Gold Rate Today: 59 ಸಾವಿರ ಗಡಿ ದಾಟಿದ ಚಿನ್ನ; ಬೆಳ್ಳಿ ಕೆಜಿಗೆ 400 ರೂ.ಇಳಿಕೆ - Vistara News

ವಾಣಿಜ್ಯ

Gold Rate Today: 59 ಸಾವಿರ ಗಡಿ ದಾಟಿದ ಚಿನ್ನ; ಬೆಳ್ಳಿ ಕೆಜಿಗೆ 400 ರೂ.ಇಳಿಕೆ

Silver Rate Today: ಬೆಂಗಳೂರಲ್ಲಿ ಬೆಳ್ಳಿ ಬೆಲೆ ಇಳಿಕೆಯಾಗಿದೆ. 1 ಗ್ರಾಂ.ಗೆ 70.25ರೂ., 8 ಗ್ರಾಂ.ಗೆ 562 ರೂ., 10 ಗ್ರಾಂ.ಗೆ 702.50 ರೂ., 100 ಗ್ರಾಂ.ಗೆ 7025ರೂಪಾಯಿ ಇದೆ.

VISTARANEWS.COM


on

Gold
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಹು ಸರಕು ವಿನಿಮಯ ಕೇಂದ್ರ (MCX)ದಲ್ಲಿ ಚಿನ್ನದ ದರಲ್ಲಿ ಇಂದು (Gold Rate Today) ಯಾವುದೇ ಬದಲಾವಣೆಯೂ ಆಗಿಲ್ಲ. ಜೂ.23ರಂದು ಕ್ಲೋಸಿಂಗ್​ ವ್ಯಾಪಾರದ ಹೊತ್ತಿಗೆ 24 ಕ್ಯಾರೆಟ್​​ನ, 10 ಗ್ರಾಂ ಚಿನ್ನದ ಬೆಲೆ (Gold Rate)58,300 ರೂಪಾಯಿ ಇತ್ತು. ಇಂದು ಕೂಡ ಅದೇ ಬೆಲೆಯನ್ನು ತೋರಿಸುತ್ತಿದೆ. ಅದೇ ಗುಡ್​ರಿಟರ್ನ್ಸ್​​ ಪ್ರಕಾರ ಚಿನ್ನದ ಬೆಲೆ ಇಂದು ಏರಿಕೆಯಾಗಿದೆ. 24 ಕ್ಯಾರೆಟ್​ನ 10 ಗ್ರಾಂ ಬಂಗಾರದ ದರ 160 ರೂ. ಹೆಚ್ಚಿದೆ. ಜೂ.23ರಂದು 59,020 ರೂ. ಇತ್ತು. ಅದು ಇಂದು 59,180 ರೂ.ಗೆ ಏರಿಕೆಯಾಗಿದೆ. ಹಾಗೇ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ ಇಂದು 150 ರೂ. ಹೆಚ್ಚಿದೆ. ನಿನ್ನೆ 54,100ರೂ.ಇತ್ತು. ಅದಿಂದು 54, 250 ರೂ.ಗೆ ಏರಿಕೆಯಾಗಿದೆ. ಇನ್ನೊಂದೆಡೆ ಬೆಳ್ಳಿ ಬೆಲೆ (Silver Rate Today)ಕೆಜಿಗೆ 400 ರೂ.ಕಡಿಮೆಯಾಗಿದೆ. ನಿನ್ನೆ 71, 100ರೂ.ಇದ್ದಿದ್ದು, ಇಂದು 71,500 ರೂ.ಆಗಿದೆ.

ಬೆಂಗಳೂರಿನಲ್ಲೂ ಕೂಡ 24 ಕ್ಯಾರೆಟ್​ ಚಿನ್ನದ ಬೆಲೆ 59 ಸಾವಿರದ ಗಡಿ ದಾಟಿದೆ. ಇಲ್ಲಿ 24 ಕ್ಯಾರೆಟ್​ನ 1 ಗ್ರಾಂ. ಚಿನ್ನಕ್ಕೆ 5,918 ರೂ.ಇದೆ. 8 ಗ್ರಾಂ.ಗೆ 47,344 ರೂಪಾಯಿ, 10 ಗ್ರಾಂ.ಗೆ 59,180 ರೂ., 100 ಗ್ರಾಂ.ಗೆ 5,91,800 ರೂ.ಆಗಿದೆ. ಹಾಗೇ, 22 ಕ್ಯಾರೆಟ್​ನ 1 ಗ್ರಾಂ ಚಿನ್ನದ ದರ 5,425 ರೂ., 8 ಗ್ರಾಂ.ಗೆ 43,400 ರೂ., 10 ಗ್ರಾಂ.ಗೆ 54,250ರೂ., 100 ಗ್ರಾಂ.ಗೆ 5,42, 500 ರೂಪಾಯಿ ಆಗಿದೆ. ಹಾಗೇ, ಬೆಂಗಳೂರಲ್ಲಿ ಬೆಳ್ಳಿ ಬೆಲೆ ಇಳಿಕೆಯಾಗಿದೆ. 1 ಗ್ರಾಂ.ಗೆ 70.25ರೂ., 8 ಗ್ರಾಂ.ಗೆ 562 ರೂ., 10 ಗ್ರಾಂ.ಗೆ 702.50 ರೂ., 100 ಗ್ರಾಂ.ಗೆ 7025ರೂ., 1ಕೆಜಿಗೆ 70,250 ರೂಪಾಯಿ ಆಗಿದೆ.

ಇದನ್ನೂ ಓದಿ: Gold Rate Today: ಚಿನ್ನ ಕೊಳ್ಳೋರಿಗೆ ಖುಷಿ, ಬೆಳ್ಳಿ ದುಬಾರಿ; ಬೆಂಗಳೂರಲ್ಲಿ ಎಷ್ಟಿದೆ ದರ?

ಭಾರತದಲ್ಲಿ ಚಿನ್ನ ಹೂಡಿಕೆ, ಸಂಪ್ರದಾಯದ ದೃಷ್ಟಿಯಿಂದ ಅತ್ಯಂತ ಮಹತ್ವ ಪಡೆದಿದೆ. ಇಲ್ಲಿ ಮದುವೆ, ಗೃಹಪ್ರವೇಶದಿಂದ ಹಿಡಿದು ಯಾವುದೇ ಶುಭ ಸಮಾರಂಭದಲ್ಲಿ ಬಂಗಾರಕ್ಕೆ ಹೆಚ್ಚಿನ ಪ್ರಾಶಸ್ತ್ಯ ಇದ್ದೇ ಇದೆ. ಬೇಡಿಕೆ ಮತ್ತು ಪೂರೈಕೆ, ಜಾಗತಿಕ ಆರ್ಥಿಕ ಸ್ಥಿತಿಗತಿ ಮತ್ತಿತರ ಅಂಶಗಳ ಆಧಾರದ ಮೇಲೆ ಬಂಗಾರದ ಬೆಲೆಯಲ್ಲಿ ಏರಿಳಿತವಾಗುತ್ತದೆ.

ಸಾಮಾನ್ಯವಾಗಿ 22 ಕ್ಯಾರೆಟ್​ ಚಿನ್ನಕ್ಕೂ, 24 ಕ್ಯಾರೆಟ್​ ಚಿನ್ನಕ್ಕೂ ದರದಲ್ಲಿ ವ್ಯತ್ಯಾಸ ಇರುತ್ತದೆ. 22 ಕ್ಯಾರೆಟ್​ ಚಿನ್ನಕ್ಕೆ ಸ್ವಲ್ಪ ಕಡಿಮೆ ಬೆಲೆ ಇದ್ದರೆ, 24 ಕ್ಯಾರೆಟ್​ ಬಂಗಾರಕ್ಕೆ ಬೆಲೆ ಹೆಚ್ಚಿರುತ್ತದೆ. ಆದರೆ 22 ಕ್ಯಾರೆಟ್​ಗೂ, 24 ಕ್ಯಾರೆಟ್​ಗೂ ನಡುವಿನ ವ್ಯತ್ಯಾಸದ ಅರಿವು ಅನೇಕ ಗ್ರಾಹಕರಿಗೆ ಇರುವುದಿಲ್ಲ. ಇದು ಮತ್ತೇನಲ್ಲ, 22 ಕ್ಯಾರೆಟ್​ ಎಂದರೆ ಅದರಲ್ಲಿ ಶೇ.91ರಷ್ಟು ಶುದ್ಧ ಚಿನ್ನ ಇದ್ದರೆ, 24 ಕ್ಯಾರೆಟ್​ನಲ್ಲಿ ಶೇ.99.9ರಷ್ಟು ಶುದ್ಧ ಚಿನ್ನ ಇರುತ್ತದೆ. 22 ಕ್ಯಾರೆಟ್​ ಚಿನ್ನದ ಆಭರಣಗಳಲ್ಲಿ ಇನ್ನುಳಿದ ಶೇ.9ರಷ್ಟು ಭಾಗ ತಾಮ್ರ, ಬೆಳ್ಳಿ, ಸತುವಿನ ಅಂಶ ಇರುತ್ತದೆ. 24 ಕ್ಯಾರೆಟ್​​ನ ಚಿನ್ನವನ್ನು ಅಪರಂಜಿ ಎಂದೂ ಕರೆಯಲಾಗುತ್ತದೆ, ಇದನ್ನು ಆಭರಣಗಳಲ್ಲಿ ಬಳಕೆ ಮಾಡುವುದಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮನಿ-ಗೈಡ್

Money Guide: ಮೇ 31ರೊಳಗೆ ಪ್ಯಾನ್‌-ಆಧಾರ್‌ ಲಿಂಕ್‌ ಆಗದಿದ್ದರೆ ಟಿಡಿಎಸ್ ದುಪ್ಪಟ್ಟು ಕಡಿತ; ಹೀಗೆ ಲಿಂಕ್‌ ಮಾಡಿ

Money Guide: ನಿಮ್ಮ ಪ್ಯಾನ್‌ ನಂಬರ್‌ ಇನ್ನೂ ಆಧಾರ್‌ನೊಂದಿಗೆ ಲಿಂಕ್‌ ಆಗಿಲ್ಲವೆ? ಹಾಗಾದರೆ ಮೇ 31ರೊಳಗೆ ಮಾಡಲೇಬೇಕು. ಯಾಕೆಂದರೆ ಮೇ 31ರೊಳಗೆ ಪ್ಯಾನ್‌ ನಂಬರ್‌ ಆಧಾರ್‌ನೊಂದಿಗೆ ಲಿಂಕ್‌ ಆಗದಿದ್ದರೆ ಟಿಡಿಎಸ್ ಅನ್ನು ದುಪ್ಪಟ್ಟು ಪ್ರಮಾಣದಲ್ಲಿ ಕಡಿತಗೊಳಿಸಲಾಗುತ್ತದೆ ಎಂದು ಆದಾಯ ತೆರಿಗೆ ತಿಳಿಸಿದೆ. ಹಾಗಾದರೆ ಆನ್‌ಲೈನ್‌, ಆಫ್‌ಲೈನ್‌ನಲ್ಲಿ ಆಧಾರ್‌ ಮತ್ತು ಪ್ಯಾನ್‌ ಲಿಂಕ್‌ ಮಾಡುವುದು ಹೇಗೆ ? ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Money Guide
Koo

ಬೆಂಗಳೂರು: ನಿಮ್ಮ ಪ್ಯಾನ್‌ ನಂಬರ್‌ (Permanent Account Number) ಅನ್ನು ಆಧಾರ್‌ (Aadhaar)ನೊಂದಿಗೆ ಇನ್ನೂ ಲಿಂಕ್‌ ಮಾಡಿಲ್ಲವೆ? ಹಾಗಾದರೆ ಈ ಸುದ್ದಿಯನ್ನು ನೀವು ಓದಲೇಬೇಕು. ಯಾಕೆಂದರೆ ಮೇ 31ರೊಳಗೆ ಪ್ಯಾನ್‌ ನಂಬರ್‌ ಆಧಾರ್‌ನೊಂದಿಗೆ ಲಿಂಕ್‌ ಆಗದಿದ್ದರೆ ಟಿಡಿಎಸ್ ಅನ್ನು ದುಪ್ಪಟ್ಟು ಪ್ರಮಾಣದಲ್ಲಿ ಕಡಿತಗೊಳಿಸಲಾಗುತ್ತದೆ ಎಂದು ಆದಾಯ ತೆರಿಗೆ (Income tax) ತಿಳಿಸಿದೆ. ಹಾಗಾದರೆ ಆನ್‌ಲೈನ್‌, ಆಫ್‌ಲೈನ್‌ನಲ್ಲಿ ಆಧಾರ್‌ ಮತ್ತು ಪ್ಯಾನ್‌ ಲಿಂಕ್‌ ಮಾಡುವುದು ಹೇಗೆ ? ನಿಮ್ಮ ಗೊಂದಲಕ್ಕೆ ಇಂದಿನ ಮನಿಗೈಡ್‌ (Money Guide)ನಲ್ಲಿದೆ ಉತ್ತರ.

ಹೀಗೆ ಲಿಂಕ್‌ ಮಾಡಿ

ಪ್ಯಾನ್‌ ಮತ್ತು ಆಧಾರ್‌ ಅನ್ನು ಹಲವು ವಿಧಗಳ ಮೂಲಕ ಲಿಂಕ್‌ ಮಾಡಬಹುದು. ಮೊದಲೇ ಹೇಳಿದಂತೆ ಇದಕ್ಕಾಗಿ ಆನ್‌ಲೈನ್‌ ಮತ್ತು ಆಫ್‌ಲೈನ್‌ ಮಾರ್ಗಗಳನ್ನು ಬಳಸಬಹುದು.

ಇನ್‌ಕಂ ಟ್ಯಾಕ್ಸ್‌ ಡಿಪಾರ್ಟ್‌ಮೆಂಟ್‌ ಪೋರ್ಟಲ್‌ ಮೂಲಕ

  • ಅದಾಯ ತೆರಿಗೆ ಇಲಾಖೆಯ ವೆಬ್‌ಸೈಟ್‌ incometaxindiaefiling.gov.inಗೆ ಭೇಟಿ ನೀಡಿ.
  • ಈಗ ತೆರೆದುಕೊಳ್ಳುವ ಪುಟದ ಎಡಭಾಗದಲ್ಲಿ ಕಾಣಿಸುವ ‘Quick Links’ ವಿಭಾಗದ ‘Link Aadhaar’ ಆಯ್ಕೆ ಮೇಲೆ ಕ್ಲಿಕ್‌ ಮಾಡಿ.
  • ಈಗ ಹೊಸ ಪುಟ ತೆರೆದುಕೊಳ್ಳಲಿದ್ದು, ಅಲ್ಲಿ ಪ್ಯಾನ್‌, ಆಧಾರ್‌ ನಂಬರ್‌ ನಮೂದಿಸಿ. ಜತೆಗೆ ಇತರ ಅಗತ್ಯ ಮಾಹಿತಿಯನ್ನು ನೀಡಿ.

ಎಸ್‌ಎಂಎಸ್‌ ಮೂಲಕ

  • UIDPAN 10-ಅಂಕಿಗಳ ಪ್ಯಾನ್‌ ಕಾರ್ಡ್‌ ನಂಬರ್‌, 12-ಅಂಕಿಗಳ ಆಧಾರ್‌ ಕಾರ್ಡ್‌ ನಂಬರ್‌ ನಮೂದಿಸಿ ಒಂದು ಸ್ಪೇಸ್‌ ಕೊಟ್ಟು 567678 ಅಥವಾ 56161ಗೆ ಎಸ್‌ಎಂಎಸ್‌ ಕಳುಹಿಸಿ.
  • ಬಳಿಕ ಪ್ಯಾನ್-ಆಧಾರ್ ಲಿಂಕ್ ಸ್ಥಿತಿಯನ್ನು ಎಸ್ಎಂಎಸ್ ನಿಮಗೆ ತಿಳಿಸಲಾಗುತ್ತದೆ. ಗಮನಿಸಿ ಜನ್ಮ ದಿನಾಂಕವು ಎರಡೂ ದಾಖಲೆಗಳಲ್ಲಿ ಹೊಂದಿಕೆಯಾದರೆ ಮಾತ್ರ ಆಧಾರ್ ಮತ್ತು ಪ್ಯಾನ್ ಅನ್ನು ಲಿಂಕ್ ಮಾಡಲಾಗುತ್ತದೆ.

ಆಧಾರ್-ಪ್ಯಾನ್‌ ಲಿಂಕ್‌ ಆಗಿದ್ಯಾ ಎನ್ನುವುದನ್ನು ಪರಿಶೀಲಿಸುವ ವಿಧಾನ

  • ಅದಾಯ ತೆರಿಗೆ ಇಲಾಖೆಯ ವೆಬ್‌ಸೈಟ್‌ incometaxindiaefiling.gov.inಗೆ ಭೇಟಿ ನೀಡಿ.
  • ಈಗ ತೆರೆದುಕೊಳ್ಳುವ ಪುಟದ ಎಡಭಾಗದಲ್ಲಿ ಕಾಣಿಸುವ ‘Quick Links’ ವಿಭಾಗದ ‘Link Aadhaar Status’ ಆಪ್ಶನ್‌ ಮೇಲೆ ಕ್ಲಿಕ್‌ ಮಾಡಿ.
  • ಈಗ ಹೊಸ ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ಪ್ಯಾನ್‌ ಮತ್ತು ಆಧಾರ್‌ ನಂಬರ್‌ ನಮೂದಿಸಿ.
  • ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿದ ಬಳಿಕ ‘View Link Aadhaar Status’ ಆಪ್ಶನ್‌ ಸೆಲೆಕ್ಟ್‌ ಮಾಡಿ.
  • ಆಗ ಒಂದು ವೇಳೆ ಲಿಂಕ್‌ ಆಗಿದ್ದರೆ ನಿಮ್ಮ ಪ್ಯಾನ್‌ (ಪ್ಯಾನ್‌ ನಂಬರ್‌) ಆಧಾರ್‌ ನಂಬರ್‌ (ಆಧಾರ್‌ ನಂಬರ್‌ನ ಅಂಕಿ)ನೊಂದಿಗೆ ಲಿಂಕ್‌ ಆಗಿದೆ ಎನ್ನುವ ಸಂದೇಶ ಮೂಡುತ್ತದೆ.

ಕಡ್ಡಾಯ ಯಾಕೆ?

ನಕಲಿ ಪ್ಯಾನ್‌ ಕಾರ್ಡ್‌ಗಳನ್ನು ತಡೆಗಟ್ಟಲು, ತೆರಿಗೆ ವ್ಯವಸ್ಥೆಯಲ್ಲಿ ಸುಧಾರಣೆ ಜಾರಿಗೆ ತರುವ ನಿಟ್ಟಿನಲ್ಲಿ ಆದಾಯ ತೆರಿಗೆ ಇಲಾಖೆಯು ಆಧಾರ್‌ ಕಾರ್ಡ್‌ನೊಂದಿಗೆ ಲಿಂಕ್‌ ಮಾಡುವುದನ್ನು ಕಡ್ಡಾಯಗೊಳಿಸಿದೆ. ಹೀಗಾಗಿ ಇದುವರೆಗೆ ಲಿಂಕ್‌ ಮಾಡದಿದ್ದರೆ ಕೂಡಲೇ ಮಾಡಿಸಿ. ಕೊನೆಯ ಕ್ಷಣದ ಗೊಂದಲಗಳನ್ನು ತಪ್ಪಿಸಲು ಅಂತಿಮ ದಿನಾಂಕದವರೆಗೆ ಕಾಯುವ ಬದಲು ಕೂಡಲೇ ಲಿಂಕ್‌ ಮಾಡಿ ಎಂದು ತಜ್ಞರು ಸಲಹೆ ನೀಡುತ್ತಾರೆ.

ಇದನ್ನೂ ಓದಿ: Money Guide: 1 ಕೋಟಿ ರೂ. ದುಡಿಯಬೇಕೆ? ಈ ಅಪಾಯ ರಹಿತ ಯೋಜನೆಯಲ್ಲಿ ಹೂಡಿಕೆ ಮಾಡಿ

Continue Reading

ಚಿನ್ನದ ದರ

Gold Rate Today: ಇಂದು ಚಿನ್ನದ ಬೆಲೆಯಲ್ಲಿ ತುಸು ಏರಿಕೆ; ಖರೀದಿಗೆ ಮುನ್ನ ದರ ಗಮನಿಸಿ

Gold Rate Today: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆಯಲ್ಲಿ ತುಸು ಏರಿಕೆಯಾಗಿದೆ. ಇಂದು (ಬುಧವಾರ) 1 ಗ್ರಾಂ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಚಿನ್ನದ ಬೆಲೆ ಕ್ರಮವಾಗಿ ₹ 1 ಹೆಚ್ಚಾಗಿದೆ. ಇಂದಿನ ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today)ಯಲ್ಲಿ ತುಸು ಏರಿಕೆಯಾಗಿದೆ. ಇಂದು (ಬುಧವಾರ) 1 ಗ್ರಾಂ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಚಿನ್ನದ ಬೆಲೆ ಕ್ರಮವಾಗಿ ₹ 1 ಹೆಚ್ಚಾಗಿದೆ. ಇಂದಿನ ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ.

ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ 22 ಕ್ಯಾರೆಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ ₹ 6,686 ಮತ್ತು 24 ಕ್ಯಾರೆಟ್ ಚಿನ್ನಕ್ಕೆ ₹ 7,294 ಇದೆ. 22 ಕ್ಯಾರೆಟ್‌ನ ಎಂಟು ಗ್ರಾಂ ಚಿನ್ನದ ಬೆಲೆ ₹ 53,488 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,860 ಮತ್ತು ₹6,68,600 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,294 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,352 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,940 ಮತ್ತು ₹7,29,400 ವೆಚ್ಚವಾಗಲಿದೆ.

ನಗರ22 ಕ್ಯಾರಟ್ (10 ಗ್ರಾಂ)24 ಕ್ಯಾರಟ್ (10 ಗ್ರಾಂ)
ದಿಲ್ಲಿ67,01073,090
ಮುಂಬೈ66,86072,940
ಬೆಂಗಳೂರು66,86072,940
ಚೆನ್ನೈ67,41073,540

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹95.25, ಎಂಟು ಗ್ರಾಂ ₹762 ಮತ್ತು 10 ಗ್ರಾಂ ₹952.50ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹9,525 ಮತ್ತು 1 ಕಿಲೋಗ್ರಾಂಗೆ ₹95,250 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ಚಿನ್ನ ಖರೀದಿಸುವ ಮುನ್ನ ಈ ಅಂಶಗಳನ್ನು ಗಮನಿಸಿ

ಮೇಕಿಂಗ್‌ ಚಾರ್ಜಸ್‌

ಚಿನ್ನಾಭರಣ ಬೆಲೆಯಲ್ಲಿ ಮೇಕಿಂಗ್‌ ಚಾರ್ಜಸ್‌ (Making Charges) ಪ್ರಧಾನ ಪಾತ್ರ ವಹಿಸುತ್ತದೆ. ಚಿನ್ನದ ತೂಕ ಮತ್ತು ಪರಿಶುದ್ಧತೆಯ ಜತೆಗೆ ಆಭರಣಗಳನ್ನು ತಯಾರಿಸುವ ಶುಲ್ಕವನ್ನೂ ಖರೀದಿ ಸಂದರ್ಭದಲ್ಲಿ ವಿಧಿಸಲಾಗುತ್ತದೆ. ಇದನ್ನು ಮೇಕಿಂಗ್‌ ಚಾರ್ಜಸ್‌ ಎಂದು ಕರೆಯುತ್ತಾರೆ. ಸಾಮಾನ್ಯವಾಗಿ ಚಿನ್ನದ ಬೆಲೆಯನ್ನು ಆಧರಿಸಿ ತಯಾರಿಕಾ ಶುಲ್ಕವನ್ನು ನಿರ್ಧರಿಸಲಾಗುತ್ತದೆ. ತಯಾರಿಕಾ ಶುಲ್ಕಗಳಲ್ಲಿ ಹಣವನ್ನು ಉಳಿಸಲು ಅವುಗಳನ್ನು ಹೇಗೆ ಲೆಕ್ಕ ಹಾಕಲಾಗುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯ. ಉದಾಹರಣೆಗೆ 8 ಗ್ರಾಂ ಚಿನ್ನದ ಸರದ ಬೆಲೆ 40,000 ರೂ. ಎಂದಿಟ್ಟುಕೊಳ್ಳೋಣ. ಪ್ರತಿ ಗ್ರಾಂಗೆ 300 ರೂ. ಫ್ಲಾಟ್ ದರದಲ್ಲಿ ತಯಾರಿಕಾ ಶುಲ್ಕವು 2,400 ರೂ. ಆಗಿರುತ್ತದೆ. 12%ದಂತೆ ಲೆಕ್ಕ ಹಾಕಿದರೆ ಇದು ಗರಿಷ್ಠ 4,800 ರೂ.ವರೆಗೆ ಹೆಚ್ಚಾಗುತ್ತದೆ.

ಬೆಲೆ ಲೆಕ್ಕ ಹಾಕಿ

ಚಿನ್ನದ ದರ ಅದರ ಶುದ್ಧತೆಯ ಮೇಲೆ ನಿರ್ಧಾರವಾಗುತ್ತದೆ. ಮಾರುಕಟ್ಟೆಯ ದರಕ್ಕೆ ಅನುಗುಣವಾಗಿ ಚಿನ್ನದ ಬೆಲೆ ಪ್ರತಿದಿನ ಬದಲಾಗುತ್ತಿರುತ್ತದೆ. ಜ್ಯುವೆಲ್ಲರಿಗಳು ದಿನಂಪ್ರತಿ ಆಯಾ ದಿನದ ಬೆಲೆ ಪ್ರದರ್ಶಿಸುತ್ತವೆ. ಇದನ್ನು ಗಮನಿಸಿ. ಆಭರಣದ ವಿನ್ಯಾಸವೂ ಬೆಲೆಯ ಮೇಲೆ ಪರಿಣಾಮ ಬೀರುವ ಪ್ರಮುಖ ಅಂಶ. ಹೀಗಾಗಿ ಖರೀದಿಗೆ ತೆರಳುವ ಮುನ್ನ ಈ ಎಲ್ಲ ಅಂಶಗಳತ್ತ ಗಮನ ಹರಿಸುವುದು ಮುಖ್ಯ.

ಬೆಲೆಗಳನ್ನು ಹೋಲಿಸಿ

ಮೊದಲೇ ಹೇಳಿದಂತೆ ಆಭರಣದ ಬೆಲೆಯಲ್ಲಿ ತಯಾರಿಕಾ ವೆಚ್ಚವೂ ಸೇರಿರುತ್ತದೆ. ಸಾಮಾನ್ಯವಾಗಿ ಯಂತ್ರದಿಂದ ತಯಾರಿಸಿದ ಆಭರಣಗಳು ಅಥವಾ ಕಡಿಮೆ ವಿನ್ಯಾಸವನ್ನು ಹೊಂದಿರುವ ಆಭರಣಗಳಿಗೆ ಕಡಿಮೆ ಮೇಕಿಂಗ್ ಚಾರ್ಜ್ ಇರುತ್ತದೆ. ಪ್ರಸ್ತುತ ಭಾರತದಲ್ಲಿ ಮೇಕಿಂಗ್ ಚಾರ್ಜಸ್ ಶೇ. 6ರಿಂದ ಶೇ. 20ರ ವರೆಗೆ ಇದೆ. ಆದ್ದರಿಂದ ವಿವಿಧ ಹಂತಗಳಲ್ಲಿನ ಶುಲ್ಕಗಳನ್ನು ಹೋಲಿಸಿ ಎನ್ನುವುದು ತಜ್ಞರು ನೀಡುವ ಟಿಪ್ಸ್‌. 

ಇದನ್ನು ಓದಿ : Lok Sabha Election : ಷೇರು ಮಾರುಕಟ್ಟೆ ಸಂಸ್ಥೆಯ ಪ್ರಕಾರ ಬಿಜೆಪಿ ಕಳೆದ ಬಾರಿಗಿಂತ ಹೆಚ್ಚು ಸೀಟು ಗೆಲ್ಲಲಿದೆ; ಲೆಕ್ಕಾಚಾರ ಹೀಗಿದೆ

Continue Reading

ವಾಣಿಜ್ಯ

UPI Safety Tips: ಈ ಟಿಪ್ಸ್ ಪಾಲಿಸಿ, ಮೊಬೈಲ್ ನಿಂದ ಹಣ ಪಾವತಿಸುವಾಗ ಆಗುವ ವಂಚನೆಯಿಂದ ಪಾರಾಗಿ

ಡಿಜಿಟಲ್ ಪಾವತಿ ವಿಧಾನಗಳು ಹೆಚ್ಚಾದಂತೆ ಸೈಬರ್ ವಂಚಕರು ಹೊಸಹೊಸ ವಿಧಾನಗಳನ್ನು ಬಳಸಿಕೊಂಡು ವಂಚಿಸಲು ಪ್ರಾರಂಭಿಸಿದ್ದಾರೆ. ಹೀಗಾಗಿ ನಮ್ಮ ಡಿಜಿಟಲ್ ಪಾವತಿಯ ಮೇಲೆ ನಿರಂತರ ನಿಗಾ ಇರಿಸುವುದು ಬಹುಮುಖ್ಯ. ಯುಪಿಐ ಪಾವತಿ ವಿಧಾನಗಳಲ್ಲೂ ಸುರಕ್ಷತೆಯನ್ನು (UPI Safety Tips) ಅನುಸರಿಸುವುದಕ್ಕೆ ನಮ್ಮ ಆದ್ಯತೆ ಇರಲೇಬೇಕು. ಅದಕ್ಕಾಗಿ ಇಲ್ಲಿದೆ ಕೆಲವು ಸಲಹೆ.

VISTARANEWS.COM


on

By

UPI Safety Tips
Koo

ಸ್ಮಾರ್ಟ್ ಫೋನ್ (smartphone) ಬಳಸಿಕೊಂಡು ಬ್ಯಾಂಕ್ ಖಾತೆಗಳ (bank account) ನಡುವೆ ಹಣ ವರ್ಗಾಯಿಸಲು (money transfer) ಅನುಮತಿ ನೀಡುವ ಯುಪಿಐ (UPI Safety Tips) ಭಾರತದಲ್ಲಿ ಅಭಿವೃದ್ಧಿಪಡಿಸಲಾದ ಏಕೀಕೃತ ಪಾವತಿಗಳ ಇಂಟರ್ಫೇಸ್ ವ್ಯವಸ್ಥೆಯಾಗಿದೆ. ಡಿಜಿಟಲ್ ವ್ಯಾಲೆಟ್‌ನಂತೆಯೇ (digital wallet) ಕಾರ್ಯನಿರ್ವಹಿಸುವ ಇದನ್ನು ಬಹು ಬ್ಯಾಂಕ್ ಖಾತೆಗಳಿಗೆ ಲಿಂಕ್ ಮಾಡಬಹುದಾಗಿದೆ. ಅಲ್ಲದೇ ಇದು ವಿವಿಧ ಅಪ್ಲಿಕೇಶನ್‌ಗಳಲ್ಲೂ ಕಾರ್ಯನಿರ್ವಹಿಸುತ್ತದೆ.

2016ರ ಮೊದಲು ಭಾರತವು ಅಂತರ್ ಬ್ಯಾಂಕ್ ಹಣ ವರ್ಗಾವಣೆಗಾಗಿ ಆರ್ ಟಿಜಿಎಸ್, ಐಎಂಪಿಎಸ್ ಮತ್ತು ಎನ್ ಇಎಫ್ ಟಿ ನಂತಹ ವಿವಿಧ ವ್ಯವಸ್ಥೆಗಳನ್ನು ಬಳಸಿಕೊಳ್ಳುತ್ತಿತ್ತು. ಈ ವ್ಯವಸ್ಥೆಗಳ ಸಂಕೀರ್ಣತೆ, ವಿಭಿನ್ನ ನಿಯಮಗಳು ಮತ್ತು ಹೆಚ್ಚುತ್ತಿರುವ ದಾಖಲೆಗಳಿಂದಾಗಿ ಏಕೀಕೃತ ಮತ್ತು ಸ್ವಯಂಚಾಲಿತ ಪಾವತಿಗೆ ಒಂದೇ ವೇದಿಕೆ ನಿರ್ಮಿಸಬೇಕಾದ ಅಗತ್ಯವನ್ನು ಇದು ಎತ್ತಿ ತೋರಿಸಿದೆ.

2016ರಲ್ಲಿ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್ ಪಿಸಿಐ) ದೇಶದ ಪಾವತಿ ವ್ಯವಸ್ಥೆಯಲ್ಲಿ ಬದಲಾವಣೆ ತರಲು ನಿರ್ಧರಿಸಿತು. ಆನ್‌ಲೈನ್ ಪಾವತಿಗಳನ್ನು ಸುಗಮಗೊಳಿಸಲು ವಿನ್ಯಾಸಗೊಳಿಸಲಾದ ಪ್ರಮಾಣೀಕೃತ ಅಪ್ಲಿಕೇಶನ್ ಪ್ರೋಗ್ರಾಮಿಂಗ್ ಇಂಟರ್‌ಫೇಸ್ (API) ಅನ್ನು ಎನ್ ಪಿಸಿಐ ಅಭಿವೃದ್ಧಿಪಡಿಸಿತು.

ಯುಪಿಐ ನ ಸುಗಮ ವಹಿವಾಟು ಡಿಜಿಟಲ್ ಆರ್ಥಿಕತೆಗೆ ಉತ್ತೇಜನ ನೀಡಿದೆ. ಇ-ಕಾಮರ್ಸ್ ಮತ್ತು ಇತರ ಆನ್‌ಲೈನ್ ಚಟುವಟಿಕೆಗಳನ್ನು ಹೆಚ್ಚಿಸಿರುವ ಡಿಜಿಟಲ್ ಪಾವತಿಗಳನ್ನು ಸ್ವೀಕರಿಸಲು ವ್ಯವಹಾರಗಳಿಗೆ ಇದು ಸರಳವಾಗಿದೆ. ಆದರೂ ದಿನನಿತ್ಯದ ವಹಿವಾಟುಗಳನ್ನು ನಡೆಸುವಾಗ ಇದರ ಬಳಕೆಯನ್ನು ಸುರಕ್ಷಿತವಾಗಿರಿಸುವುದು ಕೂಡ ಮುಖ್ಯವಾಗಿದೆ.


ಯುಪಿಐ ಸುರಕ್ಷಿತವಾಗಿರಿಸುವುದು ಹೇಗೆ?

ಖಾತೆಯಿಂದ ಹಣವನ್ನು ಕಡಿತಗೊಳಿಸಲು ಮಾತ್ರ ಯುಪಿಐ ಪಿನ್ ನಮೂದಿಸಿ. ಹಣವನ್ನು ಸ್ವೀಕರಿಸಲು ಯುಪಿಐ ಪಿನ್ ಅಗತ್ಯವಿಲ್ಲ. ಯುಪಿಐ ಐಡಿಯನ್ನು ಪರಿಶೀಲಿಸುವಾಗ ಸ್ವೀಕರಿಸುವವರ ಹೆಸರನ್ನು ಪರಿಶೀಲಿಸಿ. ಪರಿಶೀಲನೆ ಇಲ್ಲದೆ ಪಾವತಿಸಬೇಡಿ. ಅಪ್ಲಿಕೇಶನ್‌ನ ಯುಪಿಐ ಪಿನ್ ಪುಟದಲ್ಲಿ ಮಾತ್ರ ಯುಪಿಐ ಪಿನ್ ನಮೂದಿಸಿ. ಯುಪಿಐ ಪಿನ್ ಅನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಪಾವತಿ ಮಾಡಲು ಮಾತ್ರ ಕ್ಯೂ ಆರ್ ಅನ್ನು ಸ್ಕ್ಯಾನ್ ಮಾಡಿ ಮತ್ತು ಹಣವನ್ನು ಸ್ವೀಕರಿಸಲು ಅಲ್ಲ. ಯಾವುದೇ ಅಪರಿಚಿತ ವ್ಯಕ್ತಿ ಕೇಳಿದರೆ ಅದರ ಉಪಯುಕ್ತತೆಯನ್ನು ಅರ್ಥಮಾಡಿಕೊಳ್ಳದೆ ಯಾವುದೇ ಸ್ಕ್ರೀನ್ ಹಂಚಿಕೆ ಅಥವಾ ಎಸ್ ಎಂಎಸ್ ಫಾರ್ವರ್ಡ್ ಮಾಡುವ ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಬೇಡಿ.

ಇವಿಷ್ಟೇ ಅಲ್ಲದೇ ಯುಪಿಐ ಅನ್ನು ಬಳಸುವಾಗ ಸುರಕ್ಷಿತವಾಗಿರಿಸಲು ಇನ್ನು ಕೆಲವು ನಿಯಮಗಳನ್ನು ಪಾಲಿಸುವುದು ಒಳ್ಳೆಯದು.

ಪಿನ್ ಅನ್ನು ರಕ್ಷಿಸಿ

ಯುಪಿಐ ಪಿನ್ ಅನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಇದು ನಿಮ್ಮ ಎಟಿಎಂ ಪಿನ್ ಅಥವಾ ಇಂಟರ್ನೆಟ್ ಬ್ಯಾಂಕಿಂಗ್ ಪಾಸ್‌ವರ್ಡ್‌ನಂತೆ ಗೌಪ್ಯವಾಗಿರುತ್ತದೆ. ನಿಮ್ಮ ಯುಪಿಐ ಪಿನ್ ಅನ್ನು ಇತರರು ನೋಡದಂತೆ ಯಾವಾಗಲೂ ಖಾಸಗಿ ಸೆಟ್ಟಿಂಗ್‌ನಲ್ಲಿ ನಮೂದಿಸಿ.

ಹಗರಣಗಳ ಬಗ್ಗೆ ಎಚ್ಚರದಿಂದಿರಿ

ಪಿನ್, ಒಟಿಪಿ ಅಥವಾ ಇತರ ಸೂಕ್ಷ್ಮ ಮಾಹಿತಿಯನ್ನು ಕೇಳುವ ನಿಮ್ಮ ಬ್ಯಾಂಕ್ ಅಥವಾ ಯುಪಿಐ ಸೇವಾ ಪೂರೈಕೆದಾರರ ಇಮೇಲ್‌ , ಸಂದೇಶ ಅಥವಾ ಕರೆಗಳ ಬಗ್ಗೆ ಜಾಗರೂಕರಾಗಿರಿ. ಅನುಮಾನಾಸ್ಪದ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಬೇಡಿ. ಅನಧಿಕೃತ ಸೈಟ್ ಗಳಿಂದ ಯಾವುದನ್ನೂ ಡೌನ್‌ಲೋಡ್ ಮಾಡಬೇಡಿ.

ಅಧಿಕೃತ ಅಪ್ಲಿಕೇಶನ್‌ಗಳನ್ನು ಬಳಸಿ

ಗೂಗಲ್ ಪ್ಲೇ ಸ್ಟೋರ್ ಅಥವಾ ಆಪಲ್ ಆಪ್ ಸ್ಟೋರ್ ನಂತಹ ಅಧಿಕೃತ ಅಪ್ಲಿಕೇಶನ್ ಸ್ಟೋರ್‌ಗಳಿಂದ ಮಾತ್ರ ಯುಪಿಐ ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಿ. ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಲು ಮೂರನೇ ವ್ಯಕ್ತಿಯ ವೆಬ್‌ಸೈಟ್‌ಗಳು ಅಥವಾ ಪರಿಶೀಲಿಸದ ಮೂಲಗಳನ್ನು ಬಳಸುವುದನ್ನು ತಪ್ಪಿಸಿ.

ವಹಿವಾಟಿನ ವಿವರಗಳನ್ನು ಪರಿಶೀಲಿಸಿ

ವಹಿವಾಟನ್ನು ದೃಢೀಕರಿಸುವ ಮೊದಲು ಸ್ವೀಕರಿಸುವವರ ಯುಪಿಐ ಐಡಿ ಅಥವಾ ಮೊಬೈಲ್ ಸಂಖ್ಯೆಯನ್ನು ಎರಡು ಬಾರಿ ಪರಿಶೀಲಿಸಿ. ಆಕಸ್ಮಿಕ ಅಧಿಕ ಪಾವತಿಗಳನ್ನು ತಪ್ಪಿಸಲು ನಮೂದಿಸಿದ ಮೊತ್ತವು ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ.

ಅಪ್ಲಿಕೇಶನ್ ಅನ್ನು ನವೀಕರಿಸಿ

ಭದ್ರತೆಯನ್ನು ಹೆಚ್ಚಿಸಲು ಮತ್ತು ಹೊಸ ವೈಶಿಷ್ಟ್ಯಗಳ ಪ್ರಯೋಜನ ಪಡೆಯಲು ಯುಪಿಐ ಅಪ್ಲಿಕೇಶನ್ ಅನ್ನು ಇತ್ತೀಚಿನ ಆವೃತ್ತಿಗೆ ನಿಯಮಿತವಾಗಿ ನವೀಕರಿಸಿ.

ವಹಿವಾಟುಗಳ ಮೇಲ್ವಿಚಾರಣೆ ಮಾಡಿ

ಯಾವುದೇ ಅನಧಿಕೃತ ವಹಿವಾಟುಗಳಿಗಾಗಿ ಬ್ಯಾಂಕ್ ಹೇಳಿಕೆಗಳು ಮತ್ತು ಯುಪಿಐ ವಹಿವಾಟು ಇತಿಹಾಸವನ್ನು ನಿಯಮಿತವಾಗಿ ಪರಿಶೀಲಿಸಿ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡು ಬಂದರೆ ತಕ್ಷಣವೇ ಬ್ಯಾಂಕ್ ಗೆ ವರದಿ ಮಾಡಿ.

ವಹಿವಾಟಿನ ಮಿತಿಗಳನ್ನು ಹೊಂದಿಸಿ

ಯುಪಿಐ ಖಾತೆಗೆ ಅಪಾಯವನ್ನು ಕಡಿಮೆ ಮಾಡಲು ದೈನಂದಿನ ವಹಿವಾಟಿನ ಮಿತಿಗಳನ್ನು ಹೊಂದಿಸಿ. ಹೀಗೆ ಪಾವತಿಗೆ ಮಿತಿ ವಿಧಿಸಿದರೆ, ಒಂದೊಮ್ಮೆ ವಂಚನೆಯಾದರೂ ಹೆಚ್ಚಿನ ಹಣ ನಷ್ಟವಾಗುವುದಿಲ್ಲ.

ಇದನ್ನೂ ಓದಿ: Money Guide: ಬ್ಯಾಂಕ್‌ ಖಾತೆ, ಮ್ಯೂಚುವಲ್‌ ಫಂಡ್‌ ಹೊಂದಿದ್ದೀರಾ? ಹಾಗಾದರೆ ಮೊದಲು ಈ ಕೆಲಸ ಮಾಡಿ

ಅಪ್ಲಿಕೇಶನ್ ಲಾಕ್ ಬಳಸಿ

ಭದ್ರತೆಗಾಗಿ ಯುಪಿಐ ಅಪ್ಲಿಕೇಶನ್‌ಗಳಲ್ಲಿ ಲಭ್ಯವಿರುವ ಅಪ್ಲಿಕೇಶನ್ ಲಾಕ್ ವೈಶಿಷ್ಟ್ಯಗಳನ್ನು ಸಕ್ರಿಯಗೊಳಿಸಿ.

ಸಾರ್ವಜನಿಕ ವೈ-ಫೈ ಬಳಸಬೇಡಿ

ಸಾರ್ವಜನಿಕ ಅಥವಾ ಅಸುರಕ್ಷಿತ ವೈ-ಫೈ ನೆಟ್‌ವರ್ಕ್‌ಗಳಲ್ಲಿ ಯುಪಿಐ ವಹಿವಾಟುಗಳನ್ನು ಮಾಡುವುದನ್ನು ತಪ್ಪಿಸಿ. ಸುರಕ್ಷಿತ ಮತ್ತು ಖಾಸಗಿ ಇಂಟರ್ನೆಟ್ ಸಂಪರ್ಕವನ್ನು ಬಳಸಿ.

ಹೊಸ ತಂತ್ರಜ್ಞಾನ ತಿಳಿದುಕೊಂಡಿರಿ

ಯುಪಿಐ ಸ್ಕ್ಯಾಮ್‌ ಮತ್ತು ಅವುಗಳನ್ನು ಗುರುತಿಸಲು ಅದರಿಂದ ಜಾಗರೂಕರಾಗಿರಲು ಆಧುನಿಕ ತಂತ್ರಗಳ ಕುರಿತು ತಿಳಿದಿರಿ.

Continue Reading

ಪ್ರಮುಖ ಸುದ್ದಿ

Cab Service : ಆ್ಯಪ್​ ಆಧಾರಿತ ಕ್ಯಾಬ್​ಗಳು ಶೇ. 5ಕ್ಕಿಂತ ಹೆಚ್ಚು ಸೇವಾ ಶುಲ್ಕ ವಿಧಿಸುವಂತಿಲ್ಲ; ಸರ್ಕಾರದ ಆದೇಶಕ್ಕೆ ಕೋರ್ಟ್​ ಮನ್ನಣೆ

Cab Service: ನ್ಯಾಯಾಲಯವು ಆದೇಶದಲ್ಲಿ. ರಿಟ್ ಅರ್ಜಿಗಳನ್ನು ವಜಾಗೊಳಿಸಲಾಗಿದೆ. ಕ್ಯಾಬ್ ಸಂಸ್ಥೆಗಳು ಈಗ ನಿಗದಿಪಡಿಸಿದ ಶೇಕಡಾ 5 ಸೇವಾ ಶುಲ್ಕ ಸಂಗ್ರಹಿಸಲು ಮಾತ್ರ ಅರ್ಹರಾಗಿರುತ್ತಾರೆ ಎಂದು ಸ್ಪಷ್ಟಪಡಿಸಲಾಗಿದೆ. ಅಪ್ಲಿಕೇಶನ್ ಆಧಾರಿತ ಆಟೋ ಚಾಲಕರ ಸೇವಾ ಶುಲ್ಕವನ್ನು ಕರ್ನಾಟಕ ಸಾರಿಗೆ ಇಲಾಖೆ ನವೆಂಬರ್ 25, 2022 ರಂದು ಶೇಕಡಾ 5 ಕ್ಕೆ (ಮೂಲ ಶುಲ್ಕಕ್ಕೆ ಅನ್ವಯವಾಗುವ ಜಿಎಸ್​ಟಿಯೊಂದಿಗೆ) ಮಿತಗೊಳಿಸಿತ್ತು.

VISTARANEWS.COM


on

Cab service
Koo

ಬೆಂಗಳೂರು: ಆ್ಯಪ್ ಮೂಲಕ ಕಾರ್ಯಾಚರಿಸುವ ಕ್ಯಾಬ್ ಅಗ್ರಿಗೇಟರ್​ಗಳು (Cab Service) ಗ್ರಾಹಕರಿಂದ ಸಂಗ್ರಹಿಸುವ ಸೇವಾ ಶುಲ್ಕ ನಿಗದಿಪಡಿಸುವ ಕರ್ನಾಟಕ ರಾಜ್ಯ ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿ ಕರ್ನಾಟಕ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ ಎಂದು ಬಾರ್ ಆ್ಯಂಡ್​ ಬೆಂಚ್ ವರದಿ ಮಾಡಿದೆ. ಕ್ಯಾಬ್​ ಕಂಪನಿಗಳು ಗರಿಷ್ಠ ಶೇಕಡಾ 5ರಷ್ಟು ಸೇವಾ ಶುಲ್ಕ ಮಾತ್ರ ಸಂಗ್ರಹಿಬಹುದು ಎಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಇದರಿಂದಾಗಿ ಬೆಂಗಳೂರು ನಗರ ಸೇರಿದಂತೆ ಕರ್ನಾಟಕದಲ್ಲಿ ಆ್ಯಪ್ ಆಧಾರಿತ ಕ್ಯಾಬ್​​ಗಳನ್ನು ಬಳಸುವ ಗ್ರಾಹಕರಿಗೆ ಅನುಕೂಲವಾಗಲಿದೆ. ಮಿತಿ ಮೀರಿ ಶುಲ್ಕ ವಿಧಿಸುವ ಕಂಪನಿಗಳ ಯೋಜನೆಗೆ ಕಡಿವಾಣ ಬೀಳಲಿದೆ.

ನ್ಯಾಯಾಲಯವು ಆದೇಶದಲ್ಲಿ. ರಿಟ್ ಅರ್ಜಿಗಳನ್ನು ವಜಾಗೊಳಿಸಲಾಗಿದೆ. ಕ್ಯಾಬ್ ಸಂಸ್ಥೆಗಳು ಈಗ ನಿಗದಿಪಡಿಸಿದ ಶೇಕಡಾ 5 ಸೇವಾ ಶುಲ್ಕ ಸಂಗ್ರಹಿಸಲು ಮಾತ್ರ ಅರ್ಹರಾಗಿರುತ್ತಾರೆ ಎಂದು ಸ್ಪಷ್ಟಪಡಿಸಲಾಗಿದೆ. ಅಪ್ಲಿಕೇಶನ್ ಆಧಾರಿತ ಆಟೋ ಚಾಲಕರ ಸೇವಾ ಶುಲ್ಕವನ್ನು ಕರ್ನಾಟಕ ಸಾರಿಗೆ ಇಲಾಖೆ ನವೆಂಬರ್ 25, 2022 ರಂದು ಶೇಕಡಾ 5 ಕ್ಕೆ (ಮೂಲ ಶುಲ್ಕಕ್ಕೆ ಅನ್ವಯವಾಗುವ ಜಿಎಸ್​ಟಿಯೊಂದಿಗೆ) ಮಿತಗೊಳಿಸಿತ್ತು. ಆದರೆ ಉಬರ್, ಓಲಾ ಮತ್ತು ರ್ಯಾಪಿಡೊದಂತಹ ರೈಡ್-ಹೆಯ್ಲಿಂಗ್ ಅಪ್ಲಿಕೇಶನ್ ಗಳು ಈ ಕ್ರಮವನ್ನು ಪ್ರಶ್ನಿಸಿದ್ದವು. ಶೇಕಡಾ 20 ರಷ್ಟು ಸಾಮಾನ್ಯ ದರ ವಿಧಿಸಲು ಅನುಮತಿ ನೀಡಬೇಕು ಮತ್ತು ಮೂಲ ದರದ ಜತೆಗೆ ಶೇಕಡಾ 20ರಷ್ಟು ಸರ್ಜ್​ ಪ್ರೈಸ್ ಅಥವಾ ದುಪ್ಪಟ್ಟು ಶುಲ್ಕ ವಿಧಿಸಲು ಅವಕಾಶ ನೀಡಬೇಕು ಎಂದು ಕೋರಿತ್ತು. ಈ ಎಲ್ಲ ಕಂಪನಿಗಳು ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಕಾನೂನುಬಾಹಿರ, ನಿರಂಕುಶ ಮತ್ತು ತರ್ಕರಹಿತ ಎಂದು ವಾದಿಸಿದ್ದವು.

ಇದನ್ನು ಓದಿ : Lok Sabha Election : ಷೇರು ಮಾರುಕಟ್ಟೆ ಸಂಸ್ಥೆಯ ಪ್ರಕಾರ ಬಿಜೆಪಿ ಕಳೆದ ಬಾರಿಗಿಂತ ಹೆಚ್ಚು ಸೀಟು ಗೆಲ್ಲಲಿದೆ; ಲೆಕ್ಕಾಚಾರ ಹೀಗಿದೆ

ನೋಟಿಸ್ ಅನ್ನು ನ್ಯಾಯಾಲಯವು ಜನವರಿ 2023 ರಲ್ಲಿ ತಡೆಹಿಡಿದಿತ್ತು. ಶೇಕಡಾ 10 ರ ಅನುಕೂಲಕರ ಶುಲ್ಕದೊಂದಿಗೆ ಅಗ್ರಿಗೇಟರ್​ಗಳು ಅಲ್ಪಾವಧಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಿತು. ಸೋಮವಾರ, ನ್ಯಾಯಾಲಯವು ಅಂತಿಮವಾಗಿ ಅರ್ಜಿಗಳನ್ನು ವಜಾಗೊಳಿಸಿತು. ಈ ತೀರ್ಪಿನಿಂದ ಬೆಂಗಳೂರಿನ ಸಾವಿರಾರು ನಾಗರಿಕರಿಗೆ ಅನುಕೂಲವಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

Continue Reading
Advertisement
Ambareesh Birthday during Sumalatha Ambareesh Talks About Abhishek Ambareesh And Aviva
ಸ್ಯಾಂಡಲ್ ವುಡ್59 seconds ago

Ambareesh Birthday: ಸಿಹಿ ಸುದ್ದಿ ಕೊಡಲಿದ್ದಾರಾ ಅಭಿಷೇಕ್‌-ಅವಿವಾ? ಸುಮಲತಾ ಹೇಳಿದ್ದೇನು?

All Eyes on Rafah
ರಾಜಕೀಯ6 mins ago

All Eyes on Rafah: 30 ಮಿಲಿಯನ್ ಜನರನ್ನು ತಲುಪಿದ ‘ಆಲ್ ಐಸ್ ಆನ್ ರಫಾ’ ಪೋಸ್ಟ್‌!

Bomb Threat
ಪ್ರಮುಖ ಸುದ್ದಿ8 mins ago

Bomb Threat: ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ ಸಂದೇಶ; ಆತಂಕ ಸೃಷ್ಟಿ

Hardik Pandya
ಕ್ರೀಡೆ37 mins ago

Hardik Pandya: ಕೌಟುಂಬಿಕ ಸಮಸ್ಯೆ ಬದಿಗೊತ್ತಿ ಭಾರತ ತಂಡದ ಯಶಸ್ಸಿಗಾಗಿ ಕ್ರಿಕೆಟ್​ ಅಭ್ಯಾಸ ಆರಂಭಿಸಿದ ಹಾರ್ದಿಕ್​ ಪಾಂಡ್ಯ

Viral Video
ವೈರಲ್ ನ್ಯೂಸ್1 hour ago

Viral Video: ಇವನೇ ನಿಜವಾದ ಹೀರೋ! ಇವರ ಧೈರ್ಯ, ಶೌರ್ಯಕ್ಕೆ ಸರಿಸಾಟಿಯೇ ಇಲ್ಲ; ವೈರಲಾಯ್ತು ವಿಡಿಯೋ

TOP 5 Movies big budget Movie in OTT
ಒಟಿಟಿ1 hour ago

TOP 5 Movies: ಒಟಿಟಿಯಲ್ಲಿ ನೋಡಲೇಬೇಕಾದ ಟಾಪ್‌ 5 ಬಿಗ್‌ ಬಜೆಟ್‌ ಸಿನಿಮಾಗಳು!

panjurli daiva sharat shetty murder
ದಕ್ಷಿಣ ಕನ್ನಡ1 hour ago

Panjurli Daiva: ಶರತ್‌ ಶೆಟ್ಟಿ ಕೊಲೆ ಆರೋಪಿ ಶರಣಾಗತಿ; ಎಳೆತಂದು ನಿಲ್ಲಿಸಿತೇ ಪಂಜುರ್ಲಿ ದೈವ?

Money Guide
ಮನಿ-ಗೈಡ್2 hours ago

Money Guide: ಮೇ 31ರೊಳಗೆ ಪ್ಯಾನ್‌-ಆಧಾರ್‌ ಲಿಂಕ್‌ ಆಗದಿದ್ದರೆ ಟಿಡಿಎಸ್ ದುಪ್ಪಟ್ಟು ಕಡಿತ; ಹೀಗೆ ಲಿಂಕ್‌ ಮಾಡಿ

Prajwal Revanna Case
ಕರ್ನಾಟಕ2 hours ago

Prajwal Revanna Case: ಬೆಂಗಳೂರಿಗೆ ಪ್ರಜ್ವಲ್‌ ರೇವಣ್ಣ ಟಿಕೆಟ್ ಬುಕ್; ನಾಳೆ ಮಧ್ಯಾಹ್ನ ಜರ್ಮನಿಯಿಂದ ಪ್ರಯಾಣ

Gold Rate Today
ಚಿನ್ನದ ದರ2 hours ago

Gold Rate Today: ಇಂದು ಚಿನ್ನದ ಬೆಲೆಯಲ್ಲಿ ತುಸು ಏರಿಕೆ; ಖರೀದಿಗೆ ಮುನ್ನ ದರ ಗಮನಿಸಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ20 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌