kn rajanna says brahmins wont even purchase agarabatis KN Rajanna: ಯಾವ ಬ್ರಾಹ್ಮಣರೂ ಒಂದು ರೂಪಾಯಿ ಕೊಟ್ಟು ಊದಿನಕಡ್ಡಿನೂ ತರೋಲ್ಲ ಅಂದ್ರು ರಾಜಣ್ಣ - Vistara News

ಕರ್ನಾಟಕ

KN Rajanna: ಯಾವ ಬ್ರಾಹ್ಮಣರೂ ಒಂದು ರೂಪಾಯಿ ಕೊಟ್ಟು ಊದಿನಕಡ್ಡಿನೂ ತರೋಲ್ಲ ಅಂದ್ರು ರಾಜಣ್ಣ

KN Rajanna: ಈಗ ಬ್ರಾಹ್ಮಣರು ಹೋಮ, ಹವನದ ಸಂಪ್ರದಾಯ ಕಡಿಮೆ ಮಾಡಿದ್ದಾರೆ. ಶೂದ್ರರೇ ಜಾಸ್ತಿ ಎಂದು ಹೇಳಿದ್ದಾರೆ ಕೆ.ಎನ್‌. ರಾಜಣ್ಣ.

VISTARANEWS.COM


on

KN Rajanna
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಾವಣಗೆರೆ: ʻʻಯಾವ ಬ್ರಾಹ್ಮಣರು ಕೂಡ ಒಂದು ರೂಪಾಯಿ ಕೊಟ್ಟು ಊದಿನಕಡ್ಡಿ ತರೋದಿಲ್ಲ, ಹಚ್ಚೋದಿಲ್ಲʼʼ- ಹೀಗೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಸಹಕಾರ ಸಚಿವ (Co-operative Minister) ಕೆ.ಎನ್‌. ರಾಜಣ್ಣ (KN Rajanna).

ದಾವಣಗೆರೆ ಜಿಲ್ಲೆ, ಹರಿಹರ ತಾಲೂಕಿನ ರಾಜನಹಳ್ಳಿ‌ ವಾಲ್ಮೀಕಿ ಪೀಠದಲ್ಲಿ (Valmeeki peeta) ನಡೆದ ಅಭಿನಂದನಾ ಸಮಾರಂಭದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಯಾರನ್ನೂ ಮೇಲ್ವರ್ಗದವರೆಂದು ಕರೆಯಬಾರದು, ಹಾಗೆ ಕರೆದರೆ ನಾವು ಕೆಳವರ್ಗದವರು ಎಂದಾಗುತ್ತದೆ. ನಾವೇನು ಕೆಳವರ್ಗದವರಾ ಎಂಬಿತ್ಯಾದಿ ವ್ಯಾಖ್ಯಾನಗಳನ್ನು ಮಾಡಿದ ಅವರು ಈಗಿನ ಸಾಮಾಜಿಕ ಸ್ಥಿತಿಗತಿಗಳನ್ನು ವಿವರಿಸುತ್ತಾ ಮೇಲಿನ ಮಾತನ್ನು ಹೇಳಿದರು.

ʻʻಬ್ರಾಹ್ಮಣರು ಈಗ ಹೋಮ ಹವನ ಕಡಿಮೆ ಮಾಡಿದ್ದಾರೆ. ಆದರೆ ನಾವೇ ಶೂದ್ರರೇ ಹೆಚ್ಚು ಹೋಮ, ಹವನ ಮಾಡುತ್ತಿದ್ದೇವೆ. ನಿಜ ಅಂದ್ರೆಯಾವ ಬ್ರಾಹ್ಮಣರು ಕೂಡ ಒಂದು ರೂಪಾಯಿ ಕೊಟ್ಟು ಊದಿನಕಡ್ಡಿ ತರೋದಿಲ್ಲ, ಹಚ್ಚೋದಿಲ್ಲʼʼ ಎಂದು ಹೇಳಿದರು.

ಹೀಗೆ ಹೇಳಿದೆ ಅಂತ ನಾನು ಬ್ರಾಹ್ಮಣ ವಿರೋಧಿ ಅಂತ ಅಲ್ಲ. ಇದು ನಾನು ಹೇಳಿದ್ದೂ ಅಲ್ಲ. ನನ್ನ ಸ್ನೇಹಿತ ಹೇಳಿದ್ದು ಎಂದು ಹೇಳಿದ ಕೆ.ಎನ್‌. ರಾಜಣ್ಣ, ಮಾಧ್ಯಮಗಳು ನನ್ನ ಹೇಳಿಕೆಯನ್ನು ಬ್ರೇಕಿಂಗ್‌ ನ್ಯೂಸ್‌ ಮಾಡಬೇಡಿ ಅಂದರು.

ʻʻನಾನು ಸಾಮಾನ್ಯ ಕ್ಷೇತ್ರದಿಂದ‌ ಸ್ಪರ್ಧೆ ಮಾಡಿದ್ದು. ನನ್ನ ಕ್ಷೇತ್ರದಲ್ಲಿ ವಾಲ್ಮೀಕಿ ಸಮುದಾಯ 100ರಷ್ಟು 100 ಮತ ಹಾಕಿದೆʼʼ ಎಂದು ಹೇಳಿದ ಅವರು, ಕೆಲವರು ಎಸ್‌ಟಿ ಸಮುದಾಯದ ನಕಲಿ ಜಾತಿ ಪ್ರಮಾಣಪತ್ರ ಮಾಡಿಕೊಳ್ಳುತ್ತಿದ್ದಾರೆ ಎಂದು ಆಕ್ಷೇಪಿಸಿದರು.

ನಾವೇನು ಕೆಳವರ್ಗದವರೇ?

ಯಾರನ್ನೂ ಕೂಡಾ ಮೇಲ್ವರ್ಗ ಎಂದು ಕರೆಯಬಾರದು ಎಂದು ಕೆ.ಎನ್‌. ರಾಜಣ್ಣ ಹೇಳಿದರು. ಅದಕ್ಕೆ ಅವರು ಕೊಟ್ಟ ಕಾರಣ ಕುತೂಹಲಕಾರಿಯಾಗಿತ್ತು. ʻʻಯಾರನ್ನೂ ಮೇಲ್ವರ್ಗ ಅಂತ ಯಾರೂ ಕರೆಯಬೇಡಿ. ಅವರನ್ನು ಮುಂದುವರಿದ ವರ್ಗ ಅಂತ ಬಳಸಿ. ಯಾಕೆಂದರೆ, ಅವರನ್ನು ಮೇಲ್ವರ್ಗ ಅಂತ ಕರೆದರೆ, ನಾವೇ‌ನು ಕೆಳವರ್ಗದವರಾ? ನಾವು ಯಾವುದರಲ್ಲಿ ಕಡಿಮೆ‌ ಇದ್ದೇವೆ, ನಾವು ಯಾವತ್ತೂ ಕೆಳವರ್ಗದವರಲ್ಲ. ಅವರೇನು ಮೇಲಿಂದ ಬಂದಿಲ್ಲ, ಅವ್ರು ನಮ್ಮಂಗೆ ಬಂದವರು. ಇನ್ಮುಂದೆ ಮುಂದುವರಿದವರು, ಹಿಂದುಳಿದವರು ಅಂತ ಮಾತ್ರ ಕರೀಬೇಕು. ಮೇಲ್ವರ್ಗದಿಂದ ಅನ್ಯಾಯ ಎನ್ನಬಾರದು. ಮುಂದುವರಿದ ವರ್ಗದಿಂದ ಅನ್ಯಾಯ ಎನ್ನಬೇಕುʼʼ ಎಂದು ಸಲಹೆ ನೀಡಿದರು.

ನಾಯಕರು ಡಿಸಿಎಂ, ಸಿಎಂ ಆಗಲಿ ಎಂದ ರಾಜಣ್ಣ

ಇದೇ ವೇಳೆ, ನಾಯಕ ಡಿಸಿಎಂ, ನಾಯಕ ಸಿಎಂ ದಾಳವನ್ನೂ ಅವರು ಉರುಳಿಸಿದರು. ʻʻನಾಯಕ ಸಮುದಾಯವರು ಈಗ ಡಿಸಿಎಂ ಆಗಬೇಕು ಮುಂದೆ ಸಿಎಂ ಆಗಬೇಕು. ನಾಯಕ ಸಮುದಾಯದಲ್ಲಿ ಸಿಎಂ ಆಗೋ ಅರ್ಹತೆ ಇರೋದು ಸತೀಶ್ ಜಾರಕಿಹೊಳಿಗೆ ಇದೆ. ಮುಂದಿನ ದಿನಗಳಲ್ಲಿ ನಮ್ಮ ಸಮುದಾಯ ವ್ಯಕ್ತಿ ಸಿಎಂ ಆಗಬೇಕುʼʼ ಎಂದರು ರಾಜಣ್ಣ.

ʻʻನಾನು ಮುಂದೆ ಯಾವುದೇ ಚುನಾವಣೆಯಲ್ಲಿ‌ ನಿಲ್ಲೋದಿಲ್ಲ. ಆದರೆ ನಮ್ಮ‌ ಗುರಿ ಇರೋದು ಒಂದೇ. ನಮ್ಮ ಸಮುದಾಯದ ವ್ಯಕ್ತಿ ಮುಂದಿನ ಮುಖ್ಯಮಂತ್ರಿ ಆಗೋದು. ಅದಕ್ಕೆ ನಮ್ಮ ಸತೀಶ್ ಜಾರಕಿಹೊಳಿಗೆ ಎಲ್ಲ ಅರ್ಹತೆ ಇದೆ. ಆಗ ನಮ್ಮ ಸಮಾಜಕ್ಕೆ ಇನ್ನು ಉತ್ತಮವಾಗುತ್ತದೆʼʼ ಎಂದರು.

ʻʻನಾವು ಈಗ ಡಿಸಿಎಂ ಸ್ಥಾನ ಕೇಳಲು ಹೊರಟಿದ್ದೇವೆ. ಆದರೆ, ರಾಜಕೀಯ ಸಂಘರ್ಷಗಳಲ್ಲಿ ಅದು ಆಗಲಿಲ್ಲ‌. ಡಿಸಿಎಂ ಬಗ್ಗೆ ಒತ್ತಾಯವನ್ನು ಕೂಡ ಮುಂದೆ ಮಾಡುತ್ತೇವೆʼʼ ಎಂದು ಹೇಳಿದರು.

ನಟ ಕಿಚ್ಚ ಸುದೀಪ್ ವಿರುದ್ಧ ರಾಜಣ್ಣ ಕಿಡಿ

ಅಭಿನಂದನಾ ಸಮಾರಂಭದಲ್ಲಿ ರಾಜಣ್ಣ ಅವರು ಚಿತ್ರ ನಟ ಕಿಚ್ಚ ಸುದೀಪ್‌ ವಿರುದ್ಧ ಆಕ್ರೋಶ ಹೊರಗೆಡವಿದರು. ʻʻಕಿಚ್ಚ ಸುದೀಪ್ ಸಮುದಾಯದ ವಿರುದ್ಧವೇ ಪ್ರಚಾರ ಮಾಡಿದ್ದಾರೆ. ಸಾಮಾನ್ಯ ಕ್ಷೇತ್ರದಲ್ಲಿ ಬಂದು ಪ್ರಚಾರ ಮಾಡಿದ್ದರೆ ಏನೂ ಅನ್ನಿಸುತ್ತಾ ಇರ್ಲಿಲ್ಲ. ಎಸ್ಟಿ ಮೀಸಲು ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದು ನೋವಾಯಿತು. ಎಸ್ಟಿ ಮೀಸಲು ಕ್ಷೇತ್ರದಲ್ಲಿ ಚುನಾವಣೆಗೆ ನಿಂತವರೆಲ್ಲ ನಾಯಕ ಸಮುದಾಯದವರೇ. ಸಮುದಾಯದ ವಿರುದ್ಧವೇ ಪ್ರಚಾರಕ್ಕೆ ಇಳಿದಿದ್ದು ವಿಪರ್ಯಾಸ. ಇದು ಪ್ರತಿಭಾನ್ವಿತ ನಟನ ಭವಿಷ್ಯಕ್ಕೆ ಕುತ್ತು ತರಲಿದೆʼʼ ಎಂದು ರಾಜಣ್ಣ ಬೇಸರ ವ್ಯಕ್ತಪಡಿಸಿದರು.

ʻʻಆತನಿಗೆ ಅನುಭವ ಕಡಿಮೆ ಇದೆ, ಶ್ರೇಷ್ಠ ನಟನಾಗಲು ಅವಕಾಶ ಇದೆ. ಇದನ್ನು ಅರಿತುಕೊಂಡು ಮುಂದುವರೆಯಲಿʼʼ ಎಂದರು ರಾಜಣ್ಣ.

ಇದನ್ನೂ ಓದಿ : MB Patil: ನನ್ನ-ಡಿಕೆಶಿ ಸಂಬಂಧ ಚೆನ್ನಾಗಿದೆ, ಪ್ರತಾಪ್‌ ಸಿಂಹಗೆ ತಲೆ ಕೆಟ್ಟಿದೆ ಎಂದ ಎಂ.ಬಿ ಪಾಟೀಲ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Bhavani Revanna: ಭವಾನಿ ರೇವಣ್ಣಗೆ ಒಂದು ವಾರ ಮಧ್ಯಂತರ ಜಾಮೀನು, ಇಂದು 1 ಗಂಟೆಗೆ ವಿಚಾರಣೆಗೆ ಬರಲೇಬೇಕು!

Bhavani Revanna: ಕಳೆದೆರಡು ಸಲದ ನೋಟೀಸ್‌ಗೆ ಭವಾನಿ ಹಾಜರಾಗದಿದ್ದುದಕ್ಕೆ ಬಂಧನ ವಾರೆಂಟ್‌ ಜಾರಿ ಮಾಡಲಾಗಿದೆ. ಸದ್ಯ ಆ ಆದೇಶವನ್ನು ಅಮಾನತಿನಲ್ಲಿ ಇಡಲಾಗಿದೆ. ಮುಂದಿನ ಶುಕ್ರವಾರದವರೆಗೂ ಮಧ್ಯಂತರ ಜಾಮೀನು ನೀಡಲಾಗಿದ್ದು, ಮುಂದಿನ ಶುಕ್ರವಾರಕ್ಕೆ ವಿಚಾರಣೆ ಮುಂದೂಡಲಾಗಿದೆ ಎಂದು ಕೋರ್ಟ್‌ ಹೇಳಿದೆ.

VISTARANEWS.COM


on

bhavani revanna Prajwal Revanna Case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಸಂತ್ರಸ್ತೆಯ ಕಿಡ್ನಾಪ್‌ ಪ್ರಕರಣದಲ್ಲಿ (Kidnap Case) ಆರೋಪಿಯಾಗಿರುವ, ಸದ್ಯಕ್ಕೆ ತಲೆ ಮರೆಸಿಕೊಂಡಿರುವ ಭವಾನಿ ರೇವಣ್ಣ (Bhavani Revanna) ಅವರಿಗೆ ಕೋರ್ಟ್‌ ಮಧ್ಯಂತರ ಜಾಮೀನು (Interim Bail) ನೀಡಿದೆ. ಇದರಿಂದ ಭವಾನಿ ನಿಟ್ಟುಸಿರು ಬಿಡುವಂತಾಗಿದೆ. ಆದರೆ ಇದರಲ್ಲಿ ಇಂದು ಟ್ವಿಸ್ಟ್‌ ಇದೆ. ಅದೇನೆಂದರೆ, ಇಂದು ಮಧ್ಯಾಹ್ನ 1 ಗಂಟೆಗೆ ಅವರು ಎಸ್‌ಐಟಿ (SIT) ಮುಂದೆ ಹಾಜರಾಗಬೇಕಿದೆ.

ಕೆ.ಆರ್. ನಗರ ಸಂತ್ರಸ್ತೆಯ ಕಿಡ್ನಾಪ್ ಪ್ರಕರಣದಲ್ಲಿ ಎಸ್‌ಐಟಿ ತನಿಖೆಗೆ ಬೇಕಾಗಿದ್ದು, ತನಿಖೆಗೆ ಸಹಕರಿಸಿದೆ ತಲೆ ಮರೆಸಿಕೊಂಡಿರುವ ಭವಾನಿ ಅವರಿಗೆ ಮುಂದಿನ ಶುಕ್ರವಾರದವರೆಗೆ ಮಧ್ಯಂತರ ಜಾಮೀನು ನೀಡಿ ಕೋರ್ಟ್‌ ಆದೇಶ ನೀಡಿದೆ. ಆದರೆ ಇಂದು ಮಧ್ಯಾಹ್ನ 1 ಗಂಟೆಗೆ ಎಸ್‌ಐಟಿ ಮುಂದೆ ತನಿಖೆಗೆ ಹಾಜರಾಗಬೇಕು ಎಂದಿದೆ. ಒಂದು ಗಂಟೆಯಿಂದ ಐದು ಗಂಟೆಯವರೆಗೆ ತನಿಖೆ ನಡೆಸಬಹುದು. ಐದು ಗಂಟೆಯ ನಂತರ ಅವರನ್ನು ಎಸ್‌ಐಟಿ ಕಚೇರಿಯಲ್ಲಿ ಇಟ್ಟುಕೊಳ್ಳಬಾರದು ಎಂದು ಕೋರ್ಟ್‌ ಸೂಚನೆ ನೀಡಿದೆ.

ಭವಾನಿ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲು 11 ಕಾರಣಗಳಿವೆ ಎಂದು ಭವಾನಿ ಪರ ಹಿರಿಯ ವಕೀಲ ಸಂದೇಶ್‌ ಚೌಟ ವಾದ ಮಂಡಿಸಿದರು. ಈ ವಾದಗಳನ್ನು ಕೋರ್ಟ್‌ ಮಾನ್ಯ ಮಾಡಿತು. ಆದರೆ ಕಳೆದೆರಡು ಸಲದ ನೋಟೀಸ್‌ಗೆ ಭವಾನಿ ಹಾಜರಾಗದಿದ್ದುದಕ್ಕೆ ಬಂಧನ ವಾರೆಂಟ್‌ ಜಾರಿ ಮಾಡಲಾಗಿದೆ. ಸದ್ಯ ಆ ಆದೇಶವನ್ನು ಅಮಾನತಿನಲ್ಲಿ ಇಡಲಾಗಿದೆ. ಮುಂದಿನ ಶುಕ್ರವಾರದವರೆಗೂ ಮಧ್ಯಂತರ ಜಾಮೀನು ನೀಡಲಾಗಿದ್ದು, ಮುಂದಿನ ಶುಕ್ರವಾರಕ್ಕೆ ವಿಚಾರಣೆ ಮುಂದೂಡಲಾಗಿದೆ ಎಂದು ಕೋರ್ಟ್‌ ಹೇಳಿದೆ.

ಭವಾನಿ ಅವರಿಗೆ ಕೋರ್ಟ್‌ ಕೆಲವು ಸೂಚನೆಗಳನ್ನು ನೀಡಿದೆ. ಅದರಂತೆ ಅವರು ನಡೆದುಕೊಳ್ಳಬೇಕಿದೆ. ಅವುಗಳು ಹೀಗಿವೆ:
1) ಭವಾನಿ ಅವರು ಮಧ್ಯಾಹ್ನ 1 ಗಂಟೆಗೆ ಎಸ್‌ಐಟಿ ಮುಂದೆ ಹಾಜರಾಗಬೇಕು.
2) ವಿಚಾರಣೆಯ ನಂತರ ಐದು ಗಂಟೆಯ ಬಳಿಕ ಅವರನ್ನು ಇಟ್ಟುಕೊಳ್ಳಬಾರದು.
3) ಕೆ.ಆರ್‌ ನಗರ ತಾಲ್ಲೂಕು ಮತ್ತು ಹಾಸನಕ್ಕೆ ಭವಾನಿ ಪ್ರವೇಶಿಸಬಾರದು.
4) ತನಿಖೆಗೆ ಸಂಪೂರ್ಣ ಸಹಕಾರ ನೀಡಬೇಕು.

ಇದೀಗ ಕುತೂಹಲದ ಅಂಶವೆಂದರೆ ಇಂದು 1 ಗಂಟೆಗೆ ಅವರು ಎಸ್‌ಐಟಿ ಮುಂದೆ ಹಾಜರಾಗ್ತಾರಾ ಎಂಬುದು. ಬೆಂಗಳೂರಿನಲ್ಲೇ ಇದ್ದರೆ ಅವರು ಎಸ್‌ಐಟಿ ಮುಂದೆ ಹಾಜರಾಗಬಹುದು. ಆದರೆ ಬೆಂಗಳೂರಿನಿಂದ ದೂರ ಎಲ್ಲಾದರೂ ಅಥವಾ ಹೊರರಾಜ್ಯದಲ್ಲಿ ಇದ್ದರೆ ಒಂದು ಗಂಟೆ ವೇಳೆಗೆ ಆಗಮಿಸುವುದು ಕಷ್ಟವಾಗಲಿದೆ. ಅಷ್ಟು ಹೊತ್ತಿಗೆ ಬರದಿದ್ದರೆ ಅದೇ ಕಾರಣ ನೀಡಿ ಅವರನ್ನು ಎಸ್‌ಐಟಿ ಬಂಧಿಸಬಹುದಾಗಿದೆ.

ಪೊಲೀಸರ ಕಣ್ಣಿಂದ ತಪ್ಪಿಸಿಕೊಂಡು ಓಡಾಡುತ್ತಿರುವ ಭವಾನಿಯನ್ನು ವಶಕ್ಕೆ ಪಡೆಯಲು ಪೊಲೀಸರ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ನಿಯಮದ 41a ಅಡಿ ಭವಾನಿ ರೇವಣ್ಣಗೆ ಎಸ್ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿತ್ತು. ಆದರೆ, ತಾವು ಹೊಳೆನರಸೀಪುರದ ಮನೆಯಲ್ಲಿ ಸಿಗುವುದಾಗಿ ಭವಾನಿ ತಿಳಿಸಿದ್ದರು. ಇದಕ್ಕಾಗಿ ಎಸ್‌ಐಟಿ ಟೀಮ್‌ ಅಲ್ಲಿಗೆ ತೆರಳಿದಾಗ, ಭವಾನಿ ಅಲ್ಲಿರದೆ ಕಣ್ಮರೆಯಾಗಿದ್ದರು. ಹೀಗಾಗಿ ಭವಾನಿ ಬಂಧನಕ್ಕಾಗಿ ಆರೆಸ್ಟ್ ವಾರೆಂಟ್ ಜಾರಿ ಮಾಡಲಾಗಿತ್ತು. ಬೆಂಗಳೂರು, ಮೈಸೂರು, ಹಾಸನ ಈ ಮೂರು ಜಿಲ್ಲೆಗಳಲ್ಲಿ ಭವಾನಿ ರೇವಣ್ಣಗಾಗಿ ಮುಖ್ಯವಾಗಿ ಹುಡುಕಾಟ ನಡೆಸಲಾಗಿತ್ತು. ಈ ಮೂರು ಜಿಲ್ಲೆಗಳಲ್ಲಿ ಮೂರು ಪೊಲೀಸ್ ತಂಡಗಳು ಬೀಡುಬಿಟ್ಟಿವೆ. ನಾಲ್ಕನೇ ಟೆಕ್ನಿಕಲ್ ತಂಡದಿಂದಲೂ ಭವಾನಿ ರೇವಣ್ಣ ಬಗ್ಗೆ ಟ್ರ್ಯಾಕಿಂಗ್ ನಡೆದಿತ್ತು. ಅವರ ಮೊಬೈಲ್ ಲೊಕೇಶನ್‌ ಟವರ್ ಡಂಪ್, ಸಿಡಿಆರ್ ಪರಿಶೀಲನೆ ನಡೆಸಲಾಗಿತ್ತು.

ಇದನ್ನೂ ಓದಿ: Prajwal Revanna Case: ಭವಾನಿ ರೇವಣ್ಣ ವಿರುದ್ಧ ಬಂಧನ ವಾರಂಟ್‌ ಹೊರಡಿಸಿದ ಕೋರ್ಟ್

Continue Reading

ಮೈಸೂರು

Mysuru Tragedy : ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಗೆ ಎಳೆನೀರು ತರಲು ಮರವೇರಿ ದಾರುಣ ಅಂತ್ಯ ಕಂಡ ಮಗ

Tragedy Case : ತೆಂಗಿರ ಮರದಿಂದ ಬಿದ್ದು ಯುವಕನೊರ್ವ ದಾರುಣ ಅಂತ್ಯ ಕಂಡಿದ್ದಾನೆ. ಮರವೇರಿ ಎಳೆನೀರು ಕೀಳುವಾಗ ಕಾಲು ಜಾರಿದೆ. ನಿಯಂತ್ರಣ ಸಿಗದೇ ಕೆಳಗೆ ಬಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

VISTARANEWS.COM


on

By

Mysuru Tragedy
Koo

ಮೈಸೂರು: ತೆಂಗಿನ ಮರದಿಂದ ಬಿದ್ದು ಯುವಕನೊರ್ವ ಮೃತಪಟ್ಟಿದ್ದಾನೆ. ಎಳನೀರು ಕೀಳುವಾಗ ಅವಘಡ (Mysuru tragedy) ಸಂಭವಿಸಿದೆ. ಮೈಸೂರಿನ ಕೆಆರ್ ನಗರದ ಮುಂಜನಹಳ್ಳಿಯಲ್ಲಿ ಘಟನೆ (Tragedy Case) ನಡೆದಿದೆ. ಚೇತನ್ (27) ಮೃತ ದುರ್ದೈವಿ.

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಗೆ ಎಳೆನೀರು ತರಲು ಚೇತನ್ ಜಮೀನಿಗೆ ಹೋಗಿದ್ದ. ಮರವೇರಿ ಎಳನೀರು ಕೀಳುವಾಗ ಕಾಲು ಜಾರಿದೆ. ಈ ವೇಳೆ ಮರದ ಮೇಲಿಂದ ಬಿದ್ದ ರಭಸಕ್ಕೆ ಚೇತನ್ ತಲೆಗೆ ಗಂಭೀರ ಗಾಯವಾಗಿದೆ. ತೀವ್ರ ರಕ್ತಸ್ರಾವವಾಗಿ ಅಸ್ವಸ್ಥಗೊಂಡಿದ್ದ ಚೇತನ್‌ನನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.

ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಕೆಆರ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಆರ್‌ನಗರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : Road Accident : ನಿದ್ರೆಯಲ್ಲಿದ್ದ ಪ್ರಯಾಣಿಕನ ಎದೆ ಸೀಳಿದ ಲಾರಿ; ಛಿದ್ರ ಛಿದ್ರಗೊಂಡ ಖಾಸಗಿ ಬಸ್‌

ಕುರಿ ಮೇಯಿಸಲು ಹೋದ ಬಾಲಕ ಸಾವು

ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಬಂಡೆಮ್ಮ ನಗರ ಗ್ರಾಮದ ಬಳಿ ಸಿಡಿಲು ಬಡಿದು ಬಾಲಕ ಮೃತಪಟ್ಟಿದ್ದು, ಇನ್ನೊಬ್ಬ ಬಾಲಕನಿಗೆ ಗಂಭೀರ ಗಾಯಗಳಾಗಿವೆ. ಕುರಿ ಮೇಯಿಸಲು ಹೋಗಿದ್ದ ವೇಳೆ ಗುಡುಗು, ಸಿಡಿಲು ಸಹಿತ ಮಳೆ ಸುರಿದಿದ್ದು, ಈ ವೇಳೆ ಮರದ ಬಳಿ ನಿಂತಾಗ ಅವಘಡ ನಡೆದಿದೆ. ಗುಡ್ಡದಕೇರಿ ಬಡಾವಣೆಯ ನಿವಾಸಿ ಯಲ್ಲಪ್ಪ ಕಿಲೀಕೈ (17) ಮೃತ ಬಾಲಕ. ಪರಸಪ್ಪ ಕಿಲೀಕೈ (15) ಗಾಯಾಳುವಾಗಿದ್ದು, ಆತನಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸಿಡಿಲಿಗೆ ರೈತ ಮಹಿಳೆ ಬಲಿ

ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಜೆ ರಾಂಪುರದಲ್ಲಿ ಸಿಡಿಲು ಬಡಿದು ರೈತ ಮಹಿಳೆ ರತ್ನಮ್ಮ ಓತಗೇರಿ(43) ಎಂಬುವವರು ಮೃತಪಟ್ಟಿದ್ದಾರೆ. ಹೊಲಕ್ಕೆ ರತ್ನಮ್ಮನೊಂದಿಗೆ ಆಕೆಯ ಅಕ್ಕ ದೇವಮ್ಮ ಸಹ ಹೋಗಿದ್ದರು. ಮಳೆ ಆರಂಭವಾಗುತ್ತಿದ್ದಂತೆ ದೇವಮ್ಮ ಮನೆ ಸೇರಿದ್ದರು. ಆದರೆ ಹೊಲದಲ್ಲಿದ್ದ ರತ್ನಮ್ಮಗೆ ಸಿಡಿಲು ಬಡಿದಿದ್ದರಿಂದ ಮೃತಪಟ್ಟಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Rahul Gandhi: ಮಾನನಷ್ಟ ಪ್ರಕರಣದಲ್ಲಿ ರಾಹುಲ್‌ ಗಾಂಧಿಗೆ ಜಾಮೀನು; ‌75 ಲಕ್ಷದ ಶ್ಯೂರಿಟಿ ನೀಡಿದ ಡಿಕೆ ಸುರೇಶ್

Rahul Gandhi: 42ನೇ ಎಂಸಿಸಿಎ ಕೋರ್ಟ್‌ ಕಟಕಟೆಯಲ್ಲಿ ನಿಂತ ರಾಹುಲ್‌ ಗಾಂಧಿ ಅವರ ಪರ ವಕೀಲರು ಜಾಮೀನಿಗಾಗಿ ಕೋರಿದರು. ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿ ಮುಂದಿನ ವಿಚಾರಣೆಯನ್ನು ಜೂ.30ಕ್ಕೆ ನಿಗದಿಪಡಿಸಿದರು.

VISTARANEWS.COM


on

defamation case rahul gandhi
Koo

ಬೆಂಗಳೂರು: ಬಿಜೆಪಿ (BJP) ಹೂಡಿರುವ ಮಾನನಷ್ಟ ಮೊಕದ್ದಮೆ (Defamation case) ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿಗೆ (Rahul Gandhi) ಷರತ್ತುಬದ್ಧ ಜಾಮೀನು (Bail) ದೊರೆತಿದೆ. ಪ್ರಕರಣದ ವಿಚಾರಣೆಯನ್ನು ಜೂನ್‌ 30ಕ್ಕೆ ಮುಂದೂಡಲಾಗಿದೆ.

42ನೇ ಎಂಸಿಸಿಎ ಕೋರ್ಟ್‌ ಕಟಕಟೆಯಲ್ಲಿ ನಿಂತ ರಾಹುಲ್‌ ಗಾಂಧಿ ಅವರ ಪರ ವಕೀಲ ನಿಶಾನ್ ಕುಮಾರ್ ಶೆಟ್ಟಿ ಜಾಮೀನಿಗಾಗಿ ಕೋರಿದರು. ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿ ಮುಂದಿನ ವಿಚಾರಣೆಯನ್ನು ಜೂ.30ಕ್ಕೆ ನಿಗದಿಪಡಿಸಿದರು. ಕಾಂಗ್ರೆಸ್‌ ಮುಖಂಡ ಡಿ.ಕೆ ಸುರೇಶ್‌ (DK Suresh) ಅವರು ರಾಹುಲ್‌ ಗಾಂಧಿಗೆ 75 ಲಕ್ಷ ರೂಪಾಯಿ ಮೌಲ್ಯದ ಶ್ಯೂರಿಟಿ ಒದಗಿಸಿದರು. ಬಾಂಡ್‌ ಕಾಗದಗಳಿಗೆ ಸಹಿ ಹಾಕಿದ ಬಳಿಕ ರಾಹುಲ್‌ ಕೋರ್ಟ್‌ನಿಂದ ತೆರಳಿದರು. ಈ ಸಂದರ್ಭದಲ್ಲಿ ಕೋರ್ಟ್‌ನಲ್ಲಿ ಪ್ರಕರಣದ ಇನ್ನಿಬ್ಬರು ಆರೋಪಿಗಳಾದ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಸಹ ಉಪಸ್ಥಿತರಿದ್ದರು.

ರಾಹುಲ್‌ ಮೇಲೆ ಕೋರ್ಟ್‌ ಗರಂ

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಮಾನನಷ್ಟ ಪ್ರಕರಣದ ವಿಚಾರಣೆ ನಡೆಸುತ್ತಿದೆ. ಕಳೆದ ಬಾರಿ ಇದರ ವಿಚಾರಣೆಯ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ (DCM DK Shivakumar) ನ್ಯಾಯಾಧೀಶರ ಮುಂದೆ ಹಾಜರಾಗಿದ್ದರು. ಇವರಿಬ್ಬರಿಗೂ ಷರತ್ತುಬದ್ಧ ಜಾಮೀನು ನೀಡಲಾಗಿತ್ತು. ಆದರೆ ರಾಹುಲ್‌ ಗಾಂಧಿ ಆಗಮಿಸಿರಲಿಲ್ಲ. ಇದರಿಂದ ಗರಂ ಆಗಿದ್ದ ನ್ಯಾಯಾಧೀಶರು, ಮುಂದಿನ ಬಾರಿ ರಾಹುಲ್‌ ಖುದ್ದು ಹಾಜರಿರುವಂತೆ ನಿರ್ದೇಶನ ನೀಡಿತ್ತು.

ಈ ಪ್ರಕರಣದ ದಾಖಲಿಸಿರುವ ಬಿಜೆಪಿ ಕಾರ್ಯದರ್ಶಿ, ಎಂಎಲ್‌ಸಿ ಕೇಶವಪ್ರಸಾದ್, “ಸಾಮಾನ್ಯರಂತೆ ರಾಹುಲ್‌ ಅವರಿಗೂ ಕಾನೂನು ಒಂದೇ” ಎಂದು ಹೇಳಿದ್ದಾರೆ. “ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಸುಳ್ಳು ಜಾಹೀರಾತು ನೀಡಿದ್ದರು. ರಾಹುಲ್‌ ಗಾಂಧಿ ಅದನ್ನು ರಿಟ್ವೀಟ್ ಮಾಡಿಕೊಂಡರು. ಹಾಗಾಗಿ ಮೂವರ ವಿರುದ್ಧ ದೂರು ನೀಡಲಾಗಿತ್ತು. ಬಿಜೆಪಿ ಸಾಮಾನ್ಯ ಕಾರ್ಯಕರ್ತನಿಗೂ ಎಲ್ಲಾ ಹೋರಾಟ ಮಾಡುವ ಕ್ಷಮತೆ ಇದೆ. ನಮ್ಮ ವಿರುದ್ಧ ಹಾಕಿರುವ ಜಾಹೀರಾತು ಸುಳ್ಳು. ಅವರು ಅದಕ್ಕೆ ದಾಖಲೆ ಕೊಡಬೇಕು. ಜನರ ದಾರಿ ತಪ್ಪಿಸಬಹುದು, ಆದರೆ ಕೋರ್ಟ್ ದಾರಿ ತಪ್ಪಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಏನಿದು ಪ್ರಕರಣ?

08-05-2023ರಂದು 42ನೇ ವಿಶೇಷ ನ್ಯಾಯಾಲಯದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್.‌ ಕೇಶವ ಪ್ರಸಾದ್ ಖಾಸಗಿ ದೂರ ದಾಖಲು ಮಾಡಿದ್ದರು. ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ.

“ಬಿಜೆಪಿ ಸರ್ಕಾರ 2019ರಿಂದ 2023ರವರೆಗೆ ಭ್ರಷ್ಟ ಆಡಳಿತ ನಡೆಸಿತ್ತು. ಆಗಿನ ಸಿಎಂ ಹುದ್ದೆ ರೂ. 2500 ಕೋಟಿಗೆ ಮಾರಾಟವಾಗಿತ್ತು. ಮಂತ್ರಿಗಳ ಹುದ್ದೆ ರೂ. 500 ಕೋಟಿ ಬಿಜೆಪಿ ಹೈಕಮಾಂಡ್‌ಗೆ ನೀಡಿ ಪಡೆದಿದ್ದಾರೆ. ಈ ಮೂಲಕ ಭ್ರಷ್ಟಾಚಾರ ಮಾಡಿದ್ದಾರೆ. ಇದಲ್ಲದೆ ಕೋವಿಡ್ ಕಿಟ್ ಪೂರೈಕೆ ಟೆಂಡರ್‌ನಲ್ಲಿ 75% ಡೀಲ್ ನಡೆದಿದೆ. ಪಿಡಬ್ಲ್ಯೂಡಿ ಗುತ್ತಿಗೆ ಟೆಂಡರ್‌ಗಳಲ್ಲಿ 40% ಡೀಲ್, ಮಠಕ್ಕೆ ನೀಡುವ ಅನುದಾನದಲ್ಲಿ 30% ಡೀಲ್, ಉಪಕರಣಗಳ ಪೂರೈಕೆಯಲ್ಲಿ 40% ಡೀಲ್, ಮಕ್ಕಳಿಗೆ ನೀಡುವ ಮೊಟ್ಟೆ ಪೂರೈಕೆಯ ಟೆಂಡರ್‌ನಲ್ಲಿ 30% ಡೀಲ್, ರಸ್ತೆ ಕಾಮಗಾರಿಗಳ ಟೆಂಡರ್‌ನಲ್ಲಿ 40% ಡೀಲ್ ನಡೆದಿದೆ” ಎಂದು ಆರೋಪಿಸಿದ್ದರು.

ಪರ್ಸೆಂಟೇಜ್ ಲೆಕ್ಕದಲ್ಲಿ ಕಮಿಷನ್ ಪಡೆದ ಆರೋಪ ಮಾಡಿ ಈ ಬಗ್ಗೆ ಅನೇಕ ಜಾಹೀರಾತುಗಳನ್ನೂ ಕಾಂಗ್ರೆಸ್‌ ನೀಡಿತ್ತು. ಇದರಿಂದ ಬಿಜೆಪಿ ಪಕ್ಷಕ್ಕೆ ಅಪಮಾನವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡರ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ಕೇಶವ ಪ್ರಸಾದ್ ಐಪಿಸಿ 499, 500 ಅಡಿ ಖಾಸಗಿ ದೂರು ದಾಖಲು ಮಾಡಿದ್ದರು. ಈ ಬಗ್ಗೆ ವಾದ ಆಲಿಸಿ ಆರೋಪಿಗಳನ್ನು ಹಾಜರು ಪಡಿಸಲು ಕೋರ್ಟ್‌ ಸೂಚಿಸಿತ್ತು.

ಇದನ್ನೂ ಓದಿ: Rahul Gandhi: ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಹಾಜರಾಗಲು ಬೆಂಗಳೂರಿಗೆ ಆಗಮಿಸಿದ ರಾಹುಲ್‌ ಗಾಂಧಿ

Continue Reading

ವಿಜಯನಗರ

Road Accident : ನಿದ್ರೆಯಲ್ಲಿದ್ದ ಪ್ರಯಾಣಿಕನ ಎದೆ ಸೀಳಿದ ಲಾರಿ; ಛಿದ್ರ ಛಿದ್ರಗೊಂಡ ಖಾಸಗಿ ಬಸ್‌

Road Accident : ಲಾರಿ ಹಾಗೂ ಖಾಸಗಿ ಬಸ್‌ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ಪರಿ ಹೇಗಿತ್ತು ಎಂದರೆ ನಿದ್ರೆಯಲ್ಲಿದ್ದ ಪ್ರಯಾಣಿಕನ ಎದೆಯೇ ಸೀಳಿ ಪ್ರಾಣಹರಣ ಮಾಡಿತ್ತು. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

VISTARANEWS.COM


on

By

road Accident in vijayanagar
Koo

ವಿಜಯನಗರ: ಖಾಸಗಿ ಸ್ಲೀಪರ್‌ ಬಸ್ ಮತ್ತು ಲಾರಿ ನಡುವೆ ಡಿಕ್ಕಿಯಾಗಿದ್ದು, ಗುದ್ದಿರುವ ರಭಸಕ್ಕೆ ಪ್ರಯಾಣಿಕನೊಬ್ಬ ಮಲಗಿದ್ದಲೇ ಉಸಿರು ಚೆಲ್ಲಿದ್ದಾನೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಜಂಬಯ್ಯನ ಕೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಅಪಘಾತ (Road Accident) ನಡೆದಿದೆ.

ರಾಯಚೂರು ಮೂಲದ ವ್ಯಕ್ತಿ ಮೃತಪಟ್ಟಿದ್ದು, ಅಪಘಾತದ ರಭಸಕ್ಕೆ ಮುಖದ ಭಾಗ ಪೂರ್ತಿ ನಜ್ಜುಗುಜ್ಜಆಗಿದೆ. ಸದ್ಯ ಮೃತನ ಹೆಸರು ಗುರುತು ಪತ್ತೆ ಆಗಿಲ್ಲ. ಖಾಸಗಿ ಬಸ್ ಬೆಂಗಳೂರಿನಿಂದ ಹೊಸಪೇಟೆ ಕಡೆಗೆ ಬರುತ್ತಿದ್ದರೆ, ಲಾರಿಯು ಹೊಸಪೇಟೆ ಕಡೆಯಿಂದ ಕೂಡ್ಲಿಗಿ ಕಡೆ ಹೊರಟಿತ್ತು.

ನಿದ್ರೆ ಮಂಪರಿನಲ್ಲಿ ಎರಡು ವಾಹನಗಳು ಮುಖಾಮುಖಿ ಡಿಕ್ಕಿಯಾಗಿರಬಹುದು ಶಂಕಿಸಲಾಗಿದೆ. ಸದ್ಯ ಲಾರಿಯಲ್ಲಿದ್ದವರಿಗೆ ಹಾಗೂ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಹಲವರಿಗೆ ಗಾಯವಾಗಿದ್ದು, ಎಲ್ಲರನ್ನೂ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಚೆಲ್ಲಾಪಿಲ್ಲಿಯಾಗಿದ್ದ ವಾಹನಗಳನ್ನು ಪೊಲೀಸರು ತೆರವು ಮಾಡಿದ್ದಾರೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತನ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಧಗ ಧಗನೆ ಹೊತ್ತಿ ಉರಿದ ಕಾರು

ರಾಯಚೂರಿನ ಹಟ್ಟಿ ಚಿನ್ನದ ಗಣಿಯ ಮುಖ್ಯ ದ್ವಾರದಲ್ಲಿ ಕಾರೊಂದು ಧಗಧಗನೆ ಹೊತ್ತಿ ಉರಿದಿದೆ. ಏಕಾಏಕಿ ಬೆಂಕಿ ತಗುಲಿದ್ದು ಕ್ಷಣಾರ್ಧದಲ್ಲೇ ಕಾರು ಸುಟ್ಟು ಕರಕಲಾಗಿದೆ. ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲು ಸಿಬ್ಬಂದಿ ಕಾರನ್ನು ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದರು. ಅನಿಲ್ ಫೋರಮೆನ್ ಎಂಬುವರಿಗೆ ಸೇರಿದ ಕಾರಿಗೆ ದಿಢೀರ್‌ ಬೆಂಕಿ ಕಾಣಿಸಿಕೊಂಡಿದ್ದು, ಸುಟ್ಟು ಕರಕಲಾಗಿದೆ. ತಕ್ಷಣ ನೀರು ಎರಚಿ ಬೆಂಕಿ ನಂದಿಸಿಲು ಸ್ಥಳೀಯರು ಪ್ರಯತ್ನಿಸಿದರು. ಆದರೆ ಬೆಂಕಿಯ ಕೆನ್ನಾಲಿಗೆಗೆ ಕಾರು ಸುಟ್ಟು ಭಸ್ಮವಾಗಿತ್ತು. ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Ira Khan: ಬಿಕಿನಿ ಧರಿಸಿ ಕುಣಿದು ಕುಪ್ಪಳಿಸಿದ ಆಮೀರ್ ಪುತ್ರಿ; ಟ್ರೋಲ್‌ ಆದ ಇರಾ ಖಾನ್!

ಭೀಕರ ಕಾರು ಅಪಘಾತಕ್ಕೆ ಮೂವರು ಸಾವು; ಮರದಲ್ಲಿ ನೇತಾಡಿದ ಪ್ರಯಾಣಿಕನ ಶವ

ಚಿಕ್ಕಬಳ್ಳಾಪುರ: ಭೀಕರ ಕಾರು ಅಪಘಾತವೊಂದರಲ್ಲಿ (Road Accident) ಕಾರು ಕಾಲುವೆಗೆ ಬಿದ್ದು (car Accident) ಮೂವರು ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಪ್ರಯಾಣಿಕರೊಬ್ಬರ ಶವ ಮರದಲ್ಲಿ ನೇತಾಡುತ್ತಿದ್ದುದು ಕಂಡುಬಂದಿದ್ದು, ಇದನ್ನು ನೋಡಿದವರೇ ಬೆಚ್ಚಿಬಿದ್ದಿದ್ದಾರೆ.

ಗೌರಿಬಿದನೂರು (Gauribidanur) ತಾಲ್ಲೂಕಿನ ವಾಟದಹೊಸಹಳ್ಳಿ ಬಳಿ ದುರ್ಘಟನೆ ನಡೆದಿದೆ. ರಾತ್ರಿಯೇ ಅಪಘಾತ ನಡೆದಿದೆ ಎಂದು ಶಂಕಿಸಲಾಗಿದ್ದು, ಮುಂಜಾನೆವರೆಗೆ ಯಾರ ಗಮನಕ್ಕೂ ಬಂದಿರಲಿಲ್ಲ. ಬ್ರೆಝಾ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಉರುಳಿಕೊಂಡಿದೆ. ಕಾರಿನಲ್ಲಿ ನಾಲ್ವರಿದ್ದು, ಮೂವರು ಮೃತಪಟ್ಟಿದ್ದಾರೆ. ಒಬ್ಬ ಪ್ರಯಾಣಿಕ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ.

ಮೃತಪಟ್ಟವರು ಬೆಸ್ಕಾಂ ಸಿಬ್ಬಂದಿ ಎಂದು ತಿಳಿದುಬಂದಿದೆ. ಇವರನ್ನು ಕೆಪಿಟಿಸಿಎಲ್ ವೇಣಗೋಪಾಲ್ (34), ಶ್ರೀಧರ್ (35) ಹಾಗೂ ಬೆಸ್ಕಾಂ ಲೈನ್‌ಮ್ಯಾನ್ ಮಂಜಪ್ಪ (35) ಎಂದು ಗುರುತಿಸಲಾಗಿದೆ. ಕಾರು ಕಾಲುವೆಗೆ ಉರುಳುವಾಗ ಬಾಗಿಲು ತೆರೆದ ಕಾರಿನಿಂದ ಚಿಮ್ಮಿದ ಒಬ್ಬ ಪ್ರಯಾಣಿಕನ ದೇಹ ಮರದಲ್ಲಿ ಸಿಕ್ಕಿಹಾಕಿಕೊಂಡಿದೆ. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
bhavani revanna Prajwal Revanna Case
ಪ್ರಮುಖ ಸುದ್ದಿ2 mins ago

Bhavani Revanna: ಭವಾನಿ ರೇವಣ್ಣಗೆ ಒಂದು ವಾರ ಮಧ್ಯಂತರ ಜಾಮೀನು, ಇಂದು 1 ಗಂಟೆಗೆ ವಿಚಾರಣೆಗೆ ಬರಲೇಬೇಕು!

Mysuru Tragedy
ಮೈಸೂರು26 mins ago

Mysuru Tragedy : ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಗೆ ಎಳೆನೀರು ತರಲು ಮರವೇರಿ ದಾರುಣ ಅಂತ್ಯ ಕಂಡ ಮಗ

Drown In Rive
ವಿದೇಶ28 mins ago

Drown In River: ರಷ್ಯಾದಲ್ಲಿ ಘೋರ ದುರಂತ; ನದಿಯಲ್ಲಿ ಮುಳುಗಿ ನಾಲ್ವರು ಭಾರತೀಯ ವಿದ್ಯಾರ್ಥಿಗಳ ಸಾವು

defamation case rahul gandhi
ಪ್ರಮುಖ ಸುದ್ದಿ29 mins ago

Rahul Gandhi: ಮಾನನಷ್ಟ ಪ್ರಕರಣದಲ್ಲಿ ರಾಹುಲ್‌ ಗಾಂಧಿಗೆ ಜಾಮೀನು; ‌75 ಲಕ್ಷದ ಶ್ಯೂರಿಟಿ ನೀಡಿದ ಡಿಕೆ ಸುರೇಶ್

Write a story for a new movie one lakh rupees Win a prize kishore megalamane movie
ಸ್ಯಾಂಡಲ್ ವುಡ್30 mins ago

Kannada New Movie: ಹೊಸ ಸಿನಿಮಾಗೆ ಕಥೆ ಬರೆಯಿರಿ: 1 ಲಕ್ಷ ರೂ. ಬಹುಮಾನ ಗೆಲ್ಲಿರಿ!

Bajrangi Bhaijaan 2 Kabir Khan Says Sequel Of Salman Khan
ಬಾಲಿವುಡ್47 mins ago

Bajrangi Bhaijaan 2: `ಬಜರಂಗಿ ಭಾಯಿಜಾನ್ 2ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್‌ಡೇಟ್‌!

road Accident in vijayanagar
ವಿಜಯನಗರ1 hour ago

Road Accident : ನಿದ್ರೆಯಲ್ಲಿದ್ದ ಪ್ರಯಾಣಿಕನ ಎದೆ ಸೀಳಿದ ಲಾರಿ; ಛಿದ್ರ ಛಿದ್ರಗೊಂಡ ಖಾಸಗಿ ಬಸ್‌

uttarakhand trekking tragedy 2
ಕರ್ನಾಟಕ1 hour ago

Uttarakhand Trekking Tragedy: ಚಾರಣಿಗರ ಮೃತದೇಹಗಳು ಬೆಂಗಳೂರಿಗೆ, ಸಾವಿನ ಕಣಿವೆಯಿಂದ ಹಿಂದಿರುಗಿದವರ ನಿಟ್ಟುಸಿರು

RBI Monetary Policy
ವಾಣಿಜ್ಯ1 hour ago

RBI Monetary Policy: ಸತತ 8ನೇ ಬಾರಿ ಯಥಾಸ್ಥಿತಿ ಕಾಯ್ದುಕೊಂಡ ರೆಪೋ ದರ

PM Narendra Modi
ದೇಶ1 hour ago

PM Narendra Modi: WHO ಅಧ್ಯಕ್ಷರಿಂದ ಶುಭಾಶಯ; ಥ್ಯಾಂಕ್ಸ್‌ ʼತುಳಸಿ ಭಾಯ್‌ʼ ಎಂದ ಮೋದಿ-ಭಾರೀ ಕುತೂಹಲಕ್ಕೆ ಕಾರಣವಾಯ್ತು ಟ್ವೀಟ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ23 hours ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ3 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 weeks ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌