ಪ್ರತಾಪ್‌ ಸಿಂಹ ಸಂದರ್ಶನ: ಭರವಸೆ ಈಡೇರಿಸಲು ಸಿದ್ದರಾಮಯ್ಯ ವಿಫಲ; ದೇಶದ ಭವ್ಯ ಭವಿಷ್ಯಕ್ಕಾಗಿ ಮತ್ತೊಮ್ಮೆ ಮೋದಿ ಗೆಲ್ಲಬೇಕು - Vistara News

ಕರ್ನಾಟಕ

ಪ್ರತಾಪ್‌ ಸಿಂಹ ಸಂದರ್ಶನ: ಭರವಸೆ ಈಡೇರಿಸಲು ಸಿದ್ದರಾಮಯ್ಯ ವಿಫಲ; ದೇಶದ ಭವ್ಯ ಭವಿಷ್ಯಕ್ಕಾಗಿ ಮತ್ತೊಮ್ಮೆ ಮೋದಿ ಗೆಲ್ಲಬೇಕು

Power Point with HPK: ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ವಿಫಲ, ಪಠ್ಯ ಪರಿಷ್ಕರಣೆ, ಮತಾಂತರ, ಗೋಹತ್ಯೆ ನಿಷೇಧ ಕಾಯ್ದೆ ವಾಪಸ್‌ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಸಂಸದ ಪ್ರತಾಪ್‌ ಸಿಂಹ ನೇರ ಮಾತುಗಳನ್ನು ಹೇಳಿದ್ದಾರೆ. ಅಲ್ಲದೆ, ನರೇಂದ್ರ ಮೋದಿ ಅವರು ಮುಂದಿನ ಚುನಾವಣೆಯಲ್ಲಿ ಏಕೆ ಗೆಲ್ಲಬೇಕು ಎಂದೂ ವಿವರಿಸಿದ್ದಾರೆ. ಅವರ ಸಂದರ್ಶನದ ಸಾರ ಇಲ್ಲಿದೆ.

VISTARANEWS.COM


on

Power Point with HPK MP Pratap Simha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚುನಾವಣೆಗೆ ಮೊದಲು ಘೋಷಣೆ ಮಾಡಿದ್ದ ಗ್ಯಾರಂಟಿಗಳನ್ನು ಈಡೇರಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಫಲರಾಗಿದ್ದಾರೆ. ದೇಶದ ಭವ್ಯ ಭವಿಷ್ಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಗೆಲ್ಲಬೇಕು. ಮೋದಿ ವಿರುದ್ಧ ಭಾರತದಲ್ಲಿ ಮಾತ್ರವಲ್ಲ, ಅಂತಾರಾಷ್ಟ್ರೀಯ ಮಟ್ಟದಲ್ಲೂ ವ್ಯವಸ್ಥಿತ ಪಿತೂರಿ ನಡೆಯುತ್ತಿದೆ. ಮುಂಬರುವ ಚುನಾವಣೆಯಲ್ಲಿ ಮೋದಿಯವರನ್ನು ಗೆಲ್ಲಿಸುವ ಮೂಲಕ ಭಾರತವನ್ನು ವಿಶ್ವ ಗುರು ಮಾಡುವ ಕಾರ್ಯಕ್ಕೆ ಎಲ್ಲರೂ ಮುಂದಾಗಬೇಕು ಎಂದು ಸಂಸದ ಪ್ರತಾಪ್‌ ಸಿಂಹ ಅವರು ಪವರ್‌ ಪಾಯಿಂಟ್‌ ವಿಥ್‌ ಎಚ್‌ಪಿಕೆ (Power Point with HPK) ಸಂದರ್ಶನದಲ್ಲಿ ಹೇಳಿದರು.

ವಿಸ್ತಾರ ನ್ಯೂಸ್‌ ಪ್ರಧಾನ ಸಂಪಾದಕ ಹರಿಪ್ರಕಾಶ್‌ ಕೋಣೆಮನೆ ಅವರು ನಡೆಸಿಕೊಡುವ “ಪವರ್‌ ಪಾಯಿಂಟ್‌ ವಿತ್‌ ಎಚ್‌ಪಿಕೆ” ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಸಂಸದ ಪ್ರತಾಪ್‌ ಸಿಂಹ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ನಿರ್ಧಾರಗಳು, ಗ್ಯಾರಂಟಿ ಯೋಜನೆಗಳು, ಪಠ್ಯಪರಿಷ್ಕರಣೆ, ದೇಶದಲ್ಲಿ ನರೇಂದ್ರ ಮೋದಿ ವಿರುದ್ಧ ನಡೆಯುತ್ತಿರುವ ವ್ಯವಸ್ಥಿತ ಪಿತೂರಿ, ಮತಾಂತರ, ಗೋ ಹತ್ಯೆ ನಿಷೇಧ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮನದಾಳದ ಮಾತುಗಳನ್ನು ಆಡಿದ್ದಾರೆ. ಅವರ ಸಂದರ್ಶನದ ಸಾರ ಇಲ್ಲಿದೆ.

ಸಿದ್ದರಾಮಯ್ಯ ಹೇಳಿದಂತೆ ಅಧಿಕಾರ ಬಿಟ್ಟು ಹೋಗಲಿ

ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಅಧಿಕಾರಕ್ಕೆ ಬಂದು ಇನ್ನೂ ಒಂದು ತಿಂಗಳಾಗಿದೆ. ಈಗಲೇ ನೀವು ಅವರ ವಿರುದ್ಧ ಆಕ್ರಮಣ ಪ್ರಾರಂಭಿಸಿದ್ದೀರಿ, ಸ್ವಲ್ಪ ಕಾಲಾವಕಾಶವನ್ನು ಕೊಡಬೇಕು ಎಂದು ನಿಮಗೆ ಅನ್ನಿಸುವುದಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರತಾಪ್‌ ಸಿಂಹ, ವಿಧಾನಸಭಾ ಚುನಾವಣೆ ನಡೆಯುವ ಆರು ತಿಂಗಳ ಹಿಂದಿನಿಂದಲೇ ಕಾಂಗ್ರೆಸ್‌ನವರು ಒಂದೊಂದೇ ಗ್ಯಾರಂಟಿಗಳನ್ನು ಘೋಷಣೆ ಮಾಡಿಕೊಳ್ಳುತ್ತಾ ಬಂದರು. ಸಿಕ್ಕ ಸಿಕ್ಕ ವೇದಿಕೆಯಲ್ಲೆಲ್ಲ ಸಿದ್ದರಾಮಯ್ಯ ಅವರು, ” ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿಯೇ ಘೋಷಣೆ ಮಾಡಿದ ಎಲ್ಲ ಗ್ಯಾರಂಟಿಗಳನ್ನು ಜಾರಿಗೆ ತರುವುದಾಗಿ ಘಂಟಾಘೋಷವಾಗಿ ಹೇಳಿಕೆ ನೀಡಿದ್ದರು. ಹೀಗಾಗಿ ಅವರ ಐದು ಗ್ಯಾರಂಟಿಗಳನ್ನು ನಂಬಿಕೊಂಡು ಜನ ಮತ ಚಲಾವಣೆ ಮಾಡಿದ್ದಾರೆ. ಮೇ 20ಕ್ಕೆ ಸಿದ್ದರಾಮಯ್ಯ ಅವರು ಪ್ರಮಾಣ ವಚನವನ್ನು ಸ್ವೀಕಾರ ಮಾಡಿದರು. ಪ್ರಮಾಣ ವಚನ ಸ್ವೀಕಾರ ಮಾಡಿ ಒಂದು ಕ್ಯಾಬಿನೆಟ್‌ ಸಭೆಯನ್ನೂ ಮಾಡಿದರು. ಅಂದು ಐದು ಗ್ಯಾರಂಟಿಯನ್ನು ಜಾರಿಗೆ ತರುವುದಾಗಿ ಸರ್ಕಾರಿ ಆದೇಶವನ್ನು ಮಾಡಿದರೆ ಹೊರತು 24 ಗಂಟೆಯೊಳಗೆ ಅನುಷ್ಠಾನ ಮಾಡಿದರಾ ಎಂದು ಪ್ರಶ್ನೆ ಮಾಡಿದರು.

ಗ್ಯಾರಂಟಿ ಬಗ್ಗೆ ಸಂಸದ ಪ್ರತಾಪ್‌ ಸಿಂಹ ಗುಡುಗಿದ್ದು ಹೀಗೆ; ಇಲ್ಲಿದೆ ನೋಡಿ ವಿಡಿಯೊ

ಇದನ್ನೂ ಓದಿ: Siddaramaiah: ಅಚ್ಛೇ ದಿನ್‌ ಸುಳ್ಳಾಗಿದೆ, ಮೋದಿ ಹವಾ ಡೌನ್ ಆಗಿದೆ: ಮಹಾರಾಷ್ಟ್ರದಲ್ಲಿ ಕತ್ತಿ ಝಳಪಿಸಿದ ಸಿದ್ದರಾಮಯ್ಯ

ನಾವು ಅಧಿಕಾರಕ್ಕೆ ಬಂದು 24 ಗಂಟೆಯಲ್ಲಿ ಗ್ಯಾರಂಟಿಗಳನ್ನು ಅನುಷ್ಠಾನ ಮಾಡುವುದಿಲ್ಲ ಎಂದಾದರೆ ಒಂದು ಕ್ಷಣವೂ ಖರ್ಚಿಯಲ್ಲಿ ಕೂರುವುದಿಲ್ಲ ಎಂದು ಸಿದ್ದರಾಮಯ್ಯ ಅವರೇ ಹೇಳಿಕೊಂಡಿದ್ದರು. ಈಗ ಒಂದು ತಿಂಗಳಾಗಿ ಹೋಯಿತು. ಹಾಗಾದರೆ ನಾವು ಈಗಲೂ ಮಾತನಾಡಬಾರದಾ? ನೀವು ಹೇಳಿದ ಹಾಗೆ ನಡೆದುಕೊಳ್ಳಿ ಅಂದಷ್ಟೇ ನಾವು ಕೇಳುತ್ತಿದ್ದೇವೆ ಎಂದು ಪ್ರತಾಪ್‌ ಸಿಂಹ ಹೇಳಿದರು.

ಏ ಮಹದೇವಪ್ಪ ನಿಂಗೂ ಕೊಡ್ತೇನೆ ಕಣಯ್ಯಾ ಅಂದವರು ಈಗೇಕೆ ಕೊಟ್ಟಿಲ್ಲ?

ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಅವರು ಚುನಾವಣೆಗೆ ಮುಂಚೆ ಪ್ರಚಾರ ಭಾಷಣದಲ್ಲಿ ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಶಕ್ತಿ ಯೋಜನೆ, ಯುವ ನಿಧಿಯಾಗಲಿ ಯಾವುದರ ಬಗ್ಗೆಯಾದರೂ ಕಂಡೀಷನ್‌ ಬಗ್ಗೆ ಮಾತನಾಡಿದ್ದರಾ? ಆಗ ಎಲ್ಲರಿಗೂ ಕೊಡುತ್ತೇವೆ ಎಂದು ಹೇಳಿದ್ದರು. ಇನ್ನು ಸಿದ್ದರಾಮಯ್ಯ ಅವರು ನನ್ನ ಹೆಂಡರಿಗೂ ಕೊಡುತ್ತೇನೆ ಎಂದು ಹೇಳಿದ್ದರು. ಏ ಮಹದೇವಪ್ಪ ನಿಂಗೂ ಕೊಡ್ತೇನೆ ಕಣಯ್ಯಾ ಅಂತ ಹೇಳಿದ್ದರು. ಈಗ ಯಾಕೆ ಕೊಟ್ಟಿಲ್ಲ? ಇದನ್ನು ನಾವೀಗ ಪ್ರಶ್ನೆ ಮಾಡುತ್ತಿದ್ದೇವೆ. ಜನರು ನಮ್ಮನ್ನು ವಿರೋಧ ಪಕ್ಷದ ಸ್ಥಾನದಲ್ಲಿ ಕೂರಿಸಿರುವುದರಿಂದ ನಾವೀಗ ಜನರ ಪರವಾಗಿ ಪ್ರಶ್ನೆ ಮಾಡುತ್ತಿದ್ದೇವೆ ಎಂದು ಪ್ರತಾಪ್‌ ಹೇಳಿದರು.

ಹಿಂದು ವಿರೋಧಿ ಸರ್ಕಾರ ಎಂದ ಪ್ರತಾಪ್‌ ಸಿಂಹ

ಧರ್ಮಾಂಧತೆ ಇದೆ ಎಂಬುದಾಗಿ ಅರ್ಥವಲ್ಲವೇ?

ಸಿದ್ದರಾಮಯ್ಯ ಅವರ ಸರ್ಕಾರವನ್ನು ಹಿಂದು ವಿರೋಧಿ ಸರ್ಕಾರ ಎಂದು ನಾನು ಹೇಳಲು ಕಾರಣವೂ ಇದೆ. ನಾನು ಮೈಸೂರು ಹಾಗೂ ಕೊಡಗಿನ ಸಂಸದನಾಗಿದ್ದೇನೆ. ಇನ್ನು ಯಾವ ಮುಸ್ಲಿಂ ವ್ಯಕ್ತಿಯೂ ಬಂದು ಟಿಪ್ಪು ಜಯಂತಿಯನ್ನು ಮಾಡಿ ಎಂದು ಅವರನ್ನು ಕೇಳಿರಲಿಲ್ಲ. ಮುಸ್ಲಿಮರಲ್ಲಿ ಅಲ್ಲಾಹುವನ್ನು ಬಿಟ್ಟರೆ ಬೇರೆ ಯಾರೂ ಸಹ ಪೂಜೆಗೆ ಅರ್ಹರಲ್ಲ. ಅಲ್ಲಿ ಸಂಗೀತ ಕೇಳುವುದು ಸಹ ನಿಷಿದ್ಧ. ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವಂತೆ ಇಲ್ಲ. ಮುಸ್ಲಿಮರು ಕೇಳದೇ ಇದ್ದರೂ ಇವರು ಯಾಕೆ ಟಿಪ್ಪು ಜಯಂತಿಯನ್ನು ಮಾಡಲು ಮುಂದಾದರು? ಅವರ ಮನಸ್ಥಿತಿ ಏನು ಎಂದು ಪ್ರತಾಪ್‌ ಸಿಂಹ ಪ್ರಶ್ನೆ ಮಾಡಿದರು.

ಈಗ ವಿದ್ಯುತ್‌ ಬಿಲ್‌ ಅನ್ನು ಹೆಚ್ಚಳ ಮಾಡಲಾಗಿದೆ. ಇದರ ಬಗ್ಗೆ ಕೇಳಿದರೆ ಬಿಜೆಪಿ ಸರ್ಕಾರ ಮಾಡಿದ್ದು ಎಂದು ಬೊಟ್ಟು ಮಾಡಲಾಗುತ್ತಿದೆ. ಆದರೆ, ಇದನ್ನು ಮಾಡಿರುವುದು ಕೆಇಆರ್‌ಸಿ ಆಗಿದೆ. ಅದೊಂದು ಸ್ವತಂತ್ರ ಸಂಸ್ಥೆಯಾಗಿದ್ದು, ಚುನಾವಣೆ ಮುಗಿದ ಬಳಿಕ ಅದು ನಿರ್ಧಾರವನ್ನು ತೆಗೆದುಕೊಂಡಿದೆ. ಅದು ಏನೇ ಆದೇಶ ಮಾಡಿದ್ದರೂ ಸಹ ಇವರು ಮುಖ್ಯಮಂತ್ರಿಯಾಗಿ ಅಧಿಕಾರವನ್ನು ಪಡೆದ ನಂತರ ಸರ್ಕಾರಿ ಆದೇಶವನ್ನು ಹೊರಡಿಸಬಹುದಿತ್ತು. ಆದರೆ, ನಮ್ಮ ಪ್ರಶ್ನೆ ಇಷ್ಟೇ. ಕ್ರಿಶ್ಚಿಯನ್ನರು ಕೇಳಿದ ಕೂಡಲೇ ಮತಾಂತರ ನಿಷೇಧ ಕಾಯ್ದೆಯನ್ನು ತೆಗೆದು ಹಾಕುತ್ತಾರೆ. ಮುಸ್ಲಿಮರು ಕೇಳಿದ ಕೂಡಲೇ ಗೋಹತ್ಯೆ ನಿಷೇಧ ಬಿಲ್‌ ಅನ್ನು ಕಿತ್ತು ಹಾಕುತ್ತಾರೆ. ಆದರೆ, ನಮ್ಮ ಹೊಟ್ಟೆಗೆ ಪೆಟ್ಟು ಬೀಳುತ್ತಿದೆ ಎಂದು ಸಾಮಾನ್ಯ ಜನರು ಕೇಳುತ್ತಾ ಇದ್ದರೂ ಇವರು ಅದಕ್ಕೆ ತಡೆ ನೀಡುವುದಿಲ್ಲ ಅಂದರೆ ಏನರ್ಥ? ಅಂದರೆ ಇವರಲ್ಲಿ ಧರ್ಮಾಂಧತೆ ಇದೆ ಎಂಬುದಾಗಿ ಅರ್ಥವಲ್ಲವೇ ಎಂದು ಪ್ರತಾಪ್‌ ಸಿಂಹ ಪ್ರಶ್ನೆ ಮಾಡಿದರು.

ಕೊಡುಗೆಯ ಆಮಿಷ ಇದು…

ಬಿಜೆಪಿಯವರು ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ, ಹಿಜಾಬ್‌ ನಿಷೇಧ ಮಾಡಿದಿರಿ. ಆದರೆ, ಕಾಂಗ್ರೆಸ್‌ನವರು ಅಧಿಕಾರಕ್ಕೆ ಬಂದರೆ ಇವೆಲ್ಲವನ್ನೂ ವಾಪಸ್‌ ಪಡೆಯುವುದಾಗಿ ಹೇಳಿಕೊಂಡಿತ್ತು. ಜನರೂ ಸಹ ಅವರಿಗೆ ಮತ ಚಲಾವಣೆ ಮಾಡಿದರು. ಹಾಗಾದರೆ ಜನರಿಗೆ ಈ ಯಾವುದೂ ಆಸಕ್ತಿ ಇಲ್ಲವೇ ಎಂದು ನಾವು ಅರ್ಥೈಸಬಹುದಾ ಎಂಬ ಹರಿಪ್ರಕಾಶ್‌ ಕೋಣೆಮನೆ ಅವರ ಪ್ರಶ್ನೆಗೆ ಉತ್ತರಿಸಿದ ಸಂಸದ ಪ್ರತಾಪ್‌ ಸಿಂಹ, ದೆಹಲಿಯಲ್ಲಿ ಆಪ್‌ನ ಅರವಿಂದ ಕೇಜ್ರಿವಾಲ್‌ ಅಧಿಕಾರಕ್ಕೆ ಬಂದಿದ್ದೇ ಈ ಉಚಿತ ಘೋಷಣೆಗಳಿಂದಾಗಿದೆ. ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಕ್ಷ ಅಧಿಕಾರಕ್ಕೆ ಬರಲು ಯಾವ ಕಾರಣವೂ ಇರಲಿಲ್ಲ. ಆದರೆ, ಅಲ್ಲಿ ಸಹ ಇಲ್ಲಿನ ಗೃಹ ಲಕ್ಷ್ಮಿ ಮಾದರಿ ಒಂದು ಸಾವಿರ ರೂಪಾಯಿಯನ್ನು ಮಹಿಳೆಯರಿಗೆ ಕೊಡುವುದಾಗಿ ಘೋಷಿಸಿದರು. ಆದರೆ, ಇದುವರೆಗೂ ಅದನ್ನು ಕೊಡಲು ಆಗಲೇ ಇಲ್ಲ. ರಾಜಸ್ಥಾನ, ಹಿಮಾಚಲ ಹಾಗೂ ತಮಿಳುನಾಡಿನಲ್ಲಿಯೂ ಇದೇ ರೀತಿ ಆಗಿದೆ. ಜನರೂ ಸಹ ಈಗ ಟ್ರಾನ್ಸಾಕ್ಷನಲ್‌ (ಕೊಡು ಕೊಳ್ಳುವಿಕೆ ವ್ಯವಹಾರ) ಆಗಿದ್ದಾರೆ. “ನಿನಗೆ ನಾನು ಮತ ಹಾಕಬೇಕಾದರೆ, ನೀನು ನನಗೆ ಏನು ಕೊಡುತ್ತೀಯಾ?” ಎಂಬುದಾಗಿ ಕೇಳುತ್ತಿದ್ದಾರೆ. ನನಗೆ ಯಾರು ಹೆಚ್ಚು ಕೊಡುತ್ತಾರೋ ಅವರಿಗೆ ನನ್ನ ಮತ ಎಂಬಂತೆ ಆಗಿದೆ. ಇಲ್ಲಿ ಜಾತಿ, ಧರ್ಮ ಯಾವುದೂ ಬರುವುದಿಲ್ಲ ಎಂದು ಪ್ರತಾಪ್‌ ಸಿಂಹ ಚುನಾವಣೆ ನಡೆಯುತ್ತಿರುವ ರೀತಿಯನ್ನು ವಿಶ್ಲೇಷಿಸಿದರು.

ಮತಾಂತರ ವಿರೋಧಿಸಲು ಕಾರಣ ಇದೆ

ಮತಾಂತರ ನಿಷೇಧ ಕಾಯ್ದೆ ವಿಚಾರಕ್ಕೆ ಬರುವುದಾದರೆ, ಮತಾಂತರವನ್ನು ನಾವು ವಿರೋಧ ಮಾಡುವುದಕ್ಕೂ ಕಾರಣ ಇದೆ. ಜಗತ್ತಿನಾದ್ಯಂತ ನೂರಕ್ಕೂ ಹೆಚ್ಚು ಕ್ರಿಶ್ಚಿಯನ್‌ ರಾಷ್ಟ್ರಗಳಿವೆ. ಸುಮಾರು 53-54ರಷ್ಟು ಇಸ್ಲಾಮಿಕ್‌ ರಾಷ್ಟ್ರಗಳಿವೆ. ಭಾರತವೊಂದೇ ಈಗ ಹಿಂದು ರಾಷ್ಟ್ರವಾಗಿ ಉಳಿದುಕೊಂಡಿದೆ. ನಾವು ನೆಲ, ಜಲ, ಕಲ್ಲು, ಮಣ್ಣುಗಳನ್ನು ಗೌರವಿಸಿ, ಪೂಜಿಸುತ್ತೇವೆ. ಹೀಗಾಗಿ ಇದನ್ನು ಉಳಿಸಲು ನಾವು ಹೋರಾಟ ಮಾಡುತ್ತಿದ್ದೇವೆ. ಇರಾನ್‌, ಇರಾಕ್‌, ರೋಮ್‌, ಗ್ರೀಕ್‌ನಲ್ಲಿ ಇಂದು ಏನಾಗಿದೆ ಎಂಬುದನ್ನು ನಾವು ನೋಡಿದ್ದೇವೆ. ಮತಾಂತರ ಎಂದು ಹೇಳಿಕೊಂಡು ಬೇರೆ ಧರ್ಮಗಳನ್ನು ಮುಗಿಸಿಹಾಕಿ ಸಂಖ್ಯಾಬಲವನ್ನು ಹೆಚ್ಚು ಮಾಡಿಕೊಳ್ಳುತ್ತಾ ಹೋದರೆ ವಿವಿಧತೆಯಲ್ಲಿ ಏಕತೆ ಎಂಬ ಪರಿಕಲ್ಪನೆ ಎಲ್ಲಿ ಉಳಿಯುತ್ತದೆ? ಹೀಗಾಗಿ ಒಂದು ಬುಡಕಟ್ಟು ಸಮುದಾಯದ ಜನರು ಸೇರಿದಂತೆ ಸಂಸ್ಕೃತಿ, ಜಾನಪದ, ಕಲೆ, ಸಾಹಿತ್ಯ ಇತ್ಯಾದಿ ಅಂಶಗಳು ಉಳಿಯಬೇಕು ಎಂದು ಪ್ರತಾಪ್‌ ಸಿಂಹ ಹೇಳಿದರು.

ಪಠ್ಯದ ಬಗ್ಗೆ ಪ್ರತಾಪ್‌ ಹೇಳಿದ್ದೇನು?

ನೆಹರು ಯಾವತ್ತಾದರೂ ಬ್ರಿಟಿಷರ ವಿರುದ್ಧ ಒಂದು ಹುಲ್ಲು ಕಡ್ಡಿಯನ್ನು ಎತ್ತಿದ್ದರೇ?

ಕಾಂಗ್ರೆಸ್‌ ಪಠ್ಯಪುಸ್ತಕ ಪರಿಷ್ಕರಣೆ ನೀತಿ ಬಗ್ಗೆ ಕಿಡಿಕಾರಿದ ಪ್ರತಾಪ್‌ ಸಿಂಹ, ಕಾಂಗ್ರೆಸ್‌ನವರು ನೆಹರು ಪಾಠವನ್ನು ಹಾಕಿ ಸಾವರ್ಕರ್‌ ಪಾಠವನ್ನು ತೆಗೆಯುತ್ತಿರುವುದು ನನಗೆ ಆಶ್ಚರ್ಯ ತಂದಿದೆ. ಇದರ ಲಾಜಿಕ್‌ ಏನು? ನೆಹರು ಅವರಿಗೆ ಸ್ವಾತಂತ್ರ್ಯ ಎಂದರೆ ಏನೆಂಬುದು ಗೊತ್ತಾಗುವುದರೊಳಗೆ ಸಾವರ್ಕರ್‌ ಅವರು ಎರಡೆರಡು ಬಾರಿ ಜೈಲುವಾಸವನ್ನು ಅನುಭವಿಸಿದ್ದರು. ನೆಹರು ಮೊದಲ ಬಾರಿಗೆ ಜೈಲಿಗೆ ಹೋಗಿದ್ದೇ 1923ರಲ್ಲಾಗಿದೆ. ಅಂದರೆ ಸಾವರ್ಕರ್‌ ಒಂದು ಜೀವಾವಧಿಯನ್ನು ಮುಗಿಸಿದ ಬಳಿಕ ಇವರು ಜೈಲಿಗೆ ಹೋಗುತ್ತಾರೆ. ಅವರು ಜೈಲಿಗೆ ಹೋಗಿ ಒಂದು ವಾರದೊಳಗೆ ಅವರ ಅಪ್ಪ ಮೋತಿಲಾಲ್‌ ಅವರು ಹುಡುಕಿಕೊಂಡು ಹೋಗಿದ್ದಲ್ಲದೆ, ಇನ್ಯಾವತ್ತೂ ನಬಾ ಕಡೆಗೆ ತಲೆ ಹಾಕುವುದಿಲ್ಲ, ಬ್ರಿಟಿಷರ ವಿರುದ್ಧ ಧ್ವನಿ ಎತ್ತುವುದಿಲ್ಲ ಎಂದು ಹೇಳಿ ನೆಹರು ಕಡೆಯಿಂದ ಮುಚ್ಚಳಿಕೆ ಬರೆಸಿಕೊಂಡು ಬರುತ್ತಾರೆ. ನೆಹರು ತಮ್ಮ ಜೀವನದಲ್ಲಿ ಯಾವತ್ತಾದರೂ ಬ್ರಿಟಿಷರ ವಿರುದ್ಧ ಒಂದು ಹುಲ್ಲು ಕಟ್ಟಿಯನ್ನು ಎತ್ತಿದ್ದರೇ? ಎಂದು ಪ್ರತಾಪ್‌ ಸಿಂಹ ಪ್ರಶ್ನೆ ಮಾಡಿದರು.

ಇನ್ನು ಸಾವರ್ಕರ್‌ ಅವರನ್ನು ಅಂಬೇಡ್ಕರ್‌ ಅವರೇ ಹೊಗಳಿದ್ದಾರೆ. ಇಬ್ಬರ ಪರಸ್ಪರ ಭೇಟಿ ಸಹ ಆಗಿದೆ. ಅಂಬೇಡ್ಕರ್‌ ಅವರನ್ನೇ ವಿರೋಧಿಸುವ, ಅವರ ವಿರುದ್ಧವೇ ಅಭ್ಯರ್ಥಿ ಹಾಕಿ ಸೋಲಿಸುವ ಕಾಂಗ್ರೆಸ್‌ನವರು ಯಾವತ್ತೂ ದೇಶಕ್ಕಾಗಿ ಕೆಲಸ ಮಾಡಲ್ಲ, ದೇಶ ಪ್ರೇಮಿಗಳನ್ನು ಸಹಿಸುವುದಿಲ್ಲ ಎಂದು ಪ್ರತಾಪ್‌ ಸಿಂಹ ಹೇಳಿದರು.

ಮತ್ತೆ ಟಿಪ್ಪು ಜಯಂತಿ ಮಾಡಲು ಹೊರಟರೆ ರೋಡಿಗಳಿಯುವೆ

ಈ ಬಾರಿ ಏನಾದರೂ ಸಿದ್ದರಾಮಯ್ಯ ಸರ್ಕಾರ ಮತ್ತೆ ಟಿಪ್ಪು ಜಯಂತಿ ಮಾಡಲು ಮುಂದಾದರೆ ನಾನು ಖಂಡಿತವಾಗಿಯೂ ರಸ್ತೆಗೆ ಇಳಿಯುತ್ತೇನೆ. ಅದನ್ನು ತಡೆದೇ ತಡೆಯುತ್ತೇನೆ ಎಂದು ಪ್ರತಾಪ್‌ ಸಿಂಹ ಹೇಳಿದರು.

ಸ್ಪೀಕರ್ ಯು.ಟಿ. ಖಾದರ್‌ ನಿರ್ಧಾರ ಒಳ್ಳೆಯದಿತ್ತು

ನೂತನ ಶಾಸಕರಿಗೆ ತರಬೇತಿ ಕೊಡಲು ಸ್ಪೀಕರ್‌ ಯು.ಟಿ. ಖಾದರ್‌ ಆಹ್ವಾನ ಮಾಡಿರುವ ಮೂವರು ತಜ್ಞರಾದ ಡಾ. ವೀರೇಂದ್ರ ಹೆಗ್ಗಡೆ, ಶ್ರೀ ಶ್ರೀ ರವಿಶಂಕರ್‌ ಗುರೂಜಿ, ಡಾ. ಗುರುರಾಜ ಕರ್ಜಗಿ ಅವರನ್ನು ಕರೆಯಬಾರದು ಎಂದು ಬುದ್ಧಿಜೀವಿಗಳು ಮಾಡುವ ಆರೋಪಕ್ಕೆ, ತಕ್ಕಂತೆ ಸರ್ಕಾರ ನಡೆದುಕೊಳ್ಳುತ್ತಿರುವ ರೀತಿ ಬಗ್ಗೆ ಪ್ರತಾಪ್‌ ಸಿಂಹ ಆಕ್ಷೇಪ ವ್ಯಕ್ತಪಡಿಸಿದರು. ಧರ್ಮಸ್ಥಳ ಧರ್ಮಾಧಿಕಾರಿ ಆಗಿರುವ ಡಾ. ವೀರೇಂದ್ರ ಹೆಗ್ಗಡೆಯವರು ಸ್ವಸಹಾಯ ಸಂಘವನ್ನು ಹುಟ್ಟುಹಾಕಿ ಗ್ರಾಮೀಣ ಅಭಿವೃದ್ಧಿಯಲ್ಲಿ ದೊಡ್ಡ ಕ್ರಾಂತಿಯನ್ನೇ ಮಾಡಿದ್ದಾರೆ. ಸರ್ಕಾರ ಮಾಡಲು ಸಾಧ್ಯವಾಗದಿರುವುದನ್ನು ಅವರು ಮಾಡಿದ್ದಾರೆ. ಪಂಚಾಯತ್‌ ರಾಜ್‌ ವ್ಯವಸ್ಥೆ ಮತ್ತು ಗ್ರಾಮೀಣಾಭಿವೃದ್ಧಿ ವ್ಯವಸ್ಥೆಯನ್ನು ಸಮರ್ಪಕವಾಗಿ ಬಳಸಿಕೊಂಡವರು ವೀರೇಂದ್ರ ಹೆಗ್ಗಡೆಯವರಾಗಿದ್ದಾರೆ. ಶಾಲೆಗಳನ್ನು ಉದ್ದಾರ ಮಾಡುವುದು, ದೇವಸ್ಥಾನಗಳ ಜೀರ್ಣೋದ್ಧಾರ ಹೇಗೆಂಬ ಬಗ್ಗೆ ಅವರಿಂದ ಕಲಿಯಬಹುದು. ಇವರಿಂದ ವೈದ್ಯಕೀಯ ಕ್ಷೇತ್ರದಲ್ಲಿಯೂ ಅವರ ಸಾಧನೆ ಬಹಳಷ್ಟು ಇದೆ. ಶಿಕ್ಷಣ, ಗ್ರಾಮೀಣಾಭಿವೃದ್ಧಿ, ಗ್ರಾಮೀಣ ಮಹಿಳೆಯರ ಸಶಕ್ತೀಕರಣ ಬಗ್ಗೆ ಪಾಠ ಹೇಳಿಸಿಕೊಳ್ಳಬಹುದು ಎಂದು ಹೇಳಿದರು. ‌

ಇದನ್ನೂ ಓದಿ: Siddaramaiah: ಅಚ್ಛೇ ದಿನ್‌ ಸುಳ್ಳಾಗಿದೆ, ಮೋದಿ ಹವಾ ಡೌನ್ ಆಗಿದೆ: ಮಹಾರಾಷ್ಟ್ರದಲ್ಲಿ ಕತ್ತಿ ಝಳಪಿಸಿದ ಸಿದ್ದರಾಮಯ್ಯ

ಮೈಸೂರಿನ ವಿದ್ಯಾರಣ್ಯ ಪುರಂನಲ್ಲಿ ಕಸವನ್ನು ಸುರಿಯುವ ಜಾಗದಿಂದ ಕೆಟ್ಟ ವಾಸನೆ ಬರುತ್ತದೆ. ಇಲ್ಲಿ ಬಯೋ ಎಂಜನ್ಶನ್‌ ಸ್ಪ್ರೇ ಮಾಡಿ ವಾಸನೆಯನ್ನು ಹೋಗಿಸಬಹದು ಎಂದು ಹೇಳಿಕೊಟ್ಟವರು ರವಿಶಂಕರ್‌ ಗುರೂಜಿ ಅವರು. ಇಂಥವರಿಂದ ಕಲಿಯುವ ಅಂಶ ಇಲ್ಲವೇ? ಎಂದು ಪ್ರತಾಪ್‌ ಸಿಂಹ ಪ್ರಶ್ನೆ ಮಾಡಿದರು. ಗುರುರಾಜ ಕರ್ಜಗಿ ಅವರ ನೀತಿ ಪಾಠ, ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬಹುದು. ಇದು ಯು.ಟಿ. ಖಾದರ್‌ ಅವರ ಒಳ್ಳೆಯ ನಿರ್ಧಾರವಾಗಿದೆ ಎಂದು ಪ್ರತಾಪ್‌ ಸಿಂಹ ತಿಳಿಸಿದರು.

ಜನರಿಗೆ ಮನವರಿಕೆ ಮಾಡುವಲ್ಲಿ ನಾವು ವಿಫಲ

ಬಿಜೆಪಿಗೆ ಕಳೆದ ಚುನಾವಣೆಯಲ್ಲಿ ಶೇಕಡಾ 34ರಷ್ಟು ಪಡೆದು 110 ಸೀಟನ್ನು ಪಡೆದಿದ್ದೆವು. ಆದರೆ, ಈಗ ಕಳೆದುಕೊಂಡಿರುವುದು ಶೇ. 45 ಮತಗಳನ್ನಷ್ಟೇ. ಕೋವಿಡ್‌ ವೇಳೆ ವ್ಯಾಕ್ಸಿನೇಶನ್‌ ಸೇರಿದಂತೆ ಇನ್ನಿತರ ಕೆಲಸಗಳನ್ನು ಮಾಡಿದ್ದೇವೆ. ಇದನ್ನು ನಾವು ಜನರಿಗೆ ಮನವರಿಕೆ ಮಾಡುವಲ್ಲಿ ವಿಫಲವಾದೆವು. ಇದೇ ವೇಳೆ ಜೆಡಿಎಸ್‌ ಸಹ ಹೀನಾಯವಾಗಿ ಕುಸಿತ ಕಂಡಿದ್ದೂ ಸಹ ನಮ್ಮ ಸೋಲಿಗೆ ಕಾರಣವಾಯಿತು ಎಂದು ಪ್ರತಾಪ್‌ ಸಿಂಹ ವಿಧಾನಸಭಾ ಸೋಲನ್ನು ವಿಶ್ಲೇಷಣೆ ಮಾಡಿದರು.

ಇಂದು ಸೋಷಿಯಲ್‌ ಮೀಡಿಯಾ ನೋಡುತ್ತಿದ್ದರೆ ಮತೀಯ ಭಾವನೆ ಮುಸ್ಲಿಮರಲ್ಲಿ ಕಂಡು ಬರುತ್ತಿದೆ. ಕಾಂಗ್ರೆಸ್‌ ಗೆದ್ದಿದ್ದರಿಂದ ಮುಸ್ಲಿಮರು ಗೆದ್ದಿರುವಂತೆ ಭಾವನೆ ಮೂಡಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಹಿಜಾಬ್‌ ವಿರೋಧಕ್ಕೆ ಕಾರಣವಿದೆ

ಶಾಲೆಗೆ ಬರುವ ಮಕ್ಕಳು ಹಿಜಾಬ್‌ ಧರಿಸುವುದರಿಂದ ಬಿಜೆಪಿಗೆ ಯಾವುದೇ ಸಮಸ್ಯೆ ಇಲ್ಲ. ಆದರೆ, ಎಲ್ಲರೂ ಒಂದೇ ಎಂಬ ಭಾವನೆ ಬರಬೇಕು, ನಾವೆಲ್ಲರೂ ಸಮಾನರು ಎಂಬ ಭಾವನೆ ಬರಬೇಕು ಎಂಬ ನಿಟ್ಟಿನಲ್ಲಿ ನಾವು ಹಿಜಾಬ್‌ ಅನ್ನು ವಿರೋಧಿಸಿದ್ದೇವೆ ಎಂದು ಪ್ರತಾಪ್‌ ಸಿಂಹ ಹೇಳಿದರು.

ಮೋದಿಯನ್ನು ಕೇಳಿ ಅಕ್ಕಿ ಘೋಷಣೆ ಮಾಡಿದರಾ?

ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಕ್ಕೆ, ಅವರು ಅಧಿಕಾರಕ್ಕೆ ಬರಲು ನರೇಂದ್ರ ಮೋದಿ ಸರ್ಕಾರ ಅಕ್ಕಿ ಕೊಡಲು ಇರುವುದಲ್ಲ. ಎಲ್ಲ ರಾಜ್ಯಗಳನ್ನೂ ಸಮಾನವಾಗಿ ನೋಡಿಕೊಳ್ಳಬೇಕು. ಆ ಕೆಲಸವನ್ನು ಕೇಂದ್ರ ಮಾಡುತ್ತಾ ಬಂದಿದ್ದು, ಎಲ್ಲ ರಾಜ್ಯಗಳಿಗೆ 5 ಕೆ.ಜಿ. ಅಕ್ಕಿಯನ್ನು ಕೊಡುತ್ತಾ ಬಂದಿದೆ. ಒಬ್ಬ ಮನುಷ್ಯನಿಗೆ ತಿಂಗಳಿಗೆ ಆರು ಕೆಜಿ ಅಕ್ಕಿ ಬೇಕು. ಆ ನಿಟ್ಟಿನಲ್ಲಿ ಕೇಂದ್ರ ಕೊಡುತ್ತಿದೆ. ಆಗ ಸಿದ್ದರಾಮಯ್ಯ ಅವರು ಮೋದಿ ಅವರನ್ನು ಕೇಳಿಕೊಂಡು ಘೋಷಣೆ ಮಾಡಿದರಾ? ಎಂದು ಪ್ರಶ್ನೆ ಮಾಡಿದರು. ಬೆಂಬಲ ಬೆಲೆ ಘೋಷಿಸಿದರೆ ಜನರೇ ಅಕ್ಕಿ, ರಾಗಿಯನ್ನು ತಂದು ಕೊಟ್ಟು ಹೋಗುತ್ತಾರೆ. ಸುಮ್ಮನೇ ಯಾಕೆ ಮೋದಿ ಅವರನ್ನು ಬಯ್ಯಬೇಕು ಎಂದು ಪ್ರತಾಪ್‌ ಸಿಂಹ ಪ್ರಶ್ನೆ ಮಾಡಿದರು.

ಇದನ್ನೂ ಓದಿ: Karnataka CM: 2028ಕ್ಕೆ ಕಾಂಗ್ರೆಸ್‌ನಿಂದ ಸತೀಶ್‌ ಜಾರಕಿಹೊಳಿ CM: ಈಗಲೇ ಟವೆಲ್‌ ಹಾಕಿದ ಸಚಿವ

ಅಕ್ಕಿ ದುಡ್ಡನ್ನು ಜನರ ಖಾತೆಗೆ ಹಾಕಲಿ

ಒಂದು ವೇಳೆ ಸರ್ಕಾರಕ್ಕೆ ಅಕ್ಕಿ ಸಿಗುತ್ತಿಲ್ಲ ಎಂದಾದರೆ ಜನರಿಗೆ ಮುಕ್ತ ಮಾರುಕಟ್ಟೆಯಲ್ಲಿ ಕೆಜಿಗೆ 37 ರೂಪಾಯಿಯಂತೆ ಅಕ್ಕಿ ಸಿಗಲಿದೆ. ಜನರ ಖಾತೆಗೆ ಹಣ ಹಾಕಲಿ ಎಂದು ಪ್ರತಾಪ್‌ ಸಿಂಹ ಸಲಹೆ ನೀಡಿದರು.

ಪೆದ್ದು ಪೆದ್ದಾಗಿ ಮಾತನಾಡಬೇಡಿ ಎಂದು ಕಾಂಗ್ರೆಸ್‌ ನಾಯಕರಿಗೆ ಸಲಹೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಂಪ್ಯೂಟರ್‌ ಹ್ಯಾಕ್‌ ಮಾಡುವುದು, ಗೃಹ ಜ್ಯೋತಿಯ ಸರ್ವರ್‌ ಹ್ಯಾಕ್‌ ಮಾಡುವಂತಹ ಪೆದ್ದು ಪೆದ್ದು ಹೇಳಿಕೆಗಳನ್ನು ಕಾಂಗ್ರೆಸ್‌ ನಾಯಕರು ನೀಡಿ ಕರ್ನಾಟಕವನ್ನು ನಗೆಪಾಟಿಲಿಗೆ ಈಡು ಮಾಡುತ್ತಿದ್ದಾರೆ. ದಯವಿಟ್ಟು ಇಂತಹ ಹೇಳಿಕೆ ನೀಡಬೇಡಿ ಎಂದು ಕಾಂಗ್ರೆಸ್‌ ಸಚಿವರಿಗೆ ಪ್ರತಾಪ್‌ ಸಿಂಹ ಮನವಿ ಮಾಡಿದರು.

ಬೊಮ್ಮಾಯಿ ತಮ್ಮ ಕೆಲಸವನ್ನು ಪ್ರಚಾರ ಮಾಡುವಲ್ಲಿ ವಿಫಲ

ಬಿಟ್‌ ಕಾಯಿನ್‌ ಹಗರಣ, ಪೇಸಿಎಂ, 40 ಪರ್ಸೆಂಟ್‌ ರಾಜಕಾರಣದ ಬಗ್ಗೆ ಆಗ ಮಾತನಾಡಿದ್ದೀರಿ? ಆದರೆ, ಈಗ ಯಾಕೆ ನೀವು ಅಧಿಕಾರಕ್ಕೆ ಬಂದು ಒಂದು ತಿಂಗಳಾದರೂ ಅವುಗಳನ್ನು ತನಿಖೆಗೆ ಒಳಪಡಿಸಿಲ್ಲ? ಏನು ಹೊಂದಾಣಿಕೆ ರಾಜಕಾರಣವನ್ನು ಮಾಡುತ್ತಿದ್ದೀರಾ? ಎಂದು ಪ್ರಶ್ನೆ ಮಾಡಿದ್ದೇನಷ್ಟೇ ಎಂದು ಪ್ರತಾಪ್‌ ಸಿಂಹ ಉತ್ತರಿಸಿದರು.

ನಾನು ಈ ಹೇಳಿಕೆಯನ್ನು ಬಸವರಾಜ ಬೊಮ್ಮಾಯಿ ಅವರಾಗಲೀ, ಯಾವುದೋ ವ್ಯಕ್ತಿಯನ್ನಾಗಲೀ ಅಥವಾ ಪಕ್ಷವನ್ನಾಗಲಿ ದೃಷ್ಟಿಯಲ್ಲಿಟ್ಟುಕೊಂಡು ಮಾತನಾಡಲಿಲ್ಲ. ನಾನು ಒಟ್ಟಾರೆ ಸ್ಥಿತಿ ಬಗ್ಗೆ ಅಷ್ಟೇ ಮಾತನಾಡಿದ್ದೇನೆ. ನನಗೆ ಬಸವರಾಜ ಬೊಮ್ಮಾಯಿ ಅವರ ಬಗ್ಗೆ ಅಪಾರವಾದ ಗೌರವ ಇದೆ. ಅವರು ಮಾಡಿದ ಒಳ್ಳೆಯ ಕೆಲಸವನ್ನು ಪ್ರಚಾರ ಮಾಡುವಲ್ಲಿ ಅವರು ವಿಫಲವಾದರು ಎನ್ನುವುದಕ್ಕಿಂತ ನಾವು ವಿಫಲವಾದೆವು ಎಂದು ಪ್ರತಾಪ್‌ ಸಿಂಹ ಹೇಳಿದರು.

ನಾನು ಮೋದಿ ಹೆಸರು ಹೇಳಿಕೊಂಡೇ ಗೆದ್ದಿರುವೆ

ನಾವು ಪ್ರತಿ ಚುನಾವಣೆಯಲ್ಲಿ ಮೋದಿ ಹೆಸರನ್ನು ಹೇಳಲು ನಮಗೆ ಅವರು ಸ್ಫೂರ್ತಿಯಾಗಿರುವುದೇ ಕಾರಣ. ನಾನು ಮೋದಿ ಅವರ ಹೆಸರನ್ನು ಹೇಳಿಕೊಂಡು ಗೆದ್ದಿರುವುದು ಎಂದು ಯಾವುದೇ ನಾಚಿಕೆ ಇಲ್ಲದೆ ಹೇಳುತ್ತೇನೆ ಎಂದು ಪ್ರತಾಪ್‌ ಸಿಂಹ ಹೇಳಿದರು.

ನನಗೆ ಸರಿ ಕಾಣದ ವಿಷಯವನ್ನು ನಾನು ಪ್ರಶ್ನೆ ಮಾಡುವುದು ನನ್ನ ಪತ್ರಕರ್ತ ಗುಣ. ಸತ್ಯವನ್ನು ನುಂಗಿಕೊಂಡು ಇರಲು ನನ್ನ ಹತ್ತಿರ ಆಗದು. ನನ್ನೊಳಗಿನ ಪತ್ರಕರ್ತ ಇನ್ನೂ ಬದುಕಿದ್ದಾನೆ. ಹಾಗಾಗಿ ನನ್ನೊಳಗಿನ ರಾಜಕಾರಣಿಯನ್ನು ಬದಿಗಿಟ್ಟು ಆ ಪತ್ರಕರ್ತ ಮಾತನಾಡುತ್ತಾನೆ. ನನಗೆ ನನ್ನ ಮುಂದಿನ ರಾಜಕೀಯ ಭವಿಷ್ಯದ ಬಗ್ಗೆ ಆಸಕ್ತಿ, ಯೋಚನೆ ಇಲ್ಲ ಎಂದು ಪ್ರತಾಪ್‌ ಸಿಂಹ ತಿಳಿಸಿದರು.

ದೇವೇಗೌಡರ ಬಗ್ಗೆ ಮೋದಿಗೆ ಅಭಿಮಾನ

2016-17ರ ಸಂದರ್ಭದಲ್ಲಿ ಬಿಜೆಪಿಯಿಂದ ಜಿಎಸ್‌ಟಿ ಜಾರಿಗೆ ತರುವ ಸಂದರ್ಭದಲ್ಲಿ ಅವರನ್ನು ನರೇಂದ್ರ ಮೋದಿ ಅವರು ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ ಅವರನ್ನು ವಿಶ್ವಾಸಕ್ಕೆ ಪಡೆದುಕೊಂಡಿದ್ದಾರೆ. ಅವರು ಒಂದು ಸಾಮಾನ್ಯ ಕುಟುಂಬದಿಂದ ಬಂದು ಪ್ರಧಾನಿ ಹುದ್ದೆಗೇರಿರುವ ಬಗ್ಗೆ ಮನೆ ಕೆಲಸ ಮಾಡುವವಳ ಮಗನಾಗಿ ಹುಟ್ಟಿದ ನರೇಂದ್ರ ಮೋದಿಯವರಲ್ಲಿ ಅಭಿಮಾನ ಇದೆ. ಇನ್ನು ರಾಜಕೀಯವನ್ನು ಹೊರತುಪಡಿಸಿ ಮೋದಿಯವರು ಮಾಡಿದ ಕೆಲಸದ ಬಗ್ಗೆ ದೇವೇಗೌಡ ಅವರಿಗೂ ಸಂತಸ ಇದೆ ಎಂದು ಪ್ರತಾಪ್‌ ಸಿಂಹ ಅವರು ದೇವೇಗೌಡ ಹಾಗೂ ಬಿಜೆಪಿ ನಡುವೆ ಇರುವ ಸಂಬಂಧದ ಬಗ್ಗೆ ಮಾತನಾಡಿದರು.

ಇವರಿಗೆ ಬೈಯಲೂ ಬ್ರಾಹ್ಮಣರು ಬೇಕಾ?

ಎಂ.ಬಿ. ಪಾಟೀಲ್‌ ಅವರ ಬಗ್ಗೆ ನನಗೆ ಯಾವುದೇ ಅಸಮಾಧಾನ ಇಲ್ಲ. ಅವರು ನೀರಾವರಿ ಸಚಿವರಾಗಿದ್ದಾಗ ಮಾಡಿ ಒಳ್ಳೆಯ ಕೆಲಸದ ಬಗ್ಗೆ ಅಭಿಮಾನವಿದೆ. ಆದರೆ, ಅವರು ಅನಗತ್ಯವಾಗಿ ನನ್ನ ಹೆಸರನ್ನು ಎಳೆದು ತಂದಿದ್ದಾರೆ. ಪ್ರತಾಪ್‌ ಸಿಂಹ ಹೆಗಲ ಮೇಲೆ ಯಾರೋ ಬ್ರಾಹ್ಮಣರು ಕೋವಿ ಇಟ್ಟು ಹೊಡೆಯುತ್ತಿದ್ದಾರೆ ಎಂಬ ಹೇಳಿಕೆ ನೀಡಿದ್ದು ಎಷ್ಟು ಸರಿ? ಎಂದು ಪ್ರಶ್ನೆ ಮಾಡಿದ ಪ್ರತಾಪ್‌ ಸಿಂಹ, ಇವರಿಗೆ ಎಲ್ಲ ಕೆಲಸಗಳಿಗೂ ಬ್ರಾಹ್ಮಣರು ಬೇಕು. ಕೊನೆಗೆ, ಇವರಿಗೆ ಬಯ್ಯಲೂ ಬ್ರಾಹ್ಮಣರೇ ಬೇಕಾ? ನಾನು ಕೇಳಿದ ಪ್ರಶ್ನೆಗೆ ಉತ್ತರ ಇಲ್ಲದಿದ್ದಾಗ “ಚೇಳು” ಎಂಬಂತಹ ಮಾತುಗಳು ಬರುತ್ತವೆ. ನಾನು ಇವುಗಳಿಗೆಲ್ಲ ಅಷ್ಟಾಗಿ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಪ್ರತಾಪ್‌ ಸಿಂಹ ಹೇಳಿದರು.

ಬೆಂಗಳೂರು-ಮೈಸೂರು ಹೆದ್ದಾರಿ ಕ್ರೆಡಿಟ್‌ ಸಿದ್ದರಾಮಯ್ಯಗೆ ಕೊಡಲ್ಲ

ಬೆಂಗಳೂರು-ಮೈಸೂರು ಹೆದ್ದಾರಿ ಬಗ್ಗೆ ಸಿದ್ದರಾಮಯ್ಯ ಅವರಿಗೆ ಅಭಿಮಾನ ಇದ್ದರೆ ಅನುಮೋದನೆ ಪಡೆದು ಮಾಡಬಹುದಿತ್ತು. ಆದರೆ, ಯಾಕೆ ಮಾಡಲಿಲ್ಲ? ನಾನು ಮುತುವರ್ಜಿ ವಹಿಸಿ ಡಿಪಿಆರ್‌ ಮಾಡಿಸಿ, 2018ರಲ್ಲಿ ನರೇಂದ್ರ ಮೋದಿ ಅವರು ಮೈಸೂರಿಗೆ ಬರುವಾಗ ನಾನು ಅನಂತ್‌ ಕುಮಾರ್‌ ಅವರಿಗೆ ದುಂಬಾಲು ಬಿದ್ದು ಘೋಷಣೆ ಮಾಡಿಸಿದೆ. ಕೊನೆಗೆ ಮೋದಿ ಅವರು ಅನುಮೋದನೆ ನೀಡಿದರು. ಇದಕ್ಕೆ ನಾನು ಕ್ರೆಡಿಟ್‌ ಕೊಡುವುದಿದ್ದರೆ, ಎಸ್‌.ಎಂ. ಕೃಷ್ಣ, ಅನಂತಕುಮಾರ್‌, ನಿತಿನ್‌ ಗಡ್ಕರಿ ಹಾಗೂ ನರೇಂದ್ರ ಮೋದಿ ಅವರಿಗೆ ಕೊಡುತ್ತೇನೆ ಎಂದು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು.

ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಬಗ್ಗೆ ಪ್ರತಾಪ್‌ ನುಡಿ

ಈಗ ಬಿಜೆಪಿ ಸೋತಿದೆ. ಈ ಸೋಲಿನ ಆಘಾತದಲ್ಲಿ ಯಾವುದೋ ಆತುರದ ನಿರ್ಧಾರವನ್ನು ತೆಗೆದುಕೊಳ್ಳಲು ಆಗುವುದಿಲ್ಲ. ಈಗ ಆತ್ಮಾವಲೋಕನದ ಸಮಯವಾಗಿದೆ. ಅಲ್ಲದೆ, ನಮ್ಮನ್ನು ಮುನ್ನಡೆಸಲು ಈ ವ್ಯಕ್ತಿ ಸೂಕ್ತ ಎಂದು ನಮ್ಮೆಲ್ಲರ ಮನಸ್ಸಿನಲ್ಲಿ ಬರಬೇಕು. ಈ ತೀರ್ಮಾನವನ್ನು ತೆಗೆದುಕೊಳ್ಳಬೇಕು ಎಂಬ ಘಟ್ಟದಲ್ಲಿ ನಾವಿದ್ದೇವೆ. ಈ ಬಗ್ಗೆ ವಾರದಲ್ಲಿ ನಿರ್ಧಾರ ಆಗಲಿದೆ ಎಂದು ಪ್ರತಾಪ್‌ ಸಿಂಹ ಅವರು ವಿಪಕ್ಷ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಪ್ರತಿಕ್ರಿಯೆಯನ್ನು ನೀಡಿದರು.

ಇದನ್ನೂ ಓದಿ: BJP Karnataka: ವೇದಿಕೆಯಲ್ಲೇ ಕಿತ್ತಾಡಿಕೊಂಡ ಬಸವರಾಜ ಬೊಮ್ಮಾಯಿ ಹಾಗೂ ಬಸನನೌಡ ಪಾಟೀಲ್‌ ಯತ್ನಾಳ್‌

2024ರ ಎಲೆಕ್ಷನ್‌ ಸವಾಲಿನದು ಆಗಿರಲಿದೆ

ನರೇಂದ್ರ ಮೋದಿ ಅವರು ಈ ಒಂಭತ್ತು ವರ್ಷದಿಂದ ನಡೆದುಕೊಂಡು ಬಂದ ರೀತಿಯನ್ನು ಎಲ್ಲರೂ ನೋಡಿದ್ದಾರೆ, ರಷ್ಯಾ ಹಾಗೂ ಉಕ್ರೇನ್‌ ಯುದ್ಧ ನಡೆದರೂ ಸಹ ರಷ್ಯಾ ಜತೆ ಕಚ್ಚಾ ತೈಲ ಖರೀದಿ ಮಾಡುವ ನಿರ್ಧಾರವನ್ನು ಪಡೆದರು. ಅವರು ಜಾಗತಿಕ ನಾಯಕ ಆಗುತ್ತಿದ್ದಾರೆ. ಹೀಗಾಗಿ ಅವರ ಮೇಲೆ ಎಲ್ಲ ನಾಯಕರಿಗೂ ಅಸೂಯೆ ಇದೆ. ಚೀನಾದವರಿಗೂ ಸಹ ಇದೇ ಭಾವನೆ ಇದೆ. ಹೀಗಾಗಿ ಫಂಡಿಂಗ್‌ ಮಾಡಲು ಅಂತಾರಾಷ್ಟ್ರಿಯ ಮಟ್ಟದಲ್ಲಿ ಜಾಲಗಳು ನಿರತವಾಗಿವೆ. ಮೋದಿ ವಿರುದ್ಧ ಹಲವರು ನಿಂತಿದ್ದಾರೆ. ಆದರೆ, ಅವರ ಜನಪ್ರಿಯತೆ ಎಲ್ಲೂ ಕುಗ್ಗಿಲ್ಲ. ಮೋದಿಯವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏನೂ ಮಾಡಲು ಆಗುವುದಿಲ್ಲ ಎಂಬುದಾಗಿ ರಷ್ಯಾ ಕೂಡಾ ಅರ್ಥ ಮಾಡಿಕೊಂಡಿದೆ. ಈ ಬಾರಿ ಮೋದಿ ವರ್ಸಸ್‌ ಆಲ್‌ ಇಂಡಿಯಾ ಪಾರ್ಟಿಗಳು ಒಂದಾಗುತ್ತಿವೆ. ಇದನ್ನು ಜನರಿಗೆ ತಿಳಿ ಹೇಳುವ ಕೆಲಸ ಆಗುತ್ತಿದೆ. ಖಂಡಿತ 2024ರ ಎಲೆಕ್ಷನ್‌ ಟಫೆಸ್ಟ್‌ ಆಗಿರಲಿದೆ. ಕಾರಣ ಮೋದಿ ವಿರುದ್ಧ ಭಾರತದಲ್ಲಷ್ಟೇ ಅಲ್ಲ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವ್ಯವಸ್ಥಿತ ಪಿತೂರಿ ನಡೆಯುತ್ತಿದೆ. ಕಾಣದ ಕೈಗಳು ಕೆಲಸ ಮಾಡುತ್ತದೆ. ಮೋದಿ ಅವರನ್ನು ಗೆಲ್ಲಿಸುವ ಮೂಲಕ ಜನರು ಒಳ್ಳೇ ಕೆಲಸವನ್ನು ಮಾಡಿದರೆ ಭಾರತ ವಿಶ್ವ ಗುರು ಆಗಲಿದೆ ಎಂದು ಪ್ರತಾಪ್‌ ಸಿಂಹ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Prajwal Revanna Case: ರೇವಣ್ಣಗೆ ಜಾಮೀನು ಹಿನ್ನೆಲೆ ವಿದೇಶದಿಂದ ಪ್ರಜ್ವಲ್‌ ವಾಪಸ್?‌; ಕೋರ್ಟ್‌ಗೆ ಶರಣಾಗುವ ಸಾಧ್ಯತೆ

Prajwal Revanna Case: ಎಚ್.ಡಿ. ರೇವಣ್ಣಗೆ ಜಾಮೀನು ಸಿಕ್ಕ ಬಳಿಕ ನ್ಯಾಯಲಯದ ಮುಂದೆ ಹಾಜರಾಗುವಂತೆ ರೇವಣ್ಣ ಕುಟುಂಬದ ವಕೀಲರು ಸಲಹೆ ನೀಡಿದ್ದು, ಹೀಗಾಗಿ ಈ ವಾರದಲ್ಲಿಯೇ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಬರುವ ಸಾಧ್ಯತೆಗಳಿವೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಮಾಜಿ ಸಚಿವ ರೇವಣ್ಣ ಅವರಿಗೆ ಜಾಮೀನು ಮಂಜೂರಾದ ಬೆನ್ನಲ್ಲೇ ಅಮ್ಮ-ಮಗ ಎಸ್ಐಟಿ ಮುಂದೆ ಹಾಜರಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ತಂದೆಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ(Prajwal Revanna Case), ನ್ಯಾಯಾಲಯದ ಮುಂದೆ ಶರಣಾಗುವ ಸಾಧ್ಯತೆ ಇದ್ದು, ಬಹುತೇಕ ಈ ವಾರದಲ್ಲೇ ವಿದೇಶದಿಂದ ಆಗಮಿಸಬಹುದು ಎನ್ನಲಾಗಿದೆ.

ಎಸ್ಐಟಿ ಮುಂದೆ ಬುಧವಾರ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಆದ್ದರಿಂದ ಬುಧವಾರ ಸಂಜೆ ಬೆಂಗಳೂರಿಗೆ ಬಂದು ಗುರುವಾರ ನ್ಯಾಯಾಲಯದ ಮುಂದೆ ಪ್ರಜ್ವಲ್ ಹಾಜರಾಗಲಿದ್ದಾರೆ ಎನ್ನಲಾಗಿದೆ. ರೇವಣ್ಣಗೆ ಜಾಮೀನು ಸಿಕ್ಕ ಬಳಿಕ ನ್ಯಾಯಲಯದ ಮುಂದೆ ಹಾಜರಾಗುವಂತೆ ರೇವಣ್ಣ ಕುಟುಂಬದ ವಕೀಲರು ಸಲಹೆ ನೀಡಿದ್ದು, ಹೀಗಾಗಿ ಈ ವಾರದಲ್ಲಿಯೇ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಬರುವ ಸಾಧ್ಯತೆಗಳಿವೆ.

ಇದನ್ನೂ ಓದಿ | Prajwal Revanna Case: ರೇವಣ್ಣಗೆ ಜಾಮೀನು; ಹೊಳೆನರಸೀಪುರದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಅಭಿಮಾನಿಗಳು ವಶಕ್ಕೆ

ಹಾಸನ, ಹೊಳೆನರಸೀಪುರ ನಿವಾಸದಲ್ಲಿ ಎಫ್ಎಸ್ಎಲ್ ತಜ್ಞರ ಪರಿಶೀಲನೆ

ಹಾಸನ: ಪ್ರಜ್ವಲ್ ವಿರುದ್ಧದ ಅತ್ಯಾಚಾರ ಪ್ರಕರಣದ ತನಿಖೆಯನ್ನು ಎಸ್‌ಐಟಿ ಚುರುಕುಗೊಳಿಸಿದೆ. ಪ್ರಕರಣದ ಸಂಬಂಧ ಹೆಚ್ಚಿನ ಮಾಹಿತಿ ಕಲೆಹಾಕಲು ಹಾಸನ ಸಂಸದರ ನಿವಾಸ ಹಾಗೂ ಹೊಳೆನರಸೀಪುರದ ರೇವಣ್ಣ ಅವರ ನಿವಾಸದಲ್ಲಿ ಎಫ್‌ಎಸ್‌ಎಲ್ ತಂಡದೊಂದಿಗೆ ಎಸ್‌ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಹಾಸನದ ಆರ್.ಸಿ.ರಸ್ತೆಯಲ್ಲಿರುವ ಸಂಸದರ ನಿವಾಸದಲ್ಲಿ ಮೂರು ಗಂಟೆಗೂ ಹೆಚ್ಚು ಕಾಲ ಪರಿಶೀಲನೆ ನಡೆಸಲಾಗಿದ್ದು, ಅತ್ಯಾಚಾರ ಆರೋಪ ಕುರಿತು ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ. ನಂತರ ಹೊಳೆನರಸೀಪುರದ ರೇವಣ್ಣ ನಿವಾಸಕ್ಕೆ ಎಸ್ಐಟಿ ತಂಡ ತೆರಳಿದರು. ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ಇನ್ಸ್‌ಪೆಕ್ಟರ್ ಸ್ಚರ್ಣ ನೇತೃತ್ವದ ತಂಡ ಪರಿಶೀಲನೆ ನಡೆಸಿತು.

ಹಾಸನ ಸಂಸದರ ನಿವಾಸ ಹಾಗೂ ಹೊಳೆನರಸೀಪುರ ನಿವಾಸದಲ್ಲೂ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತ ಮಹಿಳೆ ದೂರು ನೀಡಿದ್ದರಿಂದ ಎರಡೂ ಕಡೆ ಅಧಿಕಾರಿಗಳು ಪರಿಶೀಲನೆ ನಡೆಸಿ, ಅಗತ್ಯ ಮಾಹಿತಿ ಕಲೆ ಹಾಕಿದ್ದಾರೆ.

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಹೋರ್ಡಿಂಗ್ ಕುಸಿತ ಬೆಂಗಳೂರಿಗರಿಗೂ ಎಚ್ಚರಿಕೆಯ ಗಂಟೆ

ಬೆಂಗಳೂರಿನಲ್ಲೂ ಇಂಥ ಜಾಹೀರಾತು ಫಲಕಗಳ ಹಾವಳಿ ಸಾಕಷ್ಟಿದೆ. ಇವುಗಳಲ್ಲಿ ಅನಧಿಕೃತ ಎಷ್ಟು, ಅನಧಿಕೃತ ಎಷ್ಟು ಯಾರೂ ಹೇಳಲಾರರು. ಕಳೆದ ವರ್ಷ ಹೈಕೋರ್ಟ್, ಅನಧಿಕೃತ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್‌ಗಳ ಬಗ್ಗೆ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿತ್ತು. ಪರಿಣಾಮ ನಗರವನ್ನು ತರಾತುರಿಯಿಂದ ಕ್ಲೀನ್ ಮಾಡಲಾಗಿತ್ತು. ಇದೀಗ ಬಿಬಿಎಂಪಿ ನೂತನ ಬೈಲಾ ತಂದಿದೆ. ಅದರಂತೆ ದೊಡ್ಡ ಹೋರ್ಡಿಂಗ್‌ಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಇದರ ಅಪಾಯ ಇದ್ದೇ ಇದೆ.

VISTARANEWS.COM


on

Hoarding
Koo

ಮುಂಬಯಿಯ ಘಾಟ್‌ಕೋಪರ್‌ನಲ್ಲಿ ಅಪ್ಪಳಿಸಿದ ಭಾರಿ ಧೂಳು ಬಿರುಗಾಳಿ ಮತ್ತು ಮಳೆಯಿಂದಾಗಿ ಬೃಹತ್ ಜಾಹೀರಾತು ಫಲಕ ಕುಸಿದು ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ. 59 ಜನರು ಗಾಯಗೊಂಡಿದ್ದಾರೆ. ಸೋಮವಾರ ಮಧ್ಯಾಹ್ನ ವೇಗವಾಗಿ ಧೂಳಿನ ಸಮೇತ ಬಂದ ಬಿರುಗಾಳಿ, ಭಾರೀ ಮಳೆ ಹಿನ್ನೆಲೆ ಮುಂಬೈ ನಗರದಲ್ಲಿ ಅನಾಹುತಗಳು ಸಂಭವಿಸುತ್ತಿವೆ. ಜನಸಂದಣಿ ಇರುವ ಪ್ರದೇಶದಲ್ಲಿ ಬೃಹದಾಕಾರದ ಹೋರ್ಡಿಂಗ್ ಬಿರುಗಾಳಿಗೆ ಕುಸಿದು ಬಿದ್ದಿದೆ. ಬೃಹದಾಕಾರದ ಹೋರ್ಡಿಂಗ್ ನ ಕಬ್ಬಿಣದ ರಾಡ್ ಗಳು ಹಿಂದಕ್ಕೆ ವಾಲಿಕೊಂಡು ಸಂಪೂರ್ಣವಾಗಿ ನೆಲಕಚ್ಚಿದೆ. ದುರ್ಘಟನೆಯಲ್ಲಿ ನೂರಕ್ಕೂ ಹೆಚ್ಚು ಮಂದಿ ಹೋರ್ಡಿಂಗ್​ ಕೆಳಗೆ ಸಿಲುಕಿಕೊಂಡಿದ್ದಾರೆ. ಹೋರ್ಡಿಂಗ್ ಬಿದ್ದ ಪರಿಣಾಮ ಅಲ್ಲಿದ್ದ ಅಂಗಡಿಗಳು, ವಾಹನಗಳು ಸಹ ಜಖಂ ಆಗಿದೆ. ಇನ್ನೊಂದು ಇಂಥದೇ ಘಟನೆಯಲ್ಲಿ, ವಡಾಲಾದಲ್ಲಿ ಅಟ್ಟಣಿಗೆಯೊಂದು ಕುಸಿದಿದೆ. ಹಲವಾರು ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದು, ಹಲವರು ಕಾರಿನೊಳಗೆ ಸಿಲುಕಿಕೊಂಡಿದ್ದಾರೆ.

ಇದು ಅಪರೂಪದ ಪ್ರಕರಣವಲ್ಲ. ಈ ಹಿಂದೆಯೂ ಇಂಥ ಘಟನೆಗಳು ಆದದ್ದುಂಟು. ಈ ಬೃಹತ್ ಜಾಹೀರಾತು ಫಲಕಗಳು ನಾಲ್ಕು- ಐದು ಮಹಡಿ ಕಟ್ಟಡಗಳಷ್ಟು ಎತ್ತರವಾಗಿರುತ್ತವೆ. ವೈಜ್ಞಾನಿಕವಾಗಿ ಇದನ್ನು ನಿರ್ಮಿಸದೇ ಹೋದರೆ ಇವು ಬಿದ್ದಾಗ ಹಲವು ಜೀವಗಳಿಗೆ ಮಾರಣಾಂತಿಕ ಆಗುವ ಸಂಭವ ಇದ್ದೇ ಇರುತ್ತದೆ. ಜೊತೆಗೆ ಅನಧಿಕೃತ ಫ್ಲೆಕ್ಸ್, ಹೋರ್ಡಿಂಗ್‌ಗಳ ಕಾಟವೂ ಇದೆ. ಇವು ನಗರಗಳ ಸೌಂದರ್ಯವನ್ನು ಊನಗೊಳಿಸುವಲ್ಲಿ ಕುಖ್ಯಾತವಾಗಿವೆ.

ಬೆಂಗಳೂರಿನಲ್ಲೂ ಇಂಥ ಜಾಹೀರಾತು ಫಲಕಗಳ ಹಾವಳಿ ಸಾಕಷ್ಟಿದೆ. ಇವುಗಳಲ್ಲಿ ಅನಧಿಕೃತ ಎಷ್ಟು, ಅನಧಿಕೃತ ಎಷ್ಟು ಯಾರೂ ಹೇಳಲಾರರು. ಕಳೆದ ವರ್ಷ ಹೈಕೋರ್ಟ್, ಅನಧಿಕೃತ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್‌ಗಳ ಬಗ್ಗೆ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿತ್ತು. ಪರಿಣಾಮ ನಗರವನ್ನು ತರಾತುರಿಯಿಂದ ಕ್ಲೀನ್ ಮಾಡಲಾಗಿತ್ತು. ಇದೀಗ ಬಿಬಿಎಂಪಿ ನೂತನ ಬೈಲಾ ತಂದಿದೆ. ಅದರಂತೆ ದೊಡ್ಡ ಹೋರ್ಡಿಂಗ್‌ಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಹೋರ್ಡಿಂಗ್‌ನ ಗಾತ್ರವು ರಸ್ತೆಯ ಅಗಲ, ವೃತ್ತ ಅಥವಾ ಜಂಕ್ಷನ್ ಮತ್ತು ಪ್ರದೇಶವನ್ನು ಅವಲಂಬಿಸಿರುತ್ತದೆ. ಉದಾಹರಣೆಗೆ, 80 ರಿಂದ 100 ಅಡಿ ಅಗಲದ ರಸ್ತೆಯಲ್ಲಿ (ಒಳಗಿನ ವರ್ತುಲ ರಸ್ತೆ) 1,000 ಚದರ ಅಡಿ ಹೋರ್ಡಿಂಗ್ ಅನ್ನು ಪ್ರದರ್ಶಿಸಲು ಅನುಮತಿಸಲಾಗಿದೆ. ಜಾಹೀರಾತುದಾರರು ಪ್ರತಿ 100 ಮೀಟರ್‌ಗಳಿಗೆ ಅಂತಹ ಬೋರ್ಡ್‌ಗಳನ್ನು ಸ್ಥಾಪಿಸಬಹುದು. ಕನಿಷ್ಠ ಜಾಹೀರಾತು ಪ್ರದೇಶವು 800 ಚದರ ಅಡಿಗಳಾಗಿದ್ದರೆ, ಗರಿಷ್ಠ 3,000 ಚದರ ಅಡಿ. ಗರಿಷ್ಠ ಎತ್ತರ 75 ಅಡಿಗಳವರೆಗೂ ಹೋಗಬಹುದು. ಅಂದರೆ ಸುಮಾರು ಏಳು ಮಹಡಿ ಎತ್ತರ!

ಇಂಥ ಒಂದು ಬೃಹತ್ ಫಲಕ ಗಾಳಿಗೆ ಬಿದ್ದರೆ ಎಂಥ ಅನಾಹುತ ಆದೀತು ಎಂಬುದನ್ನು ಊಹಿಸಬಹುದು. ನೂತನ ಹೋರ್ಡಿಂಗ್ ನೀತಿಯಿಂದ ವಾರ್ಷಿಕ 500 ಕೋಟಿ ರೂಪಾಯಿ ಗಳಿಸುವ ಇರಾದೆ ಬಿಬಿಎಂಪಿಗೆ ಇದೆ. ಆದರೆ ಅದರಡಿ ಓಡಾಡುವ ಜನರ ಸುರಕ್ಷತೆಯ ಬಗ್ಗೆ ಯಾವ ಕ್ರಮ ತೆಗೆದುಕೊಳ್ಳಲಾಗುತ್ತದೆ? ಇಂಥ ಅಪಘಾತದ ಸಂತ್ರಸ್ತರಿಗೆ ಗರಿಷ್ಠ ವಿಮೆ ನೀಡುವ ಕಾಯಿದೆ ಇರಬೇಕಲ್ಲವೆ? ಇದರ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಇಂಥ ಅಪಘಾತಗಳು ಸಂಭವಿಸಿದಾಗ, ನಮ್ಮ ಸುತ್ತಮುತ್ತಲೂ ಯಾವಾಗ ಬೇಕಾದರೂ ಸಂಭವನೀಯ ಅಪಾಯಗಳ ಕುರಿತು ಕೂಡ ನಾವು ಚಿಂತಿಸಿ ಕಾರ್ಯಪ್ರವೃತ್ತರಾಗಬೇಕಿದೆ.

ಇದನ್ನೂ ಓದಿ: ICC World Cup 2023 : ಜಸ್ಟ್​ ಮಿಸ್​; ಪ್ರೇಕ್ಷಕರ ಸೀಟ್​​ಗಳ ಮೇಲೆ ಬಿದ್ದ ಬೃಹತ್​ ಹೋರ್ಡಿಂಗ್​

Continue Reading

ದೇಶ

Tejasvi Surya: ಈ ದಲಿತ ನಾಯಕನ ಜತೆ ಚರ್ಚೆಗೆ ಬನ್ನಿ ರಾಹುಲ್‌ ಗಾಂಧಿ; ತೇಜಸ್ವಿ ಸೂರ್ಯ ಪಂಥಾಹ್ವಾನ!

Tejasvi Surya: ರಾಹುಲ್‌ ಗಾಂಧಿ ಅವರೇ, ನಮ್ಮ ಅಭಿನವ್‌ ಪ್ರಕಾಶ್‌ ಅವರು ನಿಮ್ಮೊಂದಿಗೆ ಬಹಿರಂಗ ಚರ್ಚೆಗೆ ಬರಲಿದ್ದಾರೆ. ಇವರು ಪಾಸಿ (ಎಸ್‌ಸಿ-ದಲಿತ) ಸಮುದಾಯದ ಪ್ರಮುಖ ನಾಯಕರಾಗಿದ್ದು, ಉನ್ನತ ಶಿಕ್ಷಣ ಪಡೆದಿದ್ದಾರೆ. ನೀವು ಪ್ರತಿನಿಧಿಸುತ್ತಿರುವ ರಾಯ್‌ಬರೇಲಿಯಲ್ಲಿ ಈ ಸಮುದಾಯದ ಶೇ.30ರಷ್ಟು ಜನರಿದ್ದಾರೆ. ನೀವು ಇವರ ಜತೆ ಚರ್ಚೆಗೆ ಬನ್ನಿ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

VISTARANEWS.COM


on

Tejasvi Surya
Koo

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಜತೆ ನಾನು ಬಹಿರಂಗ ಚರ್ಚೆಗೆ ಸಿದ್ಧ ಎಂದು ರಾಹುಲ್‌ ಗಾಂಧಿ (Rahul Gandhi) ಎಸೆದ ಸವಾಲಿಗೆ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ (Tejasvi Surya) ಪಾಟಿಸವಾಲು ಎಸೆದಿದ್ದಾರೆ. “ರಾಹುಲ್‌ ಗಾಂಧಿಯವರೇ, ನೀವು ಬಿಜೆಪಿಯು ಯುವ ಮೋರ್ಚಾ ರಾಷ್ಟ್ರೀಯ ಉಪಾಧ್ಯಕ್ಷ ಅಭಿನವ್‌ ಪ್ರಕಾಶ್‌ ಅವರೊಂದಿಗೆ ಚರ್ಚೆಗೆ ಬನ್ನಿ” ಎಂದು ಸವಾಲು ಎಸೆಯುವ ಜತೆಗೆ ರಾಹುಲ್‌ ಗಾಂಧಿ ಅವರಿಗೆ ಸುದೀರ್ಘ ಪತ್ರ ಬರೆದಿದ್ದಾರೆ.

“ರಾಹುಲ್‌ ಗಾಂಧಿ ಅವರೇ, ನಮ್ಮ ಅಭಿನವ್‌ ಪ್ರಕಾಶ್‌ ಅವರು ನಿಮ್ಮೊಂದಿಗೆ ಬಹಿರಂಗ ಚರ್ಚೆಗೆ ಬರಲಿದ್ದಾರೆ. ಇವರು ಪಾಸಿ (ಎಸ್‌ಸಿ-ದಲಿತ) ಸಮುದಾಯದ ಪ್ರಮುಖ ನಾಯಕರಾಗಿದ್ದು, ಉನ್ನತ ಶಿಕ್ಷಣ ಪಡೆದಿದ್ದಾರೆ. ನೀವು ಪ್ರತಿನಿಧಿಸುತ್ತಿರುವ ರಾಯ್‌ಬರೇಲಿಯಲ್ಲಿ ಈ ಸಮುದಾಯದ ಶೇ.30ರಷ್ಟು ಜನರಿದ್ದಾರೆ. ರಾಜಕೀಯ ಕುಡಿ (ರಾಹುಲ್‌ ಗಾಂಧಿ) ಹಾಗೂ ಸಾಮಾನ್ಯ ಯುವಕನ (ಅಭಿನವ್‌ ಪ್ರಕಾಶ್)‌ ಮಧ್ಯೆ ಒಂದೊಳ್ಳೆ ಚರ್ಚೆ ನಡೆಯಲಿ. ನೀವು ಚರ್ಚೆಯ ಆಹ್ವಾನವನ್ನು ಸ್ವೀಕರಿಸುತ್ತೀರಿ ಎಂಬುದಾಗಿ ಭಾವಿಸಿದ್ದೇನೆ” ಎಂದು ತೇಜಸ್ವಿ ಸೂರ್ಯ ಪೋಸ್ಟ್‌ ಮಾಡಿದ್ದಾರೆ.

ನಾನು ರೆಡಿ ಎಂದ ಅಭಿನವ್‌ ಪ್ರಕಾಶ್‌

ತೇಜಸ್ವಿ ಸೂರ್ಯ ಅವರು ಪ್ರಸ್ತಾಪಿಸುತ್ತಲೇ ಅಭಿನವ್‌ ಪ್ರಕಾಶ್‌ ಅವರು ಚರ್ಚೆಗೆ ನಾನು ಸಿದ್ಧ ಎಂದಿದ್ದಾರೆ. “ರಾಹುಲ್‌ ಗಾಂಧಿ ವಿರುದ್ಧ ಚರ್ಚಿಸಲು ನನ್ನ ಹೆಸರು ಪ್ರಸ್ತಾಪಿಸಿದ್ದಕ್ಕೆ ಮೊದಲಿಗೆ ತೇಜಸ್ವಿ ಸೂರ್ಯ ಅವರಿಗೆ ಧನ್ಯವಾದಗಳು. ರಾಹುಲ್‌ ಗಾಂಧಿ ಹಾಗೂ ಅವರ ಕುಟುಂಬಸ್ಥರು ದೀರ್ಘಾವಧಿಗೆ ಪ್ರತಿನಿಧಿಸಿದ ಉತ್ತರ ಪ್ರದೇಶದ ನಾಗರಿಕ ನಾನು. ಅಮೇಥಿಯಿಂದ ದೂರ ಸರಿದಂತೆ ರಾಹುಲ್‌ ಗಾಂಧಿ ಅವರು ಈ ಚರ್ಚೆಯಿಂದಲೂ ಓಡಿ ಹೋಗುವುದಿಲ್ಲ ಎಂಬುದಾಗಿ ಭಾವಿಸಿದ್ದೇನೆ. ಇಲ್ಲದಿದ್ದರೆ ಅವರ ರಾಯ್‌ಬರೇಲಿಯಿಂದಲೂ ಓಡಿಹೋಗಬೇಕಾಗುತ್ತದೆ” ಎಂದು ಹೇಳಿದ್ದಾರೆ.

ರಾಹುಲ್‌ ಗಾಂಧಿ ಹೇಳಿದ್ದೇನು?

“ನಾನು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಬಹಿರಂಗವಾಗಿ ಚರ್ಚಿಸಲು ನೂರಕ್ಕೆ ನೂರರಷ್ಟು ಸಿದ್ಧನಿದ್ದೇನೆ” ಎಂಬುದಾಗಿ ಕೆಲ ದಿನಗಳ ಹಿಂದೆ ರಾಹುಲ್‌ ಗಾಂಧಿ ಹೇಳಿದ್ದರು. ಇದಕ್ಕೆ, ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿರುಗೇಟು ನೀಡಿದ್ದಾರೆ. ಯಾವ ಸಾಮರ್ಥ್ಯ ಇದೆ ಎಂದು ನೀವು ಮೋದಿ ಅವರನ್ನು ಚರ್ಚೆಗೆ ಕರೆಯುತ್ತಿದ್ದೀರಿ ಎಂದಿದ್ದರು. ಬಿಜೆಪಿಯ ಹಲವು ನಾಯಕರು ಟೀಕಿಸುತ್ತ, ನೀವೇನು ಪ್ರಧಾನಿ ಅಭ್ಯರ್ಥಿಯೇ ಎಂದು ಕುಟುಕಿದ್ದರು. “ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ ಅವರ ಜತೆ ಒಮ್ಮೆಗೆ ಚರ್ಚೆಗೆ ಬನ್ನಿ” ಎಂದು ಸ್ಮೃತಿ ಇರಾನಿ ಸವಾಲು ಎಸೆದಿದ್ದರು.

ಇದನ್ನೂ ಓದಿ: Narendra Modi: ವಾರಾಣಸಿಯಲ್ಲಿ ಹೊಸ ಅಲೆ ಸೃಷ್ಟಿಸಿದ ಮೋದಿ, ಶಕ್ತಿ ಪ್ರದರ್ಶನ; ರೋಡ್‌ ಶೋ Photos ಇಲ್ಲಿವೆ

Continue Reading

ಕರ್ನಾಟಕ

Vidyarthi Vidyarthiniyare Movie: ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಟ್ರೈಲರ್ ಔಟ್; ಧುಮ್ಮಿಕ್ಕಿದ ಹರೆಯದ ತೊರೆ!

Vidyarthi Vidyarthiniyare Movie: ರ‍್ಯಾಪರ್ ಚಂದನ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ʼವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದ ಟ್ರೈಲರ್‌ ರಿಲೀಸ್‌ ಆಗಿದೆ. ಕಾಲೇಜು ಹುಡುಗ, ಹುಡುಗಿಯರ ಹದಿ ಹರೆಯದ ಹುಚ್ಚು ಮನಸ್ಸಿನ ಹೊಯ್ದಾಟವನ್ನು ಇಲ್ಲಿ ತೆರೆದಿಡಲಾಗಿದೆ.

VISTARANEWS.COM


on

Vidyarthi Vidyarthiniyare Movie
Koo

ಬೆಂಗಳೂರು: ರ‍್ಯಾಪರ್ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ʼವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyare Movie) ಚಿತ್ರವು ಶೀರ್ಷಿಕೆಯಲ್ಲಿಯೇ ಟೀನೇಜ್ ಸ್ಟೋರಿಯ ಕಂಪು ಹೊಂದಿದ್ದು, ಈಗಾಗಲೇ ನಾನಾ ಕ್ರೀಯಾಶೀಲ ಚಟುವಟಿಕೆಗಳ ಮೂಲಕ ಪ್ರೇಕ್ಷಕರನ್ನು ತಲುಪಿತ್ತು. ಆ ಕಾರಣದಿಂದಲೇ ಎಲ್ಲರೂ ಟ್ರೈಲರ್‌ನತ್ತ ದೃಷ್ಟಿ ನೆಟ್ಟಿದ್ದರು. ಇದೀಗ ಚಿತ್ರತಂಡ ಯುವ ಆವೇಗದಿಂದ ತೊನೆದಾಡುತ್ತಿರುವಂತೆ ಭಾಸವಾಗುವ ಟ್ರೈಲರ್ ಅನ್ನು ಬಿಡುಗಡೆಗೊಳಿಸಿದೆ. ಅದರೊಳಗೆ ಹದಿಹರೆಯದ ಮನಸುಗಳ ನಾನಾ ಮಗ್ಗುಲುಗಳು ಹರೆಯದ ತೊರೆಯೊಂದಿಗೆ ಧುಮ್ಮಿಕ್ಕಿ ಹರಿದಿವೆ. ಈ ಟ್ರೈಲರ್ ಅನ್ನು ಸೈಡ್ ಎ ಅಂತ ಹೆಸರಿಸಲಾಗಿದೆ. ಇದನ್ನು ನೋಡುತ್ತಲೇ ಒಟ್ಟಾರೆ ಸಿನಿಮಾದಲ್ಲೇನೋ ಇದೆಯೆಂಬ ಗಟ್ಟಿಯಾದ ಭರವಸೆ ತಂತಾನೇ ಮೂಡುತ್ತದೆ. ಸೈಡ್ ಬಿ ಟ್ರೈಲರ್‌ಗಾಗಿ ಕಾತರವೂ ಮೂಡಿಕೊಳ್ಳುತ್ತೆ. ಅಷ್ಟರಮಟ್ಟಿಗೆ ಈ ಟ್ರೈಲರ್ ಪರಿಣಾಮಕಾರಿಯಾಗಿ ಮೂಡಿ ಬಂದಿದೆ!

ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಟೈಟಲ್ಲೇ ಹೇಳುವಂತೆ ಯೂತ್ಸ್ ಸಬ್ಜೆಕ್ಟ್ ಸಿನಿಮಾ. ಕಾಲೇಜು ಹುಡುಗ, ಹುಡುಗಿಯರ, ಹದಿ ಹರೆಯದ ಹುಚ್ಚು ಮನಸ್ಸಿನ ಹೊಯ್ದಾಟವನ್ನು ಇಲ್ಲಿ ತೆರೆದಿಡಲಾಗಿದೆ. ಹಾಗಂತ ಇದು ಮಾಮೂಲಿಯಾಗೂ ಇದು ಸಿದ್ಧಸೂತ್ರದ ಚೌಕಟ್ಟಿಗೊಳಪಟ್ಟಿಲ್ಲ ಅನ್ನೋದು ಟ್ರೈಲರ್ ಎಳೆಯಲ್ಲಿ ಸ್ಪಷ್ಟವಾಗುತ್ತದೆ. ಹೊಡೆದಾಟ, ಬಡಿದಾಟ, ರ‍್ಯಾಗಿಂಗ್, ಬಿಸಿ ರಕ್ತದ ಹುಡುಗರ ಪುಂಡಾಟಿಕೆ ಸೇರಿ ಇಲ್ಲಿ ಎಲ್ಲವೂ ಇದೆ. ಅದರ ಜೊತೆ ಜೊತೆಗೇ ಶೈಕ್ಷಣಿಕ ಪರಿಸರದ ಕ್ರೌರ್ಯದ ಮುಖವೊಂದನ್ನು ಬಯಲಾಗಿಸುವ ಪ್ರಯತ್ನವೂ ಗಮನ ಸೆಳೆಯುವಂತಿದೆ. ಮೋಜು ಮಸ್ತಿಯಲ್ಲಿ ಮೈಮರೆತ ಮನಸ್ಥಿತಿಗಳ ಕಥೆಯ ಸೂಚನೆಯಿದೆ. ಹಿಡಿತ ತಪ್ಪಿದ ಮಕ್ಕಳನ್ನು ಹಾದಿಗೆ ತರುವ ಯತ್ನವೂ ಇದೆ. ಪ್ರಸ್ತುತ ಕಾಲದ ಟೀನೇಜ್ ಹುಡುಗರ ಕಹಾನಿಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದೆ ಟ್ರೈಲರ್.

ಚಂದನ್ ಶೆಟ್ಟಿ ಈ ಚಿತ್ರದ ಮೂಲಕ ಡಿಫರೆಂಟಾಗಿ ಕಾಣಿಸಲಿದ್ದಾರೆಂಬ ನಿಖರ ಮಾಹಿತಿಯನ್ನು ನಿರ್ದೇಶಕ ಅರುಣ್ ಅಮುಕ್ತ ನೀಡುತ್ತಾ ಬಂದಿದ್ದಾರೆ. ಅವರ ಪಾತ್ರವನ್ನು ಅಷ್ಟೇ ಗೌಪ್ಯವಾಗಿ ಕಾಪಾಡಿಕೊಂಡು ಸಿನಿಮಾ ಮೇಲಿನ ಕುತೂಹಲವನ್ನು ಹೆಚ್ಚಿಸಿದೆ ಚಿತ್ರತಂಡ. ಒಟ್ಟಾರೆಯಾಗಿ ಟ್ರೈಲರ್ ನೋಡಿದರೆ ನಿರ್ದೇಶಕರು ಹೊಸದೇನನ್ನೋ ಹೇಳುವ ಪ್ರಯತ್ನ ಮಾಡಿದ್ದಾರೆ ಅನ್ನೋದು ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ. ಅರುಣ್ ಅಮುಕ್ತ ಅತ್ಯಂತ ಆಸ್ಥೆಯಿಂದ ಈ ಸಿನಿಮಾವನ್ನು ರೂಪಿಸಿದ್ದಾರೆಂಬುದಕ್ಕೂ ಕೂಡ ಈ ಟ್ರೈಲರಿನಲ್ಲಿ ಸಾಕ್ಷಿಗಳಿವೆ. ಕಾಲೇಜು ಕೇಂದ್ರಿತ ಕಥೆ ಅಂದಾಕ್ಷಣ ಒಂದು ಕಲ್ಪನೆ ಮೊಳೆತುಕೊಳ್ಳುತ್ತದೆ. ಅದನ್ನು ಮೀರಿದ ಆತ್ಮದೊಂದಿಗೆ ಅರುಣ್ ಅಮುಕ್ತ ಈ ಸಿನಿಮಾವನ್ನು ದೃಷ್ಯೀಕರಿಸಿರುವ ಲಕ್ಷಣಗಳಿವೆ. ಈವರೆಗೂ ಹಂತ ಹಂತವಾಗಿ ಕಾಯ್ದುಕೊಂಡಿದ್ದ ಕುತೂಹಲವನ್ನು ಈ ಸೈಡ್ ಎ ಟ್ರೈಲರ್ ಸಾರ್ಥಕಗೊಳಿಸಿದೆ.

ಇದನ್ನೂ ಓದಿ | Turbo Trailer Out: ಮಮ್ಮುಟ್ಟಿ ನಟನೆಯ ‘ಟರ್ಬೋ’ ಟ್ರೈಲರ್‌ ಔಟ್‌: ರಾಜ್‌ ಬಿ ಶೆಟ್ಟಿ ಖದರ್‌ಗೆ ಫ್ಯಾನ್ಸ್‌ ಫಿದಾ!

ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಶ್ರೀಕಾಂತ್ ಜಿ. ಕಶ್ಯಪ್ ಕಾರ್ಯಕಾರಿ ನಿರ್ಮಾಪಕ, ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ ಅರುಣ್ ಸುರೇಶ್ ಈ ಹಾಡಿಗೆ ಛಾಯಾಗ್ರಹಣ ಮಾಡಿದ್ದಾರೆ. ಚಂದನ್ ಶೆಟ್ಟಿ , ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

Continue Reading
Advertisement
IPL 2024
ಪ್ರಮುಖ ಸುದ್ದಿ3 hours ago

IPL 2024 : ಆರ್​ಸಿಬಿ, ಆರ್​ಆರ್​ಗೆ ಆಘಾತ; ಐಪಿಎಲ್ ಬೇಡ ಎಂದು ಹೊರಟ ಹಲವು ಆಟಗಾರರು

Prajwal Revanna Case
ಕರ್ನಾಟಕ3 hours ago

Prajwal Revanna Case: ರೇವಣ್ಣಗೆ ಜಾಮೀನು ಹಿನ್ನೆಲೆ ವಿದೇಶದಿಂದ ಪ್ರಜ್ವಲ್‌ ವಾಪಸ್?‌; ಕೋರ್ಟ್‌ಗೆ ಶರಣಾಗುವ ಸಾಧ್ಯತೆ

Hoarding
ಸಂಪಾದಕೀಯ4 hours ago

ವಿಸ್ತಾರ ಸಂಪಾದಕೀಯ: ಹೋರ್ಡಿಂಗ್ ಕುಸಿತ ಬೆಂಗಳೂರಿಗರಿಗೂ ಎಚ್ಚರಿಕೆಯ ಗಂಟೆ

Sushil Kumar Modi
ಪ್ರಮುಖ ಸುದ್ದಿ4 hours ago

Sushil Kumar Modi : ಬಿಹಾರದ ಮಾಜಿ ಡಿಸಿಎಂ ಸುಶೀಲ್ ಕುಮಾರ್ ಮೋದಿ ನಿಧನ

Tejasvi Surya
ದೇಶ4 hours ago

Tejasvi Surya: ಈ ದಲಿತ ನಾಯಕನ ಜತೆ ಚರ್ಚೆಗೆ ಬನ್ನಿ ರಾಹುಲ್‌ ಗಾಂಧಿ; ತೇಜಸ್ವಿ ಸೂರ್ಯ ಪಂಥಾಹ್ವಾನ!

IPL 2024
ಪ್ರಮುಖ ಸುದ್ದಿ4 hours ago

IPL 2024 : ಮಳೆಯಿಂದಾಗಿ ಪಂದ್ಯ ರದ್ದು, ಕೆಕೆಆರ್​ಗೆ ಮೊದಲೆರಡಲ್ಲೊಂದು ಸ್ಥಾನ ಫಿಕ್ಸ್​

Vidyarthi Vidyarthiniyare Movie
ಕರ್ನಾಟಕ4 hours ago

Vidyarthi Vidyarthiniyare Movie: ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಟ್ರೈಲರ್ ಔಟ್; ಧುಮ್ಮಿಕ್ಕಿದ ಹರೆಯದ ತೊರೆ!

Road Accident Head on collision between bikes One person died on the spot
ಉತ್ತರ ಕನ್ನಡ4 hours ago

Road Accident: ಬೈಕ್‌ಗಳ ನಡುವೆ ಡಿಕ್ಕಿ; ಒಬ್ಬ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

Lok Sabha Election
ದೇಶ5 hours ago

Lok Sabha Election: 28 ವರ್ಷಗಳಲ್ಲೇ ಶ್ರೀನಗರದಲ್ಲಿ ಅಧಿಕ ಮತದಾನ; 370ನೇ ವಿಧಿ ರದ್ದು ಎಫೆಕ್ಟ್?

Award Ceremony
ಬೆಂಗಳೂರು5 hours ago

Award Ceremony: ಬೆಂಗಳೂರಿನಲ್ಲಿ ಮೇ 19ರಂದು ಕಾದಂಬರಿ ಸಾರ್ವಭೌಮ ಅ.ನ.ಕೃ. ಪ್ರಶಸ್ತಿ ಪ್ರದಾನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

HD Revanna Bail Revanna will not leave the country condition imposed by the court
ಕ್ರೈಂ8 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

Prajwal Revanna case HD Revanna finally gets bail What was the argument like
ಕ್ರೈಂ9 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ9 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ9 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ10 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ16 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ21 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ22 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ1 day ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ1 day ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

ಟ್ರೆಂಡಿಂಗ್‌