Viral News : ಕಾಲು ಮುರಿದುಕೊಂಡಿರುವ ಈ ಗೊಂಬೆಯ ಬೆಲೆ ಬರೋಬ್ಬರಿ 54 ಲಕ್ಷವಂತೆ! ಅಂಥದ್ದೇನಿದೆ ಇದರಲ್ಲಿ? - Vistara News

ವೈರಲ್ ನ್ಯೂಸ್

Viral News : ಕಾಲು ಮುರಿದುಕೊಂಡಿರುವ ಈ ಗೊಂಬೆಯ ಬೆಲೆ ಬರೋಬ್ಬರಿ 54 ಲಕ್ಷವಂತೆ! ಅಂಥದ್ದೇನಿದೆ ಇದರಲ್ಲಿ?

ಬ್ರಿಟನ್‌ನಲ್ಲಿ ಮುರಿದ ಗೊಂಬೆಯೊಂದು ಬರೋಬ್ಬರಿ 54 ಲಕ್ಷ ರೂ.ಗೆ (Viral News) ಹರಾಜಾಗಿದೆ. ಅದರ ವಿಶೇಷತೆ ಬಗ್ಗೆ ಇಲ್ಲಿದೆ ಮಾಹಿತಿ.

VISTARANEWS.COM


on

Damaged doll sells for over 54 lakh rs
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್‌: ನಿಮ್ಮ ಮನೆಯಲ್ಲಿ ಹಳೆಯ ಕಾಲದ ಸಾಮಗ್ರಿಗಳು ಇವೆಯಲ್ಲವೇ? ಅವುಗಳಲ್ಲಿ ಯಾವುದಾದರೂ ಗೊಂಬೆಯಿದೆಯೇ? ಇದ್ದರೆ ಅದನ್ನು ನೀವೇನು ಮಾಡುವಿರಿ? ಗುಜುರಿ ಎಂದು ಎಸೆಯುವಿರಿ. ಇಲ್ಲವೇ ಸುಮ್ಮನೆ ಕಸಕ್ಕೆ ಹಾಕಿಬಿಡುವಿರಿ ಅಲ್ಲವೇ? ಆದರೆ ಈ ಒಂದು ಗೊಂಬೆಯ ಕಥೆ (Viral News) ಕೇಳಿದ ಮೇಲೆ ನೀವು ಗೊಂಬೆಯನ್ನು ಎಸೆಯುವುದಕ್ಕೆ ಹಿಂದೆ ಮುಂದೆ ಯೋಚಿಸುತ್ತೀರಿ!

ಬ್ರಿಟನ್‌ನಲ್ಲಿ ಇಂಥದ್ದೊಂದು ಹಳೆಯ ಗೊಂಬೆಯನ್ನು ಬರೋಬ್ಬರಿ 54 ಲಕ್ಷ ರೂಪಾಯಿಗೆ ಮಾರಾಟ ಮಾಡಲಾಗಿದೆ. ಹೌದು. ಬ್ರಿಟನ್‌ನ ನಿವಾಸಿಯೊಬ್ಬರ ಅಜ್ಜಿಯ ಮನೆಯಲ್ಲಿ ಗೊಂಬೆಯೊಂದು ಸಿಕ್ಕಿತಂತೆ. ಚಿಕ್ಕ ಬಾಲಕನ ರೀತಿಯಲ್ಲಿ ಮಾಡಲಾಗಿದ್ದ ಆ ಗೊಂಬೆಗೆ ಶರ್ಟ್‌, ಚಡ್ಡಿ ಮತ್ತು ತಲೆಗೆ ಸ್ಕಾರ್ಫ್‌ ಹಾಕಲಾಗಿತ್ತು. ಅಜ್ಜಿಯ ಕಾಲದ್ದೆಂದು ಎತ್ತಿಟ್ಟುಕೊಳ್ಳಲಾಗಿದ್ದ ಗೊಂಬೆಯ ಜತೆ ಮನೆಯಲ್ಲಿ ಸಾಕಿದ್ದ ನಾಯಿ ಆಟವಾಡಿ, ಗೊಂಬೆಯ ಕಾಲಿನ ಪಾದವನ್ನು ಮುರಿದುಹಾಕಿದೆ. ಹಾಗೆಯೇ ಬಲಗೈನ ತೋರುಬೆರಳನ್ನೂ ಮುರಿದಿದೆ.

ಇದನ್ನೂ ಓದಿ: Viral News: 2019ರ ವಿಶ್ವಕಪ್‌ ಘಟನೆ ನೆನೆದ ಅಂಬಾಟಿ ರಾಯುಡು
ಈ ಮುರಿದ ಗೊಂಬೆಯನ್ನು ಏನು ಮಾಡಬಹುದು ಎಂದು ಯೋಚಿಸಿದ ಮನೆಯ ಮಾಲೀಕ ಅದನ್ನು ಹರಾಜಿಗೆ ಇಟ್ಟಿದ್ದಾನೆ. ಪುರಾತನ ಕಾಲದ ಗೊಂಬೆ ಎನ್ನುವ ಕಾರಣಕ್ಕೆ ಅಲ್ಪಸ್ವಲ್ಪ ಹಣಕ್ಕೆ ಗೊಂಬೆ ಹರಾಜಾಗಬಹುದು ಎಂದು ಆತ ಎಂದುಕೊಂಡಿದ್ದ. ಆದರೆ ಅಮೆರಿಕದ ವ್ಯಕ್ತಿಯೊಬ್ಬರು ಈ ಗೊಂಬೆಗೆ ಬರೋಬ್ಬರಿ 54 ಲಕ್ಷ ರೂ. ಕೊಟ್ಟಿದ್ದಾರೆ.


ಅಂದ ಹಾಗೆ ಈ ಗೊಂಬೆಯ ವಿಶೇಷತೆ ವಿಚಾರಕ್ಕೆ ಬಂದರೆ ಇದನ್ನು 1910ರಲ್ಲಿ ಸಿದ್ಧಮಾಡಲಾಗಿತ್ತು. ಇದು ಒಟ್ಟು 22 ಇಂಚಿನಷ್ಟು ಉದ್ದವಿದೆ. ಆಗಿನ ಕಾಲದಲ್ಲಿ ಮಕ್ಕಳು ಇರುವ ರೀತಿಯಲ್ಲೇ ಗೊಂಬೆಗಳನ್ನು ಮಾಡಿಕೊಡಲಾಗುತ್ತಿತ್ತಂತೆ. 20-30 ವರ್ಷಗಳಿಗೊಮ್ಮೆ ಇಂತಹ ಪುರಾತನ ಗೊಂಬೆ ಸಿಕ್ಕು, ಹರಾಜಿಗೆ ಬರುತ್ತವೆಯಂತೆ. ಅದೇ ಕಾರಣಕ್ಕೆ ಅಷ್ಟೊಂದು ದುಬಾರಿ ದರಕ್ಕೆ ಈ ಗೊಂಬೆ ಹರಾಜಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ವೈರಲ್ ನ್ಯೂಸ್

Viral Video: ಶೇ. 100ರಷ್ಟು ಆದಾಯ ತೆರಿಗೆಯನ್ನು ಹೀಗೂ ಉಳಿಸಬಹುದಂತೆ ನೋಡಿ!

ಕೇಂದ್ರ ಬಜೆಟ್ 2024 ಅನ್ನು ಮಂಡಿಸಿದ ಬಳಿಕ ಶ್ರೀನಿಧಿ ಹಂದೆ ಎಂಬುವರು ವಿಡಂಬನಾತ್ಮಕ ವಿಡಿಯೋವನ್ನು (Viral Video) ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದರಲ್ಲಿ ಅವರು ಸಂಬಳ ಪಡೆಯುವ ವ್ಯಕ್ತಿಗಳು ತಮ್ಮ ಉದ್ಯೋಗದಾತರಿಗೆ ಹುಲ್ಲು ಬೆಳೆದು ಮಾರಾಟ ಮಾಡುವ ಮೂಲಕ ಶೇ. 100ರಷ್ಟು ಆದಾಯ ತೆರಿಗೆಯನ್ನು ಹೇಗೆ ಉಳಿಸಬಹುದು ಎಂಬುದನ್ನು ವಿವರಿಸಿದ್ದಾರೆ.

VISTARANEWS.COM


on

By

Viral Video
Koo

ಸಂಬಳ ಪಡೆಯುವ ತೆರಿಗೆದಾರರಿಗೆ ತಮ್ಮ ಆದಾಯದಲ್ಲಿ ಶೇ. 100ರಷ್ಟು ಉಳಿತಾಯ ಮಾಡುವ ದಾರಿಯನ್ನು ಕನ್ನಡಿಗನೊಬ್ಬ ಸರಳವಾಗಿ ತೋರಿಸಿದ್ದಾನೆ. ಆದಾಯ ತೆರಿಗೆ ಉಳಿಸುವ (save income tax) ಬಗ್ಗೆ “ಹಣಕಾಸಿನ ಸಲಹೆ” (financial advice) ನೀಡಿದ ಶ್ರೀನಿಧಿ ಹಂದೆ ಅವರ ವಿಡಿಯೋ ಇನ್‌‌ಸ್ಟಾಗ್ರಾಮ್ ನಲ್ಲಿ ( Instagram) ಹಂಚಿಕೊಳ್ಳಲಾಗಿದ್ದು, ಇದು ಭಾರಿ ವೈರಲ್ (Viral Video) ಆಗಿದೆ.

ಜುಲೈ 23ರಂದು ಕೇಂದ್ರ ಬಜೆಟ್ 2024 ಅನ್ನು ಮಂಡಿಸಿದ ಬಳಿಕ ಶ್ರೀನಿಧಿ ಹಂದೆ ಅವರು ವಿಡಂಬನಾತ್ಮಕ ವಿಡಿಯೋವನ್ನು ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದರಲ್ಲಿ ಅವರು ಸಂಬಳ ಪಡೆಯುವ ವ್ಯಕ್ತಿಗಳು ತಮ್ಮ ಉದ್ಯೋಗದಾತರಿಗೆ ಹುಲ್ಲು ಬೆಳೆದು ಮಾರಾಟ ಮಾಡುವ ಮೂಲಕ ಶೇ. 100ರಷ್ಟು ಆದಾಯ ತೆರಿಗೆಯನ್ನು ಹೇಗೆ ಉಳಿಸಬಹುದು ಎಂಬುದನ್ನು ವಿವರಿಸಿದ್ದಾರೆ.

ಈ ವಿಡಿಯೋ ಇನ್ ಸ್ಟಾಗ್ರಾಮ್ ನಲ್ಲಿ 2 ಮಿಲಿಯನ್ ವೀಕ್ಷಣೆಗಳನ್ನು ಗಳಿಸಿದೆ. ಹಂದೆ ಅವರ ವಿಡಿಯೋವನ್ನು ಚಾರ್ಟರ್ಡ್ ಅಕೌಂಟೆಂಟ್ ಅಖಿಲ್ ಪಚೋರಿ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. ಇದು ಎಕ್ಸ್ ನಲ್ಲಿಯೂ ವೇಗವಾಗಿ ವೈರಲ್ ಆಗುತ್ತಿದ್ದು, ಸಾಕಷ್ಟು ಮಂದಿ ಬಳಕೆದಾರರು ಇದಕ್ಕೆ ನಗುವಿನ ಇಮೋಜಿ ಕಳುಹಿಸಿದ್ದಾರೆ.

ಈ ವಿಡಿಯೋದಲ್ಲಿ ಶ್ರೀನಿಧಿ ಹಂದೆ ಅವರು ಹೀಗೆ ಹೇಳಿದ್ದಾರೆ. ಆದಾಯ ತೆರಿಗೆಯಲ್ಲಿ ಶೇ. 100ರಷ್ಟು ಉಳಿಸುವುದು ಹೇಗೆ ಎಂದು ನಾನು ನಿಮಗೆ ಹೇಳುತ್ತೇನೆ. ಇದು ಅತ್ಯಂತ ಸುಲಭ, ಕಾನೂನು ಮತ್ತು ಸರಳ ಪ್ರಕ್ರಿಯೆಯ ಮೂರು ಹಂತಗಳನ್ನು ಒಳಗೊಂಡಿದೆ.

ಮೊದಲನೇ ಹಂತದಲ್ಲಿ ನೀವು ನಿಮ್ಮ ಮನೆಯಲ್ಲಿ ಅಥವಾ ಬಾಲ್ಕನಿ ಅಥವಾ ನಿಮ್ಮ ಟೆರೇಸ್ ನಲ್ಲಿ ಹುಲ್ಲು ಬೆಳೆಯಬೇಕು. ಇದು ತುಂಬಾ ಕಾನೂನು ಪ್ರಕ್ರಿಯೆಯಾಗಿದೆ. ಈಗ ಹೆಚ್ ಆರ್ ಗೆ ಹೋಗಿ ನಿಮಗೆ ಯಾವುದೇ ಸಂಬಳ ಬೇಡ ಎಂದು ಹೇಳಿ. ಅವರು ನಿಮ್ಮ ಸಂಬಳಕ್ಕೆ ತಕ್ಕುದಾಗಿ ಕಂಪೆನಿಯು 50,000 ರೂ. ನ ಹುಲ್ಲು ಖರೀದಿಸಬೇಕು ಎಂದು ಹೇಳಿ. ಕಾನೂನು ಪ್ರಕ್ರಿಯೆಯಂತೆ ಅವರು ಖರೀದಿ ಮಾಡಿದ ಹುಲ್ಲಿಗೆ ನಿಮಗೆ ಹಣ ಪಾವತಿ ಮಾಡಿದರೆ ನೀವು ಆದಾಯ ತೆರಿಗೆಯಿಂದ ಮುಕ್ತರಾಗುತ್ತೀರಿ.

ಸಂಬಳದಿಂದ ಬರುವ ಆದಾಯ ಶೂನ್ಯವಾಗುತ್ತದೆ ಮತ್ತು ಭಾರತದಲ್ಲಿ ತೆರಿಗೆಗೆ ಒಳಪಡದ ಕೃಷಿ ಉತ್ಪನ್ನಗಳ ಮಾರಾಟದಿಂದ ಬರುವ ಆದಾಯವನ್ನು ನೀವು ಹೊಂದಿರುತ್ತೀರಿ. ಈ ಮೂಲಕ ಶೇ. 100ರಷ್ಟು ತೆರಿಗೆಯನ್ನು ಉಳಿಸಬಹುದು. ಆದಾಯ ತೆರಿಗೆ, ಟಿಡಿಎಸ್ ಅಥವಾ ಹೂಡಿಕೆಯ ಬಗ್ಗೆ ಚಿಂತಿಸಬೇಕಾಗಿಲ್ಲ.


ಭಾರತೀಯರು ನಿಜವಾಗಿಯೂ ಎಲ್ಲದಕ್ಕೂ ಒಂದಲ್ಲ ಒಂದು ತಂತ್ರ ಹೊಂದಿರುತ್ತಾರೆ ಎಂಬುದು ಈ ವಿಡಿಯೋ ವೈರಲ್ ಆದ ಅನಂತರ ಕಾಮೆಂಟ್‌ಗಳ ವಿಭಾಗದಲ್ಲಿ ಸಾಕಷ್ಟು ಮಂದಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Viral Video: ಅಪಘಾತವಾದ ಲಾರಿಯಿಂದ ಜ್ಯೂಸ್‌ ಪ್ಯಾಕ್‌ ಎತ್ತಿಕೊಂಡ ಐಫೋನ್‌ಧಾರಿ! ದೊಡ್ಡವರ ಸಣ್ಣತನ ಎಂದ ನೆಟ್ಟಿಗರು

ಕೇಂದ್ರ ಬಜೆಟ್ 2024 ರಲ್ಲಿ ಆದಾಯ ತೆರಿಗೆ ನಿಯಮಗಳ ಅಡಿಯಲ್ಲಿ 75,000 ಮಾಸಿಕ ಆದಾಯ ಪಡೆಯುವವರಿಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡಲಾಗಿದೆ. ಇದು ಈ ಹಿಂದೆ ೫೦,೦೦೦ ರೂ. ಆಗಿತ್ತು. ರೀ ಬಾರಿಯ ಬಜೆಟ್ ನಲ್ಲಿ 25,000 ರೂ. ನಷ್ಟು ಹೆಚ್ಚಿಸಲಾಗಿದೆ.

Continue Reading

ವೈರಲ್ ನ್ಯೂಸ್

Viral News: ರೈಲ್ವೇ ಪೊಲೀಸ್‌ ಸಿಬ್ಬಂದಿಯ ಹೊಡೆತಕ್ಕೆ ಯುವಕನ ಕರುಳೇ ಹೊರಬಂತು! ಶಾಕಿಂಗ್‌ Video ಇಲ್ಲಿದೆ

Viral News: ಬಿಹಾರದ ಸೀತಮರ್ಹಿ ಜಿಲ್ಲೆಯ ಪುಪ್ರಿ ಪ್ರದೇಶದ ಜನಕ್‌ಪುರ ರೋಡ್ ರೈಲ್ವೆ ನಿಲ್ದಾಣದಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಕರ್ಮಭೂಮಿ ರೈಲಿನಲ್ಲಿದ್ದ ಯುವಕನ ಮೇಲೆ ಜಿಆರ್‌ಪಿ ಸಿಬ್ಬಂದಿ ಹಲ್ಲೆ ನಡೆಸಿದ್ದು, ಕರುಳು ಕಿತ್ತು ಬಂದಿದೆ. ಗಾಯಗೊಂಡ ವ್ಯಕ್ತಿಯನ್ನು ಗಧಾ ಗ್ರಾಮದ ಮೊಹಮ್ಮದ್ ಗುಲಾಬ್ ಅವರ ಪುತ್ರ 25 ವರ್ಷದ ಮೊಹಮ್ಮದ್ ಫುರ್ಕಾನ್ ಎಂದು ಗುರುತಿಸಲಾಗಿದೆ. ಘಟನೆಯ ನಂತರ ಮೊಹಮ್ಮದ್ ಫುರ್ಕಾನ್‌ನನ್ನು ಪುಪ್ರಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

VISTARANEWS.COM


on

Viral News
Koo

ಪಾಟ್ನಾ: ಬಿಹಾರದ ಸೀತಮರ್ಹಿ ಜಿಲ್ಲೆಯ ಪುಪ್ರಿ ಪ್ರದೇಶದ ಜನಕ್‌ಪುರ ರೋಡ್ ರೈಲ್ವೆ ನಿಲ್ದಾಣ (Janakpur Road railway station)ದಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಕರ್ಮಭೂಮಿ ರೈಲಿನಲ್ಲಿದ್ದ ಯುವಕನ ಮೇಲೆ ಜಿಆರ್‌ಪಿ (Government Railway Police) ಸಿಬ್ಬಂದಿ ಹಲ್ಲೆ ನಡೆಸಿದ್ದು, ಕರುಳು ಕಿತ್ತು ಬಂದಿದೆ. ಗಂಭೀರವಾಗಿ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ಸಾಗಿಸುವ ವಿಡಿಯೊ ಸದ್ಯ ವೈರಲ್‌ ಆಗಿದ್ದು, ಜಿಆರ್‌ಪಿ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ (Viral News).

ಗಾಯಗೊಂಡ ವ್ಯಕ್ತಿಯನ್ನು ಗಧಾ ಗ್ರಾಮದ ಮೊಹಮ್ಮದ್ ಗುಲಾಬ್ ಅವರ ಪುತ್ರ 25 ವರ್ಷದ ಮೊಹಮ್ಮದ್ ಫುರ್ಕಾನ್ ಎಂದು ಗುರುತಿಸಲಾಗಿದೆ. ಘಟನೆಯ ನಂತರ ಮೊಹಮ್ಮದ್ ಫುರ್ಕಾನ್‌ನನ್ನು ಪುಪ್ರಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

ವಿಡಿಯೊದಲ್ಲಿ ಏನಿದೆ?

ಇಬ್ಬರು ವ್ಯಕ್ತಿಗಳು ಗಂಭೀರ ಗಾಯಗೊಂಡ ಫುರ್ಕಾನ್ ಅನ್ನು ಹೊತ್ತೊಯ್ಯುತ್ತಿರುವುದು ಮತ್ತು ಜನರ ಗುಂಪು ಅವರನ್ನು ಹಿಂಬಾಲಿಸುತ್ತಿರುವುದು ವಿಡಿಯೊದಲ್ಲಿ ಕಂಡು ಬಂದಿದೆ. ಜತೆಗೆ “ಪೊಲೀಸರು ಅವನನ್ನು ಎಷ್ಟು ಕೆಟ್ಟದಾಗಿ ಥಳಿಸಿದ್ದಾರೆ ಎನ್ನುವುದನ್ನು ನೋಡಿ” ಎಂದು ವ್ಯಕ್ತಿಯೊಬ್ಬರು ಹೇಳುತ್ತಿರುವುದು ಕೇಳಬಹುದು. ಮೊಹಮ್ಮದ್ ಫುರ್ಕಾನ್‌ ಕರ್ಮಭೂಮಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮುಂಬೈಗೆ ಹೋಗುತ್ತಿದ್ದ ತನ್ನ ಚಿಕ್ಕಮ್ಮನನ್ನು ಬೀಳ್ಕೊಡಲು ಆಗಮಿಸಿದ್ದ ವೇಳೆ ಹಲ್ಲೆ ನಡೆದಿದೆ ಎನ್ನಲಾಗಿದೆ.

ಘಟನೆ ವಿವರ

ಶಸ್ತ್ರಚಿಕಿತ್ಸೆಗೆ ಒಳಗಾದ ಮೊಹಮ್ಮದ್ ಫುರ್ಕಾನ್‌ನ ಹೊಟ್ಟೆಯ ಮೇಲೆ ಜಿಆರ್‌ಪಿ ಸಿಬ್ಬಂದಿ ಕೋಲಿನಿಂದ ಹಲವು ಬಾರಿ ಹೊಡೆದಿದ್ದಾನೆ. ಇದರಿಂದಾಗಿ ಹೊಟ್ಟೆ ಒಡೆದು ಕರುಳು ಹೊರಗೆ ಬಂದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ʼʼನನ್ನ ಕಿಬ್ಬೊಟ್ಟೆಯ ಶಸ್ತ್ರಚಿಕಿತ್ಸೆ ನಡೆದಿದೆ. ನೋವಾಗುತ್ತಿದೆ ಎಂದು ಪದೇ ಪದೆ ಹೇಳುತ್ತಿದ್ದರೂ ಜಿಆರ್‌ಪಿ ಸಿಬ್ಬಂದಿ ಕೋಲಿನಿಂದ ಹೊಡೆಯುತ್ತಲೇ ಇದ್ದರುʼʼ ಎಂದು ಮೊಹಮ್ಮದ್ ಫುರ್ಕಾನ್‌ ತಿಳಿಸಿದ್ದಾನೆ.

ಹೊರಬಂದ ಕರುಳು

ಫುರ್ಕಾನ್‌ ಸುಮಾರು ಎರಡು ವರ್ಷಗಳ ಹಿಂದೆ ಕರುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ. ಶಸ್ತ್ರಚಿಕಿತ್ಸೆಗೊಳಗಾದ ಭಾಗದ ಮೇಲೆ ಹಲ್ಲೆ ನಡೆಸಿದ ಪರಿಣಾಮ ಆತನ ಹೊಟ್ಟೆ ಎಡಭಾಗ ತೆರೆದುಕೊಂಡಿತು ಮತ್ತು ಅದರಿಂದ ಕರುಳು ಹೊರಬಂದಿದೆ ಎಂದು ಮೂಲಗಳು ತಿಳಿಸಿವೆ.

ಜಿಆರ್‌ಪಿ ಸಿಬ್ಬಂದಿ ವಿರುದ್ಧ ಆಕ್ರೋಶ

ಘಟನೆ ಬೆಳಕಿಗೆ ಬಂದ ಬಳಿಕ ಜಿಆರ್‌ಪಿ ಸಿಬ್ಬಂದಿಯ ಅನಾಗರಿಕ ವರ್ತನೆಯಿಂದ ಕೋಪಗೊಂಡ ನಿಲ್ದಾಣದಲ್ಲಿದ್ದ ಪ್ರಯಾಣಿಕರು ಜನಕ್‌ಪುರ ರಸ್ತೆ ನಿಲ್ದಾಣವನ್ನು ಧ್ವಂಸಗೊಳಿಸಿದ್ದಾರೆ. ಉದ್ರಿಕ್ತ ಗುಂಪು ಸ್ಟೇಷನ್‌ ಸೂಪರಿಟೆಂಡೆಂಟ್‌ ಕಚೇರಿಯ ಮುಖ್ಯ ದ್ವಾರದ ಕಬ್ಬಿಣದ ಗ್ರಿಲ್ ಮತ್ತು ಗಾಜಿನ ಗೇಟ್ ಮುರಿದು ಒಳಗೆ ಪ್ರವೇಶಿಸಿ ಗಲಾಟೆ ಮಾಡಿದೆ. ಜಿಆರ್‌ಪಿ ಸಿಬ್ಬಂದಿ ಹಲ್ಲೆ ನಡೆಸಿದ್ದು ಯಾಕೆ ಎನ್ನುವುದು ತಿಳಿದು ಬಂದಿಲ್ಲ. ಸೀಟುಗಳಿಗಾಗಿ ಪ್ರಯಾಣಿಕರ ನಡುವೆ ಜಗಳ ಕಂಡು ಬಂದ ಹಿನ್ನೆಲೆಯಲ್ಲಿ ಈ ಹಲ್ಲೆ ನಡೆಸಲಾಗಿದೆ ಎಂದು ಕೆಲವು ಮೂಲಗಳು ತಿಳಿಸಿವೆ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ. ಸದ್ಯ ಆರೋಪಿಗಳೆಂದು ಗುರುತಿಸಲಾದ ಪ್ರಣಿ ದಯಾನಂದ್ ಪಾಸ್ವಾನ್ ಮತ್ತು ಗೋರೆಲಾಲ್ ಚೌಕಿ ಎಂದಿಬ್ಬರನ್ನು ಅಮಾನತುಗೊಳಿಸಲಾಗಿದ್ದು, ಜಗಳದಲ್ಲಿ ಭಾಗಿಯಾಗಿದ್ದ ಹಲವು ಶಂಕಿತರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

Continue Reading

ವೈರಲ್ ನ್ಯೂಸ್

Viral News: ಮದುವೆಯೇ ಆಗಿಲ್ಲ ಎಂದ ಚಾಮರಾಜನಗರ ಸಂಸದ ನಿರ್ದೇಶಕಿ ಹಣೆಗೆ ಕುಂಕುಮ ಇಟ್ಟರು!

Viral News: ಮೈಸೂರಿನ ಚಾಮುಂಡೇಶ್ವರಿ ತಾಯಿ (Mysore Chamundeshwari Temple) ಗರ್ಭಗುಡಿಯಲ್ಲೇ ಈ ಘಟನೆ ನಡೆದಿದೆ. ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಸವಿತಾ ಅವರ ಹಣೆಗೆ ಚಾಮರಾಜನಗರ ಸಂಸದ ಸುನೀಲ್‌ ಬೋಸ್ (Sunil Bose) ಕುಂಕುಮ ಇಟ್ಟಿದ್ದಾರೆ. ಆಷಾಢ ಮಾಸದ ಮೂರನೇ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಇವರಿಬ್ಬರೂ ಜತೆಯಾಗಿ ಬಂದಿದ್ದರು.

VISTARANEWS.COM


on

sunil bose savitha viral news
Koo

ಮೈಸೂರು: ಚಾಮರಾಜನಗರ ಸಂಸದರು (Chamarajanagar MP) ದೇವಾಲಯದ ಗರ್ಭಗುಡಿಯಲ್ಲಿ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಹಣೆಗೆ ಕುಂಕುಮ ಇಟ್ಟ ಘಟನೆ ನಡೆದಿದೆ. ಇದು ವಿಶೇಷ ಸುದ್ದಿಯಾಗುವ ಸಂಗತಿಯೇನೂ ಅಲ್ಲ. ಆದರೆ, ತನಗೆ ಮದುವೆಯೇ ಆಗಿಲ್ಲ ಎಂದು ಸಂಸದರು ಹೇಳಿಕೊಂಡಿದ್ದರು. ಹೀಗಾಗಿ ಇದೀಗ ಸುದ್ದಿಯಾಗಿದೆ. ಇವರಿಬ್ಬರ ಫೋಟೋ ಕೂಡ ವೈರಲ್‌ (Viral News) ಆಗಿದೆ.

ಮೈಸೂರಿನ ಚಾಮುಂಡೇಶ್ವರಿ ತಾಯಿ (Mysore Chamundeshwari Temple) ಗರ್ಭಗುಡಿಯಲ್ಲೇ ಈ ಘಟನೆ ನಡೆದಿದೆ. ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕಿ ಸವಿತಾ ಅವರ ಹಣೆಗೆ ಚಾಮರಾಜನಗರ ಸಂಸದ ಸುನೀಲ್‌ ಬೋಸ್ (Sunil Bose) ಕುಂಕುಮ ಇಟ್ಟಿದ್ದಾರೆ. ಆಷಾಢ ಮಾಸದ ಮೂರನೇ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಇವರಿಬ್ಬರೂ ಜತೆಯಾಗಿ ಬಂದಿದ್ದರು.

ಈ ವೇಳೆ ಗರ್ಭಗುಡಿಯಲ್ಲಿ ಇವರು ವಿಶೇಷ ಪೂಜೆ ಮಾಡಿಸಿದ್ದಾರೆ. ಪೂಜೆ ನೆರವೇರಿಸುವ ವೇಳೆ ಬೆಂಬಲಿಗರ ಸಮ್ಮುಖದಲ್ಲೇ ಸವಿತಾ ಹಣೆಗೆ ಸುನೀಲ್‌ ಬೋಸ್ ಕುಂಕುಮ ಇಟ್ಟರು. ಸಾರ್ವಜನಿಕ ವಲಯದಲ್ಲಿ ಸುನೀಲ್‌ ಬೋಸ್ ನಡೆ ಇದೀಗ ಚರ್ಚೆಗೆ ಕಾರಣವಾಗಿದೆ.

ಯಾಕೆಂದರೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ, ತಮಗೆ ಮದುವೆ ಆಗಿಲ್ಲ ಎಂದು ಸುನೀಲ್‌ ಬೋಸ್ ಅಫಿಡೆವಿಟ್ ಸಲ್ಲಿಸಿದ್ದರು. ಈ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರನ್ನೂ ಚಾಮರಾಜನಗರ ಬಿಜೆಪಿ ಸದಸ್ಯರು ನೀಡಿದ್ದರು. ಸುನೀಲ್‌ ಬೋಸ್ ಹಾಗೂ ಸವಿತಾ ಜತೆಯಲ್ಲಿ ಇರುವ ಫೋಟೋಗಳನ್ನು ನೀಡಿ ದೂರು ಕೊಟ್ಟಿದ್ದರು. ಸುನೀಲ್‌ ಬೋಸ್‌ಗೆ ಮದುವೆಯಾಗಿದೆ, ಆದರೆ ಅಫಿಡವಿಟ್‌ನಲ್ಲಿ ಸುಳ್ಳು ಹೇಳಿದ್ದಾರೆ ಎಂದು ದೂರಿದ್ದರು.

ʼಇದೀಗ, ಚಾಮುಂಡೇಶ್ವರಿ ಗರ್ಭಗುಡಿಯಲ್ಲಿ ನಡೆದದ್ದು ಸುಳ್ಳು ಅಲ್ಲ ತಾನೆ?ʼ ಎಂದು ಬಿಜೆಪಿ ಸದಸ್ಯರು ಪ್ರಶ್ನಿಸಿದ್ದಾರೆ. ʼಮದುವೆ ಆಗಿದ್ದರೆ, ಆಗಿದೆ ಎಂದು ಹೇಳಲಿ. ಇದರಲ್ಲಿ ಅಡಗಿಸಿ ಇಡುವ ಮುಜುಗರದ ಸಂಗತಿ ಏನಿದೆ?ʼ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.

ಕೇಂದ್ರ ಸಚಿವರಿಗೆ ಅವಮಾನ, ಎಚ್‌ಡಿಕೆ ಬಂದರೂ ತೆಗೆಯದ ಪ್ರವಾಸಿ ಮಂದಿರ ಬೀಗ

ಮೈಸೂರು: ಕೇಂದ್ರ ಸಚಿವರೇ ವಿಶ್ರಾಂತಿಗಾಗಿ ಬಂದರೂ ಬಾಗಿಲು ಬೀಗ ತೆಗೆಯದೆ ಅಧಿಕಾರಿಗಳು ಅವಮಾನ ಮಾಡಿ ಕಳಿಸಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ. ಕೇಂದ್ರ ಸಚಿವ, ಜೆಡಿಎಸ್‌ ಮುಖಂಡ ಎಚ್‌ಡಿ ಕುಮಾರಸ್ವಾಮಿ ಅವರು ಇಂದು ನಂಜನಗೂಡು ಪ್ರವಾಸದಲ್ಲಿದ್ದು, ಕೆಲ ನಿಮಿಗಳ ವಿಶ್ರಾಂತಿಗಾಗಿ ನಂಜನಗೂಡು ಪ್ರವಾಸಿ ಮಂದಿರಕ್ಕೆ ತೆರಳಿದ್ದರು.

ಕೇಂದ್ರ ಸಚಿವರ ಭೇಟಿ ವಿಚಾರವನ್ನು ಪ್ರವಾಸಿ ಮಂದಿರದ ಅಧಿಕಾರಿಗಳಿಗೆ ಸಾಕಷ್ಟು ಮೊದಲೇ ತಿಳಿಸಲಾಗಿತ್ತು. ಈ ಬಗ್ಗೆ ಪ್ರವಾಸ ಪಟ್ಟಿಯನ್ನೂ ಸಚಿವಾಲಯದ ಅಧಿಕಾರಿಗಳು ಬಿಡುಗಡೆ ಮಾಡಿದ್ದರು. ಆದರೆ ಎಚ್‌ಡಿಕೆ ತೆರಳುವ ಹೊತ್ತಿಗೆ ಪ್ರವಾಸಿ ಮಂದಿರದ ಬಾಗಿಲಿಗೆ ಬೀಗ ಹಾಕಲಾಗಿತ್ತು. ಯಾರೂ ಅಧಿಕಾರಿಗಳು ಸ್ಥಳದಲ್ಲಿರಲಿಲ್ಲ.

10 ನಿಮಿಷಕ್ಕೂ ಅಧಿಕ ಸಮಯ ಕಾದರೂ ಯಾವುದೇ ಸಿಬ್ಬಂದಿ ಬಾಗಿಲು ತೆಗೆಯಲು ಬರಲಿಲ್ಲ. ಈ ಸಂದರ್ಭದಲ್ಲಿ ಎಚ್‌ಡಿಕೆ ಕಾರಿನಲ್ಲೇ ಕುಳಿತಿದ್ದರು. ಜೊತೆಗೆ ಮಾಜಿ ಸಚಿವ ಸಾ.ರಾ.ಮಹೇಶ್ ಅವರೂ ಇದ್ದರು. ಕಾದು ಸುಸ್ತಾದ ಎಚ್‌ಡಿ ಕುಮಾರಸ್ವಾಮಿ ಬಳಿಕ ಅಲ್ಲಿಂದ ತೆರಳಿದರು.

ಈ ಬಗ್ಗೆ ಸಾ.ರಾ ಮಹೇಶ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವರು ಬಂದರೂ ಬಾಗಿಲು ತೆರೆಯದೆ ಇರುವುದರ ಹಿಂದೆ ರಾಜ್ಯ ಸರಕಾರದ ಚಿತಾವಣೆ ಇದೆ. ಅವಮಾನ ಮಾಡುವ ಉದ್ದೇಶಕ್ಕಾಗಿಯೇ ಹೀಗೆ ಮಾಡಲಾಗಿದೆ ಎಂದು ಜೆಡಿಎಸ್‌ ಮುಖಂಡರು ಆರೋಪಿಸಿದ್ದಾರೆ.

ಇದನ್ನೂ ಓದಿ: Political Rivalry : ರಾಜಕೀಯ ವೈಷಮ್ಯ; ಗುತ್ತಿಗೆ ನೌಕರಿಯಿಂದ JDS ಬೆಂಬಲಿಗನ ಹೊರಗಟ್ಟಿದ ಸುನಿಲ್‌ ಬೋಸ್‌?

Continue Reading

ದೇಶ

Rahul Gandhi: ನೀಟ್‌ನಲ್ಲಿ ‘ಎಷ್ಟು ವೋಟ್‌’ ಪಡೆದಿರಿ ಎಂದು ವಿದ್ಯಾರ್ಥಿಗಳಿಗೆ ಕೇಳಿದ ರಾಹುಲ್‌ ಗಾಂಧಿ; Video ವೈರಲ್

Rahul Gandhi: ರಾಹುಲ್‌ ಗಾಂಧಿ ಅವರು ಕಾರಿನಲ್ಲಿ ತೆರಳುವಾಗ ಮಾರ್ಗ ಮಧ್ಯೆ ನೀಟ್‌ ಅಭ್ಯರ್ಥಿಗಳ ಜತೆ ಮಾತುಕತೆ ನಡೆಸಿ, ಅವರ ಸಮಸ್ಯೆ, ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಕೇಳಿದ್ದಾರೆ. ಇದೇ ವೇಳೆ, ಪರೀಕ್ಷೆಯಲ್ಲಿ ಎಷ್ಟು ವೋಟ್‌ ಪಡೆದಿದ್ದೀರಿ ಎಂಬುದಾಗಿ ಬಾಯಿತಪ್ಪಿ ಕೇಳಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

Rahul Gandhi
Koo

ನವದೆಹಲಿ: ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗೆ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET UG 2024) ‌ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (NTA) ಛೀಮಾರಿ ಹಾಕಿದೆ. ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ. ಇದರ ಬೆನ್ನಲ್ಲೇ, ನೀಟ್‌ ಅಭ್ಯರ್ಥಿಗಳಿಗೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಕೇಳಿದ ಪ್ರಶ್ನೆ ಈಗ ಭಾರಿ ವೈರಲ್‌ ಆಗಿದೆ.

ಹೌದು, ರಾಹುಲ್‌ ಗಾಂಧಿ ಅವರು ಕಾರಿನಲ್ಲಿ ತೆರಳುವಾಗ ಮಾರ್ಗ ಮಧ್ಯೆ ನೀಟ್‌ ಅಭ್ಯರ್ಥಿಗಳ ಜತೆ ಮಾತುಕತೆ ನಡೆಸಿ, ಅವರ ಸಮಸ್ಯೆ, ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಕೇಳಿದ್ದಾರೆ. “ನೀಟ್‌ನಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆಗಿದೆಯೇ” ಎಂಬುದಾಗಿ ರಾಹುಲ್‌ ಗಾಂಧಿ ಅವರು ವಿದ್ಯಾರ್ಥಿಗಳಿಗೆ ಕೇಳಿದ್ದಾರೆ. ಇದೇ ವೇಳೆ ವಿದ್ಯಾರ್ಥಿಗಳು ಹೌದು ಎಂದಿದ್ದಾರೆ. ಆಗ, ರಾಹುಲ್‌ ಗಾಂಧಿ ಅವರು, “ಪರೀಕ್ಷೆಯಲ್ಲಿ ಎಷ್ಟು ವೋಟು ಗಳಿಸಿದ್ದೀರಿ” ಎಂಬುದಾಗಿ ಪ್ರಶ್ನಿಸಿದ್ದಾರೆ. ಎಷ್ಟು ಅಂಕ ಪಡೆದಿದ್ದೀರಿ ಎಂಬುದಾಗಿ ಹೇಳುವ ಬದಲು ಅವರು ಎಷ್ಟು ವೋಟು ಗಳಿಸಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ವೈರಲ್‌ ಆಗುತ್ತಲೇ ಜನ ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ. “ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗಳಿಸಿದ 240 ಎಂಬುದಾಗಿ ವಿದ್ಯಾರ್ಥಿ ಹೇಳಬೇಕಿತ್ತು” ಎಂದು ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ. “ಚುನಾವಣೆ ಮುಗಿದರೂ ರಾಹುಲ್‌ ಗಾಂಧಿ ಅವರು ಇನ್ನೂ ಅದರಿಂದ ಹೊರಬಂದಿಲ್ಲ” ಎಂಬುದಾಗಿ ಮತ್ತೊಬ್ಬರು ಕಾಲೆಳೆದಿದ್ದಾರೆ. ಹೀಗೆ ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ವಿಡಿಯೊಗೆ ಕಮೆಂಟ್‌ ಮಾಡಿದ್ದಾರೆ.

ಏನಿದು ನೀಟ್‌ ಪ್ರಕರಣ?

ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 05 ಮೇ 2024 ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು 13 ಭಾಷೆಗಳಲ್ಲಿ (ಅಸ್ಸಾಮಿ, ಬಂಗಾಳಿ, ಇಂಗ್ಲಿಷ್, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು, ಮತ್ತು ಉರ್ದು) ನಡೆಸಲಾಗಿತ್ತು. ನೀಟ್‌ ಪರೀಕ್ಷೆಗೆ 24,06,079 ಅಭ್ಯರ್ಥಿಗಳ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 23,33,297 ಪರೀಕ್ಷೆ ಹಾಜರಾಗಿದ್ದು, 72782 ಗೈರು ಹಾಜರಾಗಿದ್ದರು. ಇದರಲ್ಲಿ ಬಾಲಕರು 10,29,154 ಹಾಗೂ ಬಾಲಕಿಯರು 13,76,831, ತೃತೀಯ ಲಿಂಗಿಗಳು 18 ಮಂದಿ ಪರೀಕ್ಷೆಯನ್ನು ಬರೆದಿದ್ದರು.

ನೀಟ್‌ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್ಸ್‌ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್‌ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್‌ ಮಾರ್ಕ್ಸ್‌ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್‌ ಮೈಂಡ್‌ ಅಮಿತ್‌ ಆನಂದ್‌ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Rahul Gandhi: ಚಮ್ಮಾರನ ಅಂಗಡಿಗೆ ದಿಢೀರ್‌ ಭೇಟಿ ನೀಡಿ, ಚಪ್ಪಲಿ ಹೊಲಿದ ರಾಹುಲ್‌ ಗಾಂಧಿ; Video ಇಲ್ಲಿದೆ

Continue Reading
Advertisement
Viral Video
ವೈರಲ್ ನ್ಯೂಸ್54 seconds ago

Viral Video: ಶೇ. 100ರಷ್ಟು ಆದಾಯ ತೆರಿಗೆಯನ್ನು ಹೀಗೂ ಉಳಿಸಬಹುದಂತೆ ನೋಡಿ!

Union Budget 2024
ಕರ್ನಾಟಕ5 mins ago

Union Budget 2024: ವಾರ್ಷಿಕ 7.5 ಲಕ್ಷ ವೇತನ ಪಡೆಯುವವರಿಗೆ ಯಾವುದೇ ತೆರಿಗೆ ಇಲ್ಲ: ನಿರ್ಮಲಾ ಸೀತಾರಾಮನ್

Paris Olympics Badminton
ಕ್ರೀಡೆ6 mins ago

Paris Olympics Badminton: ಗೆಲುವಿನ ಶುಭಾರಂಭ ಮಾಡಿದ ಪಿ.ವಿ. ಸಿಂಧು

Health Tips
ಪ್ರಮುಖ ಸುದ್ದಿ6 mins ago

Health Tips : ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಈ 5 ವಿಧದ ಸೂಪ್ ಸೇವಿಸಿ

Naveen Sajju debuts movie titled first look out
ಸಿನಿಮಾ18 mins ago

Naveen Sajju: ಗುಡ್‌ ನ್ಯೂಸ್‌ ಕೊಟ್ಟ ʻಚುಕ್ಕಿತಾರೆ ಸೀರಿಯಲ್‌ʼ ನಟ ನವೀನ್‌ ಸಜ್ಜು: ಶುಭ ಕೋರಿದ ಫ್ಯಾನ್ಸ್‌!

Assault case
ಚಿಕ್ಕೋಡಿ26 mins ago

Assault Case : ಠಾಣೆಗೆ ಬಂದ ಮಹಿಳೆಗೆ ಜಾಡಿಸಿ ಒದ್ದ ಖಡಕಲಾಟ ಪಿಎಸ್‌ಐ!

Mann Ki Baat
ದೇಶ29 mins ago

Mann Ki Baat: ಪ್ಯಾರಿಸ್ ಒಲಿಂಪಿಕ್ಸ್​: ಭಾರತೀಯ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವಂತೆ ʼಮನ್​ ಕಿ ಬಾತ್​ʼನಲ್ಲಿ ಮೋದಿ ಕರೆ

valmiki corporation scam satyanarayana varma
ಕ್ರೈಂ31 mins ago

Valmiki Corporation Scam: 10 ಕೆಜಿ ಚಿನ್ನದ ಗಟ್ಟಿ ಮನೆಯಲ್ಲಿಟ್ಟಿದ್ದ ವಾಲ್ಮೀಕಿ ನಿಗಮ ಹಗರಣದ ಆರೋಪಿ! ಇನ್ನೂ 5 ಕಿಲೋ ಗಾಯಬ್

ಕ್ರೀಡೆ36 mins ago

Paris Olympics boxing: ಎದುರಾಳಿಗೆ ಪವರ್​ ಪಂಚ್​ ನೀಡಿ ಪ್ರೀ ಕ್ವಾರ್ಟರ್‌ ಫೈನಲ್‌ಗೆ ಲಗ್ಗೆಯಿಟ್ಟ ಬಾಕ್ಸರ್ ಪ್ರೀತಿ ಪವಾರ್

Actor Darshan Ganesh Rao Visits Renukaswamy Family and spport In Chitradurga
ಸ್ಯಾಂಡಲ್ ವುಡ್60 mins ago

Actor Darshan: ರೇಣುಕಾಸ್ವಾಮಿ ಕುಟುಂಬಕ್ಕೆ ಹಣ ಸಹಾಯ ಮಾಡಿ, ದರ್ಶನ್‌ ಪರವಾಗಿ ವಾದ ಮಾಡಿದ ನಟ ಗಣೇಶ್ ರಾವ್!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 hour ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ19 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ24 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ1 day ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ2 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ2 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ2 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ2 days ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ3 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್3 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

ಟ್ರೆಂಡಿಂಗ್‌