Kalyan Ram: ಜನುಮದಿನದಂದೇ ಹೊಸ ಅಪ್‌ಡೇಟ್‌ ಹಂಚಿಕೊಂಡ ನಟ ಕಲ್ಯಾಣ್ ರಾಮ್! - Vistara News

South Cinema

Kalyan Ram: ಜನುಮದಿನದಂದೇ ಹೊಸ ಅಪ್‌ಡೇಟ್‌ ಹಂಚಿಕೊಂಡ ನಟ ಕಲ್ಯಾಣ್ ರಾಮ್!

Kalyan Ram: ಸದಾ ಹೊಸಬಗೆಯ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುವ ಕಲ್ಯಾಣ್ ರಾಮ್ ಈ ಬಾರಿಯೂ ವಿಶಿಷ್ಟ ಕಥೆಯೊಂದಿಗೆ ಪ್ರೇಕ್ಷಕರನ್ನು ರಂಜಿಸಲು ರೆಡಿಯಾಗಿದ್ದಾರೆ. ಅದರ ಮುಂದುವರಿದ ಭಾಗವೇ ಡೆವಿಲ್.

VISTARANEWS.COM


on

Kalyan Ram Devil Cinema Look
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಟಾಲಿವುಡ್ ನಟ ಕಲ್ಯಾಣ್ ರಾಮ್ (Kalyan Ram) ಜುಲೈ 5ರಂದು ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಜನ್ಮದಿನದ ಉಡುಗೊರೆಯಾಗಿ ಡೆವಿಲ್ ಸಿನಿಮಾದ ಸಣ್ಣ ಗ್ಲಿಂಪ್ಸ್ ರಿಲೀಸ್ ಮಾಡಿದೆ. ಸದಾ ಹೊಸಬಗೆಯ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುವ ಕಲ್ಯಾಣ್ ರಾಮ್ ಈ ಬಾರಿಯೂ ವಿಶಿಷ್ಟ ಕಥೆಯೊಂದಿಗೆ ಪ್ರೇಕ್ಷಕರನ್ನು ರಂಜಿಸಲು ರೆಡಿಯಾಗಿದ್ದಾರೆ. ಅದರ ಮುಂದುವರೆದ ಭಾಗವೇ ಡೆವಿಲ್.

ಫಸ್ಟ್ ಲುಕ್ ಮೂಲಕ ನಿರೀಕ್ಷೆ ಹೆಚ್ಚಿಸಿದ್ದ ಡೆವಿಲ್ ಗ್ಲಿಂಪ್ಸ್ ಭಾರೀ ಸದ್ದು ಮಾಡುತ್ತಿದೆ. 1 ನಿಮಿಷ 2 ಸೆಕೆಂಡ್ ಇರುವ ಝಲಕ್‌ನಲ್ಲಿ ಡೆವಿಲ್‌ ಸ್ವಾತಂತ್ರ್ಯ ಪೂರ್ವದ ಬ್ರಿಟಿಷ್ ಏಜೆಂಟ್ ಕಥೆ ಎನ್ನಲಾಗಿದೆ. ಗೂಢಚಾರಿ ಹೇಗೆ ಇರಬೇಕು ಎನ್ನುವುದನ್ನು ವಿವರಿಸುತ್ತ ಎಂಟ್ರಿ ಕೊಡುವ ಕಲ್ಯಾಣ್ ರಾಮ್ ಲುಕ್ ಗೆಟಪ್ ಗಮನಸೆಳೆಯುತ್ತದೆ‌. ಕ್ಯಾಮೆರಾ ವರ್ಕ್ ಹಾಗೂ ಹಿನ್ನೆಲೆ ಸಂಗೀತ ಅದ್ಭುತವಾಗಿ ಮೂಡಿಬಂದಿದೆ. ಕಲ್ಯಾಣ್ ರಾಮ್‌ಗೆ ಜೋಡಿಯಾಗಿ ಸಂಯುಕ್ತ ಮೆನನ್ ನಟಿಸಿದ್ದಾರೆ.

ಡೆವಿಲ್ ಸಿನಿಮಾವನ್ನು ದೇವಾಂಶ್ ನಾಮಾ ಪ್ರೆಸೆಂಟ್ ಮಾಡುತ್ತಿದ್ದು, ಅಭಿಷೇಕ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಅಭಿಷೇಕ್ ನಾಮಾ ನಿರ್ಮಿಸುತ್ತಿದ್ದಾರೆ. ನವೀನ್ ಮೇಡಾರಂ ನಿರ್ದೇಶನದ ಡೆವಿಲ್ ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನು ಶ್ರೀಕಾಂತ್ ವಿಸ್ಸಾ ಒದಗಿಸಿದ್ದಾರೆ.

ಇದನ್ನೂ ಓದಿ: Pawan Kalyan: ಡಿವೋರ್ಸ್‌ ಗಾಸಿಪ್‌ಗಳಿಗೆ ಫುಲ್‌ಸ್ಟಾಪ್‌ ಇಟ್ಟ ಪವನ್ ಕಲ್ಯಾಣ್!

ಹರ್ಷವರ್ಧನ್ ರಾಮೇಶ್ವರ್ ಚಿತ್ರಕ್ಕೆ ಸಂಗೀತ, ಸೌಂದರರಾಜನ್ ಛಾಯಾಗ್ರಹಣ ಮಾಡಲಿದ್ದಾರೆ. ತೆಲುಗು, ಹಿಂದಿ, ತಮಿಳು ಮತ್ತು ಕನ್ನಡ ಭಾಷೆಗಳಲ್ಲಿ ಡೆವಿಲ್ ಸಿನಿಮಾ ಮೂಡಿಬರಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Pawan Kalyan: ಪವನ್‌ ಕಲ್ಯಾಣ್‌ ಮಾಜಿ ಪತ್ನಿ ಮರು ಮದುವೆಗೆ ರೆಡಿ!

Pawan Kalyan: ನಟ ಪವನ್ ಕಲ್ಯಾಣ್ ಅವರ ಮಾಜಿ ಪತ್ನಿ, ನಟಿ ರೇಣು ದೇಸಾಯಿ ಅವರು ಎರಡನೇ ಮದುವೆಯಾಗಲು ರೆಡಿಯಾಗಿದ್ದಾರಂತೆ. ಮುಂದಿನ ಎರಡು ಅಥವಾ ಮೂರು ವರ್ಷದೊಳಗೆ (Renu Desai Second Marriage) ಮರು ಮದುವೆಯಾಗಲು ಯೋಜಿಸುತ್ತಿರುವುದಾಗಿ ಬಹಿರಂಗಪಡಿಸಿದ್ದಾರೆ.

VISTARANEWS.COM


on

Renu Desai Second Marriage
Koo

ಬೆಂಗಳೂರು: ಟಾಲಿವುಡ್ ನ ಖ್ಯಾತ ನಟರಲ್ಲಿ ಪವನ್ ಕಲ್ಯಾಣ (Pawan Kalyan) ಕೂಡ ಒಬ್ಬರು. ಇವರು ಹಲವಾರು ಚಿತ್ರದಲ್ಲಿ ನಟಿಸಿ ಜನ ಮನ್ನಣೆಯನ್ನು ಪಡೆದು ಟಾಲಿವುಡ್ ನಲ್ಲಿ ಒಬ್ಬ ಖ್ಯಾತ ನಟ ಎನಿಸಿಕೊಂಡಿದ್ದಾರೆ. ಆದರೆ ಇಂತಹ ಮಹಾನ್ ನಟ ತಮ್ಮ ವೈವಾಹಿಕ ಜೀವನದಲ್ಲಿ ಸಮಸ್ಯೆಯನ್ನು ಎದುರಿಸಿದ್ದಾರೆ. ಪವನ್‌ ಕಲ್ಯಾಣ್‌ ತಮ್ಮ ಮೊದಲ ಪತ್ನಿ (Pawan Kalyan’s ex-wife) ರೇಣು ದೇಸಾಯಿ (Renu desai) ಅವರಿಂದ ವಿಚ್ಛೇದನ ಪಡೆದು ದೂರವಾಗಿರುವ ವಿಚಾರ ಎಲ್ಲರಿಗೂ ತಿಳಿದೆ ಇದೆ. ಇದೀಗ ಅವರ ಮಾಜಿ ಪತ್ನಿ, ನಟಿ ರೇಣು ದೇಸಾಯಿ (Renu Desai Second Marriage) ಅವರು ಎರಡನೇ ಮದುವೆಯಾಗಲು ರೆಡಿಯಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ನಟಿ ರೇಣು ದೇಸಾಯಿ ಅವರು ಇತ್ತೀಚೆಗೆ ಜನಪ್ರಿಯ ಯೂಟ್ಯೂಬ್ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ ತಮ್ಮ ಎರಡನೇ ಮದುವೆಯ ಯೋಜನೆಯ ಬಗ್ಗೆ ಪ್ರಸ್ತಾಪಮಾಡಿದ್ದಾರೆ.

ಸಂದರ್ಶನದಲ್ಲಿ ನಟಿ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಹಂಚಿಕೊಳ್ಳುತ್ತಿರುವಾಗ ಈ ವಿಚಾರ ತಿಳಿಸಿದ್ದಾರೆ. ಹಾಗೇ ಮುಂದಿನ ಎರಡು ಅಥವಾ ಮೂರು ವರ್ಷದೊಳಗೆ ಮರು ಮದುವೆಯಾಗಲು ಯೋಜಿಸುತ್ತಿರುವುದಾಗಿ ಬಹಿರಂಗಪಡಿಸಿದ್ದಾರೆ. ಹಾಗಾಗಿ ಈಗಾಗಲೇ ತಂದೆಯ ಪ್ರೀತಿಯಿಂದ ವಂಚಿತರಾದ ಅವರ ಮಕ್ಕಳಿಗೆ ತಂದೆಯ ಪ್ರೀತಿ ಸಿಗಲಿದೆ ಎನ್ನಲಾಗಿದೆ.

Renu Desai Second Marriage

ನಟಿ ರೇಣು ದೇಸಾಯಿಯವರು 2012ರಲ್ಲಿ ಪವನ್ ಕಲ್ಯಾಣ್ ಅವರಿಗೆ ಡಿವೋರ್ಸ್ ನೀಡಿದ್ದರು. ಆದರೆ ಅವರು ಇಷ್ಟು ವರ್ಷಗಳ ಕಾಲ ಯಾಕೆ ಮರು ಮದುವೆಯಾಗಿಲ್ಲ ಎಂಬ ಗೊಂದಲ ಹಲವರಲ್ಲಿದೆ. ಇದಕ್ಕೆ ಉತ್ತರಿಸಿದ ನಟಿ ರೇಣು ದೇಸಾಯಿ ಅವರು, ಆ ಸಮಯದಲ್ಲಿ ಮಕ್ಕಳಿಗೆ ಆರೈಕೆಯ ಅಗತ್ಯವಿತ್ತು. ಅವರಿಗೆ ತನ್ನ ಸಹಾಯ ಬೇಕಿತ್ತು. ಆದರೆ ತಾನು ಮದುವೆಯಾದರೆ ಪತಿಯೊಂದಿಗೆ ಸಮಯ ಕಳೆಯಬೇಕಾಗುತ್ತದೆ ಆಗ ಮಕ್ಕಳಿಗೆ ಒಂಟಿತನ ಕಾಡುತ್ತದೆ. ಈಗಾಗಲೇ ತಂದೆ ಇಲ್ಲದೆ ನರಳುತ್ತಿದ್ದ ಮಕ್ಕಳಿಗೆ ತಾಯಿಯ ಪ್ರೀತಿ ಸಿಗದಿದ್ದರೆ ಅವರಿಗೆ ಅನೇಕ ಸಮಸ್ಯೆ ಉಂಟಾಗುತ್ತದೆ. ಹಾಗಾಗಿ ಇನ್ನೆರಡು ಮೂರು ವರ್ಷಗಳಲ್ಲಿ ಅವರು ದೊಡ್ಡವರಾಗುತ್ತಾರೆ. ಕಾಲೇಜಿಗೆ ಹೋಗುತ್ತಾರೆ. ಅಲ್ಲಿ ಅವರು ಸ್ನೇಹಿತರು ಮತ್ತು ಪ್ರೇಮಿಗಳ ಹೊಸ ಪ್ರಪಂಚಕ್ಕೆ ಕಾಲಿಡುತ್ತಾರೆ. ಅವರೊಂದಿಗೆ ಹೆಚ್ಚು ಸಮಯ ಕಳೆಯುತ್ತಾರೆ. ಆಗ ಅವರು ಪೋಷಕರ ಮೇಲೆ ಅವಲಂಬಿತರಾಗಿರುವುದಿಲ್ಲ. ಹಾಗಾಗಿ ಈ ನಿರ್ಧಾರ ಮಾಡಿರುವುದಾಗಿ ತಿಳಿಸಿದ್ದಾರೆ.

Renu Desai Second Marriage

ಅಲ್ಲದೇ ಮರು ಮದುವೆಗೆ ತಮ್ಮ ಮಕ್ಕಳ ಬೆಂಬಲ ಇರುವುದಾಗಿ ತಿಳಿಸಿದ್ದಾರೆ. ಹಾಗೇ ಮರುಮದುವೆಯಿಂದ ತಾವು ಮತ್ತೆ ಸಂತೋಷವನ್ನು ಕಂಡುಕೊಳ್ಳುವ ಬಯಕೆಯನ್ನು ನಟಿ ವ್ಯಕ್ತಪಡಿಸಿದ್ದಾರೆ. ಇದು ನಟಿ ರೇಣು ದೇಸಾಯಿ ಅವರಿಗೆ ತಮ್ಮ ಮಕ್ಕಳ ಬಗ್ಗೆ ಎಷ್ಟು ಕಾಳಜಿ, ಜವಾಬ್ದಾರಿ ಇದೆ ಎಂಬುದರ ಬಗ್ಗೆ ತಿಳಿಸುತ್ತದೆ.

ಇದನ್ನೂ ಓದಿ: Viral Video: ಬಿಜೆಪಿ ಶಾಲು ಧರಿಸಿ ಅಯೋಧ್ಯೆ ಹೆಸರಿನ ಪ್ರತಿಕೃತಿಗೆ ಬೆಂಕಿ! ಸೋಲೇ ಕಾರಣ!

ಇತ್ತ ನಟ ಪವನ್ ಕಲ್ಯಾಣ್ ಅವರು ಚಿತ್ರರಂಗದ ಜೊತೆಗೆ ರಾಜಕೀಯ ರಂಗಕ್ಕೂ ಪ್ರವೇಶ ಮಾಡಿದ್ದಾರೆ. ಅವರು ತಮ್ಮದೇ ಜನಸೇನಾ ಪಾರ್ಟಿ ಎಂಬ ರಾಜಕೀಯ ಪಕ್ಷವನ್ನು ಕಟ್ಟಿಕೊಂಡು 2019ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಹೀನಾಯವಾಗಿ ಸೋಲನುಭವಿಸಿದ್ದರು. ಆದರೆ 2024ರಲ್ಲಿ ಆಂಧ್ರಪ್ರದೇಶದ ವಿಧಾನ ಸಭಾ ಚುನಾವಣೆಯಲ್ಲಿ ಗೆದ್ದು ಶಾಸಕರಾಗಿದ್ದಾರೆ. ಹಾಗಾಗಿ ಅವರು ಇನ್ನು ಮುಂದೆ ಚಿತ್ರರಂಗದಲ್ಲಿ ಮುಂದುವರಿಯುತ್ತಾರಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

Continue Reading

ಕರ್ನಾಟಕ

Kalki 2898 AD: ಮೈನವಿರೇಳಿಸುವ ‘ಕಲ್ಕಿ 2898 AD’ ಚಿತ್ರದ ಟ್ರೇಲರ್‌ ರಿಲೀಸ್‌!

Kalki 2898 AD: ಭಾರೀ ನಿರೀಕ್ಷೆಯ ಬಳಿಕ, ವೈಜ್ಞಾನಿಕ ಕಾಲ್ಪನಿಕ ಮಹಾಕಾವ್ಯ ‘ಕಲ್ಕಿ 2898 AD’ ಚಿತ್ರದ 2 ನಿಮಿಷ ಮತ್ತು 51 ಸೆಕೆಂಡ್‌ಗಳ ಟ್ರೈಲರ್ ಬಿಡುಗಡೆ ಆಗಿದೆ. ಪ್ರಭಾಸ್‌, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ ಚಿತ್ರದ ಟ್ರೈಲರ್ ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ.

VISTARANEWS.COM


on

Kalki 2898 AD Trailer Released on Vyjayanthi Movies YouTube Channel
Koo

ಬೆಂಗಳೂರು: ಪ್ರಭಾಸ್‌, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ (Kalki 2898 AD) ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಅಮೆಜಾನ್ ಪ್ರೈಮ್‌ನಲ್ಲಿ ಬಿ&ಬಿ ಬುಜ್ಜಿ ಮತ್ತು ಭೈರವ ಮುನ್ನುಡಿ ಬಿಡುಗಡೆಯಾದ ಬಳಿಕ, ಅಭಿಮಾನಿಗಳು ಈ ಚಿತ್ರದ ಟ್ರೇಲರ್‌ಗಾಗಿ ಕಾತುರದಿಂದ ಕಾದಿದ್ದರು. ಇದೀಗ ಅದಕ್ಕೆ ಉತ್ತರ ಸಿಕ್ಕಿದೆ. ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನಲ್‌ನಲ್ಲಿ ಟ್ರೇಲರ್‌ ರಿಲೀಸ್‌ ಆಗಿದೆ.

ಭಾರೀ ನಿರೀಕ್ಷೆಯ ಬಳಿಕ, ವೈಜ್ಞಾನಿಕ ಕಾಲ್ಪನಿಕ ಮಹಾಕಾವ್ಯ ‘ಕಲ್ಕಿ 2898 AD’ ಚಿತ್ರದ ಎರಡು ನಿಮಿಷ ಮತ್ತು ಐವತ್ತೊಂದು ಸೆಕೆಂಡ್‌ಗಳ ಟ್ರೇಲರ್‌ ಬಿಡುಗಡೆ ಆಗಿದೆ. ವಿಎಫ್‌ಎಕ್ಸ್‌ನಿಂದಲೇ ನೋಡುಗರ ಗಮನ ಸೆಳೆದ ಈ ಸಿನಿಮಾ ತೆಲುಗು ಮಾತ್ರವಲ್ಲದೆ ಹಿಂದಿ, ತಮಿಳು, ಮಲಯಾಳಂ, ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ಬಹು ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಇದೀಗ ಟ್ರೇಲರ್‌ ಸಹ ಎಲ್ಲ ಭಾಷೆಗಳಲ್ಲಿ ಹೊರಬಂದಿದೆ.

ಚಿತ್ರದ ಟ್ರೇಲರ್ ಕುರಿತು ನಿರ್ದೇಶಕ ನಾಗ್ ಅಶ್ವಿನ್ ಮಾತನಾಡಿ, “ಇಂದು ನನ್ನ ಹೃದಯವು ಹಲವು ಮಿಕ್ಸ್‌ಡ್‌ ಭಾವನೆಗಳಿಂದ ತುಂಬಿದೆ. ಒಬ್ಬ ಚಲನಚಿತ್ರ ನಿರ್ದೇಶಕನಾಗಿ, ನಾನು ಯಾವಾಗಲೂ ಭಾರತೀಯ ಪುರಾಣ ಮತ್ತು ವೈಜ್ಞಾನಿಕ ಕಾದಂಬರಿಗಳಿಂದ ಆಕರ್ಷಿತನಾಗಿದ್ದೇನೆ. ‘ಕಲ್ಕಿ 2898 AD’ ಚಿತ್ರದಲ್ಲಿ ಈ ಎರಡು ಅಂಶಗಳನ್ನು ವಿಲೀನಗೊಳಿಸಿದ್ದೇವೆ. ನಮ್ಮ ಕಲಾವಿದರು ಮತ್ತು ತಂಡದ ಅಸಾಧಾರಣ ಪ್ರತಿಭೆ ಮತ್ತು ಸಮರ್ಪಣಾ ಮನೋಭಾವದಿಂದ ಕನಸೊಂದು ನನಸಾಗಿದೆ.

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಹಾಗೂ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

ಇದನ್ನೂ ಓದಿ: Modi 3.0 Cabinet: ಮೊದಲ ಸಂಪುಟ ಸಭೆಯಲ್ಲೇ ಮೋದಿ ಸಿಕ್ಸರ್;‌ ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಸ್ತು

ಟ್ರೇಲರ್‌ನಲ್ಲಿ ಸಿನಿಮಾದ ಪಂಚ್‌ ಡೈಲಾಗ್‌, ಫೈಟ್ಸ್‌ ನೋಡಿ ಅಭಿಮಾನಿಗಳು ದಶಕದ ಟ್ರೇಲರ್‌ ಎಂದು ಹೇಳುತ್ತಿದ್ದಾರೆ. ಚಿತ್ರದ ಟ್ರೇಲರ್‌ ನೋಡುವವರಿಗೆ ಇದು ಯುಗಗಳ ಕಥೆ ಎಂಬುದು ಸ್ಪಷ್ಟವಾಗುತ್ತದೆ. ರೆಕಾರ್ಡ್‌ನಲ್ಲಿ ಇಲ್ಲಿಯವರೆಗೂ ಒಂದೇ ಒಂದು ಫೈಟ್‌ ಸೋತಿಲ್ಲ ಎಂದು ಟಾಲಿವುಡ್‌ ಯಂಗ್‌ ರೆಬಲ್‌ ಸ್ಟಾರ್‌ ಪ್ರಭಾಸ್‌ ಹೇಳುವ ಡೈಲಾಗ್‌ ಟ್ರೇಲರ್‌ನ ಹೈಲೆಟ್‌ ಆಗಿದೆ.

ಇದನ್ನೂ ಓದಿ: Indian Chutneys: ವಿಶ್ವದ ಟಾಪ್ 50 ಅಚ್ಚುಮೆಚ್ಚಿನ ತಿನಿಸುಗಳಲ್ಲಿ ಭಾರತದ ಈ ಎರಡು ಚಟ್ನಿಗಳು!

ಚಿತ್ರದಲ್ಲಿ ಪ್ರಭಾಸ್‌ ಭೈರವನಾಗಿ, ಅಶ್ವತ್ಥಾಮ ಪಾತ್ರದಲ್ಲಿ ಅಮಿತಾಭ್ ಬಚ್ಚನ್ ಕಾಣಿಸಿಕೊಳ್ಳಲಿದ್ದಾರೆ. ಪ್ರಭಾಸ್‌ ಮತ್ತು ಅಮಿತಾಭ್‌ ಬಚ್ಚನ್‌ ಕೂಡ ಅದ್ಭುತವಾದ ಆಕ್ಷನ್‌ ಅನ್ನು ಮಾಡಿರುವುದು ಟ್ರೇಲರ್‌ನಿಂದ ತಿಳಿಯುತ್ತದೆ. ಅತಿಥಿ ಪಾತ್ರ ಮತ್ತು ಖಳನಾಯಕನ ಪಾತ್ರವನ್ನು ನಿರ್ವಹಿಸಿರುವ ಕಮಲ್‌ ಹಾಸನ್‌ ಟ್ರೇಲರ್‌ನ ಕೊನೆಯಲ್ಲಿ ಭಯ ಪಡಬೇಡಿ ಇನ್ನೊಂದು ಲೋಕ ಬರುತ್ತಿದೆ ಎಂಬ ಡೈಲಾಗ್‌ ಹೇಳುವ ಮೂಲಕ ಗುರುತಿಸಲಾಗದ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ರಿಲೀಸ್‌ ಆಗಿರುವ ಟೀಸರ್‌ ಹಾಗೂ ಪೋಸ್ಟರ್‌ಗಳಿಂದಲೇ ಸಿನಿಮಾ ಸಂಚಲನ ಮೂಡಿಸಿದ್ದು, ಟ್ರೇಲರ್‌ ಮತ್ತಷ್ಟು ನಿರೀಕ್ಷೆಯನ್ನು ಹುಟ್ಟುಹಾಕಿದೆ.

Continue Reading

ಸ್ಯಾಂಡಲ್ ವುಡ್

Chandan Shetty: 3ನೇ ವ್ಯಕ್ತಿ ಜತೆ ನಿವೇದಿತಾ ಸಂಬಂಧದ ಕುರಿತು ಚಂದನ್‌ ಹೇಳಿದ್ದೇನು?

Chandan Shetty: ನಿವೇದಿತಾ ಹುಟ್ಟುಹಬ್ಬದ ದಿನ ಸೃಜನ್ ಲೋಕೇಶ್ ಒಂದು ವಿಡಿಯೊ ಶೇರ್ ಮಾಡಿ ಶುಭ ಕೋರಿದ್ದರು. ಅದರಲ್ಲಿ ನಿವೇದಿತಾ ಜತೆಗಿನ ಒಂದಷ್ಟು ಫೋಟೊಗಳನ್ನು ಹಾಕಿದ್ದರು. ಇದಕ್ಕೆ ಮನಬಂದಂತೆ ಕಮೆಂಟ್‌ ಮಾಡಿದ್ದಾರೆ ನೆಟ್ಟಿಗರು. ಆ ಬಗ್ಗೆ ಮಾಜಿ ದಂಪತಿ ಸ್ಪಷ್ಟನೆ ನೀಡಿದ್ದಾರೆ.ಒಬ್ಬ ಮೂರನೇ ವ್ಯಕ್ತಿಯನ್ನು ನಿವೇದಿತಾ ಹೆಸರಿಗೆ ಸೇರಿಸಿ ಸಂಬಂಧ ಕಲ್ಪಿಸಿದ್ದು ನನ್ನ ಮನಸ್ಸಿಗೆ ತುಂಬ ಬೇಸರ ಆಗಿದೆ ಎಂದಿದ್ದಾರೆ ಚಂದನ್‌.

VISTARANEWS.COM


on

Chandan Shetty Niveditha gowda roumers on srujan lokesh
Koo

ಬೆಂಗಳೂರು: ಕನ್ನಡದ ರ್‍ಯಾಪರ್‌ ಚಂದನ್ ಶೆಟ್ಟಿ (Chandan Shetty) ಮತ್ತು ನಿವೇದಿತಾ ಗೌಡ ವಿಚ್ಛೇದನ ಪಡೆದ ಬೆನ್ನಲ್ಲೇ ಕೆಲವರು ನಟ ಸೃಜನ್ ಲೋಕೇಶ್ ಹೆಸರು ಎಳೆದುತಂದು ಟ್ರೋಲ್ ಮಾಡಿದ್ದರು. ನಿವೇದಿತಾ ಹುಟ್ಟುಹಬ್ಬದ ದಿನ ಸೃಜನ್ ಲೋಕೇಶ್ ಒಂದು ವಿಡಿಯೊ ಶೇರ್ ಮಾಡಿ ಶುಭ ಕೋರಿದ್ದರು. ಅದರಲ್ಲಿ ನಿವೇದಿತಾ ಜತೆಗಿನ ಒಂದಷ್ಟು ಫೋಟೊಗಳನ್ನು ಹಾಕಿದ್ದರು. ಇದಕ್ಕೆ ಮನಬಂದಂತೆ ಕಮೆಂಟ್‌ ಮಾಡಿದ್ದಾರೆ ನೆಟ್ಟಿಗರು. ಆ ಬಗ್ಗೆ ಮಾಜಿ ದಂಪತಿ ಸ್ಪಷ್ಟನೆ ನೀಡಿದ್ದಾರೆ.ಒಬ್ಬ ಮೂರನೇ ವ್ಯಕ್ತಿಯನ್ನು ನಿವೇದಿತಾ ಹೆಸರಿಗೆ ಸೇರಿಸಿ ಸಂಬಂಧ ಕಲ್ಪಿಸಿದ್ದು ನನ್ನ ಮನಸ್ಸಿಗೆ ತುಂಬ ಬೇಸರ ಆಗಿದೆ ಎಂದಿದ್ದಾರೆ ಚಂದನ್‌.

ಮೂರನೇ ವ್ಯಕ್ತಿಯನ್ನು ಸಂಬಂಧಿಸಿ ಸಂಬಂಧ ಕೂಡ ಕಲ್ಪಿಸುತ್ತಿದ್ದಾರೆ. ಆದರೆ ಅವರು ನಮಗೆ ಫ್ಯಾಮಿಲಿ ತರ. ಆ ವ್ಯಕ್ತಿ ಜತೆ ಹೆಸರು ಸೇರಿಸಿದ್ದು ಸರಿಯಲ್ಲ. ಇದು ಕನ್ನಡಿಗರಾಗಿ ನಮಗೆ ಶೋಭೆ ಅಲ್ಲ. ಯಾಕೆಂದರೆ ಆ ವ್ಯಕ್ತಿಯ ಮನೆಗೆ ನಾನು ಕೂಡ ಅನೇಕ ಬಾರಿ ಹೋಗಿದ್ದೇನೆ. ತುಂಬ ಒಳ್ಳೆಯ ಕುಟುಂಬ ಅವರದ್ದುʼʼಎಂದರು ಚಂದನ್‌.

ಇನ್ನು ನಿವೇದಿತಾ ಕೂಡ ʻʻಆ ರೀತಿಯ ಪೋಸ್ಟ್​ಗಳನ್ನು ನೋಡಿದಾಗ ನನಗೆ ನೋವಾಯಿತು. ನಾವೆಲ್ಲ ಫ್ಯಾಮಿಲಿ ಫ್ರೆಂಡ್ಸ್​. ಪ್ರತಿ ವರ್ಷ ಅವರು ನನ್ನ ಜನ್ಮದಿನಕ್ಕೆ ವಿಶ್​ ಮಾಡುತ್ತಾರೆ. ನಾನು ಕೂಡ ಅವರಿಗೆ ವಿಶ್​ ಮಾಡುತ್ತೇನೆ. ಈ ವರ್ಷವೇ ಈ ರೀತಿ ವದಂತಿ ಹಬ್ಬಿದ್ದು ಯಾಕೆ ಅಂತ ಗೊತ್ತಿಲ್ಲ. ಇದರಿಂದ ಅವರ ಫ್ಯಾಮಿಲಿಯವರಿಗೆ ತುಂಬ ನೋವಾಗುತ್ತದೆ. ಫ್ಯಾಮಿಲಿ ಎಲ್ಲರಿಗೂ ಇರತ್ತೆ, ಬೇರೆಯವರ ಇಮೋಷನ್‌ ಹರ್ಟ್‌ ಮಾಡಬೇಡಿ. ಬೇಸ್‌ಲೆಸ್‌ ಆಗಿ ಏನೇನೊ ಹೇಳಬಾರದು. ನಾವಿಬ್ಬರೂ ಒಮ್ಮತದಿಂದ ನಿರ್ಧಾರ ಮಾಡಿಯೇ ಡಿವೋರ್ಸ್‌ ಪಡೆದುಕೊಂಡಿದ್ದೇವೆ. ನಾವು ಸೆಲೆಬ್ರಿಟಿಯಾಗಿ ನಮ್ಮ ಫಾಲ್ಲೋವರ್ಸ್ ಯಾರಿಗೂ ಡಿವೋರ್ಸ್ ಕೊಡಿ ಎಂದು ಪ್ರಚೋದನೆ ಕೊಡುತ್ತಿಲ್ಲ ʼʼಎಂದರು.

ಇದನ್ನೂ ಓದಿ: Richa Chadha: ಖ್ಯಾತ ನಿರ್ದೇಶಕ ಸೆಟ್‌ನಲ್ಲಿ ಮದ್ಯ ಸೇವಿಸಿ ಫಜೀತಿಗೆ ಒಳಗಾದ ರಿಚಾ ಚಡ್ಡಾ!

ಕೊನೆಯದಾಗಿ ಚಂದನ್‌ ಮಾತನಾಡಿ ʻʻನಾನು ಮಾರ್ನಿಂಗ್ ಪರ್ಸನ್, ನಿವೇದಿತಾ ನೈಟ್ ಪರ್ಸನ್ ಇಲ್ಲಿಂದಲೇ ಸಮಸ್ಯೆ ಶುರುವಾಗಿತ್ತು. ನಾನು ಬೆಳಗ್ಗೆ ಬೇಗ ಎದ್ದೇಳ್ತಿನಿ, ನಿವೇದಿತಾ ಲೇಟ್ ಆಗಿ ಎದೆಳ್ತಾಳೆ. ಇಬ್ರಿಗೂ ಟೈಮ್ ಕೊಡೋಕೆ ಆಗುತ್ತಿರಲಿಲ್ಲ. 1 ವರ್ಷದಿಂದ ದೂರ ಆಗುವ ಬಗ್ಗೆ ಮಾತುಕಥೆ ಇತ್ತು. ಕ್ಯಾಂಡಿ ಕ್ರಶ್ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದೇವೆ. ಒಂದು ದಿನದ ಶೂಟಿಂಗ್‌ ಬಾಕಿ ಇದೆ. ಇಬ್ಬರೂ ಭಾಗಿ ಆಗ್ತೇವೆ. ವೈಯಕ್ತಿಯ ಸಮಸ್ಯೆಯನ್ನು ಪ್ರೊಫೆಷನಲ್‌ಗೆ ತರೋದಿಲ್ಲʼʼಎಂದರು ಚಂದನ್‌.

Continue Reading

ಸಿನಿಮಾ

Chandan Shetty: ನಮ್ಮ ಖುಷಿ ಮೇಲೆ ಪ್ರಶಾಂತ್‌ ಸಂಬರಗಿ ಕಣ್ಣು; ಟಾಂಗ್‌ ಕೊಟ್ಟ ಚಂದನ್‌ ಶೆಟ್ಟಿ

Chandan Shetty: ಪ್ರಶಾಂತ್‌ ಸಂಬರಗಿ ʻದುಡ್ಡಿನ ಹಿಂದೆ ಹೋಗಿರುವಂತಹವರು ಅಥವಾ ಅವಕಾಶಗಳ ಹಿಂದೆ ಹೋಗಿರುವಂತಹವರು ಯಾರು ಎಂದು ಕರ್ನಾಟಕದ ಜನತೆಗೆ ಮುಂದೆ ಗೊತ್ತಾಗುತ್ತೆʼʼ ಎಂದಿದ್ದರು. ಇದೀಗ ಚಂದನ್‌ ಈ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಹೆಸರನ್ನು ಪ್ರಸ್ತಾಪ ಮಾಡದೇ ಈ ಬಗ್ಗೆ ಸ್ಪಷ್ಟತೆ ಕೊಟ್ಟಿದ್ದಾರೆ.

VISTARANEWS.COM


on

Chandan Shetty reaction about prashant sambaragi statement on divorce
Koo

ಬೆಂಗಳೂರು: ಚಂದನ್‌ ಶೆಟ್ಟಿ (Niveditha Gowda) ಹಾಗೂ ನಿವೇದಿತಾ ಗೌಡ ಅವರು ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದುಕೊಂಡಿದ್ದಾರೆ. ಬಿಗ್‌ಬಾಸ್ ಸ್ಪರ್ಧಿ ಪ್ರಶಾಂತ್ ಸಂಬರಗಿ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ “ಜೊತೆಯಾಗಿರಲು ಗಟ್ಟಿಯಾದ ಭರವಸೆ ಬೇಕು, ದೂರಾಗಲು ಚಿಕ್ಕದಾದ ಸಂಶಯ ಸಾಕು’ಎಂದು ಚಂದನ್‌ ಕುರಿತಾಗಿ ಬರೆದುಕೊಂಡಿದ್ದರು. ಇದಾದ ಬಳಿಕ ಪ್ರಶಾಂತ್‌ ಸಂಬರಗಿ ʻದುಡ್ಡಿನ ಹಿಂದೆ ಹೋಗಿರುವಂತಹವರು ಅಥವಾ ಅವಕಾಶಗಳ ಹಿಂದೆ ಹೋಗಿರುವಂತಹವರು ಯಾರು ಎಂದು ಕರ್ನಾಟಕದ ಜನತೆಗೆ ಮುಂದೆ ಗೊತ್ತಾಗುತ್ತೆʼʼ ಎಂದಿದ್ದರು. ಇದೀಗ ಚಂದನ್‌ ಈ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಹೆಸರನ್ನು ಪ್ರಸ್ತಾಪ ಮಾಡದೇ ಈ ಬಗ್ಗೆ ಸ್ಪಷ್ಟತೆ ಕೊಟ್ಟಿದ್ದಾರೆ.

“ಮಾಧ್ಯಮಗಳಲ್ಲಿ ಮೂರನೇ ವ್ಯಕ್ತಿ ನಮ್ಮ ಸಂಬಂಧದ ಬಗ್ಗೆ ಕೊಟ್ಟಿರುವ ಹೇಳಿಕೆ ನಿಜವಲ್ಲ. ಇದು ನಮ್ಮ ವೈಯಕ್ತಿಕ ಜೀವನ. ನಾವಿಬ್ರು ಖುಷಿಯಾಗಿರಬೇಕು ಎಂದೇ ದೂರ ಆಗಿರುವುದು. ಆದರೆ ಆ ವ್ಯಕ್ತಿ ನಮ್ಮ ಖುಷಿ ನೋಡುವುದಕ್ಕೆ ಆಗ್ತಿಲ್ಲ ಅನ್ನಿಸುತ್ತದೆ. ನಮ್ಮ ಜೋಡಿ ನೋಡಿ ಎಲ್ಲರೂ ಖುಷಿ ಪಡ್ತಾ ಇದ್ದರು. ಬೇರೆ ಕಡೆ ನಾನು ಸಂದರ್ಶನ ಒಬ್ಬರು ಕೊಟ್ಟಿರುವುದು ನೋಡಿದೆ. ನಾನು ಯಾರಿಗೂ ಫ್ರೆಂಡ್‌ ಅಂದಿಲ್ಲ, ಆ ವ್ಯಕ್ತಿ ಜತೆ ನಾನು ಏನೂ ಆ ತರ ಮಾತನಾಡಿಲ್ಲ. ಈ ರೀತಿ ಅವರು ಮಾತನಾಡಿದ್ದು ಸುಳ್ಳು. ಸುಳ್ಳು ಹೇಳಿಕೆ ಕೊಟ್ಟಿದ್ದಾರೆ. ಬೇರೆ ಅವರ ವೈಯಕ್ತಿಕ ಜೀವನ ಬಗ್ಗೆ ಯಾಕೆ ಹೀಗೆ ಮಾತನಾಡುತ್ತಿದ್ದೀರಾ ಗೊತ್ತಿಲ್ಲ. ನಾವು ಪೋಷಕರು ಜತೆ ಮಾತನಾಡಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ನಮ್ಮಿಬ್ಬರ ಮಧ್ಯೆ ಇಲ್ಲದೇ ಇರುವ ಉಹಾ ಪೋಹಾ ಬೀಜ ಬಿತ್ತಬೇಡಿ. ಇಲ್ಲಿಗೆ ಈ ವಿಚಾರ ನಿಲ್ಲಿಸಿ. ವದಂತಿಗಳಿಗೆ ಕಿವಿ ಕೊಡಬೇಡಿ. ಆದರೆ ನಾವು ಬ್ಯಾಲೆನ್ಸ್‌ ಮಾಡೋಕೆ ನೋಡಿದ್ವಿ ಆದರೆ ಆಗಿಲ್ಲʼʼಅಷ್ಟೇ ಅಂದರು.

ಇದನ್ನೂ ಓದಿ: Chandan Shetty: ಚಂದನ್-ನಿವೇದಿತಾ ಸಂಬಂಧ ಸರಿ ಮಾಡ್ತಾರಾ ಧ್ರುವ ಸರ್ಜಾ? ಪ್ರಥಮ್ ಕೊಟ್ಟಿದ್ದಾರೆ ಕ್ಲೂ!

ಪ್ರಶಾಂತ್‌ ಸಂಬರಗಿ ಹೇಳಿದ್ದೇನು?

ಪ್ರಶಾಂತ್‌ ಸಂಬರಗಿ ಮಾತನಾಡಿ ʻʻನನಗೆ ಚಂದನ್‌ ಆತ್ಮೀಯ ಗೆಳೆಯ. ಚಂದನ್‌ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’  ಸಿನಿಮಾದಲ್ಲಿ ಚಂದನ್‌ ನಾಯಕ. ನಾನು ಅದರಲ್ಲಿ ಪೊಲೀಸ್‌ ಪಾತ್ರ ಮಾಡಿದ್ದೇನೆ. 15 ದಿನಗಳ ಕಾಲ ಒಟ್ಟಿಗೆ ಶೂಟಿಂಗ್‌ ಮಾಡಿದ್ದೇವೆ. ಖುಷಿ ಪಟ್ಟಿದ್ದೇವೆ, ಹೊಡೆದಾಡಿಕೊಂಡಿದ್ದೇವೆ,, ಮಜಾ ಮಾಡಿದ್ದೇವೆ. ಚಂದನ್‌ ಹಾಗೂ ನಿವೇದಿತಾ ಸ್ಯಾಂಡಲ್‌ವುಡ್‌ ಪವರ್‌ ಕಪಲ್‌. ಆದರೆ ಏಕಾಏಕಿ ಅವರು ದೂರ ಆದರು. ಎಲ್ಲರೂ ಈ ವಿಷಯ ಕೇಳಿ ಶಾಕ್‌ ಆದರು. ಆದರೆ ನನಗೆ ಈ ವಿಚಾರ ಹೊಸದಲ್ಲ. ಒಂದು ವರ್ಷದ ಹಿಂದೆಯೇ ಗೊತ್ತಿತ್ತುʼʼ ಎಂದಿದ್ದರು.

ʻʻಚಂದನ್‌ ದಸರಾದಲ್ಲಿ ಪ್ರಪೋಸ್‌ ಮಾಡಿರುವ ಬಗ್ಗೆ ನನ್ನ ಧಿಕ್ಕಾರ ಕೂಡ ಇತ್ತು. ಆದರೂ ಕೊನೆಗೆ ಅವೆಲ್ಲ ಕ್ಷಮಿಸಿ ಮುಂದೆ ಒಳ್ಳೆಯದಾಗಲಿ ಎಂದು ಹಾರೈಸಿದೆ. ಈ ತಿಂಗಳಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಸಿನಿಮಾ ಪ್ರಮೋಷನ್‌ಗೆ ಚಂದನ್‌ ಬರಲಿಲ್ಲ. ಹಲವು ಪ್ರಮೋಷನ್‌ಗೆ ಬರಲಿಲ್ಲ. 6 ತಿಂಗಳ ಹಿಂದೆಯೇ ಚಂದನ್‌ ಬಗ್ಗೆ ಹಿಂಟ್‌ ಸಿಕ್ಕಿತ್ತು. ಚಂದನ್‌ ಮನಸ್ಥಿತಿ ಸರಿಯಿಲ್ಲ ಎಂದು. ಒಂದು ಪ್ರಪೋಷನ್‌ ಲಾಂಚ್‌ಗೆ ಮನೆಯಲ್ಲಿ ಹಾಕಿರುವ ಡ್ರೆಸ್‌ ಹಾಕಿಕೊಂಡೇ ಚಂದನ್‌ ಬಂದಿದ್ದರು. ಇದಕ್ಕೆ ನಮ್ಮ ಭಿನ್ನಾಭಿಪ್ರಾಯ ಕೂಡ ಇತ್ತು. ನೀವು ಹೀರೊ ಆಗಿ ಹೀರೊ ತರಹ ಪ್ರೆಸೆಂಟ್‌ ಆಗಬೇಕು. ಈ ತರಹ ಅವತಾರದಲ್ಲಿ ಬರೋದು ಸರಿಯಲ್ಲ ಎಂದು ನಿರ್ದೇಶಕರು ಕೇಳಿದಾಗ, ಈ ವಿಚಾರ ಬಹಿರಂಗಪಡಿಸಿದ್ದರು. ನಂದು ಮತ್ತೆ ನಿವೇದಿತಾ ವಿಷನ್‌ ಮ್ಯಾಚ್‌ ಆಗ್ತಿಲ್ಲ. ಒಟ್ಟಿಗೆ ಬದುಕಲು ಆಗ್ತಿಲ್ಲ. ತುಂಬ ಸಮಸ್ಯೆಯಲ್ಲಿದ್ದೇನೆ. ಮುಂದೆ ಗೊತ್ತಾಗತ್ತೆ ಎಂದು ಚಂದನ್‌ ನಿರ್ದೇಶಕರ ಹತ್ತಿರ ಹೇಳಿಕೊಂಡಿದ್ದರು ʼ ಎಂದಿದ್ದರು.

ʻʻಚಂದನ್ ಅಮೆರಿಕಾಗೆ ಮ್ಯೂಸಿಕ್ ಕಾರ್ಯಕ್ರಮಕ್ಕೆ ಹೋಗಿದ್ದ. ಆಗ ನಿವೇದಿತಾ ಹೋಗಲಿಲ್ಲ. ನನ್ನ ಮೊದಲನೇ ಪ್ರಶ್ನೆ ಇದ್ದಿದ್ದು ಯಾಕೆ ಅವಳನ್ನು ಕರೆದುಕೊಂಡು ಹೋಗುತ್ತಿಲ್ಲ ಅಂತ. ಆದರೆ, ಬೇರೆ ಟ್ರಿಪ್‌ಗೆ ನೀನು ಕರ್ಕೊಂಡು ಹೋಗಿಲ್ಲ. ಬೇರೆಯವರು ಕರ್ಕೊಂಡು ಹೋಗ್ತಾರೆ. ನೀನು ನಿನ್ನ ಎಮೋಷನ್ಸ್‌ಗೆ ಸ್ಪಂದಿಸಿಲ್ಲ ಅಂದರೆ, ಬೇರೆ ಯಾರೋ ಕೊಡ್ತಾರೆ. ನೀನು ನಿನ್ನ ವಸ್ತುವನ್ನು ಕಾಪಾಡಿಕೋ ಅಂತ ಅನೇಕ ಬಾರಿ ಹೇಳಿದ್ದೇನೆ” ಎಂದು ಪ್ರಶಾಂತ್ ಸಂಬರಗಿ ಹೇಳಿದ್ದರು.

ʻʻನಿನ್ನೆ ನಗ್ತಾನೇ ಬಂದು ಹೋದರು. ಆದರೆ ಚಂದನ್‌ಗೆ ನೋವಾಗಿದೆ. ಇರುವ ಸ್ವಿಫ್ಟ್ ಕಾರು ಬಿಟ್ಟು ಬೆನ್ಜ್ ಕಾರು ಬೇಕು ಅಂದರೆ ನಾವೇನು ಮಾಡುವುದಕ್ಕೆ ಆಗುವುದಿಲ್ಲ. ಬೆನ್ಜ್ ಹಿಂದೆ ಹೋಗಿರುವಂತವರು, ದುಡ್ಡಿನ ಹಿಂದೆ ಹೋಗಿರುವಂತಹವರು ಅಥವಾ ಅವಕಾಶಗಳ ಹಿಂದೆ ಹೋಗಿರುವಂತಹವರು ಯಾರು ಅಂತ ಕರ್ನಾಟಕದ ಜನತೆಗೆ ಮುಂದೆ ಗೊತ್ತಾಗುತ್ತೆ. ಚಂದನ್‌ಗೆ ನಮ್ಮ ಬ್ರದರ್ಲಿ ಸಪೋರ್ಟ್, ಎಮೋಷನಲ್ ಸಪೋರ್ಟ್ ಇದೆʼʼಎಂದಿದ್ದರು ಪ್ರಶಾಂತ್‌ ಸಂಬರಗಿ.

Continue Reading
Advertisement
University Grants Commission
ಪ್ರಮುಖ ಸುದ್ದಿ16 mins ago

University Grants Commission : ಇನ್ನು ಮುಂದೆ ವಿಶ್ವವಿದ್ಯಾಲಯಗಳಲ್ಲಿ ವರ್ಷಕ್ಕೆ ಎರಡು ಬಾರಿ ಅಡ್ಮಿಷನ್​

Actor Darshan
ಪ್ರಮುಖ ಸುದ್ದಿ27 mins ago

Actor Darshan: ದರ್ಶನ್ ಸೇರಿ ಎಲ್ಲ ಆರೋಪಿಗಳಿಗೆ 3 ದಿನ ಪೊಲೀಸ್ ಕಸ್ಟಡಿ; ಕಟಕಟೆಯಲ್ಲಿ ಕಣ್ಣೀರಿಟ್ಟ ನಟ!

Wedding Jewel Fashion
ಫ್ಯಾಷನ್41 mins ago

Wedding Jewel Fashion: ವೆಡ್ಡಿಂಗ್‌ ಜ್ಯುವೆಲ್‌ ಫ್ಯಾಷನ್‌ನಲ್ಲಿ ಮಹಿಳೆಯರನ್ನು ಸೆಳೆಯುತ್ತಿವೆ ಈ 3 ಟ್ರೆಡಿಷನಲ್‌ ಮಾಟಿಗಳು

EPF Account Rules
ಮನಿ-ಗೈಡ್1 hour ago

EPF Account Rules: ಕ್ಲೈಮ್ ಇತ್ಯರ್ಥ ಇನ್ನು ಸುಲಭ; ಇಪಿಎಫ್‌ಒ ಮಾಡಿದೆ ಹಲವು ಹೊಸ ಬದಲಾವಣೆ

Renu Desai Second Marriage
ಸಿನಿಮಾ1 hour ago

Pawan Kalyan: ಪವನ್‌ ಕಲ್ಯಾಣ್‌ ಮಾಜಿ ಪತ್ನಿ ಮರು ಮದುವೆಗೆ ರೆಡಿ!

Odisha chief minister
ಪ್ರಮುಖ ಸುದ್ದಿ1 hour ago

Odisha chief minister : ಬಿಜೆಪಿಯ ಮೋಹನ್ ಚರಣ್ ಮಾಝಿ ಒಡಿಶಾದ ನೂತನ ಮುಖ್ಯಮಂತ್ರಿ; ಇಬ್ಬರು ಉಪಮುಖ್ಯಮಂತ್ರಿಗಳ ಆಯ್ಕೆ

Renuka Swamy Murder Case
ಕರ್ನಾಟಕ1 hour ago

Renuka Swamy Murder Case: ರೇಣುಕಾಸ್ವಾಮಿ ಕೊಲೆ ಕೇಸ್‌ ಖಂಡಿಸಿ ನಾಳೆ ಚಿತ್ರದುರ್ಗದಲ್ಲಿ ಬೃಹತ್‌ ಪ್ರತಿಭಟನೆ

Raksha Khadse
ರಾಜಕೀಯ2 hours ago

Raksha Khadse: ಅಂದು ಪಂಚಾಯಿತಿ ಸದಸ್ಯೆ, ಇಂದು ಕೇಂದ್ರ ಸಚಿವೆ! ಯಾರು ಈ ರಕ್ಷಾ ಖಡ್ಸೆ?

Health Tips For Monsoon
ಆರೋಗ್ಯ2 hours ago

Health Tips For Monsoon: ಮಳೆಗಾಲಕ್ಕೆ ನಮ್ಮ ಆಹಾರ ಹೇಗಿರಬೇಕು?

Ayodhya's e-rickshaw
ಪ್ರಮುಖ ಸುದ್ದಿ2 hours ago

Ayodhya’s e-rickshaw : ಅಯೋಧ್ಯೆಯಲ್ಲಿ ಬಿಜೆಪಿಗೆ ಸೋಲು; ಪ್ರವಾಸಿಗರ ಸಂಖ್ಯೆ ಇಳಿಕೆ; ರಿಕ್ಷಾ ಚಾಲಕರಿಗೆ ಆದಾಯ ನಷ್ಟ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 hours ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 hours ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ6 hours ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ8 hours ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌