Fetus in Fetu: 'ಗರ್ಭಿಣಿ ಪುರುಷ'ನ ಹೊಟ್ಟೆಯಲ್ಲಿ ಕೈಕಾಲು, ದವಡೆ ಮೂಳೆ, ಕೂದಲು ಸಿಕ್ಕವು! - Vistara News

ಆರೋಗ್ಯ

Fetus in Fetu: ‘ಗರ್ಭಿಣಿ ಪುರುಷ’ನ ಹೊಟ್ಟೆಯಲ್ಲಿ ಕೈಕಾಲು, ದವಡೆ ಮೂಳೆ, ಕೂದಲು ಸಿಕ್ಕವು!

Fetus in Fetu ಎಂಬ ವಿಚಿತ್ರ ಪರಿಸ್ಥಿತಿಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಹೊಟ್ಟೆಯೊಳಗೆ ಆತನ್ನದೇ ಅವಳಿಯ ಕೂದಲು, ದವಡೆ ಹಾಗೂ ಕೈಕಾಲು ಮೂಳೆಗಳು ಸಿಕ್ಕಿವೆ.

VISTARANEWS.COM


on

Nagpur Man suffers from Fetus in Fetu
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನಾಗ್ಪುರ, ಮಹಾರಾಷ್ಟ್ರ: ವ್ಯಕ್ತಿಯೊಬ್ಬ 36 ವರ್ಷಗಳಿಂದ ತನ್ನ ಹೊಟ್ಟೆಯೊಳಗೇ ತನ್ನ ಅವಳಿಯನ್ನು ಇಟ್ಟುಕೊಂಡಿದ್ದ. ಆದರೆ ಆ ವಿಷಯ ಆತನಿಗೇ ಗೊತ್ತೆ ಇರಲಿಲ್ಲ! ಹೌದು, ಮಹಾರಾಷ್ಟ್ರ (Maharashtra) ನಾಗ್ಪುರದ (Nagpur) ಸಂಜಯ್ ಭಗತ್ (Sanjay Bhagat) ಎಂಬಾತನ ಉಬ್ಬಿದ ಹೊಟ್ಟೆ ನೋಡಿದ್ರೆ ಯಾರಾದ್ರೂ ಆತ ಗರ್ಭ ಧರಿಸಿದ್ದಾನೆಂದು ಹೇಳುತ್ತಿದ್ದರು. ಅಸಲಿಗೆ, ಆತನ ಹೊಟ್ಟೆಯು ಹಾಗೆ ಇತ್ತು, ತುಂಬು ಗರ್ಭಿಣಿ ಹೇಗೆ ಹೊಟ್ಟೆ ಉಬ್ಬಿರುತ್ತದೆಯೋ ಅದೇ ರೀತಿ ಆತನ ಹೊಟ್ಟೆ ಉಬ್ಬಿಕೊಂಡಿತ್ತು. ಹಾಗಾಗಿ ಆತನನ್ನು ಎಲ್ಲರೂ ‘ಗರ್ಭಿಣಿ ಗಂಡ್ಸು’ (Pregnant man) ಎಂದು ಕರೆಯುತ್ತಿದ್ದರು. ಅಂತಿಮವಾಗಿ ಆತ Fetus in Fetu(ಭ್ರೂಣದೊಳಗೇ ಭ್ರೂಣ) ಎಂಬ ವಿಚಿತ್ರ ಪರಿಸ್ಥಿತಿಯಿಂದ ಬಳಲುತ್ತಿದ್ದನ್ನು ಪತ್ತೆ ಹಚ್ಚಲಾಯಿತು(Viral News).

1963ರಲ್ಲಿ ಜನಿಸಿದ ಸಂಜಯ್ ಭಗತ್ ಬಾಲಕನಾಗಿದ್ದ ಅಂಥ ವ್ಯತ್ಯಾಸಗಳು ಇರಲಿಲ್ಲ. ಇತರ ಬಾಲಕರಂತೆಯೇ ಇದ್ದರು. 20 ವರ್ಷ ಆಗೋವರೆಗೂ ಅಂಥ ಸಮಸ್ಯೆಯೇನೂ ಆಗಲಿಲ್ಲ. ಆದರೆ, 20 ವರ್ಷಗಳಾಗುತ್ತಿದ್ದಂತೆ ತೊಂದರೆ ಶುರುವಾಯಿತು. ಅಲ್ಲಿವರೆಗೂ ಆತ ಗದ್ದೆಗಳಲ್ಲಿ ಇತರರಂತೆ ಕೆಲಸ ಮಾಡುತ್ತಿದ್ದರು. ದುಡಿದು ಕುಟುಂಬವನ್ನು ಸಾಕುತ್ತಿದ್ದರು. 20 ವರ್ಷದ ಬಳಿಕ ಹೊಟ್ಟೆ ಉಬ್ಬು ಜಾಸ್ತಿಯಾಗತೊಡಗಿತು. ಆದರೂ ಅದನ್ನು ಲೆಕ್ಕಿಸದೇ, ಅವರು ಕೆಲಸ ಮಾಡುತ್ತಿದ್ದರು. ಹೊಟ್ಟೆ ಉಬ್ಬುತ್ತಾ ಹೋದಂತೆ ಅವರಿಗೆ ಉಸಿರಾಡುವುದು ಕಷ್ಟವಾಗ ತೊಡಗಿತು. ಆಗ ನಿಜವಾದ ಸಮಸ್ಯೆಗಳು ಶುರುವಾದವು.

1999ರಲ್ಲಿ ಮುಂಬೈನ ಆಸ್ಪತ್ರೆಗೆ ಅವರು ದಾಖಲಾದರು. ಅಲ್ಲಿ ಡಾ. ಅಜಯ್ ಮೆಹ್ತಾ ಅವರಿಗೆ ಈ ಪ್ರಕರಣವನ್ನು ಒದಗಿಸಲಾಯಿತು. ಭಗತ್ ಅವರ ಹೊಟ್ಟೆಯಲ್ಲಿ ಗಡ್ಡೆ ಇರಬೇಕು. ಹಾಗಾಗಿ, ಹೊಟ್ಟೆ ಉಬ್ಬಿದೆ ಎಂದು ಭಾವಿಸಿದ ವೈದ್ಯರ ತಂಡವು ಶಸ್ತ್ರ ಚಿಕಿತ್ಸೆಯನ್ನು ಕೈಗೊಂಡರು. ಆದರೆ, ವೈದ್ಯರಿಗೆ ಗಡ್ಡೆಯ ಬದಲಿಗೆ, ಹೊಟ್ಟೆಯಲ್ಲಿ ಮಾನವನ ಅವಶೇಷಗಳು ಇರುವುದು ಗೊತ್ತಾಯಿತು. ವೈದ್ಯರಿಗೆ ಇದು ಆಶ್ಚರ್ಯವುಂಟು ಮಾಡಿತು. ಚಿಕಿತ್ಸೆ ಕೈಗೊಂಡ ವೈದ್ಯರ ಪ್ರಕಾರ, ಅವರು ಹೊಟ್ಟೆಯೊಳಗೆ ಕೈ ಹಾಕಿದಾಗ ಸಾಕಷ್ಟು ಮೂಳೆಗಳು ಇದ್ದವು.

ಭಗತ್ ಶಸ್ತ್ರ ಚಿಕಿತ್ಸೆ ನಡೆಸಿದಾಗ ಅವರ ಹೊಟ್ಟೆಯಿಂದ ಕೈ ಕಾಲುಗಳು, ಜನನಾಂಗದ ಕೆಲವು ಭಾಗಗಳು, ಕೂದಲು, ದವಡೆಗಳು ವೈದ್ಯರಿಗೆ ದೊರೆತವು. ಮೂಳೆಗಳನ್ನು ಕಂಡು ನಾವು ಗಾಬರಿಗೊಂಡೆವು. ಗೊಂದಲಕ್ಕೊಳಗಾಗಿದ್ದೇವೆ ಮತ್ತು ಆಶ್ಚರ್ಯಚಕಿತರಾಗಿದ್ದೆವು. ಹೊಟ್ಟೆಯೊಳಗೇ ನಾನು ಯಾರೊಂದಿಗೆ ಹ್ಯಾಂಡ್ ಶೇಕ್ ಮಾಡುತ್ತಿದ್ದೇನೆ ಎಂಬಂತಿತ್ತು. ಇದು ನಿಜಕ್ಕೂ ಭಯಾನಕವಾಗಿತ್ತು. ಇದರಿಂದ ನನಗೆ ಆಘಾತವೂ ಆಯಿತು ಎಂದು ವೈದ್ಯರು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: ವೈರಲ್‌ ನ್ಯೂಸ್ | ಅಧ್ಯಾಪಕರ ಮನೆಗೆ ಕನ್ನ ಹಾಕಿದ ಕಳ್ಳನ ಗುರುಭಕ್ತಿ ಹೀಗಿತ್ತು!

ವೈದ್ಯರು ಆರಂಭದಲ್ಲಿ ಭಗತ್ ಪ್ರಕರಣವು ವ್ಯಾನಿಶಿಂಗ್ ಟ್ವಿನ್ ಸಿಂಡ್ರೋಮ್ ಗೆ ಉದಾಹರಣೆಯಾಗಿದೆ ಎಂದು ಭಾವಿಸಿದ್ದರು. ಅಂದರೆ, ಗರ್ಭಾವಸ್ಥೆಯಲ್ಲಿ ಅವಳಿ ಸತ್ತು ಹೋಗಿರುವ ಪ್ರಕರಣವಾಗಿರುತ್ತದೆ. ಆದರೆ ನಂತರ ಪರೀಕ್ಷೆ ಮತ್ತು ಅಧ್ಯಯನದಲ್ಲಿ ಅದು ಭ್ರೂಣದಲ್ಲಿ ಭ್ರೂಣ (Fetus in Fetu) ಎಂದು ತಿಳಿದು ಬಂತು ಎಂದು ವೈದ್ಯರು ಹೇಳಿದ್ದಾರೆ.

ವಿಜ್ಞಾನದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Breast cancer: ಬೈಕಥಾನ್‌ ಮೂಲಕ ಗಲ್ಲಿ ಗಲ್ಲಿಯಲ್ಲೂ ಸ್ತನ ಕ್ಯಾನ್ಸರ್‌ ಜಾಗೃತಿ ಮೂಡಿಸಿದ ಬೈಕರ್ಸ್‌ಗಳು

Breast cancer : ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌ ವತಿಯಿಂದ ಬೈಕಥಾನ್‌ ಆಯೋಜನೆ ಮಾಡಲಾಗಿತ್ತು.

VISTARANEWS.COM


on

By

Breast Cancer Awareness Month celebrated through bikethon
Koo

ಬೆಂಗಳೂರು: ಸ್ತನಕ್ಯಾನ್ಸರ್‌ (Breast cancer) ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಬೆಂಗಳೂರು ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌ ವತಿಯಿಂದ ಪಿಂಕ್‌ ವುಮೆನ್ಸ್‌ ಶೀರ್ಷಿಕೆಯಡಿ ಬೈಕಥಾನ್‌ ಆಯೋಜಿಸಿತ್ತು. ಸ್ತನಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ನಡೆದ ಈ ಬೈಕಥಾನ್‌ ಕೆ.ಆರ್‌. ರಸ್ತೆಯ ಎಚ್‌ಸಿಜಿ ಕ್ಯಾನ್ಸರ್ ಕೇಂದ್ರದಿಂದ ಸೋಮವಾರ ಬೆಳಗ್ಗೆ 7 ಗಂಟೆಗೆ ಪ್ರಾರಂಭಗೊಂಡು, ಎಂ.ಜಿ. ರಸ್ತೆ, ಟ್ರಿನಿಟಿ ಸರ್ಕಲ್‌, ವಿಧಾನಸೌಧದ ಮುಂಭಾಗದಿಂದ ಹಾದು 10 ಕಿಲೋಮೀಟರ್ ದೂರದವರೆಗೆ ಸಾಗಿತು.

Breast Cancer Awareness Month celebrated through bikethon

180ಕ್ಕೂ ಹೆಚ್ಚು ಮಹಿಳಾ ಬೈಕರ್ಸ್‌ಗಳು ಈ ಬೈಕಥಾನ್‌ನಲ್ಲಿ ಪಾಲ್ಗೊಂಡು, ಸ್ತನಕ್ಯಾನ್ಸರ್‌ನ ಬಗ್ಗೆ ಹಾಗೂ ಆರಂಭಿಕ ತಪಾಸಣೆಗೆ ಆದ್ಯತೆ ನೀಡುವ ಕುರಿತು ಜಾಗೃತಿ ಮೂಡಿಸಿದರು. ಇದಷ್ಟೇ ಅಲ್ಲದೆ, ಬೈಕಥಾನ್‌ಗೂ ಮುನ್ನ, ಜುಂಬಾ ಸೆಷನ್‌, ಮೈಕಲ್‌ ಜಾಕ್ಸನ್‌ ಅವರ “ಡೇಂಜರಸ್‌” ಪ್ರೇರಿತಗೊಂಡ ಸ್ಟೆಪ್ಸ್‌ ಹಾಕುವ ಮೂಲಕ ಸ್ತನ ಕ್ಯಾನ್ಸರ್‌ ಆರಂಭಿಕ ಪತ್ತೆಯ ಬಗ್ಗೆ “ಬೀಟ್ ಇಟ್” ಶೀರ್ಷಿಕೆಯ ಫಲಕಗಳನ್ನು ಹಿಡಿದು ವಿಭಿನ್ನವಾಗಿ ಜಾಗೃತಿ ಮೂಡಿಸಿದರು.

ಎಚ್‌ಸಿಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನೀಶಾ ಕುಮಾರ್, ಮೆಡಿಕಲ್‌ ಆಂಕೊಲಾಜಿಸ್ಟ್ ಡಾ. ರೋಶನಿ ದಾಸ್‌ಗುಪ್ತ, ಸರ್ಜಿಕಲ್ ಆಂಕೊಲಾಜಿಸ್ಟ್ ಡಾ ಮಹೇಶ್ ಬಂಡೇಮೆಗಲ್ ಈ ಬೈಕಥಾನ್‌ಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಮನೀಶಾ ಕುಮಾರ್, ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಹೆಚ್ಚಾಗಿ ಸ್ತನಕ್ಯಾನ್ಸರ್‌ ಕಾಡುತ್ತಿರುವುದು ಆತಂಕಕಾರಿ ಬೆಳವಣಿಗೆ. ಆರಂಭದಲ್ಲಿಯೇ ಈ ಕ್ಯಾನ್ಸರ್‌ನನ್ನು ಪತ್ತೆ ಹಚ್ಚಿದರೆ ಸುಲಭವಾಗಿ ಚಿಕಿತ್ಸೆ ಮೂಲಕ ಗುಣಪಡಿಸಬಹುದು. ನಾವಷ್ಟೇ ಜಾಗೃತರಾದೆ ಸಾಲದು, ನಮ್ಮ ಸುತ್ತಮುತ್ತ ಹಾಗೂ ಗ್ರಾಮೀಣ ಭಾಗದ ಮಹಿಳೆಯರಿಗೂ ಕೂಡ ಈ ಬಗ್ಗೆ ಅರಿವು ಮೂಡಿಸಬೇಕು. ಆಗಷ್ಟೇ ಎಲ್ಲರಿಗೂ ಸ್ತನಕ್ಯಾನ್ಸರ್‌ನ ಬಗ್ಗೆ ಜಾಗೃತಿ ಮೂಡಲಿದೆ. ಮಹಿಳಾ ಬೈಕರ್ಸ್‌ಗಳು ವಿಶೇಷವಾಗಿ ಬೈಕ್‌ ಸವಾರಿ ಮೂಲಕ ಈ ಬಗ್ಗೆ ಜಾಗೃತಿ ಮೂಡಿಸಿದ್ದು ಪ್ರಶಂಸನೀಯ ಎಂದರು.

ಮೆಡಿಕಲ್‌ ಆಂಕೊಲಾಜಿಸ್ಟ್ ಡಾ ರೋಶನಿ ದಾಸ್‌ಗುಪ್ತ ಮಾತನಾಡಿ, ಸ್ತನಕ್ಯಾನ್ಸರ್‌ ಬಗ್ಗೆ ಜಾಗೃತಿ ಮೂಡಿಸಿದಷ್ಟೂ ಈ ಬಗ್ಗೆ ಭಯಗೊಳ್ಳುವವರ ಸಂಖ್ಯೆಯೂ ಕಡಿಮೆಯಾಗಲಿದೆ. ಜನರು ಈ ಕ್ಯಾನ್ಸರ್‌ನ ಪ್ರಾರಂಭದಲ್ಲಿಯೇ ಪತ್ತೆ ಹಚ್ಚಿ, ಅದಕ್ಕೆ ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಈ ರೋಗದಿಂದ ಮುಕ್ತಿಗೊಂಡು ಎಂದಿನಂತೆ ಜೀವನ ನಡೆಸಬಹುದು, ಹೀಗಾಗಿ ಜನರು ಈ ಬಗ್ಗೆ ಹೆಚ್ಚು ಜಾಗೃತರಾಗುವುದು ಒಳಿತು ಎಂದು ಸಲಹೆ ನೀಡಿದರು.

ಸರ್ಜಿಕಲ್ ಆಂಕೊಲಾಜಿಸ್ಟ್ ಡಾ. ಮಹೇಶ್ ಬಂಡೇಮೆಗಲ್ ಮಾತನಾಡಿ, “ಸ್ತನ ಕ್ಯಾನ್ಸರ್ ಜಾಗೃತಿ ತಿಂಗಳಂದು ಪಿಂಕ್ ಮಹಿಳಾ ಬೈಕ್‌ಥಾನ್ 2024 ನಂತಹ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸುವ ಅವಶ್ಯಕತೆ ಹೆಚ್ಚಿದೆ. ಇದರಿಂದಲಾದರೂ ಮಹಿಳೆಯರು ಎಚ್ಚೆತ್ತುಕೊಳ್ಳುತ್ತಾರೆ ಎಂದು ಹೇಳಿದರು.

Continue Reading

ಬೆಂಗಳೂರು

Aplastic anemia : ಅತಿ ವಿರಳ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆಯಿಂದ ಬಳಲುತ್ತಿದ್ದ ಆಫ್ರಿಕಾ ಮೂಲದ ಬಾಲಕನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

Aplastic anemia : ಆಫ್ರಿಕಾ ಮೂಲದ ಬಾಲಕ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆಯಿಂದ ಬಳಲುತ್ತಿದ್ದ. ಆತನಿಗೆ ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ನೀಡಿದೆ.

VISTARANEWS.COM


on

By

African boy successfully undergoes surgery for rare aplastic anemia
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಅಸ್ಥಿಮಜ್ಜೆಯು ರಕ್ತಕಣಗಳನ್ನು ಉತ್ಪಾದಿಸುವಲ್ಲಿ ವಿಫಲವಾಗಿದ್ದ ಕಾರಣ ಅತಿ ವಿರಳ ಕಾಯಿಲೆಯಾದ ಅಪ್ಲ್ಯಾಸ್ಟಿಕ್ ರಕ್ತ ಹೀನತೆಯಿಂದ ಬಳಲುತ್ತಿದ್ದ 16 ವರ್ಷದ ಬಾಲಕನಿಗೆ ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ (Aplastic anemia) ನೀಡಲಾಗಿದೆ.

ಫೋರ್ಟಿಸ್ ಆಸ್ಪತ್ರೆಯ ಮೆಡಿಕಲ್‌ ಮತ್ತು ಹೆಮಟೋ ಆಂಕೊಲಾಜಿಯ ಹಿರಿಯ ನಿರ್ದೇಶಕಿ ಡಾ. ನೀತಿ ರೈಜಾದಾ, ಹೆಮಟೋ ಆಂಕೊಲಾಜಿ ಸಮಾಲೋಚಕ ಡಾ ನಿಶಿತ್ ಓಜ್ಹಾ, ಪೀಡಿಯಾಟ್ರಿಕ್ ಹೆಮಟೋ ಆಂಕೊಲಾಜಿಯ ಸಲಹೆಗಾರರಾದ ಡಾ ತನುಶ್ರೀ ಪಾಲ್ ಅವರ ವೈದ್ಯ ತಂಡ ಈ ಬಾಲಕನಿಗೆ ಸಮಯೋಚಿತವಾಗಿ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಬಾಲಕನ ಜೀವ ಉಳಿಸಲಾಗಿದೆ.

ಈ ಕುರಿತು ಮಾತನಾಡಿದ ಡಾ. ನೀತಿ ರೈಜಾದಾ, ಆಫ್ರೀಕಾ ಮೂಲದ 16 ವರ್ಷದ ಮೈಕೆಲ್ ಎಂಬಾತನಿಗೆ ಕಳೆದ ಎರಡು ತಿಂಗಳಿನಿಂದ ತೀವ್ರವಾದ ಜ್ವರ, ಆಯಾಸ, ದೌರ್ಬಲ್ಯಗಳಿಂದ ಬಳಲುತ್ತಿದ್ದರು. ಅಷ್ಟೇ ಅಲ್ಲದೆ, ಆತನ ಬಲ ಕಿವಿಯಿಂದ ರಕ್ತಸ್ತ್ರಾವವಾಗಲು ಪ್ರಾರಂಭಗೊಂಡಿತ್ತು. ಇದರಿಂದ ಭಯಭೀತಗೊಂಡ ಅವರ ಕುಟುಂಬ ಆಫ್ರಿಕಾದಲ್ಲಿರುವ ಎಲ್ಲಾ ಆಸ್ಪತ್ರೆಗಳಿಗೆ ತೋರಿಸಿದರೂ, ಬಾಲಕನ ಆರೋಗ್ಯ ಸಮಸ್ಯೆ ಏನೆಂದು ತಿಳಿಯಲಿಲ್ಲ. ಹೀಗಾಗಿ ಅವರು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿನ ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು.

African boy successfully undergoes surgery for rare aplastic anemia
African boy successfully undergoes surgery for rare aplastic anemia

ಬಾಲಕನ ಸಂಪೂರ್ಣ ತಪಾಸಣೆ ಬಳಿಕ, ಆ ಬಾಲಕನಿಗೆ ಅತಿ ವಿರಳ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆ ಆಗಿರುವುದು ತಿಳಿದುಬಂತು. ಇದು ಅಸ್ಥಿಮಜ್ಜೆಯು ರಕ್ತಕಣಗಳನ್ನು ಉತ್ಪಾದಿಸುವಲ್ಲಿ ವಿಫಲವಾದ ಕಾರಣ ಆ ಬಾಲಕ ರಕ್ತ ಹೀನತೆಗೆ ಒಳಗಾಗಿದ್ದ. ಹೀಗಾಗಿ ಆತನಿಗೆ ಹ್ಯಾಪ್ಲೋಡೆಂಟಿಕಲ್‌ ಸ್ಟೆಮ್‌ ಸೆಲ್‌ ಕಸಿ ಮಾಡುವ ಅವಶ್ಯಕತೆ ಅನಿವಾರ್ಯವಾಗಿತ್ತು. ಆದರೆ, ಬಾಲಕನ ರಕ್ತದ ಗುಂಪಿಗೆ ಹೊಂದುವಂತೆ ಸ್ಟೆಮ್‌ಸೆಲ್‌ ಸಿಗದೇ ಸಮಸ್ಯೆ ಎದುರಾಗಿತ್ತು.

ಈ ಮಧ್ಯೆ ಬಾಲಕನ ಹಿರಿಯ ಸಹೋದರಿಯೇ ತನ್ನ ತಮ್ಮನಿಗೆ ಹ್ಯಾಪ್ಲೊಂಡೆಂಟಿಕಲ್‌ ದಾನ ಮಾಡಲು ಮುಂದಾದರು. ಆದರೆ, ಬಾಲಕನಿಗೆ ಬಲಕಿವಿ ಸೋಂಕಿನಿಂದ ಸೋರುತ್ತಿದ್ದ ಕಾರಣ, ಮೊದಲು ಕಿವಿ ಶಸ್ತ್ರಚಿಕಿತ್ಸೆ ಮುಂದಾಗಬೇಕಾಯಿತು. ಬಾಲಕನ ಬಲ ಕಾರ್ಟಿಕಲ್‌ ಮಾಸ್ಟೊಡೆಕ್ಟಮಿ (ಕಿವಿ ಸುತ್ತ ಇರುವ ಸೋಂಕಿನ ಅಂಗಾಂಶ) ತೆಗೆದು ಹಾಕಿ ಶಸ್ತ್ರಚಿಕಿತ್ಸೆ ಮಾಡಲಾಯಿತು. ಇದಾದ ಬಳಿಕ ಬಾಲಕನಿಗೆ ಹ್ಯಾಪ್ಲೋಡೆಂಟಿಕಲ್‌ ಸ್ಟೆಮ್‌ ಸೆಲ್‌ ಕಸಿಯನ್ನು ಯಶಸ್ವಿಯಾಗಿ ನಡೆಸಲಾಯಿತು. ಇದೀಗ ಬಾಲಕ ಗುಣಮುಖರಾಗುತ್ತಿದ್ದಾನೆ ಎಂದು ವಿವರಿಸಿದರು.

Continue Reading

ಬೆಂಗಳೂರು

Breast cancer : ಸ್ತನದಲ್ಲಿ ಗಂಟಿನ ರೀತಿ ಕಾಣಿಸಿಕೊಂಡರೆ ನಿರ್ಲಕ್ಷ್ಯ ಮಾಡಲೇಬೇಡಿ!

ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಫೋರ್ಟಿಸ್‌ ಆಸ್ಪತ್ರೆ ವತಿಯಿಂದ ಪಿಂಕ್‌ ಸ್ಟ್ರಾಂಗ್‌ ವಾಕಥಾನ್‌ ನಡೆಸಲಾಯಿತು. ಮಹಿಳೆಯರು ಸ್ತನಕ್ಯಾನ್ಸರ್‌ನ ಬಗ್ಗೆ ಜಾಗೃತಿ ಹೊಂದುವುದು ಅವಶ್ಯಕ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಅಭಿಪ್ರಾಯಪಟ್ಟಿದ್ದಾರೆ.

VISTARANEWS.COM


on

By

Pink Strong walkathon to raise awareness among people about breast cancer
Koo

ಬೆಂಗಳೂರು: ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆ ವತಿಯಿಂದ ಸ್ತನ ಕ್ಯಾನ್ಸರ್‌ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು “ಪಿಂಕ್‌ ಸ್ಟ್ರಾಂಗ್‌” ವಾಕಥಾನ್‌ನನ್ನು ಆಯೋಜಿಸಿತ್ತು. ಬನ್ನೇರುಘಟ್ಟ ರಸ್ತೆ ಫೋರ್ಟಿಸ್‌ ಆಸ್ಪತ್ರೆಯಿಂದ ಪ್ರಾರಂಭಗೊಂಡ ವಾಕಥಾನ್‌ ಗೋಪಾಲನ್‌ ಮಾಲ್‌ವರೆಗೆ ಮುಕ್ತಾಯಗೊಂಡಿತು. ಸುಮಾರು 5 ಕಿ.ಮೀ ದೂರದ ಈ ವಾಕಥಾನ್‌ನಲ್ಲಿ ಸ್ತನಕ್ಯಾನ್ಸರ್‌ನಿಂದ ಗುಣಮುಖರಾದ ರೋಗಿಗಳು ಹಾಗೂ ಅವರ ಕುಟುಂಬಸ್ಥರು, ಸಾರ್ವಜನರಿಕರು ಫೋರ್ಟಿಸ್‌ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಸೇರಿದಂತೆ ಒಟ್ಟು 450 ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು.

Pink Strong walkathon to raise awareness among people about breast cancer
Pink Strong walkathon to raise awareness among people about breast cancer

ವಾಕಥಾನ್‌ನಲ್ಲಿ ಭಾಗವಹಿಸಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌, ಇತ್ತೀಚೆಗೆ ಸಾಕಷ್ಟು ಮಹಿಳೆಯರನ್ನು ಬಾಧಿಸುತ್ತಿರುವ ಕಾಯಿಲೆಗಳ ಪೈಕಿ ಸ್ತನಕ್ಯಾನ್ಸರ್‌ ಕೂಡ ಒಂದು. ಹೆಣ್ಣು ಮಕ್ಕಳು, ಮಹಿಳೆಯರು ಸ್ತನಕ್ಯಾನ್ಸರ್‌ ರೋಗ ಲಕ್ಷಣದ ಬಗ್ಗೆ ಮೊದಲೇ ತಿಳಿದಿದ್ದಾಗ ಮಾತ್ರ ಇದರ ನಿರ್ಮೂಲನೆ ಸಾಧ್ಯ. ಆದರೆ ಸಾಕಷ್ಟು ಮಹಿಳೆಯರಿಗೆ ಇದರ ಬಗ್ಗೆ ಜಾಗೃತಿಯ ಕೊರತೆ ಇದೆ. ಮೊದಲು ಸ್ತನ ಕ್ಯಾನ್ಸರ್‌ ರೋಗದ ಬಗ್ಗೆ ಜಾಗೃತಿ ಹೊಂದಿರಬೇಕು, ಫೋರ್ಟಿಸ್‌ ಆಸ್ಪತ್ರೆಯು ಸ್ತನ ಕ್ಯಾನ್ಸರ್‌ ಮಾಸದ ಭಾಗವಾಗಿ ಈ ವಾಕಥಾನ್‌ ನಡೆಸುವ ಮೂಲಕ ಮಹಿಳೆಯರಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು.

Pink Strong walkathon to raise awareness among people about breast cancer
Pink Strong walkathon to raise awareness among people about breast cancer

ಫೋರ್ಟಿಸ್ ಆಸ್ಪತ್ರೆಯ ಸರ್ಜಿಕಲ್ ಆಂಕೊಲಾಜಿಯ ಹಿರಿಯ ಸಲಹೆಗಾರರಾದ ಡಾ, ಮೋನಿಕಾ ಪನ್ಸಾರಿ ಮಾತನಾಡಿ, ಸ್ತನಕ್ಯಾನ್ಸರ್‌ ಹೆಚ್ಚಾಗಿ ಕಡಿಮೆ ವಯಸ್ಸಿನ ಮಹಿಳೆಯರಲ್ಲೇ ಕಾಣಿಸುತ್ತಿದೆ, ಅಧ್ಯಯನಗಳ ಪ್ರಕಾರ ಸುಮಾರು ಶೇ.48 ರಷ್ಟು ರೋಗಿಗಳಲ್ಲಿ 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರೇ ಇರುವುದು ಆಘಾತಕಾರಿ. ಹೀಗಾಗಿ ಹೆಣ್ಣುಮಕ್ಕಳಿಂದಲೇ ಸ್ತನ ಕ್ಯಾನ್ಸರ್‌ನ ಬಗ್ಗೆ ಜಾಗೃತಿ ಮೂಡಿಸುತ್ತಾ ಹೋದರೆ, ಭವಿಷ್ಯದಲ್ಲಿ ಆಗುವ ಅಪಾಯವನ್ನು ತಡೆಗಟ್ಟಬಹುದು. ಸ್ತನ ಕ್ಯಾನ್ಸರ್‌ ಇರುವ ಬಗ್ಗೆ ಮಹಿಳೆಯರೇ ಸ್ವಯಂ ಪರೀಕ್ಷೆ ಮಾಡಿಕೊಳ್ಳಬಹುದು. ಒಂದು ವೇಳೆ ತಮ್ಮ ಸ್ತನದಲ್ಲಿ ಗಂಟಿನ ರೀತಿ ಕಾಣಿಸಿಕೊಂಡರೆ ವೈದ್ಯರನ್ನು ಭೇಟಿಯಾಗಿ ತಪಾಸಣೆಗೆ ಒಳಗಾಗುವುದು ಒಳ್ಳೆಯದು. ಇನ್ನು, ಮಹಿಳೆಯರು ಆರೋಗ್ಯಕರ ಜೀವನ ಶೈಲಿ ರೂಡಿಸಿಕೊಳ್ಳುವುದರಿಂದ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಸಲಹೆ ನೀಡಿದರು.

Continue Reading

ರಾಜಕೀಯ

Mallikarjun Kharge: ಭಾಷಣ ಮಾಡುತ್ತಲೇ ವೇದಿಕೆ ಮೇಲೆ ಅಸ್ವಸ್ಥಗೊಂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ

Mallikarjun Kharge: ಚುನಾವಣಾ ಭಾಷಣ ಮಾಡುತ್ತಲೇ ವೇದಿಕೆ ಮೇಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅಸ್ವಸ್ಥಗೊಂಡಿದ್ದಾರೆ.

VISTARANEWS.COM


on

By

Mallikarjun Kharge falls ill on stage while delivering his speech
Koo

ಎಐಸಿಸಿ ಅಧ್ಯಕ್ಷ‌ ಮಲ್ಲಿಕಾರ್ಜುನ್‌ ಖರ್ಗೆ (Mallikarjun Kharge) ವೇದಿಕೆ ಮೇಲೆಯೇ ತೀವ್ರ ಅಸ್ವಸ್ಥಗೊಂಡಿದ್ದಾರೆ. ಜಮ್ಮು ಕಾಶ್ಮೀರದ ಕಥುವಾನಲ್ಲಿ ಚುನಾವಣೆ ಪ್ರಚಾರದ ಭಾಗವಾಗಿ ಭಾಷಣ ಮಾಡುತ್ತಿದ್ದ ವೇಳೆ 83 ವರ್ಷದ ಮಲ್ಲಿಕಾರ್ಜುನ್‌ ಖರ್ಗೆ ಅಸ್ವಸ್ಥಗೊಂಡಿದ್ದರು. ಭಾಷಣ ಮಾಡಲಾಗದೆ ಕುಸಿಯುತ್ತಿರುವುದನ್ನು ಗಮನಿಸಿದ ಕಾಂಗ್ರೆಸ್‌ ನಾಯಕರು ಖರ್ಗೆ ನೆರವಿಗೆ ಧಾವಿಸಿದ್ರು. ನೀರು ಕುಡಿದು ಸುಧಾರಿಸಿಕೊಂಡ ಮಲ್ಲಿಕಾರ್ಜುನ್‌ ಖರ್ಗೆ ತಮ್ಮ ಭಾಷಣವನ್ನು ಮುಂದುವರಿಸಿದರು. ವಿಶ್ರಾಂತಿ ಇಲ್ಲದೇ ನಿರಂತರವಾಗಿ ಪಕ್ಷದ ಕೆಲಸದಲ್ಲಿ ತೊಡಗಿಕೊಂಡಿದ್ದರಿಂದ ಆಯಾಸಗೊಂಡಿದ್ದರು ಎನ್ನಲಾಗಿದೆ. ಚುನಾವಣೆ ನಿಮಿತ್ತ ರ‍್ಯಾಲಿಗಳಲ್ಲಿ ಭಾಗವಹಿಸಿದ್ದರು. ಹೀಗಾಗಿ ಅಸ್ವಸ್ಥಗೊಂಡಿದ್ದರು.

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳಿಂದ ಕೊನೆಯ ಹಂತದ ಚುನಾವಣೆಯ ಕಸರತ್ತು ನಡೆದಿದೆ. ಅಕ್ಟೋಬರ್‌ 1ರಂದು ಮೂರನೇ ಹಂತದ ಮತದಾನವು ನಡೆಯಲಿದೆ. ಈ ಕೊನೆ ಹಂತದ ಚುನಾವಣೆಯಲ್ಲಿ 40 ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ಭಾರಿ ಪೈಪೋಟಿ ಇದ್ದು, ಮೂರನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಭಾನುವಾರ ತೆರೆಬಿದ್ದಿದೆ. ನಾಳೆಯಿಂದ ಪಕ್ಷಗಳು ಮನೆ ಮನೆ ಪ್ರಚಾರ ನಡೆಸಲಿವೆ. ಮೊದಲೆರಡು ಹಂತದ ಚುನವಾಣೆಗಳು ಶಾಂತಿಯುತವಾಗಿ ನಡೆದಿದೆ. ಹೀಗಾಗಿ ಕೊನೆಯ ಹಂತದ ಚುನಾವಣೆ ಕೂಡ ಶಾಂತಿಯುತವಾಗಿ ನಡೆಸಲು ಪೊಲೀಸರು, ಚುನಾವಣಾ ಆಯೋಗದಿಂದ ಬಿಗಿ ಬಂದೋಬಸ್ತ್‌ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

Continue Reading
Advertisement
Dina Bhavishya
ಭವಿಷ್ಯ1 ದಿನ ago

Dina Bhavishya : ಈ ದಿನ ಹೂಡಿಕೆ ವ್ಯವಹಾರದಿಂದ ದೂರವಿರಿ

Dina bhavishya
ಭವಿಷ್ಯ2 ದಿನಗಳು ago

Dina Bhavishya: ಈ ರಾಶಿಯವರಿಗೆ ಉತ್ಸಾಹದ ವಾತಾವರಣ; ಆಪ್ತರೊಂದಿಗೆ ಪ್ರಯಾಣ ಸಾಧ್ಯತೆ

namma Metro
ಬೆಂಗಳೂರು3 ದಿನಗಳು ago

Namma Metro : ನಮ್ಮ ಮೆಟ್ರೋ ಪ್ರಯಾಣಿಕರಿಗಾಗಿ ಝೀರೋ-ಕೆವೈಸಿ ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ ಲಭ್ಯ

Murder Case
ಬೆಂಗಳೂರು ಗ್ರಾಮಾಂತರ3 ದಿನಗಳು ago

Murder Case: ಆನೇಕಲ್‌ನಲ್ಲಿ ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ

Dina bhavishya
ಭವಿಷ್ಯ3 ದಿನಗಳು ago

Dina Bhavishya: ವೈವಾಹಿಕ ಜೀವನದಲ್ಲಿ ವಿರಸ ಉಂಟಾಗುವ ಸಾಧ್ಯತೆ; ಮಾತಿನಲ್ಲಿ ಹಿಡಿತವಿರಲಿ

Breast Cancer Awareness Month celebrated through bikethon
ಬೆಂಗಳೂರು4 ದಿನಗಳು ago

Breast cancer: ಬೈಕಥಾನ್‌ ಮೂಲಕ ಗಲ್ಲಿ ಗಲ್ಲಿಯಲ್ಲೂ ಸ್ತನ ಕ್ಯಾನ್ಸರ್‌ ಜಾಗೃತಿ ಮೂಡಿಸಿದ ಬೈಕರ್ಸ್‌ಗಳು

Karnataka Rain
ಮಳೆ4 ದಿನಗಳು ago

Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್‌!

Karnataka Rain
ಮಳೆ4 ದಿನಗಳು ago

Karnataka Rain :ಸತತ ಮಳೆಗೆ ಬೆಂಗಳೂರು ಥಂಡಾ; ಶಾಲೆಗಳಿಗೆ ಇಂದು ರಜೆ ಘೋಷಣೆ

Dina Bhavishya
ಭವಿಷ್ಯ4 ದಿನಗಳು ago

Dina Bhavishya : ಹೂಡಿಕೆ ವ್ಯವಹಾರಗಳನ್ನು ಈ ದಿನ ಮಾಡುವುದು ಬೇಡವೇ ಬೇಡ

Karnataka Rain
ಮಳೆ5 ದಿನಗಳು ago

Karnataka Rain: ತೊಯ್ದು ತೊಪ್ಪೆಯಾದ ಚಿಕ್ಕಮಗಳೂರು, ಶಿವಮೊಗ್ಗ; ನಾಳೆಗೂ ಭಾರಿ ಮಳೆ ಎಚ್ಚರಿಕೆ

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ3 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌