Siddaramaiah: ಸಿದ್ದರಾಮಯ್ಯಗೆ ತಾವೇ ಪೂರ್ಣಾವಧಿ ಸಿಎಂ ಎನ್ನಲು ಪುಕ್ಕಲು; ಕೈ ಗೆಲ್ಲಲು ಡಿಕೆಶಿ ಪಾತ್ರ ದೊಡ್ಡದು: ಪ್ರತಾಪ್‌ ಸಿಂಹ - Vistara News

ಕರ್ನಾಟಕ

Siddaramaiah: ಸಿದ್ದರಾಮಯ್ಯಗೆ ತಾವೇ ಪೂರ್ಣಾವಧಿ ಸಿಎಂ ಎನ್ನಲು ಪುಕ್ಕಲು; ಕೈ ಗೆಲ್ಲಲು ಡಿಕೆಶಿ ಪಾತ್ರ ದೊಡ್ಡದು: ಪ್ರತಾಪ್‌ ಸಿಂಹ

Pratap Simha: ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಿನಿಂದ ಮುಖ್ಯಮಂತ್ರಿ ಅಧಿಕಾರ ಹಂಚಿಕೆ ಬಗ್ಗೆ ವ್ಯಾಪಕ ಚರ್ಚೆಗಳು ನಡೆಯುತ್ತಿವೆ. ಈಗ ಈ ಬಗ್ಗೆ ಸಂಸದ ಪ್ರತಾಪ್‌ ಸಿಂಹ ಟೀಕೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ತಾವೇ ಐದು ವರ್ಷ ಅಧಿಕಾರ ನಡೆಸುವುದಾಗಿ ಹೇಳಲು ಭಯ ಎಂದು ವ್ಯಂಗ್ಯವಾಡಿದ್ದಾರೆ.

VISTARANEWS.COM


on

Siddaramaiah dk shivakumar and Pratap Simha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧೈರ್ಯವಿಲ್ಲ, ಪುಕ್ಕಲುತನ ಇದೆ. ಹೀಗಾಗಿ ಸಚಿವರಾದ ಡಾ. ಮಹದೇವಪ್ಪ, ಎಂ.ಬಿ. ಪಾಟೀಲ್ ಇಬ್ಬರೂ ಐದು ವರ್ಷವೂ ಸಿದ್ದರಾಮಯ್ಯ ಸಿಎಂ ಎಂದು ಹೇಳುತ್ತಿದ್ದಾರೆ. ಸಿದ್ದರಾಮಯ್ಯ (CM Siddaramaiah) ಅವರಿಗೆ ಅಧಿಕಾರ ಬಿಟ್ಟು ಕೊಡುವ ಇರಾದೆ ಇಲ್ಲ. ಸಿದ್ದರಾಮಯ್ಯ ತಮ್ಮ ಛೇಲಾ ಪಡೆ ಮೂಲಕ ತಾವು ಪೂರ್ಣ ಅವಧಿಗೆ ಸಿಎಂ ಅಂತ ಹೇಳಿಸುತ್ತಿದ್ದಾರೆ. ಸಿದ್ದರಾಮಯ್ಯಗೆ ತಾವೇ ಪೂರ್ಣಾವಧಿ ಸಿಎಂ ಎಂದು ನೇರವಾಗಿ ಹೇಳುವ ಧೈರ್ಯವಿಲ್ಲ. ಅವರಿಗೆ ಪುಕ್ಕಲುತನ ಎಂದು ಪ್ರತಾಪ್‌ ಸಿಂಹ (Pratap Simha) ವ್ಯಂಗ್ಯ ಮಾಡಿದರು.

ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರತಾಪ್‌ ಸಿಂಹ, ಚುನಾವಣೆ ಗೆಲ್ಲಲು ಈಗಿನ ಡಿಸಿಎಂ ಡಿ.ಕೆ. ಶಿವಕುಮಾರ್ ಪಾತ್ರ ದೊಡ್ಡದಿದೆ. ಕಾಂಗ್ರೆಸ್ ಧಾರಾಳ ಮನಸ್ಸಿನಿಂದ ಸಿದ್ದರಾಮಯ್ಯ ಅವರನ್ನು ಎರಡನೇ ಬಾರಿ ಸಿಎಂ ಮಾಡಿದೆ. ಆದರೆ, ಸಿದ್ದರಾಮಯ್ಯಗೆ ಆ ಧಾರಾಳ, ಉದಾರತನದ ಮನಸ್ಸು ಇಲ್ಲ ಎಂದು ವ್ಯಂಗ್ಯ ಮಾಡಿದರು.

ಇದನ್ನೂ ಓದಿ: Aadhaar Card Update : ಉಚಿತವಾಗಿ ಆಧಾರ್‌ಕಾರ್ಡ್‌ ಅಪ್‌ಡೇಟ್‌, ಗಡುವು ಮುಂದೂಡಿಕೆ

ಬ್ರಾಹ್ಮಣರನ್ನು ದಿನವೂ ಯಾಕೆ ಬಯ್ಯುತ್ತೀರಿ?

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಬಗ್ಗೆ ಎಂ.ಬಿ. ಪಾಟೀಲ್ ವ್ಯಂಗ್ಯ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಪ್ರತಾಪ್‌ ಸಿಂಹ, ಸಂತೋಷ್ ಬಗ್ಗೆ ಪದೇ ಪದೆ ಯಾಕೆ ಮಾತನಾಡುತ್ತೀರಿ? ಬ್ರಾಹ್ಮಣರನ್ನು ದಿನವೂ ಯಾಕೆ ಬಯ್ಯುತ್ತೀರಿ? ಯಾಕೆ ನಿಮಗೆ ಬ್ರಾಹ್ಮಣರ ಮೇಲೆ ಇಷ್ಟು ದ್ವೇಷ? ಬಸವೇಶ್ವರರು ಮೂಲದಲ್ಲಿ ಬ್ರಾಹ್ಮಣರು ಅಲ್ವ? ಬಿ.ಎಲ್. ಸಂತೋಷ್ ನಿಮಗೆ ಏನಾದರೂ ತಿವಿದಿದ್ದಾರಾ? ಎಂ.ಬಿ.ಪಾಟೀಲರೇ, ನೀವು ನಿಜವಾಗಲೂ ಲಿಂಗಾಯತರಾ? ಯಡಿಯೂರಪ್ಪ ಅವರನ್ನು ಜೈಲಿಗೆ ಕಳಿಸಿದ್ದು ಕಾಂಗ್ರೆಸ್ ಕುತಂತ್ರ ಅಲ್ವ?
ಕಾಂಗ್ರೆಸ್ ಲಿಂಗಾಯತರಿಗೆ ಅನ್ಯಾಯ ಮಾಡಿದ್ದರೂ ನೀವು ಏಕೆ ಸುಮ್ಮನೆ ಇದ್ದೀರಿ? ಎಂದು ಪ್ರಶ್ನೆ ಮಾಡಿದರು.

ಸಚಿವ ದಿನೇಶ್ ಗುಂಡೂರಾವ್ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಹುಚ್ಚ ಅಂದಿದ್ದರು.‌ ಆಗ ನಿಮ್ಮೊಳಗೆ ಲಿಂಗಾಯತ ಭಾವನೆ ಜಾಗೃತ ಆಗಲಿಲ್ಲವಲ್ಲ? ಯಡಿಯೂರಪ್ಪ ವಿರುದ್ಧ ಷಡ್ಯಂತ್ರ ಮಾಡಲು ಕಾಂಗ್ರೆಸ್‌ನಿಂದ ಸುಪಾರಿ ತೆಗೆದು ಕೊಂಡವರು ನೀವೇ ತಾನೇ? ಸಿದ್ದರಾಮಯ್ಯ ಅವರು ಲಿಂಗಾಯತ ಧರ್ಮ ಒಡೆಯಲು ಹೋದಾಗ ಅದರ ಸುಪಾರಿ ಪಡೆದವರು ನೀವೇ ತಾನೇ? ಈಗ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಎನ್ನುವ ಮೂಲಕ ಒಕ್ಕಲಿಗರ ಮುಗಿಸಲು ಹೊರಟಿದ್ದೀರಾ? ನಿಮ್ಮ ಒಂದು ಹೇಳಿಕೆ ಪರಿಣಾಮ ಡಿ.ಕೆ.ಸುರೇಶ್ ನಿಮ್ಮ ಕೈ ಎಳೆದಿದ್ದಾರೆ. ಇನ್ನೊಂದು ಬಾರಿ ಅಂತ ಹೇಳಿಕೆ ಕೊಡಿ ಡಿ.ಕೆ. ಸುರೇಶ್ ನಿಮ್ಮ ಕೊರಳಪಟ್ಟಿ ಹಿಡಿಯುತ್ತಾರೆ. ಸಚಿವ ಎಂ.ಬಿ.‌ ಪಾಟೀಲ್ ಅವರು ಸಿದ್ದರಾಮಯ್ಯ ಛೇಲಾ ಪಡೆಯ ಅಧ್ಯಕ್ಷ ಎಂದು ಪ್ರತಾಪ್‌ ಸಿಂಹ ತಿರುಗೇಟು ನೀಡಿದರು.

ಸಿದ್ದರಾಮಯ್ಯ ಓಲೈಕೆಯೇ ಎಂಬಿಪಿ ಜವಾಬ್ದಾರಿ

ಪ್ರತಾಪ್ ಸಿಂಹ ಚಿಲ್ಲರೆ ರಾಜಕಾರಣ ಬಿಡಲಿ ಎಂಬ ಎಂ‌.ಬಿ. ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಎಂ.ಬಿ. ಪಾಟೀಲ್‌ಗೆ ಈಗ ಸಿಕ್ಕಿರುವ ಖಾತೆಯಲ್ಲಿ ಬರೀ ಚಿಲ್ಲರೆ ಸಿಗುತ್ತದೆ. ಕೂತ ಕಡೆ ಕಂತೆ ಕಂತೆ ಕಾಸು ಬರುವ ಖಾತೆ ಸಿಗಲಿಲ್ಲ ಅಂತ ವಿಲವಿಲ ಒದ್ದಾಡುತ್ತಿದ್ದಾರೆ. ಎಂ.ಬಿ. ಪಾಟೀಲ್‌ಗೆ ಬರೀ ಚಿಲ್ಲರೆ, ನೋಟು ಇದರ ಬಗ್ಗೆ ಮಾತ್ರ ಚಿಂತೆ. ಸಿದ್ದರಾಮಯ್ಯ ಅವರನ್ನು ಓಲೈಕೆ ಮಾಡುವುದೇ ತಮ್ಮ ಖಾತೆ ಜವಾಬ್ದಾರಿ ಅಂತ ಎಂ.ಬಿ. ಪಾಟೀಲ್ ಅಂದುಕೊಂಡಿದ್ದಾರೆ. ಸಿದ್ದರಾಮಯ್ಯ ಬಂದೂಕಿಗೆ ಹೆಗಲು ಕೊಡೋದೆ ನಿಮ್ಮ ಕೆಲಸವೇ ಎಂ‌.ಬಿ. ಪಾಟೀಲ್? ಎಂದು ಪ್ರಶ್ನೆ ಮಾಡಿದರು.

ಉಚಿತ ಯೋಜನೆಗಳು ಗಂಡನ ದರೋಡೆ ಮಾಡಿ ಪತ್ನಿಗೆ ಕೊಟ್ಟಂತಾಗಿದೆ

ವಿದ್ಯುತ್ ದರವನ್ನು ಯದ್ವಾತದ್ವಾ ಏರಿಕೆ ಮಾಡಲಾಗಿದೆ. ಜನರಿಗೆ ಕರೆಂಟ್ ಶಾಕ್ ಹೊಡೆದಿದೆ. ಕೈಗಾರಿಕಾ ಉದ್ಯಮಿಗಳು ಕರ್ನಾಟಕ ಬಂದ್‌ಗೆ ಕರೆ ಮಾಡಿವೆ. ಕೈಗಾರಿಕೆಗಳಿಗೆ ಬರೆ ಹಾಕುವ ಕೆಲಸ ನಡೆಯುತ್ತಿದೆ. 200 ಯುನಿಟ್ ಫ್ರೀ ಅಂತ ಹೇಳಿದ್ದೀರಿ. ನಿಮ್ಮ ಮನೆಯಲ್ಲಿ ಎಷ್ಟು ವಿದ್ಯುತ್ ಖರ್ಚಾಗುತ್ತದೆ ಎಂಬ ಅರಿವು ನಿಮಗೆ ಇಲ್ಲವೇ?
ನಿಮ್ಮದು ದೋಖಾ ಸರ್ಕಾರ ಅಲ್ಲವೇ? ನಿಮ್ಮ ಮನೆಯಲ್ಲೇ ಎಷ್ಟು ವಿದ್ಯುತ್ ಖರ್ಚಾಗುತ್ತದೆ ಎಂಬುದು ನಿಮಗೆ ಗೊತ್ತಿರಲಿಲ್ವ? ರಾಜ್ಯದ ಜನರು ಕೈಗಾರಿಕೋದ್ಯಮಿಗಳು ಕರೆ ಕೊಟ್ಟ ಕರ್ನಾಟಕ ಬಂದ್‌ಗೆ ಕೈ ಜೋಡಿಸಿ. ಉಚಿತ ಯೋಜನೆಗಳು ಒಂಥರ ಗಂಡನ ದರೋಡೆ ಮಾಡಿ, ಪತ್ನಿಗೆ ಕೊಟ್ಟಂತಾಗಿದೆ. ಗಂಡನ ಜೇಬಿಗೆ ಕತ್ತರಿ ಹಾಕಿ ಪತ್ನಿಗೆ ಕೊಡುವುದರಲ್ಲಿ ಏನೂ ಅರ್ಥ ಇದೆ ಹೇಳಿ? ಎಂದು ಪ್ರತಾಪ್‌ ಸಿಂಹ ಪ್ರಶ್ನೆ ಮಾಡಿದ್ದಾರೆ.

ಅಕ್ಕಿ ಸತ್ಯಕ್ಕೆ ಪ್ರತಾಪ್‌ ಸಿಂಹ ಧನ್ಯವಾದ

ಅಕ್ಕಿ ವಿಚಾರದಲ್ಲಿ ಕೇಂದ್ರದ ಮೇಲೆ ಬಿಜೆಪಿ ಒತ್ತಡ ತರಲಿ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಪ್ರತಾಪ್‌ ಸಿಂಹ, 5 ಕೆಜಿ ಅಕ್ಕಿ ಕೊಡುವುದು ಕೇಂದ್ರ ಸರ್ಕಾರ ಅಂತ ಪ್ರಥಮ ಬಾರಿಗೆ ಸತ್ಯ ಹೇಳಿದ್ದಕ್ಕೆ ಧನ್ಯವಾದ. ಮೋದಿ ಅವರ ಐದು ಕೆಜಿಗೆ 10 ಕೆಜಿ ಸೇರಿಸಿ ಕೊಡಬೇಕು ನೀವು. ಓಪನ್ ಮಾರ್ಕೆಟ್ ನಲ್ಲಿ ಅಕ್ಕಿ ಖರೀದಿ ಮಾಡಿ.
ಅಕ್ಕಿ ಖರೀದಿ ಆಗದಿದ್ದರೆ ಗಂಡನ ಅಕೌಂಟ್‌ಗೆ ಅಕ್ಕಿಯ ಹಣ ಹಾಕಿ. ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಎಲ್ಲ ಕಡೆ ಚುನಾವಣೆ ಇದೆ. ಅಲ್ಲೂ ನೀವು ಫ್ರೀ ಅಕ್ಕಿ ಘೋಷಣೆ ಮಾಡಿದರೆ ಅಕ್ಕಿ ಕೋಡೋಕೆ ಆಗುತ್ತಾ? ಪ್ರಧಾನಿ ನರೇಂದ್ರ ಮೋದಿ ಅವರ ಕೈಯಲ್ಲಿ ಅಷ್ಟು ಪ್ರಮಾಣದ ಅಕ್ಕಿ ಕೊಡೋಕೆ ಆಗಿದ್ದರೆ ನಾವೇ ಕೊಡುತ್ತಿದ್ದೆವು. ಮುಂಗಾರು ಕೈ ಕೊಟ್ಟಿದೆ. ಬರ ಬಂದರೆ, ಜಲ ಪ್ರಳಯವಾದರೆ ಅಂತ ಕಡೆ ಅಕ್ಕಿ ಕೊಡಬೇಕಾದರೆ ಕೇಂದ್ರ ಏನು ಮಾಡಬೇಕು? ಎಂದು ಪ್ರಶ್ನೆ ಮಾಡಿದರು.

ಬಸನಗೌಡ ಪಾಟೀಲ್ ಯತ್ನಾಳ್ ವಿರೋಧ ಪಕ್ಷದ ನಾಯಕರಾಗಲಿ

ಬಿಜೆಪಿಯಲ್ಲಿ (BJP Karnataka) ಶೀಘ್ರವೇ ವಿರೋಧ ಪಕ್ಷದ ನಾಯಕನ ಆಯ್ಕೆ ಆಗುತ್ತದೆ. ಎದೆಗಾರಿಕೆ ಇರುವ ನಾಯಕ ಬೇಕು ಎಂಬ ಆಗ್ರಹ ಕೇಳಿ ಬರುತ್ತಿದೆ. ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೆಸರು ಎಲ್ಲ ಕಡೆಯೂ ಕೇಳಿ ಬರುತ್ತಿದೆ. ರಾಷ್ಟ್ರೀಯತೆ, ಹಿಂದುತ್ವ ಎಲ್ಲವನ್ನೂ ಯತ್ನಾಳ್ ಗಟ್ಟಿಯಾಗಿ ಪ್ರತಿಪಾದಿಸುತ್ತಾರೆ. ಯತ್ನಾಳ್ ಅಂದರೆ ಒಂದು ಹವಾ ಇದೆ ಎಂದು ಸಂಸದ ಪ್ರತಾಪ್ ಸಿಂಹ (Pratap Simha) ಹೇಳಿದರು.

ಇದನ್ನೂ ಓದಿ: KRS Dam: ಖಾಲಿಯಾಗಿದೆ ಕೆಆರ್‌ಎಸ್‌! ಕುಡಿಯಲು ನೀರು ಸಿಗುವುದು ಇನ್ನೆಷ್ಟು ದಿನ? ಮಳೆ ಬಾರದೇ ಇದ್ದರೆ ಏನ್‌ ಕಥೆ!

ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಧೈರ್ಯ ಇದ್ದು, ಅವರು ಎಲ್ಲವನ್ನೂ ಸರಿಯಾಗಿ ನಿಭಾಯಿಸುತ್ತಾರೆ. ವಿರೋಧ ಪಕ್ಷ ನಾಯಕನ ಸ್ಥಾನಕ್ಕೆ ಅವರೇ ಸೂಕ್ತ ಅಭ್ಯರ್ಥಿ ಎಂದು ಯತ್ನಾಳ್ ಪರವಾಗಿ ಬ್ಯಾಟ್‌ ಬೀಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

VISTARANEWS.COM


on

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ. ಏಪ್ರಿಲ್‌ 27 ರಂದು ದರ್ಶನ್ ಪರ ವಕೀಲ ರಂಜಿತ್ ರೋಹಟಗಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 4ಕ್ಕೆ ನಿಗದಿಪಡಿಸಿದೆ.

Continue Reading

ಕರ್ನಾಟಕ

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

VISTARANEWS.COM


on

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು: ಶಾಲೆಗಳಲ್ಲಿ ಇನ್ನು ಮುಂದೆ ಅಶ್ಲೀಲ ಹಾಡು ಮತ್ತು ಅಸಭ್ಯ ನೃತ್ಯಗಳಿಗೆ ಅವಕಾಶ ನೀಡದಂತೆ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಹೆಸರಿನಲ್ಲಿ ದ್ವಂದ್ವಾರ್ಥದ ಸಿನಿಮಾ ಹಾಡು ಹಾಗೂ ನೃತ್ಯಗಳನ್ನು ಪ್ರದರ್ಶಿಸುವುದರಿಂದ ಮಕ್ಕಳ ಮನಸ್ಸಿನ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅಧಿಕೃತ ಆದೇಶ ಹೊರಡಿಸಲಾಗಿದೆ.
ಶಿಕ್ಷಣ ಇಲಾಖೆ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿಯ ಪ್ರಕಾರ, ಶಾಲಾ ಕಾರ್ಯಕ್ರಮಗಳಲ್ಲಿ ಕೇವಲ ಜಾನಪದ, ದೇಶಭಕ್ತಿ ಗೀತೆಗಳು, ಪರಿಸರ ಕಾಳಜಿಯ ಹಾಡುಗಳು ಮತ್ತು ಸಮಾಜಮುಖಿ ಚಿಂತನೆಯುಳ್ಳ ಸಂಗೀತಕ್ಕೆ ಮಾತ್ರ ಆದ್ಯತೆ ನೀಡಬೇಕು. ನೃತ್ಯದ ಸಮಯದಲ್ಲಿ ವಿದ್ಯಾರ್ಥಿಗಳು ಧರಿಸುವ ಉಡುಪುಗಳು ಕೂಡ ಸಭ್ಯವಾಗಿರಬೇಕು ಹಾಗೂ ಅರೆಬರೆ ವಸ್ತ್ರಗಳನ್ನು ಧರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮನರಂಜನೆಯ ಹೆಸರಿನಲ್ಲಿ ಸಮಾಜಕ್ಕೆ ತಪ್ಪು ಸಂದೇಶ ನೀಡುವ ಅಥವಾ ಮಕ್ಕಳ ನೈತಿಕ ಹಾಗೂ ಮಾನಸಿಕ ಆರೋಗ್ಯ ಕೆಡಿಸುವ ಯಾವುದೇ ಹಾಡುಗಳನ್ನು ಬಳಸದಂತೆ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈ ನಿಯಮಗಳನ್ನು ಜಾರಿಗೆ ತರುವ ಸಂಪೂರ್ಣ ಜವಾಬ್ದಾರಿಯನ್ನು ಶಾಲಾ ಮುಖ್ಯಸ್ಥರು ಮತ್ತು ಆಡಳಿತ ಮಂಡಳಿಗೆ ವಹಿಸಲಾಗಿದೆ.

Continue Reading

bigbreaking

20 ಸಾವಿರ ಕೋಟಿ ಹಗರಣದ ಮೂಲ ದಾಖಲೆಗಳೇ ನಾಪತ್ತೆ. ಎನ್‌.ಆರ್‌.ರಮೇಶ್‌ ಗಂಭೀರ ಆರೋಪ.

VISTARANEWS.COM


on

ಬೆಂಗಳೂರು: ರಾಜ್ಯ ರಾಜಕೀಯ ಹಾಗೂ ಆಡಳಿತ ವಲಯವನ್ನು ಬೆಚ್ಚಿಬೀಳಿಸುವಂತಹ ಗಂಭೀರ ಆರೋಪವೊಂದು ಹೊರಬಂದಿದೆ. 2007-08ರಿಂದ ಇದುವರೆಗೆ ನಡೆದಿರುವ 20 ಸಾವಿರ ಕೋಟಿಗೂ ಹೆಚ್ಚು ಮೊತ್ತದ TDR ಹಗರಣಗಳಿಗೆ ಸಂಬಂಧಿಸಿದ ಮೂಲ ದಾಖಲೆಗಳು ಈಗಿನ ಜಿಬಿಎ ಯ ಭೂಸ್ವಾಧೀನ ಮತ್ತು ಟಿಡಿಆರ್‌ ವಿಭಾಗದ ಕಚೇರಿಯಿಂದ ನಾಪತ್ತೆಯಾಗಿವೆ ಎನ್ನುವ ಆಘಾತಕಾರಿ ವಿಷಯವನ್ನು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್ ಬಹಿರಂಗಪಡಿಸಿದ್ದಾರೆ.
ಇಂದು ಜಿಬಿಎ ಕೇಂದ್ರ ಕಚೇರಿ ಮುಂಭಾಗ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹಿರಿಯ ನಾಯಕ ಹಾಗೂ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್‌.ಆರ್‌.ರಮೇಶ್‌ ಟಿಡಿಆರ್‌ ಹಗರಣದ ದಾಖಲೆಗಳ ನಾಪತ್ತೆ ಬಗ್ಗೆ ಮಹತ್ವದ ಮಾಹಿತಿಗಳನ್ನು ತಿಳಿಸಿದರು. ರಸ್ತೆ ಅಭಿವೃದ್ಧಿ ಮತ್ತು ವಿವಿಧ ಅಭಿವೃದ್ಧಿ ಯೋಜನೆಗೆ ಅಗತ್ಯವಿರುವ ಭೂಮಿಯನ್ನು ಭೂ ಮಾಲೀಕರಿಂದ ನಿಯಮಾನುಸಾರ ಸ್ವಾಧೀನಪಡಿಸಿಕೊಂಡು, ಅದಕ್ಕೆ ಬದಲಾಗಿ ನಿಗದಿತ ಮೊತ್ತದ ಪರಿಹಾರ ಧನ ಅಥವಾ TDR /DRC ನೀಡುವ ಕಾರ್ಯ 2007-08 ರಲ್ಲಿ ಚಾಲನೆಗೆ ಬಂದಿತ್ತು. ಇದಾದ ನಂತರ TDR ನಿಯಮಗಳಲ್ಲಿನ ಸಣ್ಣಪುಟ್ಟ ಲೋಪದೋಷಗಳನ್ನು ದುರ್ಬಳಕೆ ಮಾಡಿಕೊಳ್ಳುವ ಕರಾಳ ದಂಧೆ ಬೃಹತ್ ಪ್ರಮಾಣದಲ್ಲಿ ಬೆಳೆದು, ಬಿಬಿಎಂಪಿ ಮತ್ತು ಬಿಡಿಎ ನ ಭ್ರಷ್ಟ ಅಧಿಕಾರಿಗಳ ಸಹಕಾರದಿಂದ ಸುಮಾರು 50 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಗರಣ ನಡೆದಿದೆ ಎಂದು ಎನ್‌.ಆರ್‌.ರಮೇಶ್‌ ಆರೋಪಿಸಿದ್ದಾರೆ.
ಟಿಡಿಆರ್‌ ಹಗರಣ ಪ್ರಕರಣದ ವಿಚಾರ ಈಗಾಗಲೇ ಜಾರಿ ನಿರ್ದೇಶನಾಲಯ (ED) ಮತ್ತು ಲೋಕಾಯುಕ್ತದಲ್ಲಿ ತನಿಖೆ ಹಾಗೂ ವಿಚಾರಣಾ ಹಂತದಲ್ಲಿದೆ. ಆದರೆ ಇದೀಗ ಹಗರಣಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳು ಕಾಣೆಯಾಗಿರುವುದು ಪ್ರಕರಣದ ಗಂಭೀರತೆಯನ್ನು ಮತ್ತಷ್ಟು ಹೆಚ್ಚಿಸಿದ್ದು, ಇದರಲ್ಲಿ ಜಿಬಿಎ ಅಧಿಕಾರಿಗಳು ಮತ್ತು ವಂಚಕರ ಪಾತ್ರ ಇದೆ ಎಂದು ಎನ್‌.ಆರ್‌.ರಮೇಶ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಎಲ್ಲಾ ಆರೋಪಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ದಾಖಲೆಗಳೊಂದಿಗೆ ಜಾರಿ ನಿರ್ದೇಶನಾಲಯ ಮತ್ತು ಲೋಕಾಯುಕ್ತದಲ್ಲಿ ದೂರುಗಳನ್ನು ದಾಖಲಿಸಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.

Continue Reading

ಕರ್ನಾಟಕ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿದ NIA ನ್ಯಾಯಾಲಯ

VISTARANEWS.COM


on

ಮಂಗಳೂರು ನಗರವನ್ನು ಬೆಚ್ಚಿಬೀಳಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ಗೆ ಬೆಂಗಳೂರಿನ ಎನ್‌ಐಎ (NIA) ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಈ ಸ್ಫೋಟ ಸಂಭವಿಸಿತ್ತು. ಆರೋಪಿ ಶಾರಿಕ್ ಸ್ಫೋಟಕ ತುಂಬಿದ್ದ ಕುಕ್ಕರ್ ಅನ್ನು ಸಾಗಿಸುತ್ತಿದ್ದಾಗಲೇ ಅದು ಆಕಸ್ಮಿಕವಾಗಿ ಸ್ಫೋಟಗೊಂಡಿದ್ದರಿಂದ, ನಗರದಲ್ಲಿ ಸಂಭವಿಸಬಹುದಾಗಿದ್ದ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿತ್ತು. ಈ ಘಟನೆಯಲ್ಲಿ ಶಾರಿಕ್ ಮತ್ತು ಆಟೋ ಚಾಲಕ ಇಬ್ಬರೂ ಗಾಯಗೊಂಡಿದ್ದರು.

ದೇಶದ ಭದ್ರತೆಗೆ ಧಕ್ಕೆ ತರುವ ಮತ್ತು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುವ ಉದ್ದೇಶದಿಂದ ಈ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಲಾಗಿತ್ತು. ಪ್ರಕರಣದ ಗಾಂಭೀರ್ಯವನ್ನು ಪರಿಗಣಿಸಿ ಕೇಂದ್ರ ಸರ್ಕಾರವು ಇದರ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಿತ್ತು. ತನಿಖೆಯ ವೇಳೆ ಶಾರಿಕ್ ನಿಷೇಧಿತ ಉಗ್ರಗಾಮಿ ಸಂಘಟನೆಗಳಿಂದ ಪ್ರೇರಿತನಾಗಿದ್ದದ್ದು ಮತ್ತು ಡಾರ್ಕ್ ವೆಬ್ ಮೂಲಕ ವಿದೇಶಿ ಹ್ಯಾಂಡ್ಲರ್‌ಗಳ ಸಂಪರ್ಕದಲ್ಲಿದ್ದು ಬಾಂಬ್ ತಯಾರಿಕಾ ತರಬೇತಿ ಪಡೆದಿದ್ದ ಎಂಬ ಆಘಾತಕಾರಿ ಸತ್ಯಗಳು ಹೊರಬಂದಿದ್ದವು.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು, ಎನ್‌ಐಎ ಸಲ್ಲಿಸಿದ್ದ ಸಾಕ್ಷ್ಯಧಾರಗಳನ್ನು ಪುರಸ್ಕರಿಸಿ ಶಾರಿಕ್ ದೋಷಿ ಎಂದು ತೀರ್ಪು ನೀಡಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಸೇರಿದಂತೆ ವಿವಿಧ ಕಠಿಣ ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷೆ ಪ್ರಕಟಿಸಿದೆ.

Continue Reading
Advertisement
Latest15 hours ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

Latest16 hours ago

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ

Latest16 hours ago

ಜಪಾನ್‌ಗೆ ಲಗ್ಗೆ ಇಡಲು ಸಜ್ಜಾದ ʼಧುರಂಧರ್’

bigbreaking16 hours ago

ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಾ ಮೇ ಕ್ಲೈಮ್ಯಾಕ್ಸ್‌?

Latest18 hours ago

ಡಾಲಿ ಧನಂಜಯ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ದಂಪತಿ!

Latest19 hours ago

ಶಿಸ್ತು ಮರೆತರಾ ರಿಯಾನ್ ಪರಾಗ್? ಕಾನೂನು ಸಂಕಷ್ಟಕ್ಕೆ ಸಿಲುಕುತ್ತಾರಾ ರಾಜಸ್ಥಾನ ರಾಯಲ್ಸ್ ಆಟಗಾರ?

Latest20 hours ago

ಮತಯಂತ್ರದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌? ಚುನಾವಣಾ ಅಕ್ರಮ ಆರೋಪಿಸಿ ಕೇಸರಿ ಪಡೆ ಆಕ್ರೋಶ

Rakshit Shetty Richard Anthony Produce By Hombale
ಅವಿಭಾಗೀಕೃತ20 hours ago

ಗುಡುಗು ಸಹಿತ ಆಲಿಕಲ್ಲು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Latest21 hours ago

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

Latest22 hours ago

ಯಶ್ ಫ್ಯಾನ್ಸ್‌ಗೆ ಶಾಕ್: ಮತ್ತೆ ಮುಂದೂಡಲ್ಪಟ್ಟ ‘ಟಾಕ್ಸಿಕ್’ ರಿಲೀಸ್ ಡೇಟ್! ಹೊಸ ದಿನಾಂಕದ ಬಗ್ಗೆ ಅಪ್‌ಡೇಟ್ ನೀಡಿದ ಚಿತ್ರತಂಡ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌