Yoga Day 2023: ವೇದಪೂರ್ವ ಕಾಲದಲ್ಲೂ ಇತ್ತು ಯೋಗ! ಇಲ್ಲಿದೆ ಯೋಗದ ಇತಿಹಾಸ - Vistara News

ದೇಶ

Yoga Day 2023: ವೇದಪೂರ್ವ ಕಾಲದಲ್ಲೂ ಇತ್ತು ಯೋಗ! ಇಲ್ಲಿದೆ ಯೋಗದ ಇತಿಹಾಸ

ನಿಜಕ್ಕೂ ಯೋಗವೆಂದರೆ (Yoga Day 2023) ವಿಶ್ವದೊಂದಿಗೆ, ಸಮಷ್ಟಿಯ ಜೊತೆಗೆ ಒಂದಾಗಿ ಬದುಕುವುದು. ಆಗ ಮಾತ್ರ ದೇಹ, ಮನಸ್ಸು ಮತ್ತು ಚೈತನ್ಯಗಳು ಸಮನ್ವಯಗೊಳ್ಳುವುದಕ್ಕೆ, ಆರೋಗ್ಯ ಮತ್ತು ಆನಂದದಿಂದ ಬದುಕುವುದಕ್ಕೆ ಸಾಧ್ಯ.

VISTARANEWS.COM


on

Yoga Pose
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

-ಅಲಕಾ ಕೆ. ಮೈಸೂರು
ಯೋಗವೆಂಬುದನ್ನು (Yoga Day 2023) ಪ್ರತ್ಯೇಕವಾಗಿ ಗುರುತಿಸದೆಯೂ, ದೇಹ ಮತ್ತು ಮನಸ್ಸುಗಳು ಒಂದಾಗಿ ಸಾಗುವ ಬಗ್ಗೆ ಪ್ರಾಚೀನ ಜನರಿಗೆ ಸ್ಪಷ್ಟ ಕಲ್ಪನೆಯಿತ್ತು. ಆದರೆ ಇಂದು, ರೋಗಗಳ ಚಿಕಿತ್ಸೆಗೆ ಬಳಕೆಯಾಗುತ್ತಿರುವ, ದೈಹಿಕ ಕ್ಷಮತೆಯನ್ನು ಹೆಚ್ಚಿಸುವ ಮತ್ತು ಮಾನಸಿಕ ಒತ್ತಡ ಶಮನ ಮಾಡುವ ಮಾರ್ಗವಾಗಿ ಮಾತ್ರ ಯೋಗ ಉಪಯೋಗವಾಗುತ್ತಿದೆ. ನಿಜಕ್ಕೂ ಯೋಗವೆಂದರೆ ವಿಶ್ವದೊಂದಿಗೆ, ಸಮಷ್ಟಿಯ ಜೊತೆಗೆ ಒಂದಾಗಿ ಬದುಕುವುದು. ಆಗ ಮಾತ್ರ ದೇಹ, ಮನಸ್ಸು ಮತ್ತು ಚೈತನ್ಯಗಳು ಸಮನ್ವಯಗೊಳ್ಳುವುದಕ್ಕೆ, ಆರೋಗ್ಯ ಮತ್ತು ಆನಂದದಿಂದ ಬದುಕುವುದಕ್ಕೆ ಸಾಧ್ಯ. ಈ ಹಿನ್ನೆಲೆಯಲ್ಲಿ, ಜೂನ್‌ ತಿಂಗಳ ೨೧ರಂದು ವಿ‍ಶ್ವದೆಲ್ಲೆಡೆ ಆಚರಿಸಲಾಗುವ ಅಂತಾರಾಷ್ಟ್ರೀಯ ಯೋಗ ದಿನ ಮಹತ್ವ ಪಡೆದಿದೆ.

ʻಯೋಗʼ ಎನ್ನುತ್ತಿದ್ದಂತೆ ಅಭ್ಯಾಸಿಗಳು ಸಾಮಾನ್ಯರಿಗೆ ಅಸಾಧ್ಯವಾದ ಭಂಗಿಗಳಲ್ಲಿ ತಲ್ಲೀನರಾದ ಚಿತ್ರವೊಂದು ಕಣ್ಮುಂದೆ ಬರಬಹುದು. ಎಷ್ಟೋ ವರ್ಷಗಳ ಅಭ್ಯಾಸವೋ ಅಥವಾ ಬಿಲ್ಲಿನಂತೆ ಹೇಗೆಂದರೆ ಹಾಗೆ ಬಗ್ಗಿಸಬಲ್ಲಂಥ ದೇಹವೋ ಇದ್ದರೆ ಯೋಗ ಮಾಡಲಾದೀತು ಎಂಬ ಹಿಂಜರಿಕೆಯೂ ಮನಸ್ಸಿಗೆ ಬಂದರೆ ಅಚ್ಚರಿಯಿಲ್ಲ. ಹಾಗಿದ್ದೂ, ದೇಹ ಮತ್ತು ಮನಸ್ಸಿಗೆ ಪುನಶ್ಚೇತನ ನೀಡುವ ಕ್ರಿಯೆಯಾಗಿ ಎಲ್ಲೆಡೆ ಯೋಗ ಪ್ರಚಲಿತದಲ್ಲಿದೆ. ನಿತ್ಯದ ಬದುಕಿನಲ್ಲಿ ಕೆಲವೇ ನಿಮಿಷಗಳ ಯೋಗ ಮತ್ತು ಪ್ರಾಣಾಯಾಮದ ಅಭ್ಯಾಸದಿಂದ ಬದುಕು ಬದಲಾದ ಕಥೆಗಳು ಎಲ್ಲೆಡೆಯಿಂದ ಕೇಳುತ್ತವೆ. ಹಾಗಾದರೆ, ಯೋಗ ಎಂದರೆ ʻಮಾಡಲಸಾಧ್ಯʼ ಎಂಬಂಥ ಭಂಗಿಗಳಿಗಿಂತ ಮಿಗಿಲಾದ್ದು ಏನೋ ಇರಬೇಕಲ್ಲವೇ?

Yoga Day 2023: ಏನು ಯೋಗವೆಂದರೆ?

ಯೋಗವೆಂದರೆ ಆಸನಗಳು ಮಾತ್ರವಲ್ಲ; ಆದರೆ ಆಸನಗಳೂ ಹೌದು! ಕಳೆದ ಕೆಲವು ದಶಕಗಳಿಂದ ಇದ್ದಕ್ಕಿದ್ದಂತೆ ಏರಿರುವ, ಎಂದಾದರೂ ಇಳಿಯಬಹುದಾದ, ಜನಪ್ರಿಯ ಅಲೆಯಲ್ಲವಿದು. ಹಲವು ಸಹಸ್ರಮಾನಗಳಿಂದ ಚಾಲ್ತಿಯಲ್ಲಿರುವ ಸರಳ ಜೀವನಾಭ್ಯಾಸವಿದು. ಹಾಗೆಂದೇ ಜಗತ್ತಿನ ಮೂಲೆಮೂಲೆಗಳಿಂದ ಆಸಕ್ತರು ಈ ಅಭ್ಯಾಸದೆಡೆಗೆ ಉತ್ಸುಕರಾಗಿದ್ದಾರೆ. ಆದರೂ ಯೋಗವೆಂದರೇನು ಎಂಬುದು ಸ್ಪಷ್ಟವಾಗಲಿಲ್ಲ ಅಲ್ಲವೇ?

ಸಂಸ್ಕೃತದ ʻಯುಜ್‌ʼ ಎಂಬ ಪದದಿಂದ ಹುಟ್ಟಿದ್ದು ಯೋಗ. ಯುಜ್‌ ಎಂದರೆ ಸೇರುವುದು, ಜೊತೆಯಾಗುವುದು ಎಂದರ್ಥ. ಅಂದರೆ, ಭಂಗಿಗಳಲ್ಲಿ ಬಗ್ಗುವಾಗ ಮಂಡಿಯನ್ನು ಮೂಗು ತಾಗುವಂಥ ಭೌತಿಕ ಸೇರುವಿಕೆಯ ಬಗ್ಗೆ ಅಲ್ಲ ಇಲ್ಲಿ ಹೇಳುತ್ತಿರುವುದು! ದೇಹ ಮತ್ತು ಮನಸ್ಸುಗಳು ಒಂದಾಗುವ ಬಗ್ಗೆ, ಅಭ್ಯಾಸಿಗಳು ತಮ್ಮ ಸುತ್ತಲಿನ ಪರಿಸರದಲ್ಲಿ ಲೀನವಾಗುವ ಬಗ್ಗೆ, ವ್ಯಕ್ತಿಗತ ಪ್ರಜ್ಞೆಯು ವಿಶ್ವ ಪ್ರಜ್ಞೆಯಲ್ಲಿ ಸಂಗಮಿಸುವ ಬಗ್ಗೆ ಈ ʻಯುಜ್‌ʼ ಎನ್ನುವ ಶಬ್ದ ಸೂಚಿಸುತ್ತದೆ. ಇನ್ನೀಗ ಯೋಗದ ಇತಿಹಾಸವನ್ನು ಪರಾಂಬರಿಸೋಣ.

ವೇದಪೂರ್ವ ಮತ್ತು ವೇದಕಾಲ

ʻಯೋಗʼ ಎನ್ನುವ ಪದದ ಮೊದಲ ಉಲ್ಲೇಖ ದೊರೆಯುವುದು ಪ್ರಾಚೀನವಾದ ಋಗ್ವೇದದಲ್ಲಿ. ಇದು ದೊರೆತ ಕಾಲಘಟ್ಟ ಸುಮಾರು ಕ್ರಿಸ್ತಪೂರ್ವ 1500 ವರ್ಷಗಳು! ಕ್ರಿ.ಪೂ. 1200-1000 ಕಾಲದಲ್ಲಿ ಬರೆಯಲಾಗಿದ್ದೆಂದು ಹೇಳಲಾಗುವ ಅಥರ್ವ ವೇದದಲ್ಲಿ ಉಸಿರಾಟದ ಮೇಲೆ ಹಿಡಿತ ಹೊಂದುವ ಮಹತ್ವದ ಬಗ್ಗೆ ತಿಳಿಸಲಾಗಿದೆ. ಆದಾಗ್ಯೂ ಈ ಉಲ್ಲೇಖಗಳ ನಿಖರ ಕಾಲವನ್ನು ಹೇಳುವುದು ಕಷ್ಟ. ಏಕೆಂದರೆ, ಜ್ಞಾನ ಬಾಯಿಂದ ಬಾಯಿಗೆ ಹರಿದು ಬರುತ್ತಿದ್ದ ಅತ್ಯಂತ ಪ್ರಾಚೀನ ಕಾಲದಲ್ಲೇ ವೇದಗಳು ಮತ್ತು ಅದರಲ್ಲಿ ಯೋಗದ ಉಲ್ಲೇಖ ರಚನೆಗೊಂಡಿದ್ದಿರಬಹುದು. ಕ್ರಿ.ಪೂ. 2700 ಕಾಲದ ಸಿಂಧೂ ಕಣಿವೆಯ ನಾಗರಿಕತೆಯಲ್ಲೂ ಯೋಗ ಪ್ರಯೋಗದಲ್ಲಿದ್ದ ಚಿಹ್ನೆಗಳು ದೊರೆತಿವೆ ಎಂಬಲ್ಲಿಗೆ, ನಾಗರಿಕತೆಯ ಆರಂಭದಿಂದಲೇ ಯೋಗ ಅಭ್ಯಾಸದಲ್ಲಿದೆ ಎನ್ನಬಹುದು.

ಉಪನಿಷತ್ ಕಾಲ

ವೇದಗಳಲ್ಲಿ ಹುದುಗಿರುವ ಜ್ಞಾನವನ್ನು ಜಗತ್ತಿಗೆ ಸಾರಿದ ಉಪನಿಷದ್ಗಳು ರಚನೆಗೊಂಡ ಕಾಲವಿದು. ದೇಹ, ಮನಸ್ಸು ಮತ್ತು ಆತ್ಮದ ಕಾರ್ಯವೈಖರಿಯನ್ನು ಬೋಧನೆಯ ಮೂಲಕ ತಿಳಿಸುವ ಪ್ರಯತ್ನವನ್ನಿಲ್ಲಿ ಕಾಣಬಹುದು. ಜ್ಞಾನೋದಯದೆಡೆಗೆ ಸಾಗುವಲ್ಲಿ ಧ್ಯಾನ ಮತ್ತು ಮಂತ್ರೋಚ್ಚಾರಗಳು ಸಹಕಾರಿ ಎನ್ನುತ್ತವೆ. ಇರುವಂಥ 108 ಉಪನಿಷತ್ತುಗಳ ಪೈಕಿ 20 ಯೋಗ ಉಪನಿಷತ್ತುಗಳು. ಇದರಲ್ಲಿ ಹಲವು ರೀತಿಯ ಯೋಗಾಭ್ಯಾಸಗಳು, ಪ್ರಾಣಾಯಾಮ, ಶಬ್ದ, ಧ್ಯಾನ ಮುಂತಾದವುಗಳನ್ನು ವಿವರಿಸಲಾಗಿದೆ.

ಶಾಸ್ತ್ರೀಯ ಕಾಲ (ಕ್ರಿ.ಪೂ. 500ರಿಂದ ಕ್ರಿ.ಶ 800): ಈ ಕಾಲದಲ್ಲಿ, ಬುದ್ಧ ಮತ್ತು ಮಹಾವೀರರ ಉಪದೇಶಗಳು ಯೋಗಸಾಧನೆಯ ಮೆಟ್ಟಿಲೆನಿಸಿದವು. ಧ್ಯಾನದ ಮೂಲಕ ಕೈವಲ್ಯ ಸಾಧನೆಯ ಬಗ್ಗೆ ಮಹಾವೀರ ಹೇಳಿದರೆ, ಜ್ಞಾನಸಾಧನೆಗಾಗಿ ಯೋಗಾಸನ ಮತ್ತು ಧ್ಯಾನದ ಅವಲಂಬನೆಯ ಬಗ್ಗೆ ಬುದ್ಧ ಹೇಳಿದ.

ಭಗವದ್ಗೀತೆ ರಚನೆಗೊಂಡಿದ್ದೂ ಈ ಕಾಲಘಟ್ಟದಲ್ಲಿ. ವಿಶ್ವಪ್ರಜ್ಞೆಯಾದ ಕೃಷ್ಣ ಮತ್ತು ವ್ಯಕ್ತಿಗತ ಪ್ರಜ್ಞೆಯಾದ ಅರ್ಜುನನ ನಡುವಿನ ಸಂಭಾಷಣೆಯ ರೂಪದಲ್ಲಿದು ರಚಿತವಾಗಿದೆ. ಇಲ್ಲಿ ಧರ್ಮ, ಕರ್ಮಯೋಗ, ಭಕ್ತಿ ಯೋಗ ಮತ್ತು ಜ್ಞಾನಯೋಗಗಳನ್ನು ವಿಸ್ತರಿಸಲಾಗಿದೆ. “ಸಮತ್ವಂ ಯೋಗ ಉಚ್ಯತೆ” ಅಂದರೆ ಸಮಚಿತ್ತತೆ ಎನ್ನುವುದು ಯೋಗದ ಲಕ್ಷಣ ಎನ್ನುತ್ತದೆ ಗೀತೆ. ಪ್ರತಿಕೂಲ ಪರಿಸ್ಥಿತಿಗಳಲ್ಲೂ ಸ್ಥಿರಚಿತ್ತದಿಂದ ಇರುವ ಸಾಮರ್ಥ್ಯವನ್ನು ಯೋಗ ಎನ್ನಬಹುದು. ಸಂತಸದಾಯಕ ಮತ್ತು ಸಮನ್ವಯಭರಿತ ಪ್ರವೃತ್ತಿಗೆ ಮೂಲ ಪ್ರವೃತ್ತಿಗೆ ನಮ್ಮನ್ನು ಕರೆದೊಯ್ಯುವುದನ್ನು ಯೋಗ ಎನ್ನಬಹುದು. ಮಹಾಭಾರತದಲ್ಲಿ ಉಲ್ಲೇಖವಾದ ಕೆಲವು ಶಬ್ದಗಳು, ಅಂದರೆ ವಿಚಾರ, ವಿವೇಕ ಮುಂತಾದವು, ಋಷಿವರ್ಯ ಪತಂಜಲಿಯಿಂದಲೂ ವಿವರಿಸಲ್ಪಟ್ಟಂಥವು.

Maharshi Patanjali
ಮಹರ್ಷಿ ಪತಂಜಲಿ

ಯೋಗ ಪಿತಾಮಹ

ಮಹರ್ಷಿ ಪತಂಜಲಿಯನ್ನು ಯೋಗ ಪಿತಾಮಹ ಎಂದು ಕರೆಯಲಾಗುತ್ತದೆ. ಯೋಗದ ಅಭ್ಯಾಸಕ್ಕೆ ರೂಪರೇಷೆಗಳನ್ನು ಒದಗಿಸಿದ್ದು ಮಹರ್ಷಿ ಪತಂಜಲಿ, ಅದೂ ಕ್ರಿ.ಪೂ. ಎರಡನೇ ಶತಮಾನದಲ್ಲಿ. ಯೋಗದಲ್ಲಿ ಹುದುಗಿರುವ ಜ್ಞಾನವನ್ನು ಆತ ʻಯೋಗಸೂತ್ರʼದ ಮೂಲಕ ಲೋಕಕ್ಕೆ ತಿಳಿಸಿದ್ದರು. ಇದನ್ನು ರಾಜಯೋಗ ಎನ್ನಲಾಗುತ್ತದೆ. ಮಾತ್ರವಲ್ಲ, ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಗ್ರಹ, ಧಾರಣ, ಧ್ಯಾನ ಮತ್ತು ಸಮಾಧಿಯೆಂಬ ಅಷ್ಟಾಂಗ ಯೋಗಗಳನ್ನೂ ರಚಿಸಿದ್ದಾರೆ. ಪತಂಜಲಿ ಯೋಗದ ಕೆಲವು ಅಂಶಗಳನ್ನು ನಾಟ್ಯಶಾಸ್ತ್ರದಲ್ಲೂ ಬಳಸಲಾಗುತ್ತದೆ. ಕರಾಟೆಯಂಥ ಸಾಹಸ ಕಲೆಗಳಲ್ಲೂ ಇದು ಬಳಕೆಯಲ್ಲಿದೆ.

ಶಾಸ್ತ್ರೀಯೋತ್ತರ ಕಾಲಘಟ್ಟ

ಈ ಯುಗದಲ್ಲಿ, ರಾಜಯೋಗ ಮತ್ತು ಜ್ಞಾನ ಯೋಗದ ಪ್ರಮುಖ ಪ್ರತಿಪಾದಕರಾಗಿ ಒದಗಿಬಂದವರು ಆದಿಶಂಕರಾಚಾರ್ಯರಂಥ ಸಂತರು. ಮುಕ್ತಿ ಅಥವಾ ನಿರ್ವಾಣ ಸಾಧನೆಗಾಗಿ ಯೋಗ ಮಾರ್ಗದ ಅವಲಂಬನೆಯ ಬಗ್ಗೆ ಅವರು ವಿಸ್ತರಿಸಿದ್ದಾರೆ. ಮನಸ್ಸಿನ ಶುದ್ಧಿಗಾಗಿ ಧ್ಯಾನವೂ ಮುಖ್ಯ ಎನ್ನುತ್ತವೆ ಅವರ ಬೋಧನೆಗಳು. ಪುರಂದರದಾಸ ಮತ್ತು ತುಳಸೀದಾಸರು ಸಹ ಯೋಗವಿಜ್ಞಾನಕ್ಕೆ ಪ್ರಮುಖ ಕೊಡುಗೆಯನ್ನು ನೀಡಿದ್ದಾರೆ. ಇಂದು ಬಹಳಷ್ಟು ಕಡೆಗಳಲ್ಲಿ ಚಾಲ್ತಿಯಲ್ಲಿರುವ ಹಠಯೋಗದ ಆಸನಗಳು ಇದೇ ಕಾಲದಲ್ಲಿ ಪ್ರಚಲಿತಕ್ಕೆ ಬಂದಂಥವು.

ಆಧುನಿಕ ಕಾಲ (ಕ್ರಿ. ಶ 1700- 1900)

ಪಶ್ಚಿಮ ದೇಶಗಳಲ್ಲಿ ಯೋಗದ ಕಂಪು ಹರಡುವುದಕ್ಕೆ ಪ್ರಮುಖ ಕಾರಣವಾಗಿದ್ದವರು ಸ್ವಾಮಿ ವಿವೇಕಾನಂದರು. ದೈಹಿಕ ಸ್ವಾಸ್ಥ್ಯದ ಬಗ್ಗೆ ಹೆಚ್ಚಿನ ಒತ್ತು ನೀಡುವ ಕ್ರಮವೂ ಯೋಗದಲ್ಲಿ ಆರಂಭವಾಯಿತು. ರಾಜ ಯೋಗ ಪ್ರಕಾರದಲ್ಲಿ ಮತ್ತಷ್ಟು ಬೆಳವಣಿಗೆಗಳಾದವು. ರಮಣ ಮಹರ್ಷಿ, ರಾಮಕೃಷ್ಣ ಪರಮಹಂಸ, ಬಿಕೆಎಸ್‌ ಅಯ್ಯಂಗಾರ್‌, ಕೆ. ಪಟ್ಟಾಭಿ ಜೋಯಿಸ್‌, ಪರಮಹಂಸ ಯೋಗಾನಂದ ಮತ್ತು ವಿವೇಕಾನಂದರು ರಾಜಯೋಗದ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿದರು. ವೇದಾಂತ, ಭಕ್ತಿ ಮತ್ತು ಹಠಯೋಗ ಪಶ್ಚಿಮ ದೇಶಗಳಲ್ಲಿ ಜನಪ್ರಿಯವಾಯಿತು. ಇಷ್ಟೊಂದು ಸುದೀರ್ಘ ಇತಿಹಾಸವನ್ನು ಹೊಂದಿರುವ ಯೋಗ ಬಹಳಷ್ಟು ಪ್ರಯೋಗಕ್ಕೆ ಒಳಗಾಗಿದ್ದರೂ ಮೂಲ ಸ್ವರೂಪದಲ್ಲಿ ಬದಲಾವಣೆಗಳಾಗಿಲ್ಲ.

ಬದಲಾವಣೆ ಎಲ್ಲಿದೆ?

Shilpa Shetty yoga pose

ಪ್ರಾಚೀನ ಮತ್ತು ಆಧುನಿಕ ಮನೋಧರ್ಮಗಳಲ್ಲಿ ವ್ಯತ್ಯಾಸವಾಗುತ್ತಿದೆ. ಅಂದರೆ, ನಿಸರ್ಗದೊಂದಿಗೆ ಒಂದಾಗಿಯೇ ಬದುಕುವುದು ಹಿಂದಿನ ಕಾಲದ ಜನರ ರೀತಿಯಾಗಿತ್ತು. ಹಾಗಾಗಿ ನೈಸರ್ಗಿಕವಾಗಿಯೇ ಜನರ ಬದುಕು ವಿಕಾಸವಾಗುತ್ತಿತ್ತು. ಯೋಗವೆಂಬುದನ್ನು ಪ್ರತ್ಯೇಕವಾಗಿ ಗುರುತಿಸದೆಯೂ, ದೇಹ ಮತ್ತು ಮನಸ್ಸುಗಳು ಒಂದಾಗಿ ಸಾಗುವ ಬಗ್ಗೆ ಜನರಿಗೆ ಸ್ಪಷ್ಟ ಕಲ್ಪನೆಯಿತ್ತು. ಇದರಿಂದ ಯಾವುದೇ ಭಂಗಿಗಳು, ಆಸನಗಳು ಸಾಧ್ಯವಾಗುತ್ತಿದ್ದವು. ಇದಕ್ಕೆ ಉಸಿರಾಟದ ಮೇಲೆ ಹಿಡಿತ ಬೇಕು ಎಂಬುದೂ ತಿಳಿದಿತ್ತು.

ಹಾಗಾದರೆ, ಇಂದಿನ ದಿನಗಳಲ್ಲಿ ಯೋಗವೆಂಬುದು ಏನು? ರೋಗಗಳ ಚಿಕಿತ್ಸೆಗೆ ಬಳಕೆಯಾಗುತ್ತಿರುವ, ದೈಹಿಕ ಕ್ಷಮತೆಯನ್ನು ಹೆಚ್ಚಿಸುವ ಮತ್ತು ಮಾನಸಿಕ ಒತ್ತಡ ಶಮನ ಮಾಡುವ ಮಾರ್ಗವಾಗಿ ಯೋಗ ಉಪಯೋಗವಾಗುತ್ತಿದೆ. ಯೋಗದ ಮೂಲ ಸ್ವರೂಪಕ್ಕೆ ಭಿನ್ನವಾದ, ಮೇಲ್ನೋಟಕ್ಕಷ್ಟೇ ತಲುಪುವ ಸ್ವರೂಪವಿದು. ಉದಾ, ಶುದ್ಧಿ ಎನ್ನುವುದು ಇತ್ತೀಚಿನ ಕೈ-ಕಾಲು ತೊಳೆಯುವ ಸೀಮಿತ ಅರ್ಥದಲ್ಲಿ ಹೇಳುವುದಲ್ಲ. ದೇಹ-ಮನಸ್ಸುಗಳನ್ನು ಶುದ್ಧವಾಗಿರಿಸಿಕೊಳ್ಳುವ ಬಗೆಯಿದು. ಇದರಿಂದ ಜೀವನದ ಒಟ್ಟಾರೆ ಸ್ವಾಸ್ಥ್ಯ ಹೆಚ್ಚುತ್ತದೆ.

ಇಂದಿನ ದಿನಗಳಲ್ಲಿ ಯೋಗವೆಂದರೆ ಭಂಗಿ, ಆಸನಗಳು ಮಾತ್ರ. ಆಸನಗಳು ಯೋಗ ಕ್ರಿಯೆಯ ಮಹತ್ವದ ಅಂಶಗಳೆನ್ನುವುದು ಹೌದಾದರೂ, ಅಷ್ಟಕ್ಕೇ ಸೀಮಿತಗೊಳಿಸುವುದು ಸರಿಯಲ್ಲ. ವಿಶ್ವದೊಂದಿಗೆ, ಸಮಷ್ಟಿಯ ಜೊತೆಗೆ ಒಂದಾಗಿ ಬದುಕುವುದನ್ನು ಯೋಗ ಪ್ರತಿಪಾದಿಸುತ್ತದೆ. ಆಗ ಮಾತ್ರ ದೇಹ, ಮನಸ್ಸು ಮತ್ತು ಚೈತನ್ಯಗಳು ಸಮನ್ವಯಗೊಳ್ಳುವುದಕ್ಕೆ, ಆರೋಗ್ಯ ಮತ್ತು ಆನಂದದಿಂದ ಬದುಕುವುದಕ್ಕೆ ಸಾಧ್ಯ. ಈ ಹಿನ್ನೆಲೆಯಲ್ಲಿ, ಜೂನ್‌ ತಿಂಗಳ ೨೧ರಂದು ವಿ‍ಶ್ವದೆಲ್ಲೆಡೆ ಆಚರಿಸಲಾಗುವ ಅಂತಾರಾಷ್ಟ್ರೀಯ ಯೋಗ ದಿನ ಮಹತ್ವ ಪಡೆದಿದೆ. ಈ ಪ್ರಾಚೀನ ಪದ್ಧತಿಗೆ ಸಲ್ಲಬೇಕಾದ ಮಹತ್ವವನ್ನು ನೀಡಿ, ಶಾಂತಿ, ಸಾಮರಸ್ಯ ಮತ್ತು ವಿಶ್ವಪ್ರಜ್ಞೆಯೊಂದಿಗಿನ ಸಂಯೋಗವನ್ನು ಸಾಧಿಸುವಂಥ ಬದುಕು ನಮ್ಮದಾಗಲಿ.

ಈ ಸುದ್ದಿಯನ್ನೂ ಓದಿ: Vijayanagara News : ಉತ್ತಮ ಆರೋಗ್ಯ, ಸರ್ವತೋಮುಖ ಬೆಳವಣಿಗೆಗೆ ಯೋಗ ಉತ್ತಮ ಸಾಧನ: ಡಾ. ಎಸ್‌. ಬಿ.ಹಂದ್ರಾಳ

ಸೃಷ್ಟಿಯ ಮೊದಲ ಯೋಗಿ ಶಿವ

ತನ್ನಲ್ಲಿರುವ ಜ್ಞಾನವನ್ನು ಪಸರಿಸುವುದಕ್ಕೆ ಸಪ್ತರ್ಷಿಗಳೆಂದೇ ಖ್ಯಾತರಾದ ಏಳು ಋಷಿಗಳನ್ನು ಆತ ವಿನಿಯೋಗಿಸಿಕೊಂಡ. ದೈಹಿಕ ಮಿತಿಗಳನ್ನು ಮೀರಿಯೂ ಮಾನವರು ವಿಕಸಿತರಾಗಬಲ್ಲರು ಎಂಬ ಮಹಾಜ್ಞಾನವನ್ನು ವಿಶ್ವದೆಲ್ಲೆಡೆಗೆ ಸಪ್ತರ್ಷಿಗಳು ಪ್ರಚುರಪಡಿಸಿದರು ಎನ್ನಲಾಗುತ್ತದೆ.

· ಕರ್ಮ ಯೋಗ: ಕಾಯಕದ ಮಾರ್ಗವನ್ನು ಪ್ರತಿಪಾದಿಸುತ್ತದೆ

· ಭಕ್ತಿ ಯೋಗ: ಭಕ್ತಿ ಸೂತ್ರವೇ ಮೋಕ್ಷ ಮಾರ್ಗ ಎನ್ನುತ್ತದೆ

· ಜ್ಞಾನ ಯೋಗ: ಸಮೀಕ್ಷೆ, ಜ್ಞಾನದ ಮಾರ್ಗವನ್ನು ಪ್ರತಿಪಾದಿಸುತ್ತದೆ

· ರಾಜಯೋಗ: ಆತ್ಮಾವಲೋಕನದ ಮಾರ್ಗವಿದು

· ಹಠಯೋಗ: ದೇಹ, ಮನಸ್ಸು ಮತ್ತು ಪ್ರಾಣಗಳ ಸಮತೋಲನದ ಮಾರ್ಗ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Aditya L1: ಲ್ಯಾಗ್ರೇಂಜ್‌ ಪಾಯಿಂಟ್‌ನ ಮೊದಲ ಸುತ್ತು ಪೂರ್ಣಗೊಳಿಸಿದ ಆದಿತ್ಯ ಎಲ್‌ 1; ಇಸ್ರೋಗೆ ಭಾರಿ ಮುನ್ನಡೆ

Aditya L1: ಕಕ್ಷೆಯ ಮೊದಲ ಸುತ್ತು ಪೂರ್ಣಗೊಳಿಸಿರುವ ಕುರಿತು ಇಸ್ರೋ ಮಾಹಿತಿ ನೀಡಿದೆ. “ಆದಿತ್ಯ ಎಲ್‌ 1 ಮಿಷನ್‌ ಎಲ್‌ ಪಾಯಿಂಟ್‌ನ ಮೊದಲ ಸುತ್ತು ಪೂರ್ಣಗೊಳಿಸಿದೆ. ಜನವರಿ 6ರಂದು ಕಕ್ಷೆ ಸೇರಿದ ಇದು 178 ದಿನಗಳ ಬಳಿಕ ಮೊದಲ ಸುತ್ತು ಪೂರ್ಣಗೊಳಿಸಿದೆ.

VISTARANEWS.COM


on

Aditya L1
Koo

ನವದೆಹಲಿ: ಭಾರತದ ಚೊಚ್ಚಲ ಬಾಹ್ಯಾಕಾಶ ಆಧಾರಿತ ಸೌರ ಮಿಷನ್ ಆಗಿರುವ ಆದಿತ್ಯ ಎಲ್‌1 (Aditya L1) ಬಾಹ್ಯಾಕಾಶ ನೌಕೆಯು ಮತ್ತೊಂದು ಇತಿಹಾಸ ಸೃಷ್ಟಿಸಿದೆ. ಸೂರ್ಯ ಮತ್ತು ಭೂಮಿ ನಡುವಿನ ಗುರುತ್ವಾಕರ್ಷಣೆ ನಿಷ್ಕ್ರಿಯವಾಗುವ ‘ಲ್ಯಾಗ್ರೇಂಜ್‌ ಪಾಯಿಂಟ್‌’ನ (L1) ಪ್ರಭಾವಲಯದ (Halo) ಮೊದಲ ಸುತ್ತು ಪೂರ್ಣಗೊಳಿಸಿದೆ. ಇದರೊಂದಿಗೆ ಕಕ್ಷೆ ಸೇರಿದ (ಇದೇ ವರ್ಷದ ಜನವರಿ 6ರಂದು ಕಕ್ಷೆ ಸೇರಿದೆ) 178 ದಿನಗಳ ಬಳಿಕ ಲ್ಯಾಗ್ರೇಂಜ್‌ ಪಾಯಿಂಟ್‌ನ ಮೊದಲ ಸುತ್ತು ಪೂರ್ಣಗೊಳಿಸಿದಂತಾಗಿದೆ.

ಕಕ್ಷೆಯ ಮೊದಲ ಸುತ್ತು ಪೂರ್ಣಗೊಳಿಸಿರುವ ಕುರಿತು ಇಸ್ರೋ ಮಾಹಿತಿ ನೀಡಿದೆ. “ಆದಿತ್ಯ ಎಲ್‌ 1 ಮಿಷನ್‌ ಎಲ್‌ ಪಾಯಿಂಟ್‌ನ ಮೊದಲ ಸುತ್ತು ಪೂರ್ಣಗೊಳಿಸಿದೆ. ಜನವರಿ 6ರಂದು ಕಕ್ಷೆ ಸೇರಿದ ಇದು 178 ದಿನಗಳ ಬಳಿಕ ಮೊದಲ ಸುತ್ತು ಪೂರ್ಣಗೊಳಿಸಿದೆ. ಇದರೊಂದಿಗೆ ಎರಡನೇ ಸುತ್ತಿನತ್ತ ಆದಿತ್ಯ ಎಲ್‌ 1 ಮಿಷನ್‌ ದಾಪುಗಾಲು ಇಟ್ಟಿದೆ” ಎಂಬುದಾಗಿ ಇಸ್ರೋ ತಿಳಿಸಿದೆ. ಇದು ಸೂರ್ಯನ ಕುರಿತು ಅಧ್ಯಯನ ಮಾಡುವಲ್ಲಿ ಇಸ್ರೋಗೆ ಸಿಕ್ಕ ಮಹತ್ವದ ಮುನ್ನಡೆಯಾಗಿದೆ ಎಂದು ಹೇಳಲಾಗುತ್ತಿದೆ.

ಸೆಪ್ಟೆಂಬರ್‌ 2ರಂದು ಆದಿತ್ಯ ಎಲ್‌ 1 ಮಿಷನ್‌ ಉಡಾವಣೆಯಾಗಿದ್ದು, ಸೆಪ್ಟೆಂಬರ್‌ 3ರಂದು ಮೊದಲ ಕಕ್ಷೆ ಬದಲಾವಣೆಯನ್ನು ಯಶಸ್ವಿಯಾಗಿ ಪೂರೈಸಿತು. ಸೆಪ್ಟೆಂಬರ್‌ 5ರಂದು ಎರಡನೇ ಬಾರಿ ಕಕ್ಷೆ ಬದಲಾವಣೆ ಮಾಡಿಕೊಂಡಿತು. ಒಟ್ಟು ಐದು ಬಾರಿ ಕಕ್ಷೆ ಬದಲಾವಣೆ ಮಾಡಿಕೊಂಡ ನಂತರ ಅಧ್ಯಯನ ನಡೆಸಲು ಉದ್ದೇಶಿಸಿರುವ ಲ್ಯಾಂಗ್ರೇಜ್‌ ಪಾಯಿಂಟ್‌ನತ್ತ (L1 Point) ಆದಿತ್ಯ ಎಲ್‌ 1 ಮಿಷನ್‌ ಸಾಗಿದೆ.

ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಮಿಷನ್‌ ಹೊತ್ತುಕೊಂಡು ಪಿಎಸ್‌ಎಲ್‌ವಿ-ಸಿ 57 (PSLV-C57 ) ರಾಕೆಟ್‌ 2023ರ ಸೆಪ್ಟೆಂಬರ್‌ 2ರಂದು ನಭಕ್ಕೆ ಹಾರಿದೆ. ನಭಕ್ಕೆ ನೆಗೆದ ಕೆಲವೇ ನಿಮಿಷಗಳಲ್ಲಿ ರಾಕೆಟ್‌ನಿಂದ ಆದಿತ್ಯ ಎಲ್‌ 1 ಮಿಷನ್‌ ಬೇರ್ಪಟ್ಟಿದೆ. ಸೂರ್ಯನ ಮೇಲ್ಮೈನಲ್ಲಿ ಮಾತ್ರ ಆದಿತ್ಯ ಎಲ್‌ 1 ಮಿಷನ್‌ ಅಧ್ಯಯನ ನಡೆಸುತ್ತಿದೆ. ಭೂಮಿಯಿಂದ ಸೂರ್ಯನ ದಿಕ್ಕಿನಲ್ಲಿ 15 ಲಕ್ಷ ಕಿಲೋಮೀಟರ್‌ ಸಂಚರಿಸಿ ಅಧ್ಯಯನ ನಡೆಸುತ್ತಿದೆ. ಭೂಮಿಯಿಂದ 15 ಲಕ್ಷ ಕಿಲೊಮೀಟರ್‌ ಅಂದರೆ, ಭೂಮಿಯಿಂದ ಸೂರ್ಯನಿಗಿರುವ ದೂರದಲ್ಲಿ ಶೇ.1ರಷ್ಟು ಮಾತ್ರ ಕ್ರಮಿಸಿದಂತೆ.

ಇದನ್ನೂ ಓದಿ: Pushpak Launch: ‘ಪುಷ್ಪಕ್‌’ ರಾಕೆಟ್ ಹ್ಯಾಟ್ರಿಕ್‌ ಉಡಾವಣೆ ಯಶಸ್ವಿ-ಇಸ್ರೋದಿಂದ ಮಹತ್ವದ ಮೈಲಿಗಲ್ಲು

Continue Reading

ದೇಶ

Sudha Murty: ಕರ್ನಾಟಕ ಸೇರಿ ದೇಶದ ಪ್ರವಾಸೋದ್ಯಮಕ್ಕೆ ಒತ್ತು ನೀಡಿ; ರಾಜ್ಯಸಭೆಯಲ್ಲಿ ಸುಧಾಮೂರ್ತಿ ಮೊದಲ ಭಾಷಣ!

Sudha Murty: ಭಾರತದಲ್ಲಿ ಪ್ರವಾಸೋದ್ಯಮಕ್ಕೆ‌ ಇನ್ನಷ್ಟು ಆದ್ಯತೆ ನೀಡಬೇಕು. ದೇಶದಲ್ಲಿ ಅಜಂತಾ, ಎಲ್ಲೋರ, ಬೃಹದೀಶ್ವರ, ತಾಜ್‌ಮಹಲ್‌ ನೋಡಬೇಕು ಎಂಬ ಮಾತಿದೆ. ಆದರೆ, ಭಾರತದಲ್ಲಿ 42 ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿವೆ. ಇನ್ನೂ 57 ತಾಣಗಳು ಪೆಂಡಿಂಗ್‌ ಲಿಸ್ಟ್‌ನಲ್ಲಿವೆ. ಇವುಗಳ ಕುರಿತು ಹೆಚ್ಚಿನ ಆದ್ಯತೆ ನೀಡಬೇಕು ಎಂದು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದರು.

VISTARANEWS.COM


on

Sudha Murty
Koo

ನವದೆಹಲಿ: ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಇನ್ಫೋಸಿಸ್‌ ಪ್ರತಿಷ್ಠಾನದ ಸಂಸ್ಥಾಪಕಿ ಸುಧಾ ಮೂರ್ತಿ (Sudha Murty) ಅವರು ಇದೇ ಮೊದಲ ಬಾರಿಗೆ ರಾಜ್ಯಸಭೆಯಲ್ಲಿ ಭಾಷಣ ಮಾಡಿದರು. “ನಾನು ರಾಜಕಾರಣಿ ಅಲ್ಲ. ನನಗೆ ಹೆಚ್ಚು ಮಾತನಾಡಲು ಬರುವುದಿಲ್ಲ” ಎನ್ನುತ್ತಲೇ ಭಾಷಣ ಆರಂಭಿಸಿದ ಅವರು ಗರ್ಭಕಂಠ ಕ್ಯಾನ್ಸರ್‌ಗೆ (Cervical Cancer) ಲಸಿಕೆ ಹಾಗೂ ಕರ್ನಾಟಕ (Karnataka) ಸೇರಿ ದೇಶದ ಪ್ರವಾಸೋದ್ಯಮದ ಏಳಿಗೆಯ ಕುರಿತು ಸದನದ ಗಮನಕ್ಕೆ ತಂದರು. ಕರ್ನಾಟಕ ಪ್ರವಾಸೋದ್ಯಮದ ಕುರಿತೂ ಅವರು ಹೆಚ್ಚು ಗಮನ ಸೆಳೆದರು.

“ಗರ್ಭಕಂಠದ ಕ್ಯಾನ್ಸರ್‌ ಈಗ ಮಾರಣಾಂತಿಕವಾಗಿದೆ. ಒಬ್ಬ ತಾಯಿ ಮೃತಪಟ್ಟರೆ ಮಕ್ಕಳು ಅನಾಥರಾಗುತ್ತಾರೆ. ಒಬ್ಬ ವ್ಯಕ್ತಿಗೆ ಹೆಂಡತಿ ತೀರಿಕೊಂಡರೆ ಮತ್ತೊಬ್ಬ ಪತ್ನಿ ಸಿಗುತ್ತಾಳೆ. ಆದರೆ, ಮಕ್ಕಳಿಗೆ ತಾಯಿ ತೀರಿಕೊಂಡರೆ, ಜೀವನಪೂರ್ತಿ ಅವರು ಅನಾಥರಾಗುತ್ತಾರೆ. ಹಾಗಾಗಿ, ಗರ್ಭಕಂಠದ ಕ್ಯಾನ್ಸರ್‌ಗೆ ಲಸಿಕೆ ನೀಡುವ ವ್ಯವಸ್ಥೆ ಮಾಡಬೇಕು. ಈಗ ಲಸಿಕೆಗೆ 1,300-1,400 ರೂ. ಆಗುತ್ತದೆ. ಸರ್ಕಾರ ಮಧ್ಯಪ್ರವೇಶಿಸಿದರೆ ಅದನ್ನು 800 ರೂಪಾಯಿಗೆ ಹೆಣ್ಣುಮಕ್ಕಳಿಗೆ ಲಸಿಕೆ ಕೊಡಿಸಬಹುದು” ಎಂದರು. ಆಗ ಸಭಾಧ್ಯಕ್ಷರು, “ಈ ಕುರಿತು ಕೇಂದ್ರ ಆರೋಗ್ಯ ಸಚಿವರಾದ ಜೆ.ಪಿ ನಡ್ಡಾ ಅವರ ಗಮನಕ್ಕೆ ತನ್ನಿ” ಎಂದರು.

ಪ್ರವಾಸೋದ್ಯಮದ ಕುರಿತು ಹೇಳಿದ್ದಿಷ್ಟು…

“ಭಾರತದಲ್ಲಿ ಪ್ರವಾಸೋದ್ಯಮಕ್ಕೆ‌ ಇನ್ನಷ್ಟು ಆದ್ಯತೆ ನೀಡಬೇಕು. ದೇಶದಲ್ಲಿ ಅಜಂತಾ, ಎಲ್ಲೋರ, ಬೃಹದೀಶ್ವರ, ತಾಜ್‌ಮಹಲ್‌ ನೋಡಬೇಕು ಎಂಬ ಮಾತಿದೆ. ಆದರೆ, ಭಾರತದಲ್ಲಿ 42 ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿವೆ. ಇನ್ನೂ 57 ತಾಣಗಳು ಪೆಂಡಿಂಗ್‌ ಲಿಸ್ಟ್‌ನಲ್ಲಿವೆ. ಇವುಗಳ ಕುರಿತು ಹೆಚ್ಚಿನ ಆದ್ಯತೆ ನೀಡಬೇಕು. ಕರ್ನಾಟಕದ ಶ್ರವಣಬೆಳಗೋಳದಲ್ಲಿರುವ ಬಾಹುಬಲಿಯ ಮೂರ್ತಿ, ಮಧ್ಯಪ್ರದೇಶದ ಮಾಂಡು, ದೇಶದ ಗುಹೆಗಳು, ಬಾದಾಮಿ, ಐಹೊಳೆ, ಲಿಂಗರಾಜ ದೇವಾಲಯಗಳು ದೇಶದ ಸಂಸ್ಕೃತಿಯ ತಾಣಗಳಾಗಿವೆ. ಇವುಗಳನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಬೇಕು” ಎಂದರು.

“ತ್ರಿಪುರದಲ್ಲಿರುವ ಉನಾಕೋಟಿ, ಮಿಜೋರಾಂನಲ್ಲಿ ನೈಸರ್ಗಿಕ ಸೇತುವೆಗಳಿವೆ. ಇವುಗಳನ್ನು ನೋಡಲು ವಿದೇಶಕ್ಕೆ ಹೋಗುವವರಿದ್ದಾರೆ. ತಂಜಾವೂರಿನ ಬೃಹದೇಶ್ವರ ದೇವಾಲಯ, ಶ್ರೀರಂಗಂ, ಕಾಶ್ಮೀರದಲ್ಲಿರುವ ಮೊಘಲ್‌ ಗಾರ್ಡನ್‌ಗಳು ಜಗತ್ತಿನ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಇಲ್ಲ. ಇವುಗಳನ್ನು ಪಟ್ಟಿಗೆ ಸೇರಿಸುವುದರಿಂದ ಆ ಸ್ಥಳಗಳಿಗೆ ಜನರನ್ನು ಸೆಳೆಯಲು ಪ್ಯಾಕೇಜ್‌ಗಳನ್ನು ಘೋಷಿಸಲಾಗುತ್ತದೆ. ಇದರಿಂದ ಪ್ರವಾಸೋದ್ಯಮದ ಆದಾಯ ಹೆಚ್ಚಾಗುತ್ತದೆ. ಹತ್ತಾರು ಅವಕಾಶಗಳು ಸೃಷ್ಟಿಯಾಗುತವೆ” ಎಂದು ಹೇಳಿದರು.

ಇದನ್ನೂ ಓದಿ: Narendra Modi: ನನ್ನ ದನಿಯೂ ಗಟ್ಟಿಯಿದೆ, ಸಂಕಲ್ಪವೂ; ಈ ಮೋದಿ ಯಾರಿಗೂ ಹೆದರಲ್ಲ, ಬಗ್ಗಲ್ಲ: ಸಂಸತ್‌ನಲ್ಲಿ ಪ್ರಧಾನಿ ಅಬ್ಬರ

Continue Reading

ಪ್ರಮುಖ ಸುದ್ದಿ

Mahua Moitra: ಸುಮ್ನೆ ಕೂತ್ಕೊಳ್ಳಿ ರಾಹುಲ್‌ ಗಾಂಧಿ; ಸಂಸತ್ತಲ್ಲೇ ಮಹುವಾ ಮೊಯಿತ್ರಾ ಹೀಗೆ ಸಿಟ್ಟಾಗಿದ್ದೇಕೆ?

Mahua Moitra: “ಸ್ಪೀಕರ್‌ ಸರ್‌, ನೀವು ಚುನಾವಣೆ ಪ್ರಚಾರ ಮಾಡುವಾಗ ನೀವು ಎರಡು ಬಾರಿ ನನ್ನ ಕ್ಷೇತ್ರಕ್ಕೆ ಬಂದಿದ್ರಿ. ನನ್ನ ಮಾತು ಕೇಳಿಸಿಕೊಳ್ಳಿ” ಎಂದು ಮಹುವಾ ಮೊಯಿತ್ರಾ ಮಾತನಾಡುತ್ತಿದ್ದರು. ಇದೇ ವೇಳೆ ರಾಹುಲ್‌ ಗಾಂಧಿ ಅವರು ಮಾತನಾಡಲು ಎದ್ದು ನಿಂತರು. ಆಗ, ಮೊಹಿತ್ರಾ ಅವರು, “ರಾಹುಲ್‌, ಕುಳಿತುಕೊಳ್ಳಿ” ಎಂದು ಸೂಚಿಸಿದರು. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

Mahua Moitra
Koo

ನವದೆಹಲಿ: ಸಂಸತ್‌ನ ವಿಶೇಷ ಅಧಿವೇಶನದಲ್ಲಿ (Parliament Session 2024) ಪ್ರತಿಪಕ್ಷಗಳು ನೀಟ್‌ ಅಕ್ರಮ, ಮಣಿಪುರ ಹಿಂಸಾಚಾರ ಸೇರಿ ಹಲವು ವಿಷಯಗಳ ಕುರಿತು ಚರ್ಚೆ, ಗಲಾಟೆ, ವಾಗ್ವಾದ, ಆರೋಪ ಮಾಡಿವೆ. ಯಾವುದೇ ಆಡಳಿತ ಪಕ್ಷದ ವಿರುದ್ಧ ಪ್ರತಿಪಕ್ಷವು ಆರೋಪ, ಗಲಾಟೆ, ಪ್ರತಿಭಟನೆ ಮಾಡುವುದು ಸಹಜ. ಇನ್ನು ಸೋಮವಾರ (ಜುಲೈ 1) ಸಂಸತ್‌ನಲ್ಲಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ (Mahua Moitra) ಅವರು ಮಾತನಾಡುವಾಗ, ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರಿಗೇ ಕುಳಿತುಕೊಳ್ಳಿ ಎಂಬುದಾಗಿ ಸೂಚಿಸಿದ್ದಾರೆ.

“ಸ್ಪೀಕರ್‌ ಸರ್‌, ನೀವು ಚುನಾವಣೆ ಪ್ರಚಾರ ಮಾಡುವಾಗ ನೀವು ಎರಡು ಬಾರಿ ನನ್ನ ಕ್ಷೇತ್ರಕ್ಕೆ ಬಂದಿದ್ರಿ. ನನ್ನ ಮಾತು ಕೇಳಿಸಿಕೊಳ್ಳಿ” ಎಂದು ಮಹುವಾ ಮೊಯಿತ್ರಾ ಮಾತನಾಡುತ್ತಿದ್ದರು. ಇದೇ ವೇಳೆ ರಾಹುಲ್‌ ಗಾಂಧಿ ಅವರು ಮಾತನಾಡಲು ಎದ್ದು ನಿಂತರು. ಆಗ, ಮೊಹಿತ್ರಾ ಅವರು, “ರಾಹುಲ್‌, ಕುಳಿತುಕೊಳ್ಳಿ” ಎಂದು ಸೂಚಿಸಿದರು. ಆಗ ಆಡಳಿತ ಪಕ್ಷದ ಸದಸ್ಯರು ಗೇಲಿ ಮಾಡಿದರು. ಇದಕ್ಕೆ ಪ್ರತ್ಯುತ್ತರ ನೀಡಿದ ಮಹುವಾ ಮೊಯಿತ್ರಾ, “ಅವರು ನಮ್ಮ ಪ್ರತಿಪಕ್ಷ ನಾಯಕರಾಗಿದ್ದಾರೆ. ಅವರು ಅರ್ಥ ಮಾಡಿಕೊಳ್ಳುತ್ತಾರೆ” ಎಂದು ತಿರುಗೇಟು ನೀಡಿದರು.

ಇದೇ ವೇಳೆ ಆಡಳಿತ ಪಕ್ಷದ ವಿರುದ್ಧ ಟಿಎಂಸಿ ಸಂಸದೆ ಹರಿಹಾಯ್ದರು. “ಸಂಸತ್‌ನಲ್ಲಿ ನಾನು ಪ್ರಶ್ನೆ ಕೇಳಲು, ಮಾತನಾಡಲು ಬಿಡಲಿಲ್ಲ. ನಾನು ಸಂಸತ್‌ನಲ್ಲಿ ಮಾತನಾಡಲು ಎದ್ದು ನಿಂತಾಗ, ನನ್ನ ಧ್ವನಿಯನ್ನು ಹುದುಗಿಸಲಾಯಿತು. ಆದರೆ, ಚುನಾವಣೆ ವೇಳೆ ಏನಾಯಿತು? ಆಡಳಿತ ಪಕ್ಷದ ಸದಸ್ಯ ಬಲವು 303ರಿಂದ 240ಕ್ಕೆ ಇಳಿಸಲಾಯಿತು. ಟಿಎಂಸಿ ಸಂಸದೆಯಾದ ನನ್ನನ್ನು ಕುಳಿತುಕೊಳ್ಳುವಂತೆ ಮಾಡಿದರು. ಆದರೆ, ಬಿಜೆಪಿಯ 63 ಸಂಸದರನ್ನು ಮನೆಯಲ್ಲಿಯೇ ಕುಳಿತುಕೊಳ್ಳುವಂತೆ ದೇಶದ ಜನ ಮಾಡಿದರು” ಎಂಬುದಾಗಿ ಹೇಳಿದರು.

ಕಾಂಗ್ರೆಸ್‌ ವಿರುದ್ಧ ಮೋದಿ ವಾಗ್ದಾಳಿ

ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಮಾತನಾಡಿದ ಮೋದಿ, ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು “ನಾನು ಕಾಂಗ್ರೆಸ್‌ನವರಿಗೆ ಜಾಣತನ ಕೊಡಲಿ ಎಂಬುದಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ. ಬಾಲಬುದ್ಧಿಯ ನಾಯಕನಿಗೂ ಬುದ್ಧಿ ಕೊಡಲಿ. ರಾಷ್ಟ್ರಪತಿಯವರ ಭಾಷಣಕ್ಕೆ ನಾನು ಧನ್ಯವಾದ ತಿಳಿಸುತ್ತೇನೆ. ಹಾಗೆಯೇ, ಇಷ್ಟು ಹೊತ್ತು ನನಗೆ ಅವಕಾಶ ಮಾಡಿಕೊಟ್ಟಿದ್ದಕ್ಕಾಗಿಯೂ ಧನ್ಯವಾದ ತಿಳಿಸುತ್ತೇನೆ. ಯಾರು ಎಷ್ಟೇ ಗಲಾಟೆ ಮಾಡಿದರೂ ನನ್ನ ಧ್ವನಿಯನ್ನು, ಸತ್ಯದ ಧ್ವನಿಯನ್ನು ಅಡಗಿಸಲು ಆಗುವುದಿಲ್ಲ. ನಾನು ಇದುವರೆಗೆ ಸತ್ಯದ ಅನುಭವವನ್ನು ಅನುಭವಿಸಿದ್ದೇನೆ” ಎಂದು ಹೇಳಿದರು.

ಇದನ್ನೂ ಓದಿ: Narendra Modi: ನೀಟ್‌ ಅಕ್ರಮ ಕುರಿತು ಸಂಸತ್‌ನಲ್ಲಿ ಮೋದಿ ಪ್ರಸ್ತಾಪ; ವಿದ್ಯಾರ್ಥಿಗಳಿಗೆ ಅವರು ಹೇಳಿದ್ದಿಷ್ಟು

Continue Reading

ದೇಶ

Hathras Stampede: ಹತ್ರಾಸ್‌ನಲ್ಲಿ ಕಾಲ್ತುಳಿತ ಹೇಗಾಯ್ತು? ಸತ್ಸಂಗ ನಡೆಸಿದ ಭೋಲೆ ಬಾಬಾ ಯಾರು? ಇಲ್ಲಿದೆ ಮಾಹಿತಿ

Hathras Stampede: ಭೋಲೆ ಬಾಬಾ ಅವರಿಗೆ ಭಾರತದಾದ್ಯಂತ ಅನುಯಾಯಿಗಳು ಇದ್ದಾರೆ. ಅದರಲ್ಲೂ, ಉತ್ತರ ಪ್ರದೇಶದ ಪಶ್ಚಿಮ ಭಾಗ, ಉತ್ತರಾಖಂಡ, ಹರಿಯಾಣ, ರಾಜಸ್ಥಾನ ಹಾಗೂ ದೆಹಲಿಯಲ್ಲಿ ಹೆಚ್ಚು ಅನುಯಾಯಿಗಳು ಇದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಖಾತೆ ಹೊಂದಿರದಿದ್ದರೂ ಇವರ ಧಾರ್ಮಿಕ ಕಾರ್ಯಕ್ರಮವನ್ನು ಭಕ್ತರು ತಪ್ಪಿಸಿಕೊಳ್ಳುವುದಿಲ್ಲ.

VISTARANEWS.COM


on

Hathras Stampede
Koo

ಲಖನೌ: ಉತ್ತರ ಪ್ರದೇಶದ ಹತ್ರಾಸ್‌ ಜಿಲ್ಲೆ ಮೊಘಲ್‌ಘರಾಹಿ ಎಂಬ ಗ್ರಾಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ (Hathras Stampede) ಸಂಭವಿಸಿದ್ದು, 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ನಾರಾಯಣ ಸಕಾರ್‌ ಹರಿ (Narayan Sakaar Hari) ಅಥವಾ ಸಕಾರ್‌ ವಿಶ್ವ ಹರಿ ಅಥವಾ ಭೋಲೆ ಬಾಬಾ (Bhole Baba) ಅವರು ಸತ್ಸಂಗ ನೆರವೇರಿಸಿದ ಬಳಿಕ ಉಂಟಾದ ಕಾಲ್ತುಳಿತವು ನೂರಾರು ಜನರ ಸಾವಿಗೆ ಕಾರಣವಾಗಿದೆ. ಇನ್ನು, ದುರಂತದ ಕುರಿತು ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಘೋಷಣೆ ಮಾಡಿದ್ದಾರೆ. ಇನ್ನು ಕಾಲ್ತುಳಿತ ಹೇಗಾಯಿತು? ನೂರಾರು ಜನರ ಸಾವಿಗೆ ಕಾರಣವೇನು? ಪ್ರತ್ಯಕ್ಷದರ್ಶಿಗಳು ಹೇಳುವುದು ಏನು ಎಂಬುದರ ಮಾಹಿತಿ ಇಲ್ಲಿದೆ.

ಪ್ರತ್ಯಕ್ಷದರ್ಶಿಗಳು ಹೇಳುವುದಿಷ್ಟು…

ಸತ್ಸಂಗ ಮುಗಿದ ಬಳಿಕ ನೂರಾರು ಜನ ಹೊರಗೆ ಬಂದಿದ್ದಾರೆ. ಎತ್ತರದ ಚರಂಡಿ ಮೇಲೆ ನಿರ್ಮಿಸಿದ ರಸ್ತೆ ಮೇಲೆ ಸಾವಿರಾರು ಜನ ನಿಂತಿದ್ದಾರೆ. ಆಗ ರಸ್ತೆಯ ಒಂದು ಭಾಗ ಚರಂಡಿಯೊಳಗೆ ಕುಸಿದಿದೆ. ಕೂಡಲೇ ಹತ್ತಾರು ಜನ ಚರಂಡಿಯೊಳಗೆ ಬಿದ್ದಿದ್ದು, ಒಬ್ಬರ ಮೇಲೆ ಒಬ್ಬರು ಬಿದ್ದ ಕಾರಣ ಹೆಚ್ಚಿನ ಜನ ಸಾವಿಗೀಡಾಗಿದ್ದಾರೆ. ಇನ್ನು ಚರಂಡಿ ಮೇಲಿನ ರಸ್ತೆ ಕುಸಿದ ಸುದ್ದಿ ಹರಿದಾಡುತ್ತಲೇ ಎಲ್ಲರೂ ಓಡಲು ಶುರು ಮಾಡಿದರು. ಆಗಲೂ ಒಬ್ಬರ ಮೇಲೆ ಒಬ್ಬರು ಬಿದ್ದು, ತುಳಿದಾಡಿದ ಕಾರಣ ಸಾವಿನ ಸಂಖ್ಯೆ ಜಾಸ್ತಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಧ್ಯಮಗಳಿಗೆ ಘಟನೆ ಕುರಿತು ವಿವರ ನೀಡಿದ್ದಾರೆ.

ಇನ್ನೊಂದಿಷ್ಟು ಮೂಲಗಳ ಪ್ರಕಾರ, ಸಣ್ಣದೊಂದು ಹಾಲ್‌ನಲ್ಲಿ ಸತ್ಸಂಗ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಹೊರಗಡೆ ಚರಂಡಿ ಮೇಲಿನ ಸ್ಲ್ಯಾಬ್‌ ಕುಸಿದಿದೆ ಎಂಬ ಸುದ್ದಿ ಕೇಳಿ ಎಲ್ಲರೂ ಓಡಲು ಶುರು ಮಾಡಿದರು. ಹೊರಗೆ ಹೋಗುವ ಗೇಟ್‌ ಚಿಕ್ಕದಿದ್ದ ಕಾರಣ ಎಲ್ಲರೂ ನುಗ್ಗಿದಾಗ ಕಾಲ್ತುಳಿತ ಸಂಭವಿಸಿದೆ. ಹೆಣ್ಣುಮಕ್ಕಳು ಓಡಲೂ ಆಗದೆ, ನೂಕುತ್ತಿದ್ದ ಪುರುಷರನ್ನು ಹಿಮ್ಮೆಟ್ಟಿಸಲೂ ಆಗದೆ ನೆಲಕ್ಕೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಯಾರಿವರು ಭೋಲೆ ಬಾಬಾ?

ಭೋಲೆ ಬಾಬಾ ಅವರು ಉತ್ತರ ಪ್ರದೇಶದ ಎತಾಹ್‌ ಜಿಲ್ಲೆಯ ಬಹದ್ದೂರ್‌ ಗ್ರಾಮದವರಾಗಿದ್ದಾರೆ. ಇವರು ಈಗ ಪ್ರಮುಖ ಧಾರ್ಮಿಕ ಮುಖಂಡರೆನಿಸಿದ್ದು, ಇವರ ಭಾಷಣ, ಬೋಧನೆಗಳನ್ನು ಕೇಳಲು ಸಾವಿರಾರು ಜನ ಆಗಮಿಸುತ್ತಾರೆ. ಇವರು ದೇಶದ ಗುಪ್ತಚರ ಇಲಾಖೆಯಲ್ಲಿ (IB) ಕಾರ್ಯನಿರ್ವಹಿಸಿದ್ದು, 26 ವರ್ಷಗಳ ಹಿಂದೆಯೇ ಸರ್ಕಾರಿ ನೌಕರಿ ತೊರೆದು, ಸ್ವಯಂಘೋಷಿತ ದೇವಮಾನವರಾಗಿದ್ದಾರೆ.

ಭೋಲೆ ಬಾಬಾ ಅವರಿಗೆ ಭಾರತದಾದ್ಯಂತ ಅನುಯಾಯಿಗಳು ಇದ್ದಾರೆ. ಅದರಲ್ಲೂ, ಉತ್ತರ ಪ್ರದೇಶದ ಪಶ್ಚಿಮ ಭಾಗ, ಉತ್ತರಾಖಂಡ, ಹರಿಯಾಣ, ರಾಜಸ್ಥಾನ ಹಾಗೂ ದೆಹಲಿಯಲ್ಲಿ ಹೆಚ್ಚು ಅನುಯಾಯಿಗಳು ಇದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಖಾತೆ ಹೊಂದಿರದಿದ್ದರೂ ಇವರ ಧಾರ್ಮಿಕ ಕಾರ್ಯಕ್ರಮವನ್ನು ಭಕ್ತರು ತಪ್ಪಿಸಿಕೊಳ್ಳುವುದಿಲ್ಲ. ಪ್ರತಿ ಮಂಗಳವಾರ ಅಲಿಗಢದಲ್ಲಿ ಅವರ ಕಾರ್ಯಕ್ರಮ ನಡೆಯುತ್ತದೆ. ಅಲ್ಲಿಯೂ ಸಾವಿರಾರು ಜನ ಸೇರುತ್ತಾರೆ. ಕೊರೊನಾ ನಿರ್ಬಂಧದ ಮಧ್ಯೆಯೂ ಸಾವಿರಾರು ಜನರನ್ನು ಸೇರಿಸಿ, ಸತ್ಸಂಗ ಆಯೋಜಿಸಿದ್ದು ವಿವಾದಕ್ಕೂ ಕಾರಣವಾಗಿತ್ತು.

ಇದನ್ನೂ ಓದಿ: Uttar Pradesh stampede: ಹತ್ರಾಸ್‌ ಕಾಲ್ತುಳಿತ ದುರ್ಘಟನೆ; ಸಾವಿನ ಸಂಖ್ಯೆ 60ಕ್ಕೆ ಏರಿಕೆ

Continue Reading
Advertisement
ಆಟೋಮೊಬೈಲ್1 hour ago

Mahindra Scorpio N : ಮಹೀಂದ್ರಾ ತನ್ನ ಸ್ಕಾರ್ಪಿಯೋ-ಎನ್ Z8 ವೇರಿಯೆಂಟ್​ನಲ್ಲಿ ನೀಡಿದ ಹಲವು ಫೀಚರ್​ಗಳು

suicide news
ಕರ್ನಾಟಕ3 hours ago

Suicide News : ಮಗನ ಕುಡಿತದ ಚಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಅಪ್ಪ, ಅಮ್ಮ

Aditya L1
ದೇಶ3 hours ago

Aditya L1: ಲ್ಯಾಗ್ರೇಂಜ್‌ ಪಾಯಿಂಟ್‌ನ ಮೊದಲ ಸುತ್ತು ಪೂರ್ಣಗೊಳಿಸಿದ ಆದಿತ್ಯ ಎಲ್‌ 1; ಇಸ್ರೋಗೆ ಭಾರಿ ಮುನ್ನಡೆ

David Miller :
ಪ್ರಮುಖ ಸುದ್ದಿ3 hours ago

David Miller : ಸೋಲಿನ ಬೇಸರದಲ್ಲಿ ವಿದಾಯ ಹೇಳಿದರೇ ಮಿಲ್ಲರ್​​; ದಕ್ಷಿಣ ಆಫ್ರಿಕಾ ಆಟಗಾರನ ಪ್ರತಿಕ್ರಿಯೆ ಏನು?

Sudha Murty
ದೇಶ4 hours ago

Sudha Murty: ಕರ್ನಾಟಕ ಸೇರಿ ದೇಶದ ಪ್ರವಾಸೋದ್ಯಮಕ್ಕೆ ಒತ್ತು ನೀಡಿ; ರಾಜ್ಯಸಭೆಯಲ್ಲಿ ಸುಧಾಮೂರ್ತಿ ಮೊದಲ ಭಾಷಣ!

Physical Abuse
ಕರ್ನಾಟಕ4 hours ago

Physical Abuse : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

Mahua Moitra
ಪ್ರಮುಖ ಸುದ್ದಿ5 hours ago

Mahua Moitra: ಸುಮ್ನೆ ಕೂತ್ಕೊಳ್ಳಿ ರಾಹುಲ್‌ ಗಾಂಧಿ; ಸಂಸತ್ತಲ್ಲೇ ಮಹುವಾ ಮೊಯಿತ್ರಾ ಹೀಗೆ ಸಿಟ್ಟಾಗಿದ್ದೇಕೆ?

Viral Video
Latest5 hours ago

Viral Video: ಲೈವ್‌ ವರದಿ ಮಾಡುತ್ತಿದ್ದಾಗ ಪಾಕ್ ಟಿವಿ ವರದಿಗಾರ್ತಿ ಮೇಲೆ ಗೂಳಿ ದಾಳಿ!

Hemant Nimbalkar
ಪ್ರಮುಖ ಸುದ್ದಿ6 hours ago

Hemant Nimbalkar: ವಾರ್ತಾ ಇಲಾಖೆ ಆಯುಕ್ತರಾಗಿ ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮರು ನೇಮಕ

Kolar News
ಕರ್ನಾಟಕ6 hours ago

Kolar News: ಕಾಲೇಜಿನ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಯುವಕನ ಬಂಧನ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ8 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ1 day ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌