ವಿಸ್ತಾರ TOP 10 NEWS | CM ಕುರ್ಚಿ ಏರಿದ ಶಿಂಧೆ, ಕಕ್ಷೆ ಸೇರಿದ 3 ಉಪಗ್ರಹಗಳು ಸೇರಿ ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

ವಿಸ್ತಾರ TOP 10 NEWS | CM ಕುರ್ಚಿ ಏರಿದ ಶಿಂಧೆ, ಕಕ್ಷೆ ಸೇರಿದ 3 ಉಪಗ್ರಹಗಳು ಸೇರಿ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

vistara top to news 30062022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನೆರೆಯ ಮಹಾರಾಷ್ಟ್ರ ರಾಜಕಾರಣದಲ್ಲಿ ರಾಷ್ಟ್ರವೇ ಅಚ್ಚರಿ ಪಡುವಂತಹ ಬೆಳವಣಿಗೆಯಲ್ಲಿ ಏಕನಾಥ್‌ ಶಿಂಧೆ ಸಿಎಂ ಸ್ಥಾನ ಪಡೆದಿದ್ದಾರೆ. ಸಾಮಾನ್ಯ ಆಟೋ ರಿಕ್ಷಾ ಚಾಲಕನಿಂದ ಈ ಸ್ಥಾನದವರೆಗೆ ಬಂದ ರೀತಿಯೇ ಅನನ್ಯ. ಇಸ್ರೋ ಯಶಸ್ವಿಯಾಗಿ ಮೂರು ಉಪಗ್ರಹಗಳ ಉಡಾವಣೆ ಮಾಡಿರುವ ಸಾಧನೆ ಒಂದೆಡೆಯಾದರೆ, ಚಾಮರಾಜನಗರದಲ್ಲಿ ಗರ್ಭಿಣಿಯನ್ನು ಕಾಡು ಮಾರ್ಗದಲ್ಲಿ ಹೊತ್ತೊಯ್ದ ಸ್ಥಿತಿ ಮತ್ತೊಂದೆಡೆ. ದೇಶದಲ್ಲಿ ನಡೆದ ಪ್ರಮುಖ ಘಟನಾವಳಿಗಳ ಗುಚ್ಛ ವಿಸ್ತಾರ TOP 10 NEWS.

೧. ಮಹಾ ಅಚ್ಚರಿ: ಮುಖ್ಯಮಂತ್ರಿ ಪಟ್ಟ ಏಕನಾಥ್‌ ಶಿಂಧೆಗೆ, ಉಪ ಮುಖ್ಯಮಂತ್ರಿಯಾದ ಫಡ್ನವೀಸ್‌
ಉದ್ಧವ್‌ ಠಾಕ್ರೆ ರಾಜೀನಾಮೆ ಕೊಟ್ಟ ನಂತರ, ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್‌ ಗುರುವಾರ ಸಂಜೆ ಪ್ರಮಾಣ ವಚನ ಸ್ವೀಕಾರ ಮಾಡುತ್ತಾರೆ ಎಂದೇ ಹೇಳಲಾಗುತ್ತಿತ್ತು. ಆದರೆ ಅಚ್ಚರಿಯ ಬೆಳವಣಿಗೆಯಲ್ಲಿ, ʻನಾನು ಮಹಾರಾಷ್ಟ್ರ ಮುಖ್ಯಮಂತ್ರಿಯಾಗುವುದಿಲ್ಲ. ಏಕನಾಥ ಶಿಂಧೆ(Eknath Shinde) ಸಿಎಂ ಹುದ್ದೆಗೆ ಏರಲಿದ್ದಾರೆʼ ಎಂದು ಸ್ವತಃ ದೇವೇಂದ್ರ ಫಡ್ನವೀಸ್‌ ಸುದ್ದಿಗೋಷ್ಠಿಯಲ್ಲಿ ಘೋಷಿಸಿದರು. ತಾವು ಸರ್ಕಾರದ ಭಾಗವಾಗುವುದಿಲ್ಲ ಎಂದು ಪ್ರಾರಂಭದಲ್ಲಿ ಹೇಳಿದ್ದರೂ ವರಿಷ್ಠರ ಒತ್ತಾಯದ ಮೇರೆಗೆ ಡಿಸಿಎಂ ಸ್ಥಾನವನ್ನು ಫಡ್ನವೀಸ್‌ ಒಪ್ಪಿಕೊಂಡರು. ರಾಜಭವನದಲ್ಲಿ ಇಬ್ಬರೂ ಪ್ರಮಾಣವಚನ ಸ್ವೀಕರಿಸಿದರು. (ಸಂಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ)

2. Maha politics | ಏಕನಾಥ್‌ ಶಿಂಧೆ; ಅಂದು ಆಟೋ ಡ್ರೈವರ್‌, ಇಂದು ಮಹಾ ಸರ್ಕಾರದ ಚಾಲಕ!
ಮಹಾರಾಷ್ಟ್ರ ವಿಕಾಸ ಅಘಾಡಿ ಸರಕಾರದಲ್ಲಿ ಸಚಿವರಾಗಿದ್ದ ಏಕನಾಥ್‌ ಶಿಂಧೆ ಬಂಡಾಯವೆದ್ದು ಮಹಾರಾಷ್ಟ್ರದಲ್ಲಿ ರಾಜಕೀಯ ಬಿರುಗಾಳಿ (Maha politics) ಸೃಷ್ಟಿಸಿದ್ದಲ್ಲದೆ ಇದೀಗ ಅವರು ಮುಖ್ಯಮಂತ್ರಿ ಹುದ್ದೆಗೂ ಏರಿಬಿಟ್ಟಿದ್ದಾರೆ. ಶಿವಸೇನೆ ಬಂಡಾಯ ಪಡೆ ಮತ್ತು ಬಿಜೆಪಿ ಮೈತ್ರಿ ಸರಕಾರದಲ್ಲಿ ದೇವೇಂದ್ರ ಫಡ್ನವೀಸ್‌ ಮುಖ್ಯಮಂತ್ರಿಯಾಗುತ್ತಾರೆ ಎಂದೇ ಭಾವಿಸಲಾಗಿತ್ತಾದರೂ ಅಚ್ಚರಿಯ ಬೆಳವಣಿಗೆಯಲ್ಲಿ ಶಿಂಧೆಯೇ ಮುಖ್ಯಮಂತ್ರಿಯಾಗಿದ್ದಾರೆ. ಹಾಗಿದ್ದರೆ ಈ ಏಕನಾಥ ಶಿಂಧೆ ಯಾರು? (ಸಂಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ)

೩. Rajasthan murder: ಜೈಪುರದಲ್ಲಿ ಸರಣಿ ಸ್ಫೋಟಕ್ಕೆ ಸ್ಕೆಚ್‌ ಹಾಕಿದ್ದ ಕನ್ಹಯ್ಯ ಲಾಲ್‌ ಹಂತಕರು, NIA ತನಿಖೆ ವೇಳೆ ಬಯಲು
ರಾಜಸ್ಥಾನದ ಉದಯಪುರದಲ್ಲಿ ಕನ್ಹಯ್ಯ ಲಾಲ್‌ ಎಂಬ ಹಿಂದೂ ಟೇಲರ್‌ನನ್ನು ಅತ್ಯಂತ ಬರ್ಬರವಾಗಿ ಕೊಲೆ ಮಾಡಿದ ಹಂತಕರಾದ ಮೊಹಮ್ಮದ್‌ ರಿಯಾಜ್‌ ಅಟ್ಟಾರಿ ಮತ್ತು ಮಹಮ್ಮದ್‌ ಗೌಸ್‌ ಎಂಬ ಕಿರಾತಕರು ಈ ಹಿಂದೆ ಜೈಪುರದಲ್ಲಿ ಸರಣಿ ಬಾಂಬ್‌ ಸ್ಫೋಟಕ್ಕೆ ಸಂಚು ನಡೆಸಿದ್ದರು ಎಂಬ ಅಂಶ ಎನ್‌ಐಎ ತನಿಖೆ ವೇಳೆ ಬಯಲಾಗಿದೆ.
ನೂಪುರ್‌ ಶರ್ಮ ಅವರ ವಿವಾದಾತ್ಮಕ ಹೇಳಿಕೆಗೆ ಪೂರಕವಾಗಿ ಜಾಲತಾಣದಲ್ಲಿ ಪೋಸ್ಟ್‌ ಹಾಕಿದ್ದಾರೆಂಬ ಕಾರಣಕ್ಕೆ ಕನ್ಹಯ್ಯ ಲಾಲ್‌ ಅವರನ್ನು ಕೊರಳು ಕತ್ತರಿಸಿ ಕೊಂದ ಈ ದುಷ್ಟರು ಸಾಮಾನ್ಯರಲ್ಲ. ಬಹು ವರ್ಷಗಳಿಂದಲೇ ಈ ಭಾಗದಲ್ಲಿ ಹಲವಾರು ದ್ವೇಷ ಕಾರ್ಯಾಚರಣೆಗಳಲ್ಲಿ ಭಾಗಿಯಾಗಿದ್ದರು ಎಂದು ಹೇಳಲಾಗಿದೆ. (ಸಂಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ)

4. ಬೇಡ, ಜಂಗಮ ಪ್ರತಿಭಟನೆ: ಹೆದ್ದಾರಿಯಲ್ಲಿ ಹಾಹಾಕಾರ
ಬೇಡ ಜಂಗಮ ಮೀಸಲು ಹೋರಾಟ ಸಮಾವೇಶಕ್ಕಾಗಿ ಬೆಂಗಳೂರಿಗೆ ಹೊರಟಿದ್ದ ಸಾವಿರಾರು ಮಂದಿ ರಾಷ್ಟ್ರೀಯ ಹೆದ್ದಾರಿಯಲ್ಲೇ ದಿಢೀರ್ ಧರಣಿ ನಡೆಸಿದ ಕಾರಣ ವಾಹನ ಸಂಚಾರ ಅಸ್ತವ್ಯಸ್ತವಾಯಿತು. ಬುಧವಾರ (29 ಜೂನ್‌) ಸಂಜೆಯಿಂದಲೇ ನಾನಾ ಜಿಲ್ಲೆಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ ಕಡೆಗೆ ಹೊರಟಿದ್ದ ಪ್ರತಿಭಟನಾಕಾರರು, ಸಮಾವೇಶಕ್ಕೆ ಸರ್ಕಾರ ಅನುಮತಿ ನಿರಾಕರಿಸಿದ ಸುದ್ದಿ ತಿಳಿಯುತ್ತಿದ್ದಂತೆ ರಾತ್ರಿಯೇ ಹೆದ್ದಾರಿಗಿಳಿದು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದಾಗಿ ಶಿರಾ-ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಹಲವು ಕಡೆ ಗುರುವಾರ ಟ್ರಾಫಿಕ್ ಜಾಮ್ ಉಂಟಾಗಿ ಪ್ರಯಾಣಿಕರು ಪರದಾಡಬೇಕಾಯಿತು. ಬೆಂಗಳೂರಿನಲ್ಲಿ ಮೇಕಾರ್‌ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಸ್ಥಳಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಗಮಿಸಿ ಮನವಿ ಸ್ವೀಕರಿಸಿದರು. (ಸಂಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ)

5. ಆಲ್ಟ್‌ ನ್ಯೂಸ್‌ಸಹ ಸ್ಥಾಪಕ ಮೊಹಮ್ಮದ್‌ ಜುಬೇರ್‌ ಬೆಂಗಳೂರು ಮನೆ ಮಹಜರ್‌
ಸಮುದಾಯಗಳ ನಡುವೆ ದ್ವೇಷ ಭಾವನೆ ಬಿತ್ತುವ ಪೋಸ್ಟ್‌ ಮಾಡಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಆಲ್ಟ್‌ ನ್ಯೂಸ್‌ ಸಹ ಸಂಸ್ಥಾಪಕ ಮೊಹಮ್ಮದ್‌ ಜುಬೇರ್‌ನನ್ನು ಪೊಲೀಸರು ಬೆಂಗಳೂರಿಗೆ ಕರೆತಂದಿದ್ದಾರೆ. ಬೆಂಗಳೂರಿನ ಡಿ.ಜೆ. ಹಳ್ಳಿ ಠಾಣಾ ವ್ಯಾಪ್ತಿಯ ಕಾವಲ್ ಭೈರಸಂದ್ರದ ಚಿನ್ನಣ್ಣ ಲೇಔಟ್‌ನಲ್ಲಿರುವ ಮನೆಗೆ ಗುರುವಾರ ಕರೊದೊಯ್ದ ಪೊಲೀಸರು ಮಹಜರ್‌ ನಡೆಸಿದ್ದಾರೆ. (ಸಂಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ)

6. ವಿಸ್ತಾರ Explainer| ತಂದೆಯ ತಪ್ಪನ್ನು ಮಾಡದೆ ಮಕ್ಕಳಿಗೆ ರಿಲಯನ್ಸ್‌ ಸಾಮ್ರಾಜ್ಯ ಹಂಚುತ್ತಿರುವ ಮುಕೇಶ್‌ ಅಂಬಾನಿ!
ಅದು ೧೩ ವರ್ಷಗಳ ಹಿಂದಿನ ಸನ್ನಿವೇಶ. ಬಿಲಿಯನೇರ್‌ ಮುಕೇಶ್‌ ಅಂಬಾನಿ ಹಾಗೂ ಕಿರಿಯ ಸೋದರ ಅನಿಲ್‌ ಅಂಬಾನಿ ಅವರು ಮುಂಬಯಿನಲ್ಲಿ ತಾಯಿ ಕೋಕಿಲಾಬೆನ್‌ ಅಂಬಾನಿಯವರ ಜತೆಗಿದ್ದರೂ, ತಂದೆ ಕಟ್ಟಿದ ರಿಲಯನ್ಸ್‌ ಸಾಮ್ರಾಜ್ಯದ ಪಾಲಿಗೋಸ್ಕರ ಕೋರ್ಟ್‌ಗಳಲ್ಲಿ ಪರಸ್ಪರ ಕಾದಾಡುತ್ತಿದ್ದರು. ಧೀರೂಭಾಯಿ ಅಂಬಾನಿಯವರು ಕಟ್ಟಿದ್ದ ರಿಲಯನ್ಸ್‌ ಸಾಮ್ರಾಜ್ಯ ೨೦೦೫ರಲ್ಲಿ ಎರಡಾಗಿ ವಿಭಜನೆಯಾದ ಬಳಿಕವೂ ಕೆಲ ವರ್ಷಗಳ ಕಾಲ ಸೋದರರ ನಡುವೆ ಭಾರಿ ಕಾನೂನು ಸಂಘರ್ಷ ಮುಂದುವರಿದಿತ್ತು. ಅಷ್ಟು ದೊಡ್ಡ ಉದ್ದಿಮೆಗಳ ಸಮೂಹವನ್ನೇ ಕಟ್ಟಿದ್ದರೂ, ಧೀರೂಭಾಯಿ ಅಂಬಾನಿ ಒಂದು ತಪ್ಪು ಮಾಡಿದ್ದರು. ಈಗ ಮುಖೇಶ್‌ ಅಂಬಾನಿ ಆ ತಪ್ಪು ಮಾಡಲಿಲ್ಲ. (ಸಂಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ)

7. ಬರುವವರಿಗೆ ಸ್ವಾಗತ: ಎಸ್‌.ಟಿ. ಸೋಮಶೇಖರ್‌ ಹಾಗೂ ಇತರರಿಗೆ ಸಿದ್ದರಾಮಯ್ಯ ಓಪನ್‌ ಆಫರ್‌
ನವ ದೆಹಲಿಯಲ್ಲಿ ಎರಡು ದಿನ ರಾಹುಲ್‌ ಗಾಂಧಿ ಅವರೊಂದಿಗೆ ಚುನಾವಣಾ ಕಾರ್ಯತಂತ್ರ, ಪ್ರಚಾರ ಹಾಗೂ ಸಿದ್ಧತೆ ಸಭೆ ನಡೆಸಿ ಬಂದ ಮಾಜಿ ಸಿಎಂ ಹಾಗೂ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಇದೀಗ ಬಿಜೆಪಿ ಸರ್ಕಾರದ ಸಚಿವರಿಗೆ ಓಪನ್‌ ಆಫರ್‌ ನೀಡಿದ್ದಾರೆ. ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ಅವರ ಹೆಸರನ್ನು ನಿರ್ದಿಷ್ಟವಾಗಿ ಉಲ್ಲೇಖಿಸಿ ಸಿದ್ದರಾಮಯ್ಯ ಟ್ವೀಟ್‌ ಮಾಡಿರುವುದು ಅನೇಕ ಊಹಾಪೋಹಗಳಿಗೆ ಎಡೆ ಮಾಡಿಕೊಟ್ಟಿದೆ. (ಸಂಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ)

8. ಗರ್ಭಿಣಿಯನ್ನು 8 ಕಿ.ಮೀ. ಕಾಡು ಮಾರ್ಗದಲ್ಲಿ 4 ಗಂಟೆ ಹೊತ್ತೊಯ್ದರು: ಚಾಮರಾಜನಗರದ ಗ್ರಾಮಸ್ಥರ ಬವಣೆ
ಮಹದೇಶ್ವರ ಬೆಟ್ಟ ಅರಣ್ಯದ ಗ್ರಾಮಸ್ಥರು ನಾಗರಿಕ ಸಮಾಜದ ಬಹುತೇಕ ಮೂಲಸೌಕರ್ಯಗಳಿಂದ ವಂಚಿತರಾಗಿರುವುದಕ್ಕೆ ತಾಜಾ ಉದಾಹರಣೆಯೊಂದು ಲಭಿಸಿದೆ. ಗರ್ಭಿಣಿಯೊಬ್ಬರನ್ನು ಆಸ್ಪತ್ರೆಗೆ ಕರೆದಯ್ಯಲು ಕನಿಷ್ಠ ಸಾರಿಗೆ ವ್ಯವಸ್ಥೆಯೂ ಇಲ್ಲದೆ, ಸರ್ಕಾರದ ಯೋಜನೆಯೂ ಉಪಯೋಗಕ್ಕೆ ಬಾರದೆ ಕಾಡು ದಾರಿಯಲ್ಲಿ ಬಟ್ಟೆಯ ಜೋಲಿಯಲ್ಲಿ ಕಟ್ಟಿ ಹೊತ್ತೊಯ್ದಿರುವ ಘಟನೆಯು ರಾಜ್ಯದ ಆರೋಗ್ಯ ವ್ಯವಸ್ಥೆಯನ್ನು ಅಣಕಿಸುವಂತಿದೆ. (ಸಂಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ)

9. ರಾಜ್ಯಾದ್ಯಂತ ಮಳೆ ಆರ್ಭಟ: ಹೈ ಅಲರ್ಟ್‌ ಘೋಷಣೆ, ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ರಜೆ
ರಾಜ್ಯದ ಕರಾವಳಿ ತಾಲೂಕುಗಳು, ವಿಜಯನಗರ, ಮಂಡ್ಯ ಸೇರಿ ರಾಜ್ಯಾದ್ಯಂತ ಗುರುವಾರ ಮಳೆ ಆರ್ಭಟ ಜೋರಾಗಿತ್ತು. ಹಲವಾರು ಕಡೆಗಳಲ್ಲಿ ಹವಾಮಾನ ಇಲಾಖೆ ಮನ್ನೆಚ್ಚರಿಕೆ ಕ್ರಮವಾಗಿ ಹೈ ಅಲರ್ಟ್‌ ಘೋಷಿಸಿದೆ. ದಕ್ಷಿಣ ಕನ್ನಡದಲ್ಲಿ ಶುಕ್ರವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. (ಸಂಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ)

10. MISSION SUCCESS: ಸಿಂಗಾಪುರದ ಮೂರು ಉಪಗ್ರಹಗಳನ್ನು ಕಕ್ಷೆ ಸೇರಿಸಿದ ಬೀಗಿದ ISRO
ಸಿಂಗಾಪುರದ ಮೂರು ಉಪಗ್ರಹಗಳನ್ನು ಹೊತ್ತು ನಭಕ್ಕೇರಿದ ಪಿಎಸ್‌ಎಲ್‌ವಿ ಸಿ-೫೩ ಭಾರತೀಯ ಬಾಹ್ಯಾಕಾಶ ಸಂಶೋಧನಾ ಇತಿಹಾಸದಲ್ಲಿ ಮತ್ತೊಂದು ದಾಖಲೆಯನ್ನು ಬರೆಯಿತು. ಗುರುವಾರ ಸಂಜೆ ೬.೦೨ಕ್ಕೆ ಶ್ರೀ ಹರಿ ಕೋಟಾದ ಉಪಗ್ರಹ ಉಡಾವಣಾ ಕೇಂದ್ರದಿಂದ ಬಂಗಾರದ ಬಣ್ಣದ ಧೂಮವನ್ನು ಚಿಮ್ಮುತ್ತಾ ನಭೋಮಂಡಲವನ್ನು ಬೇಧಿಸುತ್ತಾ ಸಾಗಿದ ಕ್ಷಣವನ್ನು ಇಸ್ರೊದ ವಿಜ್ಞಾನಿಗಳು ಅತ್ಯಂತ ಭಾವುಕರಾಗಿ ವೀಕ್ಷಿಸಿ ಹೆಮ್ಮೆಯಿಂದ ಬೀಗಿದರು. ಇದು ಇಸ್ರೋ ಪಿಎಸ್‌ಎಲ್‌ವಿ ಮೂಲಕ ನಡೆಸಿದ ೫೫ನೇ ಉಡಾವಣೆಯಾಗಿದ್ದು, ಎರಡನೇ ಲಾಂಚ್‌ ಪ್ಯಾಡ್‌ನಿಂದ ನಡೆದ ೧೬ನೇ ಹಾರಾಟ. (ಸಂಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ)

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

V Srinivas Prasad: ಮಣ್ಣಲ್ಲಿ ಮಣ್ಣಾದ ಸಂಸದ ಶ್ರೀನಿವಾಸ ಪ್ರಸಾದ್; ಬೌದ್ಧ ಸಂಪ್ರದಾಯದಂತೆ ಅಂತ್ಯಕ್ರಿಯೆ

V Srinivas Prasad: ಮೈಸೂರಿನ ಅಶೋಕಪುರಂ ಬಳಿಯ ಡಾ.ಬಿ.ಆರ್‌.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ, ಬೌದ್ಧ ಧರ್ಮ ಸಂಪ್ರದಾಯದಂತೆ ಸಂಸದ ಶ್ರೀನಿವಾಸ ಪ್ರಸಾದ್‌ ಅವರ ಅಂತ್ಯ ಸಂಸ್ಕಾರ ನೆರವೇರಿತು.

VISTARANEWS.COM


on

V Srinivas Prasad
Koo

ಮೈಸೂರು: ಬಿಜೆಪಿಯ ಹಿರಿಯ ನಾಯಕ, ಚಾಮರಾಜನಗರ ಸಂಸದ ಶ್ರೀನಿವಾಸ ಪ್ರಸಾದ್‌ (V Srinivas Prasad) ಅವರು ಮಣ್ಣಲ್ಲಿ ಮಣ್ಣಾಗಿದ್ದಾರೆ. ನಗರದ ಅಶೋಕಪುರಂ ಬಳಿಯಿರುವ ಡಾ.ಬಿ.ಆರ್‌.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ, ಬೌದ್ಧ ಧರ್ಮ ಸಂಪ್ರದಾಯದಂತೆ ಮಂಗಳವಾರ ಅಂತ್ಯಕ್ರಿಯೆ ನೆರವೇರಿತು. ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ ಸ್ವಾಭಿಮಾನಿ ಚಕ್ರವರ್ತಿಯ ನೆನೆದು ಕುಟುಂಬಸ್ಥರು ಸೇರಿ ಸಾವಿರಾರು ಅಭಿಮಾನಿಗಳು ಕಣ್ಣೀರಿಟ್ಟರು.

ಅಂತ್ಯ ಸಂಸ್ಕಾರಕ್ಕೂ ಮುನ್ನ ಶ್ರೀನಿವಾಸ ಪ್ರಸಾದ್‌ ಅವರಿಗೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಅವರಿಂದ ಸರ್ಕಾರಿ ಗೌರವ ಸಲ್ಲಿಕೆ ಮಾಡಲಾಯಿತು. ಇದೇ ವೇಳೆ ರಾಷ್ಟ್ರಗೀತೆ ನುಡಿಸಿ, ಗಾಳಿಯಲ್ಲಿ ಗುಂಡು ಹಾರಿಸಿ ಪೊಲೀಸರುಗೌರವ ಸಲ್ಲಿಸಿದರು. ಶ್ರೀನಿವಾಸ್ ಪ್ರಸಾದ್ ಪತ್ನಿಗೆ ಜಿಲ್ಲಾಧಿಕಾರಿಗಳು ರಾಷ್ಟ್ರ ಧ್ವಜ ಹಸ್ತಾಂತರ ಮಾಡಿದರು. ನಂತರ ಬೆಂಗಳೂರಿನ ಮಹಾಬೋದಿಯ ಶ್ರೀ ಆನಂದ ಬಂತೇಜಿ, ಮೈಸೂರಿನ ವಿಶ್ವಮೈತ್ರಿ ಬುದ್ಧ ವಿಹಾರದ ಶ್ರೀ ಕಲ್ಯಾಣಸಿರಿ ಬಂತೇಜಿ ನೇತೃತ್ವದಲ್ಲಿ ಅಂತಿಮ ವಿಧಿವಿಧಾನ ನಡೆಯಿತು. ಸುಮಾರು 15ಕ್ಕೂ ಹೆಚ್ಚು ಬೌದ್ಧ ಬಿಕ್ಕುಗಳಿಂದ ಪ್ರಾರ್ಥನೆ ಸಲ್ಲಿಸಲಾಯಿತು.

ಬಂತೇಜಿಗಳಿಂದ ಬುದ್ಧವಂದನ, ದಮ್ಮವಂದನ, ಸಂಘ ವಂದನ, ಎಲ್ಲಾ ಜನರಿಗೆ ತ್ರಿಸರಣ, ಪಂಚಶೀಲ ಬೋಧನೆ, ಬಂತೇಜಿಗಳಿಂದ ರತನ ಸೂತ್ರ ಪಠಣ, ಎಲ್ಲ ಜನರಿಂದ ಧ್ಯಾನ ಪಠಣ, ತಿರೋಕುಡ್ಡ ಸೂತ್ರ ಪಠಣ, ಬೌದ್ಧ ಬಂತೇಜಿಗಳಿಗೆ ವಸ್ತ್ರದಾನ, ಹಣ್ಣುಗಳ ಅರ್ಪಣೆ, ನೀರು ಸುರಿಸಿ ಪುಣ್ಯಾನುಮೋದನೆ, ಕುಟುಂಬಸ್ಥರು ಗೌರವ ಸಲ್ಲಿಸಿದ ಬಳಿಕ ದೇಹ ಗುಂಡಿಗಿಳಿಸಿ ಮಂತ್ರ ಪಠಣ ಸೇರಿ ಹಲವು ವಿಧಿ ವಿಧಾನ ನಡೆಯಿತು.

ಇದಕ್ಕೂ ಮೊದಲು ಸೋಮವಾರ ಇಡೀ ರಾತ್ರಿ ಅಶೋಕಪುರಂ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮಂಗಳ ಮಧ್ಯಾಹ್ನ ಅಶೋಕಪುರಂನ ಪ್ರಮುಖ ರಸ್ತೆಗಳಲ್ಲಿ ಸಾವಿರಾರು ಬೆಂಬಲಿಗರು, ಕಾರ್ಯಕರ್ತರ ಸಮ್ಮುಖದಲ್ಲಿ ಮೆರವಣಿಗೆ ನಡೆಸಲಾಯಿತು. ಬಳಿಕ ಅಶೋಕಪುರಂ ಬಳಿಯಿರುವ ಡಾ.ಬಿ.ಆರ್‌.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಯಿತು.

ಇದನ್ನೂ ಓದಿ | M P Rudramba: ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್ ಧರ್ಮ ಪತ್ನಿ ರುದ್ರಾಂಬಾ ನಿಧನ

ಅಂತ್ಯಕ್ರಿಯೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಟಿ.ಎಸ್.ಶ್ರೀವತ್ಸ, ಎ.ಆರ್.ಕೃಷ್ಣಮೂರ್ತಿ, ಮಾಜಿ ಸಚಿವ ಎನ್.ಮಹೇಶ್, ಮಾಜಿ ಶಾಸಕ ಎಲ್.ನಾಗೇಂದ್ರ, ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್, ಎಚ್.ವಿ.ರಾಜೀವ್ ಸೇರಿದಂತೆ ಸಾವಿರಾರು
ಜನರು ಭಾಗಿಯಾಗಿದ್ದರು.

Continue Reading

ಸಿನಿಮಾ

Hassan Pen Drive Case: ಪ್ರಜ್ವಲ್ ರೇವಣ್ಣ ಮೃಗಕ್ಕಿಂತ ಕಡೆ; ಕಿಡಿ ಕಾರಿದ ಬಹುಭಾಷಾ ನಟಿ ಪೂನಂ ಕೌರ್

Hassan Pen Drive Case: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. ಇದೀಗ ಕನ್ನಡ ಸೇರಿದಂತೆ ವಿವಿಧ ಭಾಷೆಗಳ ಹಲವು ಚಿತ್ರಗಳಲ್ಲಿ ನಟಿಸಿರುವ ಜನಪ್ರಿಯ ನಟಿ ಪೂನಂ ಕೌರ್ ಪ್ರತಿಕ್ರಿಯಿಸಿದ ಜೆಡಿಎಸ್‌ ಮುಖಂಡನ ವಿರುದ್ಧ ಕಿಡಿಕಾರಿದ್ದಾರೆ. ʼಈ ರೀತಿಯ ಕೃತ್ಯ ಎಸಗಿದ ಪ್ರಜ್ವಲ್ ರೇವಣ್ಣ ಅವರನ್ನು ಬಿಡಬೇಡಿʼʼ ಎಂದು ಅವರು ವಿಡಿಯೊ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ʼʼಪ್ರಜ್ವಲ್‌ ಬಳಿ ದುಡ್ಡು ಹಾಗೂ ಅಧಿಕಾರ ಇದೆ. ಹೀಗಾಗಿ ಅವರ ವಿರುದ್ಧ ಧ್ವನಿ ಎತ್ತಿದರೂ, ದೂರು ಕೊಟ್ಟರೂ ಶಿಕ್ಷೆಯಾಗುತ್ತದೆ ಎನ್ನುವ ಬಗ್ಗೆ ಗ್ಯಾರಂಟಿ ಇಲ್ಲʼʼ ಎಂದು ಅವರು ಹೇಳಿದ್ದಾರೆ.

VISTARANEWS.COM


on

Hassan Pen Drive Case
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣ (Hassan Pen Drive Case) ದೇಶಾದ್ಯಂತ ಸಂಚಲನ ಸೃಷ್ಟಿಸಿದೆ. ಇದೀಗ ಈ ಬಗ್ಗೆ ಕನ್ನಡ ಸೇರಿದಂತೆ ವಿವಿಧ ಭಾಷೆಗಳ ಹಲವು ಚಿತ್ರಗಳಲ್ಲಿ ನಟಿಸಿರುವ ಜನಪ್ರಿಯ ನಟಿ ಪೂನಂ ಕೌರ್ (Poonam Kaur) ಪ್ರತಿಕ್ರಿಯಿಸಿ, ಪ್ರಜ್ವಲ್ ರೇವಣ್ಣ ವಿರುದ್ಧ ಕಿಡಿ ಕಾರಿದ್ದಾರೆ.

ʼʼಪ್ರಜ್ವಲ್ ರೇವಣ್ಣ ಮೃಗಕ್ಕಿಂತ ಕಡೆ. 2,900ಕ್ಕೂ ಹೆಚ್ಚು ವಿಡಿಯೊಗಳನ್ನು ಮಾಡಿದ್ದಾರೆ ಎಂದರೆ ಅವರೆಷ್ಟು ವಿಕೃತ ಮನೋಭಾವ ಹೊಂದಿದ್ದಾರೆ ಎನ್ನುವುದು ಸ್ಪಷ್ಟವಾಗುತ್ತದೆ. ಪ್ರಾಣಿಗಳು ಕೂಡ ರೀತಿ ಮಾಡೋದಿಲ್ಲʼʼ ಎಂದು ಹೇಳಿದ್ದಾರೆ. ʼʼಈ ರೀತಿಯ ಕೃತ್ಯ ಎಸಗಿದ ಪ್ರಜ್ವಲ್ ರೇವಣ್ಣ ಅವರನ್ನು ಬಿಡಬೇಡಿʼʼ ಎಂದು ಅವರು ವಿಡಿಯೊ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ʼʼಪ್ರಜ್ವಲ್‌ ಬಳಿ ದುಡ್ಡು ಹಾಗೂ ಅಧಿಕಾರ ಇದೆ. ಹೀಗಾಗಿ ಅವರ ವಿರುದ್ಧ ಧ್ವನಿ ಎತ್ತಿದರೂ, ದೂರು ಕೊಟ್ಟರೂ ಶಿಕ್ಷೆಯಾಗುತ್ತದೆ ಎನ್ನುವ ಬಗ್ಗೆ ಗ್ಯಾರಂಟಿ ಇಲ್ಲʼʼ ಎಂದು ಪೂನಂ ಕೌರ್‌ ಅನುಮಾನ ವ್ಯಕ್ತಪಡಿಸಿದ್ದಾರೆ. ʼʼಹೀಗಾಗಿ ನಾನು ಕೈ ಮುಗಿದು ಬೇಡಿಕೊಳ್ತಿನಿ. ಪ್ರಜ್ಚಲ್‌ಗೆ ಯಾರು ವೋಟ್ ಹಾಕಬೇಡಿ. ಅಂತಹವರು ಅಧಿಕಾರಕ್ಕೆ ಬಂದರೆ ಹೆಣ್ಣು ಮಕ್ಕಳಿಗೆ ರಕ್ಷಣೆ ಇರೋದಿಲ್ಲʼʼ ಎಂದು ಹೇಳಿದ್ದಾರೆ.

ʼʼಹೆಣ್ಣು ಮಕ್ಕಳು ಎಚ್ಚೆತ್ತುಕೊಳ್ಳಬೇಕು ಎಂದು ಅವರು ಕರೆ ನೀಡಿದ್ದಾರೆ. ಪ್ರತಿ ಮನೆಯ ಹೆಣ್ಣು ಮಗಳು ಎಚ್ಚರವಾದಾಗ ಮಾತ್ರ ದೇಶದ ಹೆಣ್ಣು ಮಕ್ಕಳು ಬಚವಾಗಲು ಸಾಧ್ಯ. ನಮ್ಮ ದೇಶ ರಾವಣ ರಾಜ್ಯದ ಕಡೆ ಹೋಗುತ್ತಿದೆಯಾ ಅಥವಾ ರಾಮರಾಜ್ಯದ ಕಡೆ ಹೋಗುತ್ತಿದೆಯಾ ?ʼʼ ಎಂದೂ ಅವರು ಪ್ರಶ್ನಿಸಿದ್ದಾರೆ.

ಪೂನಂ ಕೌರ್‌ ಹಿನ್ನೆಲೆ

ಪೂನಂ ಕೌರ್‌ ಪಂಜಾಬಿ ಕುಟುಂಬಕ್ಕೆ ಸೇರಿದ ಹೈದರಾಬಾದ್ ಹುಡುಗಿ. ತೇಜ ನಿರ್ದೇಶನದ ‘ಒಕ್ಕ ವಿಚಿತ್ರಂ’ ತೆಲುಗು ಚಿತ್ರದ ಮೂಲಕ 2006ರಲ್ಲಿ ಸಿನಿರಂಗಕ್ಕೆ ಕಾಲಿಟ್ಟರು. ಬಳಿಕ ಕನ್ನಡ, ತಮಿಳು, ಹಿಂದಿ, ಮಲಯಾಳಂ ಚಿತ್ರಗಳಲ್ಲಿ ಅಭಿನಯಿಸಿದರು. 2008ರಲ್ಲಿ ತೆರೆಕಂಡ ಟಿ.ನಾಗಣ್ಣ ನಿರ್ದೇಶನದ, ಶಿವರಾಜಕುಮಾರ್ ಅಭಿನಯಿಸಿದ ‘ಬಂಧು-ಬಳಗ’ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡರು. ತಮ್ಮ 15 ವರ್ಷದ ಸಿನಿಕೆರಿಯರ್‌ನಲ್ಲಿ ಸುಮಾರು 25 ಚಿತ್ರಗಳಲ್ಲಿ ನಟಿಸಿದ್ದಾರೆ. ಜತೆಗೆ ಕಿರುತೆರೆಯಲ್ಲಿಯೂ ಕಾಣಿಸಿಕೊಂಡಿದ್ದಾರೆ. 2022ರಲ್ಲಿ ತೆರೆಕಂಡ ʼನಾತಿಚರಾಮಿʼ ತೆಲುಗು ಚಿತ್ರದ ಬಳಿಕ ಪೂನಂ ಬಣ್ಣ ಹಚ್ಚಿಲ್ಲ.

ಸ್ಫೋಟಕ ಹೇಳಿಕೆ ನೀಡಿದ ಮಾಜಿ ಕಾರು ಚಾಲಕ

ಈ ಮಧ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಜ್ವಲ್‌ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಈ ವಿಡಿಯೊಗಳು ನನ್ನ ಬಳಿ ಇತ್ತು. ನಾನಿದನ್ನು ದೇವರಾಜೇಗೌಡ ಅವರಿಗೆ ಕೊಟ್ಟಿದ್ದೆ. ಅವರು ಇದನ್ನು ಸ್ವಾರ್ಥಕ್ಕೆ ಉಪಯೋಗಿಸಿಕೊಂಡರೋ ಏನೋ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Hassan Pen Drive Case: ಪ್ರಜ್ವಲ್‌ ರೇವಣ್ಣ ಕೇಸ್‌; ಎಸ್‌ಐಟಿ ತನಿಖೆ ಹೇಗಿರುತ್ತೆ? ತಪ್ಪಿಸಿಕೊಳ್ಳೋಕೆ ಇರೋ ಚಾನ್ಸ್‌ ಏನು?

ಕಾರ್ತಿಕ್ ಅಜ್ಞಾತ ಸ್ಥಳದಲ್ಲಿದ್ದುಕೊಂಡು ವಿಡಿಯೊ ಮಾಡಿದ್ದು, ವಿಡಿಯೊ ಲೀಕ್ ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ನಾನು ಹದಿನೈದು ವರ್ಷದಿಂದ ಪ್ರಜ್ವಲ್‌ ರೇವಣ್ಣ ಹಾಗೂ ಅವರ ಫ್ಯಾಮಿಲಿಗೆ ಕಾರು ಡ್ರೈವರ್ ಆಗಿ ಕೆಲಸ ಮಾಡಿದ್ದೇನೆ. ಒಂದು ವರ್ಷದಿಂದ ಕೆಲಸವನ್ನು ಬಿಟ್ಟಿದ್ದೇನೆ. ನನ್ನ ಜಮೀನು ಬರೆಸಿಕೊಂಡು ನನ್ನ ಪತ್ನಿ ಮೇಲೆ ಹಲ್ಲೆ ಮಾಡಿದರು. ಹಿಂಸೆ ಕೊಟ್ಟರು. ಆದ್ದರಿಂದ ಅವರ ಮನೆಯಿಂದ ಹೊರಬಂದೆ. ಆ ಸಮಯದಲ್ಲಿ ದೇವರಾಜೇಗೌಡ ಇವರ ಫ್ಯಾಮಿಲಿ ವಿರುದ್ಧ ಹೋರಾಟ ಮಾಡುತ್ತಿದ್ದರು. ಯಾರಿಂದಲೂ ನ್ಯಾಯ ಸಿಗಲ್ಲ ಅಂತ ದೇವರಾಜೇಗೌಡ ಬಳಿ ಹೋದೆ. ಯಾವುದೇ ಅಶ್ಲೀಲ ವಿಡಿಯೊ ರಿಲೀಸ್ ಮಾಡಬಾರದು ಎಂದು ಅಂದು ನನ್ನ ವಿರುದ್ಧ ಪ್ರಜ್ವಲ್‌ ರೇವಣ್ಣ ಸ್ಟೇ ತಂದಿದ್ದರು. ನಿನ್ನ ಬಳಿ ಇರುವ ವಿಡಿಯೊ, ಫೋಟೊಗಳನ್ನು ಕೊಡು. ನಾನು ಯಾರಿಗೂ ತೋರಿಸುವುದಿಲ್ಲ ಎಂದು ದೇವರಾಜೇಗೌಡ ಕೇಳಿದ್ದರು. ಅವರನ್ನು ನಂಬಿ ನನ್ನ ಬಳಿಯಿದ್ದ ವಿಡಿಯೊದ ಒಂದು ಕಾಪಿ ಕೊಟ್ಟೆ. ಅವರು ಅದನ್ನು ಸ್ವಾರ್ಥಕ್ಕೆ ಉಪಯೋಗಿಸಿಕೊಂಡರೋ ಏನೋ ಎಂಬುದು ಗೊತ್ತಿಲ್ಲ ಎಂದು ಹೇಳಿದ್ದಾರೆ.

Continue Reading

ರಾಜಕೀಯ

Lok Sabha Election 2024: ಬಿಜೆಪಿ ಅಭ್ಯರ್ಥಿ ರಾಜಾಅಮರೇಶ್ವರ ನಾಯಕಗೆ ಬೆಂಬಲಿಸಲು ವೆಂಕಟರೆಡ್ಡಿ ಮುದ್ನಾಳ ಮನವಿ

Lok Sabha Election 2024: ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಾಅಮರೇಶ್ವರ ನಾಯಕ ಪರ ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಹಾಗೂ ಪಕ್ಷದ ಮುಖಂಡರು ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ ನಡೆಸಿದರು.

VISTARANEWS.COM


on

Lok Sabha Election 2024 former MLA Venkatreddy Mudnala election campaign for Raichur Lok Sabha constituency BJP candidate Raja Amareshwar Nayaka
Koo

ಯಾದಗಿರಿ: ನರೇಂದ್ರ ಮೋದಿ (PM Narendra Modi) ಅವರು 10 ವರ್ಷಗಳ ಕಾಲ ಪಿಎಂ ಆಗಿ ದೇಶದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಮತ್ತೊಮ್ಮೆ ಮೋದಿ ಅವರನ್ನು ಪಿಎಂ ಮಾಡಲು ಬಿಜೆಪಿ ಅಭ್ಯರ್ಥಿ ರಾಜಾಅಮರೇಶ್ವರ ನಾಯಕ ಅವರನ್ನು ಗೆಲ್ಲಿಸಬೇಕು ಎಂದು ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಮನವಿ (Lok Sabha Election 2024) ಮಾಡಿದರು.

ಜಿಲ್ಲೆಯ ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಾಅಮರೇಶ್ವರ ನಾಯಕ ಪರ ಹಮ್ಮಿಕೊಂಡ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಲೋಕಸಭಾ ಚುನಾವಣೆಯು ತೀವ್ರ ಜಿದ್ದಾಜಿದ್ದಿನ ಚುನಾವಣೆಯಾಗಿದೆ. ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಇಲ್ಲಸಲ್ಲದ ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದ ಅವರು, ಪಿಎಂ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಡಜನರಿಗೆ ಪಡಿತರ ಅಕ್ಕಿ ನೀಡುವ ಮೂಲಕ ಬಡಜನರ ಹಸಿವು ನೀಗಿಸುವ ಕಾರ್ಯ ಮಾಡಿದೆ. ಸರ್ಕಾರವು ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಮಾಡುತ್ತಿಲ್ಲ. ಕೇಂದ್ರ ಸರಕಾರವು ಜೆಜೆಎಂ ಯೋಜನೆ ಜಾರಿಗೆ ತಂದು ಹಳ್ಳಿಯ ಜನರಿಗೆ ಕುಡಿಯುವ ನೀರಿನ ಸಮಸ್ಯೆ ನೀಗಿಸಿದೆ. ಮೋದಿ ಅವರು ಉತ್ತಮ ಆಡಳಿತ ನೀಡಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Toyota Kirloskar Motor: ಟೊಯೊಟಾ ರುಮಿಯಾನ್‌ G-AT ಬುಕ್ಕಿಂಗ್‌ ಶುರು! ಏನಿದರ ವಿಶೇಷ?

ಕೇಂದ್ರ ಸರ್ಕಾರವು ಯಾದಗಿರಿ ಜಿಲ್ಲಾ ಕೇಂದ್ರದಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ಅನುದಾನ ನೀಡಿ ಮೆಡಿಕಲ್ ಕಾಲೇಜು ಸ್ಥಾಪಿಸಲು ಮಹತ್ವದ ಕೊಡುಗೆ ನೀಡಿದೆ. ನನ್ನ ಅಧಿಕಾರಾವಧಿಯಲ್ಲಿ ಯಾದಗಿರಿ ವಿಧಾನಸಭೆ ಕ್ಷೇತ್ರದಲ್ಲಿ ರಸ್ತೆ, ಶಾಲೆಗಳ ಅಭಿವೃದ್ಧಿ, ಕುಡಿಯುವ ನೀರಿನ ಯೋಜನೆ ಸೇರಿದಂತೆ ಅನೇಕ ಸೌಲಭ್ಯಗಳನ್ನು ಕಲ್ಪಿಸಿದ್ದೇನೆ ಎಂದ ಅವರು, ಅಭ್ಯರ್ಥಿ ರಾಜಾಅಮರೇಶ್ವರ ನಾಯಕ ಅವರನ್ನು ಹೆಚ್ಚು ಮತಗಳಿಂದ ಗೆಲ್ಲಿಸಿ ತರಬೇಕು ಎಂದು ಮತದಾರರದಲ್ಲಿ ಮನವಿ ಮಾಡಿದರು.

ಬಿಜೆಪಿ ಯುವ ಮುಖಂಡ ಮಹೇಶರೆಡ್ಡಿ ಮುದ್ನಾಳ ಮಾತನಾಡಿ, ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿಗೆ ತಂದು ಸರ್ಕಾರವು ಯಾವುದೇ ಅಭಿವೃದ್ಧಿ ಮಾಡಿಲ್ಲ. ರಾಜ್ಯ ಸರ್ಕಾರವು ಕೇಂದ್ರದ ಕಿಸಾನ್ ಸಮ್ಮಾನ್ ಯೋಜನೆಗೆ ಕೊಡಮಾಡುವ 4 ಸಾವಿರ ರೂಪಾಯಿ ಸಹಾಯಧನವನ್ನು ಕಡಿತ ಮಾಡಿ, ರೈತರ ಹಿತ ಮರೆತಿದೆ ಎಂದು ಆರೋಪಿಸಿದರು.

ಬಿಜೆಪಿ ಮುಖಂಡ ಸಿದ್ದಣ್ಣಗೌಡ ಕಾಡಂನೋರ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ದೇವರಾಜ್ ನಾಯಕ ಮಾತನಾಡಿದರು.

ಇದನ್ನೂ ಓದಿ: Labour Day 2024: ಕಾರ್ಮಿಕ ದಿನಾಚರಣೆ ಸಂದರ್ಭದಲ್ಲಿ ಉದ್ಯೋಗಿಗಳಿಗೆ ಉಪಯುಕ್ತ ಹಣಕಾಸು ಟಿಪ್ಸ್‌ ಇಲ್ಲಿದೆ

ಈ ಸಂದರ್ಭದಲ್ಲಿ ಮುಖಂಡರಾದ ಉಮಾರೆಡ್ಡಿ ವಡ್ಡವಡಗಿ, ಶರಣಗೌಡ ಬಟಗೇರಿ, ಸುರೇಶ್ ಗೌಡ, ಸಂತೋಷಗೌಡ ವಡ್ಡವಡಗಿ, ಡಾ.ಎಂ.ಡಿ. ಮೊಲ್ಲಾ ರಾಯಚೂರು, ಸತೀಶ್ ಗೌಡ, ಬಸವರಾಜ ಮೇತ್ರಿ, ಈಶೆಪ್ಪ ಕೊಲ್ಲುರು, ಮರಳ ಸಿದ್ದಪ್ಪ, ಮಹಿಪಾಲರೆಡ್ಡಿ, ಸುರೇಶ್‌ಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

ಪ್ರಮುಖ ಸುದ್ದಿ

Mahanati Show: ʼಮಹಾನಟಿ ಶೋʼ ವಿರುದ್ಧ ಮೆಕ್ಯಾನಿಕ್‌ಗಳ ಆಕ್ರೋಶ; ಸ್ಪರ್ಧಿ ಗಗನಾ, ರಮೇಶ್‌ ಅರವಿಂದ್‌ ಸೇರಿ ಐವರ ವಿರುದ್ಧ ಮತ್ತೊಂದು ದೂರು

Mahanati Show: ಮೆಕ್ಯಾನಿಕ್ ವೃತ್ತಿ ಮಾಡುವ ಶ್ರಮಿಕ ವರ್ಗವನ್ನು ಅಪಮಾನಿಸಲಾಗಿದೆ ಎಂದು ಆರೋಪಿಸಿ ʼಮಹಾನಟಿʼ ರಿಯಾಲಿಟಿ ಶೋ ಸ್ಪರ್ಧಿ ಗಗನಾ ಹಾಗೂ ಜಡ್ಜ್‌ಗಳಾ ನಟ ರಮೇಶ್‌ ಅರವಿಂದ್‌, ನಟಿ ಪ್ರೇಮಾ ಸೇರಿ ಐವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ಮೆಕ್ಯಾನಿಕ್‌ ಮಿತ್ರ ವೆಲ್‌ಫೇರ್‌ ಅಸೋಸಿಯೇಷನ್‌ ದೂರು ನೀಡಿದೆ.

VISTARANEWS.COM


on

Mahanati Show
Koo

ಬೆಂಗಳೂರು: ʼಮಹಾನಟಿʼ ರಿಯಾಲಿಟಿ ಶೋ (Mahanati Show) ಸ್ಪರ್ಧಿ ಗಗನಾ ಹೇಳಿಕೆಯಿಂದ ಮೆಕ್ಯಾನಿಕ್‌ ವರ್ಗಕ್ಕೆ ನೋವಾಗಿದೆ ಎಂದು ಚಿಕ್ಕನಾಯಕನಹಳ್ಳಿಯ ದ್ವಿಚಕ್ರವಾಹನ ಮಾಲೀಕರು ಮತ್ತು ತಂತ್ರಜ್ಞರ ಕ್ಷೇಮಾಭಿವೃದ್ಧಿ ಸಂಘ ದೂರು ನೀಡಿದ ಬೆನ್ನಲ್ಲೇ ನಗರದಲ್ಲಿ ಮತ್ತೊಂದು ದೂರು ದಾಖಲಾಗಿದೆ. ಮೆಕ್ಯಾನಿಕ್ ವೃತ್ತಿ ಮಾಡುವ ಶ್ರಮಿಕ ವರ್ಗವನ್ನು ಕೀಳಾಗಿ ನಿಂದಿಸಿ, ಅಪಮಾನಿಸಲಾಗಿದೆ ಎಂದು ಆರೋಪಿಸಿ ʼಮಹಾನಟಿʼ ರಿಯಾಲಿಟಿ ಶೋ ನಡೆಸುವ ಜೀ ವಾಹಿನಿ ಮತ್ತು ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಮುಖ ನಟ, ನಟಿಯರು ಹಾಗೂ ಸ್ಪರ್ಧಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮೆಕ್ಯಾನಿಕ್‌ ಮಿತ್ರ ವೆಲ್‌ಫೇರ್‌ ಅಸೋಸಿಯೇಷನ್‌ ಅಧ್ಯಕ್ಷ ಆರ್‌.ನಾಗೇಶ್‌ ನೇತೃತ್ವದಲ್ಲಿ ಪದಾಧಿಕಾರಿಗಳು, ಸುಬ್ರಮಣ್ಯನಗರ ಪೊಲೀಸ್‌ ಠಾಣೆಗೆ ದೂರು‌ ನೀಡಿದ್ದಾರೆ.

ಮಹಾನಟಿ ಶೋ ಜಡ್ಜ್‌ಗಳಾದ ನಟಿ ಪ್ರೇಮಾ, ನಟ ರಮೇಶ್‌ ಅರವಿಂದ್‌, ನಿರ್ದೇಶಕ ತರುಣ್‌ ಸುಧೀರ್‌, ನಿರೂಪಕಿ ಅನುಶ್ರೀ ಹಾಗೂ ಸ್ಪರ್ಧಿ ಗಗನಾ ವಿರುದ್ಧ ದೂರು ದಾಖಲಾಗಿದೆ.

ಜೀ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಮಹಾನಟಿ ಎಂಬ ರಿಯಾಲಿಟಿ ಶೋನ ಒಂದು ಕಾರ್ಯಕ್ರಮದಲ್ಲಿ ಮೆಕ್ಯಾನಿಕ್ ವೃತ್ತಿ ಮಾಡುವ ಶ್ರಮಿಕ ವರ್ಗದ ಜನರನ್ನು ತೀರಾ ಕೆಟ್ಟದಾಗಿ ಅಪಮಾನಿಸಲಾಗಿದೆ. ಈ ಕಾರ್ಯಕ್ರಮವನ್ನು ರಾಜ್ಯದ ಕೋಟ್ಯಂತರ ಜನರು ನೋಡುತ್ತಾರಾದ್ದರಿಂದ ನಮಗೆ ಆಗಿರುವ ಅವಮಾನಕ್ಕೆ ಎಣೆಯೇ ಇಲ್ಲದಂತಾಗಿದೆ. ಈ ಕಾರ್ಯಕ್ರಮದ ಒಂದು ಎಪಿಸೋಡ್‌ನಲ್ಲಿ, ಕಾರ್ಯಕ್ರಮದ ಜಡ್ಜ್ ಆಗಿರುವ ನಟ ರಮೇಶ್ ಅರವಿಂದ್ ಅವರು ಸ್ಪರ್ಧಿಯೊಬ್ಬರಿಗೆ ಟಾಸ್ಕ್ ನೀಡುತ್ತಾರೆ. ನಿಮ್ಮ ತಂಗಿ ಒಬ್ಬ ಮೆಕ್ಯಾನಿಕ್ ಜತೆ ಓಡಾಡುವುದನ್ನು ನೀವು ನೋಡುತ್ತೀರಿ. ನಿಮ್ಮ ತಂಗಿ ಮನೆಗೆ ಬಂದಾಗ ಏನು ಹೇಳುತ್ತೀರಿ ಎಂದು ಅವರು ಪ್ರಶ್ನಿಸಿ, ಅಭಿನಯಿಸಲು ಹೇಳುತ್ತಾರೆ. ಈ ಸಂದರ್ಭದಲ್ಲಿ ಸ್ಪರ್ಧಿ ಹೇಳುವ ಮಾತುಗಳು ಮೆಕ್ಯಾನಿಕ್ ಸಮುದಾಯಕ್ಕೆ ಅಪಮಾನಕಾರಿಯಾಗಿರುತ್ತದೆ ಎಂದು ಪದಾಧಿಕಾರಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ | Mahanati Show: ಮೆಕ್ಯಾನಿಕಲ್‌ ಲೈಫ್‌ ಬಗ್ಗೆ ಕೆಟ್ಟ ಡೈಲಾಗ್‌ ಹೊಡೆದ ಗಗನಾ; ರಮೇಶ್‌ ಸೇರಿ ಹಲವರ ವಿರುದ್ಧ ದೂರು!

“ನೋಡು ಐಶು, ನೀನು ಅವನ ಜತೆ ಬೈಕಲ್ಲಿ ಸುತ್ತಾಡೋದನ್ನು ನಾನು ನೋಡಿದೆ. ಬಿದ್ರೆ ಯಾವಾಗೂ, ತುಪ್ಪದ ಕೊಳದಲ್ಲಿ ಬೀಳಬೇಕೇ ಹೊರತು ಕೊಚ್ಚೆಯ ಕೊಳೆಯಲ್ಲಿ ಬೀಳಬಾರದು. ಇದನ್ನ ನೆನಪಿಟ್ಕೋ. ಲೈಫು ನೀನು ಅಂದುಕೊಂಡಷ್ಟು ಈಜಿಯಾಗಿರೋದಿಲ್ಲ. ದುಡ್ಡು ಇಂಪಾರ್ಟೆಂಟ್ ಅಲ್ಲ, ಪ್ರೀತಿನೇ ಇಂಪಾರ್ಟೆಂಟ್ ಅಂತ ನೀನು ಅಂದುಕೊಂಡಿರಬಹುದು. ಆದರೆ ದುಡ್ಡು ಯಾವಾಗಲೂ ಬೇಕು. ಪ್ರೀತಿ ಮಾಡ್ಕೊಂಡೇ ಗ್ರೀಸ್ ತಿಂದುಕೊಂಡು ಇರುತ್ತೀನಿ ಅಂದ್ರ ಆಗಲ್ಲ. ನೀನು ಮೆಕಾನಿಕ್ ಜತೆನೇ ಹೋಗಿ ಅವನ ಜತೆ ಗ್ರೀಸ್ ತಿಂದುಕೊಂಡು ಇರುತ್ತೀನಿ ಅಂದ್ರೆ ತಪ್ಪಾಗುತ್ತೆ” ಎಂದು ಆಕೆ ಹೇಳುತ್ತಾರೆ.

ಸ್ಪರ್ಧಿ ಇಷ್ಟು ಕೆಟ್ಟದಾಗಿ ಒಂದು ದೊಡ್ಡ ಶ್ರಮಿಕ ವರ್ಗದ ಬಗ್ಗೆ ಮಾತನಾಡುತ್ತಿದ್ದರೂ ಜಡ್ಜ್‌ಗಳಾದ ರಮೇಶ್ ಅರವಿಂದ್, ನಟಿ ಪ್ರೇಮ, ನಿರ್ದೇಶಕ ತರುಣ್ ಸುಧೀರ್, ಆಂಕರ್ ಅನುಶ್ರೀ ಮತ್ತು ಅತಿಥಿಗಳಾಗಿ ಪಾಲ್ಗೊಂಡಿದ್ದ ನಟ ನಟಿಯರು ಹೀಗೆ ಮಾತನಾಡುವುದು ತಪ್ಪು ಎಂದು ಹೇಳುವ ಬದಲಾಗಿ, ಆಕೆಯ ಮಾತುಗಳಿಗೆ ಚಪ್ಪಾಳೆ ಹೊಡೆದು, ಪ್ರೋತ್ಸಾಹಿಸುತ್ತಾರೆ.

ಮೆಕ್ಯಾನಿಕ್ ವೃತ್ತಿಯೂ ಎಲ್ಲ ವೃತ್ತಿಗಳ ಹಾಗೆಯೇ ಗೌರವಾನ್ವಿತ ವೃತ್ತಿ. ಎಂಜಿನಿಯರ್, ಡಾಕ್ಟರ್, ಬ್ಯುಸಿನೆಸ್ ಮ್ಯಾನ್, ಪೊಲೀಸ್, ಮಿಲಿಟರಿಯಿಂದ ಹಿಡಿದು ಚಪ್ಪಲಿ ಹೊಲೆಯುವ ಕಾಯಕದವರೆಗೆ ಎಲ್ಲ ವೃತ್ತಿಗಳೂ ಶ್ರೇಷ್ಠ ವೃತ್ತಿಗಳೇ ಆಗಿವೆ. ಯಾವ ವೃತ್ತಿಯೂ ಕನಿಷ್ಠವಲ್ಲ, ಯಾವ ವೃತ್ತಿ ಮಾಡುವವನೂ ಕೊಚ್ಚೆ ಅಲ್ಲ. ಇದು ಈ ಮಹಾನಟ ನಟಿಯರಿಗೆ ಅರ್ಥವಾಗದೇ ಇರುವುದು ಆಶ್ಚರ್ಯಕರವಾಗಿದೆ ಎಂದು ಬೇಸರ ಹೊರಹಾಕಿದ್ದಾರೆ.

ಮಹಾನಟಿ ರಿಯಾಲಿಟಿ ಶೋನಲ್ಲಿ ಮೆಕ್ಯಾನಿಕ್ ಕೆಲಸ ಮಾಡುವವರು ಕೊಚ್ಚೆ ಎಂದು ನಿಂದಿಸಲಾಗಿದೆ. ಮೆಕಾನಿಕ್ ಮನೆಯವರು ಗ್ರೀಸ್ ತಿಂದು ಬದುಕುತ್ತಾರೆ ಎಂದು ಬಿಂಬಿಸಲಾಗಿದೆ. ಈ ಕಾರ್ಯಕ್ರಮ ಅತ್ಯಂತ ಜನಪ್ರಿಯ ಕಾರ್ಯಕ್ರಮವೂ ಆಗಿರುವುದರಿಂದ, ನಮ್ಮ ಬಗ್ಗೆ ಇಷ್ಟು ಕೊಳಕಾಗಿ ನಿಂದಿಸಿರುವುದರಿಂದ ನಾವುಗಳು ತಲೆ ಎತ್ತಿಕೊಂಡು ಓಡಾಡದಂತಾಗಿದೆ. ಇದೇ ಮಾತುಗಳನ್ನು ವೈದ್ಯ, ಪೊಲೀಸ್, ವಕೀಲ, ಪತ್ರಕರ್ತ, ಚಿತ್ರನಟರು ಅಥವಾ ಇನ್ಯಾವುದೇ ವೃತ್ತಿಪರ ಸಮುದಾಯದ ವಿರುದ್ಧ ಮಾತನಾಡಿದ್ದರೆ ಅವರು ಸುಮ್ಮನೆ ಇರುತ್ತಿದ್ದರೆ? ಅದಕ್ಕೂ ರಮೇಶ್ ಅರವಿಂದ್ ಅವರಾದಿಯಾಗಿ ಎಲ್ಲರೂ ಆಕೆಯನ್ನು ಹೊಗಳಿ ಅಟ್ಕ್ಕೇರಿಸುತ್ತಾರೆ. ಆ ಸಂದರ್ಭದಲ್ಲಿ ಇಡೀ ಒಂದು ಶ್ರಮಿಕ ವರ್ಗವನ್ನು ಕೊಚ್ಚೆ ಗುಂಡಿಯಲ್ಲಿರುವವರು ಹಾಗೂ ತಮ್ಮ ಕುಟುಂಬದವರಿಗೆ ಅನ್ನಕ್ಕೆ ಬದಲಾಗಿ ಗ್ರೀಸನ್ನು ತಿನ್ನಿಸುತ್ತಾರೆ ಎಂದು ಹೇಳುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

ಒಂದು ಶ್ರಮಿಕ ಸಮುದಾಯವನ್ನು ಕೊಚ್ಚೆ ಗುಂಡಿಯಲ್ಲಿರುವವರು, ಗ್ರೀಸ್ ತಿಂದು ಬದುಕುವವರು ಎಂದು ನಿಂದಿಸಿರುವ ಈ ಕಾರ್ಯಕ್ರಮ ಪ್ರಸಾರ ಮಾಡುವ ವಾಹಿನಿ ಮುಖ್ಯಸ್ಥರು, ಜಡ್ಜ್‌ಗಳಾದ ರಮೇಶ್ ಅರವಿಂದ್ ಮತ್ತು ಪ್ರೇಮ, ತರುಣ್ ಸುಧೀರ್, ಆಂಕರ್ ಅನುಶ್ರೀ, ಸ್ಪರ್ಧಿ ಗಗನ ಮೇಲೆ ಸಮುದಾಯಗಳ ನಡುವೆ ದ್ವೇಷ ಹರಡುವ, ಸಮಾಜದಲ್ಲಿ ಅಶಾಂತಿ ಹರಡುವ, ಒಂದಿಡೀ ಶ್ರಮಿಕ ಸಮುದಾಯವನ್ನು ಕೊಚ್ಚೆ ಎಂದು ನಿಂದಿಸಿ ಅವರ ಆತ್ಮಗೌರವಕ್ಕೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕೆಂದು ತಮ್ಮಲ್ಲಿ ಮನವಿ ಮಾಡುತ್ತೇವೆ ಎಂದು ಸಂಘ ಕೋರಿದೆ.

Continue Reading
Advertisement
V Srinivas Prasad
ಪ್ರಮುಖ ಸುದ್ದಿ1 min ago

V Srinivas Prasad: ಮಣ್ಣಲ್ಲಿ ಮಣ್ಣಾದ ಸಂಸದ ಶ್ರೀನಿವಾಸ ಪ್ರಸಾದ್; ಬೌದ್ಧ ಸಂಪ್ರದಾಯದಂತೆ ಅಂತ್ಯಕ್ರಿಯೆ

KL Rahul
ಕ್ರೀಡೆ9 mins ago

KL Rahul : ವಿಶ್ವ ಕಪ್​ ತಂಡಕ್ಕೆ ರಾಹುಲ್ ಕೈಬಿಟ್ಟ ಬಿಸಿಸಿಐಗೆ ಟಾಂಗ್​ ಕೊಟ್ಟ ಲಕ್ನೊ ಫ್ರಾಂಚೈಸಿ

Actress Summer Fashion
ಫ್ಯಾಷನ್9 mins ago

Actress Summer Fashion: ಬಾಲಿವುಡ್‌ನವರನ್ನು ಮೀರಿಸಿದ ನಟಿ ಶಿಲ್ಪಾ ಮಂಜುನಾಥ್‌ ಪೂಲ್‌ಸೈಡ್‌ ಹಾಟ್‌ ಲುಕ್‌!

Hassan Pen Drive Case
ಸಿನಿಮಾ12 mins ago

Hassan Pen Drive Case: ಪ್ರಜ್ವಲ್ ರೇವಣ್ಣ ಮೃಗಕ್ಕಿಂತ ಕಡೆ; ಕಿಡಿ ಕಾರಿದ ಬಹುಭಾಷಾ ನಟಿ ಪೂನಂ ಕೌರ್

Physical Abuse
ಕ್ರೈಂ32 mins ago

Physical Abuse: ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಅತ್ಯಾಚಾರ ಎಸಗಿದವನಿಗೆ 106 ವರ್ಷ ಜೈಲು ಶಿಕ್ಷೆ

Russia-Ukraine War
ರಷ್ಯಾ-ಉಕ್ರೇನ್‌ ಕದನ33 mins ago

Russia-Ukraine War: ಯುದ್ಧ ಭೂಮಿಯಿಂದ ಪಾರಾಗಲು 10 ಕಿ.ಮೀ ನಡೆದ 98 ವರ್ಷದ ವೃದ್ಧೆ!

Leg Swelling
ಆರೋಗ್ಯ39 mins ago

Leg Swelling: ಪ್ರಯಾಣಿಸುವಾಗ ನಮ್ಮ ಕಾಲುಗಳು ಊದಿಕೊಳ್ಳುವುದೇಕೆ?

Lok Sabha Election 2024 former MLA Venkatreddy Mudnala election campaign for Raichur Lok Sabha constituency BJP candidate Raja Amareshwar Nayaka
ರಾಜಕೀಯ43 mins ago

Lok Sabha Election 2024: ಬಿಜೆಪಿ ಅಭ್ಯರ್ಥಿ ರಾಜಾಅಮರೇಶ್ವರ ನಾಯಕಗೆ ಬೆಂಬಲಿಸಲು ವೆಂಕಟರೆಡ್ಡಿ ಮುದ್ನಾಳ ಮನವಿ

Manish Sisodia
ಪ್ರಮುಖ ಸುದ್ದಿ50 mins ago

Manish Sisodia : ಕೇಜ್ರಿವಾಲ್ ಜತೆಗಾರ ಮನೀಶ್ ಸಿಸೊಡಿಯಾ ಮತ್ತಷ್ಟು ದಿನ ಜೈಲಿನಲ್ಲೇ; ಜಾಮೀನು ಅರ್ಜಿ ವಜಾ

Mohammed Shami
ಕ್ರೀಡೆ50 mins ago

Mohammed Shami: ಸ್ಟಿಕ್​ ವಾಕರ್ ಸಹಾಯದೊಂದಿಗೆ ವ್ಯಾಯಾಮ ಆರಂಭಿಸಿದ ಶಮಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ13 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20241 day ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌