My relationship with DK Shivakumar is good, but pratap simhas mind corrupted says MB Patil MB Patil: ನನ್ನ-ಡಿಕೆಶಿ ಸಂಬಂಧ ಚೆನ್ನಾಗಿದೆ, ಪ್ರತಾಪ್‌ ಸಿಂಹಗೆ ತಲೆ ಕೆಟ್ಟಿದೆ ಎಂದ ಎಂ.ಬಿ ಪಾಟೀಲ್‌ - Vistara News

ಕರ್ನಾಟಕ

MB Patil: ನನ್ನ-ಡಿಕೆಶಿ ಸಂಬಂಧ ಚೆನ್ನಾಗಿದೆ, ಪ್ರತಾಪ್‌ ಸಿಂಹಗೆ ತಲೆ ಕೆಟ್ಟಿದೆ ಎಂದ ಎಂ.ಬಿ ಪಾಟೀಲ್‌

MB Patil: ಪ್ರತಾಪ್‌ ಸಿಂಹಗೆ ತಲೆ ಕೆಟ್ಟಿದೆ ಎಂದಿದ್ದಾರೆ ಎಂ.ಬಿ. ಪಾಟೀಲ್‌. ಪ್ರತಾಪ್‌ ಸಿಂಹ ಹೇಳಿದ ಬಂದೂಕಿನ ಕಥೆಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

VISTARANEWS.COM


on

MB Patil pratapsimha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನನ್ನ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ (DK Shivakumar) ನಡುವಿನ ಸಂಬಂಧ ಚೆನ್ನಾಗಿಯೇ ಇದೆ. ಆದರೆ, ಮೈಸೂರು ಸಂಸದ ಪ್ರತಾಪ ಸಿಂಹ (MP Pratapsimha) ಅವರ ತಲೆ ಮಾತ್ರ ಕೆಟ್ಟಿದೆ- ಹೀಗೆಂದು ಹೇಳಿದ್ದಾರೆ ಬೃಹತ್‌ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್‌ (MB Patil).

ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಎಂ.ಬಿ.ಪಾಟೀಲ್ ಹೆಗಲ ಮೇಲೆ‌ ಬಂದೂಕು ಇಟ್ಟು ಡಿಕೆ ಶಿವಕುಮಾರ್‌ಗೆ ಶೂಟ್ ಮಾಡಿದ್ದಾರೆ ಎಂಬ ಸಂಸದ ಪ್ರತಾಪ ಸಿಂಹ ಹೇಳಿಕೆಗೆ ಅವರು ಭಾನುವಾರ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದರು. ಎಂ.ಬಿ. ಪಾಟೀಲ್‌ ಅವರು ಪದೇಪದೆ ಸಿದ್ದರಾಮಯ್ಯ ಅವರು ಐದು ವರ್ಷ ಸಿಎಂ ಆಗಿಯೇ ಇರುತ್ತಾರೆ ಎಂದು ಹೇಳುತ್ತಿರುವುದನ್ನು ಉಲ್ಲೇಖಿಸಿ ಪ್ರತಾಪ್‌ ಸಿಂಹ ಈ ಮಾತು ಹೇಳಿದ್ದರು. ಅದರ ಜತೆಗೆ ಬೆಂಗಳೂರಿನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಮತ್ತು ಎಂ.ಬಿ. ಪಾಟೀಲ್‌ ಅವರು ಗುಸುಗುಸು ಮಾತನಾಡುವುದನ್ನು ʻಡೋಂಟ್‌ ಡಿಸ್ಟರ್ಬ್‌ʼ ಎಂದು ಹೇಳುವ ಮೂಲಕ ತಡೆದಿದ್ದರು. ಇದರ ಆಧಾರದಲ್ಲಿ ಪ್ರತಾಪ್‌ ಸಿಂಹ ಅವರು ಎಂ.ಬಿ ಪಾಟೀಲರನ್ನು ಕೆಣಕಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಎಂ.ಬಿ. ಪಾಟೀಲ್‌ ಅವರು, ʻʻಸಂಸದ ಪ್ರತಾಪ ಸಿಂಹಗೆ ತಲೆ ಕೆಟ್ಟಿದೆ. ಪ್ರತಾಪ ಸಿಂಹ ಅವರದು ಚಿಲ್ಲರೆ ಮನಸ್ಥಿತಿ ಎಂದರು. ʻʻನನ್ನ ಹಾಗೂ ಡಿ.ಕೆ.ಶಿವಕುಮಾರ್ ಸಂಬಂಧ ಚೆನ್ನಾಗಿದೆ. ಪಕ್ಷದ ಮಟ್ಟದಲ್ಲಿ ನಮ್ಮದೇ ಆದ ಭಿನ್ನ ಅಭಿಪ್ರಾಯಗಳು ಇರಬಹುದು, ಇಲ್ಲಾ ಅಂತ ಹೇಳಲ್ಲ. ಅದು ಪಕ್ಷದ ಒಳಗೆ. ಆದರೆ ನಮ್ಮ ಸಂಬಂಧ ಚೆನ್ನಾಗಿದೆʼʼ ಎಂದು ವಿವರಿಸಿದರು.

ಹೊಡೆಯುವುದಿದ್ದರೆ ಡೈರೆಕ್ಟೇ ಹೊಡೆಯುತ್ತೇನೆ

ಸಿದ್ದರಾಮಯ್ಯ ಅವರು ಎಂ.ಬಿ ಪಾಟೀಲರ ಹೆಗಲಲ್ಲಿ ಬಂದೂಕು ಇಟ್ಟು ಹೊಡೆಯುತ್ತಾರೆ ಎಂಬ ಅಪಹಾಸ್ಯಕ್ಕೆ ಉತ್ತರಿಸಿದ ಅವರು, ʻʻಸಿದ್ದರಾಮಯ್ಯ ಇನ್ಯಾರದೋ ಹೆಗಲ ಮೇಲೆ ಬಂದೂಕು ಇಟ್ಟು ಶೂಟ್ ಮಾಡುವಂತವರಲ್ಲ. ನಾನು ಅಷ್ಟೆ ಏನೇ ಇದ್ದರು ಡೈರೆಕ್ಟ್ ಆಗಿಯೇ ಹೊಡೆಯುತ್ತೇ‌ನೆ. ನನಗೂ ಆ ತಾಕತ್ತಿದೆʼʼ ಎಂದು ಹೇಳಿದರು.

ಐದು ವರ್ಷ ಸಿಎಂ ಬಗ್ಗೆ ಮತ್ತೆ ಮಾತನಾಡುವುದಿಲ್ಲ

ʻʻಸಿದ್ದರಾಮಯ್ಯ ಅವರು ಐದು ವರ್ಷ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಹಿಂದೆ ನಾನು ಹೇಳಿದ್ದು ನಿಜ. ಆದರೆ, ಹಿಂದೆ ನಾನು ಏನು ಹೇಳಿದ್ದೇನೊ ಅದಕ್ಕೆ ಈಗಾಗಲೇ ಕ್ಲಾರಿಫಿಕೇಶನ್ ಕೊಟ್ಟಿದ್ದೇನೆ. ಅದರ ಬಗ್ಗೆ ಈಗ ಮತ್ತೆ ಮಾತನಾಡಲ್ಲʼʼ ಎಂದರು ಎಂ.ಬಿ. ಪಾಟೀಲ್‌.

ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಸಿಎಂ ಆಗಿಯೇ ಮುಂದುವರಿಯಲಿದ್ದಾರೆ ಎಂಬ ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ ಮಹದೇವಪ್ಪ ಹೇಳಿಕೆ ವಿಚಾರ ಅವರಿಗೆ ಬಿಟ್ಟಿದ್ದು.. ಅದರ ಹೇಳಿಕೆ ಬಗ್ಗೆ ನಾನು ಮಾತನಾಡಲ್ಲ. ಅದನ್ನು ಅವರ ಬಳಿಯೇ ಕೇಳಿ ಎಂದರು.

ಹೈಕಮಾಂಡ್‌ ಅಧಿಕಾರ ಹಂಚಿಕೆ ಪ್ರಕಟಿಸಿಲ್ಲ

ʻʻಮುಖ್ಯಮಂತ್ರಿ ಹುದ್ದೆಯ ಅಧಿಕಾರ ಹಂಚಿಕೆ ವಿಚಾರದಬಗ್ಗೆ ಹೈಕಮಾಂಡ್ ಯಾವ ಸೂಚನೆಯನ್ನೂ ಕೊಟ್ಟಿಲ್ಲ. ಅವತ್ತು ಕೆಸಿ ವೇಣುಗೋಪಾಲ್ ಪ್ರೆಸ್ ಮೀಟ್ ನಲ್ಲಿ ಏನು ಹೇಳಿದ್ರೋ ಅಷ್ಟೇ ನಮಗೂ ಮಾಹಿತಿ ಇರುವುದುʼʼ ಎಂದು ಹೇಳಿದ ಅವರು, ಈ ಬಗ್ಗೆ ಮಾತಾಡಬಾರದು ಅಂತ ಹೈಕಮಾಂಡ್ ಯಾವ ಡೈರೆಕ್ಷನ್ನೂ ಕೊಟ್ಟಿಲ್ಲ ಎಂದರು.

ಅಕ್ಕಿ ವಿಚಾರದಲ್ಲಿ ಕೇಂದ್ರ ರಾಜಕೀಯ

ಅನ್ನ ಭಾಗ್ಯ ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ, ಅಸಹಕಾರ ತೋರುತ್ತಿದೆ. ಆದರೆ, ಮುಖ್ಯಮಂತ್ರಿಗಳು ಎಲ್ಲಿಂದಾದರೂ ಅಕ್ಕಿಯನ್ನು ತರಿಸುವ ಬಗ್ಗೆ ಗಂಭೀರ ಪ್ರಯತ್ನ ನಡೆಸುತ್ತಿದ್ದಾರೆ. ಛತ್ತೀಸ್‌ಗಢದಿಂದ ಅಕ್ಕಿ ಖರೀದಿಗೆ ಸಿದ್ಧವಾಗಿದ್ದೇವೆ ಎಂದು ವಿವರಿಸಿದರು.

ʻಕೇಂದ್ರ ಸರ್ಕಾರ ಪುಕ್ಕಟೆ ಅಕ್ಕಿ ಕೊಡೋದು ಬೇಡ, ಹಣವನ್ನೇ ಕೊಡುತ್ತೇವೆ. ಈ ಬಗ್ಗೆ ಬಿಜೆಪಿ ಸಂಸದರು ಮಾತನಾಡುವ ಸದ್ಬುದ್ಧಿ ಪ್ರದರ್ಶಿಸಲಿʼʼ ಎಂದು ಹೇಳಿದರು ಎಂ.ಬಿ. ಪಾಟೀಲ್‌.

ನನಗೆ ಚೇಳು ಕಚ್ಚಿಲ್ಲ; ಸಂತೋಷ್‌ಗೆ ಪಾಟೀಲ್‌ ತಿರುಗೇಟು

ಎಂ.ಬಿ. ಪಾಟೀಲ್‌ ಅವರು ಇತ್ತೀಚೆಗೆ ಒಂದು ಸಭೆಯಲ್ಲಿ ಮಾತನಾಡುತ್ತಾ, ʻʻರಾಜ್ಯದಲ್ಲಿ ಅದಾನಿ ಕೈಗಾರಿಕೆ ಸ್ಥಾಪಿಸಿದರೂ ಸ್ವಾಗತಿಸುತ್ತೇವೆʼʼ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.‌ ಸಂತೋಷ್‌ ಅವರು, ಇದು ರಾಹುಲ್‌ ಗಾಂಧಿ ಮುಖಕ್ಕೆ ಸರಿಯಾದ ಮಂಗಳಾರತಿ ಎಂಬರ್ಥದಲ್ಲಿ ಬರೆದಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಎಂ.ಬಿ. ಪಾಟೀಲ್‌, ʻʻಕೈಗಾರಿಕೋದ್ಯಮಿಗಳ ಸಭೆ ಕರೆಯಲಾಗಿತ್ತು. ಅವರು ಸಲಹೆ-ಸೂಚನೆ ನೀಡಿದ್ದರು. ನಾನು ಪಾರದರ್ಶಕವಾಗಿ ಉದ್ಯಮ ಸ್ಥಾಪಿಸುವವರಿಗೆ ಸ್ವಾಗತ ಅಂತ ಹೇಳಿದ್ದೆ. ಯಾವುದೇ ಗ್ರೂಪ್ ಇದ್ದರೂ ಅವಕಾಶವಿದೆ ಎಂದಿದ್ದೆʼʼ ಎಂದು ವಿವರಿಸಿದರು. ಇದರ ಜತೆಗೆ ನನಗೆ ಚೇಳು ಕಚ್ಚಿದ ಹಾಗೆ ಆಗಿಲ್ಲ ಎಂದು ಇನ್ನೊಂದು ಟ್ವೀಟ್‌ಗೆ ಪ್ರತಿಕ್ರಿಯಿಸಿದರು.

ʻʻಈ ತಿಂಗಳ ಅಂತ್ಯಕ್ಕೆ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡ್ತೇವೆ. ಎಷ್ಟು ಕೈಗಾರಿಕೆ ಬಂದಿವೆ ಎಂಬ ಬಗ್ಗೆ ಮಾಹಿತಿ ಕೇಳಿದ್ದೇನೆ. ದೆಹಲಿಯಲ್ಲಿ ನಡೆಯುವ ಸಚಿವರ ಸಭೆಯ ಬಳಿಕ ಸಮಗ್ರ ಚಿತ್ರಣ ಸಿಗಲಿದೆ. ರಾಜ್ಯ ಕೈಗಾರಿಕೆಯಲ್ಲಿ ಉನ್ನತ ಸ್ಥಾನ ಗಳಿಸಲಿದೆʼʼ ಎಂದರು.

ರಾಜ್ಯದಲ್ಲಿ ಏಕಗವಾಕ್ಸಿ ಯೋಜನೆ ಬಗ್ಗೆ ಚರ್ಚೆ ಆಗಿದೆ. 7 ವಲಯಗಳನ್ನು ಕೈಗಾರಿಕೆಗೆ ಗುರುತಿಸಲಾಗಿದೆ. ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಹೇಳಿದ ಅವರು, ಕೈಗಾರಿಕೆಗಳು ಬರಬೇಕು, ಬೆಂಗಳೂರು ಜೊತೆ ಇತರ ಜಿಲ್ಲೆಗಳಲ್ಲಿ ಕೈಗಾರಿಕೆ ಅಭಿವೃದ್ಧಿ ಆಗಬೇಕು ಎಂದರು.

ಇದನ್ನೂ ಓದಿ : Father’s Day 2023: ಅಪ್ಪನ ಪ್ರೀತಿಯ ಸೆಂಟಿಮೆಂಟ್‌ ಸಿನಿಮಾಗಳಿವು; ಫಾದರ್ಸ್‌ ಡೇ ಸ್ಪೆಷಲ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Narendra Modi 3.0 : ಮೋದಿ ಪ್ರಮಾಣ ವಚನ; ಬಿರಿಯಾನಿ, ಹೋಳಿಗೆ ಹಂಚಿದ ಕರುನಾಡಿನ ಅಭಿಮಾನಿಗಳು

Narendra Modi 3.0: ರಾಜ್ಯದ ನಾನಾ ಭಾಗಗಳಲ್ಲಿ ಮೋದಿ ಅಭಿಮಾನಿಗಳು ಬೈಕ್​ ರ್ಯಾಲಿ, ಮಾನವ ಸರಪಳಿ, ಮೆರವಣಿಗೆ ನಡೆಸಿದ ಮೋದಿ ಪರ ಜೈಕಾರ ಕೂಗಿದ್ದಾರೆ. ಇನ್ನೂ ಕೆಲವು ಕಡೆ ಮೋದಿಯ ಅಪ್ಪಟ ಅಭಿಮಾನಿಗಳು ಬಿರಿಯಾನಿ, ಹೋಳಿಗೆ ಊಟವನ್ನು ಸಾರ್ವಜನಿಕರಿಗೆ ಹಂಚಿ ಖುಷಿ ಪಟ್ಟಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯಲ್ಲೂ ಸಂಭ್ರಮಾಚರಣೆ ನಡಸಲಾಗಿದೆ.

VISTARANEWS.COM


on

Narendra Modi 3.0
Koo

ಬೆಂಗಳೂರು: ಎನ್​ಡಿಎ ಮೈತ್ರಿಕೂಟದ ನೂತನ ಸರ್ಕಾರದಲ್ಲಿ ಪ್ರಧಾನಮಂತ್ರಿಯಾಗಿ (Narendra Modi 3.0) ನರೇಂದ್ರ ಮೋದಿ ಭಾನುವಾರ ಸಂಜೆಯ ವೇಳೆ ಪ್ರಮಾಣ ವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಅವರ ಅಭಿಮಾನಿಗಳು ಭರ್ಜರಿ ಸಂಭ್ರಮಾಚರಣೆ ಮಾಡಿದ್ದಾರೆ. ರಾಜ್ಯದ ನಾನಾ ಭಾಗಗಳಲ್ಲಿ ಮೋದಿ ಅಭಿಮಾನಿಗಳು ಬೈಕ್​ ರ್ಯಾಲಿ, ಮಾನವ ಸರಪಳಿ, ಮೆರವಣಿಗೆ ನಡೆಸಿದ ಮೋದಿ ಪರ ಜೈಕಾರ ಕೂಗಿದ್ದಾರೆ. ಇನ್ನೂ ಕೆಲವು ಕಡೆ ಮೋದಿಯ ಅಪ್ಪಟ ಅಭಿಮಾನಿಗಳು ಬಿರಿಯಾನಿ, ಹೋಳಿಗೆ ಊಟವನ್ನು ಸಾರ್ವಜನಿಕರಿಗೆ ಹಂಚಿ ಖುಷಿ ಪಟ್ಟಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯಲ್ಲೂ ಸಂಭ್ರಮಾಚರಣೆ ನಡಸಲಾಗಿದೆ.

ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ಬಿಜೆಪಿಯಿಂದ ಬೃಹತ್ ಬೈಕ್ ರ್ಯಾಲಿ ನಡೆದಿದೆ. ಸಾವಿರಾರು ಬೈಕ್​ಗಳ ಮೂಲಕ ಹೊಸಪೇಟೆಯ ಪ್ರಮುಖ ರಸ್ತೆಗಳಲ್ಲಿ ಸಾಗಿದ ಅಭಿಮಾನಿಗಳು ಮೋದಿ ಹಾಗೂ ಕೇಂದ್ರ ಸರ್ಕಾರದ ಪರ ಜೈಕಾರ ಕೂಗಿದ್ದಾರೆ. ನಗರದ ಭಟ್ರಳ್ಳಿ ಆಂಜನೇಯ ದೇಗುಲದಿಂದ ಆರಂಭಗೊಂಡ ಬೈಕ್​ ರ್ಯಾಲಿ ಹೊಸಪೇಟೆ ತಾಲೂಕಿನ ವಿವಿಧ ಹಳ್ಳಿಗಳಿಗೆ ಸಾಗಿದೆ. ಹಂಪಿಗೆ ಹೋಗುವ ಬೈಪಾಸ್ ರಸ್ತೆ, ರಾಮಾ ಥಿಯೇಟರ್, ಪುನೀತ್ ಸರ್ಕಲ್, ಉದ್ಯೋಗ ಪೆಟ್ರೋಲ್ ಬಂಕ್, ಪಟೇಲ್ ನಗರ ಸೇರಿ ಹತ್ತಾರು ಸರ್ಕಲ್ ಗಳಲ್ಲಿ ಬೈಕ್ ರ್ಯಾಲಿ ಸಾಗಿತು. ಮಳೆಯನ್ನೂ ಲೆಕ್ಕಿಸದೇ ಅವರು ಬೈಕ್​ ರ್ಯಾಲಿ ನಡೆಸಲಿದ್ದಾರೆ. ಬಿಜೆಪಿ ಕಾರ್ಯಕರ್ತರಿಗೆ ಜೆಡಿಎಸ್ ಕಾರ್ಯಕರ್ತರು, ಯುವ ಬ್ರಿಗೇಡ್ ಕಾರ್ಯಕರ್ತರು, ಮೋದಿ ಅಭಿಮಾನಿಗಳು ಸಾಥ್ ನೀಡಿದರು. ಇದೇ ವೇಳೆ ಪ್ರಮಾಣ ವಚನ ಸಮಾರಂಭ ನೋಡಲು ಬೃಹತ್​ ಎಲ್​ಇಡಿ ಪರದೆಯ ವ್ಯವಸ್ಥೆಯೂ ಮಾಡಲಾಗಿದೆ. ಹೊಸಪೇಟೆಯ ಬಿಜೆಪಿ ಕಚೇರಿಯಲ್ಲಿ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: Modi 3.0 Cabinet: ಮತ್ತೆ ಮಂತ್ರಿಯಾಗಿ ದಾಖಲೆ ಬರೆದ ಪ್ರಲ್ಹಾದ್‌ ಜೋಶಿ; ಬೆನ್ನು ತಟ್ಟಿ ಆಶೀರ್ವದಿಸಿದ ಬಿಎಸ್‌ವೈ

ರಾಮನಗರದಲ್ಲಿ ಕೇಕ್​ ಕತ್ತರಿಸಿದ ಕಾರ್ಯಕರ್ತರು

ರಾಮನಗರದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಮೋದಿ ಅಭಿಮಾನಿಗಳು ಕೇಕ್ ಕತ್ತರಿಸಿ ಹಾಗೂ ಸಿಹಿ ಹಂಚಿ ಪರಸ್ಪರ ಶುಭ ಕೋರಿದ್ದಾರೆ. ರಾಮನಗರದ ಐಜೂರು ವೃತ್ತದಲ್ಲಿ ಬಿಜೆಪಿ ಮತ್ತು ಜೆಡಿಎಸ್​​ ಮೈತ್ರಿ ಪಕ್ಷದ ಕಾರ್ಯಕರ್ತರು ಕಾರ್ಯಕ್ರಮ ಆಯೋಜಿಸಿದ್ದರು. ಮೋದಿ 3.0 ಎಂಬ ಕೇಕ್ ಕತ್ತರಿಸಿ ಪರಸ್ಪರ ಸಂಭ್ರಮಿಸಿದ್ದಾರೆ

ಚಿತ್ರದುರ್ಗದಲ್ಲಿ ವಿಶೇಷ ಪೂಜೆ

ಮೂರನೇ ಬಾರಿಗೆ ಮೋದಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಶುಭ ಕೋರಲು ಚಿತ್ರದುರ್ಗ ಬಿಜೆಪಿ ಘಟಕದಿಂದ ವಿಶೇಷ ಪೂಜೆ ನೆರವೇರಿಸಲಾಯಿತು. ಮಾಜಿ ಶಾಸಕ ತಿಪ್ಪಾರೆಡ್ಡಿ ಹಾಗೂ ಕಾರ್ಯಕರ್ತರಿಂದ ಪೂಜೆ ಆಯೋಜನೆ ಮಾಡಲಾಗಿತ್ತು. ನಗರದ ಗಣಪತಿ ದೇಗುಲದಲ್ಲಿ ಪೂಜೆ ಸಲ್ಲಿಸಿದ ಕಾರ್ಯಕರ್ತರು ಸುಭದ್ರ ಸರ್ಕಾರಕ್ಕಾಗಿ ಪ್ರಾರ್ಥನೆ ಮಾಡಿದರು. ಈ ವೇಳೆ ಮೋದಿ ಭಾವಚಿತ್ರ ಹಿಡಿದು ಜೈಕಾರ ಕೂಗಿದರು.

ಉಜ್ಜಯಿನಿ ಮಠದ ಶ್ರೀಗಳಿಂದ ಶುಭಾಶಯ

ಕೊಟ್ಟೂರು ತಾಲೂಕಿನಲ್ಲಿ ಉಜ್ಜಯಿನಿ ಮಠದ ಶ್ರೀಗಳು ಮೋದಿಗೆ ಶುಭಾಶಯ ಕೋರಿದರು. ಭಾರತ ದೇಶದ ನೇತೃತ್ವವನ್ನು ಮೋದಿ ಅವರು ಮೂರನೇ ಬಾರಿಗೆ ಹಿಡಿಯುತ್ತಿದ್ದಾರೆ. ಭಾರತ ದೇಶಕ್ಕೆ ಸಾವಿರಾರು ವರ್ಷಗಳ ಸನಾತನ ಧರ್ಮದ ಹಿನ್ನೆಲೆ ಇದೆ. ವಿವಿಧತೆಯಲ್ಲಿ ಏಕತೆ ಕಾಣುವ ದೇಶ ಭಾರತ. ಭಾರತ ದೇಶಕ್ಕಾಗಿ ಪ್ರಧಾನಿ ಮೋದಿ ಅವರು ತಮ್ಮದೇ ಆದ ಕನಸು ಕಂಡಿದ್ದಾರೆ ಮೂರನೇ ಅವಧಿಯಲ್ಲಿ ಆ ಎಲ್ಲಾ ಕನಸುಗಳು ಈಡೇರಲಿ ಎಂದು ಅವರು ಆಶಯ ಕೋರಿದರು.

ಹಾವೇರಿಯಲ್ಲಿ ಹೋಳಿಗೆ ಊಟ

ನರೇಂದ್ರ ಮೋದಿ ಮೂರನೆ ಬಾರಿ ಪ್ರಧಾನಿಯಾಗುತ್ತಿರುವುದರ ಖುಷಿಗೆ ಅಭಿಮಾನಿಗಳು ಹೊಳಿಗೆ ಊಟ ವಿತರಿಸಿದರು. ಹಾವೇರಿ ಜಿಲ್ಲೆಯ ರಾಣಿಬೇನ್ನೂರು ತಾಲೂಕಿನ ಹಲಗೇರಿಯಲ್ಲಿ ಸಿಹಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಮೋದಿ ಟಿ ಸ್ಟಾಲ್ ಮಾಲೀಕರು ಮತ್ತು ಅಭಿಮಾನಿಗಳಿಂದ ಹೋಳಿಗೆ ಊಟ ವಿತರಣೆ ಮಾಡಲಾಯಿತು. ಬರೊಬ್ಬರಿ ನಾಲ್ಕು ಸಾವಿರ ಮಂದಿಗೆ ಹೋಳಿಗೆ ಊಟ ವಿತರಣೆ ಮಾಡಲಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಬಿರಿಯಾನಿ ವಿತರಣೆ

ಪ್ರಧಾನಿ ಮೋದಿ ಮೂರನೇ ಬಾರಿ ಅಧಿಕಾರಕ್ಕೆ ಏರಿದ ಹಿನ್ನೆಲೆಯಲ್ಲಿ ಪೆಟ್ರೋಲ್ ಬಂಕ್ ನಲ್ಲಿ ಬಿರಿಯಾನಿ ವಿತರಣೆ ಮಾಡಲಾಯಿತು. ಜತೆಗೆ ಸಿಹಿಯೂ ಹಂಚಲಾಯಿತು. ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಸಿಹಿ ಹಂಚಿ‌ ಸಂಭ್ರಮಿಸಲಾಯಿತು. ಚಿಂತಾಮಣಿ ನಗರದ ಹೃದಯಭಾಗಲ್ಲಿರುವ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಗೆ ಇಂಧನ ಹಾಕಿಸಲು ಬಂದವರಿಗೆ ಪೆಟ್ರೋಲ್ ಬಂಕ್ ಮಾಲೀಕರಿಂದ ಸಿಹಿ ಹಂಚಿಕೆ ಮಾಡಿದರು. ಅನುಪಮಾರೆಡ್ಡಿ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಮಾಲೀಕ ಬಿರಿಯಾನಿ ಹಂಚಿದ್ದರು.

Continue Reading

ದಾವಣಗೆರೆ

Farmer Death : ಬ್ಯಾಂಕ್‌ ಅಧಿಕಾರಿಗಳಿಂದ ಮನೆ ಹರಾಜು ನೋಟಿಸ್‌; ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡ ರೈತ

Farmer Death : ಸಾಲದ ಹೊರೆಗೆ ಮನನೊಂದ ರೈತನೊಬ್ಬ ತನ್ನ ಜಮೀನಿನಲ್ಲಿದ್ದ ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

VISTARANEWS.COM


on

By

Farmer Death
Koo

ದಾವಣಗೆರೆ: ಸಾಲದ ಹೊರೆ ಮತ್ತು ಬ್ಯಾಂಕ್ ಅಧಿಕಾರಿಗಳಿಂದ ಮನೆ ಹರಾಜು ನೋಟಿಸ್ ಬಂದಿದ್ದಕ್ಕೆ ಮನನೊಂದು ರೈತರೊಬ್ಬರು ನೇಣಿಗೆ (Farmer Death) ಶರಣಾಗಿದ್ದಾರೆ. ಹನುಮಂತಪ್ಪ (43) ಮೃತ ದುರ್ದೈವಿ.

ಹನುಮಂತಪ್ಪ ತಮ್ಮ ಜಮೀನಿನಲ್ಲಿದ್ದ ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತನ ಸಾವಿನಿಂದ ಆಕ್ರೋಶಗೊಂಡ ಇತರೆ ರೈತರು ಪ್ರತಿಭಟನೆ ನಡೆಸಿದರು. ಬ್ಯಾಂಕ್ ಅಧಿಕಾರಿಗಳ ಹಾಗೂ ಜಿಲ್ಲಾಧಿಕಾರಿಗಳ ವಿರುದ್ಧ ಕಿಡಿಕಾರಿದರು.

ದಾವಣಗೆರೆ ತಾಲೂಕಿನ ಗುಡಾಳ್ ಗೊಲ್ಲರಹಟ್ಟಿ ಗ್ರಾಮದ ನಿವಾಸಿ ಹನಮಂತಪ್ಪ, 4 ಲಕ್ಷ ರೂಪಾಯಿ ಮನೆ ಸಾಲ ಹಾಗೂ 2.60 ಲಕ್ಷ ರೂಪಾಯಿ ಕುರಿ ಸಾಕಾಣಿಕೆಗೆ ಸಾಲ ಮಾಡಿಕೊಂಡಿದ್ದರು. ಮನೆ ಸಾಲ ಪ್ರತಿ ತಿಂಗಳು ತುಂಬುತ್ತಿದ್ದರು, ಆದರೆ ಕುರಿಸಾಲ ಮಾತ್ರ ಬಾಕಿ ಉಳಿದಿತ್ತು.

ಇದನ್ನೂ ಓದಿ: Narendra Modi Live: ಸತತ 3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ; ಲೈವ್‌ ಇಲ್ಲಿ ವೀಕ್ಷಿಸಿ

ಕುರಿ ಸಾಲ‌ ತಿರಿಸಲು ಹೋದರೆ ಮನೆ ಹಾಗೂ ಕುರಿ ಸಾಲ ಎರಡು ಒಟ್ಟಿಗೆ ಕಟ್ಟುವಂತೆ ಬ್ಯಾಂಕ್ ಅಧಿಕಾರಿಗಳು ಒತ್ತಡ ಹಾಕಿದ್ದಾರೆ ಎನ್ನಲಾಗಿದೆ. ಶನಿವಾರ ದಾವಣಗೆರೆ ನಗರದ ಚಾಮರಾಜಪೇಟೆ ಕೆನರಾ ಬ್ಯಾಂಕ್ ಅಧಿಕಾರಿಗಳು ಮನೆ ಬಾಗಿಲಿಗೆ ಹರಾಜು ನೋಟಿಸ್ ಅಂಟಿಸಿ, ಫೋಟೋ ತೆಗೆದುಕೊಂಡು ಹೋಗಿದ್ದಾರೆ.

ಈ ಘಟನೆ ನಡೆಯುತ್ತಿದ್ದಂತೆ ಭಾನುವಾರ ಬೆಳಗ್ಗೆ ನಾಲ್ಕು ಗಂಟೆಗೆ ಜಮೀನಿಗೆ ಹೋದ ಹನುಮಂತಪ್ಪ ನೇಣಿಗೆ ಶರಣಾಗಿದ್ದಾರೆ. ರೈತನ ಆತ್ಮಹತ್ಯೆಗೆ ಡಿಸಿ ಹಾಗೂ ಬ್ಯಾಂಕ್ ಅಧಿಕಾರಿಗಳೇ ಕಾರಣ. ಮನೆ ಸಾಲ ನಿರಂತರವಾಗಿ ಕಟ್ಟಿದ್ದರೂ ಹರಾಜಿಗೆ ಮುಂದಾಗಿದ್ದಾರೆ ಎಂದು ರೈತರು ಕಿಡಿಕಾರಿದರು. ನಮ್ಮ ಸಮಸ್ಯೆಗೆ ಪರಿಹಾರ ಸಿಗುವ ತನಕ ಶವ ಸಂಸ್ಕಾರ ಮಾಡಲ್ಲ ಎಂದು ಪಟ್ಟು ಹಿಡಿದರು. ಜಿಲ್ಲಾ ಆಸ್ಪತ್ರೆ ಶವಾಗಾರದ ಮುಂದೆ ಹೋರಾಟ ನಡೆಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Modi 3.0 Cabinet: ಮತ್ತೆ ಮಂತ್ರಿಯಾಗಿ ದಾಖಲೆ ಬರೆದ ಪ್ರಲ್ಹಾದ್‌ ಜೋಶಿ; ಬೆನ್ನು ತಟ್ಟಿ ಆಶೀರ್ವದಿಸಿದ ಬಿಎಸ್‌ವೈ

Modi 3.0 Cabinet: ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ಪ್ರಲ್ಹಾದ ಜೋಶಿ ಅವರು ರಾಜ್ಯ ಬಿಜೆಪಿ ವರಿಷ್ಠ ಬಿಎಸ್ ಯಡಿಯೂರಪ್ಪ ಅವರ ಆಶೀರ್ವಾದ ಪಡೆದರು. ಇದೇ ವೇಳೆ ಪ್ರಲ್ಹಾದ ಜೋಶಿಯವರಿಗೆ ಸಿಹಿ ತಿನಿಸಿ ಬೆನ್ನು ತಟ್ಟಿ ಬೆಂಬಲಿಸಿದರು.

VISTARANEWS.COM


on

By

Modi 3.0 Cabinet BS Yediyurappa congratulates Pralhad Joshi
Koo

ಹುಬ್ಬಳ್ಳಿ: ನರೇಂದ್ರ ಮೋದಿ (Narendra Modi) ಅವರ ಮೂರನೇ ಅವಧಿ ಸಚಿವ ಸಂಪುಟದಲ್ಲಿ (Modi 3.0 Cabinet) ಸ್ಥಾನ ಪಡೆದಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರು ಭಾನುವಾರ ಪ್ರಮಾಣ ವಚನಕ್ಕೂ ಮುನ್ನ ರಾಜ್ಯ ಬಿಜೆಪಿ ವರಿಷ್ಠ ಬಿ.ಎಸ್. ಯಡಿಯೂರಪ್ಪ ಅವರ (BS Yediyurappa) ಆಶೀರ್ವಾದ ಪಡೆದರು. ಎನ್‌ಡಿಎ ಮೈತ್ರಿ ಕೂಟದಿಂದ ಸತತ ಮೂರನೇ ಬಾರಿ ಸರ್ಕಾರ ರಚಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಪ್ರಲ್ಹಾದ ಜೋಶಿ ಅವರು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಮೋದಿ ಅವರ ಎರಡನೇ ಅವಧಿಯಲ್ಲಿ ಸಂಸದೀಯ ಮತ್ತು ಕಲ್ಲಿದ್ದಲು ಗಣಿ ಖಾತೆ ಸಚಿವರಾಗಿ ಸಮರ್ಥವಾಗಿ ನಿಭಾಯಿಸಿ ಪ್ರಧಾನಿಯಿಂದ ಪ್ರಶಂಸೆ ಪಡೆದಿದ್ದ ಪ್ರಲ್ಹಾದ ಜೋಶಿ ಅವರಿಗೆ ಮತ್ತೆ ಕೇಂದ್ರ ಕ್ಯಾಬಿನೆಟ್‌ನಲ್ಲಿ ಸ್ಥಾನ ಕಲ್ಪಿಸಲಾಗಿದೆ. ಭಾನುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸುವ ಹಿನ್ನೆಲೆಯಲ್ಲಿ ಪ್ರಲ್ಹಾದ ಜೋಶಿ ದೆಹಲಿಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

Modi 3.0 Cabinet BS Yediyurappa congratulates Pralhad Joshi

ಇದನ್ನೂ ಓದಿ: Narendra Modi: ‌ಮೋದಿ ಪ್ರಮಾಣವಚನ ಸಂಭ್ರಮಕ್ಕೆ ಗಣ್ಯರ ದಂಡೇ ಸಾಕ್ಷಿ; ದೇಶ-ವಿದೇಶಗಳ ಗಣ್ಯರ ಪಟ್ಟಿ ಹೀಗಿದೆ

ಸಿಹಿ ತಿನಿಸಿ ಬೆನ್ನು ತಟ್ಟಿದ ಬಿಎಸ್‌ವೈ

ಯಡಿಯೂರಪ್ಪ ಅವರು ಜೋಶಿ ಅವರಿಗೆ ಸಿಹಿ ತಿನಿಸಿ ಬೆನ್ನು ತಟ್ಟಿ ಬೆಂಬಲ ವ್ಯಕ್ತಪಡಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಹ ಸಿಹಿ ತಿನಿಸಿ ಸಂಭ್ರಮದಲ್ಲಿ ಭಾಗಿಯಾದರು. ಸಂಸದರಾದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ರವಿಕುಮಾರ್, ಶಾಸಕರಾದ ಮಹೇಶ್ ಟೆಂಗಿನಕಾಯಿ, ಅರವಿಂದ ಬೆಲ್ಲದ, ಹರೀಶ್ ಪೂಂಜಾ, ಧಾರವಾಡ ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ ಹಾಗೂ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮೋದಿ-ಜೋಶಿ ದಾಖಲೆ

ಕೇಂದ್ರದಲ್ಲಿ ಕಾಂಗ್ರೆಸ್ಸೇತರವಾಗಿ ನರೇಂದ್ರ ಮೋದಿ ಸತತ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದರೆ, ಇತ್ತ ಧಾರವಾಡ ಸಂಸದ ಪ್ರಲ್ಹಾದ ಜೋಶಿ ಅವರದ್ದು ಒಂದು ದಾಖಲೆ ಆಗಿದೆ. ಧಾರವಾಡ ಲೋಕಸಭಾ ಕ್ಷೇತ್ರದಿಂದ ಸತತ 5ನೇ ಬಾರಿ ಗೆಲುವು ಸಾಧಿಸಿ ಮತ್ತೆ ಕೇಂದ್ರ ಕ್ಯಾಬಿನೆಟ್‌ನಲ್ಲಿ ಸಚಿವ ಸ್ಥಾನ ಪಡೆಯುವ ಮೂಲಕ ಐತಿಹಾಸಿಕ ದಾಖಲೆಗೆ ಪಾತ್ರರಾಗಿದ್ದಾರೆ. ಪ್ರಲ್ಹಾದ ಜೋಶಿ ಅವರು ಮತ್ತೆ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಕುಟುಂಬದವರಲ್ಲಿ, ಬೆಂಬಲಿಗರಲ್ಲಿ ಮತ್ತು ಹುಬ್ಬಳ್ಳಿ – ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಧಾರವಾಡ

Dharwad News : ಅಗ್ನಿ ಸ್ಪರ್ಶ ಮಾಡುವಾಗಲೇ ಶವದ ಮೇಲೆ ಹಾರಿ ಕುಳಿತ ಮಂಗ! ಮುಂದೇನಾಯಿತು?

Heart Attack : ಹೃದಯಾಘಾತದಿಂದ ಮೃತಪಟ್ಟಿದ್ದ ಯುವಕನ ಅಂತ್ಯ ಸಂಸ್ಕಾರ ನಡೆಯುತ್ತಿರುವಾಗಲೇ ಮಂಗವೊಂದು ಪ್ರತ್ಯಕ್ಷವಾಗಿತ್ತು. ಇನ್ನೇನು ಅಗ್ನಿ ಸ್ಪರ್ಶ ಮಾಡಬೇಕು ಎಂದಾಗ ಶವದ ಮೇಲೆ ಕುಳಿತುಕೊಂಡು ಅಚ್ಚರಿಯನ್ನು (Dharwad News) ಮೂಡಿಸಿತ್ತು. ಸದ್ಯ ಈ ವಿಡಿಯೊ ಎಲ್ಲೆಡೆ ವೈರಲ್‌ ಆಗುತ್ತಿದೆ.

VISTARANEWS.COM


on

By

Dharwad News The monkey sat on the corpse during the funeral
Koo

ಧಾರವಾಡ: ಯುವಕನೊರ್ವ ಚಿಕ್ಕ ವಯಸ್ಸಿಗೆ ಹೃದಯಾಘಾತದಿಂದ (Heart Attack) ಮೃತಪಟ್ಟಿದ್ದ. ಆ ಕುಟುಂಬದವರು ಮಗನನ್ನು ಕಳೆದುಕೊಂಡ ದುಃಖದಲ್ಲಿದ್ದರು. ಮಗನ ಅಗಲಿಕೆಯ ನೋವಿನಲ್ಲೇ ಬಂಧು-ಬಾಂಧವರು ಅಂತಿಮ ವಿಧಿವಿಧಾನ ಮುಗಿಸಿ, ಇನ್ನೇನು ಯುವಕನ ಮೃತದೇಹಕ್ಕೆ ಅಗ್ನಿ ಸ್ಪರ್ಶ ಮಾಡಬೇಕು ಎಂದಾಗ ಅಚ್ಚರಿಯೊಂದು ಕಾದಿತ್ತು. ಎಲ್ಲಿಂದಲ್ಲೋ ಬಂದ ಮಂಗವೊಂದು ಶವದ ಮೇಲೆ ಕುಳಿತುಕೊಂಡಿತ್ತು. ಧಾರವಾಡ ಜಿಲ್ಲೆಯ (Dharwad News) ನವಲಗುಂದ ಪಟ್ಟಣದಲ್ಲಿ ಈ ಅಚ್ಚರಿಯ ಘಟನೆ ನಡೆದಿದೆ.

ನವಲಗುಂದ ಪಟ್ಟಣದ ಬಸವೇಶ್ವರ ನಗರದ ನಿವಾಸಿ ರವಿ ಮಾಗ್ರೆ (35) ಎಂಬುವವರು ಗುರುವಾರ ಹೃದಯಾಘಾತದಿಂದ ಮೃತಪಟ್ಟಿದ್ದರು. ಶುಕ್ರವಾರ ಮಧ್ಯಾಹ್ನ ಕುಟುಂಬಸ್ಥರು ಅಂತಿಮ ವಿಧಿವಿಧಾನ ಕಾರ್ಯದಲ್ಲಿ ತೊಡಗಿದ್ದರು. ಇದೇ ವೇಳೆ ಪ್ರತ್ಯಕ್ಷವಾದ ಮಂಗವೊಂದು ಅಂತ್ಯಕ್ರಿಯೆ ನಡೆಯುವಾಗ ಶವದ ಮೇಲೆ ಕೂತು ಅಚ್ಚರಿ ಮೂಡಿಸಿತು.

ಇತ್ತ ದುಃಖದಲ್ಲಿದ್ದ ಕುಟುಂಬಸ್ಥರಿಗೆ ಇದು ಯಾವ ತರಹದ ಬಾಂಧವ್ಯ ಎಂದು ಆಶ್ಚರ್ಯಗೊಂಡರು. ಮೃತಪಟ್ಟ ರವಿಗೂ ಈ ಮಂಗಕ್ಕೂ ಯಾವುದೇ ಸಂಬಂಧ ಇರಲಿಲ್ಲ. ಅಂತ್ಯಕ್ರಿಯೆಗೆ ಸಮಯ ಮೀರುತ್ತಿದ್ದ ಕಾರಣಕ್ಕೆ ಮಂಗನನ್ನು ಓಡಿಸಲು ಜನರು ಮುಂದಾದರು. ಆದರೂ ಮಂಗ ಮಾತ್ರ ಮೃತದೇಹವನ್ನು ಬಿಟ್ಟು ಕೆಳಗೆ ಇಳಿಯಲೇ ಇಲ್ಲ.

ಎಲ್ಲರಿಗೂ ಮಂಗನ ವರ್ತನೆಯು ಕುತೂಹಲವನ್ನು ಮೂಡಿಸಿತ್ತು. ಮಂಗ ಇಳಿಯದೇ ಇದ್ದಾಗ ಕೊನೆಗೆ ರವಿ ಕುಟುಂಬಸ್ಥರು ಮೃತದೇಹಕ್ಕೆ ಅಗ್ನಿ ಸ್ಪರ್ಶಿಸಿದಾಗ ಕೆಳಗೆ ಇಳಿದಿದೆ. ಮೃತದೇಹಕ್ಕೆ ಬೆಂಕಿ ಹಚ್ಚಿದ ನಂತರವೂ ಅಲ್ಲಿಯೇ ಕುಳಿತು ನೋಡುತ್ತಿತ್ತು. ಮಂಗನ ಈ ಎಲ್ಲ ನಡೆಗಳನ್ನು ಅಲ್ಲಿದ್ದ ಜನರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿಯುತ್ತಿದ್ದರು.

ಇದನ್ನೂ ಓದಿ: Karnataka Rain : ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು, ಹೊರ ಬಂತು ಸವಾರನ ಕರುಳು! ಮತ್ತಿಬ್ಬರು ಗಂಭೀರ

ಅಯ್ಯೋ..ಇದೆಂಥಾ ಹುಚ್ಚಾಟ! ಬಿಜೆಪಿ ಗೆಲ್ಲಲ್ಲಿ ಎಂದು ಬೆರಳನ್ನೇ ಕತ್ತರಿಸಿಕೊಂಡ ಭೂಪ

ಛತ್ತೀಸ್‌ಗಡ: ಚುನಾವಣೆ(Election) ಅಂದ್ರೆನೇ ಹಾಗೆಯೇ ಅದೊಂದು ತರಹ ಯುದ್ಧದ ರೀತಿಯೇ ಭಾಸವಾಗುತ್ತದೆ. ತಮ್ಮ ತಮ್ಮ ನೆಚ್ಚಿನ ಪಕ್ಷಗಳು, ನಾಯಕರ ಗೆಲುವಿಗೆ ನೂರಾರು ಕಾರ್ಯಕರ್ತರು, ಬೆಂಬಲಿಗರು ಹಂಬಲಿಸೋದು ಸಹಜ. ಕೆಲವೊಮ್ಮೆ ಕಾರ್ಯಕರ್ತರ ಪಕ್ಷದ ಬಗೆಗಿನ ಒಲವು ಅತಿರೇಕಕ್ಕೆ ತಿರುಗಿದಾಗ ಅನೇಕ ಅವಘಡಗಳು ಸಂಭವಿಸುತ್ತಿರುತ್ತವೆ. ಅಂತಹದ್ದೇ ಒಂದು ಘಟನೆ(Viral News) ಛತ್ತೀಸ್‌ಗಡದಲ್ಲಿ ನಡೆದಿದ್ದು, ಎನ್‌ಡಿಎ(NDA) ಬಹುಮತದೊಂದಿಗೆ ಗೆಲವು ಸಾಧಿಸಿರುವ ಹಿನ್ನೆಲೆ ವ್ಯಕ್ತಿಯೊಬ್ಬ ತನ್ನ ಬೆರಳು ಕತ್ತರಿಸಿ ಕಾಳಿ ದೇವಿಗೆ ಅರ್ಪಿಸಿದ್ದಾನೆ.

ಏನಿದು ಘಟನೆ?

ಛತ್ತೀಸ್‌ಗಡದ ಬಾಲರಾಮ್‌ಪುರದಲ್ಲಿ ಈ ಘಟನೆ ನಡೆದಿದ್ದು, ದುರ್ಗೇಶ್‌ ಪಾಂಡೆ ಎಂಬಾತನೇ ಬಿಜೆಪಿ ಬೆಂಬಲಿಗ. ಜೂ.4ರಂದು ಚನಾವಣಾ ಫಲಿತಾಂಶ ಹೊರಬಿದ್ದಾಗ ಆರಂಭದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸುತ್ತಿದ್ದಂತೆ ತೀವ್ರ ಬೇಸರಗೊಂಡಿದ್ದನಂತೆ. ಈ ಬಾರಿ ಅಧಿಕಾರ ಎನ್‌ಡಿಎ ಕೈ ತಪ್ಪಿ ಹೋಗುತ್ತದೆ ಎಂಬ ಆತಂಕಕ್ಕೆ ಬಿದ್ದ ದುರ್ಗೇಶ್‌, ಕಾಳಿ ಮಂದಿರಕ್ಕೆ ತೆರಳಿ ಬಿಜೆಪಿ ಗೆಲುವಿಗೆ ಪ್ರಾರ್ಥಿಸಿದ್ದಾನೆ. ಅಲ್ಲದೇ ತನ್ನ ಒಂದು ಬೆರಳನ್ನೇ ಕತ್ತರಿಸಿ ದೇವಿಗೆ ಅರ್ಪಿಸಿದ್ದಾನೆ.

ಇನ್ನು ಬೆರಳು ಕತ್ತರಿಸಿಕೊಂಡ ದುರ್ಗೇಶ್‌ ಪಾಂಡೆ, ಬಟ್ಟೆಯನ್ನು ಕಟ್ಟಿ ಸುರಿಯುತ್ತಿದ್ದ ರಕ್ತವನ್ನು ತಡೆಯಲು ಯತ್ನಿಸಿದ್ದಾನೆ. ಆದರೆ ರಕ್ತ ಮಾತ್ರ ನಿಲ್ಲಲೇ ಇಲ್ಲ. ಪರಿಸ್ಥಿತಿ ಕೈಮೀರಿ ಹೋಗುತ್ತಿದ್ದಂತೆ ಆತನ ಕುಟುಂಬಸ್ಥರು ಆತನನ್ನು ತಕ್ಷಣ ಸಮಾರಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿಂದ ಆತನನ್ನು ಅಂಬಿಕಾಪುರದ ಮೆಡಿಕಲ್‌ ಕಾಲೇಜಿಗೆ ರವಾನಿಸಲಾಗಿತ್ತು. ಬಹಳ ಹೊತ್ತಾದ ಕಾರಣ ನಜ್ಜುಗುಜ್ಜಾಗಿದ್ದ ಆತನ ಬೆರಳನ್ನು ಮತ್ತೆಜೋಡಿಸಲು ಸಾಧ್ಯವಾಗಿಲ್ಲ. ಅದ್ಯ ಚಿಕಿತ್ಸೆ ಮುಂದುವರೆದಿದ್ದು, ಆತನ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ದುರ್ಗೇಶ್‌ ಪಾಂಡೆ, ಆರಂಭಿಕ ಟ್ರೆಂಡ್‌ಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸುವುದನ್ನು ಕಂಡು ನಾನು ವಿಚಲಿತನಾದೆ. ಮತ್ತೊಂದೆಡೆ ಕಾಂಗ್ರೆಸ್ ಬೆಂಬಲಿಗರು ಕೂಡ ಉತ್ಸಾಹದಲ್ಲಿದ್ದರು. ಇಡೀ ಗ್ರಾಮವು ನಂಬಿರುವ ಕಾಳಿ ದೇವಸ್ಥಾನಕ್ಕೆ ನಾನು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಬಿಜೆಪಿ ಗೆಲುವಿಗೆ ಬೆರಳು ಕೊಡುವುದಾಗಿ ಪ್ರತಿಜ್ಞೆ ಮಾಡಿದ್ದೆ. ಅಂದು ಸಂಜೆ ಬಿಜೆಪಿ ಚುನಾವಣೆಯಲ್ಲಿ ಗೆದ್ದಾಗ, ನಾನು ದೇವಸ್ಥಾನಕ್ಕೆ ಹೋಗಿ, ನನ್ನ ಬೆರಳು ಕತ್ತರಿಸಿ ಅದನ್ನು ಅರ್ಪಿಸಿದೆ, ಬಿಜೆಪಿ ಈಗ ಸರ್ಕಾರ ರಚಿಸುತ್ತದೆ, ಆದರೆ ಅವರು (ಎನ್‌ಡಿಎ) 400 ರ ಗಡಿ ದಾಟಿದರೆ ನನಗೆ ಹೆಚ್ಚು ಸಂತೋಷವಾಗುತ್ತಿತ್ತು ಎಂದಿದ್ದಾನೆ.

ಕೆಲವು ದಿನಗಳ ಹಿಂದೆ ಆಪ್‌ ನಾಯಕ, ನವದೆಹಲಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಸೋಮನಾಥ್‌ ಭಾರ್ತಿ, ನರೇಂದ್ರ ಮೋದಿ ಅವರು 3ನೇ ಬಾರಿಗೆ ಪ್ರಧಾನಿಯಾದರೆ ನನ್ನ ತಲೆ ಬೋಳಿಸಿಕೊಳ್ಳುತ್ತೇನೆ” ಎಂದಿದ್ದರು. ಜೂನ್‌ 4ರಂದು ಎಲ್ಲ ಮತಗಟ್ಟೆ ಸಮೀಕ್ಷೆಗಳು ತಪ್ಪು ಎಂಬುದು ಸಾಬೀತಾಗಲಿದೆ. ಖಂಡಿತವಾಗಿಯೂ, ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗುವುದಿಲ್ಲ. ದೆಹಲಿಯ ಎಲ್ಲ 7 ಲೋಕಸಭೆ ಕ್ಷೇತ್ರಗಳಲ್ಲೂ ಇಂಡಿಯಾ ಒಕ್ಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಇನ್ನು, ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾದರೆ, ನಾನು ನನ್ನ ತಲೆಯನ್ನು ಬೋಳಿಸಿಕೊಳ್ಳುತ್ತೇನೆ” ಎಂಬುದಾಗಿ ಮತಗಟ್ಟೆ ಸಮೀಕ್ಷೆಗಳ ವರದಿಗಳ ಬಳಿಕ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Narendra Modi 3.0
ಪ್ರಮುಖ ಸುದ್ದಿ30 seconds ago

Narendra Modi 3.0 : ಮೋದಿ ಪ್ರಮಾಣ ವಚನ; ಬಿರಿಯಾನಿ, ಹೋಳಿಗೆ ಹಂಚಿದ ಕರುನಾಡಿನ ಅಭಿಮಾನಿಗಳು

Farmer Death
ದಾವಣಗೆರೆ26 mins ago

Farmer Death : ಬ್ಯಾಂಕ್‌ ಅಧಿಕಾರಿಗಳಿಂದ ಮನೆ ಹರಾಜು ನೋಟಿಸ್‌; ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡ ರೈತ

Modi 3.0 Cabinet BS Yediyurappa congratulates Pralhad Joshi
Lok Sabha Election 202447 mins ago

Modi 3.0 Cabinet: ಮತ್ತೆ ಮಂತ್ರಿಯಾಗಿ ದಾಖಲೆ ಬರೆದ ಪ್ರಲ್ಹಾದ್‌ ಜೋಶಿ; ಬೆನ್ನು ತಟ್ಟಿ ಆಶೀರ್ವದಿಸಿದ ಬಿಎಸ್‌ವೈ

Rishabh Pant
ಪ್ರಮುಖ ಸುದ್ದಿ58 mins ago

Rishbha Pant : ನನ್ನ ಕಾಲನ್ನು ತುಂಡರಿಬೇಕಿತ್ತು; ಅಪಘಾತದ ಭಯಾನಕ ಸಂಗತಿಗಳನ್ನು ಹೇಳಿದ ರಿಷಭ್ ಪಂತ್​

Health Tips
ಆರೋಗ್ಯ1 hour ago

Health Tips: ಆರೋಗ್ಯಕರ ಆಗಿರಬೇಕಿದ್ದರೆ ನಾವು ಪ್ರತಿದಿನ ಎಷ್ಟು ಪ್ರಮಾಣದಲ್ಲಿ ಆಹಾರ ಸೇವಿಸಬೇಕು?

Narendra Modi Live
ದೇಶ1 hour ago

Narendra Modi Live: ಸತತ 3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ; ಲೈವ್‌ ಇಲ್ಲಿ ವೀಕ್ಷಿಸಿ

Champions Trophy 2025
ಪ್ರಮುಖ ಸುದ್ದಿ2 hours ago

IND vs PAK : ಭಾರತ ತಂಡವನ್ನು ಪಾಕಿಸ್ತಾನಕ್ಕೆ ಹೋಗಲು ಸಮ್ಮಿಶ್ರ ಸರ್ಕಾರವೂ ಬಿಡುವುದಿಲ್ಲ

Fake CBI Gang
ಕ್ರೈಂ2 hours ago

Fake CBI Gang: ನಿವೃತ್ತ ಅಧಿಕಾರಿಯ 85 ಲಕ್ಷ ರೂ. ಎಗರಿಸಿದ ನಕಲಿ ಸಿಬಿಐ ಗ್ಯಾಂಗ್!

Kannada New Movie Chilli Chicken Official Trailer
ಸ್ಯಾಂಡಲ್ ವುಡ್2 hours ago

Kannada New Movie: ‘ಚಿಲ್ಲಿ ಚಿಕನ್​’ ಟ್ರೈಲರ್‌ ಔಟ್‌; ಚೈನೀಸ್ ಹೋಟೆಲ್ ಹುಡುಗರ ಸ್ಟೋರಿ!

IND vk PAK
ಕ್ರಿಕೆಟ್2 hours ago

IND vs PAK : ​ ವಿರಾಟ್​ ಕೊಹ್ಲಿಯ ಚಪ್ಪಲಿಗೂ ಸಮವಲ್ಲ ಬಾಬರ್ ಅಜಂ; ಪಾಕಿಸ್ತಾನದ ಮಾಜಿ ಆಟಗಾರನ ಟೀಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ6 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌