Cooking oil price Celebration in the kitchen, reduction in the price of soya, sunflower oilCooking oil price : ಅಡುಗೆ ಮನೆಯಲ್ಲಿ ಸಂಭ್ರಮ, ಸೋಯಾ, ಸೂರ್ಯಕಾಂತಿ ಎಣ್ಣೆ ದರ ಇಳಿಕೆ

ಪ್ರಮುಖ ಸುದ್ದಿ

Cooking oil price : ಅಡುಗೆ ಮನೆಯಲ್ಲಿ ಸಂಭ್ರಮ, ಸೋಯಾ, ಸೂರ್ಯಕಾಂತಿ ಎಣ್ಣೆ ದರ ಇಳಿಕೆ

Cooking oil price ಅಡುಗೆ ಮನೆಯ ಅವಶ್ಯಕ ವಸ್ತುಗಳಲ್ಲೊಂದಾಗಿರುವ ಅಡುಗೆ ಎಣ್ಣೆಯ ದರದಲ್ಲಿ ಇಳಿಕೆ ಸನ್ನಿಹಿತವಾಗಿದೆ. ಸರ್ಕಾರ ಆಮದು ಸು ಕ ಇಳಿಸಿರುವುದು ಇದಕ್ಕೆ ಕಾರಣ. ವಿವರ ಇಲ್ಲಿದೆ.

VISTARANEWS.COM


on

sunflower oil
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಭಾರತ ಬುಧವಾರ ಸಂಸ್ಕರಿತ ಸೋಯಾ ಎಣ್ಣೆ ಮತ್ತು ಸೂರ್ಯಕಾಂತಿ ಎಣ್ಣೆಯ ಆಮದು ಸುಂಕದಲ್ಲಿ 17.5%ರಿಂದ 12.5%ಕ್ಕೆ ಇಳಿಕೆ ಮಾಡಿದೆ. ಇದರ ಪರಿಣಾಮ ಅಡುಗೆ ಎಣ್ಣೆ ದರ ಇಳಿಕೆಯಾಗಲಿದೆ. (Cooking oil price) ಈ ಸಂಬಂಧ ಅಧಿಸೂಚನೆಯನ್ನು ಹೊರಡಿಸಿದೆ. ಭಾರತ ವಿಶ್ವದಲ್ಲಿಯೇ ಅತಿ ದೊಡ್ಡ ಖಾದ್ಯ ತೈಲ ಖರೀದಿದಾರ ರಾಷ್ಟ್ರವಾಗಿದೆ. ಅಂದಾಜು 5% ದರ ಇಳಿಕೆ ನಿರೀಕ್ಷಿಸಲಾಗಿದೆ.

ಭಾರತವು ಮುಖ್ಯವಾಗೊ ಸೋಯಾ ಎಣ್ಣೆಯನ್ನು ಮತ್ತು ಸೂರ್ಯಕಾಂತಿ ಎಣ್ಣೆಯನ್ನು ಅರ್ಜೆಂಟೀನಾ, ಬ್ರೆಜಿಲ್‌, ಉಕ್ರೇನ್‌ ಮತ್ತು ರಷ್ಯಾದಿಂದ ಆಮದು ಮಾಡುತ್ತದೆ. ಇದರೊಂದಿಗೆ ಸಂಸ್ಕರಿತ ಅಡುಗೆ ಎಣ್ಣೆಯ ಮೇಲೆ ಎಫೆಕ್ಟಿವ್‌ ಸುಂಕ 13.7% ಕ್ಕೆ ನಿಗದಿಯಾಗಿದೆ. ಸರ್ಕಾರದ ನಿರ್ಧಾರದಿಂದ ತಾತ್ಕಾಲಿಕವಾಗಿ ಮಾರುಕಟ್ಟೆ ಮೇಲೆ ಪ್ರಭಾವ ಬೀರಬಹುದು. ಆದರೆ ಆಮದು ಮೇಲೆ ಪ್ರಭಾವ ಬೀರುವ ಸಾಧ್ಯತೆ ಇಲ್ಲ ಎಂದು Solvent extractors association ಕಾರ್ಯಕಾರಿ ನಿರ್ದೇಶಕ ಬಿ.ವಿ ಮೆಹ್ತಾ ತಿಳಿಸಿದ್ದಾರೆ.

ಸಾಮಾನ್ಯವಾಗಿ ಭಾರತವು ಖಾದ್ಯ ತೈಲಗಳ ದರಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಬಯಸುತ್ತದೆ. ಜನ ಸಾಮಾನ್ಯರ ಹಿತದೃಷ್ಟಿಯಿಂದ ಇದು ಅಗತ್ಯ ಎನ್ನುತ್ತಾರೆ ತಜ್ಞರು. ಎಸ್‌ಇಎ ಪ್ರಕಾರ ಕೇರಳಕ್ಕೆ ಈ ವರ್ಷ ಮುಂಗಾರು ವಿಳಂಬವಾಗಿ ಪ್ರವೇಶಿಸಿದೆ. ಭಾರತ ತನ್ನ ಖಾದ್ಯ ತೈಲ ಬೇಡಿಕೆಯಲ್ಲಿ 60% ಅನ್ನು ಪೂರೈಸಲು ಆಮದನ್ನು ಅವಲಂಬಿಸಿದೆ.

ಆಮದು ಸುಂಕ ಕಡಿತದ ಪರಿಣಾಮ ಕಚ್ಚಾ ತಾಳೆ ಎಣ್ಣೆ, ಸೂರ್ಯಕಾಂತಿ ಸೇರಿ ಎಲ್ಲ ಖಾದ್ಯ ತೈಲಗಳ ದರಗಳಿ ಇಳಿಕೆಯಾಗಲಿದೆ. ಕಳೆದ ನವೆಂಬರ್‌ -ಏಪ್ರಿಲ್‌ ಅವಧಿಯಲ್ಲಿ ತಾಳೆ ಎಣ್ಣೆಯ ಆಮದು ಗಣನೀಯವಾಗಿ ಕುಸಿದಿತ್ತು. 49 ಲಕ್ಷ ಟನ್‌ ಅಡುಗೆ ಎಣ್ಣೆ ಆಮದಾಗಿತ್ತು. ಹೀಗಿದ್ದರೂ ಕಳೆದ ಎರಡು ತಿಂಗಳಿನಲ್ಲಿ ಆಮದು ಏರಿಕೆಯೂ ಆಗಿತ್ತು. ಭಾರತವು ಇಂಡೊನೇಷ್ಯಾ ಮತ್ತು ಮಲೇಷ್ಯಾದಿಂದ ಮುಖ್ಯವಾಗಿ ಅಡುಗೆ ಎಣ್ಣೆಯನ್ನು ಆಮದು ಮಾಡಿಕೊಳ್ಳುತ್ತದೆ. ಭಾರತವು 2023ರ ಮಾರ್ಚ್‌ನಲ್ಲಿ 11.35 ಲಕ್ಷ ಟನ್‌ ಖಾದ್ಯತೈಲವನ್ನು ಆಮದು ಮಾಡಿತ್ತು. ಮೇನಲ್ಲಿ 4,39,173 ಟನ್‌ ತಾಳೆ ಎಣ್ಣೆ ಆಮದಾಗಿತ್ತು.

ದೇಶದಲ್ಲಿ ಸಗಟು ಹಣದುಬ್ಬರ (wholesale inflation) ಮೇನಲ್ಲಿ ಮೈನಸ್‌ 3.48%ಕ್ಕೆ ಇಳಿಕೆಯಾಗಿದೆ. ಕಳೆದ ಮೂರು ವರ್ಷದಲ್ಲಿಯೇ ಇದು ಕನಿಷ್ಠ ಮೊತ್ತವಾಗಿದೆ. ಏಪ್ರಿಲ್‌ನಲ್ಲಿ ಇದು -0.92% ಇತ್ತು. 2022ರ ಮೇನಲ್ಲಿ ಸಗಟು ಹಣದುಬ್ಬರ 16.63% ಇತ್ತು. ಆಹಾರ ವಸ್ತುಗಳು, ಇಂಧನ ಮತ್ತು ಉತ್ಪಾದಿತ ವಸ್ತುಗಳ ಬೆಲೆಗಳು ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಸಗಟು ಹಣದುಬ್ಬರ ತಗ್ಗಿದೆ. ಮೇನಲ್ಲಿ ಆಹಾರ ವಸ್ತುಗಳ ಹಣದುಬ್ಬರ 1.51%ಕ್ಕೆ ಇಳಿಕೆಯಾಗಿದೆ. ಏಪ್ರಿಲ್‌ನಲ್ಲಿ ಹಣದುಬ್ಬರ 3.54% ಇತ್ತು.

ಸಗಟು ದರ ಸೂಚ್ಯಂಕ ಸತತ ಎರಡನೇ ತಿಂಗಳಿಗೆ ಋಣಾತ್ಮಕ ಹಂತಕ್ಕೆ ಇಳಿದಿದೆ. ಮಿನರಲ್‌ ಆಯಿಲ್‌, ಬೇಸಿಕ್‌ ಮೆಟಲ್‌, ಕೆಮಿಕಲ್‌ ಪ್ರಾಡಕ್ಟ್ಸ್‌, ಜವಳಿ, ಆಹಾರೇತರ ವಸ್ತುಗಳ ದರ ಇಳಿಕೆಯಾಗಿದೆ. ಹೀಗಾಗಿ ಸಗಟು ಹಣದುಬ್ಬರ ಇಳಿದಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕೆ ಸಚಿವಾಲಯ ತಿಳಿಸಿದೆ. ಮೇನಲ್ಲಿ ಇಂಧನ ಮತ್ತು ವಿದ್ಯುತ್‌ ವಲಯದ ಸಗಟು ಹಣದುಬ್ಬರ ಮೈನಸ್‌ 9.17% ಕ್ಕೆ ಇಳಿಕೆಯಾಗಿದೆ. ಉತ್ಪಾದಿತ ವಸ್ತುಗಳ ಹಣದುಬ್ಬರ ಮೈನಸ್‌ 2.97%ಕ್ಕೆ ತಗ್ಗಿದೆ. ಭಾರತದಲ್ಲಿ ಹಣದುಬ್ಬರ ನಿಯಂತ್ರಣದಲ್ಲಿ ಅಡುಗೆ ಎಣ್ಣೆ ದರ ಕೂಡ ಪ್ರಭಾವ ಬೀರುತ್ತದೆ.

ಇದನ್ನೂ ಓದಿ: Mother Dairy: ಬಳಕೆದಾರರ ಮೇಲೆ ‘ಮದರ್ ಡೇರಿ’ ಮಮತೆ, ಅಡುಗೆ ಎಣ್ಣೆ ದರದಲ್ಲಿ ಭಾರೀ ಇಳಿಕೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Bengaluru Rain: ಬೆಂಗಳೂರಿನಲ್ಲಿ ಮುಂದುವರಿದ ಮಳೆ ಆರ್ಭಟ; ರಸ್ತೆಗಳು ಜಲಾವೃತ, ಹಲವೆಡೆ ಸಂಚಾರ ಅಸ್ತವ್ಯಸ್ತ

Bengaluru Rain: ಧಾರಾಕಾರ ಮಳೆಯಿಂದ ಬೆಂಗಳೂರಿನ ಪ್ರಮುಖ ರಸ್ತೆಗಳು ಜಲಾವೃತವಾಗಿದ್ದರಿಂದ ಸಂಚಾರ ಅಸ್ತವ್ಯಸ್ತವಾಯಿತು.

VISTARANEWS.COM


on

Koo

ಬೆಂಗಳೂರು: ರಾಜಧಾನಿಯಲ್ಲಿ ಭಾನುವಾರವೂ ಮಳೆ ಆರ್ಭಟ (Bengaluru Rain) ಮುಂದುವರಿಯಿತು. ನಗರದ ಹಲವೆಡೆ ಸುರಿದ ಧಾರಾಕಾರ ಮಳೆಯಿಂದ ಪ್ರಮುಖ ರಸ್ತೆಗಳು ಜಲಾವೃತವಾಗಿದ್ದರಿಂದ ಸಂಚಾರ ಅಸ್ತವ್ಯಸ್ತವಾಯಿತು. ಇದರಿಂದ ವಾಹನ ಸವಾರರು ಪರದಾಡಿದರು.

ಚಿಕ್ಕಪೇಟೆ, ಮೆಜೆಸ್ಟಿಕ್, ಯಲಹಂಕ, ಯಶವಂತಪುರ, ಲಗ್ಗೆರೆ, ರಾಜಾಜಿನಗರದಲ್ಲಿ ಭಾರಿ ಮಳೆಯಾಯಿತು. ಕಸ್ತೂರಿ ನಗರ ಕಡೆಯಿಂದ ಎಂಎಂಟಿ ಜಂಕ್ಷನ್ (ಕೆ.ಆರ್.ಪುರ) ಕಡೆಗೆ ಹೋಗುವ ಮಾರ್ಗದಲ್ಲಿ ಭಾರಿ ಪ್ರಮಾಣದ ನೀರು ನಿಂತಿದ್ದರಿಂ ವೈಟ್‌ಫೀಲ್ಡ್‌, ಮಹದೇವಪುರ ಮತ್ತು ಕೆ.ಆರ್.ಪುರ ಕಡೆಗೆ ನಿಧಾನಗತಿಯ ವಾಹನ ಸಂಚಾರ ಕಂಡುಬಂದಿತು.

ಇನ್ನು ಪೈಪ್‌ಲೈನ್ ಮುಖ್ಯ ರಸ್ತೆಯ ಕಮಲಾ ನಗರದಲ್ಲಿ ರಸ್ತೆಯಲ್ಲಿ ನೀರು ನಿಂತಿದ್ದರಿಂದ ಪಾದಾಚಾರಿಗಳು ಮತ್ತು ವಾಹನ ಸವಾರರು ರಸ್ತೆ ದಾಟಲು ಪರದಾಡಬೇಕಾಯಿತು. ರಸ್ತೆಗಳು ಜಲಾವೃತವಾಗಿದ್ದರಿಂದ ರಾಮಮೂರ್ತಿ ನಗರ – ಟಿನ್ ಫ್ಯಾಕ್ಟರಿ ರಸ್ತೆ, ಸಂಜಯನಗರ ಕ್ರಾಸ್ – ವಿಮಾನ ನಿಲ್ದಾಣ ರಸ್ತೆ, ಹುಣಸಮಾರನಹಳ್ಳಿ ಸರ್ವಿಸ್ ರಸ್ತೆ, ಬಿಇಎಲ್‌ನಿಂದ ಹೆಬ್ಬಾಳ ಮಾರ್ಗ, ಅನಿಲ್ ಕುಂಬ್ಳೆ ಜಂಕ್ಷನ್-ಬಿಆರ್ವಿ ಜಂಕ್ಷನ್ ರಸ್ತೆಯಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಯಿತು.

ಕೆರೆಯಂತಾದ ದೇವನಹಳ್ಳಿಯ ಸರ್ಕಲ್

ದೇವನಹಳ್ಳಿ: ಪಟ್ಟಣದ ಸುತ್ತಮುತ್ತಲ ಪ್ರದೇಶದಲ್ಲಿ ಧಾರಕಾರ ಮಳೆ ಸುರಿದಿದೆ. ನಿರಂತರ ಒಂದು ಗಂಟೆ ಸುರಿದ ಮಳೆಗೆ ಪಟ್ಟಣದ ಹೊರವಲಯದ ಬೈಪಾಸ್‌ನ ಕೆಂಪೇಗೌಡ ಸರ್ಕಲ್‌ ಕೆರೆಯಂತೆ ಬದಲಾಗಿತ್ತು. ಸುಮಾರು ಮೂರು ಅಡಿಗಿಂತ ಹೆಚ್ಚ ನೀರು ನಿಂತಿದ್ದರಿಂದ ವಾಹನ ಸವಾರರು ಮುಂದೆ ಹೋಗಲು ಹೈರಾಣಾದರು.

ಆನೇಕಲ್ ಭಾಗದಲ್ಲಿ ಮಳೆರಾಯನ ಸಿಂಚನ

ಆನೇಕಲ್: ಬೆಂಗಳೂರು ನಗರ ಹೊರವಲಯದ ಆನೇಕಲ್ ಭಾಗದಲ್ಲಿ ಮಳೆರಾಯನ ಸಿಂಚನ ಕಂಡುಬಂತು. ಆನೇಕಲ್, ಅತ್ತಿಬೆಲೆ, ಸರ್ಜಾಪುರ ಭಾಗದಲ್ಲಿ ಕಳೆದೊಂದು ವಾರದಿಂದ ನಿರಂತರ ಮಳೆಯಾಗುತ್ತಿದೆ. ಇದರಿಂದ ಕೃಷಿ ಚಟುವಟಿಕೆ ಚುರುಕುಗೊಂಡಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಇದನ್ನೂ ಓದಿ | Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ರಾಜ್ಯದ 17 ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿದ್ದು, 17 ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ‌ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರಿಗೆ ಸಮುದ್ರದಲ್ಲಿ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಕುಷ್ಟಗಿಯಲ್ಲಿ ಸಿಡಿಲು ಬಡಿದು ರೈತ ಸಾವು, ಯುವಕನಿಗೆ ಗಂಭೀರ ಗಾಯ

ಕೊಪ್ಪಳ: ಸಿಡಿಲು ಬಡಿದು (Lightning strike) ರೈತ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಚನಾಳ ಗ್ರಾಮದಲ್ಲಿ ನಡೆದಿದೆ. ಉತ್ತಮ ಮಳೆ (Rain News) ಹಿನ್ನೆಲೆಯಲ್ಲಿ ಜಮೀನಿನಲ್ಲಿ ಬಿತ್ತನೆ ಸಲುವಾಗಿ ಕೃಷಿ ಚಟುವಟಿಕೆ ಮಾಡುತ್ತಿದ್ದಾಗ ಅವಘಡ ನಡೆದಿದ್ದು, ಈಶಪ್ಪ ಕಳಮಳ್ಳಿ (40) ಮೃತ ರೈತ.

ಮಳೆ ಬಂದ ಖುಷಿಯಲ್ಲಿ ಎತ್ತುಗಳೊಂದಿಗೆ ರೈತ ಭೂಮಿ ಹದ ಮಾಡುತ್ತಿದ್ದ. ಈ ವೇಳೆ ಸಿಡಿಲು ಬಡಿದು ರೈತ ಈಶಪ್ಪ ಕಳಮಳ್ಳಿ ಮೃತಪಟ್ಟಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ರೈತನ ಸಹೋದರ ಪಾರಾಗಿದ್ದಾನೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಸಿಡಿಲು ಬಡಿದು ಯುವಕನಿಗೆ ಗಂಭೀರ ಗಾಯ

ಧಾರವಾಡ: ಸಿಡಿಲು ಬಡಿದು ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡದ ಮುಗದ ಗ್ರಾಮದ ಕೆರೆ ಬಳಿ ನಡೆದಿದೆ. ಇಂದು ಮಧ್ಯಾಹ್ನ ಸುರಿದ ಸಿಡಿಲು ಸಹಿತ ಮಳೆ ವೇಳೆ ಅವಘಡ ನಡೆದಿದೆ. ದಡ್ಡಿಕಮಲಾಪುರ ಗ್ರಾಮದ ನಿವಾಸಿ ರವಿ ಕೊರಮಡ್ಡಿ ಗಾಯಾಳು. ಇದೆ ವೇಳೆ ಸಿಡಿಲಿಗೆ ಎಮ್ಮೆ ಕರು ಬಲಿಯಾಗಿದೆ. ಗಂಭೀರ ಗಾಯಗೊಂಡ ಯುವಕನನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.

Continue Reading

ಸಿನಿಮಾ

Kantara Movie: ದಾಖಲೆ ಮೊತ್ತಕ್ಕೆ ಕಾಂತಾರ ಸಿನಿಮಾದ ಡಿಜಿಟಲ್‌ ರೈಟ್ಸ್‌ ಮಾರಾಟ; ಅಬ್ಬಾ ಇಷ್ಟು ಕೋಟಿನಾ!

Kantara Movie: ಕಡಿಮೆ ಬಜೆಟ್‌ನಲ್ಲಿ ನಿರ್ಮಿಸಿದ ಕಾಂತಾರ ಸಿನಿಮಾ ಭಾರತ ಸೇರಿ ಜಗತ್ತಿನಾದ್ಯಂತ ಹೆಸರು ಗಳಿಸಿದೆ. ರಿಷಬ್‌ ಶೆಟ್ಟಿ ಅವರ ಸಿನಿಮಾ ಬದುಕಿಗೆ ಹೊಸ ಸ್ವರೂಪ ನೀಡಿದೆ. ಹಾಗಾಗಿ, ಕಾಂತಾರ ಪ್ರಿಕ್ವೆಲ್‌ಅನ್ನು ಅದ್ಧೂರಿಯಾಗಿ ನಿರ್ಮಿಸುವುದು ರಿಷಬ್‌ ಶೆಟ್ಟಿ ಅವರ ಗುರಿಯಾಗಿದೆ. ಇದರ ಬೆನ್ನಲ್ಲೇ, ಕಾಂತಾರ ಚಾಪ್ಟರ್‌ 1 ಸಿನಿಮಾದ ಡಿಜಿಟಲ್‌ ಹಕ್ಕುಗಳು ದಾಖಲೆಯ ಮೊತ್ತಗೆ ಸೇಲ್‌ ಆಗಿರುವುದು ಮಹತ್ವದ ಸಂಗತಿಯಾಗಿದೆ.

VISTARANEWS.COM


on

Kantara Movie
Koo

ಬೆಂಗಳೂರು: ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸಿದ ಕಾಂತಾರ ಸಿನಿಮಾ ದೇಶ-ವಿದೇಶದಲ್ಲಿ ಭರ್ಜರಿ ಹೆಸರು ಗಳಿಸಿದ ಬೆನ್ನಲ್ಲೇ ರಿಷಬ್‌ ಶೆಟ್ಟಿ ಅವರು ಕಾಂತಾರ ಚಾಪ್ಟರ್‌ 1‌ (Kantara Movie) (ಪ್ರಿಕ್ವೆಲ್) ಚಿತ್ರೀಕರಣಕ್ಕೆ ಇಳಿದಿದ್ದಾರೆ. ಹಾಗಾಗಿ, ಕಾಂತಾರ ಚಾಪ್ಟರ್‌ 1 ಕುತೂಹಲ ಹೆಚ್ಚಿಸಿದೆ. ಇದರ ಬೆನ್ನಲ್ಲೇ, ಕಾಂತಾರ ಸಿನಿಮಾದ ಡಿಜಿಟಲ್‌ ಹಕ್ಕುಗಳು (Digital Rights) ಅಮೆಜಾನ್‌ ಪ್ರೈಮ್‌ ಪಾಲಾಗಿದ್ದು, ಸುಮಾರು 125 ಕೋಟಿ ರೂ.ಗೆ ಮಾರಾಟ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇದರೊಂದಿಗೆ, ಸಿನಿಮಾ ಬಿಡುಗಡೆಗೆ ಮೊದಲೇ ಕಾಂತಾರ ಭರ್ಜರಿ ಆದಾಯ ಗಳಿಸಿದಂತಾಗಿದೆ.

ದೈವಾರಾಧನೆಯ ಎಳೆಯನ್ನು ಇಟ್ಟುಕೊಂಡು, ಕಡಿಮೆ ಬಜೆಟ್‌ನಲ್ಲಿ ನಿರ್ಮಿಸಿದ ಕಾಂತಾರ ಸಿನಿಮಾ ಭಾರತ ಸೇರಿ ಜಗತ್ತಿನಾದ್ಯಂತ ಹೆಸರು ಗಳಿಸಿದೆ. ರಿಷಬ್‌ ಶೆಟ್ಟಿ ಅವರ ಸಿನಿಮಾ ಬದುಕಿಗೆ ಹೊಸ ಸ್ವರೂಪ ನೀಡಿದೆ. ಹಾಗಾಗಿ, ಕಾಂತಾರ ಪ್ರಿಕ್ವೆಲ್‌ಅನ್ನು ಅದ್ಧೂರಿಯಾಗಿ ನಿರ್ಮಿಸುವುದು ರಿಷಬ್‌ ಶೆಟ್ಟಿ ಅವರ ಗುರಿಯಾಗಿದೆ. ಇದರ ಬೆನ್ನಲ್ಲೇ, ಕಾಂತಾರ ಚಾಪ್ಟರ್‌ 1 ಸಿನಿಮಾದ ಡಿಜಿಟಲ್‌ ಹಕ್ಕುಗಳು ದಾಖಲೆಯ 125 ಕೋಟಿ ರೂ.ಗೆ ಮಾರಾಟವಾಗಿರುವುದು ಮಹತ್ವದ ಸಂಗತಿಯಾಗಿದೆ.

Rishab Shetty

ಚಿತ್ರೀಕರಣ ಆರಂಭ

ಕೆಲ ದಿನಗಳ ಹಿಂದಷ್ಟೇ ರಿಷಬ್‌ ಶೆಟ್ಟಿ ಅವರು ಕಾಂತಾರ 2 ಚಿತ್ರೀಕರಣ ಆರಂಭವಾಗಿದೆ ಎಂದು ಹೇಳಿದ್ದರು. ಕಾಂತಾರ ಚಿತ್ರದ ಕುರಿತು ಅಧಿಕೃತವಾಗಿ ಹೊಂಬಾಳೆ ಸಂಸ್ಥೆ ಎಲ್ಲವನ್ನೂ ಘೋಷಣೆ ಮಾಡುತ್ತದೆ. ಈಗಾಗಲೇ ಚಿತ್ರೀಕರಣ ಆರಂಭವಾಗಿದ್ದು, ಬಹಳ ಚೆನ್ನಾಗಿ ಕೆಲಸಕಾರ್ಯಗಳು ನಡೆಯುತ್ತಿವೆ. ಮೊದಲಿಗಿಂತ ದೊಡ್ಡ ಜವಾಬ್ದಾರಿಯೊಂದಿಗೆ ದೊಡ್ಡ ತಂಡ ಕೆಲಸ ಮಾಡುತ್ತಿದೆ” ಎಂದು ಹೇಳಿದ್ದರು.

“ಹೊಂಬಾಳೆ ಪ್ರೊಡಕ್ಷನ್ ಹೌಸ್ ಸಿಕ್ಕಿರುವುದು ಫಿಲಂ ಮೇಕರ್‌ಗಳಿಗೆ ಒಂದು ಪುಣ್ಯ. ಕಾಂತಾರದಲ್ಲಿ ಅದ್ಭುತವಾದ ಟೆಕ್ನಿಷಿಯನ್ಸ್‌ಗಳು ಕೆಲಸ ಮಾಡುತ್ತಿದ್ದಾರೆ. ನಿರಂತರವಾಗಿ ಕೆಲಸಗಳು ನಡೆಯುತ್ತಿದ್ದು ಪಾರ್ಟ್ ಬೈ ಪಾರ್ಟ್ ಚಿತ್ರೀಕರಣ ನಡೆಯುತ್ತದೆ. ಜನ ಕಾಂತಾರವನ್ನು ಗೆಲ್ಲಿಸಿದ್ದಾರೆ, ಹೀಗಾಗಿ ಮಾತಿನಲ್ಲಿ ಏನನ್ನೂ ಹೇಳುವುದಿಲ್ಲ. ಕೆಲಸದ ಮೂಲಕ ಮಾಡಿ ತೋರಿಸಬೇಕು ಎಂದು ಅಂದುಕೊಂಡಿದ್ದೇನೆ” ಎಂದಿದ್ದರು.

ಕಾಂತಾರ ಶೂಟಿಂಗ್‌ಗಾಗಿ ಕುಂದಾಪುರದ ಕರಾವಳಿ ಪ್ರದೇಶದಲ್ಲಿ ಅದ್ಧೂರಿ ಸೆಟ್​ ನಿರ್ಮಿಸಲಾಗಿದೆ. 200×200 ಅಡಿಯ ಬೃಹತ್ ಸೆಟ್ ನಿರ್ಮಿಸಲಾಗಿದೆ. ಚಿತ್ರದ ಹೆಚ್ಚಿನ ಭಾಗವನ್ನು ಕಾಡಿನಲ್ಲಿ ಚಿತ್ರೀಕರಿಸಲಿದ್ದರೆ, ಬೃಹತ್ ಸೆಟ್ ಡಬ್ಬಿಂಗ್ ಸ್ಟುಡಿಯೊ ಮತ್ತು ಎಡಿಟಿಂಗ್ ಸೂಟ್ ಒಳಗೊಂಡಿರುತ್ತದೆ ಎಂದು ವರದಿಯಾಗಿದೆ. ಮುಂಬೈ, ಬೆಂಗಳೂರು ಮತ್ತು ಹೈದರಾಬಾದ್‌ನಂತಹ ಸ್ಥಳಗಳಿಂದ ಸೆಟ್ ನಿರ್ಮಾಣಕ್ಕಾಗಿ 600 ನುರಿತ ಬಡಗಿಗಳು ಮತ್ತು ಸ್ಟಂಟ್ ಮಾಸ್ಟರ್‌ಗಳನ್ನು ನೇಮಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ರಾಮೋಜಿ ಫಿಲ್ಮ್‌ ಸಿಟಿಯ ನಂತರ ದೇಶದಲ್ಲೇ ಅತಿ ದೊಡ್ಡ ಸೆಟ್‌ ಇದಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Kantara Movie: ರಾಮೋಜಿ ಫಿಲ್ಮ್‌ ಸಿಟಿ ಮೀರಿಸುವಂತಿದೆಯಂತೆ ʻಕಾಂತಾರ ಚಾಪ್ಟರ್​ 1ʼ ಸೆಟ್‌!

Continue Reading

ವಿದೇಶ

Ebrahim Raisi: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ

Ebrahim Raisi: ಅಜರ್‌ಬೈಜಾನ್‌ನಲ್ಲಿ ಇಬ್ರಾಹಿಂ ರೈಸಿ ಅವರಿದ್ದ ಹೆಲಿಕಾಪ್ಟರ್‌ ಪತನಗೊಂಡಿದೆ ಎಂಬುದಾಗಿ ಸ್ಥಳೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಇರಾನ್‌ ಮಾಧ್ಯಮ ಸಂಸ್ಥೆಯೊಂದು ವರದಿ ಮಾಡಿದೆ. ಆದರೆ, ರಾಯಿಟರ್ಸ್‌ ಪ್ರಕಾರ, ಹೆಲಿಕಾಪ್ಟರ್‌ ಹಾರ್ಡ್‌ ಲ್ಯಾಂಡಿಂಗ್‌ ಆಗಿದೆ. ರಕ್ಷಣಾ ಸಿಬ್ಬಂದಿಯು ಸ್ಥಳಕ್ಕೆ ತೆರಳಿದ್ದಾರೆ. ಇನ್ನೂ ಪರಿಶೀಲನೆ ನಡೆಯುತ್ತಿದೆ ಎಂಬುದಾಗಿ ವರದಿ ಪ್ರಕಟಿಸಿದೆ.

VISTARANEWS.COM


on

Ebrahim Raisi
Koo

ಬಾಕು: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ (Helicopter) ಅಜರ್‌ಬೈಜಾನ್‌ನಲ್ಲಿ (Azerbaijan) ಪತನಗೊಂಡಿದೆ ಎಂಬುದಾಗಿ ತಿಳಿದುಬಂದಿದೆ. ಹೆಲಿಕಾಪ್ಟರ್‌ ಪತನವಾಗಿದೆ ಎಂಬುದಾಗಿ ಕೆಲ ಮಾಧ್ಯಮಗಳು ವರದಿ ಮಾಡಿದರೆ, ಇನ್ನೂ ಕೆಲವು ಮಾಧ್ಯಮಗಳು ಹಾರ್ಡ್‌ ಲ್ಯಾಂಡಿಂಗ್‌ ಆಗಿದೆ ಎಂದು ವರದಿ ಮಾಡಿವೆ. ಹಾಗಾಗಿ, ಹೆಲಿಕಾಪ್ಟರ್‌ ಪತನವಾಗಿದೆಯೋ, ತುರ್ತು ಲ್ಯಾಂಡ್‌ ಆಗಿದೆಯೋ ಎಂಬ ಮಾಹಿತಿ ನಿಖರವಾಗಿ ಲಭ್ಯವಾಗಿಲ್ಲ. ಆದಾಗ್ಯೂ, ಭದ್ರತಾ ಸಿಬ್ಬಂದಿಯು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ ಎಂದು ತಿಳಿದುಬಂದಿದೆ.

ಅಜರ್‌ಬೈಜಾನ್‌ನಲ್ಲಿ ಇಬ್ರಾಹಿಂ ರೈಸಿ ಅವರಿದ್ದ ಹೆಲಿಕಾಪ್ಟರ್‌ ಪತನಗೊಂಡಿದೆ ಎಂಬುದಾಗಿ ಸ್ಥಳೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಇರಾನ್‌ ಮಾಧ್ಯಮ ಸಂಸ್ಥೆಯೊಂದು ವರದಿ ಮಾಡಿದೆ. ಆದರೆ, ರಾಯಿಟರ್ಸ್‌ ಪ್ರಕಾರ, ಹೆಲಿಕಾಪ್ಟರ್‌ ಹಾರ್ಡ್‌ ಲ್ಯಾಂಡಿಂಗ್‌ ಆಗಿದೆ. ರಕ್ಷಣಾ ಸಿಬ್ಬಂದಿಯು ಸ್ಥಳಕ್ಕೆ ತೆರಳಿದ್ದಾರೆ. ಇನ್ನೂ ಪರಿಶೀಲನೆ ನಡೆಯುತ್ತಿದೆ ಎಂಬುದಾಗಿ ವರದಿ ಪ್ರಕಟಿಸಿದೆ. ಆದಾಗ್ಯೂ, ಇರಾನ್‌ ಸರ್ಕಾರದಿಂದ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಇರಾನ್‌ ಬೆಂಗಾವಲು ಪಡೆ ಇದ್ದ ಹೆಲಿಕಾಪ್ಟರ್‌ ಪತನಗೊಂಡಿದೆ. ಅದರಲ್ಲಿ, ಇಬ್ರಾಹಿಂ ರೈಸಿ ಅವರು ಇದ್ದರೋ, ಇಲ್ಲವೋ ಎಂಬುದರ ಮಾಹಿತಿ ನಿಖರವಾಗಿಲ್ಲ. ರಕ್ಷಣಾ ಸಿಬ್ಬಂದಿಯು ಸ್ಥಳಕ್ಕೆ ತೆರಳುತ್ತಿದೆ ಎಂಬುದಾಗಿ ಸಚಿವರೊಬ್ಬರು ತಿಳಿಸಿದ್ದಾರೆ ಎಂಬುದಾಗಿ ಬಿಬಿಸಿ ವರದಿ ತಿಳಿಸಿದೆ. ಅಜರ್‌ಬೈಜಾನ್‌ ಸಮೀಪದ ಜೋಲ್ಫಾ ಎಂಬ ಪ್ರದೇಶದಲ್ಲಿ ಪತನಗೊಂಡಿರುವುದಾಗಿ ವರದಿಗಳು ಮಾಹಿತಿ ನೀಡಿವೆ. ಪತನಗೊಂಡಿರುವ ಹೆಲಿಕಾಪ್ಟರ್‌ ಪತ್ತೆಹಚ್ಚಲು ಸಿಬ್ಬಂದಿಯು ಹರಸಾಹಸ ಪಡುತ್ತಿದೆ ಎಂದು ಕೂಡ ತಿಳಿದುಬಂದಿದೆ.

ಅರಸ್‌ ನದಿಗೆ ಇರಾನ್‌ ಹಾಗೂ ಅಜರ್‌ಬೈಜಾನ್‌ ಸೇರಿ ಅಣೆಕಟ್ಟು ಕಟ್ಟಿದ್ದು, ಅದನ್ನು ಉದ್ಘಾಟಿಸಲು ಇಬ್ರಾಹಿಂ ರೈಸಿ ಅವರು ಅಜರ್‌ಬೈಜಾನ್‌ಗೆ ತೆರಳಿದ್ದರು. ಇದೇ ವೇಳೆ ಹೆಲಿಕಾಪ್ಟರ್‌ ಪತನಗೊಂಡಿದೆ ಎಂದು ತಿಳಿದುಬಂದಿದೆ. ಹೆಲಿಕಾಪ್ಟರ್‌ ಪತನದಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎನ್ನಲಾಗಿದೆ. ಮತ್ತೊಂದೆಡೆ, ತುರ್ತು ಭೂಸ್ಪರ್ಶ ಮಾಡಿದ ಕಾರಣದಿಂದಾಗಿ ಯಾರಿಗೂ ಅಪಾಯವಾಗಿಲ್ಲ ಎಂದು ಮತ್ತೊಂದಿಷ್ಟು ಮೂಲಗಳು ತಿಳಿಸಿವೆ.

ಇದನ್ನೂ ಓದಿ: US sanction: ಇರಾನ್‌ ಜೊತೆ ವ್ಯಾಪಾರ ಒಪ್ಪಂದ ಬೇಡ; ಭಾರತಕ್ಕೆ ನಿರ್ಬಂಧದ ಎಚ್ಚರಿಕೆ ಕೊಟ್ಟ ಅಮೆರಿಕ

Continue Reading

ಕ್ರೀಡೆ

PBKS vs SRH: ಸೋಲಿನ ಮೂಲಕ ಅಭಿಯಾನ ಮುಗಿಸಿದ ಪಂಜಾಬ್​; ಹೈದರಾಬಾದ್​​ಗೆ 4 ವಿಕೆಟ್​ ಜಯ

PBKS vs SRH: ಈಗಾಗಲೇ ಪ್ಲೇ ಆಫ್​ ಪ್ರವೇಶಿಸಿರುವ ಹೈದರಾಬಾದ್​ ಈ ಗೆಲುವಿನೊಂದಿಗೆ 17 ಅಂಕದೊಂದಿಗೆ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ರಾತ್ರಿ ನಡೆಯುವ ಪಂದ್ಯದಲ್ಲಿ ರಾಜಸ್ಥಾನ್​ ತಂಡ ಕೆಕೆಆರ್​ ವಿರುದ್ಧ ಗೆದ್ದರೆ ಹೈದರಾಬಾದ್​ ಮೂರನೇ ಸ್ಥಾನಕ್ಕೆ ಕುಸಿದು ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಆಡಲಿದೆ. ​

VISTARANEWS.COM


on

PBKS vs SRH
Koo

ಹೈದರಾಬಾದ್​: ಎಡಗೈ ಬ್ಯಾಟರ್​ ಅಭಿಷೇಕ್​​ ಶರ್ಮ(66) ಬಾರಿಸಿದ ಸೊಗಸಾದ ಅರ್ಧಶತಕದ ನೆರವಿನಿಂದ ಸನ್​ರೈರ್ಸ್​ ಹೈದರಾಬಾದ್​(PBKS vs SRH) ತಂಡ ತವರಿನಲ್ಲೇ ನಡೆದ ತನ್ನ ಕೊನೆಯ ಲೀಗ್​ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್​ ವಿರುದ್ಧ 4 ವಿಕೆಟ್ ಅಂತರದ ಗೆಲುವು ಸಾಧಿಸಿದೆ.​ ಈಗಾಗಲೇ ಪ್ಲೇ ಆಫ್​ ಪ್ರವೇಶಿಸಿರುವ ಹೈದರಾಬಾದ್​ ಈ ಗೆಲುವಿನೊಂದಿಗೆ 17 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ರಾತ್ರಿ ನಡೆಯುವ ಪಂದ್ಯದಲ್ಲಿ ರಾಜಸ್ಥಾನ್​ ತಂಡ ಕೆಕೆಆರ್​ ವಿರುದ್ಧ ಗೆದ್ದರೆ ಹೈದರಾಬಾದ್​ ಮೂರನೇ ಸ್ಥಾನಕ್ಕೆ ಕುಸಿದು ಎಲಿಮಿನೇಟರ್​​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಆಡಲಿದೆ. ​ಎಲಿಮಿನೇಟರ್ ಪಂದ್ಯ ಬುಧವಾರ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

ಬ್ಯಾಟಿಂಗ್​ ಸ್ನೇಹಿಯಾದ ಉಪ್ಪಳದ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಪಂಜಾಬ್​ ಕಿಂಗ್ಸ್​ 5 ವಿಕೆಟ್​ಗೆ 214 ರನ್​ ಬಾರಿಸಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿತು. ಆದರೆ ಈ ಮೊತ್ತ ಹೈದರಾಬಾದ್​ ತಂಡವನ್ನು ಕಟ್ಟಿ ಹಾಕಲು ಸಾಕಾಗಲಿಲ್ಲ. ಗುರಿ ಬೆನ್ನಟ್ಟಿದ ಸನ್​ರೈಸರ್ಸ್​ ಹೈದರಾಬಾದ್ 19.1​ ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 215 ಬಾರಿಸಿ ತವರಿನಲ್ಲಿ ವಿಜಯ ಪತಾಕೆ ಹಾರಿಸಿತು. ಉಭಯ ತಂಡಗಳ ಜಿದ್ದಾಜಿದ್ದಿನ ಬ್ಯಾಟಿಂಗ್​ ಪರಾಕ್ರಮದಿಂದಾಗಿ ಈ ಪಂದ್ಯದಲ್ಲಿ ಒಟ್ಟು 429 ರನ್​ ದಾಖಲಾಯಿತು.

ಹೆಡ್​ ಕ್ಲೀನ್​ ಬೌಲ್ಡ್​


ಗುರಿ ಬೆನ್ನಟ್ಟಿದ ಹೈದರಾಬಾದ್​ ತಂಡ ಸ್ಫೋಟಕ ಬ್ಯಾಟಿಂಗ್​ಗೆ ಹೆಸರುವಾಸಿಯಾದ ಟ್ರಾವಿಸ್​ ಹೆಟ್​​ ಅವರನ್ನು ಮೊದಲ ಎಸೆತದಲ್ಲೇ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಯಿತು. ಹೆಡ್​​ ಅವರು ಅರ್ಶದೀಪ್​ ಸಿಂಗ್​ ಅವರ ಮೊದಲ ಎಸೆತಲ್ಲೇ ಕ್ಲೀನ್​ ಬೌಲ್ಡ್​ ಆದರು. ಹೆಡ್​ ವಿಕೆಟ್​ ಬಿದ್ದರೂ ಕೂಡ ವಿಚಲಿತರಾಗದ ಅಭಿಷೇಕ್​ ಶರ್ಮ ಬಿರುಸಿನ ಬ್ಯಾಟಿಂಗ್​ ಮೂಲಕ ಪಂಜಾಬ್​ ಬೌಲರ್​ಗಳ ಮೇಲೆರಗಿ ಸತತ ಸಿಕ್ಸರ್ ಮತ್ತು ಬೌಂಡರಿ ಬಾರಿಸಿ ತಮ್ಮ ಹಾಗೂ ತಂಡದ ಮೊತ್ತವನ್ನು ಹಿಗ್ಗಿಸಿದರು.

​ಅಭಿಷೇಕ್ ಶರ್ಮ ಅವರಿಗೆ ಮತ್ತೊಂದು ತುದಿಯಲ್ಲಿ ರಾಹುಲ್​ ತ್ರಿಪಾಠಿ ಕೂಡ ಉತ್ತಮ ಸಾಥ್​ ನೀಡಿದರು. ಉಭಯ ಆಟಗಾರರು ಸೇರಿಕೊಂಡು ದ್ವಿತೀಯ ವಿಕೆಟ್​ಗೆ 72 ರನ್​ ಬಾರಿಸಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಈ ಮೊತ್ತವನ್ನು ಈ ಜೋಡಿ ಕೇವಲ 4.6 ಓವರ್​ನಲ್ಲಿ ಬಾರಿಸಿದರು. ತಿಪಾಠಿ 18 ಎಸೆತ ಎದುರಿಸಿ 33(4 ಬೌಂಡರಿ, 2 ಸಿಕ್ಸರ್​) ಬಾರಿಸಿದರು.

ಮತ್ತೆ ಸಿಡಿದ ಅಭಿಷೇಕ್ ಶರ್ಮ

ಮೂರನೇ ವಿಕೆಟ್​ಗೂ ಅಭಿಷೇಕ್​, ನಿತೀಶ್​ ರೆಡ್ಡಿ ಜತೆಗೂಡಿ ಮತ್ತೊಂದು ಅರ್ಧಶತಕದ ಜತೆಯಾಟ ನಡೆಸಿ ಗಮನಸೆಳೆದರು. ಸಿಕ್ಸರ್​ಗಳ ಸುರಿಮಳೆ ಸುರಿಸಿದ ಅಭಿಷೇಕ್​ ಈ ಬಾರಿಯ ಟೂರ್ನಿಯಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರನಾಗಿ ಹೊರಮೊಮ್ಮಿದರು. ಇದೇ ವೇಳೆ 37 ಸಿಕ್ಸರ್​ ಬಾರಿಸಿರುವ ವಿರಾಟ್​ ಕೊಹ್ಲಿಯ ದಾಖಲೆ ಪತನಗೊಂಡಿತು. ಒಟ್ಟು 28 ಎಸೆತ ಎದುರಿಸಿದ ಅಭಿಷೇಕ್​ ಬರೋಬ್ಬರಿ 6 ಸಿಕ್ಸರ್​ ಮತ್ತು 5 ಬೌಂಡರಿ ಸಿಡಿಸಿ 66 ರನ್​ ಬಾರಿಸಿದರು. 51 ಎಸೆತಗಳಲ್ಲಿ ಅರ್ಧಶತಕ ಪೂರ್ತಿಗೊಳಿಸಿದರು. ಇದು ಈ ಆವೃತ್ತಿಯ 3ನೇ ಅರ್ಧಶತಕವಾಗಿದೆ.

ಇದನ್ನೂ ಓದಿ RCB vs CSK: ಆನ್​ಲೈನ್​ ವೀಕ್ಷಣೆಯಲ್ಲೂ ದಾಖಲೆ ಬರೆದ ಆರ್​ಸಿಬಿ-ಚೆನ್ನೈ ಪಂದ್ಯ

ಅಭಿಷೇಕ್​ ವಿಕೆಟ್​ ಪತನದ ಬಳಿಕ ಉತ್ತಮವಾಗಿ ಆಡುತ್ತಿದ್ದ ನಿತೀಶ್​ ರೆಡ್ಡಿ 37 ರನ್​ಗೆ ವಿಕೆಟ್​ ಕಳೆದುಕೊಂಡರು. ಬಳಿಕ ಬಂದ ಶಾಬಾಜ್​ ಅಹ್ಮದ್​ 3 ರನ್​ಗೆ ವಿಕೆಟ್​ ಕೈಚೆಲ್ಲಿದರು. ಈ ವೇಳೆ ಹೈದರಾಬಾದ್​ ಕೊಂಚ ಆತಂಕಕ್ಕೆ ಸಿಲುಕಿತು. ಇದೇ ವೇಳೆ ಹೆನ್ರಿಚ್​ ಕ್ಲಾಸೆನ್​ ಜವಾಬ್ದಾರಿಯು ಬ್ಯಾಟಿಂಗ್​ ನಡೆಸಿ 42 ರನ್​ ಬಾರಿಸಿದರು. ಅಂತಿಮವಾಗಿ ಅಬ್ದುಲ್​ ಸಮದ್​(11*) ಮತ್ತು ಸನ್ವೀರ್ ಸಿಂಗ್(6*) ಅಜೇಯ ರನ್​ ಬಾರಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು. ಪಂಜಾಬ್​ ಬ್ಯಾಟರ್​ಗಳು ಬೃಹತ್​ ಮೊತ್ತ ಪೇರಿಸಿದರೂ ಬೌಲರ್​ಗಳಿಂದ ನಿರೀಕ್ಷಿತ ಪ್ರದರ್ಶನ ಕಂಡು ಬಾರದ ಕಾರಣ ಸೋಲಿಗೆ ತುತ್ತಾದರು.

ಪ್ರಭಾಸಿಮ್ರಾನ್ ಅರ್ಧಶತಕ ವ್ಯರ್ಥ


ಇದಕ್ಕೂ ಮುನ್ನ ಬ್ಯಾಟಿಂಗ್​ ನಡೆಸಿದ ಪಂಜಾಬ್​ ಕೂಡ ಅತ್ಯಂತ ಜೋಶ್​ನಲ್ಲಿ ಬ್ಯಾಟಿಂಗ್ ನಡೆಸಿತು. ಆರಂಭಿಕ ಆಟಗಾರರಾದ ​ಅಥರ್ವ ತೈಡೆ ಮತ್ತು ಪ್ರಭಾಸಿಮ್ರಾನ್ ಸಿಂಗ್ 10 ಸರಾಸರಿಯಲ್ಲಿ ರನ್​ ಗಳಿಸಿ ಮೊದಲ ವಿಕೆಟ್​ಗೆ 97 ರನ್​ ಒಟ್ಟುಗೂಡಿಸಿದರು. ಅಥರ್ವ ತೈಡೆ 46 ರನ್​ ಬಾರಿಸಿದರೆ, ಪ್ರಭಾಸಿಮ್ರಾನ್ 71 ರನ್(7 ಬೌಂಡರಿ, 4 ಸಿಕ್ಸರ್​)​ ಬಾರಿಸಿದರು. ಆ ಬಳಿಕ ಬಂದ ರೀಲಿ ರೋಸೊ ಕೂಡ ಆಕ್ರಮಣಕಾರಿ ಬ್ಯಾಟಿಂಗ್​ ನಡೆಸಿ 4 ಸಿಕ್ಸರ್​ ಮತ್ತು 3 ಬೌಂಡರಿ ನೆರವಿನಿಂದ 47 ರನ್​ ಗಳಿಸಿ ಔಟಾದರು. ಈ ಮೂಲಕ ಕೇವಲ 3 ರನ್​ ಅಂತರದಿಂದ ಅರ್ಧಶಕ ವಂಚಿತರಾದರು.

5 ನೇ ಕ್ರಮಾಂಕದಲ್ಲಿ ಆಡಲಿಳಿದ ಜಿತೇಶ್​ ಶರ್ಮ ಕೇವಲ 15 ಎಸೆತಗಳಿಂದ ಅಜೇಯ 32 ರನ್​ ಬಾರಿಸಿ ತಂಡದ ಬೃಹತ್​ ಮೊತಕ್ಕೆ ಕಾರಣರಾದರು. ಹೈದರಾಬಾದ್​ ಪರ ಎಡಗೈ ವೇಗಿ ಟಿ ನಟರಾಜ್​ 33 ರನ್​ಗೆ 2 ವಿಕೆಟ್​ ಉರುಳಿಸಿದರು. ನಾಯಕ ಪ್ಯಾಟ್​ ಕಮಿನ್ಸ್​ ಮತ್ತು ವಿಜಯಕಾಂತ್ ವ್ಯಾಸಕಾಂತ್ ತಲಾ ಒಂದು ವಿಕೆಟ್​ ಪಡೆದರು.

Continue Reading
Advertisement
ಕರ್ನಾಟಕ37 seconds ago

Bengaluru Rain: ಬೆಂಗಳೂರಿನಲ್ಲಿ ಮುಂದುವರಿದ ಮಳೆ ಆರ್ಭಟ; ರಸ್ತೆಗಳು ಜಲಾವೃತ, ಹಲವೆಡೆ ಸಂಚಾರ ಅಸ್ತವ್ಯಸ್ತ

Kantara Movie
ಸಿನಿಮಾ6 mins ago

Kantara Movie: ದಾಖಲೆ ಮೊತ್ತಕ್ಕೆ ಕಾಂತಾರ ಸಿನಿಮಾದ ಡಿಜಿಟಲ್‌ ರೈಟ್ಸ್‌ ಮಾರಾಟ; ಅಬ್ಬಾ ಇಷ್ಟು ಕೋಟಿನಾ!

SRH vs PBKS
ಕ್ರೀಡೆ39 mins ago

SRH vs PBKS: ಒಂದು ದಿನ ಕಳೆಯುವ ಮುನ್ನವೇ ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್

Harish Poonja
ಕರ್ನಾಟಕ1 hour ago

Harish Poonja: ಪೊಲೀಸರಿಗೆ ಧಮ್ಕಿ; ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

Ebrahim Raisi
ವಿದೇಶ1 hour ago

Ebrahim Raisi: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ

PBKS vs SRH
ಕ್ರೀಡೆ2 hours ago

PBKS vs SRH: ಸೋಲಿನ ಮೂಲಕ ಅಭಿಯಾನ ಮುಗಿಸಿದ ಪಂಜಾಬ್​; ಹೈದರಾಬಾದ್​​ಗೆ 4 ವಿಕೆಟ್​ ಜಯ

West Nile fever Health department on alert
ಆರೋಗ್ಯ2 hours ago

West Nile fever : ಕೇರಳದಲ್ಲಿ ವೆಸ್ಟ್‌ ನೈಲ್ ಭೀತಿ; ಮೈಸೂರು ಗಡಿಭಾಗದಲ್ಲಿ ಆರೋಗ್ಯ ಇಲಾಖೆ ಅಲರ್ಟ್‌

Great Khali
ದೇಶ2 hours ago

Great Khali: ಜಗತ್ತಿನ ಕುಬ್ಜ ಮಹಿಳೆಯನ್ನು ಮಗುವಿನಂತೆ ಎತ್ತಿ ಆಡಿಸಿದ ಗ್ರೇಟ್‌ ಖಲಿ; ಜನ ಕೆಂಡವಾಗಿದ್ದು ಏಕೆ?

Kalki 2898 AD
ಪ್ರಮುಖ ಸುದ್ದಿ2 hours ago

Kalki 2898 AD: ಮೇ 22ಕ್ಕೆ ಭೈರವನ ನಂಬಿಕಸ್ಥ ಗೆಳೆಯ ಬುಜ್ಜಿಯ ಅನಾವರಣ; ಕಲ್ಕಿ ಚಿತ್ರದ 5ನೇ ಸೂಪರ್ ಸ್ಟಾರ್ ಯಾರು?

RCB vs CSK
ಕ್ರೀಡೆ3 hours ago

RCB vs CSK: ಆನ್​ಲೈನ್​ ವೀಕ್ಷಣೆಯಲ್ಲೂ ದಾಖಲೆ ಬರೆದ ಆರ್​ಸಿಬಿ-ಚೆನ್ನೈ ಪಂದ್ಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ7 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌