Vistara-top-10-news Major developments of the day in a nut shell ವಿಸ್ತಾರ TOP 10 NEWS : ಬೀದಿಗೆ ಬಂದ ಅಕ್ಕಿಕಾಳಗ, ವಿಶ್ವಸಂಸ್ಥೆಯಲ್ಲಿ ಮೋದಿ ಯೋಗ.. ಹೀಗೆ ಪ್ರಮುಖ ಸುದ್ದಿಗಳು - Vistara News

ಕರ್ನಾಟಕ

ವಿಸ್ತಾರ TOP 10 NEWS : ಬೀದಿಗೆ ಬಂದ ಅಕ್ಕಿಕಾಳಗ, ವಿಶ್ವಸಂಸ್ಥೆಯಲ್ಲಿ ಮೋದಿ ಯೋಗ.. ಹೀಗೆ ಪ್ರಮುಖ ಸುದ್ದಿಗಳು

Vistara Top 10 News: ರಾಜ್ಯದಲ್ಲಿ ಅಕ್ಕಿ ಕಾಳಗ ಜೋರಾಗಿದೆ, ಮತಾಂತರ ನಿಷೇಧ ಕಾಯಿದೆ ಹಿಂಪಡೆದುದರ ವಿರುದ್ಧ ಹಿಂದು ಸಂಘಟನೆಗಳು ರೊಚ್ಚಿಗೆದ್ದಿವೆ. ಅತ್ತ ವಿಶ್ವಸಂಸ್ಥೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಗ ಮಾಡುವ ಸುದ್ದಿ ಬಂದಿದೆ. ಹೀಗೆ ದಿನದ ಪ್ರಮುಖ ಬೆಳವಣಿಗೆಗಳ ಗುಚ್ಛವೇ ವಿಸ್ತಾರ TOP 10 NEWS

VISTARANEWS.COM


on

Vistara Top 10
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

1.ಬೀದಿಗೆ ಬಂತು ಅಕ್ಕಿ ಜಗಳ: ಕೇಂದ್ರದ ವಿರುದ್ಧ ಜೂ.20ರಂದು ಕೈಪಡೆ ಹೋರಾಟ, ಎದುರಿಸಲು ಕಮಲಪಡೆ ರೆಡಿ
ಅನ್ನ ಭಾಗ್ಯ ಅಕ್ಕಿಗೆ ಸಂಬಂಧಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವಿನ ಜಗಳ ಬೀದಿಗೆ ಬಂದಿದೆ. ಅಕ್ಕಿಗೆ ಕೊಕ್ಕೆ ಹಾಕುವ ಕೇಂದ್ರದ ಕ್ರಮದ ವಿರುದ್ಧ ಜೂನ್‌ 20ರಂದು ಕಾಂಗ್ರೆಸ್‌ ಜಿಲ್ಲಾ ಮಟ್ಟದಲ್ಲಿ ಹೋರಾಟ ಸಂಘಟಿಸಲು ಮುಂದಾಗಿದ್ದರೆ, ಇದನ್ನು ಎದುರಿಸಲು ಬಿಜೆಪಿಯೂ ಅಣಿಯಾಗುತ್ತಿದೆ.
ಪೂರ್ಣ ವರದಿಗಳಿಗೆ ಈ ಎರಡು ವರದಿಗಳನ್ನು ಓದಿ
1. Karnataka Politics : ಅಕ್ಕಿ ಕೊಡದ ಕೇಂದ್ರದ ವಿರುದ್ಧ ಜೂ. 20ರಂದು ಕಾಂಗ್ರೆಸ್‌ ಉಗ್ರ ಹೋರಾಟ
2. ಕರ್ನಾಟಕ ಮಿನಿ ಪಾಕಿಸ್ತಾನ ಆದೀತು, ರಾಜ್ಯ ಒಂದೇ ವರ್ಷದಲ್ಲಿ ದಿವಾಳಿ; ಬಿಜೆಪಿ ಎಚ್ಚರಿಕೆ

2. ಮತಾಂತರ ನಿಷೇಧ ಕಾಯ್ದೆ ರದ್ದತಿಗೆ ಭುಗಿಲೆದ್ದ ಆಕ್ರೋಶ: ಹಲವೆಡೆ ಹಿಂದೂ ಸಂಘಟನೆಗಳ ಪ್ರತಿಭಟನೆ
ಕಾಂಗ್ರೆಸ್ ಸರ್ಕಾರ ಬಂದನಂತರ ಈ ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಕಾಯ್ದೆಗಳನ್ನು ರದ್ದು ಮಾಡಲು ಮುಂದಾಗಿದೆ. ಅದರಲ್ಲಿ ಮತಾಂತರ ನಿಷೇಧ ಕಾಯ್ದೆಯೂ ಒಂದು. ಹೀಗಾಗಿ ರಾಜ್ಯ ಸರ್ಕಾರ ಧೋರಣೆ ಖಂಡಿಸಿ ಹಿಂದುಪರ ಸಂಘಟನೆಗಳು ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆಸಿವೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

3. ಗ್ಯಾರಂಟಿಗಳಿಗೆ ಗ್ರಹಣ : ಜುಲೈ ತಿಂಗಳಲ್ಲಿ ಅಕ್ಕಿ ಸಿಗಲ್ಲ; ಗೃಹ ಲಕ್ಷ್ಮಿ, ಗೃಹಜ್ಯೋತಿಯೂ ವಿಳಂಬ
ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯಿಂದ ಘೋಷಿಸಿರುವ ಪಂಚ ಯೋಜನೆಗಳ (ಪೈಕಿ ಸದ್ಯಕ್ಕೆ ಜಾರಿಯಾಗಿರುವುದು ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಸ್ಕೀಂ ಒಂದೇ. ಉಳಿದ ಯೋಜನೆಗಳ ಜಾರಿಗೆ ಹಲವು ಎಡರುತೊಡರುಗಳು ಎದುರಾಗಿದ್ದು, ಇವೆಲ್ಲವೂ ವಿಳಂಬವಾಗುವ ಸಾಧ್ಯತೆ ದಟ್ಟವಾಗಿದೆ. ಜುಲೈ ತಿಂಗಳಿನಿಂದಲೇ ನೀಡಲಾಗುತ್ತದೆ ಎಂದು ಘೋಷಿಸಿರುವ ಅನ್ನ ಭಾಗ್ಯವೂ ಜಾರಿಯಾಗುವ ಲಕ್ಷಣ ಕಾಣಿಸುತ್ತಿಲ್ಲ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

4. ಬಿಜೆಪಿಯ ಒಳಬೇಗುದಿ ಮತ್ತೊಮ್ಮೆ ಸ್ಫೋಟ- ಬೊಮ್ಮಾಯಿ ವಿರುದ್ಧ ಪ್ರತಾಪ್‌ಸಿಂಹ ನೇರ ವಾಗ್ದಾಳಿ
ಕೆಲವು ದಿನಗಳ ಹಿಂದೆ ಹೊಂದಾಣಿಕೆ ರಾಜಕೀಯದಿಂದ ರಾಜ್ಯದಲ್ಲಿ ಬಿಜೆಪಿಗೆ ಸೋಲಾಯಿತು ಎಂದು ನೇರ ಆರೋಪ ಮಾಡಿದ್ದ ಮೈಸೂರು ಸಂಸದ ಪ್ರತಾಪ್‌ಸಿಂಹ ಇದೀಗ ಮತ್ತೊಮ್ಮೆ ತಮ್ಮ ಪ್ರತಾಪ ತೋರಿಸಿದ್ದಾರೆ. ಈ ಬಾರಿ ಅವರು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೇ ನೇರವಾಗಿ ಟಾರ್ಗೆಟ್‌ ಮಾಡಿ ಮಾಡಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

5. ಕಲಬುರಗಿಯಲ್ಲಿ ಮರಳು ಮಾಫಿಯಾಗೆ ಕಾನ್ಸ್‌ಟೇಬಲ್‌ ಬಲಿ: ರಾತ್ರೋರಾತ್ರಿ ಟ್ರ್ಯಾಕ್ಟರ್‌ ಹರಿಸಿ ಪರಾರಿ
ಅಫಜಲಪುರ ತಾಲೂಕಿನ ನಾರಾಯಣಪುರ ಬಳಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ಟ್ರ್ಯಾಕ್ಟರ್ ಹರಿದು ಕರ್ತವ್ಯ ನಿರತ ಪೊಲೀಸ್ ಪೇದೆ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮಯೂರ ಚವ್ಹಾಣ್‌ (51) ಮೃತ ದುರ್ದೈವಿ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

6. ಬಿಪರ್‌ಜಾಯ್‌ ಅಬ್ಬರಕ್ಕೆ ತತ್ತರಿಸಿದ ಗುಜರಾತ್‌: ಇಬ್ಬರ ಸಾವು, ಭಾರಿ ನಾಶ-ನಷ್ಟ
ಪಾಕಿಸ್ತಾನದ ಕರಾಚಿ ಮೂಲಕ ಗುಜರಾತ್‌ ಕರಾವಳಿಗೆ ಅಪ್ಪಳಿಸಿದ ಬಿಪರ್‌ಜಾಯ್‌ ಚಂಡಮಾರುತವು (Cyclone Biparjoy) ಅವಾಂತರ ಸೃಷ್ಟಿಸಿದೆ. ಗುಜರಾತ್‌ನ ಹಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು, ಭಾವನಗರ ಜಿಲ್ಲೆಯಲ್ಲಿ ಪ್ರವಾಹಕ್ಕೆ ತಂದೆ-ಮಗ ಬಲಿಯಾಗಿದ್ದಾರೆ. ಪ್ರವಾಹದಲ್ಲಿ ಸಿಲುಕಿದ ಮೇಕೆಗಳನ್ನು ರಕ್ಷಿಸಲು ಹೋಗಿ ತಂದೆ ಹಾಗೂ ಮಗ ಮೃತಪಟ್ಟಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ
ಪೂರಕ ಸುದ್ದಿ: ಕರಾವಳಿಯಲ್ಲಿ ಮುಂದುವರಿದ ಮಳೆಯಾಟ, ಒಳನಾಡಿನಲ್ಲಿ ಕೊಂಚ ಬ್ರೇಕ್‌

7. ಜೂ.21ರಂದು ವಿಶ್ವಸಂಸ್ಥೆಯಲ್ಲಿ ಮೋದಿ ಯೋಗಾಯೋಗ- ಭಾರತಕ್ಕೆ ಒಲಿದ ಯೋಗದಿನಾಚರಣೆ ನೇತೃತ್ವ
ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಭಾರತದ ‘ಯೋಗ’ಕ್ಕೆ ಒಳ್ಳೆಯ ಯೋಗ ಬಂದಿದೆ. ನರೇಂದ್ರ ಮೋದಿ ಅವರ ಪ್ರಯತ್ನದ ಫಲವಾಗಿಯೇ ಪ್ರತಿ ವರ್ಷ ಜೂನ್‌ 21ರಂದು ಅಂತಾರಾಷ್ಟ್ರೀಯ ಯೋಗ ದಿನ (Yoga Day 2023) ಆಚರಿಸಲಾಗುತ್ತದೆ. ಹೀಗೆ, ಜಗತ್ತಿಗೇ ಯೋಗವನ್ನು ಪರಿಚಯಿಸಿದ ಭಾರತಕ್ಕೆ ಮತ್ತೊಂದು ಗರಿ ಮೂಡಿದೆ. ಜೂನ್‌ 21ರಂದು ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ವಿಶ್ವಸಂಸ್ಥೆ ಕೇಂದ್ರ ಕಚೇರಿಯಲ್ಲಿ ಯೋಗಾಭ್ಯಾಸ ನಡೆಯಲಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

8. ಮಂಡ್ಯದಲ್ಲಿ ಅಂಬರೀಷ್‌ ಮಗ ಪುತ್ರ ಅಭಿಷೇಕ್‌- ಅವಿವಾ ಮದುವೆಯ ಭರ್ಜರಿ ಬೀಗರೂಟ
ಖ್ಯಾತ ನಟ ದಿ. ಅಂಬರೀಷ್‌ ಮತ್ತು ಸಂಸದೆ ಸುಮಲತಾ ದಂಪತಿಯ ಪುತ್ರ ಅಭಿಷೇಕ್‌ ಅವರ ವಿವಾಹ ಸಂಬಂಧ ಮಂಡ್ಯದಲ್ಲಿ ಶುಕ್ರವಾರ ಭರ್ಜರಿ ಬೀಗರೂಟ ನಡೆಯಿತು. ಬಗೆಬಗೆಯ ಖಾದ್ಯಗಳು ಜನರಿಗೆ ಮುದ ನೀಡಿದವು.
ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

9. ಆದಿಪುರುಷ್‌ ಸಿನಿಮಾ ನೋಡುವುದಕ್ಕೆ ಚಿತ್ರಮಂದಿರಕ್ಕೇ ಬಂದ ಹನುಮ!
ಪ್ರಭಾಸ್‌ ನಟನೆಯ ಬಹುನಿರೀಕ್ಷಿತ ಸಿನಿಮಾ ಆದಿಪುರುಷ ಬಿಡುಗಡೆಯಾಗಿದೆ. ರಾಮಾಯಣ ಕಥೆಯನ್ನೇ ಆಧರಿಸಿ ಮಾಡಿರುವ ಈ ಚಿತ್ರದಲ್ಲಿ ಪ್ರಭಾಸ್‌ ರಾಮನ ಪಾತ್ರದಲ್ಲಿ ಮಿಂಚಿದ್ದಾರೆ. ದೇಶದೆಲ್ಲೆಡೆ ಜನರು ಮುಗಿಬಿದ್ದು ಈ ಸಿನಿಮಾ ನೋಡುತ್ತಿದ್ದಾರೆ. ವಿಶೇಷವೆಂದರೆ ಮನುಷ್ಯರಷ್ಟೇ ಅಲ್ಲದೆ ಹನುಮಂತನ ರೂಪ ಎಂದು ಆರಾಧಿಸಲ್ಪಡುವ ಮಂಗ ಕೂಡ ಚಿತ್ರಮಂದಿರವೊಂದಕ್ಕೆ ನುಗ್ಗಿ ಸಿನಿಮಾ ನೋಡಿದೆ! ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

10. ರಾಜಿ ಮೂಲಕ 138 ದಂಪತಿಗಳ ವಿಚ್ಛೇದನ ತಡೆದಿದ್ದ ವಕೀಲನಿಗೆ ಡಿವೋರ್ಸ್‌ ನೀಡಿದ ಪತ್ನಿ
ಬದುಕಿನ ಪಯಣವೇ ಅಚ್ಚರಿ ಹಾಗೂ ಅನಿರೀಕ್ಷಿತ ತಿರುವುಗಳಿಂದ ಕೂಡಿರುತ್ತದೆ. ನಾವು ಅಂದುಕೊಂಡಿದ್ದೇ ಒಂದಾದರೆ, ನಮಗೆ ಎದುರಾಗುವುದೇ ಬೇರೆ. ಎಷ್ಟೇ ಒಳ್ಳೆಯವರಾಗಿರಿ, ಎಷ್ಟೇ ಪರೋಪಕಾರಿಯಾಗಿರಿ, ವಿಧಿಯ ತೀರ್ಮಾನವೇ ಬೇರೆಯಾಗಿರುತ್ತದೆ. ಇದಕ್ಕೆ ನಿದರ್ಶನ ಎಂಬಂತೆ, ಗುಜರಾತ್‌ನಲ್ಲಿ ರಾಜಿ ಮೂಲಕ 138 ಜೋಡಿಗಳ ವಿಚ್ಛೇದನ ತಪ್ಪಿಸಿದ್ದ ವಕೀಲರೊಬ್ಬರಿಗೆ ಅವರ ಪತ್ನಿ ವಿಚ್ಛೇದನ ನೀಡಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Murder News : ಖಾಸಗಿ ಕ್ಷಣದ ಫೋಟೋಗಳನ್ನಿಟ್ಟು ಬೆದರಿಕೆ ಹಾಕುತ್ತಿದ್ದವನನ್ನು ಕೊಲೆ ಮಾಡಿದ ವಿವಾಹಿತ ಮಹಿಳೆ

Murder News : ಪದೇ ಪದೆ ಬೆದರಿಕೆ ಹಾಕುತ್ತಿದ್ದ ರಾಜೇಶ್​ಗೆ ಸೌಮ್ಯವಾಗಿ ಮಾತನಾಡಿದ್ದ ಪ್ರೇಮಾ ತನ್ನ ಮನೆಗೆ ಕರೆಸಿಕೊಂಡಿದ್ದಳು. ಬಳಿಕ ಸಹೋದರ ಶಿವುನ ನೆರವಿನಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಹೊತ್ತು ಹಾಕಿ ಕೊಲೆ ಮಾಡಿದ್ದಾಳೆ.
ನಂಜನಗೂಡು ಪಟ್ಟಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು.

VISTARANEWS.COM


on

Murder News
Koo

ಮೈಸೂರು: ಖಾಸಗಿ ಕ್ಷಣಗಳ ಫೋಟೋಗಳನ್ನು ಸೋಶಿಯಲ್ ಮೀಡಿಯಾಗಳಲ್ಲಿ ಹಾಕಿ ಮರ್ಯಾದೆ ಕಳೆಯುವುದಾಗಿ ಬೆದರಿಕೆ ಹಾಕಿದ್ದ ಪ್ರಿಯಕರನ್ನು ವಿವಾಹಿತ ಮಹಿಳೆಯೊಬ್ಬಳು ಸಹೋದರನ ಜತೆ ಸೇರಿಕೊಂಡು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಪ್ರಕರಣ (Murder News) ಎಚ್​​​ಡಿ ಕೋಟೆ ತಾಲೂಕಿನ ಸಿದ್ದಯ್ಯನ ಹುಂಡಿ ಬಳಿ ನಡೆದಿದೆ. ಪ್ರೇಮಾ ಹಾಗೂ ಆಕೆಯ ಸಹೋದರ ಶಿವು ಕೊಲೆ ಆರೋಪಿಗಳು. 32 ವರ್ಷದ ರಾಜೇಶ್​ ಕೊಲೆಯಾದ ವ್ಯಕ್ತಿ.

ಆರೋಪಿ ಪ್ರೇಮಾ ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿಯಾಗಿದ್ದಾರೆ. ಅವರು 15 ವರ್ಷದ ಹಿಂದೆ ನಂಜನಗೂಡಿನ ಶ್ರೀರಾಂಪುರಕ್ಕೆ ಮದುವೆ ಆಗಿ ಬಂದಿದ್ದರು. ಒಂದು ತಿಂಗಳ ಹಿಂದೆ ಪ್ರೇಮಾಳ ಪತಿ ಆತ್ಮಹತ್ಯೆ. ಮಾಡಿಕೊಂಡಿದ್ದರು. ಆ ಬಳಿಕ ಪ್ರೇಮಾ ಪತಿಯ ಸ್ನೇಹಿತ ರಾಜೇಶ್​ ಜತೆ ಪ್ರೀತಿಯಲ್ಲಿ ಬಿದ್ದಿದ್ದಳು. ಅವರಿಬ್ಬರು ಖಾಸಗಿ ಕ್ಷಣಗಳನ್ನೂ ಕಳೆದಿದ್ದರು. ಇದನ್ನೇ ದುರ್ಬಳಕೆ ಮಾಡಿಕೊಂಡಿದ್ದ ರಾಜೇಶ್​​, ಆ ಕ್ಷಣದ ಫೋಟೋಗಳನ್ನು ತೆಗೆದಿಟ್ಟುಕೊಂಡು ಬೆದರಿಕೆ ಹಾಕಲು ಆರಂಭಿಸಿದ್ದ. ಬೆದರಿದ ಪ್ರೇಮಾ ಆತನ ಜೀವನ ಕೊನೆಗೊಳಿಸಲು ನಿರ್ಧರಿಸಿದ್ದಾಳೆ. ಅಂತೆಯೇ ಆತನನ್ನು ತನ್ನ ಬಳಿಗೆ ಕರೆಸಿಕೊಂಡು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾಳೆ.

ಇದನ್ನೂ ಓದಿ: Actor Darshan Arrested : ಲಾಕಪ್​ನಲ್ಲಿ ಸೊಳ್ಳೆ ಕಡಿತಕ್ಕೆ ಬೆಚ್ಚಿ ರಾತ್ರಿಯೆಲ್ಲ ಎದ್ದು ಕುಳಿತಿದ್ದ ನಟ ದರ್ಶನ್​!

ಪದೇ ಪದೆ ಬೆದರಿಕೆ ಹಾಕುತ್ತಿದ್ದ ರಾಜೇಶ್​ಗೆ ಸೌಮ್ಯವಾಗಿ ಮಾತನಾಡಿದ್ದ ಪ್ರೇಮಾ ತನ್ನ ಮನೆಗೆ ಕರೆಸಿಕೊಂಡಿದ್ದಳು. ಬಳಿಕ ಸಹೋದರ ಶಿವುನ ನೆರವಿನಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಹೊತ್ತು ಹಾಕಿ ಕೊಲೆ ಮಾಡಿದ್ದಾಳೆ.
ನಂಜನಗೂಡು ಪಟ್ಟಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು.

ಹಿರಿಯ ಸ್ವಾಮೀಜಿ ಕೊಂದ‌ ಆರೋಪಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ


ಮೈಸೂರು: ಮೈಸೂರಿನ ಸಿದ್ದಾರ್ಥನಗರದಲ್ಲಿ ಅನ್ನದಾನೇಶ್ವರ ಮಠದ ಶ್ರೀ ಶಿವಾನಂದ ಸ್ವಾಮೀಜಿ ಅವರ ಆಪ್ತ ಸಹಾಯಕನಿಂದಲೇ ಬರ್ಬರವಾಗಿ ಕೊಂದು (Murder case ) ಹಾಕಿದ್ದ. ಕೊಲೆ ಪ್ರಕರಣದಲ್ಲಿ ಬಂಧಿಯಾಗಿರುವ ಆರೋಪಿ ರವಿ ಸೋಮವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅಸ್ವಸ್ಥಗೊಂಡಿದ್ದ ಆರೋಪಿ ರವಿಯನ್ನು ಪೊಲೀಸರು ಕೆಆರ್‌ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕುಡಿತದ ಚಟಕ್ಕೆ ಒಳಗಾಗಿದ್ದ ರವಿಗೆ ಶಿವಾನಂದ ಸ್ವಾಮೀಜಿ ಬುದ್ಧಿವಾದ ಹೇಳಿದ್ದರು. ಸ್ವಾಮೀಜಿ ಕುಡಿಯಲು ಹಣ ನೀಡಲಿಲ್ಲ ಎಂಬ ಕಾರಣಕ್ಕೆ ರವಿ ಕೊಲೆ ಮಾಡಿದ್ದ ಎನ್ನಲಾಗಿದೆ. ಸದ್ಯ ಆರೋಪಿ‌ ರವಿ ಗುಣಮುಖನಾದ ಬಳಿಕ ಪೊಲೀಸರು ತನಿಖೆಯನ್ನು ಮುಂದುವರಿಸಲಿದ್ದಾರೆ.

ಏನಿದು ಪ್ರಕರಣ?
ನಿನ್ನೆ ಸೋಮವಾರ (ಜೂ.10) ಮೈಸೂರಿನಲ್ಲಿ ಹಿರಿಯ ಸ್ವಾಮೀಜಿಯೊಬ್ಬರ ಬರ್ಬರ (Murder case) ಕೊಲೆಯಾಗಿತ್ತು. ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಅನ್ನದಾನೇಶ್ವರ ಮಠದ ಶಿವಾನಂದ (90) ಸ್ವಾಮೀಜಿ ಕೊಲೆಯಾದವರು. ಶಿವಾನಂದ ಸ್ವಾಮೀಜಿ ಅವರ ಸಹಾಯಕನಾಗಿದ್ದ ಭದ್ರತಾ ಸಿಬ್ಬಂದಿಯಿಂದಲೇ ಕೊಲೆ ನಡೆದಿತ್ತು.

ರವಿ (60) ಎಂಬಾತನಿಂದ ಈ ಕೃತ್ಯ ನಡೆದಿತ್ತು. ಶಿವಾನಂದ ಸ್ವಾಮೀಜಿಯನ್ನು ಮಾರಕಾಸ್ತ್ರದಿಂದ ಚುಚ್ಚಿ ಕೊಲೆ ಮಾಡಲಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಜರ್‌ಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಮಂಚದ ಮೇಲೆ ಮಲಗಿದ್ದಲ್ಲೇ ಶಿವಾನಂದ ಸ್ವಾಮೀಜಿಗೆ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು.

Continue Reading

ಸ್ಯಾಂಡಲ್ ವುಡ್

Actor Darshan Arrested : ಲಾಕಪ್​ನಲ್ಲಿ ಸೊಳ್ಳೆ ಕಡಿತಕ್ಕೆ ಬೆಚ್ಚಿ ರಾತ್ರಿಯೆಲ್ಲ ಎದ್ದು ಕುಳಿತಿದ್ದ ನಟ ದರ್ಶನ್​!

Actor Darshan Arrested : ಸೊಳ್ಳೆ ಕಡಿತದ ಜತೆಗೆ ದರ್ಶನ್​ ಸಿಕ್ಕಾಪಟ್ಟೆ ಚಿಂತೆಯಲ್ಲಿ ಇದ್ದಂತೆ ಕಂಡು ಬಂತು. ಲಾಕ್​ಅಪ್​ನೊಳಗೆ ಆಗಾಗ ಎಚ್ಚರಗೊಂಡು ಕುಳಿತಿರುತ್ತಿದ್ದರು. ಆರಾಮವಾಗಿ ಎಸ್ಟೇಟ್​, ಬಂಗಲೆಯಲ್ಲಿ ಮಲಗುತ್ತಿದ್ದ ದರ್ಶನ್​ಗೆ ಜೈಲು ವಾಸ ಚಿಂತೆಯನ್ನು ಉಂಟು ಮಾಡಿತ್ತು.

VISTARANEWS.COM


on

Actor Darshan Arrested
Koo

ಬೆಂಗಳೂರು: ತನ್ನದೇ ಅಭಿಮಾನಿ ರೇಣುಕಾ ಸ್ವಾಮಿ ಎಂಬುವರನ್ನು ಕ್ರೂರವಾಗಿ ಕೊಲೆ ಮಾಡಿರುವ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ (Actor Darshan Arrested)​, ಸೊಳ್ಳೆ ಕಡಿತಕ್ಕೆ ಬೆಚ್ಚಿ ರಾತ್ರಿಯೆಲ್ಲ ಎಚ್ಚರವಿದ್ದರು. ಕೊಲೆಯಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ದರ್ಶನ್ ಮತ್ತು ಆತನ ಸಹಚರಿಗೆ ಕಾಮಾಕ್ಷಿಪಾಳ್ಯ ಪೊಲೀಸರು ಬೇರೆ ಬೇರೆ ಲಾಕಪ್​ನಲ್ಲಿ ಮಲಗಲು ವ್ಯವಸ್ಥೆ ಮಾಡಿದ್ದರು. ಆದರೆ, ಇದುವರೆಗೆ ಜೇಬುಗಳ್ಳರ, ಮನೆಗಳ್ಳರ ಮತ್ತು ಸಣ್ಣಪುಟ್ಟ ಹೊಡೆದಾಟಗಳಲ್ಲಿ ಜೈಲು ಸೇರುತ್ತಿದ್ದವರ ರಕ್ತ ಹೀರಿ ಅಭ್ಯಾಸವಿದ್ದ ಸೊಳ್ಳೆಗಳು ದರ್ಶನ್​ಗೂ ಕಾಟ ಕೊಟ್ಟವು. ಪೊಲೀಸರು ‘ಸೆಲೆಬ್ರಿಟಿ ದರ್ಶನ್​ಗೆ’ ಕಾರ್ಪೆಟ್​, ದಿಂಬು ಎಲ್ಲ ಕೊಟ್ಟು ಮಲಗಲು ವ್ಯವಸ್ಥೆ ಮಾಡಿದ್ದರೂ ಸೊಳ್ಳೆಗಳು ಅವೆಲ್ಲವನ್ನೂ ಲೆಕ್ಕಕ್ಕೆ ತೆಗೆದುಕೊಳ್ಳದೇ ಬೆಡ್​ಶೀಟ್​ ಒಳಗಿನಿಂದ ತೂರಿಕೊಂಡು ಹೋಗಿ ಕಚ್ಚಿದವು.

ಕೊಲೆ ಆರೋಪ ಎದುರಿಸುತ್ತಿರುವ ದರ್ಶನ್ ಹಾಗೂ ಉಳಿದ 11 ಜನ ಆರೋಪಿಗಳು ಲಾಕ್ ಅಪ್ ನಲ್ಲೇ ಉಳಿಯಬೇಕಾಯಿತು. ದರ್ಶನ್‌, ರಾಘವೇಂದ್ರ ಮತ್ತು ವಿನಯ್ ಗೆ ಒಂದು ಲಾಕ್ ಅಪ್ ನಲ್ಲಿ ಮಲಗಲು ವ್ಯವಸ್ಥೆ ಮಾಡಿದ್ದರೆ, ಇತರ ಆರೋಪಿಗಳಿಗೆ ಮತ್ತೊಂದು ಲಾಕ್ ಅಪ್​ನಲ್ಲಿ ಮಲಗಲು ಹೇಳಿದ್ದರು. ರಾತ್ರಿ ಆರೋಪಿಗಳಿಗೆ ಖಾಸಗಿ ಹೋಟೆಲ್ ನಿಂದ ದೊನ್ನೆ ಬಿರಿಯಾನಿ‌ ವ್ಯವಸ್ಥೆ ಮಾಡಲಾಗಿತ್ತು. ಚೆನ್ನಾಗಿ ತಿಂದಿದ್ದ ಅವರು ಪೊಲೀಸರೇ ಒದಗಿಸಿದ್ದ ಹಾಸಿಗೆ ಪರಿಕರಗಳು, ಬೆಡ್ ಶೀಟ್, ತಲೆ ದಿಂಬು ಬಳಸಿ ಮಲಗಿದ್ದರು. ಆದರೆ, ಸೊಳ್ಳೆಗಳು ಅವರ ರಕ್ಷಣಾ ಕೋಟೆಯನ್ನು ಭೇದಿಸಿ ಬಂದು ಕಚ್ಚಿದ್ದವು.

ಚಿಂತೆಗೆ ಬಿದ್ದಿರುವ ದರ್ಶನ್​

ಸೊಳ್ಳೆ ಕಡಿತದ ಜತೆಗೆ ದರ್ಶನ್​ ಸಿಕ್ಕಾಪಟ್ಟೆ ಚಿಂತೆಯಲ್ಲಿ ಇದ್ದಂತೆ ಕಂಡು ಬಂತು. ಲಾಕ್​ಅಪ್​ನೊಳಗೆ ಆಗಾಗ ಎಚ್ಚರಗೊಂಡು ಕುಳಿತಿರುತ್ತಿದ್ದರು. ಆರಾಮವಾಗಿ ಎಸ್ಟೇಟ್​, ಬಂಗಲೆಯಲ್ಲಿ ಮಲಗುತ್ತಿದ್ದ ದರ್ಶನ್​ಗೆ ಜೈಲು ವಾಸ ಚಿಂತೆಯನ್ನು ಉಂಟು ಮಾಡಿತ್ತು.

ಭಾರೀ ಭದ್ರತೆ

ದರ್ಶನ್​ ಹಾಗೂ ಆತನ ಗ್ಯಾಂಗ್​ನ ಸದಸ್ಯರು ಇದ್ದ ಪೊಲೀಸ್ ಠಾಣೆಗೆ ಭದ್ರತೆಯನ್ನು ಹೆಚ್ಚಿಸಲಾಗಿತ್ತು . ವಿಐಪಿ ಆರೋಪಿಗಳ ಮೇಲೆ ದಾಳಿಯಾಗುವ ಅಥವಾ ಇನ್ಯಾವುದೇ ಅನಾಹುತಗಳನ್ನು ತಪ್ಪಿಸುವ ಉದ್ದೇಶದಿಂದ ಠಾಣೆಯ ಹೊರಗಡೆ ಕೆಎಸ್​ಆರ್​​ಪಿ ಪೊಲೀಸ್​ ತಂಡವೊಂದನ್ನು ನಿಯೋಜಿಸಲಾಗಿತ್ತು. ದರ್ಶನ್​ಗೆ ದೊಡ್ಡ ಪ್ರಮಾಣದ ಅಭಿಮಾನಿ ಬಳಗವಿದೆ. ಹುಚ್ಚು ಅಭಿಮಾನ ದರ್ಶನ್ ಆರೋಪಿಯೇ ಅಲ್ಲ ಎಂದು ವಾದಿಸುವ ಮಟ್ಟಕ್ಕೆ ಬಂದಿದೆ. ಹೀಗಾಗಿ ಡಿ ಬಾಸ್ ನೋಡಲು ಪೊಲೀಸ್​ ಠಾಣೆಗೆ ಬರಬಹುದು ಎಂಬ ಊಹೆ ಮೇಲೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ಇಂದಿನಿಂದ ಆರು ದಿನಗಳ ಕಾಲ ತನಿಖೆ

ಬುಧವಾರದಿಂದ ಆರಂಭಗೊಂಡಂತೆ ದರ್ಶನ್ ಗ್ಯಾಂಗ್​​ಗೆ ಆರು ದಿನಗಳ ಕಾಲ ಪೊಲೀಸ್ ವಿಚಾರಣೆ ನಡೆಯಲಿದೆ. ಕೊಲೆ ಕೇಸ್ ಸಂಬಂಧ ಪೊಲೀಸರು ಸಾಕ್ಷ್ಯಗಳನ್ನು ಒಟ್ಟು ಮಾಡಲಿದ್ದಾರೆ. ಆರಂಭದಲ್ಲಿ ಆರೋಪಿಗಳ ಎಲೆಕ್ಟ್ರಾನಿಕ್ ಡಿವೈಸ್​​ಗಳ ತಲಾಷೆ ನಡೆಯಲಿದೆ. ಜತೆಗೆ ಅಪಹರಿಸಿಕೊಂಡು ಬಂದು ಕೂಡಿ ಹಾಕಿದ ಜಾಗ, ಕೊಲೆ ಮಾಡಿ ಎಸೆದ ಜಾಗವನ್ನು ಮಹಜರು ಮಾಡಲಿದ್ದಾರೆ.

ಇದನ್ನೂ ಓದಿ: Actor Darshan Arrested : ದರ್ಶನ್​ಗೆ ಪೊಲೀಸ್ ಠಾಣೆಯಲ್ಲಿ ರಾಜಾತಿಥ್ಯ; ಚಿಕ್ಕಪೇಟೆ ಬಿರಿಯಾನಿ, ಡೋಲೊ 650 ಮಾತ್ರೆ!

ರೇಣುಕಾಸ್ವಾಮಿಯನ್ನು ಹತ್ಯೆ ಮಾಡಿದ್ದು ಯಾರು, ಯಾರು ಅವರಿಗೆ ಹೊಡೆದಿದ್ದಾರೆ, ಅವರನ್ನು ಎತ್ತಿ ಹಾಕಿಕೊಂಡು ಬಂದು ಎಸೆದು ಹೋಗಿದ್ದು ಯಾರು ಎಂಬೆಲ್ಲ ಕೋನದಿಂದ ತನಿಖೆ ನಡೆಸಲಿದ್ದಾರೆ. ಅಮಾನುಷವಾಗಿ ಕೊಲೆ ಮಾಡಲು ಬಳಸಿರುವ ಪರಿಕರಗಳನ್ನು ಪೊಲೀಸರು ವಶಕ್ಕೆ ಪಡೆಯಲಿದ್ದಾರೆ. ಬಿಸಾಡಿರುವ ಆಯುಧಗಳನ್ನು ಹುಡುಕಿ ಪತ್ತೆ ಹಚ್ಚಲಿದ್ದಾರೆ.

ಪ್ರಮುಖವಾಗಿ ಹತ್ಯೆ ನಡೆದ ದಿನ ಆರೋಪಿಗಳ ಮೊಬೈಲ್​ ನೆಟ್​ವರ್ಕ್ ಇದ್ದ ಜಾಗವನ್ನು ಪತ್ತೆ ಹಚ್ಚಲಿದ್ದಾರೆ. ಈ ಮಾಹಿತಿಯು ಆರೋಪಿಗಳ ವಿರುದ್ಧ ಚಾರ್ಜ್​ ಶೀಟ್​ ಸಲ್ಲಿಕೆ ಮಾಡುವುದಕ್ಕೆ ಪ್ರಮುಖ ಸಾಕ್ಷಿಗಳಾಗಲಿವೆ. ಅದೇ ರೀತಿ ಆರೋಪಿಗಳನ್ನು ಚಿತ್ರದುರ್ಗಕ್ಕೆ ಕರೆದೊಯ್ದು ತನಿಖೆ ನಡೆಸಲು ಪೊಲೀಸರು ಮುಂದಾಗಲಿದ್ದಾರೆ.

Continue Reading

ಪ್ರಮುಖ ಸುದ್ದಿ

Actor Darshan Arrested : ದರ್ಶನ್​ಗೆ ಪೊಲೀಸ್ ಠಾಣೆಯಲ್ಲಿ ರಾಜಾತಿಥ್ಯ; ಚಿಕ್ಕಪೇಟೆ ಬಿರಿಯಾನಿ, ಡೋಲೊ 650 ಮಾತ್ರೆ!

VISTARANEWS.COM


on

Actor Darshan Arrested
Koo

ಬೆಂಗಳೂರು : ತನ್ನ ಅಭಿಮಾನಿ ರೇಣುಕಾ ಸ್ವಾಮಿ ಎಂಬುವರನ್ನು ಅಮಾನುಷವಾಗಿ ಕೊಲೆ ಮಾಡಿರುವ ಪ್ರಕರಣದಲ್ಲಿ ಪೊಲೀಸ್​​ ಕಸ್ಟಡಿಯಲ್ಲಿರುವ ನಟ ದರ್ಶನ್ (Actor Darshan Arrested) ಹಾಗೂ ಆತನ ಸಹಚರರಿಗೆ ಕಾಮಾಕ್ಷಿ ಪಾಳ್ಯ ಪೊಲೀಸರು ಮಂಗಳವಾರ ರಾತ್ರಿಯ ಊಟಕ್ಕೆ ಚಿಕ್ಕಪೇಟೆ ಬಿರಿಯಾನಿ ತಂದುಕೊಟ್ಟಿದ್ದಾರೆ. ಪ್ರಕರಣದಲ್ಲಿ ದರ್ಶನ್​ ಮತ್ತು ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳಿದ್ದಾರೆ. ಅವರೆಲ್ಲರನ್ನೂ ನ್ಯಾಯಾಲಯ ಪೊಲೀಸರ ಕಸ್ಟಡಿಗೆ ನೀಡಿದೆ. ಪವಿತ್ರಾ ಸಾಂತ್ವನ ಕೇಂದ್ರದಲ್ಲಿ ಇದ್ದರೆ ಉಳಿದವರು ಕಾಮಾಕ್ಷಿಪಾಳ್ಯ ಪೊಲೀಸರ ವಶದಲ್ಲಿದ್ದಾರೆ. ರಾತ್ರಿಯ ಊಟಕ್ಕೆ ಪೊಲೀಸರು ಅವರೆಲ್ಲರಿಗೂ ಚಿಕ್ಕಪೇಟೆ ಬಿರಿಯಾನಿ ಪ್ಯಾಕೇಟ್​ಗಳನ್ನು ತೆಗೆದುಕೊಂಡು ಹೋಗಿರುವ ದೃಶ್ಯಗಳು ಸೆರೆಯಾಗಿವೆ.

ದೊಡ್ಡ ಪ್ರಮಾಣದಲ್ಲಿ ಬಿರಿಯಾನಿ ಪ್ಯಾಕೆಟ್​ಗಳನ್ನು ಕ್ಯಾರಿ ಬ್ಯಾಗ್​ನಲ್ಲಿ ತುಂಬಿಸಿಕೊಂಡು ಹೋಗಿದ್ದು, ಜತೆಗೆ ಎಲ್ಲರಿಗೂ ಮಿನರಲ್ ವಾಟರ್​ ನೀಡಲಾಗಿದೆ. ಆರೋಪಿಗಳು ಕೆಲವರು ಬೆಳಗ್ಗಿನಿಂದ ಬಂಧನ ಹಾಗೂ ಇನ್ನಿತರ ಕಾನೂನು ಪ್ರಕ್ರಿಯೆಗಳ ಹಿನ್ನೆಲೆಯಲ್ಲಿ ಮೈಕೈ ನೋವು, ತಲೆ ನೋವು ಎಂದಿದ್ದು ಅವರೆಲ್ಲರಿಗೂ ಡೋಲೋ 650 ಮಾತ್ರೆಯನ್ನೂ ತಂದಕೊಟ್ಟಿದ್ದಾರೆ.

ಆರೋಪಿ ಚಿತ್ರನಟ ಹಾಗೂ ಇದು ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಪ್ರಕರಣವಾಗಿರುವ ಕಾರಣ ತಮ್ಮ ವಶದಲ್ಲಿರುವ ಆರೋಪಿಗಳನ್ನು ಸರಿಯಾಗಿ ನೋಡಿಕೊಳ್ಳುವುದು ಪೊಲೀಸರಿಗೆ ಅನಿವಾರ್ಯ. ಹೀಗಾಗಿ ಅವರ ಊಟ, ತಿಂಡಿ ಹಾಗೂ ಇನ್ನಿತರ ಉಪಚಾರಗಳನ್ನು ಮಾಡಲು ಪೊಲೀಸರ ತಂಡ ನಾನಾ ರೀತಿಯ ಶ್ರಮಗಳನ್ನು ಹಾಕುತ್ತಿದೆ.

ಹಾಸಿಗೆ, ತಲೆದಿಂಬು

ಆರೋಪಿ ನಂಬರ್ 1 ದರ್ಶನ್ ಹಾಗೂ ಉಳಿದ ಆರೋಪಿಗಳಿಗೆ ಪೊಲೀಸರು ರಾತ್ರಿ ವೇಳೆ ಮಲಗಲು ಹಾಸಿಗೆ ಹಾಗೂ ತಲೆ ದಿಂಬು ವ್ಯವಸ್ಥೆಯನ್ನೂ ಮಾಡಿದ್ದಾರೆ. 9 ಗಂಟೆ ವೇಳೆಗೆ ಪೊಲೀಸರು ನಾನಾ ಕಡೆಯಿಂದ ಆರೋಪಿಗಳೆಲ್ಲರಿಗೂ ಮಲಗಲು ಕಾರ್ಪೆಟ್​, ಬೆಡ್​ಶೀಟ್​ ಹಾಗೂ ತಲೆ ದಿಂಬಿನ ವ್ಯವಸ್ಥೆ ಮಾಡಿದ್ದಾರೆ. ಆರು ದಿನಗಳ ಕಾಲ ತಮ್ಮ ವಶಕ್ಕೆ ಪಡೆದಿರುವ ಪೊಲೀಸರಿಗೆ ಮುಂದಿನ ನ್ಯಾಯಾಲಯಕ್ಕೆ ಹಾಜರುಪಡಿಸುವ ಪ್ರಕ್ರಿಯೆ ನಡುವೆ ಇಷ್ಟೊಂದು ವ್ಯವಸ್ಥೆಗಳನ್ನು ಮಾಡಲೇಬೇಕಾಗುತ್ತದೆ.

ಇದನ್ನೂ ಓದಿ: Pavithra Gowda: ಬಂಧನದ ಭಯವಿಲ್ಲದೇ ನಗುತ್ತಾ ಸಾಂತ್ವನ ಕೇಂದ್ರಕ್ಕೆ ಹೋದ ಪವಿತ್ರಾ ಗೌಡ!

ಏತನ್ಮಧ್ಯೆ, ಆರೋಪಿ ನಂಬರ್​ 2 ಪವಿತ್ರಾಗೌಡ ಸಾಂತ್ವನ ಕೇಂದ್ರದಲ್ಲಿ ಉಳಿದುಕೊಂಡಿದ್ದಾರೆ. ಪೊಲೀಸರು ಅವರನ್ನು ಅಲ್ಲಿಗೆ ಜೀಪ್​ನಲ್ಲಿ ಕರೆದುಕೊಂಡು ಹೋಗಿ ಬಿಡುತ್ತಿದ್ದಂತೆ ನಗುನಗುತ್ತಾ ಅವರು ಸಾಂತ್ವನ ಕೇಂದ್ರ ಸೇರಿಕೊಂಡಿದ್ದಾರೆ. ನಡೆದ ಘಟನೆಗೂ ತಮಗೂ ಯಾವುದೇ ಸಂಬಂಧ ಇಲ್ಲ ಎನ್ನುವಂತೆ ಅವರು ಕೇಂದ್ರ ಸೇರಿಕೊಂಡಿದ್ದಾರೆ.

ಕೊಲೆಗೆ ಕಾರಣ

ರೇಣುಕಾಸ್ವಾಮಿ ಪವಿತ್ರಗೌಡಗೆ ಮೆಸೇಜ್ ಮಾಡುತ್ತಿದ್ದ. ಈ ವಿಷಯ ತಿಳಿದು ದರ್ಶನ್ ಆಪ್ತರು ನಕಲಿ ಅಕೌಂಟ್ ತೆರೆದಿದ್ದರು. ಬಳಿಕ ರೇಣುಕಾಸ್ವಾಮಿ ಜತೆ ಚಾಟಿಂಗ್ ನಡೆಸಲಾಗಿತ್ತು. ಬಳಿಕ ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿಕೊಂಡು ಬಂದು ಹಲ್ಲೆ ನಡೆಸಲಾಗಿತ್ತು. ಈ ವೇಳೆ ಆತ ಸಾವನ್ನಪ್ಪಿದ್ದ. ಆತ ಮೃತಪಟ್ಟಿರುವುದು ಗೊತ್ತಾಗುತ್ತಿದ್ದಂತೆ ದರ್ಶನ್‌ ಆಪ್ತರು ಸ್ಕಾರ್ಪಿಯೋ ಕಾರಿನಲ್ಲಿ ಶವವನ್ನು ತಂದು ಬಿಸಾಡಿ ಹೋಗಿದ್ದರು. ಬಳಿಕ ಪೊಲೀಸರಿಗೆ ಕಾಲ್‌ ಮಾಡಿ ತಪ್ಪಾಗಿದೆ ಸರ್ ಅಂದಿದ್ದರು. ಬಳಿಕ ಬಂದು ಮೂವರು ಪೊಲೀಸರ ಮುಂದೆ ಶರಣಾಗಿದ್ದರು ಎನ್ನಲಾಗಿದೆ.

ದರ್ಶನ್‌ ಅವರನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ ನಟ ದರ್ಶನ್‌ ಅವರ ಗೆಳತಿಯೂ ಆದ ನಟಿ (Pavithra Gowda) ಅವರನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ರೇಣುಕಾಸ್ವಾಮಿ ಹತ್ಯೆಯ ಹಿಂದೆ ಒಳಸಂಚು ರೂಪಿಸಿದ ಆರೋಪದಲ್ಲಿ ಬೆಂಗಳೂರಿನ ಅನ್ನಪೂರ್ಣೇಶ್ವರ ನಗರ ಠಾಣೆಯ ಪೊಲೀಸರು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ರೇಣುಕಾಸ್ವಾಮಿ ಯಾರು?

ಚಿತ್ರದುರ್ಗ ಮೂಲದವನಾದ ರೇಣುಕಾಸ್ವಾಮಿ ಎಂಬ 28 ವರ್ಷದ ಯುವಕನು ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಈತನು ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ದರ್ಶನ್‌ ಹಾಗೂ ಅವರ ಆಪ್ತರು ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ದರ್ಶನ್‌ ಸೇರಿ 10 ಮಂದಿಯನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ರೇಣುಕಾಸ್ವಾಮಿಗೆ ಕಳೆದ ವರ್ಷವೇ ಸಹನಾ ಎಂಬ ಯುವತಿ ಜತೆ ಮದುವೆಯಾಗಿದೆ ಎಂದು ಹೇಳಲಾಗುತ್ತಿದೆ. ರೇಣುಕಾಸ್ವಾಮಿ ಕೂಡ ದರ್ಶನ್‌ ಅಭಿಮಾನಿಯಾಗಿದ್ದ ಎನ್ನಲಾಗಿದೆ.

Continue Reading

ಕರ್ನಾಟಕ

Pavithra Gowda: ಬಂಧನದ ಭಯವಿಲ್ಲದೇ ನಗುತ್ತಾ ಸಾಂತ್ವನ ಕೇಂದ್ರಕ್ಕೆ ಹೋದ ಪವಿತ್ರಾ ಗೌಡ!

Pavithra Gowda: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಾ ಗೌಡ ಸೇರಿ 13 ಆರೋಪಿಗಳಿಗೆ 6 ದಿನಗಳ ಕಾಲ ಪೊಲೀಸ್‌ ಕಸ್ಟಡಿ ವಿಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿ ಪವಿತ್ರಾ ಗೌಡಳನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ರವಾನಿಸಲಾಗಿದೆ.

VISTARANEWS.COM


on

Pavithra Gowda
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಾ ಗೌಡ (Pavithra Gowda) ಸೇರಿ 13 ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಲು ನ್ಯಾಯಾಲಯ ಆದೇಶಿಸಿದೆ. ಹೀಗಾಗಿ ಎ1 ಪವಿತ್ರಾ ಗೌಡಳನ್ನು ಮಂಗಳವಾರ ರಾತ್ರಿ ಸಾಂತ್ವನ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಈ ವೇಳೆ ಜೀಪ್‌ನಿಂದ ಇಳಿಯುವಾಗ ಯಾವುದೇ ರೀತಿಯ ಭಯವಿಲ್ಲದೇ ಪವಿತ್ರಾ ಗೌಡ ನಗುನಗುತ್ತಾ ಸಾಂತ್ವನ ಕೇಂದ್ರದ ಒಳ ಹೋಗಿದ್ದು ಕಂಡುಬಂದಿದೆ.

ಆರೋಪಿಗಳಿಗೆ 6 ದಿನಗಳ ಕಾಲ ಕಸ್ಟಡಿ ವಿಧಿಸಿದ ಹಿನ್ನೆಲೆಯಲ್ಲಿ ಆರೋಪಿಯನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ರವಾನಿಸಲಾಯಿತು. ಈ ವೇಳೆ ಕ್ಯಾಮೆರಾಗಳ ಕಣ್ಣಿಗೆ ಬೀಳದಂತೆ ಮುಖಕ್ಕೆ ಅಡ್ಡಲಾಗಿ ವಾಟರ್‌ ಬಾಟಲ್‌ ಹಿಡಿದು ಕಾರಿನಲ್ಲಿ ಪವಿತ್ರಾ ಗೌಡ ನಗುತ್ತಿದ್ದದ್ದು ಕಂಡುಬಂದಿದೆ. ನಂತರ ಯಾವುದೇ ಭಯವೇ ಇಲ್ಲದಂತೆ ನಗುತ್ತಾ ಸಾಂತ್ವನ ಕೇಂದ್ರದ ಒಳ ಹೋಗಿದ್ದಾಳೆ. ಸದ್ಯ ಈ ವಿಡಿಯೊ ವೈರಲ್‌ ಆಗಿದ್ದು, ಬಂಧನವಾದರೂ ಇವರಿಗೆ ಯಾವುದೇ ಆತಂಕ, ಭಯ ಇಲ್ಲ ಎಂದು ನೆಟ್ಟಿಗರು ಛೀಮಾರಿ ಹಾಕಿದ್ದಾರೆ.

ಇದನ್ನೂ ಓದಿ | Renuka Swamy Murder Case: ರೇಣುಕಾಸ್ವಾಮಿ ಕೊಲೆ ಕೇಸ್‌ ಖಂಡಿಸಿ ನಾಳೆ ಚಿತ್ರದುರ್ಗದಲ್ಲಿ ಬೃಹತ್‌ ಪ್ರತಿಭಟನೆ

ಪತಿ ಅರೆಸ್ಟ್​ ಆದರೂ ಪ್ರತಿಕ್ರಿಯೆ ನೀಡದ ದರ್ಶನ್​ ಪತ್ನಿ ವಿಜಯಲಕ್ಷ್ಮಿ!

Actor Darshan Arrested

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಅರೆಸ್ಟ್ (Actor Darshan Arrested) ಆಗಿದ್ದರೂ ಅವರ ಪತ್ನಿ ವಿಜಯಲಕ್ಷ್ಮಿ ಇದುವರೆಗೆ ಒಂದೇ ಒಂದು ಪ್ರತಿಕ್ರಿಯೆ ನೀಡಿಲ್ಲ. ಪವಿತ್ರಾ ಗೌಡ ವಿಚಾರದಲ್ಲಿ ಆಗಾಗ ಸೋಶಿಯಲ್ ಮೀಡಿಯಾಗಳ ಮೂಲಕ ಯುದ್ಧ ಸಾರುತ್ತಿದ್ದ ವಿಜಯಲಕ್ಷ್ಮಿ ಅವರು ಈ ಬಾರಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಪ್ರಕರಣದಲ್ಲಿ ಬಗ್ಗೆ ಅವರ ಅಭಿಪ್ರಾಯ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮಂಗಳವಾರ ಬೆಳಗ್ಗಿನಿಂದ ಪ್ರಕರಣ ರಾಜ್ಯಾದ್ಯಂತ ಹವಾ ಎಬ್ಬಿಸಿದ್ದು ಒಬ್ಬೊಬ್ಬರು ಒಂದೊಂದು ಪ್ರತಿಕ್ರಿಯೆ ನೀಡುತ್ತಿದ್ದಾರೆ. ದರ್ಶನ್​ ಅಭಿಮಾನಿಗಳಂತೂ ಈ ವಿಚಾರದಲ್ಲಿ ಭಾವುಕರಾಗಿದ್ದಾರೆ. ಆದರೆ ಪತಿ ಜೈಲಿಗೆ ಹೋಗುವ ಸ್ಥಿತಿ ತಂದುಕೊಂಡಿದ್ದರೂ ವಿಜಯಲಕ್ಷ್ಮೀ ಈ ಕುರಿತು ಏನೂ ಹೇಳಿಕೆಗಳನ್ನು ನೀಡಿಲ್ಲ.

ಪವಿತ್ರಾ ಗೌಡ ವಿಚಾರದಲ್ಲಿ ವಿಜಯಲಕ್ಷ್ಮೀ ಈ ಹಿಂದೆ ಸಾಕಷ್ಟು ಬಾರಿ ಸೋಶಿಯಲ್​ ಮೀಡಿಯಾ ವಾರ್ ನಡೆಸಿದ್ದರು. ಪವಿತ್ರಾ ವಿರುದ್ಧ ನಾನಾ ರೀತಿಯ ಹೇಳಿಕೆಗಳನ್ನು ನೀಡಿದ್ದರು. ದರ್ಶನ್​ ಕೊಲೆ ಅರೋಪದಲ್ಲಿ ಸಿಕ್ಕಿ ಹಾಕಿಕೊಂಡಿರುವುದ ಪವಿತ್ರಾ ಅವರ ವಿಚಾರದಲ್ಲಿ. ಹೀಗಾಗಿ ಅವರಿಗೆ ಸಹಜವಾಗಿಯೇ ಅಸಮಾಧಾನ ಉಂಟಾಗಿರುತ್ತದೆ. ಆದಾಗ್ಯೂ ಅವರು ಇನ್ನೂ ಪ್ರತಿಕ್ರಿಯೆ ಕೊಟ್ಟಿಲ್ಲ.

ದರ್ಶನ್​ಗೆ ಮರಣದಂಡನೆ ಶಿಕ್ಷೆಯಾಗಲಿ! ನಟಿ ರಮ್ಯಾ ಟ್ವೀಟ್‌

ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿರುವ ನಟ ದರ್ಶನ್​ಗೆ (Actor Darshan) ಮರಣದಂಡನೆಯಾಗಲಿ ಎಂಬ ಆಶಯವನ್ನು ಸ್ಯಾಂಡಲ್​ವುಡ್​ ಕ್ವೀನ್​ ರಮ್ಯಾ ವ್ಯಕ್ತಪಡಿಸಿದ್ದಾರೆ! ಕೊಲೆ ಪ್ರಕರಣದ ಕುರಿತು ಎಕ್ಸ್​ನಲ್ಲಿ ಪೋಸ್ಟ್​​ ಮಾಡಿರುವ ರಮ್ಯಾ ಐಪಿಸಿ ಸೆಕ್ಷನ್​ 302ರನ್ನು ಉಲ್ಲೇಖಿಸಿ ಅದರ ಅನ್ವಯ ದರ್ಶನ್​ಗೆ ಕಠಿಣ ಶಿಕ್ಷೆಯಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಕೊಲೆಯಾಗಿರುವ ವ್ಯಕ್ತಿಯ ಪರವಾಗಿ ನಿಂತಿರುವ ರಮ್ಯಾ, ದರ್ಶನ್​ಗೆ ಇಂಡಿಯನ್ ಪಿನಲ್​ ಕೋಡ್​ 302ರ ಪ್ರಕಾರ ಯಾವ ಪ್ರಕಾರಣದ ಶಿಕ್ಷೆಯಾಗುತ್ತದೆ ಎಂಬ ಬಗ್ಗೆ ಟ್ವೀಟ್ ಮಾಡಿದ್ದಾರೆ. ಈ ಸೆಕ್ಷನ್​ 302ರಲ್ಲಿ ಕೊಲೆ ಆರೋಪ ಸಾಬೀತಾದರೆ ಅವರಿಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ ಎಂಬ ಮಾಹಿತಿ ಇರುವ ಪೋಸ್ಟ್‌ ಅನ್ನು ರಮ್ಯಾ ರೀಟ್ವೀಟ್‌ ಮಾಡಿದ್ದಾರೆ.

ಸೆಕ್ಷನ್ 302 ರ ಅಡಿಯಲ್ಲಿ ನಟ ದರ್ಶನ್​ಗೆ ಜೀವಾವಧಿ ಶಿಕ್ಷೆ ಅಥವಾ ಶಿಕ್ಷೆಯಾಗಬೇಕು. ಬೇರೆ ಯಾವುದೇ ಹಣದ ಪ್ರಭಾವ ಮತ್ತು ಭಾರತೀಯ ಕಾನೂನು ವ್ಯವಸ್ಥೆಯನ್ನು ಅಣಕಿಸುವಂತಾಗಬಾರದು. ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂಬ ಟ್ವೀಟ್‌ ಅನ್ನು ರಮ್ಯಾ ಮರು ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ರಮ್ಯಾ ಈ ಹಿಂದೆಯೂ ಸ್ಟಾರ್ ನಟರ ನಡವಳಿಕೆಯ ಬಗ್ಗೆ ಆಕ್ಷೇಪ ಎತ್ತಿದ್ದರು. ಹಿಂದೆ ದರ್ಶನ್​ಗೆ ಚಪ್ಪಲಿ ಎಸೆತ ಪ್ರಕರಣ ನಡೆದಾಗ ಸ್ಪಂದಿಸಿದ್ದ ಅವರು, ಅಭಿಮಾನಿಗಳು ಹಾಗೂ ನಟರಿಗೆ ಬುದ್ಧಿ ಹೇಳಬೇಕಾಗಿದೆ ಎಂದು ಹೇಳಿದ್ದರು.

Continue Reading
Advertisement
Murder News
ಪ್ರಮುಖ ಸುದ್ದಿ11 mins ago

Murder News : ಖಾಸಗಿ ಕ್ಷಣದ ಫೋಟೋಗಳನ್ನಿಟ್ಟು ಬೆದರಿಕೆ ಹಾಕುತ್ತಿದ್ದವನನ್ನು ಕೊಲೆ ಮಾಡಿದ ವಿವಾಹಿತ ಮಹಿಳೆ

Reasi Terror Attack
ದೇಶ50 mins ago

Reasi Terror Attack: ರಿಯಾಸಿ ಭಯೋತ್ಪಾದಕ ದಾಳಿಯ ಶಂಕಿತನ ರೇಖಾಚಿತ್ರ ಬಿಡುಗಡೆ; ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಘೋಷಣೆ

Actor Darshan Arrested
ಸ್ಯಾಂಡಲ್ ವುಡ್55 mins ago

Actor Darshan Arrested : ಲಾಕಪ್​ನಲ್ಲಿ ಸೊಳ್ಳೆ ಕಡಿತಕ್ಕೆ ಬೆಚ್ಚಿ ರಾತ್ರಿಯೆಲ್ಲ ಎದ್ದು ಕುಳಿತಿದ್ದ ನಟ ದರ್ಶನ್​!

Terrorists Attack
ಪ್ರಮುಖ ಸುದ್ದಿ1 hour ago

Terrorists Attack : ಜಮ್ಮು ಕಾಶ್ಮೀರದಲ್ಲಿ ಸೇನಾ ನೆಲೆ ಮೇಲೆ ಪಾಕಿಸ್ತಾನದ ಉಗ್ರರ ದಾಳಿ

Rock Salt Or Powder Salt
ಆರೋಗ್ಯ2 hours ago

Rock Salt Or Powder Salt: ಬೆಳ್ಳನೆಯ ಪುಡಿ ಉಪ್ಪು ಆರೋಗ್ಯಕರವೇ ಅಥವಾ ಕಲ್ಲುಪ್ಪೇ?

Actor Darshan Arrested
ಪ್ರಮುಖ ಸುದ್ದಿ3 hours ago

Actor Darshan Arrested : ದರ್ಶನ್​ಗೆ ಪೊಲೀಸ್ ಠಾಣೆಯಲ್ಲಿ ರಾಜಾತಿಥ್ಯ; ಚಿಕ್ಕಪೇಟೆ ಬಿರಿಯಾನಿ, ಡೋಲೊ 650 ಮಾತ್ರೆ!

Dina Bhavishya
ಭವಿಷ್ಯ3 hours ago

Dina Bhavishya : ಜೀವನದಲ್ಲಿ ಹೊಸ ತಿರುವು ಪಡೆದುಕೊಳ್ಳುವ ಸಾಧ್ಯತೆ; ಪ್ರಭಾವಿ ವ್ಯಕ್ತಿಗಳ ಬೆಂಬಲ

Health Benefits Of Jaggery
ಆರೋಗ್ಯ3 hours ago

Health Benefits Of Jaggery: ಬೆಲ್ಲ ಉಳಿದ ಆಹಾರದಂಥಲ್ಲ; ಇದರ ಲಾಭಗಳು ಏನೇನು ತಿಳಿದುಕೊಂಡಿರಿ

T20 World Cup
ಪ್ರಮುಖ ಸುದ್ದಿ9 hours ago

T20 World Cup : ಕೊನೆಗೂ ದುರ್ಬಲ ಕೆನಾಡ ತಂಡದ ವಿರುದ್ಧ ಜಯ ಗಳಿಸಿದ ಪಾಕಿಸ್ತಾನ

Lt. General Upendra Dwivedi
ಪ್ರಮುಖ ಸುದ್ದಿ9 hours ago

Lt. General Upendra Dwivedi : ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ನೇಮಕ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ15 hours ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ16 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ17 hours ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ19 hours ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ21 hours ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌