Ireland Tour: ಉಮ್ರಾನ್‌ಗೆ ಕೊನೇ ಓವರ್‌ ಕೊಟ್ಟಿದ್ದು ಕರೆಕ್ಟ್‌ ಆಗಿದೆ ಎಂದ ನಾಯಕ ಹಾರ್ದಿಕ್‌ - Vistara News

ಕ್ರಿಕೆಟ್

Ireland Tour: ಉಮ್ರಾನ್‌ಗೆ ಕೊನೇ ಓವರ್‌ ಕೊಟ್ಟಿದ್ದು ಕರೆಕ್ಟ್‌ ಆಗಿದೆ ಎಂದ ನಾಯಕ ಹಾರ್ದಿಕ್‌

Ireland Tour ಎರಡನೇ ಪಂದ್ಯದ ಕೊನೇ ಓವರ್‌ ಅನ್ನು ಯುವ ಬೌಲರ್‌ ಉಮ್ರಾನ್ ಮಲಿಕ್‌ಗೆ ನೀಡಿರುವ ತಮ್ಮ ನಿರ್ಧಾರ ಸರಿಯಾಗಿಯೇ ಇದೆ ಎಂದು ಟೀಮ್‌ ಇಂಡಿಯಾ ನಾಯಕ ಹಾರ್ದಿಕ್‌ ಪಾಂಡ್ಯ ಹೇಳಿದ್ದಾರೆ.

VISTARANEWS.COM


on

IRELAND TOUR
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಡಬ್ಲಿನ್‌: ಐರ್ಲೆಂಡ್ ವಿರುದ್ಧದ ಟಿ ೨೦ ಸರಣಿಯ (Ireland Tour) ಎರಡನೇ ಪಂದ್ಯದ ಕೊನೇ ಓವರ್‌ ಅನನುಭವಿ ಉಮ್ರಾನ್‌ ಮಲಿಕ್‌ಗೆ ಕೊಟ್ಟಿರುವುದು ಆ ಸಂದರ್ಭಕ್ಕೆ ಸರಿಯಾದ ಆಯ್ಕೆ ಎಂದು ಭಾರತ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಸಮರ್ಥಿಸಿಕೊಂಡಿದ್ದಾರೆ.

ರೋಚಕವಾಗಿ ನಡೆದ ಈ ಪಂದ್ಯದ ಕೊನೇ ಓವರ್‌ನಲ್ಲಿ ಆತಿಥೇಯ ಐರ್ಲೆಂಡ್‌ ತಂಡಕ್ಕೆ ಗೆಲ್ಲಲು ೧೭ ರನ್‌ಗಳು ಬೇಕಾಗಿದ್ದವು. ಈ ಅವಧಿಯಲ್ಲಿ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಹೆಚ್ಚು ಅನುಭವ ಹೊಂದಿರುವ ಬೌಲರ್‌ಗಳು ಚೆಂಡೆಸೆಯಬೇಕಾಗುತ್ತದೆ. ಅನನುಭವಿಗಳಾದರೆ ರನ್‌ ಬಿಟ್ಟುಕೊಡುವ ಸಾಧ್ಯತೆಗಳೇ ಹೆಚ್ಚು. ಹೀಗಾಗಿ ೨ ಓವರ್‌ ಎಸೆದು ೧೮ ರನ್ ಮಾತ್ರ ನೀಡಿದ್ದ ಸ್ವತಃ ಹಾರ್ದಿಕ್‌ ಪಾಂಡ್ಯ ಬೌಲಿಂಗ್‌ ಮಾಡಬೇಕಾಗಿತ್ತು. ಆದರೆ, ನಾಯಕ ಪಾಂಡ್ಯ ಯುವ ಬೌಲರ್‌ ಉಮ್ರಾನ್‌ ಮಲಿಕ್‌ ಕೈಗೆ ಚೆಂಡು ನೀಡಿದ್ದರು. ಆದರೆ, ಮೊದಲ ಮೂರು ಎಸೆತಗಳಲ್ಲಿ ಅವರು ೧೦ ರನ್‌ ಬಿಟ್ಟುಕೊಟ್ಟರು. ಅದರಲ್ಲೂ ಒಂದು ನೋ ಬಾಲ್‌ ಹಾಗೂ ಫೋರ್‌. ಹೀಗಾಗಿ ಕೊನೆ ಎರಡು ಎಸೆತಗಳಲ್ಲಿ ಐರ್ಲೆಂಡ್‌ಗೆ ಏಳು ರನ್‌ ಬೇಕಾಯಿತು. ಆ ಬಳಿಕ ಎರಡು ರನ್‌ ಮಾತ್ರ ಬಿಟ್ಟುಕೊಟ್ಟ ಅವರು ತಂಡವನ್ನು ಗೆಲ್ಲಿಸಿದ್ದರು.

ಅವರ ವೇಗಕ್ಕೆ ಬ್ಯಾಟಿಂಗ್ ಸುಲಭವಲ್ಲ

ಉಮ್ರಾನ್‌ ಮಲಿಕ್‌ಗೆ ಚೆಂಡು ನೀಡುವ ವೇಳೆ ಯಾವುದೇ ಚಿಂತೆ ಇರಲಿಲ್ಲ. ಅವರು ಹೊಂದಿರುವ ಗರಿಷ್ಠ ವೇಗವನ್ನು ನಾನು ಯಾವಾಗಲೂ ಬೆಂಬಲಿಸುತ್ತೇನೆ. ಅವರ ವೇಗದ ಎಸೆತಕ್ಕೆ ರನ್‌ ಹೊಡೆಯುವುದು ಅಷ್ಟೊಂದು ಸುಲಭವಲ್ಲ. “”ನಾವೂ ಕ್ರಿಕೆಟ್‌ ಆಡುತ್ತಿದ್ದು, ಗೆಲುವಿಗಾಗಿ ಗರಿಷ್ಠ ಪ್ರಯತ್ನ ಮಾಡುತ್ತೇವೆ. ಅಂತೆಯೇ ಐರ್ಲೆಂಡ್‌ ಕೂಡ ಉತ್ತಮವಾಗಿ ಅಡಿದೆ,” ಎಂದು ಪಾಂಡ್ಯ ಸಮರ್ಥನೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: IND-IRE T20 |‌ ಹೂಡ-ಹಾರ್ದಿಕ್‌ ಬ್ಯಾಟಿಂಗ್‌ ಅಬ್ಬರ, ಐರ್ಲೆಂಡ್‌ ವಿರುದ್ಧದ ಟಿ20 ಪಂದ್ಯದಲ್ಲಿ ಭಾರತಕ್ಕೆ ಗೆಲುವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Paris Olympics 2024 : ಒಲಿಂಪಿಕ್ಸ್ ಕ್ವಾರ್ಟರ್​ಫೈನಲ್​ಗೇರಿ ದಾಖಲೆ ಸೃಷ್ಟಿಸಿದ ಬ್ಯಾಡ್ಮಿಂಟನ್ ಪುರುಷರ ಡಬಲ್ಸ್ ಜೋಡಿ ಸಾತ್ವಿಕ್​- ಚಿರಾಗ್​

Paris Olympics 2024 : ಕ್ವಾರ್ಟರ್ ಫೈನಲ್​ನಲ್ಲಿ ಸ್ಥಾನ ಭದ್ರಪಡಿಸಿಕೊಂಡಿರುವ ಸಾತ್ವಿಕ್ ಸಾಯಿರಾಜ್ ಮತ್ತು ಚಿರಾಗ್ ಈಗ ಇಂಡೋನೇಷ್ಯಾ ವಿರುದ್ಧದ ಮುಂಬರುವ ಪಂದ್ಯದತ್ತ ಗಮನ ಹರಿಸಲಿದ್ದು, ಗುಂಪು ಹಂತವನ್ನು ಉನ್ನತ ಮಟ್ಟದಲ್ಲಿ ಮುಗಿಸುವ ಗುರಿ ಹೊಂದಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಪದಕಕ್ಕಾಗಿ ತಮ್ಮ ಪ್ರಭಾವಶಾಲಿ ಓಟ ಮತ್ತು ಸವಾಲನ್ನು ಮುಂದುವರಿಸಲು ಭಾರತೀಯ ಜೋಡಿ ಉತ್ಸುಕವಾಗಿದೆ.

VISTARANEWS.COM


on

Paris Olympics 2024 :Satwik-Chirag reach men's doubles quarter-finals
Koo

ಬೆಂಗಳೂರು: ಭಾರತದ ಪುರುಷರ ಬ್ಯಾಡ್ಮಿಂಟನ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ (Paris Olympics 2024) ಕ್ವಾರ್ಟರ್ ಫೈನಲ್ಸ್​​ ತಲುಪಿದ್ದಾರೆ. ಈ ಮೂಲಕ ಅವರು ಒಲಿಂಪಿಕ್ಸ್​ನಲ್ಲಿ ಎಂಟರ ಘಟ್ಟಕ್ಕೇರಿದ ಮೊದಲ ಭಾರತೀಯ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗುಂಪು ಹಂತದಲ್ಲಿ ಇವರಿಬ್ಬರ ಪ್ರಭಾವಶಾಲಿ ಪ್ರದರ್ಶನವು ಪ್ಯಾರಿಸ್ ಒಲಿಂಪಿಕ್ಸ್ ನ ಕೊನೆಯ ಎಂಟರಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಂಡಿತು. ಸಾತ್ವಿಕ್-ಚಿರಾಗ್ ಜರ್ಮನಿಯ ಮಾರ್ಕ್ ಲ್ಯಾಮ್ಸ್ಫಸ್ ಮತ್ತು ಮಾರ್ವಿನ್ ಸೀಡೆಲ್ ಅವರನ್ನು ಎದುರಿಸಬೇಕಿತ್ತು, ಆದರೆ ಲ್ಯಾಮ್ಸ್ಫಸ್ ಅವರ ಗಾಯದಿಂದಾಗಿ ಜರ್ಮನ್ ಜೋಡಿ ಹಿಂದೆ ಸರಿದರು. ಹೀಗಾಗಿ ಕ್ವಾರ್ಟರ್​ ಫೈನಲ್ ಸ್ಥಾನ ಖಚಿತಪಡಿಸಿಕೊಂಡರು.

ವಿಶ್ವದ 3ನೇ ಶ್ರೇಯಾಂಕಿತ ಜೋಡಿ ಪ್ಯಾರಿಸ್ 2024ರ ಅಭಿಯಾನವನ್ನು 40ನೇ ಶ್ರೇಯಾಂಕಿತ ಫ್ರಾನ್ಸ್ನ ಲ್ಯೂಕಾಸ್ ಕಾರ್ವಿ ಮತ್ತು ರೋನನ್ ಲಾಬರ್ ವಿರುದ್ಧ ಜಯಗಳಿಸುವ ಮೂಲಕ ಆರಂಭಿಸಿತು. ಕಾರ್ವಿ ಮತ್ತು ಲಾಬರ್ ನಂತರ ವಿಶ್ವದ 7 ನೇ ಶ್ರೇಯಾಂಕದ ಇಂಡೋನೇಷ್ಯಾದ ಮುಹಮ್ಮದ್ ರಿಯಾನ್ ಅರ್ಡಿಯಾಂಟೊ ಮತ್ತು ಫಜರ್ ಅಲ್ಫಿಯಾನ್ ವಿರುದ್ಧ ಸೋತರು. ಎರಡು ಸೋಲುಗಳೊಂದಿಗೆ ಫ್ರೆಂಚ್ ಜೋಡಿ ನಿರ್ಗಮಿಸಿದ್ದು, ಚಿರಾಗ್-ಸಾತ್ವಿಕ್ ಮತ್ತು ಅರ್ಡಿಯಾಂಟೊ-ಅಲ್ಫಿಯಾನ್ ಸಿ ಗುಂಪಿನ ಅಗ್ರ ಎರಡು ಸ್ಥಾನಗಳನ್ನು ಪಡೆಯುವುದು ಖಚಿತವಾಗಿದೆ. ಗುಂಪಿನ ಅಗ್ರ ಸ್ಥಾನಕ್ಕಾಗಿ ಭಾರತ ಮತ್ತು ಇಂಡೋನೇಷ್ಯಾ ಜೋಡಿಗಳು ಮಂಗಳವಾರ ಸ್ಪರ್ಧಿಸಲಿವೆ.

ಇದನ್ನೂ ಓದಿ: Paris Olympics 2024 : ಭಾರತಕ್ಕೆ ಶೂಟಿಂಗ್​ನಲ್ಲಿ ಕಂಚಿನ ಪದಕ ಜಸ್ಟ್​ ಮಿಸ್​!

ಮಹಿಳೆಯರ ಡಬಲ್ಸ್ ವಿಭಾಗದಲ್ಲಿ ಭಾರತದ ತನಿಶಾ ಕ್ರಾಸ್ಟೊ ಮತ್ತು ಅಶ್ವಿನಿ ಪೊನ್ನಪ್ಪ 21-11, 21-12 ಅಂತರದಲ್ಲಿ ವಿಶ್ವದ 4ನೇ ಶ್ರೇಯಾಂಕಿತ ಜಪಾನ್​​ ನಮಿ ಮತ್ಸುಯಾಮಾ ಮತ್ತು ಚಿಹಾರು ಶಿಡಾ ವಿರುದ್ಧ ಸೋತು ನಿರ್ಗಮಿಸುವ ಅಂಚಿನಲ್ಲಿದ್ದಾರೆ. ಪ್ರಸ್ತುತ ಸಿ ಗುಂಪಿನಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಭಾರತದ ಜೋಡಿ ತನ್ನ ಆರಂಭಿಕ ಪಂದ್ಯದಲ್ಲಿ ಎಂಟನೇ ಶ್ರೇಯಾಂಕದ ಕಿಮ್ ಸೊ-ಯೊಂಗ್ ಮತ್ತು ದಕ್ಷಿಣ ಕೊರಿಯಾದ ಕಾಂಗ್ ಹೀ-ಯೊಂಗ್ ವಿರುದ್ಧ 21-18, 21-10 ಅಂತರದಲ್ಲಿ ಸೋತಿತ್ತು. ವಿಶ್ವ ರ್ಯಾಂಕಿಂಗ್​​ನಲ್ಲಿ 19ನೇ ಸ್ಥಾನದಲ್ಲಿರುವ ಕ್ರಾಸ್ಟೊ-ಪೊನ್ನಪ್ಪ ಮಂಗಳವಾರ ನಡೆಯಲಿರುವ ಅಂತಿಮ ಗ್ರೂಪ್ ಹಂತದ ಪಂದ್ಯದಲ್ಲಿ ಆಸ್ಟ್ರೇಲಿಯಾದ ಸೆಟ್ಯಾನಾ ಮಾಪಾಸಾ ಮತ್ತು 26ನೇ ಶ್ರೇಯಾಂಕದ ಏಂಜೆಲಾ ಯು ಅವರನ್ನು ಎದುರಿಸಲಿದ್ದಾರೆ.

ಪದಕದ ಮೇಲೆ ಕಣ್ಣು: ಭಾರತ ಬ್ಯಾಡ್ಮಿಂಟನ್

ಕ್ವಾರ್ಟರ್ ಫೈನಲ್​ನಲ್ಲಿ ಸ್ಥಾನ ಭದ್ರಪಡಿಸಿಕೊಂಡಿರುವ ಸಾತ್ವಿಕ್ ಸಾಯಿರಾಜ್ ಮತ್ತು ಚಿರಾಗ್ ಈಗ ಇಂಡೋನೇಷ್ಯಾ ವಿರುದ್ಧದ ಮುಂಬರುವ ಪಂದ್ಯದತ್ತ ಗಮನ ಹರಿಸಲಿದ್ದು, ಗುಂಪು ಹಂತವನ್ನು ಉನ್ನತ ಮಟ್ಟದಲ್ಲಿ ಮುಗಿಸುವ ಗುರಿ ಹೊಂದಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಪದಕಕ್ಕಾಗಿ ತಮ್ಮ ಪ್ರಭಾವಶಾಲಿ ಓಟ ಮತ್ತು ಸವಾಲನ್ನು ಮುಂದುವರಿಸಲು ಭಾರತೀಯ ಜೋಡಿ ಉತ್ಸುಕವಾಗಿದೆ.

ಇವರಿಬ್ಬರ ಸಾಧನೆಯು ಭಾರತೀಯ ಬ್ಯಾಡ್ಮಿಂಟನ್​ಗೆ ಮಹತ್ವದ ಮೈಲಿಗಲ್ಲಾಗಿದೆ. ಇದು ಅಭಿಮಾನಿಗಳಲ್ಲಿ ಅಪಾರ ಉತ್ಸಾಹವನ್ನು ಸೃಷ್ಟಿಸಿದೆ. ಒಲಿಂಪಿಕ್ಸ್​ನಲ್ಲಿ ಇತಿಹಾಸವನ್ನು ಸೃಷ್ಟಿಸಲು ಎದುರು ನೋಡುತ್ತಿರುವ ಸಾತ್ವಿಕ್ ಸಾಯಿರಾಜ್ ಮತ್ತು ಚಿರಾಗ್ ಅವರಿಗಾಗಿ ಇಡೀ ದೇಶವು ಬೆನ್ನೆಲುಬಾಗಿದೆ.

ಲಕ್ಷ್ಯ ಸೇನ್​ಗೆ ಜಯ

ಲಾ ಚಾಪೆಲ್ ಅರೆನಾದಲ್ಲಿ ನಡೆದ ಪುರುಷರ ಸಿಂಗಲ್ಸ್ ಗ್ರೂಪ್ ಹಂತದ ಪಂದ್ಯದಲ್ಲಿ ಭಾರತದ ಲಕ್ಷ್ಯ ಸೇನ್ ಬೆಲ್ಜಿಯಂನ ಜೂಲಿಯನ್ ಕರಾಗಿ ವಿರುದ್ಧ 21-19, 21-14 ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ವಿಶ್ವ ಬ್ಯಾಡ್ಮಿಂಟನ್ ರ್ಯಾಂಕಿಂಗ್​​ನಲ್ಲಿ 18ನೇ ಸ್ಥಾನದಲ್ಲಿರುವ ಸೇನ್ ಮೊದಲ ಗೇಮ್​​​ನಲ್ಲಿ ಕಠಿಣ ಪ್ರದರ್ಶನ ನೀಡಿ ನಂತರದ ಹಂತಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ನಂತರ ಅವರು ಎರಡನೇ ಗೇಮ್ ನಲ್ಲಿ ವಿಶ್ವದ 52 ನೇ ಶ್ರೇಯಾಂಕದ ಜೂಲಿಯನ್ ಕರಾಗ್ಗಿ ಅವರನ್ನು ಸೋಲಿಸಿ ಬಲವಾದ ಗೆಲುವು ಸಾಧಿಸಿದರು.

ಲಕ್ಷ್ಯ ಸೇನ್ ಗ್ವಾಟೆಮಾಲಾದ ಕೆವಿನ್ ಕಾರ್ಡನ್ ವಿರುದ್ಧ ಜಯಗಳಿಸುವ ಮೂಲಕ ತಮ್ಮ ಒಲಿಂಪಿಕ್ ಅಭಿಯಾನವನ್ನು ಪ್ರಾರಂಭಿಸಿದ್ದರು.

Continue Reading

ಪ್ರಮುಖ ಸುದ್ದಿ

Rohit Sharma : ಏಕ ದಿನ ಸರಣಿಗಾಗಿ ಶ್ರೀಲಂಕಾ ತಲುಪಿದ ರೋಹಿತ್, ವಿರಾಟ್​ ಕೊಹ್ಲಿ

Rohit Sharma : ಏಕದಿನ ಸರಣಿಗೆ ರೋಹಿತ್ ಮತ್ತು ಕೊಹ್ಲಿಗೆ ವಿಶ್ರಾಂತಿ ನೀಡಲಾಗುತ್ತದೆಯೇ ಎಂಬ ಬಗ್ಗೆ ಊಹಾಪೋಹಗಳು ಇದ್ದವು. ಆದರೆ, ರೋಹಿತ್ ಅವರನ್ನು ಏಕದಿನ ನಾಯಕನನ್ನಾಗಿ ಘೋಷಿಸಲಾಯಿತು. ಕೊಹ್ಲಿಯನ್ನು 15 ಸದಸ್ಯರ ತಂಡದಲ್ಲಿ ಸೇರಿಸಲಾಯಿತು. 2024 ರ ಟಿ 20 ವಿಶ್ವಕಪ್​ನಲ್ಲಿ ಭಾರತದ ಗೆಲುವಿನ ಒಂದು ತಿಂಗಳ ನಂತರ ಭಾರತೀಯ ದಿಗ್ಗಜರು ಕ್ರಿಕೆಟ್ ಮೈದಾನಕ್ಕೆ ಮರಳಲಿದ್ದಾರೆ.

VISTARANEWS.COM


on

Koo

ಬೆಂಗಳೂರು: ನಾಯಕ ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್ ಕೊಹ್ಲಿ ಸೇರಿದಂತೆ ಭಾರತದ ಸ್ಟಾರ್ ಆಟಗಾರರು ಏಕ ದಿನ ಸರಣಿಗಾಗಿ ಕೊಲಂಬೊಗೆ ಬಂದಿಳಿದಿದ್ದಾರೆ. ಅವರು ಶ್ರೀಲಂಕಾ ವಿರುದ್ಧದ ಭಾರತದ ಏಕದಿನ ಸರಣಿಗೆ ಮುಂಚಿತವಾಗಿ ತರಬೇತಿಯಲ್ಲಿ ಭಾಗವಹಿಸಲಿದ್ದಾರೆ. ಜುಲೈ 29, ಸೋಮವಾರ ಮಧ್ಯಾಹ್ನ ಕೊಹ್ಲಿ ದ್ವೀಪ ರಾಷ್ಟ್ರಕ್ಕೆ ಬಂದಿಳಿದಿದ್ದಾರೆ. ರೋಹಿತ್, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಕುಲದೀಪ್ ಯಾದವ್ ಮತ್ತು ಹರ್ಷಿತ್ ರಾಣಾ ಭಾನುವಾರ ಲಂಕಾ ತಲುಪಿದ್ದಾರೆ. 50 ಓವರ್​ಗಳ ಸರಣಿ ಪ್ರಾರಂಭವಾಗುವ ಮೊದಲು ಕೊಹ್ಲಿ ಮತ್ತು ರೋಹಿತ್ ಅಭ್ಯಾಸದಲ್ಲಿ ಭಾಗವಹಿಸಲಿದ್ದಾರೆ. ಭಾರತದ ಟಿ 20 ವಿಶ್ವಕಪ್ ಗೆಲುವಿನ ನಂತರ ಜೂನ್ 29 ರಂದು ಸ್ಟಾರ್ ಜೋಡಿ ಟಿ 20 ಯಿಂದ ನಿವೃತ್ತಿ ಘೋಷಿಸಿದ್ದರು.

ಏಕದಿನ ಸರಣಿಗೆ ರೋಹಿತ್ ಮತ್ತು ಕೊಹ್ಲಿಗೆ ವಿಶ್ರಾಂತಿ ನೀಡಲಾಗುತ್ತದೆಯೇ ಎಂಬ ಬಗ್ಗೆ ಊಹಾಪೋಹಗಳು ಇದ್ದವು. ಆದರೆ, ರೋಹಿತ್ ಅವರನ್ನು ಏಕದಿನ ನಾಯಕನನ್ನಾಗಿ ಘೋಷಿಸಲಾಯಿತು. ಕೊಹ್ಲಿಯನ್ನು 15 ಸದಸ್ಯರ ತಂಡದಲ್ಲಿ ಸೇರಿಸಲಾಯಿತು. 2024 ರ ಟಿ 20 ವಿಶ್ವಕಪ್​ನಲ್ಲಿ ಭಾರತದ ಗೆಲುವಿನ ಒಂದು ತಿಂಗಳ ನಂತರ ಭಾರತೀಯ ದಿಗ್ಗಜರು ಕ್ರಿಕೆಟ್ ಮೈದಾನಕ್ಕೆ ಮರಳಲಿದ್ದಾರೆ. ಆ ದಿನವೇ, ರೋಹಿತ್ ಮತ್ತು ಕೊಹ್ಲಿ ಭಾರತಕ್ಕಾಗಿ ಕಿರು ಸ್ವರೂಪದಿಂದ ನಿವೃತ್ತಿ ಘೋಷಿಸಿದ್ದರು. ಆಟದ ಉಳಿದ ಎರಡು ಸ್ವರೂಪಗಳಲ್ಲಿ ದೇಶಕ್ಕೆ ಸೇವೆ ಸಲ್ಲಿಸುವುದನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.

ಕುಟುಂಬದೊಂದಿಗೆ ಸಮಯ ಕಳೆದ ಕೊಹ್ಲಿ-ರೋಹಿತ್

ಟಿ 20 ಐ ನಿವೃತ್ತಿಯ ನಂತರ, ಕೊಹ್ಲಿ ಮತ್ತು ರೋಹಿತ್ ತಮ್ಮ ಕುಟುಂಬಗಳೊಂದಿಗೆ ಸುಂದರ ಸಮಯವನ್ನು ಕಳೆದರು. ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ ಮತ್ತು ಇಬ್ಬರು ಮಕ್ಕಳಾದ ವಮಿಕಾ ಮತ್ತು ಅಕೆ ಕೊಹ್ಲಿ ಅವರೊಂದಿಗೆ ಲಂಡನ್ ಗೆ ಹಾರಿದ್ದಾರೆ. ರೋಹಿತ್ ತಮ್ಮ ಪತ್ನಿ ರಿತಿಕಾ ಸಜ್ದೇಹ್ ಮತ್ತು ಮಗಳು ಸಮೈರಾ ಅವರೊಂದಿಗೆ ಯುಎಸ್ಎಗೆ ತೆರಳಿದ್ದರು.

ಏಕದಿನ ಸರಣಿಗೆ ಟೀಂ ಇಂಡಿಯಾ ಆಟಗಾರರು ಸಜ್ಜು

ಈ ಸರಣಿಯಲ್ಲಿ ಬಿಸಿಸಿಐ ವಾರ್ಷಿಕ ಗುತ್ತಿಗೆ ಪಟ್ಟಿಯಿಂದ ಹೊರಗುಳಿದಿದ್ದ ಶ್ರೇಯಸ್ ಅಯ್ಯರ್ ತಂಡಕ್ಕಾಗಿ ಆಡಲಿದ್ದಾಋಎ. ಕೆಎಲ್ ರಾಹುಲ್ ಕೂಡ ಸರಣಿಯಲ್ಲಿ ಪುನರಾಗಮನ ಮಾಡಲಿದ್ದಾರೆ. ಟಿ 20 ಐ ಸರಣಿಯಿಂದ ವಿಶ್ರಾಂತಿ ಪಡೆದ ವಿಶ್ವ ಚಾಂಪಿಯನ್ ಕುಲದೀಪ್ ಯಾದವ್ ಮರಳಲಿದ್ದಾರೆ. ಹರ್ಷಿತ್ ರಾಣಾ ಕೂಡ ಸರಣಿಯಲ್ಲಿ ಭಾರತಕ್ಕೆ ಪಾದಾರ್ಪಣೆ ಮಾಡಲು ಎದುರು ನೋಡುತ್ತಿದ್ದಾರೆ. ಈ ಆಟಗಾರರು ಕೊಲಂಬೊದಲ್ಲಿ ಭಾರತದ ಸಹಾಯಕ ಕೋಚ್ ಅಭಿಷೇಕ್ ನಾಯರ್ ಅವರ ಅಡಿಯಲ್ಲಿ ತರಬೇತಿ ಪಡೆಯಲಿದ್ದಾರೆ.

ಇದನ್ನೂ ಓದಿ: Paris Olympics 2024 : ಮನು ಭಾಕರ್ ಸೇರಿದಂತೆ ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದವರ ಎಕ್ಸ್​ ಖಾತೆಯಲ್ಲಿ ಐಫೆಲ್​ ಟವರ್ ಚಿತ್ರ

ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ನೇತೃತ್ವದ ಭಾರತ ತಂಡವು ಪಲ್ಲೆಕೆಲೆಯಲ್ಲಿ ನಡೆಯಲಿರುವ 3 ಪಂದ್ಯಗಳ ಟಿ 20 ಐ ಸರಣಿಯಲ್ಲಿ ಭಾಗವಹಿಸುತ್ತಿದೆ. ಶ್ರೀಲಂಕಾ ವಿರುದ್ಧ ಭಾರತ 2-0 ಮುನ್ನಡೆ ಸಾಧಿಸಿದ್ದು, ಜುಲೈ 30 ರಂದು ನಡೆಯಲಿರುವ 3 ನೇ ಟಿ 20 ಐ ಪಂದ್ಯದಲ್ಲಿ ಕ್ಲೀನ್ ಸ್ವೀಪ್ ಮಾಡುವ ಗುರಿ ಹೊಂದಿದೆ. ಟಿ 20 ಐ ತಂಡದ ಅನೇಕ ಆಟಗಾರರು ಏಕದಿನ ತಂಡವನ್ನು ಸೇರಿಕೊಳ್ಳಲಿದ್ದಾರೆ. ಭಾರತ ಮತ್ತು ಶ್ರೀಲಂಕಾ ನಡುವಿನ 50 ಓವರ್​ಗಳ ಸ್ವರೂಪದ ಸರಣಿ ಆಗಸ್ಟ್ 2 ರಿಂದ ಪ್ರಾರಂಭವಾಗಲಿದ್ದು, ಆಗಸ್ಟ್ 7 ರವರೆಗೆ ನಡೆಯಲಿದೆ.

Continue Reading

ಪ್ರಮುಖ ಸುದ್ದಿ

IND vs SL T20 : ಲಂಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭಾರತಕ್ಕೆ 7 ವಿಕೆಟ್ ಜಯ, ಸರಣಿ ಕೈವಶ

IND vs SL T20 : ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 9 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿತು. ಅಂತೆಯೇ ಭಾರತ ರನ್ ಮಾಡಲು ಆರಂಭಿಸಿ 6 ರನ್ ಬಾರಿಸಿದ್ದಾಗ ಮಳೆ ಶುರುವಾಯಿತು. ತುಂಬಾ ಹೊತ್ತು ನಷ್ಟವಾದ ಕಾರಣ ಭಾರತಕ್ಕೆ 8 ಓವರ್​ಗಳಲ್ಲಿ 76 ರನ್ ಸವಾಲು ನೀಡಲಾಯಿತು. ಭಾರತ ಇನ್ನೂ 3 ಎಸೆತ ಬಾಕಿ ಇರುವಾಗ 3 ವಿಕೆಟ್​ ನಷ್ಟಕ್ಕೆ 81 ರನ್ ಬಾರಿಸಿ ಗೆಲುವು ಕಂಡಿತು.

VISTARANEWS.COM


on

IND vs SL T20
Koo

ಪಲ್ಲೆಕೆಲೆ: : ಶ್ರೀಲಂಕಾ ವಿರುದ್ಧದ ಸರಣಿಯ ಎರಡನೇ ಟಿ20 ಪಂದ್ಯದಲ್ಲಿ (IND vs SL T20) ಭಾರತ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆಯೊಂದಿಗೆ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಸರಣಿ ಕೈವಶ ಮಾಡಿಕೊಂಡಿದೆ. ನಿವೃತ್ತಿ ಘೋಷಿಸಿದ ರೋಹಿತ್ ಶರ್ಮಾ ಅವರಿಂದ ಅಧಿಕಾರ ವಹಿಸಿಕೊಂಡ ನಂತರ ಸೂರ್ಯಕುಮಾರ್ ಯಾದವ್ ಇದರೊಂದಿಗೆ ಭರ್ಜರಿ ಆರಂಭ ಮಾಡಿದರೆ ಕೋಚ್ ಗೌತಮ್ ಗಂಭೀರ್​ ಕೂಡ ಮೊದಲ ಯಶಸ್ಸು ಸಾಧಿಸಿದ್ದಾರೆ. ಮಳೆಯಿಂದ ಬಾಧಿತವಾತ ಪಂದ್ಯದಲ್ಲಿ ಭಾರತ ಸಂಪೂರ್ಣವಾಗಿ ಮೇಲುಗೈ ಸಾಧಿಸಿತು.

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 9 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿತು. ಅಂತೆಯೇ ಭಾರತ ರನ್ ಮಾಡಲು ಆರಂಭಿಸಿ 6 ರನ್ ಬಾರಿಸಿದ್ದಾಗ ಮಳೆ ಶುರುವಾಯಿತು. ತುಂಬಾ ಹೊತ್ತು ನಷ್ಟವಾದ ಕಾರಣ ಭಾರತಕ್ಕೆ 8 ಓವರ್​ಗಳಲ್ಲಿ 76 ರನ್ ಸವಾಲು ನೀಡಲಾಯಿತು. ಭಾರತ ಇನ್ನೂ 3 ಎಸೆತ ಬಾಕಿ ಇರುವಾಗ 3 ವಿಕೆಟ್​ ನಷ್ಟಕ್ಕೆ 81 ರನ್ ಬಾರಿಸಿ ಗೆಲುವು ಕಂಡಿತು.

ಮೊದಲು ಬ್ಯಾಟ್ ಮಾಡಿದ ಲಂಕಾ ಪವರ್​ ಪ್ಲೇನಲ್ಲಿ 54 ರನ್ ಗಳಿಸಿತು. ಪಥುಮ್ ನಿಸ್ಸಾಂಕಾ ಉತ್ತಮವಾಗಿ ಆಡಿದರು. ಕುಸಾಲ್ ಮೆಂಡಿಸ್ ಅವರ ವಿಕೆಟ್ ಕಳೆದುಕೊಂಡರು. ನಿಸ್ಸಾಂಕಾ 24 ಎಸೆತಗಳಲ್ಲಿ 32 ರನ್ ಗಳಿಸಿ ರವಿ ಬಿಷ್ಣೋಯ್ ಬೌಲಿಂಗ್​ಗೆ ಔಟಾದರು. ಬಳಿಕ ಕುಸಾಲ್ ಪೆರೆರಾ ಅತ್ಯುತ್ತಮ ಪ್ರದರ್ಶನ ನೀಡಿದರು. ಮಧ್ಯಮ ಓವರ್ಗಳಲ್ಲಿ ಇನ್ನಿಂಗ್ಸ್​ಗೆ ವೇಗ ನೀಡಿದ ಅವರು 34 ಎಸೆತಗಳಲ್ಲಿ ಆರು ಬೌಂಡರಿ ಮತ್ತು ಎರಡು ಸಿಕ್ಸರ್ ನೊಂದಿಗೆ 53 ರನ್ ಗಳಿಸಿದರು. ಹಾರ್ದಿಕ್ ಪಾಂಡ್ಯ 16ನೇ ಓವರ್ನಲ್ಲಿ ಪೆರೆರಾ ಮತ್ತು ಕಮಿಂಡು ಮೆಂಡಿಸ್ ಅವರನ್ನು ಒಂದೇ ಓವರ್​ನಲ್ಲಿ ಔಟ್ ಮಾಡಿದರು.

ಪೆರೆರಾ ಔಟಾದ ನಂತರ ಶ್ರೀಲಂಕಾ ಕೊನೆಯ ನಾಲ್ಕು ಓವರ್ ಗಳಲ್ಲಿ ಕೇವಲ 22 ರನ್ ಗಳಿಸಿತು. ದಸುನ್ ಶನಕಾ ಮತ್ತು ವನಿಂದು ಹಸರಂಗ ಗೋಲ್ಡನ್ ಡಕ್​ ಔಟಾದರ. ಭಾರತದ ಪರ ಬಿಷ್ಣೋಯ್ ತಮ್ಮ 4 ಓವರ್​ಗಳ ಸ್ಪೆಲ್​ನಲ್ಲಿ 3 ವಿಕೆಟ್ ಪಡೆದರು. ಅರ್ಷ್ದೀಪ್ ಸಿಂಗ್ 2 ವಿಕೆಟ್ ಉರುಳಿಸಿದರು.

ಸೂರ್ಯಕುಮಾರ್, ಜೈಸ್ವಾಲ್ ಗೆಲುವು ತಂದುಕೊಟ್ಟರು

ಭಾರತದ ರನ್ ಚೇಸ್ ನ ಮೊದಲ ಓವರ್ ನಲ್ಲಿ ಮಳೆ ಬಂತು. ಆದರೆ ಅಂತಿಮವಾಗಿ ಭಾರತಕ್ಕೆ 8 ಓವರ್ಗಳಲ್ಲಿ 78 ರನ್​ಗಳ ಪರಿಷ್ಕೃತ ಗುರಿ ನೀಡಲಾಯಿತು. ಗಿಲ್​ ಅನುಪಸ್ಥಿತಿಯಲ್ಲಿ ಆರಂಭಿಕರಾಗಿ ಆಡಲು ಬಂದ ಸಂಜು ಸ್ಯಾಮ್ಸನ್ ಶೂನ್ಯಕ್ಕೆ ಔಟಾದರು. ಹೀಗಾಗಿ ಭಾರತ ಅವರು ಆರಂಭಿಕ ತೊಂದರೆಯಲ್ಲಿ ಸಿಲುಕಿತು.

ಇದನ್ನೂ ಓದಿ: Paris Olympics 2024 : ಪುರಷರ 10 ಮೀಟರ್​ ಏರ್​ರೈಫಲ್​​ ಸ್ಪರ್ಧೆಯಲ್ಲಿ ಫೈನಲ್​ಗೇರಿದ ಅರ್ಜುನ್ ಬಬುಟಾ

, ಯಶಸ್ವಿ ಜೈಸ್ವಾಲ್ ಮತ್ತು ಸೂರ್ಯಕುಮಾರ್ ಅಬ್ಬರಿಸಿದರು. ಭಾರತವು ರನ್​ಗಳಿಕೆಯಲ್ಲಿ ಹಿಂದೆ ಬೀಳದಂತೆ ನೋಡಿಕೊಂಡರು. 12 ಎಸೆತಗಳಲ್ಲಿ 26 ರನ್ ಗಳಿಸಿದ ಸೂರ್ಯಕುಮಾರ್ ಮಥೀಶಾ ಪತಿರಾನಾ ಎಸೆತಕ್ಕೆ ಔಟಾದರು. ಜೈಸ್ವಾಲ್ 15 ಎಸೆತಗಳಲ್ಲಿ 30 ರನ್ ಗಳಿಸಿದರು.

ಡೆತ್ ಓವರ್​ಗಳಲ್ಲಿ ಭಾರತಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಹಾರ್ದಿಕ್ ಪಾಂಡ್ಯ ಎಲ್ಲಾ ಪ್ರಯತ್ನ ಮಾಡಿದರು. ಅವರು ಒಂಬತ್ತು ಎಸೆತಗಳಲ್ಲಿ 22 ರನ್ ಗಳಿಸಿ ಔಟಾಗದೆ ಉಳಿದರು.

Continue Reading

ಪ್ರಮುಖ ಸುದ್ದಿ

Womens Asia Cup : ಭಾರತದ ಮಹಿಳೆಯರನ್ನು ಸೋಲಿಸಿ ಚೊಚ್ಚಲ ಏಷ್ಯಾ ಕಪ್​ ಗೆದ್ದ ಶ್ರೀಲಂಕಾ ತಂಡ

Womens Asia Cup : ಇಲ್ಲಿನ ಪಲ್ಲೆಕೆಲೆ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಲಂಕಾ ತಂಡ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ಗೆ 165 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟಿ್​ ಮಾಡಿದ ಲಂಕಾ 18.4 ಓವರ್​ಗಳಲ್ಲೇ 2 ವಿಕೆಟ್​ ನಷ್ಟಕ್ಕೆ 167 ರನ್​ ಬಾರಿಸಿ ಗೆಲುವಿನ ನಗೆ ಬೀರಿತು.

VISTARANEWS.COM


on

Women's Asia Cup
Koo

ಪಲ್ಲೆಕೆಲೆ: ಫೈನಲ್ ಪಂದ್ಯದಲ್ಲಿ ವೈಫಲ್ಯ ಕಂಡ ಭಾರತ ಮಹಿಳೆಯರ ತಂಡ ಆತಿಥೇಯ ಶ್ರೀಲಂಕಾ ವಿರುದ್ಧ 8 ವಿಕೆಟ್​ಗಳ ಸೋಲು ಕಂಡಿದ್ದು, ಮಹಿಳೆಯರ ಏಷ್ಯಾ ಕಪ್​ (Womens Asia Cup) ಟ್ರೋಫಿ ಉಳಿಸಲು ವಿಫಲಗೊಂಡಿದೆ. ಕಳೆದ ಬಾರಿ ಭಾರತ ಚಾಂಪೊಯನ್ ಆಗಿತ್ತು, ಅಲ್ಲದೆ, ಈ ಬಾರಿಯೂ ತಂಡ ಉತ್ತಮವಾಗಿತ್ತು. ಆದರೆ, ಕಪ್ ಗೆಲ್ಲುವಲ್ಲಿ ಕೊನೇ ಕ್ಷಣದಲ್ಲಿ ಎಡವಿತು. ಇದೇ ವೇಳೆ ಚಾಮರಿ ಅಟ್ಟಪಟ್ಟು ನೇತೃತ್ವದ ಲಂಕಾ ವನಿತೆಯರು ಮೊದಲ ಬಾರಿಗೆ ಏಷ್ಯಾ ಕಪ್​ ಟ್ರೋಫಿಗೆ ಮುತ್ತಿಟ್ಟಿದ್ದಾರೆ. ಫೈನಲ್​ ಪಂದ್ಯದಲ್ಲಿ ಸಂಪೂರ್ಣವಾಗಿ ಪಾರಮ್ಯ ಮೆರೆದ ಲಂಕಾ ತಂಡ ಟ್ರೋಫಿ ಗೆದ್ದು ಸಂಭ್ರಮಿಸಿತು.

ಭಾರತ ತಂಡ ಹಾಲಿ ಆವೃತ್ತಿಯಲ್ಲೂ ಬಲಾಢ್ಯ ತಂಡವಾಗಿತ್ತು. ಈ ಹಿಂದಿನ ಎಂಟು ಆವೃತ್ತಿಗಳಲ್ಲಿ 7 ಟ್ರೋಫಿ ಗೆದ್ದಿತ್ತು. ಅಂತೆಯೇ 8ನೇ ಕಪ್​ ಗೆಲ್ಲುವ ನಿರೀಕ್ಷೆಯಲ್ಲಿತ್ತು. ಆದರೆ, ಅದಕ್ಕೆ ಲಂಕಾ ವನಿತೆಯರು ಅವಕಾಶ ಕೊಡಲಿಲ್ಲ. ಕಳೆದ 8 ಆವೃತ್ತಿಗಳಲ್ಲಿ 5 ಬಾರಿ ಫೈನಲ್​​ನಲ್ಲಿ ಪ್ರವೇಶಿಸಿದ್ದ ದ್ವೀಪರಾಷ್ಟ್ರ, ಕೊನೆಗೂ 6ನೇ ಪ್ರಯತ್ನದಲ್ಲಿ ಗೆಲುವಿನ ಕನಸು ನನಸಾಗಿಸಿಕೊಂಡಿದೆ.

ಇಲ್ಲಿನ ಪಲ್ಲೆಕೆಲೆ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಲಂಕಾ ತಂಡ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ಗೆ 165 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟಿ್​ ಮಾಡಿದ ಲಂಕಾ 18.4 ಓವರ್​ಗಳಲ್ಲೇ 2 ವಿಕೆಟ್​ ನಷ್ಟಕ್ಕೆ 167 ರನ್​ ಬಾರಿಸಿ ಗೆಲುವಿನ ನಗೆ ಬೀರಿತು.

ಸವಾಲಿನ ಗುರಿ ಬೆನ್ನಟ್ಟಿದ ಶ್ರೀಲಂಕಾ 7 ರನ್ ಗಳಿಸಿ ಮೊದಲ ವಿಕೆಟ್​ ಕಳೆದುಕೊಂಡು ಆತಂಕಕ್ಕೆ ಬಿತ್ತು. ಆರಂಭಿಕ ಹಿನ್ನಡೆ ಮಧ್ಯೆಯೂ ನಾಯಕಿ ಚಾಮರಿ ಅಟ್ಟಪಟ್ಟು ಭಾರತೀಯ ಬೌಲರ್​ಗಳನ್ನು ಹಿಮ್ಮೆಟ್ಟಿಸಿದರು. ಅವರಿಗೆ ಹರ್ಷಿತಾ ಸಮರವಿಕ್ರಮ ಬೆಂಬಲವಾಗಿನಿಂತರು. ಹೀಗಾಗಿ ಎರಡನೇ ವಿಕೆಟ್​ಗೆ ಲಂಕಾ ತಂಡ 87 ರನ್ ಗಳಿಸಿತು. ಇದೇ ವೇಳೆ ಚಾಮರಿ ಅರ್ಧ ಶತಕ ಬಾರಿಸಿದರು.
43 ಎಸೆತಗಳಲ್ಲಿ 9 ಬೌಂಡರಿ, 2 ಸಿಕ್ಸರ್​ ಸಹಿತ 61 ರನ್ ಗಳಿಸಿದ್ದ ಚಾಮರಿ ಔಟಾದರೂ ಹರ್ಷಿತಾ ಗೆಲುವಿನ ಕಡೆಗೆ ಮುನ್ನುಗ್ಗಿದರು. ಹರ್ಮನ್ ಪಡೆಯ ವಿರುದ್ಧ ಸವಾರಿ ಮಾಡಿ ಗೆಲುವಿನತ್ತ ಮುನ್ನಡೆಸಿದರು. ಹಾಗೆಯೇ ಅರ್ಧಶತಕ ಪೂರೈಸಿದರು.

ಇದನ್ನೂ ಓದಿ: Manu Bhaker : ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಐತಿಹಾಸಿಕ ಪದಕ ಗೆದ್ದ ಮನು ಭಾಕರ್ ಗೆ ಪ್ರಧಾನಿ ಮೋದಿ ಅಭಿನಂದನೆ

ಮಂಧಾನ ಏಕಾಂಗಿ ಹೋರಾಟ

ಬ್ಯಾಟಿಂಗ್ ಆರಂಭಿಸಿದ ಭಾರತ ಉತ್ತಮ ಆರಂಭ ಪಡೆಯಿತು. ಮೊದಲ ವಿಕೆಟ್​ಗೆ 44 ರನ್ ಬಂದರೂ ಶಫಾಲಿ ವರ್ಮಾ 16 ರನ್​ಗಳಿಗೆ ಆಟ ಮುಗಿಸಿದರು. ಫೈನಲ್​ಗೆ ಎಂಟ್ರಿ ಪಡೆದ ಉಮಾ ಚೆಟ್ರಿ 9 ರನ್​ಗೆ ನಿರ್ಗಮಿಸಿದರು. ಹರ್ಮನ್​ಪ್ರೀತ್​ ಕೌರ್​ (11) ಬೇಗನೆ ಔಟಾದ ಕಾರಣ ದೊಡ್ಡ ಮೊತ್ತ ಪೇರಿಸುವ ಕನಸಿಗೆ ಬ್ರೇಕ್ ಬಿತ್ತು. ಸತತ ವಿಕೆಟ್​ ಪತನದ ಮಧ್ಯೆಯೂ ಮಂಧಾನ ಅರ್ಧಶತಕ ಸಿಡಿಸಿ ಆಸರೆಯಾದರು.

ಮಂಧಾನ 47 ಎಸೆತಗಳಲ್ಲಿ 10 ಬೌಂಡರಿ ಸಹಿತ 60 ರನ್ ಗಳಿಸಿ ತಂಡವನ್ನು 150ರ ಗಡಿ ದಾಟಿಸಲು ನೆರವಾದರು. ಜೆಮಿಮಾ ರೊಡ್ರಿಗಸ್ 29 ರನ್ ಗಳಿಸಿದರು. ಕೊನೆಯಲ್ಲಿ ರಿಚಾ ಘೋಷ್ ಅಬ್ಬರದ 30 ರನ್ ಕಲೆ ಹಾಕಿದರು. ಪೂಜಾ ವಸ್ತ್ರಾಕರ್ 5, ರಾಧಾ ಯಾದವ್ 1 ರನ್ ಗಳಿಸಿದರು.

Continue Reading
Advertisement
Russia Ukraine War
ದೇಶ29 mins ago

Russia-Ukraine War: ಕೆಲಸ ಕೊಡಿಸ್ತೇವೆ ಅಂತಾ ಸೇನೆಗೆ ತಳ್ಳಿದ್ರು..ರಷ್ಯಾ-ಉಕ್ರೇನ್‌ ಯುದ್ಧದಲ್ಲಿ ಭಾರತೀಯ ಯುವಕ ಸಾವು

HD Devegowda
ಕರ್ನಾಟಕ31 mins ago

HD Devegowda: ಮೋದಿ ಬಜೆಟ್‌ಗೆ ಎಚ್‌.ಡಿ.ದೇವೇಗೌಡರ ಮೆಚ್ಚುಗೆ; ಬೆಂಗಳೂರು ನೀರಿನ ಸಮಸ್ಯೆ ಬಗೆಹರಿಸಲು ಮನವಿ

Dengue Fever
ಆರೋಗ್ಯ36 mins ago

Dengue Fever: ಡೆಂಗ್ಯೂ ಜ್ವರ ಕಡಿಮೆ ಆದ ಮೇಲೆ ಎಚ್ಚರ ತಪ್ಪಿದರೆ ಪ್ರಾಣಾಪಾಯ!

Paris Olympics 2024 :Satwik-Chirag reach men's doubles quarter-finals
ಪ್ರಮುಖ ಸುದ್ದಿ44 mins ago

Paris Olympics 2024 : ಒಲಿಂಪಿಕ್ಸ್ ಕ್ವಾರ್ಟರ್​ಫೈನಲ್​ಗೇರಿ ದಾಖಲೆ ಸೃಷ್ಟಿಸಿದ ಬ್ಯಾಡ್ಮಿಂಟನ್ ಪುರುಷರ ಡಬಲ್ಸ್ ಜೋಡಿ ಸಾತ್ವಿಕ್​- ಚಿರಾಗ್​

veterinary officer recruitment
ಪ್ರಮುಖ ಸುದ್ದಿ55 mins ago

Veterinary Officer Recruitment: 400 ಪಶು ವೈದ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ; ಶುಲ್ಕ, ಅರ್ಹತೆಯ ಮಾಹಿತಿ ಇಲ್ಲಿದೆ

Parisl Olympics 2024
ಪ್ರಮುಖ ಸುದ್ದಿ1 hour ago

Paris Olympics 2024 : ಮತ್ತೊಂದು ಗೆಲವು ಕಂಡ ಷಟ್ಲರ್ ಲಕ್ಷ್ಯ ಸೇನ್​

Bollywood Divorce Case
Latest1 hour ago

Bollywood Divorce Case: ವಿಚ್ಛೇದನದ ಬಳಿಕ ಪತ್ನಿಗೆ ದುಬಾರಿ ʼಜೀವನಾಂಶʼ ನೀಡಿದ ಬಾಲಿವುಡ್ ಸ್ಟಾರ್‌ಗಳಿವರು!

Rahul Gandhi
ದೇಶ1 hour ago

Rahul Gandhi: ರಾಹುಲ್‌ ಮಾತಿಗೆ ಹಣೆ ಚಚ್ಚಿಕೊಂಡು, ಮುಖ ಮುಚ್ಚಿಕೊಂಡ ಸಚಿವೆ ನಿರ್ಮಲಾ: ಭಾರೀ ವೈರಲಾಗ್ತಿದೆ ಈ ವಿಡಿಯೋ

Star Shirt Saree Fashion
ಫ್ಯಾಷನ್1 hour ago

Star Shirt Saree Fashion: ಏನಿದು ಶರ್ಟ್‌ ಸೀರೆ? ಹೊಸ ಟ್ರೆಂಡ್‌ ಬಗ್ಗೆ ನಟಿ ತಾರಾ ಏನಂತಾರೆ?

Shravan 2024
Latest1 hour ago

Shravan 2024: ಶ್ರಾವಣ ಮಾಸದಲ್ಲಿ ಯಾವ ಹಬ್ಬ, ಯಾವ ದಿನ? ಈ ತಿಂಗಳ ಮಹತ್ವ ಏನು?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ4 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 hours ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ8 hours ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ1 day ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ1 day ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ1 day ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ1 day ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

ಟ್ರೆಂಡಿಂಗ್‌