Karnataka live news: ಅಕ್ಬರ್‌-ಆಂಟನಿ ಖುಷ್‌, ಅಮರ್‌ ಮಟ್ಯಾಷ್‌ ಎಂದ ಸಿಸಿ ಪಾಟೀಲ್‌: 1 ವರ್ಷ ಕಾಯಿರಿ ಎಂದ ಎಂ.ಬಿ. ಪಾಟೀಲ್‌ - Vistara News

Latest

Karnataka live news: ಅಕ್ಬರ್‌-ಆಂಟನಿ ಖುಷ್‌, ಅಮರ್‌ ಮಟ್ಯಾಷ್‌ ಎಂದ ಸಿಸಿ ಪಾಟೀಲ್‌: 1 ವರ್ಷ ಕಾಯಿರಿ ಎಂದ ಎಂ.ಬಿ. ಪಾಟೀಲ್‌

ರಾಜ್ಯದ ಮಹತ್ವದ ಸುದ್ದಿಗಳು ಹಾಗೂ ಕ್ಷಣಕ್ಷಣದ ಅಪ್‌ಡೇಟ್‌ಗಳಿಗಾಗಿ ವಿಸ್ತಾರ ನ್ಯೂಸ್‌ನ ಈ ಲೈವ್‌ ಫಾಲೋ ಮಾಡಿ.

VISTARANEWS.COM


on

Karnataka Live News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಈ ವರ್ಷದ ಬಜೆಟ್‌ನಲ್ಲಿ ಐದು ಗ್ಯಾರಂಟಿಗಳ ಕಡೆಗೆ ಗಮನಹರಿಸಲಾಗಿದ್ದು, ಮುಂದಿನ ಬಜೆಟ್‌ನಲ್ಲಿ ಮಠಮಾನ್ಯಗಳಿಗೆ ಅನುದಾನ ನೀಡಲಾಗುತ್ತದೆ ಎಂದು ಸಚಿವ ಎಂ.ಬಿ. ಪಾಟೀಲ್‌ ಹೇಳಿದ್ದಾರೆ.
ಕೆಬಿಜೆಎನ್ಎಲ್ ಮುಳವಾಡ ಏತ ನೀರಾವರಿ ಹಂತ 3 ರಡಿಯ ಬಬಲೇಶ್ವರ ಶಾಖಾ ಕಾಲುವೆ 1 ಹಾಗೂ 2 ವಿತರಣಾ ಕಾಲುವೆ ಕಾಮಗಾರಿ ಭೂಮಿಪೂಜೆ ಕಾರ್ಯಕ್ರಮದ ನಂತರ ಮಾಧ್ಯಮಗಳ ಜತೆಗೆ ಮಾತನಾಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಧಾರ್ಮಿಕ

Akshaya Tritiya 2024: ದೇಹ ಮತ್ತು ಮನಸ್ಸು ಪರಿಪೂರ್ಣತೆಯನ್ನು ಪಡೆಯುವ ದಿನ ಅಕ್ಷಯ ತೃತೀಯ

ವೈಶಾಖ ಮಾಸದ – ಶುಕ್ಲ ಪಕ್ಷದ – ಮೂರನೇ ದಿನವೇ ‘ಅಕ್ಷಯ ತೃತೀಯ’ (Akshaya Tritiya 2024). ಹಿಂದುಗಳ ಪವಿತ್ರ ದಿನಗಳಲ್ಲಿ (Akshaya Tritiya 2024) ಅತ್ಯಂತ ಪವಿತ್ರವಾದ ನಾಲ್ಕು “ಪೂರ್ಣ ಮುಹೂರ್ತʼಗಳಲ್ಲಿ (ಯುಗಾದಿ, ಅಕ್ಷಯ ತೃತೀಯ, ವಿಜಯ ದಶಮಿ ಮತ್ತು ಬಲಿಪಾಡ್ಯಮಿ ಹಬ್ಬದ ದಿನಗಳು) ಇದು ಒಂದು. ಈ ದಿನಗಳಲ್ಲಿ ಒಳ್ಳೆಯ ಕೆಲಸ ಮಾಡಲು ಪಂಚಾಂಗ ನೋಡುವ ಅವಶ್ಯಕತೆ ಇರುವುದಿಲ್ಲ ಎಂದು ನಮ್ಮ ಹಿರಿಯರು ಹೇಳಿದ್ದಾರೆ.

VISTARANEWS.COM


on

Akshaya Tritiya 2024
Koo
Prof. Vidwan Navinashastri Ra. Puranika (writers, Sanskrit lecturers, culture thinkers and astrologers)

ಪ್ರೊ. ವಿದ್ವಾನ್ ನವೀನಶಾಸ್ತ್ರಿ ರಾ. ಪುರಾಣಿಕ
(ಲೇಖಕರು, ಸಂಸ್ಕೃತ ಉಪನ್ಯಾಸಕರು, ಸಂಸ್ಕೃತಿ ಚಿಂತಕರು ಹಾಗೂ ಜ್ಯೋತಿಷಿಗಳು)
ಭವ್ಯ ಭಾರತದ ಸಾಂಸ್ಕೃತಿಕ ಪರಂಪರೆಯ (Akshaya Tritiya 2024) ಶ್ರೇಷ್ಠತೆಯನ್ನು ಸಾರುವ ಮೂಲಕ ಈ ಹಬ್ಬ ಹರಿದಿನಗಳು ಮನುಷ್ಯರ ಮನಸ್ಸನ್ನೂ ಸದಾ ನೆಮ್ಮದಿ ಮತ್ತು ಸಂತೋಷವಾಗಿ ಇರಲೆಂದು, ಕಾಲಕಾಲಕ್ಕೆ ಬದಲಾಗುವ ಋತು ನಿಯಮಗಳಿಗೆ ಅನುಗುಣವಾಗಿ ನಮ್ಮ ಹಿರಿಯರು ಭಗವಂತನ ಪ್ರತಿರೂಪವನ್ನು ಸೃಷ್ಟಿಯಲ್ಲಿ ದೃಷ್ಟಿಯಿಟ್ಟು ಮಾನವ ಜನಾಂಗದ ಏಳಿಗೆಗೆ ಶ್ರಮಿಸಿದ್ದಾರೆ. ಪಂಚಭೂತಗಳಲ್ಲಿ ದೇವರನ್ನು ಹುಡುಕಿದ್ದಾರೆ.ಹಿಗಾಗಿ ಭಾರತ ಪ್ರತ್ಯಕ್ಷ ಸಂಸ್ಕೃತಿಯ ಜೀವಂತ ಸ್ವರ್ಗದ ಪ್ರತಿ ರೂಪ. ಭಾರತೀಯರು ಆಚರಿಸುವ ಯಾವುದೇ ಹಬ್ಬ-ಹರಿದಿನಗಳು, ಸಮಾರಂಭ, ಜಯಂತಿ, ಉತ್ಸವಗಳು, ಆರಾಧನೆ ಇತ್ಯಾದಿ ಸಾಮಾನ್ಯವಾಗಿ ಅಮರವಾಗಿ ಉಳಿದಿರುವ ಯಾವುದೋ ಗತ ವ್ಯಕ್ತಿಯ, ಶಕ್ತಿಯ ಅಥವಾ ಪ್ರಾಚೀನತೆಯ ಪ್ರತೀಕಗಳಾಗಿರುತ್ತವೆ. ನಮ್ಮ ಈ ಪುಣ್ಯ ಭೂಮಿ ಭಾರತದಲ್ಲಿ ಎಲ್ಲಾ ಜನರು ಅತ್ಯಂತ ಪ್ರೀತಿಯಿಂದ, ಸಂತೋಷದಿಂದ ಬೆಸೆದುಕೊಂಡು ಇರಲು ಮುಖ್ಯ ಕಾರಣವೇನೆಂದರೆ, ನಮ್ಮ ಪೂರ್ವಜರು ಹಾಕಿಕೊಟ್ಟಂತಹ ಸಂಸ್ಕೃತಿ, ಪರಂಪರೆ ಹಾಗೂ ಕಾಲಕಾಲಕ್ಕೆ ಆಚರಿಸುವ ಹಬ್ಬ – ಹರಿದಿನಗಳು.
ಭಾರತ ಸಂಪ್ರದಾಯವನ್ನು ಪಾಲಿಸುವ ಮತ್ತು ಧರ್ಮವನ್ನು ಗೌರವಿಸುವ ದೇಶ. ಇದು ಈ ನೆಲದ ಸಂಸ್ಕಾರ. ಇಲ್ಲಿಯ ಪ್ರತಿ ಹಬ್ಬಕ್ಕೂ ಒಂದೊಂದು ಬಗೆಯ ಮಹತ್ವವನ್ನು ಹಾಗೂ ಹಿರಿಯರು ಹಾಕಿಕೊಟ್ಟ ನಿಯಮಗಳನ್ನು ಇನ್ನೂ ಪಾಲಿಸುತ್ತಾ ಬರುತ್ತಿದ್ದೇವೆ ಎಂಬುದೇ ಸಂಪ್ರದಾಯ. ಹಬ್ಬಗಳೇ ನಮ್ಮ ಭಾರತದ ಉಸಿರು ಎಂದರೂ ತಪ್ಪಾಗಲಿಕ್ಕಿಲ್ಲ.
ಸನಾತನ ವೈದಿಕ ಹಿಂದೂ ಧರ್ಮದಲ್ಲಿ ಸಾಕಷ್ಟು ಹಬ್ಬ-ಹರಿದಿನಗಳು ಉತ್ಸವಗಳು ಆಚರಣೆಯಲ್ಲಿವೆ.
ವೈಶಾಖ ಮಾಸದ – ಶುಕ್ಲ ಪಕ್ಷದ – ಮೂರನೇ ದಿನವೇ ‘ಅಕ್ಷಯ ತೃತೀಯ’. ಹಿಂದುಗಳ ಪವಿತ್ರ ದಿನಗಳಲ್ಲಿ ಅತ್ಯಂತ ಪವಿತ್ರವಾದ ನಾಲ್ಕು “ಪೂರ್ಣ ಮುಹೂರ್ತ” ಗಳಲ್ಲಿ (ಯುಗಾದಿ, ಅಕ್ಷಯ ತೃತೀಯ, ವಿಜಯ ದಶಮಿ ಮತ್ತು ಬಲಿಪಾಡ್ಯಮಿ ಹಬ್ಬದ ದಿನಗಳು) ಇದು ಒಂದು. ಈ ದಿನಗಳಲ್ಲಿ ಒಳ್ಳೆಯ ಕೆಲಸ ಮಾಡಲು ಪಂಚಾಂಗ ನೋಡುವ ಅವಶ್ಯಕತೆ ಇರುವುದಿಲ್ಲ ಎಂದು ನಮ್ಮ ಹಿರಿಯರು ಹೇಳಿದ್ದಾರೆ. ಈ ದಿವಸ ಸಾಮಾನ್ಯವಾಗಿ ಯಾವುದೇ ಒಳ್ಳೆ ಕೆಲಸವನ್ನು ಮಾಡಿದರೆ, ಅಕ್ಷಯವಾಗಿ ಪರಿಣಮಿಸುವುದು. ಈ ದಿವಸ ಜೀವನದ ಹೊಸ ಉದ್ಯೋಗಗಳನ್ನು ಪ್ರಾರಂಭಿಸುವುದು ಶುಭಕರ. ಈ ತೃತೀಯ ತಿಥಿಯ ಜೊತೆ ರೋಹಿಣಿ ನಕ್ಷತ್ರವಿದ್ದರೆ, ಮಹಾ ಪುಣ್ಯಕರವೆಂದು ಪುರಾಣಗಳಲ್ಲಿ ಉಲ್ಲೇಖವಿದೆ.

Akshaya Tritium

ಶುಭ ಕಾರ್ಯಗಳಿಗೆ ಅತ್ಯಂತ ಪ್ರಶಸ್ತ

ಪಂಚಾಂಗದಲ್ಲಿ ಅಕ್ಷಯ ತೃತೀಯದಂದು ಸೂರ್ಯ ಮತ್ತು ಚಂದ್ರರು ಏಕಕಾಲದಲ್ಲಿ ತಮ್ಮ ತಮ್ಮ ಶಕ್ತಿಯುತಸ್ಥಾನ – ಉಚ್ಚರಾಶಿಯಲ್ಲಿ (ಸೂರ್ಯ-ಮೇಷರಾಶಿಯಲ್ಲಿ ಮತ್ತು ಚಂದ್ರ – ವೃಷಭರಾಶಿಯಲ್ಲಿ) ಇರುವದರಿಂದ ಎಲ್ಲಾ ಶುಭ ಕಾರ್ಯಗಳಿಗೆ ಅತ್ಯಂತ ಪ್ರಶಸ್ತವಾಗಿರುತ್ತದೆ. ಸೂರ್ಯನು ಆತ್ಮ ಮತ್ತು ದೇಹ ಪ್ರತಿಬಿಂಬಿಸಿದರೆ, ಚಂದ್ರನು ಮನಸ್ಸು ಮತ್ತು ಬುದ್ದಿ ಮೇಲೆ ಪ್ರಭಾವ ಬೀರುತ್ತಾನೆ. ಈ ರೀತಿಯಾಗಿ ದೇಹ ಮತ್ತು ಮನಸ್ಸು ಪರಿಪೂರ್ಣತೆಯನ್ನು ಪಡೆಯುವ ದಿನ ಎಂದು ಹೇಳುವರು. ಅಕ್ಷಯ ತೃತೀಯವು ಇಡೀ ವರ್ಷದಲ್ಲಿ ಬರುವ ಒಂದು ಅತ್ಯಂತ ಶುಭದಿನವಾಗಿದೆ.ಹಾಗಾಗಿ‌ ಮನೆಯಲ್ಲಿ ಪೂಜೆ ಹೋಮ ಹವನಾದಿಗಳನ್ನು ಮಾಡುವುದಾದರೆ ಅಥವಾ ಚಿನ್ನ ಖರೀದಿ ಮಾಡುವುದಾದರೆ ಇದು ಸೂಕ್ತವಾದ ದಿನ.ಇದರಿಂದ ಮತ್ತಷ್ಟು ನಮ್ಮಲ್ಲಿ ಸುಖ ಸಮೃದ್ದಿ ಸಂಪತ್ತು ಹೇರಳವಾಗುತ್ತದೆ.ಅಲ್ಲದೇ ಈ ದಿನದಂದು ವಿಷ್ಣು, ಲಕ್ಷ್ಮಿ ಹಾಗೂ ಕುಬೇರನನ್ನು ಜನರು ಭಕ್ತಿಯಿಂದ ಪೂಜಿಸುತ್ತಾರೆ. ಅಲ್ಲದೇ ಹಿಂದೂ ಪುರಾಣದ ಪ್ರಕಾರ ತ್ರೇತಾಯುಗವು ಆರಂಭವಾದದ್ದು ಈ ಅಕ್ಷಯ ತೃತೀಯದ ಶುಭದಿನದಂದೇ ಎನ್ನುವ ಉಲ್ಲೇಖವಿದೆ.

ಅಕ್ಷಯ ತೃತೀಯಕ್ಕೆ ಪುರಾಣದ ನಂಟು

ವೈಶಾಖ ಮಾಸಕ್ಕೆ ಸೂರ್ಯ ಅಭಿಮಾನಿ ದೇವತೆ. ಸೂರ್ಯನು ಬೆಳಕು ಮತ್ತು ಶಕ್ತಿಯ ಉಗಮ ಸ್ಥಾನ. ಸೂರ್ಯ ಜಗದ ಕಣ್ಣು. ಸೂರ್ಯ ಜಗವನ್ನು ಬೆಳಗುವವನು ಹೌದು. ಅವನ ಆಂತರ್ಯದಲ್ಲಿರುವುದೇ ಪ್ರಬಲವಾದ ಅಗ್ನಿ. ಅಗ್ನಿಯ ಮೊದಲ ಮಗನೇ ಹಿರಣ್ಯ (ಬಂಗಾರ). ಸೂರ್ಯ-ಅಗ್ನಿ-ಬಂಗಾರದ ಸಂಬಂಧ ಹೀಗಿದೆ. ಭಗವದ್ಗೀತೆಯಲ್ಲಿ ಶ್ರೀಕೃಷ್ಣನೇ ವೈಶ್ವಾನರಾಗ್ನಿಯ ರೂಪದಲ್ಲಿ ನಾನು ಎಲ್ಲರ ಹೃದಯದಲ್ಲಿರುತ್ತೇನೆ ಎಂದು. ವಿಸ್ತರಿಸಿ ಅರ್ಥೈಸುವುದಾದರೆ ನಾವು ಬಂಗಾರವನ್ನು ಧರಿಸಿಕೊಂಡಾಗ ನಮ್ಮ ಹೃದಯವಾಸಿಯಾದ ಅಗ್ನಿಯನ್ನು ಅವನ ಮಗ ಹಿರಣ್ಯ (ಬಂಗಾರ)ನಿಂದಲೇ ಅಲಂಕರಿಸದಂತಾಗುವುದು.
ಅಕ್ಷಯವೆಂದರೆ ಕ್ಷಯವಿಲ್ಲದ್ದು, ಕಡಿಮೆ ಇಲ್ಲದ್ದು, ಕ್ಷೀಣವಾಗದ್ದು, ಕೊನೆಯಿಲ್ಲದ್ದು, ನ್ಯೂನವಿಲ್ಲದ್ದು. ಇದು ಸಮದ್ಧಿಯ ಸಂಕೇತ, ಶುಭಾರಂಭದ ದ್ಯೋತಕ, ನಿರಂತತೆಯ ಪ್ರತೀಕ.ಧರ್ಮವು ಕರ್ತವ್ಯವನ್ನು, ಆಧ್ಯಾತ್ಮಿಕತೆಯನ್ನು ಅರ್ಥವು ಸಂಪತ್ತನ್ನು, ಕಾಮವು ಭೌತಿಕ ಸಂತೋಷವನ್ನು ಸೂಚಿಸುವ ಆಕಾಂಕ್ಷೆಗಳನ್ನು ಸಂಕೇತಿಸಿದರೆ, ಮೋಕ್ಷ ಈ ಭವಬಂಧನದಿಂದ ಮುಕ್ತವಾಗಿ ಏಕತ್ವದಲ್ಲಿ ಲೀನವಾಗುವುದರ ಸಂಕೇತವಾಗಿದೆ. ಈ ನಾಲ್ಕು ಪುರುಷಾರ್ಥಗಳ ಪೈಕಿ ಯಾವುದಾದರೊಂದರ ಆರಂಭ ಮಾಡುವುದಿದ್ದರೂ ಅದಕ್ಕೆ ಎಲ್ಲ ರೀತಿಯಿಂದಲೂ ಅನುಕೂಲಕರವಾದ ಶುಭ ದಿನವೇ ಈ ಅಕ್ಷಯ ತೃತೀಯ.

ಅಕ್ಷಯ ತೃತೀಯ ಮಹತ್ವ ಏನು?

ವಿಷ್ಣು ಅಲಂಕಾರ ಪ್ರಿಯ. ಆತನಿಗೆ ಪ್ರಿಯವಾದ ಹೇಮ (ಚಿನ್ನ) ರಜತಾದಿ ಒಡವೆಗಳನ್ನು ಖರೀದಿಸಿ ಅರ್ಪಿಸಿ ಕೃತಾರ್ಥರಾಗುವರು ಭಾರತೀಯ ಆಸ್ತಿಕರು. ವಿಷ್ಣು ಸಹಸ್ರನಾಮದಲ್ಲಿ ಹೇಳಿದಂತೆ ವಿಷ್ಣು ಸುವರ್ಣ ವರ್ಣದವನು. ಮಾತ್ರವಲ್ಲ, ಅಷ್ಟಶ್ವರ್ಯಗಳ ಅಧಿಪತಿ ಕುಬೇರ. ಈ ಒಂದು ದಿನ ಸ್ವತಃ ಐಶ್ವರ್ಯ ದೇವತೆ ಲಕ್ಷ್ಮಿಯನ್ನು ಪೂಜಿಸುತ್ತಾನೆ ಎಂದು ಲಕ್ಷ್ಮೀತಂತ್ರದಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ದೈವಭಕ್ತರಿಗೆ ಇದೊಂದೇ ದಿನ ಕುಬೇರ ಲಕ್ಷ್ಮೀ ಪೂಜೆ ಮಾಡಲು ಅವಕಾಶ. ವಿಶೇಷವಾಗಿ ತುಪ್ಪದ ದೀಪ ಹಚ್ಚಿ ಪೂಜಿಸಲಾಗುತ್ತದೆ.

Akshaya Tritium photo

ಪುರಾಣ ಪುಣ್ಯ ಕಥೆಗಳಲ್ಲಿ ಅಕ್ಷಯ ತೃತೀಯದ ವಿಶೇಷತೆ

ಈ ದಿನ ಹಲವು ಮಹತ್ಕಾರ್ಯಗಳು ಶುರುವಾದ ದಿನ ಕೃತಯುಗ (ಸತ್ಯ ಯುಗ) ಶುರುವಾದ ದಿನ ಎಂದು ಹೇಳಲಾಗುತ್ತದೆ. ವೇದವ್ಯಾಸರು ಗಣಪತಿ ಆಶೀರ್ವಾದ ಪಡೆದು ಮಹಾಭಾರತ ಬರೆಯಲು ಪ್ರಾರಂಭಿಸಿದ ದಿನ. ಗಂಗಾ ಮಾತೆ ಕೈಲಾಸದಿಂದ ಭೂಮಿಗೆ ಇಳಿದ ದಿನ ಎಂದು ಹೇಳಲಾಗುತ್ತದೆ. ಈ ದಿನ ಹಲವು ಮಹಾತ್ಮರು ಹುಟ್ಟಿದ ದಿನ ಜಗಜ್ಯೋತಿ ಬಸವಣ್ಣ ಹುಟ್ಟಿದ ದಿನ. ಬಲರಾಮ ಜಯಂತಿ ಅನ್ನೂ ಇಂದು ಆಚರಿಸಲಾಗುತ್ತದೆ. ವಿಷ್ಣು ಪರಶುರಾಮನಾಗಿ ಅವತಾರವೆತ್ತಿದ ದಿನ. ಇನ್ನೂ ಹಲವು ಮಹತ್ ಘಟನೆಗಳು ಈ ದಿನ ನಡೆದಿವೆ ಎಂದು ಪುರಾಣಗಳು ಹೇಳುತ್ತವೆ. ಚಾಮುಂಡೇಶ್ವರಿ ರಾಕ್ಷಸರನ್ನು ಸಂಹರಿಸಿದ ದಿನ. ಪಾಂಡವರು ವನವಾಸದಲ್ಲಿದ್ದಾಗ ಕೃಷ್ಣನ ಆದೇಶದಂತೆ ಸೂರ್ಯನನ್ನು ಪ್ರಾರ್ಥಿಸಿ, ದ್ರೌಪದಿ ಅಕ್ಷಯ ಪಾತ್ರೆಯನ್ನು ಪಡೆದಿದ್ದು ಈ ಅಕ್ಷಯ ತೃತೀಯದ ದಿನವೇ. ಪಾಂಡವರು ತಮ್ಮ ವನವಾಸ, ಅಜ್ಞಾತವಾಸದ ನಂತರ ಶಸ್ತ್ರಾಸ್ತ್ರಗಳನ್ನು ಪುನಃ ಪಡೆದ ದಿನ.
ಈ ದಿನ ವಿಷ್ಣು ಮತ್ತು ಲಕ್ಷ್ಮಿ ಗಂಗಾಸ್ನಾನ ಮಾಡಿ, ಗಂಗೆಯನ್ನು ಪುಜಿಸಿದ್ದರೆಂದು. ಅಂದಿನಿಂದ ಗಂಗಾ ಸ್ನಾನ ಮಾಡಿದರೆ ಸಕಲ ದೋಷ ಪರಿಹಾರವಾಗುತ್ತದೆ ಎಂಬ ರೂಢಿ ಬಂದಿತು ಎಂದು ಹೇಳಲಾಗುತ್ತದೆ. ಕೃಷ್ಣನು ಕುಚೇಲನನ್ನು ಸತ್ಕರಿಸಿದ ಪುಣ್ಯ ದಿನ. ಈ ಎಲ್ಲ ವಿಶೇಷತೆಗಳು ನಡೆದದ್ದು ಈ ಅಕ್ಷಯ ತೃತೀಯ ದಿನದಂದೇ ಎಂದು ಪುರಾಣಗಳ ಕಥೆಗಳು ಹೇಳುತ್ತವೆ.

ಇದನ್ನೂ ಓದಿ: Akshaya Tritiya 2024: ಅಕ್ಷಯ ತೃತೀಯದಂದು ಏನು ಮಾಡಬೇಕು, ಏನು ಮಾಡಬಾರದು?

ಜ್ಯೋತಿಷ ಶಾಸ್ತ್ರದ ಮೂಲಕ ಅಕ್ಷಯ ತೃತೀಯ

ಅಕ್ಷಯ ತೃತೀಯ ಯಾವ ನಕ್ಷತ್ರದಲ್ಲಿ ಬಂದರೆ ಹೆಚ್ಚು ಶ್ರೇಷ್ಠ?
ಈ ಹಬ್ಬ ‘ತೃತೀಯ ತಿಥಿ’ (ತದಿಗೆಯ ದಿನ) ಯಲ್ಲಿ ಮತ್ತು ‘ವೃಷಭ ರಾಶಿ’ಯ ದಿನ ಆಚರಣೆ ಮಾಡುತ್ತಾರೆ. ಆದರೆ ಈ ವೃಷಭ ರಾಶಿ ಮತ್ತು ತೃತೀಯ ತಿಥಿ ಎರಡೂ ಜೊತೆಯಲ್ಲಿ ಬರುವಾಗ ಅಂದು ಮೂರು ನಕ್ಷತ್ರಗಳಲ್ಲಿ (ಕೃತಿಕಾ, ರೋಹಿಣಿ, ಮೃಗಶಿರ) ಯಾವುದಾದರೊಂದು ಬರುವ ಸಾಧ್ಯತೆ ಇದೆ. ಅಕ್ಷಯ ತೃತೀಯ, ಶುಕ್ಲ ಪಕ್ಷದ ಮೂರನೇ ದಿನ / ತೃತೀಯ ತಿಥಿ ಯಲ್ಲಿ ಬರುತ್ತದೆ.

7 ಗ್ರಹಗಳು 360 ಡಿಗ್ರಿ ವೃತ್ತದ ಯಾವ ಯಾವ ಡಿಗ್ರಿ ಯಲ್ಲಿ ಉಚ್ಚರಾಗಿರುತ್ತಾರೆ.
ಸೂರ್ಯ: ಮೇಷದ 19ನೇ ಡಿಗ್ರಿ (ಅಂದರೆ 18°00′ – 18°59′); (ಪೂರ್ಣ ವೃತ್ತದ 19ನೆ ಡಿಗ್ರಿ)
ಚಂದ್ರ: ವೃಷಭರಾಶಿಯ 3ನೇ ಡಿಗ್ರಿ; (ಪೂರ್ಣ ವೃತ್ತದ 33ನೆ ಡಿಗ್ರಿ);
ಗುರು: ಕಟಕ ರಾಶಿಯ 15ನೆ ಡಿಗ್ರಿ; (ಪೂರ್ಣ ವೃತ್ತದ 105ನೆ ಡಿಗ್ರಿ);
ಬುಧ: ಕನ್ಯಾ ರಾಶಿಯ 15ನೆ ಡಿಗ್ರಿ; (ಪೂರ್ಣ ವೃತ್ತದ 165ನೆ ಡಿಗ್ರಿ);
ಶನಿ: ತುಲಾ ರಾಶಿಯ 21ನೆ ಡಿಗ್ರಿ; (ಪೂರ್ಣ ವೃತ್ತದ 201ನೆ ಡಿಗ್ರಿ);
ಮಂಗಳ: ಮಕರ ರಾಶಿಯ 28ನೆ ಡಿಗ್ರಿ; (ಪೂರ್ಣ ವೃತ್ತದ 298ನೆ ಡಿಗ್ರಿ);
ಶುಕ್ರ: ಕುಂಭ ರಾಶಿಯ 27ನೆ ಡಿಗ್ರಿ; (ಪೂರ್ಣ ವೃತ್ತದ 327ನೆ ಡಿಗ್ರಿ);

ಡಿಗ್ರಿ ಲೆಕ್ಕಾಚಾರ

ಒಂದು ಪೂರ್ಣ ವೃತ್ತ = 360 ಡಿಗ್ರಿ. ಈ 360 ಡಿಗ್ರಿ ವೃತ್ತವನ್ನ 12 (ರಾಶಿಗಳು) ಭಾಗಗಳಾಗಿ ಮಾಡಿದಾಗ ಒಂದೊಂದು ರಾಶಿಗೆ 30 ಡಿಗ್ರಿ ಆಗುತ್ತದೆ. ಈ 360 ಡಿಗ್ರಿ ವೃತ್ತವನ್ನ 27 ನಕ್ಷತ್ರಗಳಿಗೆ ಹಂಚಿದರೆ ಒಂದೊಂದು ನಕ್ಷತ್ರಕ್ಕೆ 13° 20′ ಬರುತ್ತದೆ. 27 ನಕ್ಷತ್ರಗಳನ್ನ 12 ರಾಶಿಗಳಿಗೆ ಹಂಚಿದರೆ ಒಂದೊಂದು ರಾಶಿಗೆ ಎರಡೂವರೆ ನಕ್ಷತ್ರಗಳು ಬರುತ್ತವೆ. ಒಂದು ನಕ್ಷತ್ರದಲ್ಲಿ ನಾಲ್ಕು ಪಾದಗಳಿರುತ್ತವೆ ಹಾಗಾಗಿ ಒಂದೊಂದು ಪಾದ 3° 20′ ಜಾಗವನ್ನಾಕ್ರಮಿಸುತ್ತದೆ.
ಒಂದು ರಾಶಿಗೆ ಎರಡೂವರೆ ನಕ್ಷತ್ರಗಳಾದ್ದರಿಂದ ಮತ್ತು ಒಂದು ನಕ್ಷತ್ರಕ್ಕೆ 4 ಪಾದಗಳಾದ್ದರಿಂದ ಒಂದು ರಾಶಿಗೆ 9 ಪಾದಗಳು. ಇದು 13° 20′ ಆಗುತ್ತದೆ. ಉದಾಹರಣೆ: ಮೇಷರಾಶಿಯಲ್ಲಿನ 10 ಪಾದ (ಎರಡೂವರೆ ನಕ್ಷತ್ರ) ಗಳು = 4 ಅಶ್ವಿನಿ + 4 ಭರಣಿ + 2 ಕೃತ್ತಿಕಾ = 4×3° 20′ + 4×3° 20’+ 1×3° 20′ = 30ಡಿಗ್ರಿ

ಉದಾಹರಣೆಯಲ್ಲಿ ಹೇಳಿದಂತೆ

  • ಅಶ್ವಿನಿ ಭರಣಿ ಕೃತ್ತಿಕಾ ಪಾದಂ ಮೇಷಃ। ಎಂಬುದು ಹೀಗೆ ಏಲ್ಲಾ ನಕ್ಷತ್ರ ಹಾಗೂ ದ್ವಾದಶ ರಾಶಿಗಳಿಗೂ ಸಹ ಈ ರೀತಿಯಾದ ಶ್ಲೋಕಗಳು ಇವೆ.
  • ಮೇಷ ರಾಶಿಯಲ್ಲಿ ಅಶ್ವಿನಿ ನಕ್ಷತ್ರ, ಭರಣಿ ನಕ್ಷತ್ರ ಮತ್ತು ಕೃತ್ತಿಕಾದ ಮೊದಲ ಪಾದ ಬರುತ್ತವೆ. ವೃಷಭ ರಾಶಿಯಲ್ಲಿ ಕೃತಿಕಾ ನಕ್ಷತ್ರದ ಮೂರು ಮತ್ತು ನಾಲ್ಕನೇ ಪಾದಗಳು ಮತ್ತು ರೋಹಿಣಿ, ಮೃಗಶಿರ ನಕ್ಷತ್ರಗಳು ಬರುತ್ತವೆ. ನಾವು ಮಾತಿನಲ್ಲಿ ಸೂರ್ಯ ಮೇಷರಾಶಿಯಲ್ಲಿ ಉಚ್ಚನಾಗಿರುತ್ತಾನೆ ಅಂತ ಹೇಳಿದರೂ, ಇನ್ನೂ ಆಳಕ್ಕಿಳಿದು ನೋಡಿದರೆ ಈ ಸೂರ್ಯ ಮೇಷ ರಾಶಿಯ ಭರಣಿ ನಕ್ಷತ್ರ (13° 20′ ರಿಂದ 26° 40′) ದಲ್ಲಿ ಮಾತ್ರ ನಿಜವಾಗಿ ಉಚ್ಚ (19 ಡಿಗ್ರಿ – ಭರಣಿ 3 ನೆ ಪಾದ) ನಾಗಿರುತ್ತಾನೆ ಅಂತ ತಿಳಿಯುತ್ತದೆ.
  • ಸರಳೀಕರಿಸಿ ನಾವು ಚಂದ್ರನು ವೃಷಭರಾಶಿಯಲ್ಲಿ ಉಚ್ಚನಾಗಿರುತ್ತಾನೆ ಅಂತ ಹೇಳಿದರೂ ಸಹ, ಸರಿಯಾಗಿ ಲೆಕ್ಕ ಹಾಕಿದರೆ ಈ ಚಂದ್ರ ವೃಷಭ ರಾಶಿಯ ಕೃತಿಕಾ ನಕ್ಷತ್ರದ 3 ನೇ ಪಾದದಲ್ಲಿ ತನ್ನ ನಿಜ ಉಚ್ಚ ಸ್ಥಾನದಲ್ಲಿರುತ್ತಾನೆ.
  • ಇನ್ನೊಂದು ಪುರಾಣ ಕತೆಯ ಮೂಲಕ ಯೋಚನೆ ಮಾಡೋದಾದರೆ, ಚಂದ್ರನಿಗೆ 27 ಜನ ( ಇವೇ 27 ನಕ್ಷತ್ರಗಳು) ಹೆಂಡತಿಯರು ಅನ್ನುತ್ತಾರೆ. ಚಂದ್ರ ತನ್ನ ಪ್ರತಿ ಹೆಂಡತಿಯ ಜೊತೆ ಒಂದೊಂದು ದಿನ ಇರುತ್ತಾನೆ ಎನ್ನುವ ಕತೆ ಇದು. ಈ 27 ಹೆಂಡತಿಯರಲ್ಲಿ ರೋಹಿಣಿ ಚಂದ್ರನಿಗೆ ಪ್ರಿಯವಾದ ಹೆಂಡತಿ ಅಂತೆ. ಹಾಗಾಗಿ ಕೆಲ ಕತೆಗಳು ರೋಹಿಣಿ ನಕ್ಷತ್ರದ ದಿನ ಬಂದರೆ (ಅಂದರೆ ಚಂದ್ರ ರೋಹಿಣಿ ನಕ್ಷತ್ರದಲ್ಲಿದ್ದಾಗ) ಅಕ್ಷಯ ತೃತೀಯ ಹೆಚ್ಚು ಶ್ರೇಷ್ಠ ಅನ್ನುವ ನಂಬಿಕೆ ಹೊಂದಿದ್ದಾರೆ.

ಇದನ್ನೂ ಓದಿ: Akshaya Tritiya 2024: ಅಕ್ಷಯ ತೃತೀಯದಂದು ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವುದು?

ಮಾಡುವ ಕೆಲಸಕ್ಕೆ ಶುಭ ಫಲ

ಅಕ್ಷಯ ತೃತೀಯ ದಿನದಂದು ಈ ಶುಭ ಮುಹೂರ್ತದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡಿದರೆ ಅದರಿಂದ ನೀವು ಶುಭ ಫಲವನ್ನು ಪಡೆದುಕೊಳ್ಳುವಿರಿ. ಅಕ್ಷಯ ತೃತೀಯದಂದು ರೂಪುಗೊಳ್ಳುವ ಈ ಶುಭ ಸಂಯೋಗವು ನಿಮ್ಮ ಜೀವನದಲ್ಲಿ ಶುಭವನ್ನೇ ತರುತ್ತದೆ. ಅಕ್ಷಯ ತೃತೀಯದಂದು ಶುಭಕಾರ್ಯಗಳನ್ನು ಮಾಡಿದರೆ ಹಾಗೂ ದಾನ ಮಾಡಿದರೆ ಹೆಚ್ಚಿನ ಪ್ರತಿಫಲ ಉಂಟಾಗುವುದೆಂಬ ಪ್ರತೀತಿಯಿದೆ. ನಮ್ಮ ಹೆಣ್ಣುಮಕ್ಕಳು ಒಡವೆಯನ್ನು ಖರೀದಿಸಲು ತುಂಬಾ ಇಷ್ಟ ಪಡುತ್ತಾರೆ. ಏಕೆಂದರೆ ಅದು ಕೂಡ ಅಪತ್ಕಾಲಕ್ಕೆ ನೆರವಾಗುವ ಆಸ್ತಿಯಲ್ಲವೇ.!? ಹಾಗೇ ಹೆಣ್ಣಿನ ಸೌಂದರ್ಯದ ಮತ್ತು ಹೆಮ್ಮೆಯ ಪ್ರತೀಕ ಈ ಒಡವೆ. ಅಲ್ಲದೇ ಈ ನಂಬಿಕೆ ತಲಾಂತರಗಳಿಂದ ಇಷ್ಟು ಗಟ್ಟಿಯಾಗಿ ಜನರು ನಂಬಿಕೊಂಡು ಬಂದಿದ್ದಾರೆಂದರೆ ಏನು ಅರ್ಥ? ಆ ದಿನದ ಮಹಿಮೆಯಿಂದ ನಂಬಿದವರ ಜೀವನದಲ್ಲಿ ಒಳ್ಳೆಯದು ಆಗಿದೆ ಎಂದೇ ಅರ್ಥ, ಅಲ್ಲವೇ? ನಮ್ಮ ಭಾರತೀಯ ಪಂಚಾಂಗ ಸುಮ್ಮನೆ ಬಂದಿಲ್ಲ ಅದು ಒಂದು ವಿಜ್ಞಾನ ಎನ್ನುವುದಕ್ಕೆ ಇದು ಕೂಡ ಒಂದು ಸಾಕ್ಷಿ. ಈ ರೀತಿಯಾದ ವೈಜ್ಞಾನಿಕ ಸಂತ್ಯಾಂಶವುಳ್ಳ ಅಕ್ಷಯ ತೃತೀಯ ನಾಡಿನ ಜನತೆಗೆ ಮಾತ್ರವಲ್ಲದೆ ಇಡೀ ವಿಶ್ವಕ್ಕೆ ಉಜ್ವಲತೆಯನ್ನು, ಎಲ್ಲ ಜೀವಿಗಳಿಗೂ ಹಚ್ಚ ಹಸುರಾದ ಸುಖ ಶಾಂತಿಯನ್ನು ನೀಡುವಂತಹ ಪುಣ್ಯಮಯವಾದ ಮಹಾನ್ ಪರ್ವವಾಗಲಿ ಎಂದು ಪ್ರಾರ್ಥಿಸುತ್ತಾ ಈ ರೀತಿಯಾಗಿ ನಾವೇಲ್ಲರೂ
ಅಕ್ಷಯ ತೃತೀಯ ದಿನದ ನಿಜ ಅರ್ಥವನ್ನು ತಿಳಿದು ಆಚರಿಸೋಣ ಸಂಭ್ರಮಿಸೋಣ.
ಲೋಕಾಃ ಸಮಸ್ತಾಃ ಸುಖಿನೋ ಭವಂತು.

Continue Reading

ಧಾರ್ಮಿಕ

Basava Jayanti 2024: ಬದುಕಿನ ಪಾಠ ಕಲಿಸುವ ಬಸವಣ್ಣನ 10 ವಚನಗಳಿವು

12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ಜನ್ಮ ದಿನದ (Basavanna jayanti) ಈ ಶುಭ ಸಂದರ್ಭದಲ್ಲಿ ಅವರ ಕೆಲವು ವಚನಗಳ ಸಾಲುಗಳ ಸಾರವನ್ನು ತಿಳಿದುಕೊಳ್ಳುವ, ಈ ಮೂಲಕ ಎಲ್ಲರ ಬದುಕಿನಲ್ಲೂ ಅಳವಡಿಸಿಕೊಳ್ಳಲು ಪ್ರೇರಣೆಯಾಗಲಿ ಎಂಬ ಉದ್ದೇಶ ಇಲ್ಲಿದೆ. ಬಸವಣ್ಣ ಅವರ ಹತ್ತು ವಚನಗಳು ಮತ್ತು ಅವುಗಳ ಸಾರ ಇಲ್ಲಿದೆ.

VISTARANEWS.COM


on

By

Basavanna jayanti
Koo

12ನೇ ಶತಮಾನದಲ್ಲಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದ ಸಮಾಜ ಸುಧಾರಕರೂ ಆಗಿದ್ದ ಬಸವಣ್ಣ (Basavanna jayanti) ಸಾವಿರಾರು ವಚನಗಳ (vachana) ಸೃಷ್ಟಿಕಾರರು. ಶಿವ ಕೇಂದ್ರೀಕೃತ ಭಕ್ತಿ ಚಳವಳಿ ನಡೆಸಿದ ಇವರು ತಮ್ಮ ವಚನಗಳ ಮೂಲಕ ಸಾಮಾಜಿಕ ಅರಿವನ್ನು ಮೂಡಿಸಿದರು.

1130ರಲ್ಲಿ ಕರ್ನಾಟಕದ ಈಗಿನ ಬಿಜಾಪುರ (bijapur) ಜಿಲ್ಲೆಯ ಬಸವನ ಬಾಗೇವಾಡಿ (basavana bagewadi) ಗ್ರಾಮದಲ್ಲಿ ಮಾದರಸ ಮತ್ತು ಮಾದಲಾಂಬಿಕೆ ದಂಪತಿಯ ಮಗನಾಗಿ ಜನಿಸಿದ ಬಸವಣ್ಣ ಶಿವನ ಭಕ್ತಿ ಮತ್ತು ಸಾಮಾಜಿಕ ಸಮಾನತೆಗೆ ಒತ್ತು ನೀಡಿರುವ ವಿಶಿಷ್ಟ ತತ್ತ್ವವನ್ನು ಸಾರಿದರು. ಇವರ ಹತ್ತು ಪ್ರಮುಖ ವಚನಗಳ ಸಾಲು ಮತ್ತು ಅದರ ಸಾರ ಇಲ್ಲಿದೆ.

ವಚನ 1: ತನಗೆ ಮುನಿವರಿಗೆ ತಾ ಮುನಿಯಲೇಕಯ್ಯಾ

ತನಗಾದ ಆಗೇನು ಅವರಿಗಾದ ಚೇಗೆಯೇನು

ತನುವಿನ ಕೋಪ ತನ್ನ ಹಿರಿತನದ ಕೇಡು

ಮನದ ಕೋಪ ತನ್ನ ಅರಿವಿನ ಕೇಡು,

ಮನೆಯೊಳಗಿನ ಕಿಚ್ಚು ಮನೆಯ ಸುಟ್ಟಲ್ಲದೆ

ನೆರೆಮನೆಯ ಸುಡದು ಕೂಡಲ ಸಂಗಮ ದೇವಾ.
ಸಾರ: ನಮ್ಮೊಂದಿಗೆ ಯಾರಾದರೂ ಮುನಿಸಿಕೊಂಡರೆ ನಾವೇಕೆ ಅವರೊಂದಿಗೆ ಮುನಿಸಿಕೊಳ್ಳಬೇಕು? ಇದರಿಂದ ಅವರಿಗೂ, ನಮಗೂ ಯಾವುದೇ ಲಾಭವಿಲ್ಲ. ಮನದ ಕೋಪ ನಮ್ಮ ವಿವೇಕವನ್ನು ಹಾಳು ಮಾಡುವುದು ಎಂಬುದು ಇದರ ಸಾರ.

ವಚನ 2. ಹಬ್ಬಕ್ಕೆ ತಂದ ಹರಕೆಯ ಕುರಿ

ತೋರಣಕ್ಕೆ ತಂದ ತಳಿರ ಮೇಯಿತ್ತು

ಕುಂಡ ಹರೆಂಬುದ ನರಿಯದ ಬೆಂದ ಒಡಲ

ಹೊರೆವುತ್ತಲದೆ ಅದಂದೆ ಹುಟ್ಟಿತ್ತು ಅದಂದೆ ಹೊಂದಿತ್ತು

ಕೊಂದವರುಳಿವರೇ ಕೊಡಲಸಂಗಮ ದೇವಾ.
ಸಾರ: ತಾನು ಶಾಶ್ವತ ಎಂಬ ಭ್ರಮೆಯಲ್ಲಿ ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಅಮಾಯಕ ಜೀವವನ್ನು ಬಲಿ ಕೊಡುತ್ತಾನೆ. ಅದನ್ನು ಖಂಡಿಸಿರುವ ಅವರು ಹಿಂಸೆಯನ್ನು ವಿರೋಧಿಸಿ ಎಲ್ಲರೂ ಸಜ್ಜನರಾಗಬೇಕು.

ವಚನ 3: ಸಾರ ಸಜ್ಜನರ ಸಂಗ ಲೇಸು ಕಣಯ್ಯಾ

ದೂರ ದುರ್ಜನರ ಸಂಗವದು ಭಂಗವಯ್ಯಾ

ಸಂಘವೆರಡುಂಟು ಒಂದು ಹಿಡಿ ಒಂದು ಬಿಡು

ಮಂಗಳಮೂರ್ತಿ ನಮ್ಮ ಕೂಡಲ ಸಂಗನ ಶರಣರ
ಸಾರ: ಒಳ್ಳೆಯವರ ಸಹವಾಸ ಮಾಡಿದರೆ ಒಳ್ಳೆಯದು, ಕೆಟ್ಟವರ ಸಹವಾಸದಿಂದ ಅವಮಾನ ಸಿಗುತ್ತದೆ. ಈ ಎರಡರಲ್ಲಿ ನಮಗೇನು ಬೇಕು ಎಂಬುದನ್ನು ನಾವೇ ಆಯ್ಕೆ ಮಾಡಿಕೊಳ್ಳಬೇಕು.

ವಚನ 4. ಆಚಾರವರಿಯಿರಿ, ವಿಚಾರವರಿಯಿರಿ

ಜಂಗಮ ಸ್ಥಳ, ಲಿಂಗ ಕಾಣಿರಯ್ಯಾ,

ಜಾತಿ, ಭೇದವಿಲ್ಲ, ಸೂತಕವಿಲ್ಲ, ಅಜಾತಂಗೆ ಕುಲವಿಲ್ಲ,

ನುಡಿದಂತೆ ನಡೆಯದಿದ್ದರೆ ಕೂಡಲ ಸಂಗಮ ಮೆಚ್ಚ ಕಾಣಿರಯ್ಯಾ
ಸಾರ: ಒಳ್ಳೆಯ ಸಂಪ್ರದಾಯವನ್ನು ಅರಿತು ವಿವೇಕವನ್ನು ತಿಳಿಯಬೇಕು. ದೇವರಿಗೆ ಜಾತಿ ಭೇದ ಮೈಲಿಗೆಯ ಭೇದವಿಲ್ಲ. ಜನನ ಮರಣವಿಲ್ಲದ ದೇವರಿಗೆ ಕುಲವಿಲ್ಲ. ಮಾತನಾಡಿದಂತೆ ನಡೆಯದಿದ್ದರೆ ಅವನು ಮೆಚ್ಚುವುದಿಲ್ಲ ಎನ್ನುತ್ತಾರೆ ಬಸವಣ್ಣ .

ವಚನ 5: ಆಯುಷ್ಯ ತೀರಿದಲ್ಲದೆ ಮರಣವಿಲ್ಲ

ಭಾಷೆ ತಪ್ಪಿದಲ್ಲದೆ ದಾರಿದ್ರ್ಯವಿಲ್ಲ

ಅಂಜಲದೇಕೋ ಲೋಕ ವಿಗರ್ಭಣೆಗೆ

ಅಂಜಲದೇಕೋ ಕೊಡಲ ಸಂಗಮ ನಿಮ್ಮಾಳಾಗಿ
ಸಾರ: ಆಯುಷ್ಯ ಮುಗಿಯದೆ ಮರಣ ಬರುವುದಿಲ್ಲ, ಮಾತು ತಪ್ಪಿದರೆ ಮಾತ್ರ ದಾರಿದ್ರ್ಯ ಉಂಟಾಗುತ್ತದೆ. ದೇವರ ಸೇವಕನಾಗಿ ಲೋಕದ ಭಯೋತ್ಪಾದಕತೆಗೆ ನಾನೇಕೆ ಇಳಿಯಲಿ ಎಂಬ ಅರ್ಥವಿದೆ.


ವಚನ 6: ನೆಲಗೊಂದೆ ಹೊಲಗೇರಿ ಶಿವಾಲಯಕ್ಕೆ,

ಜಲವೊಂದೆ ಶೌಚಾಚಮನಕ್ಕೆ

ಕುಲವೊಂದೆ ತನ್ನತಾನರಿದವಂಗೆ

ಫಲವೊಂದೆ ಷಡುದರುಶನ ಮುಕ್ತಿಗೆ

ನಿಲವೊಂದೆ ನಿಮ್ಮನರಿದವಂಗೆ ಕೂಡಲಸಂಗಮ ದೇವಾ
ಸಾರ: ದೇವಸ್ಥಾನ ಮತ್ತು ಹೊಲಗೇರಿಯವರಿಗೆ ಭೂಮಿ ಒಂದೇ ಆಗಿದೆ. ಸ್ನಾನ ಮತ್ತು ತಪಸ್ಸು ಮಾಡಲು ನೀರು ಕೂಡ ಒಂದೇ ಆಗಿದೆ. ವಿಮೋಚನೆಯು ಎಲ್ಲಾ ಆಲೋಚನೆಗಳ ಅಂತಿಮ ಗುರಿಯಾಗಿದೆ. ಪ್ರಭುವನ್ನು ತಿಳಿದವನಿಗೆ ವಾಸಸ್ಥಾನ ಎಲ್ಲಿದ್ದರೂ ಒಂದೇ ಆಗಿರುತ್ತದೆ.

ವಚನ 7: ನುಡಿದರೆ ಮುತ್ತಿನ ಹಾರದಂತಿರಬೇಕು

ನುಡಿದರೆ ಮಾಣಿಕ್ಯದ ದೀಪ್ತಿಯಂತಿರಬೇಕು

ನುಡಿದರೆ ಸ್ಫಟಿಕದ ಶಲಾಕೆಯಂತಿರಬೇಕು

ನುಡಿದರೆ ಲಿಂಗ ಮೆಚ್ಚಿ ಹೌದೌದು ಎನಬೇಕು

ನುಡಿಯೊಳಗಾಗಿ ನಡೆಯದಿದ್ದರೆ ಕೂಡಲ ಸಂಗಮ ಮನೆಂತೊಲಿವನಯ್ಯಾ ?
ಸಾರ: ನಾವಾಡುವ ಮಾತು ಸರಳ ಮತ್ತು ಸುಲಲಿತವಾಗಿರಬೇಕು. ಆಡಿದ ಮಾತಿನಂತೆ ನಡೆಯದಿದ್ದರೆ ದೇವರು ಮೆಚ್ಚುವುದಿಲ್ಲ ಎನ್ನುತ್ತಾರೆ ಬಸವಣ್ಣ.

ವಚನ 8: ಮಾರಿ ಮಸಣಿ ಎಂಬವು ಬೇರಿಲ್ಲ ಕಾಣಿರೋ

ಮಾರಿ ಎಂಬುದೇನು ಕಂಗಳು ತಪ್ಪಿ ನೋಡಿದರೆ

ಮಾರಿ ನಾಲಿಗೆ ತಪ್ಪಿ ನುಡಿದರೆ

ಮಾರಿ ನಮ್ಮ ಕೂಡಲ ಸಂಗಮ ದೇವರ ನೆನಹ

ಮರೆದಡೆ ಮಾರಿ ಕಾಣಿರೋ
ಸಾರ: ಮೃತ್ಯು, ರುದ್ರ ದೇವರೆಂಬುವವರು ಬೇರೆ ಯಾರೂ ಇಲ್ಲ. ಕೆಟ್ಟ ದೃಶ್ಯ, ಮಾತು, ದುರಾಚಾರ ಮಾಡಿದರೆ ಇದ್ದರೂ ಸತ್ತಂತೆಯೇ ಸರಿ.

ವಚನ 9: ಬೇವಿನ ಬೀಜವ ಬಿತ್ತಿ ಬೆಲ್ಲದ ಕಟ್ಟಿಯ ಕಟ್ಟಿ

ಆಕಳ ಹಾಲನೆರೆದು ಜೇನು ತುಪ್ಪವ ತೋಯ್ದೆಡೆ

ಸಿಹಿಯಾಗಬಲ್ಲುದೆ ಕಹಿಯಹುದಲ್ಲದೆ

ಶಿವಭಕ್ತರಲ್ಲದವರ ಕೊಡೆ ನುಡಿಯಲಾಗದು

ಕೂಡಲ ಸಂಗಮ ದೇವಾ
ಸಾರ: ಬೇವಿನ ಬೀಜವನ್ನು ಹಾಕಿ ಅದರಲ್ಲಿ ಸಿಹಿಯಾದ ಹಣ್ಣು ಸಿಗಬೇಕು ಎಂದು ಬಯಸಲು ಸಾಧ್ಯವಿದೆಯೇ ಎಂಬುದನ್ನು ಬಸವಣ್ಣನವರು ಇಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: Vijayanagara News: ಅಕ್ಷತ್ತದಿಗಿ ಅಮವಾಸ್ಯೆ; ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿ ದರ್ಶನ ಪಡೆದ ಭಕ್ತರು

ವಚನ 10: ವೇದವ ಓದಿದರೇನು ಶಾಸ್ತ್ರವ ಕೇಳಿದಡೇನಯ್ಯಾ

ಜಪವ ಮಾಡಿದಡೇನು ತಪವ ಮಾಡಿದಡೇನಯ್ಯಾ

ಏನು ಮಾಡಿದಡೇನು ನಮ್ಮ ಕೂಡಲ ಸಂಗಯ್ಯನ ಮನ ಮುಟ್ಟದನ್ನಕ್ಕ
ಸಾರ: ವೇದ ಓದಿ, ಶಾಸ್ತ್ರಗಳನ್ನು ಮಾಡಿ ದೇವರನ್ನೇ ಅದು ಮುಟ್ಟದಿದ್ದರೆ ಎಲ್ಲವೂ ವ್ಯರ್ಥ ಎಂಬುದನ್ನು ಹೇಳಿರುವ ಬಸವಣ್ಣ ನಮ್ಮ ಭಕ್ತಿ ಹೇಗಿರಬೇಕು ಎನ್ನುವುದನ್ನು ಹೇಳುತ್ತಾರೆ.

Continue Reading

ಪ್ರಮುಖ ಸುದ್ದಿ

IPL 2024 : ಆರ್​ಸಿಬಿಗೆ ಐದನೇ ವಿಜಯ, ಪಂಜಾಬ್​ ವಿರುದ್ಧ 60 ರನ್ ಭರ್ಜರಿ ಗೆಲುವು

IPL 2024: ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಪಂಜಾಬ್ ತಂಡ ಆರ್​ಸಿಬಿಯನ್ನು ಬ್ಯಾಟ್ ಮಾಡಲು ಆಹ್ವಾನಿಸಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ರೆಡ್ ಆರ್ಮಿ ನಿಗದಿತ 20 ಓವರ್​​ಗಳಲ್ಲಿ 7 ವಿಕೆಟ್​ಗೆ 241 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಪಂಜಾಬ್ ಬಳಗ 17 ಓವರ್​ಗಳಲ್ಲಿ 181 ರನ್​ಗಳಿಗೆ ಆಲ್​ಔಟ್ ಆಯಿತು.

VISTARANEWS.COM


on

IPL 2024
Koo

ಧರ್ಮಶಾಲಾ: ವಿರಾಟ್​ ಕೊಹ್ಲಿಯ ಸ್ಫೋಟಕ ಬ್ಯಾಟಿಂಗ್ ಹಾಗೂ ಬೌಲರ್​ಗಳ ಸಂಘಟಿತ ಹೋರಾಟದ ಬಲದಿಂದ ಮಿಂಚಿದ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಐಪಿಎಲ್​ 17ನೇ (IPL 2024 ) ಆವೃತ್ತಿಯ 58ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 60 ರನ್​ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದು ಹಾಲಿ ಆವೃತ್ತಿಯಲ್ಲಿ ಆರ್​ಸಿಬಿ ತಂಡಕ್ಕೆ ಐದನೇ ಗೆಲುವಾಗಿದೆ. ಇದರೊಂದಿಗೆ ಒಟ್ಟಾರೆ 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿ ಉಳಿದಿಗೆ. ಗೆಲುವಿನ ಹೊರತಾಗಿಯೂ ಆರ್​ಸಿಬಿ ತಂಡದ ಸ್ಥಾನ ಪಲ್ಲಟವೇನೂ ಆಗಿಲ್ಲ. ಇದೇ ವೇಳೆ 8ನೇ ಸೋಲಿಗೆ ಗುರಿಯಾದ ಪಂಜಾಬ್ ಕಿಂಗ್ಸ್​ ತಂಡ 9ನೇ ಸ್ಥಾನಕ್ಕೆ ಜಾರಿದೆ.

ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಪಂಜಾಬ್ ತಂಡ ಆರ್​ಸಿಬಿಯನ್ನು ಬ್ಯಾಟ್ ಮಾಡಲು ಆಹ್ವಾನಿಸಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ರೆಡ್ ಆರ್ಮಿ ನಿಗದಿತ 20 ಓವರ್​​ಗಳಲ್ಲಿ 7 ವಿಕೆಟ್​ಗೆ 241 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಪಂಜಾಬ್ ಬಳಗ 17 ಓವರ್​ಗಳಲ್ಲಿ 181 ರನ್​ಗಳಿಗೆ ಆಲ್​ಔಟ್ ಆಯಿತು.

ಕೊಹ್ಲಿಯ ದಾಖಲೆಯ ಪ್ರದರ್ಶನ

ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಪರ ಫಾಫ್​ ಡು ಪ್ಲೆಸಿಸ್​ ಮತ್ತೊಂದು ಬಾರಿ ಕಳಪೆ ಪ್ರದರ್ಶನ ನೀಡಿದರು. 9 ರನ್​ಗೆ ಅವರು ಔಟಾದರು. ಹೀಗಾಗಿ 19 ರನ್​ಗೆ ಒಂದು ವಿಕೆಟ್​ ಕಳೆದುಕೊಂಡ ಆರ್​ಸಿಬಿಗೆ ಸಂಕಷ್ಟ ಶುರುವಾಯಿತು. ಬಳಿಕ ಬಂದ ವಿಲ್​ ಜ್ಯಾಕ್ಸ್​ ಕೂಡ 12 ರನ್​ಗೆ ಸೀಮಿತಗೊಂಡರು. ಆದರೆ, ಮತ್ತೊಂದು ಬದಿಯಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ ಇನಿಂಗ್ಸ್ ಕಟ್ಟಲು ಆರಂಭಿಸಿದರು. ನಾಲ್ಕನೇ ಕ್ರಮಾಂಕದಲ್ಲಿ ಇವರಿಗೆ ಜತೆಯಾದ ರಜತ್​ ಪಾಟೀದರ್ ಮತ್ತೊಂದು ವಿಸ್ಫೋಟಕ ಆಟ ಆಡಿದರು. ಅವರು 23 ಎಸೆತಕ್ಕೆ 55 ರನ್ ಬಾರಿಸಿದ್ದ ಕಾರಣ ಆರ್​ಸಿಬಿಯ ರನ್​ ಗಳಿಕೆ ಏರುಗತಿಯಲ್ಲಿ ಸಾಗಿತು.

ಇದನ್ನೂ ಓದಿ: T20 World Cup : ವಿಶ್ವ ಕಪ್​ಗೆ ತಂಡ ಪ್ರಕಟಿಸಿದ ಶ್ರೀಲಂಕಾ, ಸಿಎಸ್​​ಕೆ ಆಟಗಾರನಿಗೂ ಚಾನ್ಸ್​​

ವಿರಾಟ್​ ಕೊಹ್ಲಿ ಜತೆ ಮತ್ತೊಂದು ಉತ್ತಮ ಜತೆಯಾಟ ನೀಡಿದ ವಿಲ್ ಜ್ಯಾಕ್ಸ್​ 46 ರನ್​ ಬಾರಿಸಿದರು. ಕೊಹ್ಲಿ 6 ಫೋರ್ ಹಾಗೂ 4 ಸಿಕ್ಸರ್ ಸಮೇತ ಭರ್ಜರಿ ಆಟವಾಡಿ ಶತಕದ ಹಾದಿಯಲ್ಲಿದ್ದರು. ಆದರೆ, ಕೊನೇ ಹಂತದಲ್ಲಿ ರನ್ ಬಾಚುವ ಒತ್ತಡಕ್ಕೆ ಬಿದ್ದ ಅವರು 8 ರನ್​ಗಳಿಂದ ಶತಕ ವಂಚಿತರಾದರು.

ಪಂಜಾಬ್ ಬ್ಯಾಟಿಂಗ್ ವೈಫಲ್ಯ

ದೊಡ್ಡ ಗುರಿಯನ್ನು ಬೆನ್ನಟ್ಟಲು ಹೊರಟ ಪಂಜಾಬ್ ಹೀನಾಯ ಪ್ರದರ್ಶನ ನೀಡಿತು. ಪ್ರಭ್​ ಸಿಮ್ರಾನ್ ಸಿಂಗ್ 6 ರನ್​ಗೆ ಜಾಗ ಖಾಲಿ ಮಾಡಿದರು. ಬೈರ್​ಸ್ಟೋವ್ 27 ರನ್​ ಬಾರಿಸಿ ಔಟಾದರು. ಆದರೆ, ಮೂರನೇ ಕ್ರಮಾಂಕದಲ್ಲಿ ಆಡಲು ಇಳಿದ ರೀಲಿ ರೊಸ್ಸೊ 27 ಎಸೆತಕ್ಕೆ 61 ರನ್ ಬಾರಿಸಿ ಗೆಲುವಿನ ಹುಮ್ಮಸ್ಸು ತಂದರು. ಆದರೆ, ತಲೆಗೆ ಚೆಂಡು ಬಡಿಸಿಕೊಂಡ ಮರು ಎಸೆತದಲ್ಲಿಯೇ ಸ್ಪಿನ್ನರ್​ ಕರಣ್ ಶರ್ಮಾ ಬೌಲಿಂಗ್​ನಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದರು. ಅಲ್ಲಿಂ ದ ಪಂಜಾಬ್ ಇನಿಂಗ್ಸ್ ಕುಸಿಯಿತು. ನಡುವೆ ಶಶಾಂಕ್​ ಶರ್ಮಾ 37 ರನ್ ಬಾರಿಸಿದರು. ಆದರೆ, ಕೊಹ್ಲಿ ಮಾಡಿದ ಅದ್ಭುತ ರನ್​ಔಟ್​ಗೆ ಅವರು ಬಲಿಯಾದರು. ಸ್ಯಾಮ್​ ಕರ್ರನ್​ 22 ರನ್​ ಕೊಡುಗೆ ಕೊಟ್ಟರು.

ಆರ್​ಸಿಬಿ ಪರ ಮೊಹಮ್ಮಸ್ ಸಿರಾಜ್​ 3 ವಿಕೆಟ್​, ಸ್ವಪ್ನಿಲ್ ಸಿಂಗ್, ಲಾಕಿ ಫರ್ಗ್ಯೂಸನ್​ ಹಾಗೂ ಕರಣ್ ಶರ್ಮಾ ತಲಾ 1 ವಿಕೆಟ್ ಉರುಳಿಸಿದರು.

Continue Reading

ಪ್ರಮುಖ ಸುದ್ದಿ

Padma Awards 2024 : ವೈಜಯಂತಿಮಾಲಾ, ಚಿರಂಜೀವಿ ಸೇರಿದಂತೆ ಹಲವು ಗಣ್ಯರಿಗೆ ಪದ್ಮ ಪ್ರಶಸ್ತಿ ಪ್ರದಾನ

Padma Awards 2024: 90 ವರ್ಷದ ಬಾಲಿ ಮತ್ತು ಚಿರಂಜೀವಿ ಅವರಿಗೆ ಪದ್ಮವಿಭೂಷಣ, ಬೀವಿ, ಕಾಮಾ, ರಾಜಗೋಪಾಲ್, ವಿಜಯಕಾಂತ್, ರಿಂಪೋಚೆ ಮತ್ತು ವ್ಯಾಸ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಲಾಯಿತು. ಬೀವಿ, ವಿಜಯಕಾಂತ್ ಮತ್ತು ರಿಂಪೋಚೆ ಅವರ ಕುಟುಂಬ ಸದಸ್ಯರು ಪ್ರಶಸ್ತಿಗಳನ್ನು ಸ್ವೀಕರಿಸಿದರು.

VISTARANEWS.COM


on

Padma Awards 2024
Koo

ಬೆಂಗಳೂರು: ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ತೆಲುಗು ತಾರೆ ಕೊನಿಡೆಲಾ ಚಿರಂಜೀವಿ, ಸುಪ್ರೀಂ ಕೋರ್ಟ್ ನ ಮೊದಲ ಮಹಿಳಾ ನ್ಯಾಯಾಧೀಶೆ ದಿವಂಗತ ಎಂ ಫಾತಿಮಾ ಬೀವಿ ಮತ್ತು ‘ಬಾಂಬೆ ಸಮಾಚಾರ್’ ಮಾಲೀಕ ಹಾರ್ಮುಸ್ಜಿ ಎನ್ ಕಾಮಾ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ಪದ್ಮ ಪ್ರಶಸ್ತಿಗಳನ್ನು (Padma Awards 2024) ಪ್ರದಾನ ಮಾಡಿದರು. ಕನ್ನಡಿಗ ಶ್ರೀಧರ್ ಕೃಷ್ಣ ಮೂರ್ತಿ ಅವರಿಗೂ ಇದೇ ವೇಳೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಬಿಜೆಪಿ ನಾಯಕ ಒ.ರಾಜಗೋಪಾಲ್, ಲಡಾಕ್​ನ ಆಧ್ಯಾತ್ಮಿಕ ನಾಯಕ ತೊಗ್ಡಾನ್ ರಿಂಪೋಚೆ, ತಮಿಳು ನಟ ದಿವಂಗತ ಕ್ಯಾಪ್ಟನ್ ವಿಜಯಕಾಂತ್ (ಇಬ್ಬರೂ ಮರಣೋತ್ತರ), ಗುಜರಾತಿ ಪತ್ರಿಕೆ ‘ಜನ್ಮಭೂಮಿ’ ಸಮೂಹ ಸಂಪಾದಕ ಮತ್ತು ಸಿಇಒ ಕುಂದನ್ ವ್ಯಾಸ್ ಅವರಿಗೆ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

90 ವರ್ಷದ ಬಾಲಿ ಮತ್ತು ಚಿರಂಜೀವಿ ಅವರಿಗೆ ಪದ್ಮವಿಭೂಷಣ, ಬೀವಿ, ಕಾಮಾ, ರಾಜಗೋಪಾಲ್, ವಿಜಯಕಾಂತ್, ರಿಂಪೋಚೆ ಮತ್ತು ವ್ಯಾಸ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಲಾಯಿತು. ಬೀವಿ, ವಿಜಯಕಾಂತ್ ಮತ್ತು ರಿಂಪೋಚೆ ಅವರ ಕುಟುಂಬ ಸದಸ್ಯರು ಪ್ರಶಸ್ತಿಗಳನ್ನು ಸ್ವೀಕರಿಸಿದರು.

ಉಪರಾಷ್ಟ್ರಪತಿ ಜಗದೀಪ್ ಧನ್ಕರ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ದೇಶದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗಳನ್ನು ಪದ್ಮ ವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಎಂಬ ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ.

Continue Reading
Advertisement
Indian Sailors Released
ವಿದೇಶ3 mins ago

Indian Sailors Released: ಭಾರತಕ್ಕೆ ಭಾರೀ ರಾಜತಾಂತ್ರಿಕ ಗೆಲುವು; ಐವರು ಭಾರತೀಯ ನಾವಿಕರು ರಿಲೀಸ್‌

Sanjiv Goenka
ಪ್ರಮುಖ ಸುದ್ದಿ10 mins ago

Sanjiv Goenka: ರಾಹುಲ್‌ಗೆ ಬೈದ ಗೋಯೆಂಕಾ; ಈ ಹಿಂದೆ ಧೋನಿಯನ್ನೇ ಕ್ಯಾಪ್ಟನ್ಸಿಯಿಂದ ತೆಗೆದಿದ್ದರು!

Solar Power
ದೇಶ13 mins ago

Solar Power: ಜಾಗತಿಕವಾಗಿ ಮತ್ತೊಮ್ಮೆ ಬೆಳಗಿದ ಭಾರತ; ಸೌರ ವಿದ್ಯುತ್‌ ಉತ್ಪಾದನೆಯಲ್ಲಿ ಜಪಾನ್‌ನನ್ನೂ ಮೀರಿದ ಸಾಧನೆ

sslc result 2024 vaishnavi self harming
ಕ್ರೈಂ53 mins ago

SSLC Result 2024: ಎಸ್‌ಎಸ್‌ಎಲ್‌ಸಿ ಫೇಲ್‌, ಸರಣಿ ಸಾವಿಗೆ ಮತ್ತೊಂದು ಸೇರ್ಪಡೆ

Job News
ಉದ್ಯೋಗ1 hour ago

Job News: ಗುಡ್‌ನ್ಯೂಸ್‌; ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದಿಂದ ಶೀಘ್ರ 12,000 ಉದ್ಯೋಗಿಗಳ ನೇಮಕ

Char Dham Yatra
ದೇಶ1 hour ago

Char Dham Yatra: ಇಂದಿನಿಂದ ಪವಿತ್ರ ಚಾರ್‌ಧಾಮ್‌ ಯಾತ್ರೆ ಆರಂಭ

hd revanna jailed 2
ಕ್ರೈಂ1 hour ago

HD Revanna Jailed: ಇನ್ನು ಮೂರು ದಿನ ಎಚ್‌ಡಿ ರೇವಣ್ಣ ಭೇಟಿ ಯಾರಿಗೂ ಇಲ್ಲ

Aravind Kejriwal
ದೇಶ2 hours ago

Arvind Kejriwal: ಕೇಜ್ರಿವಾಲ್‌ ಜಾಮೀನು ಅರ್ಜಿ ಇಂದು ವಿಚಾರಣೆ; ದಿಲ್ಲಿ ಸಿಎಂಗೆ ಜೈಲಾ…? ಬೇಲಾ?

drowned in tank jindal bellary
ಕ್ರೈಂ2 hours ago

Drowned in Tank: ಜಿಂದಾಲ್‌ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳ ಸಾವು

IPL 2024
ಐಪಿಎಲ್ 20242 hours ago

IPL 2024: ಆರ್‌ಸಿಬಿಯ ಪ್ಲೇ ಆಫ್ ಕನಸು ಜೀವಂತ; ಸೋಲಿನೊಂದಿಗೆ ರೇಸ್‌ನಿಂದ ಹೊರಬಿದ್ದ ಪಂಜಾಬ್‌: ಹೀಗಿದೆ ಹೊಸ ಅಂಕಪಟ್ಟಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ13 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ14 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ15 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ21 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ21 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ22 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು22 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ22 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು24 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

ಟ್ರೆಂಡಿಂಗ್‌