ಕೆ.ಎನ್‌. ರಾಜಣ್ಣ ಮಾತಿಗೆ ತಿರುಗಿಬಿದ್ದ ಜೆಡಿಎಸ್‌ ನಾಯಕರು - Vistara News

ಕರ್ನಾಟಕ

ಕೆ.ಎನ್‌. ರಾಜಣ್ಣ ಮಾತಿಗೆ ತಿರುಗಿಬಿದ್ದ ಜೆಡಿಎಸ್‌ ನಾಯಕರು

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಕುರಿತು ಮಧುಗಿರಿ ಮಾಜಿ ಶಾಸಕ ಕೆ.ಎನ್‌. ರಾಜಣ್ಣ ಆಡಿದ ಮಾತಿಗೆ ಜೆಡಿಎಸ್‌ ನಾಯಕರು ಹಾಗೂ ಅನೇಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

VISTARANEWS.COM


on

rajanna statement
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಕುರಿತು ಮಧುಗಿರಿ ಮಾಜಿ ಶಾಸಕ ಕೆ.ಎನ್‌. ರಾಜಣ್ಣ ಆಡಿರುವ ಮಾತಿನ ವಿರುದ್ಧ ಜೆಡಿಎಸ್‌ ನಾಯಕರು ತಿರುಗಿಬಿದ್ದಿದ್ದಾರೆ. ಕಾನೂನು ಸಚಿವ ಮಾಧುಸ್ವಾಮಿ ಸಹ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಹಾಸನದಲ್ಲಿ ಪ್ರತಿಕ್ರಿಯೆ ನೀಡಿರುವ ಎಚ್‌.ಡಿ. ದೇವೇಗೌಡರ ಮೊಮ್ಮಗ ಹಾಗೂ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ, ಇವರು ಜನಪ್ರತಿನಿಧಿಯಾಗಲು ಲಾಯಕ್ಕಿಲ್ಲ ಎಂದು ಮಧುಗಿರಿ ಜನರು ಮನೆಗೆ ಕಳಿಸಿದ್ದಾರೆ. ಲೆಕ್ಕಿಕ್ಕಿಲ್ಲದವರ ಬಗ್ಗೆ ನಾನು ಏಕೆ ಪ್ರತಿಕ್ರಿಯೆ ಕೊಡಬೇಕು? ದೊಡ್ಡ ದಂಧೆಕೋರ ಅವನು. ದೇವೇಗೌಡರ ಕಾಲಿನ ಧೂಳಿಗೂ ಸಮಾನ ಅಲ್ಲ ಅವನು. ನೀಚಬಾಯಲ್ಲಿ ನೀಚಪದ ಬಂದಿದೆ, ದೇವರು ಉತ್ತರ ಕೊಡುತ್ತಾರೆ. ಅವನು ಜನಪ್ರತಿನಿಧಿಯಲ್ಲ, ಸೋತು ಮನೆಗೆ ಕೂತುಕೊಂಡಿದ್ದಾನೆ. ಹೀಗೆಯೇ ಮಾತನಾಡುತ್ತಿದ್ದರೆ ಹುಚ್ಚು ಸಂತೆಯಲ್ಲಿ ನಾಯಿಗೆ ಹೊಡೆದ ರೀತಿ ಹೊಡೆಯುತ್ತಾರೆ ಎಂದು ಕಿಡಿಕಾರಿದ್ದಾರೆ.

ಕೀಳು ಅಭಿರುಚಿ: ಮಧುಗಿರಿ ಶಾಸಕ ವೀರಭದ್ರಯ್ಯ

ಕೆ.ಎನ್.ರಾಜಣ್ಣ ಕೀಳು ಅಭಿರುಚಿಯ ಹೇಳಿಕೆ ನೀಡಿದ್ದಾರೆ ಎಂದು ಮಧುಗಿರಿ ಶಾಸಕ ವೀರಭದ್ರಯ್ಯ ತುಮಕೂರಿನಲ್ಲಿ ಹೇಳಿದ್ದಾರೆ. ರಾಷ್ಟ್ರ ನಾಯಕರ ದೇವೇಗೌಡರ ಬಗ್ಗೆ ಕೀಳಾಗಿ ಮಾತನಾಡಿರುವುದು ವಿಷಾದನೀಯ. ರಾಜಣ್ಣ ಹೇಳಿಕೆಯನ್ನು ವಿರೋಧಿಸಿ ಶನಿವಾರ ಬೃಹತ್‌ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ. ಜೆಡಿಎಸ್‌ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ಗೆಲ್ಲುವುದಕ್ಕೆ ಏನೇನೋ ಹೇಳಬಾರದು: ರವೀಂದ್ರ ಶ್ರೀಕಂಠಯ್ಯ

ಮಂಡ್ಯದಲ್ಲಿ ಪ್ರತಿಕ್ರಿಯೆ ನೀಡಿರುವ ಶ್ರೀರಂಗಪಟ್ಟಣದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ, ರಾಜಕಾರಣದಲ್ಲಿ ಗೆಲ್ಲಬೇಕು ಎಂದು ಏನೇನೋ ಹೇಳಬಾರದು. ರಾಜಣ್ಣ ನೀವು ಒಕ್ಕಲಿಗ ಮುಖಂಡರಿದ್ದೀರಿ, ನೀವು ಎಂಎಲ್ಎ ಆಗಿ, ನಮಗೆ ಅಭ್ಯಂತರವಿಲ್ಲ. ಆದರೆ ಒಕ್ಕಲಿಗ ಮುಖಂಡ ದೇವೇಗೌಡರನ್ನು ನಾಲ್ಕು ಜನ ಹೊತ್ತುಕೊಂಡು ಹೋಗುತ್ತಾರೆ ಎನ್ನುತ್ತೀರಲ್ಲ, ಇದು ಸರಿಯಲ್ಲ.

ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಹಗುರವಾಗಿ ಮಾತನಾಡುವುದು ನ್ಯಾಯವೇ? ನಿಮ್ಮ ರಾಜಕೀಯ ಜೀವನದಲ್ಲಿ ಈ ಹೇಳಿಕೆ ಕಳಂಕ. ನೀವು ಅವರ ಬಗ್ಗೆ ಆಡಿರುವ ಹಗುರ ಮಾತುಗಳನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ನಿಮ್ಮ ತಂದೆಯೂ ಸತ್ತಿದ್ದಾರೆ, ನಿಮಗೂ ಸಾವು ಬರುತ್ತದೆ, ನನಗೂ ಸಾವು ಬರುತ್ತದೆ. ಜನರ ಸೇವೆಗೆ ತಮ್ಮ ಇಡೀ ಜೀವನ‌ವನ್ನೇ ಮುಡಿಪಾಡಗಿದ್ದ ನಮ್ಮ ನಾಯಕನ ಬಗ್ಗೆ ಅವಹೇಳನಕಾರಿ ಮಾತುಗಳನ್ನು ಆಡಬೇಡಿ ಎಂದಿದ್ದಾರೆ.

ಸಾಕ್ಷಿಪ್ರಜ್ಞೆ ದೇವೇಗೌಡರು: ಟಿ.ಎ. ಶರವಣ

ದೇಶದ ಸಾಕ್ಷಿ ಪ್ರಜ್ಞೆ, ಕನ್ನಡ ನಾಡಿನ ದಿಗ್ಗಜ ಚೇತನ ಮಾಜಿ ಪ್ರಧಾನಿ ದೇವೇಗೌಡರ ಆಯುಷ್ಯದ ಬಗ್ಗೆ ಕಾಂಗ್ರೆಸ್ ನಾಯಕ ರಾಜಣ್ಣ ಅವರು ಆಡಿರುವ ಹೀನಾಯ ಮಾತುಗಳು, ರಾಜಣ್ಣ ಅವರ ನೀಚ ವ್ಯಕ್ತಿತ್ವಕ್ಕೆ ಹಿಡಿದ ಕೈಗನ್ನಡಿ ಎಂದು ಜೆಡಿಎಸ್ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಟಿ. ಎ. ಶರವಣ ಹೇಳಿದ್ದಾರೆ.

ಹುಟ್ಟು ಸಾವು ಪ್ರಕೃತಿಯ ನಿಯಮ. ಅದನ್ನು ಮೀರಿದವರು ಯಾರೂ ಇಲ್ಲ. ಇದು ವಾಸ್ತವದ ಸತ್ಯ. ಇಂಥ ಜಗದ ನಿಯಮವನ್ನು ದೇವೇಗೌಡರಿಗೆ ಸಮೀಕರಿಸಿ ಮಾತನಾಡಿರುವ ರಾಜಣ್ಣ, ತಾವು ಶಾಶ್ವತವಾಗಿ ಈ ಭೂಮಿಯ ಮೇಲೆ ಉಳಿಯುತ್ತೇನೆ ಎಂಬ ಹುಚ್ಚುತನ, ಹುಸಿ ನಂಬಿಕೆಯಿಂದ ದುರಹಂಕಾರದ ಮಾತುಗಳನ್ನು ಆಡಿರುವುದು ಖಂಡನಾರ್ಹ.

ಈ ನೆಲದ ಮಗ, ಈ ಮಣ್ಣಿನ ಮಗ ದೇವೇಗೌಡರಿಗೆ ನಾಡಿನ ಜನಮಾನಸದ ಪ್ರೀತಿಯೇ ಆಯಸ್ಸು. ಜನರ ಬೆಂಬಲವೇ ಶ್ರೀರಕ್ಷೆ. ಜನರಿಗಾಗಿ ಅವರು ನಡೆಸುತ್ತಿರುವ ಪ್ರತಿ ಹೋರಾಟವೂ ಅವರ ಆಯಸ್ಸನ್ನು ಹೆಚ್ಚಿಸುತ್ತಲೇ ಇದೆ. ನಮ್ಮೆಲ್ಲರ ಪ್ರೀತಿ, ಹಾರೈಕೆ ಅವರ ಜತೆಗಿದೆ.

ದೇವೇಗೌಡರ ಬದುಕೇ ಒಂದು ಯುಗ. ಅವರ ಜೀವನ ಪ್ರೀತಿಗೆ ಸರಿ ಸಾಟಿಯೇ ಇಲ್ಲ. ಈ ಇಳಿ ವಯಸ್ಸಿನಲ್ಲೂ ಯೋಗ, ಓದು, ಸಭೆ, ಸಮಾರಂಭದಲ್ಲಿ ಪಾದರಸದಂತೆ ಪಾಲ್ಗೊಳ್ಳುವ ಅವರ ಚೈತನ್ಯಕ್ಕೆ ಕೊನೆಯೇ ಇಲ್ಲ. ಯುವಕರನ್ನೂ ನಾಚಿಸುವ ಅವರ ಸಾಮರ್ಥ್ಯವೇ ಅವರನ್ನು ದೇಶದ ಉನ್ನತ ನಾಯಕರಲ್ಲಿ ಒಬ್ಬರನ್ನಾಗಿಸಿದೆ.

ರಾಜಕೀಯವಾಗಿ ಕುಸಿದು ಹೋದ ವ್ಯಕ್ತಿಯ ಇಂತಹ ಹೇಳಿಕೆ ಕೋಟ್ಯಂತರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಆದರೆ ಜನಮಾನಸದ ಪ್ರೀತಿಯ ಮಹಾಪೂರದಿಂದ ಶತಾಯುಷಿ ನಾಯಕರಾಗಲಿ ಎನ್ನುವುದೇ ಹಾರೈಕೆ ಎಂದಿದ್ದಾರೆ.

ಹೀಗೆ ಮಾತನಾಡಬಾರದು: ಮಾಧುಸ್ವಾಮಿ

ರಾಜ್ಯ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ರಾಜಣ್ಣ ಹೇಳಿಕೆ ಸರಿಯಲ್ಲ. ರಾಜಕಾರಣ ಬೇರೆ, ಆದರೆ ಆ ರೀತಿಯಲ್ಲಿ ಮಾತಾಡಬಾರದು. ರಾಜಣ್ಣ ನನ್ನ ಸ್ನೇಹಿತ. ಆದರೂ ಹಿರಿಯರ ಬಗ್ಗೆ ಈ ರೀತಿ ಮಾತಾಡುವುದು ಸರಿಯಲ್ಲ ಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿವಮೊಗ್ಗ

Shivamogga News: ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ: ರಾಜು ಹಿರಿಯಾವಲಿ

Shivamogga News: ಸೊರಬ ತಾಲೂಕಿನ ಕುಂದಗಸವಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಶುಕ್ರವಾರ ಮಲೆನಾಡ ಸಿರಿ ಸೇವಾ ಬಳಗದ ರಾಜು ಹಿರಿಯಾವಲಿ ಅವರು, ವಾಟರ್ ಫಿಲ್ಟರ್ ಕೊಡುಗೆಯಾಗಿ ನೀಡಿದರು.

VISTARANEWS.COM


on

Shivamogga News Give top priority to cleanliness says Raju Hiriyawali
Koo

ಸೊರಬ: ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಪೋಷಕರು ಸ್ವಚ್ಛತೆಯತ್ತ ಹೆಚ್ಚು ಹೆಚ್ಚು ಗಮನ ಕೊಡಬೇಕು ಎಂದು ಮಲೆನಾಡ ಸಿರಿ ಸೇವಾ ಬಳಗದ ರಾಜು ಹಿರಿಯಾವಲಿ (Shivamogga News) ತಿಳಿಸಿದರು.

ತಾಲೂಕಿನ ಕುಂದಗಸವಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಶುಕ್ರವಾರ ವಾಟರ್ ಫಿಲ್ಟರ್ ಕೊಡುಗೆಯಾಗಿ ನೀಡಿ, ಬಳಿಕ ಅವರು ಮಾತನಾಡಿದರು.

ಮಕ್ಕಳಿಗೆ ಮೂಲಭೂತ ಸೌಕರ್ಯಗಳಲ್ಲಿ ಶುದ್ಧ ಕುಡಿಯುವ ನೀರು ಸಹ ಒಂದಾಗಿದೆ. ಶುದ್ಧ ನೀರು ಕುಡಿಯುವುದರಿಂದ ಬಹಳಷ್ಟು ಆರೋಗ್ಯ ಸಮಸ್ಯೆಗಳಿಂದ ದೂರವಿರಬಹುದು, ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆ ತಾಲೂಕಿನ ಸುಮಾರು 50 ಶಾಲೆಗಳಿಗೆ ವಾಟರ್ ಫಿಲ್ಟರ್ ಒದಗಿಸುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಎಂದರು.

ಇದನ್ನೂ ಓದಿ: Uttara Kannada News: ರೈತ ಯುವಕರು, ವಿಕಲಚೇತನರ ವಿವಾಹಕ್ಕೆ ಉ.ಕ ಜಿಲ್ಲಾಡಳಿತದಿಂದ ವಿನೂತನ ಪ್ರಯತ್ನ!

ಮಕ್ಕಳು ಮತ್ತು ಶಿಕ್ಷಕರು ಶಾಲಾ ಆವರಣದಲ್ಲಿ ಪ್ಲಾಸ್ಟಿಕ್ ಇನ್ನಿತರೆ ಪೊಟರೆಗಳಲ್ಲಿ ಸಂಗ್ರಹವಾಗದಂತೆ ನೋಡಿಕೊಂಡಲ್ಲಿ ಮಳೆಗಾಲದಂತಹ ಈ ದಿನಗಳಲ್ಲಿ ಸೊಳ್ಳೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು ಎಂದ ಅವರು, ವಿದ್ಯಾರ್ಥಿ ದೆಸೆಯಿಂದಲೇ ಮಕ್ಕಳಿಗೆ ಸ್ವಚ್ಛತೆಯ ಬಗ್ಗೆ ಶೈಕ್ಷಣಿಕ ಪ್ರಜ್ಞೆ ಬೆಳೆಸಿದಲ್ಲಿ ಸ್ವಚ್ಛ ಸಮಾಜದ ನಿರ್ಮಾಣಕ್ಕೆ ಮುನ್ನುಡಿ ಬರೆದಂತಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷ ಎಂ.ಎಲ್. ನೋಪಿ ಶಂಕರ್ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಇದನ್ನೂ ಓದಿ: HDFC Life: ‘ಕೆಲಸ ಮಾಡಲು ಅತ್ಯುತ್ತಮವಾಗಿರುವ ಭಾರತದ ಕಂಪನಿ’ಗಳಲ್ಲಿ ಒಂದಾದ ಎಚ್‌ಡಿಎಫ್‌ಸಿ ಲೈಫ್

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ವೈ. ಗೌರಮ್ಮ, ಸಹ ಶಿಕ್ಷಕ ಅಶೋಕ್, ಪ್ರಮುಖರಾದ ಎಂ.ಎಚ್‌. ಗಣೇಶ್, ಸಂತೋಷ್, ಶ್ರೀಕಾಂತ್, ಸೃಜನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

MUDA site scandal: ಸಿಎಂ ಸಿದ್ದರಾಮಯ್ಯ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲಿ: ಲೆಹರ್‌ ಸಿಂಗ್‌ ಆಗ್ರಹ

MUDA site scandal: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುಟುಂಬದಿಂದ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರವಾಗಿ ಅವರ ನೇತೃತ್ವದ ಸರ್ಕಾರದಿಂದ 62 ಕೋಟಿ ರೂ. ಮೊತ್ತದ ಭಾರಿ ಪರಿಹಾರವನ್ನು ಅವರೇ ಕೇಳಿರುವುದು ಬೇಸರದ ಸಂಗತಿ ಮಾತ್ರವಲ್ಲ, ಲಜ್ಜೆಗೆಟ್ಟ ವರ್ತನೆ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್‌ ಸಿಂಗ್ ಸಿರೋಯಾ ಟೀಕಿಸಿದ್ದಾರೆ.

VISTARANEWS.COM


on

Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ನೇತೃತ್ವದ ಸರ್ಕಾರದಿಂದಲೇ 62 ಕೋಟಿ ರೂ.ಗಳ ಭಾರೀ ಪರಿಹಾರವನ್ನು ಏಕೆ ಕೇಳುತ್ತಿದ್ದಾರೆ? ತಾವು ಯಾವುದಕ್ಕೂ ಹೆದರುವುದಿಲ್ಲ ಎಂದು ಹೇಳುವ ಸಿಎಂ ಸಿದ್ದರಾಮಯ್ಯನವರು ಮುಡಾ ಪ್ರಕರಣವನ್ನು (MUDA site scandal) ಸಿಬಿಐ ಅಥವಾ ಯಾವುದಾದರೂ ಸ್ವತಂತ್ರ ಸಂಸ್ಥೆಗೆ ಒಪ್ಪಿಸಲು ಹೆದರಬಾರದು. ಹಾಗೆಯೇ ಜಾಣತನದಿಂದ ತಮಗೆ ನಿಕಟರಾಗಿರುವ ನಿವೃತ್ತ ನ್ಯಾಯಾಧೀಶರನ್ನು ಕರೆತಂದು ತನಿಖೆ ನಡೆಸಲು ಮುಖ್ಯಮಂತ್ರಿಗಳು ಮುಂದಾಗಬಾರದು ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್‌ ಸಿಂಗ್ ಸಿರೋಯಾ ಹೇಳಿದ್ದಾರೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಆರೋಪದ ಕುರಿತಂತೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಪಾತ್ರವಿದೆ ಎನ್ನಲಾದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣದ ಕುರಿತಂತೆ ಇಂದಿನ ಪತ್ರಿಕೆಗಳಲ್ಲಿ ಮುಖ್ಯಮಂತ್ರಿಗಳ ಹೇಳಿಕೆಯನ್ನು ಗಮನಿಸಿದ್ದೇನೆ. ಇಡೀ ದೇಶದಲ್ಲಿ ಬಹುಶಃ ಹಿಂದಿನ ಅಥವಾ ಇಂದಿನ ಯಾವ ಮುಖ್ಯಮಂತ್ರಿಯೂ ತಮ್ಮ ನೇತೃತ್ವದ ಸರ್ಕಾರದ ವಿರುದ್ಧವೇ ಹೀಗೆ ಬ್ಲ್ಯಾಕ್‌ಮೇಲ್ ಮಾಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುಟುಂಬದಿಂದ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರವಾಗಿ ಅವರ ನೇತೃತ್ವದ ಸರ್ಕಾರದಿಂದ 62 ಕೋಟಿ ರೂ. ಮೊತ್ತದ ಭಾರಿ ಪರಿಹಾರವನ್ನು ಅವರೇ ಕೇಳಿರುವುದು ಬೇಸರದ ಸಂಗತಿ ಮಾತ್ರವಲ್ಲ, ಲಜ್ಜೆಗೆಟ್ಟ ವರ್ತನೆಯೂ ಹೌದು ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ | BJP Karnataka: ರಾಜ್ಯ ಬಿಜೆಪಿಗೆ ನೂತನ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ತಾವು ಸದಾ ಪಾರದರ್ಶಕವಾಗಿದ್ದು, ತಾವೊಬ್ಬ ಲೋಹಿಯಾ-ಸಮಾಜವಾದಿ ಹೇಳಿಕೊಳ್ಳುವ ಯಾವುದೇ ಅವಕಾಶವನ್ನು ಕಳೆದುಕೊಳ್ಳದ ಮುಖ್ಯಮಂತ್ರಿಗಳ ಮನಸ್ಥಿತಿಯನ್ನು ಇದು ಬಯಲು ಮಾಡಿದೆ. ಮುಡಾ ಮಾರುಕಟ್ಟೆ ಮೌಲ್ಯದ ಪರಿಹಾರ ನೀಡಿದರೆ ಅನುಮಾನಾಸ್ಪದವಾಗಿ ಹಂಚಿಕೆಯಾಗಿರುವ ನಿವೇಶನಗಳನ್ನು ಮರಳಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿರುವುದು ನಂಬಲಾಗದ ಮತ್ತು ಆಘಾತಕಾರಿ ಸಂಗತಿ. ಹಾಗೆಯೇ, ಮುಖ್ಯಮಂತ್ರಿಗಳು ಏಕೆ ಧಾವಂತದಲ್ಲಿದ್ದಾರೆ ಎನ್ನುವುದು ನನಗೆ ಅರ್ಥವಾಗುತ್ತಿಲ್ಲ. ಹೆಚ್ಚಿನ ಪರಿಹಾರವನ್ನು ಕೇಳುವ ಮೊದಲು ನಿವೇಶನಗಳ ಹಂಚಿಕೆ ಕಾನೂನುಬದ್ಧವಾಗಿ ನಡೆದಿದೆಯೇ ಎಂದು ಮೊದಲು ಖಚಿತಪಡಿಸಿಕೊಳ್ಳಬೇಕಲ್ಲವೇ? ಸರ್ಕಾರ ಯಾವುದೇ ಪಕ್ಷದ್ದಿರಲಿ, ಒಬ್ಬ ಶ್ರೀಸಾಮಾನ್ಯನಿಗೆ ಹೋಲಿಸಿದರೆ ಮುಖ್ಯಮಂತ್ರಿಗಳ ಕುಟುಂಬಕ್ಕೆ ಯಾವ ರೀತಿಯ ಅನುಕೂಲ ಕಲ್ಪಿಸಲಾಗಿದೆ ಎನ್ನುವುದನ್ನು ಮೊದಲು ತನಿಖೆ ಮಾಡಬೇಕಲ್ಲವೇ? ಸಿದ್ದರಾಮಯ್ಯನವರು ಅಧಿಕಾರದಲ್ಲಿರಲಿ ಅಥವಾ ಪ್ರತಿಪಕ್ಷದಲ್ಲಿರಲಿ, ಅನೇಕ ದಶಕಗಳಿಂದ ರಾಜ್ಯದಲ್ಲಿ ಬಹಳ ಪ್ರಭಾವಶಾಲಿ ವ್ಯಕ್ತಿಯಾಗಿರುವುದಂತೂ ನಿಜ ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಜೀವನದಲ್ಲಿರುವ ವ್ಯಕ್ತಿಗಳು ತಮ್ಮ ಆಸ್ತಿಯನ್ನು ಸಾರ್ವಜನಿಕ ಒಳಿತಿಗಾಗಿ ಬಿಟ್ಟುಕೊಡುತ್ತಾರೆ. ಆದರೆ ಇಲ್ಲಿ ಒಬ್ಬ ಮುಖ್ಯಮಂತ್ರಿಗಳು ಅತ್ಯಧಿಕ ಪರಿಹಾರ ಪಡೆದುಕೊಂಡದ್ದು ಮಾತ್ರವಲ್ಲ, ಇನ್ನೂ ಹೆಚ್ಚು ಕಬಳಿಸಲು ಆಸೆ ಪಡುತ್ತಿದ್ದಾರೆ. ನೆಹರೂ-ಗಾಂಧಿ ಕುಟುಂಬಕ್ಕೆ ನಿಷ್ಠರಾಗಿರುವ ಸಿಎಂ ಸಿದ್ದರಾಮಯ್ಯನವರ, ಆ ಹಿರಿಯರ ʼತ್ಯಾಗʼದ ಮಾದರಿಯನ್ನೂ ಅನುಸರಿಸಬೇಕು. ಆ ಕುಟುಂಬ ಅನೇಕ ವರ್ಷಗಳ ಹಿಂದೆ ಪ್ರಯಾಗರಾಜ್‌ನಲ್ಲಿರುವ ಪೂರ್ವಜರ ಮನೆಯನ್ನು ಬಿಟ್ಟುಕೊಟ್ಟಿತ್ತು. ಆದರೆ ನಂತರ ಇಡೀ ದೇಶವನ್ನು ಆಕ್ರಮಿಸಿಕೊಂಡರು ಎನ್ನುವುದು ಬೇರೆಯೇ ಕಥೆ. ಆದರೂ ತಾಂತ್ರಿಕವಾಗಿಯಾದರೂ ಅವರು ಏನೋ ಒಂದನ್ನು ತ್ಯಾಗ ಮಾಡಿದರಲ್ಲ, ಅದರಲ್ಲಿಯೂ ಒಂದು ಪಾಠ ಕಲಿಯಲಿಕ್ಕಿದೆ ಎಂದು ತಿಳಿಸಿದ್ದಾರೆ.

ತಾವು ಯಾವುದಕ್ಕೂ ಹೆದರುವುದಿಲ್ಲ ಮತ್ತು ಹಿರಿಯ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯನವರು ಸಿಬಿಐ ಅಥವಾ ಯಾವುದಾದರೂ ಸ್ವತಂತ್ರ ಸಂಸ್ಥೆಗೆ ಮುಡಾ ಪ್ರಕರಣವನ್ನು ತನಿಖೆಗೆ ಕೊಡಲು ಹಿಂಜರಿಯಬಾರದು. ಈ ಪ್ರಕರಣದ ತನಿಖೆಗೆ ತಮಗೆ ಆಪ್ತರಾದ ನಿವೃತ್ತ ನ್ಯಾಯಾಧೀಶರನ್ನು ನೇಮಿಸುವ ಬಗ್ಗೆಯೂ ಕೂಡ ಅವರು ಯೋಚಿಸಬಾರದು. ಈ ಬೃಹತ್ ಹಗರಣ ಸ್ವತಂತ್ರವಾಗಿ ತನಿಖೆಯಾಗಬೇಕಿದೆ. ಅವರು ಮುಖ್ಯಮಂತ್ರಿಯಾಗಿರುವುದರಿಂದ, ತಾವೇ ಫಿರ್ಯಾದಿ ಮತ್ತು ತಾವೇ ನ್ಯಾಯಾಧೀಶರಾಗಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕೆಂದು ನಮ್ಮ ಪಕ್ಷದ ಕೆಲವು ಹಿರಿಯ ನಾಯಕರು ಸಲಹೆ ನೀಡಿದ್ದಾರೆ. ಬಹುಶಃ ಅವರು ಅದನ್ನು ಪರಿಗಣಿಸಿದರೆ ಒಳ್ಳೆಯದೇನೋ ಎಂದು ಹೇಳಿದ್ದಾರೆ.

ಇದನ್ನೂ ಓದಿ | CM Siddaramaiah: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು: ಸಿಎಂ ಸಿದ್ದರಾಮಯ್ಯ

ಪ್ರತಿಪಕ್ಷದ ನಾಯಕರುಗಳನ್ನು ತೆಗಳಲು, ನಿಂದಿಸಲು ಸದಾ ಮುಗಿಬೀಳುವ ಸಿದ್ದರಾಮಯ್ಯನವರ ಬೆಂಬಲಿಗ ಪಡೆಯ ಉದಾರವಾದಿಗಳು ಮತ್ತು ನಗರ ನಕ್ಸಲರು, ಈ ವಿಷಯದಲ್ಲಿ ಹೇಗೆ ಉತ್ತರದಾಯಿತ್ವಕ್ಕಾಗಿ ಆಗ್ರಹಿಸುತ್ತಾರೆ ಎನ್ನುವ ಕುತೂಹಲ ನನಗೂ ಇದೆ. ಅವರು ಪ್ರತಿಭಟಿಸಲು ಬಯಸುವುದಾದರೆ ಅಗತ್ಯ ವ್ಯವಸ್ಥೆಗಳನ್ನು ನಾವೇ ಮಾಡಿಕೊಡುತ್ತೇವೆ ಎಂದು ಹೇಳಿದ್ದಾರೆ.

Continue Reading

ಯಾದಗಿರಿ

Yadgiri News: ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಉಪಯುಕ್ತ : ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು

Yadgiri News: ಯಾದಗಿರಿ ನಗರದ ಶಾಸಕರ ಕಚೇರಿ ಆವರಣದಲ್ಲಿ ತಾಲೂಕಾ ಆಡಳಿತ, ಶಿಶು ಅಭಿವೃದ್ಧಿ ಯೋಜನೆಯ, ಪೋಷಣ್ ಅಭಿಯಾನ ಯೋಜನೆಯಡಿ, ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು, ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ವಿತರಣೆ ಮಾಡಿದರು.

VISTARANEWS.COM


on

Anganwadi workers should make good use of mobile phones says MLA Channareddy Patil Thunnur
Koo

ಯಾದಗಿರಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಪೋಷಣ್‌ ಅಭಿಯಾನದಡಿ ಸ್ಮಾರ್ಟ್ ಫೋನ್‌ಗಳನ್ನು ವಿತರಣೆ ಮಾಡುತ್ತಿದ್ದು, ಕಾರ್ಯಕರ್ತೆಯರು ಮೊಬೈಲ್ ಸದುಪಯೋಗ ಪಡಿಸಿಕೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ಒದಗಿಸುವ ಕಾರ್ಯ ಮಾಡಬೇಕು ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು (Yadgiri News) ತಿಳಿಸಿದರು.

ನಗರದ ಶಾಸಕರ ಕಚೇರಿ ಆವರಣದಲ್ಲಿ ತಾಲೂಕಾ ಆಡಳಿತ, ಶಿಶು ಅಭಿವೃದ್ಧಿ ಯೋಜನೆಯ, ಪೋಷಣ್ ಅಭಿಯಾನ ಯೋಜನೆಯಡಿ ಹಮ್ಮಿಕೊಂಡಿದ್ದ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ವಿತರಣೆ ಕಾರ್ಯಕ್ರಮದಲ್ಲಿ ಮೊಬೈಲ್ ವಿತರಣೆ ಮಾಡಿ ಅವರು ಮಾತನಾಡಿದರು.

ಇದನ್ನೂ ಓದಿ: Retirement Planning: ನಿವೃತ್ತಿ ಬಳಿಕ 1 ಲಕ್ಷ ರೂ. ಪಿಂಚಣಿ ಗಳಿಸೋದು ಹೇಗೆ? ಸುಲಭ ಯೋಜನೆಯ ಮಾಹಿತಿ ಇಲ್ಲಿದೆ

ಡಿಜಿಟಲ್ ತಂತ್ರಜ್ಞಾನ ಬಹಳಷ್ಟು ಮುಂದುವರೆದಿದೆ. ಬೆರಳು ತುದಿಯಡಿ ಎಲ್ಲಾ ಮಾಹಿತಿ ಪಡೆಯಲು ಮೊಬೈಲ್‌ಗಳ ಸಹಾಯವಾಗಲಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಅಂಗನವಾಡಿ ಕಾರ್ಯಕರ್ತೆಯರು, ಮಕ್ಕಳಿಗೆ, ಬಾಣಂತಿ ಹಾಗೂ ಗರ್ಭಿಣಿಯರಿಗೆ ತಲುಪಿಸುವ ಕಾರ್ಯ ಮಾಡಬೇಕಿದೆ. ಈ ನಿಟ್ಟಿನಲ್ಲಿ ಈಗಾಗಲೇ ಕಾರ್ಯಕರ್ತರು ಉತ್ತಮ ಕಾರ್ಯ ಮಾಡುತ್ತಿದ್ದಾರೆ ಎಂದು ಹೇಳಿದರು.

ಮೊಬೈಲ್‌ನಿಂದ ಮಕ್ಕಳ ಹಾಜರಾತಿ, ಆಹಾರ ವಿತರಣೆ, ಮಕ್ಕಳ ಬೆಳವಣಿಗೆ ಮಾಹಿತಿ, ಫಲಾನುಭವಿಗಳ ಮನೆ ಭೇಟಿ ವಿವರ, ಅಂಗನವಾಡಿ ಕೇಂದ್ರದ ದೈನಂದಿನ ಚಟುವಟಿಕೆ, ಲಸಿಕೆ ಹಾಗೂ ಇತರೆ ಕಾರ್ಯಕ್ರಮ ಬಗ್ಗೆ ಶೀಘ್ರವಾಗಿ ಮಾಹಿತಿ ಪಡೆಯಬಹುದಾಗಿದೆ ಎಂದರು.

ಇದನ್ನೂ ಓದಿ: Kalki 2898 AD: “ಕಲ್ಕಿ 2898 ಎಡಿ” ಸಿನಿಮಾ ನೋಡಲು ಜಪಾನ್‌ನಿಂದ ಹೈದರಾಬಾದ್‌ಗೆ ಬಂದ ಫ್ಯಾನ್ಸ್‌!

ಈ ಸಂದರ್ಭದಲ್ಲಿ ಸಹಾಯಕ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ವನಜಾಕ್ಷಿ, ಮಲ್ಲಿಕಾರ್ಜುನ ಈಟೆ, ಉಷಾ ಬಳಗಾನೋರ್, ಮಲ್ಲಮ್ಮ ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಧಾರವಾಡ

Dharwad News: ಧಾರವಾಡದಲ್ಲಿ ಜು.7ರಂದು ಡಾ. ಜಿನದತ್ತ ಅ. ಹಡಗಲಿಗೆ ಅಭಿನಂದನಾ ಸಮಾರಂಭ

Dharwad News: ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್. ಆವರಣದಲ್ಲಿರುವ ಸನ್ನಿಧಿ ಕಲಾಕ್ಷೇತ್ರದಲ್ಲಿ ಇದೇ ಜು.7 ರಂದು ಭಾನುವಾರ ಡಾ. ಜಿನದತ್ತ ಅ. ಹಡಗಲಿ ಅವರ ಅಭಿನಂದನಾ ಸಮಾರಂಭದ ನಿಮಿತ್ತ ಸಾಹಿತ್ಯಾವಲೋಕನ, ಅಭಿನಂದನಾ ಮತ್ತು ‘ಸ್ನೇಹ ಸಿಂಧು’ ಗ್ರಂಥ ಬಿಡುಗಡೆ ಸಮಾರಂಭ ಏರ್ಪಡಿಸಲಾಗಿದೆ.

VISTARANEWS.COM


on

congratulation ceremony for Dr. Jinadatta Hadagali on 7th July in Dharwad
Koo

ಧಾರವಾಡ: ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್. ಆವರಣದಲ್ಲಿರುವ ಸನ್ನಿಧಿ ಕಲಾಕ್ಷೇತ್ರದಲ್ಲಿ ಇದೇ ಜು.7 ರಂದು ಭಾನುವಾರ ಡಾ. ಜಿನದತ್ತ ಅ. ಹಡಗಲಿ ಅವರ ಅಭಿನಂದನಾ ಸಮಾರಂಭದ ನಿಮಿತ್ತ ಸಾಹಿತ್ಯಾವಲೋಕನ, ಅಭಿನಂದನಾ ಮತ್ತು ‘ಸ್ನೇಹ ಸಿಂಧು’ ಗ್ರಂಥ ಬಿಡುಗಡೆ ಸಮಾರಂಭ (Dharwad News) ಏರ್ಪಡಿಸಲಾಗಿದೆ.

ಅಭಿನಂದನಾ ಸಮಾರಂಭವು ಬೆಳಿಗ್ಗೆ 9.30ಕ್ಕೆ ಜನಪದ ಸಂಗೀತದೊಂದಿಗೆ ಆರಂಭವಾಗಲಿದ್ದು ಖ್ಯಾತ ಜಾನಪದ ಕಲಾವಿದ ಹರ್ಲಾಪುರದ ಶಂಭಯ್ಯ ಹಿರೇಮಠ ಮತ್ತು ಸಂಗಡಿಗರ ತಂಡವು ನಡೆಸಿಕೊಡಲಿದೆ. ನಂತರ ಬೆಳಿಗ್ಗೆ 10.30 ರಿಂದ 12.30 ರವರೆಗೆ ಡಾ. ಜಿನದತ್ತ ಅ. ಹಡಗಲಿ ಅವರ ಸಾಹಿತ್ಯ ಕುರಿತು ವಿಚಾರ ಸಂಕಿರಣವು ನಡೆಯಲಿದ್ದು, ಧಾರವಾಡ ಮುರುಘಾಮಠದ ಶ್ರೀ ಮ.ನಿ.ಪ್ರ ಡಾ. ಮಲ್ಲಿಕಾರ್ಜುನ ಮಹಾಸ್ವಾಮೀಜಿ ಉದ್ಘಾಟಿಸುವರು. ಹಿರಿಯ ಸಾಹಿತಿ ಡಾ. ಬಸವರಾಜ ಜಗಜಂಪಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕರ್ನಾಟಕ ವಿಧ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: Stock Market: 1 ಲಕ್ಷ ಪಾಯಿಂಟ್‌ ಮೈಲಿಗಲ್ಲಿನತ್ತ ಸೆನ್ಸೆಕ್ಸ್‌; ಅಂಕಿ-ಅಂಶ ಹೇಳೋದೇನು?

ಡಾ. ಜಿನದತ್ತ ಅ. ಹಡಗಲಿ ಅವರ ವೈಚಾರಿಕ ಸಾಹಿತ್ಯದ ಕುರಿತು ಸಾಹಿತಿ ಡಾ. ವೈ. ಎಂ. ಯಾಕೊಳ್ಳಿ, ಸಂಪಾದಿತ ಕೃತಿಗಳು ಕುರಿತು ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಡಾ. ಅರ್ಜುನ ಗೊಳಸಂಗಿ, ಬಾನುಲಿ ಬರಹಗಳು ಕುರಿತು ರಂಗ ಚಿಂತಕ ಡಾ. ಶಶಿಧರ ನರೇಂದ್ರ, ʼನನ್ನ ಗುರು ನನ್ನ ಹೆಮ್ಮೆʼ ಕುರಿತು ಧಾರವಾಡದ ನವೀನಶಾಸ್ತ್ರೀ ಪುರಾಣಿಕ ವಿಚಾರಗಳನ್ನು ಮಂಡಿಸಲಿದ್ದಾರೆ.

ಮಧ್ಯಾಹ್ನ 12.30ಕ್ಕೆ ಗುರುವಂದನಾ ಕಾರ್ಯಕ್ರಮ ನಡೆಯಲಿದ್ದು ಡಾ. ಹಡಗಲಿ ಅವರ ಗುರುಗಳಾದ ಎಚ್.ಸಿ. ರಟಗೇರಿ, ಪ್ರೊ. ಬಿ.ವಿ. ಗುಂಜೆಟ್ಟಿ, ಪ್ರೊ ವಿ.ಆರ್. ಸಂಗೊಂದಿಮಠ, ಡಾ. ವಿ.ಎಸ್. ಆರಾಧ್ಯಮಠ, ಪ್ರೊ. ವೀಣಾ ಶಾಂತೇಶ್ವರ, ಡಾ.ಉಷಾ ಮೂರ್ತಿ, ಡಾ.ವೀರಣ್ಣ ರಾಜೂರ, ಡಾ. ಬಿ.ವಿ. ಶಿರೂರ, ಡಾ. ಸೋಮಶೇಖರ ಇಮ್ರಾಪುರ, ಡಾ. ಶಾಂತಾದೇವಿ ಸಣ್ಣೆಲ್ಲಪ್ಪನವರ, ಡಾ. ಎಸ್.ವಿ. ಅಯ್ಯನಗೌಡರ, ಡಾ. ಬಿ.ವಿ. ಯಕ್ಕುಂಡಿಮಠ, ಡಾ. ಎ. ಮುರಿಗೆಪ್ಪ, ಪ್ರೊ. ರಾಜಶೇಖರ ಜಾಡರ ಅವರಿಗೆ ಹಡಗಲಿ ಅವರ ಕುಟುಂಬದಿಂದ ಸನ್ಮಾನ ಜರುಗಲಿದೆ.

ಬಳಿಕ ಮಧ್ಯಾಹ್ನ 2 ಗಂಟೆಗೆ ಸಂಗೀತ ಸುಧೆ ಎಂಬ ಕಾರ್ಯಕ್ರಮ ನಡೆಯಲಿದ್ದು, ಖ್ಯಾತ ಹಿಂದೂಸ್ತಾನಿ ಗಾಯಕಿ ವಿದೂಷಿ ಶ್ರೀಮತಿ ಸುಜಾತಾ ಗುರವ, ಗಾಯಕ ಬಸವರಾಜ ಕೆಂಧೂಳಿ, ಖ್ಯಾತ ಹಿಂದೂಸ್ತಾನಿ ಗಾಯಕ ಉಸ್ತಾದ ಹುಮಾಯೂನ ಹರ್ಲಾಪುರ, ಜೀ ಟಿವಿ ಸರಿಗಮಪ ವಿಜೇತ ಗಾಯಕ ಮೆಹಬೂಬಸಾಬ ಹರ್ಲಾಪುರ ಅವರಿಂದ ಸಂಗೀತ ಕಾರ್ಯಕ್ರಮವು ನಡೆಯಲಿದೆ. ನಂತರ ಡಾ. ಜಿನದತ್ತ ಹಡಗಲಿಯವರ ಜೀವನಾಧರಿತ ‘ಬದುಕಿನ ಹೆಜ್ಜೆಗಳು’ ಸಾಕ್ಷ್ಯಚಿತ್ರ ಪ್ರದರ್ಶನ ಜರುಗಲಿದೆ.

ಇದನ್ನೂ ಓದಿ: NEET PG 2024: ನೀಟ್-ಪಿಜಿ ಪರೀಕ್ಷೆಯ ದಿನಾಂಕ ಪ್ರಕಟ; ಆ. 11ರಂದು ನಡೆಯಲಿದೆ ಟೆಸ್ಟ್‌

ನಂತರ ಮಧ್ಯಾಹ್ನ 3 ಗಂಟೆಗೆ ಅಭಿನಂದನಾ ಸಮಾರಂಭವು ಜರುಗಲಿದ್ದು, ಅಥಣಿಯ ಮೋಟಗಿಮಠದ ಶ್ರೀ ಪ್ರಭುಚನ್ನಬಸವ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು. ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಡಾ. ಅಜಿತ ಪ್ರಸಾದ ಅಧ್ಯಕ್ಷತೆ ವಹಿಸಲಿದ್ದಾರೆ.

ಹು-ಧಾ. ಪಶ್ಚಿಮ ಶಾಸಕ ಅರವಿಂದ ಬೆಲ್ಲದ, ‘ಸ್ನೇಹಸಿಂಧು’ ಅಭಿನಂದನಾ ಗ್ರಂಥವನ್ನು ಬಿಡುಗಡೆ ಮಾಡಲಿದ್ದಾರೆ. ಹಿರಿಯ ಸಾಹಿತಿ ಡಾ.ವೀರಣ್ಣ ರಾಜೂರ ‘ಸ್ನೇಹಸಿಂಧು’ ಕೃತಿಯ ಪರಿಚಯ ಮಾಡಲಿದ್ದು, ಹುಬ್ಬಳ್ಳಿಯ ಸ.ಪ್ರ.ದ. ಕಾಲೇಜು ಪ್ರಾಧ್ಯಾಪಕ ಡಾ. ವೈ. ಎಂ. ಭಜಂತ್ರಿ ಅಭಿನಂದನಾ ನುಡಿಗಳನ್ನಾಡಲಿದ್ದಾರೆ.

ಇದನ್ನೂ ಓದಿ: Retirement Planning: ನಿವೃತ್ತಿ ಬಳಿಕ 1 ಲಕ್ಷ ರೂ. ಪಿಂಚಣಿ ಗಳಿಸೋದು ಹೇಗೆ? ಸುಲಭ ಯೋಜನೆಯ ಮಾಹಿತಿ ಇಲ್ಲಿದೆ

ಇದೇ ಸಂದರ್ಭದಲ್ಲಿ ಸುಜಾತಾ ಹಡಗಲಿ ಅವರ ಭಾವತರಂಗ ಕವನ ಸಂಕಲನವನ್ನು ವಿಜಯಪುರ ಮಹಿಳಾ ವಿವಿಯ ಪ್ರಾಧ್ಯಾಪಕ ಡಾ. ಓಂಕಾರ ಕಾಕಡೆ ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಲಿಂಗರಾಜ ಅಂಗಡಿ, ಕವಿಸಂ ನ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಉಪಸ್ಥಿತರಿರುತ್ತಾರೆ ಎಂದು ತಿಳಿಸಿದೆ.

Continue Reading
Advertisement
Bridge Collapse
ದೇಶ47 seconds ago

Bridge Collapse: 17 ದಿನದಲ್ಲಿ 10 ಸೇತುವೆ ಕುಸಿತ; ಬಿಹಾರದಲ್ಲಿ 15 ಎಂಜಿನಿಯರ್‌ಗಳ ಅಮಾನತು!

Shivamogga News Give top priority to cleanliness says Raju Hiriyawali
ಶಿವಮೊಗ್ಗ6 mins ago

Shivamogga News: ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ: ರಾಜು ಹಿರಿಯಾವಲಿ

Viral Video
ದೇಶ9 mins ago

Stampede Tips and Tricks: ಕಾಲ್ತುಳಿತ ಸಂದರ್ಭದಲ್ಲಿ ನಮ್ಮನ್ನು ರಕ್ಷಿಸಿಕೊಳ್ಳುವುದು ಹೇಗೆ? ಈ ವಿಡಿಯೋ ನೋಡಿ

ಕರ್ನಾಟಕ10 mins ago

MUDA site scandal: ಸಿಎಂ ಸಿದ್ದರಾಮಯ್ಯ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲಿ: ಲೆಹರ್‌ ಸಿಂಗ್‌ ಆಗ್ರಹ

Deadly Attack
ದೇಶ30 mins ago

Deadly Attack: ಹಾಡಹಗಲೇ ಶಿವಸೇನೆ ಮುಖಂಡನ ಮೇಲೆ ಡೆಡ್ಲಿ ಅಟ್ಯಾಕ್‌- ವಿಡಿಯೋ ಇದೆ

Viral Video
Latest32 mins ago

Viral Video: ಮೆಟ್ರೋದಲ್ಲಿ ಕೋತಿ ಚೇಷ್ಟೆಗೆ ಕೊನೆಯೇ ಇಲ್ಲ! ಈ ಮಂಗ್ಯಾನ ಡ್ಯಾನ್ಸ್‌ ನೋಡಿ!

Anganwadi workers should make good use of mobile phones says MLA Channareddy Patil Thunnur
ಯಾದಗಿರಿ42 mins ago

Yadgiri News: ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಉಪಯುಕ್ತ : ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು

congratulation ceremony for Dr. Jinadatta Hadagali on 7th July in Dharwad
ಧಾರವಾಡ44 mins ago

Dharwad News: ಧಾರವಾಡದಲ್ಲಿ ಜು.7ರಂದು ಡಾ. ಜಿನದತ್ತ ಅ. ಹಡಗಲಿಗೆ ಅಭಿನಂದನಾ ಸಮಾರಂಭ

Virat kohli
ಪ್ರಮುಖ ಸುದ್ದಿ46 mins ago

Virat Kohli : ನಿವೃತ್ತಿ ಬಳಿಕ ಪತ್ನಿ ಜತೆ ಲಂಡನ್​ಗೆ ತೆರಳಿ ನೆಲೆಸಲಿದ್ದಾರೆ ವಿರಾಟ್​ ಕೊಹ್ಲಿ,

Porn Passport
ವಿದೇಶ49 mins ago

Porn Passport: ಪೋರ್ನ್ ಪಾಸ್‌ಪೋರ್ಟ್! ಅಶ್ಲೀಲ ವಿಡಿಯೊ ವೀಕ್ಷಿಸಲು ಇದು ಕಡ್ಡಾಯ!!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 hours ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ4 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ5 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ6 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ8 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು9 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು9 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ14 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ1 day ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಟ್ರೆಂಡಿಂಗ್‌