ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟ ಮುಂದುವರಿಕೆ: ಬೆಂಗಳೂರಲ್ಲೇ ಎಂದ ಪುತ್ರ - Vistara News

ಕರ್ನಾಟಕ

ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟ ಮುಂದುವರಿಕೆ: ಬೆಂಗಳೂರಲ್ಲೇ ಎಂದ ಪುತ್ರ

ಒಂದೆಡೆ ಕಾಂಗ್ರೆಸ್‌ ಪಕ್ಷ ವಿಧಾನಸಭೆ ಚುನಾವಣೆಗೆ ಸಿದ್ಧತೆ ಮಾಡುತ್ತಿದ್ದರೆ ಮಾಜಿ ಸಿಎಂ ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟದಲ್ಲಿದ್ದಾರೆ.

VISTARANEWS.COM


on

siddramaiah new constituency
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ನಾಯಕರು ನವದೆಹಲಿಯಲ್ಲಿ ಬೀಡುಬಿಟ್ಟು ಎರಡು ದಿನದಿಂದ 2023ರ ವಿಧಾನಸಭೆ ಚುನಾವಣೆಗೆ ಸಿದ್ಧಪಡಿಸಲು ಸಭೆ ನಡೆಸುತ್ತಿದ್ದಾರೆ. ರಾಹುಲ್‌ ಗಾಂಧಿ ಅವರ ಜತೆಗೆ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಕೆ.ಸಿ. ವೇಣುಗೋಪಾಲ್‌, ರಣದೀಪ್‌ಸಿಂಗ್‌ ಸುರ್ಜೇವಾಲ ಕಾರ್ಯತಂತ್ರ ಹೆಣೆಯುತ್ತಿರುವಾಗಲೆ, ಸಿದ್ದರಾಮಯ್ಯ ಅವರ ಕ್ಷೇತ್ರದ ಕುರಿತು ಚರ್ಚೆ ಇನ್ನೂ ನಡೆದೇ ಇದೆ.

2018ರ ಚುನಾವಣೆಯಲ್ಲಿ ಚಾಮುಂಡೇಶ್ವರಿ ಹಾಗೂ ಬಾದಾಮಿಯಲ್ಲಿ ಸಿದ್ದರಾಮಯ್ಯ ಸ್ಪರ್ಧಿಸಿದ್ದರು. ಸಿದ್ದರಾಮಯ್ಯ ನಿರೀಕ್ಷಿಸಿದ್ದಂತೆಯೇ ಚಾಮುಂಡೇಶ್ವರಿಯಲ್ಲಿ ಅತ್ಯಂತ ಹೆಚ್ಚು ಅಂತರದಿಂದ, ಜೆಡಿಎಸ್‌ನ ಜಿ.ಟಿ. ದೇವೇಗೌಡರ ಎದುರು ಸೋತರು. ಬಾದಾಮಿಯಲ್ಲಿ ಜಯಿಸಿದರಾದರೂ ಬಿಜೆಪಿಯ ಶ್ರೀರಾಮುಲು ಅವರ ವಿರುದ್ಧ ಅಲ್ಪ ಮತದ ಮುನ್ನಡೆಯನ್ನಷ್ಟೆ ಪಡೆದು ನಿಟ್ಟುಸಿರು ಬಿಟ್ಟರು.

ಇದೀಗ 2023ರ ವಿಧಾನಸಭೆ ಚುನಾವಣೆಗಳು ಹತ್ತಿರವಾಗುತ್ತಿವೆ. ಇದು ತಮ್ಮ ಕೊನೆಯ ಚುನಾವಣೆ ಎಂದು ಸಿದ್ದರಾಮಯ್ಯ ಈಗಾಗಲೆ ಘೋಷಿಸಿದ್ದಾರೆ. ಈ ಬಾರಿಯೂ ಸಿದ್ದರಾಮಯ್ಯ ಬಾದಾಮಿಯಿಂದಲೇ ಸ್ಪರ್ಧೀಸುತ್ತಾರೆ ಎನ್ನಲಾಗುತ್ತಿತ್ತು. ಆದರೆ ಸಿದ್ದರಾಮಯ್ಯ ಅವರು ಪದೇಪದೆ ಸ್ಪರ್ಧಿಸಿದರೆ ತಮ್ಮ ಭವಿಷ್ಯದ ಕತೆ ಏನು ಎನ್ನುವ ಚಿಂತನೆ ಸ್ಥಳೀಯ ಕಾಂಗ್ರೆಸಿಗರದ್ದು. ನೇರವಾಗಿ ಸಿದ್ದರಾಮಯ್ಯ ಅವರ ಬಳಿ ಇದನ್ನು ಹೇಳಲು ಸಾಧ್ಯವಾಗದಿದ್ದರೂ ಪರೋಕ್ಷವಾಗಿ ತಿಳಿಸಿದ್ದಾರೆ. ಸಿದ್ದರಾಮಯ್ಯ ಅವರಿಗೂ ಈ ವಿಚಾರ ತಿಳಿದಿದ್ದು, ಬೇರೆ ಕ್ಷೇತ್ರದ ಹುಡುಕಾಟದಲ್ಲಿದ್ದಾರೆ.

ಕರ್ನಾಟಕದಾದ್ಯಂತ ಕ್ಷೇತ್ರಗಳು

ಬಾದಾಮಿಯನ್ನು ತೊರೆದ ನಂತರ ಉತ್ತರ ಕರ್ನಾಟಕದಲ್ಲೆ ಯಾವುದಾರೂ ಒಂದು ಕ್ಷೇತ್ರವನ್ನು ಸಿದ್ದರಾಮಯ್ಯ ಆಯ್ಕೆ ಮಾಡಿಕೊಳ್ಳುತ್ತಾರೆ ಎಂಬ ಚರ್ಚೆ ನಡೆಯುತ್ತಿದೆ. ಜತೆಗೆ ದಕ್ಷಿಣ ಕರ್ನಾಟಕದ ಕೆಲ ಜಿಲ್ಲೆಗಳ ಹೆಸರೂ ಓಡಾಡುತ್ತಿವೆ. ಕುರುಬ ಸಮುದಾಯ ಹೆಚ್ಚಿರುವ ಕೊಪ್ಪಳದ ಜತೆಗೆ, ಇತ್ತೀಚೆಗಷ್ಟೆ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪರ ಮತ ಚಲಾಯಿಸಿದ ಶ್ರೀನಿವಾಸಗೌಡ ಪ್ರತಿನಿಧಿಸುವ ಕೋಲಾರ, ತಮ್ಮ ಆತ್ಮೀಯ ಮಂಜುನಾಥ್‌ ಪ್ರತಿನಿಧಿಸುತ್ತಿರುವ ಹುಣಸೂರು ಆಯ್ಕೆ ಆಗಬಹುದು ಎನ್ನಲಾಗುತ್ತಿದೆ.

ಇದೆಲ್ಲದರ ಜತೆಗೆ ಈಗ ಸವದತ್ತಿ ಕ್ಷೇತ್ರದ ಹೆಸರೂ ಕೇಳಿಬರುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿರುವ ಸವದತ್ತಿ ವಿಧಾನಸಭೆ ಕ್ಷೇತ್ರವು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ನಿಯಂತ್ರಣದಲ್ಲಿದೆ ಎನ್ನಲಾಗುತ್ತದೆ. ರಾಜಕೀಯ ಗುರು ಸಿದ್ದರಾಮಯ್ಯ ಅವರಿಗೆ ಕ್ಷೇತ್ರವನ್ನು ಸತೀಶ್‌ ಸಜ್ಜುಗೊಳಿಸುತ್ತಿದ್ದಾರೆ ಎಂಬ ಮಾತುಗಳು ಕ್ಷೇತ್ರದಲ್ಲಿ ಕೇಳಿಬರುತ್ತಿವೆ. ಲೋಕಸಭೆ ಉಪಚುನಾವಣೆಯಲ್ಲಿಯೂ ಕಾಂಗ್ರೆಸ್ಸಿಗೆ ಹೆಚ್ಚಿನ ಲೀಡ್ ಕೊಟ್ಟಿದ್ದ ಕ್ಷೇತ್ರವಾಗಿದ್ದು, ಮುಂದಿನ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯಿಂದ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಲು ಈ ತಂತ್ರ ಉಪಕಾರಿ ಎಂಬ ಅಭಿಪ್ರಾಯವೂ ಇದೆ. ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ ಸವದತ್ತಿಯ ಹಾಲಿ ಶಾಸಕರಾಗಿದ್ದು, ಸಿದ್ದರಾಮಯ್ಯ ಎದುರಲ್ಲಿ ಆನಂದ ಮಾಮನಿ ಜಯಿಸಲು ಸಾಧ್ಯವಿಲ್ಲ ಎಂಬುದು ಕೈ ನಾಯಕರ ಪ್ಲ್ಯಾನ್.

ಬೆಂಗಳೂರಲ್ಲೆ ಸ್ಪರ್ಧೆ ಎಂದ ಪುತ್ರ

ರಾಜ್ಯದ ವಿವಿಧ ಕ್ಷೇತ್ರಗಳ ಹೆಸರು ಚಾಲ್ತಿಯಲ್ಲಿರುವಾಗಲೆ, ಸಿದ್ದರಾಮಯ್ಯ ಬೆಂಗಳೂರಿನಿಂದಲೇ ಸ್ಪರ್ಧೆ ಮಾಡುತ್ತಾರೆ ಎಂದು ಸಿದ್ದರಾಮಯ್ಯ ಪುತ್ರ ಹಾಗೂ ವರುಣ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ಈದು ತಮ್ಮ ಕೊನೆಯ ಚುನಾವಣೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಬಾದಾಮಿ ಕ್ಷೇತ್ರವನ್ನು ಆಯ್ದುಕೊಂಡರೆ ಪ್ರತಿ ಬಾರಿ ಪ್ರವಾಸ ಮಾಡುವುದು ವಯಸ್ಸಿನ ಕಾರಣಕ್ಕೆ ಕಷ್ಟವಾಗುತ್ತದೆ. ಹೀಗಾಗಿ ಬೆಂಗಳೂರು ಸುತ್ತಮುತ್ತಲಿನ ಕ್ಷೇತ್ರಗಳನ್ನೇ ಆಯ್ಕೆ ಮಾಡಿಕೊಳ್ಳುವ ಚಿಂತನೆ ನಡೆದಿದೆ. ಆದರೆ ಕ್ಷೇತ್ರ ಯಾವುದೆಂದು ಇನ್ನೂ ಅಂತಿಮವಾಗಿಲ್ಲ. ತಂದೆಯವರು ಕೇಳಿದರೆ ವರುಣಾ ಕ್ಷೇತ್ರವನ್ನೇ ಬಿಟ್ಟುಕೊಡಲು ಸಿದ್ಧನಿದ್ದೇನೆ ಎಂದು ತಿಳಿಸಿದ್ದಾರೆ.

ಚುನಾವಣೆ ಹತ್ತಿರವಾದಂತೆ ಸಿದ್ದರಾಮಯ್ಯ ಕ್ಷೇತ್ರದ ಆಯ್ಕೆ ಚರ್ಚೆಯೂ ನಡೆಯುತ್ತಿದ್ದು, ಕೆಲ ಸಮಯದಲ್ಲೆ ಅಂತಿಮವಾಗುವ ಸಾಧ್ಯತೆಯಿದೆ. ಇದರ ಜತೆಗೆ, ಈಗಾಗಲೆ ರಾಜ್ಯದ ಪ್ರಮುಖ ರಾಜಕಾರಣಿಗಳಾದ ಎಚ್‌.ಡಿ. ದೇವೇಗೌಡರು, ಬಿ.ಎಸ್‌. ಯಡಿಯೂರಪ್ಪ ಸೇರಿ ಎಲ್ಲರಿಗೂ ಭದ್ರವಾದ ತಮ್ಮದೇ ಎಂದು ಹೇಳಿಕೊಳ್ಳುವಂತಹ ಕ್ಷೇತ್ರವಿದೆ. ಆದರೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾತ್ರ ಈ ರೀತಿ ಕ್ಷೇತ್ರದ ವಿಚಾರದಲ್ಲಿ ಅತಂತ್ರರಾಗಿದ್ದು ಏಕೆ ಎಂಬ ಪ್ರಶ್ನೆಯೂ ರಾಜಕೀಯ ವಲಯುದಲ್ಲಿದೆ.

ಇದನ್ನೂ ಓದಿ | ಬೀದಿಯಲ್ಲಿ ಬಿದ್ದವರನ್ನು ಬಾದಾಮಿಗೆ ತಂದವರಾರು?: ಸಿದ್ದರಾಮಯ್ಯ ಕುರಿತು ಸಿ.ಎಂ. ಇಬ್ರಾಹಿಂ ಪ್ರಶ್ನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

MLC Election Results: ಬೆಂಗಳೂರು ಪದವೀಧರ, ಆಗ್ನೇಯ ಶಿಕ್ಷಕರ ಕ್ಷೇತ್ರ; ಕಾಂಗ್ರೆಸ್ ಪಾಲಾದ ಎರಡೂ ಸ್ಥಾನ!

MLC Election Results: ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರಾಮೋಜಿಗೌಡ ಗೆಲುವು ಕಂಡಿದ್ದರೆ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಜಯಭೇರಿ ಮೊಳಗಿಸಿದ್ದಾರೆ.

VISTARANEWS.COM


on

MLC Election Results
ಬೆಂಗಳೂರು ಪದವೀಧರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಾಮೋಜಿಗೌಡ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಟಿ ಶ್ರೀನಿವಾಸ್
Koo

ಬೆಂಗಳೂರು: ವಿಧಾನ ಪರಿಷತ್‌ಗೆ ಬೆಂಗಳೂರು ಪದವೀಧರ ಕ್ಷೇತ್ರ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ನಡೆದ ಚುನಾವಣೆಯಲ್ಲಿ (MLC Election Results) ಎರಡೂ ಸ್ಥಾನಗಳು ಕಾಂಗ್ರೆಸ್ ಪಾಲಾಗಿವೆ. ಬೆಂಗಳೂರು ಪದವೀಧರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿ ರಾಮೋಜಿಗೌಡ ಗೆಲುವು ಕಂಡಿದ್ದರೆ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಜಯಭೇರಿ ಮೊಳಗಿಸಿದ್ದಾರೆ.

ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ರಾಮೋಜಿಗೌಡ ಗೆಲುವು

ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರಾಮೋಜಿಗೌಡ 36,729 ಮತ ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಅ.ದೇವೇಗೌಡ 24,888 ಮತ ಪಡೆದಿದ್ದಾರೆ. ಈ ಮೂಲಕ 11,841 ಮತಗಳ ಅಂತರದಿಂದ ರಾಮೋಜಿಗೌಡ ಗೆದ್ದಿದ್ದಾರೆ.

ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಡಿ.ಟಿ ಶ್ರೀನಿವಾಸ್ ಜಯಭೇರಿ

ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಿ.ಟಿ ಶ್ರೀನಿವಾಸ್ 8,909 ಮತಗಳನ್ನು ಪಡೆದಿದ್ದು, ಬಿಜೆಪಿ ಅಭ್ಯರ್ಥಿ ವೈ.ಎ. ನಾರಾಯಣಸ್ವಾಮಿ 7,142 ಮತ ಪಡೆದಿದ್ದಾರೆ. ಈ ಮೂಲಕ 1,767 ಮತಗಳ ಅಂತರದಿಂದ ಡಿ.ಟಿ ಶ್ರೀನಿವಾಸ್ ಗೆಲುವು ದಾಖಲಿಸಿದ್ದಾರೆ.

ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ ಕಾಂಗ್ರೆಸ್‌ ಅಭ್ಯರ್ಥಿ ಡಾ.ಚಂದ್ರಶೇಖರ್ ಪಾಟೀಲ್

MLC Election

ಕಲಬುರಗಿ: ವಿಧಾನ ಪರಿಷತ್‌ಗೆ ಈಶಾನ್ಯ ಪದವೀಧರ ಕ್ಷೇತ್ರದಿಂದ ನಡೆದ ಚುನಾವಣೆಯಲ್ಲಿ (North East Graduate Constituency) ಎರಡನೇ ಬಾರಿ ಕಾಂಗ್ರೆಸ್‌ ಅಭ್ಯರ್ಥಿ ಡಾ.ಚಂದ್ರಶೇಖರ್ ಪಾಟೀಲ್ ಗೆಲುವು ಕಂಡಿದ್ದಾರೆ. ಇವರು 4,651 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ ವಿರುದ್ಧ ಜಯ ಸಾಧಿಸುವ ಮೂಲಕ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದಾರೆ.

ಎರಡನೇ ಪ್ರಾಶಸ್ತ್ಯ ಮತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ್ ಗೆಲುವು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಾ.ಚಂದ್ರಶೇಖರ ಪಾಟೀಲ್‌ಗೆ 43,484 ಮತ ಬಂದಿದ್ದರೆ, ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ 38,833 ಮತಗಳು ಗಳಿಸಿದ್ದಾರೆ. ಈ ಮೂಲಕ 4,651 ಮತಗಳ ಅಂತರದಿಂದ ಡಾ.ಚಂದ್ರಶೇಖರ್ ಪಾಟೀಲ್ ಕ್ಷೇತ್ರದಲ್ಲಿ ವಿಜಯಪತಾಕೆ ಹಾರಿಸಿದ್ದಾರೆ. ಒಟ್ಟಾರೆ 1,09,031 ಮತ ಚಲಾವಣೆಯಾಗಿದ್ದು, ಇದರಲ್ಲಿ 96,519 ಮತಗಳು ಪುರಸ್ಕೃತಗೊಂಡಿದ್ದು, 12,513 ಮತಗಳು ತಿರಸ್ಕೃತಗೊಂಡಿವೆ.

ಇದನ್ನೂ ಓದಿ | MLC Election Results: ದಕ್ಷಿಣ ಶಿಕ್ಷಕರ ಕ್ಷೇತ್ರ; ಮೊದಲ ಪ್ರಾಶಸ್ತ್ಯ ಮತದಲ್ಲೇ ಮೈತ್ರಿ ಅಭ್ಯರ್ಥಿ ವಿವೇಕಾನಂದ ಭರ್ಜರಿ ಗೆಲುವು

ಫಲಿತಾಂಶದ ಬಗ್ಗೆ ಕಾಂಗ್ರೆಸ್‌ನ ನೂತನ ಪರಿಷತ್ ಸದಸ್ಯ ಡಾ.ಚಂದ್ರಶೇಖರ್ ಪಾಟೀಲ್ ಮಾತನಾಡಿ, ಇದು ನನ್ನ ಗೆಲುವಲ್ಲಾ, ಏಳು ಜಿಲ್ಲೆಯ ಪದವಿಧರರ ಗೆಲುವು. ನನ್ನ ಗೆಲುವಿಗೆ ಶಿಕ್ಷಕರು, ಪದವೀಧರರು ಕಾರಣ. ಕಲ್ಯಾಣ‌ ಕರ್ನಾಟಕ ಭಾಗದ ನಿರುದ್ಯೋಗ ಸಮಸ್ಯೆ ಬಗೆಹರಿಸಲು ಶ್ರಮಿಸುವೆ. ಹಳೆ ಪಿಂಚಣಿ ಯೋಜನೆ ಜಾರಿಗೆ ತರಲು ಪ್ರಯತ್ನ ಮಾಡುವೆ. ನಾನು ರಾಜಕಾರಣಿ ಮನೆತನದವನು, ಶಿಕ್ಷಣ ಸಂಸ್ಥೆ ನಡೆಸುತ್ತಿದ್ದೇನೆ. ನನಗೂ ಶಿಕ್ಷಕರ ಸಮಸ್ಯೆ ಕಷ್ಟ ಏನು ಅಂತ ಗೊತ್ತಿದೆ. ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇತ್ತು, ಕೆಲಸ‌ ಮಾಡಲು ಸಹಕರಿಸಲಿಲ್ಲ.. ಈಗ ರಾಜ್ಯದಲ್ಲಿ ನಮ್ಮದೇ ಸರ್ಕಾರ ಇದೆ. ಅತಿಥಿ ಉಪನ್ಯಾಸಕರ ಕಾಯಮಾತಿಗೆ ಹಿರಿಯರ ಜತೆ ಮಾತನಾಡುವೆ ಎಂದು ತಿಳಿಸಿದ್ದಾರೆ.

Continue Reading

ಮಳೆ

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Karnataka weather Forecast: ರಾಜ್ಯದ ಹಲವೆಡೆ ಮಳೆಯು (Heavy Rain News) ಅಬ್ಬರಿಸುತ್ತಿದ್ದು, ಧಾರವಾಡದಲ್ಲಿ ವೃದ್ಧರೊಬ್ಬರು ಮಳೆಯಲ್ಲೇ ತಪಸ್ಸಿಗೆ ಕುಳಿತ ವಿಡಿಯೊವೊಂದು ವೈರಲ್‌ ಆಗಿದೆ. ಇತ್ತ ಮಳೆಯ ಅವಾಂತರವು ಮುಂದುವರಿದಿದೆ.

VISTARANEWS.COM


on

By

Karnataka weather Forecast
Koo

ಧಾರವಾಡ: ಹಿರಿಯ ಜೀವಿಯೊಬ್ಬರು ಮಳೆ (Rain News ) ಬರುವಾಗಲೇ ತಪಸ್ಸಿಗೆ ಕುಳಿತ ಘಟನೆ ಧಾರವಾಡದ ಸಿಬಿಟಿ ಬಸ್ ನಿಲ್ದಾಣದ ಎದುರು ನಡೆದಿದೆ. ಜೋರಾಗಿ ಬರುತ್ತಿದ್ದ ಮಳೆಯಲ್ಲಿ (Karnataka weather Forecast) ನಡು ರಸ್ತೆಯಲ್ಲಿಯೇ ಕಣ್ಣು ಮುಚ್ಚಿ ಕುಳಿತ ವೃದ್ಧ, ಒಂಚೂರು ಅಲುಗಾಡದೆ ತಪಸ್ಸು ಮಾಡಿದ್ದಾರೆ. ಇನ್ನೂ ಈ ದೃಶ್ಯವನ್ನು ಓರ್ವ ಯುವಕನ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಬಳ್ಳಾರಿಯಲ್ಲಿ 50ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು

ಶುಕ್ರವಾರ ವಿಜಯನಗರದಲ್ಲೂ ಧಾರಾಕಾರ ಮಳೆಯಾಗಿದೆ. ಮಳೆಯಿಂದಾಗಿ ಕೆಲ ಕಾಲ ವಾಹನ ಸವಾರರು ಪರದಾಟಬೇಕಾಯಿತು. ಧಾರವಾಡದ ನಗರದ ಕೆಎಂಎಫ್ ಬಳಿಯ ರಸ್ತೆಯ ಮೇಲೆ ಮೊಣಕಾಲುದ್ದ ನೀರು ಬಂದ ಪರಿಣಾಮ ಸವಾರರು ಬೈಕ್ ತಳ್ಳಿಕೊಂಡು ಹೋದರು. ಇತ್ತ ಗಣಿನಾಡು ಬಳ್ಳಾರಿಯಲ್ಲೂ ವರುಣನ ಆರ್ಭಟ ಜೋರಾಗಿತ್ತು. ಬಿಸಿಲಿನ ತಾಪದಿಂದ ಬೇಸೆತ್ತಿದ್ದ ಜನರಿಗೆ ಮಳೆಯು ಸಂತಸವನ್ನುಂಟು ಮಾಡಿತ್ತು. ಮುಂಗಾರು ಬಿತ್ತನೆಯ ನಿರೀಕ್ಷೆಯಲ್ಲಿರುವ ರೈತರ ಮೊಗದಲ್ಲಿ ಹರ್ಷ ತಂದಿತ್ತು. ಮಳೆಯಿಂದಾಗಿ ಬಳ್ಳಾರಿ ನಗರದ ಕೆಲ ರಸ್ತೆಗಳು ಜಲಾವೃತ್ತವಾಗಿದ್ದವು. ನಗರದ ಹಳೆ ಬಸ್ ನಿಲ್ದಾಣದ ಎದುರುಗಡೆ ರಸ್ತೆಯ ಮೇಲೆ ನೀರು ನಿಂತು ಸವಾರರು ಸಮಸ್ಯೆ ಎದುರಿಸುವಂತಾಯಿತು. ನಗರದ ರಾಯಲ್ ಸರ್ಕಲ್ ಪೆಟ್ರೋಲ್ ಬಂಕ್ ಪ್ರದೇಶ, ರೇಣುಕಾ ಕಿಚನ್ ಮುಂದೆಲ್ಲ ನೀರುಮಯವಾಗಿತ್ತು.

ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿತ್ತು. ಗಾಳೆ ಮಳೆಗೆ ಕೆಲವೆಡೆ ಮರಗಳು ಧರೆಗುರುಳಿದ್ದವು. ಸಂಡೂರು ತಾಲೂಕಿನಲ್ಲಿ ಮನೆಗಳಿಗೆ, ಹಳೇ ಮಾದಪುರ ಗ್ರಾಮದಲ್ಲಿ ನೀರು ನುಗ್ಗಿದ್ದವು. ಬಳ್ಳಾರಿಯ ಬಂಡಿಮೋಟ್‌ನ ಕೆಲ ಪ್ರದೇಶ ಸಂಪೂರ್ಣ ಜಲಾವೃತಗೊಂಡಿದೆ. ಐವತ್ತಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಮನೆಯಲ್ಲಿರುವ ಸಾಮಾನುಗಳು ತೇಲಾಡುತ್ತಿದೆ. ಬಸ್ ನಿಲ್ದಾಣ, ಲಾರಿ ಟರ್ಮಿನಲ್‌ನಲ್ಲೂ ಅವಾಂತರವೇ ಸೃಷ್ಟಿಯಾಗಿದೆ.

ಇದನ್ನೂ ಓದಿ:Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

ದಾವಣಗೆರೆಯಲ್ಲಿ ಬಸ್‌ ನಿಲ್ದಾಣ ಜಲಾವೃತ

ದಾವಣಗೆರೆಯ ಹೊನ್ನಾಳಿಯಲ್ಲಿ ಸುರಿದ ಮಳೆಯಿಂದ ಶುಕ್ರವಾರ ಖಾಸಗಿ ಬಸ್ ನಿಲ್ದಾಣ ಜಲಾವೃತಗೊಂಡಿತ್ತು. ಕೆರೆಯಂತಾದ ನಿಲ್ದಾಣದಲ್ಲಿ ಮೊಣಕಾಲಿನ ವರೆಗೆ ನಿಂತ ನೀರು ಪ್ರಯಾಣಿಕರು ಪರದಾಡಬೇಕಾಯಿತು. ಮಳೆ ‌ನೀರು ಸರಾಗವಾಗಿ ಹೋಗಲು ಸರಿಯಾದ ರೀತಿ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಈ ಅವಸ್ಥೆ ಎಂದು ಕಿಡಿಕಾರಿದರು. ದಾವಣಗೆರೆ, ಮಾಯಕೊಂಡ, ದಾವಣಗೆರೆ ಕುವೆಂಪು ರಸ್ತೆ, ಕೆಬಿ ಬಡಾವಣೆ ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದವು. ದಾವಣಗೆರೆಯ ಈರುಳ್ಳಿ ಮಾರ್ಕೆಟ್ ನ ರೈಲು ಬ್ರಿಡ್ಜ್ ಬಳಿ ರಸ್ತೆಯು ಕೆರೆಯಂತಾಗಿತ್ತು, ಹರಪನಹಳ್ಳಿ, ಜಗಳೂರು ತಾಲೂಕಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ರಸ್ತೆ ದಾಟಲು ವಾಹನ ಸವಾರರು ಹರಸಾಹಸ ಪಟ್ಟವರು.

ಕರಾವಳಿಯಲ್ಲಿ ವರುಣಾರ್ಭಟ

ಉತ್ತರ ಕನ್ನಡದ ಕಾರವಾರ, ಅಂಕೋಲಾ, ಕುಮಟಾ ಸೇರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗಿದೆ. ಅಂಕೋಲಾದಲ್ಲಿ ಪಟ್ಟಣದ ರಸ್ತೆಯಲ್ಲಿ ಕಣ್ಣುಹಾರಿಯಿಸಿದರೆ ಬರೀ ನೀರೆ ಕಾಣಿಸುತ್ತಿತ್ತು. ಭಾರೀ ಮಳೆಯಿಂದಾಗಿ ರಸ್ತೆ ಬದಿ ವ್ಯಾಪಾರಸ್ಥರು ಪರದಾಡಬೇಕಾಯಿತು.

ಶುಕ್ರವಾರ ಮಧ್ಯಾಹ್ನ ಸುರಿದ ಧಾರಾಕಾರ ಮಳೆಗೆ ಅಂಕೋಲಾದ ಬೋಳೆ ನಾಡವರಕೇರಿ ಅಂಗನವಾಡಿ ಕೇಂದ್ರಕ್ಕೆ ನೀರು ನುಗ್ಗಿತ್ತು. ಕಾಲುವೆ ಸೇರಿದಂತೆ ಅಂಗನವಾಡಿ ಕೇಂದ್ರದ ಅಂಗಳದಲ್ಲಿ ನೀರು ಜಮಾವಣೆಯಾಗಿತ್ತು. ನೀರು ಹರಿಯದೇ ಅಂಗನವಾಡಿ ಕೇಂದ್ರದಲ್ಲಿ ತುಂಬಿಕೊಂಡಿತ್ತು. ಅದೃಷ್ಟವಶಾತ್ ಮಕ್ಕಳು ಮನೆಗೆ ಹೋಗಿದ್ದರಿಂದ ಅನಾಹುತ ತಪ್ಪಿತ್ತು. ಇತ್ತ ಅಂಗನವಾಡಿ ಕೇಂದ್ರಕ್ಕೆ ನೀರು ನುಗ್ಗಿದ ಪರಿಣಾಮ ಕಿರಾಣಿ ಸೇರಿ ವಸ್ತುಗಳನ್ನು ರಕ್ಷಿಸಿಕೊಳ್ಳಲು ಸಿಬ್ಬಂದಿ ಪರದಾಡಬೇಕಾಯಿತು.

ಯಾದಗಿರಿಯಲ್ಲಿ ಜಮೀನಿಗೆ ನುಗ್ಗಿದ ನೀರು

ಶುಕ್ರವಾರ ಸಂಜೆ ಯಾದಗಿರಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ. ವಡಗೇರಾ ತಾಲೂಕಿನ ಭಾಗದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಯಕ್ಷಿಂತಿ ಗ್ರಾಮ ಜಮೀನಿಗೆ ನೀರು ನುಗ್ಗಿದೆ. ಜಮೀನಿಗೆ ತೆರಳುವ ರಸ್ತೆಯು ಸಂಪೂರ್ಣ ಜಲಾವೃತಗೊಂಡಿತ್ತು. ಇತ್ತ ಜಮೀನಿಗೆ ತೆರಳಿದ್ದ ಕಾರ್ಮಿಕರಿಗೆ ವಾಪಸ್‌ ಮನೆಗೆ ತೆರಳಲು ಸಂಕಷ್ಟ ಎದುರಿಸಬೇಕಾಯಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

MLC Election Results: ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ ಕಾಂಗ್ರೆಸ್‌ ಅಭ್ಯರ್ಥಿ ಡಾ.ಚಂದ್ರಶೇಖರ್ ಪಾಟೀಲ್

MLC Election Results: ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಾ.ಚಂದ್ರಶೇಖರ್ ಪಾಟೀಲ್ ಅವರು ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ ವಿರುದ್ಧ 4,651 ಮತಗಳ ಅಂತರದಿಂದ ಜಯಭೇರಿ ಮೊಳಗಿಸಿದ್ದಾರೆ.

VISTARANEWS.COM


on

MLC Election
Koo

ಕಲಬುರಗಿ: ವಿಧಾನ ಪರಿಷತ್‌ಗೆ ಈಶಾನ್ಯ ಪದವೀಧರ ಕ್ಷೇತ್ರದಿಂದ ನಡೆದ ಚುನಾವಣೆಯಲ್ಲಿ (North East Graduate Constituency) ಎರಡನೇ ಬಾರಿ ಕಾಂಗ್ರೆಸ್‌ ಅಭ್ಯರ್ಥಿ ಡಾ.ಚಂದ್ರಶೇಖರ್ ಪಾಟೀಲ್ ಗೆಲುವು ಕಂಡಿದ್ದಾರೆ. ಇವರು 4,651 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ ವಿರುದ್ಧ ಜಯ ಸಾಧಿಸುವ ಮೂಲಕ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದಾರೆ.

ಎರಡನೇ ಪ್ರಾಶಸ್ತ್ಯ ಮತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ್ ಗೆಲುವು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಾ.ಚಂದ್ರಶೇಖರ ಪಾಟೀಲ್‌ಗೆ 43,484 ಮತ ಬಂದಿದ್ದರೆ, ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್ 38,833 ಮತಗಳು ಗಳಿಸಿದ್ದಾರೆ. ಈ ಮೂಲಕ 4,651 ಮತಗಳ ಅಂತರದಿಂದ ಡಾ.ಚಂದ್ರಶೇಖರ್ ಪಾಟೀಲ್ ಕ್ಷೇತ್ರದಲ್ಲಿ ವಿಜಯಪತಾಕೆ ಹಾರಿಸಿದ್ದಾರೆ. ಒಟ್ಟಾರೆ 1,09,031 ಮತ ಚಲಾವಣೆಯಾಗಿದ್ದು, ಇದರಲ್ಲಿ 96,519 ಮತಗಳು ಪುರಸ್ಕೃತಗೊಂಡಿದ್ದು, 12,513 ಮತಗಳು ತಿರಸ್ಕೃತಗೊಂಡಿವೆ.

ಇದನ್ನೂ ಓದಿ | MLC Election Results: ದಕ್ಷಿಣ ಶಿಕ್ಷಕರ ಕ್ಷೇತ್ರ; ಮೊದಲ ಪ್ರಾಶಸ್ತ್ಯ ಮತದಲ್ಲೇ ಮೈತ್ರಿ ಅಭ್ಯರ್ಥಿ ವಿವೇಕಾನಂದ ಭರ್ಜರಿ ಗೆಲುವು

ಫಲಿತಾಂಶದ ಬಗ್ಗೆ ಕಾಂಗ್ರೆಸ್‌ನ ನೂತನ ಪರಿಷತ್ ಸದಸ್ಯ ಡಾ.ಚಂದ್ರಶೇಖರ್ ಪಾಟೀಲ್ ಮಾತನಾಡಿ, ಇದು ನನ್ನ ಗೆಲುವಲ್ಲಾ, ಏಳು ಜಿಲ್ಲೆಯ ಪದವಿಧರರ ಗೆಲುವು. ನನ್ನ ಗೆಲುವಿಗೆ ಶಿಕ್ಷಕರು, ಪದವೀಧರರು ಕಾರಣ. ಕಲ್ಯಾಣ‌ ಕರ್ನಾಟಕ ಭಾಗದ ನಿರುದ್ಯೋಗ ಸಮಸ್ಯೆ ಬಗೆಹರಿಸಲು ಶ್ರಮಿಸುವೆ. ಹಳೆ ಪಿಂಚಣಿ ಯೋಜನೆ ಜಾರಿಗೆ ತರಲು ಪ್ರಯತ್ನ ಮಾಡುವೆ. ನಾನು ರಾಜಕಾರಣಿ ಮನೆತನದವನು, ಶಿಕ್ಷಣ ಸಂಸ್ಥೆ ನಡೆಸುತ್ತಿದ್ದೇನೆ. ನನಗೂ ಶಿಕ್ಷಕರ ಸಮಸ್ಯೆ ಕಷ್ಟ ಏನು ಅಂತ ಗೊತ್ತಿದೆ. ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇತ್ತು, ಕೆಲಸ‌ ಮಾಡಲು ಸಹಕರಿಸಲಿಲ್ಲ.. ಈಗ ರಾಜ್ಯದಲ್ಲಿ ನಮ್ಮದೇ ಸರ್ಕಾರ ಇದೆ. ಅತಿಥಿ ಉಪನ್ಯಾಸಕರ ಕಾಯಮಾತಿಗೆ ಹಿರಿಯರ ಜತೆ ಮಾತನಾಡುವೆ ಎಂದು ತಿಳಿಸಿದ್ದಾರೆ.

ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಧನಂಜಯ ಸರ್ಜಿಗೆ ಗೆಲುವು; ರಘುಪತಿ ಭಟ್‌ ಬಂಡಾಯ ವಿಫಲ

dhananjaya sarji mlc election

ಮೈಸೂರು: ವಿಧಾನ ಪರಿಷತ್‌ಗೆ (MLC Election Results) ನೈರುತ್ಯ ಪದವೀಧರ ಕ್ಷೇತ್ರದಿಂದ (Graduate constituency) ನಡೆದ ಚುನಾವಣೆಯಲ್ಲಿ ಬಿಜೆಪಿ (BJP) ಅಭ್ಯರ್ಥಿ ಡಾ. ಧನಂಜಯ ಸರ್ಜಿಗೆ ಭರ್ಜರಿ ಗೆಲುವು ದೊರೆತಿದೆ. ಕಾಂಗ್ರೆಸ್ (Congress) ಅಭ್ಯರ್ಥಿ ಆಯನೂರು ಮಂಜುನಾಥ್‌ಗೆ ಹೀನಾಯ ಸೋಲಾಗಿದೆ. ಬಿಜೆಪಿಯಿಂದ ಬಂಡಾಯ ಎದ್ದು ಸ್ಪರ್ಧಿಸಿದ್ದ ಮಾಜಿ ಶಾಸಕ ರಘುಪತಿ ಭಟ್‌ (Raghupathi Bhat) ಅವರ ಉಮೇದುವಾರಿಕೆ ವಿಫಲವಾಗಿದೆ.

ಬಿಜೆಪಿಯ ಧನಂಜಯ ಸರ್ಜಿಗೆ 37,627 ಮತಗಳು ಲಭ್ಯವಾಗಿವೆ. ಕಾಂಗ್ರೆಸ್‌ನ ಆಯನೂರು ಮಂಜುನಾಥ್‌ಗೆ 13,516 ಮತಗಳು ಲಭ್ಯವಾಗಿವೆ. ಕಾಂಗ್ರೆಸ್ ವಿರುದ್ಧ ಬಿಜೆಪಿ ಅಭ್ಯರ್ಥಿ ಧನಂಜಯ ಸರ್ಜಿಗೆ 24,111 ಮತಗಳ ಅಂತರದ ಭರ್ಜರಿ ಗೆಲುವು ಪ್ರಾಪ್ತವಾಗಿವೆ. ಈ ಮೂಲಕ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಸತತ ಏಳನೇ ಬಾರಿ ಬಿಜೆಪಿ ಗೆಲುವಿನ ನಗೆ ಬೀರಿದೆ.

ಚಲಾವಣೆಯಾಗಿದ್ದ ಒಟ್ಟು ಮತಗಳು 66497. ಈ ಪೈಕಿ ಸಿಂಧುವಾದ ಮತಗಳು 61382. ಕುಲಗೆಟ್ಟ ಮತಗಳು 5115. ಗೆಲುವಿಗಾಗಿ ನಿಗದಿಪಡಿಸಿದ್ದ ಕೋಟಾ ಮತಗಳು 30,692. ನಿಗದಿಪಡಿಸಿದ್ದ ಕೋಟಾ ಮತಗಳಿಗಿಂತ ಹೆಚ್ಚಿನ ಪ್ರಮಾಣದ ಮೊದಲ ಪ್ರಾಶಸ್ತ್ಯ ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದ್ದಾರೆ ಬಿಜೆಪಿಯ ಧನಂಜಯ ಸರ್ಜಿ.

ಇದನ್ನೂ ಓದಿ | MLC Election Results: ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಜಯಭೇರಿ

ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್‌ಗೆ 7,039 ಮತಗಳು ಲಭ್ಯವಾಗಿವೆ. ಇವರ ಪರವಾಗಿ ಶಿವಮೊಗ್ಗದಿಂದ ಮಾಜಿ ಸಚಿವ ಈಶ್ವರಪ್ಪ ಕೂಡ ಬಂದು ಮತ ಯಾಚಿಸಿದ್ದರು. ಆದರೆ ಬಿಜೆಪಿ ಮತ ಗಳಿಕೆಯಲ್ಲಿ ಯಾವುದೇ ಕನ್ನ ಕೊರೆಯಲು ಇವರು ವಿಫಲರಾಗಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಇವರಿಗೆ ಪಕ್ಷ ಟಿಕೆಟ್‌ ನೀಡಿರಲಿಲ್ಲ. ವಿಧಾನ ಪರಿಷತ್ತಿಗೆ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ ರಘುಪತಿ ಭಟ್‌ಗೆ ಅದೂ ಸಿಕ್ಕಿರಲಿಲ್ಲ. ಇದೀಗ ಬಂಡಾಯವೂ ವಿಫಲವಾಗಿದೆ. ಹಿಜಾಬ್‌ ಮುಂತಾದ ಪ್ರಕರಣಗಳಲ್ಲಿ ಆಕ್ರಮಣಕಾರಿ ನಿಲುವು ತಾಳಿದ್ದ ರಘುಪತಿ ಭಟ್‌ ಅವರ ಈ ತೀವ್ರ ನಿಲುವೇ ಅವರನ್ನು ಬಿಜೆಪಿ ಕೈಬಿಡಲು ಕಾರಣವಾಯಿತಾ ಎಂಬ ಮಾತು ಇದೀಗ ಕೇಳಿ ಬರುತ್ತಿದೆ.

Continue Reading

ಕರ್ನಾಟಕ

Valmiki Corporation Scam: ಬಿ. ನಾಗೇಂದ್ರ ನೀಡಿದ ರಾಜೀನಾಮೆ ಅಂಗೀಕಾರ ಮಾಡಿದ ರಾಜ್ಯಪಾಲರು

Valmiki Corporation Scam: ಸಿಎಂ ಸಿದ್ದರಾಮಯ್ಯ ಶಿಫಾರಸಿನ ಮೇರೆಗೆ ಬಿ.ನಾಗೇಂದ್ರ ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅನುಮೋದಿಸಿದ್ದಾರೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ (Valmiki Corporation Scam) ಭ್ರಷ್ಟಾಚಾರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಯುವಜನ ಸೇವಾ, ಕ್ರೀಡಾ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ (B Nagendra) ಗುರುವಾರ ರಾಜೀನಾಮೆ ನೀಡಿದ್ದರು. ಇದೀಗ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕಾರ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಶಿಫಾರಸಿನ ಮೇರೆಗೆ ಬಿ.ನಾಗೇಂದ್ರ ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ರಾಜ್ಯಪಾಲರು ಅನುಮೋದಿಸಿದ್ದಾರೆ.

ಯುವಜನ ಸೇವೆ, ಕ್ರೀಡೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ಅವರು ನೀಡಿರುವ ರಾಜೀನಾಮೆಯನ್ನು ಅಂಗೀಕರಿಸಲು ಸಿಎಂ ಸಿದ್ದರಾಮಯ್ಯ ಅವರು ಶಿಫಾರಸು ಮಾಡಿದ್ದರು. ಹೀಗಾಗಿ ಭಾರತದ ಸಂವಿಧಾನದ 164 (1) ನೇ ವಿಧಿಯಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಅವರು, ನಾಗೇಂದ್ರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.

ಇದನ್ನೂ ಓದಿ | Kangana Ranaut: ಕಂಗನಾಗೆ ಕಪಾಳಮೋಕ್ಷ ಮಾಡಿದ್ದ ಕುಲ್ವಿಂದರ್‌ ಕೌರ್‌ ಅರೆಸ್ಟ್‌

ಸಿಎಂ ಸಿದ್ದರಾಮಯ್ಯಗೆ ಗುರುವಾರ ರಾಜೀನಾಮೆ ಪತ್ರ ಸಲ್ಲಿಸಿದ್ದ ಬಿ.ನಾಗೇಂದ್ರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ (Valmiki Corporation Scam) ಭ್ರಷ್ಟಾಚಾರ ಆರೋಪಗಳು ಕೇಳಿಬಂದಿದ್ದರಿಂದ ಯುವಜನ ಸೇವಾ, ಕ್ರೀಡಾ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ (B Nagendra) ಅಧಿಕೃತವಾಗಿ ರಾಜೀನಾಮೆ ನೀಡಿದ್ದರು. ಸಿಎಂ ಸಿದ್ದರಾಮಯ್ಯ ಅವರನ್ನು ಗುರುವಾರ ರಾತ್ರಿ ಭೇಟಿಯಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಇದರಿಂದ ಸಿದ್ದರಾಮಯ್ಯ ಸರ್ಕಾರದಲ್ಲಿ ಮೊದಲ ವಿಕೆಟ್‌ ಪತನವಾದಂತಾಗಿದೆ.

ಮುಖ್ಯಮಂತ್ರಿಗಳ ಕಾವೇರಿ ನಿವಾಸದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಮತ್ತು ಸಚಿವ ಜಮೀರ್ ಅಹಮದ್ ಖಾನ್ ಉಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ನಾಗೇಂದ್ರ ರಾಜೀನಾಮೆ ಪತ್ರ ನೀಡಿದ್ದರು. ರಾಜೀನಾಮೆ ಪತ್ರದಲ್ಲಿ ಒಂದೇ ಸಾಲು ಬರೆದಿರುವುದು ಕಂಡುಬಂದಿದ್ದು, ನನ್ನ ಸ್ವ ಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ನಾಗೇಂದ್ರ ಬರೆದಿದ್ದರು.

ಇದಕ್ಕೂ ಮೊದಲು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ನಾಗೇಂದ್ರ ಅವರು, ರಾಜೀನಾಮೆ ನೀಡುವುದು ನನ್ನ ಸ್ವ ನಿರ್ಧಾರವಾಗಿದೆ. ಇದಕ್ಕಾಗಿ ಯಾರೂ ಒತ್ತಡ ಹಾಕಿಲ್ಲ. ಆತ್ಮ ಸಾಕ್ಷಿಯಾಗಿ ರಾಜೀನಾಮೆ ನೀಡುತ್ತಿದ್ದೇನೆ. ನಾನು ಯಾವ ತಪ್ಪೂ ಮಾಡಿಲ್ಲ, ನಾನು ನಿರ್ದೋಷಿ. ಪ್ರಕರಣದಲ್ಲಿ ತನಿಖೆ ನಡೆದು ಸತ್ಯಾಂಶ ಜನರಿಗೆ ತಿಳಿಯಲಿದೆ ಎಂದು ತಿಳಿಸಿದ್ದರು.

ಕಳೆದ ಹತ್ತು ದಿನಗಳಿಂದ ವಾಲ್ಮೀಕಿ ನಿಗಮ ಅಕ್ರಮದ (Valmiki Corporation Scam) ಬಗ್ಗೆ ಮಾಧ್ಯಮಗಳಲ್ಲಿ ಚರ್ಚೆ ಆಗುತ್ತಿದೆ. ವಿಪಕ್ಷದವರು ಕಾಂಗ್ರೆಸ್ ಪಕ್ಷದ ವಿರುದ್ಧ ಮಾತನಾಡುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ನಿಗಮದ ಅಧಿಕಾರಿ ಕೂಡ ನನ್ನ ಹೆಸರನ್ನು ಎಲ್ಲೂ ಪ್ರಸ್ತಾಪ ಮಾಡಿಲ್ಲ. ನನಗೆ ಯಾರ ಒತ್ತಡಕ್ಕೂ ಮಣಿದಿಲ್ಲ, ನಿಸ್ಪಕ್ಷಪಾತವಾಗಿ ತನಿಖೆ ನಡೆಯಲು ಸಚಿವ ಸ್ಥಾನಕ್ಕೆ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡುತ್ತಿದ್ದೇನೆ. ಸರ್ಕಾರ ಮತ್ತು ಪಕ್ಷಕ್ಕೆ ಮುಜುಗರ ತರುವುದು ಬೇಡ ಎಂದು ಈ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದ್ದರು.

ಇದನ್ನೂ ಓದಿ | Lok Sabha Election 2024: ಈ 17 ಸಂಸದರು ಎನ್‌ಡಿಎಯಲ್ಲೂ ಇಲ್ಲ, ಇಂಡಿ ಕೂಟದಲ್ಲೂ ಇಲ್ಲ!

ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಯಕರು ರಾಜಭವನ ಚಲೋ ನಡೆಸಿ, ರಾಜ್ಯಪಾಲರಿಗೆ ಗುರುವಾರ ಬೆಳಗ್ಗೆ ಮನವಿ ಪತ್ರಸಲ್ಲಿಸಿದ್ದರು. ನಂತರ ಸಚಿವ ಸ್ವಯಂ ಪ್ರೇರಿತವಾಗಿಯೇ ರಾಜೀನಾಮೆ ನೀಡಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದರು. ನಂತರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಪತ್ರ ಸಲ್ಲಿಸಿದ್ದರು.

Continue Reading
Advertisement
Nitish Kumar
ದೇಶ1 min ago

Nitish Kumar: ಮುಂದಿನ ಸಲ ನಿಮ್ಮೆದುರು ಪ್ರತಿಪಕ್ಷಗಳ ಎಲ್ಲರಿಗೂ ಸೋಲು; ನಿತೀಶ್‌ ಮಾತಿಗೆ ನಕ್ಕ ಮೋದಿ!

World Environment Day
Latest2 mins ago

World Environment Day:ವಿಶ್ವ ಪರಿಸರ ದಿನವನ್ನು ವಿಶೇಷವಾಗಿ ಆಚರಿಸಿದ ‘ಕೇಳಚಂದ್ರ ಕಾಫಿ’

MLC Election Results
ಕರ್ನಾಟಕ3 mins ago

MLC Election Results: ಬೆಂಗಳೂರು ಪದವೀಧರ, ಆಗ್ನೇಯ ಶಿಕ್ಷಕರ ಕ್ಷೇತ್ರ; ಕಾಂಗ್ರೆಸ್ ಪಾಲಾದ ಎರಡೂ ಸ್ಥಾನ!

Karnataka weather Forecast
ಮಳೆ32 mins ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Narendra Modi
ದೇಶ32 mins ago

Narendra Modi: ರಾಷ್ಟ್ರಪತಿಯನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಮೋದಿ; ಈಗ ಹಂಗಾಮಿ ಪ್ರಧಾನಿ!

MLC Election
ಕರ್ನಾಟಕ46 mins ago

MLC Election Results: ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ ಕಾಂಗ್ರೆಸ್‌ ಅಭ್ಯರ್ಥಿ ಡಾ.ಚಂದ್ರಶೇಖರ್ ಪಾಟೀಲ್

Saree Fashion
ಫ್ಯಾಷನ್48 mins ago

Saree Fashion: ಸೆಲೆಬ್ರೆಟಿ ಲುಕ್‌ಗಾಗಿ ಬಂತು ಬಂಗಾರ ವರ್ಣದ ಸೀರೆಗಳು!

T20 World Cup
ಪ್ರಮುಖ ಸುದ್ದಿ1 hour ago

T20 World Cup : ಪಾಕಿಸ್ತಾನ ತಂಡಕ್ಕೆ ಕರಾಳ ದಿನ; ಮಾಜಿ ಆಟಗಾರರಿಂದ ಟೀಕೆ

World Food Safety Day
ಆರೋಗ್ಯ2 hours ago

World Food Safety Day: ಆಹಾರ ಸುರಕ್ಷತೆಗಾಗಿ ನಾವು ಏನು ಮಾಡಬಹುದು?

NDA Meeting
ದೇಶ2 hours ago

NDA Meeting: ಎನ್‌ಡಿಎ ಸಭೆಯಲ್ಲಿ ಮೋದಿಯ ಪಾದ ಮುಟ್ಟಿ ನಮಸ್ಕರಿಸಲು ಹೋದ ನಿತೀಶ್ ಕುಮಾರ್! ವಿಡಿಯೊ ನೋಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ32 mins ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌