Dina Bhavishya read your daily horoscope predictions for july 04, 2023Dina Bhavishya : ಕುಂಭರಾಶಿಗೆ ಚಂದ್ರನ ಸಂಚಾರ; ಈ ರಾಶಿಯ ಉದ್ಯೋಗಿಗಳಿಗೆ ಶುಭ ಫಲ - Vistara News

ಪ್ರಮುಖ ಸುದ್ದಿ

Dina Bhavishya : ಕುಂಭರಾಶಿಗೆ ಚಂದ್ರನ ಸಂಚಾರ; ಈ ರಾಶಿಯ ಉದ್ಯೋಗಿಗಳಿಗೆ ಶುಭ ಫಲ

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷದ ಪಾಡ್ಯದ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (dina bhavishya) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

moon transit 2023 horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಗಳವಾರವಾದ ಇಂದು ಚಂದ್ರನು ಮಧ್ಯಾಹ್ನ 01:30ಕ್ಕೆ ಕುಂಭ ರಾಶಿಯನ್ನು ಪ್ರವೇಶಿಸುತ್ತಾನೆ. ಚಂದ್ರನು ಕುಂಭ ರಾಶಿಗೆ ಪ್ರವೇಶಿಸಿದ ನಂತರ ಮೇಷ, ಕಟಕ, ಸಿಂಹ, ವೃಶ್ಚಿಕ, ಮಕರ ಹಾಗೂ ಮೀನ ರಾಶಿಗೆ ಚಂದ್ರನ ಬಲ ದೊರೆಯಲಿದೆ. ಈ ವಿಶೇಷವಾದ ದಿನ ಮೂರು ರಾಶಿಯ ಉದ್ಯೋಗಿಗಳು ಶುಭ ಫಲ ಪಡೆಯಲಿದ್ದಾರೆ. ನಿಮ್ಮ ಇಂದಿನ ದಿನ ಹೇಗಿದೆ, ಭವಿಷ್ಯ ಏನು ಹೇಳುತ್ತದೆ (kannada dina bhavishya) ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (04-07-2023)

ಶ್ರೀ ಶಕೇ 1945, ಶೋಭಕೃತ್‌ ನಾಮ ಸಂವತ್ಸರ, ಉತ್ತರಾಯಣ,
ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ
ತಿಥಿ:
ಪಾಡ್ಯ 13:37 ವಾರ: ಮಂಗಳವಾರ
ನಕ್ಷತ್ರ: ಪೂರ್ವಾಷಾಢ 08:24/ಉತ್ತರಾಷಾಢ 29:38
ಯೋಗ: ಇಂದ್ರ 11:47 ಕರಣ: ಕೌಲವ 13:37
ಅಮೃತಕಾಲ: ಬೆಳಗ್ಗೆ 04 ಗಂಟೆ 08 ನಿಮಿಷದಿಂದ ಬೆಳಗ್ಗೆ 05 ಗಂಟೆ 34 ನಿಮಿಷದವರೆಗೆ.
ಇಂದಿನ ವಿಶೇಷ: ಅಶೂನ್ಯಶಯನ ವ್ರತ.

ಸೂರ್ಯೋದಯ : 05:58 ಸೂರ್ಯಾಸ್ತ : 06:50

ರಾಹುಕಾಲ : ಸಾಯಂಕಾಲ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಪ್ರಾತಃ ಕಾಲ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (dina bhavishya in kannada)

Horoscope Today

ಮೇಷ: ಆರ್ಥಿಕವಾಗಿ ಬಲಿಷ್ಠರಾಗುವಿರಿ. ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಒತ್ತಡ. ಹಳೆಯ ಸ್ನೇಹಿತರ ಜೊತೆ ಕಾಲ ಕಳೆಯುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಪ್ರಯಾಣ ಮಾಡುವ ಸಾಧ್ಯತೆ. ಅನಿರೀಕ್ಷಿತ ಲಾಭಗಳನ್ನು ಪಡೆಯುವಿರಿ. ಕುಟುಂಬದ ಸದಸ್ಯರ ಬೆಂಬಲ ದೊರೆಯಲಿದೆ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ. ಸಾಮಾಜಿಕ ಕಾರ್ಯಗಳಲ್ಲಿ ತೊಡಗುವ ಸಾಧ್ಯತೆ. ಉದ್ಯೋಗಿಗಳಿಗೆ ಒತ್ತಡ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಬಲವಂತವಾಗಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಪ್ರಸಂಗ ಬರಬಹುದು. ಇಂದಿನ ದಿವಸ ಗಾಬರಿಯಿಂದ ಇರುವ ಸಾಧ್ಯತೆ. ಅವಘಡ ಸಂಭವ. ನಿಧಾನವಾಗಿ ವಾಹನ ಚಾಲನೆ ಮಾಡಿ. ಕುಟುಂಬದ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುವಿರಿ. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಒತ್ತಡದ ಜೀವನಕ್ಕೆ ವಿಶ್ರಾಂತಿ ಸಿಗಲಿದೆ. ಹಣಕಾಸಿನ ಸಮಸ್ಯೆಗಳು ಪರಿಹಾರವಾಗಲಿವೆ. ಅಗತ್ಯ ವಸ್ತುಗಳ ಖರೀದಿ. ಸಹದ್ಯೋಗಿಗಳ ಬೆಂಬಲ ದೊರೆಯಲಿದೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಸಿಂಹ: ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಮಾನಸಿಕ ಆರೋಗ್ಯ ಸದೃಢ. ಅತಿ ಆವಶ್ಯಕ ಕೆಲಸದ ಕಾರಣ ದೈಹಿಕ ಶ್ರಮ. ಉದ್ಯೋಗಿಗಳಿಗೆ ಸಹಕಾರ. ಆರೋಗ್ಯ ಉತ್ತಮ. ಕೌಟುಂಬಿಕ ಕಲಹಗಳಿಗೆ ದ್ವನಿ ಆಗುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ: ಅನಿರೀಕ್ಷಿತ ಲಾಭಗಳನ್ನು ನಿರೀಕ್ಷಿಸಬಹುದು. ದೀರ್ಘಕಾಲದ ಪ್ರಯಾಣ ಸಾಧ್ಯತೆ. ನಿರೀಕ್ಷೆಗೆ ತಕ್ಕಂತೆ ಫಲ ಸಿಗಲಿದೆ. ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವ ಅವಕಾಶ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಯಶಸ್ಸು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ. ಕುಟುಂಬದಲ್ಲಿನ ಹಿರಿಯರೊಂದಿಗೆ ವಾದಕ್ಕೆ ಇಳಿಯುವುದು ಬೇಡ. ಆರ್ಥಿಕ ಪ್ರಗತಿ ಸಾಧಾರಣ. ಹರಟೆಯಿಂದ ಕಾಲ ಹರಣ ಮಾಡುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ: ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣವಾಗುವವು. ಸಕಾರಾತ್ಮಕ ಆಲೋಚನೆ ಮಾಡಿ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಮಂಗಳವಾರವಾದ ಇಂದು ಯಾವ ದೇವರನ್ನು ಪೂಜೆ ಮಾಡಬೇಕು? ಈ ವಿಡಿಯೋ ನೋಡಿ.
Horoscope Today

ಧನಸ್ಸು: ಉತ್ತಮ ಫಲಿತಾಂಶ ದೊರೆಯಲಿದೆ. ಆತ್ಮವಿಶ್ವಾಸ ಹೆಚ್ಚಲಿದೆ. ಕುಟುಂಬದ ಸದಸ್ಯರ ಮೇಲೆ ಕೋಪಗೊಳ್ಳುವುದು ಬೇಡ. ಆರೋಗ್ಯ ಮಧ್ಯಮ. ಆರ್ಥಿಕ ಪ್ರಗತಿ ಸಾಧಾರಣ. ಉದ್ಯೋಗಿಗಳಿಗೆ ಉತ್ತಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಕರ: ಸಾಮಾಜಿಕ ಕಾರ್ಯಗಳಲ್ಲಿ ಭಾಗಿ. ಪ್ರಯಾಣ ಮಾಡುವ ಸಾಧ್ಯತೆ. ಆರ್ಥಿಕ ಪ್ರಗತಿ ಉತ್ತಮ. ಪ್ರಮುಖ ಯೋಜನೆ ಕೈಗೊಳ್ಳುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ನಿಮ್ಮ ವರ್ತನೆ ಇತರರಿಗೆ ಮುಜುಗರ ಉಂಟು ಮಾಡುವ ಸಾಧ್ಯತೆ. ಯಾರೊಂದಿಗೂ ಅತಿಯಾದ ಸಲುಗೆ ಬೇಡ. ಆತುರದ ಮಾತುಗಳು ಅಪಾಯ ತರುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

ಇದನ್ನೂ ಓದಿ : Mars Transit 2023 : ಜು.1ಕ್ಕೆ ಸಿಂಹ ರಾಶಿಗೆ ಮಂಗಳನ ಸಂಚಾರ; ಈ ಐದು ರಾಶಿಯವರಿಗೆ ಅದೃಷ್ಟವೋ ಅದೃಷ್ಟ!

Horoscope Today

ಮೀನ: ಒತ್ತಡದ ಕೆಲಸದಿಂದ ಮುಕ್ತಿ. ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವುದು. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

KKR vs SRH: ನಾಳೆ ಮೊದಲ ಕ್ವಾಲಿಫೈಯರ್‌ ಪಂದ್ಯ; ಗೆದ್ದವರಿಗೆ ನೇರ ಫೈನಲ್‌ ಸೋತವರಿಗೆ ಇನ್ನೊಂದು ಅವಕಾಶ

KKR vs SRH: 25 ವರ್ಷದ ಎಡಗೈ ದಾಂಡಿಗ ಅಭಿಷೇಕ್​ ಶರ್ಮ ಮತ್ತು ಟ್ರಾವಿಸ್​ ಹೆಡ್​​ ಜಿದ್ದಿಗೆ ಬಿದ್ದವತರಂತೆ ಬ್ಯಾಟ್​ ಬೀಸಿ ಉತ್ತಮ ಆರಂಭ ಒದಗಿಸುತ್ತಿದ್ದಾರೆ. ಈ ಜೋಡಿ ಪವರ್​ ಪ್ಲೇ ತನಕ ಆಡಿದರೆ ದೊಡ್ಡ ಮೊತ್ತ ಹರಿದು ಬರುವುದರಲ್ಲಿ ಯಾವುದೇ ಅನುಮಾನ ಬೇಡ. ಈಗಾಗಲೇ ಈ ಜೋಡಿ ಲೀಗ್​ನಲ್ಲಿ ಅಬ್ಬರದ ಬ್ಯಾಟಿಂಗ್​ ನಡೆಸಿ 5 ಓವರ್​ನಲ್ಲಿಯೇ 100ರ ಗಡಿ ದಾಟಿದ ದಾಖಲೆಯನ್ನು ಕೂಡ ಹೊಂದಿದ್ದಾರೆ

VISTARANEWS.COM


on

KKR vs SRH
Koo

ಅಹಮದಾಬಾದ್​: 17ನೇ ಆವೃತ್ತಿಯ ಐಪಿಎಲ್‌(IPL 2024) ಪಂದ್ಯಾವಳಿ ತನ್ನ ಲೀಗ್‌ ವ್ಯವಹಾರವನ್ನು ಮುಗಿಸಿದೆ. ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್​ ಕಿಂಗ್ಸ್​ ಪ್ಲೇ ಆಫ್‌ ರೇಸ್‌ನಿಂದ ಹೊರಬಿದ್ದದ್ದು, ಪಾತಾಳದಲ್ಲಿದ್ದ ಆರ್​ಸಿಬಿ ಸತತವಾಗಿ 6 ಪಂದ್ಯಗಳನ್ನು ಗೆದ್ದು ಫೀನಿಕ್ಸ್‌ನಂತೆ ಎದ್ದು ನಿಂತು 4ನೇ ಸ್ಥಾನ ಅಲಂಕರಿಸಿದ್ದೆಲ್ಲ ಲೀಗ್‌ ಹಂತದ ಅಚ್ಚರಿ. ಇನ್ನು ಕ್ವಾಲಿಫೈಯರ್​ ಮತ್ತು ಎಲಿಮಿನೇಟರ್​ ಪಂದ್ಯದ ಕೌತುಕ.

ನಾಳೆ(ಮಂಗಳವಾರ) ನಡೆಯುವ ಮೊದಲ ಕ್ವಾಲಿಫೈಯರ್‌(KKR vs SRH Qualifier 1) ಪಂದ್ಯದಲ್ಲಿ ಈ ಬಾರಿಯ ಕೂಟದ ಅತ್ಯಂತ ಬಲಿಷ್ಠ ತಂಡಗಳಾದ ಕೋಲ್ಕತ್ತಾ ನೈಟ್​ ರೈಡರ್ಸ್(KKR vs SRH)​ ಮತ್ತು ಸನ್​ರೈಸರ್ಸ್​ ಹೈದರಾಬಾದ್​ ತಂಡಗಳು ಕಣಕ್ಕಿಳಿಯಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುವ ಇತ್ತಂಡಗಳ ಈ ಪಂದ್ಯ ಜಿದ್ದಾಜಿದ್ದಿ ಹೋರಾಟವೊಂದಕ್ಕೆ ಸಾಕ್ಷಿಯಾಗುವ ಎಲ್ಲ ಸಾಧ್ಯತೆ ಇದೆ. ಇದರ ಮಧ್ಯೆ ಮಳೆಯ ಭೀತಿ ಕೂಡ ಎದುರಾಗಿದೆ.

ಇತ್ತಂಡಗಳಲ್ಲಿ ಕೆಕೆಆರ್​ ಲೀಗ್‌ ಹಂತದ ಅಗ್ರಸ್ಥಾನಿ ಎಂಬ ಹೆಗ್ಗಳಿಕೆ ಇದೆ. ಅಷ್ಟೇ ಅಲ್ಲ, ಲೀಗ್‌ ಹಂತದಲ್ಲಿ ಎದುರಾದ ಒಂದು ಪಂದ್ಯಗಳಲ್ಲಿ ಹೈದರಾಬಾದ್​ಗೆ 4 ರನ್​ ಅಂತರದ ಸೋಲುಣಿಸಿದ ಹಿರಿಮೆಯನ್ನೂ ಹೊಂದಿದೆ. ಜತೆಗೆ ಉಭಯ ತಂಡಗಳು 26 ಬಾರಿ ಮುಖಾಮುಖಿಯಾಗಿದ್ದು ಈ ಪೈಕಿ ಕೆಕೆಆರ್​ 17 ಪಂದ್ಯ ಗೆದ್ದಿದೆ. ಹೈದರಾಬಾದ್​ ಗೆದ್ದಿರುವುದು ಕೇವಲ 9 ಪಂದ್ಯ ಮಾತ್ರ. ಈ ಲೆಕ್ಕಾಚಾರದಲ್ಲಿ ಕೆಕೆಆರ್​ ನೆಚ್ಚಿನ ತಂಡ ಎಂಬುದರಲ್ಲಿ ಅನುಮಾನವಿಲ್ಲ.

ಹೆಡ್​-ಅಭಿಷೇಕ್​ ಬಲ


25 ವರ್ಷದ ಎಡಗೈ ದಾಂಡಿಗ ಅಭಿಷೇಕ್​ ಶರ್ಮ ಮತ್ತು ಟ್ರಾವಿಸ್​ ಹೆಡ್​​ ಜಿದ್ದಿಗೆ ಬಿದ್ದವತರಂತೆ ಬ್ಯಾಟ್​ ಬೀಸಿ ಉತ್ತಮ ಆರಂಭ ಒದಗಿಸುತ್ತಿದ್ದಾರೆ. ಈ ಜೋಡಿ ಪವರ್​ ಪ್ಲೇ ತನಕ ಆಡಿದರೆ ದೊಡ್ಡ ಮೊತ್ತ ಹರಿದು ಬರುವುದರಲ್ಲಿ ಯಾವುದೇ ಅನುಮಾನ ಬೇಡ. ಈಗಾಗಲೇ ಈ ಜೋಡಿ ಲೀಗ್​ನಲ್ಲಿ ಅಬ್ಬರದ ಬ್ಯಾಟಿಂಗ್​ ನಡೆಸಿ 5 ಓವರ್​ನಲ್ಲಿಯೇ 100ರ ಗಡಿ ದಾಟಿದ ದಾಖಲೆಯನ್ನು ಕೂಡ ಹೊಂದಿದ್ದಾರೆ. ಅಭಿಷೇಕ್​ ಶರ್ಮ ಈ ಬಾರಿಯ ಕೂಟದಲ್ಲಿ 41 ಸಿಕ್ಸರ್​ ಬಾರಿಸಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಹೆನ್ರಿಚ್​ ಕ್ಲಾಸೆನ್​, ಐಡೆನ್​ ಮಾರ್ಕ್ರಮ್​ ಸಿಡಿದು ನಿಂತು ಪಂದ್ಯದ ಗತಿಯನ್ನೇ ಬದಲಿಸಬಲ್ಲ ಸಾಮರ್ಥ್ಯ ಹೊಂದಿದ್ದಾರೆ. ಬೌಲಿಂಗ್​ನಲ್ಲಿ ನಾಯಕ ಪ್ಯಾಟ್​ ಕಮಿನ್ಸ್​, ಭುವನೇಶ್ವರ್​ ಕುಮಾರ್​, ಟಿ. ನಟರಾಜನ್​ ಎದುರಾಳಿಗಳನ್ನು ಕಟ್ಟಿ ಹಾಕುವಲ್ಲಿ ಸಮರ್ಥರಿದ್ದಾರೆ.

ಇದನ್ನೂ ಓದಿ KKR vs SRH Qualifier 1: ಕೆಕೆಆರ್​-ಹೈದರಾಬಾದ್​ ಮುಖಾಮುಖಿ ದಾಖಲೆ, ಪಿಚ್​ ರಿಪೋರ್ಟ್​ ಹೇಗಿದೆ?

ಕೆಕೆಆರ್​ ಕೂಡ ಸಮರ್ಥ ತಂಡ


ಗೌತಮ್​ ಗಂಭಿರ್​ ಅವರ ಮಾರ್ಗದರ್ಶನ ಮತ್ತು ಆಟಗಾರರ ಸಂಘಟಿತ ಪ್ರದರ್ಶನ ಕೆಕೆಆರ್​ ಪಾಲಿನ ಬಲ. ಅದರಲ್ಲೂ ಆಲ್​ರೌಂಡರ್​ ಸುನೀಲ್​ ನರೈನ್​ ಅವರಂತು ಈ ಬಾರಿ ಪ್ರಚಂಡ ಫಾರ್ಮ್​ನಲ್ಲಿದ್ದಾರೆ. ತಂಡಕ್ಕೆ ಹಿನ್ನಡೆಯಾಗಿರುವುದೆಂದರೆ ಇಂಗ್ಲೆಂಡ್​ನ ಫಿಲ್​ ಸಾಲ್ಟ್ ಪಾಕ್​ ವಿರುದ್ಧದ ಟಿ20 ಸರಣಿಯ ಭಾಗವಾಗಿ ತವರಿಗೆ ಮರಳಿದ್ದು. ಹೀಗಾಗಿ ಅವರ ತಂಡ ಇವರ ಸೇವೆ ಕಳೆದುಕೊಂಡಿದೆ. ಇವರ ಸ್ಥಾನದಲ್ಲಿ ಅಫಘಾನಿಸ್ತಾನದ ರಹಮಾನುಲ್ಲಾ ಗುರ್ಬಾಜ್ ಈ ಪಂದ್ಯದಲ್ಲಿ ಆಡಲಿದ್ದಾರೆ. ಮೊದಲ ಪಂದ್ಯವನ್ನಾಡುತ್ತಿರುವ ಕಾರಣ ಅವರ ಫಾರ್ಮ್​ ಹೇಗಿರಲಿದೆ ಎನ್ನುವುದು ಕೂಡ ಇಲ್ಲಿ ಮುಖ್ಯವಾಗಿದೆ.

ಆ್ಯಂಡ್ರೆ ರೆಸಲ್​ ಈ ಬಾರಿ ಬ್ಯಾಟಿಂಗ್​ ಮತ್ತು ಬೌಲಿಂಗ್​ ಎರಡೂ ವಿಭಾಗದಲ್ಲಿಯೂ ಉತ್ತಮ ಪ್ರದರ್ಶನ ತೋರಿದ್ದಾರೆ. ಯುವ ಆಟಗಾರ ಆಂಗ್ಕ್ರಿಶ್ ರಘುವಂಶಿ, ಗಾಯದಿಂದ ಚೇತರಿಕೆ ಕಂಡು ಕಮ್​ಬ್ಯಾಕ್​ ಮಾಡಿರುವ ನಿತೇಶ್​ ರಾಣಾ, ವೆಂಕಟೇಶ್​ ಅಯ್ಯರ್​ ಮತ್ತು ನಾಯಕ ಶ್ರೇಯಸ್​ ಅಯ್ಯರ್​ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್​ ನೆರವು ನೀಡಲಿದ್ದಾರೆ. ರಿಂಕು ಸಿಂಗ್​ ಕಳೆದ ಆವೃತ್ತಿಯಲ್ಲಿ ತೋರಿದ ಪ್ರದರ್ಶನ ಇದುವರೆಗೂ ತೋರಿಲ್ಲ. ಹೀಗಾಗಿ ಈ ಮಹತ್ವದ ಪಂದ್ಯದಲ್ಲಿ ಅವರು ಅಬ್ಬರಿಸುವ ಅನಿವಾರ್ಯತೆ ಇದೆ. 24 ಕೋಟಿ ವೀರ ಮಿಚೆಲ್​ ಸ್ಟಾರ್ಕ್​ ಈ ಪಂದ್ಯದಲ್ಲಾದರೂ ತಾವು ಪಡೆದ ಈ ಮೊತ್ತಕ್ಕೆ ನ್ಯಾಯ ಒದಗಿಸಲೇ ಬೇಕು. ದುಬಾರಿ ಮೊತ್ತ ಪಡೆದರೂ ಕೂಡ ಅವರಿಂದ ನಿರೀಕ್ಷಿತ ಪ್ರದರ್ಶನ ಕಂಡುಬಂದಿಲ್ಲ.

Continue Reading

ವಿದೇಶ

ಇಸ್ರೇಲ್‌ ಪಿಎಂ ಬೆಂಜಮಿನ್‌ ನೆತನ್ಯಾಹು, ಹಮಾಸ್‌ ಉಗ್ರರಿಗೆ ಜಾಗತಿಕ ಕೋರ್ಟ್‌ ಅರೆಸ್ಟ್‌ ವಾರೆಂಟ್! ಶೀಘ್ರ ಬಂಧನ?

ಕಳೆದ ಏಳು ತಿಂಗಳಲ್ಲಿ ಇಸ್ರೇಲ್‌ ಹಾಗೂ ಪ್ಯಾಲೆಸ್ತೀನ್‌ನಲ್ಲಿ ನಡೆದ ಹಿಂಸಾಚಾರ, ಮಾನವ ಹಕ್ಕುಗಳ ದಮನ, ಪ್ರಾದೇಶಿಕ ಅಸ್ಥಿರತೆಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಬೆಂಜಮಿನ್‌ ನೆತನ್ಯಾಹು ಸೇರಿ ಹಲವರ ವಿರುದ್ಧ ಅರೆಸ್ಟ್‌ ವಾರೆಟ್‌ ಹೊರಡಿಸಬೇಕು ಎಂಬುದಾಗಿ ಐಸಿಸಿ ಆದೇಶಿಸಿದೆ ಎಂದು ಕೋರ್ಟ್‌ನ ಮುಖ್ಯ ಪ್ರಾಸಿಕ್ಯೂಟರ್‌ ಆಗಿರುವ ಕರೀಮ್‌ ಖಾನ್‌ ಮಾಹಿತಿ ನೀಡಿದ್ದಾರೆ.

VISTARANEWS.COM


on

Benjamin Netanyhu
Koo

ಹೇಗ್:‌ ಕಳೆದ ಅಕ್ಟೋಬರ್‌ನಿಂದಲೂ ಗಾಜಾ ನಗರದ ಮೇಲೆ ಇಸ್ರೇಲ್‌ ಪ್ರತಿದಾಳಿ ಮಾಡುತ್ತಿದೆ. ಹಮಾಸ್‌ ಉಗ್ರರ ದಾಳಿಗೆ ಪ್ರತಿಯಾಗಿ ಇಸ್ರೇಲ್‌ ದಾಳಿ ನಡೆಸುತ್ತಿದೆ. ಇದರ ಬೆನ್ನಲ್ಲೇ, ಯುದ್ಧಾಪರಾಧದ ಹಿನ್ನೆಲೆಯಲ್ಲಿ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು (Benjamin Netanyahu) ಹಾಗೂ ಮೂವರು ಹಮಾಸ್‌ ಉಗ್ರರ ವಿರುದ್ಧ ಇಂಟರ್‌ನ್ಯಾಷನಲ್‌ ಕ್ರಿಮಿನಲ್‌ ಕೋರ್ಟ್‌ (International Criminal Court) ಅರೆಸ್ಟ್‌ ವಾರಂಟ್‌ ಹೊರಡಿಸಲು ಮುಂದಾಗಿದೆ. ಯುದ್ಧಾಪರಾಧದ ಹಿನ್ನೆಲೆಯಲ್ಲಿ ಅರೆಸ್ಟ್‌ ವಾರಂಟ್‌ ಹೊರಡಿಸಲಿದೆ ಎಂದು ಹೇಳಲಾಗುತ್ತಿದೆ.

ಬೆಂಜಮಿನ್‌ ನೆತನ್ಯಾಹು, ಇಸ್ರೇಲ್‌ ರಕ್ಷಣಾ ಸಚಿವ ಯೊಯಾವ್‌ ಗ್ಯಾಲಂಟ್‌, ಹಮಾಸ್‌ ಉಗ್ರ ಸಂಘಟನೆಯ ಯೆಹಿಯಾ ಸಿನ್ವರ್‌, ಮೊಹಮ್ಮದ್‌ ಡೈಫ್‌ ಹಾಗೂ ಇಸ್ಮಾಯಿಲ್‌ ಹನಿಯೇಹ್‌ ವಿರುದ್ಧ ಅರೆಸ್ಟ್‌ ವಾರಂಟ್‌ ಹೊರಡಿಸಬೇಕು ಎಂಬುದು ಜಾಗತಿಕ ಕೋರ್ಟ್‌ನ ಆದೇಶವಾಗಿದೆ. ಕಳೆದ ಏಳು ತಿಂಗಳಲ್ಲಿ ಇಸ್ರೇಲ್‌ ಹಾಗೂ ಪ್ಯಾಲೆಸ್ತೀನ್‌ನಲ್ಲಿ ನಡೆದ ಹಿಂಸಾಚಾರ, ಮಾನವ ಹಕ್ಕುಗಳ ದಮನ, ಪ್ರಾದೇಶಿಕ ಅಸ್ಥಿರತೆಗೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಇವರ ವಿರುದ್ಧ ಅರೆಸ್ಟ್‌ ವಾರೆಟ್‌ ಹೊರಡಿಸಬೇಕು ಎಂಬುದಾಗಿ ಐಸಿಸಿ ಆದೇಶಿಸಿದೆ ಎಂದು ಕೋರ್ಟ್‌ನ ಮುಖ್ಯ ಪ್ರಾಸಿಕ್ಯೂಟರ್‌ ಆಗಿರುವ ಕರೀಮ್‌ ಖಾನ್‌ ಮಾಹಿತಿ ನೀಡಿದ್ದಾರೆ.

ಕರೀಮ್‌ ಖಾನ್‌ ಅವರು ಅರೆಸ್ಟ್‌ ವಾರಂಟ್‌ ಕುರಿತು ಸಲ್ಲಿಸುವ ದಾಖಲೆಗಳ ಆಧಾರದ ಮೇಲೆ ಅಂತಾರಾಷ್ಟ್ರೀಯ ಕ್ರಿಮಿನಲ್‌ ಕೋರ್ಟ್‌ ನ್ಯಾಯಮೂರ್ತಿಗಳು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಅರೆಸ್ಟ್‌ ವಾರಂಟ್‌ ಹೊರಡಿಸಿದರೂ ಬೆಂಜಮಿನ್‌ ನೆತನ್ಯಾಹು ಹಾಗೂ ಅವರ ರಕ್ಷಣಾ ಸಚಿವರ ಬಂಧನ ಆಗುವುದಿಲ್ಲ ಎಂದು ತಿಳಿದುಬಂದಿದೆ. ಇಂಟರ್‌ನ್ಯಾಷನಲ್‌ ಕ್ರಿಮಿನಲ್‌ ಕೋರ್ಟ್‌ನ ಸದಸ್ಯತ್ವವನ್ನು ಇಸ್ರೇಲ್‌ ಪಡೆದಿಲ್ಲ. ಹಾಗಾಗಿ, ಕೋರ್ಟ್‌ ಅರೆಸ್ಟ್‌ ವಾರಂಟ್‌ ಹೊರಡಿಸಿದರೂ ಬಂಧನ ಸಾಧ್ಯವಿಲ್ಲ ಎಂದೇ ವಿಶ್ಲೇಷಿಸಲಾಗುತ್ತಿದೆ.

ಅಕ್ಟೋಬರ್ 7ರಂದು ಹಮಾಸ್ ಇಸ್ರೇಲ್ ಮೇಲೆ ದಾಳಿ ನಡೆಸಿ 1,200 ನಾಗರಿಕರ ಸಾವಿಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಇಸ್ರೇಲ್, ಗಾಜಾಪಟ್ಟಿಯಲ್ಲಿನ ಹಮಾಸ್ ಉಗ್ರರನ್ನು ನಾಶ ಮಾಡುವ ಪಣತೊಟ್ಟು, ಸೇನಾ ಕಾರ್ಯಾಚರಣೆಯನ್ನು ಕೈಗೆತ್ತಿಕೊಂಡಿದೆ. ಗಾಜಾ ನಗರದ ಮೇಲೆ ಇಸ್ರೇಲ್‌ ನಡೆಸುತ್ತಿರುವ ನಿರಂತರ ದಾಳಿಗಳಿಂದಾಗಿ ಸಾವಿರಾರು ಜನ ಮೃತಪಟ್ಟಿದ್ದಾರೆ. ಲಕ್ಷಾಂತರ ಮಂದಿ ನಿರಾಶ್ರಿತರಾಗಿದ್ದಾರೆ. ಸಾವಿರಾರು ಕಟ್ಟಡಗಳು ಧರೆಗುರುಳಿವೆ. ಇಷ್ಟಾದರೂ ಇಸ್ರೇಲ್‌ ಪ್ರತಿದಾಳಿ ನಿಲ್ಲಿಸುತ್ತಿಲ್ಲ.

ಇದನ್ನೂ ಓದಿ: Al Jazeera: ಹಮಾಸ್‌ ಉಗ್ರರ ಪರ ನಿಲುವು; ಇಸ್ರೇಲ್‌ನಲ್ಲಿ ಅಲ್‌ಜಜೀರಾ ಚಾನೆಲ್‌ ಬಂದ್‌ ಮಾಡಿದ ನೆತನ್ಯಾಹು!

Continue Reading

ರಾಜಕೀಯ

Legislative Council Election: ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ದಿನಾಂಕ ಫಿಕ್ಸ್;‌ ಜೂನ್‌ 13ಕ್ಕೆ ಮತದಾನ

Legislative Council Election: ನಾಮಪತ್ರ ಸಲ್ಲಿಸಲು ಜೂನ್‌ 3 ಕೊನೆಯ ದಿನವಾಗಿದೆ. ಜೂನ್ 4ರಂದು ನಾಮಪತ್ರ ಪರಿಶೀಲನಾ ಪ್ರಕ್ರಿಯೆ ನಡೆಯಲಿದೆ. ಅಲ್ಲದೆ, ಮತದಾನದ ದಿನವಾದ ಜೂನ್‌ 13ರಂದೇ ಮತ ಎಣಿಕೆಯನ್ನೂ ನಡೆಸಲಾಗುವುದು ಎಂದು ಆಯೋಗ ಹೇಳಿದೆ. ಈಗಿರುವ ಕರ್ನಾಟಕ ವಿಧಾನ ಪರಿಷತ್ತಿನ 11 ಸದಸ್ಯರ ಅವಧಿಯು ಮುಂದಿನ ತಿಂಗಳು ಮುಕ್ತಾಯವಾಗಲಿದೆ. ಜೂನ್‌ 17ರಂದು ಅವಧಿ ಮುಕ್ತಾಯವಾಗುತ್ತಿರುವುದರಿಂದ ಆ ಸದಸ್ಯತ್ವ ಸ್ಥಾನಗಳನ್ನು ಭರ್ತಿ ಮಾಡಲು ಮುಂದಾಗಲಾಗಿದೆ. ವಿಧಾನಸಭೆಯ ಸದಸ್ಯರು ಇವರನ್ನು ಆಯ್ಕೆ ಮಾಡುತ್ತಾರೆ.

VISTARANEWS.COM


on

Legislative Council Election dates fixedVoting on June 13
Koo

ಬೆಂಗಳೂರು: ರಾಜ್ಯದ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣಾ ದಿನಾಂಕವನ್ನು (Legislative Council Election) ಘೋಷಣೆ ಮಾಡಲಾಗಿದ್ದು, ಜೂನ್‌ 13ರಂದು ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ನಾಮಪತ್ರ ಸಲ್ಲಿಸಲು ಜೂನ್‌ 3 ಕೊನೆಯ ದಿನವಾಗಿದೆ. ಜೂನ್ 4ರಂದು ನಾಮಪತ್ರ ಪರಿಶೀಲನಾ ಪ್ರಕ್ರಿಯೆ ನಡೆಯಲಿದೆ. ಅಲ್ಲದೆ, ಮತದಾನದ ದಿನವಾದ ಜೂನ್‌ 13ರಂದೇ ಮತ ಎಣಿಕೆಯನ್ನೂ ನಡೆಸಲಾಗುವುದು ಎಂದು ಆಯೋಗ ಹೇಳಿದೆ. ಈಗಿರುವ ಕರ್ನಾಟಕ ವಿಧಾನ ಪರಿಷತ್ತಿನ 11 ಸದಸ್ಯರ ಅವಧಿಯು ಮುಂದಿನ ತಿಂಗಳು ಮುಕ್ತಾಯವಾಗಲಿದೆ.

Legislative Council Election dates fixedVoting on June 13

ಜೂನ್‌ 17ರಂದು ಅವಧಿ ಮುಕ್ತಾಯವಾಗುತ್ತಿರುವುದರಿಂದ ಆ ಸದಸ್ಯತ್ವ ಸ್ಥಾನಗಳನ್ನು ಭರ್ತಿ ಮಾಡಲು ಮುಂದಾಗಲಾಗಿದೆ. ಶಾಸಕರು (ವಿಧಾನಸಭೆಯ ಸದಸ್ಯರು) ಇವರನ್ನು ಆಯ್ಕೆ ಮಾಡುತ್ತಾರೆ.

ಈ ಪರಿಷತ್ ಸದಸ್ಯರ ಅವಧಿ ಮುಕ್ತಾಯ

  1. ಅರವಿಂದ್ ಕುಮಾರ್ ಅರಳಿ
  2. ಎನ್.ಎಸ್. ಬೋಸರಾಜು
  3. ಕೆ. ಗೋವಿಂದರಾಜ್
  4. ಡಾ. ತೇಜಸ್ವಿನಿ ಗೌಡ
  5. ಮುನಿರಾಜು ಗೌಡ ಪಿ.ಎಂ.
  6. ಕೆ.ಪಿ. ನಂಜುಂಡಿ ವಿಶ್ವಕರ್ಮ
  7. ಬಿ.ಎಂ. ಫಾರೂಕ್
  8. ರಘುನಾಥ ರಾವ್ ಮಲ್ಕಾಪುರೆ
  9. ಎನ್. ರವಿ ಕುಮಾರ್
  10. ಎಸ್. ರುದ್ರೇಗೌಡ
  11. ಕೆ ಹರೀಶ್ ಕುಮಾರ್

ಅಧಿಸೂಚನೆಯಿಂದ ಮತ ಎಣಿಕೆ ವರೆಗೆ

  1. ಅಧಿಸೂಚನೆ ಹೊರಡಿಸುವ ದಿನಾಂಕ: ಮೇ 27 (ಸೋಮವಾರ)
  2. ನಾಮಪತ್ರ ಸಲ್ಲಿಕೆಗೆ ಕೊನೇ ದಿನಾಂಕ: ಜೂನ್ 03 (ಸೋಮವಾರ)
  3. ನಾಮಪತ್ರ ಪರಿಶೀಲನೆ: ಜೂನ್ 04 (ಮಂಗಳವಾರ)
  4. ನಾಮಪತ್ರ ಹಿಂಪಡೆಯಲು ಕೊನೇ ದಿನಾಂಕ: ಜೂನ್ 06 (ಗುರುವಾರ)
  5. ಮತದಾನ ದಿನಾಂಕ: ಜೂನ್ 13 (ಗುರುವಾರ)
  6. ಮತದಾನದ ಸಮಯ: ಬೆಳಗ್ಗೆ 09 ಗಂಟೆಯಿಂದ ಸಂಜೆ 4 ಗಂಟೆವರೆಗೆ
  7. ಮತ ಎಣಿಕೆ ದಿನಾಂಕ: ಜೂನ್ 13 (ಗುರುವಾರ) ಸಂಜೆ 05:00 ಗಂಟೆಗೆ
  8. ಚುನಾವಣೆ ಮುಗಿಯುವ ದಿನಾಂಕ: ಜೂನ್ 15 (ಶನಿವಾರ)

MLC Election: ವಿಧಾನ ಪರಿಷತ್‌ ಚುನಾವಣೆ; ನೈಋತ್ಯ ಶಿಕ್ಷಕರ ಕ್ಷೇತ್ರದ 1 ನಾಮಪತ್ರ ತಿರಸ್ಕೃತ

ಮೈಸೂರು: ಕರ್ನಾಟಕ ವಿಧಾನ ಪರಿಷತ್‌ನ ನೈಋತ್ಯ ಪದವೀಧರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024ಕ್ಕೆ ಸಂಬಂಧಿಸಿ ನಾಮಪತ್ರ ಪರಿಶೀಲನೆ ನಡೆಸಲಾಗಿದೆ (MLC Election). ಈ ಪೈಕಿ ಒಂದು ನಾಮಪತ್ರ ತಿರಸ್ಕೃತಗೊಂಡಿದೆ. ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ ಎಂ.ಸತೀಶ್‌ ಕಾರಂತ್‌ ಅವರ ನಾಮಪತ್ರ ತಿರಸ್ಕೃತಗೊಂಡಿದೆ.

ಚುನಾವಣೆ ಅಧಿಕಾರಿ ಡಾ. ಪ್ರಕಾಶ್ ನೇತೃತ್ವದಲ್ಲಿ ಪರಿಶೀಲನೆ ನಡೆಯಿತು. ಈ ವೇಳೆ ಪಕ್ಷೇತರ ಅಭ್ಯರ್ಥಿಯಾಗಿ ಸತೀಶ್‌ ಕಾರಂತ್‌ ಅವರು ಸಲ್ಲಿಸಿದ್ದ ನಾಮಪತ್ರದಲ್ಲಿ ನಮೂನೆ-26 ನೋಟರಿ ಅಫಿಡವಿತ್‌ ಮತ್ತು ವಿಧಾನಸಭಾ ಮತದಾರರ ಪಟ್ಟಿಯ ದೃಢೀಕೃತ ಪ್ರತಿಯನ್ನು ಸಲ್ಲಿಸದಿರುವುದು ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.

ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ 13 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಿದ್ದು, ಎಲ್ಲ 13 ನಾಮಪತ್ರವೂ ಅಂಗೀಕಾರಗೊಂಡಿದೆ. ನೈಋತ್ಯ ಪದವೀಧರ ಕ್ಷೇತ್ರಕ್ಕೆ 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 11 ಅಭ್ಯರ್ಥಿಗಳ ನಾಮಪತ್ರವೂ ಸ್ವೀಕೃತಗೊಂಡಿದೆ. ನೈಋತ್ಯ ಪದವೀಧರ ಕ್ಷೇತ್ರಕ್ಕೆ 10 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾಗಿದ್ದು, ಈ ಪೈಕಿ ಎಂ.ಸತೀಶ್‌ ಕಾರಂತ್‌ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ವಿಧಾನ ಪರಿಷತ್‌ ಚುನಾವಣೆಗೆ ಮೇ 9ರಂದು ಅದಧಿಸೂಚನೆ ಹೊರಡಿಸಲಾಗಿತ್ತು. ಮೇ 17ರ ತನಕ ನಾಮಪತ್ರ ಪರಿಶೀಲನೆ ನಡೆಸಲಾಯಿತು. ಮೇ 20ರ ಅಪರಾಹ್ನ 3 ಗಂಟೆಯವರೆಗೆ ನಾಮಪತ್ರ ಹಿಂಪಡೆಯಲು ಅವಕಾಶವಿದೆ.

ನಾಮಪತ್ರ ವಾಪಸ್ ಪಡೆಯಲು ನಿರ್ಧರಿಸಿದ ಬಿಜೆಪಿ ಬಂಡಾಯ ಅಭ್ಯರ್ಥಿ

ಬೆಂಗಳೂರು: ʼʼವಿಧಾನಪರಿಷತ್ತಿನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾಗಿ, ಆಕಾಂಕ್ಷಿಯಾಗಿದ್ದು ನಾಮಪತ್ರ ಸಲ್ಲಿಸಿದ್ದೆ. ಪಕ್ಷ ನಿಮ್ಮನ್ನು, ನಿಮ್ಮ ಸೇವೆಯನ್ನು ಮುಂದೆ ಗುರುತಿಸಲಿದೆ ಎಂದು ಹಿರಿಯರಾದ ಯಡಿಯೂರಪ್ಪ ಅವರು ಹೇಳಿದ್ದಾರೆ. ಅಮರನಾಥ ಪಾಟೀಲರನ್ನು ಬೆಂಬಲಿಸಿ ಎಂದು ಪಕ್ಷದ ಇತರ ನಾಯಕರು ಸೂಚಿಸಿದ್ದಾರೆ. ಅವರ ಸೂಚನೆಯಂತೆ ಸೋಮವಾರ ಕಲಬುರಗಿಗೆ ತೆರಳಿ ನಾಮಪತ್ರ ಹಿಂದಕ್ಕೆ ಪಡೆಯಲಿದ್ದೇನೆʼʼ ಎಂದು ಸುರೇಶ್ ಸಜ್ಜನ್ ತಿಳಿಸಿದ್ದಾರೆ.

ಇದನ್ನೂ ಓದಿ: HD Revanna: ರೇವಣ್ಣಗೆ ಜಾಮೀನು ಸಿಕ್ಕರೂ ಸಿಗದ ರಿಲೀಫ್‌; ಎಸ್‌ಐಟಿಯಿಂದ ಹೈಕೋರ್ಟ್‌ ಮೊರೆ

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼʼಪಕ್ಷದ ಹಿರಿಯರು, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು, ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಚಿವ ರಾಜುಗೌಡ, ಎನ್. ರವಿಕುಮಾರ್, ಗೋವಿಂದ ಕಾರಜೋಳ ಅವರ ಆಶೀರ್ವಾದ ಪಡೆಯಲು ನಿಯೋಗದೊಂದಿಗೆ ಇಲ್ಲಿಗೆ ಬಂದಿದ್ದೆ. ನಾಮಪತ್ರ ವಾಪಸ್ ಪಡೆಯುವಂತೆ ಸೂಚಿಸಿದ್ದಾರೆ. ಅವರ ಮಾತಿಗೆ ಒಪ್ಪಿದ್ದೇನೆʼʼ ಎಂದು ತಿಳಿಸಿದ್ದಾರೆ. ಇಲ್ಲಿಗೆ ಬಂದಿದ್ದ ಮುಖಂಡರ ಜತೆ ಸಮಾಲೋಚನೆ ಮಾಡಿ ಈ ನಿರ್ಧಾರ ಮಾಡಿದ್ದಾಗಿ ವಿವರಿಸಿದ್ದಾರೆ. ರಾಜ್ಯಾಧ್ಯಕ್ಷರು ಪಕ್ಷಕ್ಕಾಗಿ ಮಾಡುತ್ತಿರುವ ಹೋರಾಟ, ಸಂಘಟನಾ ಕಾರ್ಯಕ್ಕೆ ಅವರು ಮೆಚ್ಚುಗೆ ಸೂಚಿಸಿದರು. ʼʼನನಗೆ ಟಿಕೆಟ್ ಮುಖ್ಯವಲ್ಲ; ಪಕ್ಷದ ಅಭ್ಯರ್ಥಿಯ ಗೆಲುವೇ ಮುಖ್ಯ ಎಂದು ತಿಳಿಸಿದ ಅವರು, ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮುಂದೆ ಮುಖ್ಯಮಂತ್ರಿಯಾಗಲು ಅವರ ಕೈ ಬಲಪಡಿಸುವ ಅಗತ್ಯವಿದೆʼʼ ಎಂದು ಇದೇ ವೇಳೆ ತಿಳಿಸಿದ್ದಾರೆ.

Continue Reading

ದೇಶ

Covaxin Safety: ಕೊವ್ಯಾಕ್ಸಿನ್‌ನಿಂದ ಅಡ್ಡ ಪರಿಣಾಮ ಎಂದು ಬನಾರಸ್‌ ವಿವಿ ವರದಿ; ವೈದ್ಯ ಸಂಶೋಧನಾ ಸಂಸ್ಥೆ ಆಕ್ಷೇಪ

Covaxin Safety: ಬಿಎಚ್‌ಯು ಸಂಶೋಧನೆ ಮಾಡುವ ಮುನ್ನ ಸರಿಯಾದ ವೈಜ್ಞಾನಿಕ ಕ್ರಮಗಳನ್ನು ಅನುಸರಿಸಿಲ್ಲ. ಸಂಶೋಧನೆಗೆ ಬಳಸಿರುವ ಜನಸಂಖ್ಯೆ ಪ್ರಮಾಣಕ್ಕೂ, ಸ್ಟಡಿ ವರದಿಗೂ ತುಂಬ ವ್ಯತ್ಯಾಸವಿದೆ. ಅಡ್ಡ ಪರಿಣಾಮ ಉಂಟಾಗಿದೆ ಎಂಬುದಾಗಿ ಹೇಳಿದವರನ್ನು ವರದಿ ತಯಾರಿಸಲು ಟೆಲಿಫೋನ್‌ ಮೂಲಕ ಸಂಪರ್ಕಿಸಲಾಗಿದೆಯೇ ಹೊರತು, ಅವರ ಅಭಿಪ್ರಾಯವನ್ನು ನೇರವಾಗಿ ಪಡೆದುಕೊಂಡಿಲ್ಲ ಎಂದು ಐಸಿಎಂಆರ್‌ ಅಸಮಾಧಾನ ವ್ಯಕ್ತಪಡಿಸಿದೆ.

VISTARANEWS.COM


on

Covaxin Safety
Koo

ನವದೆಹಲಿ: ಬ್ರಿಟನ್‌ನಲ್ಲಿ ಅಸ್ಟ್ರಾಜೆನಿನಾ ಕೊರೊನಾ ನಿರೋಧಕ ಕೋವಿಶೀಲ್ಡ್‌ ಲಸಿಕೆ ಪಡೆದವರಿಗೆ ಅಡ್ಡ ಪರಿಣಾಮ ಉಂಟಾಗಿದೆ ಎಂಬುದಾಗಿ ಸ್ವತಃ ಕಂಪನಿಯೇ ಒಪ್ಪಿಕೊಂಡ ಬಳಿಕ ಭಾರತದಲ್ಲೂ ಕೊರೊನಾ ನಿರೋಧಕ ಲಸಿಕೆಯ ಸುರಕ್ಷತೆಗೆ ಬಗ್ಗೆ ಚರ್ಚೆಯಾಗುತ್ತಿದೆ. ಅದರಲ್ಲೂ, ದೇಶೀಯವಾಗಿ ಭಾರತ್‌ ಬಯೋಟೆಕ್‌ (Bharat Biotech) ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್‌ ಅಡ್ಡಪರಿಣಾಮಗಳ ಕುರಿತು ಬನಾರಸ್‌ ಹಿಂದು ವಿವಿ (BHU) ವರದಿ ಬಿಡುಗಡೆ ಮಾಡಿದೆ. ಕೊವ್ಯಾಕ್ಸಿನ್‌ ಪಡೆದ ಮೂವರಲ್ಲಿ ಒಬ್ಬರಿಗೆ ಅಡ್ಡ ಪರಿಣಾಮ ಉಂಟಾಗಿದೆ ಎಂಬುದಾಗಿ ಬಿಎಚ್‌ಯು ಪ್ರಕಟಿಸಿದ ವರದಿಗೆ ಈಗ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ICMR) ಆಕ್ರೋಶ ವ್ಯಕ್ತಪಡಿಸಿದೆ.

ಐಸಿಎಂಆರ್‌ ಮಹಾ ನಿರ್ದೇಶಕ ರಾಜೀವ್‌ ಬಾಹ್ಲ್‌ ಅವರು ಬಿಎಚ್‌ಯು ಅಧ್ಯಯನ ವರದಿಯನ್ನು ನಿರಾಕರಿಸಿದ್ದಾರೆ. “ಬಿಎಚ್‌ಯು ಸಂಶೋಧನೆ ಮಾಡುವ ಮುನ್ನ ಸರಿಯಾದ ವೈಜ್ಞಾನಿಕ ಕ್ರಮಗಳನ್ನು ಅನುಸರಿಸಿಲ್ಲ. ಸಂಶೋಧನೆಗೆ ಬಳಸಿರುವ ಜನಸಂಖ್ಯೆ ಪ್ರಮಾಣಕ್ಕೂ, ಸ್ಟಡಿ ವರದಿಗೂ ತುಂಬ ವ್ಯತ್ಯಾಸವಿದೆ. ಅಡ್ಡ ಪರಿಣಾಮ ಉಂಟಾಗಿದೆ ಎಂಬುದಾಗಿ ಹೇಳಿದವರನ್ನು ವರದಿ ತಯಾರಿಸಲು ಟೆಲಿಫೋನ್‌ ಮೂಲಕ ಸಂಪರ್ಕಿಸಲಾಗಿದೆಯೇ ಹೊರತು, ಅವರ ಅಭಿಪ್ರಾಯವನ್ನು ನೇರವಾಗಿ ಪಡೆದುಕೊಂಡಿಲ್ಲ. ಸಂಶೋಧನೆಗೆ ಬಳಸಿರುವ ಅಂಕಿ-ಅಂಶಗಳನ್ನು ಸರಿಯಾಗಿ ಅವಲೋಕನ ಮಾಡಿಲ್ಲ” ಎಂಬುದಾಗಿ ರಾಜೀವ್‌ ಬಾಹ್ಲ್‌ ಹೇಳಿದ್ದಾರೆ.

“ಲಸಿಕೆಯ ಅಡ್ಡ ಪರಿಣಾಮ, ಲಸಿಕೆಯ ಸುರಕ್ಷತೆ ಬಗ್ಗೆ ಅಧ್ಯಯನ ಮಾಡಲು ತುಂಬ ಮಾನದಂಡಗಳನ್ನು ಅನುಸರಿಸಬೇಕಾಗುತ್ತದೆ. ಬಿಎಚ್‌ಯು ಇಂತಹ ಮಾನದಂಡಗಳನ್ನು ಅನುಸರಿಸುವುದು ಬಿಡಿ, ಅಧ್ಯಯನ ಮಾಡುವ ತಜ್ಞರಿಗೆ ತಾಂತ್ರಿಕ ಹಾಗೂ ಹಣಕಾಸು ನೆರವು ಕೂಡ ಒದಗಿಸಿಲ್ಲ. ಹಾಗಾಗಿ, ಲಸಿಕೆಯ ಸುರಕ್ಷತೆಯ ಬಗ್ಗೆ ಬನಾರಸ್‌ ಹಿಂದು ವಿವಿ ಮಾಡಿದ ಸಂಶೋಧನಾ ವರದಿಯು ವೈಜ್ಞಾನಿಕತೆಯ ಆಧಾರದ ಮೇಲಿಲ್ಲ” ಎಂದು ಹೇಳಿದ್ದಾರೆ.

ಕೊವ್ಯಾಕ್ಸಿನ್‌ ಲಸಿಕೆ ಪಡೆದ ಸುಮಾರು 926 ಜನರನ್ನು ಸಂಪರ್ಕಿಸಿ ಲಸಿಕೆಯ ಸುರಕ್ಷತೆ, ಅಡ್ಡ ಪರಿಣಾಮಗಳ ಕುರಿತು ಅಧ್ಯಯನ ವರದಿ ತಯಾರಿಸಿದೆ. ಲಸಿಕೆ ಪಡೆದ ಮೂವರಲ್ಲಿ ಒಬ್ಬರಿಗೆ ಅಡ್ಡ ಪರಿಣಾಮ ಉಂಟಾಗಿದೆ. ಲಸಿಕೆ ಪಡೆದವರಿಗೆ ಪಾರ್ಶ್ವವಾಯು, ನರಗಳಿಗೆ ಸಂಬಂಧಿಸಿದ ಕಾಯಿಲೆ, ಕೆಮ್ಮು, ಮೂಗು ಸೋರುವಿಕೆ, ಗಂಟಲು ಕೆರೆತ, ಉಸಿರಾಟ ಸಮಸ್ಯೆ ಸೇರಿ ಹಲವು ಅಡ್ಡ ಪರಿಣಾಮಗಳು ಕಾಣಿಸಿಕೊಂಡಿವೆ” ಎಂಬುದಾಗಿ ವರದಿ ತಿಳಿಸಿತ್ತು.

ಭಾರತ್‌ ಬಯೋಟೆಕ್‌ ಹೇಳುವುದೇನು?

“ಸುರಕ್ಷತೆ ಹಾಗೂ ದಕ್ಷತೆಯೇ ಮೊದಲು ಎಂಬ ದೃಷ್ಟಿಕೋನದಿಂದ ಹಲವು ಮಾನದಂಡಗಳನ್ನು ಇಟ್ಟುಕೊಂಡು ಲಸಿಕೆಯನ್ನು ಉತ್ಪಾದಿಸಲಾಗಿದೆ. ಭಾರತದಲ್ಲಿ ಕೇಂದ್ರ ಸರ್ಕಾರದ ಲಸಿಕಾಕರಣ ಯೋಜನೆಯ ವೇಳೆ ಅತಿ ಹೆಚ್ಚು ಪ್ರಯೋಗಕ್ಕೀಡಾದ ಲಸಿಕೆ ಎಂದರೆ ಅದು ಕೊವ್ಯಾಕ್ಸಿನ್‌ ಮಾತ್ರ. ಪರವಾನಗಿ ಪ್ರಕ್ರಿಯೆಯ ವೇಳೆ ಸುಮಾರು 27 ಸಾವಿರ ಅಂಶಗಳ ಕುರಿತು ಅಧ್ಯಯನ, ಪರಿಶೀಲನೆ ನಡೆಸಲಾಗಿದೆ. ವೈದ್ಯಕೀಯ ಪ್ರಯೋಗಕ್ಕೂ ಲಸಿಕೆಯನ್ನು ಒಳಪಡಿಸಲಾಗಿದೆ. ಹಾಗಾಗಿ, ಲಸಿಕೆಯು ಸಂಪೂರ್ಣವಾಗಿ ಸುರಕ್ಷಿತವಾಗಿದೆ” ಎಂಬುದಾಗಿ ಭಾರತ್‌ ಬಯೋಟೆಕ್‌ ಕಂಪನಿ ತಿಳಿಸಿದೆ.

ಇದನ್ನೂ ಓದಿ: Covaxin: ಕೊವ್ಯಾಕ್ಸಿನ್‌ ಸುರಕ್ಷಿತ ಲಸಿಕೆ ಎಂದ ಭಾರತ್‌ ಬಯೋಟೆಕ್;‌ ಸೈಡ್‌ ಎಫೆಕ್ಟ್‌ ಆರೋಪದ ಬೆನ್ನಲ್ಲೇ ಸ್ಪಷ್ಟನೆ!

Continue Reading
Advertisement
KKR vs SRH
ಕ್ರೀಡೆ9 mins ago

KKR vs SRH: ನಾಳೆ ಮೊದಲ ಕ್ವಾಲಿಫೈಯರ್‌ ಪಂದ್ಯ; ಗೆದ್ದವರಿಗೆ ನೇರ ಫೈನಲ್‌ ಸೋತವರಿಗೆ ಇನ್ನೊಂದು ಅವಕಾಶ

Air Crashes
ವಿದೇಶ10 mins ago

Air Crashes: ವಿಮಾನ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ 10 ಪ್ರಭಾವಿ ರಾಜಕಾರಣಿಗಳಿವರು

Phone Tapping
ಕರ್ನಾಟಕ21 mins ago

Phone Tapping: ಎಚ್‌ಡಿಕೆ ಫೋನ್‌ ಟ್ಯಾಪ್‌ ಮಾಡೋಕೆ, ಅವರೇನು ಟೆರರಿಸ್ಟಾ? ಎಂದ ಡಿಕೆಶಿ

Star Fashion
ಫ್ಯಾಷನ್22 mins ago

Star Fashion: ಮಾಲಾಶ್ರೀ ಮಗಳ ಬಿಗ್‌ ಬ್ಲ್ಯಾಕ್‌ ಜುಮ್ಕಾ ಲವ್‌!

Benjamin Netanyhu
ವಿದೇಶ24 mins ago

ಇಸ್ರೇಲ್‌ ಪಿಎಂ ಬೆಂಜಮಿನ್‌ ನೆತನ್ಯಾಹು, ಹಮಾಸ್‌ ಉಗ್ರರಿಗೆ ಜಾಗತಿಕ ಕೋರ್ಟ್‌ ಅರೆಸ್ಟ್‌ ವಾರೆಂಟ್! ಶೀಘ್ರ ಬಂಧನ?

Legislative Council Election dates fixedVoting on June 13
ರಾಜಕೀಯ27 mins ago

Legislative Council Election: ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ದಿನಾಂಕ ಫಿಕ್ಸ್;‌ ಜೂನ್‌ 13ಕ್ಕೆ ಮತದಾನ

Covaxin Safety
ದೇಶ1 hour ago

Covaxin Safety: ಕೊವ್ಯಾಕ್ಸಿನ್‌ನಿಂದ ಅಡ್ಡ ಪರಿಣಾಮ ಎಂದು ಬನಾರಸ್‌ ವಿವಿ ವರದಿ; ವೈದ್ಯ ಸಂಶೋಧನಾ ಸಂಸ್ಥೆ ಆಕ್ಷೇಪ

Food department deletes name from ration card list even though it is alive
ವಿಜಯನಗರ1 hour ago

Food Department : ಜೀವಂತ ಇದ್ದವಳನ್ನು ಸತ್ತಿದ್ದಾಗಿ ಘೋಷಿಸಿದ ಆಹಾರ ಇಲಾಖೆ; ರೇಷನ್‌ ಕಾರ್ಡ್‌ನಿಂದಲೇ ಹೆಸರು ಡಿಲೀಟ್‌

History Of Ice Cream
ಆಹಾರ/ಅಡುಗೆ1 hour ago

History Of Ice Cream: ಎಲ್ಲರ ನೆಚ್ಚಿನ ಐಸ್‌ಕ್ರೀಮ್‌ ಹುಟ್ಟಿದ್ದು ಹೇಗೆ?

IPL 2024
ಕ್ರೀಡೆ1 hour ago

IPL 2024: ಮೋದಿ ಸ್ಟೇಡಿಯಂನಲ್ಲಿ ನಡೆಯುವ ಐಪಿಎಲ್​ ಪ್ಲೇ ಆಫ್​ ಪಂದ್ಯಕ್ಕೆ ಐಸಿಸ್‌ ಉಗ್ರರ ಕಾಟ; ಪಂದ್ಯಕ್ಕೂ ಮುನ್ನ ನಾಲ್ವರ ಬಂಧನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ5 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 day ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌