Adipurush Movie: ನೇಪಾಳದಿಂದ ಆಕ್ಷೇಪ; ಆದಿಪುರುಷ್​ ಸಿನಿಮಾದಿಂದ​ ಜಾನಕಿ ಭಾರತದ ಪುತ್ರಿ ಎಂಬ ಡೈಲಾಗ್​ ಮಾಯ - Vistara News

ಟಾಲಿವುಡ್

Adipurush Movie: ನೇಪಾಳದಿಂದ ಆಕ್ಷೇಪ; ಆದಿಪುರುಷ್​ ಸಿನಿಮಾದಿಂದ​ ಜಾನಕಿ ಭಾರತದ ಪುತ್ರಿ ಎಂಬ ಡೈಲಾಗ್​ ಮಾಯ

ಈ ಸಿನಿಮಾ ಬಿಡುಗಡೆಗೆ ಅವಕಾಶ ಕೊಡುವುದಿಲ್ಲ ಎಂದು ನೇಪಾಳ ಸರ್ಕಾರ ಹೇಳಿತ್ತು. ಅಲ್ಲಿನ ಕಾಟ್ಠಂಡು ಮೆಟ್ರೋಪಾಲಿಟಿನ್​ ಸಿಟಿ ಮೇಯರ್​ ಬಾಲೆನ್​ ಶಾ ಅವರು ಗುರುವಾರ ‘ಆದಿಪುರುಷ್​’ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು.

VISTARANEWS.COM


on

Adipurush Movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಮಾಯಣ ಕಥೆಯನ್ನಾಧರಿಸಿದ, ಪೌರಾಣಿಕ ಸಿನಿಮಾ ಆದಿಪುರುಷ್ (Adipurush Movie)​ ಇಂದು ವಿಶ್ವದಾದ್ಯಂತ ಬಿಡುಗಡೆಯಾಗಿದೆ. ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಓಂ ರಾವತ್​ ಅವರು ನಿರ್ದೇಶಿಸಿರುವ ಈ ಆದಿಪುರುಷ್​ ಸಿನಿಮಾದಲ್ಲಿ ನಟ ಪ್ರಭಾಸ್​ ಶ್ರೀರಾಮನ ಪಾತ್ರದಲ್ಲಿ ಅಭಿನಯಿಸಿದ್ದು, ಕೃತಿ ಸೆನಾನ್​ ಅವರು ಸೀತಾಮಾತೆ ಅಥವಾ ಜಾನಕಿ ಪಾತ್ರ ನಿಭಾಯಸಿದ್ದಾರೆ.

ಆದರೆ ಈ ಸಿನಿಮಾ ಬಿಡುಗಡೆಗೆ ಅವಕಾಶ ಕೊಡುವುದಿಲ್ಲ ಎಂದು ನೇಪಾಳ ಸರ್ಕಾರ ಹೇಳಿತ್ತು. ಅಲ್ಲಿನ ಕಾಟ್ಠಂಡು ಮೆಟ್ರೋಪಾಲಿಟಿನ್​ ಸಿಟಿ ಮೇಯರ್​ ಬಾಲೆನ್​ ಶಾ ಅವರು ಗುರುವಾರ ‘ಆದಿಪುರುಷ್​’ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಸಿನಿಮಾದಲ್ಲಿ ‘ಜಾನಕಿ(ಸೀತಾಮಾತೆ) ಭಾರತದ ಪುತ್ರಿ’ ಎಂಬ ಒಂದು ಡೈಲಾಗ್ ಇದೆ. ಆದರೆ ಸೀತಾ ನಿಜಕ್ಕೂ ಜನಿಸಿದ್ದು ಈಗಿನ ನೇಪಾಳದಲ್ಲಿ. ಸಿನಿಮಾದಲ್ಲಿರುವ ಈ ಸಂಭಾಷಣೆಯನ್ನು ತೆಗೆಯದ ಹೊರತು ಆದಿಪುರುಷ್ ಸಿನಿಮಾವನ್ನು ನೇಪಾಳದಲ್ಲಿ ಬಿಡುಗಡೆ ಮಾಡಲು ಅವಕಾಶ ಕೊಡುವುದಿಲ್ಲ ಎಂದು ಹೇಳಿದ್ದರು. ‘ಈ ಅನಗತ್ಯ ಡೈಲಾಗ್​ ತೆಗೆಯುವವರೆಗೂ ಭಾರತದ ಯಾವುದೇ ಹಿಂದಿ ಸಿನಿಮಾಗಳನ್ನೂ ನೇಪಾಳದಲ್ಲಿ ರಿಲೀಸ್ ಮಾಡಲು ಬಿಡುವುದಿಲ್ಲ ಎಂದೂ ತಿಳಿಸಿದ್ದರು. ಹಾಗೇ, ಆದಿಪುರುಷ್​ ಬಿಡುಗಡೆಗೆ ನೀಡಿದ್ದ ಒಪ್ಪಿಗೆಯನ್ನು ನೇಪಾಳ ಸೆನ್ಸಾರ್ ಬೋರ್ಡ್​ ತಡೆಹಿಡಿದಿತ್ತು. ಇಷ್ಟೆಲ್ಲ ಆದಮೇಲೆ ಈಗ ಸಿನಿಮಾದಲ್ಲಿದ್ದ ‘ಜಾನಕಿ ಭಾರತದ ಮಗಳು’ ಎಂಬ ಡೈಲಾಗ್​ನ್ನು ತೆಗೆದುಹಾಕಲಾಗಿದೆ.

ಇದನ್ನೂ ಓದಿ: Adipurush Movie: ಆದಿ ಪುರುಷ್‌ ಪೋಸ್ಟರ್‌ ಸಖತ್‌ ಟ್ರೋಲ್‌; ಹಾಲಿವುಡ್‌ ಕಾಪಿ ಅಂದ್ರು ಫ್ಯಾನ್ಸ್‌

ಗುರುವಾರ ಅಂದರೆ, ಸಿನಿಮಾ ಬಿಡುಗಡೆಗೆ ಒಂದು ದಿನ ಮೊದಲು, ಆದಿಪುರುಷ್​ ಚಲನಚಿತ್ರದಲ್ಲಿ ಇದ್ದ, ವಿವಾದ ಸೃಷ್ಟಿಸಿದ್ದ ‘ಜಾನಕಿ ಭಾರತದ ಪುತ್ರಿ’ ಎಂಬ ವಾಕ್ಯವನ್ನು ತೆಗೆದುಹಾಕಲಾಗಿದೆ ಎಂದು ಹೇಳಲಾಗಿದೆ. ಇಂದು ನೇಪಾಳದಲ್ಲೂ ಸಿನಿಮಾ ಬಿಡುಗಡೆಯಾಗಿದೆ. ಇನ್ನು ಆದಿಪುರುಷ್​ ಚಿತ್ರ ಬಿಡುಗಡೆಗೂ ಮುನ್ನ ಮುಂಬೈಯಿಯಲ್ಲಿ ಜೂ.15ರಂದು ಪ್ರೀ ಸ್ಕ್ರೀನಿಂಗ್​ ಮಾಡಲಾಗಿತ್ತು. ಅಂದರೆ ಚಿತ್ರದಲ್ಲಿರುವ ನಟ/ನಟಿಯರು, ಈ ಸಿನಿಮಾದಲ್ಲಿ ಕೆಲಸ ಮಾಡಿದ ಎಲ್ಲರಿಗಾಗಿ ಶೋ ಪ್ರದರ್ಶಿಸಲಾಗಿತ್ತು.

ಆದಿಪುರುಷ್‌ ಚಿತ್ರವನ್ನು 700 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಿಸಲಾಗಿದೆ. ಇದುವರೆಗೆ ನಿರ್ಮಿಸಲಾದ ಅತ್ಯಂತ ದುಬಾರಿ ಭಾರತೀಯ ಚಿತ್ರ ಇದೆಂದು ಹೇಳಲಾಗಿದೆ. ರಾವಣನ ಪಾತ್ರದಲ್ಲಿ ಸೈಫ್ ಅಲಿ ಖಾನ್ ನಟಿಸಿದ್ದಾರೆ. ನಟ ದೇವದತ್ತ ನಾಗೆ ಹನುಮಾನ್ ಆಗಿ ಕಾಣಿಸಿಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Nandamuri Balakrishna: ಇಂದು ತೆಲುಗು ಸೂಪರ್‌ಸ್ಟಾರ್ ಬಾಲಯ್ಯ ಬರ್ತ್‌ಡೇ; ಹೊಸ ಸಿನಿಮಾ ಅನೌನ್ಸ್‌!

Nandamuri Balakrishna: ನಂದಮೂರಿ ಬಾಲಕೃಷ್ಣ ಅವರ ಅತ್ಯಂತ ದುಬಾರಿ ಚಿತ್ರಗಳಲ್ಲಿ ಇದು ಒಂದಾಗಲಿದೆ ಎಂದು ಹೇಳಲಾಗಿದೆ. ಬಾಲಕೃಷ್ಣ ಅವರು ‘ಭಗವಂತ ಕೇಸರಿ’ ಚಿತ್ರದಲ್ಲಿ ಕಾಜಲ್ ಅಗರ್ವಾಲ್ ಮತ್ತು ಶ್ರೀಲೀಲಾ ಸಹ-ನಟಿಯಾಗಿ ನಟಿಸಿದ್ದರು.ರಾಮ್ ಅಚಂತ ಮತ್ತು ಗೋಪಿಚಂದ್ ಅಚಂತಾ ಅವರು 14 ರೀಲ್ಸ್ ಪ್ಲಸ್‌ ಬ್ಯಾನರ್‌ ಅಡಿ ಸಿನಿಮಾವನ್ನು ಅದ್ಧೂರಿಯಾಗಿ ನಿರ್ಮಿಸಲಿದ್ದಾರೆ. ಎಂ ತೇಜಸ್ವಿನಿ ನಂದಮೂರಿ ಸಿನಿಮಾವನ್ನು ಪ್ರಸ್ತುತ ಪಡಿಸುತ್ತಿದ್ದಾರೆ.

VISTARANEWS.COM


on

Nandamuri Balakrishna BB4 new film announced
Koo

ಬೆಂಗಳೂರು: ತೆಲುಗು ಸೂಪರ್‌ಸ್ಟಾರ್ ನಂದಮೂರಿ ಬಾಲಕೃಷ್ಣ (Nandamuri Balakrishna) ಅವರಿಗೆ ಇಂದು ಜನುಮದಿನದ ಸಂಭ್ರಮ. ಹೀಗಾಗಿ ಅನೇಕ ಸಿನಿ ಗಣ್ಯರು ಸೇರಿದಂತೆ ಅವರ ಫ್ಯಾನ್ಸ್‌ ವಿಶ್‌ ಮಾಡುತ್ತಿದ್ದಾರೆ. ಇದೀಗ ಬೊಯಾಪಾಟಿ ಶ್ರೀನು ಅವರ ನಾಲ್ಕನೇ ಚಿತ್ರಕ್ಕಾಗಿ ಮತ್ತೆ ನಂದಮೂರಿ ಬಾಲಕೃಷ್ಣ ಒಂದಾಗಿದ್ದಾರೆ. 64ನೇ ವಸಂತಕ್ಕೆ ಕಾಲಿಟ್ಟ ಬಾಲಯ್ಯ ಇದೀಗ ‘BB4’ ಸಿನಿಮಾ ಅನೌನ್ಸ್‌ ಮಾಡಿದ್ದಾರೆ. BB4ಎಂದು ತಾತ್ಕಲಿಕವಾಗಿ ಶಿರ್ಷಿಕೆ ಇಡಲಾಗಿದೆ.

‘ಸಿಂಹ’, ‘ಲೆಜೆಂಡ್’ ಮತ್ತು ‘ಅಖಂಡ’ ನಂತರ ನಾಲ್ಕನೇ ಬಾರಿಗೆ ಬಾಲಕೃಷ್ಣ ಮತ್ತು ಬೊಯಾಪಾಟಿ ಶ್ರೀನು ಕೈ ಜೋಡಿಸಿದ್ದಾರೆ. ʻʻ’ಗಾಡ್ ಆಫ್ ಮಾಸಸ್’ ನಂದಮೂರಿ ಬಾಲಕೃಷ್ಣ ಮತ್ತು ಬೊಯಾಪಾಟಿ ಶ್ರೀನು BB4ಗಾಗಿ ಮತ್ತೆ ಒಂದಾಗುತ್ತಾರೆ. ಜನ್ಮದಿನದ ಶುಭಾಶಯಗಳು, ಬಾಲಯ್ಯ ಬಾಬುʼʼಎಂದು ಪೋಸ್ಟರ್‌ ಹಂಚಿಕೊಂಡಿದೆ. ನಂದಮೂರಿ ಬಾಲಕೃಷ್ಣ ಅವರ ಅತ್ಯಂತ ದುಬಾರಿ ಚಿತ್ರಗಳಲ್ಲಿ ಇದು ಒಂದಾಗಲಿದೆ ಎಂದು ಹೇಳಲಾಗಿದೆ. ಬಾಲಕೃಷ್ಣ ಅವರು ‘ಭಗವಂತ ಕೇಸರಿ’ ಚಿತ್ರದಲ್ಲಿ ಕಾಜಲ್ ಅಗರ್ವಾಲ್ ಮತ್ತು ಶ್ರೀಲೀಲಾ ಸಹ-ನಟಿಯಾಗಿ ನಟಿಸಿದ್ದರು.

ರಾಮ್ ಅಚಂತ ಮತ್ತು ಗೋಪಿಚಂದ್ ಅಚಂತಾ ಅವರು 14 ರೀಲ್ಸ್ ಪ್ಲಸ್‌ ಬ್ಯಾನರ್‌ ಅಡಿ ಸಿನಿಮಾವನ್ನು ಅದ್ಧೂರಿಯಾಗಿ ನಿರ್ಮಿಸಲಿದ್ದಾರೆ. ಎಂ ತೇಜಸ್ವಿನಿ ನಂದಮೂರಿ ಸಿನಿಮಾವನ್ನು ಪ್ರಸ್ತುತ ಪಡಿಸುತ್ತಿದ್ದಾರೆ.

ಇದನ್ನೂ ಓದಿ: Pawan Kalyan: ಮರು ಬಿಡುಗಡೆಯಾಗುತ್ತಿದೆ ಪವನ್ ಕಲ್ಯಾಣ್ ಹಳೆಯ ಸಿನಿಮಾ..!

ಹಿಂದೂಪುರ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ನಂದಮೂರಿ ಬಾಲಕೃಷ್ಣ (Nandamuri Balakrishna) ಅವರು ಹ್ಯಾಟ್ರಿಕ್​ ಗೆಲುವು ಸಾಧಿಸಿದ್ದರು. ಮೂರನೇ ಬಾರಿಗೆ ಶಾಸಕನಾಗಿ ಆಯ್ಕೆ ಆಗಿದ್ದಾರೆ. ತಂದೆ ಎನ್‌ಟಿಆರ್ ಹಾದಿಯಲ್ಲೇ ನಟ ಬಾಲಯ್ಯ ಚಿತ್ರರಂಗಕ್ಕೆ ಬಂದರು. ತಂದೆ ರಾಜಕೀಯರಂಗ ಪ್ರವೇಶಿಸಿ ಸಿಎಂ ಆಗಿ ಸೇವೆ ಸಲ್ಲಿಸಿದ್ದರು. ಈಗ ಬಾಲಯ್ಯ- ಚಂದ್ರಬಾಬು ಬೀಗರು ಸಹ ಆಗಿದ್ದಾರೆ. ಚಂದ್ರಬಾಬು ನಾಯ್ಡು ಮತ್ತೊಮ್ಮೆ ಸಿಎಂ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ.

Continue Reading

South Cinema

Kalki 2898 AD: ʼಕಲ್ಕಿ 2898 ಎಡಿʼ ಚಿತ್ರದಿಂದ ಹೊಸ ಪೋಸ್ಟರ್‌ ಔಟ್; ಗಾಬರಿ ಲುಕ್‌ನಲ್ಲಿ ದೀಪಿಕಾ!

Kalki 2898 AD: ʼ ಈ ಪೋಸ್ಟರ್ ಅನ್ನು ಸ್ವತಃ ದೀಪಿಕಾ ಅವರೇ ಅನಾವರಣಗೊಳಿಸಿದ್ದಾರೆ. ಪೋಸ್ಟರ್‌ನಲ್ಲಿ ದೀಪಿಕಾ ಅವರು ಅತ್ಯಂತ ಗಾಬರಿಯಾಗಿ ಕಂಡಿದ್ದಾರೆ. ದೀಪಿಕಾ ಲುಕ್‌ಗೆ ಫ್ಯಾನ್ಸ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ಸಿನಿಮಾ ನೋಡುವ ತವಕ ಹೆಚ್ಚಾಗಿದೆ ಎಂದು ಕಮೆಂಟ್‌ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಕೂಡ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ಕೆಲವು ದಿನಗಳ ಹಿಂದೆ ಚಿತ್ರತಂಡ ಅವರ ಪಾತ್ರ ಹೇಗಿರಲಿದೆ ಎನ್ನುವುದನ್ನು ರಿವೀಲ್ ಮಾಡಿತ್ತು.

VISTARANEWS.COM


on

Kalki 2898 AD Deepika Padukone looks poster
Koo

ಬೆಂಗಳೂರು: ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ತೆಲುಗು ಚಿತ್ರ ʼಕಲ್ಕಿ 2898 ಎಡಿʼ (Kalki 2898 ADಸದ್ಯ ನಿರೀಕ್ಷೆ ಹುಟ್ಟು ಹಾಕಿದೆ. ಜೂನ್‌ 27ರಂದು ತೆರೆಗೆ ಬರಲಿರುವ ಈ ಸಿನಿಮಾ ಈ ವರ್ಷದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಂಡಿದೆ. ಟಾಲಿವುಡ್‌ ಸ್ಟಾರ್‌ ಪ್ರಭಾಸ್‌, ಬಾಲಿವುಡ್‌ ಬ್ಯೂಟಿ‌, ಕನ್ನಡತಿ ದೀಪಿಕಾ ಪಡುಕೋಣೆ (Prabhas-Deepika Padukone) ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಕುತೂಹಲ ಮೂಡಿಸಿದೆ. ಇದೀಗ ಚಿತ್ರತಂಡ ದೀಪಿಕಾ ಪಡುಕೋಣೆ ಒಳಗೊಂಡಿರುವ ಹೊಸ ಪೋಸ್ಟರ್ ಬಿಡುಗಡೆ ಮಾಡಿದೆ. ಚಿತ್ರದ ಟ್ರೈಲರ್‌ ನಾಳೆ (ಜೂನ್‌ 10) ಬಿಡುಗಡೆಯಾಗಲಿದೆ.

ಈ ಪೋಸ್ಟರ್ ಅನ್ನು ಸ್ವತಃ ದೀಪಿಕಾ ಅವರೇ ಅನಾವರಣಗೊಳಿಸಿದ್ದಾರೆ. ಪೋಸ್ಟರ್‌ನಲ್ಲಿ ದೀಪಿಕಾ ಅವರು ಅತ್ಯಂತ ಗಾಬರಿಯಾಗಿ ಕಂಡಿದ್ದಾರೆ. ದೀಪಿಕಾ ಲುಕ್‌ಗೆ ಫ್ಯಾನ್ಸ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ಸಿನಿಮಾ ನೋಡುವ ತವಕ ಹೆಚ್ಚಾಗಿದೆ ಎಂದು ಕಮೆಂಟ್‌ ಮಾಡುತ್ತಿದ್ದಾರೆ.

ನಾಳೆ ಟ್ರೈಲರ್‌ ರಿಲೀಸ್‌

ಜೂನ್‌ 10ರಂದು ʼಕಲ್ಕಿ 2898 ಎಡಿʼ ಟ್ರೈಲರ್‌ ರಿಲೀಸ್‌ ಆಗಲಿದೆ. ಈ ಮುಂಚೆ ಹೊಸ ಪೋಸ್ಟರ್‌ ರಿಲೀಸ್‌ ಮಾಡಿ ಚಿತ್ರತಂಡ ಟ್ರೈಲರ್‌ ರಿಲೀಸ್‌ ದಿನಾಂಕವನ್ನು ಘೋಷಿಸಿತ್ತು. ಪೋಸ್ಟರ್‌ನಲ್ಲಿ ಗುಡ್ಡದ ಮೇಲೆ ಪ್ರಭಾಸ್‌ ನಿಂತಿರುವ ಚಿತ್ರ ಕಂಡು ಬಂದಿದ್ದು, ‘ಎಲ್ಲವೂ ಬದಲಾಗುವ ಸಮಯ ಬಂದಿದೆ’ ಎಂದು ಬರೆಯಲಾಗಿತ್ತು. ಭೂತ ಮತ್ತು ಭವಿಷ್ಯತ್‌ ಕಾಲದ ಕಥೆ ಹೇಳಲಿರುವ ʼಕಲ್ಕಿ 2898 ಎಡಿʼ ಚಿತ್ರಕ್ಕೆ ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ವೈಜಯಂತಿ ಮೂವೀಸ್‌ ಅದ್ಧೂರಿಯಾಗಿ ಚಿತ್ರವನ್ನು ನಿರ್ಮಿಸುತ್ತಿದೆ.

ಇದನ್ನೂ ಓದಿ: Kalki 2898 AD: ಪ್ರಭಾಸ್‌-ದೀಪಿಕಾ ಜೋಡಿಯ ʼಕಲ್ಕಿʼ ಚಿತ್ರದ ಟ್ರೈಲರ್‌ ರಿಲೀಸ್‌ಗೆ ಮುಹೂರ್ತ ಫಿಕ್ಸ್‌

ಕುತೂಹಲ ಮೂಡಿಸಿದ ಅಮಿತಾಭ್‌

ಈ ಸಿನಿಮಾದಲ್ಲಿ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಕೂಡ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ಕೆಲವು ದಿನಗಳ ಹಿಂದೆ ಚಿತ್ರತಂಡ ಅವರ ಪಾತ್ರ ಹೇಗಿರಲಿದೆ ಎನ್ನುವುದನ್ನು ರಿವೀಲ್ ಮಾಡಿತ್ತು. ಬಿಗ್ ಬಿ ಅಶ್ವತ್ಥಾಮನಾಗಿ ಕಾಣಿಸಿಕೊಳ್ಳುತ್ತಿದ್ದು, ಅವರ ಪಾತ್ರದ ಟೀಸರ್‌ ನೋಡಿ ಅಭಿಮಾನಿಗಳು ಫಿದಾ ಆಗಿದ್ದರು. ಗುಹೆಯೊಂದರಲ್ಲಿ ಮಗುವೊಂದು ನೀನು ಯಾರು? ಎಂದು ಕೇಳಿದಾಗ ʻʻಪ್ರಾಚೀನ ಕಾಲದಿಂದಲೂ ನಾನು ಕಲ್ಕಿಯ ಅವತಾರದ ಆಗಮನಕ್ಕಾಗಿ ಕಾಯುತ್ತಿದ್ದೇನೆ. ನಾನು ಗುರು ದ್ರೋಣರ ಮಗ ಅಶ್ವತ್ಥಾಮʼʼ ಎಂದು ಅಮಿತಾಭ್‌ ಹೇಳುವ ಮೂಲಕ ಈ ಸಿನಿಮಾದ ಕಥೆ ಪುರಾಣ ಕಾಲದಿಂದ ಭವಿಷ್ಯದತ್ತ ಸಾಗುತ್ತದೆ ಎನ್ನುವ ಸುಳಿವು ಲಭಿಸಿತ್ತು. ಭಾರತ ಚಿತ್ರರಂಗದ ಮಟ್ಟಿಗೆ ಇಂತಹ ಪ್ರಯೋಗ ಬಹಳ ಅಪರೂಪ.

ಈ ಹಿಂದೆ ಚಿತ್ರದ ಬಗ್ಗೆ ಮಾತನಾಡಿದ್ದ ನಿರ್ದೇಶಕ ಅಶ್ವಿನ್‌ ಚೈತ್ಯನ್ಯ, ʼʼಈ ಸಿನಿಮಾದ ಕಥೆ ಮಹಾಭಾರತದ ಕಾಲಘಟ್ಟಲ್ಲಿ ಆರಂಭವಾಗಿ ಕ್ರಿ.ಶ. 2898ರಲ್ಲಿ ಕೊನೆಗೊಳ್ಳಲಿದೆ. ಆ ಮೂಲಕ ಸುಮಾರು 6,000 ವರ್ಷಗಳ ಕಥೆಯನ್ನು ತೆರೆ ಮೇಲೆ ಮೂಡಿಸಲಿದ್ದೇವೆ. ಇದಕ್ಕಾಗಿ ಬಹಳಷ್ಟು ಶ್ರಮ ವಹಿಸಿದ್ದೇವೆʼʼ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದರು.

ಈ ಸಿನಿಮಾದಲ್ಲಿ ಪ್ರಭಾಸ್‌ ಭೈರವನಾಗಿ ಮಿಂಚಲಿದ್ದು, ಬಾಲಿವುಡ್‌ ನಟಿ ದಿಶಾ ಪಠಾಣಿ, ಕಮಲ್‌ ಹಾಸನ್‌ ಕೂಡ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಮತ್ತೊಂದು ವಿಶೇಷ ಎಂದರೆ ವಿವಿಧ ಭಾಷೆಗಳಲ್ಲಿ ತೆರೆಗೆ ಬರಲಿರುವ ಈ‌ ಸಿನಿಮಾದ ಕನ್ನಡ ಅವತರಣಿಕೆಯಲ್ಲಿ ತಮ್ಮ ಪಾತ್ರಕ್ಕೆ ದೀಪಿಕಾ ಪಡುಕೋಣೆಯೇ ಧ್ವನಿ ನೀಡಲಿದ್ದಾರೆ. ಜತೆಗೆ ಹಿಂದಿಯಲ್ಲಿಯೂ ಅವರು ಡಬ್‌ ಮಾಡಲಿದ್ದಾರೆ.

Continue Reading

ಸಿನಿಮಾ

Ramoji Rao Funeral: ರಾಮೋಜಿ ರಾವ್ ಪಾರ್ಥಿವ ಶರೀರ ಹೊತ್ತ ಚಂದ್ರಬಾಬು ನಾಯ್ಡು; ವಿಡಿಯೊ ನೋಡಿ

ರಾಮೋಜಿ ಫಿಲ್ಮ್ ಸಿಟಿ ಮತ್ತು ಈಟಿವಿ ನೆಟ್‌ವರ್ಕ್‌ನ ಸಂಸ್ಥಾಪಕ ರಾಮೋಜಿ ರಾವ್ (Ramoji Rao Funeral) ಅವರು ಶನಿವಾರ ನಿಧನರಾಗಿದ್ದು, ಭಾನುವಾರ ನಡೆದ ಅವರ ಅಂತ್ಯಕ್ರಿಯೆಯಲ್ಲಿ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ಪಾಲ್ಗೊಂಡರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕರು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

VISTARANEWS.COM


on

By

Ramoji Rao Funeral
Koo

ಹೈದರಾಬಾದ್: ರಾಮೋಜಿ ಫಿಲ್ಮ್ ಸಿಟಿ (Ramoji Film City) ಮತ್ತು ಈಟಿವಿ ನೆಟ್‌ವರ್ಕ್‌ನ (ETV Network) ಸಂಸ್ಥಾಪಕ 87 ವರ್ಷದ ರಾಮೋಜಿ ರಾವ್ (Ramoji Rao Funeral) ಅವರು ಶನಿವಾರ ನಿಧನರಾಗಿದ್ದು, ಅವರ ಅಂತ್ಯಕ್ರಿಯೆಯಲ್ಲಿ ಟಿಡಿಪಿ (TDP) ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು (N Chandrababu Naidu) ಅವರು ಭಾನುವಾರ ಪಾಲ್ಗೊಂಡರು. ರಾಮೋಜಿ ರಾವ್‌ ಅವರ ಪಾರ್ಥಿವ ಶರೀರ ಹೊರಲು ಚಂದ್ರಬಾಬು ನಾಯ್ಡು ಅವರು ಹೆಗಲು ಕೊಟ್ಟಿದ್ದು ಗಮನ ಸೆಳೆಯಿತು.

ಈ ಕುರಿತು ಎಕ್ಸ್ ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ನಾಯ್ಡು ಅವರು ರಾಮೋಜಿ ಅವರ ಪಾರ್ಥಿವ ಶರೀರವನ್ನು ಸಾಗಿಸಲು ಅವರ ಕುಟುಂಬ ಸದಸ್ಯರು ಮತ್ತು ಸ್ನೇಹಿತರೊಂದಿಗೆ ಸೇರಿಕೊಂಡರು. ಅಂತ್ಯಕ್ರಿಯೆಯ ಸ್ಥಳದಲ್ಲಿ ಅಭಿಮಾನಿಗಳು, ಕುಟುಂಬ ಸದಸ್ಯರು ಮತ್ತು ಸ್ನೇಹಿತರು ಅಂತಿಮ ನಮನ ಸಲ್ಲಿಸಲು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದಾಗ ರಾಜಕೀಯ ನಾಯಕ ನಾಯ್ಡು ಅವರು ಮೆರವಣಿಗೆಯನ್ನು ಮುನ್ನಡೆಸಿದರು.


ರಾಮೋಜಿ ರಾವ್ ಅವರು ನಗರದ ಸ್ಟಾರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಶನಿವಾರ ಬೆಳಗಿನ ಜಾವ 3.45ಕ್ಕೆ ಕೊನೆಯುಸಿರೆಳೆದಿದ್ದಾರೆ. ಅಧಿಕ ರಕ್ತದೊತ್ತಡ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಜೂನ್ 5ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಸ್ತ್ರಚಿಕಿತ್ಸೆಯ ಅನಂತರ ಅವರನ್ನು ವೆಂಟಿಲೇಟರ್ ಬೆಂಬಲದಲ್ಲಿ ಇರಿಸಲಾಗಿತ್ತು. ಬಳಿಕ ಅವರು ನಿಧನರಾದರು. ಅವರ ಪಾರ್ಥಿವ ಶರೀರವನ್ನು ರಾಮೋಜಿ ಫಿಲಂ ಸಿಟಿಯಲ್ಲಿರುವ ಅವರ ನಿವಾಸಕ್ಕೆ ಕರೆತರಲಾಗಿತ್ತು.

ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಿಗೆ ಹಲವಾರು ಪ್ರಮುಖ ರಾಜಕೀಯ ನಾಯಕರು ಮತ್ತು ಚಿತ್ರರಂಗದ ಗಣ್ಯರು ಅಂತಿಮ ನಮನ ಸಲ್ಲಿಸಿದರು.


ಮೋದಿ ಸಂತಾಪ

ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಶ್ರೀ ರಾಮೋಜಿ ರಾವ್ ಅವರ ನಿಧನವು ಅತ್ಯಂತ ದುಃಖಕರವಾಗಿದೆ. ಅವರು ಭಾರತೀಯ ಮಾಧ್ಯಮದಲ್ಲಿ ಕ್ರಾಂತಿಯನ್ನು ಮಾಡಿದ ದಾರ್ಶನಿಕರಾಗಿದ್ದರು. ಅವರ ಶ್ರೀಮಂತ ಕೊಡುಗೆಗಳು ಪತ್ರಿಕೋದ್ಯಮ ಮತ್ತು ಚಲನಚಿತ್ರ ಜಗತ್ತಿನಲ್ಲಿ ಅಳಿಸಲಾಗದ ಛಾಪು ಮೂಡಿಸಿವೆ. ಗಮನಾರ್ಹ ಪ್ರಯತ್ನಗಳು, ಅವರು ಮಾಧ್ಯಮ ಮತ್ತು ಮನರಂಜನಾ ಜಗತ್ತಿನಲ್ಲಿ ನಾವೀನ್ಯತೆ ಮತ್ತು ಶ್ರೇಷ್ಠತೆಗೆ ಹೊಸ ಮಾನದಂಡಗಳನ್ನು ಸ್ಥಾಪಿಸಿದರು ಎಂದು ಹೇಳಿದ್ದರು.


ರಾಮೋಜಿ ರಾವ್ ಅವರು ಭಾರತದ ಅಭಿವೃದ್ಧಿಯ ಬಗ್ಗೆ ಅಪಾರವಾದ ಉತ್ಸುಕರಾಗಿದ್ದರು. ಅವರೊಂದಿಗೆ ಸಂವಹನ ನಡೆಸಲು ಮತ್ತು ಅವರ ಬುದ್ಧಿವಂತಿಕೆಯಿಂದ ಪ್ರಯೋಜನ ಪಡೆಯಲು ಹಲವಾರು ಅವಕಾಶಗಳನ್ನು ಪಡೆದಿರುವುದು ನನ್ನ ಅದೃಷ್ಟ. ಈ ಕಷ್ಟದ ಸಮಯದಲ್ಲಿ ಅವರ ಕುಟುಂಬ, ಸ್ನೇಹಿತರು ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ ಎಂದು ಅವರು ವರ್ಣಿಸಿದ್ದರು.

ಇದನ್ನೂ ಓದಿ: Kangana Ranaut: ಕಂಗನಾ ರಣಾವತ್‌ಗೆ ಕಪಾಳಮೋಕ್ಷ; ಹೃತಿಕ್ ರೋಷನ್ ರಿಯಾಕ್ಷನ್‌ ಏನು?

ಮಹೇಶ್ ಬಾಬು ಸಂತಾಪ

ನಟ ಮಹೇಶ್ ಬಾಬು ಅವರು, ರಾಮೋಜಿ ರಾವ್ ಅವರ ಅಗಲುವಿಕೆಯಿಂದ ತೀವ್ರ ದುಃಖವಾಗಿದೆ. ಅವರ ಸಮಯಕ್ಕಿಂತ ಯಾವಾಗಲೂ ಮುಂದಿರುವ ದಾರ್ಶನಿಕ. ರಾಮೋಜಿ ಫಿಲ್ಮ್ ಸಿಟಿ ಅವರ ತೇಜಸ್ಸಿಗೆ ಮತ್ತು ಸಿನಿಮಾದ ಮೇಲಿನ ಉತ್ಸಾಹಕ್ಕೆ ಸಾಕ್ಷಿಯಾಗಿದೆ. ಅವರ ಪರಂಪರೆ ನಮಗೆಲ್ಲರಿಗೂ ಸ್ಫೂರ್ತಿ ನೀಡುತ್ತದೆ. ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ತಿಳಿಸಿದ್ದಾರೆ.

ರಿತೇಶ್ ದೇಶ್‌ಮುಖ್ ಸಂತಾಪ

ರಿತೇಶ್ ದೇಶ್‌ಮುಖ್ ಅವರು, ಐಕಾನ್, ಲೆಜೆಂಡ್ ಶ್ರೀ ರಾಮೋಜಿ ರಾವ್ ಅವರು ಇನ್ನಿಲ್ಲ ಎಂದು ತಿಳಿದು ನನಗೆ ತುಂಬಾ ದುಃಖವಾಗಿದೆ. ಹೊಸಬರಿಗೆ ಅವಕಾಶಗಳನ್ನು ನೀಡುವ ಅವರ ನಂಬಿಕೆಗೆ ಧನ್ಯವಾದಗಳು. ಅವರು ಯಾರೂ ಮಾಡದ ಕೆಲಸವನ್ನು ಮಾಡಲು ಧೈರ್ಯ ಮಾಡಿದರು. ಅವರ ಪರಂಪರೆಯು ಶಾಶ್ವತವಾಗಿ ಉಳಿಯುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

Continue Reading

ಟಾಲಿವುಡ್

Pawan Kalyan: ಮರು ಬಿಡುಗಡೆಯಾಗುತ್ತಿದೆ ಪವನ್ ಕಲ್ಯಾಣ್ ಹಳೆಯ ಸಿನಿಮಾ..!

Pawan Kalyan: ಈ ಸಿನಿಮಾ ಆಮೀರ್ ಖಾನ್ ಅವರ ‘ಜೋ ಜೀತಾ ವೋಹಿ ಸಿಕಂದರ್’ ಸಿನಿಮಾ ರಿಮೇಕ್‌ ಆಗಿದೆ. ನಂತರ ತಮಿಳು (ಬದ್ರಿ) ಮತ್ತು ಕನ್ನಡ (ಯುವರಾಜ) ಗೆ ರೀಮೇಕ್ ಮಾಡಲಾಯಿತು. ತಮಿಳಿನಲ್ಲಿ ದಳಪತಿ ವಿಜಯ್ ಮತ್ತು ಕನ್ನಡದಲ್ಲಿ ಶಿವ ರಾಜ್‌ಕುಮಾರ್ ನಟಿಸಿದ್ದಾರೆ. ಈ ಹಿಂದೆ ಪವನ್​ರ ‘ಜಲ್ಸ’, ‘ಗಬ್ಬರ್ ಸಿಂಗ್’, ‘ತೊಲಿ ಪ್ರೇಮ’ ಇನ್ನೂ ಕೆಲವು ಸಿನಿಮಾಗಳು ಮರು ಬಿಡುಗಡೆ ಆಗಿ ಒಳ್ಳೆಯ ಕಲೆಕ್ಷನ್ ಮಾಡಿದ್ದವು.

VISTARANEWS.COM


on

Pawan Kalyan Thammudu Re release
Koo

ಬೆಂಗಳೂರು: ಪವನ್ ಕಲ್ಯಾಣ್ (Pawan Kalyan) ಅಭಿನಯದ ‘ತಮ್ಮುಡು’ (Pawan Kalyan Thammudu) ಚಿತ್ರ 25 ವರ್ಷಗಳ ನಂತರ ಮರು-ಬಿಡುಗಡೆಯಾಗುತ್ತಿದೆ. ಪಿಎ ಅರುಣ್ ಪ್ರಸಾದ್ ಬರೆದು ನಿರ್ದೇಶಿಸಿದ ಈ ಚಿತ್ರ 1999 ರಲ್ಲಿ ಬಿಡುಗಡೆಯಾಗಿ ಬ್ಲಾಕ್‌ಬಸ್ಟರ್‌ ಹಿಟ್‌ ಕಂಡಿತ್ತು. ಇದೀಗ ಸಿನಿಮಾ ಜೂನ್ 15ರಂದು ಮತ್ತೊಮ್ಮೆ ಥಿಯೇಟರ್‌ಗಳಲ್ಲಿ ರಿ ರಿಲೀಸ್‌ ಆಗುತ್ತಿದೆ. ಚಿತ್ರದಲ್ಲಿ ಪ್ರೀತಿ ಜಾಂಗಿಯಾನಿ ಮತ್ತು ಅದಿತಿ ಗೋವಿತ್ರಿಕರ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಟಿಡಿಪಿ, ಬಿಜೆಪಿ ಜೊತೆ ಸೇರಿಕೊಂಡು ಆಂಧ್ರದ ಆಡಳಿತ ಪಕ್ಷವಾದ ವೈಸಿಪಿಯನ್ನು ಸೋಲಿಸಿ ಜಗನ್ ಅನ್ನು ಅಧಿಕಾರದಿಂದ ಕೆಳಗಿಳಿಸಿದ್ದಾರೆ. ಇದರ ನಡುವೆ ಇದೀಗ ಪವನ್​ ಕಲ್ಯಾಣ್‌ ಅವರ ಹಳೆಯ ಸಿನಿಮಾ ಒಂದು ಮರುಬಿಡುಗಡೆಗೆ ಮಾಡಲಾಗುತ್ತಿದೆ. ಈ ವರ್ಷ ಜೂನ್ 9 ಕ್ಕೆ ಸಿನಿಮಾ ಬಿಡುಗಡೆ ಆಗಿ 25 ವರ್ಷ ಪೂರ್ಣಗೊಳಿಸುತ್ತಿರುವ ಕಾರಣ, ಇದೀಗ ಈ ಸಿನಿಮಾವನ್ನು ಮರು ಬಿಡುಗಡೆ ಮಾಡಲಾಗುತ್ತಿದೆ. ಚುನಾವಣೆ ಬಳಿಕ ಪವನ್​ರ ಜನಪ್ರಿಯತೆ ದುಪ್ಪಟ್ಟಾಗಿದ್ದು, ‘ತಮ್ಮುಡು’ ಸಿನಿಮಾ ಚಿತ್ರಮಂದಿರಗಳಲ್ಲಿ ಮತ್ತೊಮ್ಮೆ ಭರ್ಜರಿ ಕಲೆಕ್ಷನ್ ಮಾಡಲಾಗಿದೆ ಎನ್ನಲಾಗುತ್ತಿದೆ.

ಈ ಸಿನಿಮಾ ಆಮೀರ್ ಖಾನ್ ಅವರ ‘ಜೋ ಜೀತಾ ವೋಹಿ ಸಿಕಂದರ್’ ಸಿನಿಮಾ ರಿಮೇಕ್‌ ಆಗಿದೆ. ನಂತರ ತಮಿಳು (ಬದ್ರಿ) ಮತ್ತು ಕನ್ನಡ (ಯುವರಾಜ) ಗೆ ರೀಮೇಕ್ ಮಾಡಲಾಯಿತು. ತಮಿಳಿನಲ್ಲಿ ದಳಪತಿ ವಿಜಯ್ ಮತ್ತು ಕನ್ನಡದಲ್ಲಿ ಶಿವ ರಾಜ್‌ಕುಮಾರ್ ನಟಿಸಿದ್ದಾರೆ. ಈ ಹಿಂದೆ ಪವನ್​ರ ‘ಜಲ್ಸ’, ‘ಗಬ್ಬರ್ ಸಿಂಗ್’, ‘ತೊಲಿ ಪ್ರೇಮ’ ಇನ್ನೂ ಕೆಲವು ಸಿನಿಮಾಗಳು ಮರು ಬಿಡುಗಡೆ ಆಗಿ ಒಳ್ಳೆಯ ಕಲೆಕ್ಷನ್ ಮಾಡಿದ್ದವು. ಕನ್ನಡದಲ್ಲಿ ‘ಯುವರಾಜ’ ಹೆಸರಿನಲ್ಲಿ ಶಿವರಾಜ್ ಕುಮಾರ್ ಸಹ ರೀಮೇಕ್ ಮಾಡಿದ್ದರು. ಆ ಸಿನಿಮಾ ಸಹ ಸೂಪರ್ ಹಿಟ್ ಎನಿಸಿಕೊಂಡಿತ್ತು.

ಆ ನಂತರ 2003ರಲ್ಲಿ ಚಾಂಪಿಯನ್ ಹೆಸರಿನಲ್ಲಿ ಬೆಂಗಾಲಿ ಭಾಷೆಗೆ ಕೂಡ ರಿಮೇಕ್ ಆಗಿತ್ತು ಈ ಸಿನಿಮಾ.ಉಳಿದಂತೆ ‘ಎನ್​ಡಿಎ’ದ ಪ್ರಮುಖ ಭಾಗ ಆಗಿರುವ ಪವನ್ ಕಲ್ಯಾಣ್ ಅವರಿಗೆ ಆಂಧ್ರ ಸರ್ಕಾರದಲ್ಲಿ ಪ್ರಮುಖ ಖಾತೆಯೂ ದೊರೆಯಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: Pawan Kalyan: ಪವನ್ ಕಲ್ಯಾಣ್ ಗಾಳಿಯಲ್ಲ ಬಿರುಗಾಳಿ ಎಂದ ಮೋದಿ! ಮೋದಿ ಇರುವವರೆಗೆ ದೇಶ ತಲೆಬಾಗುವುದಿಲ್ಲ ಎಂದ ಪವನ್‌!

ಪವನ್ ನಟಿಸಿರುವ ‘ಓಜಿ’, ‘ಹರಿಹರ ವೀರಮಲ್ಲು’ ಹಾಗೂ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾಗಳ ಬಿಡುಗಡೆಗೆ ರೆಡಿಯಿದೆ. ಈ ಸಿನಿಮಾಗಳು ಬಿಡುಗಡೆ ದಿನಾಂಕ ಮುಂದಿನ ದಿನಗಳಲ್ಲಿ ಘೋಷಣೆ ಆಗಲಿದೆ.

Continue Reading
Advertisement
Mohan Bhagwat
ದೇಶ24 mins ago

Mohan Bhagwat: ಮಣಿಪುರ ಹಿಂಸೆ ನಿಲ್ಲಿಸಿ; ಅಧಿಕಾರ ಹಿಡಿದ ಮೋದಿಗೆ ಟಾಸ್ಕ್‌ ಕೊಟ್ಟ ಮೋಹನ್‌ ಭಾಗವತ್!

Stabbing Case
ಕರ್ನಾಟಕ1 hour ago

Stabbing Case: ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ ಪ್ರಕರಣ; ಐವರು ಆರೋಪಿಗಳ ಬಂಧನ

Yuva Rajkumar
ಕರ್ನಾಟಕ1 hour ago

Yuva Rajkumar: ಶ್ರೀದೇವಿ ಭೈರಪ್ಪಗೆ ಅಕ್ರಮ ಸಂಬಂಧ; ಯುವ ರಾಜ್‌ಕುಮಾರ್ ಪರ ವಕೀಲ ಸ್ಫೋಟಕ ಹೇಳಿಕೆ

Modi 3.0 Cabinet
ದೇಶ2 hours ago

Modi 3.0 Cabinet: ಮೋದಿಗೆ ಬಾಹ್ಯಾಕಾಶ, ಅಮಿತ್‌ ಶಾಗೆ ಗೃಹ ಖಾತೆ; ಇಲ್ಲಿದೆ 72 ಸಚಿವರು ಹಾಗೂ ಖಾತೆಗಳ ಪಟ್ಟಿ

ಕರ್ನಾಟಕ2 hours ago

Modi 3.0 Cabinet: ಜೋಶಿಗೆ ಆಹಾರ, ಎಚ್‌ಡಿಕೆಗೆ ಬೃಹತ್ ಕೈಗಾರಿಕೆ‌, ನಿರ್ಮಲಾಗೆ ವಿತ್ತ, ಸೋಮಣ್ಣಗೆ ಡಬಲ್‌ ಖುಷಿ, ಶೋಭಾಗೆ MSME

Sowing seed distribution in Shira by MLA TB Jayachandra
ತುಮಕೂರು3 hours ago

Shira News: ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಶಾಸಕ ಟಿ.ಬಿ.ಜಯಚಂದ್ರ

World Environment Day celebration in Banavasi
ಉತ್ತರ ಕನ್ನಡ3 hours ago

Banavasi News: ಬನವಾಸಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Vinay Kulkarni
ಕರ್ನಾಟಕ4 hours ago

Vinay Kulkarni: ವಿನಯ್ ಕುಲಕರ್ಣಿಗೆ ತೀವ್ರ ಹಿನ್ನಡೆ; ಸಿಬಿಐ ವಿಶೇಷ ಕೋರ್ಟ್‌ನ ತೀರ್ಪು ಎತ್ತಿ ಹಿಡಿದ ಸುಪ್ರೀಂ

Modi 3.0 Cabinet
ಪ್ರಮುಖ ಸುದ್ದಿ4 hours ago

Modi 3.0 Cabinet: ಮೊದಲ ಸಂಪುಟ ಸಭೆಯಲ್ಲೇ ಮೋದಿ ಸಿಕ್ಸರ್;‌ ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಸ್ತು

Students Fashion
ಫ್ಯಾಷನ್4 hours ago

Students Fashion: ಕಾಲೇಜು ಹುಡುಗಿಯರ ಫ್ಯಾಷನ್‌ ಲಿಸ್ಟ್‌ಗೆ ಸೇರಿದ ಮಾರ್ಬಲ್‌ ಪ್ರಿಂಟೆಡ್‌ ಕ್ರಾಪ್‌ ಟಾಪ್ಸ್!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ6 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ7 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

ಟ್ರೆಂಡಿಂಗ್‌