IPL: ಜಾಸ್​ ಬಟ್ಲರ್​ಗೆ ಬಿಗ್ ಆಫರ್ ನೀಡಿದ ರಾಜಸ್ಥಾನ್​ ರಾಯಲ್ಸ್​ - Vistara News

ಕ್ರಿಕೆಟ್

IPL: ಜಾಸ್​ ಬಟ್ಲರ್​ಗೆ ಬಿಗ್ ಆಫರ್ ನೀಡಿದ ರಾಜಸ್ಥಾನ್​ ರಾಯಲ್ಸ್​

ಜಾಸ್​ ಬಟ್ಲರ್ ಅವರಿಗೆ ರಾಜಸ್ಥಾನ್​ ರಾಯಲ್ಸ್ ಮ್ಯಾನೇಜ್ಮೆಂಟ್ ನಾಲ್ಕು ವರ್ಷಕ್ಕೆ 40 ಕೋಟಿ ರೂ. ನೀಡಿ ಒಪ್ಪಂದವೊಂದನ್ನು ಮಾಡಲು ಮುಂದಾಗಿದೆ.

VISTARANEWS.COM


on

jos buttler is a England wicket-keeper batsman and the vice-captain
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಇಂಗ್ಲೆಂಡ್​ ಸೀಮಿತ ಓವರ್​ಗಳ ನಾಯಕ(england cricket captain), ಟಿ20 ವಿಶ್ವಕಪ್​ ವಿಜೇತ ಜಾಸ್​ ಬಟ್ಲರ್(jos buttler)​ ಅವರಿಗೆ ರಾಜಸ್ಥಾನ್​ ರಾಯಲ್ಸ್(rajasthan royals)​ ಬಿಗ್​ ಆಫರ್​ ಒಂದನ್ನು ನೀಡಿದೆ. ರಾಯಲ್ಸ್ ಮ್ಯಾನೇಜ್ಮೆಂಟ್ ಬಟ್ಲರ್ ಅವರನ್ನು ದೀರ್ಘಾವಧಿಗೆ ತಮ್ಮೊಂದಿಗೆ ಉಳಿಸಲು ಮತ್ತು ನಾಲ್ಕು ವರ್ಷಗಳ ಒಪ್ಪಂದಕ್ಕೆ ಸಹಿ ಹಾಕಲು ಉತ್ಸುಕವಾಗಿದೆ ಎಂದು ವರದಿಯಾಗಿದೆ.

ಪ್ರಸ್ತುತ ಐಪಿಎಲ್​ನಲ್ಲಿ(IPL) ರಾಜಸ್ಥಾನ್​ ರಾಯಲ್ಸ್​ ಪರ ಆಡುತ್ತಿರುವ ಬಟ್ಲರ್ ಅವರನ್ನು ತಮ್ಮ ಫ್ರಾಂಚೈಸಿಯಲ್ಲಿಯೇ 4 ವರ್ಷ ಉಳಿಸಿಕೊಳ್ಳಲು ಅವರೊಂದಿಗೆ ಒಪ್ಪಂದ ಮಾಡಿಕೊಳ್ಳಲಿದೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ ​ರಾಯಲ್ಸ್ ಫ್ರಾಂಚೈಸಿಯು ಬಟ್ಲರ್ ಅವರಿಗೆ ನಾಲ್ಕು ವರ್ಷಕ್ಕೆ 40 ಕೋಟಿ ರೂ. ನೀಡಲು ಮುಂದಾಗಿದೆ ಎಂದು ವರದಿ ತಿಳಿಸಿದೆ.

ಒಂದು ವೇಳೆ ಬಟ್ಲರ್ ಅವರು ಈ ಒಪ್ಪಂದಕ್ಕೆ ಸಹಿ ಹಾಕಿದರೆ ಅವರು ಇಂಗ್ಲೆಂಡ್​ ತಂಡದೊಂದಿಗಿನ ಅಂತಾರಾಷ್ಟ್ರೀಯ ಒಪ್ಪಂದವನ್ನು ಬಿಡಬೇಕಾಗಿದೆ. ಅಲ್ಲದೆ ಇಂಗ್ಲೆಂಡ್ ಪರ ಆಡಲು ಅವರು ರಾಯಲ್ಸ್ ಫ್ರಾಂಚೈಸಿ ಮ್ಯಾನೇಜ್ಮೆಂಟ್​ನ ಅನುಮತಿಯನ್ನು ಪಡೆಯಬೇಕಾಗುತ್ತದೆ. ಬಟ್ಲರ್ ಜತೆಗೆ, ಮುಂಬೈ ಇಂಡಿಯನ್ಸ್ ಸಹ ಜೋಫ್ರಾ ಆರ್ಚರ್​ಗೆ ಇದೇ ರೀತಿಯ ಆಫರ್ ನೀಡಲಾಗಿದೆ ಎಂದು ತಿಳಿದುಬಂದಿದೆ. ಇಂಗ್ಲೆಂಡ್​ ತಂಡದ ಆರಂಭಿಕ ಆಟಗಾರ ಜಾಸನ್​ ರಾಯ್ ಅವರು ಇತ್ತೀಚೆಗೆ ಕೆಕೆಆರ್​ನೊಂದಿಗೆ ಇದೇ ರೀತಿಯ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಅವರು ಮುಂಬರುವ ಮೇಜರ್ ಲೀಗ್ ಕ್ರಿಕೆಟ್ (MLC) ನಲ್ಲಿ ಎಲ್​ಎ ನೈಟ್​ ರೈಡರ್ಸ್‌ಗಾಗಿ ಆಡಲಿದ್ದಾರೆ.

ಜಾಸ್​ ಬಟ್ಲರ್​ ಅವರು ಇದುವರೆಗೆ 96 ಐಪಿಎಲ್​ ಪಂದ್ಯಗಳನ್ನು ಆಡಿದ್ದು 5 ಶತಕ ಮತ್ತು 19 ಅರ್ಧಶತಕ ಬಾರಿಸಿದ್ದಾರೆ. ಒಟ್ಟಾರೆ ಅವರು ಐಪಿಎಲ್​ನಲ್ಲಿ 3223 ರನ್​ ಗಳಿಸಿದ್ದಾರೆ. 2018ರಲ್ಲಿ ಬಟ್ಲರ್​ ಅವರು ರಾಜಸ್ಥಾನ್​ ತಂಡ ಸೇರಿದ್ದರು. ಇದುವರೆಗೆ ರಾಜಸ್ಥಾನ್​ ಪರ 71 ಪಂದ್ಯ ಆಡಿದ್ದಾರೆ. ಅವರು ಬಾರಿಸಿದ 5 ಶತಕಗಳು ರಾಜಸ್ಥಾನ್​ ಪರ ದಾಖಲಾಗಿದೆ.

ಇದನ್ನೂ ಓದಿ Jos Buttler: ಟಿ20 ಕ್ರಿಕೆಟ್​ನಲ್ಲಿ 10 ಸಾವಿರ ರನ್​ ಪೂರೈಸಿದ ಬಟ್ಲರ್​; ಈ ಸಾಧಕರ ಪಟ್ಟಿಯಲ್ಲಿ ಕೊಹ್ಲಿಗೆ ಎಷ್ಟನೇ ಸ್ಥಾನ?

ಟಿ20ಯಲ್ಲಿ 10 ಸಾವಿರ ರನ್​ ಪೂರೈಸಿದ ಬಟ್ಲರ್​

ಇತ್ತೀಚಿಗಷ್ಟೇ ಚುಟುಕು ಮಾದರಿಯ ಕ್ರಿಕೆಟ್​ನಲ್ಲಿ ಬಟ್ಲರ್​ ಅವರು​ 10 ಸಾವಿರ ರನ್​​ಗಳ ಗಡಿ ದಾಟಿದ ಸಾಧನೆ ಮಾಡಿದ್ದಾರೆ. ಟಿ20 ಕ್ರಿಕೆಟ್​ನಲ್ಲಿ 10 ಸಾವಿರ ರನ್​ ಪೂರೈಸಿದ ಸಾಧಕರ ಪಟ್ಟಿಯಲ್ಲಿ ಬಟ್ಲರ್​ಗೆ 9ನೇ ಸ್ಥಾನ. 14,562 ರನ್‌ಗಳನ್ನು ಕಲೆ ಹಾಕಿರುವ ವೆಸ್ಟ್ ಇಂಡೀಸ್‌ನ ಕ್ರಿಸ್‌ ಗೇಲ್(Chris Gayle)​ ಅವರು ಅಗ್ರಸ್ಥಾನ ಪಡೆದಿದ್ದಾರೆ. ಆ ಬಳಿಕ ಕ್ರಮಾವಾಗಿ ಶೋಯೆಬ್‌ ಮಲಿಕ್‌(12,528 ರನ್‌), ಕೈರನ್​ ಪೊಲಾರ್ಡ್‌(Kieron Pollard) (12,175 ರನ್‌) ಎರಡನೇ ಮತ್ತು ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಭಾರತ ತಂಡದ ವಿರಾಟ್​ ಕೊಹ್ಲಿ(Virat Kohli) ಅವರು (11,965 ರನ್​) ನಾಲ್ಕನೇ ಸ್ಥಾನದಲ್ಲಿದ್ದಾರೆ.

ಐಪಿಎಲ್​ನಲ್ಲಿ ಶೂನ್ಯ ಸುತ್ತಿ ದಾಖಲೆ ಬರೆದಿದ್ಧ ಬಟ್ಲರ್​

ಜಾಸ್​ ಬಟ್ಲರ್​ ಅವರು ಈ ಬಾರಿ ಐಪಿಎಲ್​ನಲ್ಲಿ ಕೆಟ್ಟ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದಿದ್ದರು. ಒಂದೇ ಆವೃತ್ತಿಯ ಐಪಿಎಲ್​ ಟೂರ್ನಿಯಲ್ಲಿ ಅತ್ಯಧಿಕ ಶೂನ್ಯ ಸಂಪಾದನೆ ಮಾಡಿದ ಆಟಗಾರ ಎನಿಸಿಕೊಂಡಿದ್ದರು. 5ನೇ ಬಾರಿಗೆ ಶೂನ್ಯಕ್ಕೆ ಔಟಾದ ಆಟಗಾರ ಎಂಬ ಹಣೆಪಟ್ಟಿ ಕಟ್ಟಿಕೊಂಡು ಈ ಕಳಪೆ ಸಾಧನೆ ಮಾಡಿದವರ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

RCB vs RR: ಆರ್​ಸಿಬಿ-ರಾಜಸ್ಥಾನ್ ತಂಡಗಳ​ ಐಪಿಎಲ್​ ​ಪ್ಲೇ ಆಫ್/ನಾಕೌಟ್ ದಾಖಲೆ ಹೇಗಿದೆ?

RCB vs RR: ಆರ್​ಸಿಬಿ ಮತ್ತು ರಾಜಸ್ಥಾನ್​ ತಂಡಗಳು ಇದುವರೆಗಿನ ಐಪಿಎಲ್​ ಆವೃತ್ತಿಯಲ್ಲಿ ಒಟ್ಟು 31 ಬಾರಿ(RR vs RCB Head To Head Record) ಮುಖಾಮುಖಿಯಾಗಿವೆ. ಈ ಪೈಕಿ ಆರ್​ಸಿಬಿ 15, ರಾಜಸ್ಥಾನ್​ 13 ಗೆಲುವು ಸಾಧಿಸಿದೆ. 3 ಪಂದ್ಯಗಳು ಫಲಿತಾಂಶ ಕಂಡಿಲ್ಲ.

VISTARANEWS.COM


on

RCB vs RR
Koo

ಅಹಮದಾಬಾದ್​: ಐಪಿಎಲ್​ ಆವೃತ್ತಿಯ ಚೊಚ್ಚಲ ಚಾಂಪಿಯನ್​ ರಾಜಸ್ಥಾನ್​ ರಾಯಲ್ಸ್​(RCB vs RR) ಮತ್ತು ಮೂರು ಬಾರಿ ಫೈನಲ್​ ಪ್ರವೇಶಿಸಿದರೂ ಕಪ್​ ಗೆಲ್ಲದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು(Royal Challengers Bengaluru) ತಂಡಗಳು ನಾಳೆ(ಬುಧವಾರ) ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಇತ್ತಂಡಗಳ ಇದುವರೆಗಿನ ಐಪಿಎಲ್​ನ ಸಾಧನೆಗಳ ಹಿನ್ನೋಟ ಇಂತಿದೆ.

ಸೇಡು ತೀರಿಸಿಕೊಂಡೀತೇ ಆರ್​ಸಿಬಿ?


ರಾಜಸ್ಥಾನ್​ ರಾಯಲ್ಸ್​ ಮತ್ತು ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ 2022ರಲ್ಲಿ ನಡೆದಿದ್ದ ಐಪಿಎಲ್​ ಟೂರ್ನಿಯ ಕ್ವಾಲಿಫೈಯರ್​-2 ಪಂದ್ಯದಲ್ಲಿ ಮುಖಾಮುಖಿಯಾಗಿತ್ತು. ಈ ಪಂದ್ಯ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದಿತ್ತು. ಪಂದ್ಯದಲ್ಲಿ ರಾಜಸ್ಥಾನ್​ 7 ವಿಕೆಟ್​ ಅಂತರದ ಭರ್ಜರಿ ಗೆಲುವು ಸಾಧಿಸಿ ಫೈನಲ್​ ಪ್ರವೇಶಿಸಿತ್ತು. ಇದೀಗ ಅಂದಿನ ಈ ಸೋಲಿಗೆ ಆರ್​ಸಿಬಿ ಈ ಬಾರಿಯ ಎಲಿಮಿನೇಟರ್​ ಪಂದ್ಯದಲ್ಲಿ ಸೇಡು ತೀರಿಸಿಕೊಂಡೀತೇ? ಎಂದು ಕಾದು ನೋಡಬೇಕಿದೆ.

ಆರ್​ಸಿಬಿ ನಾಕೌಟ್​/ ಪ್ಲೇ ಆಫ್​ ಸಾಧನೆ


2009ರಲ್ಲಿ ಲೀಗ್​ನಲ್ಲಿ ಮೊದಲ ಸ್ಥಾನ. ಫೈನಲ್​ನಲ್ಲಿ ಸೋಲು (ರನ್ನರ್​ ಅಪ್​)

201ರಲ್ಲಿ ಲೀಗ್​ನಲ್ಲಿ ಮೂರನೇ ಸ್ಥಾನ. ಪ್ಲೇ ಆಫ್​ನಲ್ಲಿ ಸೋಲು

2011ರಲ್ಲಿ ಲೀಗ್​ನಲ್ಲಿ ಮೊದಲ ಸ್ಥಾನ. ಫೈನಲ್​ನಲ್ಲಿ ಸೋಲು (ರನ್ನರ್​ ಅಪ್​)

2015ರಲ್ಲಿ ಲೀಗ್​ನಲ್ಲಿ ಮೂರನೇ ಸ್ಥಾನ. ಪ್ಲೇ ಆಫ್​ನಲ್ಲಿ ಸೋಲು

2016ರಲ್ಲಿ ಲೀಗ್​ನಲ್ಲಿ ಮೊದಲ ಸ್ಥಾನ. ಫೈನಲ್​ನಲ್ಲಿ ಸೋಲು (ರನ್ನರ್​ ಅಪ್​)

2020ರಲ್ಲಿ ಲೀಗ್​ನಲ್ಲಿ 4ನೇ ಸ್ಥಾನ. ಪ್ಲೇ ಆಫ್​ನಲ್ಲಿ ಸೋಲು

2021ರಲ್ಲಿ ಲೀಗ್​ನಲ್ಲಿ 3ನೇ ಸ್ಥಾನ. ಪ್ಲೇ ಆಫ್​ನಲ್ಲಿ ಸೋಲು

2022ರಲ್ಲಿ ಲೀಗ್​ನಲ್ಲಿ 4ನೇ ಸ್ಥಾನ. ಪ್ಲೇ ಆಫ್​ನಲ್ಲಿ ಸೋಲು

ರಾಜಸ್ಥಾನ್​ ನಾಕೌಟ್​/ ಪ್ಲೇ ಆಫ್​ ಸಾಧನೆ


2008ರಲ್ಲಿ ಲೀಗ್​ನಲ್ಲಿ ಮೊದಲ ಸ್ಥಾನ. ಚಾಂಪಿಯನ್​

2013ರಲ್ಲಿ ಲೀಗ್​ನಲ್ಲಿ ಮೂರನೇ ಸ್ಥಾನ. ಪ್ಲೇ ಆಫ್​ನಲ್ಲಿ ಸೋಲು

2015ರಲ್ಲಿ ಲೀಗ್​ನಲ್ಲಿ 4ನೇ ಸ್ಥಾನ. ಪ್ಲೇ ಆಫ್​ನಲ್ಲಿ ಸೋಲು

2018ರಲ್ಲಿ ಲೀಗ್​ನಲ್ಲಿ 4ನೇ ಸ್ಥಾನ. ಪ್ಲೇ ಆಫ್​ನಲ್ಲಿ ಸೋಲು

2022ರಲ್ಲಿ ಲೀಗ್​ನಲ್ಲಿ 2ನೇ ಸ್ಥಾನ. ಫೈನಲ್​ನಲ್ಲಿ ಸೋಲು (ರನ್ನರ್​ ಅಪ್​)

ಇದನ್ನೂ ಓದಿ RCB IPL Records: ಕಳೆದ 16 ಆವೃತ್ತಿಯ ಐಪಿಎಲ್​ನಲ್ಲಿ ಆರ್​ಸಿಬಿ ಎಷ್ಟು ಬಾರಿ ಪ್ಲೇ ಆಫ್​ಪ್ರವೇಶಿಸಿದೆ?: ತಂಡದ ದಾಖಲೆ ಹೇಗಿದೆ?

ಮುಖಾಮುಖಿ


ಆರ್​ಸಿಬಿ ಮತ್ತು ರಾಜಸ್ಥಾನ್​ ತಂಡಗಳು ಇದುವರೆಗಿನ ಐಪಿಎಲ್​ ಆವೃತ್ತಿಯಲ್ಲಿ ಒಟ್ಟು 31 ಬಾರಿ(RR vs RCB Head To Head Record) ಮುಖಾಮುಖಿಯಾಗಿವೆ. ಈ ಪೈಕಿ ಆರ್​ಸಿಬಿ 15, ರಾಜಸ್ಥಾನ್​ 13 ಗೆಲುವು ಸಾಧಿಸಿದೆ. 3 ಪಂದ್ಯಗಳು ಫಲಿತಾಂಶ ಇಲ್ಲದೆ ಕೊನೆಗೊಂಡಿದೆ. ಈ ಲೆಕ್ಕಾಚಾರದಲ್ಲಿ ಆರ್​ಸಿಬಿ ಬಲಿಷ್ಠ ಎನ್ನಲಡ್ಡಿಯಿಲ್ಲ. ಈ ಬಾರಿಯ ಮುಖಾಮುಖಿಯಲ್ಲಿ ರಾಜಸ್ಥಾನ್​ ಗೆಲುವು ಸಾಧಿಸಿತ್ತು.

ಸಂಭಾವ್ಯ ತಂಡಗಳು


ಆರ್​ಸಿಬಿ:
ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ರಜತ್ ಪಾಟಿದಾರ್, ಕ್ಯಾಮರೂನ್​ ಗ್ರೀನ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆ), ಕರ್ಣ್ ಶರ್ಮಾ, ಯಶ್ ದಯಾಳ್, ಲಾಕಿ ಫರ್ಗುಸನ್, ಮೊಹಮ್ಮದ್ ಸಿರಾಜ್.

ರಾಜಸ್ಥಾನ್​ ರಾಯಲ್ಸ್​: ಯಶಸ್ವಿ ಜೈಸ್ವಾಲ್, ಟಾಮ್ ಕೊಹ್ಲರ್-ಕಾಡ್ಮೋರ್, ಸಂಜು ಸ್ಯಾಮ್ಸನ್ (ನಾಯಕ), ರಿಯಾನ್ ಪರಾಗ್, ಧ್ರುವ್ ಜುರೆಲ್, ರೋವ್ಮನ್ ಪೊವೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಅವೇಶ್ ಖಾನ್, ನಾಂದ್ರೆ ಬರ್ಗರ್.

Continue Reading

ಕ್ರಿಕೆಟ್

Shane Watson Apologize: ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಪುಸ್ತಕ ಬಿಡುಗಡೆಗೊಳಿಸಿ ಆರ್​ಸಿಬಿ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ಶೇನ್​ ವಾಟ್ಸನ್

Shane Watson Apologize: ಬೆಂಗಳೂರಿನ ಬಗ್ಗೆಯೂ ಅನುಭವ ಹಂಚಿಕೊಂಡ ವಾಟ್ಸನ್​, ಆರ್​ಸಿಬಿ ತಂಡಕ್ಕೆ ಇಲ್ಲಿ ಸಿಕ್ಕಪಟ್ಟೇ ಕ್ರೇಜಿ ಫ್ಯಾನ್ಸ್​ ಇದ್ದಾರೆ. ನಾನು ಕೂಡ ಈ ತಂಡದ ಪರ ಆಡಿರುವ ಕಾರಣ ಬೆಂಗಳೂರು ಮತ್ತು ಇಲ್ಲಿನ ಜನರ ನಂಟು ಈಗಲೂ ಇದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಿದ ಕ್ಷಣಗಳು ಅವಿಸ್ಮರಣೀಯ ಎಂದರು.

VISTARANEWS.COM


on

Shane Watson Apologize
Koo

ಬೆಂಗಳೂರು: ಆಸ್ಟ್ರೇಲಿಯಾ ಹಾಗೂ ಆರ್​ಸಿಬಿ ತಂಡದ ಮಾಚಿ ಆಟಗಾರ ಶೇನ್​ ವಾಟ್ಸನ್(Shane Watson)​ ಅವರು ಇಂದು(ಮಂಗಳವಾರ) ಬೆಂಗಳೂರಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ(Presidency University in Bengaluru) ‘ವ್ಯಾಟ್ಸನ್​ ದಿ ವಿನ್ನರ್ಸ್ ಮೈಂಡ್ ಸೆಟ್’ ಎನ್ನುವ ಪುಸ್ತಕವನ್ನು ಬಿಡುಗಡೆ ಮಾಡಿದರು. ಇದೇ ವೇಳೆ 2016ರ ಫೈನಲ್​ನಲ್ಲಿ ಕಳಪೆ ಪ್ರದರ್ಶನ ತೋರಿದ್ದಕ್ಕೆ ಆರ್​ಸಿಬಿ ಅಭಿಮಾನಿಗಳಲ್ಲಿ ಕ್ಷಮೆ(Shane Watson Apologize) ಕೇಳಿದ್ದಾರೆ. ಇದರ ವಿಡಿಯೊ ವೈರಲ್​ ಆಗಿದೆ.


ಪುಸ್ತಕ ಬಿಡಿಗಡೆಗೊಳಿಸಿದ ಬಳಿಕ ಮಾತನಾಡಿದ ವಾಟ್ಸನ್​, ಕಾಲೇಜಿಗೆ ಭೇಟಿ ನೀಡಿರುವುದು ನಿಜಕ್ಕೂ ಅದ್ಭುತ. ವಿದ್ಯಾರ್ಥಿಗಳು ಕ್ರಿಕೆಟ್​ ಆಡುವ ಮತ್ತು ವೀಕ್ಷಿಸುವ ಜತೆಗೆ ಶಿಕ್ಷಣದಲ್ಲಿಯೂ ಗಮನಹರಿಸಿ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಇದೇ ವೇಳೆ ವಾಟ್ಸನ್​ ತಮ್ಮ ವಿದ್ಯಾರ್ಥಿ ಜೀವನದ ದಿನಗಳನ್ನು ಮೆಲುಕು ಹಾಕಿದರು.

ಬೆಂಗಳೂರಿನ ಬಗ್ಗೆಯೂ ಅನುಭವ ಹಂಚಿಕೊಂಡ ಅವರು, ಆರ್​ಸಿಬಿ ತಂಡಕ್ಕೆ ಇಲ್ಲಿ ಸಿಕ್ಕಪಟ್ಟೇ ಕ್ರೇಜಿ ಫ್ಯಾನ್ಸ್​ ಇದ್ದಾರೆ. ನಾನು ಕೂಡ ಈ ತಂಡದ ಪರ ಆಡಿರುವ ಕಾರಣ ಬೆಂಗಳೂರು ಮತ್ತು ಇಲ್ಲಿನ ಜನರ ನಂಟು ಈಗಲೂ ಇದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಿದ ಕ್ಷಣಗಳು ಅವಿಸ್ಮರಣೀಯ. ಆದರೆ ನನ್ನ ಮನಸ್ಸಲ್ಲಿ ಈಗಲೂ ಇರುವ ನೋವೆಂದರೆ 2016ರ ಐಪಿಎಲ್​ ಫೈನಲ್​ನಲ್ಲಿ ನಾನು ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ವಿಫಲವಾದದ್ದು. ನಾನು ಆಡುತ್ತಿದ್ದರೆ ಆರ್​ಸಿಬಿ ಕಪ್​ ಗೆಲ್ಲುತ್ತಿತ್ತು. ಇದೇ ವಿಚಾರವಾಗಿ ನಾನು ನಿಮ್ಮಲ್ಲಿ ಕ್ಷಮೆ ಕೋರುತ್ತೇನೆ ಎಂದು ಹೇಳಿದರು. ಆ ಫೈನಲ್​ ಪಂದ್ಯದಲ್ಲಿ ವಾಟ್ಸನ್​ 11 ರನ್​ ಗಳಿಸಿ ಔಟಾಗಿದ್ದರು.

ಇದನ್ನೂ ಓದಿ RCB IPL Records: ಕಳೆದ 16 ಆವೃತ್ತಿಯ ಐಪಿಎಲ್​ನಲ್ಲಿ ಆರ್​ಸಿಬಿ ಎಷ್ಟು ಬಾರಿ ಪ್ಲೇ ಆಫ್​ಪ್ರವೇಶಿಸಿದೆ?: ತಂಡದ ದಾಖಲೆ ಹೇಗಿದೆ?


ಈ ಬಾರಿ ಆರ್​ಸಿಬಿ ತಂಡ ಉತ್ತಮವಾಗಿ ಆಡಿದೆ. ಆರಂಭಿಕ ಹಂತದಲ್ಲಿ 7 ಸೋಲು ಕಂಡರೂ ಕೂಡ ಆ ಬಳಿಕ ಸತತವಾಗಿ 6 ಮತ್ತು ಒಟ್ಟಾರೆ 7 ಗೆಲುವಿನೊಂದಿಗೆ ಪ್ಲೇ ಆಫ್​ ಪ್ರವೇಶಿಸಿದೆ. ನಾಳೆ ರಾಜಸ್ಥಾನ್​ ವಿರುದ್ಧ ಆಡಲಿದೆ. ತಂಡಕ್ಕೆ ಶುಭವಾಗಲಿ ಎಂದು ಹಾರೈಸಿದರು. ಇದೇ ವೇಳೆ ಯೂನಿವರ್ಸಿಟಿ ಕ್ಯಾಂಪಸ್‌ನಲ್ಲಿ ಕುಲಪತಿ ಡಾ. ನಿಸ್ಸಾರ್ ಅಹಮದ್ ಜತೆ ವಾಟ್ಸನ್​ ಕ್ರಿಕೆಟ್ ಆಡಿ ಸಂಭ್ರಮಿಸಿದರು.


ಸದ್ಯ ನಿವೃತ್ತಿ ಜೀವನ ನಡೆಸುತ್ತಿರುವ ವಾಟ್ಸನ್​ ಕ್ರಿಕೆಟ್​ ಕಾಮೆಂಟ್ರಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಐಪಿಎಲ್​ ಮಾತ್ರವಲ್ಲದೆ ಇತರ ಕ್ರಿಕೆಟ್​ ಲೀಗ್ ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್​ ಪಂದ್ಯಗಳ ಕಾಮೆಂಟ್ರಿ ಮಾಡುತ್ತಿದ್ದಾರೆ. ‘ವ್ಯಾಟ್ಸನ್​ ದಿ ವಿನ್ನರ್ಸ್ ಮೈಂಡ್ ಸೆಟ್’ ಈ ಪುಸ್ತಕದಲ್ಲಿ ಆರ್​ಸಿಬಿ ಮತ್ತು ಐಪಿಎಲ್​ ಕುರಿತ ವಿಚಾರವು ಅಡಕವಾಗಿದೆ.

Continue Reading

ಕ್ರೀಡೆ

RCB IPL Records: ಕಳೆದ 16 ಆವೃತ್ತಿಯ ಐಪಿಎಲ್​ನಲ್ಲಿ ಆರ್​ಸಿಬಿ ಎಷ್ಟು ಬಾರಿ ಪ್ಲೇ ಆಫ್​ಪ್ರವೇಶಿಸಿದೆ?: ತಂಡದ ದಾಖಲೆ ಹೇಗಿದೆ?

RCB IPL Records: ಪ್ರತಿ ಆವೃತ್ತಿಯಲ್ಲಿಯೂ ಈ ಸಲ ಕಪ್​ ನಮ್ದೇ ಎಂದು ಅಭಿಯಾನ ಆರಂಭಿಸುವ ಆರ್​ಸಿಬಿ ನಿರಾಸೆ ಕಂಡಿದ್ದೇ ಹೆಚ್ಚು. ಒಟ್ಟು ಮೂರು ಬಾರಿ ಫೈನಲ್​, 5 ಬಾರಿ ಪ್ಲೇ ಆಫ್​ಗೆ ಪ್ರವೇಶ ಪಡೆದಿತ್ತು. ಆದರೆ ಒಮ್ಮೆಯೂ ಕಪ್​ ಮಾತ್ರ ಗೆಲ್ಲಲು ಸಾಧ್ಯವಾಗಿಲ್ಲ.

VISTARANEWS.COM


on

RCB IPL Records
Koo

ಅಮಹದಾಬಾದ್​: ಕೋಟೆಯ ಎಲ್ಲ ಬಾಗಿಲುಗಳನ್ನು ಮುಚ್ಚಿದರೂ, ಬೆಳಕು ತೂರುವುದಕ್ಕೊಂದು ಸಣ್ಣ ಕಿಂಡಿ ಇದ್ದರು ಸಾಕು ಜೀವನ ಹೋರಾಟ ಮುಂದುವರೆಸುವುದಕ್ಕೆ ಎನ್ನುವ ಮಾತನ್ನು ಆರ್​ಸಿಬಿ(RCB IPL Records) ನಿಜ ಮಾಡಿದೆ. ಆರಂಭಿಕ ಹಂತದಲ್ಲಿ 7 ಸೋಲು ಕೊಂಡು, ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಿಯಾಗಿ ಇನ್ನೇನು ಟೂರ್ನಿಯಿಂದ ಹೊರಬೀಳುತ್ತದೆ ಎನ್ನುವ ಸ್ಥಿತಿ ಎದುರಿಸಿತ್ತು. ಆದರೆ ಹೋರಾಡುವ ಛಲ ಮತ್ತು ನಂಬಿಕೆಯೊಂದನ್ನು ಗಟ್ಟಿಯಾಗಿರಿಸಿದ್ದ ಆಗಾರರು ತಂಡವನ್ನು ಪ್ಲೇ ಆಫ್​ ಪ್ರವೇಶಿಸುವಂತೆ ಮಾಡಿದರು. ಇದೀಗ ನಾಳೆ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ಆಟಗಾರರು ರಾಜಸ್ಥಾನ್​ ವಿರುದ್ಧದ ಕಣಕ್ಕಿಳಿಯಲು ಸಜ್ಜಾಗಿಗೆ ನಿಂತಿದ್ದಾರೆ. ಆರ್​ಸಿಬಿಯ ಇದುವರೆಗಿನ 16 ಐಪಿಎಲ್​ನ ಸಾಧನೆಯ ಇಣುಕು ನೋಡ ಇಂತಿದೆ.

ಮೂರು ಭಾರಿ ಫೈನಲ್​


ಪ್ರತಿ ಆವೃತ್ತಿಯಲ್ಲಿಯೂ ಈ ಸಲ ಕಪ್​ ನಮ್ದೇ ಎಂದು ಅಭಿಯಾನ ಆರಂಭಿಸುವ ಆರ್​ಸಿಬಿ ನಿರಾಸೆ ಕಂಡಿದ್ದೇ ಹೆಚ್ಚು. ಒಟ್ಟು ಮೂರು ಬಾರಿ ಫೈನಲ್​ ಪ್ರವೇಶಿಸಿದರೂ ಕಪ್​ ಮಾತ್ರ ಗೆಲ್ಲಲು ಸಾಧ್ಯವಾಗಿಲ್ಲ. ಮೂರೂ ಫೈನಲ್​ ಪ್ರವೇಶದ ವೇಳೆಯೂ ತಂಡದಲ್ಲಿ ವಿಶ್ವದ ಬಲಿಷ್ಠ ಆಟಗಾರರು ಈ ತಂಡದಲ್ಲಿದ್ದರು. ಆದರೂ ಕೂಡ ಲಕ್​ ಎನ್ನುವುದು ಮಾತ್ರ ತಂಡಕ್ಕೆ ಕೈ ಹಿಡಿಯುತ್ತಿರಲಿಲ್ಲ. ಲೀಗ್​ ಹಂತದಲ್ಲಿ ಎಷ್ಟೇ ಸೊಗಸಾದ ಆಟವಾಡಿದ್ದರೂ ಕೂಡ ಫೈನಲ್​ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ತೋರಿ ಕಪ್​ ಗೆಲ್ಲಲು ವಿಫಲವಾಗಿತ್ತು. ಒಟ್ಟು 5 ಬಾರಿ ಪ್ಲೇ ಆಫ್​ಗೆ ಪ್ರವೇಶ ಪಡೆದಿತ್ತು.

ಇದನ್ನೂ ಓದಿ IPL 2024: ಮೋದಿ ಸ್ಟೇಡಿಯಂನಲ್ಲಿ ಫುಟ್ಬಾಲ್​ ಆಡಿದ ಆರ್​ಸಿಬಿ ಆಟಗಾರರು

ಆರ್​ಸಿಬಿ ಮೊದಲ ಬಾರಿಗೆ ಫೈನಲ್​ ಪ್ರವೇಶಿಸಿದ್ದು, 2009ರಲ್ಲಿ. ಎದುರಾಳಿ ಆ್ಯಡಂ ಗಿಲ್‌ಕ್ರಿಸ್ಟ್ ನೇತೃತ್ವದ ಡೆಕ್ಕನ್ ಚಾರ್ಜರ್ಸ್(Deccan Chargers). ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಡೆಕ್ಕನ್​ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್​ಗೆ 143 ರನ್​ ಬಾರಿಸಿತು. ಅಲ್ಪ ಮೊತ್ತವನ್ನು ಬೆನ್ನಟ್ಟಿದ ಆರ್​ಸಿಬಿ 9 ವಿಕೆಟ್​ಗೆ ಕೇವಲ 137 ರನ್​ ಮಾತ್ರ ಗಳಿಸಲಷ್ಟೇ ಶಕ್ತವಾಗಿ 6 ರನ್​ ಅಂತರದಿಂದ ಸೋಲು ಕಂಡಿತ್ತು.

ಎರಡನೇ ಬಾರಿ ಆರ್​ಸಿಬಿ ಫೈನಲ್​ ಪ್ರವೇಶಿಸಿದ್ದು 2011ರಲ್ಲಿ. ಮೊದಲ ಬಾರಿಗೆ ಕಪ್​ ಗೆಲ್ಲಲು ವಿಫಲವಾಗಿದ್ದ ಆರ್​ಸಿಬಿ ತನ್ನ 2ನೇ ಪ್ರಯತ್ನದಲ್ಲಿ ಕಪ್​ ಗೆಲ್ಲಲಿದೆ ಎಂದು ಅಭಿಮಾನಿಗಳು ಬಲವಾಗಿ ನಂಬಿದ್ದರು. ಆದರೆ ಇಲ್ಲಿಯೂ ಆರ್​ಸಿಬಿ ವಿಫಲವಾಗಿತ್ತು. ಹಾಲಿ ಚಾಂಪಿಯನ್​ ಆಗಿದ್ದ ಚೆನ್ನೈ ಸೂಪರ್​ ಕಿಂಗ್ಸ್​ ಫೈನಲ್​ನಲ್ಲಿ ಗೆದ್ದು ಸತತವಾಗಿ 2ನೇ ಟ್ರೋಫಿ ಗೆದ್ದ ಸಾಧನೆ ಮಾಡಿತ್ತು. ಈ ಪಂದ್ಯದಲ್ಲಿ ಆರ್​ಸಿಬಿಗೆ 58 ರನ್​ ಸೋಲು ಎದುರಾಗಿತ್ತು.

ಆರ್​ಸಿಬಿ ಅಭಿಮಾನಿಗಳಿಗೆ ಮೂರನೇ ಬಾರಿಗೆ ನಿರಾಸೆಯಾದ ಐಪಿಎಲ್​ ಆವೃತ್ತಿ ಎಂದರೆ 2016ನೇ ಆವೃತ್ತಿ. ಬಲಿಷ್ಠ ಆಟಗಾರ ಕ್ರಿಸ್​ ಗೇಲ್​, ಎಬಿಡಿ ವಿಲಿಯರ್ಸ್​, ಶೇನ್ ವಾಟ್ಸನ್​ ಮತ್ತು ವಿರಾಟ್​ ಕೊಹ್ಲಿಯಂತಹ ಸ್ಟಾರ್​ ಆಟಗಾರರು ತಂಡದಲ್ಲಿದ್ದರೂ ಕೂಡ ಕಪ್​ ಗೆಲ್ಲುವಲ್ಲಿ ಆರ್​ಸಿಬಿ ವಿಫಲವಾಗಿತ್ತು. ಮೊದಲು ಬ್ಯಾಟಿಂಗ್​ ನಡೆಸಿದ ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​ 7 ವಿಕೆಟ್​ಗೆ 208 ರನ್​ ಬಾರಿಸಿತು. ದಿಟ್ಟವಾಗಿ ಗುರಿ ಬೆನ್ನಟ್ಟಿಕೊಂಡು ಹೋದ ಆರ್​ಸಿಬಿ ಮೊದಲ ವಿಕೆಟ್​ಗೆ 114 ರನ್​ ಒಟ್ಟುಗೂಡಿಸಿತು. ಈ ವೇಳೆ ಆರ್​ಸಿಬಿ ಅಭಿಮಾನಿಗಳೆಲ್ಲ ಈ ಸಲ ಕಪ್​ ನಮ್ದೇ ಎಂದು ನಂಬಿದ್ದರು. ಆದರೆ, ನಂಬುಗೆಯ ಬ್ಯಾಟರ್​ಗಳೆಲ್ಲ ಸತತವಾಗಿ ವಿಕೆಟ್​ ಒಪ್ಪಿಸಿ ತಂಡದ ಸೋಲಿಗೆ ಕಾರಣವಾದರು. ಭರ್ತಿ 200 ರನ್​ ಗಳಿಸಿ 8 ರನ್​ ಅಂತರದ ಸೋಲು ಕಂಡಿತ್ತು.

ಈ ಬಾರಿ ಹೊಸ ಅಧ್ಯಾಯ ಎಂದು ಹೇಳಿ ಅಭಿಯಾನ ಆರಂಭಿಸಿದ ಆರ್​ಸಿಬಿ ಎಲಿಮಿನೇಟರ್​ ಪಂದ್ಯದಲ್ಲಿಯೂ ಗೆದ್ದು ಆ ಬಳಿಕ ಕ್ವಾಲಿಫೈಯರ್​ನಲ್ಲಿಯೂ ಜಯಶಾಲಿಯಾಗಿ ಫೈನಲ್​ ಪ್ರವೇಶಿಸಿ ಚೊಚ್ಚಲ ಪ್ರಶಸ್ತಿ ಗೆಲ್ಲುವಂತಾಗಲಿ ಎನ್ನುವುದು ಕೋಟಿ ಆರ್​ಸಿಬಿ ಅಭಿಮಾನಿಗಳ ಹಾರೈಕೆಯಾಗಿದೆ.

Continue Reading

ಕ್ರೀಡೆ

India Head Coach: ಭಾರತ ತಂಡದ ಕೋಚ್​ ಆಗಲು ಫ್ಲೆಮಿಂಗ್​ಗೆ ಮನವೊಲಿಸುವಂತೆ ಧೋನಿಗೆ ಮನವಿ ಮಾಡಿದ ಬಿಸಿಸಿಐ!

India Head Coach: ನೂತನ ಕೋಚ್​ ಆಗಿ ಆಯ್ಕೆಯಾದವರ ಕಾರ್ಯಾವಧಿ 2027ರ ಡಿಸೆಂಬರ್ 31ಕ್ಕೆ ಮುಕ್ತಾಯಗೊಳ್ಳುತ್ತದೆ. 2027ರಲ್ಲಿ ನಡೆಯುವ ಏಕದಿನ ವಿಶ್ವಕಪ್​ ಟೂರ್ನಿಯೂ ಈ ಕೋಚ್​ಗೆ ಸಿಗಲಿದೆ. ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಲು ಇದೇ 27ರಂದು ಕೊನೆಯ ದಿನವಾಗಿದೆ.

VISTARANEWS.COM


on

India Head Coach
Koo

ನವದೆಹಲಿ: ಟೀಮ್​ ಇಂಡಿಯಾದ(India Head Coach) ಮುಂದಿನ ಕೋಚ್​ ಯಾರಾಗಲಿದ್ದಾರೆ ಎಂಬ ಕತೂಹಲದ ಮಧ್ಯೆ ಬಿಸಿಸಿಐ(BCCI) ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಕೋಚ್​ ಆಗಿರುವ ಸ್ಟೀಫನ್ ಫ್ಲೆಮಿಂಗ್(Stephen Fleming) ಅವರನ್ನು ಕೋಚ್​ ಹುದ್ದೆ ಅಲಂಕರಿಸುವಂತೆ ಮನವೊಲಿಸಲು ಧೋನಿ(MS Dhoni) ಬಳಿ ಮನವಿ ಮಾಡಿದೆ ಎಂದು ವರದಿಯಾಗಿದೆ.

ಹಿಂದೂಸ್ತಾನ್ ಟೈಮ್ಸ್‌ನ ವರದಿಯ ಪ್ರಕಾರ ಧೋನಿ ಬಳಿ ಬಿಸಿಸಿಐ ಸ್ಟೀಫನ್ ಫ್ಲೆಮಿಂಗ್ ಅವರನ್ನು ಟೀಮ್​ ಇಂಡಿಯಾದ ಕೋಚ್​ ಆಗುವಂತೆ ಮಾತುಕತೆ ನಡೆಸಲು ಕೇಳಿಕೊಂಡಿದೆ ಎಂದು ತಿಳಿದುಬಂದಿದೆ. ಸ್ಟೀಫನ್ ಫ್ಲೆಮಿಂಗ್ ಅವರನ್ನು ಕೋಚ್​ ಹುದ್ದೆಗೆ ನೇಮಿಸಲು ಬಿಸಿಸಿಐ ಎಲ್ಲ ಯೋಜನೆ ನಡೆಸಿತ್ತು. ಇದೇ ವೇಳೆ ಅವರು ತಾನು ಫ್ರಾಂಚೈಸಿ ಕ್ರಿಕೆಟ್​ನಲ್ಲಿ ಇನ್ನೂ ಕೆಲ ಕಾಲ ಕರ್ತವ್ಯನಿರ್ವಹಸುವ ಆಸಕ್ತಿ ಹೊಂದಿದ್ದೇನೆ ಎಂದು ಹೇಳುವ ಮೂಲಕ ಭಾರತ ತಂಡದ ಕೋಚ್​ ಹುದ್ದೆಗೆ ನಿರಾಸಕ್ತಿ ತೋರಿದ್ದರು. ಆದರೆ ಇದೀಗ ಬಿಸಿಸಿಐ ಧೋನಿಯ ಮಧ್ಯಸ್ಥಿಕೆಯಲ್ಲಿ ಅವರ ಮನವೊಲಿಸಲು ಮುಂದಾಗಿದೆ ಎನ್ನಲಾಗಿದೆ.

ರವಿಶಾಸ್ತ್ರಿ ಕೋಚಿಂಗ್​ ಅವಧಿ ಮಕ್ತಾಯದ ಬಳಿಕ ಕೋಚ್​ ಆದ ದ್ರಾವಿಡ್​ ಕೂಡ ಆರಂಭದಲ್ಲಿ ಈ ಹುದ್ದೆಗೆ ಉತ್ಸುಕರಾಗಿರಲಿಲ್ಲ. ಈ ವೇಳೆ ಬಿಸಿಸಿಐ ಅಧ್ಯಕ್ಷರಾಗಿದ್ದ ಗಂಗೂಲಿ ಅವರು ಮನವೊಲಿಸಿ ದ್ರಾವಿಡ್​ ಅವರನ್ನು ಕೋಚ್​ ಹುದ್ದೆಗೇರುವಂತೆ ಮಾಡಿದ್ದರು. ಇದೀಗ ಫ್ಲೆಮಿಂಗ್ ಅವರನ್ನು ಕೂಡ ಧೋನಿಯ ಮೂಲಕ ಕೋಚ್​ ಹುದ್ದೆಗೇರುವಂತೆ ಮಾಡುವ ಪ್ರಯತ್ನದಲ್ಲಿದೆ.

ಇನ್ನೊಂದು ಮೂಲಗಳ ಪ್ರಕಾರ ಧೋನಿ ಅವರು ಭಾರತ ತಂಡದ ಕೋಚ್​ ಆಗಲಿದ್ದಾರೆ ಎನ್ನಲಾಗಿದೆ. ಈ ಹಿಂದೆ ಧೋನಿ 2021ರಲ್ಲಿ ಭಾರತದ ಆತಿಥ್ಯದಲ್ಲಿ ಯುಎಇಯಲ್ಲಿ ನಡೆದಿದ್ದ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಧೋನಿ ಭಾರತ ತಂಡದ ಮೆಂಟರ್​ ಆಗಿ ಕರ್ತವ್ಯ ನಿರ್ವಹಿಸಿದ್ದರು. ಹೀಗಾಗಿ ಧೋನಿ ಅವರನ್ನು ಕೂಡ ಕೋಚ್​ ಮಾಡುವ ಯೋಚನೆಯೊಂದನ್ನು ಬಿಸಿಸಿಐ ನಡೆಸಿದೆ ಎನ್ನಲಾಗಿದೆ. ಧೋನಿ ನಾಯಕತ್ವದಲ್ಲಿ ಭಾರತ ಏಕದಿನ, ಟಿ20 ಮತ್ತು ಐಸಿಸಿ ಚಾಂಪಿಯನ್ಸ್​ ಟ್ರೋಫಿ ಗೆದ್ದಿತ್ತು. ಇದಾಗ ಬಳಿಕ ಭಾರತ ತಂಡ ಇದುವರೆಗೂ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ.

ಇದನ್ನೂ ಓದಿ Head Coach: ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಮ್​ ಇಂಡಿಯಾದ ಸ್ಟಾರ್​ ಮಾಜಿ ಆಟಗಾರ

ನೂತನ ಕೋಚ್​ ಆಗಿ ಆಯ್ಕೆಯಾದವರ ಕಾರ್ಯಾವಧಿ 2027ರ ಡಿಸೆಂಬರ್ 31ಕ್ಕೆ ಮುಕ್ತಾಯಗೊಳ್ಳುತ್ತದೆ. 2027ರಲ್ಲಿ ನಡೆಯುವ ಏಕದಿನ ವಿಶ್ವಕಪ್​ ಟೂರ್ನಿಯೂ ಈ ಕೋಚ್​ಗೆ ಸಿಗಲಿದೆ. ಕೋಚ್​ ಹುದ್ದೆಗೆ ಅರ್ಜಿ ಸಲ್ಲಿಸಲು ಇದೇ 27ರಂದು ಕೊನೆಯ ದಿನವಾಗಿದೆ. ಆಯ್ಕೆ ಪ್ರಕ್ರಿಯೆ ಅರ್ಜಿಗಳ ಸಂಪೂರ್ಣ ಪರಿಶೀಲನೆಯನ್ನು ನಡೆಸಿ ನಂತರ ವೈಯಕ್ತಿಕ ಸಂದರ್ಶನಗಳು ಮತ್ತು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಮೌಲ್ಯಮಾಪನ ಒಳಗೊಂಡಿರುತ್ತದೆ. ಆಯ್ಕೆಯಾದ ಹೊಸ ಕೋಚ್‌ ಟಿ20 ವಿಶ್ವಕಪ್‌ ಟೂರ್ನಿಯ ನಂತರ ತಕ್ಷಣವೇ ತಂಡದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

ಆಸ್ಟ್ರೇಲಿಯಾದ ಮಾಜಿ ಆಟಗಾರ ಹಾಗೂ ಕೋಚ್​, ಪ್ರಸ್ತುತ ಲಕ್ನೋ ಸೂಪರ್​ ಜೈಂಟ್ಸ್​ ತಂಡದ ಕೋಚ್​ ಆಗಿರುವ ಜಸ್ಟಿನ್ ಲ್ಯಾಂಗರ್(Justin Langer) ಕೂಡ ಭಾರತ ತಂಡದ ಕೋಚಿಂಗ್​ ಬಗ್ಗೆ ಆಸಕ್ತರಾಗಿದ್ದಾರೆ. ಐಪಿಎಲ್​ ವೇಳೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಅವರು, ಭಾರತ ತಂಡ ಕೋಚಿಂಗ್​ ಮಾಡುವುದು ಅಸಾಮಾನ್ಯ ಪಾತ್ರವಾಗಿದೆ. ನನಗೂ ಕೋಚಿಂಗ್​ ಮಾಡಲು ಕುತೂಹಲವಿದೆ. ಇಲ್ಲಿ ಅಪಾರ ಸಂಖ್ಯೆಯ ಕ್ರಿಕೆಟ್ ಪ್ರತಿಭೆಗಳಿದ್ದಾರೆ ಎಂದು ಹೇಳಿದ್ದಾರೆ. ಅವರ ಈ ಹೇಳಿಕೆಯನ್ನು ಗಮನಿಸುವಾಗ ಕೋಚಿಂಗ್​ ಹುದ್ದೆಗೆ ಅರ್ಜಿ ಸಲ್ಲಿಸುವ ಸೂಚನೆಯೊಂದು ಲಭಿಸಿದೆ. 

Continue Reading
Advertisement
Money Guide
ಮನಿ-ಗೈಡ್1 min ago

Money Guide: ಉಮಾಂಗ್ ಆ್ಯಪ್‌ ಮೂಲಕ ಪಿಎಫ್‌ ಮೊತ್ತ ಹೀಗೆ ವಿತ್‌ಡ್ರಾ ಮಾಡಿ

Drown in pond
ಕರ್ನಾಟಕ15 mins ago

Drowns in Farm Pond: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

Ebrahim Raisi
ವಿದೇಶ15 mins ago

Ebrahim Raisi: ಹೆಲಿಕಾಪ್ಟರ್‌ ಪತನದಲ್ಲಿ ಇರಾನ್‌ ಅಧ್ಯಕ್ಷ ದುರಂತ ಸಾವು; ಇಸ್ರೇಲ್ ಫಸ್ಟ್‌ ರಿಯಾಕ್ಷನ್‌ ಏನು?

2nd Puc Exam
ಬೆಂಗಳೂರು16 mins ago

2nd PUC Exam : ದ್ವಿತೀಯ ಪಿಯುಸಿ ಪರೀಕ್ಷೆ-3ರ ವೇಳಾಪಟ್ಟಿ ಪ್ರಕಟ; ನೋಂದಣಿಗೂ ಡೇಟ್‌ ಫಿಕ್ಸ್‌

RCB vs RR
ಕ್ರೀಡೆ28 mins ago

RCB vs RR: ಆರ್​ಸಿಬಿ-ರಾಜಸ್ಥಾನ್ ತಂಡಗಳ​ ಐಪಿಎಲ್​ ​ಪ್ಲೇ ಆಫ್/ನಾಕೌಟ್ ದಾಖಲೆ ಹೇಗಿದೆ?

India Skills National Competition 2024 Grand Finale 58 Winners to Represent India at World Skills
ದೇಶ31 mins ago

India Skills: ಇಂಡಿಯಾ ಸ್ಕಿಲ್ಸ್ 2024 ಗ್ರ್ಯಾಂಡ್ ಫಿನಾಲೆ; ವರ್ಲ್ಡ್ ಸ್ಕಿಲ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ 58 ವಿಜೇತರು

Cm Siddaramaiah hits out at BJP for Gaurantee Scheme
ರಾಜಕೀಯ33 mins ago

CM Siddaramaiah: ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಬಿಜೆಪಿ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ

Meghana Raj Mother Day Gift Shopping to mother
ಸ್ಯಾಂಡಲ್ ವುಡ್35 mins ago

Meghana Raj: ಅಮ್ಮನಿಗೆ ಚಿನ್ನದ ಓಲೆ ಗಿಫ್ಟ್‌ ಕೊಟ್ಟ ಮೇಘನಾ ರಾಜ್‌; ಕಣ್ಣೀರಿಟ್ಟ ಪ್ರಮೀಳಾ

Prashant Kishor
ದೇಶ43 mins ago

Prashant Kishor: ಮೋದಿ ಮೇಲೆ ಜನರಿಗೆ ಎಳ್ಳಷ್ಟೂ ಸಿಟ್ಟಿಲ್ಲ ಎಂದ ಪ್ರಶಾಂತ್‌ ಕಿಶೋರ್;‌ ಕೊಟ್ಟ ಕಾರಣ ಹೀಗಿದೆ

Ujjivan Small Finance Bank
ವಾಣಿಜ್ಯ43 mins ago

Ujjivan Small Finance Bank : ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್​ನ ಲಾಭಾಂಶ ಹೆಚ್ಚಳ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌