Viral video: ಈ ಚಿರತೆ ನಿಮ್ಮನ್ನು ತಿನ್ನಲ್ಲ, ಬದಲಾಗಿ, ನೀವು ಚಿರತೆಯನ್ನು ತಿನ್ನಬಹುದು! - Vistara News

ವೈರಲ್ ನ್ಯೂಸ್

Viral video: ಈ ಚಿರತೆ ನಿಮ್ಮನ್ನು ತಿನ್ನಲ್ಲ, ಬದಲಾಗಿ, ನೀವು ಚಿರತೆಯನ್ನು ತಿನ್ನಬಹುದು!

ಪೇಸ್ಟ್ರಿ ಶೆಫ್‌ ಅಮೌರಿ ಗುಯ್ಚಾನ್‌ ಕೈಯಲ್ಲಿ ಚಾಕಲೇಟ್‌ ಹೂವಾಗುತ್ತದೆ; ಹಣ್ಣಾಗುತ್ತದೆ; ಚಿರತೆ ಕೂಡ ಆಗುತ್ತದೆ. ಹಾಗೆ ರಚನೆಯಾದ ಚಾಕಲೇಟ್‌ ಚಿರತೆಯ (chocolate leopard) ವಿಡಿಯೊ ಇನ್ಸ್‌ಟಾಗ್ರಾಂನಲ್ಲಿ 58 ಲಕ್ಷಕ್ಕೂ ಹೆಚ್ಚು ವೀಕ್ಷಣೆ (viral video) ಕಂಡಿದೆ.

VISTARANEWS.COM


on

chocolate leopard
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಈ ಚಿರತೆ ಎಲ್ಲ ಕಲಾಕೃತಿಗಳಂತಲ್ಲ. ಈ ಚಿರತೆ ನಮ್ಮನ್ನು ತಿನ್ನಲು ಬರುವುದಿಲ್ಲ ಎಂಬ ಗ್ಯಾರೆಂಟಿ ನಿಮಗಿದ್ದರೂ, ನಾವು ಇದನ್ನು ತಿನ್ನಲು ಯಾವುದೇ ಅಡ್ಡಿಯಿಲ್ಲ! ಅರೆ, ಚಿರತೆಯನ್ನು ತಿನ್ನುವುದೇ ಎಂದು ಹುಬ್ಬೇರಿಸಬೇಡಿ. ಈ ಚಿರತೆ ಚಾಕೋಲೇಟ್‌ ಚಿರತೆ. ಪೂರ್ತಿಯಾಗಿ ಚಾಕೋಲೇಟ್‌ನಿಂದಲೇ ಮಾಡಿದ ಚಿರತೆ (chocolate leopard) ಎಂದರೆ ನೀವು ನಂಬಲೇಬೇಕು.

ಹೌದು. ಪೇಸ್ಟ್ರಿ ಶೆಫ್‌ ಅಮೌರಿ ಗುಯ್ಚಾನ್‌ ಯಾವತ್ತಿಗೂ ಕೇಕ್‌ ಹಾಗೂ ಚಾಕೋಲೇಟ್‌ ಪ್ರಿಯರನ್ನು ಎಂದಿಗೂ ನಿರಾಸೆಗೊಳಿಸಿದ್ದೇ ಇಲ್ಲ ಎನ್ನಬೇಕು. ಪ್ರತಿ ಬಾರಿಯೂ ಯಾವ ಆರ್ಟ್‌ ವರ್ಕ್‌ಗಳಿಗೂ ಕಡಿಮೆಯಿರದ ಕೇಕ್‌ಗಳೂ, ಚಾಕೋಲೇಟ್‌ಗಳೂ ಇವರ ಕೈಯಿಂದ ತಯಾರಾಗುತ್ತವೆ. ಒಂದೊಂದು ಬಗೆಯ ಚಾಕೋಲೇಟುಗಳೂ ಒಂದೊಂದು ಆಕೃತಿಯಲ್ಲಿ ಕೇವಲ ಆಹಾರಪ್ರಿಯರಷ್ಟೇ ಅಲ್ಲ, ಕಲಾಸಕ್ತರ ಮನಸ್ಸನ್ನೂ ಸೆಳೆಯುತ್ತದೆ. ಇಷ್ಟು ಕಷ್ಟ ಪಟ್ಟು ಮಾಡಿದ ಕಲಾಕೃತಿಯನ್ನೇ ತಿಂದು ಮುಗಿಸುವುದು ಹೇಗೆ ಎಂದು ಪ್ರತಿಯೊಬ್ಬರಿಗೂ ಅನಿಸದೆ ಇರದು. ರೊಬೋಟ್‌ನಿಂದ ಹಿಡಿದು ಡ್ರ್ಯಾಗನ್‌ವರೆಗೆ, ತಿಮಿಂಗಿಲದಿಂದ ಹಿಡಿದು ವಾಹನದ ಪ್ರತಿಕೃತಿಯವರೆಗೆ ಪೇಸ್ಟ್ರಿಗಳು ನೈಜಕ್ಕೆ ಸೆಡ್ಡು ಹೊಡೆಯುವಂತೆ ರೂಪುಗೊಳ್ಳುತ್ತದೆ. ಈ ಬಾರಿ ಗುಯ್ಚಾನ್‌ ಅವರ ಚಿರತೆಯ ಪ್ರತಿಕೃತಿ ಚಾಕೋಲೇಟ್‌ನಲ್ಲಿ ಅರಳಿ, ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿದೆ. ಇನ್ಸ್‌ಟಾಗ್ರಾಂನಲ್ಲಿ ಈ ವಿಡಿಯೋ 58 ಲಕ್ಷಕ್ಕೂ ಹೆಚ್ಚು ವೀಕ್ಷಣೆ (viral video) ಕಂಡಿದೆ.

ಗುಲ್ಚಾನ್‌ ಅವರು ತಮ್ಮ ವಿಡಿಯೋನಲ್ಲಿ ತಾನು ಹೇಗೆ ಈ ಚಿರತೆಯ ಪ್ರತಿಕೃತಿಯನ್ನು ಮಾಡಿದ್ದೇನೆಂದೂ ವಿಡಿಯೋದ ಮೂಲಕ ವಿವರಿಸುತ್ತಾರೆ. ಚಿರತೆಯ ದೇಹದಿಂದ ಶುರು ಮಾಡಿ, ಮಾಂಸಖಂಡಗಳು, ಆಮೇಲೆ ಕಾಲುಗಳು, ಕೈಗಳು, ಪಾದ ಬಾಲ ಹೀಗೆ ದೇಹದ ಒಂದೊಂದೇ ಬಾಗಗಳನ್ನು ಮಾಡುತ್ತಾ ಸ್ಪ್ರೇ ಬಣ್ಣಗಳ ಮುಖಾಂತರ ಕೊನೆಯಲ್ಲಿ ಚಿರತೆ ಚರ್ಮದ ಬಣ್ಣವನ್ನು ಚಿತ್ರಿಸಿದೆ. ಚಿರತೆಯ ಮೈಯ ಮೇಲಿನ ಅಂತಿಮ ಹೊಳಪಿಗೆ ಸಕ್ಕರೆಯ ಪಾಕವನ್ನು ಬಳಸಿದೆ ಎಂದು ವಿವರಿಸುತ್ತಾರೆ.

ಇದನ್ನೂ ಓದಿ: Viral Video: ಹೆರಿಗೆ ನೋವಿಂದ ಆಸ್ಪತ್ರೆಗೆ ದಾಖಲಾದ ಮಗಳು; ಆಕೆಯ ಮಾವ-ಅತ್ತೆಗೆ ಥಳಿಸಿದ ಅಪ್ಪ-ಅಮ್ಮ!

ಸಾಮಾಜಿಕ ಜಾಲತಾಣದಲ್ಲಿ ಈತನ ಈ ಅಸಾಮಾನ್ಯ ಪ್ರತಿಭೆಯನ್ನು ನೋಡಿ ಜನರು ಫಿದಾ ಆಗಿದ್ದು, ಇದೊಂದು ಚಾಕೇಲೇಟ್‌ ಪ್ರತಿಮೆ ಎಂದು ನಂಬಲಸಾದ್ಯ ಎಂದಿದ್ದಾರೆ. ಕೆಲವರು, ನಮಗೆ ಚಿರತೆಯ ಚಿತ್ರ ಬಿಡಿಸಲೂ ಸಾಧ್ಯವಿಲ್ಲ, ಅಂಥದ್ದರಲ್ಲಿ ಚಾಕೋಲೇಟಿನಲ್ಲಿ ಚಿರತೆಯನ್ನೇ ಸೃಷ್ಠಿಸುವುದೆಂದರೆ ಸಾಮಾನ್ಯ ಮಾತಾ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ಗುಯ್ಚಾನ್‌ ಅವರು ಚಾಕೋಲೇಟ್‌ ಮೃಗಾಲಯವನ್ನೇ ಮಾಡಬಹುದು ಎಂದು ಸಲಹೆ ನೀಡಿದ್ದಾರೆ. ಇನ್ನೂ ಹಲವರು, ನಿಮಗೆ ದೇವರು ಕೊಟ್ಟ ಉಡುಗೊರೆ ಎಂದರೆ ಅದು ಈ ಪ್ರತಿಭೆ ಎಂದು ಅವರ ವಿಶೇಷ ಕೌಶಲಕ್ಕೆ ಬೆರಗಾಗಿ ಹೊಗಳಿದ್ದಾರೆ. ಅನೇಕರು, ಚಾಕೋಲೇಟ್‌ ಚಿರತೆಯನ್ನು ಆಮೇಲೆ ಏನು  ಮಾಡುತ್ತೀರಿ ಎಂದು ಕುತೂಹಲಕರ ಪ್ರಶ್ನೆಗಳನ್ನೂ ಮುಂದಿಟ್ಟಿದ್ದಾರೆ.

ಅಂದಹಾಗೆ ಈ ಚಿರತೆ, ನಿಜವಾದ ಚಿರತೆಯ ಗಾತ್ರವನ್ನೇ ಹೊಂದಿರುವುದು ವಿಶೇಷ. ಚಿರತೆಯ ಕಣ್ಣುಗಳು ನಿಜವಾದ ಚಿರತೆಯ ಕಣ್ಣುಗಳನ್ನೇ ಹೋಲುತ್ತಿರುವುದು ಬಹಳ ಮಂದಿಯನ್ನು ನಿಬ್ಬೆರಗಾಗಿಸಿದೆ. ಸ್ವತಃ ಗುಯ್ಚಾನ್‌ ಈ ಚಿರತೆಯ ಕಣ್ಣು ನನಗೂ ಬಹಳ ಇಷ್ಟವಾಯಿತು ಎಂದು ಬರೆದುಕೊಂಡಿದ್ದಾರೆ. 

ಇದನ್ನೂ ಓದಿ: Viral Video : ಅತಿಯಾಸೆ ಗತಿಗೇಡು ಎನ್ನುವುದಕ್ಕೆ ಇದೇ ಸಾಕ್ಷಿ; ಭಾರೀ ಬೇಟೆಯ ನಿರೀಕ್ಷೆಯಲ್ಲಿದ್ದ ಚಿರತೆಗೆ ಸಿಕ್ಕಿದ್ದೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

All Eyes on Raesi: ಹಿಂದೂ ಯಾತ್ರಿಕರ ಹತ್ಯೆ: ಆಲ್ ಐಸ್ ಆನ್ ರಿಯಾಸಿ; ರಫಾ ರಫಾ ಅನ್ನುತ್ತಿದ್ದ ಸೆಲೆಬ್ರಿಟಿಗಳು ಈಗೆಲ್ಲಿ?

All Eyes on Raesi: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಭಾನುವಾರ (ಜೂನ್ 9) ನಡೆದ ಭಯೋತ್ಪಾದಕರ ಗುಂಡಿನ ದಾಳಿಯ ಸಂದರ್ಭದಲ್ಲಿ, ಪುಟ್ಟ ಕಂದಮ್ಮನೂ ಸೇರಿ 10 ಮಂದಿ ಮೃತಪಟ್ಟಿದ್ದಾರೆ. ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ʼಆಲ್ ಐಸ್ ಆನ್ ರಿಯಾಸಿʼ (All Eyes on Raesi) ಎನ್ನುವ ಪೋಸ್ಟ್‌ ವೈರಲ್‌ ಆಗಿದೆ. ಮಾತ್ರವಲ್ಲ ಈ ಹಿಂದೆ ʼಆಲ್ ಐಸ್ ಆನ್ ರಫಾʼ ಎನ್ನುವ ಪೋಸ್ಟ್‌ ಹಂಚಿಕೊಂಡು ರಫಾ (ಪ್ಯಾಲೆಸ್ತೀನ್‌) ಜನರಿಗಾಗಿ ಕಂಬನಿ ಸುರಿಸಿದ್ದ ಸೆಲೆಬ್ರಿಟಿಗಳು ಈಗ ಮೌನವಾಗಿರುವುದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಸೆಲೆಬ್ರಿಟಿಗಳ ಇಬ್ಬಗೆಯ ನೀತಿಯನ್ನು ಹಲವರು ಪ್ರಶ್ನಿಸಿದ್ದಾರೆ.

VISTARANEWS.COM


on

All Eyes on Raesi
Koo

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu & Kashmir) ರಿಯಾಸಿ ಜಿಲ್ಲೆಯಲ್ಲಿ ಭಾನುವಾರ (ಜೂನ್ 9) ನಡೆದ ಭಯೋತ್ಪಾದಕರ ಗುಂಡಿನ ದಾಳಿಯ (Reasi terror attack) ಸಂದರ್ಭದಲ್ಲಿ, ಪುಟ್ಟ ಕಂದಮ್ಮನೂ ಸೇರಿ 10 ಮಂದಿ ಮೃತಪಟ್ಟಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಶಿವ ಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ವೇಳೆ ಬಸ್‌ ಆಳವಾದ ಕಮರಿಗೆ ಬಿದ್ದು, ದುರಂತ ಸಂಭವಿಸಿದೆ. ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ʼಆಲ್ ಐಸ್ ಆನ್ ರಿಯಾಸಿʼ (All Eyes on Raesi) ಎನ್ನುವ ಪೋಸ್ಟ್‌ ವೈರಲ್‌ ಆಗಿದೆ. ಜತೆಗೆ ಈ ಹಿಂದೆ ʼಆಲ್ ಐಸ್ ಆನ್ ರಫಾʼ ಎನ್ನುವ ಪೋಸ್ಟ್‌ ಹಂಚಿಕೊಂಡು ರಫಾ (ಪ್ಯಾಲೆಸ್ತೀನ್‌) ಜನರಿಗಾಗಿ ಕಂಬನಿ ಸುರಿಸಿದ್ದ ಸೆಲೆಬ್ರಿಟಿಗಳು ಈಗ ಮೌನವಾಗಿರುವುದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ.

ಇತ್ತೀಚೆಗೆ ಇಸ್ರೇಲ್‌ನ ವೈಮಾನಿಕ ದಾಳಿಯ ನಂತರ ದಕ್ಷಿಣ ಗಾಜಾದಲ್ಲಿ 45 ಮಂದಿ ಸಾವನ್ನಪ್ಪಿ, 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಬಳಿಕ ದಕ್ಷಿಣ ಗಾಜಾದ ರಫಾ ನಗರದಲ್ಲಿನ ನಿರಾಶ್ರಿತರ ಶಿಬಿರದಲ್ಲಿ ಡೇರೆಗಳ ಚಿತ್ರ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಇದರಲ್ಲಿ ʼಆಲ್ ಐಸ್ ಆನ್ ರಫಾʼ ಎಂದು ಬರೆದು, ರಫಾ ನಿರಾಶ್ರಿತರಿಗೆ ಬೆಂಬಲ ವ್ಯಕ್ತಪಡಿಸಲಾಗಿತ್ತು. ಈ ಪೋಸ್ಟ್‌ ಅನ್ನು ಭಾರತದ ಸೆಲೆಬ್ರಿಟಿಗಳೂ ಹಂಚಿಕೊಂಡಿದ್ದರು. ಪ್ರಿಯಾಂಕಾ ಚೋಪ್ರಾ, ವರುಣ್ ಧವನ್, ಆಲಿಯಾ ಭಟ್, ಸಮಂತಾ ರುತ್ ಪ್ರಭು, ತ್ರಿಪ್ತಿ ಡಿಮ್ರಿ, ರಿಚಾ ಚಡ್ಡಾ, ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೇಹ್ ಮುಂತಾದ ಸೆಲೆಬ್ರಿಟಿಗಳು ʼಆಲ್ ಐಸ್ ಆನ್ ರಫಾʼ ಪೋಸ್ಟ್‌ ಹಂಚಿಕೊಂಡು ಕಂಬನಿ ಮಿಡಿದಿದ್ದರು. ಸದ್ಯ ಇವರೆಲ್ಲ ಭಾರತದಲ್ಲೇ ನಡೆದ ದುರಂತದ ಬಗ್ಗೆ ಮೌನ ವಹಿಸಿದ್ದು ನೆಟ್ಟಿಗರನ್ನು ಕೆರಳಿಸಿದೆ. ʼಆಲ್ ಐಸ್ ಆನ್ ರಿಯಾಸಿʼ ಎನ್ನುವ ಪೋಸ್ಟ್‌ ಈ ಸೆಲೆಬ್ರಿಟಿಗಳ ಸೋಷಿಯಲ್‌ ಮೀಡಿಯಾದಲ್ಲಿ ಯಾಕೆ ಕಾಣಿಸಿಕೊಂಡಿಲ್ಲ ಎಂದು ಹಲವರು ಪ್ರಶ್ನಿಸುತ್ತಿದ್ದಾರೆ.

ಹಿಂದೂಗಳಿಗೆ ಯಾಕೆ ಮನಸ್ಸು ಮಿಡಿಯುತ್ತಿಲ್ಲ?

ʼʼದೂರದ ಪ್ಯಾಲೆಸ್ತೀನಿಯರಿಗಾಗಿ ಮಿಡಿದ ಸೆಲೆಬ್ರಿಟಿಗಳ ಮನಸ್ಸು ನಮ್ಮದೇ ದೇಶದ ಮುಗ್ಧರಿಗಾಗಿ ಯಾಕೆ ಮಿಡಿಯುತ್ತಿಲ್ಲ? ಭಯೋತ್ಪಾದನೆಗಾಗಿ ಬಲಿಯಾದ ಹಿಂದೂಗಳ ಬೆಂಬಲಕ್ಕೆ ಧಾವಿಸಲು ಸೆಲೆಬ್ರಿಟಿಗಳು ಮುಂದಾಗದಿರುವುದು ದುರಂತʼʼ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಲವರು ಸೋಷಿಯಲ್‌ ಮೀಡಿಯಾದ ಮೂಲಕ ಈ ಬಗ್ಗೆ ಧ್ವನಿ ಎತ್ತಿದ್ದಾರೆ. ʼʼಎಲ್ಲರ ಕಣ್ಣು ರಫಾ ಮೇಲೆ ಎನ್ನುತ್ತಿದ್ದವರೆಲ್ಲ ಈಗ ಮೌನಕ್ಕೆ ಶರಣಾಗಿದ್ದಾರೆʼʼ ಎಂದು ಒಬ್ಬರು ರಿಯಾಸಿ ದುರಂತದ ಫೋಟೊವನ್ನು ಪೋಸ್ಟ್‌ ಮಾಡಿ ಸಿನಿಮಾ ನಟ-ನಟಿಯರಿಗೆ ಝಾಡಿಸಿದ್ದಾರೆ.

ʼʼಕೆಲವು ದಿನಗಳ ಹಿಂದೆ ಬಾಲಿವುಡ್‌ ನಟಿ ಪ್ರಿಯಾಂಕಾ ಚೋಪ್ರಾ ಅವರ ಕಣ್ಣು ರಫಾದತ್ತ ನೆಟ್ಟಿತ್ತು. ಈಗ ಅವರ ಕಣ್ಣು ಮುಚ್ಚಿದೆ. ಅವರಿಗೆ ಮುಸ್ಲಿಂ ಭಯೋತ್ಪಾದಕರು ಹಿಂದೂ ಯಾತ್ರಾರ್ಥಿಗಳನ್ನು ಹತ್ಯೆ ಮಾಡಿರುವುದು ಕಾಣಿಸುತ್ತಿಲ್ಲʼʼ ಎಂದು ಇನ್ನೊಬ್ಬರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಜತೆಗೆ ರೋಹಿತ್‌ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೇಹ್, ಮಾಧುರಿ ದೀಕ್ಷಿತ್‌ ಮುಂತಾದವರ ಮೌನವನ್ನೂ ಟೀಕಿಸಿದ್ದಾರೆ. ಒಟ್ಟಿನಲ್ಲಿ ಸೆಲೆಬ್ರಿಟಿಗಳ ಇಬ್ಬಗೆಯ ನೀತಿ ಮತ್ತೊಮ್ಮೆ ಬಟಾ ಬಯಲಾಗಿದೆ.

ಇದನ್ನೂ ಓದಿ: Terror Attack: ಕಂದಮ್ಮನನ್ನೂ ಕೊಂದ ಉಗ್ರರು; ಎದೆಗೆ ಗುಂಡು ಬಿದ್ದರೂ ಪ್ರಯಾಣಿಕರನ್ನು ಉಳಿಸಲು ಯತ್ನಿಸಿದ್ದ ಚಾಲಕ

Continue Reading

ಕ್ರೀಡೆ

IND vs PAK: ಟ್ರ್ಯಾಕ್ಟರ್ ಮಾರಿ ಭಾರತ-ಪಾಕ್​ ಪಂದ್ಯ ವೀಕ್ಷಿಸಿ ಕಣ್ಣೀರು ಹಾಕಿದ ಅಭಿಮಾನಿ

IND vs PAK: ಭಾರತ ಮತ್ತು ಪಾಕ್​ ಪಂದ್ಯ ವೀಕ್ಷಿಸಲು ಪಾಕ್​ ಅಭಿಮಾನಿಯೊಬ್ಬ ಕರಾಚಿಯಿಂದ ನ್ಯೂಯಾರ್ಕ್​ಗೆ ಬಂದಿದ್ದ. ಈತ ತನ್ನ ಟ್ರ್ಯಾಕ್ಟರ್ ಮಾರಿ ಪಂದ್ಯವನ್ನು ನೋಡಲು ಆಗಮಿಸಿದ್ದ.

VISTARANEWS.COM


on

IND vs PAK
Koo

ನ್ಯೂಯಾರ್ಕ್​: ಭಾರತ ಮತ್ತು ಪಾಕಿಸ್ತಾನ(IND vs PAK) ಪಂದ್ಯದ ಜೋಶ್‌ ದೊಡ್ಡ ಮಟ್ಟದಲ್ಲೇ ಇರುತ್ತದೆ. ಅಕ್ಷರಶಃ ಇದೊಂದು ಕದನವೇ ಆಗಿರುತ್ತದೆ. ಗೆದ್ದರೆ ಯುದ್ಧವನ್ನೇ ಜಯಿಸಿದ ಮಹಾಸಂಭ್ರಮ. ಅಭಿಮಾನಿಗಳು ಕೂಡ ಈ ಪಂದ್ಯವನ್ನು ಕಣ್ತುಂಬಿಕೊಳ್ಳಲು ದುಬಾರಿ ಬೆಲೆಯ ಟಿಕೆಟ್​ ಕೊಂಡುಕೊಳ್ಳಲು ಹಿಂದೇಟು ಹಾಕುವುದಿಲ್ಲ. ಪಾಕ್​ ತಂಡದ ಅಭಿಮಾನಿಯೊಬ್ಬ ತನ್ನ ಟ್ರ್ಯಾಕ್ಟರ್(Pakistani fan sells tractor) ಮಾರಿ ಲಕ್ಷಾಂತರ ರೂ ಖರ್ಚು ಮಾಡಿ ಪಂದ್ಯದ ಟಿಕೆಟ್​ ಖರೀದಿ ಮಾಡಿ ಪಂದ್ಯ ಸೋತ ಬಳಿಕ ಕಣ್ಣೀರು ಹಾಕಿದ್ದಾನೆ. ಈ ವಿಡಿಯೊ ವೈರಲ್​ ಆಗಿದೆ.

ಕಳೆದ ಭಾನುವಾರ ಭಾರತ ಮತ್ತು ಪಾಕ್​ ತಂಡಗಳು ಟಿ20 ವಿಶ್ವಕಪ್​ ಲೀಗ್​ ಹಂತದ ಪಂದ್ಯದಲ್ಲಿ ಮುಖಾಮುಖಿಯಾಗಿತ್ತು. ಈ ಪಂದ್ಯವನ್ನು ಭಾರತ ಗೆದ್ದು ಬೀಗಿತ್ತು. ಈ ಪಂದ್ಯವನ್ನು ನೋಡಲು ಪಾಕ್​ ಅಭಿಮಾನಿಯೊಬ್ಬ ಕರಾಚಿಯಿಂದ ನ್ಯೂಯಾರ್ಕ್​ಗೆ ಬಂದಿದ್ದ. ಈತ ತನ್ನ ಟ್ರ್ಯಾಕ್ಟರ್ ಮಾರಿ ಪಂದ್ಯವನ್ನು ನೋಡಲು ಆಗಮಿಸಿದ್ದ. ಆದರೆ ಪಂದ್ಯ ಸೋತ ಕಾರಣ ಆತ ನಿರಾಸೆಗೊಂಡು ಕಣ್ಣೀರು ಹಾಕಿದ್ದಾನೆ. ಪಂದ್ಯದ ಬಳಿಕ ಎಎನ್​ಐ ಜತೆ ಮಾತನಾಡುವ ವೇಳೆ ಆತ ತಾನು ಟ್ರ್ಯಾಕ್ಟರ್ ಮಾರಿ ಪಂದ್ಯ ವೇಖ್ಷಣೆಗೆ ಬಂದ ವಿಚಾರವನ್ನು ತಿಳಿಸಿದ್ದಾನೆ. ಪಾಕ್​ ಆಟಗಾರರ ಕಳಪೆ ಪ್ರದರ್ಶನಕ್ಕೂ ಆತ ಆಕ್ರೋಶ ಹೊರಹಾಕಿದ್ದಾನೆ. ಇದರ ವಿಡಿಯೊ ವೈರಲ್​ ಆಗಿದೆ.

“ತಾನು ಸ್ಟೇಡಿಯಂನಲ್ಲೇ ಲೈವ್ ಆಗಿ ಪಂದ್ಯ ವೀಕ್ಷಿಸುವ ಸಲುವಾಗಿ ಮತ್ತು ನನ್ನ ದೇಶವನ್ನು ಬೆಂಬಲಿಸಲು ನನ್ನ ಟ್ರ್ಯಾಕ್ಟರ್‌ನ್ನು ಮಾರಿದೆ. (ಈ ಟಿಕೆಟ್‌ ಮೊತ್ತ 3000 ಯುಎಸ್‌ಡಿ ಅಂದರೆ ಪಾಕಿಸ್ತಾನದ ರೂಪಾಯಿಗೆ ಪರಿವರ್ತಿಸುವುದಾದರೆ 840,526.93) ಆದರೆ ಪಾಕಿಸ್ತಾನ ಈ ಪಂದ್ಯವನ್ನು ಹೀಗೆ ಆಡುತ್ತದೆ ಎಂದು ನಾನು ಊಹೆಯೂ ಮಾಡಿರಲಿಲ್ಲ. ಸೋಲಿಗೆ ತಂಡದ ಅತಿಯಾದ ಆತ್ಮವಿಶ್ವಾಸವೇ ಕಾರಣ” ಎಂದು ಈ ಅಭಿಮಾನಿ ಹತಾಶೆ ವ್ಯಕ್ತಪಡಿಸಿದ್ದಾರೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಭಾರತ, ಪಾಕ್​ ಬೌಲರ್​ಗಳ ನಿಖರ ದಾಳಿಗೆ ತಡೆಯೊಡ್ಡುವಲ್ಲಿ ವಿಫಲವಾಗಿ ಕೇವಲ 119 ರನ್ನಿಗೆ ಆಲೌಟಾಯಿತು. ಗುರಿ ಬೆನ್ನಟ್ಟಿದ ಪಾಕ್ ಕೂಡ ಭಾರತದ ಬೌಲಿಂಗ್ ದಾಳಿಗೆ ನಲುಗಿ 7 ವಿಕೆಟ್ ನಷ್ಟಕ್ಕೆ 113 ರನ್ ಗಳಿಸಿ ಸೋಲು ಕಂಡಿತು. ಮೊಹಮ್ಮದ್ ರಿಜ್ವಾನ್(31) ಒಂದು ಹಂತದ ವರೆಗೆ ಭಾರತೀಯ ಬೌಲರ್​ಗಳನ್ನು ಕಾಡಿದರೂ ಕೂಡ ಬುಮ್ರಾ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು. ಇಲ್ಲಿಂದ ಪಾಕ್​ ಕುಸಿತ ಕೂಡ ಆರಂಭವಾಯಿಯು. ಕೊನೆಗೂ ಭಾರತ ಪಂದ್ಯವನ್ನು ಗೆದ್ದು ಬೀಗುವಲ್ಲಿ ಯಶಸ್ಸು ಕಂಡಿತು.

ಪಾಕ್​ 2 ಸೋಲು ಕಂಡಿದ್ದರೂ ಕೂಡ ಸೂಪರ್​-8 ಪ್ರವೇಶಿಸುವ ಕ್ಷೀಣ ಅವಕಾಶವೊಂದಿದೆ. ಜತೆಗೆ ಅದೃಷ್ಟ ಕೂಡ ಕೈಹಿಡಿಯಬೇಕಿದೆ.

ಸದ್ಯ ‘ಎ’ ಗುಂಪಿನಲ್ಲಿ ಭಾರತ ಮತ್ತು ಆತಿಥೇಯ ಅಮೆರಿಕ ಆಡಿದ ಎರಡೂ ಪಂದ್ಯಗಳನ್ನು ಗೆದ್ದು ತಲಾ 4 ಅಂಕದೊಂದಿಗೆ ಅಂಕಪಟ್ಟಿಯಲ್ಲಿ ಕ್ರಮವಾಗಿ ಮೊದಲೆರಡು ಸ್ಥಾನಗಳನ್ನು ಪಡೆದುಕೊಂಡಿದೆ. ಒಂದು ಪಂದ್ಯ ಗೆದ್ದ ಕೆನಾಡ ಮೂರನೇ ಸ್ಥಾನದಲ್ಲಿದೆ. ಗೆಲುವೇ ಕಾಣದ ಪಾಕಿಸ್ತಾನ 4ನೇ ಸ್ಥಾನಿಯಾಗಿದೆ. ಪಾಕ್​ ಮುಂದಿನ ಪಂದ್ಯದಲ್ಲಿ ಐರ್ಲೆಂಡ್​ ಮತ್ತು ಕೆನಡಾ ವಿರುದ್ಧ ಆಡಲಿದೆ. ಒಂದು ಗುಂಪಿನಿಂದ ಎರಡು ತಂಡಗಳು ಮಾತ್ರ ಸೂಪರ್ 8ಗೆ ಪ್ರವೇಶ ಪಡೆಯಲಿದೆ. ಪಾಕ್​ಗೂ ಕೂಡ ಈ ಹಂತಕ್ಕೇರಲು ಸಣ್ಣ ಅವಕಾಶವೊಂದಿದೆ. ಈ ಲೆಕ್ಕಾಚಾರ ಹೀಗಿದೆ.

ಸೂಪರ್​-8ಗೆ ಪ್ರವೇಶಿಸಲು ಪಾಕಿಸ್ತಾನ ತಂಡವು ಉಳಿದ ಎರಡೂ ಪಂದ್ಯಗಳನ್ನು ಗೆಲ್ಲಬೇಕು. ಅಷ್ಟೇ ಅಲ್ಲದೆ ಯುಎಸ್‌ಎ ಮತ್ತು ಕೆನಡಾ ತಂಡಗಳು ಗುಂಪು ಹಂತದಲ್ಲಿ ಉಳಿದ ಪಂದ್ಯಗಳಲ್ಲಿ ಸೋಲು ಕಾಣಬೇಕು. ಅಮೆರಿಕ ಮುಂದಿನ 2 ಪಂದ್ಯಗಳಲ್ಲಿ ಸೋಲು ಕಂಡು, ಪಾಕ್​ 2 ಪಂದ್ಯ ಗೆದ್ದರೆ ಉಭಯ ತಂಡಗಳಿಗೆ ತಲಾ 4 ಅಂಕ ಆಗಲಿದೆ. ಹೀಗಾಗಿ ಪಾಕ್​ಗೆ ಕೇವಲ ಗೆಲುವು ಮಾತ್ರ ಸಾಲದು ಜತೆಗೆ ರನ್​ರೇಟ್​ ಕೂಡ ಬೇಕಾಗಿದೆ. ಅಮೆರಿಕ ಮತ್ತು ಭಾರತ ಮುಂದಿನ ಪಂದ್ಯದಲ್ಲಿ ಗೆದ್ದರೆ ಪಾಕ್​ ಅಧಿಕೃತವಾಗಿ ಟೂರ್ನಿಯಿಂದ ಹೊರಬೀಳಲಿದೆ.

Continue Reading

ಕ್ರೀಡೆ

Virat Kohli: ಸಾರ್ವಜನಿಕವಾಗಿ ಕಾಣಿಸಿಕೊಂಡರೂ ಕೊಹ್ಲಿಯನ್ನು ಗುರುತಿಸದ ನ್ಯೂಯಾರ್ಕ್​ ಜನತೆ; ವಿಡಿಯೊ ವೈರಲ್​

Virat Kohli: ಸತತ 2 ಗೆಲುವು ಸಾಧಿಸಿ ‘ಎ’ ಗುಂಪಿನಲ್ಲಿ ಅಜೇಯ ಓಟ ಮುಂದಿವರಿಸಿರುವ ಭಾರತ ಮತ್ತು ಅಮೆರಿಕ ನಾಳೆ ನಡೆಯುವ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.

VISTARANEWS.COM


on

Virat Kohli
Koo

ನ್ಯೂಯಾರ್ಕ್​: ವಿರಾಟ್ ಕೊಹ್ಲಿ(Virat Kohli) ವಿಶ್ವದ ಅತ್ಯಂತ ಜನಪ್ರಿಯ ಕ್ರಿಕೆಟಿಗ. ಅವರ ಅಭಿಮಾನಿಗಳಿಗೆ ಯಾವುದೇ ಗಡಿಯ ಮಿತಿ ಇಲ್ಲ. ಭಾರತದ ಬದ್ಧ ಎದುರಾಳಿ ಪಾಕಿಸ್ತಾನದಲ್ಲಿಯೂ ವಿರಾಟ್​ ಕೊಹ್ಲಿ ಅಪಾರ ಅಭಿಮಾನಿಗಳಿದ್ದಾರೆ. ಅಭಿಮಾನಿಗಳು ಅವರ ಜತೆ ಒಂದು ಫೋಟೊ ತೆಗೆದುಕೊಳ್ಳಲು, ಆಟೋಗ್ರಾಫ್ ಪಡೆಯಲು ಮತ್ತು ಅವರನ್ನು ಭೇಟಿಯಾಗಲೆಂದೇ ವರ್ಷಾನುಗಟ್ಟಲೆ ಕಾದು ಕುಳಿತಿರುತ್ತಾರೆ. ಆದರೆ, ನ್ಯೂಯಾರ್ಕ್​ನಲ್ಲಿ ಕೊಹ್ಲಿ ಯಾರೆಂಬುದೇ ಹಲವರಿಗೆ ತಿಳಿದಿಲ್ಲ.

ಕ್ರಿಕೆಟ್​ ಹೆಚ್ಚು ಪ್ರಸಿದ್ಧಿ ಪಡೆಯದ ನ್ಯೂಯಾರ್ಕ್​ನಲ್ಲಿ ಅನೇಕ ಕ್ರಿಕೆಟಿಗರು ಇಲ್ಲಿನ ಪಾರ್ಕ್, ರಸೆಗಳಲ್ಲಿ ಸಾಮಾನ್ಯ ಜನರಂತೆ ತಿರುಗಾಡುತ್ತಿದ್ದಾರೆ. ವಿರಾಟ್​ ಕೊಹ್ಲಿ ಕೂಡ ಇಲ್ಲಿನ ಜಿಮ್​ ಸೆಂಟರ್​ ಒಂದಕ್ಕೆ ಜಿಮ್(Kohli SPOTTED In Gym)​ ಮಾಡಲು ಏಕಾಂಗಿಯಾಗಿ ತೆರಳಿದ್ದಾರೆ. ಯಾರು ಕೂಡ ಕೊಹ್ಲಿ ಬಳಿ ಬಂದು ಸೆಲ್ಫಿ, ಆಟೋಗ್ರಾಫ್​ಗೆ ಮುಂದಾಗಲಿಲ್ಲ. ಏಕೆಂದರೆ ಅಲ್ಲಿನ ಜನರಿಗೆ ಕೊಹ್ಲಿ ಎಂದರೆ ಅಷ್ಟಾಗಿ ತಿಳಿದಿಲ್ಲ. ಹೀಗಾಗಿ ಕೊಹ್ಲಿ ಕೂಡ ಯಾವುದೇ ಕಿರಿಕಿರಿ ಇಲ್ಲದೆ ಪ್ರಶಾಂತವಾಗಿ ಸಾಮಾನ್ಯರಂತೆ ಜಿಮ್​ಗೆ ತೆರಳಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ(viral video). ಕೆಲ ದಿನಗಳ ಹಿಂದೆ ದಕ್ಷಿಣ ಆಫ್ರಿಕಾದ ಮಾಜಿ ವೇಗಿ ಡೇಲ್​ ಸ್ಟೇನ್​ ಅವರಿಗೆ ಇಲ್ಲಿನ ಕ್ರಿಕೆಟ್​ ಗೇಮ್​ ಸೆಂಟರ್​ನಲ್ಲಿ ಸಿಬ್ಬಂದಿ ಬೌಲಿಂಗ್​ ಹೇಗೆ ನಡೆಸಬೇಕು ಎಂದು ಹೇಳಿಕೊಡುವ ವಿಡಿಯೊ ವೈರಲ್​ ಆಗಿತ್ತು. ಆತನಿಗೆ ಸ್ಟೇನ್​ ಕ್ರಿಕೆಟಿಗ ಎನ್ನುವುದು ತಿಳಿದಿರಲಿಲ್ಲ. ಸ್ಟೇನ್​ ಅವರೇ ಈ ವಿಡಿಯೊವನ್ನು ಹಂಚಿಕೊಂಡಿದ್ದರು.

ಟೀಮ್​ ಇಂಡಿಯಾದ ಕೋಚ್​ ರಾಹುಲ್​ ದ್ರಾವಿಡ್​ ಕೂಡ ಕೆಲ ದಿನಗಳ ಹಿಂದೆ ನ್ಯೂಯಾರ್ಕ್​ನ ಪಾರ್ಕ್​ಗಳಲ್ಲಿ ನಾವು ಆರಾಮವಾಗಿ ವ್ಯಾಯಾಮ ಮಾಡುತ್ತಿದ್ದೇವೆ. ಇಲ್ಲಿನ ಜನತೆಗೆ ನಾವು ಯಾರೆಂದು ಕೂಡ ತಿಳಿದಿಲ್ಲ. ಇದೊಂದು ಹೊಸ ಅನುಭವ ಎಂದು ಹೇಳಿಕೊಂಡಿದ್ದರು. ಬಾಸ್ಕೆಟ್​ ಬಾಲ್​, ಬೇಸ್​ ಬಾಲ್​, ಫುಟ್ಬಾಲ್​ ಹೆಚ್ಚಾಗಿ ನೆಚ್ಚಿಕೊಂಡಿರುವ ಅಮೆರಿಕದಲ್ಲಿ ಕ್ರಿಕೆಟ್​ ಈಗ ತಾನೆ ಬೆಳೆಯುತ್ತಿದೆ. ಮುಂದಿನ ದಿನಗಳಲ್ಲಿ ಇಲ್ಲಿನ ಜತೆಗೆಯಲ್ಲೂ ಕ್ರಿಕೆಟ್​ ಪ್ರೀತಿ ಹೆಚ್ಚಾಗಬಹುದು.

ಇದನ್ನೂ ಓದಿ T20 World Cup 2024: ಪಾಕ್​ಗೆ ಇನ್ನೂ ಇದೆ ಸೂಪರ್-8 ಅವಕಾಶ? ಇಲ್ಲಿದೆ ಲೆಕ್ಕಾಚಾರ

ನಾಳೆ ಭಾರತ-ಅಮೆರಿಕ ಮುಖಾಮುಖಿ


ಸತತ 2 ಗೆಲುವು ಸಾಧಿಸಿ ‘ಎ’ ಗುಂಪಿನಲ್ಲಿ ಅಜೇಯ ಓಟ ಮುಂದಿವರಿಸಿರುವ ಭಾರತ ಮತ್ತು ಅಮೆರಿಕ ನಾಳೆ ನಡೆಯುವ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಒಂದು ತಂಡಕ್ಕೆ ಸೋಲು ಎದುರಾಗುವುದು ಖಚಿತ. ಈ ತಂಡ ಯಾವುದೆಂಬುದು ಪಂದ್ಯದ ಕೌತುಕ. ಇತ್ತಂಡಗಳ ಮೊದಲ ಕ್ರಿಕೆಟ್​ ಮುಖಾಮುಖಿಯೂ ಇದಾಗಿದೆ.

ವಿರಾಟ್ ಕೊಹ್ಲಿ ಈ ಬಾರಿಯ ಐಪಿಎಲ್​ನಲ್ಲಿ ಅತ್ಯಧಿಕ ರನ್​ಗಳಿಸಿದ ಆಟಗಾರನಾಗಿ ಮೂಡಿಬಂದಿದ್ದರೂ ಕೂಡ ಟಿ20 ವಿಶ್ವಕಪ್​ನಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. 2 ಪಂದ್ಯಗಳಲ್ಲಿಯೂ ಒಂದಂಕಿಗೆ ಸೀಮಿತರಾಗಿದ್ದರು. ಇದೀಗ ಅಮೆರಿಕ ವಿರುದ್ಧದ ಪಂದ್ಯದಲ್ಲಾದರೂ ಅವರು ಬ್ಯಾಟಿಂಗ್​ ಲಯಕ್ಕೆ ಮರಳುವ ಅನಿವಾರ್ಯತೆ ಇದೆ.

Continue Reading

ದೇಶ

Rashtrapati Bhavan: ಮೋದಿ ಪ್ರಮಾಣ ವಚನ ಸಮಾರಂಭದ ವೇಳೆ ಕಾಣಿಸಿಕೊಂಡಿದ್ದು ಚಿರತೆಯಲ್ಲ; ಪೊಲೀಸರ ಸ್ಪಷ್ಟನೆ

Rashtrapati Bhavan: ಜೂನ್‌ 9ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ವೇಳೆ ಚಿರತೆಯೊಂದು ಕಾಣಿಸಿಕೊಂಡಿತ್ತು ಎನ್ನುವ ಸುದ್ದಿ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಈ ಬಗ್ಗೆ ಅನೇಕರು ಆತಂಕವನ್ನೂ ವ್ಯಕ್ತಪಡಿಸಿದ್ದಾರೆ. ಆದರೆ ಇದೀಗ ದೆಹಲಿ ಪೊಲೀಸರು ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ. ಅವರೇನು ಹೇಳಿದ್ದಾರೆ? ನಿಜವಾಗಿಯೂ ಅಲ್ಲಿ ಚಿರತೆ ಓಡಾಡಿತ್ತೆ? ಈ ಎಲ್ಲ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

VISTARANEWS.COM


on

Rashtrapati Bhavan
Koo

ನವದೆಹಲಿ: ಎನ್‌ಡಿಎ ಮತ್ತೊಮ್ಮೆ ಅಧಿಕಾರಕ್ಕೆ ಬಂದಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಸಹಿತ ಸಚಿವರು ಜೂನ್‌ 9ರಂದು ದೆಹಲಿಯ ರಾಷ್ಟ್ರಪತಿ ಭವನ (Rashtrapati Bhavan)ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೀಗ ಈ ಪ್ರಮಾಣ ವಚನ ಸಮಾರಂಭದ ತುಣುಕೊಂದು ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಕಾರ್ಯಕ್ರಮ ನಡೆಯುತ್ತಿರುವಾಗ ರಾಷ್ಟ್ರಪತಿ ಭವನದಲ್ಲಿ ನಿಗೂಢ ಪ್ರಾಣಿಯೊಂದು ಅಡ್ಡಾಡುತ್ತಿರುವುದು ಕಂಡು ಬಂದಿರುವುದೇ ಇದಕ್ಕೆ ಪ್ರಮುಖ ಕಾರಣ. ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಅದನ್ನು ಚಿರತೆ ಎಂದು ಕರೆದಿದ್ದರು. ಈ ಮೂಲಕ ವ್ಯಾಪಕ ಚರ್ಚೆ ನಡೆದಿತ್ತು. ಇದೀಗ ದೆಹಲಿ ಪೊಲೀಸರು ಈ ಬಗ್ಗೆ ಸ್ಪಷ್ಟೀಕರಣ ನೀಡಿದ್ದು, ಕೇವಲ ಬೆಕ್ಕು ಮತ್ತು ಯಾವುದೇ ಚಿರತೆ ಅಲ್ಲ ಎಂದು ಹೇಳುವ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದಾರೆ (Viral News).

ಬಿಜೆಪಿಯ ದುರ್ಗಾ ದಾಸ್ ಉಯಿಕೆ ಅವರು ಕೇಂದ್ರ ಸಚಿವರಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಮಾಣ ವಚನ ಸ್ವೀಕರಿಸುವ ಸಮಯದಲ್ಲಿ, ವೇದಿಕೆಯ ಹಿನ್ನೆಲೆಯಲ್ಲಿ ಪ್ರಾಣಿಯೊಂದು ಓಡಾಡಿತ್ತು. ಹೆಚ್ಚಿನವರು ಇದನ್ನು ಆಗ ಗಮನಿಸಿರಲಿಲ್ಲ. ಬಳಿಕ ಇದನ್ನು ವಿಡಿಯೊದಲ್ಲಿ ಗುರುತಿಸಿದ ನೆಟ್ಟಿಗರು ಇದನ್ನು ಚಿರತೆ ಎಂದು ಕರೆದಿದ್ದರು. ಹೀಗಾಗಿ ಈ ಬಗ್ಗೆ ದೇಶಾದ್ಯಂತ ವ್ಯಾಪಕ ಚರ್ಚೆ ನಡೆದಿತ್ತು.

ಭಾರತದ ಪ್ರಧಾನ ಮಂತ್ರಿಯ ಪ್ರಮಾಣ ವಚನ ಸ್ವೀಕಾರ ಸಮಾರಂಭ ಸಹಜವಾಗಿ ಬಿಗಿ ಭದ್ರತೆಯ ಕಾರ್ಯಕ್ರಮವಾಗಿದ್ದು, ರಾಷ್ಟ್ರದ ಮುಖಂಡರು, ರಾಜಕೀಯ ನಾಯಕರು, ಉದ್ಯಮಿಗಳು, ಪ್ರಮುಖ ಚಲನಚಿತ್ರ ನಟರು ಸಾಕ್ಷಿಗಳಾಗಿದ್ದರು. ಇಷ್ಟೆಲ್ಲ ಭದ್ರತೆ ನಡುವೆಯೂ ಚಿರತೆ ಕಾಣಿಸಿಕೊಂಡಿದೆ ಎಂಬ ವಿಚಾರವೇ ಅನೇಕರಲ್ಲಿ ಭಯ ಹುಟ್ಟಿಸಿತ್ತು.

ಪೊಲೀಸರ ಸ್ಪಷ್ಟನೆ

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ ದೆಹಲಿ ಪೊಲೀಸರು, ʼʼರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದ ನೇರ ಪ್ರಸಾರದ ವೇಳೆ ಸೆರೆಯಾದ ಪ್ರಾಣಿಯ ಚಿತ್ರವನ್ನು ಕೆಲವು ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳು ಚಿರತೆ ಎಂದು ಕರೆದಿವೆ. ಆದರೆ ಇದು ನಿಜವಲ್ಲ. ಕ್ಯಾಮೆರಾದಲ್ಲಿ ಸೆರೆಯಾದ ಪ್ರಾಣಿ ಸಾಮಾನ್ಯ ಮನೆಯ ಬೆಕ್ಕು. ದಯವಿಟ್ಟು ಇಂತಹ ಕ್ಷುಲ್ಲಕ ವದಂತಿಗಳಿಗೆ ಕಿವಿಗೋಡಬೇಡಿ” ಎಂದು ಬರೆದುಕೊಂಡಿದ್ದಾರೆ. ಆ ಮೂಲಕ ಕವಿದಿದ್ದ ಆತಂಕದ ಕಾರ್ಮೋಡವನ್ನು ನಿವಾರಿಸಿದ್ದಾರೆ.

ಇದನ್ನೂ ಓದಿ: PM Narendra Modi: ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಕಾಣಿಸಿಕೊಂಡ ನಿಗೂಢ ಪ್ರಾಣಿ! ವಿಡಿಯೋ ಇದೆ ನೋಡಿ

ನೆಟ್ಟಿಗರ ಚರ್ಚೆ

ರಾಷ್ಟ್ರಪತಿ ಭವನದಲ್ಲಿ ಚಿರತೆ ಕಾಣಿಸಿಕೊಂಡಿದೆ ಎನ್ನುವಾಗಲೇ ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗಿದ್ದವು. ಅನೇಕರು ಇದನ್ನು ನಂಬಿರಲಿಲ್ಲ. ಇನ್ನು ಕೆಲವರು, ವಿಸ್ತಾರವಾದ ರಾಜಪಥ ಹಾಗೂ ರಾಷ್ಟ್ರಪತಿ ಭವನದ ಆವರಣದಲ್ಲಿ ಚಿರತೆ ಬಂದು ಹುದುಗಿಕೊಂಡಿರುವ ಸಾಧ್ಯತೆಯನ್ನು ಅಲ್ಲಗೆಳೆಯಲಾಗುವುದಿಲ್ಲ. ʼಅಮೃತ್ ಉದ್ಯಾನ್ʼ ಎಂದು ಕರೆಯಲಾಗುವ ಉದ್ಯಾನ 15 ಎಕರೆಗಳಷ್ಟು ಹರಡಿದ್ದು, ಹಲವು ಕಡೆ ದಟ್ಟವಾದ ಕಾಡು ಇದೆ. ಈಸ್ಟ್ ಲಾನ್, ಸೆಂಟ್ರಲ್ ಲಾನ್, ಲಾಂಗ್ ಗಾರ್ಡನ್ ಮತ್ತು ಸರ್ಕ್ಯುಲರ್ ಗಾರ್ಡನ್ ಇದರ ಮೂಲ ಆಕರ್ಷಣೆಗಳಾಗಿವೆ. ಹರ್ಬಲ್ ಗಾರ್ಡನ್, ಟ್ಯಾಕ್ಟೈಲ್ ಗಾರ್ಡನ್, ಬೋನ್ಸಾಯ್ ಗಾರ್ಡನ್ ಮತ್ತು ಆರೋಗ್ಯ ವನಗಳು ಇಲ್ಲಿವೆ. ಹೀಗಾಗಿ ಇಲ್ಲಿಂದ ಚಿರತೆ ಕಣ್ತಪ್ಪಿಸಿ ಬಂದಿರುವ ಸಾಧ್ಯತೆ ಇದೆ ಎಂದು ಅಭಿಪ್ರಾಯ ಪಟ್ಟಿದ್ದರು. ಸದ್ಯ ಗೊಂದಲ ನಿವಾರಣೆಯಾಗಿದೆ.

Continue Reading
Advertisement
Actor Darshan
ಕರ್ನಾಟಕ6 mins ago

Actor Darshan: ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಅರೆಸ್ಟ್‌; ಪೊಲೀಸರು ಹೇಳಿದ್ದೇನು?

Pavithra Gowda
ಕರ್ನಾಟಕ22 mins ago

Pavithra Gowda: ಕೊಲೆ ಕೇಸ್;‌ ದರ್ಶನ್‌ ಬಂಧನ ಬೆನ್ನಲ್ಲೇ ಗೆಳತಿ ಪವಿತ್ರಾ ಗೌಡ ಕೂಡ ಪೊಲೀಸ್‌ ವಶಕ್ಕೆ!

black magic
ದಕ್ಷಿಣ ಕನ್ನಡ32 mins ago

Black Magic : 25 ಕುರಿ-ಮೇಕೆಗಳ ರುಂಡ ಕತ್ತರಿಸಿ ವ್ಯಕ್ತಿಗಳ ಫೋಟೊ ಇಟ್ಟು ಭಯಾನಕ ವಾಮಾಚಾರ!

Kamran Akmal
ಕ್ರಿಕೆಟ್38 mins ago

Kamran Akmal: ಜನಾಂಗೀಯ ನಿಂದನೆಗೆ ಜಾಡಿಸಿದ ಹರ್ಭಜನ್​ ಸಿಂಗ್​: ಕ್ಷಮೆಯಾಚಿಸಿದ ಕಮ್ರಾನ್ ಅಕ್ಮಲ್

Actor Darshan
ಕರ್ನಾಟಕ43 mins ago

Actor Darshan: ಹತ ರೇಣುಕಾಸ್ವಾಮಿ ಯಾರು? ಕೊಲೆ ಹಿಂದೆ ದರ್ಶನ್‌ ಕೈವಾಡವೇನು? ಇಲ್ಲಿದೆ ಶಾಕಿಂಗ್‌ ಮಾಹಿತಿ

Saptami Gowda
ಸಿನಿಮಾ60 mins ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Actor Darshan
ಸಿನಿಮಾ1 hour ago

Actor Darshan: ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದವನ ಕೊಲೆ ಕೇಸ್‌ನಲ್ಲಿ ದರ್ಶನ್‌ ಬಂಧನ; ಯಾರು ಈ ಪವಿತ್ರಾ?

Actor Darshan
ಪ್ರಮುಖ ಸುದ್ದಿ2 hours ago

Actor Darshan: ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಬಂಧನ; ಏನಿದು ಪ್ರಕರಣ?

All Eyes on Raesi
ದೇಶ2 hours ago

All Eyes on Raesi: ಹಿಂದೂ ಯಾತ್ರಿಕರ ಹತ್ಯೆ: ಆಲ್ ಐಸ್ ಆನ್ ರಿಯಾಸಿ; ರಫಾ ರಫಾ ಅನ್ನುತ್ತಿದ್ದ ಸೆಲೆಬ್ರಿಟಿಗಳು ಈಗೆಲ್ಲಿ?

IND vs PAK
ಕ್ರೀಡೆ2 hours ago

IND vs PAK: ಟ್ರ್ಯಾಕ್ಟರ್ ಮಾರಿ ಭಾರತ-ಪಾಕ್​ ಪಂದ್ಯ ವೀಕ್ಷಿಸಿ ಕಣ್ಣೀರು ಹಾಕಿದ ಅಭಿಮಾನಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Saptami Gowda
ಸಿನಿಮಾ60 mins ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ20 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

ಟ್ರೆಂಡಿಂಗ್‌