Football: ಇಂಟರ್‌ ಕಾಂಟಿನೆಂಟಲ್‌ ಕಪ್​ ವಿಜೇತ ಭಾರತ ತಂಡಕ್ಕೆ 1 ಕೋಟಿ ರೂ. ಬಹುಮಾನ ಘೋಷಿಸಿದ ಒಡಿಶಾ ಸರ್ಕಾರ - Vistara News

ಕ್ರೀಡೆ

Football: ಇಂಟರ್‌ ಕಾಂಟಿನೆಂಟಲ್‌ ಕಪ್​ ವಿಜೇತ ಭಾರತ ತಂಡಕ್ಕೆ 1 ಕೋಟಿ ರೂ. ಬಹುಮಾನ ಘೋಷಿಸಿದ ಒಡಿಶಾ ಸರ್ಕಾರ

ಇಂಟರ್‌ ಕಾಂಟಿನೆಂಟಲ್‌ ಕಪ್ ಚಾಂಪಿಯನ್‌ ಭಾರತ ತಂಡ 20 ಲಕ್ಷ ರೂ. ಮೊತ್ತವನ್ನು ಬಾಲಾಸೋರ್‌ ರೈಲು ದುರಂತದ ಪರಿಹಾರ ನಿಧಿಗೆ ನೀಡಲು ನಿರ್ಧರಿಸಿದೆ.

VISTARANEWS.COM


on

Intercontinental Cup champion India
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭುವನೇಶ್ವರ: ಇಂಟರ್‌ ಕಾಂಟಿನೆಂಟಲ್‌ ಕಪ್‌(Intercontinental Cup) ವಿಜೇತ ಭಾರತದ ಫುಟ್​ಬಾಲ್​(Football) ತಂಡಕ್ಕೆ ಒಡಿಶಾದ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌(Naveen Patnaik) ಅವರು 1 ಕೋಟಿ ರೂ. ಬಹುಮಾನ ಮೊತ್ತ ಘೋಷಿಸಿದ್ದಾರೆ. ಈ ಟೂರ್ನಿಯಲ್ಲಿ ಭಾರತ 2ನೇ ಬಾರಿ ಟ್ರೋಫಿ ಗೆದ್ದ ಸಾಧನೆ ಮಾಡಿತು. ಟ್ರೋಫಿ ವಿತ​ರಣೆ ಮಾಡಿ ಮಾತ​ನಾ​ಡಿದ ಪಟ್ನಾ​ಯಕ್‌, ಆಟ​ಗಾ​ರ​ರಿಗೆ 1 ಕೋಟಿ ರು. ನಗದು ಬಹು​ಮಾನ ನೀಡು​ವು​ದಾಗಿ ತಿಳಿ​ಸಿ​ದರು. ಇದೇ ವೇಳೆ ಚಾಂಪಿಯನ್‌ ತಂಡ 20 ಲಕ್ಷ ರೂ. ಮೊತ್ತವನ್ನು ಬಾಲಾಸೋರ್‌ ರೈಲು ದುರಂತದ ಪರಿಹಾರ ನಿಧಿಗೆ ನೀಡಲು ನಿರ್ಧರಿಸಿದೆ.

“ಕಳಿಂಗ ಸ್ಟೇಡಿಯಂ’ನಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ಲೆಬನಾನ್‌ ವಿರುದ್ಧ 2-0 ಗೋಲುಗಳಿಂದ ಗೆಲುವು ದಾಖಲಿಸಿ ಪ್ರಶಸ್ತಿ ತನ್ನದಾಗಿಸಿಕೊಂಡಿತು. ಭಾರತ ಪರ ನಾಯಕ ಸುನೀಲ್‌ ಚೆಟ್ರಿ(Sunil Chhetri) ಮತ್ತು ಲಾಲಿಯಂಜೂಲ ಚಂಗೆ(Lallianzuala Chhangte) ಗೋಲು ಬಾರಿಸಿ ಪಂದ್ಯದ ಗೆಲುವಿನ ರುವಾರಿಯಾದರು.

ಇದನ್ನೂ ಓದಿ Viral Video: ತಂದೆಯಾಗುತ್ತಿರುವ ವಿಚಾರವನ್ನು ವಿಶೇಷ ರೀತಿಯಲ್ಲಿ ಸಂಭ್ರಮಿಸಿದ ಸುನೀಲ್​ ಚೆಟ್ರಿ; ಮಜವಾಗಿದೆ ವಿಡಿಯೊ

ಪ್ರಶಸ್ತಿ ನೀಡಿ ಮಾತನಾಡಿದ ಸಿಎಂ ನವೀನ್‌ ಪಟ್ನಾಯಕ್‌, “ವಿಜೇತ ಭಾರತ ತಂಡಕ್ಕೆ ಅಭಿನಂದನೆಗಳು. ನಮ್ಮ ರಾಜ್ಯಕ್ಕೆ ಹಲವು ಕ್ರೀಡಾಕೂಟಗಳ ಆತಿಥ್ಯ ಸಿಗುತ್ತಿರುವುದು ಹೆಮ್ಮೆಯ ಸಂಗತಿ. ಒಡಿಶಾದಲ್ಲಿ ಇನ್ನೂ ಹೆಚ್ಚಿನ ಕ್ರೀಡಾಕೂಟಗಳನ್ನು ಆಯೋಜಿಸಲು ನಾವು ಸಿದ್ಧ ಭಾರತದ ಕ್ರೀಡೆಗೆ ಸೇವೆ ಸಲ್ಲಿಸಲು ನಾವು ಸದಾ ಮುಂಚೂಣಿಯಲ್ಲಿರುತ್ತೇವೆ” ಎಂದರು.

ಇಂದು ಭಾರತಕ್ಕೆ ಉಜ್ಬೇ​ಕಿ​ಸ್ತಾನ ಎದುರಾಳಿ

ಎಎ​ಫ್‌ಸಿ ಅಂಡ​ರ್‌-17 ಏಷ್ಯಾ​ಕಪ್‌ ಫುಟ್ಬಾಲ್‌ ಟೂರ್ನಿಯಲ್ಲಿ ಭಾರತ ಇಂದು (ಮಂಗ​ಳವಾರ) ಉಜ್ಬೇ​ಕಿ​ಸ್ತಾನ ವಿರುದ್ಧ ಹೋರಾಟ ನಡೆಸಲಿದೆ. ಸದ್ಯ ಗುಂಪಿನ ಎಲ್ಲ ತಂಡ​ಗಳೂ ತಲಾ 1 ಅಂಕ ಹೊಂದಿದ್ದು, ಜಪಾನ್‌ ಅಗ್ರ​ಸ್ಥಾನ, ವಿಯೆಟ್ನಾಂ 2, ಉಜ್ಬೇ​ಕಿ​ಸ್ತಾನ 3 ಮತ್ತು ಭಾರತ ಕೊನೆ ಸ್ಥಾನ​ದ​ಲ್ಲಿದೆ. ಹೀಗಾಗಿ ಉಜ್ಬೇ​ಕಿ​ಸ್ತಾನ ವಿರುದ್ಧ ಗೆದ್ದರೆ ಮಾತ್ರ ಭಾರ​ತಕ್ಕೆ ನಾಕೌ​ಟ್‌​ಗೇ​ರುವ ಅವ​ಕಾಶ ಹೆಚ್ಚಿ​ರ​ಲಿದೆ. ‘ಡಿ’ ಗುಂಪಿನ ತನ್ನ ಮೊದಲ ಪಂದ್ಯ​ದಲ್ಲಿ ವಿಯೆಟ್ನಾಂ ವಿರುದ್ಧ 1-1 ಗೋಲಿನ ಡ್ರಾಗೆ ತೃಪ್ತಿ​ಪ​ಟ್ಟಿದ್ದ​ ಭಾರತ ಈ ಪಂದ್ಯ​ದಲ್ಲಿ ಗೆಲುವು ದಾಖಲಿಸುವ ನಿರೀ​ಕ್ಷೆ​ಯ​ಲ್ಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

RCB vs GT: ಬೆಂಗಳೂರಿನಲ್ಲಿ ನಾಳೆ ಐಪಿಎಲ್‌ ಹಬ್ಬ: ತಡರಾತ್ರಿಯೂ ಇದೆ ಮೆಟ್ರೋ ಸೇವೆ, ಪಾರ್ಕಿಂಗ್‌ ಎಲ್ಲೆಲ್ಲಿ?

RCB vs GT: ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು(Royal Challengers Bangalore)ಮತ್ತು ಗುಜರಾತ್​ ಟೈಟಾನ್ಸ್​ (Gujarat Titans) ನಡುವಣ ಪಂದ್ಯ ವೀಕ್ಷಣೆಗಾಗಿ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ಎಲ್ಲಾ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ಕೊನೆಯ ರೈಲು ಸೇವೆಗಳನ್ನು ರಾತ್ರಿ 11.30ಕ್ಕೆ ವಿಸ್ತರಿಸಲಾಗಿದೆ.

VISTARANEWS.COM


on

RCB vs GT
Koo

ಬೆಂಗಳೂರು: ನಾಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು(Royal Challengers Bangalore) ಮತ್ತು ಗುಜರಾತ್​ ಟೈಟಾನ್ಸ್​ (Gujarat Titans) ಮುಖಾಮುಖಿಯಾಗಲಿವೆ. ಈ ಪಂದ್ಯವನ್ನು ಕಣ್ತುಂಬಿಕೊಳ್ಳಲು ತವರಿನ ಅಭಿಮಾನಿಗಳು ಕಾತದಿಂದ ಕಾದು ಕುಳಿತಿದ್ದಾರೆ. ಕ್ರಿಕೆಟ್​ ಅಭಿಮಾನಿಗಳಿಗಾಗಿಯೇ ನಮ್ಮ ಮೆಟ್ರೋ(namma metro) ಕೂಡ ವಿಶೇಷ ರೈಲು ಸೇವೆಯನ್ನು ನೀಡಲಿದೆ.

ಕ್ರಿಕೆಟ್‌ ಪಂದ್ಯ ನೋಡಲು ಬರುವ ಕ್ರಿಕೆಟ್‌ ಪ್ರೇಮಿಗಳಿಗಾಗಿ ಮೆಟ್ರೋ ರೈಲು ಮತ್ತು ಬಿಎಂಟಿಸಿ ವಿಶೇಷ ಓಡಾಟಕ್ಕೆ ಅನುಮತಿ ನೀಡಿವೆ. ಹೀಗಾಗಿ ಕ್ರಿಕೆಟ್‌ ನೋಡಲು ಬರುವವರು, ಕ್ರೀಡಾಂಗಣ ತಲುಪುವ ವಿಚಾರದಲ್ಲಿ ಯಾವುದೇ ಚಿಂತೆ ಮಾಡಬೇಕಾಗಿಲ್ಲ. ಪಂದ್ಯ ವೀಕ್ಷಣೆಗಾಗಿ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ಎಲ್ಲಾ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ಕೊನೆಯ ರೈಲು ಸೇವೆಗಳನ್ನು ರಾತ್ರಿ 11.30ಕ್ಕೆ ವಿಸ್ತರಿಸಲಾಗಿದೆ.

ಪೇಪರ್‌ ಟಿಕೆಟ್‌ ಮಾರಾಟ

ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು 50 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಇದು ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಿಂದ ಯಾವುದೇ ಇತರ ಮೆಟ್ರೋ ನಿಲ್ದಾಣಕ್ಕೆ ಒಂದೇ ಪ್ರಯಾಣಕ್ಕೆ ವಿತರಣೆಯ ದಿನದಂದು ರಾತ್ರಿ 8.00 ರಿಂದ ದಿನದ ಸೇವೆಗಳು ಕೊನೆಗೊಳ್ಳುವವರೆಗೆ ಮಾನ್ಯವಾಗಿರುತ್ತದೆ. ಈ ನಿಲ್ದಾಣಗಳಲ್ಲಿ ಟೋಕನ್ ಲಭ್ಯವಿರುವುದಿಲ್ಲ.

ಎಂದಿನಂತೆ, ಕ್ಯೂಆರ್‌ (QR) ಕೋಡ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್‌ಗಳು ಮತ್ತು ಎನ್‌ಸಿಎಂಸಿ (NCMC) ಕಾರ್ಡ್‌ಗಳನ್ನು ಸಹ ಬಳಸಬಹುದು. ವಾಟ್ಸ್ ಆಪ್/ನಮ್ಮ ಮೆಟ್ರೋ ಆ್ಯಪ್/ಪೇ ಟಿಎಂ ಮೂಲಕ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿ QR ಟಿಕೆಟ್‌ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ. ಕಬ್ಬನ್ ಪಾರ್ಕ್ ಮತ್ತು ಎಂಜಿ ರೋಡ್ ಮೆಟ್ರೋ ನಿಲ್ದಾಣಗಳಲ್ಲಿ ಟಿಕೆಟ್ ಖರೀದಿಸಲು ಟಿಕೆಟ್ ಕೌಂಟರ್‌ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಈ ವ್ಯವಸ್ಥೆ ಮಾಡಲಾಗಿದೆ.

ಮಳೆ ಸಾಧ್ಯತೆ


ಬೆಂಗಳೂರಿನಲ್ಲಿ ಮೇ 4ರ ಸಂಜೆವರೆಗೆ ಮಳೆ ಬರುವ ಮುನ್ಸೂಚನೆ ಇದೆಯಾದರೂ ಆಟವನ್ನೇ ನಿಲ್ಲಿಸುವಷ್ಟು ಜೋರಾಗಿ ಬರುವ ಸಾಧ್ಯತೆ ಇಲ್ಲ. ಸಣ್ಣಗೆ ತುಂತುರು ಮಳೆ ಬರಲೂಬಹುದು. ಹೀಗೆ ಸ್ವಲ್ಪ ಹೊತ್ತು ಮಳೆ ಬಂದರೂ ಬೇಗನೆ ಅದರ ಪರಿಣಾಮಗಳನ್ನು ನಿವಾರಿಸಿ ಆಟಕ್ಕೆ ಅಣಿ ಮಾಡುವ ತಂತ್ರಜ್ಞಾನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿದೆ.

ಇದನ್ನೂ ಓದಿ RCB vs GT: ಮಳೆ ಭೀತಿಯ ಮಧ್ಯೆ ಹ್ಯಾಟ್ರಿಕ್​ ಗೆಲುವಿನ ನಿರೀಕ್ಷೆಯಲ್ಲಿ ಆರ್​ಸಿಬಿ

ಪಾರ್ಕಿಂಗ್​ ವ್ಯವಸ್ಥೆ

ಚಿನ್ನಸ್ವಾಮಿ ಕ್ರೀಡಾಂಗಣದತ್ತ ವಾಹನಗಳ ದಂಡೇ ಬರುವುದರಿಂದ ಕೆಲವು ಕಡೆ ಪಾರ್ಕಿಂಗ್‌ ನಿಷೇಧಿಸಲಾಗಿದೆ. ಇನ್ನು ಕೆಲವು ಕಡೆ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ. ಮೇ 4ರಂದು ಸಂಜೆ ನಾಲ್ಕರಿಂದ ರಾತ್ರಿ 11ರವರೆಗಿನ ಮಾರ್ಗಸೂಚಿ ಇಲ್ಲಿದೆ.

ಈ ರಸ್ತೆಗಳಲ್ಲಿ ಪಾರ್ಕಿಂಗ್‌ ನಿರ್ಬಂಧ

ಕ್ವೀನ್ಸ್‌ ರೋಡ್‌, ಎಂಜಿ ರೋಡ್‌ನಿಂದ ಕಬ್ಬನ್‌ ಪಾರ್ಕ್‌ ರಸ್ತೆ, ರಾಜಭವನ್‌ ರೋಡ್‌-ಸೆಂಟ್ರಲ್‌ ಸ್ಟ್ರೀಟ್‌ ರೋಡ್‌, ಕಬ್ಬನ್‌ ರಸ್ತೆ, ಸೈಂಟ್‌ ಮಾರ್ಕ್‌ ರಸ್ತೆ, ಮ್ಯೂಸಿಯಂ ರೋಡ್‌, ಕಸ್ತೂರ್ಬಾ ರೋಡ್‌, ಅಂಬೇಡ್ಕರ್‌ ವೀದಿ, ಟ್ರಿನಿಟಿ, ಲಾವೆಲ್ಲೆ ರೋಡ್‌, ವಿಠಲ್‌ ಮಲ್ಯ ರೋಡ್‌, ನೃಪತುಂಗ ರಸ್ತೆ

ಪಾರ್ಕಿಂಗ್‌ಗೆ ಎಲ್ಲೆಲ್ಲಿ ವ್ಯವಸ್ಥೆ

ಕಿಂಗ್ಸ್‌ ರೋಡ್‌, ಯುಬಿ ಸಿಟಿ ಪಾರ್ಕಿಂಗ್‌, ಬಿಎಂಟಿಸಿ ಟಿಟಿಎಂಸಿ ಶಿವಾಜಿ ನಗರ್‌ ಫಸ್ಟ್‌ ಫ್ಲೋರ್‌, ಹಳೆ ಕೆಜಿಐಡಿ ಬಿಲ್ಡಿಂಗ್‌, ಮೆಟ್ರೋ ಲೇನ್‌ ಕೆಳಗಿನ ಬಿಆರ್‌ವಿ ಗ್ರೌಂಡ್‌

Continue Reading

ಕ್ರೀಡೆ

RCB vs GT: ಮಳೆ ಭೀತಿಯ ಮಧ್ಯೆ ಹ್ಯಾಟ್ರಿಕ್​ ಗೆಲುವಿನ ನಿರೀಕ್ಷೆಯಲ್ಲಿ ಆರ್​ಸಿಬಿ

RCB vS GT: ವಿರಾಟ್​ ಕೊಹ್ಲಿ ಈ ಮೈದಾನದಲ್ಲಿ ಇದುವರೆಗೆ 2924 ರನ್​ ಬಾರಿಸಿದ್ದಾರೆ. ಜತೆಗೆ ಈ ಬಾರಿಯ ಐಪಿಎಲ್​ನಲ್ಲಿಯೂ ಕೊಹ್ಲಿ ಉತ್ತಮವಾಗಿ ರನ್​ ಗಳಿಸಿದ್ದಾರೆ. ಹೀಗಾಗಿ ಈ ಪಂದ್ಯದಲ್ಲಿಯೂ ಇವರ ಬ್ಯಾಟಿಂಗ್​ ಮೇಲೆ ಅಭಿಮಾನಿಗಳು ಹೆಚ್ಚಿನ ನಿರೀಕ್ಷೆ ಇರಿಸಿದ್ದಾರೆ.

VISTARANEWS.COM


on

RCB vS GT:
Koo

ಬೆಂಗಳೂರು: ಹಲವು ಸೋಲಿನ ಬಳಿಕ ಸತತ 2 ಗೆಲುವು ಸಾಧಿಸಿ ಸಂತಸದ ಅಲೆಯಲ್ಲಿ ತೇಲುತ್ತಿರುವ ಆರ್​ಸಿಬಿ(RCB vS GT) ಹ್ಯಾಟ್ರಿಕ್​ ಗೆಲುವಿನಿ ನಿರೀಕ್ಷೆಯೊಂದಿಗೆ ನಾಳೆ(ಶನಿವಾರ) ನಡೆಯುವ ಐಪಿಎಲ್(IPL 2024)​ ಪಂದ್ಯದಲ್ಲಿ ಗುಜರಾತ್​ ಟೈಟಾನ್ಸ್​ ವಿರುದ್ಧ ಕಣಕ್ಕಿಳಿಯಲಿದೆ. ಆದರೆ, ಈ ಪಂದ್ಯಕ್ಕೆ ಮಳೆಯ ಭೀತಿಯೂ ಎದುರಾಗಿದೆ.

ಬೆಂಗಳೂರಿನಲ್ಲಿ ಸತತ 2 ದಿನಗಳಿಂದ ಮಳೆಯಾಗುತ್ತಿದ್ದು ಮುಂದಿನ ನಾಲ್ಕು ದಿನ ಕೂಡ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ನಾಳೆ ನಡೆಯುವ ಪಂದ್ಯಕ್ಕೆ ಮಳೆಯ ಭೀತಿ ಇದ್ದೇ ಇದೆ. ಪ್ಲೇ ಆಫ್​ಗೆ ಕ್ಷೀಣ ಅವಕಾಶ ಹೊಂದಿರುವ ಆರ್​ಸಿಬಿ ಮತ್ತು ಗುಜರಾತ್​ಗೆ ನಾಳೆ ನಡೆಯುವ ಪಂದ್ಯ ಮಹತ್ವದ್ದಾಗಿದೆ. ಮಳೆಯಿಂದ ಪಂದ್ಯ ರದ್ದಾದರೆ ಉಭಯ ತಂಡಗಳ ಪ್ಲೇ ಆಫ್​ ಮಳೆಯಲ್ಲಿ ಕೊಚ್ಚಿಹೋಗಲಿದೆ.

ಪಿಚ್​ ರಿಪೋರ್ಟ್​


ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಯಾವಾಗಲೂ ಬ್ಯಾಟಿಂಗ್ ಸ್ನೇಹಿ ಸ್ಥಳವಾಗಿದೆ. ಇದುವರೆಗೆ ಇಲ್ಲಿ ನಡೆದ ಬಹುತೇಕ ಪಂದ್ಯಗಳು ಕೂಡ ಚೇಸಿಂಗ್​ ನಡೆಸಿದ ತಂಡವೇ ಹೆಚ್ಚು ಬಾರಿ ಗೆದ್ದಿದೆ. ಇದುವರೆಗೆ ಇಲ್ಲಿ 92 ಐಪಿಎಲ್​ ಪಂದ್ಯಗಳು ನಡೆದಿದ್ದು, 49 ಬಾರಿ ಚೇಸಿಂಗ್​ ನಡೆಸಿದ ತಂಡ ಜಯಶಾಲಿಯಾಗಿದೆ. 39 ಬಾರಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ ಗೆದ್ದಿದೆ. ಆದರೆ ಕಳೆದ 10 ಪಂದ್ಯಗಳ ಫಲಿತಾಂಶ ನೋಡುವುದಾದರೆ 6 ಬಾರಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ ಗೆದ್ದಿದೆ.

ವಿರಾಟ್​ ಕೊಹ್ಲಿ ಈ ಮೈದಾನದಲ್ಲಿ ಇದುವರೆಗೆ 2924 ರನ್​ ಬಾರಿಸಿದ್ದಾರೆ. ಜತೆಗೆ ಈ ಬಾರಿಯ ಐಪಿಎಲ್​ನಲ್ಲಿಯೂ ಕೊಹ್ಲಿ ಉತ್ತಮವಾಗಿ ರನ್​ ಗಳಿಸಿದ್ದಾರೆ. ಹೀಗಾಗಿ ಈ ಪಂದ್ಯದಲ್ಲಿಯೂ ಇವರ ಬ್ಯಾಟಿಂಗ್​ ಮೇಲೆ ಅಭಿಮಾನಿಗಳು ಹೆಚ್ಚಿನ ನಿರೀಕ್ಷೆ ಇರಿಸಿದ್ದಾರೆ. ಕಳೆದ ಆವೃತ್ತಿಯಲ್ಲಿ ಆರ್​ಸಿಬಿಗೆ ಪ್ಲೇ ಆಫ್​ಗೆ ಹೋಗಬೇಕಿದ್ದರೆ ಗೆಲ್ಲಲೇ ಬೇಕಿದ್ದ ಪಂದ್ಯದಲ್ಲಿ ಗುಜರಾತ್​ ಅಡಗಾಲಿಕ್ಕಿತ್ತು. ಶುಭಮನ್​ ಗಿಲ್​ ಶತಕ ಬಾರಿಸಿ ಆರ್​ಸಿಬಿಗೆ ಸೋಲಿನ ರುಚಿ ತೋರಿಸಿದ್ದರು.

ಗುಜರಾತ್​ ಆಡಿದ 10 ಪಂದ್ಯಗಳಲ್ಲಿ 4 ಪಂದ್ಯ ಗೆದ್ದು 8 ಅಂಕ ಗಳಿಸಿ 8ನೇ ಸ್ಥಾನದಲ್ಲಿದೆ. ಪ್ಲೇ ಆಫ್​ ಪ್ರವೇಶಿಸಬೇಕಿದ್ದರೆ ಉಳಿದ 4 ಪಂದ್ಯಗಳನ್ನು ಕೂಡ ಗೆಲ್ಲಬೇಕಿದೆ. ಹೀಗಾಗಿ ಆರ್​ಸಿಬಿ ವಿರುದ್ಧದ ಪಂದ್ಯ ಗೆಲ್ಲಲೇ ಬೇಕಾದ ಒತ್ತಡ ಶುಭಮನ್​ ಗಿಲ್​ ಪಡೆಯ ಮೇಲಿದೆ.

ಇದನ್ನೂ ಓದಿ IPL 2024 : ರಾಜಸ್ಥಾನ್ ವಿರುದ್ಧ ಎಸ್​​ಆರ್​ಎಚ್​​ ತಂಡಕ್ಕೆ ರೋಚಕ 1 ರನ್ ಗೆಲುವು

ಉಭಯ ತಂಡಗಳು


ಆರ್​ಸಿಬಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್​ ಕೀಪರ್​), ಸ್ವಪ್ನಿಲ್ ಸಿಂಗ್, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಯಶ್ ದಯಾಳ್.

ಗುಜರಾತ್​: ವೃದ್ಧಿಮಾನ್ ಸಹಾ (ವಿಕೆಟ್​ ಕೀಪರ್​), ಶುಭಮನ್​ ಗಿಲ್ (ನಾಯಕ), ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್, ಅಜ್ಮತುಲ್ಲಾ ಒಮರ್ಜಾಯ್, ರಾಹುಲ್ ತೆವಾಟಿಯಾ, ಶಾರುಖ್ ಖಾನ್, ರಶೀದ್ ಖಾನ್, ಸಾಯಿ ಕಿಶೋರ್, ನೂರ್ ಅಹ್ಮದ್, ಮೋಹಿತ್ ಶರ್ಮಾ.

Continue Reading

ಕ್ರೀಡೆ

ICC Men’s Test Team Rankings: ಅಗ್ರಸ್ಥಾನದಿಂದ ಕುಸಿತ ಕಂಡ ಭಾರತ; ವಿಶ್ವ ಚಾಂಪಿಯನ್​ ಆಸೀಸ್​ ನಂ.1

ICC Men’s Test Team Rankings: ಕಳೆದ ವರ್ಷ ಓವಲ್‌ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ನಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡಿತ್ತು. ಆಸ್ಟ್ರೇಲಿಯಾ 209 ರನ್‌ಗಳ ಗೆಲುವು ಸಾಧಿಸಿತ್ತು. ಇದೇ ಕಾರಣದಿಂದ ಆಸೀಸ್​ ತಂಡ ಅಗ್ರಸ್ಥಾನಕ್ಕೇರಿದೆ.

VISTARANEWS.COM


on

icc men's test team rankings
Koo

ದುಬೈ: ಟೆಸ್ಟ್ ಕ್ರಿಕೆಟ್ ಶ್ರೇಯಾಂಕದಲ್ಲಿ ಐಸಿಸಿ(ICC Men’s Test Team Rankings) ವಾರ್ಷಿಕ ಪರಿಷ್ಕರಣೆ ಮಾಡಿದ್ದು, ಈ ಮೊದಲು ಅಗ್ರಸ್ಥಾನದಲ್ಲಿದ್ದ ಭಾರತ ಒಂದು ಸ್ಥಾನಗಳ ಕುಸಿತ ಕಂಡು ಎರಡನೇ ಸ್ಥಾನಕ್ಕೆ ಜಾರಿದೆ. ಎರಡನೇ ಸ್ಥಾನದಲ್ಲಿದ್ದ ಆಸ್ಟ್ರೇಲಿಯಾ ಮೊದಲ ಸ್ಥಾನಕ್ಕೇರಿದೆ. ಇಂಗ್ಲೆಂಡ್ (105), ದಕ್ಷಿಣ ಆಫ್ರಿಕಾ (103), ನ್ಯೂಜಿಲ್ಯಾಂಡ್​ (96), ಪಾಕಿಸ್ತಾನ (89), ಶ್ರೀಲಂಕಾ (83), ವೆಸ್ಟ್ ಇಂಡೀಸ್ (82) ಮತ್ತು ಬಾಂಗ್ಲಾದೇಶ (53) ಈ ಹಿಂದಿನ ಸ್ಥಾನದಲ್ಲೇ ಮುಂದುವರಿದೆ.

ನೂತನ ಶ್ರೇಯಾಂಕ ಪಟ್ಟಿ ಪ್ರಕಾರ ಆಸ್ಟ್ರೇಲಿಯಾ 124 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಭಾರತ 120 ಅಂಕದೊಂದಿದೆ 2ನೇ ಸ್ಥಾನಿಯಾಗಿದೆ. ಕಳೆದ ವರ್ಷ ಓವಲ್‌ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ನಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡಿತ್ತು. ಆಸ್ಟ್ರೇಲಿಯಾ 209 ರನ್‌ಗಳ ಗೆಲುವು ಸಾಧಿಸಿತ್ತು. ಇದೇ ಕಾರಣದಿಂದ ಆಸೀಸ್​ ತಂಡ ಅಗ್ರಸ್ಥಾನಕ್ಕೇರಿದೆ. ಈ ನೂತನ ಶ್ರೇಯಾಂಕಗಳ ನವೀಕರಣವು ಮೇ 2021 ರ ನಂತರ ತಂಡಗಳ ಪ್ರದರ್ಶನಗಳನ್ನು ಪರಿಗಣಿಸುತ್ತದೆ.


ಟಾಪ್​ 10 ತಂಡಗಳು


1.ಆಸ್ಟ್ರೇಲಿಯಾ- 30 ಪಂದ್ಯ, 124 ರೇಟಿಂಗ್​ ಅಂಕ

2. ಭಾರತ-26 ಪಂದ್ಯ, 120 ರೇಟಿಂಗ್​ ಅಂಕ

3. ಇಂಗ್ಲೆಂಡ್​- 30 ಪಂದ್ಯ, 105 ರೇಟಿಂಗ್​ ಅಂಕ

4. ದಕ್ಷಿಣ ಆಫ್ರಿಕಾ-18 ಪಂದ್ಯ, 103 ರೇಟಿಂಗ್​ ಅಂಕ

5. ನ್ಯೂಜಿಲ್ಯಾಂಡ್​-22 ಪಂದ್ಯ, 96 ರೇಟಿಂಗ್​ ಅಂಕ

6. ಪಾಕಿಸ್ತಾನ-17 ಪಂದ್ಯ, 89 ರೇಟಿಂಗ್​ ಅಂಕ

7. ಶ್ರೀಲಂಕಾ-18 ಪಂದ್ಯ, 83 ರೇಟಿಂಗ್​ ಅಂಕ

8. ವೆಸ್ಟ್​ ಇಂಡೀಸ್​-19 ಪಂದ್ಯ, 82 ರೇಟಿಂಗ್​ ಅಂಕ

9. ಬಾಂಗ್ಲಾದೇಶ-17 ಪಂದ್ಯ, 53 ರೇಟಿಂಗ್​ ಅಂಕ

10. ಜಿಂಬಾಬ್ವೆ-2 ಪಂದ್ಯ, 23 ರೇಟಿಂಗ್​ ಅಂಕ

ಇದನ್ನೂ ಓದಿ IPL 2024 Points Table: ರೋಚಕ 1 ರನ್ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಹೈದರಾಬಾದ್​

ಅಗ್ರಸ್ಥಾನದಲ್ಲೇ ಮುಂದುವರಿದ ಸೂರ್ಯ


ಬುಧವಾರ ಪ್ರಕಟಗೊಂಡಿದ್ದ ಐಸಿಸಿ ನೂತನ ಟಿ20(T20 Rankings) ಬ್ಯಾಟಿಂಗ್​ ಶ್ರೇಯಾಂಕ ಪಟ್ಟಿಯಲ್ಲಿ ಪಾಕಿಸ್ತಾನ ತಂಡದ ನಾಯಕ ಬಾಬರ್​ ಅಜಂ(babar azam) ಒಂದು ಸ್ಥಾನಗಳ ಪ್ರಗತಿ ಸಾಧಿಸಿದ್ದರು. ಟೀಮ್​ ಇಂಡಿಯಾದ ಸೂರ್ಯಕುಮಾರ್​ ಯಾದವ್(861 ರೇಟಿಂಗ್​ ಅಂಕ)​ ತಮ್ಮ ಅಗ್ರಸ್ಥಾನದಲ್ಲೇ ಮುಂದುವರಿದಿದ್ದಾರೆ.

ಬಾಬರ್​ ನ್ಯೂಜಿಲ್ಯಾಂಡ್​ ವಿರುದ್ಧದ ತವರಿನ ಟಿ20 ಪಂದ್ಯದಲ್ಲಿ ಆಡಿದ ನಾಲ್ಕು ಇನಿಂಗ್ಸ್​ಗಳಿಂದ ಒಂದು ಅರ್ಧಶತಕ ಮತ್ತು ಒಳಗೊಂಡಂತೆ ಒಟ್ಟು 125 ರನ್​ ಬಾರಿಸಿದ್ದರು. ಇದು ಬ್ಯಾಟರ್‌ಗಳಿಗಾಗಿ ನವೀಕರಿಸಿದ ಟಿ20 ಶ್ರೇಯಾಂಕಗಳ ಪಟ್ಟಿಯಲ್ಲಿ ಬಾಬರ್ ಒಂದು ಸ್ಥಾನವನ್ನು ಸುಧಾರಿಸಲು ನೆರವಾಯಿತು. ಬಾಬರ್​ 10 ರೇಟಿಂಗ್​ ಅಂಗಳ ಪ್ರಗತಿಯೊಂದಿಗೆ ಸದ್ಯ 763 ರೇಟಿಂಗ್​ ಅಂಕ ಗಳಿಸಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಸರಿ ಸುಮಾರು ಒಂದು ವರ್ಷಕ್ಕಿಂತಲೂ ಅಧಿಕವಾಗಿ ಟಿ20 ಬ್ಯಾಟಿಂಗ್​ ಶ್ರೇಯಾಂಕದಲ್ಲಿ ನಂ.1 ಸ್ಥಾನ ಕಾಯ್ದುಕೊಂಡಿರುವ ಟೀಮ್​ ಇಂಡಿಯಾದ ಹಾರ್ಡ್​ ಹಿಟ್ಟರ್​ ಸೂರ್ಯಕುಮಾರ್​ ಯಾದವ್​(suryakumar yadav) ಈ ಬಾರಿಯೂ ಅಗ್ರಸ್ಥಾನದಲ್ಲೇ ಮುಂದುವರಿಸಿದ್ದಾರೆ. ಆಸೀಸ್​ ವಿರುದ್ಧದ ಟಿ20 ಸರಣಿಯಲ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸಿದ ಅವರು ತಮ್ಮ ಚೊಚ್ಚಲ ನಾಯಕತ್ವದಲ್ಲ ಭಾರತಕ್ಕೆ ಟಿ20 ಸರಣಿಯನ್ನು ಗೆದ್ದು ಕೊಟ್ಟ ಸಾಧನೆ ಮಾಡಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಗಾಯಗೊಂಡು ಬಳಿಕ ಯಾವುದೇ ಸರಣಿ ಆಡಿಲ್ಲ. ಇದೇ ಜೂನ್​ನಲ್ಲಿ ನಡೆಯುವ ಟಿ20 ವಿಶ್ವಕಪ್​ ಕಪ್​ ಮೂಲಕ ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್​ ಆಡಲಿದ್ದಾರೆ.

Continue Reading

ಕ್ರೀಡೆ

Hockey India: ಭಾರತ ಮಹಿಳಾ ಹಾಕಿ ತಂಡಕ್ಕೆ 22 ವರ್ಷದ ಸಲೀಮಾ ನೂತನ ನಾಯಕಿ

Hockey India: ಸಲೀಮಾ ಟೇಟೆ ಇತ್ತೀಚೆಗಷ್ಟೇ ವರ್ಷದ ಆಟಗಾರ್ತಿ ಗೌರವಕ್ಕೆ ಪಾತ್ರರಾಗಿದ್ದರು. ಇದೀಗ ನಾಯಕಿಯಾಗಿ ಅವರಿಗೆ ಎಫ್‌ಐಎಚ್‌ ಪ್ರೊ ಲೀಗ್‌ ಮೊದಲ ಅಗ್ನಿಪರೀಕ್ಷೆಯಾಗಿದೆ.

VISTARANEWS.COM


on

Hockey India
Koo

ನವದೆಹಲಿ: ಮುಂಬರುವ ಬೆಲ್ಜಿಯಂ ಮತ್ತು ಇಂಗ್ಲೆಂಡ್‌ ಲೆಗ್‌ನ ಎಫ್‌ಐಎಚ್‌ ಪ್ರೊ ಲೀಗ್‌ ಹಾಕಿ ಪಂದ್ಯಾವಳಿಗಾಗಿ ಭಾರತ ಮಹಿಳಾ ಹಾಕಿ(Hockey India) ತಂಡ ಪ್ರಕಟಗೊಂಡಿದೆ. ಜತೆಗೆ ನಾಯಕತ್ವದಲ್ಲಿಯೂ ಬದಲಾವಣೆ ಸಂಭವಿಸಿದೆ. ಅನುಭವಿ ಗೋಲ್‌ಕೀಪರ್‌ ಸವಿತಾ ಪುನಿಯಾ(Savita Punia) ಬದಲು 22 ವರ್ಷದ ಮಿಡ್‌ ಫೀಲ್ಡರ್‌ ಸಲೀಮಾ ಟೇಟೆ(Salima Tete) ಅವರಿಗೆ ನಾಯಕತ್ವದ ಜವಾಬ್ದಾರಿ ವಹಿಸಲಾಗಿದೆ. ನವನೀತ್‌ ಕೌರ್‌(Navneet Kaur) ಉಪನಾಯಕಿಯಾಗಿದ್ದಾರೆ.

ರಾಣಿ ರಾಮ್​ಪಾಲ್​ ಅನುಪಸ್ಥಿತಿಯಲ್ಲಿ ಕಳೆದ ಕೆಲ ವರ್ಷಗಳಿಂದ ಸವಿತಾ ಪುನಿಯಾ ಭಾರತ ತಂಡವನ್ನು ಮುನ್ನಡೆಸುತ್ತಿದ್ದರು. ಆದರೆ, ಇವರ ನಾಯಕತ್ವದಲ್ಲಿ ಭಾರತ ಒಲಿಂಪಿಕ್‌ ಅರ್ಹತಾ ಸುತ್ತಿನ ಸ್ಪರ್ಧೆ ಹಾಗೂ ತವರಿನ ಪ್ರೊ ಲೀಗ್‌ ಪಂದ್ಯಗಳಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿತ್ತು. ಹೀಗಾಗಿ ಯುವ ಆಟಗಾರ್ತಿಗೆ ನಾಯಕತ್ವದ ಹೊಣೆ ನೀಡಲಾಗಿದೆ. ನಾಯಕತ್ವದಿಂದ ಮುಕ್ತರಾದರೂ ಕೂಡ ಸವಿತಾ ಪುನಿಯಾ ಪ್ರಧಾನ ಗೋಲ್​ ಕೀಪರ್ ಆಗಿ ತಂಡದಲ್ಲಿ ಮುಂದುವರಿದಿದ್ದಾರೆ.

ಸಲೀಮಾ ಟೇಟೆ ಇತ್ತೀಚೆಗಷ್ಟೇ ವರ್ಷದ ಆಟಗಾರ್ತಿ ಗೌರವಕ್ಕೆ ಪಾತ್ರರಾಗಿದ್ದರು. ಇದೀಗ ನಾಯಕಿಯಾಗಿ ಅವರಿಗೆ ಎಫ್‌ಐಎಚ್‌ ಪ್ರೊ ಲೀಗ್‌ ಮೊದಲ ಅಗ್ನಿಪರೀಕ್ಷೆಯಾಗಿದೆ. ನಾಯಕತ್ವದ ಬದಲಾವಣೆ ಮಾತ್ರವಲ್ಲದೆ ಡಿಫೆಂಡರ್‌ ಗುರ್ಜಿತ್‌ ಕೌರ್‌, ಮಿಡ್‌ ಫೀಲ್ಡರ್‌ಗಳಾದ ಸೋನಿಕಾ, ನಿಶಾ, ಸ್ಟ್ರೈಕರ್‌ ಬ್ಯೂಟಿ ಡುಂಗ್‌ಡುಂಗ್‌ ಅವರನ್ನು ಈ ಟೂರ್ನಿಗೆ ಕೈಬಿಡಲಾಗಿದೆ. ಇವರ ಬದಲು ಮಹಿಮಾ ಚೌಧರಿ, ಮನೀಷಾ ಚೌಹಾಣ್‌, ಪ್ರೀತಿ ದುಬೆ ಮತ್ತು ದೀಪಿಕಾ ಸೊರೆಂಗ್‌ ಅವಕಾಶ ಪಡೆದಿದ್ದಾರೆ.

ಇದನ್ನೂ ಓದಿ Hockey India: ಹಾಕಿ ಇಂಡಿಯಾಗೆ ಅತ್ಯುತ್ತಮ ಸಂಘಟಕ ರಾಷ್ಟ್ರ ಪ್ರಶಸ್ತಿ

ಬೆಲ್ಜಿಯಂ ಆವೃತ್ತಿಯ ಪಂದ್ಯಗಳು ಮೇ 22ರಿಂದ ಮೇ 26ರ ತನಕ; ಇಂಗ್ಲೆಂಡ್‌ ಆವೃತ್ತಿಯ ಪಂದ್ಯಗಳು ಜೂನ್​ 1ರಿಂದ ಜೂನ್​ 9ರ ತನಕ ನಡೆಯಲಿದೆ. ಲಂಡನ್‌ನಲ್ಲಿ ಆಡಲಾಗುವ ಪಂದ್ಯಗಳಲ್ಲಿ ಗ್ರೇಟ್‌ ಬ್ರಿಟನ್‌ ಮತ್ತು ಜರ್ಮನಿ ವಿರುದ್ಧ ಭಾರತ ಸೆಣಸಲಿದೆ.

ಭಾರತ ತಂಡ

ಡಿಫೆಂಡರ್: ನಿಕ್ಕಿ ಪ್ರಧಾನ್‌, ಉದಿತಾ, ಇಶಿಕಾ ಚೌಧರಿ, ಮೋನಿಕಾ, ಜ್ಯೋತಿ ಛತ್ರಿ, ಮಹಿಮಾ ಚೌಧರಿ.

ಮಿಡ್‌ ಫೀಲ್ಡರ್: ಸಲೀಮಾ ಟೇಟೆ (ನಾಯಕಿ), ನವನೀತ್‌ ಕೌರ್‌ (ಉಪನಾಯಕಿ), ವೈಷ್ಣವಿ ವಿಠuಲ್‌ ಫಾಲ್ಕೆ, ನೇಹಾ, ಜ್ಯೋತಿ, ಬಲ್‌ಜೀತ್‌ ಕೌರ್‌, ಮನೀಷಾ ಚೌಹಾಣ್‌, ಲಾಲ್ರೆಮಿಯಾಮಿ.

ಫಾರ್ವರ್ಡ್ಸ್‌: ಮುಮ್ತಾಜ್‌ ಖಾನ್‌, ಸಂಗೀತಾ ಕುಮಾರಿ, ದೀಪಿಕಾ, ಶರ್ಮಿಳಾ ದೇವಿ, ಪ್ರೀತಿ ದುಬೆ, ವಂದನಾ ಕಟಾರಿಯಾ, ಸುನೇಲಿಟಾ ಟೋಪೊ, ದೀಪಿಕಾ ಸೊರೆಂಗ್‌.

ಗೋಲ್‌ಕೀಪರ್: ಸವಿತಾ ಪುನಿಯಾ, ಬಿಚು ದೇವಿ ಖರಿಬಾಮ್‌.

Continue Reading
Advertisement
Saanya Iyer
ಫ್ಯಾಷನ್7 mins ago

Saanya Iyer: ಗ್ರ್ಯಾಂಡ್‌ ಲೆಹೆಂಗಾದಲ್ಲಿ ರಾಣಿಯಂತೆ ಕಂಗೊಳಿಸಿದ ನಟಿ ಸಾನ್ಯಾ ಅಯ್ಯರ್‌

Bharti Singh admitted to hospital
ಬಾಲಿವುಡ್12 mins ago

Bharti Singh: ಬಾಲಿವುಡ್‌ ಖ್ಯಾತ ನಿರೂಪಕಿ ಆಸ್ಪತ್ರೆಗೆ ದಾಖಲು

RCB vs GT
ಕ್ರೀಡೆ22 mins ago

RCB vs GT: ಬೆಂಗಳೂರಿನಲ್ಲಿ ನಾಳೆ ಐಪಿಎಲ್‌ ಹಬ್ಬ: ತಡರಾತ್ರಿಯೂ ಇದೆ ಮೆಟ್ರೋ ಸೇವೆ, ಪಾರ್ಕಿಂಗ್‌ ಎಲ್ಲೆಲ್ಲಿ?

Kidnap case in Bengaluru
ಬೆಂಗಳೂರು24 mins ago

Kidnap Case : ಗಾಂಜಾ ಮತ್ತಲ್ಲಿ ಆರ್ಮಿ ಆಫೀಸರ್ ಮಗನನ್ನೇ ಕಿಡ್ನ್ಯಾಪ್ ಮಾಡಿದ ಗೆಳೆಯರು

Costly wedding gift
ವಾಣಿಜ್ಯ32 mins ago

Costly wedding gift: ಮಗನಿಗೆ ಬಂಗಲೆ, ಸೊಸೆಗೆ ನೆಕ್ಲೇಸ್ ಗಿಫ್ಟ್‌ ಕೊಟ್ಟ ಅಂಬಾನಿ; ಬೆಲೆ ಕೇಳಿದರೆ ಅಚ್ಚರಿ!

kareena kapoor out from yash starrer toxic
ಬಾಲಿವುಡ್42 mins ago

Kareena Kapoor:‌ ರಾಕಿಂಗ್‌ ಸ್ಟಾರ್ ಯಶ್‌ ಸಿನಿಮಾದಿಂದ ಕರೀನಾ ಕಪೂರ್‌ ಔಟ್?

Shrirasthu Shubhamasthu serial will be end
ಕಿರುತೆರೆ43 mins ago

Shrirasthu Shubhamasthu: ಅಂತ್ಯ ಹಾಡಲಿದೆಯಾ ‘ಶ್ರೀರಸ್ತು ಶುಭಮಸ್ತು’? ಶಾರ್ವರಿ ರಹಸ್ಯ ಬಯಲಾಗೇ ಬಿಡ್ತಾ?

Stock Market
ದೇಶ47 mins ago

Stock Market: ಷೇರು ಪೇಟೆ ತಲ್ಲಣ; ಏಕಾಏಕಿ 700 ಅಂಕ ಕುಸಿದ ನಿಫ್ಟಿ, ಸಾವಿರಾರು ಕೋಟಿ ರೂ. ನಷ್ಟ

Bengaluru Rains
ಮಳೆ54 mins ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Smrithi Irani
ರಾಜಕೀಯ57 mins ago

Smirthi Irani: ಅಮೇಥಿಯಲ್ಲಿ ಕಾಂಗ್ರೆಸ್‌ ಸೋಲನ್ನು ಒಪ್ಪಿಕೊಂಡಿದೆ; ಸ್ಮೃತಿ ಇರಾನಿ ವ್ಯಂಗ್ಯ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru Rains
ಮಳೆ54 mins ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ12 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ22 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಟ್ರೆಂಡಿಂಗ್‌