Congress protests against Centre Demand for supply of rice to Annabhagya schemeCongress Protest: ಅನ್ನಭಾಗ್ಯ ಯೋಜನೆಗೆ ಅಕ್ಕಿ ಪೂರೈಸಲು ಆಗ್ರಹ; ಕೇಂದ್ರದ ವಿರುದ್ಧ ಹಲವೆಡೆ ಕಾಂಗ್ರೆಸ್‌ ಪ್ರತಿಭಟನೆ - Vistara News

ಉತ್ತರ ಕನ್ನಡ

Congress Protest: ಅನ್ನಭಾಗ್ಯ ಯೋಜನೆಗೆ ಅಕ್ಕಿ ಪೂರೈಸಲು ಆಗ್ರಹ; ಕೇಂದ್ರದ ವಿರುದ್ಧ ಹಲವೆಡೆ ಕಾಂಗ್ರೆಸ್‌ ಪ್ರತಿಭಟನೆ

Congress Protest: ಅನ್ನಭಾಗ್ಯ ಯೋಜನೆಗಾಗಿ ಕರ್ನಾಟಕಕ್ಕೆ ಹೆಚ್ಚುವರಿ ಅಕ್ಕಿ ಪೂರೈಸಬೇಕು ಎಂದು ಒತ್ತಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

VISTARANEWS.COM


on

congress protest
ಹಾಸನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಸಲಾಯಿತು. ಶಾಸಕ ಕೆ.ಎಂ.ಶಿವಲಿಂಗೇಗೌಡ ಸೇರಿ ಹಲವು ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ಪೂರೈಸದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯದ ವಿವಿಧೆಡೆ ಕಾಂಗ್ರೆಸ್‌ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಅಕ್ಕಿ ಪೂರೈಕೆಯಲ್ಲೂ ಮೋದಿ ಸರ್ಕಾರ ದ್ವೇಷ ರಾಜಕೀಯ ಮಾಡುತ್ತಿದೆ ಎಂದು ಕೈ ಮುಖಂಡರು ಹಾಗೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ಕೇಂದ್ರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

ಗ್ಯಾರಂಟಿ ಯೋಜನೆ ತಡೆಗೆ ಹ್ಯಾಕಿಂಗ್‌ ನಡೆಯುತ್ತಿದೆ: ಸತೀಶ್‌ ಜಾರಕಿಹೊಳಿ

ಬೆಳಗಾವಿ: ನಗರದ ಚೆನ್ನಮ್ಮ ವೃತ್ತದಲ್ಲಿ ಸಚಿವ ಸತೀಶ್ ಜಾರಕಿಹೊಳಿ‌ ನೇತೃತ್ವದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಮತ್ತಿತರರು ಇದ್ದರು.

ಸಚಿವ ಸತೀಶ್ ಜಾರಕಿಹೊಳಿ‌ ಮಾತನಾಡಿ, ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಕ್ಕಿ ಕೊಡುತ್ತಿಲ್ಲ. ಇದನ್ನು ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದೇವೆ. ನಾವು ಹಣಕೊಟ್ಟು ಅಕ್ಕಿ ಖರೀದಿ ಮಾಡುತ್ತಿದ್ದೇವೆ. ಹಾಗೆಯೇ ಕೇಂದ್ರದಿಂದ ಅಕ್ಕಿ ಕೇಳುತ್ತಿಲ್ಲ ಎಂದು ಹೇಳಿದರು.

10 ಕೆಜಿ ಅಕ್ಕಿ ಕೊಟ್ಟೆ ಕೊಡುತ್ತೇವೆ. ಒಂದು ತಿಂಗಳು ವಿಳಂಬ ಆಗಬಹುದು ಅಷ್ಟೇ ಎಂದ ಅವರು, ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆ ಐದು ವರ್ಷ ಕೊಡುತ್ತೇವೆ ಎಂದ ಅವರು, ಗ್ಯಾರಂಟಿ ಯೋಜನೆಗಳನ್ನು ತಡೆಯಲು ನಮ್ಮ ಮಷಿನ್‌ಗಳನ್ನು ಹ್ಯಾಕ್ ಮಾಡಲಾಗುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಮಾತು ತಪ್ಪಿದೆ

ಕಾರವಾರ: ಕಾರವಾರದ ಸುಭಾಷ್ ವೃತ್ತದಲ್ಲಿ ಜಿಲ್ಲಾಧ್ಯಕ್ಷ ಸಾಯಿ ಗಾಂವ್ಕರ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು. ಅಕ್ಕಿ ಕೊಡುವುದಾಗಿ ಹೇಳಿ ಕೇಂದ್ರ ಸರ್ಕಾರ ಮಾತು ತಪ್ಪಿದೆ. ಅನ್ನ ಭಾಗ್ಯ ಯೋಜನೆಗೆ ತೊಂದರೆ ಕೊಡಲು ಕೇಂದ್ರ ಅಕ್ಕಿ ನೀಡುತ್ತಿಲ್ಲ. ಇದು ಸಣ್ಣತನದ ರಾಜಕೀಯ ಎಂದು ಕಾಂಗ್ರೆಸ್ ನಾಯಕರು ಕಿಡಿಕಾರಿದರು. ಶಿರಸಿ ಶಾಸಕ ಭೀಮಣ್ಣ ನಾಯ್ಕ, ಕಾರವಾರ ಶಾಸಕ ಸತೀಶ್ ಸೈಲ್, ಮಾಜಿ ಶಾಸಕ ವಿ.ಎಸ್ ಪಾಟೀಲ್ ಭಾಗಿಯಾಗಿದ್ದರು.

ಕೇಂದ್ರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ

congress protest in vijayapur

ವಿಜಯಪುರ: ನಗರದ ಅಂಬೇಡ್ಕರ್ ಸರ್ಕಲ್ ಬಳಿ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕೈ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಕೇಂದ್ರ ಅಕ್ಕಿ ಕೊಡದೇ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ ಎಂದು ಕಿಡಿಕಾರಿದರು. ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡ ಅಬ್ದುಲ್ ಹಮ್ಮಿದ್ ಮುಶ್ರಿಫ್, ಕೆಪಿಸಿಸಿ ವಕ್ತಾರ ಎಸ್.ಎಂ. ಪಾಟೀಲ್ ಗಣಿಹಾರ, ಗಂಗಾಧರ ಸಂಬಣ್ಣಿ, ಕಾಂಗ್ರೆಸ್ ಪಕ್ಷದ ಪಾಲಿಕೆ ಸದಸ್ಯರು, ಕಾರ್ಯಕರ್ತರು ಭಾಗಿಯಾಗಿದ್ದರು.

congress protest in kolar
ಕೋಲಾರದಲ್ಲಿ ಕಾಂಗ್ರೆಸ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಬಡವರ ಸೇವೆಗೆ ಕೇಂದ್ರ ಅಡ್ಡಗಾಲು

ಚಿತ್ರದುರ್ಗ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ಜಿಲ್ಲಾ ಕಾಂಗ್ರೆಸ್ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ಸಚಿವ ಡಿ. ಸುಧಾಕರ್ ಮಾತನಾಡಿ. ಕೇಂದ್ರವು ರಾಜ್ಯದ ಬಡವರಿಗೆ ಅಕ್ಕಿ ಕೊಡುವ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ. ಹಾಗಾಗಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಎಫ್‌ಸಿಐಗೆ ಪತ್ರ ಬರೆದಾಗ ಅಕ್ಕಿ ಕೊಡುತ್ತೇವೆ ಎಂದಿದ್ದರು. ಈಗ ಅಕ್ಕಿ ದಾಸ್ತಾನು ಇಲ್ಲ ಎನ್ನುತ್ತಿದ್ದಾರೆ. ಕಾಂಗ್ರೆಸ್ ಮಾಡುತ್ತಿರುವ ಬಡವರ ಸೇವೆಗೆ ಕೇಂದ್ರ ಅಡ್ಡಗಾಲು ಹಾಕುತ್ತಿದೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ನೂರಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗಿದ್ದರು. ಶಾಸಕರಾದ ಎನ್.ವೈ.ಗೋಪಾಲಕೃಷ್ಣ, ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ ಸೇರಿ ಹಲವರು ಭಾಗಿಯಾಗಿದ್ದರು.

congress protest in Ramanagara
ರಾಮನಗರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಬಡವರ ಅಕ್ಕಿಗೆ ಕೇಂದ್ರ ಸರ್ಕಾರ ಕನ್ನ

ಬಳ್ಳಾರಿ: ನಗರದ ರಾಯಲ್ ವೃತ್ತದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಬಡವರ ಅಕ್ಕಿಗೆ ಕೇಂದ್ರ ಸರ್ಕಾರ ಕನ್ನ ಹಾಕಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

congress protest in tumkur
ತುಮಕೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಅಕ್ಕಿ ಕೊಳೆತು ಹೋಗುತ್ತಿದ್ದರೂ ಕೇಂದ್ರ ನೀಡುತ್ತಿಲ್ಲ

ರಾಯಚೂರು: ನಗರದ ಭಾರತ ಆಹಾರ ನಿಗಮ ಸಂಗ್ರಹಣಾ ಘಟಕ ಎದುರು ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ ನೇತೃತ್ವದಲ್ಲಿ ಕೈ ಕಾರ್ಯಕರ್ತರು ಹೋರಾಟ ನಡೆಸಿದರು.

ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ ಮಾತನಾಡಿ, ಎಫ್‌ಸಿಐ ಗೋದಾಮಿನಲ್ಲಿ ಅಕ್ಕಿ ಕೊಳೆತು ಹೋಗುತ್ತಿದೆ. ಬಡವರಿಗೆ ಹಂಚಲು ಅಕ್ಕಿ ಕೇಳುತ್ತಿದ್ದೇವೆ. ಆದರೆ. ಬಿಜೆಪಿ ಕೊಡುತ್ತಿಲ್ಲ. ಗ್ಯಾರಂಟಿ ಯೋಜನೆ ಭರವಸೆಯಂತೆ 10 ಕೆ.ಜಿ. ಅಕ್ಕಿ ಕೊಟ್ಟೆ ಕೊಡುತ್ತೇವೆ. ಬಿಜೆಪಿಯವರ ರಾಜಕೀಯವನ್ನು ಜನರಿಗೆ ತೋರಿಸಲು ಹೋರಾಟ ನಡೆಸಿದ್ದೇವೆ ಎಂದು ತಿಳಿಸಿದರು.

congress protest in madikeri
ಮಡಿಕೇರಿಯಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮಂಡ್ಯದಲ್ಲಿ ಎನ್. ಚಲುವರಾಯಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ

ಮಂಡ್ಯ: ನಗರದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಸಚಿವ ಎನ್. ಚಲುವರಾಯಸ್ವಾಮಿ ನೇತೃತ್ವದಲ್ಲಿ ಕೈ ನಾಯಕರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ ಕಾರ್ಯಕರ್ತರು, ಹಾಡಿನ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ವ್ಯಂಗ್ಯವಾಡಿದರು. ಇದೇ ವೇಳೆ ಮೊಸರನ್ನ ವಿತರಣೆ ಮಾಡುವ ಮೂಲಕ ಕೇಂದ್ರದ ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದರು. ಪ್ರತಿಭಟನೆಯಲ್ಲಿ ಶಾಸಕ ರವಿಕುಮಾರ್ ಗಣಿಗ, ರಮೇಶ್ ಬಾಬು, ಬಂಡಿಸಿದ್ದೇಗೌಡ ಸೇರಿ ಹಲವರು ಭಾಗಿಯಾಗಿದ್ದರು.

congress protest in chikkamagaluru
ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ.

ಅನ್ಯಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಡ್ಡಗಾಲು ಹಾಕುತ್ತಿದೆ

ಹಾವೇರಿ: ನಗರದ ಪುರಸಿದ್ದೇಶ್ವರ ಗುಡಿಯಿಂದ ಹೊಸಮನಿ ಸಿದ್ದಪ್ಪ ವೃತ್ತದವರೆಗೆ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಡವರ ಹೊಟ್ಟೆ ಮೇಲೆ ಕೇಂದ್ರ ಸರ್ಕಾರ ಹೊಡೆಯುತ್ತಿದೆ, ಅನ್ಯಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಡ್ಡಗಾಲು ಹಾಕುತ್ತಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಶಾಸಕರಾದ ಯುಬಿ ಬಣಕಾರ, ರುದ್ರಪ್ಪ ಲಮಾಣಿ, ಬಸವರಾಜ ಶಿವಣ್ಣನವರ್, ಶ್ರೀನಿವಾಸ ಮಾನೆ, ಪ್ರಕಾಶ ಕೋಳಿವಾಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

congress protest in Dharwad
ಧಾರಾವಾಡ ಡಿಸಿ ಕಚೇರಿ ಮುಂಭಾಗದಲ್ಲಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ
ಉಸ್ತುವಾರಿ ಸಚಿವ ಸಂತೋಷ ಲಾಡ್ ಸೇರಿ ಹಲವರು ಭಾಗಿಯಾಗಿದ್ದರು.
congress protest in bagalkot
ಬಾಗಲಕೋಟೆ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : ಮಳೆ ಶುರುವಾದರೆ ಸಾಕು ಗೋಕಾಕ ಜನರಿಗೆ ಗುಡ್ಡದ ಭೂತದ ಕಾಟ!

Karnataka Rain : ಮಳೆ ಪ್ರಾರಂಭವಾಗುತ್ತಿದ್ದಂತೆ ಗೋಕಾಕ ಜನರಿಗೆ ಗುಡ್ಡದ ಭೂತದ ಕಾಟ ಹೆಚ್ಚಾಗುತ್ತದೆ. ಇಷ್ಟಕ್ಕೂ ಏನಿದು ಗುಡ್ಡದ ಭೂತದ ಕಾಟ ಅಂದರೆ ಗೋಕಾಕ ಬೆಟ್ಟದಿಂದ ದೊಡ್ಡ ದೊಡ್ಡ ಬಂಡೆಕಲ್ಲುಗಳು ಉರುಳಿ ಬೀಳುತ್ತಿವೆ.

VISTARANEWS.COM


on

By

karnataka rain
Koo

ಬೆಳಗಾವಿ: ಬೆಳಗಾವಿಯ ಗೋಕಾಕ ತಾಲೂಕಿನ ಗೋಕಾಕ ಕೊಣ್ಣೂರ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಗುಡ್ಡದ ಭೂತದ ಕಾಟ (Karnataka Rain) ಶುರುವಾಗಿದೆ. ಅದು ಕೂಡ ಮಳೆ ಪ್ರಾರಂಭವಾಗುತ್ತಿದ್ದಂತೆ ಗೋಕಾಕ ಜನರಿಗೆ ಗುಡ್ಡದ ಭೂತದ ಕಾಟ ಹೆಚ್ಚಾಗುತ್ತದೆ. ಇಷ್ಟಕ್ಕೂ ಏನಿದು ಗುಡ್ಡದ ಭೂತದ ಕಾಟ ಅಂದರೆ ಗೋಕಾಕ ಬೆಟ್ಟದಿಂದ ದೊಡ್ಡ ದೊಡ್ಡ ಬಂಡೆಕಲ್ಲುಗಳು ಉರುಳಿ ಬೀಳುತ್ತಿವೆ.

karnataka rain

ಗೋಕಾಕ ಹಾಗೂ ಕೊಣ್ಣೂರು ಸಂಪರ್ಕ ಕಲ್ಪಿಸುವ ರಸ್ತೆಯ ಮಧ್ಯೆ ಬಂಡೆಗಳು ಉರುಳಿ ಬೀಳುತ್ತಿವೆ. ಬೆಟ್ಟದಿಂದ ಉರುಳುತ್ತಿರುವ ಬಂಡೆಗಳಿಂದ ಸವಾರರು, ಜನರು ಭಯಭೀತರಾಗಿದ್ದಾರೆ. ಮಳೆಯಿಂದಾಗಿ ಬಂಡೆಗಳ ಕೆಳಗಿನ ಮಣ್ಣು ಕುಸಿಯುತ್ತಿದೆ. ಇದರಿಂದಾಗಿ ಬಂಡೆ ಕಲ್ಲುಗಳು ರಸ್ತೆಗೆ ಬಂದು ಬೀಳುತ್ತಿವೆ. ರಸ್ತೆಯಲ್ಲಿ ಸಂಚರಿಸುವವರು ಪ್ರಾಣ ಭಯದಲ್ಲೇ ಓಡಾಡುವಂತಾಗಿದೆ.

karnataka rain

ಕೊಚ್ಚಿ ಹೋದ ಬೈಕ್‌

ವಿಜಯಪುರದಲ್ಲಿ ನಿನ್ನೆ ಗುರುವಾರ ತಡರಾತ್ರಿ ಸುರಿದ ಭಾರಿ ಮಳೆಗೆ ನದಿ, ಹಳ್ಳಗಳು ತುಂಬಿ ಹರಿಯುತ್ತಿದೆ. ವಿಜಯಪುರ ಜಿಲ್ಲೆಯ ಸಾರವಾಡ ಗ್ರಾಮದಲ್ಲಿ ಡೋಣಿ ನದಿ ಉಕ್ಕಿ ಹರಿದಿದೆ. ಪರಿಣಾಮ ಅಕ್ಕ ಪಕ್ಕದ ಜಮೀನುಗಳಿಗೆ ನೀರು ನುಗ್ಗಿದೆ. ವಿಜಯಪುರ ನಗರದಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಮಳೆ ನೀರಲ್ಲಿ ಬೈಕ್‌ವೊಂದು ಕೊಚ್ಚಿ ಹೋದ ಘಟನೆ ವಿಜಯಪುರ ನಗರದ ಮನಗೂಳಿ ಅಗಸಿ ಬಳಿ ನಡೆದಿದೆ. ಉಕ್ಕಿ ಹರಿಯುತ್ತಿರುವ ಮಳೆ ನೀರಲ್ಲಿ ಬೈಕ್ ಕೊಂಡೊಯ್ಯುವ ಹರಸಾಹಸದ ವೇಳೆ ಕೊಚ್ಚಿಹೋಗಿದೆ.

ಇದನ್ನೂ ಓದಿ: Electric shock : ಶಾಲೆಗೆ ಹೋದವಳು ಮಸಣ ಸೇರಿದಳು; ಕರೆಂಟ್‌ ಶಾಕ್‌ಗೆ ಒದ್ದಾಡಿ ಪ್ರಾಣಬಿಟ್ಟಳು

ಇತ್ತ ತುಮಕೂರು ಜಿಲ್ಲೆಯಲ್ಲಿ ರಾತ್ರಿ ಧಾರಕಾರ ಸುರಿದ ಮಳೆ ರಭಸಕ್ಕೆ ಕೆರೆ, ಕಟ್ಟೆಗಳು ಕೋಡಿ ಬಿದ್ದಿದ್ದವು. ತುಮಕೂರು ಜಿಲ್ಲೆಯ ಕೊರಟಗೆರೆ ಬಳಿಯಿರುವ ಜಂಪೇನಹಳ್ಳಿ ಕೆರೆ ನೀರಿಲ್ಲದೇ ಬತ್ತಿಹೋಗಿತ್ತು. ಇದೀಗ ತುಂಬಿ ಹರಿಯುತ್ತಿದ್ದು, ರೈತರಲ್ಲಿ ಮಂದಹಾಸ ಮೂಡಿದೆ.

ಇತ್ತ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ಕೃಷ್ಣಾ ನದಿ ಉಗಮ ಸ್ಥಾನ ಮಹಾಬಲೇಶ್ವರದಲ್ಲಿ ಭಾರೀ ಮಳೆ ಹಿನ್ನೆಲೆ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭವಾಗಿದೆ. ಈ ವರ್ಷದ ಮೊದಲ ಒಳಹರಿವು 1,768 ಕ್ಯೂಸೇಕ್ ದಾಖಲಾಗಿದ್ದು, ಕೃಷ್ಣಾ ನದಿ ಪಾತ್ರದ ಜನರು ಸಂತಸಗೊಂಡಿದ್ದಾರೆ. ಕಳೆದ ವರ್ಷ ಜೂನ್ ಕಳೆದರು ಒಳಹರಿವು ಇರಲಿಲ್ಲ. ಈ ವರ್ಷ ಜೂನ್ ಮೊದಲ ವಾರವೇ ಒಳಹರಿವು ಆರಂಭವಾಗಿದೆ.

ಗ್ರಾಮಕ್ಕೆ ರಭಸವಾಗಿ ನುಗ್ಗಿದ ನೀರು

ಚಿತ್ರದುರ್ಗ ಜಿಲ್ಲೆಯಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಕೂನಬೇವು ಗ್ರಾಮದ ಮನೆಗಳಿಗೆ ನೀರು ನುಗ್ಗಿದೆ. ವರುಣ ಅಬ್ಬರಕ್ಕೆ ಕೊನಬೇವು ಗ್ರಾಮ ಜಲಾವೃತಗೊಂಡಿತ್ತು. ಗ್ರಾಮದ ರಸ್ತೆಯಲ್ಲಿ ನೀರು ನದಿಯಂತೆ ಹರಿದಿತ್ತು. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿತ್ತು. ಚಿತ್ರದುರ್ಗ ತಾಲೂಕಿನ ಬೆಳಘಟ್ಟ ಗ್ರಾಮದಲ್ಲಿ ನೀರಿನಲ್ಲಿ ಬಸ್ ಸಿಲುಕಿದ ಘಟನೆಯು ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಆಗುಂಬೆಯಲ್ಲಿ ದುರಂತ; ಅಡಿಕೆ ತೋಟದಲ್ಲಿ ಕಳೆ ಕೀಳುವಾಗ ಸಿಡಿಲು ಬಡಿದು ವ್ಯಕ್ತಿ ಸಾವು

Karnataka Rain : ಭಾರಿ ಮಳೆಗೆ ಅವಾಂತರವು ಮುಂದುವರಿದಿದ್ದು, ಆಗುಂಬೆಯಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬ ಮೃತಪಟ್ಟಿದ್ದಾರೆ. ಕೆಲ ಗ್ರಾಮದಲ್ಲಿ ನೀರು ನುಗ್ಗಿದ್ದು, ನದಿಯಂತೆ ಸೃಷ್ಟಿಯಾಗಿದೆ.

VISTARANEWS.COM


on

By

karnataka Rain
Koo

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು (Karnataka Rain) ಮೃತಪಟ್ಟಿದ್ದಾರೆ. ನಾಗೇಂದ್ರ (40) ಸಿಡಿಲು ಬಡಿದು ಮೃತಪಟ್ಟವರು.

ಆಗುಂಬೆ ಸಮೀಪದ ಬೀದರಗೋಡು ಗ್ರಾಮದ ನಿವಾಸಿಯಾದ ನಾಗೇಂದ್ರ ಅವರು ಬಾಳೆಹಳ್ಳಿ ಗ್ರಾಮದ ಗುಜುಗೊಳ್ಳಿ ಕೇಶವ ಕಿಣಿ ಎಂಬುವರ ಅಡಿಕೆ ತೋಟದಲ್ಲಿ ಕಳೆ ತೆಗೆಯುತ್ತಿದ್ದರು. ಈ ಸಂದರ್ಭದಲ್ಲಿ ಭಾರಿ ಮಳೆಯೊಂದಿಗೆ ಸಿಡಿಲು ಬಡಿದಿದೆ. ಪರಿಣಾಮ ನಾಗೇಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗುಂಬೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಮಳೆ ಶುರುವಾಗುತ್ತಿದ್ದಂತೆ ಗೋಕಾಕ ಜನರಿಗೆ ಗುಡ್ಡದ ಭೂತದ ಕಾಟ!

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಗೋಕಾಕ ಕೊಣ್ಣೂರ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಗುಡ್ಡದ ಭೂತದ ಕಾಟ ಶುರುವಾಗಿದೆ. ಅದು ಕೂಡ ಮಳೆ ಪ್ರಾರಂಭವಾಗುತ್ತಿದ್ದಂತೆ ಗೋಕಾಕ ಜನರಿಗೆ ಗುಡ್ಡದ ಭೂತದ ಕಾಟ ಹೆಚ್ಚಾಗುತ್ತದೆ. ಇಷ್ಟಕ್ಕೂ ಏನಿದು ಗುಡ್ಡದ ಭೂತದ ಕಾಟ ಅಂದರೆ ಗೋಕಾಕ ಬೆಟ್ಟದಿಂದ ದೊಡ್ಡ ದೊಡ್ಡ ಬಂಡೆಕಲ್ಲುಗಳು ಉರುಳಿ ಬೀಳುತ್ತಿವೆ.

karnataka rain

ಗೋಕಾಕ ಹಾಗೂ ಕೊಣ್ಣೂರು ಸಂಪರ್ಕ ಕಲ್ಪಿಸುವ ರಸ್ತೆಯ ಮಧ್ಯೆ ಬಂಡೆಗಳು ಉರುಳಿ ಬೀಳುತ್ತಿವೆ. ಬೆಟ್ಟದಿಂದ ಉರುಳುತ್ತಿರುವ ಬಂಡೆಗಳಿಂದ ಸವಾರರು, ಜನರು ಭಯಭೀತರಾಗಿದ್ದಾರೆ. ಮಳೆಯಿಂದಾಗಿ ಬಂಡೆಗಳ ಕೆಳಗಿನ ಮಣ್ಣು ಕುಸಿಯುತ್ತಿದೆ. ಇದರಿಂದಾಗಿ ಬಂಡೆ ಕಲ್ಲುಗಳು ರಸ್ತೆಗೆ ಬಂದು ಬೀಳುತ್ತಿವೆ. ರಸ್ತೆಯಲ್ಲಿ ಸಂಚರಿಸುವವರು ಪ್ರಾಣ ಭಯದಲ್ಲೇ ಓಡಾಡುವಂತಾಗಿದೆ.

ಇದನ್ನೂ ಓದಿ: Assault Case : ಚಿಪ್ಸ್ ಕೊಡಿಸುವ ನೆಪದಲ್ಲಿ ಮಗುವಿನ ಕತ್ತು ಕೊಯ್ದ ಕಿರಾತಕ

ವಿಜಯಪುರದಲ್ಲಿ ನಿನ್ನೆ ಗುರುವಾರ ತಡರಾತ್ರಿ ಸುರಿದ ಭಾರಿ ಮಳೆಗೆ ನದಿ, ಹಳ್ಳಗಳು ತುಂಬಿ ಹರಿಯುತ್ತಿದೆ. ವಿಜಯಪುರ ಜಿಲ್ಲೆಯ ಸಾರವಾಡ ಗ್ರಾಮದಲ್ಲಿ ಡೋಣಿ ನದಿ ಉಕ್ಕಿ ಹರಿದಿದೆ. ಪರಿಣಾಮ ಅಕ್ಕ ಪಕ್ಕದ ಜಮೀನುಗಳಿಗೆ ನೀರು ನುಗ್ಗಿದೆ. ವಿಜಯಪುರ ನಗರದಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಮಳೆ ನೀರಲ್ಲಿ ಬೈಕ್‌ವೊಂದು ಕೊಚ್ಚಿ ಹೋದ ಘಟನೆ ವಿಜಯಪುರ ನಗರದ ಮನಗೂಳಿ ಅಗಸಿ ಬಳಿ ನಡೆದಿದೆ. ಉಕ್ಕಿ ಹರಿಯುತ್ತಿರುವ ಮಳೆ ನೀರಲ್ಲಿ ಬೈಕ್ ಕೊಂಡೊಯ್ಯುವ ಹರಸಾಹಸದ ವೇಳೆ ಕೊಚ್ಚಿಹೋಗಿದೆ.

ಇತ್ತ ತುಮಕೂರು ಜಿಲ್ಲೆಯಲ್ಲಿ ರಾತ್ರಿ ಧಾರಕಾರ ಸುರಿದ ಮಳೆ ರಭಸಕ್ಕೆ ಕೆರೆ, ಕಟ್ಟೆಗಳು ಕೋಡಿ ಬಿದ್ದಿದ್ದವು. ತುಮಕೂರು ಜಿಲ್ಲೆಯ ಕೊರಟಗೆರೆ ಬಳಿಯಿರುವ ಜಂಪೇನಹಳ್ಳಿ ಕೆರೆ ನೀರಿಲ್ಲದೇ ಬತ್ತಿಹೋಗಿತ್ತು. ಇದೀಗ ತುಂಬಿ ಹರಿಯುತ್ತಿದ್ದು, ರೈತರಲ್ಲಿ ಮಂದಹಾಸ ಮೂಡಿದೆ.

ಇತ್ತ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ಕೃಷ್ಣಾ ನದಿ ಉಗಮ ಸ್ಥಾನ ಮಹಾಬಲೇಶ್ವರದಲ್ಲಿ ಭಾರೀ ಮಳೆ ಹಿನ್ನೆಲೆ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭವಾಗಿದೆ. ಈ ವರ್ಷದ ಮೊದಲ ಒಳಹರಿವು 1,768 ಕ್ಯೂಸೇಕ್ ದಾಖಲಾಗಿದ್ದು, ಕೃಷ್ಣಾ ನದಿ ಪಾತ್ರದ ಜನರು ಸಂತಸಗೊಂಡಿದ್ದಾರೆ. ಕಳೆದ ವರ್ಷ ಜೂನ್ ಕಳೆದರು ಒಳಹರಿವು ಇರಲಿಲ್ಲ. ಈ ವರ್ಷ ಜೂನ್ ಮೊದಲ ವಾರವೇ ಒಳಹರಿವು ಆರಂಭವಾಗಿದೆ.

ಗ್ರಾಮಕ್ಕೆ ರಭಸವಾಗಿ ನುಗ್ಗಿದ ನೀರು

ಚಿತ್ರದುರ್ಗ ಜಿಲ್ಲೆಯಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಕೂನಬೇವು ಗ್ರಾಮದ ಮನೆಗಳಿಗೆ ನೀರು ನುಗ್ಗಿದೆ. ವರುಣ ಅಬ್ಬರಕ್ಕೆ ಕೊನಬೇವು ಗ್ರಾಮ ಜಲಾವೃತಗೊಂಡಿತ್ತು. ಗ್ರಾಮದ ರಸ್ತೆಯಲ್ಲಿ ನೀರು ನದಿಯಂತೆ ಹರಿದಿತ್ತು. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿತ್ತು. ಚಿತ್ರದುರ್ಗ ತಾಲೂಕಿನ ಬೆಳಘಟ್ಟ ಗ್ರಾಮದಲ್ಲಿ ನೀರಿನಲ್ಲಿ ಬಸ್ ಸಿಲುಕಿದ ಘಟನೆಯು ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಗುಡುಗು ಸಹಿತ ಭಾರಿ ಮಳೆ; ಇಂದಿನಿಂದ 5 ದಿನ ಮೀನುಗಾರರು ಸಮುದ್ರಕ್ಕೆ ಇಳಿಯುವಂತಿಲ್ಲ

Karnataka Weather forecast : ಒಳನಾಡು, ಮಲೆನಾಡು ಸೇರಿದಂತೆ ಕರಾವಳಿ ಭಾಗದಲ್ಲಿ ಭಾರಿ (Heavy Rain news) ಮಳೆಯಾಗಲಿದೆ. ಕರಾವಳಿಯಲ್ಲಿ ಗಂಟೆಗೆ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜೂನ್ 7 ರಿಂದ 10ರವರೆಗೆ ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ. ಐದು ದಿನಗಳ ಕಾಲ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ದಕ್ಷಿಣ ಒಳನಾಡು, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ವ್ಯಾಪಕ ಮಳೆಯಾಗುವ (Heavy Rain alert) ನಿರೀಕ್ಷೆ ಇದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ, ತುಮಕೂರು, ಬೆಂಗಳೂರು ನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದ ಭಾರಿ ಮಳೆ ಸಾಧ್ಯತೆ ಇದೆ. ವಿಜಯಪುರ, ಕೊಪ್ಪಳ, ವಿಜಯನಗರ ಮತ್ತು ಹಾವೇರಿ, ಬೆಳಗಾವಿ, ಬಾಗಲಕೋಟೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಚದುರಿದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡಯಲ್ಲಿ ಭಾರೀ ಮಳೆ ಸಾಧ್ಯತೆ ಇದೆ.

ಬೆಂಗಳೂರಲ್ಲಿ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Physical Abuse : ಮಹಿಳೆಯರು ಚಳಿ ಬಿಡಿಸಲು ಬಂದಾಗ ಕಾಂಪೌಂಡ್‌ ಹಾರಿದ ಪುರಸಭೆ ಮಾಜಿ ಅಧ್ಯಕ್ಷೆಯ ಪತಿಗೆ ಧರ್ಮದೇಟು

ಯೆಲ್ಲೋ ಅಲರ್ಟ್ ಘೋಷಣೆ:

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಐದು ದಿನಗಳು ಸಮುದ್ರಕ್ಕೆ ಇಳಿಯುವಂತಿಲ್ಲ

ಜೂನ್ 7ರಿಂದ 10 ರವರೆಗೆ ಹಲವೆಡೆ ಗಂಟೆಗೆ 35 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಈ ಅವಧಿಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Uttara Kannada News: ಉ.ಕ ಜಿಲ್ಲೆ ಬಿಜೆಪಿಯ ಗಟ್ಟಿನೆಲ ಎಂಬುದು ಮತ್ತೊಮ್ಮೆ ಸಾಬೀತು: ಹರಿಪ್ರಕಾಶ್‌ ಕೋಣೆಮನೆ

Uttara Kannada News: ವಿಶ್ವವೇ ಕುತೂಹಲದಿಂದ ನಿರೀಕ್ಷಿಸುತ್ತಿದ್ದ ಲೋಕಸಭಾ ಚುನಾವಣೆ ಮುಕ್ತಾಯವಾಗಿ ಫಲಿತಾಂಶ ಬಂದಿದ್ದು, ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿ ಆಗುವ ಕಡೆಗೆ ಹೆಜ್ಜೆ ಇಡುತ್ತಿರುವುದು ಹೆಮ್ಮೆಯ ಸಂಗತಿ. ಈ ಬಾರಿ ಚುನಾವಣೆಯಲ್ಲಿ ಇವಿಎಂ ಮೇಲೆ ಯಾರೂ ಆರೋಪ ಮಾಡಿಲ್ಲ, ಮೋದಿಯವರು ಗೆದ್ದರು, ಇವಿಎಂ ಕೂಡ ಗೆದ್ದಿತು. ಮೋದಿ ಮತ್ತೆ ಪ್ರಧಾನಮಂತ್ರಿ ಆಗುತ್ತಾರೆ, ಸ್ಥಿರ ಸರ್ಕಾರ ಕೊಡಲಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್‌ ಕೋಣೆಮನೆ ಹೇಳಿದರು.

VISTARANEWS.COM


on

BJP State Spokesperson Hariprakash konemane pressmeet at yallapura
Koo

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆ (Uttara Kannada News) ಬಿಜೆಪಿಯ ಗಟ್ಟಿನೆಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಮತದಾರರು ಅತ್ಯಂತ ಗರಿಷ್ಠ ಪ್ರಮಾಣದ ಅಂತರದಲ್ಲಿ ಗೆಲ್ಲಿಸಿರುವುದು ಗಮನಾರ್ಹ ಸಂಗತಿ ಎಂದು ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್‌ ಕೋಣೆಮನೆ ತಿಳಿಸಿದರು.

ಪಟ್ಟಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ, ಯಲ್ಲಾಪುರ-ಮುಂಡಗೋಡದಲ್ಲಿ ನಮ್ಮ ನಿರೀಕ್ಷೆಯಂತೆ ಫಲಿತಾಂಶ ಬಂದಿದೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆಯ್ಕೆ ಮೊದಲು ಬಹಳ ಚರ್ಚೆಗೆ ಗ್ರಾಸವಾಗಿತ್ತು. ಕಾರ್ಯಕರ್ತರ ಪರಿಶ್ರಮ ಮತ್ತು ಪಕ್ಷದ ನೇತೃತ್ವ, ಸಂಘಟನೆಗಳಿಂದ ಬಿಜೆಪಿಯ ವೈಚಾರಿಕತೆ ಮತದಾರರನ್ನು ತಲುಪಿದೆ. ಉತ್ತರ ಕನ್ನಡ ಜಿಲ್ಲೆಯ ಮತದಾರರು ಪ್ರಬುದ್ಧರಾಗಿ ಮತ ಚಲಾವಣೆ ಮಾಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: Karnataka Weather : ಭಾರಿ ಮಳೆಗೆ ಶ್ರೀನಿವಾಸಪುರದ ರೈಲ್ವೆ ಅಂಡರ್‌ ಪಾಸ್‌ ಜಲಾವೃತ; ಇನ್ನೈದು ದಿನ ಭಾರಿ ವರ್ಷಧಾರೆ

ದೇಶದಲ್ಲಿ 63 ಕೋಟಿ ಜನ ಮತದಾರರಿಂದ ಮತ ಚಲಾವಣೆಯಾಗಿದೆ. 76 ದಿನ ಪ್ರಚಾರ ಮಾಡಲಾಗಿದೆ. ವಿಶ್ವವೇ ಕುತೂಹಲದಿಂದ ನಿರೀಕ್ಷಿಸುತ್ತಿದ್ದ ಚುನಾವಣೆ ಮುಕ್ತಾಯವಾಗಿ ಫಲಿತಾಂಶ ಬಂದಿದೆ. ದೇಶ ಮತ್ತು ಜಗತ್ತು ಗಮನ ಸೆಳೆದ ಚುನಾವಣೆಯಲ್ಲಿ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿ ಆಗುವ ಕಡೆಗೆ ಹೆಜ್ಜೆ ಇಡುತ್ತಿರುವುದು ಹೆಮ್ಮೆಯ ಸಂಗತಿ. ಈ ಬಾರಿ ಚುನಾವಣೆಯಲ್ಲಿ ಇವಿಎಂ ಮೇಲೆ ಆರೋಪ ಮಾಡಿಲ್ಲ, ಮೋದಿಯವರು ಗೆದ್ದರು, ಇವಿಎಂ ಕೂಡ ಗೆದ್ದಿತು. ಒಟ್ಟಾರೆ ಪ್ರಜಾಪ್ರಭುತ್ವ ವ್ಯವಸ್ಥೆ ಗೆದ್ದಿದೆ. ಮೋದಿ ಮತ್ತೆ ಪ್ರಧಾನಮಂತ್ರಿ ಆಗುತ್ತಾರೆ, ಸ್ಥಿರ ಸರ್ಕಾರ ಕೊಡಲಿದ್ದಾರೆ ಎಂದು ಕೋಣೆಮನೆ ಹೇಳಿದರು.

ಬಿಜೆಪಿ ಮಂಡಲಾಧ್ಯಕ್ಷ ಪ್ರಸಾದ ಹೆಗಡೆ ಮಾತನಾಡಿ, ಯಲ್ಲಾಪುರ ಹಾಗೂ ಪ್ರತಿ ಗ್ರಾಮ ಪಂಚಾಯಿತಿ ಸೇರಿದಂತೆ ಶೇಕಡಾ 90% ಬೂತ್‌ಗಳಲ್ಲಿ ಲೀಡ್‌ ಗಳಿಸಿದ್ದೇವೆ. ಪಕ್ಷ ಹಾಗೂ ಕಾರ್ಯಕರ್ತರ ನೇತೃತ್ವದಲ್ಲಿ ಸದೃಢವಾಗಿ ವಿಶ್ವಾಸದೊಂದಿಗೆ ಚುನಾವಣಾ ಎದುರಿಸಿದ್ದೇವೆ ಎಂದು ಹೇಳಿದರು.

ಚುನಾವಣಾ ಸಂದರ್ಭದಲ್ಲಿ ನಮ್ಮ ಶಾಸಕರು ಬಿಜೆಪಿ ಪರವಾಗಿ ನಿಲ್ಲದೇ ಇರುವಂತಹ ಸಂದರ್ಭದಲ್ಲಿ ಕಾರ್ಯಕರ್ತರ ನೇತೃತ್ವವೇ ನಮ್ಮ ನಾಯಕತ್ವವೆಂದು ನಂಬಿ, ಚುನಾವಣೆ ಎದುರಿಸಿ, ಯಲ್ಲಾಪುರ ತಾಲೂಕಿನಲ್ಲಿ 14,708 ಮತಗಳನ್ನು ಪಡೆದಿದ್ದೇವೆ. ವಿಶ್ವಾಸದೊಂದಿಗೆ ಪಕ್ಷವನ್ನು ಸಂಘಟಿಸಿದ್ದೇವೆ ಮತ್ತು ಮುಂದೆಯೂ ಸಂಘಟಿಸುತ್ತೇವೆ. ಈ ಗೆಲುವಿಗೆ ಕಾರಣೀಕರ್ತರಾದ ಪಕ್ಷದ ಕಾರ್ಯಕರ್ತರಿಗೆ, ಮತದಾರರಿಗೆ ಹಾಗೂ ನಮಗೆ ಸಹಕಾರ ನೀಡಿದ ಮಾಧ್ಯಮಕ್ಕೆ ಕೃತಜ್ಞತೆಗಳು ಎಂದರು.

ಬಿಜೆಪಿ ಪಕ್ಷದಲ್ಲಿದ್ದೂ, ಸೋತ ಸಂಸದರಾದ ಡಿ.ಕೆ ಸುರೇಶ್‌ ಅವರನ್ನು ಸಮಾಧಾನ ಮಾಡಲು ಹೋದ ನಮ್ಮ ಶಾಸಕರ ನಡೆಯನ್ನು ಯಲ್ಲಾಪುರ ಮಂಡಲದಿಂದ ಖಂಡಿಸುತ್ತೇವೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: Money Guide: ಈ ಯೋಜನೆಯಲ್ಲಿ ಪ್ರತಿ ತಿಂಗಳು 3,475 ರೂ. ಹೂಡಿಕೆ ಮಾಡಿ 1 ಲಕ್ಷ ರೂ. ಮಾಸಿಕ ಪಿಂಚಣಿ ಪಡೆಯಿರಿ

ಈ ಸಂದರ್ಭದಲ್ಲಿ ಬಿಜೆಪಿ ವಿವಿಧ ಘಟಕಗಳ ಪ್ರಮುಖರಾದ ಗಣಪತಿ ಮಾನಿಗದ್ದೆ, ಗಣಪತಿ ಬೋಳುಗುಡ್ಡೆ, ಸೋಮೇಶ್ವರ ನಾಯ್ಕ, ಪ್ರದೀಪ ಯಲ್ಲಾಪುರಕರ, ವಿಘ್ನೇಶ ಭಟ್ಟ ಮಾಳಕೊಪ್ಪ, ರವಿ ದೇವಡಿಗ, ಬಜ್ಜು ಪಿಂಗಳೆ ಇದ್ದರು.

Continue Reading
Advertisement
Babar Azam
ಪ್ರಮುಖ ಸುದ್ದಿ19 mins ago

Babar Azam : ಭಾರತ ಪಾಕ್​ ಪಂದ್ಯಕ್ಕೆ ಮೊದಲೇ ವಿರಾಟ್ ಕೊಹ್ಲಿಯ ದಾಖಲೆ ಮುರಿದ ಬಾಬರ್​ ಅಜಂ

Niveditha Gowda chandan divorce whats the reason
ಕಿರುತೆರೆ32 mins ago

Niveditha Gowda: ದಸರಾ ವೇದಿಕೆ ಮೇಲೆ ಪ್ರಪೋಸ್‌ ಮಾಡಿದ್ದೇ ವಿಚ್ಛೇದನಕ್ಕೆ ಕಾರಣವೇ? ʻಕ್ಯೂಟ್‌ ಕಪಲ್‌ʼ ಬಾಳಲ್ಲಿ ಬಿರುಗಾಳಿ!

Narendra Modi
ಪ್ರಮುಖ ಸುದ್ದಿ41 mins ago

Narendra Modi: ಕರ್ನಾಟಕದಲ್ಲಿ ಬಿಜೆಪಿ ಗೆಲುವಿನ ಬಗ್ಗೆ ನರೇಂದ್ರ ಮೋದಿ ಹೇಳಿದ್ದೇನು?

RTE Admissions 2024
ಶಿಕ್ಷಣ43 mins ago

RTE Admission 2024: ನಾಳೆಯಿಂದ ಆರ್‌ಟಿಇ ಅಡಿ ದಾಖಲಾತಿ ಪ್ರಕ್ರಿಯೆ ಪ್ರಾರಂಭ

NDA Meeting
ದೇಶ45 mins ago

NDA Meeting: ಯೋಗಿಯ ಬೆನ್ನು ತಟ್ಟಿದ ಮೋದಿ; ವಿರೋಧಿಗಳಿಗೆ ದೊಡ್ಡ ಸಂದೇಶ ರವಾನಿಸಿದ ನಾಯಕರು

Job Alert
ಉದ್ಯೋಗ48 mins ago

Job Alert: ಬರೋಬ್ಬರಿ 9,923 ಬ್ಯಾಂಕ್‌ ಹುದ್ದೆಗಳ ಭರ್ತಿಗೆ ಮುಂದಾದ ಐಬಿಪಿಎಸ್‌; ಇಂದೇ ಅರ್ಜಿ ಸಲ್ಲಿಸಿ

Haris Rauf
ಪ್ರಮುಖ ಸುದ್ದಿ48 mins ago

T20 World Cup : ಅಮೆರಿಕದ ವಿರುದ್ಧದ ಪಂದ್ಯದಲ್ಲಿ ಬಾಲ್​ ವಿರೂಪಗೊಳಿಸಿದ ಪಾಕ್​ ಬೌಲರ್​; ಆರೋಪ

Niveditha Gowda chandan shetty divorce
ಸ್ಯಾಂಡಲ್ ವುಡ್1 hour ago

Niveditha Gowda: ನಿವೇದಿತಾ- ಚಂದನ್‌ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ ಕೊಟ್ರಾ ಬಾರ್ಬಿ ಡಾಲ್‌?

Election results 2024
ಪ್ರಮುಖ ಸುದ್ದಿ1 hour ago

Rahul Gandhi: ಚುನಾವಣಾ ಜವಾಬ್ದಾರಿ ನಿರ್ವಹಿಸುವಲ್ಲಿ ವಿಫಲ; 18 ಸಚಿವರ ವಿರುದ್ಧ ರಾಹುಲ್ ಗಾಂಧಿ ಅಸಮಾಧಾನ

Narendra Modi
ದೇಶ1 hour ago

Narendra Modi: ಪ್ರಮಾಣವಚನಕ್ಕೂ ಮೊದಲು ಅಡ್ವಾಣಿಯ ಆಶೀರ್ವಾದ ಪಡೆದ ನರೇಂದ್ರ ಮೋದಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ3 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 weeks ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌