Rajasthan murder: ಕನ್ಹಯ್ಯ ಲಾಲ್‌ ಹಂತಕರಿಗೆ mumbai terror ಲಿಂಕ್‌? ಏನಿದು 2611? - Vistara News

ಕ್ರೈಂ

Rajasthan murder: ಕನ್ಹಯ್ಯ ಲಾಲ್‌ ಹಂತಕರಿಗೆ mumbai terror ಲಿಂಕ್‌? ಏನಿದು 2611?

ರಾಜಸ್ಥಾನದ ಉದಯಪುರದಲ್ಲಿ ಕನ್ಹಯ್ಯ ಲಾಲ್‌ ಅವರನ್ನು ಬರ್ಬರವಾಗಿ ಕೊಲೆ ಮಾಡಿದ ಕಿರಾತಕರಿಗೂ 2008ರಲ್ಲಿ ನಡೆದ ಮುಂಬಯಿ ದಾಳಿಗೂ (Mumbai terror) ಸಂಬಂಧವಿದೆಯೇ? ಹಂತಕರು ಬಳಸಿದ ಬೈಕಿನ ನಂಬರ್‌ ಬೆನ್ನು ಹತ್ತಿ ಹೋದಾಗ ಭಯಾನಕ ಸತ್ಯಗಳು ಹೊರಬಂದಿವೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ರಾಜಸ್ಥಾನದ ಉದಯಪುರದಲ್ಲಿ ನಡೆದ ಕನ್ಹಯ್ಯ ಲಾಲ್‌ ಎಂಬ ಹಿಂದೂ ಟೇಲರ್‌ ಹತ್ಯೆಗೂ 2008ರಲ್ಲಿ ಮುಂಬಯಿಯಲ್ಲಿ ಸಂಭವಿಸಿದ, ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಉಗ್ರ ದಾಳಿಗೂ ಸಂಬಂಧ ಇದೆಯಾ?
ಕನ್ಹಯ್ಯ ಲಾಲ್‌ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಘಟನೆಯ ಎಲ್ಲ ಆಯಾಮಗಳ ಬೆನ್ನು ಹತ್ತಿದ್ದು ಈ ವೇಳೆ ಹಂತಕರಾದ ಮೊಹಮ್ಮದ್‌ ರಿಯಾಜ್‌ ಅಟ್ಟಾರಿ ಮತ್ತು ಗೌಸ್‌ ಮೊಹಮ್ಮದ್‌ಗೂ ಮುಂಬಯಿ ದಾಳಿಗೂ (Mumbai terror) ಸಂಬಂಧ ಇರುವ ಅಂಶ ಬಯಲಾಗಿದೆ.

ದೇಶವನ್ನೇ ಬೆಚ್ಚಿ ಬೀಳಿಸಿದ ಮುಂಬಯಿ ಉಗ್ರ ದಾಳಿ ನಡೆದಿದ್ದು 2008ರ ನವೆಂಬರ್‌ 26ರಂದು. ಈ ದಿನ 2611 ಅಥವಾ 26/11 ಎಂದೇ ಕುಖ್ಯಾತವಾಗಿದ್ದು, ಈಗಲೂ ಈ ಸಂಖ್ಯೆಯನ್ನು ಕೇಳಿದರೆ ಮುಂಬಯಿ ನಗರ ಬೆಚ್ಚಿ ಬೀಳುತ್ತಿದೆ. ಆವತ್ತು ಸಂಜೆಯ ಹೊತ್ತು ಹಡಗಿನಲ್ಲಿ ಬಂದ ಪಾಕಿಸ್ತಾನಿ ಉಗ್ರರು ನಡೆಸಿದ ಅಟ್ಟಹಾಸಕ್ಕೆ ವಾಣಿಜ್ಯ ನಗರಿ ನಲುಗಿ ಹೋಗಿತ್ತು. ಒಂಬತ್ತು ಮಂದಿ ಉಗ್ರರು ನಗರದ ಎಲ್ಲೆಡೆ ಓಡಾಡಿ ಯರ‍್ರಾಬಿರ‍್ರಿಯಾಗಿ ಗುಂಡು ಹಾರಿಸಿದ್ದರಿಂದ 175 ಮಂದಿ ಮಂದಿ ಪ್ರಾಣ ಕಳೆದುಕೊಂಡಿದ್ದರು. ಅದರಲ್ಲೂ ಮುಖ್ಯವಾಗಿ ಹೇಮಂತ್‌ ಕರ್ಕರೆ, ವಿಜಯ ಸಾಲಸ್ಕರ್‌ ಸೇರಿದಂತೆ ಹಲವು ಪೊಲೀಸ್‌ ಅಧಿಕಾರಿಗಳು ಬೀದಿಯಲ್ಲಿ ಪ್ರಾಣ ಕಳೆದುಕೊಂಡಿದ್ದರು.

ಮುಂಬಯಿ ಉಗ್ರ ದಾಳಿಯ ಭಯಾನಕ ಚಿತ್ರ

ಸಮುದ್ರ ಮಾರ್ಗವಾಗಿ ಬಂದ ಪಾಪಿಗಳು ಮುಂಬಯಿಯ ಹಲವು ಪ್ರದೇಶಗಳಲ್ಲಿ ಅಮಾಯಕರನ್ನು ಕೊಂದು ಹಾಕಿ ಕೊಲೆಗೆ ದೇಶದ ಪ್ರತಿಷ್ಠಿತ ತಾಜ್‌ ಹೋಟೆಲ್‌ನ್ನು ಸೇರಿಕೊಂಡಿದ್ದರು. ಅಲ್ಲಿ ನೂರಾರು ಪ್ರವಾಸಿಗರು ತಂಗಿದ್ದು, ಅವರೆಲ್ಲರನ್ನು ಒತ್ತೆಯಾಳಾಗಿಕೊಂಡು ಈ ದುಷ್ಟರು ರಕ್ಷಣೆ ಪಡೆದಿದ್ದರು. ಎಲ್ಲ ಪ್ರವಾಸಿಗರನ್ನು ರಕ್ಷಿಸಿ ದುಷ್ಟರನ್ನು ದಮನಿಸುವ ಅತಿ ದೊಡ್ಡ ಕಾರ್ಯಾಚರಣೆಯನ್ನು ಸೇನೆ ವಹಿಸಿಕೊಂಡಿತ್ತು. ಅದರಲ್ಲಿ ಬೆಂಗಳೂರು ಮೂಲಕ ಮೇಜರ್‌ ಸಂದೀಪ್‌ ಉಣ್ಣಿಕೃಷ್ಣನ್‌ ಕೂಡಾ ಇದ್ದರು. ಸಂದೀಪ್‌ ಅವರ ನೇತೃತ್ವದ ಟೀಮ್‌ ಅತ್ಯಂತ ಸಾಹಸಿಕವಾಗಿ ಹೋಟೆಲ್‌ಗೆ ನುಗ್ಗಿ ಜನರನ್ನು ರಕ್ಷಿಸುವ ಕಾರ್ಯಾಚರಣೆ ನಡೆಸುತ್ತಿತ್ತು. ಒಂದು ಹಂತದಲ್ಲಿ ಒಬ್ಬ ಯೋಧರು ಉಗ್ರರ ದಾಳಿಯಿಂದ ಗಾಯಗೊಂಡಾಗ ಅವರನ್ನು ಬೇರೆಡೆಗೆ ಸಾಗಿಸುವ ಪ್ರಯತ್ನ ನಡೆಯಿತು. ಈ ವೇಳೆ ಉಗ್ರರು ಅಡಗುದಾಣದಿಂದ ಹೊರಬಂದು ದಾಳಿ ನಡೆಸಿದ್ದರು. ಆಗ ಮಹಾ ಸಾಹಸ ತೋರಿದ ಸಂದೀಪ್‌ ಉಣ್ಣಿಕೃಷ್ಣನ್‌ ಅವರು ಗಾಯಾಳು ಸಹವರ್ತಿಯನ್ನು ಅವರ ಕೈಯಿಂದ ರಕ್ಷಿಸಿ ತಾವೇ ದುಷ್ಟರನ್ನು ಬೆನ್ನಟ್ಟಿದರು. ಈ ಸಾಹಸಿಕ ಕಾರ್ಯಾಚರಣೆ ವೇಳೆ ಅವರೇ ಮೃತಪಟ್ಟರು.

ದೇಶದ ವಾಣಿಜ್ಯ ನಗರಿಯ ಮೇಲೆ ನಡೆದ ಈ ದಾಳಿ ಭಾರಿ ಆತಂಕವನ್ನು ಸೃಷ್ಟಿಸಿತ್ತು. ಪಾಕಿಸ್ತಾನ ಮೂಲದ ಲಷ್ಕರೆ ತಯ್ಬಾ ಸಂಘಟನೆ ಈ ದಾಳಿ ನಡೆಸಿದ್ದು ಆಗಲೇ ಸ್ಪಷ್ಟವಾಗಿತ್ತು. ಒಂಬತ್ತು ಮಂದಿ ಉಗ್ರರ ಪೈಕಿ ಎಂಟು ಮಂದಿಯನ್ನು ಸಾಹಸಿಕ ಕಾರ್ಯಾಚರಣೆ ವೇಳೆ ಬಲಿ ಪಡೆಯಲಾಗಿತ್ತು. ಅಜ್ಮಲ್‌ ಕಸಬ್‌ ಎಂಬ ಒಬ್ಬ ಉಗ್ರನನ್ನು ಪೊಲೀಸರು ಜೀವಂತವಾಗಿ ಸೆರೆ ಹಿಡಿದಿದ್ದರು. ಆತನಿಗೆ ಮುಂದೆ ಬಹು ವರ್ಷದ ಬಳಿಕ ಗಲ್ಲು ಶಿಕ್ಷೆ ವಿಧಿಸಲಾಯಿತು.

ರಿಯಾಜ್‌ ಬೈಕ್‌ಗೆ 2611 ನಂಬರ್‌!

ಇಂಥಹುದೊಂದು ಬೆಚ್ಚಿಬೀಳಿಸುವ ಘಟನೆಯನ್ನು ನೆನಪಿಸುವ ನೋಂದಣಿ ಸಂಖ್ಯೆಯನ್ನು ಉದಯಪುರದ ಕನ್ಹಯ್ಯ ಲಾಲ್‌ ಹಂತಕರು ಬಳಸಿರುವುದು ಈಗ ಹಲವು ಗುಮಾನಿಗಳಿಗೆ ಕಾರಣವಾಗಿದೆ.

ಜೂನ್‌ 28ರಂದು ಸಂಜೆಯ ಹೊತ್ತಿಗೆ ಉದಯಪುರದಲ್ಲಿ ಕನ್ಹಯ್ಯ ಲಾಲ್‌ ಅವರ ಹತ್ಯೆ ಮಾಡಿದ ಸ್ಥಳೀಯರೇ ಆದ ಮೊಹಮ್ಮದ್‌ ರಿಯಾಜ್‌ ಅಟ್ಟಾರಿ ಮತ್ತು ಗೌಸ್‌ ಮೊಹಮ್ಮದ್‌ ಪರಾರಿಯಾಗಲು ಬಳಸಿದ ಬೈಕ್‌ನ ಸಂಖ್ಯೆ ಆರ್‌ಜೆ 27 ಎಎಸ್‌ 2611! ಕೊಲೆ ಮಾಡಿ ಜೈಪುರದತ್ತ ಧಾವಿಸುತ್ತಿದ್ದ ಹಂತಕರನ್ನು 130 ಕಿ.ಮೀ. ದೂರದ ಭೀಮ್‌ ಹೈವೇನಲ್ಲಿ ಬಂಧಿಸಲಾಗಿತ್ತು.

ಈ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡ ಎನ್‌ಐಎ ಅತಿಸೂಕ್ಷ್ಮ ಸಂಗತಿಗಳ ಮೇಲೂ ಸೂಕ್ಷ್ಮ ದರ್ಶಕ ಬೀರುವಂತೆ ಪರಿಶೀಲನೆ ನಡೆಸುತ್ತಿದೆ. ಈ ಹಂತದಲ್ಲಿ 2611 ನಂಬರ್‌ ಕಣ್ಣಿಗೆ ಬಿತ್ತು. ತಕ್ಷಣವೇ ಅದರ ಹಿನ್ನೆಲೆಗಳನ್ನು ಬೆನ್ನಟ್ಟಿದ ಎನ್‌ಐಎಗೆ ಹಲವು ಅಂಶಗಳು ಗೋಚರಿಸಿವೆ.

ಕನ್ಹಯ್ಯ ಲಾಲ್‌ ಹಂತಕರು

ಸಾಮಾನ್ಯ ಜನರು 26/11 ಎಂಬ ಸಂಖ್ಯೆಯನ್ನು ಬಳಸುವುದಕ್ಕೇ ಹಿಂದೆ ಮುಂದೆ ನೋಡುತ್ತಿರುವ ಈ ವ್ಯಕ್ತಿಗಳು ಅದನ್ನು ರಾಜಾರೋಷವಾಗಿ ಬಳಸಿದ್ದಾರೆಂದರೆ ಅವರಿಗೂ ಮುಂಬಯಿ ಉಗ್ರ ದಾಳಿಗೂ ಸಂಬಂಧ ಇರಬಹುದು ಎಂಬ ಸಂಶಯವನ್ನು ಅದು ವ್ಯಕ್ತಪಡಿಸಿದೆ. ಈ ವ್ಯಕ್ತಿಗಳು ಪಾಕಿಸ್ತಾನದ ಧಾರ್ಮಿಕ ಮೂಲಭೂತವಾಗಿ ಸಂಘಟನೆ ದವಾತ್‌ ಇ ಇಸ್ಲಾಮಿ ಜತೆ ಸಂಪರ್ಕ ಹೊಂದಿರುವುದು ಈಗಾಗಲೇ ಬಯಲಾಗಿದೆ. ಲಷ್ಕರೆ ತಯ್ಬಾ ಉಗ್ರ ಸಂಘಟನೆಗೂ ಇವರಿಗೂ ಲಿಂಕ್‌ ಇರುವ ಸಾಧ್ಯತೆ ಬಗ್ಗೆ ಪರಿಶೀಲನೆ ನಡೆಯುತ್ತಿದೆ.

5000 ರೂ. ಕೊಟ್ಟು ಖರೀದಿಸಿದ್ದರು
ದುಷ್ಕರ್ಮಿಗಳು ಈ ಸಂಖ್ಯೆಯನ್ನು ಹೇಗೆ ಪಡೆದಿದ್ದಾರೆ? ಸ್ವಾಭಾವಿಕವಾಗಿಯೇ ಸಿಕ್ಕಿದೆಯೇ ಎಂಬ ಅಂಶವನ್ನು ಪರಿಶೀಲಿಸಿದಾಗ ಆರೋಪಿಗಳು 5000 ರೂ. ಹಣ ಕೊಟ್ಟು ಈ ನಂಬರ್‌ ಪಡೆದಿರುವುದು ಬಯಲಾಗಿದೆ. ಅಂದರೆ, ಈ ದುಷ್ಟರು ಒಂದೋ ಮುಂಬಯಿ ದಾಳಿಯ ಸಮರ್ಥಕರಾಗಿರಬಹುದು, ಇಲ್ಲವೇ ಅದರಲ್ಲೂ ಭಾಗಿಯಾಗಿರುವ ಸಾಧ್ಯತೆ ಇದೆ ಎಂಬ ಸಂಶಯವಿದೆ. ಇದೇ ತಂಡ ಜೈಪುರದಲ್ಲಿ ಬಾಂಬ್‌ ಸ್ಫೋಟಕ್ಕೂ ಸಂಚು ನಡೆಸಿದ್ದು ಬಯಲಾಗಿದೆ. ಹೀಗಾಗಿ ಮುಂಬಯಿ ದಾಳಿಯ ಹಿಂದೆಯೂ ಈ ತಂಡ ಇರಬಹುದು ಎನ್ನುವ ಗುಮಾನಿ ಹೆಚ್ಚಾಗಿದೆ. ಈ ಬಗ್ಗೆ ಎನ್‌ಐಎ ತೀವ್ರ ತನಿಖೆ ನಡೆಸುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Prajwal Revanna Case: ವಿಚಾರಣೆಯಲ್ಲಿ ಬಾಯಿಬಿಡದ ಪ್ರಜ್ವಲ್‌; ಸ್ಥಳ ಮಹಜರಿಗಾಗಿ ಹೊಳೆನರಸೀಪುರಕ್ಕೆ ಕರೆದೊಯ್ಯಲು ಸಿದ್ಧತೆ

Prajwal Revanna Case: ಎಸ್‌ಐಟಿ ವಿಚಾರಣೆ ವೇಳೆ ಯಾವುದೇ ಪ್ರಶ್ನೆ ಕೇಳಿದರೂ ನಮ್ಮ ಲಾಯರ್‌ನ ಕೇಳಬೇಕು ಎಂದಷ್ಟೇ ಪ್ರಜ್ವಲ್ ಹೇಳುತ್ತಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಹೊಳೆನರಸೀಪುರ ನಿವಾಸಕ್ಕೆ ಕರೆದೊಯ್ದು ಮಹಜರು ನಡೆಸಲು ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ (Prajwal Revanna Case) ಬಂಧನವಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ ವಿಚಾರಣೆ ತೀವ್ರಗೊಂಡಿದೆ. ಎಸ್‌ಐಟಿ ಕಸ್ಟಡಿಯಲ್ಲಿರುವ ಪ್ರಜ್ವಲ್‌, ಯಾವುದೇ ಪ್ರಶ್ನೆಗೂ ಉತ್ತರಿಸದೇ ಸುಮ್ಮನಿರುವುದರಿಂದ ಬಾಯಿಬಿಡಿಸುವುದು ಅಧಿಕಾರಿಗಳಿಗೆ ತಲೆನೋವಾಗಿದೆ. ಯಾವುದೇ ಪ್ರಶ್ನೆ ಕೇಳಿದರೂ ನಮ್ಮ ಲಾಯರ್‌ನ ಕೇಳಬೇಕು ಎಂದಷ್ಟೇ ಪ್ರಜ್ವಲ್ ಹೇಳುತ್ತಿದ್ದಾರೆ. ಮತ್ತೊಂದೆಡೆ ಹೊಳೆನರಸೀಪುರ ನಿವಾಸಕ್ಕೆ ಕರೆದೊಯ್ದು ಮಹಜರು ನಡೆಸಲು ಸಿದ್ಧತೆ ನಡೆಯುತ್ತಿದೆ.

ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ಇಂದು ಪ್ರಜ್ವಲ್‌ನ ಕರೆದೊಯ್ದು ಸ್ಥಳ ಮಹಜರು ನಡೆಸುವ ಸಾಧ್ಯತೆ ಇದೆ. ಹೀಗಾಗಿ ಹೊಳೆನರಸೀಪುರ ಪೊಲೀಸರಿಗೆ ಬಂದೋಬಸ್ತ್ ಏರ್ಪಡಿಸಲು ಸೂಚನೆ ನೀಡಲಾಗಿದೆ. ಮನೆ ಕೆಲಸದಾಕೆ ಮೇಲಿನ ಲೈಂಗಿಕ ದೌರ್ಜನ್ಯ ಸಂಬಂಧ ಸ್ಥಳ ಮಹಜರು ನಡೆಯಲಿದೆ.

ಏನೇ ಕೇಳಿದ್ರೂ ಲಾಯರ್‌ ಬಳಿ ಕೇಳಿ ಹೇಳುವೆ ಎನ್ನುವ ಸಂಸದ

ನೆನ್ನೆ ಇಡೀ ದಿನದ ವಿಚಾರಣೆಯಲ್ಲಿ ಪ್ರಜ್ವಲ್ ಯಾವುದೇ ಪ್ರಶ್ನೆಗಳಿಗೆ ಉತ್ತರ ನೀಡಿಲ್ಲ ಎನ್ನಲಾಗಿದೆ. ತನಿಖಾಧಿಕಾರಿ ಎಷ್ಟೇ ಪ್ರಶ್ನೆ ಮಾಡಿದರೂ ನಮ್ಮ ಲಾಯರ್‌ನ ಕೇಳಬೇಕು ಎಂದು ಪ್ರಜ್ವಲ್ ಹೇಳಿದ್ದಾರೆ, ನನಗೂ ಪ್ರಕರಣಕ್ಕೂ ಸಂಬಂಧವಿಲ್ಲ, ನೀವು ಏನೇ ಪ್ರಶ್ನೆ ಕೇಳಿದರೂ ನಮ್ಮ ಲಾಯರ್ ಹತ್ತಿರ ಮಾತನಾಡಿ ಹೇಳುವೆ. ಏನೇ ಉತ್ತರ ಕೊಡುವುದಿದ್ದರೂ ಲಾಯರ್ ಬಳಿ ಮಾತನಾಡಿ ಆ ನಂತರ ಉತ್ತರಿಸುತ್ತೇನೆ ಎಂದು ಪ್ರಜ್ವಲ್ ಹೇಳಿದ್ದಾರೆ.

ಮೊಬೈಲ್ ಪತ್ತೆ ಮಾಡೋದೆ ಸವಾಲು

ವಿಚಾರಣೆ ಚುರುಕುಗೊಳಿಸಿದ ಎಸ್‌ಐಟಿ ಅಧಿಕಾರಿಗಳಿಗೆ ಪ್ರಜ್ವಲ್ ಮೊಬೈಲ್ ಪತ್ತೆ ಮಾಡೋದೆ ದೊಡ್ಡ ಸವಾಲಾಗಿದೆ. ವಿಡಿಯೋ ರೆಕಾರ್ಡ್ ಮಾಡಿದ ಮೊಬೈಲ್‌ಗಾಗಿ ಎಸ್‌ಐಟಿ ಹುಡುಕಾಟ ನಡೆಸುತ್ತಿದೆ. ಆದರೆ, ಒಂದು ವರ್ಷದ ಹಿಂದೆಯೇ ಮೊಬೈಲ್ ಕಳೆದುಹೋಗಿದೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

ಒಂದು ವರ್ಷದ ಹಿಂದೆಯೇ ಮೊಬೈಲ್ ಕಳೆದುಹೋಗಿದೆ ಎಂದಿರುವ ಪ್ರಜ್ವಲ್, ಮೊಬೈಲ್ ಕಳೆದುಹೋಗಿದ್ದಕ್ಕೆ ನಾನು ಸ್ಥಳೀಯ ಠಾಣೆಯಲ್ಲೂ ದೂರು ನೀಡಿದ್ದೆ. ಕೆಎಸ್‌ಪಿ ಆ್ಯಪ್‌ ಮೂಲಕವೂ ದೂರು ದಾಖಲಿಸಿದ್ದೆ. ಕಳೆದ ವರ್ಷ ಮಾರ್ಚ್ 29 ರಂದು ಪಿಎ ಭರತ್ ರಾಜ್ ಮೂಲಕ ದೂರು ನೀಡಲಾಗಿದೆ. ಪೊಲೀಸರು ಕೂಡ ಕೇಸ್ ದಾಖಲಿಸಿಕೊಂಡು, ಮೊಬೈಲ್ ಪತ್ತೆಗೆ ಮುಂದಾಗಿದ್ದರು ಎಂದು ಹೇಳಿದ್ದಾರೆ.

ಪ್ರಜ್ವಲ್ ಹೇಳಿಕೆ ಬೆನ್ನಲ್ಲೇ ಹೊಳೆನರಸೀಪುರ ಪೊಲೀಸರನ್ನು ಎಸ್‌ಐಟಿ ಅಧಿಕಾರಿಗಳು ಸಂಪರ್ಕಿಸಿದ್ದು, ಈ ವೇಳೆ ಮೊಬೈಲ್ ಕಳೆದುಹೋದ ಬಗ್ಗೆ ಎನ್‌ಸಿಆರ್ ದಾಖಲಾಗಿರುವ ಮಾಹಿತಿ ಸಿಕ್ಕಿದೆ. ಆದರೆ ಎಷ್ಟೇ ಹುಡುಕಿದರೂ ಮೊಬೈಲ್ ಸಿಕ್ಕಿಲ್ಲ ಎಂದು ಸ್ಥಳೀಯ ಪೊಲೀಸರು ಹೇಳಿದ್ದಾರೆ. ಹೀಗಾಗಿ‌ ಮೊಬೈಲ್ IMEI ನಂಬರ್ ಪಡೆದು ಮೊಬೈಲ್ ಪತ್ತೆ ಮುಂದಾದ ಎಸ್‌ಐಟಿ ಮುಂದಾಗಿದೆ.

ನೆನ್ನೆ ರಾತ್ರಿ 9 ಗಂಟೆಯವರೆಗೆ ಪ್ರಜ್ವಲ್ ವಿಚಾರಣೆ ನಡೆಸಿದ್ದ ಎಸ್ಐಟಿ ಅಧಿಕಾರಿಗಳು, ನಂತರ ಪ್ರಜ್ವಲ್‌ಗೆ ಊಟದ ವ್ಯವಸ್ಥೆ ಮಾಡಿದ್ದರು. ರಾತ್ರಿ 11.30ರ ತನಕ ನಿದ್ದೆ ಬರದೇ ಕೂತಿದ್ದ ಪ್ರಜ್ವಲ್‌, ನಂತರ ನಿದ್ದೆಗೆ ಜಾರಿದ್ದರು. ವಿಚಾರಣೆ ವೇಳೆ ಪ್ರಜ್ವಲ್ ರೇವಣ್ಣ‌ ಅಸಮರ್ಪಕ ಉತ್ತರಗಳನ್ನು ನೀಡಿದ ಹಿನ್ನೆಲೆಯಲ್ಲಿ ಇಂದು ಕೂಡ ವಿಚಾರಣೆ ನಡೆಸಿ ಲೈಂಗಿಕ ದೌರ್ಜನ್ಯ ಸಂಬಂಧ ಹೇಳಿಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ | Bhavani Revanna: ಮಗ ಬಂದ, ಅಮ್ಮ ನಾಪತ್ತೆ! ಮನೆಯಿಂದ ಮಾಯವಾದ ಭವಾನಿ ರೇವಣ್ಣ; ಕಾದು ಕುಳಿತ ಎಸ್‌ಐಟಿ

6 ದಿನಕ್ಕೆ ಮುಗಿಯಲ್ವಾ ಪ್ರಜ್ವಲ್ ಪೊಲೀಸ್ ಕಸ್ಟಡಿ?

ಸದ್ಯ ಹೊಳೆನರಸೀಪುರ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಪ್ರಜ್ವಲ್ ರೇವಣ್ಣರನ್ನು ಪೊಲೀಸ್‌ ಕಸ್ಟಡಿಗೆ ಪಡೆಯಲಾಗಿದೆ. ಕ್ತೈಂ ನಂಬರ್ 107 ಸಂಬಂಧಿಸಿದಂತೆ ಮಾತ್ರ ವಿಚಾರಣೆ ನಡೆಸಲಾಗುತ್ತಿದೆ. ಇದಲ್ಲದೆ ಸಿಐಡಿ ಸೈಬರ್ ಠಾಣೆಯಲ್ಲಿ ಎರಡು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಮೂರು ಎಫ್‌ಐಆರ್‌ಗಳಿಗೆ ಪ್ರತ್ಯೇಕ ತನಿಖಾಧಿಕಾರಿ ನೇಮಕ ಮಾಡಲಾಗಿದೆ. ಹೀಗಾಗಿ ಹೊಳೆ ನರಸೀಪುರ ಕೇಸ್ ಕಸ್ಟಡಿ ಮುಗಿದ ಬಳಿಕ ಸಿಐಡಿ ಸೈಬರ್ ಠಾಣೆಯ ಎಫ್‌ಐಆರ್ ಮೇರೆಗೆ ಅರೆಸ್ಟ್ ಮಾಡಲಾಗುತ್ತದೆ. ಸಿಐಡಿಯ ಎರಡೂ ಎಫ್‌ಐಆರ್‌ಗಳಲ್ಲಿ ಪ್ರತ್ಯೇಕವಾಗಿ ಪ್ರಜ್ವಲ್‌ನ ಕಸ್ಟಡಿಗೆ ಪಡೆಯಲು ಎಸ್‌ಐಟಿ ನಿರ್ಧಾರ ಮಾಡಿದೆ. ಹೀಗಾಗಿ 10 ರಿಂದ 15 ದಿನ ಪ್ರಜ್ವಲ್ ಪೊಲೀಸ್ ಕಸ್ಟಡಿಯಲ್ಲೇ ಇರುವ ಸಾಧ್ಯತೆ ಇದೆ. ಹೀಗಾಗಿ 6 ದಿನಕ್ಕೇ ಪ್ರಜ್ವಲ್‌ ವಿಚಾರಣೆ ಮುಗಿಯುವುದಿಲ್ಲ ಎನ್ನಲಾಗಿದೆ.

Continue Reading

ಕ್ರೈಂ

Cow Smuggling : ಕಂಟೇನರ್‌, ಮಿಲ್ಕ್‌ ವ್ಯಾನ್‌ನಲ್ಲಿತ್ತು 70ಕ್ಕೂ ಹೆಚ್ಚು ಜಾನುವಾರು; ಹಿಂಸೆ ಕೊಟ್ಟವರು ಅರೆಸ್ಟ್‌

Cow Smuggling: ಕಾರವಾರದಲ್ಲಿ ಅಕ್ರಮ ಗೋ ಸಾಗಾಟದ ವಾಹನ ಬೆನ್ನಟ್ಟಿದ ಪೊಲೀಸರು 20ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಿಸಿದ್ದಾರೆ. ಕಂಟೇನರ್‌ವೊಂದರಲ್ಲೇ ಜಾನುವಾರಗಳನ್ನು ತುರುಕಿ ಹಿಂಸಾತ್ಮಕವಾಗಿ ರವಾನೆ ಮಾಡಲಾಗುತ್ತಿತ್ತು. ಇತ್ತ ಮೈಸೂರಿನಲ್ಲೂ ಕಸಾಯಿಖಾನೆಗೆ ಸಾಗಿಸುತ್ತಿದ್ದ 49ಕ್ಕೂ ಹೆಚ್ಚು ರಾಸುಗಳನ್ನು ರಕ್ಷಣೆ ಮಾಡಲಾಗಿದೆ.

VISTARANEWS.COM


on

By

Cow Smuggling
Koo

ಕಾರವಾರ/ಮೈಸೂರು: ಪ್ರತ್ಯೇಕ ಕಡೆಗಳಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ (Cow Smuggling) ವಾಹನಗಳ ಮೇಲೆ ಪೊಲೀಸರು ದಾಳಿ, ರಾಸುಗಳನ್ನು ರಕ್ಷಣೆ ಮಾಡಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 66ರ ಮಾಸ್ತಿಕಟ್ಟಾ ಸರ್ಕಲ್ ಬಳಿ ಕಂಟೇನರ್‌ನಲ್ಲಿ ಹಿಂಸಾತ್ಮಕವಾಗಿ ಜಾನುವಾರುಗಳನ್ನು ಸಾಗಾಟಕ್ಕೆ ಯತ್ನಿಸಲಾಗಿತ್ತು.

ಬೆಳಗಾವಿ ಜಿಲ್ಲೆಯ ಕಿತ್ತೂರಿನಿಂದ ಭಟ್ಕಳಕ್ಕೆ ಕಂಟೇನರ್‌ ಮೂಲಕ ಜಾನುವಾರಗಳನ್ನು ಸಾಗಾಟಕ್ಕೆ ತೆರಳುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು 23 ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ. ಮಂಡ್ಯ ಮೂಲದ ಚಾಲಕ ಸೈಯ್ಯದ್ ಇಸ್ಮಾಯಿಲ್, ಹಾಸನ ಜಿಲ್ಲೆಯ ಹೊಳೆನರಸೀಪುರದ ಮಹಮ್ಮದ್ ಅತೀಕ್, ಇರ್ಫಾನ್ ಬಂಧಿತರು. ಜಾನುವಾರು ಸಾಗಾಟ ಸಂಬಂಧ ಭಟ್ಕಳದ ಮದೀನಾ ಕಾಲೋನಿಯ ಶಾಯ್ ನೂರ್, ಅವುಫ್ ಅಬು ಅಹ್ಮದ್ ಎಂಬುವವರನ್ನು ಬಂಧಿಸಲಾಗಿದೆ. ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮಿಲ್ಕ್‌ ಟ್ಯಾಂಕ್‌ನಲ್ಲಿದ್ದ ಗೋವು!

ಕಸಾಯಿಖಾನೆಗೆ ಸಾಗಿಸುತ್ತಿದ್ದ 49ಕ್ಕೂ ಹೆಚ್ಚು ರಾಸುಗಳ ರಕ್ಷಣೆ ಮಾಡಲಾಗಿದೆ. ಮೈಸೂರಿನಲ್ಲಿ ಹುಣಸೂರು ಪೊಲೀಸರು ಕಾರ್ಯಾಚರಣೆ ನಡೆಸಿದರು. ಜಾನುವಾರುಗಳನ್ನು ಕೂಡಿ ಹಾಕಿದ್ದ ಗೋಡೌನ್ ಮೇಲೆ ಮಧ್ಯರಾತ್ರಿ ವೇಳೆ ದಾಳಿ ಮಾಡಿದಾಗ ಒಂದು ಮಿಲ್ಕ್ ವ್ಯಾನ್ ಸೇರಿದಂತೆ ಮೂರು ಗೂಡ್ಸ್ ವಾಹನಗಳಲ್ಲಿ ತುಂಬಿದ್ದ 49 ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದೆ. ಹುಣಸೂರು ತಾಲೂಕಿನ ರತ್ನಪುರಿಯ ಅಲ್ತಾಫ್, ಶಾಬುದ್ದೀನ್ ಎಂಬುವವರಿಗೆ ಸೇರಿದ ಮನೆ ಪಕ್ಕದ ಗೋಡೌನ್‌ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Family Fighting : ಜಮೀನಿನ ವಿಚಾರದಲ್ಲಿ ಕುಟುಂಬಗಳ ಫೈಟ್; ಕುಡುಗೋಲು, ದೊಣ್ಣೆ ಹಿಡಿದು ಮಾರಾಮಾರಿ

ಅಕ್ರಮ ಗೋ ಸಾಗಾಟದ ವಾಹನ ಬೆನ್ನಟ್ಟಿ ಹಿಡಿದ ಭಜರಂಗದಳದ ಕಾರ್ಯಕರ್ತರು

ಯಾದಗಿರಿ: ಕಸಾಯಿ ಖಾನೆಗೆ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ (Cow Smugling) ವಾಹನವನ್ನು ಬಜರಂಗದಳ ಕಾರ್ಯಕರ್ತರು ಬೆನ್ನಟ್ಟಿ ಹಿಡಿದಿದ್ದಾರೆ. ಆ ವಾಹನದಲ್ಲಿ ನಿರ್ದಯವಾಗಿ ಹಾಕಲಾಗಿದ್ದ 7 ಗೋವುಗಳನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಲಾಗಿದೆ. ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡುವವರರ ಬಗ್ಗೆ ಇದೇ ವೇಳೆ ಆಕ್ರೋಶ ವ್ಯಕ್ತಪಡಿಸಲಾಗಿದ್ದು ಎಲ್ಲರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾರ್ಯಕರ್ತರು ಮನವಿ ಮಾಡಿದ್ದಾರೆ.

ಯಾದಗಿರಿ ಜಿಲ್ಲೆಯ ವರ್ಕನಳ್ಳಿ ಬಳಿ ವಾಹನ ತಡೆದು ಗೋವುಗಳ ರಕ್ಷಣೆ ಮಾಡಲಾಗಿದೆ. ಮಸ್ಕನಳ್ಳಿ ಗ್ರಾಮದಿಂದ ಕಲಬುರಗಿಗೆ ವಾಹನದಲ್ಲಿ ಗೋವುಗಳನ್ನು ಸಾಗಾಟ ಮಾಡಲಾಗುತ್ತಿತ್ತು ಎಂದು ಹಿಂದೂಪರ ಸಂಘಟನೆಯ ಕಾರ್ಯಕರ್ತರು ಆರೋಪಿಸಿದ್ದಾರೆ.

ಯಾವುದೇ ಅನುಮತಿಯಿಲ್ಲದೇ ಹಾಗೂ ನಿರ್ದಾಕ್ಷಿಣ್ಯ ರೀತಿಯಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಮಾಹಿತಿಯನ್ನು ಸ್ಥಳೀಯರು ಬಜರಂಗದಳ ಕಾರ್ಯಕರ್ತರಿಗೆ ನೀಡಿದ್ದರು. ತಕ್ಷಣ ಗೋ ಸಾಗಾಟದ ವಾಹನವನ್ನು ಬೆನ್ನಟ್ಟಿ ತಡೆದು ಬಜರಂಗದಳ ಕಾರ್ಯಕರ್ತರು ಅವುಗಳನ್ನು ವಶಕ್ಕೆ ತೆಗೆದುಕೊಂಡು ಪೊಲೀಸರಿಗೆ ನೀಡಿದ್ದಾರೆ. ಸಾಧಾರಣಾ ಟಾಟಾ ಸುಮೋ ವಾಹನದಲ್ಲಿ 7 ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಕಾರಣ ಅವರುಗಳೆಲ್ಲೂ ಗಂಭೀರ ಸ್ಥಿತಿಯಲ್ಲಿದ್ದವು. ಗೋವುಗಳನ್ನು ರಕ್ಷಿಸಿ ವಾಹನ ಸಹಿತ ಪೋಲಿಸ್ ಠಾಣೆಗೆ ಒಪ್ಪಿಸಲಾಗಿದೆ.

ಯಾದಗಿರಿ ಜಿಲ್ಲೆಯಲ್ಲಿ ಅಕ್ರಮ ಗೋಸಾಗಾಟ ದಂಧೆ ಎಗ್ಗಿಲ್ಲದೇ ನಡೆಯುತ್ತಿದೆ ಎಂದು ಇದೇ ವೇಳೆ ಕಾರ್ಯಕರ್ತರು ಆರೋಪಿಸಿದ್ದಾರೆ. ಬಕ್ರಿದ್ ಹಬ್ಬಕ್ಕೆ ಅತೀ ಹೆಚ್ಚು ಗೋವು ಸಾಗಾಣಿಕೆ ಆಗ್ತಿವೆ. ಇದರಿಂದ ಸ್ಥಳೀಯವಾಗಿ ಸಮಸ್ಯೆಯಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ನಿರುಪದ್ರವಿ ಗೋವುಗಳನ್ನು ತೆಗೆದುಕೊಂಡು ಹೋಗಿ ಮಾಂಸಕ್ಕಾಗಿ ಕಡಿಯಲಾಗಿತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಗೋವಿನ ರಕ್ಷಣೆ ಮಾಡಬೇಕೆಂದು ಬಜರಂಗದಳ ಮುಖಂಡ ಶಿವಕುಮಾರ ಆಗ್ರಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Valmiki Corporation Scam: ಮೃತ ಅಧೀಕ್ಷಕ ಚಂದ್ರಶೇಖರನ್‌ ಪತ್ನಿ ಅಸ್ವಸ್ಥ; ಆಸ್ಪತ್ರೆಗೆ ದಾಖಲು

Valmiki Corporation Scam: ಪತಿ ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡಾಗಿನಿಂದ ಸರಿಯಾಗಿ ಊಟ ಸೇವಿಸದ ಹಿನ್ನೆಲೆಯಲ್ಲಿ ಅಸ್ವಸ್ಥರಾದ ಪತ್ನಿ ಕವಿತಾ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

VISTARANEWS.COM


on

Valmiki Corporation Scam
Koo

ಶಿವಮೊಗ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki Corporation Scam) ಮೃತ ಅಧೀಕ್ಷಕ ಚಂದ್ರಶೇಖರನ್ ಅವರ ಪತ್ನಿ ಕವಿತಾ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರಗೆ ದಾಖಲಿಸಲಾಗಿದೆ. ಪತಿ ಆತ್ಮಹತ್ಯೆ ಮಾಡಿಕೊಂಡಾಗಿನಿಂದ ಸರಿಯಾಗಿ ಊಟ ಸೇವಿಸದ ಹಿನ್ನೆಲೆಯಲ್ಲಿ ಅಸ್ವಸ್ಥರಾದ ಕವಿತಾ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಂಡನ ಸಾವಿಗೆ ನ್ಯಾಯ ಸಿಗಬೇಕು

ಆಸ್ಪತ್ರೆಗೆ ದಾಖಲಾಗುವ ಮುನ್ನ ಮೃತ ಚಂದ್ರಶೇಖರ್ ಪತ್ನಿ ಕವಿತಾ ಮಾತನಾಡಿ, ನನ್ನ ಗಂಡನ ಸಾವಿಗೆ ನ್ಯಾಯ ಸಿಗಬೇಕು, ಗಂಡನ ಆತ್ಮಕ್ಕೆ ಶಾಂತಿ ಸಿಗಬೇಕು. ಕಚೇರಿಯಲ್ಲಿ ನಡೆದಿರುವ ಸತ್ಯ ಹೊರಬರಬೇಕು. ನಮಗೆ ನ್ಯಾಯ ಬೇಕು, ತಪ್ಪಿತಸ್ಥರಿಗೆ ಶಿಕ್ಷೆ ಆಗಬೆಕು ಎಂದು ಆಗ್ರಹಿಸಿದರು.

ಇದನ್ನೂ ಓದಿ | Valmiki Corporation Scam: ವಾಲ್ಮೀಕಿ ನಿಗಮ ಅಕ್ರಮ ಕೇಸ್‌; 16 ಕಂಪನಿಗಳಿಗೆ 80 ಕೋಟಿ ವರ್ಗಾವಣೆ, ಯಾರಿಗೆ ಎಷ್ಟು ಹಣ?

ನ್ಯಾಯ ಕೊಡಿಸುತ್ತೇವೆ ಎಂದು ಎಲ್ಲಾ ನಾಯಕರು ಹೇಳಿದ್ದಾರೆ. ನಿಗಮದ ಅಧಿಕಾರಿಗಳ ಬಂಧನ ಆಗಿದೆ ಅಷ್ಟೇ, ಅವರಿಗೆ ಶಿಕ್ಷೆ ಆಗಬೇಕು. ಬ್ಯಾಂಕಿನ ಅಧಿಕಾರಿ ಅರೆಸ್ಟ್ ಆಗಿಲ್ಲ. ಒಬ್ಬ ಹೆಣ್ಣು ಮಗಳ ಗೋಳು ಗೊತ್ತಾಗಬೇಕಾದರೆ ಬ್ಯಾಂಕ್‌ ಅಧಿಕಾರಿ ಬಂಧನವಾಗಬೇಕು. ಯಾವ ತನಿಖೆ ಆಗಲಿ, ಸತ್ಯ ಹೊರಬರಬೇಕು ಎಂದು ತಿಳಿಸಿದರು.

ಆಫೀಸ್‌ನಲ್ಲಿ ಏನು ನಡೆದಿದೆ ಎಲ್ಲವೂ ಹೊರ ಬರಬೇಕು. ನನ್ನ ಗಂಡನಿಗೆ ಒತ್ತಡ ಹಾಕಿದ್ದಾರೆ. ಈ ಪ್ರಕರಣ ಸಾಕಷ್ಟು ಜನ ಇದ್ದಾರೆ, ಅದೆಲ್ಲಾ ತನಿಖೆಯಿಂದ ಹೊರ ಬರಬೇಕು. ಸಿಎಂಗೆ ಕೇಳೋದು ಒಂದೇ ಒಂದು, ಗಂಡನ ಸಾವಿಗೆ ನ್ಯಾಯ ಸಿಗಬೇಕು. ನಮಗೆ ಮುಂದಿನ ಜೀವನದ ದಾರಿ ಕಾಣುತ್ತಿಲ್ಲ. ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಬೇಕಾದ ಸಂದರ್ಭದಲ್ಲಿ ಹೀಗೆ ಆಯ್ತು, ಸರ್ಕಾರ ನಮ್ಮ ಬಗ್ಗೆ ಗಮನ ಹರಿಸುತ್ತೋ ಇಲ್ವೋ ಗೊತ್ತಿಲ್ಲ. ಯಾವುದಾದರೂ ಸರಿ, ಗಂಡನ ಸಾವಿಗೆ ನ್ಯಾಯ ಸಿಗಬೇಕು. ಬಂಧಿತರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು.

ವಾಲ್ಮೀಕಿ ನಿಗಮ ಹಗರಣ ತನಿಖೆಗೆ ಸಿಬಿಐ ಎಂಟ್ರಿ ಫಿಕ್ಸ್; ನಾಗೇಂದ್ರ ವಿರುದ್ಧ ಕ್ರಮಕ್ಕೆ ಖರ್ಗೆ ಸೂಚನೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣದಲ್ಲಿ (Valmiki Corporation Scam) ಸಚಿವ ಬಿ.ನಾಗೇಂದ್ರ ತಲೆ ದಂಡಕ್ಕೆ ಒತ್ತಾಯಗಳು ಕೇಳಿಬರುತ್ತಿವೆ. ಹೀಗಾಗಿ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಆದರೆ, ಎಸ್‌ಐಟಿ ವರದಿ ಬಳಿಕವೂ ಕೇಸ್‌ನಲ್ಲಿ ಸಿಬಿಐ ಎಂಟ್ರಿ ಬಹುತೇಕ ಫೀಕ್ಸ್ ಎನ್ನಲಾಗಿದೆ. ಯೂನಿಯನ್ ಬ್ಯಾಂಕ್ ಆಫ್‌ ಇಂಡಿಯಾ ದೂರಿನ ಹಿನ್ನೆಲೆಯಲ್ಲಿ ಸಿಬಿಐ ಎಂಟ್ರಿ ಸಾಧ್ಯತೆ ಇದ್ದು, ಇದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಹೇಳಿಕೆಯೂ ಇಂಬು ನೀಡಿದೆ. ಇನ್ನು ಪ್ರಕರಣದಲ್ಲಿ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ ಸಚಿವ ನಾಗೇಂದ್ರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ, ಡಿಸಿಎಂಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಹಗರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಯೂನಿಯನ್ ಬ್ಯಾಂಕ್ ಆಫ್‌ ಇಂಡಿಯಾ, ಕೇಂದ್ರ ಗೃಹ ಇಲಾಖೆಗೆ ಪತ್ರ ಬರೆದಿತ್ತು. 50 ಕೋಟಿ ಅಧಿಕ ಹಣ ಅಕ್ರಮವಾಗಿದ್ದರೆ ಬ್ಯಾಂಕ್ ಅಧಿಕಾರಿಗಳು ದೂರು ನೀಡಬೇಕು ಎಂಬ ಕೇಂದ್ರ ಹಣಕಾಸು ಸಚಿವಾಲಯದ ಸುತ್ತೋಲೆ ಹಿನ್ನೆಲೆಯಲ್ಲಿ ಸಿಬಿಐ ತನಿಖೆಗೆ ವಹಿಸುವಂತೆ ಯೂನಿಯನ್ ಬ್ಯಾಂಕ್ ದೂರು ಮನವಿ ಪತ್ರ ಸಲ್ಲಿಸಿದೆ. ಹಾಗಾಗಿ ಪ್ರಕರಣದಲ್ಲಿ ಬಹುತೇಕ ಸಿಬಿಐ ಎಂಟ್ರಿಯಾಗುವ ಸಾಧ್ಯತೆಗಳಿವೆ.

ಇದನ್ನೂ ಓದಿ | ವಾಲ್ಮೀಕಿ ನಿಗಮದ ಚಂದ್ರಶೇಖರ್‌ ಆತ್ಮಹತ್ಯೆ, 87 ಕೋಟಿ ರೂ. ಹಗರಣ; ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ

ಪ್ರಕರಣದ ಮಾಹಿತಿ ಪಡೆದ ಮಲ್ಲಿಕಾರ್ಜುನ ಖರ್ಗೆ

ರಾಜ್ಯ ಸರ್ಕಾರದ ವಾಲ್ಮೀಕಿ ನಿಗಮದ ಹಣ ತೆಲಂಗಾಣಕ್ಕೆ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಕರಣದ ಬಗ್ಗೆ ತೆಲಂಗಾಣ ಸಿಎಂ ಬಳಿ ಮಾಹಿತಿ ಪಡೆದಿದ್ದಾರೆ. ಇನ್ನು ಪ್ರಕರಣದ ಪ್ರಕರಣದ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ, ನಾಗೇಂದ್ರ ಅವರ ಮೇಲೆ ಕ್ರಮ ಕೈಗೊಳ್ಳಿ ಎಂದು ಸಿಎಂ, ಡಿಸಿಎಂಗೆ ಖರ್ಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಮತ್ತೊಂದೆಡೆ ಕೆಪಿಸಿಸಿ ಕಾರ್ಯಾಧ್ಯಕ್ಷರಿಂದ ಕೂಡ ಸಿಎಂ ಹಾಗೂ ಡಿಸಿಎಂಗೆ ಮನವಿ ಮಾಡಲಾಗಿದೆ.ಇದು ಪಕ್ಷ ಮತ್ತು ಸರ್ಕಾರಕ್ಕೆ ಡ್ಯಾಮೇಜ್. ಮೊದಲು ನಾಗೇಂದ್ರ ಅವರಿಂದ ರಾಜೀನಾಮೆ ಪಡೆದುಕೊಳ್ಳಿ. ತನಿಖೆಯಲ್ಲಿ ತಪ್ಪಿತಸ್ಥರಲ್ಲ ಅಂತ ಸಾಬೀತಾದ್ರೆ ಸಚಿವ ಸಂಪುಟಕ್ಕೆ ಮತ್ತೆ ಸೇರ್ಪಡೆ ಮಾಡಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಸಿಬಿಐ ತನಿಖೆ ಬಗ್ಗೆ ಡಿಕೆಶಿ ಏನು ಹೇಳಿದರು?

ವಾಲ್ಮೀಕಿ ನಿಗಮ ಹಗರಣದ ತನಿಖೆಗೆ ಯೂನಿಯನ್ ಬ್ಯಾಂಕ್ ಪತ್ರ ಬರೆದ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಪ್ರತಿಕ್ರಿಯಿಸಿ, ಪತ್ರ ಬರೆಯಲಿ, ತಪ್ಪಿಲ್ಲ. ಅದಕ್ಕೆ ಒಂದು ವಿಧಾನ ಇದೆ. ಇಷ್ಟು ಕೋಟಿ ಅಕ್ರಮ ಇದ್ದಾಗ ನಾನು ಕೊಟ್ಟರೂ ಅಥವಾ ನೀವು ಕೊಡದೇ ಇದ್ದರೂ ಅದು ಸಿಬಿಐ ತನಿಖೆಗೆ ಹೋಗುತ್ತೆ. ನಮಗೆ ಗೊತ್ತಿಲ್ಲ ಅಂತ ತಿಳಿದುಕೊಳ್ಳಬೇಡಿ. ಯಾವುದಾದರೂ ಬ್ಯಾಂಕ್‌ನಲ್ಲಿ ಈ ರೀತಿಯಾದರೆ ಯಾವ ಸರ್ಕಾರವೂ ತನಿಖೆಗೆ ಕೊಡಬೇಕು ಅಂತಿಲ್ಲ. ಅವರು ತಗೋಬೇಕು ಅಂತೇನು ಇಲ್ಲ. ನ್ಯಾಚುರಲ್ ಆಗಿ ಅದು ಸಿಬಿಐ ತನಿಖೆಗೆ ಹೋಗುತ್ತೆ. ನಾವು ತನಿಖೆಗೆ ಸಹಕರಿಸುತ್ತೇವೆ, ರಾಜಕೀಯ ಇಲ್ಲದೇ ತನಿಖೆ ನಡೆಸಲಿ. ಸದ್ಯಕ್ಕೆ ಸಿಬಿಐ ಬರುವ ಸಂದರ್ಭ ಇಲ್ಲ, ನಾವೇ ತನಿಖೆ ಮಾಡ್ತೀವಿ ಎಂದು ಹೇಳಿದ್ದಾರೆ.

ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದ ಸಿಎಂ

ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗುವುದು. ಪ್ರಕರಣಕ್ಕೆ ಸಂಬಂಧಪಟ್ಟಂತೆ SIT ರಚಿಸಲಾಗಿದ್ದು, ತನಿಖೆ ಚುರುಕಾಗಿ ನಡೆಯುತ್ತಿದೆ. ಹೀಗಾಗಿ ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ತಿಳಿಸಿದ್ದಾರೆ.

Continue Reading

ದೇಶ

IndiGo Flight: ಮತ್ತೊಂದು ಹುಸಿ ಬಾಂಬ್‌ ಕರೆ; ಮುಂಬೈಯಲ್ಲಿ ಇಂಡಿಗೋ ವಿಮಾನದ ತುರ್ತು ಲ್ಯಾಂಡಿಂಗ್‌

IndiGo Flight: ಶನಿವಾರ ಚೆನ್ನೈನಿಂದ ಮುಂಬೈಗೆ ಹೊರಟಿದ್ದ ಇಂಡಿಗೋ 6ಇ 5314 ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನಲೆಯಲ್ಲಿ ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಲಾಯಿತು. ಈ ಬಗ್ಗೆ ವಿಮಾನ ವಕ್ತಾರರು ಮಾಹಿತಿ ನೀಡಿ, ʼʼಚೆನ್ನೈಯಿಂದ ಮುಂಬೈಗೆ ತೆರಳುವ ಇಂಡಿಗೋ 6ಇ 5314 ವಿಮಾನಕ್ಕೆ ಬಾಂಬ್‌ ಬೆದರಿಕೆ ಕರೆ ಬಂದಿದೆ. ಮುಂಬೈಯಲ್ಲಿ ವಿಮಾನವನ್ನು ತುರ್ತಾಗಿ ಲ್ಯಾಂಡಿಂಗ್‌ ಮಾಡಲಾಗಿದ್ದು, ಭದ್ರತಾ ಏಜೆನ್ಸಿಯ ಮಾರ್ಗಸೂಚಿಗಳ ಪ್ರಕಾರ ವಿಮಾನವನ್ನು ಪ್ರತ್ಯೇಕ ಬೇಗೆ ಕೊಂಡೊಯ್ಯಲಾಯಿತು” ಎಂದು ತಿಳಿಸಿದ್ದಾರೆ.

VISTARANEWS.COM


on

IndiGo Flight
Koo

ಮುಂಬೈ: ದೇಶದಲ್ಲಿ ಹುಸಿ ಬಾಂಬ್‌ ಬೆದರಿಕೆ ಕರೆಗಳ ಹಾವಳಿ ಹೆಚ್ಚುತ್ತಿದೆ. ಶಾಲೆ, ಆಸ್ಪತ್ರೆಗಳ ಜತೆಗೆ ವಿಮಾನಗಳಿಗೂ ಬಾಂಬ್‌ ಬೆದರಿಕೆ ಕರೆ ಬರುತ್ತಿವೆ. ಶುಕ್ರವಾರವಷ್ಟೇ ದಿಲ್ಲಿಯಿಂದ ಶ್ರೀನಗರಕ್ಕೆ ಪ್ರಯಾಣಿಸುತ್ತಿದ್ದ ವಿಸ್ತಾರ ವಿಮಾನ(Vistara Flight)ಕ್ಕೆ ಹುಸಿಬಾಂಬ್‌ ಬಂದಿತ್ತು. ಇದೀಗ ಇಂಡಿಗೋ ವಿಮಾನಕ್ಕೆ ಇಂತಹದ್ದೇ ಕರೆ ಬಂದಿದೆ. ಶನಿವಾರ ಚೆನ್ನೈನಿಂದ ಮುಂಬೈಗೆ ಹೊರಟಿದ್ದ ಇಂಡಿಗೋ 6ಇ 5314 ವಿಮಾನಕ್ಕೆ (IndiGo Flight) ಬಾಂಬ್ ಬೆದರಿಕೆ ಬಂದ ಹಿನ್ನಲೆಯಲ್ಲಿ ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಲಾಯಿತು.

ಈ ಬಗ್ಗೆ ವಿಮಾನ ವಕ್ತಾರರು ಮಾಹಿತಿ ನೀಡಿ, ʼʼಚೆನ್ನೈಯಿಂದ ಮುಂಬೈಗೆ ತೆರಳುವ ಇಂಡಿಗೋ 6ಇ 5314 ವಿಮಾನಕ್ಕೆ ಬಾಂಬ್‌ ಬೆದರಿಕೆ ಕರೆ ಬಂದಿದೆ. ಮುಂಬೈಯಲ್ಲಿ ವಿಮಾನವನ್ನು ತುರ್ತಾಗಿ ಲ್ಯಾಂಡಿಂಗ್‌ ಮಾಡಲಾಗಿದ್ದು, ಭದ್ರತಾ ಏಜೆನ್ಸಿಯ ಮಾರ್ಗಸೂಚಿಗಳ ಪ್ರಕಾರ ವಿಮಾನವನ್ನು ಪ್ರತ್ಯೇಕ ಬೇಗೆ ಕೊಂಡೊಯ್ಯಲಾಯಿತು” ಎಂದು ತಿಳಿಸಿದ್ದಾರೆ.

“ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಕೆಳಗಿಳಿಸಲಾಗಿದೆ. ವಿಮಾನವನ್ನು ಪ್ರಸ್ತುತ ತಪಾಸಣೆಗೆ ಒಳಪಡಿಸಲಾಗಿದ್ದು, ಎಲ್ಲ ಭದ್ರತಾ ತಪಾಸಣೆಗಳು ಪೂರ್ಣಗೊಂಡ ನಂತರ, ವಿಮಾನವನ್ನು ಟರ್ಮಿನಲ್ ಪ್ರದೇಶಕ್ಕೆ ಮತ್ತೆ ಕೊಂಡೊಯ್ಯಲಾಗುವುದು. ತಪಾಸಣೆ ವೇಳೆ ಯಾವುದೇ ಶಂಕಾಸ್ಪದ ವಸ್ತು ಪತ್ತೆಯಾಗಿಲ್ಲʼʼ ಎಂದು ವಿವರಿಸಿದ್ದಾರೆ.

ನಿಲ್ಲುತ್ತಲೇ ಇಲ್ಲ ಹುಸಿಬಾಂಬ್‌ ಕರೆ ಹಾವಳಿ

ಶುಕ್ರವಾರ ಬೆಳಗ್ಗೆ 12.10ಗೆ ದಿಲ್ಲಿ ವಿಮಾನ ನಿಲ್ದಾಣದಿಂದ ವಿಸ್ತಾರ UK611 ವಿಮಾನಕ್ಕೆ ಬಾಂಬ್‌ ಬೆದರಿಕೆ ಬಂದಿತ್ತು. ಈ ಕರೆ ಶ್ರೀನಗರದ ಏರ್‌ ಟ್ರಾಫಿಕ್‌ ಕಂಟ್ರೋಲ್‌(ATC)ಗೆ ಬಂದಿದ್ದ ಹಿನ್ನೆಲೆಯಲ್ಲಿ ತಕ್ಷಣ ಆ ವಿಮಾನವನ್ನು ಪ್ರತ್ಯೇಕವಾಗಿ ಲ್ಯಾಂಡಿಂಗ್‌ ಮಾಡಿಸಲಾಗಿತ್ತು. ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಕೆಳಗಿಸಲಾಗಿದ್ದು, ಏರ್‌ಪೋರ್ಟ್‌ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಸ್ಥಳಕ್ಕೆ ಬಾಂಬ್‌ ನಿಷ್ಕ್ರೀಯ ದಳವೂ ದೌಡಾಯಿಸಿ ಪರಿಶೀಲನೆ ನಡೆಸಿದೆ. ಯಾವುದೇ ಬಾಂಬ್, ಸ್ಫೋಟಕ ವಸ್ತುಗಳು ಪರಿಶೀಲನೆ ವೇಳೆ ಪತ್ತೆ ಆಗಿಲ್ಲ.

ಶುಕ್ರವಾರ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೂ ಬಾಂಬ್‌ ಬೆದರಿಕೆ ಸಂದೇಶ ಬಂದಿದ್ದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಅನಾಮಿಕ ವ್ಯಕ್ತಿಯೊಬ್ಬ ಏರ್‌ಪೋರ್ಟ್‌ನ ಬಾತ್ ರೂಮ್‌ನ ಕನ್ನಡಿ ಮೇಲೆ ಬೆದರಿಕೆ ಸಂದೇಶ ಬರೆದ ಹಿನ್ನೆಲೆಯಲ್ಲಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಏರ್‌ಪೋರ್ಟ್‌ನ ಅಲ್ಪಾ 2ರ ಆಡಳಿತ ಕಚೇರಿಯ ಬಾತ್ ರೂಮ್‌ನಲ್ಲಿ ಅಪರಿಚಿತ ವ್ಯಕ್ತಿ ಬೆದರಿಕೆ ಸಂದೇಶ ಬರೆದಿದ್ದ. ತಕ್ಷಣ ಶ್ವಾನದಳ, ಬಾಂಬ್ ಸ್ಕ್ವಾಡ್‌ನೊಂದಿಗೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಹೀಗಾಗಿ ಇದು ಹುಸಿ ಸಂದೇಶ ಅಂತ ಗೊತ್ತಾಗಿ ಅಧಿಕಾರಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ದಿಲ್ಲಿಯಿಂದ ವಾರಣಾಸಿಗೆ ಪ್ರಯಾಣಿಸಬೇಕಾಗಿದ್ದ ಇಂಡಿಗೋ ಏರ್‌ಲೈನ್ಸ್‌ನ 6E2211 ವಿಮಾನಕ್ಕೆ ಮಂಗಳವಾರ ಬೆಳಗ್ಗೆ ಬಾಂಬ್‌ ಬೆದರಿಕೆ ಕರೆ ಬಂದಿತ್ತು. ಇನ್ನೇನು ಟೇಕ್‌ ಆಫ್‌ ಆಗಬೇಕಾಗಿದ್ದ ವಿಮಾನವನ್ನು ಪ್ರತ್ಯೇಕ ರನ್‌ ವೇ ಒಯ್ದು ಭದ್ರತಾ ಸಿಬ್ಬಂದಿ ಪರಿಶೀಲನೆ ನಡೆಸಿದ್ದರು. ಇತ್ತೀಚೆಗೆ ಪದೇಪದೆ ಕೆಲ ಕಿಡಿಗೇಡಿಗಳು ಬೆದರಿಕೆ ಸಂದೇಶ ಕಳುಹಿಸುತ್ತಿರುವುದು ಹೆಚ್ಚಾಗುತ್ತಿದೆ. ಇಂತಹ ಪ್ರಕರಣಗಳನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ: Bomb Threat: ತಡರಾತ್ರಿ ಬಾಂಬ್‌ ಬೆದರಿಕೆ ಕರೆ; ಬೆಂಗಳೂರು ಪೊಲೀಸರು ಅಲರ್ಟ್, ಆರೋಪಿ ಸೆರೆ

Continue Reading
Advertisement
Liquor ban
ಬೆಂಗಳೂರು2 mins ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

IPL 2025 Mega Auction
ಕ್ರೀಡೆ5 mins ago

IPL 2025 Mega Auction: ಕೇವಲ ಇಷ್ಟು ಆಟಗಾರರ ರಿಟೇನ್​ಗೆ ಮಾತ್ರ ಅವಕಾಶ!

Rohit Sharma
ಪ್ರಮುಖ ಸುದ್ದಿ10 mins ago

Rohit Sharma : ಹಿರಿಯರಿರುವ ತಂಡಕ್ಕಿಂತ ಕಿರಿಯರ ತಂಡವೇ ಬೆಸ್ಟ್​ ಎಂದ ರೋಹಿತ್ ಶರ್ಮಾ; ಯಾಕೆ ಗೊತ್ತಾ?

Exit Poll 2024
ದೇಶ21 mins ago

Exit Poll 2024: ಸಟ್ಟಾ ಬಜಾರ್‌, ರಾಜಕೀಯ ಪರಿಣತರ ಪ್ರಕಾರ ಈ ಬಾರಿಯೂ ಮೋದಿ; ನಿಮ್ಮ ಪ್ರಕಾರ ಯಾರಿಗೆ ಅಧಿಕಾರ? ತಿಳಿಸಿ

POK
ವಿದೇಶ21 mins ago

POK: ಪಿಒಕೆ ತನ್ನ ಭಾಗವಲ್ಲ ಎಂದು ಅಧಿಕೃತವಾಗಿಯೇ ಒಪ್ಪಿಕೊಂಡ ಪಾಕಿಸ್ತಾನ!

Kichcha Sudeep joined hands with Sandesh
ಸ್ಯಾಂಡಲ್ ವುಡ್29 mins ago

Kiccha Sudeep: ಸಂದೇಶ್‌ ಪ್ರೊಡಕ್ಷನ್ಸ್‌ ಜತೆ ಕೈ ಜೋಡಿಸಿದ ಕಿಚ್ಚ ಸುದೀಪ್

Prajwal Revanna Case
ಕರ್ನಾಟಕ44 mins ago

Prajwal Revanna Case: ವಿಚಾರಣೆಯಲ್ಲಿ ಬಾಯಿಬಿಡದ ಪ್ರಜ್ವಲ್‌; ಸ್ಥಳ ಮಹಜರಿಗಾಗಿ ಹೊಳೆನರಸೀಪುರಕ್ಕೆ ಕರೆದೊಯ್ಯಲು ಸಿದ್ಧತೆ

Cow Smuggling
ಕ್ರೈಂ1 hour ago

Cow Smuggling : ಕಂಟೇನರ್‌, ಮಿಲ್ಕ್‌ ವ್ಯಾನ್‌ನಲ್ಲಿತ್ತು 70ಕ್ಕೂ ಹೆಚ್ಚು ಜಾನುವಾರು; ಹಿಂಸೆ ಕೊಟ್ಟವರು ಅರೆಸ್ಟ್‌

Gautam Gambhir
ಕ್ರೀಡೆ2 hours ago

Gautam Gambhir: ಗೌತಮ್​ ಗಂಭೀರ್​ ಭಾರತದ ಮುಂದಿನ ಕೋಚ್​; ಅಧಿಕೃತ ಘೋಷಣೆಯೊಂದೇ ಬಾಕಿ

Rameshwaram Cafe food on Anant Ambani, Radhika Merchant
ಸಿನಿಮಾ2 hours ago

Rameshwaram Cafe: ಅನಂತ್ ಅಂಬಾನಿ ಎರಡನೇ ಪ್ರಿ ವೆಡ್ಡಿಂಗ್‌ನಲ್ಲಿ ಮೇನ್‌ ಮೆನು ರಾಮೇಶ್ವರಂ ಕೆಫೆಯ ಪುಡಿ ಇಡ್ಲಿ ಮತ್ತು ಪುಡಿ ದೋಸೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು2 mins ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌