ಅರಬ್ಬಿ ಸಮುದ್ರದಲ್ಲಿ ಒಎನ್‌ಜಿಸಿ ಹೆಲಿಕಾಪ್ಟರ್‌ ತುರ್ತು ಜಲಸ್ಪರ್ಶ , ನಾಲ್ವರು ದುರ್ಮರಣ, ಐವರ ರಕ್ಷಣೆ - Vistara News

ದೇಶ

ಅರಬ್ಬಿ ಸಮುದ್ರದಲ್ಲಿ ಒಎನ್‌ಜಿಸಿ ಹೆಲಿಕಾಪ್ಟರ್‌ ತುರ್ತು ಜಲಸ್ಪರ್ಶ , ನಾಲ್ವರು ದುರ್ಮರಣ, ಐವರ ರಕ್ಷಣೆ

ಮುಂಬಯಿ ಸಮುದ್ರದಲ್ಲಿ ಸಂಭವಿಸಿದ ಹೆಲಿಕಾಪ್ಟರ್‌ ದುರಂತದಲ್ಲಿ ನಾಲ್ವರು ಒಎನ್‌ಜಿಸಿ ಸಿಬ್ಬಂದಿಗಳು ಮೃತಪಟ್ಟಿದ್ದಾರೆ. ತಾಂತ್ರಿಕ ಸಮಸ್ಯೆ ವೇಳೆ ಹೆಲಿಕಾಪ್ಟರ್‌ ನೀರಿನಲ್ಲಿ ಲ್ಯಾಂಡ್‌ ಆಗಲು ಯತ್ನಿಸಿತ್ತು.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಏಳು ಪ್ರಯಾಣಿಕರು ಮತ್ತು ಇಬ್ಬರು ಪೈಲಟ್‌ಗಳಿದ್ದ ಒಎನ್‌ಜಿಸಿ ಹೆಲಿಕಾಪ್ಟರ್‌ ಒಂದು ಮುಂಬಯಿ ಸಮೀಪದ ಅರಬ್ಬೀ ಸಮುದ್ರದಲ್ಲಿ ಮಂಗಳವಾರ ತುರ್ತು ಜಲ ಸ್ಪರ್ಶ ಮಾಡುವಾಗ ಉಂಟಾದ ದುರಂತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಉಳಿದ ಐವರನ್ನು ರಕ್ಷಿಸಲಾಗಿದೆ.

ಈ ವಿಮಾನ ಸಮುದ್ರ ಮಧ್ಯದಲ್ಲಿ ಅದಕ್ಕಾಗಿಯೇ ನಿರ್ಮಿಸಲಾಗಿದ್ದ ರನ್‌ವೇಯಲ್ಲಿ ಇಳಿಯುವ ವೇಳೆ ತಾಂತ್ರಿಕ ಸಮಸ್ಯೆ ಉಂಟಾಗಿ ಸಮುದ್ರ ನೀರಿನಲ್ಲೇ ಇಳಿಯಬೇಕಾಯಿತು ಎನ್ನಲಾಗಿದೆ. ಈ ವೇಳೆ ಉಂಟಾದ ಅವಘಡದಲ್ಲಿ ಎಲ್ಲ ಒಂಬತ್ತು ಮಂದಿ ಅಪಾಯಕ್ಕೆ ಸಿಲುಕಿದ್ದರು. ಅವರಲ್ಲಿ ಐವರನ್ನು ಭಾರತೀಯ ನೌಕಾಪಡೆ ಮತ್ತು ಕೋಸ್ಟ್‌ ಗಾರ್ಡ್‌ ನಡೆಸಿದ ತುರ್ತು ಕಾರ್ಯಾಚರಣೆಯಲ್ಲಿ ಜೀವಂತವಾಗಿ ರಕ್ಷಿಸಲಾಯಿತು. ಆದರೆ, ಒಎನ್‌ಜಿಸಿಯ ಮೂವರು ಸಿಬ್ಬಂದಿ ಸೇರಿ ನಾಲ್ವರು ಆಸ್ಪತ್ರೆಗೆ ಕರೆ ತರುವ ವೇಳೆ ಮೃತಪಟ್ಟಿದ್ದಾರೆ. ಮೃತರನ್ನು ಮುಕೇಶ್‌ ಪಟೇಲ್‌, ವಿಜಯ್‌ ಮಂಡ್ಲೋಯ್‌, ಸತ್ಯಂವದ ಪಾತ್ರ ಮತ್ತು ಸಂಜು ಫ್ರಾನ್ಸಿಸ್‌ ಎಂದು ಗುರುತಿಸಲಾಗಿದೆ.

ಘಟನೆಯ ವಿವರ
ಒಎನ್‌ಜಿಸಿಗೆ ಸೇರಿದ ಈ ಹೆಲಿಕಾಪ್ಟರ್‌ ಒಎನ್‌ಜಿಸಿಯ ಆರು ಸಿಬ್ಬಂದಿ, ಖಾಸಗಿ ಕಂಪನಿಯೊಂದ ಉದ್ಯೋಗಿ ಹಾಗೂ ಇಬ್ಬರು ಪೈಲಟ್‌ಗಳನ್ನು ಹೊತ್ತು ಸಾಗುತ್ತಿತ್ತು. ಆಗ ತಾಂತ್ರಿಕ ಸಮಸ್ಯೆ ಉಂಟಾಗಿ ಮುಂಬಯಿ ಸಮೀಪ ಸಮುದ್ರದಲ್ಲಿರುವ ಸಾಗರ್‌ ಕಿರಣ್‌ ರಿಗ್‌ ಬಳಿ ಸಮುದ್ರಕ್ಕೆ ಬಿತ್ತು ಎನ್ನಲಾಗಿದೆ.

ಒಎನ್‌ಜಿಸಿಯ ತೈಲ ಸಂಸ್ಕರಣಾ ಸ್ಥಾವರಗಳು ತೀರದಿಂದ ತುಂಬಾ ದೂರದಲ್ಲಿರುತ್ತವೆ. ಒಎನ್‌ಜಿಸಿಯು ಸಮುದ್ರ ಮಧ್ಯ ಭಾಗದಲ್ಲಿ ಹಲವು ರಿಗ್‌ ಮತ್ತು ಸ್ಥಾವರಗಳನ್ನು ಹೊಂದಿದೆ. ಇಲ್ಲಿ ಕೆಲವು ಸ್ಥಾವರಗಳಲ್ಲಿ ಕಚ್ಚಾ ತೈಲ ಸಂಸ್ಕರಿಸಿ ತೈಲ ಉತ್ಪಾದನೆ ನಡೆಯುತ್ತಿದ್ದರೆ, ಉಳಿದವುಗಳಲ್ಲಿ ತೈಲ ಸಂಗ್ರಹವಿರುತ್ತದೆ.

ಅಲ್ಲಿಗೆ ಹೆಲಿಕಾಪ್ಟರ್‌ ಮೂಲಕ ಸಾಗುವುದು ಸಾಮಾನ್ಯ ದಿನಚರಿ. ಇದರಲ್ಲಿ ಸಿಬ್ಬಂದಿಯನ್ನು ಮತ್ತು ಅಗತ್ಯ ಸಲಕರಣೆಗಳನ್ನು ಸಾಗಿಸುವ ಪ್ರಕ್ರಿಯೆ ನಡೆಯುತ್ತಿರುತ್ತದೆ. ಮಂಗಳವಾರವೂ ಅದೇ ರೀತಿ ಸಿಬ್ಬಂದಿಯನ್ನು ಹೊತ್ತು ಸಾಗುತ್ತಿದ್ದ ಈ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.

ಸಾಮಾನ್ಯವಾಗಿ ಈ ರೀತಿ ಸಾಗರದ ಭಾಗದಲ್ಲಿ ಕಾರ್ಯಾಚರಿಸುವ ಹೆಲಿಕಾಪ್ಟರ್‌ಗಳಿಗೆ ತುರ್ತು ಸಂದರ್ಭಕ್ಕೆ ಬೇಕು ಎಂಬ ಕಾರಣಕ್ಕೆ ಫ್ಲೋಟರ್‌ಗಳನ್ನು ಅಳವಡಿಸಲಾಗಿರುತ್ತದೆ. ಈ ಹೆಲಿಕಾಪ್ಟರ್‌ಗೂ ಅಂಥಹುದೇ ಫ್ಲೋಟರ್‌ಗಳಿದ್ದು ಅದನ್ನು ಬಳಸಿಕೊಂಡು ಸಮುದ್ರದಲ್ಲಿ ಇಳಿಸಲಾಗಿದೆ. ಆದರೆ, ಇದು ತಾತ್ಕಾಲಿಕ ಮಾತ್ರ. ತುಂಬ ಹೊತ್ತು ಫ್ಲೋಟರ್‌ಗಳ ಮೇಲೆ ಹೆಲಿಕಾಪ್ಟರ್‌ಗಳನ್ನು ನಿಲ್ಲಿಸಲು ಆಗುವುದಿಲ್ಲ. ಜತೆಗೆ ಸಮುದ್ರಕ್ಕೆ ಅಪ್ಪಳಿಸಿದ ಹೊಡೆತ ಜೋರಾಗಿತ್ತೆಂದು ನಂಬಲಾಗಿದೆ.

ದುರಂತ ಸಂಭವಿಸಿದ ಮಾಹಿತಿ ತಿಳಿಯುತ್ತಲೇ ಕೋಸ್ಟ್‌ ಗಾರ್ಡ್‌ ಮತ್ತು ನೌಕಾಪಡೆಯ ವಿಮಾನಗಳು ಕಾರ್ಯಾಚರಣೆಗೆ ಇಳಿದವು. ಕೂಡಲೇ ಗಾಯಾಳುಗಳನ್ನು ಪವನ್‌ ಹಂಸ್‌ ವಾಯುನೆಲೆಗೆ ಕರೆ ತರಲಾಯಿತು. ಅಲ್ಲಿ ಸಿದ್ಧವಾಗಿ ನಿಂತಿದ್ದ ನಾಲ್ಕು ಆಂಬ್ಯುಲೆನ್ಸ್‌ಗಳ ಮೂಲಕ ನಾನಾವತಿ ಆಸ್ಪತ್ರೆಗೆ ತರಲಾಯಿತು. ಇಲ್ಲಿ ನಾಲ್ವರು ಮೃತಪಟ್ಟಿದ್ದಾರೆಂದು ಘೋಷಿಸಲಾಯಿತು. ಮುಂಬಯಿಯ ಹಿರಿಯ ಪೊಲೀಸ್‌ ಅಧಿಕಾರಿಗಳು ಘಟನೆಯನ್ನು ದೃಢೀಕರಿಸಿದ್ದು, ಆಕಸ್ಮಿಕ ಅವಘಡ ಪ್ರಕರಣ ದಾಖಲಾಗಿದೆ.

ಹಿಂದಿನ ಸುದ್ದಿ| 7 ಪ್ರಯಾಣಿಕರು, ಇಬ್ಬರು ಪೈಲಟ್‌ಗಳಿದ್ದ ಹೆಲಿಕಾಪ್ಟರ್‌ ಅರಬ್ಬಿ ಸಮುದ್ರದಲ್ಲಿ ತುರ್ತು ʻಜಲಸ್ಪರ್ಶʼ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Pralhad Joshi: ಮಾತೃಭಾಷೆ, ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಚಿವ ಪ್ರಲ್ಹಾದ್‌ ಜೋಶಿ

Pralhad Joshi: ಸೋಮವಾರ ನಡೆದ 18ನೇ ಲೋಕಸಭೆ ಮೊದಲ ಅಧಿವೇಶನದಲ್ಲಿ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ನೂತನ ಸಚಿವ ಪ್ರಲ್ಹಾದ್‌ ಜೋಶಿ ಅವರು ಮಾತೃಭಾಷೆಯಲ್ಲೇ ಪ್ರಮಾಣ ವಚನ ಸ್ವೀಕರಿಸಿ ಸಂಸತ್‌ನಲ್ಲಿ ಕನ್ನಡ ಭಾಷೆಯ ಹಿರಿಮೆಯನ್ನು ಎತ್ತಿ ಹಿಡಿದರು.

VISTARANEWS.COM


on

union Minister Pralhad Joshi took oath in the name of God in his mother tongue
Koo

ನವದೆಹಲಿ: ಸಂಸತ್‌ ಭವನದಲ್ಲಿ ಸೋಮವಾರ (ಜೂನ್‌ 24) ನಡೆದ 18ನೇ ಲೋಕಸಭೆ ಮೊದಲ ಅಧಿವೇಶನದಲ್ಲಿ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ನೂತನ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi), ಮಾತೃಭಾಷೆಯಲ್ಲೇ ಪ್ರಮಾಣ ವಚನ ಸ್ವೀಕರಿಸಿ, ಸಂಸತ್‌ನಲ್ಲಿ ಕನ್ನಡತನ ಎತ್ತಿ ಹಿಡಿದರು.

2024ರ ಲೋಕಸಭೆ ಚುನಾವಣೆ ಬಳಿಕ ನೂತನ ಸಂಸತ್ ಭವನದಲ್ಲಿ ಸೋಮವಾರ ಮೊದಲ ಬಾರಿ ಆಯೋಜಿಸಿದ್ದ ಅಧಿವೇಶನದ ವೇಳೆ ಹಂಗಾಮಿ ಸ್ಪೀಕರ್ ಭರ್ತೃಹರಿ ಮಹ್ತಾಬ್ ಪ್ರಮಾಣ ವಚನ ಬೋಧಿಸಿದರು.

ಈ ವೇಳೆ, ಧಾರವಾಡ ಲೋಕಸಭೆ ಕ್ಷೇತ್ರದಿಂದ ಸತತ 5ನೇ ಬಾರಿ ಬಿಜೆಪಿಯಿಂದ ಕಣಕ್ಕಿಳಿದು ಐತಿಹಾಸಿಕ ಗೆಲುವು ಸಾಧಿಸಿದ್ದ ಪ್ರಲ್ಹಾದ್‌ ಜೋಶಿ, ಸಂಸತ್‌ನಲ್ಲಿ ಪ್ರಧಾನಿ ಮೋದಿ ಸಂಗಡ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದರು.

ಇದನ್ನೂ ಓದಿ: R Ashok: ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್‌ ಕ್ಷಮೆ ಕೋರಲಿ, ರಾಹುಲ್‌ ಗಾಂಧಿ ತಲೆಬಾಗಲಿ; ಆರ್‌. ಅಶೋಕ್‌

ಪ್ರಸಕ್ತ ಅಧಿವೇಶನದಲ್ಲಿ “ಪ್ರಲ್ಹಾದ್‌ ವೆಂಕಟೇಶ ಜೋಶಿಯಾದ ನಾನು” ಎಂದು ಕನ್ನಡದಲ್ಲೇ ಮಾತನಾಡುತ್ತ, ಪ್ರತಿಜ್ಞಾ ಪತ್ರ ಓದಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ದೇಶದ ಅಖಂಡತೆ, ಸಾರ್ವಭೌಮತ್ವವನ್ನು ಎತ್ತಿ ಹಿಡಿಯುವ ಜತೆಗೆ ನನ್ನ ಕರ್ತವ್ಯವನ್ನು ಅತ್ಯಂತ ಪ್ರಾಮಾಣಿಕವಾಗಿ ಶ್ರದ್ಧೆ ಮತ್ತು ನಿಷ್ಠೆಯಿಂದ ನಿರ್ವಹಿಸುವುದಾಗಿ ಪ್ರಮಾಣಗೈದರು.

ಇದನ್ನೂ ಓದಿ: Job Alert: ಗಮನಿಸಿ; GTTCಯಲ್ಲಿನ ಹುದ್ದೆಗೆ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ; ಇಲ್ಲಿದೆ ಪರಿಷ್ಕೃತ ವೇಳಾಪಟ್ಟಿ

ಪ್ರಧಾನಿ ಮೋದಿ ಸಂಪುಟದಲ್ಲಿ ಸತತ ಎರಡನೇ ಬಾರಿ ಸಚಿವರಾಗಿರುವ ಪ್ರಲ್ಹಾದ್‌ ಜೋಶಿ ಅವರು, ಬಿಜಿಪಿಯ ಹಿರಿಯ ನಾಯಕರಲ್ಲಿ ಒಬ್ಬರಾಗಿ ಪ್ರಮಾಣ ವಚನ ಸ್ವೀಕಾರಕ್ಕೆ ಮೊದಲು ದೇವರ ಪೂಜೆಗೈದು ವಿಶೇಷತೆ ಮೆರೆದರು. ಇನ್ನು, ಸಂಸತ್ ಭವನದಲ್ಲಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ ಕನ್ನಡಾಭಿಮಾನದ ಜತೆಗೆ ಮಾತೃಭಾಷಾ ವೈಶಿಷ್ಟ್ಯ ಪ್ರದರ್ಶಿಸಿದರು.

Continue Reading

ದೇಶ

Hardeep Singh Nijjar: ಪಾಕಿಸ್ತಾನಕ್ಕೂ ಭೇಟಿ ಕೊಟ್ಟಿದ್ದನಂತೆ ನಿಜ್ಜರ್‌; ಖಲಿಸ್ತಾನಿ ಉಗ್ರನ ಬಗ್ಗೆ ಮತ್ತಷ್ಟು ಭೀಕರ ಸಂಗತಿ ಬಯಲು

Hardeep Singh Nijjar: 2013ರಲ್ಲಿ ನಿಜ್ಜರ್ ಪಾಕಿಸ್ತಾನಕ್ಕೆ ತೆರಳಿ ತಾರಾ ಜತೆ ಕಾಲ ಕಳೆದಿದ್ದ. ಪಾಕಿಸ್ತಾನದ ಗುರುದ್ವಾರದ ಮೇಲ್ಭಾಗದಲ್ಲಿ ತಾರಾ ಜೊತೆ ನಿಜ್ಜರ್ ಕಾಣಿಸಿಕೊಂಡಿರುವ ಫೊಟೋಗಳು ಸಾರ್ವಜನಿಕ ಡೊಮೇನ್‌ನಲ್ಲಿ ಲಭ್ಯವಿವೆ. ತಾರಾ, ತನ್ನ ನಂತರ KTF ಅನ್ನು ವಹಿಸಿಕೊಳ್ಳಲು ನಿಜ್ಜರ್‌ನನ್ನು ನೇಮಿಸಲು ಮುಂದಾಗಿದ್ದ. ಆದರೆ, ನಿಜ್ಜರ್ ಈ ಪ್ರಸ್ತಾಪವನ್ನು ನಿರಾಕರಿಸಿದ್ದ. ವರದಿ ಹೇಳಿದೆ. ನಂತರ, 2015 ರಲ್ಲಿ, ಅವರು ಕೆನಡಾದಲ್ಲಿ ಭಯೋತ್ಪಾದಕ ಸಂಘಟನೆಯ ಉಸ್ತುವಾರಿ ವಹಿಸುವಷ್ಟು ಬಲಿಷ್ಟವಾಗಿ ಬೆಳೆದಿದ್ದ.

VISTARANEWS.COM


on

Hardeep Singh Nijjar
Koo

ನವದೆಹಲಿ: ಖಲಿಸ್ತಾನಿ ಉಗ್ರ, ಖಲಿಸ್ತಾನಿ ಟೈಗರ್ ಫೋರ್ಸ್‌ನ (Khalistani Tiger Force) ಹರ್ದೀಪ್‌ ಸಿಂಗ್‌ ನಿಜ್ಜರ್‌ (Hardeep Singh Nijjar) ಹತ್ಯೆಗೀಡಾಗಿ ಒಂದು ವರ್ಷವಾದ ಹಿನ್ನೆಲೆಯಲ್ಲಿ ಕೆನಡಾ ಸರ್ಕಾರವು ಸಂಸತ್‌ನಲ್ಲಿಯೇ ಆತನಿಗೆ ‘ಮೌನಾಚರಣೆ’ ಮೂಲಕ ಗೌರವ ಸಲ್ಲಿಸಿದ ವಿಚಾರ ಪ್ರಪಂಚಾದ್ಯಂತ ಸುದ್ದಿಯಾಗಿತ್ತು. ಇದೀಗ ನಿಜ್ಜರ್‌ ಕುರಿತ ಶಾಕಿಂಗ್‌ ವಿಚಾರವೊಂದು ಬಯಲಾಗಿದೆ. ವರದಿ ಪ್ರಕಾರ ನಿಜ್ಜರ್‌ ಭಯೋತ್ಪಾದನಾ ಚಟುವಟಿಕೆಯಲ್ಲಿ ಭಾಗಿಯಾಗಿದ್ದು ಮಾತ್ರವಲ್ಲದೇ ಪಾಕಿಸ್ತಾನಕ್ಕೆ ಆಗಾಗ ಭೇಟಿ ಕೊಡುತ್ತಿದ್ದ. ಅಲ್ಲದೇ ಅಲ್ಲಿನ ಖಲಿಸ್ತಾನಿ ಉಗ್ರರನ್ನು ಭೇಟಿಯಾಗಿ ಭಾರತದ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಎಂಬ ವಿಚಾರ ಬಯಲಾಗಿದೆ.

ಹರ್ದೀಪ್ ಸಿಂಗ್ ನಿಜ್ಜರ್ ಅವರು 1970ರಲ್ಲಿ ಪಂಜಾಬ್‌ನಲ್ಲಿ ಜನಿಸಿದ್ದ. ಆರಂಭದಲ್ಲಿ ಕಾನೂನಿನ ಕೈಯಿಂದ ತಪ್ಪಿಸಿಕೊಂಡು ಓಡುತ್ತಿದ್ದ ಖಲಿಸ್ತಾನಿಗಳಿಗೆ ನಿಜ್ಜರ್‌ ಕುಟುಂಬ ಆಶ್ರಯ ಮತ್ತು ಆಹಾರವನ್ನು ನೀಡುತ್ತಿತ್ತು. ಅವರ ಒಡನಾಟದಿಂದಾಗಿ ನಿಜ್ಜರ್ ಖಲಿಸ್ತಾನಿ ಸಿದ್ಧಾಂತದಿಂದ ಹೆಚ್ಚು ಪ್ರಭಾವಿತನಾಗಿದ್ದ ಮತ್ತು ಪ್ರತ್ಯೇಕ ಸಿಖ್ ರಾಷ್ಟ್ರವನ್ನು ಬೆಂಬಲಿಸಲು ಶುರು ಮಾಡುತ್ತಾನೆ.

1995ರಲ್ಲಿ ಪಂಜಾಬ್‌ನ ಆಗಿನ ಮುಖ್ಯಮಂತ್ರಿ ಬಿಯಾಂತ್ ಸಿಂಗ್ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದ್ದರು. ಖಲಿಸ್ತಾನಿ ಭಯೋತ್ಪಾದಕರು ಸಿಎಂ ಮತ್ತು ಇತರ 17 ಮಂದಿಯನ್ನು ಹತ್ಯೆ ಮಾಡಿದ ನಂತರ, ಭಯೋತ್ಪಾದಕರು ಮತ್ತು ಅವರ ಬೆಂಬಲಿಗರನ್ನು ಹಿಡಿಯಲು ಕೇಂದ್ರ ಸರ್ಕಾರ ಬೆನ್ಹತ್ತಿತ್ತು. ಈ ಪ್ರಕರಣದಲ್ಲಿ ನಿಜ್ಜರ್‌ ಕೂಡ ಭಾಗಿಯಾಗಿದ್ದ. ಇದಾದ ಬಳಿಕ ಹಿಂದೂ ವ್ಯಕ್ತಿಯ ನಕಲಿ ಗುರುತನ್ನು ಬಳಸಿಕೊಂಡು ನಿಜ್ಜರ್ ಭಾರತವನ್ನು ತಪ್ಪಿಸಿಕೊಂಡು ಕೆನಡಾಕ್ಕೆ ಓಡಿಹೋಗಿದ್ದ. ಅವರ ಪಾಸ್‌ಪೋರ್ಟ್‌ನಲ್ಲಿ ರವಿ ಶರ್ಮಾ ಹೆಸರಿತ್ತು. ಹಿಂದೂ ವ್ಯಕ್ತಿಯಂತೆ ಕಾಣಲು ಮತ್ತು ಸಿಖ್ ಗುರುತನ್ನು ಮರೆಮಾಚಲು ಅವರು ತಮ್ಮ ಕೂದಲು ಮತ್ತು ಗಡ್ಡವನ್ನು ಟ್ರಿಮ್ ಮಾಡಿಕೊಂಡಿದ್ದ ಎಂದು ವರದಿಗಳು ಬಹಿರಂಗಪಡಿಸಿವೆ.

ಕೆನಡಾವನ್ನು ತಲುಪಿದ ನಂತರ, ಅವರು ಅಲ್ಲಿನ ಪೊಲೀಸರಿಂದ ಹಿಂಸಿಸಲ್ಪಟ್ಟಿದ್ದಾನೆ ಎಂದು ಹೇಳಿಕೊಂಡು ನಿರಾಶ್ರಿತರ ಸ್ಥಾನಮಾನವನ್ನು ಪಡೆಯಲು ಪ್ರಯತ್ನಿಸಿದ್ದ. ಬಳಿಕ ಆತ ಕೆನಡಾದಲ್ಲಿ ವಾಸಿಸುವುದನ್ನು ಮುಂದುವರೆಸಿದ್ದ. ಕೊನೆಗೆ ಅಲ್ಲಿನ ಪೌರತ್ವ ಪಡೆಯುವಲ್ಲಿ ಯಶಸ್ವಿ ಆಗಿದ್ದ. ಅಲ್ಲಿ ಕೆಲವು ಕಾಲ ಕಳೆದು ಅಲ್ಲಿ ಖಲಿಸ್ತಾನ್ ಕಮಾಂಡೋ ಫೋರ್ಸ್ ಎಂಬ ಭಯೋತ್ಪಾದನಾ ಗುಂಪನ್ನು ನಿರ್ವಹಿಸುತ್ತಿದ್ದ. 2013ರಲ್ಲಿ ನಿಜ್ಜರ್ ಪಾಕಿಸ್ತಾನಕ್ಕೆ ತೆರಳಿ ತಾರಾ ಜತೆ ಕಾಲ ಕಳೆದಿದ್ದ. ಪಾಕಿಸ್ತಾನದ ಗುರುದ್ವಾರದ ಮೇಲ್ಭಾಗದಲ್ಲಿ ತಾರಾ ಜೊತೆ ನಿಜ್ಜರ್ ಕಾಣಿಸಿಕೊಂಡಿರುವ ಫೊಟೋಗಳು ಸಾರ್ವಜನಿಕ ಡೊಮೇನ್‌ನಲ್ಲಿ ಲಭ್ಯವಿವೆ.

ತಾರಾ, ತನ್ನ ನಂತರ KTF ಅನ್ನು ವಹಿಸಿಕೊಳ್ಳಲು ನಿಜ್ಜರ್‌ನನ್ನು ನೇಮಿಸಲು ಮುಂದಾಗಿದ್ದ. ಆದರೆ, ನಿಜ್ಜರ್ ಈ ಪ್ರಸ್ತಾಪವನ್ನು ನಿರಾಕರಿಸಿದ್ದ. ವರದಿ ಹೇಳಿದೆ. ನಂತರ, 2015 ರಲ್ಲಿ, ಅವರು ಕೆನಡಾದಲ್ಲಿ ಭಯೋತ್ಪಾದಕ ಸಂಘಟನೆಯ ಉಸ್ತುವಾರಿ ವಹಿಸುವಷ್ಟು ಬಲಿಷ್ಟವಾಗಿ ಬೆಳೆದಿದ್ದ.

ಪ್ರಕರಣದ ಹಿನ್ನೆಲೆ

ಮಾಜಿ ಪ್ರಧಾನಿ ಇಂಧಿರಾ ಗಾಂಧಿ ಅವರ ಹತ್ಯೆಯನ್ನು ಕೆನಡಾದಲ್ಲಿರುವ ಖಲಿಸ್ತಾನಿಗಳು ಸಂಭ್ರಮಾಚರಣೆ ಮಾಡಿದ ಕೆಲವೇ ದಿನಗಳಲ್ಲಿ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ನನ್ನು ಕೆನಡಾದ ಸುರ‍್ರೆ ನಗರದಲ್ಲಿ ಕೊಲೆ ಮಾಡಲಾಗಿತ್ತು. ಪಂಜಾಬಿಗಳೇ ಹೆಚ್ಚಿರುವ ಸುರ‍್ರೆ ನಗರದ ಗುರುನಾನಕ್‌ ಸಿಖ್‌ ಗುರುದ್ವಾರದ ಬಳಿಕ ಖಲಿಸ್ತಾನಿ ಉಗ್ರನ ಹತ್ಯೆ ನಡೆದಿತ್ತು. ಪಂಜಾಬ್‌ನಲ್ಲಿ ಅರ್ಚಕರೊಬ್ಬರ ಕೊಲೆಗೆ ಪಿತೂರಿ ನಡೆಸಿರುವುದು, ಮೂಲಭೂತವಾದದ ಪ್ರಸರಣ ಸೇರಿ ನಾಲ್ಕು ಪ್ರಕರಣಗಳಲ್ಲಿ ಎನ್‌ಐಎ ಈತನ ವಿರುದ್ಧ ತನಿಖೆ ನಡೆಸುತ್ತಿದೆ. ಅಲ್ಲದೆ ಈತನ ಕುರಿತು ಮಾಹಿತಿ ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಕೂಡ ಎನ್‌ಐಎ ಘೋಷಿಸಿತ್ತು.

ಇದನ್ನೂ ಓದಿ: Manoj Kalyane: ಬಿಜೆಪಿ ಮುಖಂಡ, ಮಧ್ಯ ಪ್ರದೇಶ ಸಚಿವರ ಆಪ್ತನ ಹತ್ಯೆ; ಬೈಕ್‌ನಲ್ಲಿ ಬಂದು ಗುಂಡಿನ ಮಳೆಗೆರೆದ ದುಷ್ಕರ್ಮಿಗಳು

Continue Reading

ದೇಶ

JP Nadda: ರಾಜ್ಯಸಭೆ ಸದನ ನಾಯಕರಾಗಿ ಜೆ.ಪಿ. ನಡ್ಡಾ ಆಯ್ಕೆ; ಪಿಯೂಷ್‌ ಗೋಯಲ್‌ ಬದಲು ನೇಮಕ

JP Nadda: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಜೆ.ಪಿ. ನಡ್ಡಾ ಅವರ ಅವಧಿಯು ಇದೇ ತಿಂಗಳು ಮುಗಿಯಲಿದೆ. 2020ರಿಂದ ಬಿಜೆಪಿ ಅಧ್ಯಕ್ಷರಾಗಿರುವ ನಡ್ಡಾ ಅವರು ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲಿದ್ದಾರೆ. ಈಗ ಜೆ.ಪಿ. ನಡ್ಡಾ ಅವರ ಹುದ್ದೆಗೆ ಯಾರು ಆಯ್ಕೆಯಾಗುತ್ತಾರೆ, ಯಾರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಿಸಲಾಗುತ್ತದೆ ಎಂಬ ಕುತೂಹಲ ಮೂಡಿದೆ.

VISTARANEWS.COM


on

JP Nadda
Koo

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಜೆ.ಪಿ.ನಡ್ಡಾ (JP Nadda) ಅವರು ರಾಜ್ಯಸಭೆಯ (Rajya Sabha) ಸದನ ನಾಯಕರಾಗಿ ಆಯ್ಕೆಯಾಗಿದ್ದಾರೆ. ಇದುವರೆಗೆ ಪಿಯೂಷ್‌ ಗೋಯಲ್‌ (Piyush Goyal) ಅವರು ಮೇಲ್ಮನೆಯಲ್ಲಿ ಸದನ ನಾಯಕರಾಗದ್ದರು. ಈಗ ಅವರ ಬದಲಿಗೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರನ್ನು ಆಯ್ಕೆ ಮಾಡಲಾಗಿದೆ. ಪಿಯೂಷ್‌ ಗೋಯಲ್‌ ಅವರು ಲೋಕಸಭೆ ಚುನಾವಣೆಯಲ್ಲಿ ಮುಂಬೈ ಉತ್ತರ ಕ್ಷೇತ್ರದಿಂದ ಆಯ್ಕೆಯಾದ ಕಾರಣ ಜೆ.ಪಿ.ನಡ್ಡಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಪಿಯೂಷ್‌ ಗೋಯಲ್‌ ಅವರು 2010ರ ಜುಲೈ 5ರಂದು ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಅವರನ್ನು ರಾಜ್ಯಸಭೆ ಸದನ ನಾಯಕರನ್ನಾಗಿ 2021ರ ಜುಲೈ 14ರಂದು ಆಯ್ಕೆ ಮಾಡಲಾಗಿತ್ತು. ಜೂನ್‌ 24ರಂದು ಪಿಯೂಷ್‌ ಗೋಯಲ್‌ ಅವರು ಲೋಕಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜೆ.ಪಿ. ನಡ್ಡಾ ಅವರು ವರ್ಷದ ಆರಂಭದಲ್ಲಿ ಗುಜರಾತ್‌ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಸದ್ಯ, ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಪಕ್ಷ ನಾಯಕರಾಗಿದ್ದಾರೆ.

BJP National President JP Nadda Election campaign in Surapura

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಜೆ.ಪಿ. ನಡ್ಡಾ ಅವರ ಅವಧಿಯು ಇದೇ ತಿಂಗಳು ಮುಗಿಯಲಿದೆ. 2020ರಿಂದ ಬಿಜೆಪಿ ಅಧ್ಯಕ್ಷರಾಗಿರುವ ನಡ್ಡಾ ಅವರು ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲಿದ್ದಾರೆ. ಈಗ ಜೆ.ಪಿ. ನಡ್ಡಾ ಅವರ ಹುದ್ದೆಗೆ ಯಾರು ಆಯ್ಕೆಯಾಗುತ್ತಾರೆ, ಯಾರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಿಸಲಾಗುತ್ತದೆ ಎಂಬ ಕುತೂಹಲ ಮೂಡಿದೆ. ಜೆ.ಪಿ. ನಡ್ಡಾ ಅವರಿಗೆ ಆರೋಗ್ಯ ಖಾತೆ ಜತೆಗೆ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆಗಳನ್ನೂ ನೀಡಲಾಗಿದೆ.

ಬಜೆಟ್‌ನಲ್ಲಿ ಹೊಸ ತೆರಿಗೆ ಸ್ಲ್ಯಾಬ್‌?

“ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ಹೊಸ ತೆರಿಗೆ ಸ್ಲ್ಯಾಬ್‌ ಘೋಷಣೆ ಮಾಡುತ್ತದೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 5 ಲಕ್ಷ ರೂ.ಗೆ ಏರಿಸುವ ಜತೆಗೆ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಗಳಿಸುವವರಿಗೆ ಹಲವು ರೀತಿಯ ಡಿಡಕ್ಷನ್‌ಗಳ ಮೂಲಕ ತೆರಿಗೆ ಹೊರೆಯನ್ನು ಕಡಿಮೆ ಮಾಡಿಕೊಳ್ಳಬಹುದಾಗಿದೆ” ಎಂದು ಉನ್ನತ ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲ, 15 ಲಕ್ಷ ರೂ.ಗಿಂತ ಹೆಚ್ಚಿನ ಆದಾಯ ಇರುವವರಿಗೆ ಈಗ ಇರುವ ಶೇ.30ರ ತೆರಿಗೆ ಬದಲು ಶೇ.25ರಷ್ಟು ತೆರಿಗೆ ವಿಧಿಸಲಾಗುತ್ತದೆ. ಇದು ಕೂಡ ಹೊಸ ಸ್ಲ್ಯಾಬ್‌ನಲ್ಲಿ ಇರಲಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Parliament Session 2024: ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಎಚ್‌ಡಿಕೆ, ಶೋಭಾ ಕರಂದ್ಲಾಜೆ; Video ಇಲ್ಲಿದೆ

Continue Reading

ದೇಶ

AI Sex Dolls: ಶೀಘ್ರವೇ ಬರಲಿವೆ ಎಐ ಆಧಾರಿತ ‘ಸೆಕ್ಸ್‌’ ಬೊಂಬೆಗಳು; ನೈಜ ‘ಸುಖ’ಕ್ಕೆ ಇನ್ನು ಮನುಷ್ಯರೇ ಬೇಕಿಲ್ಲ!

AI Sex Dolls: ಚೀನಾದ ಶೆಂಝೆನ್‌ ಮೂಲದ ಸ್ಟಾರ್‌ಪೆರಿ ಟೆಕ್ನಾಲಜಿ ಎಂಬ ಕಂಪನಿಯ ವಿಜ್ಞಾನಿಗಳು ಸೆಕ್ಸ್‌ ಬೊಂಬೆಗಳನ್ನು ಅಭಿವೃದ್ಧಿಪಡಿಸುತ್ತಿದ್ದಾರೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಂಡು ಇವರು ಸೆಕ್ಸ್‌ ರೋಬೊಗಳನ್ನು ತಯಾರಿಸುತ್ತಿದ್ದಾರೆ. ಇವುಗಳು ಮನುಷ್ಯರಿಗೆ ನೈಜವಾದ ಲೈಂಗಿಕ ಸುಖವನ್ನು ನೀಡಲಿವೆ ಎಂದು ಸೌತ್‌ ಚೀನಾ ಮಾರ್ನಿಂಗ್‌ ಪೋಸ್ಟ್‌ ಸುದ್ದಿಸಂಸ್ಥೆಯು ವರದಿ ಮಾಡಿದೆ.

VISTARANEWS.COM


on

Sex Doll
Koo

ನವದೆಹಲಿ: ಭಾರತ ಸೇರಿ ಜಗತ್ತಿನೆಲ್ಲೆಡೆ ಪ್ರತಿಯೊಂದು ಕ್ಷೇತ್ರಕ್ಕೂ ಕೃತಕ ಬುದ್ಧಿಮತ್ತೆ (Artificial Intelligence) ತಂತ್ರಜ್ಞಾನ ಕಾಲಿಟ್ಟಿದೆ. ಲವ್‌ ಲೆಟರ್‌ ಬರೆಯುವುದರಿಂದ ಹಿಡಿದು ಕೋಡ್‌ ರಚನೆವರೆಗೆ, ರೋಬೊಗಳು ಕುಳಿತಲ್ಲಿಗೆ ಬಂದು ಊಟ ಸರಬರಾಜು ಮಾಡುವವರೆಗೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವು ಪಸರಿಸಿದೆ. ಇದರ ಬೆನ್ನಲ್ಲೇ, ವಿಜ್ಞಾನಿಗಳು ಮತ್ತೊಂದು ಹೆಜ್ಜೆ ಇರಿಸಿದ್ದಾರೆ. ಕೃತಕ ಬುದ್ಧಿಮತ್ತೆಯನ್ನು ಬಳಸಿಕೊಂಡು ಸೆಕ್ಸ್‌ ಬೊಂಬೆಗಳನ್ನು (AI Powered Sex Dolls) ಅಥವಾ ಸೆಕ್ಸ್‌ ರೋಬೊಗಳನ್ನು ಅಭಿವೃದ್ಧಿಪಡಿಸಿದ್ದು, ಇವು ಮನುಷ್ಯರಿಗೆ ನೈಜ ಲೈಂಗಿಕ ಸುಖವನ್ನು ಅನುಭವಿಸಲು ಸಾಧ್ಯವಾಗಿಸುತ್ತವೆ ಎಂದು ತಿಳಿದುಬಂದಿದೆ.

ಹೌದು, ಚೀನಾದ ಶೆಂಝೆನ್‌ ಮೂಲದ ಸ್ಟಾರ್‌ಪೆರಿ ಟೆಕ್ನಾಲಜಿ ಎಂಬ ಕಂಪನಿಯ ವಿಜ್ಞಾನಿಗಳು ಸೆಕ್ಸ್‌ ಬೊಂಬೆಗಳನ್ನು ಅಭಿವೃದ್ಧಿಪಡಿಸುತ್ತಿದ್ದಾರೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಂಡು ಇವರು ಸೆಕ್ಸ್‌ ರೋಬೊಗಳನ್ನು ತಯಾರಿಸುತ್ತಿದ್ದಾರೆ. ಇವುಗಳು ಮನುಷ್ಯರಿಗೆ ನೈಜವಾದ ಲೈಂಗಿಕ ಸುಖವನ್ನು ನೀಡಲಿವೆ ಎಂದು ಸೌತ್‌ ಚೀನಾ ಮಾರ್ನಿಂಗ್‌ ಪೋಸ್ಟ್‌ ಸುದ್ದಿಸಂಸ್ಥೆಯು ವರದಿ ಮಾಡಿದೆ. ಹಾಗಾಗಿ, ಮುಂದಿನ ದಿನಗಳಲ್ಲಿ ಪುರುಷರು, ಮಹಿಳೆಯರು ಸೇರಿ ಯಾರಿಗೇ ಆಗಲಿ ಲೈಂಗಿಕ ಸುಖ ಅನುಭವಿಸಲು ಬೇರೊಬ್ಬರ ಅವಶ್ಯಕತೆಯೇ ಇರುವುದಿಲ್ಲ. ಸೆಕ್ಸ್‌ ಡಾಲ್‌ಗಳ ಮೂಲಕವೇ ಸಂಭೋಗ ಸುಖ ಅನುಭವಿಸಬಹುದು ಎಂದು ಹೇಳಲಾಗುತ್ತಿದೆ.

ಇವುಗಳ ಕಾರ್ಯನಿರ್ವಹಣೆ ಹೇಗೆ?

ಜಗತ್ತಿನಲ್ಲಿ ಇದುವರೆಗೆ ಕೃತಕವಾಗಿ ಲೈಂಗಿಕ ಸುಖ ಅನುಭವಿಸಲು ಸಾಧ್ಯವಿರಲಿಲ್ಲ. ಆದರೆ, ಕೃತಕ ಬುದ್ಧಿಮತ್ತೆಯನ್ನು ಬಳಸಿಕೊಂಡು ಚೀನಾ ವಿಜ್ಞಾನಿಗಳು ನೈಜ ಸುಖ ಅನುಭವಿಸುವ ರೋಬೊಗಳನ್ನು ತಯಾರಿಸುತ್ತಿದ್ದಾರೆ. ಸೆಕ್ಸ್‌ ಡಾಲ್‌ಗಳು ಬ್ಯಾಟರಿ ಚಾಲಿತ ಆಗಿರುತ್ತವೆ. ಅವುಗಳ ಮಾಂಸಖಂಡಗಳು ಕೂಡ ಮನುಷ್ಯರ ಹಾಗೆ ಇರಲಿದ್ದು, ಫ್ಲೆಕ್ಸಿಬಲ್‌ ಕೂಡ ಆಗಿರಲಿವೆ. ಮನುಷ್ಯರ ಭಾವನೆಗಳಿಗೆ ಸ್ಪಂದಿಸಿ, ನಿಜವಾದ ಲೈಂಗಿಕ ಸುಖವನ್ನು ಅನುಭವಿಸಲು ಇವು ನೆರವಾಗಲಿವೆ ಎಂದು ಹೇಳಲಾಗುತ್ತಿದೆ. ಹಲವು ಸವಾಲುಗಳನ್ನು ಮೀರಿಯೂ ವಿಜ್ಞಾನಿಗಳು ಈ ಕನಸು ನನಸಾಗಿಸಿಕೊಳ್ಳಲು ಶ್ರಮಿಸುತ್ತಿದ್ದಾರೆ ಎಂದು ಕಂಪನಿ ತಿಳಿಸಿದೆ.

ರೇಟ್‌ ಎಷ್ಟಾಗಬಹುದು?

ವಿಜ್ಞಾನಿಗಳು ಈಗಾಗಲೇ ಸೆಕ್ಸ್‌ ರೋಬೊಗಳನ್ನು ತಯಾರಿಸುತ್ತಿದ್ದಾರೆ. ಸುಮಾರು 5.6 ಅಡಿಯ ರೋಬೊಗಳನ್ನು ತಯಾರಿಸುತ್ತಿದ್ದು, ಬಳಸುವವರಿಗೆ ಅನುಕೂಲವಾಗಲಿ ಎಂದು 29 ಕೆ.ಜಿ ತೂಕದ ಡಾಲ್‌ಗಳನ್ನು ತಯಾರಿಸುತ್ತಿದ್ದಾರೆ. ಅತ್ಯಾಧುನಿಕ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿ ಇವುಗಳನ್ನು ತಯಾರಿಸುವ ಕಾರಣ ಆರಂಭದಲ್ಲಿ ಇವುಗಳ ಬೆಲೆಯು 1.25 ಲಕ್ಷ ರೂ.ನಿಂದ 6 ಲಕ್ಷ ರೂ.ವೆರೆಗೆ ಇರಲಿವೆ ಎಂದು ತಿಳಿದುಬಂದಿದೆ. ಇದರ ಮಧ್ಯೆಯೇ ಸೆಕ್ಸ್‌ ರೋಬೊಗಳನ್ನು ತಯಾರಿಸುವುದರಿಂದ ಮನುಷ್ಯ ಮನುಷ್ಯನ ಸಂಬಂಧ, ಬಾಂಡಿಂಗ್‌ ಹಾಳಾಗುತ್ತದೆ ಎಂದು ಒಂದಷ್ಟು ಮಡಿವಂತರು ಟೀಕೆಗಳನ್ನು ಕೂಡ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Love Sex Dhoka: ಪ್ರೀತಿಸುವ ನಾಟಕವಾಡಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌; ಯುವಕನ ಬಂಧನಕ್ಕಾಗಿ ಪೊಲೀಸ್‌ ಠಾಣೆ ಮುಂದೆ ಯುವತಿ ಧರಣಿ

Continue Reading
Advertisement
union Minister Pralhad Joshi took oath in the name of God in his mother tongue
ಕರ್ನಾಟಕ4 mins ago

Pralhad Joshi: ಮಾತೃಭಾಷೆ, ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಚಿವ ಪ್ರಲ್ಹಾದ್‌ ಜೋಶಿ

Divisional Level Progress Review Meeting of Revenue Department by Minister Krishna Byregowda
ಕಲಬುರಗಿ10 mins ago

krishna byre gowda: ಪಹಣಿ-ಆಧಾರ್ ಲಿಂಕ್‌ ಮಾಡಲು ಜುಲೈಗೆ ಅಂತಿಮ ಗಡುವು; ಕೃಷ್ಣ ಬೈರೇಗೌಡ

Hardeep Singh Nijjar
ದೇಶ17 mins ago

Hardeep Singh Nijjar: ಪಾಕಿಸ್ತಾನಕ್ಕೂ ಭೇಟಿ ಕೊಟ್ಟಿದ್ದನಂತೆ ನಿಜ್ಜರ್‌; ಖಲಿಸ್ತಾನಿ ಉಗ್ರನ ಬಗ್ಗೆ ಮತ್ತಷ್ಟು ಭೀಕರ ಸಂಗತಿ ಬಯಲು

Sleep After Lunch
ಲೈಫ್‌ಸ್ಟೈಲ್21 mins ago

Sleep After Lunch: ಊಟದ ನಂತರ ನಮಗೆ ಆಕಳಿಕೆ, ನಿದ್ದೆ ಬರುವುದೇಕೆ?

R Ashok demands that the Congress apologize for imposing emergency
ಕರ್ನಾಟಕ27 mins ago

R Ashok: ತುರ್ತು ಪರಿಸ್ಥಿತಿ ಹೇರಿದ ಕಾಂಗ್ರೆಸ್‌ ಕ್ಷಮೆ ಕೋರಲಿ, ರಾಹುಲ್‌ ಗಾಂಧಿ ತಲೆಬಾಗಲಿ; ಆರ್‌. ಅಶೋಕ್‌

Viral Video
Latest34 mins ago

Viral Video: ರೀಲ್ಸ್ ಮಾಡಲು ಹೋದ ವಿದ್ಯಾರ್ಥಿನಿಗೆ ಕೊನೆಗೆ ಆಗಿದ್ದೇನು? ವಿಡಿಯೊ ನೋಡಿ

JP Nadda
ದೇಶ41 mins ago

JP Nadda: ರಾಜ್ಯಸಭೆ ಸದನ ನಾಯಕರಾಗಿ ಜೆ.ಪಿ. ನಡ್ಡಾ ಆಯ್ಕೆ; ಪಿಯೂಷ್‌ ಗೋಯಲ್‌ ಬದಲು ನೇಮಕ

LKG UKG in Anganwadis
ಪ್ರಮುಖ ಸುದ್ದಿ41 mins ago

LKG UKG in Anganwadis: ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಲು ಸಿಎಂ ಸಹಮತ

Monsoon Trench Coat Fashion
ಫ್ಯಾಷನ್51 mins ago

Monsoon Trench Coat Fashion: ಮಾನ್ಸೂನ್‌ಗೂ ಕಾಲಿಟ್ಟ ಟ್ರೆಂಚ್‌ ಕೋಟ್‌ ಫ್ಯಾಷನ್‌!

Kamal Haasan predicts Deepika Padukone baby choose cinema career
ಟಾಲಿವುಡ್1 hour ago

Kamal Haasan: ಮುಂದೊಂದು ದಿನ ದೀಪಿಕಾ ಮಗು ಸಿನಿಮಾ ಮಾಡಬಹುದು ಎಂದು ಭವಿಷ್ಯ ನುಡಿದ ಕಮಲ್‌ ಹಾಸನ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ3 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ4 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌