prerane morning spiritual thoughts in kannada about Shreyas and Preyas meaningPrerane : ಶ್ರೇಯಸ್ಸೆಂದರೆ ಎಲ್ಲರಿಗೂ ಗೊತ್ತು; ಪ್ರೇಯಸ್‌ ಎಂದರೆ ಗೊತ್ತೇ? - Vistara News

ಧಾರ್ಮಿಕ

Prerane : ಶ್ರೇಯಸ್ಸೆಂದರೆ ಎಲ್ಲರಿಗೂ ಗೊತ್ತು; ಪ್ರೇಯಸ್‌ ಎಂದರೆ ಗೊತ್ತೇ?

“ಪ್ರೇರಣೆʼʼ (Prerane) ಇದು ಧಾರ್ಮಿಕ ಮತ್ತು ಆಧ್ಯಾತ್ಮಿಕ ಚಿಂತನೆಗಳನ್ನು ಬಿತ್ತುವ ಬೆಳಗಿನ ಹೊಳಹು. ಪ್ರತಿ ನಿತ್ಯ ಧಾರ್ಮಿಕ ಚಿಂತಕರು, ಪ್ರವಚನಕಾರರು, ಆಧ್ಯಾತ್ಮ ಚಿಂತಕರು ಇಲ್ಲಿ ಬರೆಯುತ್ತಿದ್ದಾರೆ. ಶ್ರೇಯಸ್ಸು-ಪ್ರೇಯಸ್ಸಿನ ಕುರಿತು ವಿವರಿಸುವ ವಿಶೇಷ ಲೇಖನ ಇಲ್ಲಿದೆ.

VISTARANEWS.COM


on

Shreyas and Preyas prerane
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Prof. K S Kannan

prerane

ಪ್ರೊ. ಕೆ. ಎಸ್. ಕಣ್ಣನ್
ಯಾರಾದರೂ ನಮಗೆ ಉಪಕಾರ ಮಾಡಿದಲ್ಲಿ ಅಥವಾ ಯಾವುದೇ ನಿಃಸ್ವಾರ್ಥವಾದ ಕರ್ಮವನ್ನು ಮಾಡಿದಲ್ಲಿ “ನಿನಗೆ ಒಳ್ಳೆಯದಾಗಲಿ, ಶ್ರೇಯಸ್ಸಾಗಲಿ” ಎಂದು ಹೇಳುವೆವು, ಅಥವಾ ಬಯಸುವೆವು, ಅಲ್ಲವೆ? “ನಿನ್ನ ಶ್ರೇಯಸ್ಸಿಗಾಗಿ ಹೇಳುತ್ತಿದ್ದೇನೆ” ಎಂದೂ ಹೇಳುವುದುಂಟು. ಆದರೆ ಶ್ರೇಯಸ್ ಎಂದರೇನು? – ಎಂದು ಯಾರಾದರೂ ಏನಾದರೂ ಕೇಳಿದರೆ, ಅದಕ್ಕೆ ಏನು ಉತ್ತರ ಹೇಳಬಲ್ಲೆವು?

ಈ ಪ್ರಶ್ನೆಗೆ ಉತ್ತರ ಕಠೋಪನಿಷತ್ತಿನಲ್ಲಿದೆ. ಕಿರಿಯನಾದರೂ ಜಾಣನಾದ ನಚಿಕೇತನಿಗೆ ಈ ಬಗ್ಗೆ ತಿಳಿವಳಿಕೆಯನ್ನು ಯಮನು ಅಲ್ಲಿ ಕೊಡುತ್ತಾನೆ. ಶ್ರೇಯಸ್ಸಿನ ಬಗ್ಗೆ ಮಾತ್ರವೇ ಅಲ್ಲಿ ಹೇಳಿಲ್ಲ. ಜೊತೆಗೇ ಪ್ರೇಯಸ್ಸಿನ ಬಗ್ಗೆಯೂ ಹೇಳಿದೆ. ಶ್ರೇಯಸ್ ಮತ್ತು ಪ್ರೇಯಸ್ – ಇವೆರಡರ ವ್ಯತ್ಯಾಸವನ್ನೂ ಹೇಳಿದೆ.

ಹಾಗಾದರೆ ಪ್ರೇಯಸ್ ಎಂದರೇನು? – ಎಂದೂ ತಿಳಿದುಕೊಳ್ಳಬೇಕಲ್ಲವೆ? ಅದಕ್ಕಿರುವ ಒಂದು ಸುಲಭ ಮಾರ್ಗವೆಂದರೆ, ಮೊದಲು ಆ ಪದಗಳೇ ಹೇಗೆ ಬಂದಿವೆಯೆಂಬುದನ್ನು ತಿಳಿದುಕೊಳ್ಳುವುದು. ನಮಗೆ ಯಾವುದಾದರೂ ಇಷ್ಟವಾದಲ್ಲಿ ’ಅದು ನನಗೆ ಪ್ರಿಯ’ ಎನ್ನುತ್ತೇವೆ. ಹೆಚ್ಚು ಪ್ರಿಯವಾದುದನ್ನು ಪ್ರಿಯತರ ಎಂದೂ, ತುಂಬಾ ಪ್ರಿಯವಾದದ್ದನ್ನು ಪ್ರಿಯತಮವೆಂದೂ ಹೇಳುತ್ತೇವೆ. ಇವನ್ನೇ ಕ್ರಮವಾಗಿ ಪ್ರಿಯ-ಪ್ರೇಯಸ್-ಪ್ರೇಷ್ಠ ಎನ್ನುವುದು. ಹಾಗೆಯೇ, ಯಾವುದು ಪ್ರಶಂಸೆಗೆ ಯೋಗ್ಯವೋ ಅದನ್ನು ಪ್ರಶಸ್ಯ ಎಂದೂ, ಹೆಚ್ಚು ಪ್ರಶಸ್ಯವಾದುದನ್ನು ಶ್ರೇಯಸ್ ಎಂದೂ, ಅತ್ಯಂತ ಪ್ರಶಸ್ಯವಾದುದನ್ನು ಶ್ರೇಷ್ಠ ಎಂದೂ ಹೇಳಲಾಗುತ್ತದೆ.

ಯಮನು ಹೇಳುವ ಮಾತಿನ ಸಾರವಿದು: “ಅಯ್ಯಾ ನಚಿಕೇತನೇ, ಶ್ರೇಯಸ್ಸೇ ಬೇರೆ, ಪ್ರೇಯಸ್ಸೇ ಬೇರೆ. ಎರಡರ ಪ್ರಯೋಜನಗಳೂ ಬೇರೆ ಬೇರೆ. ಎರಡೂ ಮನುಷ್ಯನ ಬಳಿ ಬರುತ್ತವೆ. ಯಾರು ಶ್ರೇಯಸ್ಸನ್ನು ಆರಿಸಿಕೊಳ್ಳುತ್ತಾರೋ ಅವರಿಗೆ ಒಳ್ಳೆಯದಾಗುತ್ತದೆ, ಆದರೆ ಯಾರು ಪ್ರೇಯಸ್ಸನ್ನು ಆಯ್ದುಕೊಳ್ಳುತ್ತಾರೋ ಅಂತಹವರಿಗೆ ಪುರುಷಾರ್ಥವು ಸಿದ್ಧಿಸುವುದಿಲ್ಲ. ಅಷ್ಟೇ ಅಲ್ಲ, ಇದು ಶ್ರೇಯಸ್ಸು, ಇದು ಪ್ರೇಯಸ್ಸು – ಎಂದು ವಿಭಾಗಮಾಡಿಕೊಂಡು, ಪ್ರೇಯಸ್ಸನ್ನು ಬಿಟ್ಟು ಶ್ರೇಯಸ್ಸನ್ನೇ ಆಯ್ದುಕೊಳ್ಳುವವನು ಧೀರ. ಆದರೆ, ಇದಕ್ಕೆ ಪ್ರತಿಯಾಗಿ, ಪ್ರೇಯಸ್ಸನ್ನೇ ಹಿಡಿಯುವವ ಮಂದ.”
ಅಲ್ಲಿಗೆ ಧೀರನ ಬಗೆಯೇ ಬೇರೆ, ಮಂದನ ಬಗೆಯೇ ಬೇರೆ ಎಂದಾಯಿತು. ಮಂದ ಅಥವಾ ಮಂದಮತಿ ಎಂದರೆ, ಚುರುಕಿಲ್ಲದವನು, ಜಾಣ್ಮೆಯಿಲ್ಲದವನು. ಸರಿಯಾದ ವಿವೇಕವಿರುವುದು ಜಾಣ್ಮೆ.

ಧಾರ್ಮಿಕ ಮತ್ತು ಆಧ್ಯಾತ್ಮಿಕ ಲೇಖನ, ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ.

ವಿವೇಕವೆಂದರೆ ವಿಂಗಡಿಸಿಕೊಳ್ಳುವುದು. ಒಳ್ಳೆಯದು ಯಾವುದು, ಕೆಟ್ಟದ್ದು ಯಾವುದು? ಎಂದು ವಿಭಾಗಮಾಡಿಕೊಳ್ಳುವುದು ವಿವೇಕ. ಯಾವುದು ಸುಖವನ್ನು ಕೊಡುತ್ತದೆ, ಯಾವುದು ದುಃಖವನ್ನು? ಎಂದು ಬೇರ್ಪಡಿಸಿಕೊಳ್ಳುವುದು ವಿವೇಕ. ಯಾವುದು ಕಡಿಮೆ ಸುಖವನ್ನು ಕೊಡುತ್ತದೆ, ಯಾವುದು ಹೆಚ್ಚು ಸುಖವನ್ನು? – ಎಂದು ಬೇರೆ ಬೇರೆ ಮಾಡಿಕೊಳ್ಳುವುದು ವಿವೇಕ. ಯಾವುದು ತಾತ್ಕಾಲಿಕ ಸುಖವನ್ನು ಕೊಡುತ್ತದೆ, ಯಾವುದು ದೀರ್ಘಸುಖವನ್ನು? – ಎಂದು ವಿಭಜಿಸಿಕೊಳ್ಳುವುದೂ ವಿವೇಕವೇ. ಮಂದಮತಿಯು ಇವಕ್ಕೆಲ್ಲಾ ಗಮನವನ್ನೇ ಕೊಡುವುದಿಲ್ಲ. ಅವನಿಗೆ ಗೊತ್ತಾಗುವುದು. ಇದು ನನಗೆ ಈಗ ಇಷ್ಟ’ ಎಂಬುದಷ್ಟೇ.

ಜೀವನದಲ್ಲಿ ಉನ್ನತ ಸ್ಥಾನಕ್ಕೆ ಹೋಗುವುದು ಹೇಗೆ? ಈ ವಿಡಿಯೋ ನೋಡಿ.

ನಾಲಿಗೆಗೆ ರುಚಿಯೆನಿಸಿವುದು ಪ್ರೇಯಸ್ಸು. ಆರೋಗ್ಯಕ್ಕೆ ಒಳ್ಳೆಯದಾದದ್ದು ಶ್ರೇಯಸ್ಸು. ಭೋಗಗಳು ಪ್ರೇಯಸ್ಸು. ಯೋಗವು ಶ್ರೇಯಸ್ಸು. ಅನೇಕ ಪ್ರೇಯಸ್ಸುಗಳನ್ನು – ಹೆಣ್ಣು-ಹೊನ್ನು-ಮಣ್ಣು ಮುಂತಾದವುಗಳನ್ನು – ಯಮನು ತನ್ನ ಮುಂದಿಟ್ಟರೂ, ನಚಿಕೇತನು ಕೇಳಿಕೊಂಡದ್ದು ಶ್ರೇಯಸ್ಸನ್ನೇ. ನಚಿಕೇತ ಕಿರಿಯ; ಆತನ ಆದರ್ಶ ಹಿರಿದು!

– ಲೇಖಕರು ಆಧ್ಯಾತ್ಮ ಚಿಂತಕರು ಮತ್ತು ಪ್ರವಚನಕಾರರು,
ಅಷ್ಟಾಂಗಯೋಗ ವಿಜ್ಞಾನಮಂದಿರಂ

ಇದನ್ನೂ ಓದಿ : Prerane : ಮೋಹ-ಮಮಕಾರ; ಏನಿದರ ನಿಜ ಸಾರ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಧಾರ್ಮಿಕ

Vastu Tips: ಮನೆಯ ಗೋಡೆಗಳ ಮೇಲೆ ಎಲ್ಲೆಂದರಲ್ಲಿ ಫೋಟೊ ಅಳವಡಿಸಿದರೆ ಏನಾಗುತ್ತದೆ?

ಗೋಡೆಗಳ ಮೇಲೆ ತೂಗು ಹಾಕುವ ಚಿತ್ರಗಳಿಗೂ ಪ್ರಮುಖ ನಿಯಮಗಳು ಮತ್ತು ಸಲಹೆಗಳನ್ನು ವಾಸ್ತು ಶಾಸ್ತ್ರದಲ್ಲಿ (Vastu Tips) ನೀಡಲಾಗಿದೆ. ಇವುಗಳನ್ನು ಅನುಸರಿಸುವ ಮೂಲಕ ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ತುಂಬಬಹುದು ಮತ್ತು ಕುಟುಂಬದಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ತರಬಹುದು.

VISTARANEWS.COM


on

By

Vastu Tips
Koo

ಮನೆಯಲ್ಲಿ (home) ಪ್ರತಿಯೊಂದು ವಸ್ತುವನ್ನು ಇಡಲೂ ವಾಸ್ತು (Vastu Tips) ನಿಯಮವಿದೆ. ಯಾಕೆಂದರೆ ಮನೆಯೊಳಗಿರುವ ಪ್ರತಿಯೊಂದು ವಸ್ತುವಿನಲ್ಲೂ ಜೀವಕಳೆ ತುಂಬುತ್ತದೆ ಮತ್ತು ಶಕ್ತಿಯ ಕೇಂದ್ರವಾಗಿಸುತ್ತದೆ. ಗೋಡೆಯಲ್ಲಿ (wall) ತೂಗು ಹಾಕುವ ಚಿತ್ರಗಳನ್ನು (Picture) ಇಡುವಾಗಲೂ ವಾಸ್ತು ನಿಯಮವನ್ನು ಪಾಲಿಸಬೇಕು. ಯಾಕೆಂದರೆ ಗೋಡೆಗಳ ಮೇಲೆ ಇಡುವ ಚಿತ್ರಗಳು ಮತ್ತು ಅಲಂಕಾರಿಕ ವಸ್ತುಗಳು ಕೇವಲ ಮನೆಯ ಸೌಂದರ್ಯವನ್ನು ಮಾತ್ರ ಹೆಚ್ಚಿಸುವುದಿಲ್ಲ ಸಕಾರಾತ್ಮಕ ಶಕ್ತಿಯನ್ನು ಮನೆಯೊಳಗೆ ಪ್ರವಹಿಸುವಂತೆ ಮಾಡುತ್ತದೆ. ಎಲ್ಲೆಂದರಲ್ಲಿ ಅಳವಡಿಸಿದರೆ ನಕಾರಾತ್ಮಕತೆ ಹೆಚ್ಚುತ್ತದೆ.

ಮನೆಯ ಗೋಡೆಗಳ ಮೇಲೆ ತೂಗು ಹಾಕುವ ಚಿತ್ರ, ಸರಿಯಾದ ದಿಕ್ಕು ಮತ್ತು ನಿರ್ದಿಷ್ ಬಣ್ಣದದ್ದರೆ ಮಾತ್ರ ಮನೆಯಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿ ಉಳಿಯುತ್ತದೆ ಎನ್ನುತ್ತದೆ ವಾಸ್ತು.

ಉತ್ತರ ದಿಕ್ಕು

ಸಂಪತ್ತಿನ ದೇವರು ಕುಬೇರ ಈ ದಿಕ್ಕಿನಲ್ಲಿ ವಾಸಿಸುತ್ತಾನೆ. ಹಚ್ಚ ಹಸಿರಿನ ಮರಗಳು, ಸಸ್ಯವರ್ಗ ಮತ್ತು ನೀರಿನ ಮೂಲಗಳ ಚಿತ್ರಗಳನ್ನು ಈ ದಿಕ್ಕಿನಲ್ಲಿ ಇಡುವುದು ಶುಭವೆಂದು ಪರಿಗಣಿಸಲಾಗಿದೆ. ಈ ಚಿತ್ರಗಳು ಸಂಪತ್ತು ಮತ್ತು ಸಮೃದ್ಧಿಯನ್ನು ಆಕರ್ಷಿಸುತ್ತವೆ.

ಪೂರ್ವ ದಿಕ್ಕು

ಈ ದಿಕ್ಕನ್ನು ಉದಯಿಸುತ್ತಿರುವ ಸೂರ್ಯನ ದಿಕ್ಕು ಎಂದು ಪರಿಗಣಿಸಲಾಗಿದೆ. ಭಗವಾನ್ ಸೂರ್ಯ, ಸಂತರು ಅಥವಾ ಸೂರ್ಯೋದಯದ ಚಿತ್ರಗಳನ್ನು ಈ ದಿಕ್ಕಿನಲ್ಲಿ ಇಡುವುದು ಪ್ರಯೋಜನಕಾರಿ. ಈ ಚಿತ್ರಗಳು ಮನೆಯಲ್ಲಿ ಶಕ್ತಿ ಮತ್ತು ಸಕಾರಾತ್ಮಕತೆಯನ್ನು ತರುತ್ತವೆ.

ದಕ್ಷಿಣ ದಿಕ್ಕು

ಪೂರ್ವಜರು ಮತ್ತು ಧರ್ಮಗ್ರಂಥಗಳ ಚಿತ್ರಗಳನ್ನು ಈ ದಿಕ್ಕಿನಲ್ಲಿ ಇರಿಸಬಹುದು. ದೆವ್ವ, ಆತ್ಮ ಅಥವಾ ನಕಾರಾತ್ಮಕ ಶಕ್ತಿಯ ಚಿತ್ರಗಳನ್ನು ಈ ದಿಕ್ಕಿನಲ್ಲಿ ಇಡಬಾರದು. ಕೆಂಪು, ಚಿನ್ನದ ಅಥವಾ ಕಿತ್ತಳೆ ಬಣ್ಣದ ಚಿತ್ರಗಳನ್ನು ದಕ್ಷಿಣ ದಿಕ್ಕಿನಲ್ಲಿ ಇಡುವುದು ಶುಭವೆಂದು ಪರಿಗಣಿಸಲಾಗುತ್ತದೆ.

ಪಶ್ಚಿಮ ದಿಕ್ಕು

ಈ ದಿಕ್ಕು ನೀರಿನ ಅಂಶದಿಂದ ಪ್ರಭಾವಿತವಾಗಿರುತ್ತದೆ. ಈ ದಿಕ್ಕಿನಲ್ಲಿ ನೀರು, ಸಮುದ್ರ, ನದಿ ಅಥವಾ ಕಾರಂಜಿ ಚಿತ್ರಗಳನ್ನು ಹಾಕುವುದು ಮಾನಸಿಕ ಶಾಂತಿ ಮತ್ತು ಸಮತೋಲನವನ್ನು ಕಾಯ್ದುಕೊಳ್ಳುತ್ತದೆ.


ಫೋಟೋಗಳು ಹೇಗಿರಬೇಕು?

ದೇವರು, ದೇವತೆಗಳು ಮತ್ತು ಧಾರ್ಮಿಕ ಸ್ಥಳಗಳ ಚಿತ್ರಗಳನ್ನು ಮನೆಯಲ್ಲಿ ಹಾಕುವುದು ಶುಭವೆಂದು ಪರಿಗಣಿಸಲಾಗಿದೆ. ಈ ಚಿತ್ರಗಳು ಕುಟುಂಬದಲ್ಲಿ ಶಾಂತಿ ಮತ್ತು ಭಕ್ತಿಯನ್ನು ಉತ್ತೇಜಿಸುತ್ತವೆ.

ಹಚ್ಚ ಹಸಿರಿನ ಮರ, ಹೂವುಗಳು, ಪರ್ವತ, ನದಿಗಳು ಮುಂತಾದ ಸುಂದರವಾದ ನೈಸರ್ಗಿಕ ದೃಶ್ಯಗಳ ಚಿತ್ರಗಳನ್ನು ಹಾಕುವುದು ಮನಸ್ಸಿನಲ್ಲಿ ಶಾಂತಿ ಮತ್ತು ಸಕಾರಾತ್ಮಕತೆಯನ್ನು ತರುತ್ತದೆ.

ಕುಟುಂಬ ಸದಸ್ಯರ ಗುಂಪು ಫೋಟೋಗಳನ್ನು ಅಥವಾ ಸಂತೋಷದ ಕುಟುಂಬ ಕ್ಷಣಗಳ ಚಿತ್ರಗಳನ್ನು ಹಾಕುವುದು ಕುಟುಂಬದಲ್ಲಿ ಪ್ರೀತಿ ಮತ್ತು ಏಕತೆಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಏರುತ್ತಿರುವ ಸೂರ್ಯ, ಚಾಲನೆಯಲ್ಲಿರುವ ಕುದುರೆಗಳು, ಹಾರುವ ಪಕ್ಷಿಗಳು ಮುಂತಾದ ಶಕ್ತಿಯುತ ಮತ್ತು ಸ್ಪೂರ್ತಿದಾಯಕ ಚಿತ್ರಗಳನ್ನು ಇಡುವುದರಿಂದ ಮನೆಯವರಲ್ಲಿ ಶಕ್ತಿ ಮತ್ತು ಸ್ಫೂರ್ತಿ ನೀಡುತ್ತದೆ.

ಯಾವ ಎತ್ತರದಲ್ಲಿ ಇಡಬೇಕು?

ಚಿತ್ರಗಳನ್ನು ಸುಲಭವಾಗಿ ಗೋಚರಿಸುವಂತಹ ಎತ್ತರದಲ್ಲಿ ಗೋಡೆಯ ಮೇಲೆ ಇಡಬೇಕು ಮತ್ತು ಅವುಗಳನ್ನು ನೋಡುವಲ್ಲಿ ಯಾರೂ ಅನಾನುಕೂಲವಾಗಬಾರದು. ಚಿತ್ರಗಳನ್ನು ಮುಖ್ಯ ಬಾಗಿಲಿನ ಮುಂದೆ ಅಥವಾ ನೇರವಾಗಿ ಹಾಸಿಗೆಯ ಮುಂದೆ ಇಡುವುದನ್ನು ತಪ್ಪಿಸಬೇಕು. ಧಾರ್ಮಿಕ ಅಥವಾ ಕುಟುಂಬದ ಚಿತ್ರಗಳನ್ನು ಅಡುಗೆಮನೆ ಮತ್ತು ಸ್ನಾನಗೃಹದಲ್ಲಿ ಇಡಬಾರದು.

ಇದನ್ನೂ ಓದಿ: Vastu Tips: ವೈವಾಹಿಕ ಜೀವನ ಸುಖಮಯವಾಗಿರಲು ಈ ವಾಸ್ತು ನಿಯಮ ಅನುಸರಿಸಿ

ಫೋಟೋಗಳ ಬಣ್ಣ ಏನು?

ವರ್ಣಚಿತ್ರಗಳಲ್ಲಿ ಬಳಸುವ ಬಣ್ಣಗಳಿಗೆ ಗಮನ ಕೊಡುವುದು ಸಹ ಮುಖ್ಯವಾಗಿದೆ. ನೀಲಿ, ಹಸಿರು, ಹಳದಿ ಮುಂತಾದ ಬೆಳಕು ಮತ್ತು ಹಿತವಾದ ಬಣ್ಣಗಳು ಮಾನಸಿಕ ಶಾಂತಿ ಮತ್ತು ಸಕಾರಾತ್ಮಕತೆಯನ್ನು ಉತ್ತೇಜಿಸುತ್ತವೆ. ಕೆಂಪು, ಕಪ್ಪು ಮತ್ತು ಕಂದು ಬಣ್ಣಗಳಂತಹ ಗಾಢ ಮತ್ತು ಹೆಚ್ಚು ಉತ್ತೇಜಕ ಬಣ್ಣಗಳನ್ನು ಮಿತವಾಗಿ ಬಳಸಬೇಕು.

ಫೋಟೋಗಳನ್ನು ಹೇಗೆ ಇರಿಸಬೇಕು?

ಚಿತ್ರಗಳನ್ನು ಯಾವಾಗಲೂ ಸ್ವಚ್ಛವಾಗಿ ಮತ್ತು ಉತ್ತಮ ಸ್ಥಿತಿಯಲ್ಲಿಡಬೇಕು. ಧೂಳು, ಕೊಳಕು ಮತ್ತು ಹಾನಿಗೊಳಗಾದ ಚಿತ್ರಗಳು ನಕಾರಾತ್ಮಕ ಶಕ್ತಿಯನ್ನು ಉಂಟುಮಾಡಬಹುದು.

Continue Reading

ಮೈಸೂರು

Mysore News: ಗುರುಗಳ ಅನುಗ್ರಹವಿದ್ದರೆ ಜೀವನದಲ್ಲಿ ಎಲ್ಲ ಸಾಧನೆಗಳು ಸುಲಭ; ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ

Mysore News: ಮೈಸೂರಿನ ಜೆಪಿ ನಗರದ ವಿಠಲಧಾಮದ ಭವ್ಯ ವೇದಿಕೆಯಲ್ಲಿ ಶ್ರೀ ಸೋಸಲೆ ವ್ಯಾಸರಾಜ ಮಠ ಆಯೋಜನೆ ಮಾಡಿರುವ ಶ್ರೀಮನ್ ನ್ಯಾಯ ಸುಧಾ ಮಂಗಳ ಮಹೋತ್ಸವದ ಶುಕ್ರವಾರದ ವಿದ್ವತ್ ಸಭೆಯಲ್ಲಿ ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಉತ್ತರಾದಿ ಮಠದ ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.

VISTARANEWS.COM


on

All achievements in life are easy if there is Guru's grace says Sri Satyatmatirtha Swamiji
Koo

ಮೈಸೂರು: ಗುರುಗಳ ಅನುಗ್ರಹವಿದ್ದರೆ ಜೀವನದಲ್ಲಿ ಎಲ್ಲ ಸಾಧನೆಗಳು ಸುಲಭ ಎಂದು ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಉತ್ತರಾದಿ ಮಠದ ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ (Mysore News) ತಿಳಿಸಿದರು.

ಜೆಪಿ ನಗರದ ವಿಠಲಧಾಮದ ಭವ್ಯ ವೇದಿಕೆಯಲ್ಲಿ ಶ್ರೀ ಸೋಸಲೆ ವ್ಯಾಸರಾಜ ಮಠ ಆಯೋಜನೆ ಮಾಡಿರುವ ಶ್ರೀಮನ್ ನ್ಯಾಯ ಸುಧಾ ಮಂಗಳ ಮಹೋತ್ಸವದ ಶುಕ್ರವಾರದ ವಿದ್ವತ್ ಸಭೆಯಲ್ಲಿ ಶ್ರೀಗಳು ಆಶೀರ್ವಚನ ನೀಡಿದರು.

ವಿದ್ಯಾರ್ಥಿಗಳು ಶ್ರಮ ವಹಿಸಿ ಅಧ್ಯಯನ ಮಾಡಿರುವುದು ಒಂದೆಡೆಯಾದರೆ ಅವರಲ್ಲಿ ಧೈರ್ಯ, ಸದಾಚಾರ, ಸಂಸ್ಕಾರ, ನೈತಿಕತೆ ಮತ್ತು ಜೀವನ ಕ್ರಮದ ಮಾರ್ಗವನ್ನು ಕಲಿಯುವುದು ಗುರುವಿನ ಅನುಸರಣೆಯಿಂದ ಮಾತ್ರ. ಈ ನಿಟ್ಟಿನಲ್ಲಿ ಇಂದು ಸುಧಾಮಂಗಳ ಮಾಡುತ್ತಿರುವ ವಿದ್ಯಾರ್ಥಿಗಳಾದ ಸೌಮಿತ್ರಿ, ಸುಘೋಷ, ಪ್ರಣವ ಮತ್ತು ಹೊನ್ನಾಳಿ ಆಯಾಚಿತ ಶ್ರೀಶ ಆಚಾರ್ಯರು ಪಂಡಿತರು ಮತ್ತು ವಿದ್ವಾಂಸರು ಮೆಚ್ಚುವಂತಹ ಮುಕ್ತ ಪರೀಕ್ಷೆ ನೀಡಿದ್ದಾರೆ. ಅವರಿಗೆ ಉನ್ನತೋನ್ನತ ಪ್ರಗತಿ ಆಗಲಿ ಎಂದು ಸತ್ಯಾತ್ಮ ಶ್ರೀಗಳು ಆಶೀರ್ವಾದ ಪೂರ್ವಕವಾಗಿ ಹೇಳಿದರು.

ಇದನ್ನೂ ಓದಿ: World Food Safety Day: ಆಹಾರ ಸುರಕ್ಷತೆಗಾಗಿ ನಾವು ಏನು ಮಾಡಬಹುದು?

ಮುಳಬಾಗಿಲು ಶ್ರೀಪಾದರಾಜರ ಮಠದ ಶ್ರೀ ಸುಜಯನಿಧಿ ತೀರ್ಥರು ಮಾತನಾಡಿ, ಶ್ರೀ ವಿದ್ಯಾಶ್ರೀಶ ತೀರ್ಥರು ಶ್ರೀ ವ್ಯಾಸ ತೀರ್ಥ ವಿದ್ಯಾಪೀಠದ ಮೂಲಕ ಯುವ-ನವ ವಿದ್ವಾಂಸರನ್ನು ತರಬೇತುಗೊಳಿಸಿ ಸಮಾಜಕ್ಕೆ ಮಹತ್ವದ ಕೊಡುಗೆಯನ್ನಾಗಿ ನೀಡುತ್ತಿದ್ದಾರೆ. ಅವರ ಸೇವೆ ಮಹತ್ತರವಾಗಿದೆ. ವಿದ್ಯಾರ್ಥಿಗಳು ಪಂಡಿತರಾಗಿ ಭಾರತೀಯ ಸನಾತನ ಪರಂಪರೆಯ ಪ್ರತೀಕವೂ ಆಗಿ ದೇಶದ ಸಂಸ್ಕೃತಿಯನ್ನು ಮುನ್ನಡೆಸುವಂತಾಗಲಿ ಎಂದು ತಿಳಿಸಿದರು.

ಶ್ರೀ ವ್ಯಾಸ ತೀರ್ಥ ವಿದ್ಯಾಪೀಠದ ಗೌರವ ಕಾರ್ಯದರ್ಶಿ ಡಾ. ಡಿ.ಪಿ. ಮಧುಸೂದನಾಚಾರ್ಯರು ಮಾತನಾಡಿ, ಪೇಜಾವರ ಶ್ರೀ ವಿಶ್ವೇಶ ತೀರ್ಥರು ನಮ್ಮ ವಿದ್ಯಾಪೀಠಕ್ಕೆ ಪ್ರಪ್ರಥಮವಾಗಿ ಸ್ಪೂರ್ತಿ ಮತ್ತು ಚೈತನ್ಯ ನೀಡಿದವರು ಎಂದು ಸ್ಮರಿಸಿದರು.

ಕಳೆದ ಎಂಟು ವರ್ಷಗಳ ಹಿಂದೆ ಶ್ರೀ ವ್ಯಾಸ ತೀರ್ಥ ವಿದ್ಯಾಪೀಠ ತಿರುಮಕೂಡಲು ಕ್ಷೇತ್ರದಲ್ಲಿ ಆರಂಭವಾದಾಗ ಸ್ವತಃ ನನ್ನ ತಾಯಿಯವರೇ ಎಲ್ಲ ಮಕ್ಕಳಿಗೂ ಅಡುಗೆ ಮಾಡಿ ಕೈ ತುತ್ತು ಹಾಕಿ ಬೆಳೆಸಿದರು. ವಿದ್ಯಾರ್ಥಿಗಳ ಸಮಗ್ರ ಕ್ಷೇಮ ಪಾಲನೆಯಲ್ಲಿ ಪ್ರತಿನಿತ್ಯವೂ ನೂರಾರು ಸಮಸ್ಯೆ ಎದುರಾದರು ಅವೆಲ್ಲವೂ ಗುರುಗಳ ಪರಮ ಅನುಗ್ರಹದಿಂದ ನಿವಾರಣೆಯಾಗಿ ಇಂದು ನಾಲ್ವರು ಪಂಡಿತರಾಗುವ ಮಟ್ಟದವರೆಗೆ ಸಂಸ್ಥೆ ಬೆಳೆದಿದೆ. ಇವುಗಳ ಹಿಂದೆ ಸೋಸಲ ಶ್ರೀ ವಿದ್ಯಾಶ್ರೀಶ ತೀರ್ಥರ ಪರಿಶ್ರಮ ಅಗಾಧವಾಗಿದೆ ಎಂದರು.

ವಿದ್ಯಾಪೀಠದ ವ್ಯವಸ್ಥಾಪಕ ಟ್ರಸ್ಟಿ ಶೇಷಗಿರಿ ಆಚಾರ್ಯ ಮಾತನಾಡಿ, ಸುಧಾ ಪರೀಕ್ಷೆ ಎಂಬುದು ವಿದ್ಯಾರ್ಥಿಗಳಿಗೆ ಮಾತ್ರ ಅಲ್ಲ, ವಿದ್ವಾಂಸರೂ ತಮ್ಮನ್ನು ತಾವು ಸರಿಪಡಿಸಿಕೊಳ್ಳಲು, ಜ್ಞಾನದ ಶಾಖೆಯನ್ನು ಉನ್ನತೀಕರಿಸಿಕೊಳ್ಳಲು ಮಹೋನ್ನತವಾದ ವೇದಿಕೆಯಾಗಿದೆ ಎಂದರು.

ಇದನ್ನೂ ಒದಿ: Cyber Crime: ವಾಟ್ಸ್ಆ್ಯಪ್‌ ಗ್ರೂಪ್‌ ಮೆಸೇಜ್‌ ಓಪನ್‌ ಮಾಡಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಾಪಾರಿ

ಸುಧಾ ಪರೀಕ್ಷೆ ಎದುರಿಸಿ, ವಿದ್ವಾಂಸರ ಪ್ರಶಂಸೆಗೆ ಭಾಜನರಾದ ಆಯಾಚಿತ ಶ್ರೀ ಶ ಮತ್ತು ಸುಘೋಷ ಅವರು ತಮ್ಮ ಅನುಭವಗಳನ್ನು ಹಂಚಿಕೊಂಡರು.

ಆಯಾಚಿತ ಶ್ರೀ ಶ ಮಾತನಾಡಿ, ಬಡತನದ ಬೇಗೆಯಲ್ಲಿ ನಾನು ಇದ್ದರೂ ಬಾಲ್ಯದಲ್ಲಿಯೇ ತಾಯಿಯನ್ನು ಕಳೆದುಕೊಂಡರೂ ಸೋಸಲೆ ಶ್ರೀಗಳು ನನ್ನನ್ನು ಕೈಹಿಡಿದು ಅನ್ನ, ಆಹಾರವನ್ನು ನೀಡಿ ವಿದ್ಯಾದಾನ ಮಾಡಿದರು. ಕಳೆದ ವರ್ಷ ನನ್ನ ಸಹೋದರಿಯ ವಿವಾಹ ಸಂದರ್ಭದಲ್ಲಿಯೂ ನಮ್ಮ ಬಡತನವನ್ನು ಕಂಡು ಸಂಪೂರ್ಣ ವಿವಾಹದ ಜವಾಬ್ದಾರಿಯನ್ನು ಮಠದಿಂದಲೇ ನಿರ್ವಹಿಸಿದ್ದನ್ನು ಜೀವನದಲ್ಲಿ ಮರೆಯಲಾಗದು ಎಂದು ತಿಳಿಸಿದರು.

ಪ್ರಣವ ಆಚಾರ್ಯ ಮಾತನಾಡಿ, ನಮ್ಮ ಪರೀಕ್ಷೆ ಮತ್ತು ಯಶಸ್ವಿಗಾಗಿ ಹಗಲು ಇರುಳು ಶ್ರಮಿಸಿದ ಉಪನ್ಯಾಸಕರು ಮತ್ತು ಪಂಡಿತರನ್ನು ಸ್ಮರಿಸಿಕೊಂಡರು. ಹಿರಿಯರ ಅನುಗ್ರಹದಿಂದಲೇ ನಮ್ಮ ಉನ್ನತಿ ಸಾಧ್ಯವಾಗಿದೆ ಎಂದು ಧನ್ಯತೆ ಸಮರ್ಪಿಸಿದರು.

ಹಿರಿಯ ವಿದ್ವಾಂಸ ಎ.ವಿ. ನಾಗಸಂಪಿಗೆ ಮಾತನಾಡಿದರು. ಇದೇ ಸಂದರ್ಭದಲ್ಲಿ ಶ್ರೀ ಮಠ ಆಯೋಜಿಸಿದ್ದ ವಿಶೇಷ ಪ್ರದರ್ಶಿನಿ ಗಮನ ಸೆಳೆಯಿತು. ರಾಮಾಯಣ, ಮಹಾಭಾರತ ಶ್ರೀಮನ್ ನ್ಯಾಯ ಸುಧಾ, ವ್ಯಾಸತ್ರಗಳು, ವೇದಗಳು ಮತ್ತು ಉಪನಿಷತ್ತಿನ ವರ್ಣ ಚಿತ್ರಗಳು ವೀಕ್ಷಕರ ಗಮನಸೆಳೆದವು. ಸಂಜೆ ವಿವಿಧ ಭಜನಾ ಮಂಡಳಿಗಳು ನಾದಸ್ವರ ವೇದಘೋಷದೊಂದಿಗೆ ಶೋಭಾ ಯಾತ್ರೆ ಸಂಪನ್ನಗೊಂಡಿತು.

ಶ್ರೀ ವ್ಯಾಸರಾಜರಿಗೆ ಸಾಂಪ್ರದಾಯಿಕವಾಗಿ ದರ್ಬಾರ್ ಸಮರ್ಪಿಸಲಾಯಿತು. ವಿವಿಧ ಪೀಠಾಧೀಶರು ವ್ಯಾಸರಾಜರಿಗೆ ರತ್ನದ ಅಭಿಷೇಕ ಸಮರ್ಪಣೆ ಮಾಡಿದರು.

ಇದನ್ನೂ ಓದಿ: Money Guide: ಪಿಎಫ್‌ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇಲ್ಲಿದೆ ಸಂಪೂರ್ಣ ಮಾಹಿತಿ

ಪ್ರಶಸ್ತಿ ಪ್ರದಾನ

ವಿವಿಧ ರಂಗದಲ್ಲಿ ಅದ್ವಿತೀಯ ಸಾಧನೆ ಮಾಡಿದ ಕೆ.ಎಸ್. ಗುರುರಾಜ, ಎಚ್.ಆರ್. ನಾಗೇಂದ್ರ ಮತ್ತು ಎ.ಆರ್. ರಘುರಾಮ ಅವರಿಗೆ ಶ್ರೀಮಠದ ರಘುನಾಥ ತೀರ್ಥ ಅನುಗ್ರಹ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

Continue Reading

ಶಿವಮೊಗ್ಗ

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Sigandur launch: ಮಳೆ ಕೊರತೆಯಿಂದಾಗಿ ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಕುಸಿತಗೊಂಡಿದೆ, ಹೀಗಾಗಿ ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಹಾಕಲಾಗಿದೆ.

VISTARANEWS.COM


on

By

Sigandur launch
Koo

ಶಿವಮೊಗ್ಗ: ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಕುಸಿತ ಹಿನ್ನೆಲೆಯಲ್ಲಿ ಸಿಗಂದೂರು ಲಾಂಚ್‌ನಲ್ಲಿ (Sigandur launch) ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಸದ್ಯಕ್ಕೆ ಲಾಂಚ್‌ನಲ್ಲಿ ಬೈಕ್ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಮಳೆ ಕೊರತೆ ಮುಂದುವರಿದ ಹಿನ್ನೆಲೆಯಲ್ಲಿ ಶಿವಮೊಗ್ಗದ ಸಾಗರ ತಾಲೂಕಿನ ಶರಾವತಿ ಹಿನ್ನೀರು ಭಾಗದಲ್ಲಿರುವ ಲಾಂಚ್ ಸಂಚಾರ ಸೇವೆ ಸ್ಥಗಿತವಾಗಿದೆ. ಎರಡು ಬದಿಯಲ್ಲಿ ಪ್ಲಾಟ್ ಫಾರ್ಮ್‌ಕ್ಕಿಂತ ನೀರು ಕಡಿಮೆ ಆದ ಹಿನ್ನೆಲೆಯಲ್ಲಿ ಸಂಚಾರ ನಿರ್ಬಂಧ ಮಾಡಲಾಗಿದೆ. ಮಳೆ ಬಾರದೆ ಇದ್ದರೆ 16 ದಿನದಲ್ಲಿ ಸಂಪೂರ್ಣವಾಗಿ ಎಲ್ಲ ವಾಹನಗಳು ಹಾಗೂ ಸಾರ್ವಜನಿಕ ಪ್ರವೇಶವು ಬಂದ್ ಆಗಲಿದೆ ಎನ್ನಲಾಗಿದೆ.

ಶರಾವತಿ ಹಿನ್ನೀರು ಭಾಗದಲ್ಲಿರುವ ಇತಿಹಾಸ ಪ್ರಸಿದ್ಧ ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಈ ಲಾಂಚ್‌ ಸಂಪರ್ಕ ಕಲ್ಪಿಸಲಿದೆ. ಜತೆಗೆ ಸಾಗರ ತಾಲೂಕಿನ ಕಳಸವಳ್ಳಿ ಮತ್ತು ಅಂಬರಗೋಡ್ಲು, ಕರೂರು, ಬಾರಂಗಿ ಹೋಬಳಿಯ ಹತ್ತಾರು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಲಾಂಚ್ ಇದಾಗಿದೆ. ಲಾಂಚ್ ಸಂಪೂರ್ಣ ಸ್ಥಗಿತಗೊಂಡರೆ 90 ಕಿಲೋ ಮೀಟರ್ ಸುತ್ತಿ ಪ್ರಯಾಣಿಸುವ ಅನಿವಾರ್ಯತೆ ಇದೆ. ಇತ್ತ ಭಾರಿ ವಾಹನ ನಿರ್ಬಂಧದಿಂದ ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆಗಾಗಿ ಸ್ಥಳೀಯರು ಮತ್ತು ಪ್ರವಾಸಿಗರು ಪ್ರಾರ್ಥಿಸುತ್ತಿದ್ದಾರೆ.

ಇದನ್ನೂ ಓದಿ: Karnataka Rain : ಆಗುಂಬೆಯಲ್ಲಿ ದುರಂತ; ಅಡಿಕೆ ತೋಟದಲ್ಲಿ ಕಳೆ ಕೀಳುವಾಗ ಸಿಡಿಲು ಬಡಿದು ವ್ಯಕ್ತಿ ಸಾವು

Karnataka Rain : ಮಳೆ ಶುರುವಾದರೆ ಸಾಕು ಗೋಕಾಕ ಜನರಿಗೆ ಗುಡ್ಡದ ಭೂತದ ಕಾಟ!

ಬೆಳಗಾವಿ: ಬೆಳಗಾವಿಯ ಗೋಕಾಕ ತಾಲೂಕಿನ ಗೋಕಾಕ ಕೊಣ್ಣೂರ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಗುಡ್ಡದ ಭೂತದ ಕಾಟ (Karnataka Rain) ಶುರುವಾಗಿದೆ. ಅದು ಕೂಡ ಮಳೆ ಪ್ರಾರಂಭವಾಗುತ್ತಿದ್ದಂತೆ ಗೋಕಾಕ ಜನರಿಗೆ ಗುಡ್ಡದ ಭೂತದ ಕಾಟ ಹೆಚ್ಚಾಗುತ್ತದೆ. ಇಷ್ಟಕ್ಕೂ ಏನಿದು ಗುಡ್ಡದ ಭೂತದ ಕಾಟ ಅಂದರೆ ಗೋಕಾಕ ಬೆಟ್ಟದಿಂದ ದೊಡ್ಡ ದೊಡ್ಡ ಬಂಡೆಕಲ್ಲುಗಳು ಉರುಳಿ ಬೀಳುತ್ತಿವೆ.

karnataka rain

ಗೋಕಾಕ ಹಾಗೂ ಕೊಣ್ಣೂರು ಸಂಪರ್ಕ ಕಲ್ಪಿಸುವ ರಸ್ತೆಯ ಮಧ್ಯೆ ಬಂಡೆಗಳು ಉರುಳಿ ಬೀಳುತ್ತಿವೆ. ಬೆಟ್ಟದಿಂದ ಉರುಳುತ್ತಿರುವ ಬಂಡೆಗಳಿಂದ ಸವಾರರು, ಜನರು ಭಯಭೀತರಾಗಿದ್ದಾರೆ. ಮಳೆಯಿಂದಾಗಿ ಬಂಡೆಗಳ ಕೆಳಗಿನ ಮಣ್ಣು ಕುಸಿಯುತ್ತಿದೆ. ಇದರಿಂದಾಗಿ ಬಂಡೆ ಕಲ್ಲುಗಳು ರಸ್ತೆಗೆ ಬಂದು ಬೀಳುತ್ತಿವೆ. ರಸ್ತೆಯಲ್ಲಿ ಸಂಚರಿಸುವವರು ಪ್ರಾಣ ಭಯದಲ್ಲೇ ಓಡಾಡುವಂತಾಗಿದೆ.

karnataka rain

ಕೊಚ್ಚಿ ಹೋದ ಬೈಕ್‌

ವಿಜಯಪುರದಲ್ಲಿ ನಿನ್ನೆ ಗುರುವಾರ ತಡರಾತ್ರಿ ಸುರಿದ ಭಾರಿ ಮಳೆಗೆ ನದಿ, ಹಳ್ಳಗಳು ತುಂಬಿ ಹರಿಯುತ್ತಿದೆ. ವಿಜಯಪುರ ಜಿಲ್ಲೆಯ ಸಾರವಾಡ ಗ್ರಾಮದಲ್ಲಿ ಡೋಣಿ ನದಿ ಉಕ್ಕಿ ಹರಿದಿದೆ. ಪರಿಣಾಮ ಅಕ್ಕ ಪಕ್ಕದ ಜಮೀನುಗಳಿಗೆ ನೀರು ನುಗ್ಗಿದೆ. ವಿಜಯಪುರ ನಗರದಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಮಳೆ ನೀರಲ್ಲಿ ಬೈಕ್‌ವೊಂದು ಕೊಚ್ಚಿ ಹೋದ ಘಟನೆ ವಿಜಯಪುರ ನಗರದ ಮನಗೂಳಿ ಅಗಸಿ ಬಳಿ ನಡೆದಿದೆ. ಉಕ್ಕಿ ಹರಿಯುತ್ತಿರುವ ಮಳೆ ನೀರಲ್ಲಿ ಬೈಕ್ ಕೊಂಡೊಯ್ಯುವ ಹರಸಾಹಸದ ವೇಳೆ ಕೊಚ್ಚಿಹೋಗಿದೆ.

ಇದನ್ನೂ ಓದಿ: Electric shock : ಶಾಲೆಗೆ ಹೋದವಳು ಮಸಣ ಸೇರಿದಳು; ಕರೆಂಟ್‌ ಶಾಕ್‌ಗೆ ಒದ್ದಾಡಿ ಪ್ರಾಣಬಿಟ್ಟಳು

ಇತ್ತ ತುಮಕೂರು ಜಿಲ್ಲೆಯಲ್ಲಿ ರಾತ್ರಿ ಧಾರಕಾರ ಸುರಿದ ಮಳೆ ರಭಸಕ್ಕೆ ಕೆರೆ, ಕಟ್ಟೆಗಳು ಕೋಡಿ ಬಿದ್ದಿದ್ದವು. ತುಮಕೂರು ಜಿಲ್ಲೆಯ ಕೊರಟಗೆರೆ ಬಳಿಯಿರುವ ಜಂಪೇನಹಳ್ಳಿ ಕೆರೆ ನೀರಿಲ್ಲದೇ ಬತ್ತಿಹೋಗಿತ್ತು. ಇದೀಗ ತುಂಬಿ ಹರಿಯುತ್ತಿದ್ದು, ರೈತರಲ್ಲಿ ಮಂದಹಾಸ ಮೂಡಿದೆ.

ಇತ್ತ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ಕೃಷ್ಣಾ ನದಿ ಉಗಮ ಸ್ಥಾನ ಮಹಾಬಲೇಶ್ವರದಲ್ಲಿ ಭಾರೀ ಮಳೆ ಹಿನ್ನೆಲೆ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭವಾಗಿದೆ. ಈ ವರ್ಷದ ಮೊದಲ ಒಳಹರಿವು 1,768 ಕ್ಯೂಸೇಕ್ ದಾಖಲಾಗಿದ್ದು, ಕೃಷ್ಣಾ ನದಿ ಪಾತ್ರದ ಜನರು ಸಂತಸಗೊಂಡಿದ್ದಾರೆ. ಕಳೆದ ವರ್ಷ ಜೂನ್ ಕಳೆದರು ಒಳಹರಿವು ಇರಲಿಲ್ಲ. ಈ ವರ್ಷ ಜೂನ್ ಮೊದಲ ವಾರವೇ ಒಳಹರಿವು ಆರಂಭವಾಗಿದೆ.

ಗ್ರಾಮಕ್ಕೆ ರಭಸವಾಗಿ ನುಗ್ಗಿದ ನೀರು

ಚಿತ್ರದುರ್ಗ ಜಿಲ್ಲೆಯಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಕೂನಬೇವು ಗ್ರಾಮದ ಮನೆಗಳಿಗೆ ನೀರು ನುಗ್ಗಿದೆ. ವರುಣ ಅಬ್ಬರಕ್ಕೆ ಕೊನಬೇವು ಗ್ರಾಮ ಜಲಾವೃತಗೊಂಡಿತ್ತು. ಗ್ರಾಮದ ರಸ್ತೆಯಲ್ಲಿ ನೀರು ನದಿಯಂತೆ ಹರಿದಿತ್ತು. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿತ್ತು. ಚಿತ್ರದುರ್ಗ ತಾಲೂಕಿನ ಬೆಳಘಟ್ಟ ಗ್ರಾಮದಲ್ಲಿ ನೀರಿನಲ್ಲಿ ಬಸ್ ಸಿಲುಕಿದ ಘಟನೆಯು ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Mysore News: ಅಧ್ಯಯನದಲ್ಲಿ ಆನಂದ ಕಾಣುವವರು ಮಾತ್ರ ಉನ್ನತ ಮಟ್ಟದ ಜ್ಞಾನಾರ್ಜನೆ ಮಾಡಲು ಸಾಧ್ಯ: ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ

Mysore News: ಮಧ್ವರ ಮಹೋನ್ನತ ಕೃತಿಗಳ ಸಾರಸಂಗ್ರಹವಾದ ಶ್ರೀಮನ್ ನ್ಯಾಯ ಸುಧಾ ಮತ್ತು ಶ್ರೀ ವ್ಯಾಸತೀರ್ಥರ ತತ್ವ ಚಂದ್ರಿಕಾ ಗ್ರಂಥಗಳ ಅಧ್ಯಯನವು ವಿದ್ಯಾರ್ಥಿಯ ಸರ್ವತೋಮುಖ ಅಭಿವೃದ್ಧಿಗೆ ನೆರವಾಗಲಿದೆ ಎಂದು ಶ್ರೀ ಭಂಡಾರ ಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

VISTARANEWS.COM


on

Shri Bhandara Keri Mutt Shri Vidyesh Theertha Swamiji ashirvachan
Koo

ಮೈಸೂರು: ಅಧ್ಯಯನದಲ್ಲಿ ಆನಂದ ಕಾಣುವವರು ಮಾತ್ರ ಉನ್ನತ ಮಟ್ಟದ ಜ್ಞಾನಾರ್ಜನೆ ಮಾಡಲು ಸಾಧ್ಯ ಎಂದು ಶ್ರೀ ಭಂಡಾರ ಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ (Mysore News) ತಿಳಿಸಿದರು.

ಸೋಸಲೆ ಶ್ರೀ ವ್ಯಾಸರಾಜ ಮಹಾ ಸಂಸ್ಥಾನ ಮತ್ತು ಶ್ರೀ ವ್ಯಾಸ ತೀರ್ಥ ವಿದ್ಯಾಪೀಠದ ಶ್ರೀಮನ್ ನ್ಯಾಯ ಸುಧಾ ಮಂಗಳ ಮಹೋತ್ಸವದಲ್ಲಿ ಗುರುವಾರ ಆಯೋಜಿಸಿದ್ದ ವಿದ್ವತ್ ಸಭೆಯ ಸಾನ್ನಿಧ್ಯ ವಹಿಸಿ, ಶ್ರೀಗಳು ಆಶೀರ್ವಚನ ನೀಡಿದರು.

ಕಲಿಕೆ ವಿಷಯದಲ್ಲಿ ವಿದ್ಯಾರ್ಥಿಗಳು ಎಂದೂ ತೃಪ್ತರಾಗಬಾರದು. ವಿವಿಧ ಗ್ರಂಥಗಳ ಅಧ್ಯಯನ, ಅವಲೋಕನ, ಪರಾಮರ್ಶನ ಮತ್ತು ಚಿಂತನೆಗಳಿಂದ ಜ್ಞಾನವನ್ನು ವಿಸ್ತಾರ ಮಾಡಿಕೊಳ್ಳುತ್ತಿರಬೇಕು. ಕೇವಲ ಪರೀಕ್ಷೆಗಾಗಿ ಓದುವುದು ಒಂದು ಹಂತದ ಸಾಧನೆ. ಆದರೆ ಸುಧಾ ಸೇರಿ ಆಚಾರ್ಯ ಮಧ್ವರ ಗ್ರಂಥಗಳ ಅಧ್ಯಯನ ಎಂಬುದು ಬದುಕಿನ ಅವಿಭಾಜ್ಯ ಅಂಗವಾಗಬೇಕು. ಆಚಾರ್ಯ ಮಧ್ವರು ನೀಡಿದ ಪ್ರತಿಯೊಂದು ಸಂದೇಶವೂ ಎಲ್ಲ ದೇಶ ಕಾಲಕ್ಕೆ ದಿಕ್ಸೂಚಿಯಾಗಿವೆ ಎಂದರು.

ಇದನ್ನೂ ಓದಿ: Unemployment Rate : ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಒಂದೇ ವರ್ಷದಲ್ಲಿ ಶೇಕಡಾ 4 ಇಳಿಕೆ; ವರದಿ

ಮಧ್ವರ ಮಹೋನ್ನತ ಕೃತಿಗಳ ಸಾರಸಂಗ್ರಹವಾದ ಶ್ರೀಮನ್ ನ್ಯಾಯ ಸುಧಾ ಮತ್ತು ಶ್ರೀ ವ್ಯಾಸತೀರ್ಥರ ತತ್ವ ಚಂದ್ರಿಕಾ ಗ್ರಂಥಗಳ ಅಧ್ಯಯನವು ವಿದ್ಯಾರ್ಥಿಯ ಸರ್ವತೋಮುಖ ಅಭಿವೃದ್ಧಿಗೆ ನೆರವಾಗಲಿದೆ ಎಂದು ತಿಳಿಸಿದರು.

ಸೋಸಲೆ ಶ್ರೀ ವಿದ್ಯಾ ಶ್ರೀಶ ತೀರ್ಥ ಸ್ವಾಮೀಜಿಯವರು ಜ್ಞಾನ ಪ್ರಸರಣ ಮತ್ತು ಶಾಸ್ತ್ರ ವಿದ್ಯೆ ಕಲಿಕೆ ನಿಟ್ಟಿನಲ್ಲಿ ಮಹತ್ತರವಾದ ಸಾಧನೆಯನ್ನು ಮಾಡಿದ್ದಾರೆ. ನೂರಾರು ಜನರಿಗೆ ಪಾಠ ಹೇಳಿರುವ ಅವರು ಈ ಬಾರಿ ನಾಲ್ಕು ವಿದ್ಯಾರ್ಥಿಗಳನ್ನು ಸುಧಾ ಪಂಡಿತರನ್ನಾಗಿಸಿ ಸಮಾಜಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡುವಲ್ಲಿ ಅಹರ್ನಿಶಿ ಶ್ರಮಿಸಿರುವುದು ಶ್ಲಾಘನೀಯ ಎಂದು ಶ್ರೀಗಳು ತಿಳಿಸಿದರು.

ಎತ್ತರಕ್ಕೆ ಬೆಳೆಯಿರಿ

ಬೆಂಗಳೂರಿನ ಭುವನಗಿರಿ ಆಶ್ರಮದ ಶ್ರೀ ಸುವಿದ್ಯೇಂದ್ರ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ, ಸಮುದ್ರದಷ್ಟು ಆಳಕ್ಕೆ ಪರ್ವತದಷ್ಟು ಎತ್ತರಕ್ಕೆ ವ್ಯಾಸತೀರ್ಥ ವಿದ್ಯಾಪೀಠದ ವಿದ್ಯಾರ್ಥಿಗಳ ಕೀರ್ತಿ ಬೆಳಗಲಿ ಎಂದು ಹೇಳಿದರು.

ಇದನ್ನೂ ಓದಿ: Uttara Kannada News: ಉ.ಕ ಜಿಲ್ಲೆ ಬಿಜೆಪಿಯ ಗಟ್ಟಿನೆಲ ಎಂಬುದು ಮತ್ತೊಮ್ಮೆ ಸಾಬೀತು: ಹರಿಪ್ರಕಾಶ್‌ ಕೋಣೆಮನೆ

ಅದಮಾರು ಮಠದ ಶ್ರೀ ವಿಶ್ವ ಪ್ರಿಯ ತೀರ್ಥ ಸ್ವಾಮೀಜಿ ಅನುಗ್ರಹ ಸಂದೇಶ ನೀಡಿ, ಜ್ಞಾನಕ್ಕೆ ಸಮನಾದದು ಜಗತ್ತಿನಲ್ಲಿ ಯಾವುದೂ ಇಲ್ಲ . ಹಾಗಾಗಿ ವಿದ್ವತ್ತನ್ನು ಪಡೆಯಲು ಶ್ರಮ ಹಾಕಿದರೆ ಭವಿಷ್ಯದಲ್ಲಿ ಸುಖ ಸಂಪತ್ತು ಅರಸಿ ಬರುತ್ತವೆ ಎಂದರು.

ಉತ್ತರಾದಿ ಮಠದ ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ, ಸೋಸಲೆ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಅವರು ವಿದ್ಯಾರ್ಥಿಗಳ ಶಾಸ್ತ್ರ ಜ್ಞಾನ ಪರೀಕ್ಷೆ ಮಾಡಿದರು.

ಪ್ರಣವ ಆಚಾರ್ಯರಿಂದ ಸಮರ್ಥ ಉತ್ತರ

ವಿದ್ಯಾರ್ಥಿ ಪ್ರಣವ ಆಚಾರ್ಯ ಅವರು ಶ್ರೀಮನ್ ನ್ಯಾಯ ಸುಧಾ ತಾತ್ಪರ್ಯ ಚಂದ್ರಿಕಾ ಮತ್ತು ನ್ಯಾಯಾಮೃತ ಗ್ರಂಥಗಳ ಮೇಲಿನ ಪ್ರಶ್ನೆಗಳಿಗೆ ಸಮರ್ಥ ಉತ್ತರವನ್ನು ನೀಡಿ ಗಮನ ಸೆಳೆದರು.

ಇದನ್ನೂ ಓದಿ: World Environment Day: ಬೆಂಗಳೂರಿನಲ್ಲಿ ಎನ್‌ಸಿಸಿ ತಂಡದಿಂದ ವಿಶೇಷ ಪರಿಸರ ಜಾಗೃತಿ ಕಾರ್ಯಕ್ರಮ

ಈ ಸಂದರ್ಭದಲ್ಲಿ ಹಿರಿಯ ವಿದ್ವಾಂಸ ಹರಿದಾಸ ಭಟ್, ಮುಂಬೈ ವಿದ್ಯಾಪೀಠದ ಕುಲಪತಿ ಮಾಹುಲಿ ವಿದ್ಯಾಸಿಂಹಾಚಾರ್ಯ, ಬೆಂಗಳೂರಿನ ಜಯತೀರ್ಥ ವಿದ್ಯಾಪೀಠದ ಕುಲಪತಿ ರಂಗಾಚಾರ್ಯ, ಪ್ರಾಚಾರ್ಯ ವಿದ್ಯಾಧೀಶ ಆಚಾರ್ಯ ಗುತ್ತಲ, ಪಂಡಿತ ಪ್ರಹ್ಲಾದಾಚಾರ್ಯ, ಮಾತರಿಶ್ವಾಚಾರ್ಯ, ಡಿ.ಪಿ. ಅನಂತಾಚಾರ್ಯ, ಡಿ.ಪಿ. ಮಧುಸೂದ‌ನಾಚಾರ್ಯ. ಡಾ. ಶ್ರೀನಿಧಿ ಪ್ಯಾಟಿ ಇದ್ದರು.

Continue Reading
Advertisement
AFG vs NZ
ಕ್ರಿಕೆಟ್20 mins ago

AFG vs NZ: ಅಫಘಾನಿಸ್ತಾನ ವಿರುದ್ಧ ಹೀನಾಯ ಸೋಲು ಕಂಡ ನ್ಯೂಜಿಲ್ಯಾಂಡ್​

Election Results 2024
ಕರ್ನಾಟಕ42 mins ago

Election Results 2024: ಡಿ.ಕೆ. ಸುರೇಶ್ ಸೋಲಿಗೆ ಸಿದ್ದರಾಮಯ್ಯ ಆ್ಯಂಡ್ ಟೀಮ್ ಕಾರಣ: ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ

Toyota Kirloskar Motor Inauguration of Toyota Used Car Store by TKM in New Delhi
ದೇಶ48 mins ago

Toyota Kirloskar Motor: ದೆಹಲಿಯಲ್ಲಿ ಟಿಕೆಎಂನ ʼಟೊಯೊಟಾ ಯೂಸ್ಡ್ ಕಾರ್ʼ ಮಳಿಗೆಗೆ ಚಾಲನೆ

Niveditha Gowda chandan divorce main reason told by advocate
ಸ್ಯಾಂಡಲ್ ವುಡ್50 mins ago

Niveditha Gowda: ಚಂದನ್‌-ನಿವೇದಿತಾ ಡಿವೋರ್ಸ್‌ ಬಗ್ಗೆ ಅಸಲಿ ಸತ್ಯ ಬಯಲು ಮಾಡಿದ ವಕೀಲೆ!

Job Alert
ಉದ್ಯೋಗ53 mins ago

Job Alert: ಇಂದಿರಾ ಗಾಂಧಿ ಸೆಂಟರ್ ಫಾರ್ ಅಟಾಮಿಕ್ ರಿಸರ್ಚ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

assault case
ಬೆಂಗಳೂರು1 hour ago

Assault Case : ಅರೆ ಬೆತ್ತಲಾಗಿ ಯುವಕನಿಗೆ ನಡು ರಸ್ತೆಯಲ್ಲೆ ಹಿಗ್ಗಾಮುಗ್ಗಾ ಥಳಿತ; ಹಲ್ಲೆಕೋರರು ಅರೆಸ್ಟ್‌

Kumar Bangarappa attack by Shivarajkumar Supporters
ರಾಜಕೀಯ1 hour ago

Kumar Bangarappa: ಗೀತಾ ಸೋತ ಹಿನ್ನೆಲೆಯಲ್ಲಿ ಗೇಲಿ ಮಾಡಿದ್ದ ಕುಮಾರ್ ಬಂಗಾರಪ್ಪ ಮನೆಗೆ ಶಿವಣ್ಣ ​ಅಭಿಮಾನಿಗಳ ಮುತ್ತಿಗೆ

Pakistan
ವಿದೇಶ1 hour ago

Pakistan: ಇಡೀ ಜಗತ್ತೇ ಮೋದಿಗೆ ಅಭಿನಂದಿಸಿದರೂ ಪಾಕಿಸ್ತಾನ ಮಾತ್ರ ಇನ್ನೂ Congratulations ಎಂದಿಲ್ಲ!

Valmiki Corporation Scam
ಪ್ರಮುಖ ಸುದ್ದಿ1 hour ago

Valmiki Corporation Scam: ಸಾಕ್ಷ್ಯ ನಾಶ ಆರೋಪ; ಮೇ 24ರಂದು ನಾನು ಕಚೇರಿಗೆ ಹೋಗಿಯೇ ಇಲ್ಲ ಎಂದ ಸಚಿವ ಶರಣ ಪ್ರಕಾಶ್ ಪಾಟೀಲ್

Gold Rate Today
ಚಿನ್ನದ ದರ2 hours ago

Gold Rate Today: ಆಭರಣ ಖರೀದಿಗೆ ಇದು ಸಕಾಲ; ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ20 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ22 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು7 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌