Amazon: ಭಾರತದಲ್ಲಿ 2025ರ ಹೊತ್ತಿಗೆ 20 ಲಕ್ಷ ಉದ್ಯೋಗ ಸೃಷ್ಟಿಸಲಿದೆ ಅಮೆಜಾನ್! ಮೋದಿ ಜತೆ ಸಿಇಒ ಮಾತುಕತೆ - Vistara News

ಉದ್ಯೋಗ

Amazon: ಭಾರತದಲ್ಲಿ 2025ರ ಹೊತ್ತಿಗೆ 20 ಲಕ್ಷ ಉದ್ಯೋಗ ಸೃಷ್ಟಿಸಲಿದೆ ಅಮೆಜಾನ್! ಮೋದಿ ಜತೆ ಸಿಇಒ ಮಾತುಕತೆ

Amazon: ಭಾರತದ ಇ ಮಾರುಕಟ್ಟೆಯಲ್ಲಿ ಸಾಕಷ್ಟು ಪ್ರಭಾವಿಯಾಗಿರುವ ಅಮೆಜಾನ್ 15 ಶತಕೋಟಿ ಡಾಲರ್ ಹೂಡಿಕೆ ಮಾಡಲಿದ್ದು, ಸುಮಾರು 20 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿಯನ್ನು ಹಾಕಿಕೊಂಡಿದೆ.

VISTARANEWS.COM


on

Andy Jassy and PM Narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಇ ಕಾಮರ್ಸ್ ದೈತ್ಯ ಅಮೆಜಾನ್ (Amazon) ಭಾರತದಲ್ಲಿ (India) ಸುಮಾರು 15 ಶತಕೋಟಿ ಡಾಲರ್ ಹೂಡಿಕೆ ಮಾಡಲು ಸಜ್ಜಾಗಿದೆ. ಇದರೊಂದಿಗೆ ಭಾರತದಲ್ಲಿ ಅದರ ಒಟ್ಟು ಹೂಡಿಕೆಯ ಪ್ರಮಾಣ 26 ಶತಕೋಟಿ ಡಾಲರ್‌ಗೆ ಏರಿಕೆಯಾಗಲಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರೊಂದಿಗೆ ಭೇಟಿಯ ವೇಳೆ ಅಮೆಜಾನ್ ಸಿಇಒ ಆ್ಯಂಡಿ ಜಾಸ್ಸಿ (Amazon CEO Andy Jassy) ಅವರು ಈ ವಿಷಯವನ್ನು ತಿಳಿಸಿದ್ದಾರೆ. ಭಾರತದಲ್ಲಿ ಈವರೆಗೆ ನಾವು 11 ಶತಕೋಟಿ ಡಾಲರ್ ಹೂಡಿಕೆ ಮಾಡಿದ್ದೇವೆ. ಹೆಚ್ಚುವರಿಯಾಗಿ ಇನ್ನೂ 15 ಶತಕೋಟಿ ಡಾಲರ್ ಹೂಡಿಕೆ ಮಾಡಲಿದ್ದೇವೆ. ಭಾರತದಲ್ಲಿ ಅಮೆಜಾನ್ ಹೂಡಿಕೆ ಮೊತ್ತ 26 ಶತಕೋಟಿ ಡಾಲರ್ ಆಗಲಿದೆ. ಹಾಗಾಗಿ, ಭವಿಷ್ಯದಲ್ಲಿ ಭಾರತದ ಜತೆಗೆ ನಾವು ಸಂಬಂಧವನ್ನು ಹೆಚ್ಚಿಸುವುದನ್ನು ಎದುರು ನೋಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಭೇಟಿ ನೀಡಿದ್ದರು. ಈ ವೇಳೆ, ಹಲವು ಕಂಪನಿಗಳ ಸಿಇಒಗಳನ್ನು ಜತೆಗೆ ಅವರು ಸಭೆ ನಡೆಸಿದ್ದರು. ಈ ವೇಳೆ ಅಮೆಜಾನ್ ಸಿಇಒ ಆ್ಯಂಡಿ ಜಾಸ್ಸಿ ಕೂಡ ಇದ್ದರು. ಮಾತುಕತೆ ಸಮಯದಲ್ಲಿ ಉಭಯ ನಾಯಕರು ಭಾರತೀಯ ಸ್ಟಾರ್ಟ್‌ಅಪ್‌ಗಳಿಗೆ ಸಹಾಯ ಮಾಡುವುದು, ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು, ರಫ್ತುಗಳನ್ನು ಉತ್ತೇಜಿಸುವುದು, ಡಿಜಿಟಲೀಕರಣವನ್ನು ಅಳವಡಿಸಿಕೊಳ್ಳುವುದು ಮತ್ತು ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ವ್ಯಕ್ತಿಗಳು ಮತ್ತು ಸಣ್ಣ ಉದ್ಯಮಗಳನ್ನು ಸಬಲೀಕರಣಗೊಳಿಸುವಂತಹ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ಈ ಸುದ್ದಿಯನ್ನೂ ಓದಿ: NIT Patna: ಎನ್ಐಟಿ ಪಾಟ್ನಾ ವಿದ್ಯಾರ್ಥಿಗೆ 1.8 ಕೋಟಿ ರೂಪಾಯಿ ಜಾಬ್ ಆಫರ್! ಅಮೆಜಾನ್‌ನಲ್ಲಿ ಕೆಲಸ

ಅಮೆಜಾನ್ ಕಂಪನಿಯು ಭಾರತದಲ್ಲಿ 2025ರ ಹೊತ್ತಿಗೆ ಸುಮಾರು 20 ಲಕ್ಷ ಉದ್ಯೋಗ ಸೃಷ್ಟಿಯ ಗುರಿಯನ್ನು ಹಾಕಿಕೊಂಡಿದೆ. ಅಷ್ಟೇ ಅಲ್ಲದೇ, 10 ದಶಲಕ್ಷ ಸಣ್ಣ ವ್ಯಾಪಾರಸ್ಥರಿಗೆ ನೆರವು ಒದಗಿಸುವುದು ಹಾಗೂ 20 ಶತಕೋಟಿ ರಫ್ತು ಗುರಿಯನ್ನು ಹೊಂದಿದೆ ಎಂದು ಅವರು ತಿಳಿಸಿದ್ದಾರೆ. ಅಮೆಜಾನ್ ಸಿಇಒ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಮುಂಚೆ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ರಾಜೀವ್ ಚಂದ್ರಶೇಖರ್ ಅವರು ಈ ವಿಷಯವನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದರು.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job News: ಅಟೆನ್ಷನ್‌ ಪ್ಲೀಸ್‌; ಸರ್ಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಇಂದು, ನಾಳೆ ಕೊನೆಯ ದಿನ

Job News: ರಾಜ್ಯ ಮತ್ತು ಕೇಂದ್ರ ಸರ್ಕಾರದ ಸುಮಾರು 6,740 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಗಮನಿಸಿ ಈ ಪೈಕಿ ಕೆಲವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನವಾಗಿದ್ದರೆ ಕೆಲವು ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ನಾಳೆಗೆ ಕೊನೆಗೊಳ್ಳುತ್ತದೆ. ಹೀಗಾಗಿ ಬೇಗ ಬೇಗ ಅಪ್ಲೈ ಮಾಡಿ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ವಿವರ ಇಲ್ಲಿದೆ.

VISTARANEWS.COM


on

Job News
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಪಡೆದುಕೊಳ್ಳಬೇಕು ಎನ್ನುವುದು ಬಹತೇಕರ ಕನಸು. ಅದಕ್ಕಾಗಿ ಅನೇಕರು ಹಲವು ವರ್ಷಗಳಿಂದ ಕಠಿಣ ತಯಾರಿಯಲ್ಲಿ ತೊಡಗಿರುತ್ತಾರೆ. ಇದೀಗ ಅಂತಹದ್ದೊಂದು ಸುವರ್ಣಾವಕಾಶ ಬಂದಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಸುಮಾರು 6,740 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಗಮನಿಸಿ ಈ ಪೈಕಿ ಕೆಲವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನವಾಗಿದ್ದರೆ ಕೆಲವು ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ನಾಳೆಗೆ ಕೊನೆಗೊಳ್ಳುತ್ತದೆ. ಹೀಗಾಗಿ ಬೇಗ ಬೇಗ ಅಪ್ಲೈ ಮಾಡಿ (Job News).

ಗ್ರೂಪ್‌ ಬಿ ಹುದ್ದೆಗಳು

ರಾಜ್ಯ ಸರ್ಕಾರದ 9 ಇಲಾಖೆಗಳ ಉಳಿಕೆ ಮೂಲ ವೃಂದ ಹಾಗೂ ಎಚ್‌ಕೆ ವೃಂದದ ವಿವಿಧ ಗ್ರೂಪ್‌ ಬಿ 327 ಹುದ್ದೆಗಳ ಅರ್ಜಿಗೆ ಇಂದೇ (14-05-2024) ಕೊನೆ ದಿನವಾಗಿದೆ. ಇಂದು ರಾತ್ರಿ 11.59 ಗಂಟೆಯೊಳಗೆ ಅರ್ಜಿ ಸಲ್ಲಿಸಲು ಸಮಯಾವಕಾಶ ಇದೆ. ತಾಂತ್ರಿಕ ಹಾಗೂ ತಾಂತ್ರಿಕೇತರ ಪದವಿ, ಸ್ನಾತಕೋತ್ತರ ಪದವಿ ಪಾಸ್‌ ಮಾಡಿದವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಸಿಎಪಿಎಫ್‌ 506 ಹುದ್ದೆಗಳು

ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (UPSC)ನ ಗಡಿ ಭದ್ರತಾ ಪಡೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ, ಕೇಂದ್ರ ಮೀಸಲು ಪೊಲೀಸ್‌ ಪಡೆ, ಇಂಡೊ-ಟೆಬೆಟನ್ ಗಡಿ ಪೊಲೀಸ್‌ ಮತ್ತು ಸಶಸ್ತ್ರ ಸೀಮಾ ಬಲ ಪಡೆಗಳಲ್ಲಿನ 506 ಹುದ್ದೆಗಳಿಗೆ ಅಪ್ಲೈ ಮಾಡಲು ಇಂದು ಕೊನೆಯ ದಿನ (ಸಂಜೆ 6 ಗಂಟೆ). ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ನ 4,660 ಹುದ್ದೆಗಳು

ರೈಲ್ವೆ ನೇಮಕಾತಿ ಮಂಡಳಿಯು ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ನಲ್ಲಿ ಖಾಲಿ ಇರುವ ಬರೋಬ್ಬರಿ 4,660 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಇಂದೇ ಕೊನೆಯ ದಿನ. ಕಾನ್‌ಸ್ಟೇಬಲ್‌, ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳು ಇದಾಗಿದ್ದು, ಎಸ್ಸೆಸ್ಸೆಲ್ಸಿ ತೆರ್ಗಡೆಯಾದವರೂ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

247 ಪಿಡಿಒ ಹುದ್ದೆಗಳು

ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಪಿಡಿಇ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆ (ಮೇ 15) ಕೊನೆಯ ದಿನ. ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. 150 ಆರ್‌ಪಿಸಿ ಮತ್ತು 97 ಎಚ್‌ಕೆ ಹುದ್ದೆಗಳು ಸೇರಿ ಒಟ್ಟು 247 ಪೋಸ್ಟ್‌ಗಳು ಖಾಲಿ ಇವೆ. ಅರ್ಜಿ ಸಲ್ಲಿಸಲು ಮೇ 15ರ ರಾತ್ರಿ 11 ಗಂಟೆವರೆಗೆ ಅವಕಾಶ ಇದೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳು

ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಫೆ. 20ರಂದು ಅಧಿಸೂಚನೆ ಹೊರಡಿಸಿತ್ತು. ಅದರಂತೆ ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ. ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಲುಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಟೆಕ್ಸ್‌ಟೈಲ್ಸ್‌ ಕಮಿಟಿಯಿಂದ 40 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲೂ ಇದೆ ಪೋಸ್ಟಿಂಗ್‌

Continue Reading

ಉದ್ಯೋಗ

Job Alert: ಎಚ್ಎ‌ಎಲ್‌ನಿಂದ 200 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

Job Alert: ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ನಲ್ಲಿ ಖಾಲಿ ಇರುವ 200 ತರಬೇತುದಾರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ವಿಭಾಗಗಳಲ್ಲಿ ಐಟಿಐ ತೇರ್ಗಡೆ ಹೊಂದಿದವರು ಮೇ 20ರಿಂದ 22ರ ತನಕ ಆಯೋಜಿಸಿರುವ ನೇರ ಸಂದರ್ಶದಲ್ಲಿ ಪಾಲ್ಗೊಳ್ಳಬಹುದು. ಸಂದರ್ಶನ ಹೈದರಾಬಾದ್‌ನಲ್ಲಿ ನಡೆಯಲಿದೆ. ವೇಳಾಪಟ್ಟಿ ಸೇರಿದಂತೆ ವಿವಿಧ ಮಾಹಿತಿ ಇಲ್ಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಉದ್ಯೋಗದ ಹುಡುಕಾಟದಲ್ಲಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ (Hindustan Aeronautics Limited)ನಲ್ಲಿ ಖಾಲಿ ಇರುವ 200 ತರಬೇತುದಾರ ಹುದ್ದೆಗಳ (Apprentice posts) ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ (HAL Recruitment 2024). ವಿವಿಧ ವಿಭಾಗಗಳಲ್ಲಿ ಐಟಿಐ ತೇರ್ಗಡೆ ಹೊಂದಿದವರು ಮೇ 20ರಿಂದ 22ರ ತನಕ ಆಯೋಜಿಸಿರುವ ನೇರ ಸಂದರ್ಶದಲ್ಲಿ ಪಾಲ್ಗೊಳ್ಳಬಹುದು (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಎಲೆಕ್ಟ್ರಾನಿಕ್ ಮೆಕ್ಯಾನಿಕ್ – 55, ಫಿಟ್ಟರ್ – 35, ಎಲೆಕ್ಟ್ರಿಷಿಯನ್ – 25, ಮೆಷಿನಿಸ್ಟ್‌ – 8, ಟರ್ನರ್ – 6, ವೆಲ್ಡರ್ – 3, ರೆಫ್ರಿಜರೇಟರ್ & ಎಸಿ – 2, ಕೋಪಾ – 55, ಪ್ಲಂಬರ್ – 2, ಪೈಂಟರ್‌ – 5, ಡೀಸೆಲ್ ಮೆಕ್ಯಾನಿಕ್ – 1, ಮೋಟಾರು ವಾಹನ – 1, ಡ್ರಾಫ್ಟ್‌ಮ್ಯಾನ್‌ – ಸಿವಿಲ್ – 1, ಡ್ರಾಫ್ಟ್‌ಮ್ಯಾನ್‌ – ಮೆಕ್ಯಾನಿಕಲ್ – 1 ಹುದ್ದೆಗಳಿವೆ. ಅಂಗೀಕೃತ ಬೋರ್ಡ್‌ನಿಂದ ಹತ್ತನೇ ತರಗತಿ ತೇರ್ಡೆಯಾದ ಮತ್ತು ಸಂಬಂದಿಸಿದ ಟ್ರೇಟ್‌ನಲ್ಲಿ ಐಟಿಐ ಮುಗಿಸಿರುವ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಅಭ್ಯರ್ಥಿಗಳಿಗೆ ಕನಿಷ್ಠ 16 ವರ್ಷ ತುಂಬಿರಬೇಕು ಮತ್ತು ಗರಿಷ್ಠ ವಯಸ್ಸು 23 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 3 ವರ್ಷ, ವಿಶೇಷ ಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ನೇರ ಸಂದರ್ಶನ ಎಲ್ಲಿ ಯಾವಾಗ?

ಮೇ 20ರಂದು ಬೆಳಗ್ಗೆ 9 ಗಂಟೆಗೆ ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಡೀಸೆಲ್ ಮೆಕ್ಯಾನಿಕ್ ಮತ್ತು ಮಧ್ಯಾಹ್ನ 1 ಗಂಟೆಗೆ ಫಿಟ್ಟರ್‌, ಪ್ಲಂಬರ್‌, ಪೈಂಟರ್‌ ಹುದ್ದೆಗಳ ಆಕಾಂಕ್ಷಿಗಳು ಹಾಜರಾಗಬೇಕು. ಮೇ 21ರ ಬೆಳಗ್ಗೆ 9 ಗಂಟೆಗೆ ಕೋಪಾ, ಮೋಟಾರು ವಾಹನ ಮೆಕ್ಯಾನಿಕ್‌ ಮತ್ತು ಮಧ್ಯಾಹ್ನ 1 ಗಂಟೆಗೆ ಎಲೆಕ್ಟ್ರೀಷಿಯನ್‌, ಡ್ರಾಫ್ಟ್‌ಮ್ಯಾನ್‌-ಮೆಕ್ಯಾನಿಕಲ್‌ ಹುದ್ದೆಗಳ ಸಂದರ್ಶನ ನಡೆಯಲಿದೆ. ಮೇ 22ರಂದು ಬೆಳಗ್ಗೆ 9 ಗಂಟೆಗೆ ಮೆಷಿನಿಸ್ಟ್‌, ರೆಫ್ರಿಜರೇಷನ್‌ & ಎಸಿ, ಟರ್ನರ್‌ ಹುದ್ದೆಗೆ ಮತ್ತು ಮಧ್ಯಾಹ್ನ 1 ಗಂಟೆಗೆ ಡ್ರಾಫ್ಟ್‌ಮ್ಯಾನ್‌ -ಸಿವಿಲ್‌, ವೆಲ್ಡರ್‌ಗಳ ಸಂದರ್ಶನ ಆಯೋಜಿಸಲಾಗಿದೆ. ಆಯ್ಕೆಯಾದವರಿಗೆ 1 ವರ್ಷಗಳ ತರಬೇತಿ ನೀಡಲಾಗುತ್ತದೆ.

ಸಂದರ್ಶನ ನಡೆಯುವ ಸ್ಥಳ:

Auditorium, Behaind Department of Trainning & Development,
Hindustan Aeronautics Limited, Avionics Division, Balanagar, Hyderabad-500042.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಸಂದರ್ಶನಕ್ಕೆ ಹಾಜರಾಗುವ ವೇಳೆ ಬೇಕಾದ ದಾಖಲೆಗಳು

  • ಆಧಾರ್‌ ಕಾರ್ಡ್‌.
  • ಎಸ್ಸೆಸ್ಸೆಲ್ಸಿ ಮತ್ತು ಐಟಿಐಯ ಎಲ್ಲ ಸೆಮಿಸ್ಟರ್‌ನ ಸರ್ಟಿಫಿಕೆಟ್‌.
  • ಮೀಸಲಾತಿಯ ಸರ್ಟಿಫಿಕೆಟ್‌.
  • ಹೆಸರು ನೋಂದಣಿಯ ಮಾಡಿಕೊಂಡಿರುವ ಅಪ್ಲಿಕೇಷನ್‌ ಫಾರಂ.
  • ಎರಡು ಪಾಸ್‌ಪೋರ್ಟ್‌ ಅಳತೆಯ ಫೋಟೊ.

ಹೆಸರು ನೋಂದಾಯಿಸಲು ಇಲ್ಲಿ ಕ್ಲಿಕ್‌ ಮಾಡಿ.

ಹೆಚ್ಚಿನ ಮಾಹಿತಿಗೆ ಎಚ್‌ಎಎಲ್‌ನ ಅಧಿಕೃತ ವೆಬ್‌ಸೈಟ್‌ ವಿಳಾಸ https://www.hal-india.co.in/ಗೆ ಭೇಟಿ ನೀಡಿ.

ಇದನ್ನೂ ಓದಿ: Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job Alert: ಟೆಕ್ಸ್‌ಟೈಲ್ಸ್‌ ಕಮಿಟಿಯಿಂದ 40 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲೂ ಇದೆ ಪೋಸ್ಟಿಂಗ್‌

Job Alert: ಭಾರತ ಸರ್ಕಾರದ ಜವಳಿ ಸಚಿವಾಲಯದ ಟೆಕ್ಸ್‌ಟೈಲ್ಸ್‌ ಕಮಿಟಿ ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಒಟ್ಟು 40 ಪ್ರಾಜೆಕ್ಟ್‌ ಅಸಿಸ್ಟಂಟ್‌ ಹುದ್ದೆ ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿಯೂ ಹುದ್ದೆ ಖಾಲಿ ಇದ್ದು, ಆಸಕ್ತರು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಮೇ 31ರೊಳಗೆ ತಲುಪುವಂತಿರಬೇಕು. ಬಿಎಸ್‌ಸಿ (ಫಿಸಿಕ್ಸ್‌ ಅಥವಾ ಕೆಮಿಸ್ಟ್ರಿ) ಅಥವಾ ಟೆಕ್ಸ್‌ಟೈಲ್ಸ್‌ ಟೆಕ್ನಾಲಜಿಯಲ್ಲಿ ಬಿ.ಟೆಕ್‌ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ.

VISTARANEWS.COM


on

Job Alert
Koo

ಬೆಂಗಳೂರು: ಭಾರತ ಸರ್ಕಾರದ ಜವಳಿ ಸಚಿವಾಲಯ (Ministry of Textiles)ದ ಟೆಕ್ಸ್‌ಟೈಲ್ಸ್‌ ಕಮಿಟಿ (Textiles Committee) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಒಟ್ಟು 40 ಪ್ರಾಜೆಕ್ಟ್‌ ಅಸಿಸ್ಟಂಟ್‌ (Project Assistant) ಹುದ್ದೆ ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದು (Textiles Committee Recruitment 2024). ಬೆಂಗಳೂರಿನಲ್ಲಿಯೂ ಹುದ್ದೆ ಖಾಲಿ ಇದ್ದು, ಆಸಕ್ತರು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಮೇ 31ರೊಳಗೆ ತಲುಪುವಂತಿರಬೇಕು ಎಂದು ಪ್ರಕಟಣೆ ತಿಳಿಸಿದೆ. ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು (Job Alert).

ಹುದ್ದೆಗಳ ವಿವರ

ಬೆಂಗಳೂರು – 4, ಮುಂಬೈ – 7, ನವಿ ಮುಂಬೈ – 3, ಚೆನ್ನೈ – 3, ಕಾನ್ಪುರ – 1, ಕಣ್ಣೂರು – 1, ಕರೂರು – 1, ಹೈದರಾಬಾದ್‌ – 4, ಗುರುಗ್ರಾಮ – 3, ಜೈಪುರ – 2, ತಿರುಪುರ – 3, ಗುಂಟೂರು – 1, ಕೊಯಂಬತ್ತೂರು – 5, ಲುಧಿಯಾನ – 1, ಕೋಲ್ಕತ್ತಾ – 1 ಹುದ್ದೆಗಳಿವೆ.

ವಿದ್ಯಾರ್ಹತೆ ಮತ್ತು ವಯೋಮಿತಿ

ಬಿಎಸ್‌ಸಿ (ಫಿಸಿಕ್ಸ್‌ ಅಥವಾ ಕೆಮಿಸ್ಟ್ರಿ) ಅಥವಾ ಟೆಕ್ಸ್‌ಟೈಲ್ಸ್‌ ಟೆಕ್ನಾಲಜಿಯಲ್ಲಿ ಬಿ.ಟೆಕ್‌ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 26 ಸಾವಿರ ರೂ. ಮಾಸಿಕ ವೇತನ ದೊರೆಯಲಿದೆ. ಆಯ್ಕೆಯಾದವರನ್ನು 3 ವರ್ಷಗಳ ಅವಧಿಗೆ ತಾತ್ಕಾಲಿಕವಾಗಿ ನೇಮಿಸಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇದನ್ನು ಗಮನಿಸಿ

  • 2024ರ ಮಾರ್ಚ್‌ 31ಕ್ಕೆ ಹೊಂದಿಕೊಂಡು ಕನಿಷ್ಠ ಮತ್ತು ಗರಿಷ್ಠ ವಯಸ್ಸನ್ನು ನಿರ್ಧರಿಸಲಾಗುತ್ತದೆ.
  • ವಾರಕ್ಕೆ ಒಂದು ದಿನ ರಜೆ ಇರಲಿದ್ದು, ವರ್ಷಕ್ಕೆ 8 ಕ್ಯಾಶುವಲ್‌ ಲೀವ್‌ ನಿಗದಿಪಡಿಸಲಾಗಿದೆ.
  • ಟಿಎ / ಡಿಎ ಪಾವತಿಸಲಾಗುವುದಿಲ್ಲ.
  • ಅಭ್ಯರ್ಥಿಗಳು ಒಂದು ಕಡೆಗೆ ಮಾತ್ರ ಅರ್ಜಿ ಸಲ್ಲಿಸಬೇಕು.

Textiles Committee Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

Textiles Committee Recruitment 2024 ಅಪ್ಲಿಕೇಷನ್‌ ಫಾರಂಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅಪ್ಲಿಕೇಷನ್‌ ಫಾರಂ ಅನ್ನು ಡೌನ್‌ಲೋಡ್‌ ಮಾಡಿ ಪ್ರಿಂಟ್‌ ತೆಗೆದು ಭರ್ತಿ ಮಾಡಿ.
  • ಫೋಟೊ ಲಗತ್ತಿಸಿ.
  • ಸೆಲ್ಫ್‌ ಎಟೆಸ್ಟ್‌ ಮಾಡಿದ ಡಾಕ್ಯುಮೆಂಟ್‌ಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ:

Textiles Committee, FKCCI,
WTC Building, 1st Floor, Kempe Gowda Road,
Bangaluru – 560 009, Karnataka.

ಹೆಚ್ಚಿನ ವಿವರಗಳಿಗೆ ಫೋನ್‌ ನಂಬರ್‌: (080) 2226 1401, ಇಮೇಲ್‌: blr.tc@nic.inಗೆ ಸಂಪರ್ಕಿಸಿ. ಗಮನಿಸಿ ನಿಮ್ಮ ಅಪ್ಲಿಕೇಷನ್‌ ಫಾರಂ ಮೇ 31ರೊಳಗೆ ತಲುಪುವಂತಿರಬೇಕು.

ಇದನ್ನೂ ಓದಿ: Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job News: ಗುಡ್‌ನ್ಯೂಸ್‌; ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಿಂದ ಶೀಘ್ರ 12,000 ಉದ್ಯೋಗಿಗಳ ನೇಮಕ

Job News: ಬ್ಯಾಂಕ್‌ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುತ್ತಿರುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ದೇಶದ ಅತಿ ದೊಡ್ಡ ಬ್ಯಾಂಕ್‌ ಎನಿಸಿಕೊಂಡಿರುವ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಬರೋಬ್ಬರಿ 12,000 ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಮುಂದಾಗಿದೆ. ಮಾಹಿತಿ ತಂತ್ರಜ್ಞಾನ ಮತ್ತು ಇತರ ವಿಭಾಗಗಳಲ್ಲಿ ಈ ನೇಮಕಾತಿ ನಡೆಲಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಅಧಿಸೂಚನೆ ಶೀಘ್ರದಲ್ಲಿಯೇ ಹೊರ ಬೀಳಲಿದೆ.

VISTARANEWS.COM


on

Job News
Koo

ನವದೆಹಲಿ: ದೇಶದ ಅತಿ ದೊಡ್ಡ ಬ್ಯಾಂಕ್‌ ಎನಿಸಿಕೊಂಡಿರುವ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (State Bank of India) ಬರೋಬ್ಬರಿ 12,000 ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಮುಂದಾಗಿದೆ. ಮಾಹಿತಿ ತಂತ್ರಜ್ಞಾನ (Information Technology) ಮತ್ತು ಇತರ ವಿಭಾಗಗಳಲ್ಲಿ ಈ ನೇಮಕಾತಿ ನಡೆಲಿದೆ ಎಂದು ಅಧ್ಯಕ್ಷ ದಿನೇಶ್‌ ಖರಾ (Dinesh Khara) ಮಾಹಿತಿ ನೀಡಿದ್ದಾರೆ (Job News).

”ಸುಮಾರು 11,000ರಿಂದ 12,000 ಉದ್ಯೋಗಿಗಳ ನೇಮಕಾತಿಯ ಪ್ರಕ್ರಿಯೆ ನಡೆಯುತ್ತಿದೆ. ಈ ನೇಮಕಾತಿ ಬ್ಯಾಂಕ್‌ನ ತಾಂತ್ರಿಕ ಸಾಮರ್ಥ್ಯವನ್ನು ಹೆಚ್ಚಿಸುವ ಗುರಿ ಹೊಂದಿದೆ. ಜತೆಗೆ ಸೇವೆಯ ಗುಣಮಟ್ಟವನ್ನು ವೃದ್ಧಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆʼʼ ಎಂದು ಅವರು ವಿವರಿಸಿದ್ದಾರೆ. ʼʼನೇಮಕಗೊಂಡವರಿಗೆ ಆರಂಭದಲ್ಲಿ ಬ್ಯಾಂಕಿಂಗ್‌ ವ್ಯವಸ್ಥೆಯ ಬಗ್ಗೆ ಸೂಕ್ತ ಮಾಹಿತಿ ನೀಡಿ ಬಳಿಕ ಅವರನ್ನು ಐಟಿ ವಿಭಾಗಕ್ಕೆ ಶಿಫಾರಸ್ಸು ಮಡಲಾಗುವುದುʼʼ ಎಂದು ಅವರು ಹೇಳಿದ್ದಾರೆ. ಈ ಮೂಲಕ ಬ್ಯಾಂಕ್‌ ಉದ್ಯೋಗ ಹೊಂದಬೇಕು ಎನ್ನುವವರ ಕನಸು ನನಸಾಗಲಿದೆ.

ಉದ್ಯೋಗಿಗಳ ಸಂಖ್ಯೆಯಲ್ಲಿ ಕುಸಿತ

ಮಾರ್ಚ್‌ ಅಂತ್ಯಕ್ಕೆ ಎಸ್‌ಬಿಐ ಉದ್ಯೋಗಿಗಳ ಸಂಖ್ಯೆ 2,32,296ಕ್ಕೆ ಕುಸಿದಿದೆ. ಕಳೆದ ವರ್ಷ ಇದೇ ವೇಳೆಗೆ 2,35,858 ಉದ್ಯೋಗಿಗಳಿ ಕಾರ್ಯ ನಿರ್ವಹಿಸುತ್ತಿದ್ದರು. ಇನ್ನು 2024ರ ಮಾರ್ಚ್‌ 31ಕ್ಕೆ ಕೊನೆಗೊಂಡ ತ್ರೈ ಮಾಸಿಕದಲ್ಲಿ ಎಸ್‌ಬಿಐಯ ನಿವ್ವಳ ಲಾಭ ಶೇ. 24ರಷ್ಟು ಏರಿಕೆ ದಾಖಲಿಸಿ 20,698 ಕೋಟಿ ರೂ.ಗೆ ತಲುಪಿದೆ. ಕಳೆದ ವರ್ಷ ಈ ಅವಧಿಯಲ್ಲಿ ಎಸ್‌ಬಿಐ 16,695 ಕೋಟಿ ರೂ. ನಿವ್ವಳ ಲಾಭ ಗಳಿಸಿತ್ತು. ಬಡ್ಡಿಯ ಆದಾಯ ಶೇ. 19ರಷ್ಟು ವೃದ್ಧಿಸಿ 92,951 ಕೋಟಿ ರೂ.ಯಿಂದ 1.11 ಲಕ್ಷ ಕೋಟಿ ರೂ.ಗೆ ತಲುಪಿದೆ. ದೇಶದಲ್ಲಿ ಉದ್ಯಮ ಆಧಾರಿತ ಚಟುವಟಿಕೆ ಹೆಚ್ಚುತ್ತಿರುವುದೇ ಇದಕ್ಕೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.

ಎಸ್‌ಬಿಐಯ ಒಟ್ಟು ಆದಾಯವೂ ಏರುಗತಿಯಲ್ಲಿದೆ. 1.06 ಲಕ್ಷ ಕೋಟಿ ರೂ.ಯಿಂದ 1.28 ಲಕ್ಷ ಕೋಟಿ ರೂ.ಗೆ ಜಿಗಿತ ಕಂಡಿದೆ. ಜತೆಗೆ ನಿರ್ವಹಣಾ ವೆಚ್ಚವೂ ಹಿಂದಿನ ವರ್ಷದ 29,732 ಕೋಟಿ ರೂ.ಗಳಿಂದ 30,276 ಕೋಟಿ ರೂ.ಗೆ ಏರಿಕೆ ಕಂಡಿದೆ ಎಂದು ಅಂಕಿ-ಅಂಶಗಳು ತಿಳಿಸಿವೆ.

ಇದನ್ನೂ ಓದಿ: Ujjivan Small Finance Bank : ಉಜ್ಜೀವನ್ ಸ್ಮಾಲ್ ಫೈನಾನ್ಸ್ ಸಿಇಒ ಆಗಿ ಸಂಜೀವ್ ನೌಟಿಯಾಲ್ ನೇಮಕ

ನಿರೀಕ್ಷೆ ಮೀರಿದ ಲಾಭಾಂಶ

ಆರ್ಥಿಕ ತಜ್ಞರು ಈ ತ್ರೈಮಾಸಿಕದಲ್ಲಿ ಎಸ್‌ಬಿಐ 13,400 ಕೋಟಿ ರೂ. ಲಾಭ ದಾಖಲಿಸಬಹುದು ಎಂದು ನಿರೀಕ್ಷಿಸಿದ್ದರು. ಆದರೆ ಫಲಿತಾಂಶ ಈ ಎಲ್ಲ ನಿರೀಕ್ಷೆಗಳನ್ನೂ ಮೀರಿದ್ದು, ಬರೋಬ್ಬರಿ 20,698 ಕೋಟಿ ರೂ. ನಿವ್ವಳ ಲಾಭ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಎಸ್‌ಬಿಐ ತನ್ನ ಪ್ರತಿ ಈಕ್ವಿಟಿ ಷೇರಿಗೆ 13.70 ರೂ. ಲಾಭಾಂಶ ಘೋಷಿಸಿದೆ. ತ್ರೈ ಮಾಸಿಕ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಎಸ್‌ಬಿಐ ಷೇರುಗಳಲ್ಲಿ ಜಿಗಿತ ಕಂಡು ಬಂದಿದೆ. ಮೇ 9ರಂದು ಎಸ್‌ಬಿಐ ಷೇರುಗಳು ಸುಮಾರು ಶೇ. 3ರಷ್ಟು ಹೆಚ್ಚಾಗಿ 834.40 ರೂ.ನಲ್ಲಿ ವಹಿವಾಟು ನಡೆಸುವುದು ಕಂಡುಬಂತು. ಎಸ್‌ಬಿಐನ ಒಟ್ಟು ಅನುತ್ಪಾದಕ ಆಸ್ತಿ (ಜಿಎನ್‌ಪಿಎ) ಪ್ರಮಾಣ ಶೇ.2.24ಕ್ಕೆ ಇಳಿಕೆಯಾಗಿದೆ. ಇದು ಕಳೆದ ವರ್ಷ ಶೇ . 2.78ರಷ್ಟು ಇತ್ತು.

Continue Reading
Advertisement
viral video garbage bengaluru roads
ವೈರಲ್ ನ್ಯೂಸ್10 mins ago

Viral video: ʼಅಸಹ್ಯಕರ!ʼ ಬೆಂಗಳೂರಿನ ರಸ್ತೆಗಳ ಕಸದ ವಿಡಿಯೋ ಪೋಸ್ಟ್‌ ಮಾಡಿದ ಕಿರಣ್ ಮಜುಂದಾರ್ ಶಾ

Stone pelting
ದೇಶ13 mins ago

Stone Pelting: ಉತ್ತರಪ್ರದೇಶದಲ್ಲಿ ಗುಂಪು ಘರ್ಷಣೆ; ಕಲ್ಲು ತೂರಾಟ, ಕೇಳಿಬಂತು ಗುಂಡಿನ ಸಪ್ಪಳ

Crowd Funding
ದೇಶ15 mins ago

Crowd Funding: ಕಂದಮ್ಮನ ಚಿಕಿತ್ಸೆಗೆ ಹರಿದು ಬಂದ ನೆರವು; 3 ತಿಂಗಳಲ್ಲಿ 9 ಕೋಟಿ ರೂ. ಸಂಗ್ರಹ

Prajwal Revanna Case
ಕರ್ನಾಟಕ36 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

copper mine lift collapse
ಪ್ರಮುಖ ಸುದ್ದಿ1 hour ago

M‌ine Lift Collapse: ತಾಮ್ರದ ಗಣಿಯೊಳಗೆ ಲಿಫ್ಟ್‌ ಕುಸಿದು 14 ಮಂದಿ ಪಾತಾಳದಲ್ಲಿ ಟ್ರ್ಯಾಪ್

Health Tips in Kannada
ಆರೋಗ್ಯ1 hour ago

Health Tips in Kannada: ಕುತ್ತಿಗೆ ನೋವಿನಿಂದ ಬಳಲುತ್ತಿದ್ದೀರಾ? ಈ ಸಂಗತಿ ತಿಳಿದುಕೊಂಡಿರಿ

Mango Juice Benefits
ಆರೋಗ್ಯ2 hours ago

Mango Juice Benefits: ತಾಜಾ ಮಾವಿನ ರಸ ಕುಡಿಯುವುದರಿಂದ ಎಷ್ಟೊಂದು ಪ್ರಯೋಜನ ಇದೆ ನೋಡಿ…

Karnataka Weather Forecast
ಉಡುಪಿ2 hours ago

Karnataka Weather : ಮೇ 18ರವರೆಗೆ ಮಳೆ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Dina Bhavishya
ಭವಿಷ್ಯ3 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

SSLC Result
ಪ್ರಮುಖ ಸುದ್ದಿ8 hours ago

ವಿಸ್ತಾರ ಸಂಪಾದಕೀಯ: ರಾಜ್ಯ ಪ್ರಾಥಮಿಕ- ಪ್ರೌಢಶಾಲಾ ಶಿಕ್ಷಣದ ಪರಿಸ್ಥಿತಿ ಸರಿಹೋಗುವುದೆಂದು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ36 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ13 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202415 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202419 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ19 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು20 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌