WhatsApp: Now record and send a 60 second video message on WhatsAppWhatsApp : ‌ವಾಟ್ಸ್ಆ್ಯಪ್‌ನಲ್ಲಿ ಈಗ 60 ಸೆಕೆಂಡ್‌ಗಳ ವಿಡಿಯೊ ಮೆಸೇಜ್‌ ರೆಕಾರ್ಡ್‌ ಮಾಡಿ ಕಳಿಸಿ

ಪ್ರಮುಖ ಸುದ್ದಿ

WhatsApp : ‌ವಾಟ್ಸ್ಆ್ಯಪ್‌ನಲ್ಲಿ ಈಗ 60 ಸೆಕೆಂಡ್‌ಗಳ ವಿಡಿಯೊ ಮೆಸೇಜ್‌ ರೆಕಾರ್ಡ್‌ ಮಾಡಿ ಕಳಿಸಿ

WhatsApp ವಾಟ್ಸ್ಆ್ಯಪ್‌ ಈಗ ತನ್ನ ಬಳಕೆದಾರರಿಗೆ 60 ಸೆಕೆಂಡ್‌ಗಳ ವಿಡಿಯೊ ಮೆಸೇಜ್‌ ರೆಕಾರ್ಡ್‌ ಮಾಡಿ ಬೇಕಾದವರಿಗೆ ಕಳಿಸಲು ಅನುಕೂಲ ಕಲ್ಪಿಸಿದೆ. ಪ್ರಾಯೋಗಿಕ ಹಂತದಲ್ಲಿರುವ ಯೋಜನೆ ಎಲ್ಲರಿಗೂ ಸಿಗಲಿದೆ.

VISTARANEWS.COM


on

whatsup
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ವಾಟ್ಸ್ಆ್ಯಪ್‌ ನ್ಯೂಸ್‌ ಟ್ರ್ಯಾಕರ್‌ ವಬೆಟಾಇನ್ಫೋ (WABetalnfo) ಪ್ರಕಾರ ವಾಟ್ಸ್ಆ್ಯಪ್‌ ಐಒಎಸ್‌ ಮತ್ತು ಆಂಡ್ರಾಯ್ಡ್‌ ಎರಡೂ ಪ್ಲಾಟ್‌ಫಾರ್ಮ್‌ನಲ್ಲಿ ಹೊಸ ಫೀಚರ್‌ ಅನ್ನು ಶೀಘ್ರ ಅಳವಡಿಸಲಿದೆ. ಬಳಕೆದಾರರಿಗೆ ಹೊಸ ಅನುಭವ ಮತ್ತು ಅನುಕೂಲ ಒದಗಿಸುವ ನಿಟ್ಟಿನಲ್ಲಿ ವಾಟ್ಸ್ಆ್ಯಪ್‌ ಶಾರ್ಟ್‌ ವಿಡಿಯೊ ಸೌಲಭ್ಯವನ್ನು ಕಲ್ಪಿಸಿದೆ. ಇದರಲ್ಲಿ ಬಳಕೆದಾರರು ಕೇವಲ ಕ್ಯಾಮರಾ ಬಟನ್‌ ಒತ್ತಿ 60 ಸೆಕೆಂಡ್‌ಗಳ ಸಣ್ಣ ವಿಡಿಯೊ ಕ್ಲಿಪ್‌ ಅನ್ನು ರೆಕಾರ್ಡ್‌ ಮಾಡಿ ಶೇರ್‌ ಮಾಡಬಹುದು.

ಈ ಫೀಚರ್‌ ಹೇಗೆ ಕಾರ್ಯನಿರ್ವಹಿಸುತ್ತದೆ?: WABetalnfo ವಾಟ್ಸ್ಆ್ಯಪ್‌ನ ಈ ಫೀಚರ್‌ ಬಗ್ಗೆ ವಿವರಗಳನ್ನು ತನ್ನ ವೆಬ್‌ಸೈಟ್‌ ನಲ್ಲಿ ಸ್ಕ್ರೀನ್‌ ಶಾಟ್‌ ಮೂಲಕ ಅಪ್‌ಡೇಟ್‌ ಮಾಡಿದೆ. ಬಳಕೆದಾರರ ಪರ್ಸನಲ್‌ ಚಾಟ್‌ನಲ್ಲಿ ಈ ಫೀಚರ್‌ ಸಿಗುತ್ತದೆ. ಶಾರ್ಟ್‌ ವಿಡಿಯೊ ಕಳಿಸುವವರು ಫೋನ್‌ ಸ್ಕ್ರೀನ್‌ನ ಬಲ ತುದಿಯಲ್ಲಿ ಇರುವ microphone button ಅನ್ನು tap ಮಾಡಬೇಕು. ಮೈಕ್ರೊಫೋನ್‌ ವಿಡಿಯೊ ಕ್ಯಾಮೆರಾಗೆ ಟರ್ನ್‌ ಆಗಿದ್ದರೆ ಅದರ ಅರ್ಥ ಟೂಲ್‌ ನಿಮ್ಮ ವಾಟ್ಸ್ಆ್ಯಪ್‌ ಅಕೌಂಟ್‌ಗೆ ಲಭ್ಯವಿದೆ. ಈ ಸೌಲಭ್ಯ end-to-end-encrypted ಆಗಿರುತ್ತದೆ. ಅಂದರೆ ಈ ಶಾರ್ಟ್‌ ವಿಡಿಯೊ ಸಂದೇಶಗಳನ್ನು ಸ್ವತಃ ಮೆಟಾದ ಇನ್‌ಸ್ಟಂಟ್‌ ಮೆಸೇಜಿಂಗ್‌ ಸರ್ವೀಸ್‌ ಸೇರಿದಂತೆ ಯಾವುದಕ್ಕೂ ಬೇಧಿಸಲು ಸಾಧ್ಯವಿಲ್ಲ.

ಲಭ್ಯತೆ: ಈ ಫೀಚರ್‌ ಆಯ್ದ ಬೆಟಾ ಟೆಸ್ಟರ್‌ಗಳಲ್ಲಿ (beta tester) ಲಭ್ಯವಿದ್ದು, ಮುಂದುನ ವಾರಗಳಲ್ಲಿ ಮತ್ತಷ್ಟು ಬಳಕೆದಾರರಿಗೆ ಲಭಿಸಲಿದೆ.

ವಾಟ್ಸ್‌ ಆ್ಯಪ್‌ನಲ್ಲಿ ಲಿಂಕ್‌ ಅನ್ನು ಶೇರ್‌ ಮಾಡುವ ಮೂಲಕ ಗ್ರೂಪ್ ವಿಡಿಯೊ ಕಾಲ್‌ ಏರ್ಪಡಿಸಲು ಕಾಲ್‌ ಲಿಂಕ್ಸ್‌ ( Call Links) ಎಂಬ ಹೊಸ ಫೀಚರ್ ಅನ್ನು ಕಲ್ಪಿಸಲಾಗುವುದು ಎಂದು ಮೆಟಾ ಸಿಇಒ ಮಾರ್ಕ್‌ ಜುಕರ್‌ ಬರ್ಗ್‌ ಕೆಲ ತಿಂಗಳಿನ ಹಿಂದೆ ಫೇಸ್‌ಬುಕ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.‌

ಕಾಲ್‌ ಲಿಂಕ್ಸ್‌ ಫೀಚರ್‌ನಲ್ಲಿ ಬಳಕೆದಾರರು ಒಂದು ಲಿಂಕ್‌ ಅನ್ನು ಇತರರಿಗೆ ಕಳಿಸಿ ಆಡಿಯೊ ಅಥವಾ ವಿಡಿಯೊ ಕರೆಯಲ್ಲಿ ಭಾಗವಹಿಸಲು ತಿಳಿಸಬಹುದು. ‌ಮುಂಬರುವ ದಿನಗಳಲ್ಲಿ ವಾಟ್ಸ್‌ ಆ್ಯಪ್‌ನಲ್ಲಿ 32 ಮಂದಿಯನ್ನು ಒಳಗೊಂಡ ಗ್ರೂಪ್‌ ವಿಡಿಯೊ ಕರೆಗಳನ್ನು ಇದರ ಮೂಲಕ ಸುಲಭವಾಗಿ ಮಾಡಬಹುದು. ಈ ಹಿಂದೆ ವಾಟ್ಸ್‌ ಆ್ಯಪ್‌ನಲ್ಲಿ ಗ್ರೂಪ್‌ ವಿಡಿಯೊ ಕರೆಗಳು 8 ಬಳಕೆದಾರರಿಗೆ ಸೀಮಿತವಾಗಿತ್ತು.

ಝೂಮ್‌, ಫೇಸ್‌ ಟೈಮ್‌, ಗೂಗಲ್‌ ಮೀಟ್‌ನಲ್ಲಿ ಕೆಲ ಕಾಲದಿಂದಲೇ ಕಾಲ್‌ ಲಿಂಕ್ಸ್‌ ಸೌಲಭ್ಯ ಇದೆ. ಭಾರತದಲ್ಲಿ ವಾಟ್ಸ್‌ ಆ್ಯಪ್‌ ಜನಪ್ರಿಯವಾಗಿರುವುದರಿಂದ ಕಾಲ್‌ ಲಿಂಕ್ಸ್‌ ಫೀಚರ್‌ ಅಳವಡಿಸುವುದರಿಂದ ಅನೇಕ ಮಂದಿ ಬಳಸುವ ಸಾಧ್ಯತೆ ಇದೆ.

ಇದನ್ನೂ ಓದಿ: WhatsApp: ವಾಟ್ಸಾಪ್ ಏಕೆ ಭಾರತೀಯ ಬಳಕೆದಾರರ ಖಾತೆಗಳನ್ನು ಬ್ಯಾನ್ ಮಾಡುತ್ತಿದೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

E. Tukaram: ಸಂಡೂರು ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಈ. ತುಕಾರಾಂ

E. Tukaram: ಸಂಡೂರು ಕ್ಷೇತ್ರದಿಂದ ಸತತ ನಾಲ್ಕು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದ ತುಕಾರಾಂ ಅವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಶ್ರೀರಾಮುಲು ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ್ದರು. ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

VISTARANEWS.COM


on

E. Tukaram
Koo

ಬಳ್ಳಾರಿ: ಸಂಡೂರು ಕ್ಷೇತ್ರದ ಶಾಸಕ ಸ್ಥಾನಕ್ಕೆ ಈ. ತುಕಾರಾಂ ರಾಜೀನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಗೆದ್ದು ಸಂಸತ್‌ಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಈ ತುಕಾರಾಂ ಅವರು ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಬೆಂಗಳೂರಿಗೆ ಮರಳಿ ರಾಜೀನಾಮೆ ನೀಡಿದ್ದಾರೆ. ವಿಧಾನಸಭೆ ಸ್ಪೀಕರ್ ಅನುಮತಿ ಮೇರೆಗೆ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ.

ಸಂಡೂರು ಕ್ಷೇತ್ರದಿಂದ ಸತತ ನಾಲ್ಕು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದ ತುಕಾರಾಂ ಅವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಶ್ರೀರಾಮುಲು ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ್ದರು.

ಶ್ರೀರಾಮುಲು ವಿರುದ್ಧ 98,992 ಮತಗಳಿಂದ ತುಕಾರಾಂ ಜಯಭೇರಿ

ಗಣಿ ನಾಡು ಬಳ್ಳಾರಿ ಲೋಕಸಭೆ ಕ್ಷೇತ್ರದ ಚುನಾವಣೆಯಲ್ಲಿ (Bellary Election Result 2024) ಮಾಜಿ ಸಚಿವ, ಬಿಜೆಪಿಯ ಬಿ.ಶ್ರೀರಾಮುಲು (B Sriramulu) ಅವರಿಗೆ ಭಾರಿ ಮುಖಭಂಗವಾಗಿತ್ತು. ಬಿ.ಶ್ರೀರಾಮುಲು ಅವರ ವಿರುದ್ಧ ಕಾಂಗ್ರೆಸ್‌ನ ಇ. ತುಕಾರಾಮ್‌ (E Tukaram) ಅವರು 98,992 ಮತಗಳಿಂದ ಭರ್ಜರಿ ಗೆಲುವು ಸಾಧಿಸಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ್ದ ಬಿ. ಶ್ರೀರಾಮುಲು ಅವರಿಗೆ ಈ ಬಾರಿ ಲೋಕಸಭೆ ಚುನಾವಣೆಯಲ್ಲೂ ಸೋಲುಂಟಾಗಿದ್ದು ತೀವ್ರ ಮುಖಭಂಗ ಆದಂತಾಗಿದೆ.

ಕಾಂಗ್ರೆಸ್‌ ಅಭ್ಯರ್ಥಿ ತುಕಾರಾಂ ಅವರಿಗೆ 7,30,845 ಮತಗಳು ಬಂದಿದ್ದರೆ, ಬಿಜೆಪಿ ಅಭ್ಯರ್ಥಿ ಶ್ರೀರಾಮುಲಗೆ 6,31,853 ಮತಗಳು ಬಂದಿವೆ. ಬಳ್ಳಾರಿ ಲೋಕಸಭೆ ಕ್ಷೇತ್ರದಲ್ಲಿ ಶೇ.20ರಷ್ಟು ಪರಿಶಿಷ್ಟ ಪಂಗಡದ ಮತಗಳಿದ್ದು, ಇವುಗಳ ಮೇಲೆ ಉಭಯ ಅಭ್ಯರ್ಥಿಗಳ ಗಮನ ಹೆಚ್ಚಿತ್ತು. ಶ್ರೀರಾಮುಲು ಅವರಿಗೆ ನರೇಂದ್ರ ಮೋದಿ ಅವರ ಅಲೆ, ವಾಲ್ಮೀಕಿ ಸಮುದಾಯದ ಪ್ರಬಲ ನಾಯಕ ಎಂಬ ಹಣೆಪಟ್ಟಿ, ಹಿಂದುತ್ವ, ಲಿಂಗಾಯತರು ಸೇರಿ ಹಲವು ಸಮುದಾಯಗಳ ಮತಗಳ ಭದ್ರತೆಯು ಅವರ ಆತ್ಮವಿಶ್ವಾಸವನ್ನು ಹೆಚ್ಚಿಸಿತ್ತು. ಅದರಲ್ಲೂ, ಜನಾರ್ದನ ರೆಡ್ಡಿ ಅವರ ಪಕ್ಷವು ಬಿಜೆಪಿ ಜತೆ ವಿಲೀನಗೊಂಡಿರುವುದು ಶ್ರೀರಾಮುಲು ಅವರಿಗೆ ಆನೆ ಬಲ ಬಂದಂತಾಗಿತ್ತು. ಆದರೂ ಅವರು ಗೆಲುವು ಸಾಧಿಸುವಲ್ಲಿ ವಿಫಲವಾದರು.

ಇದನ್ನೂ ಓದಿ | R Ashok: ರಾಜ್ಯದಲ್ಲಿರುವುದು ತಾಲಿಬಾನ್‌ ಸರ್ಕಾರ; ಆರ್. ಅಶೋಕ್‌ ಆರೋಪ

ಇ. ತುಕಾರಾಮ್‌ ಅವರಿಗೆ ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳೇ ಪ್ರಮುಖ ಅಸ್ತ್ರವಾಗಿದ್ದವು. ಬಿ.ಶ್ರೀರಾಮುಲು ಅವರಿಗೆ ಟಿಕೆಟ್‌ ನೀಡಿರುವ ಕಾರಣ ಪಕ್ಷದಲ್ಲಿ ಉಂಟಾಗಿರುವ ಸಣ್ಣ ಮಟ್ಟದ ಭಿನ್ನಾಭಿಪ್ರಾಯಗಳನ್ನೇ ಬಳಸಿಕೊಂಡು ತುಕಾರಾಮ್‌ ಅವರು ಅಬ್ಬರದ ಪ್ರಚಾರ ಕೈಗೊಂಡಿದ್ದರು. ಕಾಂಗ್ರೆಸ್‌ನ ಅಲೆಯೂ ತಕ್ಕಮಟ್ಟಿಗಿದ್ದು, ಮುಸ್ಲಿಮರು, ಹಿಂದುಳಿದ ವರ್ಗಗಳ ಸಮುದಾಯಗಳ ಮತಗಳನ್ನು ನೆಚ್ಚಿಕೊಂಡಿದ್ದರು. ಇದೆಲ್ಲದರ ಫಲವಾಗಿ ಅವರು ಗೆಲುವು ಸಾಧಿಸಿದರು ಎಂದು ತಿಳಿದುಬಂದಿದೆ.

Continue Reading

ದೇಶ

Nagastra 1: ಭಾರತೀಯ ಸೇನೆ ಸೇರಿದ ‘ದೇಶೀಯ’ ನಾಗಾಸ್ತ್ರ ಡ್ರೋನ್‌ಗಳು; ಉಗ್ರರಿಗೆ ನಡುಕ, ಏನಿದರ ವಿಶೇಷ?

Nagastra 1: ಸುಮಾರು 30 ಕೆ.ಜಿ ತೂಕ ಹೊಂದಿರುವ ಇವುಗಳು ಒಂದು ಕೆ.ಜಿ ಸ್ಫೋಟಕಗಳನ್ನು ಕೊಂಡೊಯ್ಯಬಲ್ಲ ಸಾಮರ್ಥ್ಯ ಹೊಂದಿವೆ. ರಾತ್ರಿ ಕೂಡ ಶತ್ರುಗಳ ಮೇಲೆ ನಿಗಾ ಇರಿಸುವ ಇವುಗಳನ್ನು ಶತ್ರುಪಡೆಗಳ ಸೇನಾ ನೆಲೆಗಳು, ಉಗ್ರರ ಲಾಂಚ್‌ಪ್ಯಾಡ್‌ಗಳನ್ನು ಹೊಡೆದುರುಳಿಸುವ ಸಾಮರ್ಥ್ಯ ಹೊಂದಿವೆ. ರಕ್ಷಣಾ ಕ್ಷೇತ್ರದಲ್ಲೂ ಮೇಕ್‌ ಇನ್‌ ಇಂಡಿಯಾ ಹಾಗೂ ಆತ್ಮನಿರ್ಭರ ಭಾರತ ಯೋಜನೆಗಳಿಗೆ ಪುಷ್ಟಿ ನೀಡಿದಂತಾಗಿದೆ ಎಂದೇ ರಕ್ಷಣಾ ತಜ್ಞರು ವಿಶ್ಲೇಷಣೆ ಮಾಡಿದ್ದಾರೆ.

VISTARANEWS.COM


on

Nagastra 1
Koo

ನವದೆಹಲಿ: ದೇಶೀಯವಾಗಿ ನಿರ್ಮಿಸಿದ ನಾಗಾಸ್ತ್ರ 1 (Nagastra 1 Drones) ಡ್ರೋನ್‌ಗಳನ್ನು ಮೊದಲ ಹಂತದಲ್ಲಿ ಭಾರತೀಯ ಸೇನೆಗೆ ಹಸ್ತಾಂತರಿಸಲಾಗಿದೆ. ಅತ್ಯಾಧುನಿಕ ಡ್ರೋನ್‌ಗಳ ಅಳವಡಿಕೆಯಿಂದ ಭಾರತೀಯ ಸೇನೆಗೆ (Indian Army) ಆನೆ ಬಲ ಬಂದಂತಾಗಿದ್ದು, ಶತ್ರುಗಳಲ್ಲಿ ನಡುಕ ಶುರುವಾಗಿದೆ. ನಾಗ್ಪುರ ಮೂಲದ ಎಕನಾಮಿಕ್ಸ್‌ ಎಕ್ಸ್‌ಪ್ಲೋಸಿವ್ಸ್‌ ಲಿಮಿಟೆಡ್‌ (Economics Explosives Limited) ಕಂಪನಿಯು ಡ್ರೋನ್‌ಗಳನ್ನು ತಯಾರಿಸಿದ್ದು, ಮೊದಲ ಹಂತದಲ್ಲಿ 120 ಡ್ರೋನ್‌ಗಳನ್ನು ಸೇನೆಗೆ ನೀಡಲಾಗಿದೆ. ಸೇನೆಯು ಡ್ರೋನ್‌ಗಳನ್ನು ಪುಲಗಾಂವ್‌ನಲ್ಲಿ ಡ್ರೋನ್‌ಗಳನ್ನು ಸ್ವೀಕರಿಸಿದೆ ಎಂದು ತಿಳಿದುಬಂದಿದೆ.

ಸುಮಾರು ಶೇ.75ರಷ್ಟು ದೇಶೀಯ ಉಪಕರಣಗಳನ್ನು ಬಳಸಿಕೊಂಡು ನಾಗಾಸ್ತ್ರ 1 ಡ್ರೋನ್‌ಗಳನ್ನು ತಯಾರಿಸಲಾಗಿದೆ. ಇದು ರಕ್ಷಣಾ ಕ್ಷೇತ್ರದಲ್ಲೂ ಮೇಕ್‌ ಇನ್‌ ಇಂಡಿಯಾ ಹಾಗೂ ಆತ್ಮನಿರ್ಭರ ಭಾರತ ಯೋಜನೆಗಳಿಗೆ ಪುಷ್ಟಿ ನೀಡಿದಂತಾಗಿದೆ ಎಂದೇ ರಕ್ಷಣಾ ತಜ್ಞರು ವಿಶ್ಲೇಷಣೆ ಮಾಡಿದ್ದಾರೆ. ಇದೇ ಮಾದರಿಯ ಅತ್ಯಾಧುನಿಕ ಡ್ರೋನ್‌ಗಳು ರಷ್ಯಾ, ಉಕ್ರೇನ್‌, ಸೌದಿ ಅರೇಬಿಯಾ, ರಷ್ಯಾ, ಸಿರಿಯಾ, ಅಜರ್‌ಬೈಜಾನ್‌ ಹಾಗೂ ಅರ್ಮೇನಿಯಾ ದೇಶಗಳ ಸೇನೆಗಳಲ್ಲಿ ಇವೆ.

ಏನಿವುಗಳ ವಿಶೇಷ?

ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ನಾಗಾಸ್ತ್ರ ಡ್ರೋನ್‌ಗಳನ್ನು ಅಭಿವೃದ್ಧಿಪಡಿಸಲಾಗಿದೆ. ಇವುಗಳನ್ನು ಸೈನಿಕರು ಹೊತ್ತುಕೊಂಡು ಹೋಗಬಹುದಾಗಿದೆ. ಸುಮಾರು 60 ನಿಮಿಷ 4,500 ಮೀಟರ್‌ ಎತ್ತರದಲ್ಲಿ ಹಾರಾಟ ನಡೆಸಬಲ್ಲ ಸಾಮರ್ಥ್ಯ ಹೊಂದಿರುವ ಇವುಗಳು ರಿಮೋಟ್‌ ಕಂಟ್ರೋಲ್‌ ಮೋಡ್‌ನಲ್ಲಿ 15 ಕಿಲೋಮೀಟರ್‌ ಹಾಗೂ ಆಟೋನಾಮಸ್‌ ಮೋಡ್‌ (ಸ್ವಯಂಚಾಲಿತವಾಗಿ ಹಾರಾಟ)ನಲ್ಲಿ ಸುಮಾರು 30 ಕಿಲೋಮೀಟರ್‌ವರೆಗೆ ಹಾರಾಟ ನಡೆಸಲಿವೆ.

ಸುಮಾರು 30 ಕೆ.ಜಿ ತೂಕ ಹೊಂದಿರುವ ಇವುಗಳು ಒಂದು ಕೆ.ಜಿ ಸ್ಫೋಟಕಗಳನ್ನು ಕೊಂಡೊಯ್ಯಬಲ್ಲ ಸಾಮರ್ಥ್ಯ ಹೊಂದಿವೆ. ರಾತ್ರಿ ಕೂಡ ಶತ್ರುಗಳ ಮೇಲೆ ನಿಗಾ ಇರಿಸುವ ಇವುಗಳನ್ನು ಶತ್ರುಪಡೆಗಳ ಸೇನಾ ನೆಲೆಗಳು, ಉಗ್ರರ ಲಾಂಚ್‌ಪ್ಯಾಡ್‌ಗಳನ್ನು ಹೊಡೆದುರುಳಿಸುವ ಸಾಮರ್ಥ್ಯ ಹೊಂದಿವೆ. ಜಿಪಿಎಸ್‌ ಆಧಾರಿತ ಡ್ರೋನ್‌ಗಳಾಗಿರುವ ಇವು ಕ್ಯಾಮೆರಾಗಳ ಸಹಾಯದಿಂದ ಸುಮಾರು 2 ಮೀಟರ್‌ ದೂರದಿಂದ ವೈರಿಗಳ ನೆಲೆಗಳನ್ನು ಹೊಡೆದುರುಳಿಸುತ್ತವೆ. ಗಡಿಯಲ್ಲಿ ಚೀನಾ ಹಾಗೂ ಪಾಕಿಸ್ತಾನದ ಉಪಟಳವನ್ನು ನಿಗ್ರಹಿಸಲು, ತುರ್ತು ಸಂದರ್ಭಗಳಲ್ಲಿ ಕಾರ್ಯಾಚರಣೆ ಕೈಗೊಳ್ಳಲು, ಉಗ್ರರ ನೆಲೆಗಳನ್ನು ಹೊಡೆದುರುಳಿಸಲು ಇವು ನೆರವಾಗಲಿವೆ.

ಇದನ್ನೂ ಓದಿ: MQ-9B Drones: ಅಮೆರಿಕದ ಅತ್ಯಾಧುನಿಕ ಎಂಕ್ಯೂ-9ಬಿ ಡ್ರೋನ್‌ ಖರೀದಿಗೆ ಒಪ್ಪಿಗೆ, ಬಂತು ಭಾರತೀಯ ಸೇನೆಗೆ ಭೀಮ ಬಲ

Continue Reading

ಪ್ರಮುಖ ಸುದ್ದಿ

Baby Death: ಆಟವಾಡುತ್ತ 7ನೇ ಮಹಡಿ ಬಾಲ್ಕನಿಯಿಂದ ಕೆಳಗೆ ಬಿದ್ದ ಮಗು; ವಿಡಿಯೊ ಇದೆ

Baby Death: ಮಕ್ಕಳನ್ನು ಹೆರುವುದಕ್ಕಿಂತ ಅವರನ್ನು ಸಾಕಿ ಬೆಳೆಸುವುದು ಕೆಲವೊಮ್ಮೆ ಸವಾಲಾಗಿ ಕಾಡುತ್ತದೆ. ಈಗಿನ ಮಕ್ಕಳನ್ನು ಕಣ್ಣಿನ ರಪ್ಪೆಯ ಮೇಲಿಟ್ಟುಕೊಂಡು ಸಾಕಿದರೂ ಸಾಲದು! ಜೀವನ ಸಾಗಿಸುವುದಕ್ಕೆಂದು ಮನೆಗೆಲಸ ಮಾಡುತ್ತಿದ್ದ ತಾಯಿಯೊಬ್ಬಳು ತನ್ನ ಕರುಳಕುಡಿಯನ್ನು ಕಳೆದುಕೊಂಡ ಕರುಣಾಜನಕ ಸುದ್ದಿಯೊಂದು ಇಲ್ಲಿದೆ. ಮಹಡಿ ಮನೆಯ ಬಾಲ್ಕನಿಯ ಗ್ರಿಲ್ ನಡುವೆ ಆಡುತ್ತಿದ್ದ ಮಗುವೊಂದು ಅದರ ಒಳಗೆ ನುಸುಳಿ ಏಳನೇ ಮಹಡಿಯಿಂದ ಕೆಳಕ್ಕೆ ಬಿದ್ದು ಪ್ರಾಣ ಬಿಟ್ಟ ಘಟನೆಯೊಂದು ಗುಜರಾತ್‌ನ ಸೂರತ್‌ನಲ್ಲಿ ನಡೆದಿದೆ.

VISTARANEWS.COM


on

Baby Death
Koo

ಸೂರತ್‌: ಟೆರೇಸ್‌ ಮೇಲೆ ಆಟವಾಡುತ್ತಿದ್ದ ಮಗು ಆಯತಪ್ಪಿ ಕೆಳಕ್ಕೆ ಬಿದ್ದು ದಾರುಣವಾಗಿ ಮೃತಪಟ್ಟಿದೆ. ನೀರಿನ ಬಕೆಟ್‌ಗೆ ಮಗು ಬಿದ್ದು ಸಾವು, ಕೊಳವೆ ಬಾವಿಗೆ ಬಿದ್ದು ಮಗು ಸಾವು ಇಂತಹ ಸುದ್ದಿಗಳನ್ನು ದಿನ ಬೆಳಗಾದರೆ ನಾವು ಪತ್ರಿಕೆಯಲ್ಲಿ, ಟಿವಿ ಮಾಧ್ಯಮದಲ್ಲಿ, ಸೋಷಿಯಲ್‌ ಮೀಡಿಯಾದಲ್ಲಿ ನೋಡಿರುತ್ತೇವೆ, ಕೇಳಿರುತ್ತೇವೆ. ಆದರೆ ಮಕ್ಕಳ ಈ ಸಾವಿಗೆ ಮೊದಲು ಹೊಣೆ ಮಾಡುವುದು ಪೋಷಕರ ನಿರ್ಲಕ್ಷ್ಯತನ. ಮಕ್ಕಳಿಗೆ ಜನ್ಮ ಕೊಡುವುದು ಮಾತ್ರ ಪೋಷಕರ ಕರ್ತವ್ಯವಾಗುವುದಿಲ್ಲ. ಜೊತೆಗೆ ಅವರನ್ನು ಕಾಳಜಿಯಿಂದ ನೋಡಿಕೊಳ್ಳುವುದು ಕೂಡ ಅವರ ಕರ್ತವ್ಯವಾಗಿರುತ್ತದೆ. ಆದರೆ ಕೆಲವು ಪೋಷಕರು ಮಕ್ಕಳ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಾರೆ. ಇದರಿಂದ ಜೀವಮಾನವಿಡೀ ಪಶ್ಚಾತ್ತಾಪ ಪಡುವ ಹಾಗೇ ಆಗುತ್ತದೆ. ಇಂತಹದೊಂದು ಘಟನೆ ಇದೀಗ ಗುಜರಾತ್‌ನಲ್ಲಿ ನಡೆದಿದೆ. ಕಟ್ಟಡದ 7ನೇ ಮಹಡಿಯ ಬಾಲ್ಕನಿಯಿಂದ ಬಿದ್ದು ಎರಡು ವರ್ಷದ ಮಗು (Baby Death) ಸಾವನಪ್ಪಿದೆ. ಗುಜರಾತ್‌ನ ಸೂರತ್‌ನಲ್ಲಿ ಈ ಘಟನೆ ನಡೆದಿದೆ.

ಮೃತ ಮಗುವಿನ ತಾಯಿ ಮತ್ತು ಚಿಕ್ಕಮ್ಮ ಆ ಪ್ರದೇಶದ ಮನೆಗಳಲ್ಲಿ ಮನೆಗೆಲಸ ಮಾಡಿ ಜೀವನ ನಡೆಸುತ್ತಿದ್ದರು. ಪ್ರತಿದಿನ ಅವರು ತಮ್ಮ ಜೊತೆ ಮಗುವನ್ನು ಕರೆದೊಯ್ಯುತ್ತಿದ್ದರು. ಅಂದು ಕೂಡ ಮಗುವಿನ ಜೊತೆ ತಾಯಿ ಮನೆಗೆಲಸಕ್ಕೆ ಹೋಗಿದ್ದಳು. ತಾಯಿ ಬಿ-ಬ್ಲಾಕ್ ನ ಎರಡನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಮಗುವಿನ ಚಿಕ್ಕಮ್ಮ ಏಳನೇ ಮಹಡಿಗೆ ಮಗುವನ್ನು ಕರೆದುಕೊಂಡು ಹೋಗಿದ್ದಾಳೆ. ಅಲ್ಲಿ ಅವಳು ಕೆಲಸದಲ್ಲಿ ನಿರತಳಾಗಿದ್ದಾಗ ಮಗು ಬಾಲ್ಕನಿಯ ಗ್ರಿಲ್ ಬಳಿ ಆಟವಾಡುತ್ತಿತ್ತು. ಆಗ ಮಗು ಗ್ರಿಲ್ ಮೂಲಕ ನುಸುಳಿ ಅದರ ಮೇಲೆ ಕುಳಿತುಕೊಳ್ಳಲು ಪ್ರಯತ್ನಿಸಿದ. ಗ್ರಿಲ್ ಅಗಲವಾಗಿರುವುದರಿಂದ ಮಗು ಸುಲಭವಾಗಿ ಅದರಲ್ಲಿ ನುಸುಳಿ ಕೆಳಕ್ಕೆ ಬಿದ್ದಿದೆ.

ಮಗುವನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. ಘಟನೆಯ ಬಳಿಕ ಪಾಲ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರೀಶಿಲನೆ ನಡೆಸಿದ್ದಾರೆ. ಹಾಗೂ ಇಂತಹ ಘಟನೆ ಮತ್ತೆ ಆಗದಂತೆ ತಡೆಯಲು ಈ ಗ್ರಿಲ್‌ಗಳನ್ನು ಸರಿಯಾಗಿ ಮರುವಿನ್ಯಾಸ ಮಾಡುವಂತೆ ಸೊಸೈಟಿ ಅಧ್ಯಕ್ಷರಿಗೆ ನೋಟಿಸ್ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: Yogi Adityanath: ರಸ್ತೆಯಲ್ಲಿ ನಮಾಜ್ ಮಾಡಿದರೆ ಹುಷಾರ್! ಬಕ್ರೀದ್ ಹಿನ್ನೆಲೆಯಲ್ಲಿ ಮುಸ್ಲಿಮರಿಗೆ ಯೋಗಿ ವಾರ್ನಿಂಗ್!

ಮೃತ ಮಗುವಿನ ಕುಟುಂಬ ವರಾಚಾ ಪ್ರದೇಶದಲ್ಲಿ ನೆಲೆಸಿತ್ತು ಎನ್ನಲಾಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Continue Reading

ಉದ್ಯೋಗ

Job Alert: ಕಾಟನ್‌ ಕಾರ್ಪೋರೇಷನ್‌ನಲ್ಲಿದೆ 214 ಹುದ್ದೆ; ಆನ್‌ಲೈನ್‌ ಮೂಲಕ ಇಂದೇ ಅಪ್ಲೈ ಮಾಡಿ

Job Alert: ಭಾರತ ಸರ್ಕಾರದ ಜವಳಿ ಸಚಿವಾಲಯದ ಮಾಲೀಕತ್ವದ ಅಡಿಯಲ್ಲಿ ಬರುವ ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆಯಾದ ಕಾಟನ್‌ ಕಾರ್ಪೋರೇಷನ್‌ ಆಫ್‌ ಇಂಡಿಯಾ 214 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 2.

VISTARANEWS.COM


on

Job Alert
Koo

ಬೆಂಗಳೂರು: ಭಾರತ ಸರ್ಕಾರದ ಜವಳಿ ಸಚಿವಾಲಯದ ಮಾಲೀಕತ್ವದ ಅಡಿಯಲ್ಲಿ ಬರುವ ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆಯಾದ ಕಾಟನ್‌ ಕಾರ್ಪೋರೇಷನ್‌ ಆಫ್‌ ಇಂಡಿಯಾ (Cotton Corporation of India Limited) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜ್‌ಮೆಂಟ್‌ ಟ್ರೈನಿ, ಅಸಿಸ್ಟೆಂಟ್‌ ಮ್ಯಾನೇಜರ್‌ ಸೇರಿ ಸುಮಾರು 214 ಹುದ್ದೆಗಳಿವೆ (Cotton Corporation of India Recruitment 2024). ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 2 (Job Alert).

ಹುದ್ದೆಗಳ ವಿವರ

ಅಸಿಸ್ಟೆಂಟ್ ಮ್ಯಾನೇಜರ್ (ಲೀಗಲ್) 1 ಹುದ್ದೆ, ವಿದ್ಯಾರ್ಹತೆ: ಕಾನೂನಿನಲ್ಲಿ ಪದವಿ, ಎಲ್‌ಎಲ್‌ಬಿ
ಅಸಿಸ್ಟೆಂಟ್ ಮ್ಯಾನೇಜರ್ (ಅಧಿಕೃತ ಭಾಷೆ) 1 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ
ಮ್ಯಾನೇಜ್‌ಮೆಂಟ್‌ ಟ್ರೈನಿ (ಮಾರ್ಕೆಟಿಂಗ್) 11 ಹುದ್ದೆ, ವಿದ್ಯಾರ್ಹತೆ: ಕೃಷಿ ಕ್ಷೇತ್ರದಲ್ಲಿ ಎಂಬಿಎ
ಮ್ಯಾನೇಜ್‌ಮೆಂಟ್‌ ಟ್ರೈನಿ (ಅಕೌಂಟ್ಸ್) 20 ಹುದ್ದೆ, ವಿದ್ಯಾರ್ಹತೆ: ಸಿಎ, ಸಿಎಂಎ, ಎಂಬಿಎ, ಎಂ.ಕಾಂ., ಎಂಎಂಎಸ್, ಸ್ನಾತಕೋತ್ತರ ಪದವಿ
ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯೂಟಿವ್ 120 ಹುದ್ದೆ, ವಿದ್ಯಾರ್ಹತೆ: ಬಿಎಸ್‌ಸಿ ಅಗ್ರಿಕಲ್ಚರ್
ಜೂನಿಯರ್ ಅಸಿಸ್ಟೆಂಟ್ (ಸಾಮಾನ್ಯ) 20 ಹುದ್ದೆ, ವಿದ್ಯಾರ್ಹತೆ: ಬಿಎಸ್‌ಸಿ ಅಗ್ರಿಕಲ್ಚರ್
ಜೂನಿಯರ್ ಅಸಿಸ್ಟೆಂಟ್ (ಅಕೌಂಟ್ಸ್) 40 ಹುದ್ದೆ, ವಿದ್ಯಾರ್ಹತೆ: ಬಿ.ಕಾಂ.
ಜೂನಿಯರ್ ಅಸಿಸ್ಟೆಂಟ್ (ಹಿಂದಿ ಭಾಷಾಂತರಕಾರ) 1 ಹುದ್ದೆ, ವಿದ್ಯಾರ್ಹತೆ: ಹಿಂದಿಯಲ್ಲಿ ಪದವಿ

ವಯೋಮಿತಿ ಮತ್ತು ಅರ್ಜಿ ಶುಲ್ಕ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ 27 ವರ್ಷದಿಂದ 32 ವರ್ಷ ವಯೋಮಾನದವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವಿಭಾಗಕ್ಕೆ 3 ವರ್ಷ, ಎಸ್‌ಸಿ / ಎಸ್‌ಟಿ ವಿಭಾಗಕ್ಕೆ 5 ವರ್ಷ, ಪಿಡಬ್ಲ್ಯುಬಿಡಿ ವಿಭಾಗಕ್ಕೆ 10 ವರ್ಷಗಳ ರಿಯಾಯಿತಿ ಇದೆ. ಅರ್ಜಿ ಶುಲ್ಕವಾಗಿ ಸಾಮಾನ್ಯ / ಒಬಿಸಿ / ಇಡಬ್ಲ್ಯುಎಸ್‌ ವಿಭಾಗದ ಅಭ್ಯರ್ಥಿಗಳು 1,000 ರೂ., ಎಸ್‌ಸಿ / ಎಸ್‌ಟಿ / ಇಎಸ್‌ಎಂ / ಪಿಡಬ್ಲ್ಯುಡಿ ಅಭ್ಯರ್ಥಿಗಳು 250 ರೂ. ಅನ್ನು ಆನ್‌ಲೈನ್‌ ಮೂಲಕ ಸಲ್ಲಿಸಬೇಕು.

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗಳ ಆಧಾರದಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Cotton Corporation of India Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಸೂಚನೆಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (cdn.digialm.com).
  • ಅಗತ್ಯ ಮಾಹಿತಿಗಳನ್ನು ನೀಡಿ ಹೆಸರು ನೋಂದಾಯಿಸಿ.
  • ಲಾಗಿನ್‌ ಆಗಿ ಅಗತ್ಯ ಮಾಹಿತಿಗಳ ಮೂಲಕ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ.
  • ಅಪ್ಲಿಕೇಷನ್‌ ಫಾರಂ ಅನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಇದನ್ನೂ ಓದಿ: Job Alert: ಎಚ್‌ಎಎಲ್‌ನಲ್ಲಿದೆ ಉದ್ಯೋಗಾವಕಾಶ; ಡಿಪ್ಲೋಮಾ ಪಾಸಾದವರು ಅಪ್ಲೈ ಮಾಡಿ

Continue Reading
Advertisement
E. Tukaram
ಕರ್ನಾಟಕ5 mins ago

E. Tukaram: ಸಂಡೂರು ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಈ. ತುಕಾರಾಂ

INDW vs SAW
ಕ್ರೀಡೆ12 mins ago

INDW vs SAW: ಏಕದಿನ ಸರಣಿಗೆ ಅಭ್ಯಾಸ ಆರಂಭಿಸಿದ ಭಾರತ ಮಹಿಳಾ ತಂಡ; ಕನ್ನಡದಲ್ಲೇ ತಂಡದ ಸಿದ್ಧತೆ ವಿವರಿಸಿದ ಶ್ರೇಯಾಂಕಾ

Actor Darshan
ಸಿನಿಮಾ17 mins ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

Pawan Kalyan Fan Narendra cut hairs after Five Years
ಟಾಲಿವುಡ್25 mins ago

Pawan Kalyan: ಪವನ್‌ ಕಲ್ಯಾಣ್‌ ಗೆದ್ದ ಬಳಿಕ ತಲೆಗೂದಲಿಗೆ ಕತ್ತರಿ ಹಾಕಿದ ಡೈ ಹಾರ್ಡ್​ ಫ್ಯಾನ್!

Arun Somanna
ಕರ್ನಾಟಕ36 mins ago

Arun Somanna: ವಂಚನೆ, ಜೀವ ಬೆದರಿಕೆ; ಕೇಂದ್ರ ಸಚಿವ ಸೋಮಣ್ಣ ಪುತ್ರನ ಮೇಲೆ ಎಫ್‌ಐಆ‌ರ್

Nagastra 1
ದೇಶ40 mins ago

Nagastra 1: ಭಾರತೀಯ ಸೇನೆ ಸೇರಿದ ‘ದೇಶೀಯ’ ನಾಗಾಸ್ತ್ರ ಡ್ರೋನ್‌ಗಳು; ಉಗ್ರರಿಗೆ ನಡುಕ, ಏನಿದರ ವಿಶೇಷ?

Bus Accident
ಗದಗ1 hour ago

Bus Accident : ವಾಹನ ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ತಲೆಸುತ್ತು; ರಸ್ತೆ ಬಿಟ್ಟು ಜಮೀನಿಗೆ ನುಗ್ಗಿದ ಬಸ್‌

Alia Bhatt Fans A Deepfake Video Goes Viral Again
ಬಾಲಿವುಡ್1 hour ago

Alia Bhatt: ಆಲಿಯಾ ಭಟ್ ಮತ್ತೊಂದು ಡೀಪ್‌ಫೇಕ್ ವೀಡಿಯೊ ವೈರಲ್‌; ಫ್ಯಾನ್ಸ್‌ ಕೆಂಡಾಮಂಡಲ!

IND vs CAN
ಕ್ರೀಡೆ1 hour ago

IND vs CAN: ಕೆನಡಾ ಪಂದ್ಯಕ್ಕೆ ಕೊಹ್ಲಿ,ಜಡೇಜಾ, ಅಕ್ಷರ್​ಗೆ ರೆಸ್ಟ್​​!​

Baby Death
ಪ್ರಮುಖ ಸುದ್ದಿ1 hour ago

Baby Death: ಆಟವಾಡುತ್ತ 7ನೇ ಮಹಡಿ ಬಾಲ್ಕನಿಯಿಂದ ಕೆಳಗೆ ಬಿದ್ದ ಮಗು; ವಿಡಿಯೊ ಇದೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ7 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ7 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌