Sensex hits all time high What caused Sensex to jump all time?Sensex hits all time high : ಯೋಗ ದಿವಸ ಸೆನ್ಸೆಕ್ಸ್‌ ಸಾರ್ವಕಾಲಿಕ ಏರಿಕೆಯ ಯೋಗಾಯೋಗ

ವಾಣಿಜ್ಯ

Sensex hits all time high : ಯೋಗ ದಿವಸ ಸೆನ್ಸೆಕ್ಸ್‌ ಸಾರ್ವಕಾಲಿಕ ಏರಿಕೆಯ ಯೋಗಾಯೋಗ

Sensex hits all time high ಮುಂಬಯಿ ಷೇರು ಮಾರುಕಟ್ಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ ಬುಧವಾರ ಸಾರ್ವಕಾಲಿಕ ಎತ್ತರಕ್ಕೇರಿತು. ನಿಫ್ಟಿಯೂ ಇದೇ ವಿಕ್ರಮದ ಹಾದಿಯಲ್ಲಿದೆ. ವಿವರ ಇಲ್ಲಿದೆ.

VISTARANEWS.COM


on

bse stock exchange
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಮುಂಬಯಿ ಷೇರು ಮಾರುಕಟ್ಟೆ ಬಿಎಸ್‌ಇ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ ಬುಧವಾರ ಮಧ್ಯಂತರ ವಹಿವಾಟಿನಲ್ಲಿ ಸಾರ್ವಕಾಲಿಕ ದಾಖಲೆಯ ಎತ್ತರಕ್ಕೆ ಏರಿಕೆಯಾಯಿತು. (Sensex hits all time high) 2022ರ ಡಿಸೆಂಬರ್‌ನಲ್ಲಿ ದಾಖಲಿಸಿದ್ದ ಎತ್ತರವನ್ನೂ ಹಿಂದಿಕ್ಕಿತು. ಸೆನ್ಸೆಕ್ಸ್‌ ಈ ಹಿಂದೆ 63,583 ಅಂಕ ಗಳಿಸಿತ್ತು. ಸೆನ್ಸೆಕ್ಸ್‌ 260 ಅಂಕ ಏರಿಕೊಂಡು 63,583ರ ಸಾರ್ವಕಾಲಿಕ ಎತ್ತರಕ್ಕೇರಿತು. ಬಳಿಕ ಸೆಲ್ಲಿಂಗ್‌ ಪ್ರೆಶರ್‌ ಪರಿಣಾಮ ಇಳಿಯಿತು.

ಎನ್‌ಎಸ್‌ಇ ಸೂಚ್ಯಂಕ ನಿಫ್ಟಿ ಕೂಡ ಸಾರ್ವಕಾಲಿಕ ಎತ್ತರದ ದಾಖಲೆಗೆ 30 ಅಂಕ ಸನಿಹದಲ್ಲಿದೆ. ಹಾಗಾದರೆ ಸೆನ್ಸೆಕ್ಸ್‌ ದಾಖಲೆಯ ಎತ್ತರಕ್ಕೆ ಏರಿಕೆಯಾಗಿದ್ದೇಕೆ? ಕಳೆದ ಕೆಲವು ತಿಂಗಳುಗಳಿಂದ ಸೆನ್ಸೆಕ್ಸ್‌ ಮತ್ತು ನಿಫ್ಟಿ ಏರುಗತಿಯಲ್ಲಿದೆ. ಕೇವಲ ಭಾರತದ ಷೇರು ಮಾರುಕಟ್ಟೆ ಮಾತ್ರವಲ್ಲದೆ ಅಮೆರಿಕ, ಯುರೋಪ್‌ ಸೇರಿದಂತೆ ಜಾಗತಿಕ ಮಟ್ಟದಲ್ಲಿ ಷೇರು ಮಾರುಕಟ್ಟೆ ಸೂಚ್ಯಂಕ ಚೇತರಿಸುತ್ತಿದೆ.

ಹಣದುಬ್ಬರ ಇಳಿಕೆಯಾಗಿರುವುದು, ಆರ್ಥಿಕ ಬೆಳವಣಿಗೆಯ ಚೇತರಿಕೆ ಸಕಾರಾತ್ಮಕ ಪ್ರಭಾವ ಬೀರಿದೆ. ವಿದೇಶಿ ಹೂಡಿಕೆದಾರರು ಈ ವರ್ಷ ಇದುವರೆಗೆ 73 ಲಕ್ಷ ಕೋಟಿ ರೂ.ಗಳನ್ನು ಹೂಡಿಕೆ ಮಾಡಿರುವುದು ಗಮನಾರ್ಹ. ಇದು ಮಹತ್ವದ ಸಕಾರಾತ್ಮಕ ಸಂಗತಿ ಎನ್ನುತ್ತಾರೆ ಮಾರುಕಟ್ಟೆ ತಜ್ಞರು. ಕಾರ್ಪೊರೇಟ್‌ ಕಂಪನಿಗಳು ಕಳೆದ 20 ತಿಂಗಳುಗಳಿಂದ ಉತ್ತಮ ಆದಾಯ ದಾಖಲಿಸಿವೆ.

ಭಾರತದ ಆರ್ಥಿಕತೆ ಕಳೆದ ಜನವರಿ-ಮಾರ್ಚ್‌ ಅವಧಿಯಲ್ಲಿ ಚೇತರಿಸಿರುವುದು ಅತ್ಯಂತ ಸಕಾರಾತ್ಮಕ ಪ್ರಭಾವ ಬೀರಿದೆ. ಜತೆಗೆ ಹಣದುಬ್ಬರದ ಇಳಿಕೆ ಧನಾತ್ಮಕವಾಗಿತ್ತು. ಭಾರತ ವಿಶ್ವದಲ್ಲಿಯೇ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದೆ ಎನ್ನುತ್ತಾರೆ ತಜ್ಞರು. ಅಂತಿಮವಾಗಿ ಸೆನ್ಸೆಕ್ಸ್‌ 195 ಅಂಕ ಏರಿಕೊಂಡು 63,523ಕ್ಕೆ ದಿನದ ವಹಿವಾಟು ಮುಕ್ತಾಯಗೊಳಿಸಿತು. ಮತ್ತು ನಿಫ್ಟಿ 18,856ಕ್ಕೆ ವಹಿವಾಟು ಮುಕ್ತಾಯಗೊಳಿಸಿತು. ಬ್ಲೂಡಾರ್ಟ್‌ ಷೇರು 7%, ಪವರ್‌ ಗ್ರಿಡ್‌ 4% ಗಳಿಸಿತು. ಪವರ್‌ ಗ್ರಿಡ್‌, ಒಎನ್‌ಜಿಸಿ, ಅದಾನಿ ಪೋರ್ಟ್ಸ್‌ ಷೇರು ದರ ಏರಿಕೆ ದಾಖಲಿಸಿತು.

ಇದನ್ನೂ ಓದಿ: Adani stocks : ಅದಾನಿ ಷೇರುಗಳಲ್ಲಿ ಹೂಡಿಕೆಯಿಂದ 3 ತಿಂಗಳಲ್ಲಿ 10,000 ಕೋಟಿ ರೂ. ಲಾಭ ಗಳಿಸಿದ ರಾಜೀವ್‌ ಜೈನ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ-ಗೈಡ್

Money Guide: ಮನೆಯಲಿ ಇದ್ದರೆ ಚಿನ್ನ ಈ ನಿಯಮ ಅರಿತಿರುವುದು ಚೆನ್ನ: ಗೋಲ್ಡ್‌ ಟ್ಯಾಕ್ಸ್‌ ಏನು ಹೇಳುತ್ತದೆ?

Money Guide: ಭಾರತೀಯರಿಗೆ ಚಿನ್ನಾಭರಣ ಎಂದರೆ ಬಹು ಪ್ರಿಯ. ಪ್ರಪಂಚದಲ್ಲಿ ಅತೀ ಹೆಚ್ಚು ಚಿನ್ನ ಬಳಸುವ ದೇಶಗಳ ಪೈಕಿ ಭಾರತವೂ ಒಂದು. ನಾವು ಮನೆಯಲ್ಲಿ ದಾಖಲೆ ಇಲ್ಲದೆ ಎಷ್ಟು ಬೇಕಾದರೂ ಚಿನ್ನವನ್ನು ಸಂಗ್ರಹಿಸಿ ಇಡಬಹುದಾ ಎನ್ನುವ ಪ್ರಶ್ನೆ ಉದ್ಭವಿಸುತ್ತದೆ. ಕಾನೂನು ಪ್ರಕಾರ ನಾವು ಇಟ್ಟುಕೊಳ್ಳಬಹುದಾದ ಚಿನ್ನಕ್ಕೆ ಮಿತಿ ಇದೆ. ಮಿತಿಗಿಂತ ಹೆಚ್ಚು ಚಿನ್ನವನ್ನು ಇಟ್ಟುಕೊಳ್ಳುವುದಿದ್ದರೆ ಅದರ ಲೆಕ್ಕವನ್ನು ನಾವು ಆದಾಯ ಇಲಾಖೆಗೆ ಖಾತೆಯನ್ನು ನೀಡಬೇಕಾಗುತ್ತದೆ. ಈ ಕುರಿತಾದ ಸಂಪೂರ್ಣ ವಿವರ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ಭಾರತೀಯರಿಗೆ ಚಿನ್ನಾಭರಣ ಎಂದರೆ ಬಹು ಪ್ರಿಯ. ಪ್ರಪಂಚದಲ್ಲಿ ಅತೀ ಹೆಚ್ಚು ಚಿನ್ನ ಬಳಸುವ ದೇಶಗಳ ಪೈಕಿ ಭಾರತವೂ ಒಂದು. 2,000 ರೂ. ಮುಖಬೆಲೆಯ ನೋಟುಗಳನ್ನು ಆರ್‌ಬಿಐ ನಿಷೇಧಿಸಿದ ಬಳಿಕವಂತೂ ಚಿನ್ನದ ಆಭರಣಗಳಿಗೆ ಬೇಡಿಕೆ ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಈ ಮಧ್ಯೆ ನಾವು ಮನೆಯಲ್ಲಿ ದಾಖಲೆ ಇಲ್ಲದೆ ಎಷ್ಟು ಬೇಕಾದರೂ ಚಿನ್ನವನ್ನು ಸಂಗ್ರಹಿಸಿ ಇಡಬಹುದಾ ಎನ್ನುವ ಪ್ರಶ್ನೆ ಉದ್ಭವಿಸುತ್ತದೆ. ಕಾನೂನು ಪ್ರಕಾರ ನಾವು ಇಟ್ಟುಕೊಳ್ಳಬಹುದಾದ ಚಿನ್ನಕ್ಕೆ ಮಿತಿ ಇದೆ. ಮಿತಿಗಿಂತ ಹೆಚ್ಚು ಚಿನ್ನವನ್ನು ಇಟ್ಟುಕೊಳ್ಳುವುದಿದ್ದರೆ ಅದರ ಲೆಕ್ಕವನ್ನು ನಾವು ಆದಾಯ ಇಲಾಖೆಗೆ ಖಾತೆಯನ್ನು ನೀಡಬೇಕಾಗುತ್ತದೆ. ಹಾಗಾದರೆ ಚಿನ್ನದ ಕುರಿತಾದ ಕಾನೂನು (Gold Tax) ಏನು ಹೇಳುತ್ತದೆ? ಎಷ್ಟು ಪ್ರಮಾಣದ ಚಿನ್ನ ಸಂಗ್ರಹಿಸಿ ಇಡಬಹುದು? ನಿಮ್ಮ ಎಲ್ಲ ಪ್ರಶ್ನೆಗಳಿಗೆ ಮನಿಗೈಡ್‌ (Money Guide)ನಲ್ಲಿದೆ ಉತ್ತರ.

ನಿಯಮ ಏನು ಹೇಳುತ್ತದೆ?

ಆದಾಯ ತೆರಿಗೆ ಇಲಾಖೆಯ ತನಿಖೆಯ ಸಂದರ್ಭದಲ್ಲಿ ಖರೀದಿಸಲು ಅಥವಾ ಹೂಡಿಕೆ ಮಾಡಲು ನಿಮಗೆ ಅನುಮತಿಸಿದ ಆದಾಯದ ಮೂಲವನ್ನು ನೀವು ಹಾಜರುಪಡಿಸುವುದಾದರೆ ಮನೆಯಲ್ಲಿ ಎಷ್ಟು ಚಿನ್ನದ ಆಭರಣಗಳನ್ನು ಬೇಕಾದರೂ ಇಟ್ಟುಕೊಳ್ಳಬಹುದು. ನೇರ ತೆರಿಗೆಗಳ ಕೇಂದ್ರೀಯ ಮಂಡಳಿಯ (CBDT) ನಿಯಮಗಳ ಪ್ರಕಾರ, ಮನೆಯಲ್ಲಿರುವ ಚಿನ್ನವು ನಿಗದಿತ ಮಿತಿಯಲ್ಲಿದ್ದರೆ, ಆದಾಯ ತೆರಿಗೆ ಅಧಿಕಾರಿಗಳು ಹುಡುಕಾಟದ ಸಮಯದಲ್ಲಿ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಂತಿಲ್ಲ (ಚಿನ್ನದ ಆಭರಣ ಸಂಗ್ರಹ ನಿಯಮ). ಆದರೆ ಮಿತಿಯನ್ನು ಮೀರಿದರೆ ಅದಕ್ಕೆ ದಾಖಲೆ ಒದಗಿಸಬೇಕು. ಹಾಗಾದರೆ ಮಿತಿಯ ಪ್ರಮಾಣವೆಷ್ಟು?

  • ಅವಿವಾಹಿತ ಮಹಿಳೆ: 250 ಗ್ರಾಂ. ಚಿನ್ನ.
  • ವಿವಾಹಿತ ಮಹಿಳೆ: 500 ಗ್ರಾಂ. ಚಿನ್ನ.
  • ವಿವಾಹಿತ / ಅವಿವಾಹಿತ ಪುರುಷ: 100 ಗ್ರಾಂ. ಚಿನ್ನ.

ʼʼವೈಯಕ್ತಿಕ ಬಳಕೆಗಾಗಿ ಅಥವಾ ಹೂಡಿಕೆಗಾಗಿ ಚಿನ್ನವು ಅತ್ಯಂತ ಜನಪ್ರಿಯ ಮತ್ತು ಬೇಡಿಕೆಯ ಲೋಹವಾಗಿ ಉಳಿದಿದೆ. ಚಿನ್ನ ಖರೀದಿಸುವಾಗ ಬೆಲೆಗಳ ಏರಿಳಿತವನ್ನು ನೋಡುವ ಜತೆಗೆ ತೆರಿಗೆಯನ್ನೂ ಗಮನಿಸಬೇಕು. ಹೂಡಿಕೆಯ ಆಯ್ಕೆಯಾಗಿ ಪರಿಗಣಿಸುವವರು ಚಿನ್ನವನ್ನು ನಾಣ್ಯಗಳು, ಆಭರಣಗಳಂತಹ ಭೌತಿಕ ರೂಪಗಳಲ್ಲಿ, ಚಿನ್ನದ ವಿನಿಮಯ-ವಹಿವಾಟು ನಿಧಿಗಳು (ಗೋಲ್ಡ್ ಇಟಿಎಫ್‌ಗಳು), ಭಾರತೀಯ ರಿಸರ್ವ್ ಬ್ಯಾಂಕ್ ನೀಡುವ ಸವರಿನ್ ಗೋಲ್ಡ್ ಬಾಂಡ್‌ಗಳು (ಎಸ್‌ಜಿಬಿ) ಮತ್ತು ಕಾಗದದ ರೂಪಗಳಲ್ಲಿ ಖರೀದಿಸಬಹುದುʼʼ ಎಂದು ಆರ್ಥಿಕ ತಜ್ಞರು ಸಲಹೆ ನೀಡುತ್ತಾರೆ.

ಚಿನ್ನ ಖರೀದಿಗೆ ಯಾವುದೇ ನೇರ ತೆರಿಗೆ ಇಲ್ಲ. ಆದಾಗ್ಯೂ ಪರೋಕ್ಷ ತೆರಿಗೆ ಪಾವತಿಸಬೇಕಾಗುತ್ತದೆ. ಇದು ಚಿನ್ನದ ಪ್ರಕಾರ ಮತ್ತು ಸಂಬಂಧಿತ ಸೇವೆಯನ್ನು ಅವಲಂಬಿಸಿ ಬದಲಾಗುತ್ತದೆ. ಉದಾಹರಣೆಗೆ ಚಿನ್ನದ ಗಟ್ಟಿಗಳು, ನಾಣ್ಯಗಳು ಮತ್ತು ಆಭರಣಗಳ ಖರೀದಿಯ ಮೇಲೆ ಶೇ. 3ರಷ್ಟು ಜಿಎಸ್‌ಟಿ ಪಾವತಿಸಬೇಕಾಗುತ್ತದೆ. ಇನ್ನು ಆಭರಣ ಮತ್ತು ಅಕ್ಕಸಾಲಿಗ ಸೇವೆಗಳ ಜಿಎಸ್‌ಟಿ ದರವು ಶೇ. 5ರಷ್ಟಿರುತ್ತದೆ. ಇದಲ್ಲದೆ ಚಿನ್ನವನ್ನು ಆಮದು ಮಾಡಿಕೊಳ್ಳುವಾಗ ಕಸ್ಟಮ್ಸ್ ಸುಂಕ, ಕೃಷಿ ಮೂಲ ಸೌಕರ್ಯ ಮತ್ತು ಅಭಿವೃದ್ಧಿ ಸೆಸ್ ಮತ್ತು ಜಿಎಸ್‌ಟಿಯನ್ನು ಪಾವತಿಸಬೇಕಾಗುತ್ತದೆ.

ʼʼಚಿನ್ನಾಭರಣ ಖರೀದಿಗೆ ಸಂಬಂಧಿಸಿ ನೇರ ತೆರಿಗೆಗಳಿಲ್ಲ. ಆದರೆ ಚಿನ್ನ ಖರೀದಿಯ ವಿವರಗಳನ್ನು ನೀವು ಒದಗಿಸುವ ಪ್ಯಾನ್ ಕಾರ್ಡ್‌ನ ಮೂಲಕ ಅಧಿಕಾರಿಗಳು ಸಂಗ್ರಹಿಸುತ್ತಾರೆ. ಆದ್ದರಿಂದ ಚಿನ್ನವನ್ನು ಭಾರಿ ಪ್ರಮಾಣದಲ್ಲಿ ಖರೀದಿಸುವಾಗ ಅದಕ್ಕೆ ತಕ್ಕದಾದ ಆದಾಯದ ಮೂಲಗಳನ್ನು ಹೊಂದಿರುವುದು ಅಗತ್ಯ. ಇನ್ನು ತೆರಿಗೆದಾರರು ಒಟ್ಟು 50 ಲಕ್ಷ ರೂ.ಗಿಂತ ಹೆಚ್ಚಿನ ಆದಾಯವನ್ನು ಹೊಂದಿದ್ದರೆ ಆದಾಯ ತೆರಿಗೆ ರಿಟರ್ನ್ಸ್‌ನಲ್ಲಿ ಹೊಂದಿರುವ ದೇಶೀಯ ಸ್ವತ್ತುಗಳ ಭಾಗವಾಗಿ ಚಿನ್ನದ ಪ್ರಮಾಣವನ್ನು ಬಹಿರಂಗಪಡಿಸಬೇಕಾಗುತ್ತದೆ.

ಮಾರಾಟ ಮಾಡುವಾಗ…

ಒಂದು ವೇಳೆ ಖರೀದಿ ಮಾಡಿದ ಬಳಿಕ ಮೂರು ವರ್ಷದ ಒಳಗೆ ಚಿನ್ನವನ್ನು ಮಾರಾಟ ಮಾಡುವುದಿದ್ದರೆ ಅದರಿಂದ ಪಡೆದ ಆದಾಯವನ್ನು ವೈಯಕ್ತಿಕ ಆದಾಯ ಎಂದು ಪರಿಗಣಿಸಲಾಗುತ್ತಿದೆ. ವೈಯಕ್ತಿಕ ಆದಾಯಕ್ಕೆ ನೀಡಬೇಕಿರುವ ತೆರಿಗೆಯೇ ಇದಕ್ಕೂ ಅನ್ವಯವಾಗುತ್ತದೆ. ಮೂರು ವರ್ಷಗಳ ನಂತರ ಚಿನ್ನವನ್ನು ಮಾರಾಟ ಮಾಡಿದರೆ, ದೀರ್ಘಾವಧಿಯ ಕ್ಯಾಪಿಟಲ್ ಗೇನ್ ತೆರಿಗೆಯನ್ನು ಪಾವತಿಸಬೇಕಾಗುತ್ತದೆ ಎನ್ನುವುದು ತಿಳಿದಿರಲಿ.

ಇದನ್ನೂ ಓದಿ: Money Guide: ಪ್ಯಾನ್‌ ಕಾರ್ಡ್‌ ಕಳೆದುಹೋದರೆ ಚಿಂತೆ ಬೇಡ; ಮನೆಯಲ್ಲೇ ಕೂತು ಡುಪ್ಲಿಕೇಟ್‌ ಪಡೆಯುವ ವಿಧಾನ ಇಲ್ಲಿದೆ

Continue Reading

ಮನಿ-ಗೈಡ್

Money Guide: ಪ್ಯಾನ್‌ ಕಾರ್ಡ್‌ ಇಲ್ಲದೆಯೂ ಸಿಬಿಲ್‌ ಸ್ಕೋರ್‌ ಪರಿಶೀಲಿಸಬೇಕೆ? ಈ ಟಿಪ್ಸ್‌ ಫಾಲೋ ಮಾಡಿ

Money Guide: ಯಾವುದೇ ಬ್ಯಾಂಕ್‌ನಿಂದ ಸಾಲ ಪಡೆಯಲು ಸಿಬಿಲ್‌ ಸ್ಕೋರ್‌ ಮುಖ್ಯ. ಉತ್ತಮ ಸಿಬಿಲ್ ಸ್ಕೋರ್ ಅನ್ನು ನೀವು ಹೊಂದಿದ್ದರೆ ಸುಲಭವಾಗಿ ಸಾಲ ಪಡೆಯಬಹುದು. ಹೀಗಾಗಿ ಸಿಬಿಲ್ ಸ್ಕೋರ್‌ ಅನ್ನು 750ಕ್ಕಿಂತ ಹೆಚ್ಚು ಕಾಯ್ದುಕೊಳ್ಳುವುದು ಅನಿವಾರ್ಯ. ಹಾಗಾದರೆ ಹಾಗಾದರೆ ಸಿಬಿಲ್ ಸ್ಕೋರ್‌ ಪರಿಶೀಲಿಸುವುದು ಹೇಗೆ? ಸಿಬಿಲ್‌ ಸ್ಕೋರ್‌ ವಿಚಾರದಲ್ಲಿ ಯಾವೆಲ್ಲ ಅಂಶಗಳನ್ನು ಗಮನಿಸಬೇಕು? ಒಂದು ಪ್ಯಾನ್‌ ಕಾರ್ಡ್‌ ಇಲ್ಲದಿದ್ದರೆ ಏನು ಮಾಡಬೇಕು? ಚಿಂತಿಸಬೇಡಿ. ನಿಮ್ಮೆಲ್ಲ ಗೊಂದಲಗಳಿಗೆ ಇಲ್ಲಿದೆ ಉತ್ತರ.

VISTARANEWS.COM


on

Money Guide
Koo

ಬೆಂಗಳೂರು: ಯಾವುದೇ ಬ್ಯಾಂಕ್‌ನಿಂದ ಸಾಲ ಪಡೆಯಲು ಸಿಬಿಲ್‌ ಸ್ಕೋರ್‌ (ಕ್ರೆಡಿಟ್ ಇನ್ಫರ್ಮೇಷನ್ ಬ್ಯೂರೋ (ಇಂಡಿಯಾ) ಲಿಮಿಟೆಡ್-CIBIL) ಮುಖ್ಯವಾಗುತ್ತದೆ. ಅಂದರೆ ಉತ್ತಮ ಸಿಬಿಲ್ ಸ್ಕೋರ್ ಅನ್ನು ನೀವು ಹೊಂದಿದ್ದರೆ ಸುಲಭವಾಗಿ ಸಾಲ ಪಡೆಯಬಹುದು. ಹೀಗಾಗಿ ಸಿಬಿಲ್ ಸ್ಕೋರ್‌ ಅನ್ನು 750ಕ್ಕಿಂತ ಹೆಚ್ಚು ಕಾಯ್ದುಕೊಳ್ಳುವುದು ಅನಿವಾರ್ಯ. ಸಿಬಿಲ್ ಸ್ಕೋರ್ ಇಲ್ಲದಿದ್ದರೆ ನಿಮ್ಮ ಸಾಲದ ಅರ್ಜಿ ತಿರಸ್ಕೃತಗೊಳ್ಳುವ ಸಾಧ್ಯತೆಯೂ ಇದೆ. 300ರಿಂದ 900ರ ನಡುವೆ ಇರುವ ಸಿಬಿಲ್ ಸ್ಕೋರ್ ಹೆಚ್ಚಾದಷ್ಟೂ ಒಳ್ಳೆಯದು. ಹಾಗಾದರೆ ಸಿಬಿಲ್ ಸ್ಕೋರ್‌ ಪರಿಶೀಲಿಸುವುದು ಹೇಗೆ? ಸಿಬಿಲ್‌ ಸ್ಕೋರ್‌ ವಿಚಾರದಲ್ಲಿ ಯಾವೆಲ್ಲ ಅಂಶಗಳನ್ನು ಗಮನಿಸಬೇಕು? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ (Money Guide).

ನಿಮ್ಮ ಬಳಿ ಪ್ಯಾನ್ ಕಾರ್ಡ್ ಲಭ್ಯವಿಲ್ಲದಿದ್ದರೆ ಸಿಬಿಲ್ ಸ್ಕೋರ್ ಪಡೆಯುವುದು ಬಹುದೊಡ್ಡ ಸವಾಲು. ಹೀಗಾಗಿ ಸುಲಭವಾಗಿ, ಪ್ಯಾನ್ ಕಾರ್ಡ್ ಇಲ್ಲದೆ ನಿಮ್ಮ ಸಿಬಿಲ್ ಸ್ಕೋರ್ ಅನ್ನು ಹೇಗೆ ಪರಿಶೀಲಿಸಬಹುದು ಎನ್ನುವುದರ ಹಂತ ಹಂತದ ಮಾಹಿತಿ ಇಲ್ಲಿದೆ.

  • ಅಧಿಕೃತ ಸಿಬಿಲ್ ವೆಬ್‌ಸೈಟ್‌ https://www.cibil.com/ಗೆ ಭೇಟಿ ನೀಡಿ.
  • ‘Personal CIBIL Score’ ಆಯ್ಕೆಯನ್ನು ಕ್ಲಿಕ್‌ ಮಾಡಿ.
  • ಬಳಿಕ ‘Get Your Free CIBIL Score’ ಆಪ್ಶನ್‌ ಆಯ್ಕೆ ಮಾಡಿ ಸೂಚನೆಗಳನ್ನು ಅನುಸರಿಸಿ ಕೇಳಿದ ಮಾಹಿತಿಗಳನ್ನು ಭರ್ತಿ ಮಾಡಿ.
  • ಒಂದು ವೇಳೆ ನಿಮ್ಮ ಬಳಿ ಪ್ಯಾನ್‌ ಕಾರ್ಡ್‌ ಇಲ್ಲ ಎಂದಾದರೆ ಪರ್ಯಾಯ ಡಾಕ್ಯುಮೆಂಟ್‌ಗಳಾದ ಪಾಸ್‌ಪೋರ್ಟ್‌, ವೋಟರ್‌ ಐಡಿ, ಡ್ರೈವಿಂಗ್‌ ಲೈಸನ್ಸ್‌ ಅಥವಾ ರೇಷನ್‌ ಕಾರ್ಡ್‌ ಅನ್ನು ಆಯ್ಕೆ ಮಾಡಬಹುದು. ನೀವು ಆಯ್ಕೆ ಮಾಡಿಕೊಂಡ ಡಾಕ್ಯುಮೆಂಟ್‌ನ ನಂಬರ್‌ ಅನ್ನು ಇಲ್ಲಿ ನಮೂದಿಸಿ.
  • ಈಗ ನಿಮ್ಮ ಡೇಟ್‌ ಆಫ್‌ ಬರ್ತ್‌, ಪಿನ್‌ ಕೋಡ್‌ ಮತ್ತು ರಾಜ್ಯವನ್ನು ನಮೂದಿಸಿ. ಜತೆಗೆ ಮೊಬೈಲ್‌ ನಂಬರ್‌ ಎಂಟ್ರಿ ಮಾಡಿ ‘Accept and Continueʼ ಆಯ್ಕೆಯನ್ನು ಕ್ಲಿಕ್‌ ಮಾಡಿ.
  • ಮೊಬೈಲ್‌ಗೆ ಬಂದ ಒಟಿಪಿಯನ್ನು ನಮೂದಿಸಿ ‘Continueʼ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ.
  • ‘Yes’ ಅಥವಾ ‘No’ ಆಪ್ಶನ್‌ ಸೆಲೆಕ್ಟ್‌ ಮಾಡಿ.
  • ಈಗ ನಿಮ್ಮ ಹೆಸರು ಯಶಸ್ವಿಯಾಗಿ ನೋಂದಣಿಯಾಗಿರುವ ಸಂದೇಶ ಪರದೆ ಮೇಲೆ ಮೂಡುತ್ತದೆ.
  • ಈಗ ‘Go to Dashboard’ ಆಯ್ಕೆಯನ್ನು ಕ್ಲಿಕ್‌ ಮಾಡಿದರೆ ನಿಮ್ಮ ಸಿಬಿಲ್‌ ಸ್ಕೋರ್‌ ಅನ್ನು ವೀಕ್ಷಿಸಬಹುದು.

ಗೂಗಲ್‌ ಪೇಯಲ್ಲಿ ಹೀಗೆ ಚೆಕ್‌ ಮಾಡಿ

  • ಮೊಬೈಲ್‌ ಫೋನ್‌ನಲ್ಲಿ ಗೂಗಲ್‌ ಪೇ ಅಪ್ಲಿಕೇಷನ್‌ ಓಪನ್‌ ಮಾಡಿ.
  • Manage your money ಆಯ್ಕೆಯನ್ನು ಕೆಳಗಡೆ ಕಾಣಿಸುವ ʼCheck your CIBIL score for freeʼ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ.
  • ಪ್ಯಾನ್‌ ಕಾರ್ಡ್‌ನಲ್ಲಿ ಇರುವಂತೆ ನಿಮ್ಮ ಹೆಸರು ನಮೂದಿಸಿ.
  • ನಿಮ್ಮ ಗುರುತನ್ನು ಅಂಗಿಕರಿಸಿದರೆ ಪರದೆ ಮೇಲೆ ಸಿಬಿಲ್‌ ಸ್ಕೋರ್‌ ಕಂಡು ಬರುತ್ತದೆ.

ಫೋನ್‌ ಪೇ, ಪೇಟಿಎಂ ಅಪ್ಲಿಕೇಷನ್‌ನಲ್ಲಿಯೂ ಇದೇ ರೀತಿ ವೀಕ್ಷಿಸಬಹುದು.

ಸ್ಕೋರ್‌ ಹೆಚ್ಚಿಸುವುದು ಹೇಗೆ?

  • ನಿಮ್ಮ ಸಿಬಿಲ್ ಸ್ಕೋರ್ ಅನ್ನು ಆಗಾಗ ಪರಿಶೀಲಿಸಿ. ಇದರಿಂದ ನೀವು ಯಾವ ಮಟ್ಟದಲ್ಲಿದ್ದೀರಿ ಎಂಬುದು ತಿಳಿಯುತ್ತದೆ.
  • ನಿಮ್ಮ ಇಎಂಐಗಳು ಮತ್ತು ಕ್ರೆಡಿಟ್ ಕಾರ್ಡ್ ಬಿಲ್‌ಗಳನ್ನು ನಿಯಮಿತವಾಗಿ ಪಾವತಿಸಿ; ಯಾವುದೇ ಕಾರಣಕ್ಕೂ ತಪ್ಪಿಸಬೇಡಿ ಮತ್ತು ವಿಳಂಬ ಮಾಡಬೇಡಿ.
  • ನಿಮ್ಮ ಕ್ರೆಡಿಟ್ ಕಾರ್ಡ್ ಮಿತಿಯನ್ನು ಹೆಚ್ಚು ಬಳಸಬೇಡಿ ಮತ್ತು ನಿಮ್ಮ ಕ್ರೆಡಿಟ್ ಬಳಕೆಯ ಅನುಪಾತವನ್ನು (ಸಿಯುಆರ್ ) 30% ಒಳಗೆ ಇರಿಸಿಕೊಳ್ಳಲು ಪ್ರಯತ್ನಿಸಿ.
  • ಕಡಿಮೆ ಅವಧಿಯಲ್ಲಿ ಬೇರೆ ಬೇರೆ ಸಾಲಗಳು ಅಥವಾ ಕ್ರೆಡಿಟ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಬೇಡಿ
  • ಅನಿವಾರ್ಯ ಆಗಿರದಿದ್ದರೆ, ನಿಮ್ಮ ಹಳೆಯ ಕ್ರೆಡಿಟ್ ಕಾರ್ಡ್‌ಗಳನ್ನು ರದ್ದುಗೊಳಿಸಬೇಡಿ
  • ಚೆಕ್‌ ಬೌನ್ಸ್‌ ಆಗದಂತೆ ನೋಡಿಕೊಳ್ಳಿ

ಪ್ರಯೋಜನಗಳೇನು?

ಹೆಚ್ಚಿನ ಸಿಬಿಲ್‌ ಸ್ಕೋರ್‌ ಇದ್ದರೆ ಪಡೆಯಬಹುದಾದ ಪ್ರಯೋಜನಗಳು:

  • ಸಾಲಗಳ ಮೇಲಿನ ಕಡಿಮೆ ಬಡ್ಡಿ ದರಗಳು
  • ಹೆಚ್ಚಿನ ಸಾಲದ ಮೊತ್ತಗಳು
  • ದೀರ್ಘ ಅಥವಾ ಹೆಚ್ಚು ಹೊಂದಿಕೊಳ್ಳುವ ಮರುಪಾವತಿ ಅವಧಿಯಂತಹ ನಿಯಮಗಳು
  • ತ್ವರಿತ ಸಾಲ ಮಂಜೂರಾತಿ ಪ್ರಕ್ರಿಯೆ
  • ಸಾಲ ನೀಡುವ ಸಂಸ್ಥೆಗಳ ಹೆಚ್ಚಿನ ಆಯ್ಕೆ

ಇದನ್ನೂ ಓದಿ: Money Guide: ಸಿಬಿಲ್‌ ಸ್ಕೋರ್‌ ಕಡಿಮೆ ಇದ್ದರೆ ಚಿಂತೆ ಬೇಡ; ಈ ಟಿಪ್ಸ್‌ ಫಾಲೋ ಮಾಡಿ ಹೆಚ್ಚಿಸಿಕೊಳ್ಳಿ

Continue Reading

ಕರ್ನಾಟಕ

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, ಬೆಳ್ಳಿ ದರ

Gold Rate Today:ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,840ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹54,720 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹68,400 ಮತ್ತು ₹6,84,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,462 ಆಗಿದ್ದರೆ, ಎಂಟು ಗ್ರಾಂ ಬೆಲೆ ₹59,696 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹74,620 ಮತ್ತು ₹7,46,200 ವೆಚ್ಚವಾಗಲಿದೆ.

VISTARANEWS.COM


on

Gold Rate Today
Koo

ಬೆಂಗಳೂರು: ಅಕ್ಷಯ ತದಿಗೆಯ ಬಳಿಕ ಚಿನ್ನದ ಮಾರುಕಟ್ಟೆಯಲ್ಲಿ ದಿನೇ ದಿನೆ ಏರಿಳಿಕೆ ಸಾಮಾನ್ಯವಾಗಿದೆ. ನಿನ್ನೆ ದರ ಏರಿಕೆ ಆಗಿತ್ತು. ಬೆಲೆ ಯಥಾಸ್ಥಿತಿ ಕಾಪಾಡಿಕೊಂಡಿದೆ. ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ನಿನ್ನೆ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹80 ಹಾಗೂ ₹87 ಏರಿಕೆಯಾಗಿತ್ತು. ಇಂದು ನಿನ್ನೆಯಷ್ಟೇ ಬೆಲೆ ಯಥಾಸ್ಥಿತಿ ಕಾಪಾಡಿಕೊಂಡಿದೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,840ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹54,720 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹68,400 ಮತ್ತು ₹6,84,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,462 ಆಗಿದ್ದರೆ, ಎಂಟು ಗ್ರಾಂ ಬೆಲೆ ₹59,696 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹74,620 ಮತ್ತು ₹7,46,200 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹89, ಎಂಟು ಗ್ರಾಂ ₹712 ಮತ್ತು 10 ಗ್ರಾಂ ₹890ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,900 ಮತ್ತು 1 ಕಿಲೋಗ್ರಾಂಗೆ ₹89,000 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ68,55074,770
ಮುಂಬಯಿ68,40074,620
ಬೆಂಗಳೂರು68,40074,620
ಚೆನ್ನೈ68,50074,730

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

ಇದನ್ನೂ ಓದಿ: Karnataka Weather : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ; ಆರೆಂಜ್‌, ಯೆಲ್ಲೋ ಎಚ್ಚರಿಕೆ

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

Continue Reading

ಮನಿ-ಗೈಡ್

Ration Card: ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ? ಇಲ್ಲಿದೆ ಸಂಪೂರ್ಣ ವಿವರ

Money Guide: ಪಡಿತರ ಚೀಟಿ ಪ್ರಮುಖ ಗುರುತಿನ ದಾಖಲೆಗಳ ಪೈಕಿ ಒಂದು ಎನಿಸಿಕೊಂಡಿದೆ. ಪ್ರಮುಖ ಗುರುತಿನ ದಾಖಲೆಗಳ ಪೈಕಿ ಒಂದು ಎನಿಸಿಕೊಂಡಿದೆ. ಸರ್ಕಾರದ ವಿವಿಧ ಸೌಲಭ್ಯ, ಸಬ್ಸಿಡಿ ದರದಲ್ಲಿ ಆಹಾರ ಧಾನ್ಯ (ಪಡಿತರ) ಪಡೆಯಲು ರೇಷನ್‌ ಕಾರ್ಡ್‌ ಹೊಂದಿರುವುದು ಕಡ್ಡಾಯ. ಕಾರಣಾಂತರಗಳಿಂದ ಕೆಲವು ತಿಂಗಳಿಂದ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಮುಂದಿನ ತಿಂಗಳು ಇದು ಪುನರಾಂಭಗೊಳ್ಳಲಿದ್ದು, ಗ್ರಾಹಕರು ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕು. ಈ ಬಗ್ಗೆ ವಿವರ ಇಲ್ಲಿದೆ.

VISTARANEWS.COM


on

Money Guide
Koo

ಬೆಂಗಳೂರು: ಪಡಿತರ ಚೀಟಿ (Ration Card) ಪ್ರಮುಖ ಗುರುತಿನ ದಾಖಲೆಗಳ ಪೈಕಿ ಒಂದು ಎನಿಸಿಕೊಂಡಿದೆ. ಸರ್ಕಾರದ ವಿವಿಧ ಸೌಲಭ್ಯ, ಸಬ್ಸಿಡಿ ದರದಲ್ಲಿ ಆಹಾರ ಧಾನ್ಯ (ಪಡಿತರ) ಪಡೆಯಲು ರೇಷನ್‌ ಕಾರ್ಡ್‌ ಹೊಂದಿರುವುದು ಕಡ್ಡಾಯ. ಜತೆಗೆ ವಾಸಸ್ಥಳ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಪ್ಯಾನ್ ಕಾರ್ಡ್‌, ಚಾಲಕರ ಪರವಾನಗಿ ಇತ್ಯಾದಿಗೆ ಅರ್ಜಿ ಸಲ್ಲಿಸುವಾಗ ಪಡಿತರ ಚೀಟಿಯನ್ನು ಗುರುತಿನ ಪುರಾವೆಯಾಗಿ ಬಳಸಲಾಗುತ್ತದೆ. ಇದನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ‌ ವಿತರಿಸುತ್ತದೆ. ಕಾರಣಾಂತರಗಳಿಂದ ಕೆಲವು ತಿಂಗಳಿಂದ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಮುಂದಿನ ತಿಂಗಳು ಇದು ಪುನರಾಂಭಗೊಳ್ಳಲಿದ್ದು, ಗ್ರಾಹಕರು ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಬೇಕು. ಈ ಬಗ್ಗೆ ವಿವರ ಇಲ್ಲಿದೆ (Money Guide).

ಅಗತ್ಯ ದಾಖಲೆಗಳು

ಗ್ರಾಮಾಂತರ ಪ್ರದೇಶ

  • ನಿಮ್ಮ ಗ್ರಾಮ ಪಂಚಾಯಿತಿಯ ಹೆಸರು
  • ಈಗ ವಾಸ ಮಾಡುತ್ತಿರುವ ಮನೆ ವಿಳಾಸ
  • ಮನೆಯ ಆಸ್ತಿ ಸಂಖ್ಯೆ ವಿವರ
  • ಮನೆಯ ವಿದ್ಯುತ್‌ ಸಂಪರ್ಕದ ಬಿಲ್‌ ಪ್ರತಿ
  • ಕುಟುಂಬದ ಎಲ್ಲ ಸದಸ್ಯರ ಹೆಸರು, ಸದಸ್ಯರು, ಮುಖ್ಯಸ್ಥರು/ಅರ್ಜಿದಾರರೊಂದಿಗೆ ಹೊಂದಿರುವ ಸಂಬಂಧ, ಕುಟುಂಬ ಸದಸ್ಯರೆಲ್ಲರ ಹುಟ್ಟಿದ ದಿನಾಂಕ, ವೃತ್ತಿ ಮತ್ತು ಅವರ ವಾರ್ಷಿಕ ವರಮಾನ.
  • ಈಗಿರುವ ಮನೆಯಲ್ಲಿ ಎಷ್ಟು ಸಮಯದಿಂದ ವಾಸವಾಗಿದ್ದಾರೆಂಬ ಮಾಹಿತಿ.
  • ನಿಮ್ಮ ಕುಟುಂಬಕ್ಕಿರುವ ಅಡುಗೆ ಅನಿಲದ ಸರಬರಾಜಿನ ಇತ್ತಿಚಿನ ಬಿಲ್/ರಶೀದಿ.

ನಗರ / ಪಟ್ಟಣ ಪ್ರದೇಶ

  • ನೀವು ವಾಸವಿರುವ ನಗರಸಭೆ / ಪುರಸಭೆ / ನಗರ ಪಾಲಿಕೆಯ ವಾರ್ಡ್ ಸಂಖ್ಯೆ
  • ಬೆಂಗಳೂರು ಅನೌಪಚಾರಿಕ ಪಡಿತರ ಪ್ರದೇಶದವರಾಗಿದ್ದಲ್ಲಿ (ಬಿಬಿಎಂಪಿ ಪ್ರದೇಶ) ನೀವು ಆಹಾರ ಇಲಾಖೆಯ ಯಾವ ವಲಯ ವ್ಯಾಪ್ತಿಯಲ್ಲಿದ್ದೀರಿ ಎಂಬ ಬಗ್ಗೆ ಮಾಹಿತಿ (ಇದನ್ನು ಸುಲಭವಾಗಿ ತಿಳಿಯಲು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಯವರನ್ನು ಸಂಪರ್ಕಿಸಿ, ಇಲ್ಲವೇ ನಿಮ್ಮ ನೆರೆಹೊರೆಯವರಲ್ಲಿ ಈಗಾಗಲೇ ಲಭ್ಯವಿರುವ ಪಡಿತರ ಚೀಟಿಯನ್ನು ನೋಡಿ ತಿಳಿಯಿರಿ)
  • ನಿಮ್ಮ ಮನೆಯ ವಿದ್ಯುತ್ ಬಿಲ್
  • ನಿಮ್ಮ ನಿವಾಸದ ಪೂರ್ಣ ವಿಳಾಸ (ಅಂಚೆ ಪಿನ್ ಕೋಡ್‌ ಕಡ್ಡಾಯ). ಸ್ವಂತ ಮನೆಯಾಗಿದ್ದಲ್ಲಿ
  • ಮನೆಯ ಆಸ್ತಿ ಸಂಖ್ಯೆ ವಿವರ, ನಿಮ್ಮ ಮನೆ ವಿಳಾಸ ಹುಡುಕಲು ಸುಲಭವಾಗುವ ಹತ್ತಿರದ ಸ್ಥಳದ ಗುರುತು
  • ಕುಟುಂಬದ ಸದಸ್ಯರ ಹೆಸರು, ಸದಸ್ಯರು, ಮುಖ್ಯಸ್ಥರು/ಅರ್ಜಿದಾರರೊಂದಿಗೆ ಹೊಂದಿರುವ ಸಂಬಂಧ, ಕುಟುಂಬ ಸದಸ್ಯರೆಲ್ಲರ ಹುಟ್ಟಿದ ದಿನಾಂಕ, ವೃತ್ತಿ ಮತ್ತು ಅವರ ವಾರ್ಷಿಕ ವರಮಾನ.
  • ಈಗಿರುವ ಮನೆಯಲ್ಲಿ ಎಷ್ಟು ಸಮಯದಿಂದ ವಾಸವಾಗಿದ್ದಾರೆಂಬ ಮಾಹಿತಿ.
  • ನಿಮ್ಮ ಸಂಪರ್ಕದ ಮೊಬೈಲ್ ನಂಬರ್ (ಕಡ್ಡಾಯ), ಸ್ವಂತ ಮೊಬೈಲ್ ಇಲ್ಲದಿದ್ದರೂ ನಿಮ್ಮನ್ನು ಸಂಪರ್ಕಿಸಬಹುದಾದ ಯಾವುದಾದರೂ ಮೊಬೈಲ್ ಸಂಖ್ಯೆಯನ್ನು ನೀಡುವುದು.
  • ಅರ್ಜಿದಾರರು ಅವಿವಾಹಿತರಾಗಿದ್ದಲ್ಲಿ ಅವರ ಪೋಷಕರಿರುವ ಪೂರ್ಣ ವಿಳಾಸ
  • ನಿಮ್ಮ ಕುಟುಂಬದ ಅಡುಗೆ ಅನಿಲ ಸಂಪರ್ಕದ ವಿವರ/ಇತ್ತೀಚಿನ ಎಲ್.ಪಿ.ಜಿ. ಬಿಲ್ ಪ್ರತಿ

ಅರ್ಜಿ ಸಲ್ಲಿಸುವುದು ಹೇಗೆ?

ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಬೇಕಿದ್ದರೆ ನೀವು ಆಹಾರ ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಅಲ್ಲಿ ಇ-ಸರ್ವಿಸ್‌ (ಇ-ಸೇವೆ) ಮೇಲೆ ಕ್ಲಿಕ್‌ ಮಾಡಬೇಕು. ಇದರಲ್ಲಿ ಕೆಳಗಡೆ ನಿಮಗೆ ಇ-ಪಡಿತರ ಚೀಟಿ ಆಯ್ಕೆ ಕಾಣುತ್ತದೆ. ಅದರಲ್ಲಿ ಕೆಳಗಿನ ಬಾಣದ ಗುರುತಿನ ಮೇಲೆ ಕ್ಲಿಕ್‌ ಮಾಡಿದರೆ ಹೊಸ ಪಡಿತರ ಚೀಟಿ ಎಂಬ ಆಯ್ಕೆ ತೋರಿಸುತ್ತದೆ. ಅಲ್ಲಿ ಎಪಿಎಲ್‌ ಹಾಗೂ ಬಿಪಿಎಲ್‌ ಆಯ್ಕೆ ಇರುತ್ತದೆ. ಅದರ ಮೇಲೆ ಕ್ಲಿಕ್‌ ಮಾಡಿದ ಬಳಿಕ ಅಗತ್ಯ ದಾಖಲೆಗಳನ್ನು ನೀವು ಸಲ್ಲಿಸಬೇಕಾಗುತ್ತದೆ.

ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Bal Jeevan Bima: ಮಕ್ಕಳ ಹೆಸರಲ್ಲಿ ನಿತ್ಯ 6 ರೂ.ನಂತೆ ಕಟ್ಟಿದರೆ 1 ಲಕ್ಷ ರೂ. ವಿಮೆಯ ರಕ್ಷಣೆ

Continue Reading
Advertisement
Covaxin Safety
ದೇಶ8 mins ago

Covaxin Safety: ಕೊವ್ಯಾಕ್ಸಿನ್‌ನಿಂದ ಅಡ್ಡ ಪರಿಣಾಮ ಎಂದು ಬನಾರಸ್‌ ವಿವಿ ವರದಿ; ವೈದ್ಯ ಸಂಶೋಧನಾ ಸಂಸ್ಥೆ ಆಕ್ಷೇಪ

Food department deletes name from ration card list even though it is alive
ವಿಜಯನಗರ11 mins ago

Food Department : ಜೀವಂತ ಇದ್ದವಳನ್ನು ಸತ್ತಿದ್ದಾಗಿ ಘೋಷಿಸಿದ ಆಹಾರ ಇಲಾಖೆ; ರೇಷನ್‌ ಕಾರ್ಡ್‌ನಿಂದಲೇ ಹೆಸರು ಡಿಲೀಟ್‌

History Of Ice Cream
ಆಹಾರ/ಅಡುಗೆ13 mins ago

History Of Ice Cream: ಎಲ್ಲರ ನೆಚ್ಚಿನ ಐಸ್‌ಕ್ರೀಮ್‌ ಹುಟ್ಟಿದ್ದು ಹೇಗೆ?

IPL 2024
ಕ್ರೀಡೆ14 mins ago

IPL 2024: ಮೋದಿ ಸ್ಟೇಡಿಯಂನಲ್ಲಿ ನಡೆಯುವ ಐಪಿಎಲ್​ ಪ್ಲೇ ಆಫ್​ ಪಂದ್ಯಕ್ಕೆ ಐಸಿಸ್‌ ಉಗ್ರರ ಕಾಟ; ಪಂದ್ಯಕ್ಕೂ ಮುನ್ನ ನಾಲ್ವರ ಬಂಧನ

Silver Jewel Trend
ಫ್ಯಾಷನ್24 mins ago

Silver Jewel Trend: ಬಂಗಾರದ ಆಭರಣಗಳಿಗೆ ಸೆಡ್ಡು ಹೊಡೆದ ಸಿಲ್ವರ್‌ ಜ್ಯುವೆಲರಿಗಳು!

Prajwal Revanna Case
ಪ್ರಮುಖ ಸುದ್ದಿ26 mins ago

Prajwal Revanna Case: ನಾನು ಸೇರಿ ಸುಮಾರು 30 ಜನರ ಫೋನ್ ಟ್ಯಾಪ್: ಸರ್ಕಾರದ ವಿರುದ್ಧ ಎಚ್‌ಡಿಕೆ ಬಾಂಬ್‌!

Holenarasipura sexual assault case SIT moves HC against HD Revanna bail order
ಕ್ರೈಂ31 mins ago

HD Revanna: ರೇವಣ್ಣಗೆ ಜಾಮೀನು ಸಿಕ್ಕರೂ ಸಿಗದ ರಿಲೀಫ್‌; ಎಸ್‌ಐಟಿಯಿಂದ ಹೈಕೋರ್ಟ್‌ ಮೊರೆ

Due to heavy rain in Shira water entered houses and shops
ತುಮಕೂರು38 mins ago

Heavy Rain: ಶಿರಾದಲ್ಲಿ ಭಾರೀ ಮಳೆಗೆ ಮನೆ, ಅಂಗಡಿಗಳಿಗೆ ನುಗ್ಗಿದ ನೀರು

Lok Sabha Election 2024 Shah Rukh Khan booth in Mumbai
ಬಾಲಿವುಡ್41 mins ago

Lok Sabha Election 2024: ಕುಟುಂಬದ ಜತೆ ಬಂದು ಮತ ಚಲಾಯಿಸಿದ ಶಾರುಖ್‌ ಖಾನ್‌

Trichy Tour
ಪ್ರವಾಸ46 mins ago

Trichy Tour: ದಾಂಪತ್ಯದ ಲವಲವಿಕೆಯನ್ನು ಮತ್ತೆ ಜೀವಂತಗೊಳಿಸಲು ತಿರುಚಿರಾಪಳ್ಳಿಗೆ ಹೋಗಿ ಬನ್ನಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ4 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌