Uttara Kannada News International Yoga Day Celebration at Vishwadarshan Educational Institution Yallapur Uttara Kannada News: ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ - Vistara News

ಉತ್ತರ ಕನ್ನಡ

Uttara Kannada News: ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Uttara Kannada News: ಯಲ್ಲಾಪುರ ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಬುಧವಾರ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.

VISTARANEWS.COM


on

International Yoga Day Inauguration at Yallapura
ಯಲ್ಲಾಪುರ ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಯೋಗ ಶಿಕ್ಷಕ ಸುಬ್ರಾಯ್ ಭಟ್ ಉದ್ಘಾಟಿಸಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಲ್ಲಾಪುರ: ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಬುಧವಾರ ಅಂತಾರಾಷ್ಟ್ರೀಯ ಯೋಗ ದಿನವನ್ನು (International Yoga Day) ಆಚರಿಸಲಾಯಿತು.

ಯೋಗ ಶಿಕ್ಷಕ ಸುಬ್ರಾಯ್ ಭಟ್ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಉತ್ತಮ ಆರೋಗ್ಯಕ್ಕಾಗಿ ಪ್ರತಿಯೊಬ್ಬರೂ ತಮ್ಮ ದೈನಂದಿನ ಬದುಕಿನಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Video Viral: ಉಚಿತ ಬಸ್‌ನಲ್ಲಿ ಹೆಚ್ಚಿದ ಮಹಿಳೆಯರ ʼಶಕ್ತಿʼ; ಡ್ರೈವರ್‌ ಸೀಟ್‌ನಿಂದಲೇ ಹತ್ತಿದ ನಾರಿಯರು!

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ಅಜಯ್ ಭಾರತೀಯ ಮಾತನಾಡಿ, ಯೋಗ ಎನ್ನುವುದು ಇಂದು ನಿನ್ನೆಯದಲ್ಲ. ಇದು ಅನಾದಿ ಕಾಲದಿಂದಲೂ ಭಾರತದಲ್ಲಿ ಪ್ರಚಲಿತದಲ್ಲಿತ್ತು. ಯೋಗ ಪಿತಾಮಹರಾದ ಪತಂಜಲಿ ಮುನಿಗಳು ಅದಕ್ಕೆ ಹೊಸ ಆಯಾಮ ನೀಡಿ, ಜನಸಾಮಾನ್ಯರಿಗೂ ಅಷ್ಟಾಂಗ ಯೋಗದ ಮೂಲಕ ತಿಳಿಸುವ ಪ್ರಯತ್ನ ಮಾಡಿದ್ದಾರೆ ಎಂದು ತಿಳಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಯೋಗಾಭ್ಯಾಸ ನಡೆಯಿತು.

ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಯೋಗಾಭ್ಯಾಸ ಮಾಡಿದರು.

ಕಾರ್ಯಕ್ರಮದಲ್ಲಿ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಮುಕ್ತಾ ಶಂಕರ, ಸೆಂಟ್ರಲ್ ಸ್ಕೂಲ್‌ನ ಪ್ರಾಚಾರ್ಯೆ ಮಹಾದೇವಿ ಭಟ್ ಹಾಗೂ ಶಿಕ್ಷಣ ಸಂಸ್ಥೆಯ ವಿವಿಧ ಅಂಗ ಸಂಸ್ಥೆಯ ಮುಖ್ಯಸ್ಥರು, ಉಪನ್ಯಾಸಕರು, ಶಿಕ್ಷಕರು, ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: Yoga For Kids: ಮಕ್ಕಳ ಸಮಗ್ರ ಬೆಳವಣಿಗೆಗೆ ಸು’ಯೋಗ’, ಯಾವ ಆಸನಗಳು ಸೂಕ್ತ?

ಕು.ಮೇಧಾ ಭಟ್ ಪ್ರಾರ್ಥಿಸಿದರು. ಉಪನ್ಯಾಸಕ ಸಚಿನ್ ಭಟ್ ಸ್ವಾಗತಿಸಿದರು. ಸಂಕರ್ಷಣ ಭಟ್ ಕಾರ್ಯಕ್ರಮ ನಿರ್ವಹಿಸಿದರು. ಕನ್ನಡ ಮಾಧ್ಯಮ ಪ್ರೌಢಶಾಲೆಯ ದೈಹಿಕ ಶಿಕ್ಷಕ ಮಹೇಶ ಜಿ. ನಾಯ್ಕ ವಂದಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಯಚೂರು

Road Accident : ನಿಂತಿದ್ದ ಟ್ಯಾಂಕರ್‌ ಟ್ಯಾಲಿಗೆ ಬೈಕ್‌ ಡಿಕ್ಕಿ; ಸವಾರ ಸಾವು, ಮತ್ತೋರ್ವ ಗಂಭೀರ

Road Accident : ರಾಯಚೂರು ಹಾಗೂ ಕೊಡಗಿನ ಪ್ರತ್ಯೇಕ ಕಡೆಗಳಲ್ಲಿ ಅಪಘಾತ ನಡೆದಿದೆ. ನಿಂತಿದ್ದ ಟ್ಯಾಂಕರ್‌ ಟ್ಯಾಲಿಗೆ ಬೈಕ್‌ ಡಿಕ್ಕಿಯಾಗಿ ಸವಾರ ಮೃತಪಟ್ಟರೆ, ಕಾರೊಂದು ಮತ್ತೊಂದು ಕಾರಿಗೆ ಗುದ್ದಿದ ರಭಸಕ್ಕೆ ನಾಲ್ಕೈದು ವಾಹನಗಳು ಜಖಂಗೊಂಡಿವೆ.

VISTARANEWS.COM


on

By

Road Accident
Koo

ರಾಯಚೂರು: ನಿಂತಿದ್ದ ಟ್ಯಾಂಕರ್ ಟ್ಯಾಲಿಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ (Road Accident) ಮೃತಪಟ್ಟರೆ, ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದ ಬಳಿ ಅಪಘಾತ ನಡೆದಿದೆ. ಯಮನಪ್ಪ (40) ಮೃತ ದುರ್ದೈವಿ.

ಮಸ್ಕಿ ತಾಲೂಕಿನ ಗುಡಿಹಾಳ ಗ್ರಾಮದ ಯಮನಪ್ಪ ಲಿಂಗಸೂಗೂರು ಕಡೆಯಿಂದ ಮಸ್ಕಿ ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ನಿಂತಿದ್ದ ಟ್ಯಾಂಕರ್‌ ಟ್ಯಾಲಿ ಕಾಣದೆ ಬೈಕ್‌ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ತಲೆಗೆ ಗಂಭೀರ ಪೆಟ್ಟಾಗಿದ್ದು, ಯಮನಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜತೆಗೆ ಇದ್ದ ಗಂಗಣ್ಣ ಎಂಬಾತನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಸ್ಕಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಜ್ಜು-ಗುಜ್ಜಾಗಿದ್ದ ಬೈಕ್‌ ಅನ್ನು ವಶಕ್ಕೆ ಪಡೆಯಲಾಗಿದೆ.

ಹಿಟ್‌ ಆ್ಯಂಡ್‌ ರನ್‌ ಕೇಸ್‌ಗೆ ಬೈಕ್‌ ಸವಾರ ಸಾವು

ಬೈಕ್‌ಗೆ ಡಿಕ್ಕಿ ಹೊಡೆದು ಕಾರು ಚಾಲಕ ಪರಾರಿಯಾಗಿದ್ದಾನೆ. ಅಪಘಾತದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉತ್ತರಕನ್ನಡದ ಭಟ್ಕಳದ ರಾಷ್ಟ್ರೀಯ ಹೆದ್ದಾರಿ 66ರ ಶಿರಾಲಿ ಬಳಿ ಘಟನೆ ನಡೆದಿದೆ. ರಾಮಚಂದ್ರ ನಾಗೇಶ್ ಮೊಗೇರ (42) ಮೃತ ದುರ್ದೈವಿ.

ರಾಮಚಂದ್ರ ಭಟ್ಕಳ ತಾಲೂಕಿನ ಅಳ್ವೆಕೋಡಿ ನಿವಾಸಿಯಾಗಿದ್ದು, ಕೈಕಿಣಿಯಿಂದ ಅಳ್ವೆಕೋಡಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಮುರ್ಡೇಶ್ವರ ಕಡೆಯಿಂದ ಭಟ್ಕಳ ಕಡೆ ತೆರಳುತ್ತಿದ್ದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಾಘತದ ಬಳಿಕ ವೆಂಕಟಾಪುರ ಬಳಿ ಕಾರು ಬಿಟ್ಟು ಚಾಲಕ ಪರಾರಿ ಆಗಿದ್ದಾನೆ.

ಗಂಭೀರ ಗಾಯಗೊಂಡಿದ್ದ ರಾಮಚಂದ್ರರನ್ನು ಕೂಡಲೇ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ತನಿಖೆಯನ್ನು ನಡೆಸಲಾಗುತ್ತಿದೆ.

ಕೊಡಗಿನಲ್ಲಿ ಕಾರಿಗೆ ಕಾರು ಡಿಕ್ಕಿ

ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಕಾರು ಗುದ್ದಿದ ರಭಸಕ್ಕೆ ನಾಲ್ಕು ಕಾರುಗಳು ಜಖಂಗೊಂಡಿವೆ. ಕೊಡಗು ಜಿಲ್ಲೆಯ ವಿರಾಜಪೇಟೆ ಸಮೀಪದ ಮೀನುಪೇಟೆಯಲ್ಲಿ ಘಟನೆ ನಡೆದಿದೆ. ನಿದ್ರೆ ಮಂಪರಿನಲ್ಲಿ ಇದ್ದಾಗ ಈ ಅಪಘಾತ ನಡೆದಿದೆ ಎನ್ನಲಾಗಿದೆ.

ನಸುಕಿನ ಜಾವ 2.30 ರ ಸಮಯಕ್ಕೆ ಅಪಘಾತ ನಡೆದಿದ್ದು, ಕಾರಿನಲ್ಲಿನದ್ದ ಐವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Actor Darshan : ಕೊಲೆ ಕೇಸ್‌ ಬೆನ್ನಲ್ಲೆ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

ಈಜಲು ಹೋಗಿ ಬಾಲಕರು ನೀರುಪಾಲು

ಮೈಸೂರು: ಈಜಲು (Swimming) ಹೋಗಿ ಇಬ್ಬರು ಬಾಲಕರು ನೀರು ಪಾಲಾದ ಘಟನೆ (Drowned) ಮೈಸೂರಿನ ಸೌಕಾರಹುಂಡಿ ಕೆರೆಯಲ್ಲಿ (Lake) ನಡೆದಿದೆ. ಹೂಟಗಳ್ಳಿ ಹೌಸಿಂಗ್ ಬೋರ್ಡ್ ನಿವಾಸಿ ವರುಣ್ (16) ಹಾಗೂ ಬಸವನಪುರ ನಿವಾಸಿ ಜಸ್ವಂತ್ (14) ಮೃತ ದುರ್ದೈವಿಗಳು.

ಮುಸ್ಸಂಜೆ ವೇಳೆ ಈಜಲು ತೆರಳಿದ್ದ ಈ ಯುವಕರು ಈಜುವ ವೇಳೆ ದುರ್ಘಟನೆ ನಡೆದಿದೆ. ನಡು ಕೆರೆಯಲ್ಲಿದ್ದಾಗ ಬಳಲಿ ತೀರಕ್ಕೆ ಬರಲಾಗದೆ ಮುಳುಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ತಾವರೆ ಕೊಯ್ಯಲು ಹೋಗಿ ಹೂವಿನ ವ್ಯಾಪಾರಿ ಸಾವು

ತುಮಕೂರು: ಕೆರೆಯಲ್ಲಿದ್ದ ಕಮಲ ಕೀಳಲು ಹೋಗಿದ್ದ ವ್ಯಕ್ತಿ ಕೆಸರಿನಲ್ಲಿ ಸಿಲುಕಿ ಸಾವಿಗೀಡಾದ ಘಟನೆ ತುಮಕೂರು ತಾಲೂಕಿನ ಅರಕೆರೆ ಕೆರೆಯಲ್ಲಿ ನಡೆದಿದೆ. ಕೊರಟಗೆರೆ ತಾಲೂಕಿನ ಮಧ್ಯವೆಂಕಟಪುರದ ನಿವಾಸಿ ಶ್ರೀನಿವಾಸ್ (35) ಮೃತ ದುರ್ದೈವಿ.

ಹೂವಿನ ವ್ಯಾಪಾರಿಯಾಗಿದ್ದ ಶ್ರೀನಿವಾಸ್ ಅವರು, ಅದೇ ಊರಿನ ಕೆಂಪರಾಮಯ್ಯ, ಚಿಕ್ಕಹನುಮಯ್ಯ ಜೊತೆ ಕಮಲದ ಹೂ ಕೀಳಲು ಹೋಗಿದ್ದರು. ಈ ವೇಳೆ ಕೆಸರಲ್ಲಿ ಸಿಲುಕಿ ಮೇಲೇಳಲಾಗದೆ ಸಾವನ್ನಪ್ಪಿದ್ದಾರೆ. ನಿನ್ನೆ ಮಧ್ಯಾಹ್ನದ ಹೊತ್ತಿಗೆ ದುರ್ಘಟನೆ ನಡೆದಿದ್ದು, ಜೊತೆಗಿದ್ದವರು ಊರಿಗೆ ಹೋಗಿ ತಿಳಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅತ್ತಿಬೆಲೆಯಲ್ಲಿ ಬಾಲಕ ನೀರುಪಾಲು

ಆನೇಕಲ್: ಸ್ನೇಹಿತರ ಜತೆ ಕೆರೆಗೆ ಈಜಲು ಹೋದ ಬಾಲಕ ನೀರುಪಾಲಾಗಿರುವ ಘಟನೆ (Drowns in lake) ಬೆಂಗಳೂರಿನ ಹೊರವಲಯದ ಆನೇಕಲ್ ತಾಲೂಕಿನ ಬಳ್ಳೂರು ಅತ್ತಿಬೆಲೆ ಸಮೀಪದ ಬಳ್ಳೂರು ಕೆರೆಯಲ್ಲಿ ನಡೆದಿದೆ. ಅತ್ತಿಬೆಲೆ ವಾಸಿ ಧನುಷ್ (14) ಮೃತ ಬಾಲಕ.

ರೈನ್ ಬೋ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಬಾಲಕ, ಭಾನುವಾರ ಶಾಲೆಗೆ ರಜೆ ಇದಿದ್ದದ್ದರಿಂದ ಸ್ನೇಹಿತರ ಜತೆ ಈಜಲು ಕೆರೆಗೆ ಹೋಗಿದ್ದ. ಈ ವೇಳೆ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಬಾಲಕನ ಮೃತ ದೇಹವನ್ನು ಅಗ್ನಿಶಾಮಕ ದಳ ಸಿಬ್ಬಂದಿ ಹೊರತೆಗೆದಿದ್ದು, ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka weather : ಇಂದು ಕರಾವಳಿ, ಮಲೆನಾಡಿನಲ್ಲಿ ಹಗುರ, ಒಳನಾಡಿನಲ್ಲಿ ಸಾಧಾರಣ ಮಳೆ ಸಾಧ್ಯತೆ

Karnataka Weather Forecast : ರಾಜ್ಯಾದ್ಯಂತ ನೈರುತ್ಯ ಮುಂಗಾರು ದುರ್ಬಲಗೊಂಡಿದೆ. ಇದರ ನಡುವೆಯೂ ಕರಾವಳಿ, ಮಲೆನಾಡು ಭಾಗದಲ್ಲಿ ಹಗುರದಿಂದ ಕೂಡಿದ ಮಳೆಯಾದರೆ, ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಒಳನಾಡಿನ ಕೆಲವು ಭಾಗಗಳಲ್ಲಿ ಹಗುರದೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಹಲವು ಸ್ಥಳಗಳಲ್ಲಿ ಸಾಧಾರಣ ಮಳೆಯೊಂದಿಗೆ (Rain News) ಗುಡುಗು ಸಾಥ್‌ ನೀಡಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು, ವಿಜಯಪುರ, ಯಾದಗಿರಿಯ ಪ್ರತ್ಯೇಕ ಸ್ಥಳದಲ್ಲಿ ಹಗುರವಾದ ಮಳೆಯಾಗುವ ನಿರೀಕ್ಷೆ ಇದೆ. ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಸೇರಿದಂತೆ ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಆದರೆ ಗಾಳಿ ವೇಗವು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

ಇದನ್ನೂ ಓದಿ: Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

ಆರೋಗ್ಯಕರ ಆಗಿರಬೇಕಿದ್ದರೆ ನಮ್ಮ ಬೆಳಗಿನ ತಿಂಡಿ ಹೇಗಿರಬೇಕು?

ಹೆಚ್ಚಿನ ಜನಕ್ಕೆ ಬೆಳಗಿನ ತಿಂಡಿಯ ಮಹತ್ವವೇ ತಿಳಿದಿರುವುದಿಲ್ಲ. ಈ ಮಾತನ್ನು ಹೇಳುವುದಕ್ಕೂ ಕಾರಣವಿದೆ. ಬೆಳಗ್ಗೆ (Morning Nutrition) ತಿಂಡಿಯನ್ನು ಎದ್ದ ನಾಲ್ಕು ತಾಸುಗಳ ನಂತರ ತಿನ್ನುವುದು, ಕೆಲವೊಮ್ಮೆ ತಿಂಡಿಯನ್ನೇ ತಿನ್ನದಿರುವುದು, ದಿನದ ಪ್ರಾರಂಭಕ್ಕೆ ಸೂಕ್ತ ಅಲ್ಲದ್ದನ್ನು ತಿನ್ನುವುದು, ಕೇವಲ ಕಾಫಿ/ಟೀ ಕುಡಿದು ಮಧ್ಯಾಹ್ನ ಊಟ ಮಾಡುವುದು- ಇಂಥ ಉದಾಹರಣೆಗಳು ಕಡಿಮೆಯೇನಿಲ್ಲ. ಆದರೆ ಬೆಳಗಿನ ತಿಂಡಿಯನ್ನು ದಿನದ ಅತ್ಯಂತ ಆರೋಗ್ಯಕರ ಊಟವನ್ನಾಗಿ ಮಾಡುವುದು ಮಹತ್ವದ್ದು ಎನ್ನುತ್ತಾರೆ ಪೌಷ್ಟಿಕಾಂಶ ತಜ್ಞರು. ರಾತ್ರಿಡೀ ದೇಹಕ್ಕೆ ಅಗತ್ಯವಾದ ವಿಶ್ರಾಂತಿಯನ್ನು ನೀಡಿದ್ದಾಗಿದೆ. ಇನ್ನೀಗ ಮುಂಜಾನೆದ್ದು ದಿನವನ್ನು ಪ್ರಾರಂಭಿಸಬೇಕು ಎನ್ನುವಾಗ, ದೇಹಕ್ಕೆ ನೀಡುವಂಥ ಗ್ರಾಸ ಹೇಗಿರಬೇಕು? ಅಧಿಕ ಸತ್ವಗಳನ್ನು ಹೊಂದಿದ ಆಹಾರವನ್ನೇ ತಿನ್ನಬೇಕು ಎಂದಾದರೆ, ಏಕೆ ಹಾಗೆ? ಬೆಳಗ್ಗೆ ತಿಂಡಿ ತಿನ್ನದಿದ್ದರೆ ತೂಕ ಇಳಿಸುವುದು ಸಾಧ್ಯವಿಲ್ಲವೇ? ಇಂತಹ ಹಲವಾರು ಪ್ರಶ್ನೆಗಳು ಮನದಲ್ಲಿದ್ದರೆ, ಅವಕ್ಕೆಲ್ಲ ಉತ್ತರ ಹುಡುಕುವ ಪ್ರಯತ್ನ ಇಲ್ಲಿದೆ. ಬೆಳಗಿನ ತಿಂಡಿಗೆ ಆರೋಗ್ಯಕರ ಕೊಬ್ಬುಗಳು, ಸಂಕೀರ್ಣ ಪಿಷ್ಟ ಮತ್ತು ಪ್ರೊಟೀನ್‌ ಇರುವಂಥ ಆಹಾರ ಅಗತ್ಯ. ಈ ಸತ್ವಗಳ ಮಿಶ್ರಣವು ದೇಹವು ದೀರ್ಘಕಾಲದವರೆಗೆ ಬಳಲದಂತೆ ನೋಡಿಕೊಳ್ಳುತ್ತದೆ. ದಿನವಿಡೀ ಅಗತ್ಯವಾದ ಚೈತನ್ಯವನ್ನು ದೇಹಕ್ಕೆ ನೀಡುತ್ತದೆ ಮತ್ತು ಆಹಾರ ತಿಂದ ತೃಪ್ತಿಯನ್ನು ಒದಗಿಸುತ್ತದೆ. ಜೊತೆಗೆ, ಬೇಗ ಹಸಿವಾಗುವುದನ್ನು ತಡೆಯುತ್ತದೆ. ಇಂಥ ಆಹಾರವು ದೇಹಕ್ಕೆ ಮಾತ್ರವಲ್ಲ, ಮನಸ್ಸಿಗೂ ಬೇಕಾದ ಗ್ರಾಸವನ್ನು ಒದಗಿಸಿಕೊಡುತ್ತದೆ. ಈ ಬಗ್ಗೆ ವಿವರಣೆ ಇಲ್ಲಿದೆ.

South Indian breakfast

ಸಂಕೀರ್ಣ ಪಿಷ್ಟಗಳು

ನಮ್ಮೆಲ್ಲ ಚಟುವಟಿಕೆಗಳನ್ನು ಮಾಡುವುದಕ್ಕೆ ನಮಗೆ ಪಿಷ್ಟ ಅಥವಾ ಕಾರ್ಬೊಹೈಡ್ರೇಟ್‌ಗಳು ಬೇಕು. ಆದರೆ ಮೈದಾ ಅಥವಾ ಸಂಸ್ಕರಿತ ತಿನಿಸುಗಳಿಂದ ಬರುವಂಥ ಸರಳ ಪಿಷ್ಟವಲ್ಲ, ದೀರ್ಘ ಕಾಲದವರೆಗೆ ಶಕ್ತಿಯನ್ನು ಉಣಿಸುವಂಥ ಸಂಕೀರ್ಣವಾದ ಪಿಷ್ಟಗಳು ಬೇಕು. ಇದನ್ನು ಇಡೀ ಧಾನ್ಯಗಳು, ಓಟ್ಸ್‌, ಸಿರಿ ಧಾನ್ಯಗಳು, ಕಿನೊವಾ, ರಾಗಿ ಮುಂತಾದ ನಾರುಭರಿತ ಅಂದರೆ ತೌಡು ಸಹಿತವಾದ ಧಾನ್ಯಗಳಿಂದ ಪಡೆಯಬಹುದು. ಈ ಧಾನ್ಯಗಳಿಂದ ಉಪ್ಪಿಟ್ಟು, ಅವಲಕ್ಕಿ, ದೋಸೆ, ಇಡ್ಲಿ, ಚಿತ್ರಾನ್ನ… ನಿಮಗೆ ಇಷ್ಟವಾದ ಯಾವುದನ್ನಾದರೂ ಮಾಡಿ.

ಪ್ರೊಟೀನ್‌

ಬೆಳಗಿನ ತಿಂಡಿಗೆ ಹೆಚ್ಚಿನ ಪ್ರಮಾಣದ ಪ್ರೊಟೀನ್‌ ಅಗತ್ಯ. ಇದರಿಂದ ದೇಹದ ರಿಪೇರಿ ಕೆಲಸ, ಹಾರ್ಮೋನುಗಳ ಕ್ಷಮತೆ, ಕಿಣ್ವಗಳ ಉತ್ಪಾದನೆ ಮುಂತಾದ ಮಹತ್ವದ ಕೆಲಸಗಳೆಲ್ಲವೂ ಮಟ್ಟಸವಾಗಿ ಇರುತ್ತದೆ. ಇದಕ್ಕಾಗಿ ಹಾಲು, ಮೊಸರು, ಗ್ರೀಕ್‌ ಯೋಗರ್ಟ್‌, ಪನೀರ್‌, ತೋಫು, ಮೊಟ್ಟೆ, ಕಾಳುಗಳು, ಸೋಯಾ, ಕಾಯಿ ಮತ್ತು ಬೀಜಗಳು ಬೆಳಗಿನ ಆಹಾರದಲ್ಲಿ ಇರಬೇಕು. ಆಮ್ಲೆಟ್‌ ಜೊತೆಗೆ ಇಡೀಧಾನ್ಯದ ಬ್ರೆಡ್‌ ಅಥವಾ ಚಪಾತಿಯಂಥವು ಬೇಕು ಎನ್ನುವುದು ಸ್ಪಷ್ಟವಾಗಿದೆಯಲ್ಲವೇ?

ಆರೋಗ್ಯಕರ ಕೊಬ್ಬು

ಇದು ಸಹ ಅತಿ ಮುಖ್ಯವಾದ ಸತ್ವ. ದೇಹದ ತೂಕವನ್ನು ನಿಯಂತ್ರಿಸಲು, ಹೆಚ್ಚಿನ ಕೊಬ್ಬು ದೇಹದಲ್ಲಿ ಜಮೆಯಾಗದಂತೆ ಕಾಯ್ದುಕೊಳ್ಳಲು ಇದು ಅಗತ್ಯ. ದೇಹದ ಅಂಗಾಂಗಗಳೆಲ್ಲ ಸರಿಯಾಗಿ ಕೆಲಸ ಮಾಡಲು ಈ ಕೊಬ್ಬು ಬೇಕೇಬೇಕು. ಇದಕ್ಕಾಗಿ ಅವಕಾಡೊ, ಕಾಯಿ-ಬೀಜಗಳು, ತುಪ್ಪ, ಕೊಬ್ಬರಿ ಎಣ್ಣೆಯಂಥ ಆರೋಗ್ಯಕರ ತೈಲಗಳು, ಪೀನಟ್‌ಬಟರ್‌ ಅಥವಾ ಇನ್ನಾವುದಾದರೂ ಬೀಜಗಳ ತುಪ್ಪ- ಇವೆಲ್ಲ ಶರೀರಕ್ಕೆ ಬೇಕು. ಮೆದುಳಿನ ಆರೋಗ್ಯ ರಕ್ಷಣೆಗಂತೂ ಇವು ತೀರಾ ಅಗತ್ಯವಾದವು. ಇವುಗಳಲ್ಲಿರುವ ಒಮೇಗಾ ೩ ಕೊಬ್ಬಿನಾಮ್ಲವು ಇಡೀ ದೇಹದ ಸ್ವಾಸ್ಥ್ಯಕ್ಕೆ ಅಗತ್ಯವಾಗಿದ್ದು.

drinking water

ನೀರು

ಇದಿಷ್ಟರ ಜೊತೆಗೆ ದಿನಕ್ಕೆ ಮೂರು ಲೀ. ನೀರು ಕುಡಿಯುವುದು ಬಹುಮುಖ್ಯ. ರಾತ್ರಿಡೀ ನೀರಿಲ್ಲದೆ ಇರುವಂಥ ದೇಹಕ್ಕೆ ಬೆಳಗಿನ ಹೊತ್ತು ಒಂದೆರಡು ಗ್ಲಾಸ್‌ ನೀರು ಕುಡಿಸಿ. ಬರೀ ನೀರು ಕುಡಿಯುವುದು ಕಷ್ಟ ಎನಿಸಿದರೆ, ಸಕ್ಕರೆ ರಹಿತವಾದ ಯಾವುದೇ ರಸಗಳನ್ನು ಸೇರಿಸಿಕೊಳ್ಳಬಹುದು. ಜೊತೆಗೆ, ದಿನವಿಡೀ ಹರ್ಬಲ್‌ ಚಹಾಗಳು, ಎಳನೀರು, ರಸಭರಿತ ಹಣ್ಣು-ತರಕಾರಿಗಳು, ಮಜ್ಜಿಗೆ- ಇಂಥವೆಲ್ಲ ದಿನದ ಮೂರು ಲೀ. ನೀರು ಕುಡಿಯುವ ಗುರಿಯನ್ನು ಪೂರ್ಣಗೊಳಿಸಲು ನೆರವಾಗುತ್ತವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka weather : ಭಾನುವಾರ ರಾಯಚೂರಿನಲ್ಲಿ ಅಬ್ಬರಿಸಿದ ವರುಣ; ನಾಳೆಗೂ ಇದೆ ಮಳೆ ಅಲರ್ಟ್‌

Rain News : ಭಾನುವಾರ ರಾಯಚೂರು ಸೇರಿದಂತೆ ಹಲವೆಡೆ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ರಾಯಚೂರು/ಬೆಂಗಳೂರು: ಭಾನುವಾರ ರಾಯಚೂರು ನಗರದಾದ್ಯಂತ ಭಾರಿ ಮಳೆಯಾಗಿದೆ. ಸುಮಾರು ಒಂದು ಗಂಟೆಗಳ ಕಾಲ ಸುರಿದ ಮಳೆಗೆ (Rain News) ವಾತಾವರಣ ಕೂಲ್‌ (Karnataka weather Forecast) ಆಗಿತ್ತು. ದಿಢೀರ್‌ ಮಳೆಯಿಂದಾಗಿ ವೀಕೆಂಡ್‌ ಮೂಡ್‌ನಲ್ಲಿದ್ದವರಿಗೆ ಕೊಂಚ ನಿರಾಸೆಯಾಗಿತ್ತು. ಕೆಲವಡೆ ಮಳೆಯಿಂದ ವಾಹನ ಸವಾರರು ಪರದಾಡಿದರು.

ರಾಜ್ಯದಲ್ಲಿ ನೈರುತ್ಯ ಮುಂಗಾರು ದುರ್ಬಲವಾಗಿತ್ತು. ಕರಾವಳಿಯ ಹಲವು ಕಡೆಗಳಲ್ಲಿ ಹಾಗೂ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿತ್ತು. ಗೋಕರ್ಣದಲ್ಲಿ 2, ಶಿರಾಲಿ ಹಾಗೂ ಮಂಗಳೂರು ವಿಮಾನ ನಿಲ್ದಾಣದಲ್ಲಿ 1 ಸೆಂ.ಮೀ ಮಳೆಯಾಗಿತ್ತು.

ಮುಂದಿನ 24 ಗಂಟೆ ಮಳೆ ಸಾಧ್ಯತೆ

ಜೂ. 17, 18, 19 ರಂದು ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಒಳನಾಡಿನಲ್ಲಿ ಹಗುರದಿಂದ ಕೂಡಿರಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರದಿಂದ ಕೂಡಿದ ಮಳೆಯಾಗಹುದು. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.

ಬಳಿಕ ಜೂನ್‌ 20 ಮತ್ತು 21ರಂದು ಕರಾವಳಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಉಳಿದೆಡೆ ಕೆಲವು ಸ್ಥಳಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯಾದ್ಯಂತ ಮುಂದಿನ ಒಂದು ವಾರ ಗುಡುಗು ಸಹಿತ ಮಳೆ; ಬಿರುಗಾಳಿ ಸಾಥ್‌

Rain news : ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆ ಆಗಿದೆ. ಆದರೆ ಕರಾವಳಿ ಭಾಗದಲ್ಲಿ ವರುಣಾರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಭಾನುವಾರ ರಾಜ್ಯಾದ್ಯಂತ ಕೆಲವೆಡೆ ಮಳೆಯ ಸಿಂಚನವಾಗಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಹಲವು ಸ್ಥಳಗಳಲ್ಲಿ ಸಾಧಾರಣ ಮಳೆಯೊಂದಿಗೆ (Rain News) ಗುಡುಗು ಸಾಥ್‌ ನೀಡಲಿದೆ. ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಜೂನ್‌ 16ರಂದು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು, ವಿಜಯಪುರ, ಯಾದಗಿರಿಯ ಪ್ರತ್ಯೇಕ ಸ್ಥಳದಲ್ಲಿ ಹಗುರವಾದ ಮಳೆಯಾಗುವ ನಿರೀಕ್ಷೆ ಇದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಸೇರಿದಂತೆ ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಆದರೆ ಗಾಳಿ ವೇಗವು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ.

ಇದನ್ನೂ ಓದಿ: Bhandara Fair : ಲೋಕಾಪುರದ ಭಂಡಾರ ಜಾತ್ರೆಗೆ ಅದ್ಧೂರಿ ಚಾಲನೆ; ಭಂಡಾರದಲ್ಲಿ ಮಿಂದೆದ್ದ ಭಕ್ತ ಸಮೂಹ

ಮತ್ತೊಂದು ವಾರ ಮಳೆ ಎಚ್ಚರಿಕೆ ಕೊಟ್ಟ ತಜ್ಞರು

ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ತಜ್ಞರು ಕೊಟ್ಟಿದ್ದಾರೆ. ಮೊದಲ ಮೂರು ದಿನ ಅಂದರೆ ಜೂ. 17, 18, 19 ರಂದು ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಒಳನಾಡಿನಲ್ಲಿ ಹಗುರದಿಂದ ಕೂಡಿರಲಿದೆ.

ಬಳಿಕ ಜೂನ್‌ 20 ಮತ್ತು 21ರಂದು ಕರಾವಳಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಉಳಿದೆಡೆ ಕೆಲವು ಸ್ಥಳಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಜಲಾಶಯಗಳ ನೀರಿನ ಮಟ್ಟ ಹೀಗಿದೆ

karnataka weather Forecast Dam Level

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
petrol diesel price hike bjp protest
ಪ್ರಮುಖ ಸುದ್ದಿ5 mins ago

Petrol Diesel Price Hike: ಪೆಟ್ರೋಲ್‌ ಬೆಲೆ ಏರಿಕೆ ಖಂಡಿಸಿ ಬಿಜೆಪಿ ವ್ಯಾಪಕ ಪ್ರತಿಭಟನೆ; ಎತ್ತಿನಗಾಡಿ, ಹೆಣ ಮೆರವಣಿಗೆ

Actor Darshan tagadu word umapathy counter now
ಕ್ರೈಂ5 mins ago

Actor Darshan: ಅಂದು `ತಗಡು’ ಅಂದಿದ್ದ ದರ್ಶನ್‌ಗೆ ಇಂದು ಉಮಾಪತಿ ಕೌಂಟರ್!

MS Dhoni
ಕ್ರೀಡೆ9 mins ago

MS Dhoni: ಕಾರಿನಲ್ಲಿ ಬರುತ್ತಿದ್ದ ಧೋನಿಯನ್ನು ತಡೆದು ನಿಲ್ಲಿಸಿ ಫೋಟೊ ತೆಗೆಸಿಕೊಂಡ ಅಭಿಮಾನಿ; ವಿಡಿಯೊ ವೈರಲ್​

Road Accident
ರಾಯಚೂರು9 mins ago

Road Accident : ನಿಂತಿದ್ದ ಟ್ಯಾಂಕರ್‌ ಟ್ಯಾಲಿಗೆ ಬೈಕ್‌ ಡಿಕ್ಕಿ; ಸವಾರ ಸಾವು, ಮತ್ತೋರ್ವ ಗಂಭೀರ

Actor Darshan support by Anusha Rai
ಸ್ಯಾಂಡಲ್ ವುಡ್30 mins ago

Actor Darshan: ದಾನ ಧರ್ಮಗಳೇ ದರ್ಶನ್‌ರನ್ನ ಕಾಪಾಡುತ್ತೆ ಎಂದ ʻನಾಗಕನ್ನಿಕೆʼ ಸೀರಿಯಲ್‌ ನಟಿ!

Gold Rate Today
ಚಿನ್ನದ ದರ42 mins ago

Gold Rate Today: ಆಭರಣ ಖರೀದಿಸುವವರಿಗೆ ರಿಲೀಫ್‌; ಇಳಿದ ಚಿನ್ನದ ದರ

GPF Interest
ಕರ್ನಾಟಕ42 mins ago

GPF Interest: ಸರ್ಕಾರಿ ನೌಕರರೇ ಗಮನಿಸಿ; 5 ಲಕ್ಷ ಮೀರಿದ ಜಿಪಿಎಫ್‌ಗೆ ಬಡ್ಡಿ ಪಾವತಿಸಲು ಸರ್ಕಾರ ಆದೇಶ

Actor Darshan
ಮೈಸೂರು43 mins ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Actor Darshan Police To Serve Notice To sandalwood comedy actor
ಸ್ಯಾಂಡಲ್ ವುಡ್57 mins ago

Actor Darshan: ದರ್ಶನ್ ಪ್ರಕರಣ; ಸ್ಯಾಂಡಲ್‌ವುಡ್‌ ಖ್ಯಾತ ಹಾಸ್ಯ ನಟ ಚಿಕ್ಕಣ್ಣಗೂ ನೋಟಿಸ್‌?

Viral Video
ಪ್ರಮುಖ ಸುದ್ದಿ60 mins ago

Viral Video: ಬಕ್ರೀದ್ ಬಲಿ ಕೊಡುವ ಮೇಕೆಯ ಮೈಮೇಲೆ ʼರಾಮʼ ನಾಮ; ಹಿಂದೂಗಳನ್ನು ಕೆಣಕಿದ ವ್ಯಕ್ತಿ ಅರೆಸ್ಟ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bakrid 2024
ಬೆಂಗಳೂರು1 hour ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ20 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ21 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

ಟ್ರೆಂಡಿಂಗ್‌