Viral Video: 'ಕ್ಯಾಂಡಿ' ಮೇಲೆ ಧೋನಿಗೆ 'ಕ್ರಷ್'‌, ಇವರು ಆಡುವ ಗೇಮ್‌ ‌ಮೂರೇ ಗಂಟೆಯಲ್ಲಿ 36 ಲಕ್ಷ ಡೌನ್‌ಲೋಡ್‌! - Vistara News

ವೈರಲ್ ನ್ಯೂಸ್

Viral Video: ‘ಕ್ಯಾಂಡಿ’ ಮೇಲೆ ಧೋನಿಗೆ ‘ಕ್ರಷ್’‌, ಇವರು ಆಡುವ ಗೇಮ್‌ ‌ಮೂರೇ ಗಂಟೆಯಲ್ಲಿ 36 ಲಕ್ಷ ಡೌನ್‌ಲೋಡ್‌!

ಭಾರತೀಯ ಕ್ರಿಕೆಟ್‌ ತಂಡದ ಮಾಜಿ ಆಟಗಾರ ಧೋನಿ ಅವರು ವಿಮಾನದಲ್ಲಿ ಪ್ರಯಾಣಿಸುವಾಗ ಕ್ಯಾಂಡಿ ಕ್ರಷ್‌ ಆಡುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ವೈರಲ್‌ (Viral Video) ಆಗಿದೆ.

VISTARANEWS.COM


on

ms dhoni playing candy crush
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕ್ರಿಕೆಟ್‌ ಮೈದಾನದಲ್ಲಿ ಕ್ಯಾಪ್ಟನ್‌ ಕೂಲ್ ಎಂ.ಎಸ್‌.ಧೋನಿ ಅವರ ಆಟ ಮೆಚ್ಚದವರುಂಟೇ? ಬ್ಯಾಟಿಂಗ್‌ ಮತ್ತು ಕೀಪಿಂಗ್‌ನಿಂದಾಗಿ ಎಲ್ಲರ ಮನ ಗೆದ್ದಿರುವ ಧೋನಿ ತಮ್ಮ ಟ್ಯಾಬ್‌ನಲ್ಲೂ ಗೇಮ್‌ ಆಡುತ್ತಾರೆ. ಅದು ಯಾವ ಆಟ ಎಂದು ನಿಮಗೆ ತಿಳಿದಿದೆಯೇ? ಇತ್ತೀಚೆಗೆ ಧೋನಿ ಅವರ ಈ ಆಟದ ಬಗ್ಗೆ ವಿಚಾರ ಹೊರಗೆ (Viral Video) ಬಿದ್ದಿದ್ದು, ಅವರ ಅಭಿಮಾನಿಗಳೆಲ್ಲರೂ ಆ ಆಟವನ್ನು ತಮ್ಮ ಮೊಬೈಲ್‌ನಲ್ಲಿ ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ.

ಹೌದು. ಧೋನಿ ಅವರು ಇತ್ತೀಚೆಗೆ ಪತ್ನಿ ಸಾಕ್ಷಿ ಅವರೊಂದಿಗೆ ಇಂಡಿಗೋ ವಿಮಾನದಲ್ಲಿ ಪ್ರಯಾಣ ಮಾಡಿದ್ದಾರೆ. ಸೆಲೆಬ್ರಿಟಿ ಎನ್ನುವ ಹಂಗಿಲ್ಲದೆ ಸಾಮಾನ್ಯರಂತೆ ಎಕಾನಮಿ ಕ್ಲಾಸ್‌ನಲ್ಲೇ ಅವರು ಪ್ರಯಾಣ ಮಾಡಿದ್ದಾರೆ. ಈ ವೇಳೆ ಗಗನಸಖಿಯೊಬ್ಬರು ಧೋನಿ ಅವರಿಗೆ ಚಾಕೊಲೇಟ್‌ಗಳ ದೊಡ್ಡ ಟ್ರೇ ಒಂದನ್ನು ಅವರಿಗೆ ಕೊಟ್ಟಿದ್ದಾರೆ. ಅದರಲ್ಲಿ ಧೋನಿ ಅವರು ಒಂದು ಪ್ಯಾಕೇಟ್‌ ಅನ್ನು ಮಾತ್ರ ಎತ್ತಿಕೊಂಡು ಗಗನಸಖಿಯೊಂದಿಗೆ ನಗುತ್ತಾ ಮಾತನಾಡಿ ಕಳುಹಿಸಿದ್ದಾರೆ.

ಇದನ್ನೂ ಓದಿ: Viral Video: ಕಾರಲ್ಲ ಗುರು ಬೈಕ್ ಇದು;‌ 7 ಮಕ್ಕಳನ್ನು ಕೂರಿಸಿಕೊಂಡು ಸ್ಕೂಟಿ ಚಲಾಯಿಸಿದ ವ್ಯಕ್ತಿ
ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು ವೈರಲ್‌ ಆಗಿದೆ. ಇದರಲ್ಲಿ ಎಲ್ಲರ ಗಮನ ಸೆಳೆದಿರುವುದು ಧೋನಿ ಅವರು ತಮ್ಮ್‌ ಟ್ಯಾಬ್‌ನಲ್ಲಿ ಆಡುತ್ತಿದ್ದ ಆಟ. ಗಗನಸಖಿ ಅವರಿಗೆ ಚಾಕೊಲೇಟ್ ಕೊಡುವ ಸಮಯದಲ್ಲಿ ಧೋನಿ ಅವರು ಕ್ಯಾಂಡಿ ಕ್ರಷ್‌ ಸಾಗಾ ಆಟವನ್ನು ಆಡುತ್ತಿದ್ದರು. ಇದನ್ನು ಗಮನಿಸಿದ ಅವರ ಅಭಿಮಾನಿಗಳು ತಾವೂ ಕೂಡ ಮೊಬೈಲ್‌ನಲ್ಲಿ ಅದೇ ಆಟ ಆಡಲೆಂದು ಕ್ಯಾಂಡಿ ಕ್ರಷ್‌ ಅನ್ನು ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ.


ಅಂದ ಹಾಗೆ ಈ ವಿಡಿಯೊ ಕಾಣಿಸಿಕೊಂಡ ನಂತರ ಮೂರೇ ಗಂಟೆಗಳಲ್ಲಿ ಬರೋಬ್ಬರಿ 36 ಲಕ್ಷ ಮಂದಿ ಕ್ಯಾಂಡಿ ಕ್ರಷ್‌ ಆಟವನ್ನು ಡೌನ್‌ಲೋಡ್‌ ಮಾಡಿಕೊಂಡಿದ್ದಾರಂತೆ. ಟ್ವಿಟರ್‌ನಲ್ಲಿ ಧೋನಿ ಟ್ರೆಂಡ್‌ ಆಗುವ ಜತೆಯಲ್ಲಿ ಕ್ಯಾಂಡಿ ಕ್ರಷ್‌ ಕೂಡ ಟ್ರೆಂಡ್‌ ಆಗಿಬಿಟ್ಟಿದೆ. ಈ ಬಗ್ಗೆ ಕ್ಯಾಂಡಿ ಕ್ರಷ್‌ನ ಅಧಿಕೃತವಲ್ಲದ ಟ್ವಿಟರ್‌ ಖಾತೆಯೊಂದರಲ್ಲಿ ಟ್ವೀಟ್‌ ಅನ್ನೂ ಹಂಚಿಕೊಳ್ಳಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral News: ಮತ್ತೊಂದು ಪೆನ್‌ಡ್ರೈವ್‌ ಪ್ರಕರಣ; ಆಪರೇಷನ್ ಥಿಯೇಟರ್‌ನಲ್ಲೇ ನರ್ಸ್‌ ಜೊತೆ ವೈದ್ಯನ ಸರಸ!

Viral News: ಚೆನ್ನೈ ನಗರದ ರಾಯಪೆಟ್ಟಾ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯ ಮತ್ತು ನರ್ಸ್ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿರುವ ವಿಡಿಯೊವೊಂದು ವೈರಲ್ ಆಗಿದೆ. ಈ ವಿಡಿಯೊದಲ್ಲಿರುವ ವೈದ್ಯ ಡಾ.ಸುಬ್ಬಯ್ಯ ಷಣ್ಮುಗಂ ಎಂದು ಗುರುತಿಸಲಾಗಿದೆ. ಈತ ಆಪರೇಷನ್ ಥಿಯೇಟರ್ ನಲ್ಲಿ ನರ್ಸ್ ಜೊತೆ ಇಂತಹ ನೀಚ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಈ ಘಟನೆಗೆ ಸಂಬಂಧಪಟ್ಟ ವಿಡಿಯೊದ ಪೆನ್ ಡ್ರೈ ಜೊತೆಗೆ ವಿಡಿಯೊದಲ್ಲಿರುವ ವೈದ್ಯರ ಬಗ್ಗೆ ಮಾಹಿತಿ ನೀಡಿದ ಪತ್ರವೊಂದು ಸುದ್ದಿವಾಹಿನಿಯೊಂದಕ್ಕೆ ಬಂದಿದೆ ಎನ್ನಲಾಗಿದೆ.

VISTARANEWS.COM


on

Viral News
Koo

ಚೆನ್ನೈ : ಆಸ್ಪತ್ರೆಯನ್ನು ಜನರು ದೇಗುಲವೆಂದು, ವೈದ್ಯರನ್ನು ದೇವರೆಂದು ಭಾವಿಸುತ್ತಾರೆ. ಯಾಕೆಂದರೆ ಇಲ್ಲಿ ಜನರ ಜೀವವನ್ನು ಉಳಿಸುತ್ತಾರೆ ನಂಬಿಕೆ ಇದೆ. ಕಾಯಿಲೆಯಿಂದ ಬಳಲುತ್ತಿರುವವರು ಇಲ್ಲಿ ಮರುಜೀವ ಪಡೆದುಕೊಂಡಿರುತ್ತಾರೆ. ಆದರೆ ಇಂತಹ ದೇಗುಲದಂತಿರುವ ಆಸ್ಪತ್ರೆಯಲ್ಲಿ ನೀಚ ಕೃತ್ಯವನ್ನು ಎಸಗುವುದು ಎಷ್ಟು ಸರಿ? ಅಂತಹದೊಂದು ಘಟನೆ ಇದೀಗ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಚೆನ್ನೈನ ಆಸ್ಪತ್ರೆವೊಂದರ ಆವರಣದಲ್ಲಿ ವೈದ್ಯ ಮತ್ತು ನರ್ಸ್ ಅನೈತಿಕ ಕಾರ್ಯದಲ್ಲಿ ತೊಡಗಿರುವ ವಿಡಿಯೊ ವೈರಲ್‌ (Viral News) ಆಗಿದೆ

ಚೆನ್ನೈ ನಗರದ ರಾಯಪೆಟ್ಟಾ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯ ಮತ್ತು ನರ್ಸ್ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಈ ವಿಡಿಯೊದಲ್ಲಿರುವ ವೈದ್ಯ ಡಾ. ಸುಬ್ಬಯ್ಯ ಷಣ್ಮುಗಂ ಎಂದು ಗುರುತಿಸಲಾಗಿದೆ. ಈತ ಆಪರೇಷನ್ ಥಿಯೇಟರ್ ನಲ್ಲಿ ನರ್ಸ್ ಜೊತೆ ಇಂತಹ ನೀಚ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಈ ಘಟನೆಗೆ ಸಂಬಂಧಪಟ್ಟ ವಿಡಿಯೊದ ಪೆನ್ ಡ್ರೈ ಜೊತೆಗೆ ವಿಡಿಯೊದಲ್ಲಿರುವ ವೈದ್ಯರ ಬಗ್ಗೆ ಮಾಹಿತಿ ನೀಡಿದ ಪತ್ರವೊಂದು ಸುದ್ದಿವಾಹಿನಿಯೊಂದಕ್ಕೆ ಬಂದಿದೆ ಎನ್ನಲಾಗಿದೆ. ಈ ಬಗ್ಗೆ ಆಸ್ಪತ್ರೆಯ ಅಧಿಕಾರಿಗಳ ಬಳಿ ವಿಚಾರಿಸಿದಾಗ ವೈದ್ಯರ ವಿರುದ್ಧ ಯಾವುದೇ ದೂರು ಬಂದಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಆದರೂ ಸಂಸ್ಥೆಯಿಂದ ತನಿಖೆ ಶುರುವಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: Hindujas Family: ಶ್ರೀಮಂತ ಹಿಂದೂಜಾ ಮನೆ ಕೆಲಸದವರಿಗೆ ಸಂಬಳ ಎಷ್ಟು? ನಾಯಿ ಸಾಕುವ ಖರ್ಚಿಗಿಂತ ಕಡಿಮೆ!

ವರದಿ ಪ್ರಕಾರ, ಡಾ. ಷಣ್ಮುಗಂ 2020ರ ಹಿಂದೆ ಕಿರುಕುಳದ ಆರೋಪವನ್ನು ಎದುರಿಸುತ್ತಿದ್ದರು. ವಾಹನ ಪಾರ್ಕಿಂಗ್ ಸಮಸ್ಯೆಯ ಕುರಿತು ಆತ ತನ್ನ ನೆರೆಹೊರೆಯವರ ಜೊತೆ ಗಲಾಟೆಗೆ ಇಳಿದು ಅವರ ಮನೆಯ ಗೇಟ್ ಗಳ ಮೇಲೆ ಮೂತ್ರ ವಿಸರ್ಜನೆ ಮಾಡುವ ವಿಡಿಯೊ ಕೂಡ ವೈರಲ್ ಆಗಿತ್ತು ಎನ್ನಲಾಗಿದೆ.

Continue Reading

ದೇಶ

Savitri Thakur: ‘ಬೇಟಿ ಬಚಾವೋ ಬೇಟಿ ಪಡಾವೋ’ ಎಂದು ಬರೆಯಲು ಬಾರದೆ ಕೇಂದ್ರ ಸಚಿವೆ ಪರದಾಟ; ನೆಟ್ಟಿಗರಿಂದ ‘ಕ್ಲಾಸ್’‌

Savitri Thakur: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಹಾಯಕ ಸಚಿವೆಯಾಗಿರುವ ಸಾವಿತ್ರಿ ಠಾಕೂರ್‌ ಅವರು ಮಧ್ಯಪ್ರದೇಶದ ಧಾರ್‌ನಲ್ಲಿರುವ ಸರ್ಕಾರಿ ಶಾಲೆಯೊಂದರಲ್ಲಿ ನಡೆದ ಸ್ಕೂಲ್‌ ಚಲೋ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಅವರು ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಇದಾದ ಬಳಿಕ ಅವರು ಬೋರ್ಡ್‌ ಮೇಲೆ ಬೇಟಿ ಬಚಾವೋ ಬೇಟಿ ಪಡಾವೋ ಎಂಬ ತಮ್ಮದೇ ಸರ್ಕಾರದ ಅಭಿಯಾನವನ್ನು ಬರೆಯುವಲ್ಲಿ ವಿಫಲರಾಗಿದ್ದಾರೆ. ಇದು ಈಗ ಭಾರಿ ಚರ್ಚೆಗೆ ಕಾರಣವಾಗಿದೆ.

VISTARANEWS.COM


on

Savitri Thakur
Koo

ಭೋಪಾಲ್:‌ ದೇಶದಲ್ಲಿ ಸಿ ದರ್ಜೆ, ಡಿ ದರ್ಜೆ ನೌಕರರನ್ನು ನೇಮಿಸಿಕೊಳ್ಳಲು ಕೂಡ ಮಾನದಂಡ ಇದೆ. ಕನಿಷ್ಠ ಇಷ್ಟೇ ಶಿಕ್ಷಣ ಪಡೆದಿರಬೇಕು ಎಂಬ ನಿಯಮವಿದೆ. ಆದರೆ, ದೇಶದ ಭವಿಷ್ಯ ರೂಪಿಸಬೇಕಾದ ರಾಜಕಾರಣಿಗಳಿಗೆ ಯಾವುದೇ ಶೈಕ್ಷಣಿಕ ಹಿನ್ನೆಲೆಯ ಕಟ್ಟುಪಾಡುಗಳಿಲ್ಲ. ಇದೇ ಕಾರಣಕ್ಕೆ, 10ನೇ ಕ್ಲಾಸು ಫೇಲಾದವರು ಗ್ರಂಥಾಲಯ ಸಚಿವರಾಗುತ್ತಾರೆ, ಓದಲು ಬರದವರೂ ಶಿಕ್ಷಣ ಸಚಿವರಾಗುತ್ತಾರೆ. ಇದಕ್ಕೆ ನಿದರ್ಶನ ಎಂಬಂತೆ, ಕೇಂದ್ರ ಸಚಿವೆ ಸಾವಿತ್ರಿ ಠಾಕೂರ್‌ (Savitri Thakur) ಅವರು ಕೇಂದ್ರ ಸರ್ಕಾರದ ಬೇಟಿ ಬಚಾವೋ ಬೇಟಿ ಪಡಾವೋ (Beti Bachao Beti Padhao) ಅಭಿಯಾನವನ್ನು ಹಿಂದಿಯಲ್ಲಿ ಬರೆಯಲು ಪರದಾಡಿದ್ದಾರೆ. ಅವರು ಅಭಿಯಾನದ ಹೆಸರನ್ನು ತಪ್ಪಾಗಿ ಬರೆದ ವಿಡಿಯೊ ಈಗ ವೈರಲ್‌ (Viral Video) ಆಗಿದೆ.

ಹೌದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಹಾಯಕ ಸಚಿವೆಯಾಗಿರುವ ಸಾವಿತ್ರಿ ಠಾಕೂರ್‌ ಅವರು ಮಧ್ಯಪ್ರದೇಶದ ಧಾರ್‌ನಲ್ಲಿರುವ ಸರ್ಕಾರಿ ಶಾಲೆಯೊಂದರಲ್ಲಿ ನಡೆದ ಸ್ಕೂಲ್‌ ಚಲೋ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ಇದೇ ವೇಳೆ ಅವರು ಬೋರ್ಡ್‌ ಮೇಲೆ ಬೇಟಿ ಬಚಾವೋ ಬೇಟಿ ಪಡಾವೋ ಎಂಬುದಾಗಿ ಬರೆಯಲು ಮುಂದಾಗಿದ್ದಾರೆ. ಆದರೆ, ಅಭಿಯಾನದ ಹೆಸರು ಬರೆಯಲು ಅವರಿಗೆ ಬಂದಿಲ್ಲ. ಅವರು “ಬೇಡಿ ಪಡಾವೋ ಬಚ್ಚಾವ್”‌ ಎಂಬುದಾಗಿ ತಪ್ಪಾಗಿ ಬರೆದಿದ್ದಾರೆ.

ಸಾವಿತ್ರಿ ಠಾಕೂರ್‌ ಅವರು ಚುನಾವಣೆ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್‌ ಮಾಹಿತಿ ಪ್ರಕಾರ, 12ನೇ ತರಗತಿವರೆಗೆ ಓದಿದ್ದಾರೆ. ಪಿಯುಸಿ ಓದಿದರೂ ಅವರಿಗೆ ಸರಿಯಾಗಿ ಬರೆಯಲು ಬರದಿರುವುದಕ್ಕೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕೇಂದ್ರ ಸಚಿವೆಗೇ ಬರೆಯಲು ಬರದಿದ್ದರೆ, ಆ ಖಾತೆಯನ್ನು ಹೇಗೆ ನಿಭಾಯಿಸುತ್ತಾರೆ? ಅವರು ಮಕ್ಕಳ ಕಲ್ಯಾಣಕ್ಕಾಗಿ ಯಾವ ಯೋಜನೆಗಳನ್ನು ತರಲು ಸಾಧ್ಯ” ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೆಯೇ, ರಾಜಕಾರಣಿಗಳಿಗೆ ಶೈಕ್ಷಣಿಕ ಮಿತಿ ಜಾರಿಗೆ ತರಬೇಕು ಎಂದು ಆಗ್ರಹಿಸಿದ್ದಾರೆ.

ವಿಡಿಯೊ ವೈರಲ್‌ ಆಗುತ್ತಲೇ ಪ್ರಕರಣವು ರಾಜಕೀಯ ಸ್ವರೂಪ ಪಡೆದಿದೆ. “ಸಾಂವಿಧಾನಿಕವಾಗಿ ಉನ್ನತ ಜವಾಬ್ದಾರಿಯಲ್ಲಿ ಇರುವವರು, ದೊಡ್ಡ ದೊಡ್ಡ ಖಾತೆ ನಿಭಾಯಿಸುವವರಿಗೇ ತಮ್ಮ ಮಾತೃಭಾಷೆಯಲ್ಲಿ ಬರೆಯಲು ಆಗದಂತಹ ಪರಿಸ್ಥಿತಿ ಇದ್ದರೆ, ಅದು ಪ್ರಜಾಪ್ರಭುತ್ವದ ದೊಡ್ಡ ಅಣಕ. ಅವರು ಹೇಗೆ ಖಾತೆಯನ್ನು ನಿಭಾಯಿಸುತ್ತಾರೆ” ಎಂಬುದಾಗಿ ಕಾಂಗ್ರೆಸ್‌ ಹಿರಿಯ ನಾಯಕ ಕೆ.ಕೆ.ಮಿಶ್ರಾ ಪ್ರಶ್ನಿಸಿದ್ದಾರೆ. ಹಾಗೆಯೇ, ರಾಜಕಾರಣಿಗಳಿಗೂ ಶೈಕ್ಷಣಿಕ ಮಿತಿ ನಿಗದಿಪಡಿಸುವ ಕುರಿತು ಕಾನೂನು ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Vaishnavi Gowda: ಸೀತಮ್ಮಗೆ ಕಿಡಿಗೇಡಿಗಳ ಕಾಟ; ವೈರಲ್ ಆಗ್ತಿದೆ ಡೀಪ್ ಫೇಕ್ ಫೋಟೊ!

Continue Reading

Latest

Viral News: ಆನ್‌ಲೈನ್‌ನಲ್ಲಿ ಬಂದ ಐಸ್ ಕ್ರೀಂನಲ್ಲಿ ಸಿಕ್ಕಿದ ಬೆರಳು ಕಾರ್ಮಿಕನದು!

Viral News: ಈಗ ಎಲ್ಲದಕ್ಕೂ ಆನ್ ಲೈನ್ ಮೊರೆ ಹೋಗುತ್ತೇವೆ. ಈ ಹಿನ್ನೆಲೆ ಯಾವುದಾದರೊದು ಅವಘಡಗಳು ನಡೆಯುತ್ತಲೇ ಇರುತ್ತವೆ. ಇತ್ತೀಚೆಗಷ್ಟೇ ಮುಂಬೈ ಮೂಲದ ಮಹಿಳೆಯೊಬ್ಬರು ತಮ್ಮ ಸಹೋದರನಿಗಾಗಿ ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ಐಸ್ ಕ್ರೀಂನಲ್ಲಿ ಮಾನವನ ಕೈಬೆರಳು ಇರುವುದು ಪತ್ತೆಯಾಗಿತ್ತು. ಈ ಸುದ್ದಿ ಎಲ್ಲೆಡೆ ವೈರಲ್ ಆಗಿತ್ತು. ಇದೀಗ ಆ ಕೈಬೆರಳು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರನದ್ದಾಗಿರಬಹುದು ಎಂಬುದು ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ.

VISTARANEWS.COM


on

Viral News
Koo

ಮುಂಬೈ : ಇತ್ತೀಚೆಗೆ ಮುಂಬೈ ಮೂಲದ ಮಹಿಳೆಯೊಬ್ಬರು ತಮ್ಮ ಸಹೋದರನಿಗಾಗಿ ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ಐಸ್ ಕ್ರೀಂನಲ್ಲಿ ಮಾನವನ ಕೈಬೆರಳು ಇರುವುದು ಪತ್ತೆಯಾಗಿತ್ತು. ಈ ಸುದ್ದಿ ಎಲ್ಲೆಡೆ ಸಿಕ್ಕಾಪಟ್ಟೆ ವೈರಲ್‌ (Viral News) ಆಗಿತ್ತು. ಇದೀಗ ಆ ಕೈಬೆರಳು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರನದ್ದಾಗಿರಬಹುದು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಹಾಗಾಗಿ ಪೊಲೀಸರು ಪ್ರಾಥಮಿಕ ತನಿಖೆಯ ಸಂಶೋಧನೆಯನ್ನು ಖಚಿತಪಡಿಸಿಕೊಳ್ಳಲು ಪರೀಕ್ಷೆಗಳನ್ನು ನಡೆಸುತ್ತಿದ್ದಾರೆ. ಅದಕ್ಕಾಗಿ ಪೊಲೀಸರು ಪುಣೆ ಐಸ್‌ ಕ್ರೀಂ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯ ಡಿಎನ್‌ಎ ಮಾದರಿಯನ್ನು ತನಿಖೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.

ಅಲ್ಲದೇ ಈ ಘಟನೆ ನಡೆದ ಹಿನ್ನಲೆಯಲ್ಲಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಈ ಹಿಂದೆ ಪುಣೆ ಮೂಲದ ಐಸ್ ಕ್ರೀಂ ತಯಾರಕರ ಪರವಾನಗಿಯನ್ನು ತನಿಖೆಗಾಗಿ ಅಮಾನತುಗೊಳಿಸಿತ್ತು ಎಂಬುದಾಗಿ ತಿಳಿದುಬಂದಿದೆ.

ಮುಂಬೈನ ಮಲಾಡ್ ಪ್ರದೇಶದ ಮಹಿಳೆಯೊಬ್ಬಳು ದಿನಸಿ ವಸ್ತುಗಳ ಜೊತೆಗೆ ತನ್ನ ಸಹೋದರನಿಗಾಗಿ ಯುಮ್ಮೋ ಐಸ್ ಕ್ರೀಂ ಕಂಪನಿಯ ಮೂರು ಬಟರ್ ಸ್ಕಾಚ್ ಕೋನ್‌ ಅನ್ನು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ್ದಾಳೆ. ಮನೆಗೆ ಬಂದ ಐಸ್ ಕ್ರೀಂ ಅನ್ನು ಸಹೋದರ ಬಿಚ್ಚಿ ತಿನ್ನುವಾಗ ನಾಲಿಗೆಗೆ ಏನೋ ತಗುಲಿದ ಹಾಗಾಗಿದೆ. ಆಗ ಆತ ಅದನ್ನು ಹೊರತೆಗೆದಾಗ ಅದು ಮಾನವನ ಕೈಬೆರಳಾಗಿದ್ದು ಸುಮಾರು 2 ಸೆಂಟಿಮೀಟರ್ ಉದ್ದವಿತ್ತು ಎಂಬುದಾಗಿ ತಿಳಿದುಬಂದಿದೆ. ಮಹಿಳೆಯ ಸಹೋದರ ವೈದ್ಯನಾಗಿದ್ದ ಕಾರಣ ಆತ ಮಾನವ ಬೆರಳನ್ನು ಕೂಡಲೇ ಪತ್ತೆ ಹಚ್ಚಿದ್ದಾನೆ.

ಈ ಬಗ್ಗೆ ಮಹಿಳೆ ಮಲಾಡ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಯುಮ್ಮೋ ಐಸ್ ಕ್ರೀಂ ಕಂಪನಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 272, 271 ಮತ್ತು 336 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಐಸ್ ಕ್ರೀಂನಲ್ಲಿ ಪತ್ತೆಯಾದ ಮಾನವನ ಕೈಬೆರಳನ್ನು ಫೊರೆನ್ಸಿಕ್ ಗೆ ಕಳುಹಿಸಿದ್ದರು. ಇದೀಗ ಆ ಕೈಬೆರಳು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರನದ್ದಾಗಿರಬಹುದು ಎಂಬುದು ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ.

Continue Reading

Latest

Viral News: ವಿವಾಹಿತ ಮಹಿಳೆ ಮನೆಯ ಟ್ರಂಕ್‌ನೊಳಗೆ ಸಿಕ್ಕಿಬಿದ್ದ ಪ್ರೇಮಿ! ಮುಂದೇನಾಯ್ತು? ವಿಡಿಯೊ ನೋಡಿ!

Viral News: ಪ್ರೀತಿ ಮಾಡುವುದು, ಸಿಕ್ಕಿ ಬೀಳುವುದು ಇದೆಲ್ಲಾ ಸಾಮಾನ್ಯ ವಿಷಯ. ಇಂತಹದ್ದೇ ಒಂದು ಘಟನೆ ಉತ್ತರ ಪ್ರದೇಶದ ಅಜಂಗಢದಲ್ಲಿ ನಡೆದಿದೆ. ವಿವಾಹಿತ ಮಹಿಳೆಯೊಬ್ಬಳ ಪ್ರೇಮಿ ಆಕೆಯನ್ನು ಭೇಟಿ ಮಾಡಲು ಮನೆಗೆ ಬಂದು ಕುಟುಂಬಸ್ಥರ ಕೈಗೆ ಸಿಕ್ಕಿಹಾಕಿಕೊಂಡು ಹಣ್ಣುಗಾಯಿ ನೀರುಗಾಯಿ ಆಗಿದ್ದಾನೆ. ಮನೆಯಲ್ಲಿರುವವರು ಎಚ್ಚರಗೊಂಡರೆ ಟ್ರಂಕ್‌ನೊಳಗೆ ಹೋಗಿ ಅಡಗಿಕೊಳ್ಳುವುದಕ್ಕೆ ಯುವಕನ ಪ್ರೇಮಿ, ವಿವಾಹಿತ ಮಹಿಳೆ ಸಲಹೆ ನೀಡಿದ್ದಳಂತೆ. ಆದರೆ ಯುವಕ ಟ್ರಂಕ್ ನಿಂದ ಹೊರಬರಲು ಅವಕಾಶ ಹುಡುಕುತ್ತಿರುವಾಗ ಮಹಿಳೆಯ ಕುಟುಂಬಸ್ಥರ ಕೈಗೆ ಸಿಕ್ಕಿಹಾಕಿಕೊಂಡಿದ್ದಾನೆ. ಹಾಗಾಗಿ ಎಲ್ಲರೂ ಸೇರಿ ಆತನನ್ನು ಟ್ರಂಕ್ ನಿಂದ ಹೊರಗೆಳೆದು ಹಲವು ಬಾರಿ ಕಪಾಳ ಮೋಕ್ಷ ಮಾಡಿ ತೀವ್ರವಾಗಿ ಥಳಿಸಿದ್ದಾರೆ. ಕುಟುಂಬಸ್ಥರು ಆತನನ್ನು ಕಳ್ಳನೆಂದು ಭಾವಿಸಿದ್ದರು. ಆದರೆ ಆತ ವಿವಾಹಿತ ಮಹಿಳೆಯ ಪ್ರೇಮಿಯೆಂಬುದು ಪೊಲೀಸ್ ವಿಚಾರಣೆಯ ಬಳಿಕ ಗೊತ್ತಾಗಿದೆ.

VISTARANEWS.COM


on

Viral News
Koo

ಉತ್ತರ ಪ್ರದೇಶದ ಅಜಂಗಢದಲ್ಲಿ ವಿವಾಹಿತ ಮಹಿಳೆಯೊಬ್ಬಳ ಮನೆಯಲ್ಲಿರುವ ಟ್ರಂಕ್‌ನೊಳಗೆ ಅಡಗಿ ಕುಳಿತಿದ್ದ ಯುವಕನೊಬ್ಬನಿಗೆ ಆಕೆಯ ಕುಟುಂಬಸ್ಥರು ಸೇರಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಇದು ವೈರಲ್ (viral News) ಆಗಿದೆ.

ಟ್ರಂಕ್‌ನೊಳಗೆ ಯುವಕನಿರುವುದು ತಿಳಿದ ಆಕೆಯ ಕುಟುಂಬಸ್ಥರು ಆತನನ್ನು ತೀವ್ರವಾಗಿ ಥಳಿಸಿದ್ದಾರೆ. ವಿಡಿಯೊದಲ್ಲಿ ಆತನ ಮೇಲೆ ಕುಂಟುಬಸ್ಥರು ಬಿದಿರಿನ ಕೋಲಿನಿಂದ ಹಲ್ಲೆ ಮಾಡಿ ಬೆದರಿಸುತ್ತಿದ್ದು, ಅದಕ್ಕೆ ಆತ ಕ್ಷಮೆಯಾಚಿಸುತ್ತಿರುವುದು ಕಂಡುಬಂದಿದೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಯುವಕ ಟ್ರಂಕ್‌ನಿಂದ ಹೊರಬರಲು ಅವಕಾಶ ಹುಡುಕುತ್ತಿರುವಾಗ ಮಹಿಳೆಯ ಕುಟುಂಬಸ್ಥರ ಕೈಗೆ ಸಿಕ್ಕಿಹಾಕಿಕೊಂಡಿದ್ದಾನೆ. ಹಾಗಾಗಿ ಎಲ್ಲರೂ ಸೇರಿ ಆತನನ್ನು ಟ್ರಂಕ್‌ನಿಂದ ಹೊರಗೆಳೆದು ಹಲವು ಬಾರಿ ಕಪಾಳ ಮೋಕ್ಷ ಮಾಡಿ ತೀವ್ರವಾಗಿ ಥಳಿಸಿದ್ದಾರೆ. ಕುಟುಂಬಸ್ಥರು ಆತನನ್ನು ಕಳ್ಳನೆಂದು ಭಾವಿಸಿದ್ದರು. ಆದರೆ ಆತ ತಾನು ಕಳ್ಳನಲ್ಲ ಏನಾದರೂ ತಿನ್ನಲು ಬಂದಿರುವುದಾಗಿ ತಿಳಿಸಿದ್ದಾನೆ. ಇದಕ್ಕೆ ಸಂಬಂಧಪಟ್ಟ ವಿಡಿಯೊವನ್ನು ಮಹಿಳೆಯ ಕುಟುಂಬಸ್ಥರು ಮಾಡಿರುವುದಾಗಿ ಕಂಡುಬಂದಿದೆ.

ಇದನ್ನೂ ಓದಿ: Mobile Addiction: ನಿಮ್ಮ ಮಗುವನ್ನು ಮೊಬೈಲ್ ಚಟದಿಂದ ತಪ್ಪಿಸಬೇಕೆ? ಈ 5 ಸಲಹೆ ಅನುಸರಿಸಿ

ಯುವಕ ವಿವಾಹಿತ ಮಹಿಳೆಯ ಪ್ರೇಮಿ, ಆಕೆಯ ಕುಟುಂಬದವರಿಂದ ತಪ್ಪಿಸಿಕೊಳ್ಳಲು ಟ್ರಂಕ್‌ನಲ್ಲಿ ಅಡಗಿ ಕುಳಿತಿದ್ದ ಎನ್ನಲಾಗಿದೆ. ಈ ಘಟನೆ ಅಜಂಗಢದ ದೇವಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿ ವ್ಯಕ್ತಿಯನ್ನು ಕುಟುಂಬದವರ ಕೈಯಿಂದ ರಕ್ಷಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ವಿಚಾರಣೆಯ ವೇಳೆ ತನ್ನ ಕುಟುಂಬದವರು ಎಚ್ಚರಗೊಂಡಿದ್ದಕ್ಕೆ ಟ್ರಂಕ್‌ನಲ್ಲಿ ಅಡಗಿಕೊಳ್ಳುವಂತೆ ಆ ಗೆಳತಿಯೇ ಸಲಹೆ ನೀಡಿರುವುದಾಗಿ ವ್ಯಕ್ತಿ ತಿಳಿಸಿದ್ದಾನೆ ಎನ್ನಲಾಗಿದೆ!

Continue Reading
Advertisement
Hooch Tragedy
ದೇಶ1 hour ago

Hooch Tragedy: ಕಳ್ಳಬಟ್ಟಿ ಸೇವಿಸಿ 16 ಮಂದಿ ಸಾವು, 70ಕ್ಕೂ ಅಧಿಕ ಜನ ಅಸ್ವಸ್ಥ

Blacklist contractors who do not complete work within time says Minister Mankala Vaidya
ಉತ್ತರ ಕನ್ನಡ1 hour ago

Uttara Kannada News: ಅವಧಿಯೊಳಗೆ ಕಾಮಗಾರಿ ಮುಕ್ತಾಯಗೊಳಿಸದ ಗುತ್ತಿಗೆದಾರರನ್ನು ಬ್ಲ್ಯಾಕ್ ಲಿಸ್ಟ್‌ಗೆ ಸೇರಿಸಿ: ಸಚಿವ ಮಂಕಾಳ ವೈದ್ಯ

Appu Cup Season 2 to be held in July A team building event was held in Bengaluru
ಬೆಂಗಳೂರು1 hour ago

Appu Cup Badminton: ʼಅಪ್ಪು ಕಪ್ ಸೀಸನ್ 2ʼ; ಟೀಮ್ ಬಿಲ್ಡಿಂಗ್‌ಗೆ ಶುಭ ಕೋರಿದ ಅಶ್ವಿನಿ ಪುನೀತ್ ರಾಜಕುಮಾರ್

RSA vs USA
ಕ್ರೀಡೆ1 hour ago

SA vs USA: ಮಿಂಚಿದ ಡಿಕಾಕ್; ಯುಎಸ್‌ಎ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ 18 ರನ್‌ಗಳ ಜಯ

NET 2024
ದೇಶ2 hours ago

NET 2024: ಪರೀಕ್ಷೆ ನಡೆದ ಒಂದೇ ದಿನದಲ್ಲಿ ನೆಟ್ ರದ್ದುಗೊಳಿಸಿದ ಕೇಂದ್ರ ಸರ್ಕಾರ; ಏನಿದು ಕೇಸ್?‌

Hajj Pilgrims
ದೇಶ3 hours ago

Hajj Pilgrims: ಬಿಸಿಗಾಳಿ, ಬಿಸಿಲಿನ ಹೊಡೆತ; ಹಜ್‌ ಯಾತ್ರೆ ಕೈಗೊಂಡ 68 ಭಾರತೀಯರ ಸಾವು

Bescom complaint against false information video about electricity compensation for farmers
ಕರ್ನಾಟಕ4 hours ago

Fact Check: ಹೊಲದಲ್ಲಿ ಟ್ರಾನ್ಸ್‌ಫಾರ್ಮರ್‌ ಇದ್ದರೆ ರೈತರಿಗೆ ಪರಿಹಾರ? ಬೆಸ್ಕಾಂ ಹೇಳಿದ್ದೇನು?

Murder Case
ಕರ್ನಾಟಕ4 hours ago

Murder Case: 3 ವರ್ಷದ ಬಾಲಕನ ಕತ್ತು ಸೀಳಿ ಕೊಂದ ಚಿಕ್ಕಪ್ಪ; ನದಿಯಲ್ಲಿ ಈಜಲು ಹೋಗಿ ಇಬ್ಬರು ನಾಪತ್ತೆ

Suniel Shetty
ಬಾಲಿವುಡ್4 hours ago

Suniel Shetty: ಅಪ್ಪ ವೇಟರ್‌ ಆಗಿ ಕೆಲಸ ಮಾಡುತ್ತಿದ್ದ ರೆಸ್ಟೋರೆಂಟ್‌ಗೆ ಈಗ ಸುನೀಲ್‌ ಶೆಟ್ಟಿ ಒಡೆಯ; ಇದಪ್ಪ Success ಅಂದ್ರು ಜನ!

DCM DK Shivakumar visit Kengal Anjaneya temple
ಕರ್ನಾಟಕ4 hours ago

DK Shivakumar: ಕೆಂಗಲ್ ಆಂಜನೇಯ ಸ್ವಾಮಿ ದೇವಸ್ಥಾನದಿಂದ ನನ್ನ ಹೊಸ ರಾಜಕೀಯ ಅಧ್ಯಾಯ ಪ್ರಾರಂಭ: ಡಿ.ಕೆ.ಶಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು2 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು3 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ3 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ3 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ4 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ4 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ5 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು5 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು5 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ5 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌