Ramya Krishnan Set To Play Mahesh Babu In Guntur Kaaram Mahesh Babu: ಪೂಜಾ ಹೆಗ್ಡೆ ಹೊರ ಬರುತ್ತಿದ್ದಂತೆ ಮಹೇಶ್‌ ಬಾಬು ಸಿನಿಮಾಗೆ ರಮ್ಯಾ ಕೃಷ್ಣನ್ ಎಂಟ್ರಿ? - Vistara News

South Cinema

Mahesh Babu: ಪೂಜಾ ಹೆಗ್ಡೆ ಹೊರ ಬರುತ್ತಿದ್ದಂತೆ ಮಹೇಶ್‌ ಬಾಬು ಸಿನಿಮಾಗೆ ರಮ್ಯಾ ಕೃಷ್ಣನ್ ಎಂಟ್ರಿ?

ಮಹೇಶ್ ಬಾಬು (Mahesh Babu) ಅಭಿನಯದ ‘ಗುಂಟೂರು ಖಾರಂ’ ಸಿನಿಮಾದಿಂದ ಪೂಜಾ ಹೆಗ್ಡೆ ಹೊರ ಬಿದ್ದಂತೇ ಪಾತ್ರವರ್ಗಕ್ಕೆ ಹೆಚ್ಚಿನ ಬದಲಾವಣೆಗಳನ್ನು ಚಿತ್ರತಂಡ ಮಾಡಿದೆ ಎಂದು ವರದಿಯಾಗಿದೆ.

VISTARANEWS.COM


on

Ramya Krishnan In Guntur Kaaram
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಹೇಶ್ ಬಾಬು (Mahesh Babu) ಅಭಿನಯದ ‘ಗುಂಟೂರು ಖಾರಂ’ ಸಿನಿಮಾದಿಂದ ಪೂಜಾ ಹೆಗ್ಡೆ ಹೊರ ಬಿದ್ದಂತೇ ಪಾತ್ರವರ್ಗಕ್ಕೆ ಹೆಚ್ಚಿನ ಬದಲಾವಣೆಗಳನ್ನು ಚಿತ್ರತಂಡ ಮಾಡಿದೆ ಎಂದು ವರದಿಯಾಗಿದೆ. ಇದರ ಬೆನ್ನಲ್ಲೇ ಈ ಸಿನಿಮಾದಲ್ಲಿ ಮಹೇಶ್ ಬಾಬು ಅವರ ತಾಯಿಯ ಪಾತ್ರವನ್ನು ನಿರ್ವಹಿಸಲು ರಮ್ಯಾ ಕೃಷ್ಣನ್ ಅವರನ್ನು ಚಿತ್ರತಂಡ ಆಯ್ಕೆ ಮಾಡಿದೆ ಎಂದು ವರದಿಯಾಗಿದೆ. ಆದರೆ ಈ ಬಗ್ಗೆ ಚಿತ್ರತಂಡ ಈ ಬಗ್ಗೆ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿಲ್ಲ.

ರಮ್ಯಾ ಕೃಷ್ಣನ್ ಅವರು ವಿಜಯ್ ದೇವರಕೊಂಡ ಅವರ ಜತೆ ಲೈಗರ್‌ ಸಿನಿಮಾದಲ್ಲಿ ತಾಯಿಯ ಪಾತ್ರವನ್ನು ಕೊನೆಯ ಬಾರಿಗೆ ನಿರ್ವಹಿಸಿದ್ದರು. ನಿರ್ದೇಶಕ ನೆಲ್ಸನ್ ಅವರ ʻಜೈಲರ್; ಸಿನಿಮಾದಲ್ಲಿಯೂ ರಮ್ಯಾ ಕೃಷ್ಣ ನಟಿಸಲಿದ್ದಾರೆ. ಚಿತ್ರದಲ್ಲಿ ರಜಿನಿಕಾಂತ್ ಮತ್ತು ಜಾಕಿ ಶ್ರಾಫ್ ಅವರೊಂದಿಗೆ ರಮ್ಯಾ ಕೃಷ್ಣನ್ ಸ್ಕ್ರೀನ್ ಸ್ಪೇಸ್ ಹಂಚಿಕೊಳ್ಳಲಿದ್ದಾರೆ.

ಈ ಬದಲಾವಣೆಗಳ ಹೊರತಾಗಿ, ಚಿತ್ರದ ಹಿನ್ನೆಲೆ ಸಂಗೀತವನ್ನು ಇನ್ನು ಮುಂದೆ ಸಂಗೀತ ನಿರ್ದೇಶಕ ಥಮನ್ ನೀಡುವುದಿಲ್ಲ ಎಂದು ವದಂತಿಗಳಿವೆ. ವದಂತಿಗಳನ್ನು ನಂಬುವುದಾದರೆ, ಅನಿರುದ್ಧ್ ಶೀಘ್ರದಲ್ಲೇ ಗುಂಟೂರು ಖಾರಂ ಸೇರುವ ಸಾಧ್ಯತೆಯಿದೆ.

ದಕ್ಷಿಣ ಭಾರತದಲ್ಲಿ ರಮ್ಯಾ ಕೃಷ್ಣನ್​ ಅವರಿಗೆ ತುಂಬ ಬೇಡಿಕೆ ಇದೆ. ಪೋಷಕ ಪಾತ್ರಗಳ ಮೂಲಕ ಅವರು ತಮ್ಮ ಛಾಪು ಮೂಡಿಸಿದ್ದಾರೆ. ‘ಬಾಹುಬಲಿ’ ಸಿನಿಮಾದಲ್ಲಿ ಅವರು ಪ್ರಭಾಸ್​ಗೆ ತಾಯಿಯಾಗಿ ನಟಿಸಿದ್ದರು. ಅವರು ಮಾಡಿದ್ದ ರಾಜಮಾತಾ ಶಿವಗಾಮಿ ಪಾತ್ರವನ್ನು ಅಭಿಮಾನಿಗಳು ತುಂಬ ಮೆಚ್ಚಿಕೊಂಡಿದ್ದರು. ಈಗ ‘ಗುಂಟೂರು ಖಾರಂ’ ಸಿನಿಮಾದಲ್ಲಿ ಮಹೇಶ್​ ಬಾಬುಗೆ ತಾಯಿಯಾಗಿ ರಮ್ಯಾ ಕೃಷ್ಣನ್​ ಅವರು ನಟಿಸಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ಇದನ್ನೂ ಓದಿ: Sreeleela Birthday: ಕನ್ನಡತಿ ಶ್ರೀಲೀಲಾಗೆ ಜನುಮದಿನ ಸಂಭ್ರಮ; ನಟಿಯ ‘ಗುಂಟೂರು ಖಾರಂ’ ಸಿನಿಮಾದ ಫಸ್ಟ್‌ ಲುಕ್‌ ಔಟ್‌!

ಈ ಸಿನಿಮಾದಿಂದ ನಟಿ ಪೂಜಾ ಹೆಗ್ಡೆ ಔಟ್‌

ಚಿತ್ರದಲ್ಲಿ ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸಲಿದ್ದು, ನಟಿ ಶ್ರೀಲೀಲಾ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿತ್ತು. ಇತ್ತೀಚೆಗೆ ತ್ರಿವಿಕ್ರಮ್ ಶ್ರೀನಿವಾಸ್ ಜತೆಗಿನ ಭಿನ್ನಾಭಿಪ್ರಾಯಗಳಿಂದ ಸಂಗೀತ ನಿರ್ದೇಶಕ ಎಸ್. ತಮನ್ ಹೊರ ಬಂದಿದ್ದಾರೆ ಎನ್ನಲಾಗಿತ್ತು. ಆದರೀಗ ನಟಿ ಪೂಜಾ ಹೆಗ್ಡೆ ಕೂಡ ಚಿತ್ರದಿಂದ ಹೊರ ಬರುತ್ತಿದ್ದಾರೆ ಎನ್ನುವ ಚರ್ಚೆ ಟಾಲಿವುಡ್‌ನಲ್ಲಿ ಶುರುವಾಗಿದೆ.

‘ಗುಂಟೂರು ಖಾರಂ’ ಸಿನಿಮಾ ಶೂಟಿಂಗ್ ಪದೇಪದೆ ತಡವಾಗುತ್ತಿದೆ. ಚಿತ್ರಕಥೆಯಲ್ಲಿ ಬದಲಾವಣೆ ಮಾಡುತ್ತಿದ್ದು, ಸಂಕ್ರಾಂತಿಗೂ ಸಿನಿಮಾ ರಿಲೀಸ್ ಆಗುವುದಿಲ್ಲ ಎನ್ನಲಾಗುತ್ತಿದೆ. ಚಿತ್ರದಿಂದ ಪೂಜಾ ಹೆಗ್ಡೆ ಹೊರ ನಡೆದಿದ್ದಾರೆ ಎನ್ನುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಇದರ ನಡುವೆ ತ್ರಿಷಾ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆ ಆಗಿದ್ದಾರೆ ಎನ್ನುವ ಸುದ್ದಿಯೂ ಇದೆ.

ಸಂಗೀತ ನಿರ್ದೇಶಕ ಯಾರು?

ತಮನ್ ಬದಲು ತಮಿಳಿನ ಅನಿರುದ್ಧ್ ರವಿಚಂದರ್ ‘ಗುಂಟೂರು ಖಾರಂ’ ಚಿತ್ರಕ್ಕೆ ಮ್ಯೂಸಿಕ್ ಕಂಪೋಸ್ ಮಾಡುತ್ತಾರೆ ಎಂದು ವರದಿಯಾಗಿದೆ.

2024ರ ಜನವರಿ 13ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎನ್ನಲಾಗಿದೆ. ‘ಹಾರಿಕಾ ಆ್ಯಂಡ್​ ಹಾಸಿನಿ ಕ್ರಿಯೇಷನ್ಸ್​’ ಬ್ಯಾನರ್​ ಮೂಲಕ ಈ ಸಿನಿಮಾ ಅದ್ಧೂರಿಯಾಗಿ ನಿರ್ಮಾಣ ಆಗುತ್ತಿದೆ. ಎಸ್​. ರಾಧಾಕೃಷ್ಣ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಈ ಹಿಂದೆ ʻಅತಡುʼ ಮತ್ತು ʻಖಲೇಜಾʼದಂತಹ ಬ್ಲಾಕ್‌ಬಸ್ಟರ್ ಚಿತ್ರಗಳಲ್ಲಿ ಮಹೇಶ್ ಬಾಬು ಹಾಗೂ ತ್ರಿವಿಕ್ರಮ್ ಶ್ರೀನಿವಾಸ್ ಒಟ್ಟಿಗೆ ಕೆಲಸ ಮಾಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Actor Shahrukh Khan: ಅಮೆರಿಕದಲ್ಲಿ ಶಾರುಖ್ ಖಾನ್‌ಗೆ ಶಸ್ತ್ರಚಿಕಿತ್ಸೆ; ಬಾಲಿವುಡ್‌ ಬಾದ್‌ಶಾಗೆ ಕಾಡುತ್ತಿರುವ ಸಮಸ್ಯೆ ಏನು?

Actor Shahrukh Khan: ಬಾಲಿವುಡ್‌ನ ಖ್ಯಾತ ನಟರಲ್ಲಿ ಒಬ್ಬರಾದ ಶಾರುಖ್ ಖಾನ್ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದಾರಂತೆ. 58 ವಯಸ್ಸಿನ ಈ ನಟನಿಗೆ ಕಣ್ಣಿನಲ್ಲಿ ಸಮಸ್ಯೆ ಉಂಟಾದ ಹಿನ್ನಲೆಯಲ್ಲಿ ಅಮೇರಿಕಾದಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ವರದಿಗಳ ಪ್ರಕಾರ, ನಟ ಶಾರುಖ್ ಖಾನ್ ಜುಲೈ 29ರಂದು ಶಸ್ತ್ರ ಚಿಕಿತ್ಸೆಗಾಗಿ ಮುಂಬೈನ ಆಸ್ಪತ್ರೆಗೆ ಹೋಗಿದ್ದರು. ಆದರೆ, ಚಿಕಿತ್ಸೆಯು ಯೋಜಿಸಿದಂತೆ ನಡೆಯಲಿಲ್ಲ. ಹಾಗಾಗಿ ಅವರು ವಿದೇಶದಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯಲಿದ್ದಾರೆ ಎನ್ನಲಾಗಿದೆ.

VISTARANEWS.COM


on

Actor Shahrukh Khan
Koo


ಮುಂಬೈ: ಶಾರುಖ್ ಖಾನ್ ಬಾಲಿವುಡ್‍ನ ಖ್ಯಾತ ನಟರಲ್ಲಿ ಒಬ್ಬರು. ಇವರು ಬಾಲಿವುಡ್ ಚಿತ್ರರಂಗಕ್ಕೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಇವತ್ತಿಗೂ ಬಾಲಿವುಡ್‌ಗೆ ಇವರೇ ಬಾದ್‌ ಶಾ! 58ನೇ ವಯಸ್ಸಿನ ಈ ನಟನಿಗೆ ಕಣ್ಣಿನಲ್ಲಿ ಸಮಸ್ಯೆ ಉಂಟಾದ ಹಿನ್ನಲೆಯಲ್ಲಿ ಅಮೇರಿಕಾದಲ್ಲಿ ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಶಾರುಖ್ ಖಾನ್ (Actor Shahrukh Khan)ಕೊನೆಯ ಬಾರಿಗೆ ರಾಜ್ ಕುಮಾರ್ ಹಿರಾನಿ ಅವರ ʼಡಂಕಿʼ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಇತ್ತೀಚೆಗೆ ಯುಕೆಯಿಂದ ಹಿಂದಿರುಗಿದ ನಟ ಈಗ ಕಣ್ಣಿನ ಚಿಕಿತ್ಸೆಗಾಗಿ ತುರ್ತಾಗಿ ಅಮೆರಿಕಕ್ಕೆ ಹಾರಲಿದ್ದಾರೆ ಎಂದು ಹೇಳಲಾಗಿದೆ.

Actor Shahrukh Khan
Actor Shahrukh Khan

ವರದಿಗಳ ಪ್ರಕಾರ, ನಟ ಶಾರುಖ್ ಖಾನ್ ಜುಲೈ 29ರಂದು ಶಸ್ತ್ರಚಿಕಿತ್ಸೆಗಾಗಿ ಮುಂಬೈನ ಆಸ್ಪತ್ರೆಗೆ ಹೋಗಿದ್ದರು. ಆದರೆ, ಚಿಕಿತ್ಸೆಯು ಯೋಜಿಸಿದಂತೆ ನಡೆಯಲಿಲ್ಲ. ಹಾಗಾಗಿ ಅವರು ವಿದೇಶದಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯಲಿದ್ದಾರೆ ಎನ್ನಲಾಗಿದೆ. ಆದರೆ ಶಾರುಖ್ ಮ್ಯಾನೇಜರ್ ಪೂಜಾ ದದ್ಲಾನಿ ಈ ಸುದ್ದಿಯನ್ನು ದೃಢಪಡಿಸಿಲ್ಲ.
ಈ ವರ್ಷದ ಆರಂಭದಲ್ಲಿ, ನಟ ಶಾರುಖ್ ಖಾನ್ ಅವರನ್ನು ಹೀಟ್ ಸ್ಟ್ರೋಕ್ ಮತ್ತು ನಿರ್ಜಲೀಕರಣದಿಂದಾಗಿ ಗುಜರಾತ್‍ನ ಅಹಮದಾಬಾದ್‍ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ (ಇಂಡಿಯನ್ ಪ್ರೀಮಿಯರ್ ಲೀಗ್) ಸಮಯದಲ್ಲಿ ತಮ್ಮ ತಂಡ ಕೋಲ್ಕತಾ ನೈಟ್ ರೈಡರ್ಸ್ ಅನ್ನು ಬೆಂಬಲಿಸಲು ಅವರು ಅಲ್ಲಿದ್ದಿದ್ದರು.

Actor Shahrukh Khan
Actor Shahrukh Khan

ಈ ಹಿಂದೆ 2014ರಲ್ಲಿ ಶಾರುಖ್ ತಮ್ಮ ದೃಷ್ಟಿಯನ್ನು ಸರಿಪಡಿಸಲು ಸಣ್ಣ ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆಯ ನಂತರ ಅವರು ತಮ್ಮ ಸೋಶಿಯಲ್ ಮೀಡಿಯಾ ಪೇಜ್‍ನಲ್ಲಿ ವೈದ್ಯರಿಗೆ ಧನ್ಯವಾದ ತಿಳಿಸಿದ್ದರು. ತಮ್ಮ ಶಸ್ತ್ರಚಿಕಿತ್ಸೆಯನ್ನು ಮಾಡಿದ್ದಕ್ಕಾಗಿ ಡಾ. ಬುರ್ಜೋರ್ ಬನಾಜಿ ಮತ್ತು ಅವರ ಪತ್ನಿಗೆ ಧನ್ಯವಾದ ತಿಳಿಸಿದ್ದರು. ಈ ಶಸ್ತ್ರಚಿಕಿತ್ಸೆಯಿಂದ ತಮ್ಮ ದೃಷ್ಟಿ ಸರಿಯಾಗಿರುವುದಾಗಿ ತಿಳಿಸಿದ್ದರು.

ಇದನ್ನೂ ಓದಿ: ವಿಚ್ಛೇದನದ ಬಳಿಕ ಪತ್ನಿಗೆ ದುಬಾರಿ ʼಜೀವನಾಂಶʼ ನೀಡಿದ ಬಾಲಿವುಡ್ ಸ್ಟಾರ್‌ಗಳಿವರು!

Actor Shahrukh Khan
Actor Shahrukh Khan

ನಟ ಶಾರುಖ್ ಖಾನ್ ಅವರ ಮುಂದಿನ ಚಿತ್ರ ಆಕ್ಷನ್-ಥ್ರಿಲ್ಲರ್ ಕಿಂಗ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ, ಇದರಲ್ಲಿ ಅವರ ಮಗಳು ಸುಹಾನಾ ಖಾನ್ ಸಹ ನಟಿಸಲಿದ್ದಾರೆ. ಹಾಗೇ ಅಭಿಷೇಕ್ ಬಚ್ಚನ್ ಕೂಡ ಚಿತ್ರದ ಭಾಗವಾಗಲಿದ್ದು, ಅಲ್ಲಿ ಅವರು ಖಳನಾಯಕನಾಗಿ ನಟಿಸಲಿದ್ದಾರೆ. ಆದರೆ, ಅಧಿಕೃತ ದೃಢೀಕರಣ ನಂತರ ಚಿತ್ರದ ಬಗ್ಗೆ ಮಾಹಿತಿ ಹೊರಬೀಳಲಿದೆ ಎನ್ನಲಾಗಿದೆ. ಮುಂದೆ ನಟ ಶಾರುಖ್ ಖಾನ್ ಅವರು ಆದಿತ್ಯ ಚೋಪ್ರಾ ಅವರ ಟೈಗರ್ ವರ್ಸಸ್ ಪಥನ್ ಚಿತ್ರದಲ್ಲಿ ಖಾನ್ ಪಥನ್ ಪಾತ್ರವನ್ನು ಮಾಡಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Continue Reading

ಸಿನಿಮಾ

Double Ismart: ‘ಡಬಲ್ ಇಸ್ಮಾರ್ಟ್’ ಚಿತ್ರದ ಮೂರನೇ ಹಾಡು ರಿಲೀಸ್; ರೋಮ್ಯಾಂಟಿಕ್ ಆಗಿ ಹೆಜ್ಜೆ ಹಾಕಿದ ರಾಮ್ ಪೋತಿನೇನಿ-ಕಾವ್ಯಾ ಥಾಪರ್

Double Ismart: ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳ ಪೈಕಿ ಪೂರಿ ಜಗನ್ನಾಥ್ ಆ್ಯಕ್ಷನ್ ಕಟ್ ಹೇಳಿರುವ ‘ಡಬಲ್ ಇಸ್ಮಾರ್ಟ್’ ಸಿನಿಮಾ ಕೂಡ ಒಂದು. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ತೆರೆ ಕಾಣಲಿದೆ. ಈಗಾಗಲೇ ಎರಡು ಹಾಡುಗಳನ್ನು ರಿಲೀಸ್‌ ಮಾಡಿ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದ್ದ ಚಿತ್ರತಂಡ ಇದೀಗ ಮೂರನೇ ಹಾಡು ಬಿಡುಗಡೆ ಮಾಡಿದೆ. ಈ ರೋಮ್ಯಾಂಟಿಕ್ ಹಾಡಿನಲ್ಲಿ ನಾಯಕ ರಾಮ್ ಪೋತಿನೇನಿ ಹಾಗೂ ನಾಯಕಿ ಕಾವ್ಯಾ ಥಾಪರ್ ಮಿಂಚಿದ್ದಾರೆ.

VISTARANEWS.COM


on

Double Ismart
Koo

ಹೈದರಾಬಾದ್‌: ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳ ಪೈಕಿ ಪೂರಿ ಜಗನ್ನಾಥ್ ಆ್ಯಕ್ಷನ್ ಕಟ್ ಹೇಳಿರುವ ‘ಡಬಲ್ ಇಸ್ಮಾರ್ಟ್’ (Double Ismart) ಸಿನಿಮಾ ಕೂಡ ಒಂದು. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ತೆರೆ ಕಾಣಲಿದೆ. ಈಗಾಗಲೇ ಎರಡು ಹಾಡುಗಳನ್ನು ರಿಲೀಸ್‌ ಮಾಡಿ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದ್ದ ಚಿತ್ರತಂಡ ಇದೀಗ ಮೂರನೇ ಹಾಡು ಬಿಡುಗಡೆ ಮಾಡಿದೆ. ಈಗಾಗಲೇ ರಿಲೀಸ್‌ ಆದ ಎರಡು ಹಾಡುಗಳು ಭರ್ಜರಿ ಹಿಟ್ ಆಗಿದ್ದು, ಆ ಸಾಲಿಗೆ ಇದೀಗ ಬಿಡುಗಡೆಯಾದ ʼಕ್ಯಾ ಲಫ್ಡಾʼ ಹಾಡೂ ಸೇರಲಿದೆ ಎನ್ನುವ ಸೂಚನೆ ಸಿಕ್ಕಿದೆ. ಈ ರೋಮ್ಯಾಂಟಿಕ್ ಹಾಡಿನಲ್ಲಿ ನಾಯಕ ರಾಮ್ ಪೋತಿನೇನಿ (Ram Pothineni) ಹಾಗೂ ನಾಯಕಿ ಕಾವ್ಯಾ ಥಾಪರ್ (Kavya Thapar) ಮಿಂಚಿದ್ದಾರೆ.

‘ಕ್ಯಾ ಲಫ್ಡಾ’ ಹಾಡಿಗೆ ಸಂಗೀತ ನಿರ್ದೇಶಕ ಮಣಿ ಶರ್ಮಾ ಟ್ಯೂನ್ ಹಾಕಿದ್ದಾರೆ. ಶ್ರೀ ಹರ್ಷ ಇಮಾನಿ ಸಾಹಿತ್ಯ ಬರೆದಿದ್ದು, ಧನುಂಜಯ್ ಸೀಪಾನ ಮತ್ತು ಸಿಂಧೂಜಾ ಶ್ರೀನಿವಾಸನ್ ಧ್ವನಿಯಾಗಿದ್ದಾರೆ. ಈ ಹಾಡಿನಲ್ಲಿ ‘ಕ್ಯಾ ಲಫ್ಡಾ’ ರಾಮ್ ಮತ್ತು ಕಾವ್ಯಾ ನಡುವಿನ ಕೆಮಿಸ್ಟ್ರೀ ಪ್ರೇಕ್ಷಕರಿಗೆ ಇಷ್ಟವಾಗಿದೆ.

ಖಳ ನಾಯಕನಾಗಿ ಸಂಜಯ್ ದತ್

ಬಾಲಿವುಡ್‌ ನಟ ಸಂಜತ್‌ ದತ್‌ ಇದೀಗ ದಕ್ಷಿಣ ಭಾರತದ ಸಿನಿಮಾಗಳಲ್ಲಿ ಸಕ್ರಿಯರಾಗಿದ್ದಾರೆ. ಕೆಜಿಎಫ್‌ 2 ಬಳಿಕ ದಕ್ಷಿಣ ಭಾರತದ ಚಿತ್ರಗಳಲ್ಲಿ ಅವರಿಗೆ ಬೇಡಿಕೆ ಹೆಚ್ಚಾಗಿದೆ. ‘ಡಬಲ್ ಇಸ್ಮಾರ್ಟ್’ ಚಿತ್ರದಲ್ಲೂ ಅವರು ವಿಲನ್ ಆಗಿ ನಟಿಸಿದ್ದಾರೆ. ತೆಲುಗು ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ʼಡಬಲ್ ಇಸ್ಮಾರ್ಟ್ʼ ಸಿನಿಮಾ ಬಿಡುಗಡೆ ಆಗಲಿದೆ. ಚಿತ್ರಕ್ಕೆ ಸ್ಯಾಮ್‌ ಕೆ. ನಾಯ್ಡು ಮತ್ತು ಗಿಯಾನಿ ಗಿಯಾನ್ನೆಲಿ ಛಾಯಾಗ್ರಹಣವಿದೆ.

ʼಡಬಲ್ ಇಸ್ಮಾರ್ಟ್ʼ ಸಿನಿಮಾವನ್ನು ಪುರಿ ಕನೆಕ್ಟ್ಸ್ ಬ್ಯಾನರ್ ಅಡಿಯಲ್ಲಿ ಪುರಿ ಜಗನ್ನಾಥ್ ಮತ್ತು ಚಾರ್ಮಿ ಕೌರ್ ನಿರ್ಮಿಸುತ್ತಿದ್ದಾರೆ. ಆಗಸ್ಟ್ 15ರಂದು ಚಿತ್ರ ವಿಶ್ವದಾದ್ಯಂತ ತೆರೆಗೆ ಬರಲಿದ್ದು, ಈಗಾಗಲೇ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ.

ವಿಶೇಷ ಎಂದರೆ ಇದು 2019ರಲ್ಲಿ ಬಿಡುಗಡೆಯಾದ ‘ಇಸ್ಮಾರ್ಟ್ ಶಂಕರ್’ ಚಿತ್ರದ ಸೀಕ್ವೆಲ್‌. ಮೊದಲ ಭಾಗದಲ್ಲಿ ರಾಮ್‌ ರಾಮ್ ಪೋತಿನೇನಿ ಜತೆಗೆ ಕನ್ನಡತಿ ನಭಾ ನಟೇಶ್ ಮತ್ತು ಬೆಂಗಳೂರು ಮೂಲದ ನಿಧಿ ಅಗರ್‌ವಾಲ್‌ ಅಭಿನಯಿಸಿದ್ದರು. ಆಗ ಈ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಕಮಾಲ್‌ ಮಾಡಿತ್ತು. ಈ ಸಿನಿಮಾ ಬಂದು 5 ವರ್ಷದ ಬಳಿಕ ಪಾರ್ಟ್-2 ʼಡಬಲ್ ಇಸ್ಮಾರ್ಟ್ʼ ಸಿನಿಮಾ ಬರುತ್ತಿದೆ. ಹೀಗಾಗಿ ಕುತೂಹಲ ಮೂಡಿಸಿದೆ. ಇದರಲ್ಲಿ ರಾಮ್‌ ರಾಮ್ ಪೋತಿನೇನಿ, ಕಾವ್ಯಾ ಥಾಪರ್, ಸಂಜಯ್‌ ದತ್‌ ಜತೆಗೆ ಸಯ್ಯಾಜಿ ಶಿಂದೆ, ಬನಿ ಜೆ., ಅಲಿ, ಮಕರಂದ ದೇಶ್‌ಪಾಂಡೆ ಮತ್ತಿತರರು ನಟಿಸುತ್ತಿದ್ದಾರೆ. ಕಳೆದ ವರ್ಷ ತೆರೆಕಂಡ ರಾಮ್‌ ಪೋತಿನೇನಿ ಅಭಿನಯದ ʼಸ್ಕಂದʼ ಚಿತ್ರ ಹೀನಾಯವಾಗಿ ಸೋತಿರುವುದರಿಂದ ಅವರಿಗೆ ಗೆಲುವು ಅನಿವಾರ್ಯ ಎನಿಸಿಕೊಂಡಿದೆ.

ಇದನ್ನೂ ಓದಿ: Ram Pothineni: `ಡಬಲ್ ಇಸ್ಮಾರ್ಟ್’ ಸಿನಿಮಾದ ಎರಡನೇ ಹಾಡು ರಿಲೀಸ್!

Continue Reading

ದೇಶ

The RajaSaab Movie: ‘ದಿ ರಾಜಾಸಾಬ್’; ಎಲ್ಲರ ಗಮನ ಸೆಳೆಯುತ್ತಿದೆ ರೆಬೆಲ್‌ ಸ್ಟಾರ್‌ ಪ್ರಭಾಸ್‌ ಡ್ಯಾಶಿಂಗ್‌ ಲುಕ್‌!

The RajaSaab Movie: ರೆಬೆಲ್‌ ಸ್ಟಾರ್‌ ಪ್ರಭಾಸ್‌ ಅಭಿನಯದ ಪ್ಯಾನ್‌ ಇಂಡಿಯಾ ಚಿತ್ರ “ದಿ ರಾಜಾಸಾಬ್” ಸಣ್ಣ ಝಲಕ್‌ ಅನ್ನು ಸೋಮವಾರ ಚಿತ್ರತಂಡ ಬಿಡುಗಡೆ ಮಾಡಿದೆ. . ಮಾಸ್‌ ಆಕ್ಷನ್‌ ಶೈಲಿಯ ಸಲಾರ್‌, ಕಲ್ಕಿ ಎಡಿ 2898 ಚಿತ್ರಗಳ ಯಶಸ್ಸಿನ ಬಳಿಕ ಇದೀಗ ಲವರ್‌ ಬಾಯ್‌ ಅವತಾರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಕಿರು ಗ್ಲಿಂಪ್ಸ್‌‌ನಲ್ಲಿ ಪ್ರಭಾಸ್‌ ಅವರ ಡ್ಯಾಶಿಂಗ್‌ ಲುಕ್‌ ಎಲ್ಲರ ಗಮನ ಸೆಳೆಯುತ್ತಿದೆ. ಗ್ಲಿಂಪ್ಸ್‌ ಜತೆಗೆ ಈ ಸಿನಿಮಾ ಯಾವಾಗ ತೆರೆಗೆ ಬರಲಿದೆ ಎಂಬ ಮಾಹಿತಿಯನ್ನೂ ಚಿತ್ರತಂಡ ಬಿಟ್ಟುಕೊಟ್ಟಿದೆ. ‘ರಾಜಾ ಸಾಬ್’ 2025ರ ಏಪ್ರಿಲ್ 10ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ.

VISTARANEWS.COM


on

Rebel star Prabhas starrer The Rajasaab short glimpse released
Koo

ಬೆಂಗಳೂರು: ಗೆಲುವಿನ ಲಯಕ್ಕೆ ಮರಳಿರುವ ಟಾಲಿವುಡ್‌ ನಟ, ರೆಬೆಲ್‌ ಸ್ಟಾರ್‌ ಪ್ರಭಾಸ್‌, ಇದೀಗ ತಮ್ಮ ಮುಂದಿನ ಸಿನಿಮಾದ ಬಗ್ಗೆ ಸಣ್ಣ ಗ್ಲಿಂಪ್ಸ್‌ ಮೂಲಕ ಮತ್ತೆ ಫ್ಯಾನ್ಸ್‌ ಮುಂದೆ ಪ್ರತ್ಯಕ್ಷರಾಗಿದ್ದಾರೆ. ಮಾಸ್‌ ಆಕ್ಷನ್‌ ಶೈಲಿಯ ಸಲಾರ್‌, ಕಲ್ಕಿ ಎಡಿ 2898 ಚಿತ್ರಗಳ ಯಶಸ್ಸಿನ ಬಳಿಕ ಇದೀಗ ಲವರ್‌ ಬಾಯ್‌ ಅವತಾರದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಪ್ಯಾನ್‌ ಇಂಡಿಯಾ ಚಿತ್ರ “ದಿ ರಾಜಾಸಾಬ್” (The RajaSaab Movie) ಸಣ್ಣ ಝಲಕ್‌ ಅನ್ನು ಸೋಮವಾರ ಚಿತ್ರತಂಡ ಬಿಡುಗಡೆ ಮಾಡಿದೆ. ಕಿರು ಗ್ಲಿಂಪ್ಸ್‌‌ನಲ್ಲಿ ಪ್ರಭಾಸ್‌ ಅವರ ಡ್ಯಾಶಿಂಗ್‌ ಲುಕ್‌ ಎಲ್ಲರ ಗಮನ ಸೆಳೆಯುತ್ತಿದೆ.

ಗ್ಲಿಂಪ್ಸ್‌ ಜತೆಗೆ ಈ ಸಿನಿಮಾ ಯಾವಾಗ ತೆರೆಗೆ ಬರಲಿದೆ ಎಂಬ ಮಾಹಿತಿಯನ್ನೂ ಚಿತ್ರತಂಡ ಬಿಟ್ಟುಕೊಟ್ಟಿದೆ. ‘ರಾಜಾ ಸಾಬ್’ 2025ರ ಏಪ್ರಿಲ್ 10ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಬರೀ ತೆಲುಗಿನಲ್ಲಷ್ಟೇ ಅಲ್ಲದೆ, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿಯಲ್ಲಿಯೂ ರಾಜಾಸಾಬ್‌ ಸಿನಿಮಾ ಬಿಡುಗಡೆ ಆಗಲಿದೆ. ಹಾಗಾದರೆ, ಇದ್ಯಾವ ರೀತಿಯ ಸಿನಿಮಾ? ರೋಮ್ಯಾಂಟಿಕ್ ಹಾರರ್ ಕಾಮಿಡಿಯಲ್ಲಿ ಪ್ರಭಾಸ್‌ ಎಲ್ಲರನ್ನು ಮೋಡಿ ಮಾಡಲು ಸಿದ್ಧರಾಗಿದ್ದಾರೆ. ನಿರ್ದೇಶಕ ಮಾರುತಿ ಈ ಸಿನಿಮಾ ಮೂಲಕ ಪ್ರಭಾಸ್‌ ಅವರನ್ನು ಇನ್ನಷ್ಟು ಸ್ಟೈಲಿಶ್ ಲುಕ್‌ನಲ್ಲಿ ತೋರಿಸಲಿದ್ದಾರೆ.

ಇದನ್ನೂ ಓದಿ: Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಜುಲೈ 30ರಂದು ಭಾರತದ ವೇಳಾಪಟ್ಟಿ ಈ ರೀತಿ ಇದೆ

ಈಗಾಗಲೇ ಶೇ. 40% ಭಾಗದ ಚಿತ್ರೀಕರಣ ಪೂರ್ಣಗೊಂಡಿದೆ. ಆಗಸ್ಟ್ 2ರಿಂದ ಮತ್ತೊಂದು ಹಂತದ ಶೂಟಿಂಗ್‌ ಪ್ರಾರಂಭವಾಗಲಿದೆ. ಎಸ್‌ಎಸ್ ಥಮನ್ ಈ ಸಿನಿಮಾಕ್ಕೆ ಸಂಗೀತ ನೀಡುತ್ತಿದ್ದಾರೆ. ರಾಮ್ ಲಕ್ಷ್ಮಣ್ ಮಾಸ್ಟರ್ಸ್ ಮತ್ತು ಕಿಂಗ್ ಸೊಲೊಮನ್ ಫೈಟ್ ಕೊರಿಯೋಗ್ರಫಿಯನ್ನು ನಿರ್ವಹಿಸುತ್ತಿದ್ದಾರೆ. ಈ ಮೂಲಕ ಭರ್ಜರಿ ಆಕ್ಷನ್‌ ನಿರೀಕ್ಷಿಸಬಹುದಾಗಿದೆ. ಬಾಹುಬಲಿ ಖ್ಯಾತಿಯ ಕಮಲಾ ಕಣ್ಣನ್ ಆರ್.ಸಿ. ವಿಎಫ್‌ಎಕ್ಸ್‌ನ ಉಸ್ತುವಾರಿ ವಹಿಸಿಕೊಂಡಿದ್ದು, ದೊಡ್ಡ ಪರದೆಯ ಮೇಲೆ ದೃಶ್ಯ ಚಮತ್ಕಾರ ನೀಡಲಿದೆ.

ಮಾರುತಿ ನಿರ್ದೇಶನದ ರಾಜಾ ಸಾಬ್‌ ಸಿನಿಮಾವನ್ನು ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ವಿಶ್ವ ಪ್ರಸಾದ್ ನಿರ್ಮಾಣ ಮಾಡುತ್ತಿದ್ದಾರೆ. ರಾಜಾ ಸಾಬ್ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಒಟ್ಟು ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ‘ಪ್ರತಿ ರೋಜು ಪಂಡಗʼ, ತೆಲುಗಿನ ಹಾರರ್ ಕಾಮಿಡಿ ‘ಪ್ರೇಮ ಕಥಾ ಚಿತ್ರಂʼ ಮತ್ತು ರೊಮ್ಯಾಂಟಿಕ್ ಕಾಮಿಡಿ ‘ಮಹಾನುಭಾವುಡು’ ಸೇರಿ ಹಲವು ಸೂಪರ್‌ಹಿಟ್‌ಗಳಿಗೆ ಸಿನಿಮಾ ನಿರ್ದೇಶನ ಮಾಡಿದ ಮಾರುತಿ, ಇದೀಗ ರಾಜಾಸಾಬ್‌ ಮೂಲಕ ರೊಮ್ಯಾಂಟಿಕ್ ಹಾರರ್ ಎಂಟರ್ಟೈನರ್ ಜತೆ ಆಗಮಿಸುತ್ತಿದ್ದಾರೆ.

ಇದನ್ನೂ ಓದಿ: Pralhad Joshi: ಟೊಮೆಟೊ ಬೆಲೆ ಸ್ಥಿರತೆಗೆ ಕ್ರಮ; ಕೆಜಿಗೆ 60 ರೂ. ನಿಗದಿ: ಪ್ರಲ್ಹಾದ್‌ ಜೋಶಿ

‘ಕಾರ್ತಿಕೇಯ 2’ ಮತ್ತು ‘ಧಮಾಕಾ’ ಸೇರಿ ಹಲವು ಹಿಟ್‌ ಚಿತ್ರಗಳನ್ನು ಕೊಟ್ಟಿರುವ ಪೀಪಲ್ ಮೀಡಿಯಾ ಫ್ಯಾಕ್ಟರಿ ಬ್ಯಾನರ್‌ ತೆಲುಗು ಚಿತ್ರೋದ್ಯಮದಲ್ಲಿ ಪ್ರಮುಖ ಹೆಸರು. ಇದೀಗ ಬಹುಕೋಟಿ ವೆಚ್ಚದಲ್ಲಿ ರಾಜಾ ಸಾಬ್ ಚಿತ್ರವನ್ನು ಪೀಪಲ್ ಮೀಡಿಯಾ ಫ್ಯಾಕ್ಟರಿ ಅದ್ಧೂರಿಯಾಗಿ, ಎಲ್ಲಿಯೂ ರಾಜಿ ಮಾಡಿಕೊಳ್ಳದೆ ಅದ್ಧೂರಿಯಾಗಿ ನಿರ್ಮಿಸುತ್ತಿದೆ. ಕೋಟಗಿರಿ ವೆಂಕಟೇಶ್ವರ ರಾವ್ ಈ ಚಿತ್ರಕ್ಕೆ ಸಂಕಲನ ಮಾಡಿದರೆ, ಕಾರ್ತಿಕ್ ಪಳನಿ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಸಂಗೀತವನ್ನು ಎಸ್‌ಎಸ್‌ ಥಮನ್ ಮಾಡಿದರೆ, ರಾಮ್ ಲಕ್ಷ್ಮಣ್ ಮತ್ತು ಕಿಂಗ್ ಸೊಲೊಮನ್ ಸವರ ಸಾಹಸ ಈ ಚಿತ್ರಕ್ಕಿರಲಿದೆ.

Continue Reading

ಸ್ಯಾಂಡಲ್ ವುಡ್

Kannada New Movie: ಭಾರಿ ಮೊತ್ತಕ್ಕೆ ಮಾರಾಟವಾಯ್ತು ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಸಿನಿಮಾ ಆಡಿಯೊ ಹಕ್ಕು

Kannada New Movie: ವಂಶಿ ಚೊಚ್ಚಲ ಬಾರಿಗೆ ನಿರ್ದೇಶಿಸಿ ನಟಿಸುತ್ತಿರುವ ʻಫೈರ್ ಫ್ಲೈʼ ಸಿನಿಮಾಗೆ ಚರಣ್ ರಾಜ್ ಅದ್ಭುತ ಸಂಗೀತ ಒದಗಿಸಿದ್ದಾರೆ. ಶೀಘ್ರದಲ್ಲಿಯೇ ಚರಣ್ ಟ್ಯೂನ್ ಹಾಕಿರುವ ಹಾಡುಗಳ ಹಬ್ಬ ಆನಂದ್ ಆಡಿಯೊ ಯೂಟ್ಯೂಬ್ ನಲ್ಲಿ ಶುರುವಾಗಲಿದೆ. ಆನಂದ್ ಆಡಿಯೋ ಸಂಸ್ಥೆ ಒಂದೊಳ್ಳೆ ಮೊತ್ತಕ್ಕೆ ಫೈರ್ ಫ್ಲೈ ಆಡಿಯೋ ಹಕ್ಕನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ.

VISTARANEWS.COM


on

Kannada New Movie Audio rights of Niveditha Shivarajkumar produced movie sold for huge amount
Koo

ಬೆಂಗಳೂರು: ಕನ್ನಡದ ಬಹುನಿರೀಕ್ಷಿತ ಸಿನಿಮಾ ʻಫೈರ್ ಫ್ಲೈʼ (Kannada New Movie) ಬಹಳ ವಿಶೇಷವಾಗಿದೆ. ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಚೊಚ್ಚಲ ಚಿತ್ರ ಎಂಬ ಕಾರಣದ ಜತೆಗೆ ಹೆಸರಾಂತ ತಾರೆಯರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅಚ್ಯುತ್ ಕುಮಾರ್ ಹಾಗೂ ಸುಧಾರಾಣಿ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ನವ ನಾಯಕ ಮತ್ತು ನಿರ್ದೇಶಕ ವಂಶಿ ಸಾರಥ್ಯದಲ್ಲಿ ಮೂಡಿ ಬರ್ತಿರುವ ʻಫೈರ್ ಫ್ಲೈʼ ಸಿನಿಮಾದ ಆಡಿಯೊ ಹಕ್ಕು ದಾಖಲೆ ಮೊತ್ತಕ್ಕೆ ಮಾರಾಟವಾಗಿದೆ.

ವಂಶಿ ಚೊಚ್ಚಲ ಬಾರಿಗೆ ನಿರ್ದೇಶಿಸಿ ನಟಿಸುತ್ತಿರುವ ʻಫೈರ್ ಫ್ಲೈʼ ಸಿನಿಮಾಗೆ ಚರಣ್ ರಾಜ್ ಅದ್ಭುತ ಸಂಗೀತ ಒದಗಿಸಿದ್ದಾರೆ. ಶೀಘ್ರದಲ್ಲಿಯೇ ಚರಣ್ ಟ್ಯೂನ್ ಹಾಕಿರುವ ಹಾಡುಗಳ ಹಬ್ಬ ಆನಂದ್ ಆಡಿಯೊ ಯೂಟ್ಯೂಬ್ ನಲ್ಲಿ ಶುರುವಾಗಲಿದೆ. ಆನಂದ್ ಆಡಿಯೋ ಸಂಸ್ಥೆ ಒಂದೊಳ್ಳೆ ಮೊತ್ತಕ್ಕೆ ಫೈರ್ ಫ್ಲೈ ಆಡಿಯೋ ಹಕ್ಕನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ.

‘ಫೈರ್ ಫ್ಲೈ’ ಸಿನಿಮಾದಲ್ಲಿ ವಂಶಿ ಅವರು ಹೀರೋ ಆಗಿ ಅಭಿನಯಿಸುತ್ತಿದ್ದಾರೆ. ಅಲ್ಲದೇ, ಅವರೇ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ‘ಹ್ಯಾಟ್ರಿಕ್​ ಹೀರೋ’ ಶಿವರಾಜ್​ಕುಮಾರ್​ ಅವರ ಪುತ್ರಿ ನಿವೇದಿತಾ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಮೂಲಕ ವಂಶಿ ಅವರು ಸ್ವತಂತ್ರ ನಿರ್ದೇಶಕರಾಗಿ ಹಾಗೂ ಪೂರ್ಣಪ್ರಮಾಣದ ಹೀರೋ ಆಗಿ ಪ್ರೇಕ್ಷಕರರ ಮುಂದೆ ಬರಲಿದ್ದಾರೆ.

ಇದನ್ನೂ ಓದಿ: Actor Dhanush: ಮೂರೇ ದಿನಕ್ಕೆ 50 ಕೋಟಿ ರೂ. ಕಲೆಕ್ಷನ್‌ ಮಾಡಿದ ಧನುಷ್‌ ನಟನೆಯ ʻ50ʼನೇ ಸಿನಿಮಾ!

ಈ ಚಿತ್ರಕ್ಕೆ ಜಯ್ ರಾಮ್ ಅವರು ಸಹ-ನಿರ್ದೇಶಕನ ಮಾಡುತ್ತಿದ್ದಾರೆ. ಅಭಿಲಾಷ್ ಕಳತ್ತಿ ಅವರ ಛಾಯಾಗ್ರಹಣ, ಚರಣ್ ರಾಜ್ ಅವರ ಸಂಗೀತ ನಿರ್ದೇಶನ, ರಘು ನಿಡುವಳ್ಳಿ ಅವರ ಸಂಭಾಷಣೆ ಈ ಸಿನಿಮಾಗಿದೆ. ಬೆಳಕಿನ ಹಬ್ಬ ದೀಪಾವಳಿಗೆ ಫೈರ್ ಫ್ಲೈ ಸಿನಿಮಾ ಥಿಯೇಟರ್ ಬೆಳಗಲಿದೆ.

Continue Reading
Advertisement
Kenchanala Marikamba Jatra
ಶಿವಮೊಗ್ಗ9 mins ago

Shivamogga News: ವಿಜೃಂಭಣೆಯಿಂದ ನಡೆದ ಕೆಂಚನಾಲ ಮಾರಿಕಾಂಬಾ ಜಾತ್ರೆ

Aryan Khan
ಸಿನಿಮಾ14 mins ago

Aryan Khan: ದಿಲ್ಲಿಯ ಸಣ್ಣ ಮನೆಯಲ್ಲಿದ್ದ ಶಾರುಖ್‌ ದಂಪತಿ; ಅಲ್ಲಿನ ಬಂಗಲೆಯನ್ನು 37 ಕೋಟಿ ರೂ.ಗೆ ಖರೀದಿಸಿದ ಪುತ್ರ!

IND vs SL
ಪ್ರಮುಖ ಸುದ್ದಿ18 mins ago

IND vs SL : ಭಾರತ ವಿರುದ್ಧದ ಏಕ ದಿನ ಸರಣಿಗೆ ಶ್ರೀಲಂಕಾ ತಂಡ ಪ್ರಕಟ; ಹೊಸ ನಾಯಕನ ಘೋಷಣೆ

ಪ್ರಮುಖ ಸುದ್ದಿ22 mins ago

Wayanad Landslide: ಕೇರಳದಲ್ಲಿ ರಕ್ಷಣೆ, ಪರಿಹಾರ ಕಾರ್ಯಾಚರಣೆಗೆ ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ ಸಿಎಂ ಸಿದ್ದರಾಮಯ್ಯ

Star Saree Styling Tips
ಫ್ಯಾಷನ್22 mins ago

Star Saree Styling Tips: ಎಂಬ್ರಾಯ್ಡರಿ ಸೀರೆಯಲ್ಲಿ ನಟಿ ರಶ್ಮಿಕಾ ಮಂದಣ್ಣರಂತೆ ಕಾಣಿಸಬೇಕೇ? ಈ 5 ಟಿಪ್ಸ್ ಫಾಲೋ ಮಾಡಿ

karnataka Weather Forecast
ಮಳೆ24 mins ago

Karnataka Weather : ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ; ಮಲೆನಾಡಿನ ಶಾಲಾ-ಕಾಲೇಜು ರಜೆ

Love Jihad
ದೇಶ36 mins ago

Love Jihad: ಲವ್‌ ಜಿಹಾದ್‌ ವಿರುದ್ಧ ಯೋಗಿ ದಿಟ್ಟ ಕ್ರಮ; ಇನ್ನು ಜಿಹಾದಿಗಳಿಗೆ ಜೀವಾವಧಿ ಶಿಕ್ಷೆ ಗ್ಯಾರಂಟಿ!

Tata Motors launched two programs Vidyadhana and Utkarsha to facilitate higher education of technician children
ವಾಣಿಜ್ಯ37 mins ago

Tata Motors: ಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವಾಗಲು ಟಾಟಾ ಮೋಟಾರ್ಸ್‌ನಿಂದ ‘ವಿದ್ಯಾಧನ’, ‘ಉತ್ಕರ್ಷ’ ಯೋಜನೆ

ಕರ್ನಾಟಕ45 mins ago

Wayanad Landslide: ಕೇರಳ ಭೂ ಕುಸಿತ; ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸಲು ಸರ್ಕಾರಕ್ಕೆ ಎಚ್‌ಡಿಕೆ ಸಲಹೆ

Custard Apple Benefits
Latest1 hour ago

Custard Apple Benefits: ಕ್ಯಾನ್ಸರ್‌ ಸೇರಿದಂತೆ ಹಲವು ರೋಗಗಳನ್ನು ತಡೆಯುವ ಶಕ್ತಿ ಸೀತಾಫಲಕ್ಕಿದೆ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 hours ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ6 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ7 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 day ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 day ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ1 day ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌