A compensation of Rs 25 lakh each will be given to the families of the four victimsCompensation: ಕೋಮುದ್ವೇಷಕ್ಕೆ ಬಲಿಯಾಗಿದ್ದ ನಾಲ್ವರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ - Vistara News

ಕರ್ನಾಟಕ

Compensation: ಕೋಮುದ್ವೇಷಕ್ಕೆ ಬಲಿಯಾಗಿದ್ದ ನಾಲ್ವರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ

Compensation: ಕರಾವಳಿ ಭಾಗದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಮಸೂದ್, ಫಾಝಿಲ್, ಜಲೀಲ್ ಹಾಗೂ ದೀಪಕ್ ರಾವ್ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಘೋಷಿಸಿದೆ.

VISTARANEWS.COM


on

Masood Fazil Jaleel and Deepak Rao
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳೂರು: ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ವರ ಕುಟುಂಬಕ್ಕೆ ರಾಜ್ಯ ಸರ್ಕಾರ, ತಲಾ 25 ಲಕ್ಷ ರೂ. ಪರಿಹಾರ (Compensation) ಘೋಷಣೆ ಮಾಡಿದೆ. ದುಷ್ಕರ್ಮಿಗಳಿಂದ ಹತ್ಯೆಗೀಡಾದ ಮಸೂದ್, ಫಾಝಿಲ್, ಜಲೀಲ್ ಹಾಗೂ ದೀಪಕ್ ರಾವ್ ಕುಟುಂಬಕ್ಕೆ ಪರಿಹಾರ ಘೋಷಿಸಲಾಗಿದೆ.

ಇದನ್ನೂ ಓದಿ | Soujanya muder case : ಧರ್ಮಸ್ಥಳದ ಸೌಜನ್ಯ ಕೊಲೆ, ಅತ್ಯಾಚಾರ ಪ್ರಕರಣ; ಸಂತೋಷ್‌ ರಾವ್‌ ಖುಲಾಸೆ

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಕಳಂಜ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸಂಬಂಧಿಸಿ ಸುಮಾರು ಎಂಟು ಮಂದಿ ಮಾರಣಾಂತಿಕ ಹಲ್ಲೆ ನಡೆಸಿದ್ದರಿಂದ ಮಸೂದ್ (21) ಎಂಬ ಯುವಕ 2022ರ ಜುಲೈ 19ರಂದು ಮೃತಪಟ್ಟಿದ್ದ. ಹಾಗೆಯೇ ಅದೇ ತಿಂಗಳ ಜಲೈ 28ರಂದು ಸುರತ್ಕಲ್‌ ಮಾರುಕಟ್ಟೆ ಬಳಿ ಫಾಝಿಲ್‌ನನ್ನು ಹತ್ಯೆ ಮಾಡಲಾಗಿತ್ತು. 2022ರ ಡಿಸೆಂಬರ್‌ 24ರಂದು ಸುರತ್ಕಲ್‌ನಲ್ಲಿ ಅಂಗಡಿ ಮಾಲೀಕ ಜಲೀಲ್‌ ಹತ್ಯೆಯಾಗಿತ್ತು. ಈ ಪ್ರಕರಣಗಳಿಗಿಂತ ಮೊದಲು 2018ರ ಜನವರಿ 3ರಂದು ಸುರತ್ಕಲ್‌ನಲ್ಲಿ ದೀಪಕ್‌ ರಾವ್‌ ಕೊಲೆಯಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

MLC Election: ಕಾಂಗ್ರೆಸ್‌ನ 7, ಬಿಜೆಪಿಯ 3, ಜೆಡಿಎಸ್‌ನ ಒಬ್ಬ ಅಭ್ಯರ್ಥಿಯಿಂದ ಮೇಲ್ಮನೆಗೆ ನಾಮಪತ್ರ ಸಲ್ಲಿಕೆ

MLC Election: ವಿಧಾನ ಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ನಡೆಯಲಿರುವ 11 ಸ್ಥಾನಗಳಿಗೆ ನಾಮಪತ್ರ ಸಲ್ಲಿಸಲು ಸೋಮವಾರ (ಜೂ. 3) ಕೊನೆಯ ದಿನವಾಗಿತ್ತು. ಮೂರೂ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.

VISTARANEWS.COM


on

mlc election nomination
Koo

ಬೆಂಗಳೂರು: ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಗೆ (MLC Election) ನಾಮಪತ್ರ (nomination) ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ಮೂರೂ ಪಕ್ಷಗಳ ಎಲ್ಲ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್‌ನ (Congress) 7, ಬಿಜೆಪಿಯ (BJP) 3, ಜೆಡಿಎಸ್‌ನ (JDS) ಒಬ್ಬ ಅಭ್ಯರ್ಥಿಯಿಂದ ಮೇಲ್ಮನೆಗೆ (legislative council) ನಾಮಪತ್ರ ಸಲ್ಲಿಕೆಯಾಯಿತು.

ವಿಧಾನ ಸಭೆಯಿಂದ ವಿಧಾನ ಪರಿಷತ್‌ಗೆ ಚುನಾವಣೆ ನಡೆಯಲಿರುವ 11 ಸ್ಥಾನಗಳಿಗೆ ನಾಮಪತ್ರ ಸಲ್ಲಿಸಲು ಸೋಮವಾರ (ಜೂ. 3) ಕೊನೆಯ ದಿನವಾಗಿತ್ತು. ಹನ್ನೊಂದು ಸ್ಥಾನಗಳ ಪೈಕಿ ಕಾಂಗ್ರೆಸ್ 7, ಬಿಜೆಪಿ 3 ಮತ್ತು ಜೆಡಿಎಸ್ 1 ಸ್ಥಾನವನ್ನು ಗೆಲ್ಲುವ ಅವಕಾಶವಿದೆ. ಮಂಗಳವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಗುರುವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂನ್ 13ಕ್ಕೆ ಮತದಾನ ನಿಗದಿಯಾಗಿದ್ದು, ಅಂದೇ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ. ಹೆಚ್ಚುವರಿ ಅಭ್ಯರ್ಥಿಗಳು ಕಣದಲ್ಲಿ ಇಲ್ಲದ ಹಿನ್ನೆಲೆಯಲ್ಲಿ, ಚುನಾವಣೆ ಇಲ್ಲದೆ ಅಭ್ಯರ್ಥಿಗಳ ಅವಿರೋಧ ಆಯ್ಕೆ ಆಗುವ ಸಂಭವ ಇದೆ.

ಇಂದು ಕಾಂಗ್ರೆಸ್‌ 7 ಅಭ್ಯರ್ಥಿಗಳಾದ ಯತೀಂದ್ರ ಸಿದ್ದರಾಮಯ್ಯ, ಎನ್.ಎಸ್ ಬೋಸರಾಜು, ವಸಂತ್ ಕುಮಾರ್, ಗೋವಿಂದ ರಾಜು, ಐವಾನ್ ಡಿಸೋಜಾ, ಬಿಲ್ಕಿಸ್ ಬಾನು ಹಾಗೂ ಜಗದೇವ್ ಗುತ್ತೆದಾರ್ ಅವರು ಚುನಾವಣಾಧಿಕಾರಿ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್‌ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

ಬಿಜೆಒಇ ಅಭ್ಯರ್ಥಿಗಳಾದ ಸಿ.ಟಿ ರವಿ, ಎನ್ ರವಿಕುಮಾರ್ ಹಾಗೂ ಎಂ.ಜಿ ಮುಳೆ ಕೂಡ ವಿಧಾನ ಸಭೆ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್.‌ ಅಶೋಕ್, ಮಾಜಿ ಸಿಎಂ ಸದಾನಂದಗೌಡ, ಸುನೀಲ್ ಕುಮಾರ್ ಮುಂತಾದವರು ಸಾಥ್‌ ನೀಡಿದರು.

ಜೆಡಿಎಸ್‌ ಅಭ್ಯರ್ಥಿ ಜವರಾಯಿಗೌಡ ಕೂಡ ಇಂದೇ ನಾಮಪತ್ರ ನೀಡಿದರು. ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರ ಜೊತೆಗಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್, “ಬಿಜೆಪಿಯಿಂದ ನಮ್ಮ ಮೂರು ಜನ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಆಗಿದೆ. ವಿಜಯೇಂದ್ರ, ಸದಾನಂದಗೌಡ ಎಲ್ಲರೂ ಇದ್ದಾರೆ. ಪಕ್ಷದಲ್ಲಿ ದುಡಿದ ಕಾರ್ಯಕರ್ತರಿಗೆ ರಾಜ್ಯದಿಂದ, ರಾಷ್ಟ್ರದಿಂದ ಆಯ್ಕೆಯಾಗಿದೆ. ಪಕ್ಷದಿಂದ ಇನ್ನಷ್ಟು ಗಟ್ಟಿಯಾದ ಹೋರಾಟ ಆಗಬೇಕಿದೆ. ಕಾಂಗ್ರೆಸ್ ಭಂಡ ಸರ್ಕಾರ. ಹಗರಣ ಮಾಡಿ ರಾಜಾರೋಷವಾಗಿ ಓಡಾಡ್ತಿದ್ದಾರೆ. ಇದರ ವಿರುದ್ಧ ಬಿಜೆಪಿ ಹೋರಾಟಕ್ಕೆ ಅಣಿಯಾಗಿದೆ. ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. ನಮ್ಮ ಮೂರೂ ಅಭ್ಯರ್ಥಿಗಳನ್ನು ಗೆಲ್ಲಿಸಿ, ಬಿಜೆಪಿ ಪರ ಹೋರಾಟ ಮಾಡ್ತಾರೆ” ಎಂದರು.

ಯತೀಂದ್ರ ಸಿದ್ದರಾಮಯ್ಯ ವಿಸ್ತಾರ ನ್ಯೂಸ್‌ಗೆ ನೀಡಿದ ಹೇಳಿಕೆ: “2023ರಲ್ಲಿ ಹೈಕಮಾಂಡ್ ನನಗೆ ಕ್ಷೇತ್ರ ತ್ಯಾಗ ಮಾಡಲು ಸೂಚಿಸಿತ್ತು. ಹೀಗಾಗಿ ನಾನು ವರುಣ ಕ್ಷೇತ್ರದಲ್ಲಿ ಚುನಾವಣಾ ಕೆಲಸ ಮಾಡಿದೆ. ಹೈಕಮಾಂಡ್ ಅಂದು ಹೇಳಿದಂತೆ ನಡೆದುಕೊಂಡಿದೆ. ನಾನು ಹೈಕಮಾಂಡ್ ಗೆ ಧನ್ಯವಾದ ತಿಳಿಸುತ್ತೇನೆ. ರಾಜ್ಯದ ಜನರ ಸಮಸ್ಯೆಗಳನ್ನ ಸರ್ಕಾರದ ಗಮನಕ್ಕೆ ತಂದು ಪರಿಹರಿಸುವ ಕೆಲಸ ಮಾಡ್ತೀನಿ” ಎಂದರು.

ಬಿ.ವೈ ವಿಜಯೇಂದ್ರ ಹೇಳಿಕೆ: “ಪಕ್ಷವು ಸಿ.ಟಿ ರವಿ, ಎನ್. ರವಿಕುಮಾರ್, ಎಂ.ಜಿ ಮುಳೆ ಅವರನ್ನು ಆಯ್ಕೆ ಮಾಡಿದೆ. ಮೂವರೂ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ನಮ್ಮ ಇನ್ನಷ್ಟು ಧ್ವನಿ ಎತ್ತುವ ಕೆಲಸ ಮಾಡಲಿದ್ದೇವೆ. ಎಕ್ಸಿಟ್ ಪೋಲ್ ಫಲಿತಾಂಶದಿಂದ ಸಿಎಂ, ಸಚಿವರಿಗೆ ಎದೆಬಡಿತ ಜೋರಾಗಿದೆ. ವಾಲ್ಮೀಕಿ ನಿಗಮ ಹಗರಣದಲ್ಲಿ ಬಿಜೆಪಿಯಿಂದ ಸಚಿವರ ರಾಜೀನಾಮೆಗೆ ಆಗ್ರಹಿಸಿದ್ದೇವೆ. ಸಿಬಿಐ ತನಿಖೆ ಆಗಬೇಕು. ರಾಜ್ಯ ಸರ್ಕಾರ ಇದನ್ನು ಮುಚ್ಚಿ ಹಾಕೋ ಪ್ರಯತ್ನ ಮಾಡ್ತಿದೆ” ಎಂದರು.

ಇದನ್ನೂ ಓದಿ: MLC Election: ಮೇಲ್ಮನೆ ಚುನಾವಣೆ ಮತದಾನ ಆರಂಭ, 6 ಕ್ಷೇತ್ರಗಳಲ್ಲಿ 78 ಸ್ಪರ್ಧಿಗಳ ಹಣಾಹಣಿ

Continue Reading

ಮಳೆ

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Rain News : ಮಳೆ ಬಂತು ಎಂದರೆ ಸಾಕು ಹಾವುಗಳ ಕಾಟ (Snake Rescue) ಹೆಚ್ಚಾಗುತ್ತದೆ. ಮಳೆ ಆಶ್ರಯ ಪಡೆಯಲು ಮನೆಗಳಿಗೆ ಹಾಗೂ ಸಿಕ್ಕ ಸಿಕ್ಕಲ್ಲಿ ಹಾವುಗಳು ನುಗ್ಗಿತ್ತಿವೆ. ಸದ್ಯ ನಿನ್ನೆ ಭಾನುವಾರದ ಸುರಿದ ಮಳೆಗೆ (Karnataka rain) ನೀರಿನಲ್ಲಿ ಹರಿದು ಬಂದ ಹಾವುವೊಂದು ಬೈಕ್‌ನಲ್ಲಿ ಸೇರಿಕೊಂಡು ಆತಂಕವನ್ನುಂಟು ಮಾಡಿತ್ತು.

VISTARANEWS.COM


on

By

Snake Rescue Snakes spotted in heavy rain
Koo

ಬೆಂಗಳೂರು: ಹಾವು ಎಂದರೆ ಎಂಥ ಗಟ್ಟಿ ಮನುಷ್ಯನಿಗಾದರೂ ಒಮ್ಮೆ ಭಯವಾಗುತ್ತದೆ. ದಾರಿಯಲ್ಲಿ ಹೋಗುತ್ತಿದ್ದಾಗ ಎದುರಿಗೆ ಕಂಡರೂ ಸಾಕು ಮೈ ಪೂರಾ ಬೆವರಿಬಿಡುತ್ತದೆ. ಅದೇ ಪಕ್ಕವೇ ಬಂದರೆ? ಗಂಟಲು ಒಣಗಿಬಿಡುತ್ತದೆ. ಇಲ್ಲಾಗಿದ್ದೂ ಅದೇ ಕಥೆ. ರಾಜಧಾನಿ ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ (Rain News) ಅಡಗಿದ್ದ ಹಾವುಗಳೆಲ್ಲವೂ ಹೊರ ಬರುತ್ತಿವೆ. ಹೀಗೆ ಮಳೆ (Karnataka rain) ನೀರಿನಲ್ಲಿ ಹರಿದು ಬಂದ ಹಾವೊಂದು (Snake Rescue) ಬೈಕ್‌ನಲ್ಲಿ ಸೇರಿಕೊಂಡು ಅವಾಂತರವನ್ನೇ ಸೃಷ್ಟಿಸಿತ್ತು.

ನಿನ್ನೆ ಭಾನುವಾರ ಮನೆಯಿಂದ ಹೊರಟ ಬೈಕ್‌ ಸವಾರನೊಬ್ಬನಿಗೆ ಮಳೆಯು ಎದುರಾಗಿತ್ತು. ದಿಢೀರ್‌ ಸುರಿದ ಮಳೆಯಿಂದಾಗಿ ಬೈಕ್‌ ಪಾರ್ಕ್‌ ಮಾಡಿ ರಸ್ತೆ ಬದಿಯ ನಿಲ್ದಾಣದಲ್ಲಿ ನಿಂತಿದ್ದ. ಮಳೆ ಕಡಿಮೆ ಆಯ್ತಲ್ಲ, ಇನ್ನೂ ಮನೆಗೆ ಹೋಗೋಣ ಅಂತ ಬೈಕ್‌ ಹತ್ರ ಬಂದರೆ ಬೈಕಿಂದ ಹಾವೊಂದು ಎದ್ದು ಬಂದಿದೆ. ಅಬ್ಬಾ.. ಹಾವು ಕಂಡೊಡನೆ ಹೇಗಾಗಿರಬೇಡ ಆ ಸವಾರನಿಗೆ! ಉಸಿರು ನಿಂತಂತೆ ಆಗಿದೆ. ಅಷ್ಟು ಜೋರು ಮಳೆಯಿಂದ ವಾತಾವರಣ ಕೂಲ್‌ ಆಗಿದ್ದರೂ ಆ ಸವಾರನಿಗೆ ಬೆವರುವಂತಾಗಿತ್ತು.

ಭಾರಿ ಮಳೆಗೆ ಹಾವೊಂದು ನೀರಲ್ಲಿ ಹರಿದು ಬಂದು ಬೈಕ್‌ನಲ್ಲಿ ಬೆಚ್ಚಗೆ ಕುಳಿತಿತ್ತು. ಅದೇ ಭಯದಲ್ಲಿ ಸವಾರ ದಿಕ್ಕು ತೋಚದಂತಾಗಿ ಬೈಕ್‌ನಿಂದ ದೂರ ಉಳಿದಿದ್ದ. ವಿಷಯ ತಿಳಿದು ಸ್ಥಳಕ್ಕೆ ಬಂದ ಉರಗ ತಜ್ಞ ಹಾವು ಹಿಡಿದರು. ಆ ಬಳಿಕ ಸವಾರ ನಿಟ್ಟುಸಿರು ಬಿಟ್ಟರು.

ಇದನ್ನೂ ಓದಿ: Karnataka Rain : ಸಿಡಿಲಿಗೆ ಆಕಳು ಬಲಿ; ಹಲವೆಡೆ ಮಳೆ ಅವಾಂತರಕ್ಕೆ ಜನರು ತತ್ತರ

ಮಳೆಗಾಲದಲ್ಲಿ ಶುರುವಾದ ಹಾವುಗಳ ಕಾಟ

ಎಲ್ಲೆಂದರಲ್ಲಿ ಕಾಣಿಸಿಕೊಳ್ಳುವ ಹಾವುಗಳು ಜನರನ್ನು ಬೆಚ್ಚಿಬೀಳಿಸುತ್ತಿದೆ. ಚಳಿ, ಶೀತಗಾಳಿ ಜಿಟಿ ಜಿಟಿ ಮಳೆ ಶುರುವಾದರೆ ಸಾಕು ಬೆಚ್ಚಗಿರುವ ಜಾಗ ಹುಡುಕಿಕೊಂಡು ಹೊರಬರುತ್ತಿವೆ. ಶೂ ಒಳಗೆ, ಹೆಲ್ಮೆಟ್‌ , ಸ್ಕೂಟರ್‌ನಲ್ಲಿ ಹಾವುಗಳು ಪ್ರತ್ಯಕ್ಷವಾಗುತ್ತಿವೆ. ಸದ್ಯ ಬೆಂಗಳೂರು ಮಂದಿಗೆ ಹಾವುಗಳ ಕಾಟ ಶುರುವಾಗಿವೆ.

Snake Rescue

ಬೊಮ್ಮನಹಳ್ಳಿ, ಬ್ಯಾಟರಾಯನಪುರ, ದಾಸರಹಳ್ಳಿ, ಮಹದೇವಪುರ ಮತ್ತು ರಾಜರಾಜೇಶ್ವರಿನಗರ ವಲಯದಲ್ಲಿ ಹಾವುಗಳು ಹೆಚ್ಚು ಕಂಡು ಬರುತ್ತಿವೆ. ಭಾರಿ ಮಳೆಗೆ ಆಶ್ರಯಕ್ಕಾಗಿ ಮನೆಗಳಿಗೆ ಹಾವುಗಳು ನುಗ್ಗುತ್ತಿವೆ. ಇದು ಜನರಲ್ಲಿ ಆತಂಕ ಹೆಚ್ಚಿಸುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Actor Chetan Ahimsa: ಬಿಜೆಪಿ ಸಂವಿಧಾನ ಬದಲಿಸಲ್ಲ; ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ಏನೂ ಕಮ್ಮಿ ಇಲ್ಲ ಎಂದ ನಟ ಚೇತನ್!

Actor Chetan Ahimsa: ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತೆ ಎಂಬ ಕಾಂಗ್ರೆಸ್ ಆರೋಪಗಳ ಬಗ್ಗೆ ಮಡಿಕೇರಿಯಲ್ಲಿ ನಟ, ಹೋರಾಟಗಾರ ಚೇತನ್ ಅಹಿಂಸಾ ಪ್ರತಿಕ್ರಿಯಿಸಿದ್ದಾರೆ. ಇನ್ನು ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಸಿಎಂ ಸೂಚನೆಗೆ ಮೊದಲೇ ಸಚಿವ ನಾಗೇಂದ್ರ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

VISTARANEWS.COM


on

Actor Chetan Ahimsa
Koo

ಕೊಡಗು: ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತದೆ ಎಂಬುವುದು ವಿರೋಧ ಪಕ್ಷಗಳ ಗುಮ್ಮ, ಆ ಆರೋಪಗಳನ್ನು ನಾನೂ ಒಪ್ಪಲ್ಲ. ಕಾಂಗ್ರೆಸ್ ಕೂಡ ಸಂವಿಧಾನ ವಿರೋಧಿಯಾಗಿದ್ದು, ಸಂವಿಧಾನ ಹೈಜಾಕ್ ಮಾಡಲು ಕಾಂಗ್ರೆಸ್‌ಗೆ ಯಾವುದೇ ನೈತಿಕ ಹಕ್ಕಿಲ್ಲ. ಇನ್ನು ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ಏನೂ ಕಡಿಮೆಯಿಲ್ಲ ಎಂದು ನಟ, ಹೋರಾಟಗಾರ ಚೇತನ್ ಅಹಿಂಸಾ (Actor Chetan Ahimsa) ಹೇಳಿದ್ದಾರೆ.

ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತೆ ಎಂಬ ಕಾಂಗ್ರೆಸ್ ಆರೋಪಗಳ ಬಗ್ಗೆ ಮಡಿಕೇರಿಯಲ್ಲಿ ಪ್ರತಿಕ್ರಿಯಿಸಿ, ಕೇಂದ್ರದಲ್ಲಿ ಮತ್ತೊಮ್ಮೆ ಎನ್‌ಡಿಎ ಸರ್ಕಾರ ಬರುತ್ತದೆ ಎಂದು ಎಕ್ಸಿಟ್ ಪೋಲ್ ಫಲಿತಾಂಶದಲ್ಲಿ ತಿಳಿದುಬಂದಿದೆ. ಆದ್ದರಿಂದ ಎಲ್ಲರೂ ಇದನ್ನು ಒಪ್ಪಬೇಕಾಗುತ್ತದೆ. ಈ ಬಾರಿಯೂ ಮೋದಿ‌ ಸರಕಾರ ಬರುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Lok Sabha Election 2024: ವಿಜಯೋತ್ಸವಕ್ಕೆ ಬಿಜೆಪಿ ಪ್ಲ್ಯಾನ್‌ ಹೇಗಿದೆ? ಈಗಿನಿಂದಲೇ ಶುರು ಭರ್ಜರಿ ತಯಾರಿ

ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತದೆ ಎಂಬುವುದು ಬಿಜೆಪಿ ವಿರೋಧಿ ಪಕ್ಷಗಳ ಗುಮ್ಮ. ಅದನ್ನು ನಾನೂ ಒಪ್ಪಲ್ಲ. ಬಿಜೆಪಿ ಎಷ್ಟೋ ವಿಚಾರದಲ್ಲಿ ಸಂವಿಧಾನ ವಿರೋಧಿ ಇದೆ, ಅದೇ ರೀತಿ ಕಾಂಗ್ರೆಸ್ ಕೂಡ. ಆದರೆ, ಸಂವಿಧಾನ ಉಳಿಸುತ್ತಿರುವವರು ನಮ್ಮಂತಹ ಸಮಾನತವಾದಿಗಳು. ಸಂವಿದಾನ ಹೈಜಾಕ್ ಮಾಡಲು ಕಾಂಗ್ರೆಸ್‌ಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಕಿಡಿಕಾರಿದ್ದಾರೆ.

ಸಿಎಂ ಸೂಚನೆಗೆ ಮೊದಲೇ ಸಚಿವ ನಾಗೇಂದ್ರ ರಾಜೀನಾಮೆ ಕೊಡಲಿ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಬಗ್ಗೆ ನಟ ಚೇತನ್ ಪ್ರತಿಕ್ರಿಯಿಸಿ, ಸಿಎಂ ಸೂಚನೆಗೆ ಮೊದಲೇ ಸಚಿವ ನಾಗೇಂದ್ರ ರಾಜೀನಾಮೆ ಕೊಡಬೇಕು, ತಪ್ಪಿತಸ್ಥರಿಗೆ ಸರಿಯಾದ ಶಿಕ್ಷೆ ಆಗಬೇಕು. ಸಚಿವ ನಾಗೇಂದ್ರ ಮೈನಿಂಗ್ ಮಾಫಿಯದಲ್ಲಿದ್ದವರು, ಸಚಿವರಾಗಲು ಅವರಿಗೇನು ಯೋಗ್ಯತೆ ಇದೆ? ಭ್ರಷ್ಟಾಚಾರದಲ್ಲಿ ಬಿಜೆಪಿಗಿಂತ ಕಾಂಗ್ರೆಸ್ ಏನೂ ಕಡಿಮೆಯಿಲ್ಲ. ಪ್ರಕರಣವನ್ನು ಸಿಬಿಐಗೆ ಕೊಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ | Prajwal Revanna Case: ಹೈಕೋರ್ಟ್‌ಗೆ ಮತ್ತೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ಭವಾನಿ ರೇವಣ್ಣ

ಮೀಸಲಾತಿ ಹೆಚ್ಚಳ ಮಾಡಿದ್ದೆ ಬಿಜೆಪಿ; ಸಿಎಂ ವಿರುದ್ಧ ಕಿಡಿ

ಮೀಸಲಾತಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ನಟ ಚೇತನ್ ವಾಗ್ದಾಳಿ ನಡೆಸಿದ್ದು, ಸಿದ್ದರಾಮಯ್ಯ ಅವರು ಬಿಜೆಪಿ ಮೀಸಲಾತಿ ವಿರೋಧಿ ಎನ್ನುತ್ತಾರೆ. ಆದರೆ, ಮೀಸಲಾತಿ ಹೆಚ್ಚಳ ಮಾಡಿದ್ದೆ ಬಿಜೆಪಿ. ಬೊಮ್ಮಾಯಿ ಸರ್ಕಾರದಲ್ಲಿ ಒಳಮೀಸಲಾತಿ ಸಮಿತಿ ಮಾಡಲಾಗಿತ್ತು. ಈಗಿನ ಸರ್ಕಾರ ಎಲ್ಲವನ್ನು ಕಾರ್ಯರೂಪಕ್ಕೆ ತರಬೇಕು, ಜಾತಿಜನಗಣತಿ ಹೊರಗೆ ಬರಬೇಕು. ಆದರೆ, ಸಿದ್ದರಾಮಯ್ಯ ಇದರಲ್ಲಿ ಮೀನಮೇಷ ಎಣಿಸುತ್ತಿದ್ದಾರೆ. ಲಿಂಗಾಯತ, ಒಕ್ಕಲಿಗರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ಸಿಎಂ ಎಸ್‌ಸಿ- ಎಸ್‌ಟಿ ಒಳ ಮೀಸಲಾತಿಗೆ ಸಮಿತಿ ರಚನೆ ಮಾಡಬೇಕು. ಈ ಮೂಲಕ 49 ಸಮುದಾಯಕ್ಕೆ ನ್ಯಾಯ ಸಿಗಬೇಕು ಎಂದ ಆಗ್ರಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

MP Renukacharya : ಎಂ.ಪಿ ರೇಣುಕಾಚಾರ್ಯ, ಪುತ್ರನಿಗೆ ಫೋನ್‌ನಲ್ಲಿ ಕೊಲೆ ಬೆದರಿಕೆ

ಇಂದು ಬೆಳಗ್ಗೆ ಬೆದರಿಕೆ ಕರೆ ಬಂದಿದ್ದು, ʼನಿನಗೂ ನಿನ್ನ ಮಗನಿಗೂ ಇವತ್ತು ರಾತ್ರಿ ಒಳಗೆ ಮುಗಿಸ್ತೀವಿʼ ಎಂದು ಕರೆ ಮಾಡಿದವರು ಬೆದರಿಸಿದ್ದಾರೆ. 912250155161 ಹಾಗೂ 60695539248 ನಂಬರ್‌ಗಳಿಂದ ಕರೆ ಮಾಡಲಾಗಿದೆ ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ.

VISTARANEWS.COM


on

MP Renukacharya
Koo

ಬೆಂಗಳೂರು: ಮಾಜಿ ಸಚಿವ, ಹೊನ್ನಾಳಿ (Honnali) ಮಾಜಿ ಶಾಸಕ, ಬಿಜೆಪಿ (BJP) ಮುಖಂಡ ಎಂಪಿ ರೇಣುಕಾಚಾರ್ಯ (MP Renukacharya) ಅವರಿಗೆ ದೂರವಾಣಿ ಮೂಲಕ ಕೊಲೆ ಬೆದರಿಕೆ (murder threat) ಒಡ್ಡಲಾಗಿದೆ. ಮಗನನ್ನೂ ಕೊಲೆ ಮಾಡುತ್ತೇವೆ ಎಂದು ಬೆದರಿಸಲಾಗಿದೆ.

ಇಂದು ಬೆಳಗ್ಗೆ ಬೆದರಿಕೆ ಕರೆ ಬಂದಿದ್ದು, ʼನಿನಗೂ ನಿನ್ನ ಮಗನಿಗೂ ಇವತ್ತು ರಾತ್ರಿ ಒಳಗೆ ಮುಗಿಸ್ತೀವಿʼ ಎಂದು ಕರೆ ಮಾಡಿದವರು ಬೆದರಿಸಿದ್ದಾರೆ. 912250155161 ಹಾಗೂ 60695539248 ನಂಬರ್‌ಗಳಿಂದ ಕರೆ ಮಾಡಲಾಗಿದೆ ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ.

ರೈತ ವಿರೋಧಿ ಸರಕಾರ: ರೇಣುಕಾಚಾರ್ಯ

ಈ ಸರ್ಕಾರ ರೈತ ವಿರೋಧಿ ಸರ್ಕಾರ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ರೈತರ ಆತ್ಮಹತ್ಯೆಗಳು ನಿರಂತರವಾಗಿ ನಡೆಯುತ್ತಿವೆ ಎಂದು ಎಂ.ಪಿ. ರೇಣುಕಾಚಾರ್ಯ ಆರೋಪಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರ ಹಿಡಿದ ಸಂದರ್ಭದಿಂದ ಇಲ್ಲಿಯವರೆಗೆ 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಬಗ್ಗೆ ನಿಜವಾದ ಕಾಳಜಿ ಇದ್ದರೆ ಆತ್ಮಹತ್ಯೆಗೆ ಕಾರಣ ಕಂಡುಹಿಡಿದು ಸಾಲ ಮನ್ನಾ ಮಾಡುವುದು ಸೇರಿದಂತೆ ರೈತಪರ ಯೋಜನೆಗಳನ್ನು ರೂಪಿಸಬೇಕು ಎಂದಿದ್ದಾರೆ.

ಅಮಾನತು ಆದೇಶ ಹಿಂಪಡೆಯಬೇಕು: ಚನ್ನಗಿರಿ ಪೊಲೀಸ್‍ ಠಾಣೆ ಮೇಲೆ ಕಲ್ಲು ತೂರಾಟ, ಪೊಲೀಸರ ಮೇಲೆ ಹಲ್ಲೆ ನಡೆದರೂ ದುಷ್ಕರ್ಮಿಗಳನ್ನು ಬಂಧಿಸಿ, ಕಠಿಣ ಕ್ರಮ ಕೈಗೊಂಡಿಲ್ಲ. ಬದಲಿಗೆ ಡಿವೈಎಸ್‌ಪಿ ಪ್ರಶಾಂತ್ ಮುನ್ನೋಳಿ ಹಾಗೂ ಪೊಲೀಸ್‍ ಇನ್‌ಸ್ಪೆಕ್ಟರ್ ನಿರಂಜನ ಅವರನ್ನು ಹೊಣೆಗಾರರನ್ನಾಗಿಸಿ ಅಮಾನತುಗೊಳಿಸಿ, ತುಷ್ಟೀಕರಣ ನೀತಿ ಅನುಸರಿಸಿರುವುದು ಖಂಡನೀಯ. ಸರ್ಕಾರ ಕೂಡಲೇ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಚಂದ್ರಶೇಖರ ಆತ್ಮಹತ್ಯೆ ಪ್ರಕರಣ ಸಿಬಿಐಗೆ ವಹಿಸಿ: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣ ಹಾಗೂ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರು ಆತ್ಮಹತ್ಯೆಗೂ ಮುನ್ನ ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ರಿಕೆಗಳಲ್ಲಿ ವರದಿಯಾಗಿದೆ. ನಿಗಮದ ಬಹುಕೋಟಿ ಹಗರಣ ಹಾಗೂ ಆತ್ಮಹತ್ಯೆ ಪ್ರಕರಣದಲ್ಲಿ ನ್ಯಾಯ ಸಿಗಬೇಕಾದರೆ ಈ ಪ್ರಕರಣವನ್ನು ಸಿಬಿಐಗೆ ವಹಿಸಿ ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Lok Sabha Election 2024: ಬಿಜೆಪಿ ಫೈರ್‌ ಬ್ರ್ಯಾಂಡ್‌ಗಳ ಸೋಲು ಗೆಲುವಿನ ಲೆಕ್ಕಾಚಾರ ಹೇಗಿದೆ? ಎಕ್ಸಿಟ್‌ ಪೋಲ್‌ ಹೇಳೋದೇನು?

Continue Reading
Advertisement
Self Harming
ಕ್ರೈಂ1 min ago

Self Harming: ಐಎಎಸ್‌ ದಂಪತಿ ಪುತ್ರಿ ಬಹುಮಹಡಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

mlc election nomination
ಪ್ರಮುಖ ಸುದ್ದಿ8 mins ago

MLC Election: ಕಾಂಗ್ರೆಸ್‌ನ 7, ಬಿಜೆಪಿಯ 3, ಜೆಡಿಎಸ್‌ನ ಒಬ್ಬ ಅಭ್ಯರ್ಥಿಯಿಂದ ಮೇಲ್ಮನೆಗೆ ನಾಮಪತ್ರ ಸಲ್ಲಿಕೆ

Snake Rescue Snakes spotted in heavy rain
ಮಳೆ10 mins ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Riyan Parag
ಕ್ರಿಕೆಟ್24 mins ago

Riyan Parag: ಟಿ20 ವಿಶ್ವಕಪ್​ ನೋಡಲಾರೆ ಎಂದ ‘ಹಾಟ್​ ಫೇವರಿಟ್’ ರಿಯಾನ್​ ಪರಾಗ್

Actor Chetan Ahimsa
ಪ್ರಮುಖ ಸುದ್ದಿ28 mins ago

Actor Chetan Ahimsa: ಬಿಜೆಪಿ ಸಂವಿಧಾನ ಬದಲಿಸಲ್ಲ; ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ಏನೂ ಕಮ್ಮಿ ಇಲ್ಲ ಎಂದ ನಟ ಚೇತನ್!

World Bicycle Day
ಆರೋಗ್ಯ46 mins ago

World Bicycle Day: ಸೈಕಲ್‌ ಹೊಡೆಯುವುದರ ಲಾಭಗಳು ನಾವು ಅಂದುಕೊಂಡಿದ್ದಕ್ಕಿಂತ ಹೆಚ್ಚು!

Battery Life Tips
ಗ್ಯಾಜೆಟ್ಸ್47 mins ago

Battery Life Tips: ಈ 5 ಸಲಹೆ ಪಾಲಿಸಿ; ನಿಮ್ಮ ಸ್ಮಾರ್ಟ್‌ಫೋನ್ ಬ್ಯಾಟರಿ ಸಾಮರ್ಥ್ಯ ಹೆಚ್ಚಿಸಿ!

MP Renukacharya
ಕ್ರೈಂ54 mins ago

MP Renukacharya : ಎಂ.ಪಿ ರೇಣುಕಾಚಾರ್ಯ, ಪುತ್ರನಿಗೆ ಫೋನ್‌ನಲ್ಲಿ ಕೊಲೆ ಬೆದರಿಕೆ

Nataša Stanković
ಕ್ರೀಡೆ1 hour ago

Nataša Stanković: ಹಾರ್ದಿಕ್ ಪಾಂಡ್ಯ ಜತೆ ವಿಚ್ಛೇದನ?; ಅನುಮಾನಕ್ಕೆ ತೆರೆ ಎಳೆದ ಪತ್ನಿ ನತಾಶಾ

Drowns in Lake
ಕರ್ನಾಟಕ1 hour ago

Drowns in Lake: ಕೆರೆಯಲ್ಲಿ ಮುಳುಗಿ ಯುವಕ ಸಾವು; ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Snake Rescue Snakes spotted in heavy rain
ಮಳೆ10 mins ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ7 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

ಟ್ರೆಂಡಿಂಗ್‌