Koppala News Clearing operation is necessary for smooth movement of vehicles MLA G Janardhana Reddy Koppala News: ವಾಹನಗಳ ಸುಗಮ ಸಂಚಾರಕ್ಕೆ ತೆರವು ಕಾರ್ಯಾಚರಣೆ ಅಗತ್ಯ: ಶಾಸಕ ಜಿ. ಜನಾರ್ದನ ರೆಡ್ಡಿ - Vistara News

ಕರ್ನಾಟಕ

Koppala News: ವಾಹನಗಳ ಸುಗಮ ಸಂಚಾರಕ್ಕೆ ತೆರವು ಕಾರ್ಯಾಚರಣೆ ಅಗತ್ಯ: ಶಾಸಕ ಜಿ. ಜನಾರ್ದನ ರೆಡ್ಡಿ

Koppala News: ಗಂಗಾವತಿ ನಗರದಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ರಸ್ತೆ ತೆರವು ಕಾರ್ಯಾಚರಣೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಸಂಬಂಧಿತ ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಾಸಕ ಜಿ. ಜನಾರ್ದನ ರೆಡ್ಡಿ ತಿಳಿಸಿದ್ದಾರೆ.

VISTARANEWS.COM


on

Gangavathi MLA G Janardhana Reddy Observation of road development work
ಗಂಗಾವತಿ ನಗರದಲ್ಲಿ ಶಾಸಕ ಜಿ. ಜನಾರ್ದನ ರೆಡ್ಡಿ, ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಿಸಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗಂಗಾವತಿ: ನಗರದ ಮುಖ್ಯರಸ್ತೆಗಳು (Main roads) ಈ ಮೊದಲು 80 ಅಡಿ (80 Feet) ಇದ್ದವು. ಆದರೆ ಇದೀಗ 30ರಿಂದ 40 ಅಡಿ ಒತ್ತುವರಿಯಾಗಿದ್ದು, ವಾಹನಗಳ (Vehicles) ಸುಗಮ ಸಂಚಾರಕ್ಕೆ ತೆರವು ಕಾರ್ಯಾಚರಣೆ ಅಗತ್ಯ ಎಂದು ಶಾಸಕ ಜಿ. ಜನಾರ್ದನ ರೆಡ್ಡಿ ಹೇಳಿದರು.

ನಗರದ ರಾಣಾ ಪ್ರತಾಪ್‌ ಸಿಂಗ್ ವೃತ್ತದಿಂದ ಸಿಬಿಎಸ್ ವೃತ್ತದ ಮಾರ್ಗವಾಗಿ ರೈಲ್ವೆ ಗೇಟ್ ಬಳಿ ಇರುವ ಸ್ವಾಗತ ಕಮಾನುವರೆಗೂ ಕೆಆರ್‌ಡಿಸಿಎಲ್‌ನಿಂದ ಕೈಗೊಂಡಿದ್ದ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಿಸಿ, ಬಳಿಕ ಅವರು ಮಾತನಾಡಿದರು.

ನಗರದ ರಾಣಾ ಪ್ರತಾಪ್‌ ಸಿಂಗ್ ವೃತ್ತದಿಂದ ಇಂದಿರಾಗಾಂಧಿ ವೃತ್ತದ ಮೂಲಕ ಗಾಂಧಿವೃತ್ತವರೆಗೂ ಮತ್ತು ಕನಕದಾಸ ವೃತ್ತದಿಂದ ನೀಲಕಂಠೇಶ್ವರ ವೃತ್ತದ ರಸ್ತೆ 80 ಅಡಿ ಇರುವ ಬಗ್ಗೆ ಕಮಿಷನರ್ ಮಾಹಿತಿ ನೀಡಿದ್ದಾರೆ. ಹೀಗಾಗಿ ನಗರದಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ರಸ್ತೆ ತೆರವು ಕಾರ್ಯಾಚರಣೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಸಂಬಂಧಿತ ಎಲ್ಲ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ: Anti Child labour day : ಮಕ್ಕಳ ಕೈಗೆ ಪೆನ್ಸಿಲ್‌ ಕೊಡಿ, ಸುತ್ತಿಗೆಯಲ್ಲ; ನಮ್ಮ ಕರ್ನಾಟಕ ಸೇನೆ ಜಾಗೃತಿ ಜಾಥಾ

ರಾಣಾ ಪ್ರತಾಪ್‌ಸಿಂಗ್ ವೃತ್ತ ದೊಡ್ಡದಾಗಿದ್ದು, ಇದರಿಂದ ವಾಹನ ಸವಾರರಿಗೆ ತುಂಬಾ ಸಮಸ್ಯೆಯಾಗಿದೆ. ಹೀಗಾಗಿ ವೃತ್ತದಲ್ಲಿರುವ ರಾಣಾ ಪ್ರತಾಪ್‌ ಸಿಂಗ್ ಪ್ರತಿಮೆಗೆ ಯಾವುದೇ ಹಾನಿಯಾಗದಂತೆ ಗಾತ್ರ ತಗ್ಗಿಸಲಾಗುವುದು.
ವೃತ್ತವನ್ನು ರಸ್ತೆಯ ಪಕ್ಕಕ್ಕೆ ಸರಿಸಿ ರಸ್ತೆ ಅಗಲೀಕರಣ ಮಾಡುವ ಬಗ್ಗೆ ಸಲಹೆ ವ್ಯಕ್ತವಾಗಿವೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಸದ್ಯಕ್ಕೆ ಇರುವ ವೃತ್ತ ಮುಂದುವರಿಯುಂತೆ ಮಾಡಿ ಕೇವಲ ಗಾತ್ರ ತಗ್ಗಿಸುವ ಚಿಂತನೆ ಇದೆ ಎಂದರು.

ಜೂನ್ 6ರಂದು ನಡೆದಿದ್ದ ಕೆಡಿಪಿ ಸಭೆಯಲ್ಲಿ ನಾನಾ ಇಲಾಖೆಗಳ ಅಧಿಕಾರಿಗಳಿಗೆ ಕೆಲ-ಸಲಹೆ ಸೂಚನೆ ನೀಡಲಾಗಿತ್ತು. ಆದರೆ, ಅಧಿಕಾರಿಗಳು ಎಷ್ಟರ ಮಟ್ಟಿಗೆ ಅವುಗಳನ್ನು ಅನುಷ್ಠಾನಕ್ಕೆ ತಂದಿದ್ದಾರೆ ಎಂಬುವುದರ ಪರಿಶೀಲನೆ ಕುರಿತು ಸಭೆ ನಡೆಸಲಾಗುತ್ತಿದೆ.

ವಾಹನ ಸವಾರರಿಂದ ರಸ್ತೆ ಶುಲ್ಕ ಸಂಗ್ರಹಿಸುವ ಟೋಲ್ ಪ್ಲಾಜಾಗಳಿಂದಲೇ ರಸ್ತೆ ನಿರ್ವಹಣೆ ಮಾಡಬೇಕು ಎಂಬ ನಿಯಮವಿದೆ. ಆದರೆ, ಈ ಹಿಂದೆ ಇದ್ದ ಶಾಸಕರು ಈ ಬಗ್ಗೆ ಗಮನ ಹರಿಸಿರಲಿಲ್ಲ.

ಇದನ್ನೂ ಓದಿ: Indigo Flight: ಶ್ರೀನಗರಕ್ಕೆ ಹೊರಟಿದ್ದ ಇಂಡಿಗೋ ವಿಮಾನ ದಿಢೀರನೆ ಪಾಕ್‌ ವಾಯುಪ್ರದೇಶ ಪ್ರವೇಶ

ನಾನು ಶಾಸಕನಾದ ತಕ್ಷಣ ಈ ಕೆಲಸ ಕೈಗೆತ್ತಿಕೊಂಡಿದ್ದು ಕೇವಲ ಒಂದೇ ತಿಂಗಳಲ್ಲಿ ರಸ್ತೆ ನಿರ್ಮಾಣವಾಗುತ್ತಿದೆ. ರಸ್ತೆ ಸುಧಾರಣೆ ಮಾಡಿ ಎಂದು ಟೋಲ್‌ ಪ್ಲಾಜಾಗಳ ಮಾಲಿಕರ ಕೊರಳಪಟ್ಟಿ ಹಿಡಿದು ಈ ಹಿಂದಿನ ಶಾಸಕರು ಕೇಳಬೇಕಿತ್ತು, ಆದರೆ ಅವರು ಕೇಳಿಲ್ಲ, ರಸ್ತೆ ಸುಧಾರಣೆಯಾಗಲಿಲ್ಲ ಎಂದು ಟೀಕಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತುಮಕೂರು

Cylinder Blast: ಗ್ಯಾಸ್‌ ಸಿಲಿಂಡರ್ ಸ್ಫೋಟ; 7 ದಿನ ನರಳಾಡಿ ಪ್ರಾಣಬಿಟ್ಟ ಇಬ್ಬರು ಗಾಯಾಳುಗಳು

Cylinder Blast : ಕಳೆದ ಮೇ 17 ರಂದು ಕುಣಿಗಲ್‌ನಲ್ಲಿ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡಿತ್ತು. ಈ ವೇಳೆ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. 7 ದಿನಗಳು ಹೋರಾಡಿ ನರಳಾಡಿ ಪ್ರಾಣಬಿಟ್ಟಿದ್ದಾರೆ.

VISTARANEWS.COM


on

By

cylinder blast in Tumkur
Koo

ತುಮಕೂರು: ಅಡುಗೆ ಮಾಡುವ ಸಂದರ್ಭದಲ್ಲಿ ಗ್ಯಾಸ್‌ ಸಿಲಿಂಡರ್ ಸ್ಫೋಟಗೊಂಡು (Cylinder Blast) ಆರು ಮಂದಿ ಗಂಭೀರ ಗಾಯಗೊಂಡಿದ್ದ ಘಟನೆ ತುಮಕೂರಿನ (Tum) ಕುಣಿಗಲ್‌ ಪಟ್ಟಣದ ಸಂತೆಬೀದಿಯಲ್ಲಿ ಮೇ 17ರ ಸಂಜೆ ನಡೆದಿತ್ತು. ಕುಣಿಗಲ್‌ನ ಕೋಟೆ ಪ್ರದೇಶದ ಸಿಂಗ್ ಬೀದಿಯ ಮನೆಯಲ್ಲಿ ಸಿಲಿಂಡರ್ ಸ್ಫೋಟದಿಂದಾಗಿ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ಆಸ್ಪತ್ರೆಯಲ್ಲಿ ಮೇ 23ರಂದು ಮೃತಪಟ್ಟಿದ್ದಾರೆ. ಶಿವಣ್ಣ (45) ಮತ್ತು ಕುಶಾಲ್ ನಟರಾಜ್‌ (11) ಮೃತ ದುರ್ದೈವಿಗಳು.

ರವಿಕುಮಾರ್ ಎಂಬುವವರ ಮನೆಯಲ್ಲಿ ಅಡುಗೆ ಮಾಡುವಾಗ ಸಿಲಿಂಡರ್ ಸ್ಫೋಟಗೊಂಡಿತ್ತು. ಸ್ಫೋಟದ ತೀವ್ರತೆಗೆ ಮನೆಯಲ್ಲಿದ್ದ ದಿನಸಿ ಸಾಮಗ್ರಿ ಹಾಗೂ ಕಿಟಕಿ ಬಾಗಿಲುಗಳು ಛಿದ್ರಗೊಂಡು, ಗೋಡೆಗಳು ಬಿರುಕು ಬಿಟ್ಟಿದ್ದವು. ಘಟನೆಯಲ್ಲಿ ಮನೆಯಲ್ಲಿದ್ದ ರವಿಕುಮಾರ್ ಪತ್ನಿ ಶೃತಿ (45) ಮಕ್ಕಳಾದ ಕುಶಾಲ್ (11) ಹೇಮಲತಾ (16) ಅವರಿಗೆ ಗಂಭೀರ ಗಾಯವಾಗಿತ್ತು.

ಇನ್ನು ಸಿಲಿಂಡರ್ ಸ್ಫೋಟದ ಶಬ್ಧ ಕೇಳಿ ಮನೆಯೊಳಗೆ ಬಂದ ಪಕ್ಕದ ಮನೆಯ ಮಂಜಮ್ಮ(42), ಶಿವಣ್ಣ(45), ಸಮೀನಾ (46) ಎಂಬುವವರಿಗೂ ಬೆಂಕಿ ತಗುಲಿ ಗಂಭೀರ ಗಾಯಗಳಾಗಿತ್ತು. ಗಾಯಳುಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಜಿಡ್ಡಿಗೆರೆ ಗ್ರಾಮದ ಶಿವಣ್ಣ ಕುಣಿಗಲ್‌ನಲ್ಲಿ ನಟರಾಜ್ ಎಂಬುವರ ಬಾಡಿಗೆ ಮನೆಯಲ್ಲಿದ್ದರು. ತರಕಾರಿ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ ಶಿವಣ್ಣ, ನಟರಾಜ್ ಮನೆಯಲ್ಲಿ ಸಿಲಿಂಡ‌ರ್ ಸ್ಫೋಟಗೊಂಡಾಗ ಬೆಂಕಿ ನಂದಿಸಲು ಹೋಗಿ ತೀವ್ರ ಸುಟ್ಟಗಾಯಗಳಾಗಿತ್ತು. ಈ ವೇಳೆ ನಟರಾಜ್ ಅವರ ಮಗ ಕುಶಾಲ್ ಕೂಡ ಗಾಯಗೊಂಡಿದ್ದ. ಇದೀಗ ಇವರಿಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇನ್ನುಳಿದ ಇಬ್ಬರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ಪಾಸ್‌ಪೋರ್ಟ್‌ ರದ್ದತಿಗಾಗಿ ಪಿಎಂಗೆ ಸಿದ್ದರಾಮಯ್ಯ ಇನ್ನೊಂದು ಪತ್ರ; ಚುರುಕಾದ ವಿದೇಶಾಂಗ ಇಲಾಖೆ

ಭೀಕರ ದೋಣಿ ದುರಂತ; ಪುಟ್ಟ ಮಕ್ಕಳು ಸೇರಿ 6 ಜನ ನೀರುಪಾಲು

ಮಹಾರಾಷ್ಟ್ರ: ಭೀಕರ ಗಾಳಿಗೆ ದೋಣಿಯಿಂದು ಮಗುಚಿ(Boat Capsizes) ಬಿದ್ದಿದ್ದು, ದೋಣಿಯಲ್ಲಿದ್ದ ಆರು ಜನ ನೀರುಪಾಲಾಗಿರುವ ದಾರುಣ ಘಟನೆ ಮಹಾರಾಷ್ಟ್ರದ (Maharastra) ಪುಣೆಯಲ್ಲಿ ನಡೆದಿದೆ. ಜಿಲ್ಲೆಯ ಫಾಲಘರ್ ತಾಲೂಕಿನ ಕಲಾಶಿ ಬಳಿ ದುರ್ಘಟನೆ ಸಂಭವಿಸಿದ್ದು, ಇಬ್ಬರು ಪುಟ್ಟ ಮಕ್ಕಳು ಸೇರಿ ಆರು ಮಂದಿ ಕಣ್ಮರೆ ಆಗಿದ್ದಾರೆ. ನೀರು ಪಾಲಾಗಿರುವ ಆರು ಮಂದಿಗಾಗಿ ಶೋಧ ಕಾರ್ಯಾಚರಣೆ ಕೈಗೆತ್ತಿಕೊಳ್ಳಲಾಗಿದೆ.

ಘಟನೆ ವಿವರ:

ಮಹಾರಾಷ್ಟ್ರದ ಪುಣೆ ಜಿಲ್ಲೆಯ ಫಾಲಘರ್ ತಾಲೂಕಿನ ಕಲಾಶಿ ಬಳಿ ದೋಣಿ (Boat) ಮುಗುಚಿ 6 ಮಂದಿ ನೀರು ಪಾಲಾಗಿದ್ದಾರೆ. ಉಜ್ಜನಿ ಜಲಾಶಯದ ಹಿನ್ನೀರಿನಲ್ಲಿ ಕುಟುಂಬಸ್ಥರು ದೋಣಿ ವಿಹಾರಕ್ಕೆ ತೆರಳಿದ್ದರು. ಭೀಮಾ ನದಿಗೆ ಅಡ್ಡಲಾಗಿ ಕಟ್ಟಿರುವ ಉಜ್ಜನಿ ಜಲಾಶಯದಲ್ಲಿ ಗೋಕುಳ ಜಾಧವ್(30) ಕೋಮಲ್ ಜಾಧವ್(26) ಶುಭ ಜಾಧವ್(1) ಮಾಹಿ ಜಾಧವ್(3) ನೀರು ಪಾಲಾಗಿದ್ದಾರೆ. ಇನ್ನೂ ಅದೇ ದೋಣಿಯಲ್ಲಿ ಮತ್ತಿಬ್ಬರು ವಿಹಾರಿಗಳು ಸಹ ಪಯಣಿಸುತ್ತಿದ್ದು, ಅವರೂ ನೀರು ಪಾಲಾಗಿದ್ದಾರೆ ಎನ್ನಲಾಗಿದೆ.

ಆ ಇಬ್ಬರು ದುರ್ದೈವಿಗಳನ್ನು ಕುಗ್ಗಾಂವ್ ಗ್ರಾಮದ ಅನುರಾಗ್ ಅವಘಡೆ, ಗೌರವ್ ಡೋಂಗರೆ ಎಂದು ಗುರುತಿಸಲಾಗಿದೆ. ನೀರುಪಾಲಾಗಿರುವವರ ಹುಡುಕಾಟಕ್ಕೆ ರಾಷ್ತ್ರೀಯ ವಿಪತ್ತು ನಿರ್ವಹಣಾ ದಳ (NDRF) ತಂಡದ ಸಿಬ್ಬಂದಿ ಆಗಮಿಸಿದ್ದಾರೆ. ಸ್ಥಳೀಯ ಪೊಲೀಸರ ಸಹಾಯದೊಂದಿಗೆ ಎನ್ ಡಿ ಆರ್ ಎಫ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಹುಡುಕಾಟ ಮುಂದುವರಿಸಿದ್ದಾರೆ.

ಇನ್ನು ನಿನ್ನೆ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ನೀರುಪಾಲಾಗಿರುವ ಆರು ಜನರು ಬದುಕಿರುವ ಸಾಧ್ಯತೆ ಬಹಳಷ್ಟು ಕಡಿಮೆ ಇದೆ. ಇದಾಗ್ಯೂ ಇದುವರೆಗೆ ಯಾರೊಬ್ಬರ ಶವ ಪತ್ತೆ ಆಗಿಲ್ಲ.

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಸಮೀಪ ಸಮುದ್ರದ ಹಿನ್ನೀರಿನಲ್ಲೂ ಮೂರು ದಿನಗಳ ಹಿಂದೆ ಪ್ರವಾಸಿಗರ ಬೋಟ್ ಮಗುಚಿದ್ದು, 40 ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ. ಅಳಿವೆ ಸಂಗಮ ಸ್ಥಳದಿಂದ ತುಸು ದೂರದಲ್ಲಿ ಘಟನೆ (Tourist Boat Capsizes) ನಡೆದಿದ್ದು, ಕರಾವಳಿ ಕಾವಲು ಪಡೆ ಮತ್ತು ಸ್ಥಳೀಯ ರಕ್ಷಣಾ ತಂಡದಿಂದ ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ.

ಮೂಡಂಗಿಯ ಗಣೇಶ, ರಮೇಶ ಎಂಬುವವರ ಪ್ರವಾಸಿ ಬೋಟ್ ಮಗುಚಿದ್ದು, ದೋಣಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ಹತ್ತಿಸಿಕೊಂಡಿದ್ದರಿಂದ ಬೋಟ್ ಮಗುಚಿದೆ. ಸಕಾಲಕ್ಕೆ ಕರಾವಳಿ ಕಾವಲು ಪಡೆ ಆಗಮಿಸಿ ರಕ್ಷಣೆ ಮಾಡಿದ್ದರಿಂದ ದೊಡ್ಡ ದುರಂತವೊಂದು ತಪ್ಪಿದೆ.

ಮತ್ತೊಂದೆಡೆ ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರು ಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಶಿರ್ಲಾಲುವಿನ ಉಬ್ಬರಬೈಲಿನಲ್ಲಿ ನಡೆದಿದೆ. ಮುಡ್ಡಾಯಿಗುಡ್ಡೆ ಹರೀಶ್ ಪೂಜಾರಿ (48), ಹೃತೇಶ್ ಪೂಜಾರಿ (18) ಮೃತಪಟ್ಟವರು. ಮೀನು ಹಿಡಿಯಲೆಂದು ಉಬ್ಬರಬೈಲು ಕೆರೆಗೆ ಹೋಗಿದ್ದಾಗ ದುರ್ಘಟನೆ ನಡೆದಿದೆ. ಮೀನಿಗೆ ಬಲೆ‌ ಹಾಕುವಾಗ ಆಯತಪ್ಪಿ ಕೆರೆಗೆ ಬಿದ್ದು ಇಬ್ಬರೂ ನೀರುಪಾಲಾಗಿದ್ದಾರೆ. ಕಾರ್ಕಳ ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Prajwal Revanna Case: ಪ್ರಜ್ವಲ್‌ ಪಾಸ್‌ಪೋರ್ಟ್‌ ರದ್ದತಿಗಾಗಿ ಪಿಎಂಗೆ ಸಿದ್ದರಾಮಯ್ಯ ಇನ್ನೊಂದು ಪತ್ರ; ಚುರುಕಾದ ವಿದೇಶಾಂಗ ಇಲಾಖೆ

Prajwal Revanna Case: ರಾಜ್ಯ ಸರ್ಕಾರದ ಪತ್ರ ಆಧರಿಸಿ ಕೆಲಸಕ್ಕೆ ಆರಂಬಿಸಿರುವ ಕೇಂದ್ರ ವಿದೇಶಾಂಗ ಇಲಾಖೆ, ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್‌ ರದ್ದು ಮಾಡುವ ಪ್ರಕ್ರಿಯೆ ಆರಂಭಿಸಿದೆ. ಪಾಸ್‌ಪೋರ್ಟ್ ಆಕ್ಟ್ 1967ರ ಸೆಕ್ಷನ್ 10(3)(h) ಅಡಿ ಪಾಸ್‌ಪೋರ್ಟ್ ರದ್ದು ಮಾಡಿ. ಭಾರತಕ್ಕೆ ವಾಪಸ್ ಕರೆ ತರಲು ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿ ಪತ್ರದ ಮೂಲಕ ಕೇಂದ್ರದ ಸಹಕಾರವನ್ನು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ.

VISTARANEWS.COM


on

Prajwal Revanna case Siddaramaiah writes to PM narendra Modi
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ (Prajwal Revanna Case) ಕೇಂದ್ರ ಸರಕಾರದ ವಿರುದ್ಧ ರಾಜತಾಂತ್ರಿಕ ಸಮರದ ಹಾದಿ ಹಿಡಿದಿರುವ ಕರ್ನಾಟಕ ಸರ್ಕಾರ, ಇನ್ನೊಂದು ಪತ್ರವನ್ನು ರವಾನಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅವರಿಗೆ ಮತ್ತೊಂದು ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ (CM Siddaramaiah), ಪ್ರಜ್ವಲ್ ರೇವಣ್ಣನ ರಾಜತಾಂತ್ರಿಕ ಪಾಸ್‌ಪೋರ್ಟ್ (Diplomatic passport) ರದ್ದು ಮಾಡಿ ಎಂದು ಮನವಿ ಮಾಡಿದ್ದಾರೆ.

ರಾಜ್ಯ ಸರ್ಕಾರದ ಪತ್ರ ಆಧರಿಸಿ ಕೆಲಸಕ್ಕೆ ಆರಂಬಿಸಿರುವ ಕೇಂದ್ರ ವಿದೇಶಾಂಗ ಇಲಾಖೆ, ಪ್ರಜ್ವಲ್‌ ರೇವಣ್ಣ ಪಾಸ್‌ಪೋರ್ಟ್‌ ರದ್ದು ಮಾಡುವ ಪ್ರಕ್ರಿಯೆ ಆರಂಭಿಸಿದೆ. ಪಾಸ್‌ಪೋರ್ಟ್ ಆಕ್ಟ್ 1967ರ ಸೆಕ್ಷನ್ 10(3)(h) ಅಡಿ ಪಾಸ್‌ಪೋರ್ಟ್ ರದ್ದು ಮಾಡಿ. ಭಾರತಕ್ಕೆ ವಾಪಸ್ ಕರೆ ತರಲು ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿ ಪತ್ರದ ಮೂಲಕ ಕೇಂದ್ರದ ಸಹಕಾರವನ್ನು ಸಿಎಂ ಸಿದ್ದರಾಮಯ್ಯ ಕೋರಿದ್ದಾರೆ. ಎಸ್‌ಐಟಿ ಹೊರಡಿಸಿದ ಆರೆಸ್ಟ್‌ ವಾರೆಂಟ್‌ ಸಮೇತ ಪತ್ರದ ಜೊತೆಗೆ ಲಗತ್ತಿಸಲಾಗಿದೆ.

ಪ್ರಕರಣ ಪ್ರಧಾನ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಹಾಲಿ ಸಂಸದ ಹಾಗೂ ಮಾಜಿ ಪ್ರಧಾನಿಗಳ ಕುಟುಂಬದ ಸದಸ್ಯನಾಗಿದ್ದು, ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಪ್ರಯಾಣ ಮಾಡಿದ್ದಾರೆ. FIR ದಾಖಲಾಗುವ ಕೆಲ ಗಂಟೆಗಳಿಗೆ ಮುನ್ನ ದೇಶ ತೊರೆದಿದ್ದಾರೆ. ಅವರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಒತ್ತಾಯ ಪೂರ್ವಕವಾಗಿ ವಿಡಿಯೋ ಮಾಡಿರುವ ಆರೋಪಗಳಿವೆ. ಇಂತಹ ಆರೋಪಿ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಕಾನೂನು ಕ್ರಮಗಳಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಆರೋಪಿ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಿ. ಈ ವಿಚಾರವನ್ನು ಅತ್ಯಂತ ಗಂಭೀರ ಎಂದು ಪರಿಗಣಿಸಿ. ಸಾರ್ವಜನಿಕ ಹಿತಾಸಕ್ತಿ ಕಾರಣಕ್ಕಾಗಿ ಪಾಸ್‌ಪೋರ್ಟ್ ರದ್ದುಗೊಳಿಸಿ ಭಾರತಕ್ಕೆ ಬರುವಂತೆ ಮಾಡಿ ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

ಇದು ಸಿಎಂ ಕೇಂದ್ರಕ್ಕೆ ಎರಡನೇ ಬಾರಿ ಬರೆಯುತ್ತಿರುವ ಪತ್ರವಾಗಿದೆ. ಈ ಹಿಂದೆಯೂ ಒಮ್ಮೆ ಅವರು ಪತ್ರ ಬರೆದಿದ್ದರು. ಪ್ರಕರಣದ ಪ್ರಮುಖ ಆರೋಪಿ ಜೆಡಿಎಸ್‌ ಸಂಸದರಾಗಿದ್ದು, ಜೆಡಿಎಸ್‌ ಜತೆಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಯನ್ನು ಮುಜುಗರ ಹಾಗೂ ಇಕ್ಕಟ್ಟಿಗೆ ಸಿಕ್ಕಿಸುವುದು ಈ ಪತ್ರಗಳ ಉದ್ದೇಶವಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಈ ಬಾರಿ ವಿದೇಶಾಂಗ ಇಲಾಖೆ ಪ್ರಕ್ರಿಯೆ ಚುರುಕುಗೊಳಿಸಿರುವುದರಿಂದ, ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್‌ಗೆ ನಿಜವಾಗಿಯೂ ಸಂಕಷ್ಟ ಎದುರಾಗಿದೆ. ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದು ಮಾಡಿದರೆ ಪ್ರಜ್ವಲ್‌ ವಿದೇಶ ಯಾನ ಕಷ್ಟವಾಗಲಿದೆ. ಚಾಲ್ತಿಯಲ್ಲಿಲ್ಲದ ಪಾಸ್‌ಪೋರ್ಟ್‌ ಬಳಸಿದರೆ ಅಧಿಕಾರಿಗಳು ಅವರನ್ನು ಬಂಧಿಸಿ ಭಾರತಕ್ಕೆ ಹಸ್ತಾಂತರಿಸಲು ಸುಲಭವಾಗಲಿದೆ. ಇದರೊಂದಿಗೆ ಪ್ರಜ್ವಲ್‌ಗೆ ಪಲಾಯನದ ದಾರಿಗಳು ಬಂದ್‌ ಆಗಿವೆ.

ವಿದೇಶಾಂಗ ಇಲಾಖೆಗೆ ಎಸ್‌ಐಟಿ ಪತ್ರ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ವಿದೇಶದಲ್ಲಿ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ನಗರದ 42ನೇ ಎಸಿಎಂಎಂ ಕೋರ್ಟ್‌, ಇತ್ತೀಚೆಗೆ ಸಂಸದನ ವಿರುದ್ಧ ಬಂಧನ ವಾರಂಟ್‌ ಹೊರಡಿಸಿ, ಪಾಸ್‌ಪೋರ್ಟ್ ಕ್ಯಾನ್ಸಲ್ ಮಾಡಲು ಅನುಮತಿ ನೀಡಿತ್ತು. ಹೀಗಾಗಿ‌ ಪ್ರಜ್ವಲ್ ಪಾಸ್‌ ಪೋರ್ಟ್ ರದ್ದು ಮಾಡುವಂತೆ ಕೋರಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಎಸ್‌ಐಟಿ ಪತ್ರ ಬರೆದಿದೆ.

ಈ ಕೂಡಲೇ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪಾಸ್ ಪೋರ್ಟ್ ರದ್ದು ಮಾಡಬೇಕು ಎಂದು ಮನವಿ ಮಾಡಿರುವ ಎಸ್‌ಐಟಿ, ಲುಕ್ ಔಟ್ ನೋಟಿಸ್, ಬ್ಲೂ ಕಾರ್ನರ್ ನೋಟಿಸ್ ಎಲ್ಲವನ್ನೂ ಪತ್ರದ ಜತೆ ಟ್ಯಾಗ್ ಮಾಡಿದೆ. ಜತೆಗೆ ಪ್ರಜ್ವಲ್ ವಿರುದ್ಧದ ಪ್ರಕರಣಗಳ ಬಗ್ಗೆ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡಿದ್ದು, ಸಂಸದ ಯಾವ ದೇಶದಲ್ಲಿ ಇದ್ದಾನೆ ಎಂಬ ಮಾಹಿತಿ ನೀಡುವಂತೆ ಮನವಿ ಮಾಡಿದೆ.

ಇದನ್ನೂ ಓದಿ: Prajwal Revanna Case: 400 ಮಹಿಳೆಯರ ಮೇಲೆ ಪ್ರಜ್ವಲ್‌ ಮಾಸ್‌ ರೇಪ್‌ ಆರೋಪ; ರಾಹುಲ್ ಗಾಂಧಿ ವಿರುದ್ಧ ಡಿಜಿಗೆ ಜೆಡಿಎಸ್‌ ದೂರು

Continue Reading

ಪ್ರಮುಖ ಸುದ್ದಿ

Vegetable Rates: ತರಕಾರಿ ಮುಟ್ಟಿದರೆ ಶಾಕ್‌, ಕಿಲೋಗೆ 320 ದಾಟಿದ ಬೀನ್ಸ್!‌

Vegetable Rates: ಬೀನ್ಸ್‌ನ ಬೆಲೆ ಬೆಂಗಳೂರಿನಲ್ಲಿ ನಿನ್ನೆಯೇ ಒಂದು ಕೆಜಿಗೆ 200 ರೂ. ಗಡಿ ದಾಟಿದೆ. ಕಳೆದ ವಾರ 60ರಿಂದ 80 ರೂಪಾಯಿ ಇದ್ದ ಬೀನ್ಸ್ ಬೆಲೆ ಈ ವಾರ ಮುಗಿಲು ಮುಟ್ಟಿದೆ. ಬೆಂಗಳೂರಿನ ಕೆ.ಆರ್‌ ಮಾರುಕಟ್ಟೆಯಲ್ಲಿ ಬೀನ್ಸ್‌ 160ರಿಂದ 190 ರೂಪಾಯಿಗೆ ಮಾರಾಟವಾಗುತ್ತಿದೆ. ಮಾರುಕಟ್ಟೆ ಹೊರಗಡೆ 180ರಿಂದ 230 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಇಷ್ಟಾದರೂ ತಾಜಾ ಬೀನ್ಸ್‌ ಸಿಗುತ್ತಿಲ್ಲ.

VISTARANEWS.COM


on

vegetable rates increase
Koo

ಬೆಂಗಳೂರು: ರಾಜಧಾನಿ ಹಾಗೂ ರಾಜ್ಯದ ಇತರ ಕಡೆಗಳಲ್ಲೂ ತರಕಾರಿ ಬೆಲೆಗಳು (vegetable rates increase) ಗಗನಕ್ಕೇರಿವೆ. ಶ್ರೀಸಾಮಾನ್ಯನ ಕೈ ಸುಡುತ್ತಿರುವ ತರಕಾರಿ ಬೆಲೆಗಳನ್ನು ಕಂಡು ವರ್ತಕರಿಗೆ ಕೂಡ ಚಿಂತೆಯಾಗಿದೆ. ಬೀನ್ಸ್‌ ದರ (Beans rate) ಮೊದಲ ಬಾರಿಗೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ. ಕೆ.ಜಿ. ಬೀನ್ಸ್‌ ಬರೋಬ್ಬರಿ 200- 320 ರೂ.ವರೆಗೆ ತಲುಪಿದೆ. ರಾಜಧಾನಿಯ ಕೆಂಗೇರಿ, ಹೆಬ್ಬಾಳ ಮತ್ತಿತರ ಬಡಾವಣೆಗಳಲ್ಲಿ ಕೆ.ಜಿ.ಗೆ 200 ರೂ. ಇದ್ದರೆ, ಜಯನಗರ ಮತ್ತಿತರ ಬಡಾವಣೆಗಳಲ್ಲಿ ಕೆ.ಜಿ.ಗೆ 320 ರೂ. ಇದೆ.

ಬೀನ್ಸ್‌ನ ಬೆಲೆ ಬೆಂಗಳೂರಿನಲ್ಲಿ ನಿನ್ನೆಯೇ ಒಂದು ಕೆಜಿಗೆ 200 ರೂ. ಗಡಿ ದಾಟಿದೆ. ಕಳೆದ ವಾರ 60ರಿಂದ 80 ರೂಪಾಯಿ ಇದ್ದ ಬೀನ್ಸ್ ಬೆಲೆ ಈ ವಾರ ಮುಗಿಲು ಮುಟ್ಟಿದೆ. ಬೆಂಗಳೂರಿನ ಕೆ.ಆರ್‌ ಮಾರುಕಟ್ಟೆಯಲ್ಲಿ ಬೀನ್ಸ್‌ 160ರಿಂದ 190 ರೂಪಾಯಿಗೆ ಮಾರಾಟವಾಗುತ್ತಿದೆ. ಮಾರುಕಟ್ಟೆ ಹೊರಗಡೆ 180ರಿಂದ 230 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಇಷ್ಟಾದರೂ ತಾಜಾ ಬೀನ್ಸ್‌ ಸಿಗುತ್ತಿಲ್ಲ.

ಅಕಾಲಿಕ ತಾಪಮಾನ ಹಾಗೂ ಮಳೆಯಿಂದಾಗಿ ಇಳುವರಿ ನೆಲಕಚ್ಚಿದ ಪರಿಣಾಮ ಬೆಲೆಗಳು ಏರಿವೆ. ಫೆಬ್ರವರಿಯಿಂದಲೇ ಆರಂಭವಾದ ಬಿಸಿಲ ಧಗೆ ಮಾರ್ಚ್, ಏಪ್ರಿಲ್‌ನಲ್ಲಿ ತುತ್ತ ತುದಿಗೆ ತಲುಪಿತ್ತು. ಬರಗಾಲದಿಂದಾಗಿ ನೀರಿನ ಸಮಸ್ಯೆ ಉಲ್ಬಣಿಸಿತ್ತು. ಹಲವೆಡೆ ಬೋರ್‌ವೆಲ್‌ಗಳು ಬತ್ತಿ ಹೋಗಿದ್ದವು. ಹೀಗಾಗಿ, ತರಕಾರಿ ಬೆಳೆಗಳು ಕೆಲವೆಡೆ ಒಣಗಿವೆ. ಮತ್ತೆ ಕೆಲವೆಡೆ ಬೆಳೆಯಾದರೂ ಹೂ ಉದುರಲು ಅರಂಭಿಸಿತು. ಹೀಗಾಗಿ, ಬೀನ್ಸ್‌ನ ಉತ್ಪಾದನೆ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಯಿತು. ಇದೇ ಅವಧಿಯಲ್ಲಿ ಶುಭ ಸಮಾರಂಭಗಳ ಸೀಸನ್‌ ಬಂದುದರಿಂದ ಬೀನ್ಸ್‌ ಸೇರಿ ತರಕಾರಿಗೆ ಹೆಚ್ಚಿನ ಬೇಡಿಕೆ ಬಂತು. ಆದರೆ, ಬೇಡಿಕೆಗೆ ತಕ್ಕಂತೆ ಪೂರೈಕೆಯಾಗದ ಹಿನ್ನೆಲೆಯಲ್ಲಿ ಏಲ್ಲ ತರಕಾರಿಗಳ ಬೆಲೆ ಏರಿಕೆಯಾಗಿದೆ.

ಬೀನ್ಸ್ ಜೊತೆಗೆ ಗೆಡ್ಡೆಕೂಸು, ಬೀಟ್ರೂಟ್, ಹೀರೇಕಾಯಿ ಎಲ್ಲದರ ದರವೂ ಏರಿಕೆಯಾಗಿದೆ. ಬೆಲೆಗಳು ಹೀಗಿವೆ:

ಬೀನ್ಸ್ : ₹180- ₹230
ಈರುಳ್ಳಿ : ₹30
ಬೀಟ್ರೂಟ್ : ₹40
ಬೆಂಡೆಕಾಯಿ : ₹45
ಗೆಡ್ಡೆಕೂಸು : ₹60
ಕ್ಯಾಪ್ಸಿಕಂ : ₹75 – ₹90
ಹೀರೇಕಾಯಿ : ₹50
ಬೆಳ್ಳುಳ್ಳಿ ₹300
ಆಲೂಗಡ್ಡೆ ₹40
ಕ್ಯಾರೆಟ್ ₹50
ಬೀಟ್‌ರೂಟ್ ₹100
ಟೊಮ್ಯಾಟೊ ₹50
ಎಲೆಕೋಸು ₹40
ಹೂಕೋಸು ಒಂದಕ್ಕೆ ₹40
ಬದನೆಕಾಯಿ ₹80

ಕೊತ್ತಂಬರಿ ಒಂದು ಕಟ್ಟು ₹50
ಪಾಲಕ್ ₹40
ಪುದಿನಾ ₹10
ಸಬ್ಸಿಗೆ ₹50
ಮೆಂತ್ಯ ₹50
ನುಗ್ಗೆಕಾಯಿ ಒಂದಕ್ಕೆ- ₹10- ₹12

ಇದನ್ನೂ ಓದಿ: Karnataka Weather: ಇಂದು ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

Continue Reading

ವಿಜಯನಗರ

Medical Negligence: ಅಮಾಯಕ ಬಾಲಕನ ಜೀವ ತೆಗೆದ ಆಸ್ಪತ್ರೆಗೆ ಬೀಗ!

Vistara News impact: ವಿಜಯನಗರ ಜಿಲ್ಲೆಯ ಹೊಸಪೇಟೆಯ ಅಮರಾವತಿಯಲ್ಲಿರುವ ಶರಣಂ ಆಸ್ಪತ್ರೆಯಲ್ಲಿ ಮೇ 9ರಂದು ಗೌತಮ್ (9) ಎನ್ನುವ ಬಾಲಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ. ಅಂದೇ ಮೃತನ ಬಂಧುಗಳು ಆಸ್ಪತ್ರೆ ಎದುರು ಶವವಿಟ್ಟು ಪ್ರತಿಭಟನೆ ಮಾಡಿದ್ದರು. ವೈದ್ಯರ ನಿರ್ಲಕ್ಷ್ಯದಿಂದ ಸಾವಾಗಿದೆ ಎಂದು ಆರೋಪಿಸಿ ಶವ ಇಟ್ಟು ಪ್ರತಿಭಟನೆ ಮಾಡಿದ್ದರು.

VISTARANEWS.COM


on

vistara news impact medical negligence
Koo

ವಿಜಯನಗರ: ವಿಸ್ತಾರ ನ್ಯೂಸ್ ವರದಿಯಿಂದ ಮತ್ತೊಂದು ಬಿಗ್ ಇಂಪ್ಯಾಕ್ಟ್ (Vistara News impact) ಆಗಿದೆ. KPME ಕಾಯಿದೆ ಉಲ್ಲಂಘಿಸಿ ಅಮಾಯಕ ರೋಗಿಗಳ ಜೀವ ತೆಗೆದ ಆರೋಪದ (medical negligence) ಹಿನ್ನೆಲೆಯಲ್ಲಿ, ಹೊಸಪೇಟೆಯ ಶರಣಂ ಆಸ್ಪತ್ರೆ ಮುಚ್ಚಲು ಆದೇಶ ನೀಡಲಾಗಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆಯ ಅಮರಾವತಿಯಲ್ಲಿರುವ ಶರಣಂ ಆಸ್ಪತ್ರೆಯಲ್ಲಿ ಮೇ 9ರಂದು ಗೌತಮ್ (9) ಎನ್ನುವ ಬಾಲಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ. ಅಂದೇ ಮೃತನ ಬಂಧುಗಳು ಆಸ್ಪತ್ರೆ ಎದುರು ಶವವಿಟ್ಟು ಪ್ರತಿಭಟನೆ ಮಾಡಿದ್ದರು. ವೈದ್ಯರ ನಿರ್ಲಕ್ಷ್ಯದಿಂದ ಸಾವಾಗಿದೆ ಎಂದು ಆರೋಪಿಸಿ ಶವ ಇಟ್ಟು ಪ್ರತಿಭಟನೆ ಮಾಡಿದ್ದರು.

ಈ ಹಿಂದೆಯೂ ಈ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಕೆಲವು ಸಾವುಗಳು ಸಂಭವಿಸಿರುವ ಆರೋಪಗಳು ಇವೆ. ಆಗಲೂ ಆಸ್ಪತ್ರೆ ಎದುರು ಪಾಲಕರು ಶವವಿಟ್ಟು ಪ್ರತಿಭಟನೆ ಮಾಡಿದ್ದರು. ಶವವಿಟ್ಟು ಪ್ರತಿಭಟನೆ ಮಾಡಿದಾಗ ಶಾಸಕ ಗವಿಯಪ್ಪ, DHO ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇದನ್ನು ವಿಸ್ತಾರ ನ್ಯೂಸ್ ಬಿತ್ತರಿಸಿತ್ತು.

ಪದೇ ಪದೆ ನಿರ್ಲಕ್ಷ್ಯ ತೋರಿದ ಖಾಸಗಿ ಆಸ್ಪತ್ರೆ ವಿರುದ್ಧ ಇದೀಗ ಆರೋಗ್ಯ ಇಲಾಖೆ ಸಮರ ಸಾರಿದೆ. ಸಾವಿನ ವರದಿ ಆಧರಿಸಿ ವಿಜಯನಗರ ಜಿಲ್ಲಾಡಳಿತ ಡೆತ್ ಆಡಿಟ್‌ಗೆ ಆದೇಶ ನೀಡಿತ್ತು. ವಿಜಯನಗರ ಡಿಸಿ ದಿವಾಕರ್ ಎಂಎಸ್ ಆರೋಗ್ಯ ಇಲಾಖೆಗೆ ತನಿಖೆಗೆ ಸೂಚಿಸಿದ್ದರು. ತನಿಖೆಯ ಬಳಿಕ, ರೋಗಿಗಳ ಜತೆ ಚೆಲ್ಲಾಟವಾಡುವ ಖಾಸಗಿ ಆಸ್ಪತ್ರೆಗೆ ಸದ್ಯ ಜಿಲ್ಲಾಡಳಿತ ಬ್ರೇಕ್ ಹಾಕಿದೆ. ಸದ್ಯ ಆಸ್ಪತ್ರೆಯಲ್ಲಿರುವ ರೋಗಿಗಳನ್ನು ಬೇರೆಕಡೆ ಸ್ಥಳಾಂತರ ಮಾಡಲು ಸೂಚಿಸಿದೆ.

KPME (Karnataka Private Medical Establishment Act) ಕಾಯಿದೆಯು ಖಾಸಗಿ ಆಸ್ಪತ್ರೆಗಳನ್ನು ರಾಜ್ಯ ಸರ್ಕಾರದ ಅಧಿಕಾರದ ವ್ಯಾಪ್ತಿಯೊಳಗೆ ತರುತ್ತಿದ್ದು, ಆರೋಗ್ಯ ಸೇವೆಯಲ್ಲಿ ಕಳಪೆ ಗುಣಮಟ್ಟ, ನಿರ್ಲಕ್ಷ್ಯ, ಸೇವಾ ನ್ಯೂನತೆಗಳು ಕಂಡುಬಂದಲ್ಲಿ ತಕ್ಕ ಕ್ರಮಗಳನ್ನು ಕೈಗೊಳ್ಳುವ ಅಧಿಕಾರವನ್ನು ಜಿಲ್ಲಾಡಳಿತಕ್ಕೆ ನೀಡುತ್ತದೆ.

ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ ಸಾವು; 35 ಲಕ್ಷ ಬಿಲ್‌ ಕಟ್ಟಿ ಮೃತದೇಹ ತೆಗೆದುಕೊಳ್ಳಿ ಎಂದ ಆಸ್ಪತ್ರೆ!

ಬೆಂಗಳೂರು: ಅವಳಿ ಮಕ್ಕಳಿಗೆ ಜನ್ಮ ನೀಡಿದ ಬೆನ್ನಲ್ಲೇ ತಾಯಿ (Mother Dies) ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದ್ದು, ವೈದ್ಯರ ನಿರ್ಲಕ್ಷ್ಯದಿಂದಲೇ ಬಾಣಂತಿ ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ನಗರದ ಕ್ಲೌಡ್‌ನೈನ್‌ ಆಸ್ಪತ್ರೆಯಲ್ಲಿ ಗರ್ಭಿಣಿಗೆ ಅವಧಿಪೂರ್ವ ಹೆರಿಗೆಯಾದ ಬಳಿಕ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಬಾಣಂತಿ ಮೃತಪಟ್ಟಿದ್ದಾರೆ. ಇದಕ್ಕೆ ಕ್ಲೌಡ್‌ನೈನ್‌ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಜನನಿ (33) ಮೃತ ಬಾಣಂತಿ. ಕ್ಲೌಡ್‌ನೈನ್‌ (CloudNine) ಆಸ್ಪತ್ರೆಯಲ್ಲಿ ಐವಿಎಫ್‌ ಮೂಲಕ ಜನನಿ ಮತ್ತು ಕೇಶವ್ ದಂಪತಿ ಮಕ್ಕಳನ್ನು ಪಡೆದಿದ್ದರು. ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಮೇ 2ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗಾಗಿ ದಂಪತಿ ಹೆರಿಗೆ ಪ್ಯಾಕೇಜ್ ಮಾಡಿಸಿದ್ದರು. ಜನನಿಗೆ ಅವಧಿ ಪೂರ್ವ (7.5 ತಿಂಗಳಿಗೆ) ಹೆರಿಗೆ ಆಗಿತ್ತು. ನಂತರ ಆಕೆಗೆ ಜಾಂಡೀಸ್ ಇದೆ, ಲಿವರ್ ಸಮಸ್ಯೆ ಇದೆ ಎಂದು ವೈದ್ಯರು ಹೇಳಿದ್ದರು, ಪರಿಸ್ಥಿತಿ ಗಂಭೀರವಾಗಿದ್ದರಿಂದ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿತ್ತು. ಆದರೆ ಬುಧವಾರ ಬೆಳಗ್ಗೆ ಜನನಿ ಸಾವನ್ನಪ್ಪಿದ್ದಾರೆ.

ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ 30 ಲಕ್ಷ ಬಿಲ್‌ ಆಗಿದ್ದು, ಈ ಬಿಲ್ ಪಾವತಿಸಿ ಮೃತದೇಹ ತೆಗೆದುಕೊಂಡು ಹೋಗಿ ಎಂದು ಅಲ್ಲಿನ ಸಿಬ್ಬಂದಿ ಹೇಳಿದ್ದಾರೆ. ಆದರೆ ಕ್ಲೌಡ್‌ನೈನ್‌ ಆಸ್ಪತ್ರೆಯವರ ನಿರ್ಲಕ್ಷ್ಯಕ್ಕೆ ಜನನಿ ಸಾವಾಗಿದೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಬಿಲ್ ಅನ್ನು CloudNine ಆಸ್ಪತ್ರೆಯೇ ಪಾವತಿಸಬೇಕೆಂದು ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ಜೆ.ಬಿ.ನಗರ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಮೃತ ಜನನಿ ಪತಿ ಕೇಶವ್‌ ಪ್ರತಿಕ್ರಿಯಿಸಿ, ಕಳೆದ ತಿಂಗಳು ಪರೀಕ್ಷೆಗೆ ಬಂದಾಗ ವೈದ್ಯರು ಕೆಲವು ಮಾತ್ರೆಗಳನ್ನು ಕೊಟ್ಟಿದ್ದರು. ನಂತರ ನನ್ನ ಹೆಂಡತಿಗೆ ಕಾಲು ಊತ ಸೇರಿ ಆರೋಗ್ಯದಲ್ಲಿ ಕೆಲ ಸಮಸ್ಯೆ ಕಂಡುಬಂತು. ಮೇ 2ರಂದು ತಾರಿಖು ಬೆಳಗ್ಗೆ ಚಿಕಿತ್ಸೆಗೆ ಬಂದಿದ್ದೆವು, ಅಂದು ಎರಡು ಮಗು ಡೆಲಿವರಿ ಆಯ್ತು. ಆವತ್ತು ಬೆಳಗ್ಗೆ 11 ಗಂಟೆಗೆ ಹೆಂಡತಿಯನ್ನು ಮಾತನಾಡಿಸಿದಾಗ ಚೆನ್ನಾಗಿದ್ದಳು. ಇದ್ದಕ್ಕಿದ್ದಂತೆ ಸೀರಿಯಸ್ ಆಗಿದೆ ಎಂದರು. ನಂತರ ಮಣಿಪಾಲ್ ಆಸ್ಪತ್ರೆಗೆ ಕಳುಹಿಸಿದರು. ಈಗ ಪೇಮೆಂಟ್ ಮಾಡಿದರೆ ಮಾತ್ರ ನನ್ನ ಹೆಂಡತಿ ಮೃತದೇಹ ಸಿಗುತ್ತೆ ಎನ್ನುತ್ತಿದ್ದಾರೆ. 11 ಲಕ್ಷದ ಮೆಡಿಸಿನ್ ತಂದಿದ್ದೆ. 30 ಲಕ್ಷ ಬಿಲ್ ಆಗಿದೆ. ಇವರು ಮಾಡಿದ ತಪ್ಪಿನಿಂದ ನಮಗೆ ಸಮಸ್ಯೆ ಆಗಿದೆ ಎಂದು ಹೇಳಿದ್ದಾರೆ.

ಕ್ಲೌಡ್‌ನೈನ್‌ ಆಸ್ಪತ್ರೆಯಲ್ಲಿ ಹೆರಿಗೆಗೆ 1 ಲಕ್ಷ 30 ಸಾವಿರ ಪ್ಯಾಕೇಜ್ ಇತ್ತು. ಇಲ್ಲೂ 25 ಲಕ್ಷ ಬಿಲ್ ಆಗಿದೆ, ಮಣಿಪಾಲ್‌ ಆಸ್ಪತ್ರೆಯಲ್ಲೂ 30 ಲಕ್ಷ ಬಿಲ್ ಆಗಿದೆ. ಇವರ ಎಡವಟ್ಟಿನಿಂದ ಅಲ್ಲಿ ಹಣ ಕಟ್ಟಿ ಮೃತದೇಹ ತರಬೇಕಾದ ಪರಿಸ್ಥಿತಿ ಬಂದಿದೆ. ಈಗ ತಪ್ಪು ನೀವು ಮಾಡಿದ್ದು, ನೀವೇ ಪರಿಹಾರ ನೀಡಬೇಕು ಎಂದು ಕೇಳಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ | Assault Case: ಯುವತಿಯ ಪ್ರಿಯಕರನ ಕುತ್ತಿಗೆಗೆ ಚಾಕುವಿನಿಂದ ಇರಿದ ಮಾಜಿ ಪ್ರಿಯಕರ!

Continue Reading
Advertisement
cylinder blast in Tumkur
ತುಮಕೂರು2 mins ago

Cylinder Blast: ಗ್ಯಾಸ್‌ ಸಿಲಿಂಡರ್ ಸ್ಫೋಟ; 7 ದಿನ ನರಳಾಡಿ ಪ್ರಾಣಬಿಟ್ಟ ಇಬ್ಬರು ಗಾಯಾಳುಗಳು

Kalki 2898 AD
ಸಿನಿಮಾ12 mins ago

Kalki 2898 AD: ʼಕಲ್ಕಿʼ ಚಿತ್ರದ ನಾಯಕ ಭೈರವನ ಆಪ್ತ ಗೆಳೆಯ ಬುಜ್ಜಿ ಯಾರು? ಈ ವಿಡಿಯೊ ನೋಡಿ

Prajwal Revanna case Siddaramaiah writes to PM narendra Modi
ಕ್ರೈಂ36 mins ago

Prajwal Revanna Case: ಪ್ರಜ್ವಲ್‌ ಪಾಸ್‌ಪೋರ್ಟ್‌ ರದ್ದತಿಗಾಗಿ ಪಿಎಂಗೆ ಸಿದ್ದರಾಮಯ್ಯ ಇನ್ನೊಂದು ಪತ್ರ; ಚುರುಕಾದ ವಿದೇಶಾಂಗ ಇಲಾಖೆ

Physical Abuse
ಕ್ರೈಂ44 mins ago

Physical Abuse: ಹಿಂದು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಮುಸ್ಲಿಂ ಯುವಕರಿಗೆ ಜೀವಾವಧಿ ಶಿಕ್ಷೆ

India Head Coach
ಕ್ರೀಡೆ48 mins ago

India Head Coach: ರಿಕಿ ಪಾಂಟಿಂಗ್ ಟೀಮ್​ ಇಂಡಿಯಾದ ಮುಂದಿನ ಕೋಚ್​!

Viral Video
ವೈರಲ್ ನ್ಯೂಸ್51 mins ago

Viral Video: ಸುಡುವ ಮರಳಿನಲ್ಲಿ ಹಪ್ಪಳ ಸುಟ್ಟ ಬಿಎಸ್‌ಎಫ್‌ ಯೋಧ; ಎಲ್ಲೆಡೆ ಇದೇ ವಿಡಿಯೋ ವೈರಲ್‌

Hanuman Chalisa
ಧಾರ್ಮಿಕ1 hour ago

Hanuman Chalisa: ಹನುಮಾನ್ ಚಾಲೀಸಾ ಪಠಿಸುವಾಗ ಈ ತಪ್ಪುಗಳನ್ನು ಮಾಡಬೇಡಿ

RCB
ಕ್ರೀಡೆ1 hour ago

RCB: ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ಸೋಲಿಗೆ ವಿಜಯ್​ ಮಲ್ಯ ಕಾರಣವಂತೆ!

Cyber Crime
ಕ್ರೈಂ2 hours ago

ಎಐ ತಂತ್ರಜ್ಞಾನದಿಂದ ಹಿಂದು ಯುವತಿಯ ಅಶ್ಲೀಲ ವಿಡಿಯೊ ಸೃಷ್ಟಿಸಿ ಇಸ್ಲಾಂಗೆ ಮತಾಂತರಗೊಳಿಸಲು ಯತ್ನ: ಫೈಜಲ್ ವಿರುದ್ಧ ದೂರು

vegetable rates increase
ಪ್ರಮುಖ ಸುದ್ದಿ2 hours ago

Vegetable Rates: ತರಕಾರಿ ಮುಟ್ಟಿದರೆ ಶಾಕ್‌, ಕಿಲೋಗೆ 320 ದಾಟಿದ ಬೀನ್ಸ್!‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ6 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 day ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌