದ್ಯ ನಡೆಸಬೇಕು ಎಂಬುದು ಬಹುತೇಕ ಭಾರತೀಯರ ಒತ್ತಾಸೆಯಾಗಿತ್ತು. ಆದರೆ, ದೊಡ್ಡ ಸ್ಟೇಡಿಯಮ್​ (1.30 ಲಕ್ಷ ಮಂದಿ ಪ್ರೇಕ್ಷಕರನ್ನು ತುಂಬಿಕೊಳ್ಳುವ ಸಾಮರ್ಥ್ಯ) ಎಂಬ ಕಾರಣಕ್ಕೆ ನರೇಂದ್ರ ಮೋದಿ ಸ್ಟೇಡಿಯಮ್​ಗೆ ಫೈನಲ್ ಪಂದ್ಯವನ್ನು ವರ್ಗಾಯಿಸಲಾಯಿತ್ತು. ಫೈನಲ್​ನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ ಹೀನಾಯವಾಗಿ ಸೋತಿತ್ತು. ಇದೀಗ ಆ ನೋವನ್ನು ಶಿವಸೇನೆ ಮುಖಂಡ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಆದಿತ್ಯ ಠಾಕ್ರೆ ಹೊರ ಹಾಕಿದ್ದಾರೆ. ಅದಕ್ಕೆ ಕಾರಣವೂ ಇದೆ. ಟಿ20 ವಿಶ್ವ ಕಪ್​ ಗೆದ್ದುಕೊಂಡು (T20 World Cup ) ವೆಸ್ಟ್​ ಇಂಡೀಸ್​ನಿಂದ ಬಂದ ಭಾರತ ತಂಡದ ಆಟಗಾರರಿಗೆ ಅಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಲಕ್ಷಾಂತರ ಮಂದಿ ಸೇರಿದ್ದರು. ಮುಂಬೈನಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮ ಸ್ಟೇಡಿಯಮ್​ನ ಹೊರಗೂ ಹಾಗೂ ಒಳಗೂ ಲಕ್ಷಾಂತರ ಮಂದಿಯ ಕೂಡುವಿಕೆಗೆ ಸಾಕ್ಷಿಯಾಗಿತ್ತು. ಇದನ್ನು ಉಲ್ಲೇಖಿಸಿ ಬಿಸಿಸಿಐಗೆ ಪರೋಕ್ಷವಾಗಿ ಕುಟುಕಿದ್ದಾರೆ ಆದಿತ್ಯ ಠಾಕ್ರೆ.

ಮುಂಬೈನಲ್ಲಿ ನಿನ್ನೆ ನಡೆದ ವಿಶ್ವ ಕಪ್​ ಟ್ರೋಫಿಯ ಸಂಭ್ರಮಾಚರಣೆ ಬಿಸಿಸಿಐಗೆ ನೇರ ಸಂದೇಶವಾಗಿದೆ. ವಿಶ್ವಕಪ್ ಫೈನಲ್ ಪಂದ್ಯವನ್ನು ಮುಂಬೈನಿಂದ ಎಂದಿಗೂ ಕಸಿದುಕೊಳ್ಳಬೇಡಿ” ಎಂದು ಆದಿತ್ಯ ಠಾಕ್ರೆ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಐಸಿಸಿ ಕ್ರಿಕೆಟ್ ವಿಶ್ವಕಪ್ 2024 ರ ಚಾಂಪಿಯನ್ ಆಗಿರುವ ಭಾರತೀಯ ಕ್ರಿಕೆಟ್ ತಂಡವನ್ನು ಮುಂಬೈನಲ್ಲಿ ಗುರುವಾರ ವಿಜಯೋತ್ಸವದ ಮೆರವಣಿಗೆಯಲ್ಲಿ ಭಾರಿ ಜನಸಮೂಹ ಸ್ವಾಗತಿಸಿದ್ದರು. ಅದಾದ ಒಂದು ದಿನದ ನಂತರ ಆದಿತ್ಯ ಬಿಸಿಸಿಐ ವಿರುದ್ಧ ಟೀಕೆ ಮಾಡಿದ್ದಾರೆ.

ಇದನ್ನೂ ಓದಿ: Virat Kohli’s Phone Wallpaper: ಕೊಹ್ಲಿಯ ಮೊಬೈಲ್​ ​ವಾಲ್​ ಪೇಪರ್​ನಲ್ಲಿರುವ ವ್ಯಕ್ತಿ ಯಾರು? ಇವರ ಹಿನ್ನಲೆ ಏನು?

ಟಿ 20 ಭಾರತೀಯ ಕ್ರಿಕೆಟ್ ತಂಡವನ್ನು ಸ್ವಾಗತಿಸಲು ಅಭಿಮಾನಿಗಳು ವಾಂಖೆಡೆ ಕ್ರೀಡಾಂಗಣದಲ್ಲಿ ಗಂಟೆಗಳ ಕಾಲ ಕಾದಿದ್ದರು. ಎಂಎಸ್ ಧೋನಿ ನಾಯಕತ್ವದಲ್ಲಿ 2007 ರಲ್ಲಿ ಭಾರತದ ಮೊದಲ ಟಿ 20 ವಿಶ್ವಕಪ್ ಗೆಲುವು, 2011 ರ ಕ್ರಿಕೆಟ್ ವಿಶ್ವಕಪ್ ಗೆಲುವು ಮತ್ತು 2013 ರಲ್ಲಿ ಸಚಿನ್ ತೆಂಡೂಲ್ಕರ್ ಅವರ ಭಾವನಾತ್ಮಕ ವಿದಾಯ ಸೇರಿದಂತೆ ಅನೇಕ ಐತಿಹಾಸಿಕ ಕ್ರಿಕೆಟ್ ಘಟನೆಗಳಿಗೆ ವಾಂಖೆಡೆ ಆತಿಥ್ಯ ವಹಿಸಿದೆ.

ಅವಕಾಶಗಳು ಮತ್ತು ಕಾರ್ಯಕ್ರಮಗಳನ್ನು ಮುಂಬೈನಿಂದ ಅಹಮದಾಬಾದ್​​ಗೆ ಸ್ಥಳಾಂತರಿಸಿದ್ದಕ್ಕಾಗಿ ಠಾಕ್ರೆ ಈ ಹಿಂದೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಮೇ ತಿಂಗಳ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಹಿಂದೂಸ್ತಾನ್ ಟೈಮ್ಸ್​ಗೆ ನೀಡಿದ ಸಂದರ್ಶನದಲ್ಲಿ, ಕೈಗಾರಿಕೆಗಳು ಮತ್ತು ಯೋಜನೆಗಳನ್ನು ಗುಜರಾತ್​ಗೆ ಸ್ಥಳಾಂತರಿಸಿದ್ದರಿಂದ ಮಹಾರಾಷ್ಟ್ರವು ಗಮನಾರ್ಹ ನಷ್ಟ ಎದುರಿಸಿದೆ ಎಂದು ಆದಿತ್ಯ ಉಲ್ಲೇಖಿಸಿದ್ದರು.

ಇಂಟರ್​​ನ್ಯಾಷನಲ್​ ಫೈನಾನ್ಸ್ ಸೆಂಟರ್, ವೇದಾಂತ ಫಾಕ್ಸ್​ಕಾನ್​, ಬೃಹತ್ ಡ್ರಗ್​ (ಔಷಧ) ಪಾರ್ಕ್ ಮತ್ತು ವೈದ್ಯಕೀಯ ಸಾಧನಗಳ ಪಾರ್ಕ್ ಸೇರಿಕೊಂಡಿವೆ. ಮುಂಬೈನಲ್ಲಿ ನಡೆಯಬೇಕಿದ್ದ ವಿಶ್ವಕಪ್ ಫೈನಲ್ ಪಂದ್ಯವನ್ನು ಅಹಮದಾಬಾದ್​ಗೆ ಸ್ಥಳಾಂತರಿಸಲಾಗಿದೆ ಎಂಬುದಾಗಿಯೂ ಅವರು ಗಮನ ಸೆಳೆದಿದ್ದರು.

Continue Reading

ದೇಶ

Defence Production: ರಕ್ಷಣಾ ಕ್ಷೇತ್ರದಲ್ಲಿ ಭಾರತ ಆತ್ಮನಿರ್ಭರ; ರಕ್ಷಣಾ ಉತ್ಪಾದನೆ ದಾಖಲೆಯ ಶೇ.16ರಷ್ಟು ಏರಿಕೆ

Defence Production: 2023-24ರಲ್ಲಿ ದೇಶದ ಸಾರ್ವಜನಿಕ ವಲಯದ ಸಂಸ್ಥೆಗಳು ಹಾಗೂ ಖಾಸಗಿ ಕಂಪನಿಗಳು ಸೇರಿ ಒಟ್ಟು 1.26 ಲಕ್ಷ ಕೋಟಿ ರೂ. ಮೌಲ್ಯದ ರಕ್ಷಣಾ ಉತ್ಪನ್ನಗಳನ್ನು ಉತ್ಪಾದಿಸಿರುವುದ ದಾಖಲೆಯಾಗಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಕ್ಷೇತ್ರದ ಉತ್ಪಾದನೆಯ ಸಾಧನೆ ಕುರಿತ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

VISTARANEWS.COM


on

Defence Production
Koo

ನವದೆಹಲಿ: ಮೇಕ್‌ ಇನ್‌ ಇಂಡಿಯಾ, ಆತ್ಮನಿರ್ಭರ ಭಾರತ ಅಭಿಯಾನ, ಯೋಜನೆಗಳ ಮೂಲಕ ಹೆಚ್ಚಿನ ಉತ್ತೇಜನ ನೀಡಿದ ಪರಿಣಾಮವಾಗಿ ಭಾರತದ ರಕ್ಷಣಾ ಉತ್ಪಾದನೆಯು (Defence Production) 2023-24ನೇ ಸಾಲಿನಲ್ಲಿ ದಾಖಲೆ ಬರೆದಿದೆ. 2023-24ನೇ ಸಾಲಿನಲ್ಲಿ ಭಾರತದ ರಕ್ಷಣಾ ಕ್ಷೇತ್ರದ ಉತ್ಪಾದನೆಯು ಶೇ.16.7ರಷ್ಟು ಜಾಸ್ತಿಯಾಗಿದ್ದು, ಇದು ದೇಶದ ಇತಿಹಾಸದಲ್ಲಿಯೇ ಗರಿಷ್ಠ ಬೆಳವಣಿಗೆಯಾಗಿದೆ ಎಂದು ರಕ್ಷಣಾ ಇಲಾಖೆ (Department Of Defence) ಪ್ರಕಟಣೆ ಹೊರಡಿಸಿದೆ. ಅದರಲ್ಲೂ, 2019-20ರ ಬಳಿಕ ಗಮನಾರ್ಹ ಶೇ.60ರಷ್ಟು ಏರಿಕೆಯಾಗಿರುವುದು ರಕ್ಷಣಾ ಕ್ಷೇತ್ರದ ಆತ್ಮನಿರ್ಭರತೆಗೆ (Atmanirbhar) ಹಿಡಿದ ಕನ್ನಡಿ ಎಂದೇ ಹೇಳಲಾಗುತ್ತಿದೆ.

ಡಿಫೆನ್ಸ್‌ ಪಬ್ಲಿಕ್‌ ಸೆಕ್ಟರ್‌ ಅಂಡರ್‌ಟೇಕಿಂಗ್ಸ್‌ (DPSU) ಮಾಹಿತಿ ಪ್ರಕಾರ, “2023-24ರಲ್ಲಿ ದೇಶದ ಸಾರ್ವಜನಿಕ ವಲಯದ ಸಂಸ್ಥೆಗಳು ಹಾಗೂ ಖಾಸಗಿ ಕಂಪನಿಗಳು ಸೇರಿ ಒಟ್ಟು 1.26 ಲಕ್ಷ ಕೋಟಿ ರೂ. ಮೌಲ್ಯದ ರಕ್ಷಣಾ ಉತ್ಪನ್ನಗಳನ್ನು ಉತ್ಪಾದಿಸಿವೆ. 2022-23ರ ಹಣಕಾಸು ವರ್ಷದಲ್ಲಿ ದೇಶೀಯವಾಗಿ 1.08 ಲಕ್ಷ ಕೋಟಿ ರೂ. ಮೌಲ್ಯದ ಉತ್ಪನ್ನಗಳನ್ನು ಉತ್ಪಾದಿಸಲಾಗಿತ್ತು. ಕಳೆದ ಆರ್ಥಿಕ ಸಾಲಿಗೆ ಹೋಲಿಸಿದರೆ ಇದು ಶೇ.16.7ರಷ್ಟು ಬೆಳವಣಿಗೆಯಾಗಿದೆ” ಎಂದು ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.

ನರೇಂದ್ರ ಮೋದಿ ಸಂತಸ

ದೇಶದ ರಕ್ಷಣಾ ಉತ್ಪಾದನೆಯು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. “ಭಾರತವು ರಕ್ಷಣಾ ಉತ್ಪಾದನೆಯಲ್ಲಿ ಆತ್ಮನಿರ್ಭರತೆ ಸಾಧಿಸುತ್ತಿದೆ. ರಕ್ಷಣಾ ಉತ್ಪಾದನೆಯಲ್ಲಿ ಭಾರತವು ಜಗತ್ತಿನಲ್ಲೇ ಮುಂಚೂಣಿಯಲ್ಲಿ ಇರಬೇಕು ಎಂಬ ಬದ್ಧತೆಯಿಂದ ಕೆಲಸ ಮಾಡುತ್ತಿದ್ದೇವೆ. ಈಗ ಉತ್ಪಾದನಾ ಕ್ಷೇತ್ರದ ಬೆಳವಣಿಗೆಯು ಸಂತಸ ತಂದಿದೆ. ಇದರ ಹಿಂದೆ ಶ್ರಮವಹಿಸಿದ ಎಲ್ಲರಿಗೂ ಅಭಿನಂದನೆಗಳು” ಎಂಬುದಾಗಿ ಅವರು ಪೋಸ್ಟ್‌ ಮಾಡಿದ್ದಾರೆ.

ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಕೂಡ ರಕ್ಷಣಾ ಉತ್ಪಾದನೆ ಸಾಧನೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “2023-24ನೇ ಸಾಲಿನಲ್ಲಿ ರಕ್ಷಣಾ ಕ್ಷೇತ್ರದ ಉತ್ಪಾದನೆ ಮೊತ್ತವು ದಾಖಲೆಯ 1.27 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಕ್ಷಣಾ ಕ್ಷೇತ್ರದಲ್ಲೂ ಆತ್ಮನಿರ್ಭರತೆ ಸಾಧಿಸಲು ನೀಡಿದ ಉತ್ತೇಜನದ ಫಲವಾಗಿ ಭಾರತವು ಗಣನೀಯ ಸಾಧನೆ ಮಾಡಿದೆ” ಎಂಬುದಾಗಿ ರಾಜನಾಥ್‌ ಸಿಂಗ್‌ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: Aero India 2023: ಭಾರತದ ರಕ್ಷಣಾ ರಫ್ತು 2024ರಲ್ಲಿ 500 ಕೋಟಿ ಡಾಲರ್‌ ಗುರಿ: ಹೂಡಿಕೆದಾರರಿಗೆ ಸುವರ್ಣಾವಕಾಶ ಎಂದ ಪ್ರಧಾನಿ ಮೋದಿ

Continue Reading

ಶಿಕ್ಷಣ

NEET PG 2024: ನೀಟ್-ಪಿಜಿ ಪರೀಕ್ಷೆಯ ದಿನಾಂಕ ಪ್ರಕಟ; ಆ. 11ರಂದು ನಡೆಯಲಿದೆ ಟೆಸ್ಟ್‌

NEET PG 2024: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ ದಿನಾಂಕವನ್ನು ರಾಷ್ಟ್ರೀಯ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಆಗಸ್ಟ್ 11ರಂದು ಎರಡು ಪಾಳಿಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

VISTARANEWS.COM


on

NEET PG 2024
Koo

ನವದೆಹಲಿ: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ (NEET PG 2024) ದಿನಾಂಕವನ್ನು ರಾಷ್ಟ್ರೀಯ ಪರೀಕ್ಷಾ ಮಂಡಳಿ (National Board of Examinations) ಪ್ರಕಟಿಸಿದೆ. ಆಗಸ್ಟ್ 11ರಂದು ಎರಡು ಪಾಳಿಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್‌ natboard.edu.in ಇಲ್ಲಿಗೆ ಭೇಟಿ ನೀಡಿ.

ಜೂನ್ 23ರಂದು ನಿಗದಿಯಾಗಿದ್ದ ನೀಟ್-ಪಿಜಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಯುಜಿ ನೀಟ್‌ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆ ಸೇರಿದಂತೆ ವಿವಿಧ ವಿವಾದ ಭುಗಿಲೆದ್ದ ಹಿನ್ನಲೆಯಲ್ಲಿ ಜೂನ್‌ 22ರಂದು ಪರೀಕ್ಷೆ ಮುಂದೂಡಿ ಪ್ರಕಟಣೆ ಹೊರಡಿಸಲಾಗಿತ್ತು. ವೈದ್ಯಕೀಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ರಾಷ್ಟ್ರೀಯ ಪರೀಕ್ಷಾ ಮಂಡಳಿಗೆ ಹಲವು ದೂರುಗಳು ದಾಖಲಾಗಿದ್ದವು. ಸಾಮಾಜಿಕ ಮಾಧ್ಯಮಗಳ ಮೂಲಕ ಆಕಾಂಕ್ಷಿಗಳಿಗೆ ಹಣಕ್ಕಾಗಿ ಪ್ರಶ್ನೆ ಪತ್ರಿಕೆಯನ್ನು ನೀಡುವ ಆಮಿಷ ಒಡ್ಡಲಾಗಿದೆ ಎಂದು ದೂರಲಾಗಿತ್ತು. ಹೀಗಾಗಿ ಪರೀಕ್ಷೆಯನ್ನೇ ರದ್ದು ಮಾಡಲಾಗಿತ್ತು.

ನೀಟ್-ಪಿಜಿ ಪ್ರವೇಶ ಪರೀಕ್ಷೆಯ ಸಮಗ್ರತೆಯನ್ನು ಕಾಪಾಡಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿತ್ತು. ಪರೀಕ್ಷಾ ಪ್ರಕ್ರಿಯೆಗಳ ನ್ಯಾಯಸಮ್ಮತತೆಯನ್ನು ಖಚಿತಪಡಿಸಿಕೊಳ್ಳಲು ಸಮಗ್ರ ಮೌಲ್ಯಮಾಪನ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವಾಲಯ ಸಮರ್ಥನೆ ನೀಡಿತ್ತು.

ಸಚಿವಾಲಯ ಹೇಳಿದ್ದೇನು?

ಕೊನೇ ಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ಉಂಟಾದ ಅನಾನುಕೂಲತೆಗೆ ಆರೋಗ್ಯ ಸಚಿವಾಲಯವು ವಿಷಾದಿಸುತ್ತದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಪರೀಕ್ಷಾ ಪ್ರಕ್ರಿಯೆ ಪಾವಿತ್ರ್ಯವನ್ನು ಕಾಪಾಡಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವಾಲ ಪ್ರಕಟಣೆ ಹೊರಡಿಸಿ ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟಿಸುವುದಾಗಿ ಹೇಳಿತ್ತು.

ಡಾರ್ಕ್​ನೆಟ್​​ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಯುಜಿಸಿ-ನೆಟ್ ರದ್ದುಗೊಳಿಸಿದ ನಂತರ ಮುಂದೂಡಲ್ಪಟ್ಟ ಎರಡನೇ ಸ್ಪರ್ಧಾತ್ಮಕ ಪರೀಕ್ಷೆ ಇದಾಗಿದೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (UG) ಅಕ್ರಮಗಳು ನಡೆದಿವೆ ಎಂಬ ಆರೋಪದ ಬಗ್ಗೆಯೂ ವಿವಾದವಿದೆ. ಜೂನ್‌ 21ರಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಜೂನ್ 25ರಿಂದ ನಡೆಯಬೇಕಿದ್ದ ಸಿಎಸ್ಐಆರ್-ಯುಜಿಸಿ-ನೆಟ್ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಘೋಷಿಸಿತ್ತು.

ನೀಟ್​ ಪರೀಕ್ಷೆ ಅಕ್ರಮಗಳ ತನಿಖೆ ಹೊಣೆ ಸಿಬಿಐಗೆ ಒಪ್ಪಿಸಿದ ಕೇಂದ್ರ

ನವದೆಹಲಿ: ಪದವಿಪೂರ್ವ ವೈದ್ಯಕೀಯ ಕೋರ್ಸ್​ಗಳ ಪ್ರವೇಶಕ್ಕಾಗಿ ನಡೆಸಲಾಗುವ ಸ್ಪರ್ಧಾತ್ಮಕ ನೀಟ್ ಪರೀಕ್ಷೆಯಲ್ಲಿ (NEET UG) ನಡೆದಿರುವ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ತನಿಖೆ ಹೊಣೆಯನ್ನು ಕೇಂದ್ರ ಸರ್ಕಾರ ಇತ್ತೀಚೆಗೆ ಸಿಬಿಐ ಒಪ್ಪಿಸಿದೆ. ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ “ಕೆಲವು ಅಕ್ರಮಗಳು, ವಂಚನೆ ಮತ್ತು ದುಷ್ಕೃತ್ಯಗಳ ಪ್ರಕರಣಗಳು ವರದಿಯಾಗಿವೆ ಮತ್ತು ಪರೀಕ್ಷಾ ಪ್ರಕ್ರಿಯೆಯ ನಿರ್ವಹಣೆಯಲ್ಲಿ ಪಾರದರ್ಶಕತೆಗಾಗಿ, ಶಿಕ್ಷಣ ಸಚಿವಾಲಯದ ಪರಿಶೀಲನೆಯ ನಂತರ ಈ ಬಗ್ಗೆ ಸಮಗ್ರ ತನಿಖೆಗಾಗಿ ಸಿಬಿಐಗೆ ವಹಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಪರೀಕ್ಷೆಗಳ ಪಾವಿತ್ರ್ಯವನ್ನು ಖಚಿತಪಡಿಸಿಕೊಳ್ಳಲು ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ರಕ್ಷಿಸಲು ಸರ್ಕಾರ ಬದ್ಧ. ಮೋಸದಲ್ಲಿ ಭಾಗಿಯಾಗಿರುವ ಯಾವುದೇ ವ್ಯಕ್ತಿ, ಸಂಸ್ಥೆ ಕಠಿಣ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಎಂದು ಸಚಿವಾಲಯ ಹೇಳಿದೆ. ಮೇ 5 ರಂದು ದೇಶದ 4,750 ಕೇಂದ್ರಗಳಲ್ಲಿ ನೀಟ್-ಯುಜಿ ನಡೆದಿದ್ದು, ಸುಮಾರು 24 ಲಕ್ಷ ಅಭ್ಯರ್ಥಿಗಳು ಭಾಗವಹಿಸಿದ್ದರು. ನಿರೀಕ್ಷಿತ ದಿನಾಂಕಕ್ಕಿಂತ ಹತ್ತು ದಿನ ಮುಂಚಿತವಾಗಿ ಜೂನ್ 4 ರಂದು ಫಲಿತಾಂಶಗಳನ್ನು ಘೋಷಿಸಲಾಗಿತ್ತು. ಫಲಿತಾಂಶದ ನಂತರ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ದುಷ್ಕೃತ್ಯಗಳ ಆರೋಪಗಳು ಕೇಳಿಬಂದಿದ್ದವು.

ಇದನ್ನೂ ಓದಿ: NEET UG Row : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಮುಖ್ಯಸ್ಥರನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ

Continue Reading
Advertisement
Neet UG
ದೇಶ1 min ago

NEET UG: ನೀಟ್‌ ಅಕ್ರಮ: ಪರೀಕ್ಷೆಯನ್ನುರದ್ದುಗೊಳಿಸುವುದು ಸಮಂಜಸವಲ್ಲ ಎಂದ ಕೇಂದ್ರ

Assault case
ತುಮಕೂರು10 mins ago

Assault Case : ಜಮೀನು ವಿವಾದ; ನೀರಿನಲ್ಲಿ ಮುಳುಗಿಸಿ, ಕುಡುಗೋಲು, ಕಲ್ಲಿನಿಂದ ವ್ಯಕ್ತಿ ಮೇಲೆ ಹಲ್ಲೆ!

Samantha Ruth Prabhu Doctor Calls Health Illiterate
ಟಾಲಿವುಡ್10 mins ago

Samantha Ruth Prabhu: ಸಮಂತಾಗೆ ಜೈಲಿಗೆ ಕಳಿಸಿ ಎಂದ ವೈದ್ಯ ; ನಟಿ ಹೇಳಿದ್ದೇನು?

DK Shivakumar
ಕರ್ನಾಟಕ16 mins ago

DK Shivakumar: ಕುಮಾರಸ್ವಾಮಿ ಒಬ್ಬ ಹುಚ್ಚ, ಚಿಕಿತ್ಸೆ ಪಡೆಯುವುದು ಉತ್ತಮ: ಡಿಸಿಎಂ ಡಿಕೆಶಿ

Team India
ಕ್ರೀಡೆ25 mins ago

Team India: ರೋಹಿತ್​, ಸೂರ್ಯಕುಮಾರ್​, ದುಬೆ, ಜೈಸ್ವಾಲ್​ಗೆ ಸನ್ಮಾನ ಮಾಡಿದ ಸಿಎಂ ಏಕನಾಥ್​ ಶಿಂಧೆ

Guarantee Schemes
ಕರ್ನಾಟಕ26 mins ago

Guarantee Schemes: ಗ್ಯಾರಂಟಿ ಯೋಜನೆಗಳಿಗೆ ದಲಿತರ 14 ಸಾವಿರ ಕೋಟಿ ರೂ. ಕಸಿದು ಕೊಟ್ಟ ಸಿದ್ದರಾಮಯ್ಯ!

T20 World Cup
ಪ್ರಮುಖ ಸುದ್ದಿ26 mins ago

T20 World Cup :​ ವಿಜಯೋತ್ಸವದ ಕ್ಷಣಗಳನ್ನು ಉಲ್ಲೇಖಿಸಿ ಬಿಸಿಸಿಐಗೆ ಕುಟುಕಿದ ಆದಿತ್ಯ ಠಾಕ್ರೆ

Sexual Harassment
Latest37 mins ago

Sexual Harassment: 80 ವರ್ಷದ ಅಜ್ಜಿಯ ಮೇಲೆ ನಿರಂತರ ಅತ್ಯಾಚಾರ; ಮೊಮ್ಮಗನಿಗೆ ಜೀವಾವಧಿ ಶಿಕ್ಷೆ

ಕರ್ನಾಟಕ44 mins ago

Satish Jarkiholi: ಜನತಾ ದರ್ಶನಕ್ಕೆ ಅಧಿಕಾರಿಗಳು ಗೈರಾಗುವುದು ತಪ್ಪು; ಎಚ್‌ಡಿಕೆ ಪರ ಸಚಿವ ಸತೀಶ್ ಜಾರಕಿಹೊಳಿ ಬ್ಯಾಟಿಂಗ್!

Kangana Ranaut Madhavan's Hilarious Reaction To Double-Meaning
ಬಾಲಿವುಡ್45 mins ago

Kangana Ranaut: ನಿಮ್ಮೊಳಗೆ ರಾಷ್ಟ್ರೀಯ ಪ್ರಶಸ್ತಿ ಇದೆಯಾ ಎಂದು ಕಂಗನಾಗೆ ಡಬಲ್‌ ಮೀನಿಂಗ್‌ ಪ್ರಶ್ನೆ;ಬಿದ್ದು ಬಿದ್ದು ನಕ್ಕ ಆರ್ ಮಾಧವನ್!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lovers Fighting
ಚಿಕ್ಕಬಳ್ಳಾಪುರ46 mins ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

karnataka rain
ಮಳೆ3 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ5 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು6 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು6 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ11 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ23 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ1 day ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ1 day ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ1 day ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

ಟ್ರೆಂಡಿಂಗ್‌