weather report Southwest monsoon effect in the karnataka Heavy rain warning for 9 districtsWeather Report: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು; 9 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ - Vistara News

ಉಡುಪಿ

Weather Report: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು; 9 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ

Weather Report: ಜೂ.23, 24ರಂದು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಯಾವ್ಯಾವ ಜಿಲ್ಲೆಗಳಿಗೆ ಅಲರ್ಟ್‌ (Rain alert) ನೀಡಲಾಗಿದೆ ಇಲ್ಲಿದೆ ನೋಡಿ ಮಾಹಿತಿ.

VISTARANEWS.COM


on

Rain News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ಗುರುವಾರ ನೈರುತ್ಯ ಮುಂಗಾರು (Southwest monsoon) ದಕ್ಷಿಣ ಒಳನಾಡಿನಲ್ಲಿ ಚುರುಕಾಗಿದ್ದರೆ, ಕರಾವಳಿ ಭಾಗದಲ್ಲಿ (Weather report) ದುರ್ಬಲವಾಗಿತ್ತು. ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ. ಮಲೆನಾಡಿನ ಭಾಗವಾದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗಿನಲ್ಲಿ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ತುಮಕೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ, ಮೈಸೂರು, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ, ಹಾವೇರಿ, ಗದಗ, ವಿಜಯನಗರ, ಹಾವೇರಿ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ವರುಣ ಗುಡುಗಲಿದ್ದಾನೆ.

ಬೆಂಗಳೂರು ವ್ಯಾಪ್ತಿಯಲ್ಲಿ ಕೆಲವೊಮ್ಮೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ

ಕರಾವಳಿಯ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿ ಜಿಲ್ಲೆಗಳಾದ ತುಮಕೂರು, ಬಳ್ಳಾರಿ, ವಿಜಯನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಗರಿಷ್ಠ ಉಷ್ಣಾಂಶ ಎಚ್ಚರಿಕೆ

ಗರಿಷ್ಠ ಉಷ್ಣಾಂಶವು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಲಿದೆ. ಕರಾವಳಿಯಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್‌, ದಕ್ಷಿಣ ಒಳನಾಡಿನಲ್ಲಿ 2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಲಿದೆ.

ಇದನ್ನೂ ಓದಿ: Murder Case: ಸಂಸಾರದಲ್ಲಿ ವೈಮನಸ್ಸು; ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿದ ಪತಿ

ಮೀನುಗಾರರಿಗೆ ಮುಂದುವರಿದ ಅಲರ್ಟ್‌

ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-50 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ ಬೀಸಲಿದೆ. ಮೀನುಗಾರರು ಈ ಸಮಯದಲ್ಲಿ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಭಾರಿ ಗಾಳಿ, ಮಳೆಗೆ ಶೃಂಗೇರಿಯಲ್ಲಿ ವಿದ್ಯುತ್‌ ಕಡಿತ; ಶಿರಸಿಯಲ್ಲಿ ಉರುಳಿ ಬಿದ್ದ ಮರ

Karnataka Weather Forecast : ಮಂಗಳವಾರ ಸಂಜೆ ಚಿಕ್ಕಮಗಳೂರು, ಕಾರವಾರ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ವಿದ್ಯುತ್‌ ಕಂಬಗಳು ಉರುಳಿ ಬಿದ್ದರೆ, ಗಾಳಿ ಮಳೆಗೆ ಮರಗಳು ಧರೆಗುರುಳಿವೆ. ಈ ವಾರ ಪೂರ್ತಿ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Rain News) ನೀಡಿದೆ.

VISTARANEWS.COM


on

By

Karnataka Weather Forecast
Koo

ಚಿಕ್ಕಮಗಳೂರು/ಬೆಂಗಳೂರು: ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಗಾಳಿ ಸಹಿತ ಭಾರಿ (Heavy Rain) ಮಳೆಯಾಗುತ್ತಿದೆ. ಮಂಗಳವಾರ ಸಂಜೆ ಶುರುವಾದ ಮಳೆಯು ಕಳೆದ ಒಂದು ಗಂಟೆಗೂ ಹೆಚ್ಚು ಸಮಯದಿಂದ ಸುರಿಯುತ್ತಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಧಾರಕಾರ ಮಳೆ‌ಯಾಗುತ್ತಿದ್ದು, ಪ್ರವಾಸಿಗರು ಹಾಗೂ ಜನ-ಜೀವನ ಅಸ್ತವ್ಯಸ್ತವಾಗಿತ್ತು. ಇನ್ನೂ ಗಾಳಿ ಮಳೆಗೆ ಶೃಂಗೇರಿ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸತತ ಮಳೆಯಿಂದಾಗಿ (Rain News) ತುಂಗಾ ನದಿ ಹರಿವು ಕೊಂಚ ಏರಿಕೆಯಾಗುವ (Karnataka weather Forecast) ಸಾಧ್ಯತೆ ಇದೆ.

ಉತ್ತರಕನ್ನಡದಲ್ಲೂ ವರುಣಾರ್ಭಟ

ಉತ್ತರಕನ್ನಡದ ಘಟ್ಟದ ಮೇಲಿನ ತಾಲೂಕುಗಳಲ್ಲೂ ವರುಣಾರ್ಭಟ ಜೋರಾಗಿದೆ. ಶಿರಸಿ, ಸಿದ್ದಾಪುರ ಭಾಗದಲ್ಲೂ ಭಾರೀ ಗಾಳಿ ಸಹಿತ ಮಳೆಯಾಗುತ್ತಿದೆ. ಶಿರಸಿಯಲ್ಲಿ ಭಾರೀ ಮಳೆಗೆ ಮರಗಳು ಧರೆಗುರುಳಿದೆ. ನಗರದ ಸಹ್ಯಾದ್ರಿ ಕಾಲೋನಿಯಲ್ಲಿ ಮರ ಬಿದ್ದು, ವಿದ್ಯುತ್ ಕಂಬ ಮುರಿದು ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ. ಹತ್ತಕ್ಕೂ ಅಧಿಕ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಕುಮಟಾ ತಾಲೂಕಿನ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಬಿಸಿಲಿಗೆ ಕಾದಿದ್ದ ಇಳೆಗೆ ವರುಣ ತಂಪೆರೆದಿದ್ದಾನೆ. ಅರ್ಧ ಗಂಟೆಗೂ ಅಧಿಕ ಕಾಲ ಧಾರಾಕಾರ ಮಳೆಯಾಗಿದೆ. ಘಟ್ಟದ ಮೇಲಿನ ತಾಲ್ಲೂಕುಗಳಲ್ಲಿ ಮಳೆಯಾದರೂ ಕರಾವಳಿಗೆ ವರುಣ ಕಾಲಿಟ್ಟಿರಲಿಲ್ಲ. ಇದೀಗ ವರುಣಾಗಮನದಿಂದ ಕರಾವಳಿ ಜನತೆ ಖುಷಿಯಾಗಿದ್ದಾರೆ. ಭಟ್ಕಳ, ಹೊನ್ನಾವರ, ಅಂಕೋಲಾ, ಕಾರವಾರ ಭಾಗದಲ್ಲಿ ಮೋಡ ಕವಿದ ವಾತಾವರಣವಿದೆ.

ಧಾರವಾಡದಲ್ಲಿ ಮಳೆಯ ಅಬ್ಬರ

ಧಾರವಾಡದಲ್ಲಿ ಮಂಗಳವಾರ ಬೆಳಗ್ಗೆನಿಂದಲ್ಲೂ ಮೋಡ ಕವಿದ ವಾತಾವರಣವಿತ್ತು. ಇಳಿ ಸಂಜೆಯಾಗುತ್ತಿದ್ದಂತೆ ಧಾರವಾಡ ನಗರಕ್ಕೆ ವರುಣನ ಆಗಮನವಾಗಿದೆ. ಕಳೆದ ಎರಡು ದಿನಗಳ ಹಿಂದೆ ಸುರಿದಿದ್ದ ಮಳೆಯು ಸ್ವಲ್ಪ ಸಮಯ ಬ್ರೇಕ್‌ ಕೊಟ್ಟಿತ್ತು. ಇಂದು ಮತ್ತೆ ಮಳೆ ಸುರಿದಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಇದನ್ನೂ ಓದಿ: Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಮೇ 18ರ ವರೆಗೆ ಮಳೆ ಸಾಧ್ಯತೆ

ಮೇ 18ರ ವರೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ.

ಕೊಡಗು, ಮೈಸೂರು, ಮಂಡ್ಯದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿಮೀ)ಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕನ್ನಡ, ಧಾರವಾಡ, ಗದಗ, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆ

ನಿನ್ನೆ ಸೋಮವಾರ (ಮೇ 13) ರಾಜ್ಯಾದ್ಯಂತ ಮಳೆಯಾಗಿದ್ದು, ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆಯಾಗಿದ್ದು, ಮಂಡ್ಯದ ಪಿಟಿಒನಲ್ಲಿ 9 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಶಿರಾಳಿಯಲ್ಲಿ ಗರಿಷ್ಠ ಉಷ್ಣಾಂಶ 38.4 ಡಿ.ಸೆನಷ್ಟು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Road Accident: ಸ್ಕೂಟರ್‌ಗೆ ಟ್ರಕ್‌, ಲಾರಿಗೆ ಬಸ್‌, ಡಿವೈಡರ್‌ಗೆ ಕಾರು ಡಿಕ್ಕಿ; ಅಪಾಯದಿಂದ ಜಸ್ಟ್‌ ಮಿಸ್‌

Road Accident: ಪ್ರತ್ಯೇಕ ಕಡೆಗಳಲ್ಲಿ ಅಪಘಾತ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ. ಉಡುಪಿಯಲ್ಲಿ ಸ್ಕೂಟರ್‌ಗೆ‌ ಟ್ರಕ್‌ ಡಿಕ್ಕಿ ಹೊಡೆದರೆ, ಮಂಡ್ಯದಲ್ಲಿ ಡಿವೈಡರ್‌ಗೆ ಕಾರು ಗುದ್ದಿದೆ. ಚಿತ್ರದುರ್ಗದಲ್ಲಿ ಲಾರಿ- ಬಸ್ ನಡುವೆ ಅಪಘಾತ ನಡೆದರೆ, ಚಿಕ್ಕಮಗಳೂರಲ್ಲಿ ರಸ್ತೆ ಮಧ್ಯೆ ಐರಾವತ ಬಸ್ ಹೊತ್ತಿ ಉರಿದಿದೆ.

VISTARANEWS.COM


on

By

Road Accident
Koo

ಉಡುಪಿ/ಮಂಡ್ಯ/ಚಿತ್ರದುರ್ಗ/ ಚಿಕ್ಕಮಗಳೂರು: ಪ್ರತ್ಯೇಕ ಕಡೆಗಳಲ್ಲಿ ನಡೆದ ನಾಲ್ಕು ಅಪಘಾತದಲ್ಲಿ ಪವಾಡ ಸದೃಶ್ಯದಂತೆ ಪಾರಾಗಿದ್ದಾರೆ. ಅಪಘಾತದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉಡುಪಿಯ ಅಂಬಾಗಿಲು ಪೆರಂಪಳ್ಳಿ ಕ್ರಾಸ್ ಬಳಿ ಸ್ಕೂಟರ್‌ಗೆ ಟ್ರಕ್‌ವೊಂದು ಡಿಕ್ಕಿ ಹೊಡೆದಿದೆ. ಅಪಘಾತದ ದೃಶ್ಯ ಕಟ್ಟಡವೊಂದರ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಹಿಳೆಯೊಬ್ಬರು ಸ್ಕೂಟರ್‌ನಲ್ಲಿ ನೇರವಾಗಿ ಹೋಗುತ್ತಿದ್ದರು. ಈ ವೇಳೆ ಲೆಫ್ಟ್ ಟರ್ನ್ ತೆಗೆದುಕೊಳ್ಳುವ ಧಾವಂತದಲ್ಲಿ ಟ್ರಕ್‌ ಸ್ಕೂಟಿಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಮಹಿಳೆ ಸ್ಕೂಟರ್‌ ಸಮೇತ ಕೆಳಗೆ ಬಿದ್ದಿದ್ದಾರೆ. ಅದೃಷ್ಟವಶಾತ್ ಟ್ರಕ್ ಚಾಲಕ ತಕ್ಷಣ ಬ್ರೇಕ್ ಹಾಕಿದ ಹಿನ್ನೆಲೆಯಲ್ಲಿ ದುರಂತ ತಪ್ಪಿದೆ. ಒಂದು ತಿಂಗಳ ಹಿಂದೆಯಷ್ಟೇ ಇದೇ ಸ್ಥಳದಲ್ಲಿ ಇದೇ ರೀತಿಯ ಅಪಘಾತ ನಡೆದಿತ್ತು.

Road Accident

ಮಂಡ್ಯದಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ; ಮೂವರು ಗಂಭೀರ

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್‌ಗೆ ಕಾರೊಂದು ಗುದ್ದಿದೆ. ಮಂಡ್ಯದ ಹನಕೆರೆ ಗ್ರಾಮದ ಸಮೀಪದ ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಭೀಕರ ಅಪಘಾತ ನಡೆದಿದೆ. ಕೇರಳ ಮೂಲದ ಮೂವರಿಗೆ ಗಂಭೀರ ಗಾಯವಾಗಿದೆ. ಕೇರಳದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಹೈವೆಯಲ್ಲಿ ಉರುಳಿಬಿದ್ದು ಮತ್ತೊಂದು ಕಾರಿಗೆ ಡಿಕ್ಕಿಯಾಗಿದೆ. ಗಾಯಾಳುಗಳು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Road Accident

ಚಿತ್ರದುರ್ಗದಲ್ಲಿ ಲಾರಿ- ಬಸ್ ನಡುವೆ ಅಪಘಾತ

ಚಿತ್ರದುರ್ಗ ತಾಲೂಕಿನ ವಿಜಾಪುರ ಗ್ರಾಮದದಲ್ಲಿ ಲಾರಿ ಹಾಗೂ ಬಸ್‌ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮಂಗಳವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ಅಪಘಾತ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ದಾವಣಗೆರೆ ಕಡೆಯಿಂದ ಬೆಂಗಳೂರಿಗೆ ವೋಲ್ವೋ ಬಸ್‌ ಹೊರಟಿತ್ತು. ಈ ವೇಳೆ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದಿದೆ. ಲಾರಿಗೆ ಡಿಕ್ಕಿ ಹೊಡೆದು ವೋಲ್ವೋ ಬಸ್‌ ಜಮೀನಿಗೆ ನುಗ್ಗಿದೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:Love Failure : ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ

ಚಿಕ್ಕಮಗಳೂರಲ್ಲಿ ರಸ್ತೆ ಮಧ್ಯೆ ಹೊತ್ತಿ ಉರಿದ ಐರಾವತ ಬಸ್

ಚಲಿಸುತ್ತಿದ್ದ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾಗಿದೆ. ಚಾಲಕನ-ನಿರ್ವಾಹಕನ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಶಿವಮೊಗ್ಗದಿಂದ ಮೈಸೂರಿಗೆ ಹೋಗುತ್ತಿದ್ದ ಎ.ಸಿ ಬಸ್‌ನಲ್ಲಿ ಡ್ರೈವರ್-ಕಂಡಕ್ಟರ್ ಸೇರಿ 40 ಮಂದಿ ಪ್ರಯಣಿಕರಿದ್ದರು. ತರೀಕೆರೆ ತಾಲೂಕಿನ ನೇರಲಕೆರೆ ಕ್ರಾಸ್ ಬಳಿ ಬೆಳಗಿನ ಜಾವ ಹೊಗೆ ಕಾಣಿಸಿಕೊಂಡಿದೆ. ಕೂಡಲೇ ಇದನ್ನೂ ಗಮನಿಸಿದ ಚಾಲಕ ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಬಳಿಕ ನೋಡನೋಡುತ್ತಿದ್ದ ಐರಾವತ ಎಸಿ ಸ್ಲೀಪರ್ ಬಸ್ ಸುಟ್ಟು ಕರಕಲಾಗಿದೆ. ವಿಷಯ ತಿಳಿದು ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Karnataka Rain: ಸೋಮವಾರ ರಾತ್ರಿ ಸುರಿದ ಮಳೆಗೆ (Heavy Rain) ಜನರು ಕಂಗಲಾಗಿದ್ದಾರೆ. ಹಲವೆಡೆ ಭಾರಿ ಮಳೆಗೆ (Karnataka Weather) ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿದ್ದರೆ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದರಿಂದ ನಿವಾಸಿಗಳು ಜಾಗರಣೆ ಮಾಡುವಂತಾಯಿತು.

VISTARANEWS.COM


on

By

karnataka Rain Effected
Koo

ಬೆಂಗಗಳೂರು/ಬೆಳಗಾವಿ: ತಡರಾತ್ರಿ ಸುರಿದ ಮಳೆಯು (Karnataka Rain) ಅವಾಂತರವನ್ನೇ ಸೃಷ್ಟಿಸಿ ಮಾಡಿದೆ. ಬೆಂಗಳೂರಿನಲ್ಲಿ ರಾತ್ರಿ ಪೂರ್ತಿ ಅಬ್ಬರಿಸಿದ ಮಳೆಗೆ (Rain News) ಮರಗಳು ಧರೆಗುರುಳಿದ್ದವು. ನೃಪತುಂಗದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಎದುರಿಗೆ ಮರದ ಕೊಂಬೆ ನೆಲಕ್ಕೆ ಉರುಳಿದ ಪರಿಣಾಮ ಅರ್ಧ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇತ್ತ ಬುಕ್‌ಫೀಲ್ಡ್‌ನಲ್ಲಿ ಮರ ಬಿದ್ದು ಕಾರೊಂದು ಜಖಂಗೊಂಡಿತ್ತು. ಚಾಮರಾಜಪೇಟೆಯ ಗುಡ್ಡದಹಳ್ಳಿಯಲ್ಲಿ ಮನೆಗಳಿಗೆ ಕೆಸರುಮಯ ನೀರು ನುಗ್ಗಿದ್ದರಿಂದ ಹೊರಹಾಕಲು ಜನರು ತೊಂದರೆ ಅನುಭವಿಸಿದರು.

ಮೈಸೂರಿನಲ್ಲಿ ಕುಸಿದು ಬಿದ್ದ ಮನೆ

ಭಾರಿ ಮಳೆಗೆ ಮನೆಯೊಂದು ಕುಸಿದು ಬಿದ್ದ ಘಟನೆ ಮೈಸೂರಿನ ಹುಣಸೂರು ತಾಲೂಕಿನ ಮೂಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮವಾರ ರಾತ್ರಿ ಸುರಿದ ಬಾರಿ ಬಿರುಗಾಳಿ ಸಹಿತ ಮಳೆಗೆ ಭಾಗ್ಯಮ್ಮ ಎಂಬುವವರಿಗೆ ಸೇರಿದ ಮನೆ ಕುಸಿದಿದೆ. ಮನೆ ಕುಸಿದು ಬಿದ್ದಿದ್ದು, ವಾಸ ಮಾಡಲು ಮನೆ ಇಲ್ಲದೆ ಭಾಗ್ಯಮ್ಮ ಕಣ್ಣೀರು ಹಾಕಿದರು. ಮನೆಯಲ್ಲಿ ಸುಮಾರು 6 ತಿಂಗಳು ಸಣ್ಣ ಮಗುವಿದ್ದು ಮಧ್ಯರಾತ್ರಿ ಸುರಿದ ಭಾರಿ ಮಳೆಯಿಂದ ಮನೆ ಕುಸಿದು ಬಿದ್ದು ಕುಟುಂಬವು ಕಂಗಲಾಗಿದೆ. ಮನೆಯಲ್ಲಿದ್ದ ಸಾಮಾನುಗಳು ನಾಶವಾಗಿವೆ. ನಮಗೆ ಆದಷ್ಟು ಬೇಗ ಸರ್ಕಾರ ಪರಿಹಾರ ಮಾಡಿಕೊಡಬೇಕು ಎಂದು ಭಾಗ್ಯಮ್ಮ ಮನವಿ ಮಾಡಿದರು.

ವಿಜಯನಗರದಲ್ಲಿ ಮಳೆಗೆ ಬೆಳೆ ಹಾನಿ

ಕಳೆದ ರಾತ್ರಿ ಮಳೆ ಜೆತಗೆ ಬಿರುಗಾಳಿ ಬೀಸಿದ ಹಿನ್ನೆಲೆಯಲ್ಲಿ ಬಾಳೆ, ಭತ್ತ, ವೀಳ್ಯದೆಲೆ ತೋಟಕ್ಕೆ ಹಾನಿಯಾಗಿದೆ. ವಿಜಯನಗರದ ಹುರುಳಿಹಾಳ ಗ್ರಾಮದಲ್ಲಿ ಗಾಳಿ ಪ್ರಮಾಣ ಹೆಚ್ಚಿದರಿಂದ ವೀಳ್ಯದೆಲೆ ತೋಟಕ್ಕೆ ಹಾನಿಯಾಗಿದೆ. ಕಾನಾಹೊಸಹಳ್ಳಿ ಹೋಬಳಿಯ ಎಕ್ಕೆಗೊಂದಿ ಗ್ರಾಮದಲ್ಲಿ ರೇಷ್ಮೆ ಸಾಗಾಣೆ ಮನೆಗೆ ಹಾನಿಯಾಗಿದೆ. ಹರಪನಹಳ್ಳಿ ತಾಲೂಕಿನಲ್ಲಿ ಗುಡುಗು, ಮಿಂಚು ಸಿಡಿಲಿನ ಆರ್ಭಟ ಮಧ್ಯೆ ಸಾಧಾರಣ ಮಳೆ ವರದಿಯಾಗಿದೆ.

ಧರೆಗುರುಳಿದ ಮರಗಳು

ಚಿಕ್ಕೋಡಿ ಗಡಿ ತಾಲೂಕು ನಿಪ್ಪಾಣಿಯಲ್ಲಿ ರಣ ಗಾಳಿ-ಮಳೆಗೆ ಸಿಕ್ಕಿ ನಲುಗಿದೆ. ನಿಪ್ಪಾಣಿ ನಗರದ ವಿವಿಧೆಡೆ ಗಾಳಿ ಮಳೆಗೆ ಮರಗಳು ಧರೆಗುರುಳಿವೆ. ನಿಪ್ಪಾಣಿಯ ಭೀಮನಗರ,ವಿದ್ಯಾನಗರ,ಅಂಬೇಡ್ಕರ್ ನಗರದ ಹತ್ತಿರ ಮರಗಳು ಬಿದ್ದಿವೆ. ಮುನ್ಸಿಪಲ್ ಹೈಸ್ಕೂಲ್,ಅಬಕಾರಿ ಫೀಸ್ ಸೇರಿದಂತೆ ವಿವಿಧೆಡೆ ಹಾನಿಯಾಗಿದೆ. ಭಾರಿ ಗಾಳಿಗೆ ವಿದ್ಯುತ್ ಕಂಬಗಳು ವಾಲಿದರೆ, ಮನೆಯ ಚಾವಣೆ ಹಾರಿ ಹೋಗಿವೆ. ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ನಿಪ್ಪಾಣಿ ನಗರಸಭೆ ಪೌರಾಯುಕ್ತ ಜಗದೀಶ ಹುಲಗೆಜ್ಜಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸ್ ವಾಹನ ಸೇರಿದಂತೆ ಸುಮಾರು 10ಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿವೆ. ಹಾನಿಯಾದ ಪ್ರದೇಶಗಳಿಗೆ ಜಗದೀಶ ಹುಲಗೆಜ್ಜಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ನಿಪ್ಪಾಣಿ ನಗರ ತತ್ತರಿಸಿದೆ. ಭಾರಿ ಮಳೆಗೆ 20 ಕ್ಕೂ ಹೆಚ್ಚು ಮನೆಗಳ ಚಾವಣಿ ಹಾರಿ ಹೋಗಿದೆ. ಪತ್ರಾಸ್ ಶೇಡ್ ಹಾಗೂ ಹಂಚಿನ ಮನೆಗಳಿಗೆ ಹೆಚ್ಚಿನ ಹಾನಿಯಾಗಿದೆ. ಭಾರಿ ಮಳೆ ಗಾಳಿಗೆ 30 ಕ್ಕೂ ಹೆಚ್ಚು ಮರಗಳು ಧರೆಗೆ ಉರುಳಿವೆ. ಮರಗಳ ಜತೆಗೆ ನಗರದಲ್ಲಿ 50 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಬಿದ್ದು ಹಾನಿಯಾಗಿವೆ. ಮರಗಳು ಬಿದ್ದು 10 ಕ್ಕೂ ಹೆಚ್ಚು ವಾಹನಗಳು ಸಹ ಜಖಂಗೊಂಡಿವೆ. ಕಳೆದ ರಾತ್ರಿಯಿಂದ ನಿಪ್ಪಾಣಿ ನಗರದಲ್ಲಿ ವಿದ್ಯುತ್ ಕಟ್ ಆಗಿದೆ. ನಿಪ್ಪಾಣಿ ನಗರಸಭೆಯಿಂದ ಮರಗಳ ತೆರುವು ಕಾರ್ಯಾಚರಣೆ ನಡೆಸಲಾಗುತ್ತಿದೆ. ನಿಪ್ಪಾಣಿ ನಗರಸಭೆ ಅಧಿಕಾರಿಗಳು ಹಾನಿಯಾದ ಮನೆಗಳ ಸರ್ವೆಗೆ ಮುಂದಾಗಿದ್ದಾರೆ. ನಿಪ್ಪಾಣಿ ಪಟ್ಟಣದ ಅಂಬೇಡ್ಕರ್ ಗಲ್ಲಿಗೆ ಭೀಮ ನಗರ ಪ್ರದೇಶದಲ್ಲಿ ಅತಿ ಹೆಚ್ಚಿನ ಹಾನಿಯಾಗಿದೆ.

ಇದನ್ನೂ ಓದಿ: Salman Khan: ಸಲ್ಮಾನ್‌ ಖಾನ್‌ ಮನೆ ಎದುರು ಫೈರಿಂಗ್‌ ಕೇಸ್‌; 6ನೇ ಆರೋಪಿಯ ಬಂಧನ

ಆನೇಕಲ್‌ನಲ್ಲಿ ಮನೆಗೆ ನುಗ್ಗಿದ ಚರಂಡಿ ನೀರು

ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ಮನೆಗಳಿಗೆ ಹಾಗೂ ಬಡಾವಣೆಗಳಿಗೆ ಕೊಳಚೆ ನೀರು ನುಗ್ಗಿದೆ. ಚರಂಡಿ-ರಾಜಕಾಲುವೆ ವ್ಯವಸ್ಥೆ ಸರಿ ಇಲ್ಲದೆ ಮನೆಗಳಿಗೆ ನೀರು ನುಗ್ಗಿದೆ. ಇಡೀ ರಾತ್ರಿ ನೀರಿನಲ್ಲಿ ನಿವಾಸಿಗಳು ಕಾಲ ಕಳೆದಿದ್ದಾರೆ. ಹೆಬ್ಬಗೋಡಿ ನಗರಸಭೆ ವ್ಯಾಪ್ತಿಯಲ್ಲಿ ಪ್ರತಿ ಬಾರಿ ಮಳೆ ಬಂದಾಗಲೂ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗುತ್ತದೆ. ಮನೆಯೊಳಗೆ ನುಗ್ಗಿದ ಕೊಳಚೆ ನೀರನ್ನು ಸ್ವಚ್ಛ ಮಾಡುವುದರಲ್ಲಿ ದಿನದೂಡುತ್ತಿದ್ದಾರೆ.

ವಿಜಯನಗರದಲ್ಲಿ ವರುಣನ ಕೃಪೆಗಾಗಿ ಜಪ – ತಪ

ಜಪ – ತಪ ಮಾಡಿದ ಕೇವಲ ಎಂಟು ದಿನದಲ್ಲಿ ವರುಣನ ಆಗಮನವಾಗಿದೆ. ಕಳೆದ ಒಂದು ವಾರದಲ್ಲಿ ಎರಡು ಬಾರಿ ವಿಜಯನಗರದ ಹೊಸಪೇಟೆ ತಾಲೂಕಿನಲ್ಲಿ ಮಳೆ ಸುರಿದಿದೆ. ಭೀಕರ ಬರಗಾಲ, ಬಿಸಿಲಿನ ಧಗೆಯಿಂದ ಜನರು ಆಂಜನೇಯನ ಮೊರೆ ಹೋಗಿದ್ದರು. ಮಳೆಗಾಗಿ ನೂರಾರು ವರ್ಷ ಹಳೆಯದಾದ ಐತಿಹಾಸಿಕ ಹಿನ್ನೆಲೆವೊಳ್ಳ ಆಂಜನೇಯನಿಗೆ ಮಳೆಗಾಗಿ ನಿತ್ಯ ಪೂಜೆ, ಭಜನೆ ಮಾಡುತ್ತಿದ್ದರು. ಹೊಸಪೇಟೆ ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿರೋ ಐತಿಹಾಸಿಕ ಆಂಜನೇಯ ದೇಗುಲವನ್ನು ವಿಜಯನಗರ ಅರಸರ ಕಾಲದಿಂದಲೂ ವಿಶೇಷ ಸಲ್ಲಿಕೆ ಮಾಡುತ್ತಿದ್ದಾರೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಿಂತ ನೀರು

ಧಾರಾಕಾರ ಮಳೆಗೆ ಹಳೇ ಮೈ-ಬೆಂ ಹೆದ್ದಾರಿಯಲ್ಲಿ ಜಲಾವೃತಗೊಂಡಿತ್ತು. ಶ್ರೀರಂಗಪಟ್ಟಣದ ಅಗ್ನಿಶಾಮಕ ದಳದ ಎದುರಿನ ಮೈ- ಬೆಂ ಹೆದ್ದಾರಿಯಲ್ಲಿ ರಸ್ತೆ ಮಧ್ಯೆ ಮೂರು ಅಡಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡಿದರು. ಹೆದ್ದಾರಿಯಲ್ಲಿ ತೆರಳಲಾಗದೆ ಬೈಕ್ ಸವಾರರು ಬದಲಿ ರಸ್ತೆಯಲ್ಲಿ ಸಾಗಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka weather: ವ್ಯಾಪಕ ಮಳೆಯೊಂದಿಗೆ 60 ಕಿ.ಮೀ ವೇಗದಲ್ಲಿ ಅಪ್ಪಳಿಸಲಿದೆ ಗಾಳಿ; 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka weather Forecast: ರಾಜ್ಯದ ವಿವಿಧೆಡೆ ಮಳೆ ಅಬ್ಬರ (Heavy Rain)ಮುಂದುವರಿದಿದೆ. ಮೇ 14ರಂದು ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದ್ದು, ಹವಾಮಾನ ಇಲಾಖೆಯು 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ದಕ್ಷಿಣ ಒಳನಾಡು, ಉತ್ತರ ಒಳನಾಡು ಸೇರಿ ಮಲೆನಾಡು ಮತ್ತು ಕರಾವಳಿಯಲ್ಲಿ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು ಗಾಳಿಯೊಂದಿಗೆ (30-40 ಕಿ.ಮೀ) ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡಿನ ಕಲಬುರಗಿ, ಯಾದಗಿರಿ, ಬಾಗಲಕೋಟೆ, ವಿಜಯಪುರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದರೆ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

ಬೆಂಗಳೂರು ವ್ಯಾಪ್ತಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 ಡಿಗ್ರಿ ಸೆಲ್ಸಿಯಸ್ ಮತ್ತು 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌:

ಭಾರೀ ಮಳೆಯೊಂದಿಗೆ ಗುಡುಗು ಹಾಗೂ ಬಿರುಗಾಳಿ ಇರಲಿದ್ದು ಹೀಗಾಗಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಪ್ರಮುಖವಾಗಿ ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು, ಯಾದಗಿರಿ, ಕಲಬುರಗಿ, ಬಾಗಲಕೋಟೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Narendra Modi
ಪ್ರಮುಖ ಸುದ್ದಿ15 mins ago

Narendra Modi: ಹತ್ತು ವರ್ಷ ಪ್ರಧಾನಿಯಾಗಿರುವ ನರೇಂದ್ರ ಮೋದಿ ಆಸ್ತಿ ಎಷ್ಟಿದೆ? ಪ್ರಮಾಣಪತ್ರದಲ್ಲಿದೆ ಮಾಹಿತಿ

Viral Video
ವೈರಲ್ ನ್ಯೂಸ್24 mins ago

Viral Video: 25 ವರ್ಷಗಳ ಹಿಂದೆ ಬಿಬಿಸಿ ನ್ಯೂಸ್ ಥೀಮ್ ಟ್ಯೂನ್ ಹುಟ್ಟಿಕೊಂಡಿದ್ದು ಹೇಗೆ ಗೊತ್ತೇ?

Chaya Singh
ಕರ್ನಾಟಕ31 mins ago

Chaya Singh: ನಟಿ ಛಾಯಾ ಸಿಂಗ್ ಮನೆಯಲ್ಲಿ ಕಳ್ಳತನ; ಚಿನ್ನಾಭರಣ ಕದ್ದಿದ್ದ ಮನೆಕೆಲಸದಾಕೆ ಬಂಧನ

former MLC Arun Shahapur latest Statement
ಬೆಂಗಳೂರು32 mins ago

Bengaluru News: ಕಾಂಗ್ರೆಸ್ ಆಡಳಿತದಲ್ಲಿ ಶೈಕ್ಷಣಿಕ ದುರಾಡಳಿತ; ಅರುಣ್ ಶಹಾಪುರ ಆರೋಪ

HD Revanna Released first reaction after release will be acquitted of all charges
ರಾಜಕೀಯ46 mins ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

Income Tax office
ಪ್ರಮುಖ ಸುದ್ದಿ47 mins ago

Income Tax Office : ಆದಾಯ ತೆರಿಗೆ ಕಚೇರಿಯಲ್ಲಿ ಬೆಂಕಿ ಅವಘಡ; ಒಂದು ಸಾವು; ಇಲ್ಲಿದೆ ವಿಡಿಯೊ

Billboard Collapse
ಪ್ರಮುಖ ಸುದ್ದಿ1 hour ago

Billboard Collapse : 14 ಸಾವಿಗೆ ಕಾರಣವಾದ ಹೋರ್ಡಿಂಗ್ ಕಂಪನಿ ಮಾಲೀಕನ ಮೇಲಿದೆ ಅತ್ಯಾಚಾರ ಸೇರಿದಂತೆ 20ಕ್ಕೂ ಹೆಚ್ಚು ಕೇಸ್​ಗಳು

Stabbing Case
ಕರ್ನಾಟಕ1 hour ago

Stabbing Case: ಕುಡಿದ ಅಮಲಿನಲ್ಲಿ ಭುಜ ತಗುಲಿದ್ದಕ್ಕೆ ಕಿರಿಕ್; ವ್ಯಕ್ತಿಗೆ ಚೂರಿಯಿಂದ ಮನಸೋ ಇಚ್ಛೆ ಇರಿದ ಯುವಕರು

Ooty Tour
ಪ್ರವಾಸ1 hour ago

Ooty Tour: ಪ್ರತಿ ಸೀಸನ್‌ನಲ್ಲೂ ಭಿನ್ನ ಅನುಭವ! ನಿಮ್ಮ ಊಟಿ ಪ್ರವಾಸ ಯಾವಾಗ?

WhatsApp Update
ತಂತ್ರಜ್ಞಾನ1 hour ago

WhatsApp Update: ಅಪ್‌ಡೇಟ್ ಆಗಲಿದೆ ವಾಟ್ಸ್‌ಆಪ್ ಚಾನೆಲ್; ಹೊಸ ಆಪ್ಶನ್‌ ಏನೇನು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

HD Revanna Released first reaction after release will be acquitted of all charges
ರಾಜಕೀಯ46 mins ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20246 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ7 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು8 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ15 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ1 day ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ1 day ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ1 day ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ1 day ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

ಟ್ರೆಂಡಿಂಗ್‌