ಹೈದರಾಬಾದ್‌ ಬಳಿ 4,000 ಸ್ಟಾರ್ಟಪ್‌ಗಳಿಗೆ ಹೊಸ ಸೌಲಭ್ಯ ಕೇಂದ್ರ ಟಿ-ಹಬ್‌ 2.0 ಆರಂಭ - Vistara News

ವಾಣಿಜ್ಯ

ಹೈದರಾಬಾದ್‌ ಬಳಿ 4,000 ಸ್ಟಾರ್ಟಪ್‌ಗಳಿಗೆ ಹೊಸ ಸೌಲಭ್ಯ ಕೇಂದ್ರ ಟಿ-ಹಬ್‌ 2.0 ಆರಂಭ

ಹೈದರಾಬಾದ್‌ ಬಳಿ 4,000 ಸ್ಟಾರ್ಟಪ್‌ಗಳಿಗೆ ಆಧುನಿಕ ಸೌಲಭ್ಯಗಳನ್ನು ನೀಡುವ ಟಿ-ಹಬ್‌ 2.0 ಕೇಂದ್ರವನ್ನು ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಉದ್ಘಾಟಿಸಿದ್ದಾರೆ.

VISTARANEWS.COM


on

t hub 2
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್:‌ ಹೈದರಾಬಾದ್‌ ಬಳಿ 4,000 ಸ್ಟಾರ್ಟಪ್‌ಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ “ಟಿ-ಹಬ್‌ ೨.೦ʼ (T-Hub ೨.೦) ಕೇಂದ್ರವನ್ನು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಉದ್ಘಾಟಿಸಿದ್ದಾರೆ.

ಹೈದರಬಾದ್‌ ಸಮೀಪದ ರಾಯ್‌ದುರ್ಗ್‌ನಲ್ಲಿ ಒಟ್ಟು ೪೦೦ ಕೋಟಿ ರೂ. ವೆಚ್ಚದಲ್ಲಿ ಈ ಕೇಂದ್ರವನ್ನು ನಿರ್ಮಿಸಲಾಗಿದೆ. ಇದು ಮೊದಲ ಹಂತದ ಟಿ-ಹಬ್‌ಗೆ ಹೋಲಿಸಿದರೆ ಐದು ಪಟ್ಟು ದೊಡ್ಡದು.

ಟಿ-ಹಬ್‌ ೨.೦ ಕೇಂದ್ರ ೧೦ ಅಂತಸ್ತುಗಳನ್ನು ಒಳಗೊಂಡಿದೆ. ಸ್ಟಾರ್ಟಪ್‌ಗಳನ್ನು ಸ್ಥಾಪಿಸಲು ಬಯಸುವವರಿಗೆ, ಈಗಾಗಲೇ ನಡೆಸುತ್ತಿರುವವರಿಗೆ, ವೆಂಚರ್‌ ಕ್ಯಾಪಿಟಲಿಸ್ಟ್‌ಗಳಿಗೆ ಅನುಕೂಲ ಕಲ್ಪಿಸಲಿದೆ.

ಐಐಟಿ-ಹೈದರಾಬಾದ್‌ ಕ್ಯಾಂಪಸ್‌ನಲ್ಲಿ ೭೦,೦೦೦ ಚದರ ಅಡಿ ಕಟ್ಟಡದಲ್ಲಿ ಟಿ-ಹಬ್‌ ಅನ್ನು ೨೦೧೫ರಲ್ಲಿ ಆರಂಭಿಸಲಾಗಿತ್ತು. ರಾಯ್‌ದುರ್ಗ್‌ನಲ್ಲಿರುವ ಹೊಸ ಟಿ-ಹಬ್‌, ೩.೭೦ ಲಕ್ಷ ಚದರ ಅಡಿ ಜಾಗವನ್ನು ಹೊಂದಿದೆ. ಈ ಸಂದರ್ಭ ೨೦ ಯುನಿಕಾರ್ನ್‌ ಮತ್ತು ೧೪ ಸೂನಿಕಾರ್ನ್‌ ಸ್ಟಾರ್ಟಪ್‌ಗಳ ಸಂಸ್ಥಾಪಕರನ್ನು ಅಭಿನಂದಿಸಲಾಯಿತು.

ಈ ಸಂದರ್ಭ ಮಾತನಾಡಿದ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ , ” ವಿಶ್ವದರ್ಜೆಯ ಟಿ-ಹಬ್‌ ಅನ್ನು ನಾವು ತೆರೆದಿದ್ದೇವೆ. ತೆಲಂಗಾಣವು ಸ್ಟಾರ್ಟಪ್‌ಗಳಿಗೆ ದೇಶದಲ್ಲಿಯೇ ಜನಪ್ರಿಯ ತಾಣವಾಗಬೇಕು ಎಂಬುದು ನಮ್ಮ ಆಶಯವಾಗಿದೆ. ಜಗತ್ತಿನಲ್ಲೇ ಅಫರ್ಡಬಲ್‌ ಟ್ಯಾಲೆಂಟ್‌ಗಳ ವಿಚಾರದಲ್ಲಿ, ಟಾಪ್‌ ೧೦ ಸ್ಟಾರ್ಟಪ್‌ ಎಕೊಸಿಸ್ಟಮ್‌ಗಳಲ್ಲಿ ತೆಲಂಗಾಣ ಕೂಡ ಒಂದಾಗಿದೆ. ಟಿ-ಹಬ್‌ ದೇಶದಲ್ಲೇ ಉತ್ತಮ ಮಾದರಿಯಾಗಿದೆ. ೨,೦೦೦ ಉದ್ಯಮಿಗಳಿಗೆ ಇದರಿಂದ ಪ್ರಯೋಜನವಾಗಿದೆ. ಟಿ-ಹಬ್‌ ಸ್ಟಾರ್ಟಪ್‌ಗಳು ೧೧೯ ಕೋಟಿ ಡಾಲರ್‌ (೯.೨೮ ಲಕ್ಷ ಕೋಟಿ ರೂ.) ಬಂಡವಾಳವನ್ನು ಸ್ವೀಕರಿಸಿವೆʼʼ ಎಂದು ತಿಳಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿನ್ನದ ದರ

Gold Rate Today: ಕೊನೆಗೂ ಆಭರಣ ಪ್ರಿಯರಿಗೆ ಸಿಕ್ತು ಗುಡ್‌ನ್ಯೂಸ್‌; ಚಿನ್ನದ ಬೆಲೆಯಲ್ಲಿ ಇಳಿಕೆ

Gold Rate Today: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಆಗಸ್ಟ್‌ 3) ತುಸು ಇಳಿಕೆಯಾಗಿದೆ. ಬುಧವಾರದಿಂದ ಸತತವಾಗಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಇಳಿಕೆಯಾಗಿದ್ದು, ಗ್ರಾಹಕರಿಗೆ ತುಸು ಸಮಾಧಾನ ತಂದಿದೆ. 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 10 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 11 ಕಡಿಮೆಯಾಗಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,470 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,058 ಇದೆ.

VISTARANEWS.COM


on

Gold Rate Today
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ದರ ಇಂದು (ಆಗಸ್ಟ್‌ 3) ತುಸು ಇಳಿಕೆಯಾಗಿದೆ (Gold Rate Today). ಬುಧವಾರದಿಂದ ಸತತವಾಗಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಇಳಿಕೆಯಾಗಿದ್ದು, ಗ್ರಾಹಕರಿಗೆ ತುಸು ಸಮಾಧಾನ ತಂದಿದೆ. 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 10 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 11 ಕಡಿಮೆಯಾಗಿದೆ.

ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,470 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,058 ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ ₹ 51,760 ಇದೆ. ಇನ್ನು 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹ 64,700 ಮತ್ತು ₹ 6,47,000 ದರದಲ್ಲಿ ಖರೀದಿಸಬಹುದು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ ₹ 56,464 ಇದೆ. 10 ಗ್ರಾಂ ಮತ್ತು 100 ಗ್ರಾಂನ 24 ಕ್ಯಾರಟ್‌ ಚಿನ್ನದ ಬೆಲೆ ₹ 70,580 ಮತ್ತು ₹ 7,05,800 ತಲುಪಿದೆ.

ನಗರ22 ಕ್ಯಾರಟ್ (1 ಗ್ರಾಂ)24 ಕ್ಯಾರಟ್ (1 ಗ್ರಾಂ)
ದಿಲ್ಲಿ₹ 6,485 ₹ 7,073
ಮುಂಬೈ₹ 6,470 ₹ 7,058
ಬೆಂಗಳೂರು₹ 6,470 ₹ 7,058
ಚೆನ್ನೈ₹ 6,450 ₹ 7,036

ಬೆಳ್ಳಿ ಧಾರಣೆ

ಇತ್ತ ಬೆಳ್ಳಿಯ ಬೆಲೆಯೂ ಕೊಂಚ ಇಳಿಕೆಯಾಗಿದೆ. ಬೆಳ್ಳಿ 1 ಗ್ರಾಂಗೆ ₹ 85.75 ಹಾಗೂ 8 ಗ್ರಾಂಗೆ ₹ 686 ಇದೆ. 10 ಗ್ರಾಂ ₹ 857.50 ಹಾಗೂ 1 ಕಿಲೋಗ್ರಾಂ ₹ 85,750 ಬೆಲೆ ಬಾಳುತ್ತದೆ.

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್‌ಮಾರ್ಕ್‌ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್‌ಮಾರ್ಕ್‌ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Income Tax Returns: ಜುಲೈ 31ರೊಳಗೆ 7.28 ಕೋಟಿ ಐಟಿಆರ್ ಸಲ್ಲಿಕೆ! ಇದು ಹೊಸ ದಾಖಲೆ

Continue Reading

ವಾಣಿಜ್ಯ

World Bank: ಅಮೆರಿಕದ ತಲಾ ಆದಾಯದ ಕಾಲು ಭಾಗ ತಲುಪಲು ಭಾರತಕ್ಕೆ 75 ವರ್ಷ ಬೇಕು: ವಿಶ್ವ ಬ್ಯಾಂಕ್‌

World Bank: ಅಮೆರಿಕದ ತಲಾ ಆದಾಯದ ಕಾಲು ಭಾಗವನ್ನು ತಲುಪಲು ಭಾರತಕ್ಕೆ ಸುಮಾರು 75 ವರ್ಷಗಳು ಬೇಕಾಗಬಹುದು. ಭಾರತದ ಪ್ರತಿಸ್ಪರ್ಧಿ ಚೀನಾ ಈ ಸಾಧನೆಯನ್ನು 10 ವರ್ಷಗಳಲ್ಲಿ ಸಾಧಿಸಲಿದೆ. ಇಂಡೋನೇಷ್ಯಾಕ್ಕೆ ಸುಮಾರು 70 ವರ್ಷ ಬೇಕಾಗಬಹುದು ಎಂದು ವಿಶ್ವ ಬ್ಯಾಂಕ್ ತಿಳಿಸಿದೆ.

VISTARANEWS.COM


on

World Bank
Koo

ನವದೆಹಲಿ: ವಿವಿಧ ದೇಶಗಳ ಆರ್ಥಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿದ ವಿಶ್ವ ಬ್ಯಾಂಕ್ (World Bank) ಕೆಲವೊಂದು ಗಂಭೀರ ವಿಚಾರಗಳನ್ನು ಹಂಚಿಕೊಂಡಿದೆ. ಮುಂದಿನ ಕೆಲವು ದಶಕಗಳಲ್ಲಿ ಭಾರತ ಸೇರಿದಂತೆ 100ಕ್ಕೂ ಹೆಚ್ಚು ದೇಶಗಳು ತಲಾ ಆದಾಯ (Per Capita Income)ವನ್ನು ಹೆಚ್ಚಿಸಿಕೊಳ್ಳಲು ಅನೇಕ ಸವಾಲು, ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ಅಮೆರಿಕದ ತಲಾ ಆದಾಯದ ಕಾಲು ಭಾಗವನ್ನು ತಲುಪಲು ಭಾರತಕ್ಕೆ ಸುಮಾರು 75 ವರ್ಷಗಳು ಬೇಕಾಗಬಹುದು. ಭಾರತದ ಪ್ರತಿಸ್ಪರ್ಧಿ ಚೀನಾ ಈ ಸಾಧನೆಯನ್ನು 10 ವರ್ಷಗಳಲ್ಲಿ ಸಾಧಿಸಲಿದೆ. ಇಂಡೋನೇಷ್ಯಾಕ್ಕೆ ಸುಮಾರು 70 ವರ್ಷ ಬೇಕಾಗಬಹುದು ಎಂದು ತಿಳಿಸಿದೆ.

ವಿಶ್ವ ಅಭಿವೃದ್ಧಿ ವರದಿ 2024: ದಿ ಮಿಡಲ್ ಇನ್‌ಕಮ್‌ ಟ್ರ್ಯಾಪ್‌ (World Development Report 2024: The Middle Income Trap)ನಲ್ಲಿ ಈ ವಿವರಗಳನ್ನು ಹಂಚಿಕೊಳ್ಳಲಾಗಿದೆ.

2023ರ ಅಂತ್ಯದ ವೇಳೆಗೆ 108 ದೇಶಗಳನ್ನು ಮಧ್ಯಮ ಆದಾಯದ ದೇಶಗಳು ಎಂದು ವರ್ಗೀಕರಿಸಲಾಗಿದೆ. ಈ ದೇಶಗಳ ಜಿಡಿಪಿ ಆಧರಿಸಿ ತಲಾ ಆದಾಯ 1,136 ಡಾಲರ್‌ರಿಂದ 13,845 ಡಾಲರ್ (95,189.98 ರೂ. – 1,160,127.93 ರೂ.) ವ್ಯಾಪ್ತಿಯಲ್ಲಿದೆ. ಈ ದೇಶಗಳಲ್ಲಿ ಸುಮಾರು 600 ಕೋಟಿ ಜನರಿದ್ದಾರೆ. ಅಂದರೆ ಜಾಗತಿಕ ಜನಸಂಖ್ಯೆಯ ಶೇ. 75ರಷ್ಟು. ಇಲ್ಲಿ ವಾಸಿಸುವ ಪ್ರತಿ ಮೂವರಲ್ಲಿ ಇಬ್ಬರು ತೀವ್ರ ಬಡತನದಲ್ಲಿದ್ದಾರೆ ಎಂದು ವರದಿ ವಿವರಿಸಿದೆ.

ವಯಸ್ಸಾಗುತ್ತಿರುವವರ ಜನಸಂಖ್ಯೆಯಲ್ಲಿ ಹೆಚ್ಚಳ ಮತ್ತು ಬೆಳೆಯುತ್ತಿರುವ ಸಾಲ ಆರ್ಥಿಕ ಪ್ರಗತಿಗೆ ಕಠಿಣ ಸವಾಲಾಗಿ ಪರಿಣಮಿಸಿದೆ. ಇನ್ನೂ ಅನೇಕ ಮಧ್ಯಮ ಆದಾಯದ ದೇಶಗಳು ಪ್ಲೇಬುಕ್ ಅನ್ನು ಬಳಸುತ್ತವೆ. ಇದು ಕಾರನ್ನು ಫಸ್ಟ್‌ ಗೇರ್‌ನಲ್ಲಿ ವೇಗವಾಗಿ ಓಡಿಸುವುದಕ್ಕೆ ಸಮ ಎಂದು ವಿಶ್ವ ಬ್ಯಾಂಕ್‌ ವರದಿ ತಿಳಿಸಿದೆ. ʼʼಅಭಿವೃದ್ಧಿಶೀಲ ದೇಶಗಳು ಇನ್ನೂ ಹಳೆಯ ಪ್ಲೇಬುಕ್‌ಗೆ ಅಂಟಿಕೊಂಡರೆ ಅಭಿವೃದ್ಧಿಯ ಓಟದಲ್ಲಿ ಹಿಂದುಳಿಯಬೇಕಾಗುತ್ತದೆʼʼ ಎಂದು ವಿಶ್ವ ಬ್ಯಾಂಕ್‌ನ ಮುಖ್ಯ ಅರ್ಥಶಾಸ್ತ್ರಜ್ಞ ಮತ್ತು ಅಭಿವೃದ್ಧಿ ಅರ್ಥಶಾಸ್ತ್ರದ ಹಿರಿಯ ಉಪಾಧ್ಯಕ್ಷ ಇಂದರ್ಮಿತ್ ಗಿಲ್ ಹೇಳಿದ್ದಾರೆ.

ತಮ್ಮ ಅಭಿವೃದ್ಧಿಯ ಹಂತವನ್ನು ಅವಲಂಬಿಸಿ ಎಲ್ಲ ದೇಶಗಳು ಅತ್ಯಾಧುನಿಕ ನೀತಿಗಳನ್ನು ಅಳವಡಿಸಿಕೊಳ್ಳಬೇಕಾಗಿದೆ. 1990ರಿಂದ 34 ಮಧ್ಯಮ-ಆದಾಯದ ದೇಶಗಳು ಮಾತ್ರ ಹೆಚ್ಚಿನ ಆದಾಯದ ಗಳಿಸುವ ಆರ್ಥಿಕತೆಯಾಗಿ ಬದಲಾಗಿವೆ. ಆ ಪೈಕಿ ಮೂರನೇ ಒಂದು ಭಾಗದಷ್ಟು ಯುರೋಪಿಯನ್ ಒಕ್ಕೂಟ ಏಕೀಕರಣದ ಫಲಾನುಭವಿಗಳು ಅಥವಾ ತೈಲ ರಫ್ತು ದೇಶಗಳು ಎನ್ನುವುದು ವಿಶೇಷ ಎಂದು ವಿಶ್ವ ಬ್ಯಾಂಕ್ ತಿಳಿಸಿದೆ.

ಇದನ್ನೂ ಓದಿ: Per capita income : 2030ಕ್ಕೆ ಭಾರತದ ತಲಾ ಆದಾಯ 3.28 ಲಕ್ಷ ರೂ.ಗೆ ಏರಿಕೆ

ತಲಾ ಆದಾಯ ಎಂದರೇನು?

ತಲಾ ಆದಾಯವು ದೇಶದಲ್ಲಿ ವಾಸಿಸುವ ಜನರ ಸರಾಸರಿ ಆದಾಯವಾಗಿದೆ. ಇದನ್ನು ಲೆಕ್ಕಾಚಾರ ಮಾಡಲು ಆ ದೇಶದ ಜಿಡಿಪಿಯನ್ನು ಅದರ ಒಟ್ಟು ಜನಸಂಖ್ಯೆಯಿಂದ ಭಾಗಿಸಲಾಗುತ್ತದೆ. ಇದು ಯಾವುದೇ ದೇಶ ಅಥವಾ ರಾಜ್ಯದ ಜನರ ಆದಾಯದ ಸ್ಥಿತಿ ಏನೆಂಬುದನ್ನು ತೋರಿಸುತ್ತದೆ. ಜನರು ಏನನ್ನು ಖರೀದಿಸಲು ಹಣವನ್ನು ಖರ್ಚು ಮಾಡುತ್ತಿದ್ದಾರೆ ಎಂಬುದನ್ನು ಇದು ಹೇಳುತ್ತದೆ.

Continue Reading

ವಾಣಿಜ್ಯ

Income Tax Returns: ಜುಲೈ 31ರೊಳಗೆ 7.28 ಕೋಟಿ ಐಟಿಆರ್ ಸಲ್ಲಿಕೆ! ಇದು ಹೊಸ ದಾಖಲೆ

ಆದಾಯ ತೆರಿಗೆ ರಿಟರ್ನ್ (Income Tax Returns) ಸಲ್ಲಿಕೆ ಗಡುವಿನೊಳಗೆ ಒಟ್ಟು 7.28 ಕೋಟಿ ಆದಾಯ ತೆರಿಗೆ ರಿಟರ್ನ್ಸ್ ಫೈಲಿಂಗ್ ಮಾಡಲಾಗಿದೆ. ಇದರಲ್ಲಿ ಜುಲೈ 31ರಂದು ಒಂದೇ ದಿನ ಅತ್ಯಧಿಕ ಐಟಿಆರ್‌ಗಳ ಫೈಲಿಂಗ್ ನಡೆದಿದೆ. ಈ ದಿನ 69.92 ಲಕ್ಷಕ್ಕೂ ಹೆಚ್ಚು ಐಟಿಆರ್‌ಗಳನ್ನು ಸಲ್ಲಿಸಲಾಗಿದೆ. ಈ ಬಾರಿ ತೆರಿಗೆದಾರರು ಮತ್ತು ತೆರಿಗೆ ವೃತ್ತಿಪರರು ಸಮಯಕ್ಕೆ ಸರಿಯಾಗಿ ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ಮಾಡಿದ್ದರಿಂದ ಫೈಲಿಂಗ್‌ನಲ್ಲಿ ಏಕಾಏಕಿ ಹೆಚ್ಚಳಕ್ಕೆ ಕಾರಣವಾಯಿತು.

VISTARANEWS.COM


on

By

Income Tax Returns
Koo

ಆದಾಯ ತೆರಿಗೆ ರಿಟರ್ನ್ (Income Tax Returns) ಸಲ್ಲಿಕೆ ಗಡುವಿನ ಒಳಗೆ, ಅಂದರೆ 2024ರ ಜುಲೈ 31ರೊಳಗಿನ 2024- 25ರ ಮೌಲ್ಯಮಾಪನ ವರ್ಷಕ್ಕೆ (financial year) ಒಟ್ಟು 7.28 ಕೋಟಿ ಆದಾಯ ತೆರಿಗೆ ರಿಟರ್ನ್ಸ್ (ITR) ಸಲ್ಲಿಸಲಾಗಿದೆ. ಇದು ಕಳೆದ ವರ್ಷ 6.77 ಕೋಟಿಯಾಗಿದ್ದು, ಈ ವರ್ಷ ಶೇ. 7.5ರಷ್ಟು ಹೆಚ್ಚಾಗಿದೆ ಮತ್ತು ಈ ವರ್ಷದ ಐಟಿಆರ್ ಸಲ್ಲಿಕೆಯಲ್ಲಿ ಶೇ. 72ರಷ್ಟು ತೆರಿಗೆದಾರರು ಹೊಸ ತೆರಿಗೆ ಪದ್ಧತಿಯನ್ನು ಆರಿಸಿಕೊಂಡಿದ್ದಾರೆ ಎಂದು ಹಣಕಾಸು ಸಚಿವರು (finance minister) ಶುಕ್ರವಾರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಈ ಬಾರಿ ತೆರಿಗೆದಾರರು ಮತ್ತು ತೆರಿಗೆ ವೃತ್ತಿಪರರು ಸಮಯಕ್ಕೆ ಸರಿಯಾಗಿ ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ಮಾಡಿದ್ದರಿಂದ ಫೈಲಿಂಗ್‌ನಲ್ಲಿ ಏಕಾಏಕಿ ಹೆಚ್ಚಳಕ್ಕೆ ಕಾರಣವಾಯಿತು. 2024ರ ಜುಲೈ 31ರವರೆಗೆ ಸಲ್ಲಿಸಿದ ಐಟಿಆರ್ ಹೊಸ ದಾಖಲೆಗೆ ಇದು ಕಾರಣವಾಯಿತು. ಆರ್ಥಿಕ ವರ್ಷ 2024ರಲ್ಲಿ ಈವರೆಗೆ ಸಲ್ಲಿಸಿರುವ ಐಟಿಆರ್ ಗಳ ಸಂಖ್ಯೆ 7.28 ಕೋಟಿಗಿಂತ ಹೆಚ್ಚು, ಇದು ಆರ್ಥಿಕ ವರ್ಷ 2023- 24ಕ್ಕೆ ಹೋಲಿಸಿದರೆ ಒಟ್ಟು ಐಟಿಆರ್‌ಗಳಿಗಿಂತ ಶೇ. 7.5ರಷ್ಟು ಹೆಚ್ಚು ಎಂದು ಸಚಿವಾಲಯ ತಿಳಿಸಿದೆ.

ತೆರಿಗೆ ಪದ್ಧತಿ ಯಾವುದು ಎಷ್ಟು?

ಆರ್ಥಿಕ ವರ್ಷ 2024-25ಕ್ಕೆ ಸಲ್ಲಿಸಿದ ಒಟ್ಟು 7.28 ಕೋಟಿ ಐಟಿಆರ್‌ಗಳಲ್ಲಿ ಹಳೆಯ ತೆರಿಗೆ ಪದ್ಧತಿಯಲ್ಲಿ ಒಟ್ಟು 2.01 ಕೋಟಿ ಐಟಿಆರ್‌ ಸಲ್ಲಿಕೆಯಾಗಿದೆ. ಹೊಸ ತೆರಿಗೆ ಪದ್ಧತಿಯಲ್ಲಿ 5.27 ಕೋಟಿ ಸಲ್ಲಿಸಲಾಗಿದೆ. ಹೀಗಾಗಿ ಶೇ.72ರಷ್ಟು ತೆರಿಗೆದಾರರು ಹೊಸ ತೆರಿಗೆ ಪದ್ಧತಿಯನ್ನು ಆಯ್ಕೆ ಮಾಡಿಕೊಂಡಿದ್ದರೆ, ಶೇ. 28ರಷ್ಟು ಮಂದಿ ಹಳೆಯ ತೆರಿಗೆ ಪದ್ಧತಿಯಲ್ಲಿಯೇ ಮುಂದುವರಿದಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

Income Tax Returns
Income Tax Returns


ಜುಲೈ 31ರಂದು ಎಷ್ಟು ಫೈಲಿಂಗ್?

2024ರ ಜುಲೈ 31ರಂದು ಐಟಿಆರ್‌ಗಳ ಫೈಲಿಂಗ್ ಗರಿಷ್ಠ ಮಟ್ಟವನ್ನು ತಲುಪಿತು. ಒಂದೇ ದಿನದಲ್ಲಿ 69.92 ಲಕ್ಷಕ್ಕೂ ಹೆಚ್ಚು ಐಟಿಆರ್‌ಗಳನ್ನು ಸಲ್ಲಿಸಲಾಗಿದೆ. ಇದನ್ನು ಇ-ಫೈಲಿಂಗ್ ಪೋರ್ಟಲ್ ಗಮನಿಸಿದೆ.

31ರಂದು ಸಂಜೆ 7ರಿಂದ 8 ಗಂಟೆ ಅವಧಿಯಲ್ಲಿ ಐಟಿಆರ್ ಫೈಲಿಂಗ್ ಪ್ರತಿ ಗಂಟೆಗೆ ಗರಿಷ್ಠ ದರ 5.07 ಲಕ್ಷ. ಐಟಿಆರ್ ಫೈಲಿಂಗ್‌ನ ಪ್ರತಿ ಸೆಕೆಂಡಿಗೆ ಅತ್ಯಧಿಕ ದರ 917. ಇದು ಜುಲೈ 17ರಂದು ಬೆಳಗ್ಗೆ 8.13ಕ್ಕೆ ದಾಖಲಾಗಿದೆ. ಐಟಿಆರ್ ಫೈಲಿಂಗ್‌ನ ಪ್ರತಿ ನಿಮಿಷಕ್ಕೆ ಗರಿಷ್ಠ ದರ 9,367. ಇದು ಜುಲೈ 31ರಂದು ರಾತ್ರಿ 8.8ಕ್ಕೆ ದಾಖಲಾಗಿದೆ.

ಮೊದಲ ಬಾರಿ ಸಲ್ಲಿಸಿದವರು

ಇಲಾಖೆಯು ಜುಲೈ 31ರವರೆಗೆ ಮೊದಲ ಬಾರಿ ಸಲ್ಲಿಸುವವರಿಂದ 58.57 ಲಕ್ಷ ಐಟಿಆರ್‌ಗಳನ್ನು ಸ್ವೀಕರಿಸಿದೆ. ಇದು ತೆರಿಗೆ ಮೂಲವನ್ನು ವಿಸ್ತರಿಸುವ ನಿಟ್ಟಿನಲ್ಲಿ ಮಹತ್ವದ ಸೂಚನೆಯಾಗಿದೆ.

ಐತಿಹಾಸಿಕವಾಗಿ ಐಟಿಆರ್‌ಗಳನ್ನು ಐಟಿಆರ್ -1, ಐಟಿಆರ್ -2, ಐಟಿಆರ್ -4, ಐಟಿಆರ್ -6 ಇ-ಫೈಲಿಂಗ್ ಪೋರ್ಟಲ್‌ನಲ್ಲಿ ಹಣಕಾಸು ವರ್ಷದ ಮೊದಲ ದಿನದಂದು ಅಂದರೆ ಏಪ್ರಿಲ್ 1ರಂದು ನಿಯೋಜಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಹಿಂದಿನ ಹಣಕಾಸು ವರ್ಷಗಳಿಗೆ ಹೋಲಿಸಿದರೆ ಐಟಿಆರ್ -3 ಮತ್ತು ಐಟಿಆರ್ -5 ಅನ್ನು ಸಹ ಬಿಡುಗಡೆ ಮಾಡಲಾಗಿದೆ. ಹಳೆಯ ಮತ್ತು ಹೊಸ ತೆರಿಗೆ ಪದ್ಧತಿಗಳ ಬಗ್ಗೆ ತೆರಿಗೆದಾರರಿಗೆ ಶಿಕ್ಷಣ ನೀಡಲು ಹೆಚ್ಚಿನ ಒತ್ತು ನೀಡಲಾಯಿತು ಎಂದು ಅದು ಹೇಳಿದೆ.

ಯಾವುದು ಎಷ್ಟು?

7.28 ಕೋಟಿ ಐಟಿಆರ್‌ಗಳಲ್ಲಿ ಆರ್ಥಿಕ ವರ್ಷ 2024-25ರಲ್ಲಿ ಶೇ. 45.77ರಷ್ಟು ಅಂದರೆ 3.34 ಕೋಟಿ ಐಟಿಆರ್-1, ಶೇ. 14.93ರಷ್ಟು ಅಂದರೆ 1.09 ಕೋಟಿ ಐಟಿಆರ್ -2, ಶೇ.12.50ರಷ್ಟು 91.10 ಲಕ್ಷ ಐಟಿಆರ್-3, ಶೇ. 25.77ರಷ್ಟು 1.88 ಕೋಟಿ ಐಟಿಆರ್- 4 ಮತ್ತು ಶೇ. 1.03ರಷ್ಟು ಅಂದರೆ 7.48 ಲಕ್ಷ ಐಟಿಆರ್ -5ರಿಂದ ಐಟಿಆರ್ -7 ಅನ್ನು ಸಲ್ಲಿಸಲಾಗಿದೆ. ಈ ಐಟಿಆರ್‌ಗಳಲ್ಲಿ ಶೇ. 43.82ಕ್ಕಿಂತ ಹೆಚ್ಚು ಇ-ಫೈಲಿಂಗ್ ಪೋರ್ಟಲ್‌ನಲ್ಲಿ ಲಭ್ಯವಿರುವ ಆನ್‌ಲೈನ್ ಐಟಿಆರ್ ಸೌಲಭ್ಯವನ್ನು ಬಳಸಿಕೊಂಡು ಸಲ್ಲಿಸಲಾಗಿದೆ ಮತ್ತು ಬಾಕಿಯನ್ನು ಆಫ್‌ಲೈನ್ ಐಟಿಆರ್ ಉಪಯುಕ್ತತೆಗಳನ್ನು ಬಳಸಿ ಸಲ್ಲಿಸಲಾಗಿದೆ.

ಇದನ್ನೂ ಓದಿ: Stock Market: ಷೇರುಪೇಟೆಯಲ್ಲಿ ಭಾರೀ ಕುಸಿತ; ಸೆನ್ಸೆಕ್ಸ್‌ 700 ಅಂಕಗಳಷ್ಟು ಪತನ

ಗರಿಷ್ಠ ಫೈಲಿಂಗ್ ಅವಧಿಯಲ್ಲಿ ಇ-ಫೈಲಿಂಗ್ ಪೋರ್ಟಲ್ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿತು. ಐಟಿಆರ್‌ಗಳನ್ನು ಸಲ್ಲಿಸಲು ತೆರಿಗೆದಾರರಿಗೆ ತಡೆರಹಿತ ಅನುಭವವನ್ನು ನೀಡಿದೆ. ಜುಲೈ 31ರಂದು 3.2 ಕೋಟಿ ಮಂದಿ ಇದರಲ್ಲಿ ಲಾಗಿನ್ ಮಾಡಿದ್ದಾರೆ.

Continue Reading

Latest

Kriti Sanon: ನಟಿ ಕೃತಿ ಸನೋನ್‌ ಡೇಟಿಂಗ್‌ ಮಾಡುತ್ತಿರುವ ಈ ಕಬೀರ್ ಬಹಿಯಾ ಯಾರು?

ಬಾಲಿವುಡ್ ನಟಿ ಕೃತಿ ಸನೋನ್ (Kriti Sanon) ಹೆಸರೀಗ ಯುಕೆ ಮೂಲದ ಮಿಲಿಯನೇರ್ ಉದ್ಯಮಿ ಕಬೀರ್ ಬಹಿಯಾ ಅವರೊಂದಿಗೆ ಕೇಳಿ ಬರುತ್ತಿದೆ. ಈ ಹಿಂದೆ ನಟಿ ಹೆಸರು ಕಾರ್ತಿಕ್ ಆರ್ಯನ್, ಪ್ರಭಾಸ್ ಮತ್ತು ಸುಶಾಂತ್ ಸಿಂಗ್ ರಜಪೂತ್ ಅವರೊಂದಿಗೆ ಕೇಳಿ ಬಂದಿತ್ತಾದರೂ ಈ ಬಗ್ಗೆ ಕೃತಿ ಎಂದಿಗೂ ಪ್ರತಿಕ್ರಿಯಿಸಿರಲಿಲ್ಲ. ಇದೀಗ ಕೃತಿ ಮತ್ತೊಮ್ಮೆ ಡೇಟಿಂಗ್ ನಲ್ಲಿರುವುದು ಸುದ್ದಿಯಾಗುತ್ತಿದ್ದಂತೆ ಆ ವ್ಯಕ್ತಿ ಯಾರು ಎನ್ನುವ ಕುತೂಹಲ ಅವರ ಅಭಿಮಾನಿಗಳಲ್ಲಿ ಹೆಚ್ಚಾಗಿದೆ. ಕಬೀರ್‌ ಹಿನ್ನೆಲೆ ಏನು ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

By

Kriti Sanon
Koo

ಕ್ರೂ, ಹಿರೊಪಂತಿ, ಮಿಮಿ, ದಿಲ್ವಾಲೆ, ಬರೇಲಿ ಕಿ ಬರ್ಫಿ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿರುವ ಬಾಲಿವುಡ್ ನಟಿ (bollywood actress) ಕೃತಿ ಸನೋನ್ (Kriti Sanon) ಈಗ ಯುಕೆ ಮೂಲದ ಮಿಲಿಯನೇರ್ (UK based millionaire) ಜೊತೆ ಡೇಟಿಂಗ್ ನಲ್ಲಿದ್ದಾರೆ ಎನ್ನುವ ವದಂತಿಗಳು ಕೇಳಿ ಬರುತ್ತಿವೆ. ಸಾಕಷ್ಟು ಅಭಿಮಾನಿಗಳನ್ನು ಹೊಂದಿರುವ ಆಕೆಯ ವೈಯಕ್ತಿಕ ಜೀವನದ ಬಗ್ಗೆ ತಿಳಿದುಕೊಳ್ಳಲು ಅಭಿಮಾನಿಗಳು ಕಾತರರಾಗಿರುತ್ತಾರೆ.

ಕಾರ್ತಿಕ್ ಆರ್ಯನ್, ಪ್ರಭಾಸ್ ಮತ್ತು ಸುಶಾಂತ್ ಸಿಂಗ್ ರಜಪೂತ್ ಅವರೊಂದಿಗೆ ಡೇಟಿಂಗ್‌ನಲ್ಲಿದ್ದರು ಎನ್ನುವ ವದಂತಿ ಇತ್ತಾದರೂ ಈ ಬಗ್ಗೆ ಕೃತಿ ಎಂದಿಗೂ ಪ್ರತಿಕ್ರಿಯಿಸಿರಲಿಲ್ಲ. ಇದೀಗ ಕೃತಿ ಮತ್ತೊಮ್ಮೆ ಡೇಟಿಂಗ್‌ನಲ್ಲಿರುವುದು ಸುದ್ದಿಯಾಗುತ್ತಿದ್ದಂತೆ ಆ ವ್ಯಕ್ತಿ ಯಾರು ಎನ್ನುವ ಕುತೂಹಲ ಕೃತಿ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.

ಕಬೀರ್ ಬಹಿಯಾ ಯಾರು?

1999ರ ನವೆಂಬರ್‌ನಲ್ಲಿ ಜನಿಸಿದ ಕಬೀರ್ ಬಹಿಯಾ ಇಂಗ್ಲೆಂಡ್‌ನ ಮಿಲ್‌ಫೀಲ್ಡ್ ಶಾಲೆಯಲ್ಲಿ ತಮ್ಮ ಆರಂಭಿಕ ಶಿಕ್ಷಣವನ್ನು ಪೂರ್ಣಗೊಳಿಸಿದ್ದರು. ಲಿಂಕ್ಡ್‌ಇನ್ ಪ್ರೊಫೈಲ್‌ನ ಪ್ರಕಾರ ಅವರು ಯುಕೆ ಮೂಲದ ಉದ್ಯಮಿಯಾಗಿದ್ದು, ಲಂಡನ್‌ನ ರೀಜೆಂಟ್ಸ್ ಯೂನಿವರ್ಸಿಟಿಯಿಂದ ವ್ಯಾಪಾರ, ನಿರ್ವಹಣೆ, ಮಾರ್ಕೆಟಿಂಗ್ ಮತ್ತು ಸಂಬಂಧಿತ ಬೆಂಬಲ ಸೇವೆಗಳ ಕುರಿತು ಅಧ್ಯಯನ ಪೂರ್ಣಗೊಳಿಸಿದ್ದಾರೆ.

Kriti Sanon
Kriti Sanon


ಯುಕೆಯಲ್ಲಿ ಸೌಥಾಲ್ ಟ್ರಾವೆಲ್ ಎಂಬ ಪ್ರಮುಖ ಟ್ರಾವೆಲ್ ಕಂಪನಿಯನ್ನು ನಡೆಸುತ್ತಿರುವ ಕುಲ್ಜಿಂದರ್ ಬಹಿಯಾ ಅವರ ಮಗ ಕಬೀರ್. 2019ರ ಸಂಡೇ ಟೈಮ್ಸ್ ಶ್ರೀಮಂತರ ಪಟ್ಟಿಯ ಆಧರಿಸಿ ಹೇಳುವುದಾದರೆ ಕುಲ್ಜಿಂದರ್ ಮತ್ತು ಅವರ ಕುಟುಂಬವು 427 ಮಿಲಿಯನ್ ಪೌಂಡ್‌ಗಳ (ಸುಮಾರು 4590 ಕೋಟಿ ರೂ.) ನಿವ್ವಳ ಮೌಲ್ಯವನ್ನು ಹೊಂದಿದೆ. ಕಬೀರ್ ತನ್ನದೇ ಆದ ಟ್ರಾವೆಲ್ ಕಂಪನಿಯಾದ ವರ್ಲ್ಡ್‌ವೈಡ್ ಏವಿಯೇಷನ್ ​​ಮತ್ತು ಟೂರಿಸಂ ಲಿಮಿಟೆಡ್ ಅನ್ನು ಪ್ರಾರಂಭಿಸಿದ್ದು, 2021ರ ಜೂನ್ ನಿಂದ ಅದರ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.

ಕಬೀರ್ ಉದ್ಯಮಿಯಾಗಿದ್ದರೂ ಕ್ರೀಡೆಯಲ್ಲಿ ಅಪಾರ ಆಸಕ್ತಿ ಹೊಂದಿದ್ದಾರೆ. ಅವರ ನೆಚ್ಚಿನ ಫುಟ್‌ಬಾಲ್ ಕ್ಲಬ್ ಬೊರುಸ್ಸಿಯಾ ಡಾರ್ಟ್‌ಮಂಡ್ ಆಗಿದೆ. ಅವರು ಹಲವಾರು ಭಾರತೀಯ ಕ್ರಿಕೆಟಿಗರೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದಾರೆ.

ಎಂ.ಎಸ್. ಧೋನಿ, ಹಾರ್ದಿಕ್ ಪಾಂಡ್ಯ ಅವರಿಗೂ ಪರಿಚಿತರು

ನತಾಸಾ ಸ್ಟಾಂಕೋವಿಕ್ ಮತ್ತು ಹಾರ್ದಿಕ್ ಪಾಂಡ್ಯ ಅವರ ವಿವಾಹ ಸಮಾರಂಭದಲ್ಲಿ ಕಬೀರ್ ಭಾಗವಹಿಸಿದ್ದರು. ಅಲ್ಲದೇ ಮಹೇಂದ್ರ ಸಿಂಗ್ ಧೋನಿ ಮತ್ತು ಅವರ ಕುಟುಂಬದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. 2024ರ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಧೋನಿ ಮತ್ತು ಅವರ ಪತ್ನಿ ಸಾಕ್ಷಿಯೊಂದಿಗೆ ಕಬೀರ್ ಕಾಣಿಸಿಕೊಂಡಿದ್ದರು. ಕಬೀರ್ ತಮ್ಮ ಇನ್‌ಸ್ಟಾಗ್ರಾಮ್ ಪ್ರೊಫೈಲ್‌ನಲ್ಲಿ ಇಬ್ಬರೂ ಕ್ರಿಕೆಟಿಗರೊಂದಿಗೆ ಅನೇಕ ಚಿತ್ರಗಳನ್ನು ಹೊಂದಿದ್ದಾರೆ.

Kriti Sanon
Kriti Sanon


ಕೃತಿ ಸನೋನ್ ಜೊತೆ ಡೇಟಿಂಗ್ ವದಂತಿ

ಕೃತಿ ಮತ್ತು ಕಬೀರ್ ಹೊಸ ವರ್ಷವನ್ನು ಒಟ್ಟಿಗೆ ಆಚರಿಸುತ್ತಿರುವಾಗ ಅವರ ನಡುವಿನ ಸಂಬಂಧದ ಬಗ್ಗೆ ವದಂತಿಗಳು ಪ್ರಾರಂಭವಾದವು. 2024ರ ಹೋಳಿ ಹಬ್ಬವನ್ನು ಕಬೀರ್ ಜೊತೆ ಕೃತಿ ನಡೆಸಿರುವುದಾಗಿ ಹೇಳುವ ಅನೇಕ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದು ನಟಿಯ ಅಭಿಮಾನಿಗಳು ಕುತೂಹಲ ಕೆರಳಿಸಿದೆ. ಕಬೀರ್‌ಗಿಂತ ಒಂಬತ್ತು ವರ್ಷ ಹಿರಿಯರಾದ ಕೃತಿ ತನ್ನ ಸಹೋದರಿ ನೂಪುರ್ ಮೂಲಕ ಅವರನ್ನು ಮೊದಲ ಬಾರಿ ಭೇಟಿಯಾಗಿದ್ದರು ಎನ್ನಲಾಗಿದೆ.

ಇದನ್ನೂ ಓದಿ: OTT Releases: ಒಟಿಟಿಯಲ್ಲಿ ಈ ತಿಂಗಳು ಕಲ್ಕಿ, ಇಂಡಿಯನ್‌, ಟರ್ಬೊ ಜತೆಗೆ ಇನ್ಯಾವ ಹೊಸ ಚಿತ್ರ, ವೆಬ್‌ ಸಿರೀಸ್‌?

ಕೃತಿ ಸನೋನ್ ಇತ್ತೀಚೆಗೆ ತಮ್ಮ ಹುಟ್ಟುಹಬ್ಬದ ವೇಳೆ ಕಬೀರ್ ಜೊತೆ ಪ್ರವಾಸ ನಡೆಸಿರುವುದಾಗಿ ಕೇಳಿ ಬಂದಾಗ ಅವರಿಬ್ಬರ ಡೇಟಿಂಗ್ ಗೆ ಮತ್ತಷ್ಟು ಪುಷ್ಟಿ ಸಿಕ್ಕಿದೆ. ಸದ್ಯ ನಟಿ ಕೃತಿ ತನ್ನ ಸಹೋದರಿ ನೂಪುರ್ ಸನೋನ್ ಮತ್ತು ಸ್ನೇಹಿತರೊಂದಿಗೆ ಗ್ರೀಸ್‌ನಲ್ಲಿ ಕಾಲ ಕಳೆಯುತ್ತಿದ್ದಾರೆ. ಇದರಲ್ಲಿ ಅಭಿಮಾನಿಗಳು ಕೃತಿ ಮತ್ತು ಕಬೀರ್ ಒಟ್ಟಿಗೆ ಇರುವ ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಹರಿದಾಡುತ್ತಿವೆ. ಇದನ್ನು ನೋಡಿರುವ ಅವರ ಅಭಿಮಾನಿಗಳು ನಟಿ ಕೃತಿ ತಮ್ಮ 34ನೇ ಹುಟ್ಟುಹಬ್ಬವನ್ನು ಕಬೀರ್ ಜೊತೆ ಆಚರಿಸಿದರು ಎಂಬುದಾಗಿ ಹೇಳುತ್ತಿದ್ದಾರೆ

Continue Reading
Advertisement
Wayanad Tragedy
Latest38 seconds ago

Wayanad Tragedy : ವಯನಾಡ್ ಭೂಕುಸಿತ; ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದ ಕುಟುಂಬಕ್ಕೆ ಕಣ್ಣೀರು ಸುರಿಸುತ್ತ ಆಶ್ರಯ ನೀಡಿದ ಆನೆ!

DMK Leader Controversy
ದೇಶ2 mins ago

DMK leader Controversy: ಶ್ರೀರಾಮನ ಅಸ್ತಿತ್ವಕ್ಕೆ ಪುರಾವೆಗಳೇ ಇಲ್ಲ: ಡಿಎಂಕೆ ನಾಯಕನ ವಿಡಿಯೋ ಫುಲ್‌ ವೈರಲ್‌

PSI Parshuram death Case
ಕರ್ನಾಟಕ8 mins ago

PSI Parshuram Death Case: ಪಿಎಸ್ಐ ಪರಶುರಾಮ ಸಾವು ಪ್ರಕರಣ; ಯಾದಗಿರಿ ಕೈ ಶಾಸಕ, ಪುತ್ರನ ವಿರುದ್ಧ ಎಫ್‌ಐಆರ್‌

assault case
ಚಿಕ್ಕಮಗಳೂರು51 mins ago

Assault Case : ಹೆಲ್ಮೆಟ್‌ ಇಲ್ಲದೇ ಚಲಿಸುತ್ತಿದ್ದ ಬೈಕ್ ಸವಾರನ ಕಾಲರ್ ಪಟ್ಟಿ ಹಿಡಿದು ಎಳೆದ ಟ್ರಾಫಿಕ್‌ ಪೊಲೀಸ್‌!

ಮಾಲಿವುಡ್1 hour ago

Mohanlal Visits Landslide: ಸೇನಾ ಸಮವಸ್ತ್ರ ಧರಿಸಿ ವಯನಾಡಿಗೆ ಬಂದ ಮೋಹನ್​ಲಾಲ್!

M R Mamata
ಶ್ರದ್ಧಾಂಜಲಿ1 hour ago

M R Mamata: ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಆರ್. ಮಮತಾ ನಿಧನ

wayanad landslide cm siddaramaiah pinarayi vijayan
ಕರ್ನಾಟಕ1 hour ago

Wayanad landslide: ವಯನಾಡ್‌ ಭೂಕುಸಿತ ಸಂತ್ರಸ್ತರಿಗೆ 100 ಮನೆ ನಿರ್ಮಾಣ: ಕೇರಳ ಸಿಎಂಗೆ ಸಿದ್ದರಾಮಯ್ಯ ಭರವಸೆ

Paris Olympics
ಪ್ರಮುಖ ಸುದ್ದಿ1 hour ago

Paris Olympics: ಹ್ಯಾಟ್ರಿಕ್​ ಪದಕ ತಪ್ಪಿಸಿಕೊಂಡ ಮನು ಭಾಕರ್​; 4ನೇ ಸ್ಥಾನಕ್ಕೆ ತೃಪ್ತಿ

Self Harming
ಚಿಕ್ಕೋಡಿ2 hours ago

Self Harming : ಉಕ್ಕಿ ಹರಿಯುವ ಕೃಷ್ಣಾ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣು

BJP-JDS Padayatra
ಕರ್ನಾಟಕ2 hours ago

BJP-JDS Padayatra: ಮೈಸೂರು ಚಲೋ ಪಾದಯಾತ್ರೆ ಆರಂಭ; ದಲಿತರು, ರೈತರಿಗೆ ನ್ಯಾಯ ಕೊಡಿಸಲು ಹೋರಾಟ ಎಂದ ವಿಜಯೇಂದ್ರ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ2 hours ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ4 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ4 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ5 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ5 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌