ಮಕ್ಕಳೊಂದಿಗೊಂದು ಮಳೆದಿನ ಎಂಬ ಫನ್‌- ಅನ್‌ಲಿಮಿಟೆಡ್‌! - Vistara News

ಪ್ರಮುಖ ಸುದ್ದಿ

ಮಕ್ಕಳೊಂದಿಗೊಂದು ಮಳೆದಿನ ಎಂಬ ಫನ್‌- ಅನ್‌ಲಿಮಿಟೆಡ್‌!

ಮಳೆಯೆಂದರೆ ನೆನಪುಗಳ ಬುತ್ತಿ. ನಮ್ಮ ಮಕ್ಕಳ ಬಾಲ್ಯದ ಮಳೆಯ ದಿನವನ್ನೂ ಹಾಗೆಯೇ ಆಪ್ಯಾಯಮಾನ ಆಗಿಸುವುದು ನಮ್ಮ ಕರ್ತವ್ಯ. ಅದು ಹೇಗೆ?

VISTARANEWS.COM


on

rainy day
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಧೋ ಎಂದು ಸುರಿವ ಮಳೆ! ಮಕ್ಕಳೂ ಮನೆಯೊಳಗೆ ಕೂತು ಇಡೀ ದಿನ ಟಿವಿ ಆನ್‌ ಮಾಡಿಯೋ, ಆಗಾಗ ಮನೆಯಲ್ಲಿರುವ ಹೆತ್ತವರ ತಲೆ ತಿನ್ನುತ್ತಲೋ, ಗಲಾಟೆ ಮಾಡಿಕೊಂಡೋ, ಮನೆಯಲ್ಲಿ ಅಜ್ಜ ಅಜ್ಜಿಯಂಥ ಹಿರಿಯರಿದ್ದರೆ ಅವರಿಗೆ ಕಾಟ ಕೊಡುತ್ತಲೋ ಕಳೆಯುವುದು ಸಾಮಾನ್ಯ. ಇಲ್ಲಿ ಮಕ್ಕಳೂ ದೊಡ್ಡವರೂ ತಮಗೆ ದಕ್ಕಿದ ಅತ್ಯಮೂಲ್ಯ ಸಮಯ ಕಳೆದುಕೊಳ್ಳುತ್ತಾರೆ. ಮಕ್ಕಳ ಆಟಾಟೋಪದಲ್ಲಿ ದೊಡ್ಡವರಿಗೂ ಯಾವುದೇ ಕೆಲಸ ಮಾಡಲಾಗದೆ, ಈ ಮಳೆಯೊಂದು ನಿಂತರೆ ಸಮಸ್ಯೆ ಪರಿಹಾರವಾಗುತ್ತದೆ ಎಂದು ದೇವರಿಗೆ ಮಳೆ ನಿಲ್ಲಿಸಯ್ಯಾ ಎಂದು ಮೊರೆಯಿಡುತ್ತಾರೆ. ಮಳೆಯೇ ಹಾಗೆ! ಬಂದರೆ, ಬರಬೇಡ ಎಂದೂ, ಬರದಿದ್ದರೆ ಬಾ ಎಂದೂ ಕರೆಯುವ ಅತಿಥಿ ಸ್ವರೂಪಿ.

ಮಳೆಯಲ್ಲಿ ಮಕ್ಕಳ್ಳು
ಮಳೆಯಲ್ಲಿ ಮಕ್ಕಳು

ಇಂಥ ಮಳೆಯ ದಿನಗಳನ್ನೂ ಸರಿಯಾಗಿ ಪ್ಲಾನ್‌ ಮಾಡಿದರೆ ಮನೆಯೊಳಗೆ ಮಕ್ಕಳೊಂದಿಗೆ ಅದ್ಭುತವಾಗಿ ಕಳೆಯಬಹುದು. ರಜೆಯ ಮಜಾ ನಿಜವಾಗಿಯೂ ಮಜಾ ಆಗಿಯೇ ಬದಲಾಗಬಹುದು. ಆದರೆ, ಇವೆಲ್ಲವಕ್ಕೆ ಕೊಂಚ ಪ್ಲಾನಿಂಗ್‌ ಬೇಕು.

ಮಳೆಯೆಂದರೆ ನೆನಪುಗಳ ಬುತ್ತಿ. ನಮ್ಮ ಬಾಲ್ಯದ ಮಳೆಯ ನೆನಪುಗಳು ನಮಗೆ ಈಗ ಕುಳಿತು ಮೆಲುಕು ಹಾಕುವುದು ಹೇಗೆ ಅಪ್ಯಾಯಮಾನವೋ ಹಾಗೆಯೇ ನಮ್ಮ ಮಕ್ಕಳ ಬಾಲ್ಯದ ಮಳೆಯ ದಿನವನ್ನೂ ಹಾಗೆಯೇ ಅಪ್ಯಾಯಮಾನವಾಗಿಸುವುದು ನಮ್ಮ ಕರ್ತವ್ಯ.

೧. ಕ್ರ್ಯಾಫ್ಟ್‌ ಮಾಡಿ: ಮಳೆ ಸುರಿವಾಗ ಮಕ್ಕಳಿಗೆ ಯಾವುದಾದರೂ ಕರಕುಶಲ ಕಲೆ ಕಲಿಸಿ. ಒಂದು ಗಂಟೆಯ ಕ್ರಾಫ್ಟ್‌ ಟೈಮ್‌ ಇಡಿ. ಬಣ್ಣಬಣ್ಣದ ಕಾಗದಗಳನ್ನು ಹರವಿ ಒಂದು ಗಂಟೆ ಸಮಯ ಮಾಡಿ. ಮನೆಯ ಮುಂದೆ ಹರಿದು ಹೋಗುವ ಮಳೆಯಲ್ಲಿ ಬಿಡಲು ದೋಣಿ ಮಾಡಿ. ಅಥವಾ, ಮಳೆಯ ಚಿತ್ರ ಬಿಡಿಸಲು ಹೇಳಿ. ಮಳೆ ಮೋಡ, ಹಸಿರು ಮರ, ಕೆಸರು ದಾರಿ ಚಿತ್ರವು ಮಕ್ಕಳಿಗೆ ಮನೆಯ ಒಳಗೂ ಒಂದು ಕಲ್ಪನಾ ಲೋಕವನ್ನು ಸೃಷ್ಟಿಸುತ್ತದೆ.

೨. ಮಳೆ ಬಂದು ನಿಂತಾಗ ಮನೆಯ ಮುಂದಿನ ಹರಿವ ನೀರು: ಮನೆಯಂಗಳದ ನೀರು ಮಕ್ಕಳನ್ನು ಖಂಡಿತ ಆಕರ್ಷಿಸದೆ ಇರದು. ಮಳೆ ಬಂದಾಗ ಮಳೆಯಲ್ಲಿ ಆಡುವುದೂ ಕೂಡಾ ಮಕ್ಕಳ ಬಾಲ್ಯದ ನೆನಪಿನ ಬುತ್ತಿಗಳು. ಪ್ರತಿಯೊಂದಕ್ಕೂ ನಿರ್ಬಂಧ ಹಾಕಿ ಮನೆಯೊಳಗೇ ಕೂರಿಸಬೇಡಿ. ಇದ್ದುದರಲ್ಲಿ ಸೇಫ್‌ ಜಾಗ ನೋಡಿ, ಮಳೆ ಕಡಿಮೆಯಾಯಿತು ಅನಿಸಿದರೆ, ಒಂದರ್ಧ ಗಂಟೆ ಮನಸೋ ಇಚ್ಛೆ ಕುಣಿಯಲು ಬಿಡಿ. ಮಕ್ಕಳು ಒದ್ದೆಯಾದರೆ, ಪುಟ್ಟ ಪುಟ್ಟ ನೀರಿನ ಗುಂಡಿಗಳಲ್ಲಿ ಕಾಲು ಇಳಿಬಿಟ್ಟು ಕುಣಿದರೆ ಕುಣಿಯಲಿ. ಒಂದು ಸೀಮಿತ ಸಮಯಾವಕಾಶವನ್ನು ಅವರಿಗೆ ಕೊಟ್ಟು ಅವರನ್ನು ಖುಷಿಪಡಿಸಿ.

ಇದನ್ನೂ ಓದಿ: Solo Travel: ಸೋಲೋ ಪ್ರವಾಸ ಗೆಲ್ಲೋಕೆ 15 ಸೂತ್ರಗಳು!

೩. ಮಕ್ಕಳೊಂದಿಗೆ ಅಡುಗೆ ಮಾಡಿ: ಮಕ್ಕಳೊಂದಿಗೆ ಮಾಡಬಹುದಾದ ತಿಂಡಿಯನ್ನು ಯೋಚಿಸಿ. ಒಂದಿಷ್ಟು ಸಮಯ ಇದಕ್ಕಾಗಿ ತೆಗೆದಿಟ್ಟು ಅವರಾಗಿಯೇ ಅಡುಗೆ ಮಾಡಲು ಬಿಡಿ. ಜೊತೆಗೆ ನೀವಿರಿ. ಕೇಕ್‌, ಮಫಿನ್‌ ಮಾಡಿ. ಅಥವಾ ಪಾಪ್‌ ಕಾರ್ನ್‌ ಮಾಡಿ. ಅಥವಾ ಬೆಂಕಿಯ ಅಗತ್ಯವಿಲ್ಲದೆ ಮಾಡುವ ಅಡುಗೆಗಳನ್ನು ಅವರೇ ಮಾಡಲಿ. ಅವರೇ ಮಾಡಿ, ತಿನ್ನುತ್ತಾ ಟಿವಿ ನೋಡುವುದು ಇನ್ನೂ ಫನ್!‌

೪. ಮಕ್ಕಳ ಸೈನ್ಯ ಸೇರಿಸಿ: ಅವಕಾಶವಿದ್ದರೆ, ಮಕ್ಕಳ ಒಂದಿಬ್ಬರು ಗೆಳೆಯರನ್ನೋ, ಸಂಬಂಧಿಕರ ಮಕ್ಕಳನ್ನೋ ಮನೆಗೆ ಕರೆಯಿರಿ. ಅವರೊಂದಿಗೆ ಆಟ ಊಟದ ಸಮಯ ಕಳೆಯಲಿ.

೫. ಮನೆಯ ಒಳಾಂಗಣ ಆಟಗಳನ್ನು ಆಡಲಿ: ಒಂದಿಷ್ಟು ಸಮಯ ಅವರ ಗೆಳೆಯರೊಂದಿಗೆ ಅಣ್ಣ ತಮ್ಮ ಅಕ್ಕ ತಂಗಿಯರಿದ್ದರೆ ಅವರೊಂದಿಗೆ ಅಥವಾ ಇಲ್ಲದಿದ್ದರೆ ಅವರೊಂದಿಗೆ ನೀವೇ ಒಳಾಂಗಣ ಆಟಗಳನ್ನು ಆಡಿ. ಇದರಿಂದ ಇಡೀ ದಿನ, ಟಿವಿ, ಮೊಬೈಲ್‌, ಟ್ಯಾಬ್‌ ಎಂದು ಮಕ್ಕಳು ಸಮಯ ಕಳೆಯುವುದು ತಪ್ಪುತ್ತದೆ. ಮಳೆಯ ದಿನಗಳು ಅವರ ಬಾಲ್ಯದ ನೆನಪುಗಳಲ್ಲಿ ಚಿರಸ್ಥಾಯಿಯಾಗಿ ಉಳಿಯುತ್ತದೆ.

ಇದನ್ನೂ ಓದಿ| Weather Report: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಜು.1ರಂದು ಭಾರಿ ಮಳೆ ಸಾಧ್ಯತೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Prajwal Revanna Case: ಪೆನ್‌ಡ್ರೈವ್‌ ಕೇಸ್;‌ ದೇವೇಗೌಡರ ನಿವಾಸದಲ್ಲೇ ಎಚ್‌.ಡಿ.ರೇವಣ್ಣ ಬಂಧನ

Prajwal Revanna Case: ಮಹಿಳೆಯೊಬ್ಬರನ್ನು ಅಪಹರಣ ಮಾಡಿ ಅಕ್ರಮ ಬಂಧನದಲ್ಲಿಟ್ಟಿದ್ದ ಆರೋಪದ ಮೇಲೆ ಮೈಸೂರಿನ ಕೆ.ಆರ್.‌ ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಚಾರಣೆ ನಡೆಸಿತು, ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿತು. ಇದಾದ ಬಳಿಕ ಅಧಿಕಾರಿಗಳು ಮಾಜಿ ಸಚಿವರನ್ನು ಬಂಧಿಸಿದರು.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ, ಕೆ.ಆರ್.ಪುರದಲ್ಲಿ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಜೆಡಿಎಸ್‌ ನಾಯಕ, ಮಾಜಿ ಸಚಿವ, ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಅವರ ಪುತ್ರ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಎಚ್‌.ಡಿ.ರೇವಣ್ಣ (HD Revanna) ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನಿರಾಕರಿಸುತ್ತಲೇ ಎಸ್‌ಐಟಿ ಅಧಿಕಾರಿಗಳು ರೇವಣ್ಣ ಅವರನ್ನು ವಶಕ್ಕೆ ಪಡೆದರು.

ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ನಿವಾಸದಲ್ಲಿಯೇ ಎಚ್‌.ಡಿ.ರೇವಣ್ಣ ಅವರನ್ನು ವಶಪಡಿಸಿಕೊಂಡ ಎಸ್‌ಐಟಿ ಅಧಿಕಾರಿಗಳು ಸಿಐಡಿ ಕಚೇರಿಯತ್ತ ಅವರನ್ನು ಕರೆದುಕೊಂಡು ಹೋಗುತ್ತಿದ್ದಾರೆ. ಸಿಐಡಿ ಕಚೇರಿಯಲ್ಲಿ ವಿಚಾರಣೆ ನಡೆಸಿದ ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಎಂದು ತಿಳಿದುಬಂದಿದೆ. ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಮೇ 4ರ ಸಂಜೆ 5.30ರೊಳಗೆ ವಿಚಾರಣೆಗೆ ಹಾಜರಾಗಬೇಕು ಎಂದು ಎಸ್‌ಐಟಿ ನೋಟಿಸ್‌ ನೀಡಿತ್ತು. ಆದರೆ, ವಿಚಾರಣೆಗೆ ಹಾಜರಾಗದ ರೇವಣ್ಣ ಮೂರು ದಿನಗಳಿಂದ ತಲೆಮರೆಸಿಕೊಂಡಿದ್ದರು. ಇನ್ನು, ನಿರೀಕ್ಷಣಾ ಜಾಮೀನಿಗೂ ಅವರು ಅರ್ಜಿ ಸಲ್ಲಿಸಿದ್ದರು.

ಮಹಿಳೆಯೊಬ್ಬರನ್ನು ಅಪಹರಣ ಮಾಡಿ ಅಕ್ರಮ ಬಂಧನದಲ್ಲಿಟ್ಟಿದ್ದ ಆರೋಪದ ಮೇಲೆ ಮೈಸೂರಿನ ಕೆ.ಆರ್.‌ ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಚಾರಣೆ ನಡೆಸಿತು, ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿತು. ಇದಾದ ಬಳಿಕ ಅಧಿಕಾರಿಗಳು ಮಾಜಿ ಸಚಿವರನ್ನು ಬಂಧಿಸಿದರು.

ನಿವಾಸಗಳಲ್ಲಿ ಎಸ್‌ಐಟಿ ಮಹಜರು

ಶುಕ್ರವಾರ (ಮೇ 3) ಪ್ರಜ್ವಲ್ ತೋಟದ ಮನೆಗೆ ಎಸ್ಐಟಿ ಅಧಿಕಾರಿಗಳ ತಂಡ ರೇಡ್ ಮಾಡಿದ್ದು, ಐವರ ತಂಡದಿಂದ ಪಡುವಲಹಿಪ್ಪೆಯ ತೋಟದ ಮನೆಯಲ್ಲಿ ಪರಿಶೀಲನೆ ನಡೆಸಿತ್ತು. ಬೆಳಗ್ಗೆ 3.30ರ ಸುಮಾರಿನಲ್ಲೇ ಬಂದು ಪರಿಶೀಲನೆ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಪ್ರಜ್ವಲ್ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗುತ್ತಲೇ ಹಾಸನಕ್ಕೆ ಬಂದಿರುವ ಪೊಲೀಸರ ಎರಡು ತಂಡ, ಪಡುವಲಹಿಪ್ಪೆ ಸೇರಿ ಎರಡು ಕಡೆ ಸ್ಥಳ ಪರಿಶೀಲನೆ ನಡೆಸಿದೆ.

ಮೇ 2ರಂದು ತಡರಾತ್ರಿ ಬೆಂಗಳೂರಿನ ಬಸವನಗುಡಿಯಲ್ಲಿರುವ ಮನೆ, ಹೊಳೆನರಸೀಪುರದ ಪಡುವಲಹಿಪ್ಪೆಯ ಫಾರ್ಮ್ ಹೌಸ್, ಸೂರಜ್ ರೇವಣ್ಣಗೆ ಸೇರಿದ ಗನ್ನಿಕಡದಲ್ಲಿರುವ ಫಾರ್ಮ್ ಹೌಸ್ ಮೇಲೆ ಹೀಗೆ ಒಟ್ಟು ಮೂರು ಕಡೆ SIT ಅಧಿಕಾರಿಗಳು ದಾಳಿ ನಡೆಸಿದ್ದರು. ಸುಮಾರು 30ಕ್ಕೂ ಅಧಿಕ ಅಧಿಕಾರಿಗಳು, ಸಿಬ್ಬಂದಿ ಏಕಕಾಲಕ್ಕೆ ದಾಳಿ ಮಾಡಿದ್ದು, ಮಹತ್ವದ ಸಾಕ್ಷ್ಯಗಳನ್ನು ಕಲೆಹಾಕಿದ್ದರು. ಎಸ್‌ಪಿ ಸೀಮಾ ಲಾಠ್ಕರ್ ನೇತೃತ್ವದಲ್ಲಿ ದಾಳಿ ನಡೆದಿತ್ತು.

ಇದನ್ನೂ ಓದಿ: Prajwal Revanna Case: ಜರ್ಮನಿ ಆಯ್ತು, ದುಬೈ ಬಿಟ್ಟಾಯ್ತು; ಮತ್ತೊಂದು ದೇಶಕ್ಕೆ ಹಾರಿದ ಪ್ರಜ್ವಲ್‌ ರೇವಣ್ಣ!

Continue Reading

ಪ್ರಮುಖ ಸುದ್ದಿ

Village Administrative Officer: ತಾಂತ್ರಿಕ ಸಮಸ್ಯೆ; ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿ ಮೇ 15ರವರೆಗೆ ವಿಸ್ತರಣೆ

Village Administrative Officer: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಹಾಗೂ ಶುಲ್ಕ ಪಾವತಿಸಲು ತಾಂತ್ರಿಕ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಮೇ 15ರವರೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಕೆಇಎ ವಿಸ್ತರಿಸಿದೆ.

VISTARANEWS.COM


on

Village Administrative Officer
Koo

ಬೆಂಗಳೂರು: ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆ (Village Administrative Officer) ನೇಮಕಾತಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮತ್ತೆ ವಿಸ್ತರಣೆ ಮಾಡಿದೆ. ಅರ್ಜಿ ಸಲ್ಲಿಕೆಗೆ ಮೇ 5 ಕೊನೆಯ ದಿನವಾಗಿತ್ತು. ಆದರೆ, ಅರ್ಜಿ ಸಲ್ಲಿಕೆ ಹಾಗೂ ಶುಲ್ಕ ಪಾವತಿಸಲು ತಾಂತ್ರಿಕ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಅವಧಿ ವಿಸ್ತರಿಸಲು ಹುದ್ದೆ ಆಕಾಂಕ್ಷಿಗಳು ಕೋರಿದ್ದರು. ಹೀಗಾಗಿ ಮೇ 15ರವರೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಲಾಗಿದೆ.

ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ (Job News) ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (Karnataka Examinations Authority) ಫೆ.20ರಂದು ಅಧಿಸೂಚನೆ (VAO Recruitment 2024) ಪ್ರಕಟಿಸಿತ್ತು. ಅದರಂತೆ ಮಾರ್ಚ್‌ 3 ರಿಂದ ಏಪ್ರಿಲ್ 3ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೆ, ಆನ್‌ಲೈನ್ ಅರ್ಜಿಯಲ್ಲಿ ಕೆಲವು ಬದಲಾವಣೆಯ ಕಾರಣ ಅರ್ಜಿಯನ್ನು ಸಲ್ಲಿಸಲು ದಿನಾಂಕವನ್ನು ಮುಂದೂಡಿ, ಮೇ 4 ವರೆಗೆ ಅರ್ಜಿ ಸಲ್ಲಿಸಲು ಹಾಗೂ ಮೇ 7 ರ ರೆಗೆ ಶುಲ್ಕ ಪಾವತಿಸಲು ಅವಕಾಶ ನೀಡಲಗಿತ್ತು. ಹೀಗಿದ್ದರೂ ಮತ್ತೆ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗಳಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಎರಡನೇ ಬಾರಿ ಅರ್ಜಿ ಸಲ್ಲಿಕೆ ಅವಧಿ (ಮೇ 15ರವರೆಗೆ) ವಿಸ್ತರಿಸಲಾಗಿದೆ.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ವಿಸ್ತರಿಸಲಾದ ಕೊನೆಯ ದಿನಾಂಕ: ಮೇ 15
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ (ಬ್ಯಾಂಕ್ ಕೆಲಸದ ವೇಳೆ ವರೆಗೆ): ಮೇ 18

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ

1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ

ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1,000 ಗ್ರಾಮ ಆಡಳಿತ ಅಧಿಕಾರಿ (Village Administrative Officer) ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಫೆ.20ರಂದು ಅಧಿಸೂಚನೆ ಹೊರಡಿಸಿತ್ತು. ಆಸಕ್ತ ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ ಮೂಲಕ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮೇ 15 ಕೊನೆಯ ದಿನವಾಗಿದೆ.

ವಿದ್ಯಾರ್ಹತೆ

  • ದ್ವಿತೀಯ ಪಿಯುಸಿ ಅಥವಾ ತತ್ಸಮಾನ (ಆದೇಶ ಸಂಖ್ಯೆ: ಇಡಿ 09 ಟಿವಿಇ 2019, ದಿನಾಂಕ 06.08.2021 ಮತ್ತು ಆದೇಶ ಸಂಖ್ಯೆ ಇಡಿ 33 ಟಿವಿಇ 2021 ದಿನಾಂಕ 30.09.2021ಗಳನ್ನು ಮತ್ತು ಉಳಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸುತ್ತೋಲೆ ಸಂಖ್ಯೆ ಸಿಆಸುಇ 81 ಸೇವನೆ 2017 ದಿನಾಂಕ 27.02.2018ರ ಅನ್ವಯ ಈ ಕೆಳಕಂಡ ವಿದ್ಯಾರ್ಹತೆಗಳನ್ನು ತತ್ಸಮಾನವೆಂದು ಆದೇಶಿದೆ.)
  • ಸಿಬಿಎಸ್‌ಸಿ ಮತ್ತು ಐಸಿಎಸ್‌ಸಿ ಮಂಡಳಿಯು ನಡೆಸುವ ಕ್ಲಾಸ್ 12 ಪರೀಕ್ಷೆ.
  • ಇತರ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 12 ಪರೀಕ್ಷೆ.
  • ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್.ಐ.ಒ.ಎಸ್) ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್/ ಎಚ್.ಎಸ್.ಸಿ.
  • ಮೂರು ವರ್ಷಗಳ ಡಿಪ್ಲೋಮಾ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೋಮಾ (ಜೆ.ಒ.ಸಿ/ಜೆ.ಒ.ಡಿ.ಸಿ/ಜೆ.ಎಲ್.ಡಿ.ಸಿ)

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಪ್ರವರ್ಗ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 750 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ / ಪಂಗಡ, ಪ್ರವರ್ಗ -1, ಮಾಜಿ ಸೈನಿಕರು ಮತ್ತು ವಿಶೇಷ ಚೇತನ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 500 ರೂ. ಪಾವತಿಸಬೇಕು. ಆನ್‌ಲೈನ್‌ ಮೂಲಕ ಪಾವತಿಸುವುದು ಕಡ್ಡಾಯ.

ಆಯ್ಕೆ ಹೇಗೆ?

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭರ್ತಿ ಮಾಡಲಿದೆ. ಕರ್ನಾಟಕ ಪರೀಕ್ಷಾ ಪ್ರಾದಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಅಭ್ಯರ್ಥಿಗಳು ಆಯ್ಕೆ ಮಾಡಲಾಗುತ್ತದೆ. ಈ ಪರೀಕ್ಷೆಯನ್ನು ಆಫ್‌ಲೈನ್‌-ಒಎಂಆರ್‌ ಮಾದರಿಯಲ್ಲಿ ನಡೆಸಲಾಗುತ್ತದೆ. ಪರೀಕ್ಷೆಗೆ 200 ಅಂಕಗಳನ್ನು ಒಳಗೊಂಡ 2 ಪತ್ರಿಕೆ ಇರುತ್ತದೆ. ಜತೆಗೆ ಕನ್ನಡ ಭಾಷಾ ಪರೀಕ್ಷೆ ಕಡ್ಡಾಯವಾಗಿದ್ದು, ಇದರಲ್ಲಿ ಕನಿಷ್ಠ 50 ಅಂಕ ಗಳಿಸಬೇಕು. ಪರೀಕ್ಷೆಗಳನ್ನು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಈ ಹಿಂದೆ ದ್ವಿತೀಯ ಪಿಯುಸಿ ಅಥವಾ 12ನೇ ತರಗತಿ ಅಂಕಗಳ ಆಧಾರದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮೆರಿಟ್‌ ಆಧಾರದಲ್ಲಿ ಹುದ್ದೆಗಳಿಗೆ ಆಯ್ಕೆ ನಡೆಯುತ್ತಿತ್ತು. ಆದರೆ ಈ ಸಲದಿಂದ ಆಯ್ಕೆ ವಿಧಾನವನ್ನು ಬದಲಾಯಿಸಲಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆ ಬಳಿಕ ಅಭ್ಯರ್ಥಿಗಳ ರ‍್ಯಾಂಕಿಂಗ್‌ ಪಟ್ಟಿ ಬಿಡುಗಡೆಯಾಗಲಿದೆ. ನಂತರ ಜಿಲ್ಲಾವಾರು ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದವರನ್ನು ಕೌನ್ಸೆಲಿಂಗ್‌ ಮೂಲಕ ಸ್ಥಳ ನಿಯೋಜನೆಗೊಳಿಸಲಾಗುತ್ತದೆ. ನಿಗದಿತ ಮೀಸಲಾತಿಯಂತೆ ಹುದ್ದೆಗಳನ್ನು ಗುರುತಿಸಿ, ಆ ಪ್ರಕಾರ ಹುದ್ದೆ ಭರ್ತಿಯಾಗಲಿವೆ. 

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 080-23460460.

ಇದನ್ನೂ ಓದಿ: Job Alert: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಶೈಕ್ಷಣಿಕ ವಿದ್ಯಾರ್ಹತೆಗೆ ತಿದ್ದುಪಡಿ; ಹೊಸ ಅಧಿಸೂಚನೆಯಲ್ಲಿ ಏನಿದೆ?

ಇದನ್ನು ಗಮನಿಸಿ

  • ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು.
  • ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಒಟ್ಟು ಅಂಕಗಳ ಪೈಕಿ ಕನಿಷ್ಠ ಶೇ. 35ರಷ್ಟು ಅಂಕ ಗಳಿಸುವುದು ಕಡ್ಡಾಯ.
  • ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶದಷ್ಟು ಅಂಕ ಕಳೆಯಲಾಗುತ್ತದೆ. ಹೀಗಾಗಿ ಉತ್ತರ ಬರೆಯುವಾಗ ಎಚ್ಚರಿಕೆ ವಹಿಸಿ.
  • ಪ್ರಶ್ನೆಪತ್ರಿಕೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿರುತ್ತದೆ.
  • ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮುನ್ನ ಎಲ್ಲ ಮಾಹಿತಿ ಸರಿಯಾಗಿದೆ ಎನ್ನುವುದನ್ನು ಖಚಿತಪಡಿಸಿಕೊಳ್ಳಬೇಕು. ಈ ಅರ್ಜಿ ಫಾರಂನ ಒಂದು ಪ್ರತಿಯ ಪ್ರಿಂಟ್‌ ಔಟ್‌ ಮತ್ತು ಶುಲ್ಕ ಪಾವತಿಯ ಚಲನ್‌ ಅನ್ನು ತಮ್ಮ ಬಳಿ ಇರಿಸಿಕೊಳ್ಳಬೇಕು.
Continue Reading

Latest

Lok Sabha Election : ಕಾಂಗ್ರೆಸ್​ ತೊರೆದ ಲವ್ಲಿ ಸೇರಿ ನಾಲ್ವರಿಂದ ಬಿಜೆಪಿ ಸೇರ್ಪಡೆ

Lok Sabha Election: ಎಎಪಿ ಜೊತೆಗಿನ ಮೈತ್ರಿ ಮತ್ತು ಹೈಕಮಾಂಡ್ ಸ್ಥಳೀಯ ನಾಯಕತ್ವಕ್ಕಿಂತ ಹೊರಗಿನವರಿಗೆ ಆದ್ಯತೆ ನೀಡುತ್ತಿದೆ ಎಂದು ಆರೋಪಿಸಿ ಅವರೆಲ್ಲರೂ ಕಾಂಗ್ರೆಸ್ ತೊರೆದಿದ್ದರು. ಲೋಕಸಭಾ ಚುನಾವಣೆಗೆ ಟಿಕೆಟ್ ಹಂಚಿಕೆ ಮತ್ತು ಇತರ ಪಕ್ಷದ ವ್ಯವಹಾರಗಳಲ್ಲಿ ದೆಹಲಿ ಕಾಂಗ್ರೆಸ್ ಘಟಕವು ಬೇಸತ್ತಿದೆ.

VISTARANEWS.COM


on

Lok Sabha Election
Koo

ನವದೆಹಲಿ: ಲೋಕ ಸಭಾ ಚುನಾವಣೆಯ (Lok Sabha Election) ಮೈತ್ರಿ ವಿಚಾರದಲ್ಲಿ ಅಸಮಾಧಾನ ಹೊಂದಿದ್ದ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವು ದಿನಗಳ ನಂತರ ಅರವಿಂದರ್ ಸಿಂಗ್ ಲವ್ಲಿ ಶನಿವಾರ ಭಾರತೀಯ ಜನತಾ ಪಕ್ಷ (BJP) ಸೇರಿದರು. ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ ಕುಮಾರ್ ಚೌಹಾಣ್, ನಸೀಬ್ ಸಿಂಗ್, ನೀರಜ್ ಬಸೋಯಾ ಮತ್ತು ಅಮಿತ್ ಮಲಿಕ್ ಸೇರಿದಂತೆ ಇತರ ನಾಲ್ವರು ಮಾಜಿ ಕಾಂಗ್ರೆಸ್ ನಾಯಕರು ಲವ್ಲಿ ಅವರೊಂದಿಗೆ ಪಕ್ಷಾಂತರಗೊಂಡರು.

ತಮಗೆ ಮತ್ತು ತಮ್ಮ ಸಹೋದ್ಯೋಗಿಗಳಿಗೆ ಬಿಜಪಿ ಸೇರಲು ಅವಕಾಶ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಲವ್ಲಿ ಧನ್ಯವಾದ ಅರ್ಪಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಮೋದಿ ದೊಡ್ಡ ಬಹುಮತದೊಂದಿಗೆ ಅಧಿಕಾರವನ್ನು ಉಳಿಸಿಕೊಳ್ಳಲು ಸಜ್ಜಾಗಿದ್ದಾರೆ ಎಂದು ಅವರು ಹೇಳಿದರು.

ಇದನ್ನೂ ಓದಿ: Lok Sabha Election : ಚುನಾವಣೆ ಖರ್ಚಿಗೆ ಹಣ ಕೊಡದ್ದಕ್ಕೆ ಟಿಕೆಟ್​ ವಾಪಸ್​ ಕೊಟ್ಟ ಕಾಂಗ್ರೆಸ್​ ಅಭ್ಯರ್ಥಿ!

ಬಿಜೆಪಿಯ ಬ್ರಾಂಡ್​ ಅಡಿಯಲ್ಲಿ ಮತ್ತು ಪ್ರಧಾನಿಯ ನಾಯಕತ್ವದಲ್ಲಿ ದೆಹಲಿಯ ಜನರಿಗಾಗಿ ಹೋರಾಡಲು ನಮಗೆ ಅವಕಾಶ ನೀಡಲಾಗಿದೆ” ಎಂದು ಅವರು ಹೇಳಿಕೊಂಡಿದ್ದಾರೆ. “ನನಗೆ ಸಂಪೂರ್ಣ ಭರವಸೆ ಇದೆ ಮತ್ತು ದೇಶದಲ್ಲಿ ಬಿಜೆಪಿ ಸರ್ಕಾರವು ಭಾರಿ ಬಹುಮತದೊಂದಿಗೆ ರಚನೆಯಾಗುತ್ತಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಮುಂಬರುವ ದಿನಗಳಲ್ಲಿ ದೆಹಲಿಯಲ್ಲೂ ಬಿಜೆಪಿಯ ಬಾವುಟ ಹಾರಾಡಲಿದೆ” ಎಂದು ಮಾಜಿ ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ಎಎಪಿ ಜೊತೆಗಿನ ಮೈತ್ರಿ ಮತ್ತು ಹೈಕಮಾಂಡ್ ಸ್ಥಳೀಯ ನಾಯಕತ್ವಕ್ಕಿಂತ ಹೊರಗಿನವರಿಗೆ ಆದ್ಯತೆ ನೀಡುತ್ತಿದೆ ಎಂದು ಆರೋಪಿಸಿ ಅವರೆಲ್ಲರೂ ಕಾಂಗ್ರೆಸ್ ತೊರೆದಿದ್ದರು. ಲೋಕಸಭಾ ಚುನಾವಣೆಗೆ ಟಿಕೆಟ್ ಹಂಚಿಕೆ ಮತ್ತು ಇತರ ಪಕ್ಷದ ವ್ಯವಹಾರಗಳಲ್ಲಿ ದೆಹಲಿ ಕಾಂಗ್ರೆಸ್ ಘಟಕವು ಬೇಸತ್ತಿದೆ.

ಕನ್ಹಯ್ಯ ಕುಮಾರ್ ಮತ್ತು ಉದಿತ್ ರಾಜ್ ಸೇರಿದಂತೆ ಅಭ್ಯರ್ಥಿಗಳ ಆಯ್ಕೆಯಿಂದ ಲವ್ಲಿ ಮತ್ತು ಇತರ ಕೆಲವು ನಾಯಕರು ಅಸಮಾಧಾನಗೊಂಡಿದ್ದಾರೆ ಎಂದು ಹೇಳಿದ್ದಾರೆ. ಕಳೆದ ವರ್ಷ ಕಾಂಗ್ರೆಸ್ ದೆಹಲಿ ಘಟಕದ ಮುಖ್ಯಸ್ಥರಾಗಿ ನೇಮಕಗೊಂಡಿದ್ದ ಲವ್ಲಿ ಭಾನುವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ದೆಹಲಿಯ ಮಾಜಿ ಶಾಸಕರಾದ ನಸೀಬ್ ಸಿಂಗ್ ಮತ್ತು ನೀರಜ್ ಬಸೋಯಾ ಅವರಂತಹ ನಾಯಕರೂ ಪಕ್ಷ ತೊರೆದಿದ್ದಾರೆ.

Continue Reading

ಪ್ರಮುಖ ಸುದ್ದಿ

Prajwal Revanna Case: ಎಚ್‌.ಡಿ.ರೇವಣ್ಣಗಿಲ್ಲ ನಿರೀಕ್ಷಣಾ ಜಾಮೀನು; ಬಂಧಿಸಲು ಸಿದ್ಧವಾದ ಎಸ್‌ಐಟಿ!

Prajwal Revanna Case: ಮಹಿಳೆಯೊಬ್ಬರನ್ನು ಅಪಹರಣ ಮಾಡಿ ಅಕ್ರಮ ಬಂಧನದಲ್ಲಿಟ್ಟಿದ್ದ ಆರೋಪದ ಮೇಲೆ ಮೈಸೂರಿನ ಕೆ.ಆರ್.‌ ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಡೆಸಿದ್ದು, ಈಗ ಮಹತ್ವದ ತೀರ್ಪು ನೀಡಿದೆ. ಎಚ್.ಡಿ.ರೇವಣ್ಣ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್‌ ರೇವಣ್ಣ (Prajwal Revanna Case) ಲೈಂಗಿಕ ಹಗರಣದಲ್ಲಿ (Physical Abuse) ಮೊದಲನೇ ಆರೋಪಿಯಾಗಿರುವ (A 1) ಜೆಡಿಎಸ್‌ ನಾಯಕ ಎಚ್‌.ಡಿ ರೇವಣ್ಣ (HD Revanna) ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ಸಲ್ಲಿಕೆಯಾದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಲು ನಿರಾಕರಿಸಿದೆ.

ಮಹಿಳೆಯೊಬ್ಬರನ್ನು ಅಪಹರಣ ಮಾಡಿ ಅಕ್ರಮ ಬಂಧನದಲ್ಲಿಟ್ಟಿದ್ದ ಆರೋಪದ ಮೇಲೆ ಮೈಸೂರಿನ ಕೆ.ಆರ್.‌ ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಚಾರಣೆ ನಡೆಸಿತು, ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿತು.

ಎಚ್.ಡಿ.ರೇವಣ್ಣ ಪರವಾಗಿ ವಾದ ಮಂಡಿಸಿದ ವಕೀಲ ಮೂರ್ತಿ ಡಿ. ನಾಯಕ್, “ಪ್ರಕರಣವನ್ನು ಎಸ್‌ಐಟಿ ಅನಗತ್ಯವಾಗಿ ವಿಜೃಂಭಿಸುತ್ತಿದೆ. ಸಿಆರ್‌ಪಿಸಿ 41 ಎ ಅಡಿಯಲ್ಲಿ ನೋಟಿಸ್‌ ನೀಡಿದ್ದು, ಶನಿವಾರ (ಏಪ್ರಿಲ್‌ 4) ಸಂಜೆಯೇ ಎಚ್‌.ಡಿ.ರೇವಣ್ಣ ಅವರು ವಿಚಾರಣೆಗೆ ಹಾಜರಾಗಲಿದ್ದಾರೆ. ಹಾಗಾಗಿ, ಎಚ್‌.ಡಿ.ರೇವಣ್ಣ ಅವರಿಗೆ ಜಾಮೀನು ನೀಡಬೇಕು” ಎಂದು ಕೋರ್ಟ್‌ಗೆ ಮನವಿ ಮಾಡಿದರು. ‌

ಎಸ್‌ಐಟಿ ಪರ ಎಸ್‌ಪಿಪಿ ಬಿ.ಎನ್‌. ಜಗದೀಶ್‌ ವಾದ ಮಂಡಿಸಿದರು. “ಎಚ್‌.ಡಿ.ರೇವಣ್ಣ ಅವರು ಪ್ರಭಾವಿಯಾಗಿದ್ದು, ಅವರಿಗೆ ಜಾಮೀನು ಸಿಕ್ಕರೆ, ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ, ಸಾಕ್ಷ್ಯಗಳನ್ನು ನಾಶಪಡಿಸುವ ಸಾಧ್ಯತೆ ಹೆಚ್ಚಿದೆ. ಹಾಗಾಗಿ, ಅವರಿಗೆ ಜಾಮೀನು ನೀಡಬಾರದು” ಎಂದರು. ಇನ್ನು. ವಿಶೇಷ ತನಿಖಾ ತಂಡ ಹಾಗೂ ಪೊಲೀಸರ ಯಾವ ನೋಟಕ್ಕೂ ಸಿಗದೇ ಗುಪ್ತ ಸ್ಥಳಕ್ಕೆ ತೆರಳಿದ್ದು, ಎರಡು ದಿನಗಳಿಂದ ಎಲ್ಲೂ ಕಾಣಿಸಿಕೊಂಡಿಲ್ಲ. ‌

“ಸಂತ್ರಸ್ತೆಯ ರಕ್ಷಣೆಯು ನಮ್ಮ ಮೊದಲ ಆದ್ಯತೆಯಾಗಿದೆ. ಅವರು ನಾಪತ್ತೆಯಾಗಿದ್ದು, ಹುಡುಕಾಟ ನಡೆಯುತ್ತಿದೆ. ಇದೇ ಕಾರಣದಿಂದಾಗಿ ಕ್ಯಾಮೆರಾ ಎದುರಿನಲ್ಲಿಯೇ ವಿಚಾರಣೆ ನಡಸಬೇಕು ಎಂದು ಮನವಿ ಮಾಡಿದ್ದೇವೆ. ಸಂತ್ರಸ್ತೆಯ ವಿಡಿಯೊಗಳು ಹರಿದಾಡಿವೆ. ಸಂತ್ರಸ್ತೆಗೆ ಏನಾಗಿದೆ ಎಂಬುದರ ಕುರಿತು ಆತಂಕ ಎದುರಾಗಿದೆ. ಸುಮಾರು 2 ಸಾವಿರಕ್ಕೂ ಅಧಿಕ ವಿಡಿಯೊ ಇವೆ ಎನ್ನಲಾಗುತ್ತಿದೆ. ಒಬ್ಬ ಮಹಿಳೆಯ ಕಿಡ್ನ್ಯಾಪ್‌ ಆಗಿದೆ. ಆಕೆಯ ಸುರಕ್ಷತೆಯು ಪ್ರಮುಖವಾಗಿದೆ. ಸಂತ್ರಸ್ತ ಮಹಿಳೆಯು ದೂರು ನೀಡದಂತೆ ತಡೆಯಲು ಅಪಹರಣ ಮಾಡಿರುವ ಸಾಧ್ಯತೆ ಇದೆ. ಈ ಕುರಿತು ಹೆಚ್ಚಿನ ವಿಚಾರಣೆ ನಡೆಸುವ ಅಗತ್ಯವಿದೆ” ಎಂದು ತಿಳಿಸಿದರು.

ಅಜ್ಞಾತ ಸ್ಥಳದಲ್ಲಿ ರೇವಣ್ಣ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ ರೇವಣ್ಣಗೆ ಎಸ್ಐಟಿ ಮೂರು ನೋಟಿಸ್ ಹಾಗೂ ಕೊನೆಗೆ ಲುಕೌಟ್ ನೋಟಿಸ್ ಜಾರಿ ಮಾಡಿದ್ದು, ರೇವಣ್ಣ ಅವರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ರೇವಣ್ಣ ಅವರು ವಿದೇಶಕ್ಕೆ ಹಾರಬಹುದು ಎಂಬ ಮುಂದಾಲೋಚನೆಯಿಂದ ಲುಕೌಟ್‌ ನೋಟೀಸ್‌ ಜಾರಿ ಮಾಡಲಾಗಿದ್ದು, ಈಗ ಅವರು ಯಾವುದೇ ಏರ್‌ಪೋರ್ಟ್‌ ಮೂಲಕ ಹಾದು ಹೋಗಲು ಸಾಧ್ಯವಿಲ್ಲದಾಗಿದೆ.

ವಿದೇಶದಲ್ಲಿದ್ದುಕೊಂಡು ಲೈಂಗಿಕ ಹಗರಣ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿರುವ ಪ್ರಜ್ವಲ್ ರೇವಣ್ಣ ವಿರುದ್ಧ ರೆಡ್ ಕಾರ್ನರ್ ನೊಟೀಸ್ ಜಾರಿ ಮಾಡಲು ಎಸ್‌ಐಟಿ (SIT) ಸಿದ್ಧತೆ ನಡೆಸಿದೆ ಎನ್ನಲಾಗಿದ್ದು, ಇನ್ನೊಂದೆಡೆ ಭವಾನಿ ರೇವಣ್ಣ ಅವರಿಗೂ ವಿಚಾರಣೆಗೆ ಎಸ್‌ಐಟಿ ಬುಲಾವ್‌ ನೀಡಿದೆ. ಸದ್ಯ ರೇವಣ್ಣ ವಿರುದ್ಧ ತನಿಖೆಗೆ ಒಳಗಾಗಬೇಕಾದ ಗಂಭೀರ ಆರೋಪವಿದೆ. ಮೈಸೂರಿನಲ್ಲಿ ಸಂತ್ರಸ್ತೆಯ ಪುತ್ರ ರೇವಣ್ಣ ವಿರುದ್ಧ ಕಿಡ್ನಾಪ್ ಪ್ರಕರಣ ದಾಖಲು ಮಾಡಿದ್ದಾರೆ. ಹೀಗಾಗಿ ರೇವಣ್ಣಗೆ ಎಸ್ಐಟಿ ಮುಂದೆ ಹಾಜರಾಗಲು ನೋಟಿಸ್ ನೀಡಲಾಗಿದೆ. ಆದರೆ ಕಳೆದ ಎರಡು ದಿನಗಳಿಂದ ರೇವಣ್ಣ ನಾಪತ್ತೆಯಾಗಿದ್ದಾರೆ. ಅವರು ಅತ್ತ ಎಚ್.ಡಿ ದೇವೇಗೌಡರ ನಿವಾಸದಲ್ಲಿಯಾಗಲೀ, ಈತ್ತ ಬಸವನಗುಡಿಯ ತಮ್ಮ ನಿವಾಸದಲ್ಲಿಯಾಗಲೀ, ಹಾಸನದ ಎರಡು ನಿವಾಸಗಳಲ್ಲಾಗಲೀ ಇಲ್ಲ.

ಇದನ್ನೂ ಓದಿ: Prajwal Revanna Case: ಜರ್ಮನಿ ಆಯ್ತು, ದುಬೈ ಬಿಟ್ಟಾಯ್ತು; ಮತ್ತೊಂದು ದೇಶಕ್ಕೆ ಹಾರಿದ ಪ್ರಜ್ವಲ್‌ ರೇವಣ್ಣ!

Continue Reading
Advertisement
Prajwal Revanna Case
ಕರ್ನಾಟಕ17 mins ago

Prajwal Revanna Case: ಪೆನ್‌ಡ್ರೈವ್‌ ಕೇಸ್;‌ ದೇವೇಗೌಡರ ನಿವಾಸದಲ್ಲೇ ಎಚ್‌.ಡಿ.ರೇವಣ್ಣ ಬಂಧನ

Village Administrative Officer
ಪ್ರಮುಖ ಸುದ್ದಿ36 mins ago

Village Administrative Officer: ತಾಂತ್ರಿಕ ಸಮಸ್ಯೆ; ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿ ಮೇ 15ರವರೆಗೆ ವಿಸ್ತರಣೆ

Lok Sabha Election
Latest55 mins ago

Lok Sabha Election : ಕಾಂಗ್ರೆಸ್​ ತೊರೆದ ಲವ್ಲಿ ಸೇರಿ ನಾಲ್ವರಿಂದ ಬಿಜೆಪಿ ಸೇರ್ಪಡೆ

Prajwal Revanna Case
ಪ್ರಮುಖ ಸುದ್ದಿ57 mins ago

Prajwal Revanna Case: ಎಚ್‌.ಡಿ.ರೇವಣ್ಣಗಿಲ್ಲ ನಿರೀಕ್ಷಣಾ ಜಾಮೀನು; ಬಂಧಿಸಲು ಸಿದ್ಧವಾದ ಎಸ್‌ಐಟಿ!

Physical abuse
ಮೈಸೂರು1 hour ago

Physical Abuse : ಮೊಬೈಲ್ ಕೊಡಿಸುವುದಾಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ ಸೋದರ ಮಾವ

Lok Sabha Election
ಪ್ರಮುಖ ಸುದ್ದಿ1 hour ago

Lok Sabha Election : ಚುನಾವಣೆ ಖರ್ಚಿಗೆ ಹಣ ಕೊಡದ್ದಕ್ಕೆ ಟಿಕೆಟ್​ ವಾಪಸ್​ ಕೊಟ್ಟ ಕಾಂಗ್ರೆಸ್​ ಅಭ್ಯರ್ಥಿ!

Summer Tour
ಪ್ರವಾಸ1 hour ago

Summer Tour: ಬೇಸಿಗೆಯಲ್ಲಿ ಈ 8 ತಂಪು ಹಳ್ಳಿಗಳಿಗೆ ಪ್ರವಾಸ ಹೋಗಿ ಕೂಲ್ ಆಗಿ!

Prajwal Revanna Case
ಕರ್ನಾಟಕ1 hour ago

Prajwal Revanna Case: ಹೊಳೆನರಸೀಪುರ ರೇವಣ್ಣ ನಿವಾಸದಲ್ಲಿ ಎಸ್‌ಐಟಿ ಸ್ಥಳ ಮಹಜರು; ಸಂತ್ರಸ್ತೆ ಹೇಳಿಕೆ ದಾಖಲು

Lok Sabha Election
ಪ್ರಮುಖ ಸುದ್ದಿ2 hours ago

Lok Sabha Election : ರಾಹುಲ್ ಪ್ರಧಾನಿಯಾಗುವುದು ಪಾಕಿಸ್ತಾನದ ಆಸೆ ಎಂದ ಮೋದಿ, ತಿರುಗೇಟು ಕೊಟ್ಟ ಪ್ರಿಯಾಂಕಾ

Prajwal Revanna Case
ಕರ್ನಾಟಕ2 hours ago

Prajwal Revanna Case: ಪ್ರಜ್ವಲ್‌ ಕೇಸ್‌ಗೆ ಬಿಗ್‌ ಟ್ವಿಸ್ಟ್;‌ ರೇವಣ್ಣ ಪಿಎ ಮನೆಯಲ್ಲಿ ಸಂತ್ರಸ್ತೆಯ ರಕ್ಷಣೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ14 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ1 day ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌