BJP Executive: ಪ್ರಧಾನಿ ಸ್ವಾಗತಿಸಲು ಬಾರದ ಕೆಸಿಆರ್‌: ಎಷ್ಟು ಕಾಲ ಅಡಗ್ತಾರೆ ನೋಡೋಣ ಎಂದ ಬಿಜೆಪಿ - Vistara News

ದೇಶ

BJP Executive: ಪ್ರಧಾನಿ ಸ್ವಾಗತಿಸಲು ಬಾರದ ಕೆಸಿಆರ್‌: ಎಷ್ಟು ಕಾಲ ಅಡಗ್ತಾರೆ ನೋಡೋಣ ಎಂದ ಬಿಜೆಪಿ

ಪ್ರಧಾನಿ ನರೇಂದ್ರ ಮೋದಿ ಅವರು ತೆಲಂಗಾಣಕ್ಕೆ ಭೇಟಿ ನೀಡಿದಾಗ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಅವರು ಪದೇಪದೆ ತಪ್ಪಿಸಿಕೊಳ್ಳುತ್ತಿರುವುದು ಬಿಜೆಪಿಯ ಆಕ್ರೋಶಕ್ಕೆ ಕಾರಣವಾಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್‌: ಇಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗವಹಿಸಲು ಆಗಮಿಸಿದ ಪ್ರಧಾನಿ ನರೇಂದ್ರ ಅವರನ್ನು ಸ್ವಾಗತಿಸಲು ಬಾರದೆ ಶಿಷ್ಟಾಚಾರ ಮುರಿದ ತೆಲಂಗಾಣ ಮುಖ್ಯಮಂತ್ರಿ, ಟಿಆರ್‌ಎಸ್‌ ನಾಯಕ ಕೆ.ಚಂದ್ರಶೇಖರ್‌ ರಾವ್‌ ಅವರ ಮೇಲೆ ಬಿಜೆಪಿ ಗರಂ ಆಗಿದೆ. ಬಿಜೆಪಿಯ ಹಲವು ನಾಯಕರು ಕೆ.ಸಿ.ಆರ್‌. ವಿರುದ್ಧ ಆಕ್ರೋಶದ ಪ್ರತಿಕ್ರಿಯೆ ನೀಡಿದ್ದು, ಅವರು ಎಷ್ಟು ಕಾಲ ಅಡಗುತ್ತಾರೆ ಎಂದು ನೋಡೋಣ ಎಂದು ಸವಾಲು ಹಾಕಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ರಾಜ್ಯಕ್ಕೆ ಹೋದರೂ ಅಲ್ಲಿನ ಮುಖ್ಯಮಂತ್ರಿಗಳು ವಿಮಾನ ನಿಲ್ದಾಣಕ್ಕೆ ಆಗಮಿಸಿ ಸ್ವಾಗತಿಸುವುದು ಶಿಷ್ಟಾಚಾರ. ಆದರೆ, ತೆಲಂಗಾಣ ಸಿಎಂ ಚಂದ್ರಶೇಖರ್‌ ರಾವ್‌ ಪದೇಪದೆ ಈ ಶಿಷ್ಟಾಚಾರವನ್ನು ಉಲ್ಲಂಘಿಸಿದ್ದಾರೆ. ಅವರು ಪ್ರಧಾನಿ ಅವರನ್ನು ಎದುರ್ಗೊಳ್ಳುವಲ್ಲಿ ನಿರ್ಲಕ್ಷ್ಯ ವಹಿಸುತ್ತಿರುವುದು ಇದು ಮೂರನೇ ಬಾರಿ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು, ʻʻಸಹಕಾರ ಒಕ್ಕೂಟ ವ್ಯವಸ್ಥೆ ಎನ್ನುವುದು ನಮ್ಮ ಪ್ರಜಾಪ್ರಭುತ್ವದ ಅಡಿಗಲ್ಲು. ತೆಲಂಗಾಣ ಮುಖ್ಯಮಂತ್ರಿಗಳು ಮತ್ತೊಮ್ಮೆ ಉದ್ದೇಶಪೂರ್ವಕವಾಗಿ ಶಿಷ್ಟಾಚಾರವನ್ನು ಉಲ್ಲಂಘಿಸಿದ್ದಾರೆ. ಆ ಮೂಲಕ ಅವರು ಪ್ರಧಾನಿ ಮತ್ತು ಮುಖ್ಯಮಂತ್ರಿ ಹುದ್ದೆಗಳಿಗೇ ಅಪಮಾನ ಮಾಡಿದ್ದಾರೆ. ಕೆ.ಚಂದ್ರಶೇಖರ ರಾವ್‌ ಅವರು ಅಡಗಿಕೊಳ್ಳಬಹುದು. ಆದರೆ, ಅವರ ಭ್ರಷ್ಟ ರಾಜಕೀಯವನ್ನು ಹೆಚ್ಚು ಕಾಲ ಅಡಗಿಸಿಟ್ಟುಕೊಳ್ಳಲಾಗದುʼʼ ಎಂದು ಹೇಳಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಕೆ.ಸಿ.ಆರ್‌. ಸರಕಾರದ ಪರವಾಗಿ ಇದ್ದದ್ದು ಒಬ್ಬ ಮಂತ್ರಿ ಮಾತ್ರ. ರಾಜ್ಯಪಾಲರಾದ ತಮಿಳ್‌ ಸಾಯಿ ಸೌಂದರರಾಜನ್‌ ಅವರು ಆಗಮಿಸಿದ್ದರು.

ಶಿಷ್ಟಾಚಾರವನ್ನು ಮುರಿಯುವುದು ಸರಿಯಲ್ಲ. ನಾವು ಪ್ರಧಾನಿಯನ್ನು ಗೌರವಿಸಬೇಕು. ಅವರು ದೇಶದ ಪ್ರಧಾನಿ. ಬಿಜೆಪಿಗೆ ಮಾತ್ರ ಪ್ರಧಾನಿಯಲ್ಲ. ಕೆ.ಸಿ.ಆರ್‌.ಗೆ ಪ್ರಧಾನಿಯನ್ನು ಎದುರಿಸಲು ಹೆದರಿಕೆ ಎಂದು ಬಿಜೆಪಿ ಎಂಎಲ್‌ಸಿ ಆಗಿರುವ ಎನ್‌. ರಾಮಚಂದರ್‌ ಹೇಳಿದ್ದಾರೆ.

ಇದನ್ನೂ ಓದಿ| ಪ್ರಧಾನಿ ಸ್ವಾಗತಕ್ಕೆ ತೆಲಂಗಾಣ ಸಿಎಂ ಕೆಸಿಆರ್‌ ಹೋಗೋದಿಲ್ಲ; 6 ತಿಂಗಳಲ್ಲಿ 3ನೇ ಬಾರಿ ಶಿಷ್ಟಾಚಾರ ಉಲ್ಲಂಘನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Tshering Tobgay: ಮೋದಿ ನನ್ನ ಗುರು, ದೊಡ್ಡಣ್ಣ;‌ ಭೂತಾನ್‌ ಪ್ರಧಾನಿ ತ್ಶೆರಿಂಗ್‌ ತೋಬ್ಗೆ ಬಹುಪರಾಕ್!

Tshering Tobgay: ನರೇಂದ್ರ ಮೋದಿ ಅವರು ಕಳೆದ ಮಾರ್ಚ್‌ನಲ್ಲಿ ಭೂತಾನ್‌ಗೆ ಭೇಟಿ ನೀಡಿ, ಎರಡು ದಿನ ತಂಗಿದ್ದರು. “ನರೇಂದ್ರ ಮೋದಿ ಅವರು ಭೂತಾನ್‌ಗೆ ಆಗಮಿಸುವ ಗ್ಯಾರಂಟಿ ನೀಡಿದ್ದರು. ಈಗ ಆ ಗ್ಯಾರಂಟಿ ಸಾಕಾರಗೊಂಡಿದೆ” ಎಂಬುದಾಗಿ ಇದೇ ವೇಳೆ ತ್ಶೆರಿಂಗ್‌ ತೋಬ್ಗೆ ಹೇಳಿದ್ದರು. ಈಗ ಮೋದಿ ಪ್ರಮಾಣವಚನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಭಾರತಕ್ಕೆ ಬಂದಿರುವ ತ್ಶೆರಿಂಗ್‌ ತೋಬ್ಗೆ ಅವರು ನರೇಂದ್ರ ಮೋದಿ ಅವರನ್ನು ಹೊಗಳಿದ್ದಾರೆ.

VISTARANEWS.COM


on

Tshering Tobgay
Koo

ನವದೆಹಲಿ: ನರೇಂದ್ರ ಮೋದಿ (Narendra Modi) ಅವರು ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಭಾನುವಾರ (ಜೂನ್‌ 9) ಪ್ರಮಾಣವಚನ ಸ್ವೀಕರಿಸಿದ್ದಾರೆ. ದೇಶ-ವಿದೇಶಗಳ ಸಾವಿರಾರು ಗಣ್ಯರು ಪದಗ್ರಹಣ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದಾರೆ. ಇದರ ಬೆನ್ನಲ್ಲೇ, ಭೂತಾನ್‌ ಪ್ರಧಾನಿ ತ್ಶೆರಿಂಗ್‌ ತೋಬ್ಗೆ (Tshering Tobgay) ಅವರು ನರೇಂದ್ರ ಮೋದಿ ಅವರನ್ನು ಮುಕ್ತಕಂಠದಿಂದ ಹೊಗಳಿದ್ದಾರೆ. “ನರೇಂದ್ರ ಮೋದಿ ಅವರು ನನ್ನ ಗುರು, ಅವರು ನನ್ನ ದೊಡ್ಡಣ್ಣ ಇದ್ದಂತೆ” ಎಂದು ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಅವರು ಹೇಳಿದ್ದಾರೆ.

“ನರೇಂದ್ರ ಮೋದಿ ಅವರ ಮಾರ್ಗದರ್ಶನವು ನನಗೆ ಪ್ರಮುಖವಾಗಿದೆ. ಅವರು ನನಗೆ ಗುರು, ಸಹೋದರ ಇದ್ದಂತೆ. ಅವರ ಜತೆ ಉತ್ತಮ ಬಾಂಧವ್ಯ ಹೊಂದಿರುವುದು ನನಗೆ ಖುಷಿಯಾದ ವಿಚಾರ. ಅವರು ದೂರದೃಷ್ಟಿ ಹೊಂದಿರುವ ನಾಯಕರಾಗಿದ್ದು, ಆ ಯೋಜನೆಯನ್ನು ಅವರು ಸಾಕಾರಗೊಳಿಸುತ್ತಾರೆ. ಇದೆಲ್ಲದರ ಹೊರತಾಗಿ ಅವರು ನನಗೆ ದೊಡ್ಡಣ್ಣ ಇದ್ದಂತೆ. ನಾನು ಅವರನ್ನು ಬಡೆ ಭಾಯ್‌ ಎಂದೇ ಕರೆಯುತ್ತೇನೆ” ಎಂಬುದಾಗಿ ತ್ಶೆರಿಂಗ್‌ ತೋಬ್ಗೆ ಅವರು ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

ನರೇಂದ್ರ ಮೋದಿ ಅವರು ಕಳೆದ ಮಾರ್ಚ್‌ನಲ್ಲಿ ಭೂತಾನ್‌ಗೆ ಭೇಟಿ ನೀಡಿ, ಎರಡು ದಿನ ತಂಗಿದ್ದರು. “ನರೇಂದ್ರ ಮೋದಿ ಅವರು ಭೂತಾನ್‌ಗೆ ಆಗಮಿಸುವ ಗ್ಯಾರಂಟಿ ನೀಡಿದ್ದರು. ಈಗ ಆ ಗ್ಯಾರಂಟಿ ಸಾಕಾರಗೊಂಡಿದೆ” ಎಂಬುದಾಗಿ ಇದೇ ವೇಳೆ ತ್ಶೆರಿಂಗ್‌ ತೋಬ್ಗೆ ಹೇಳಿದ್ದರು. ಅಷ್ಟೇ ಅಲ್ಲ, ಮೋದಿ ಅವರು ಭೂತಾನ್‌ಗೆ ಭೇಟಿ ನೀಡಿದ್ದ ವೇಳೆ ಅಲ್ಲಿನ ಸರ್ಕಾರವು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ “ಡ್ರಕ್‌ ಗ್ಯಾಲ್ಪೋ” ನೀಡಿ ಗೌರವಿಸಿದ್ದರು. ಇದರೊಂದಿಗೆ ಭೂತಾನ್‌ ಅತ್ಯುನ್ನತ ನಾಗರಿಕ ಪ್ರಶಸ್ತಿ ಸ್ವೀಕರಿಸಿದ ವಿಶ್ವದ ನಾಲ್ಕನೇ ವಿದೇಶಿ ನಾಯಕ ಎಂಬ ಖ್ಯಾತಿಗೆ ಮೋದಿ ಭಾಜನರಾಗಿದ್ದರು.

ಭಾರತದ ಸಾವಿರಾರು ಗಣ್ಯರ ಜತೆಗೆ ನೆರೆ ರಾಷ್ಟ್ರಗಳ ನಾಯಕರು ಕೂಡ ಭಾಗವಹಿಸಿದ್ದರು. ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್ ಮುಯಿಝು, ಸೆಶೆಲ್ಸ್‌ನ ಉಪಾಧ್ಯಕ್ಷ ಅಹ್ಮದ್ ಅಫೀಫ್; ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ; ಮಾರಿಷಸ್‌ನ ಪ್ರಧಾನ ಮಂತ್ರಿ, ಪ್ರವಿಂದ್ ಕುಮಾರ್ ಜುಗ್ನೌತ್; ನೇಪಾಳದ ಪ್ರಧಾನಿ, ಪುಷ್ಪ ಕಮಲ್ ದಹಲ್ ‘ಪ್ರಚಂಡ’ ಮತ್ತು ಭೂತಾನ್ ಪ್ರಧಾನಿ, ತ್ಶೆರಿಂಗ್ ಟೊಬ್ಗೇ ಉಪಸ್ಥಿತರಿದ್ದರು.

ಇದನ್ನೂ ಓದಿ: Narendra Modi 3.0 : ಮೋದಿ ಅಧಿಕಾರಕ್ಕೆ ಬಾರದಿರಲಿ ಎಂದು ಕಾದು ಕೂತು, ಕೊನೆಗೂ ಅಭಿನಂದನೆ ತಿಳಿಸಿದ ಪಾಕಿಸ್ತಾನ!

Continue Reading

ಪ್ರಮುಖ ಸುದ್ದಿ

Narendra Modi 3.0 : ಮೋದಿ ಅಧಿಕಾರಕ್ಕೆ ಬಾರದಿರಲಿ ಎಂದು ಕಾದು ಕೂತು, ಕೊನೆಗೂ ಅಭಿನಂದನೆ ತಿಳಿಸಿದ ಪಾಕಿಸ್ತಾನ!

Narendra Modi 3.0 : ಚುನಾವಣೆಯಲ್ಲಿ ಅವರು ಮತ್ತೊಂದು ಬಾರಿ ಆರಿಸಿ ಬರದಿರಲಿ ಎಂದು ಆಶಿಸಿದ್ದರು. ಅದರೆ, ಪಾಕ್​ನ ಲೆಕ್ಕಾಚಾರ ಉಲ್ಟಾ ಆಗಿದೆ. ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇನ್ನೀಗ ಶುಭಾಶಯ ಹೇಳದೆ ವಿಧಿಯಿಲ್ಲ. ಹೀಗಾಗಿ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅಭಿನಂದನೆ ಸಲ್ಲಿಸಿದ್ದಾರೆ

VISTARANEWS.COM


on

Narendra Modi 3.20
Koo

ಬೆಂಗಳೂರು: ನರೇಂದ್ರ ಮೋದಿ ಮತ್ತೊಂದು ಅವಧಿಗೆ ಭಾರತದ ಪ್ರಧಾನಿಯಾಗುವುದು (Narendra Modi 3.0) ಪಾಕಿಸ್ತಾನದ ಸರ್ಕಾರಕ್ಕೆ ಇಷ್ಟವಿರಲಿಲ್ಲ. ಹಿಂದೂಸ್ತಾನದಲ್ಲೀಗ ಮೋದಿ ಯುಗ, ‘ಮೋದಿಯ ಭಾರತ’ ಎಂದು ಆಗಾಗ ಕರೆಯುತ್ತಿದ್ದರು. ಚುನಾವಣೆಯಲ್ಲಿ ಅವರು ಮತ್ತೊಂದು ಬಾರಿ ಆರಿಸಿ ಬರದಿರಲಿ ಎಂದು ಆಶಿಸಿದ್ದರು. ಅದರೆ, ಪಾಕ್​ನ ಲೆಕ್ಕಾಚಾರ ಉಲ್ಟಾ ಆಗಿದೆ. ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇನ್ನೀಗ ಶುಭಾಶಯ ಹೇಳದೆ ವಿಧಿಯಿಲ್ಲ. ಹೀಗಾಗಿ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅಭಿನಂದನೆ ಸಲ್ಲಿಸಿದ್ದಾರೆ. “ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ @narendramodi ಅವರಿಗೆ ಅಭಿನಂದನೆಗಳು” ಎಂದು ಷರೀಫ್ ಎಕ್ಸ್​ ಪೋಸ್ಟ್​ ಮಾಡಿದ್ದಾರೆ.

ಪಾಕಿಸ್ತಾನದ ವಿದೇಶಾಂಗ ಕಚೇರಿ ವಕ್ತಾರ ಮುಮ್ತಾಜ್ ಜಹ್ರಾ ಬಲೂಚ್ ಅವರು ಶನಿವಾರ ಪ್ರಧಾನಿ ಮೋದಿಯವರನ್ನು ಅಭಿನಂದಿಸುವ ಬಗ್ಗೆ ಕೇಳಿದಾಗ, “ಅವರ ಚುನಾವಣಾ ಪ್ರಕ್ರಿಯೆಯ ಬಗ್ಗೆ ನಾವು ಯಾವುದೇ ಪ್ರತಿಕ್ರಿಯೆಗಳನ್ನು ಹೊಂದಿಲ್ಲ” ಎಂದು ಹೇಳಿದ್ದರು. ಹೊಸ ಭಾರತ ಸರ್ಕಾರ ಅಧಿಕೃತವಾಗಿ ಪ್ರಮಾಣವಚನದ ಪ್ರಕಟಣೆ ಹೊರಡಿಸದ ಕಾರಣ, ಅಭಿನಂದನಾ ಸಂದೇಶಗಳನ್ನು ಚರ್ಚಿಸಲು ಕಾಲ ಪಕ್ವವಾಗಿಲ್ಲ ಎಂದು ಅವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ, ಲೋಕಸಭೆ ಚುನಾವಣೆಯಲ್ಲಿ 543 ಸ್ಥಾನಗಳಲ್ಲಿ 293 ಸ್ಥಾನಗಳನ್ನು ಗೆಲ್ಲುವ ಮೂಲಕ ನಿರ್ಣಾಯಕ ಗೆಲುವು ಸಾಧಿಸಿದೆ.

“ಪಾಕಿಸ್ತಾನವು ಯಾವಾಗಲೂ ಭಾರತ ಸೇರಿದಂತೆ ತನ್ನ ಎಲ್ಲಾ ನೆರೆಹೊರೆಯವರೊಂದಿಗೆ ಸಹಕಾರ ಸಂಬಂಧವನ್ನು ಬಯಸುತ್ತದೆ. ಜಮ್ಮು ಮತ್ತು ಕಾಶ್ಮೀರದ ಪ್ರಮುಖ ವಿವಾದ ಸೇರಿದಂತೆ ಬಾಕಿ ಇರುವ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ರಚನಾತ್ಮಕ ಮಾತುಕತೆ ಮತ್ತು ತೊಡಗಿಸಿಕೊಳ್ಳುವಿಕೆಯನ್ನು ನಾವು ನಿರಂತರವಾಗಿ ಪ್ರತಿಪಾದಿಸಿದ್ದೇವೆ” ಎಂದು ಬಲೂಚ್ ಹೇಳಿದ್ದರು.

ಇದನ್ನೂ ಓದಿ: Narendra Modi 3.0 : ಮೋದಿ ಅಧಿಕಾರಕ್ಕೆ ಬಾರದಿರಲಿ ಎಂದು ಕಾದು ಕೂತು, ಕೊನೆಗೂ ಅಭಿನಂದನೆ ತಿಳಿಸಿದ ಪಾಕಿಸ್ತಾನ!

ಪಾಕಿಸ್ತಾನದೊಂದಿಗೆ ಸೌಹಾರ್ದಯುತ ಸಂಬಂಧವನ್ನು ಬಯಸುವುದಾಗಿ ಭಾರತ ಸಮರ್ಥಿಸಿಕೊಂಡಿದೆ, ಇಸ್ಲಾಮಾಬಾದ್ ಮೊದಲು ಭಯೋತ್ಪಾದನೆ ಮತ್ತು ಹಗೆತನ ಮುಕ್ತ ವಾತಾವರಣವನ್ನು ಸೃಷ್ಟಿಸಬೇಕು ಎಂದು ಒತ್ತಿಹೇಳಿದೆ.

Continue Reading

ಪ್ರಮುಖ ಸುದ್ದಿ

Reasi Terror Attack : ಉಗ್ರರ ಮುಂದೆ ಸತ್ತಂತೆ ನಟಿಸಿ ಬದುಕುಳಿದ ಹಿಂದೂ ಯಾತ್ರಿಗಳು…

Reasi Terror Attack : ತಂಡದಲ್ಲಿ 6ರಿಂದ 7 ಭಯೋತ್ಪಾದಕರು ಇದ್ದರು. ಅವರು ಮಾಸ್ಕ್​ನಿಂದ ಮುಖ ಮುಚ್ಚಿದ್ದರು. ಆರಂಭದಲ್ಲಿ, ಅವರು ಬಸ್ ಹಿಂದೆ – ಮುಂದೆ ಚಲಿಸದಂತೆ ರಸ್ತೆಯ ಎಲ್ಲಾ ಬದಿಗಳಿಂದ ಮುಚ್ಚಿದರು. ಬಳಿಕ ಗುಂಡು ಹಾರಿಸಲು ಆರಂಭಿಸಿದರು. ಬಸ್ ಕಮರಿಗೆ ಹತ್ತಿರ ಬಂದು ಎಲ್ಲರೂ ಸಾಯುವಂತೆ ನಿರಂತ ಗುಂಡು ಹಾರಿಸುತ್ತಲೇ ಇದ್ದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

VISTARANEWS.COM


on

Reasi Terror Attack
Koo

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಹಿಂದೂ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ನಡೆದ ಭಯೋತ್ಪಾದಕರ ದಾಳಿಯಲ್ಲಿ (Reasi Terror Attack) ಬದುಕುಳಿದವರು ಆ ಭಯಾನಕ ಕ್ಷಣವನ್ನು ವಿವರಿಸಿದ್ದಾರೆ. ಎಲ್ಲರನ್ನೂ ಸಾಯಿಸಬೇಕು ಎಂಬ ಉದ್ದೇಶದಿಂದ ಭಯೋತ್ಪಾದಕರು ಬಸ್​ ಕಮರಿಗೆ ಬಿದ್ದಿದ್ದರೂ ಗುಂಡು ಹಾರಿಸುತ್ತಲೇ ಇದ್ದರು ಎಂದು ಅವರು ಹೇಳಿದ್ದಾರೆ. ನಾವೆಲ್ಲರೂ ಗುಂಡು ಬಿದ್ದು ಸತ್ತಂತೆ ನಟಿಸಿ ಬದುಕಿಕೊಂಡೆವು ಎಂದು ಅವರು ಭಯಭೀತ ಘಟನೆಯನ್ನು ವಿವರಿಸಿದ್ದಾರೆ.

ತಂಡದಲ್ಲಿ 6ರಿಂದ 7 ಭಯೋತ್ಪಾದಕರು ಇದ್ದರು. ಅವರು ಮಾಸ್ಕ್​ನಿಂದ ಮುಖ ಮುಚ್ಚಿದ್ದರು. ಆರಂಭದಲ್ಲಿ, ಅವರು ಬಸ್ ಹಿಂದೆ – ಮುಂದೆ ಚಲಿಸದಂತೆ ರಸ್ತೆಯ ಎಲ್ಲಾ ಬದಿಗಳಿಂದ ಮುಚ್ಚಿದರು. ಬಳಿಕ ಗುಂಡು ಹಾರಿಸಲು ಆರಂಭಿಸಿದರು. ಬಸ್ ಕಮರಿಗೆ ಹತ್ತಿರ ಬಂದು ಎಲ್ಲರೂ ಸಾಯುವಂತೆ ಕೂಗುತ್ತಾ ನಿರಂತರ ಗುಂಡು ಹಾರಿಸುತ್ತಲೇ ಇದ್ದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ನಾವೆಲ್ಲರೂ ಸತ್ತಿದ್ದೇವೆ ಎಂದು ಅವರನ್ನು ನಂಬಿಸಲು ನಾವು ಮೌನವಾಗಿಯೇ ಇದ್ದೆವು. ಸಂಜೆ 6 ಗಂಟೆಗೆ ಶಿವಖೋರ್ಹಿಯಿಂದ (ರಿಯಾಸಿ) ವೈಷ್ಣೋದೇವಿಗೆ ಬಸ್ ಮೂಲಕ ಬರುವಾಗ 30 ನಿಮಿಷಗಳ ದಾರಿಯ ನಡುವೆ ಘಟನೆ ನಡೆದಿದೆ. ನಾವು ಭಯಭೀತರಾಗಿದ್ದೆವು. ಬಸ್ಸಿನಲ್ಲಿ ಮಕ್ಕಳು ಮತ್ತು ಮಹಿಳೆಯರು ಸಹ ಇದ್ದರು. ಎಲ್ಲರೂ ಗಾಯಗೊಂಡಿದ್ದಾರೆ. ದಾಳಿ ನಡೆದ 10 ರಿಂದ 15 ನಿಮಿಷಗಳ ನಂತರ ಪೊಲೀಸರು ಮತ್ತು ಸ್ಥಳೀಯರು ನಮ್ಮನ್ನು ರಕ್ಷಿಸಲು ಬಂದರು ಎಂದು ಯಾತ್ರಿಯೊಬ್ಬರು ಹೇಳಿದರು.

20 ನಿಮಿಷ ಗುಂಡು ಹಾರಿಸಿದ್ದರು

ಭಯಾನಕ ದಾಳಿಯನ್ನು ವಿವರಿಸಿದ ಸಂತ್ರಸ್ತರೊಬ್ಬರು “ಭಯೋತ್ಪಾದಕರಲ್ಲಿ ಒಬ್ಬ ಬಸ್ ಮೇಲೆ ಗುಂಡು ಹಾರಿಸುವುದನ್ನು ನಾನು ನೋಡಿದ್ದೇನೆ. ಬಸ್ ಕಮರಿಗೆ ಬಿದ್ದ ನಂತರವೂ ಅವರು 20 ನಿಮಿಷಗಳ ಕಾಲ ಗುಂಡು ಹಾರಿಸುತ್ತಲೇ ಇದ್ದರು. ಬಸ್ ಚಾಲಕನಿಗೆ ಗುಂಡು ತಗುಲಿದ ಕಾರಣ ನಿಯಂತ್ರಣ ಕಳೆದುಕೊಂಡು ವಾಹನವು ಕಮರಿಗೆ ಬಿದ್ದಿದೆ.

ಮಕ್ಕಳೂ ಎಂದೂ ನೋಡದೆ ಕೊಂಡಿದ್ದರು

ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ದೇವಾಲಯದಿಂದ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ ಪರಿಣಾಮ 10 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 33 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Narendra Modi 3.0 : ಅಧಿಕಾರ ಸ್ವೀಕರಿಸಿದ ಮರುದಿನವೇ ಮೊದಲ ಫೈಲ್​ಗೆ ಸಹಿ ಹಾಕಿದ ಪ್ರಧಾನಿ ಮೋದಿ; ಯಾವ ಕಡತ ಅದು?

ರಿಯಾಸಿ ಬಸ್ ದಾಳಿಯಲ್ಲಿ ಎರಡರಿಂದ ಮೂರು ಭಯೋತ್ಪಾದಕರು ಭಾಗಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಳೆದ ತಿಂಗಳು ರಾಜೌರಿ ಮತ್ತು ಪೂಂಛ್​​ನಲ್ಲಿ ದಾಳಿಗಳನ್ನು ನಡೆಸಿದ ಲಷ್ಕರ್ ಉಗ್ರರ ಗುಂಪು ಟಿಆರ್​ಎಫ್​ ಭಯೋತ್ಪಾದಕರು ದಾಳಿ ನಡೆಸಿದ್ದಾರೆ.

ಭಯೋತ್ಪಾದಕರನ್ನು ಪತ್ತೆಹಚ್ಚಲು ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ದಾಳಿಯ ತನಿಖೆಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆಯನ್ನು (ಎನ್ಐಎ) ನಿಯೋಜಿಸಲಾಗಿದೆ ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.

Continue Reading

ಪ್ರಮುಖ ಸುದ್ದಿ

PM Narendra Modi: ಮೋದಿ ಪ್ರಮಾಣ ವಚನ ಸಮಾರಂಭದಲ್ಲಿ ಕಾಣಿಸಿಕೊಂಡ ನಿಗೂಢ ಪ್ರಾಣಿ! ವಿಡಿಯೋ ಇದೆ ನೋಡಿ

PM Narendra Modi: ಜೂನ್ 9ರಂದು ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ನಡೆದ ಈ ಪ್ರಮುಖ ರಾಜಕೀಯ ಘಟನೆಗೆ ವಿವಿಧ ಕ್ಷೇತ್ರಗಳ ಹಲವಾರು ಪ್ರಮುಖರು ಸಾಕ್ಷಿಯಾಗಿರುವಂತೆಯೇ, ನಾಲ್ಕು ಕಾಲಿನ ಒಂದು ಅನಿರೀಕ್ಷಿತ ಅತಿಥಿಯೂ ಕಂಡುಬಂದಿರುವುದು ಅಚ್ಚರಿಗೊಳಿಸಿದೆ.

VISTARANEWS.COM


on

pm narendra modi leopord
Koo

ಹೊಸದಿಲ್ಲಿ: ನರೇಂದ್ರ ಮೋದಿ (PM Narendra Modi) ಅವರು ಮೂರನೇ ಅವಧಿಗೆ ಪ್ರಧಾನ ಮಂತ್ರಿಯಾಗಿ (Prime minister) ಪ್ರಮಾಣ ವಚನ (Oath taking) ಸ್ವೀಕಾರ ಕಾರ್ಯಕ್ರಮ ನಡೆಯುತ್ತಿದ್ದಾಗ ಹಿನ್ನೆಲೆಯಲ್ಲಿ ಚಿರತೆಯಂಥ (leopord) ಪ್ರಾಣಿಯೊಂದು ವೇದಿಕೆಯ ಹಿಂಭಾಗದಲ್ಲೇ ಓಡಾಡಿರುವುದು ಇದೀಗ ಕಂಡುಬಂದಿದೆ. ಸಮಾರಂಭದ ವಿಡಿಯೋದಲ್ಲಿ ಇದು ಕಂಡುಬಂದಿದ್ದು, ಇದೀಗ ಎಲ್ಲರ ಆಶ್ಚರ್ಯ, ಆತಂಕಗಳಿಗೆ ಕಾರಣವಾಗಿದೆ. ವಿಡಿಯೋ ವೈರಲ್‌ (viral video) ಆಗುತ್ತಿದೆ.

ಜೂನ್ 9ರಂದು ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ನಡೆದ ಈ ಪ್ರಮುಖ ರಾಜಕೀಯ ಘಟನೆಗೆ ವಿವಿಧ ಕ್ಷೇತ್ರಗಳ ಹಲವಾರು ಪ್ರಮುಖರು ಸಾಕ್ಷಿಯಾಗಿರುವಂತೆಯೇ, ನಾಲ್ಕು ಕಾಲಿನ ಒಂದು ಅನಿರೀಕ್ಷಿತ ಅತಿಥಿಯೂ ಕಂಡುಬಂದಿರುವುದು ಅಚ್ಚರಿಗೊಳಿಸಿದೆ. ಭಾರತದ ಪ್ರಧಾನ ಮಂತ್ರಿಯ ಪ್ರಮಾಣ ವಚನ ಸ್ವೀಕಾರ ಸಮಾರಂಭ ಸಹಜವಾಗಿ ಬಿಗಿ ಭದ್ರತೆಯ ಕಾರ್ಯಕ್ರಮವಾಗಿದ್ದು, ರಾಷ್ಟ್ರದ ಮುಖಂಡರು, ರಾಜಕೀಯ ನಾಯಕರು, ಉದ್ಯಮಿಗಳು, ಪ್ರಮುಖ ಚಲನಚಿತ್ರ ನಟರು ಸಾಕ್ಷಿಗಳಾಗಿದ್ದರು. ಇದೇ ಸಂದರ್ಭದಲ್ಲಿ ಚಿರತೆ ಕಂಡುಬಂದಿದೆ.

ಬಿಜೆಪಿಯ ದುರ್ಗಾ ದಾಸ್ ಉಯಿಕೆ ಅವರು ಕೇಂದ್ರ ಸಚಿವರಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಮಾಣ ವಚನ ಸ್ವೀಕರಿಸುವ ಸಮಯದಲ್ಲಿ, ವೇದಿಕೆಯ ಹಿನ್ನೆಲೆಯಲ್ಲಿ ಬೆಕ್ಕಿನ ಸ್ವರೂಪದ ಪ್ರಾಣಿಯೊಂದು ಓಡಾಡಿದ್ದನ್ನು ಹೆಚ್ಚಿನವರು ಗುರುತಿಸಲಿಲ್ಲ. ಆದರೆ ವೇದಿಕೆಯ ಹಿಂದೆಯೇ ಅದರ ಮಿಂಚಿನ ಓಡಾಟವನ್ನು ಅನೇಕರು ಗಮನಿಸಿದರು. ದೂರದರ್ಶನದಲ್ಲಿ ಪ್ರಮಾಣವಚನ ಸಮಾರಂಭ ನೇರ ಪ್ರಸಾರವಾಗಿದ್ದು, ಇದೀಗ ಆ ಕ್ಷಣದ ವಿಡಿಯೋಗಳು ಮರುಪ್ರಸಾರವಾಗುತ್ತಿವೆ.

ಈ ವರ್ಷದ ಅತಿದೊಡ್ಡ ರಾಜಕೀಯ ಇವೆಂಟ್‌ ಆಗಿರುವ ಈ ಕಾರ್ಯಕ್ರಮದಲ್ಲಿ ಈ ಅನಪೇಕ್ಷಿತ, ಅನಿರೀಕ್ಷಿತ ಅತಿಥಿಯ ಆಗಮನ ಇದೀಗ ಇಂಟರ್ನೆಟ್‌ನಲ್ಲಿ ಬಿರುಗಾಳಿಯಂತೆ ಗಮನ ಸೆಳೆಯುತ್ತಿದೆ. ಅನೇಕ X ಬಳಕೆದಾರರು ತಮ್ಮ ಅಪನಂಬಿಕೆ ವ್ಯಕ್ತಪಡಿಸಿದ್ದಾರೆ. ಹಲವರು ಅಚ್ಚರಿ ಹಾಗೂ ಆತಂಕ ಹೊರಸೂಸಿದ್ದಾರೆ.

ಆದರೂ ವಿಸ್ತಾರವಾದ ರಾಜಪಥ ಹಾಗೂ ರಾಷ್ಟ್ರಪತಿ ಭವನದ ಆವರಣದಲ್ಲಿ ಚಿರತೆ ಬಂದು ಹುದುಗಿಕೊಂಡಿರುವ ಸಾಧ್ಯತೆಯನ್ನು ಅಲ್ಲಗಳೆಯಾಲಗುವುದಿಲ್ಲ. ʼಅಮೃತ್ ಉದ್ಯಾನ್ʼ ಎಂದು ಕರೆಯಲಾಗುವ ಉದ್ಯಾನ 15 ಎಕರೆಗಳಷ್ಟು ಹರಡಿದ್ದು, ಹಲವು ಕಡೆ ದಟ್ಟವಾದ ಕಾಡು ಇದೆ. ಈಸ್ಟ್ ಲಾನ್, ಸೆಂಟ್ರಲ್ ಲಾನ್, ಲಾಂಗ್ ಗಾರ್ಡನ್ ಮತ್ತು ಸರ್ಕ್ಯುಲರ್ ಗಾರ್ಡನ್ ಇದರ ಮೂಲ ಆಕರ್ಷಣೆಗಳಾಗಿವೆ. ಹರ್ಬಲ್ ಗಾರ್ಡನ್, ಟ್ಯಾಕ್ಟೈಲ್ ಗಾರ್ಡನ್, ಬೋನ್ಸಾಯ್ ಗಾರ್ಡನ್ ಮತ್ತು ಆರೋಗ್ಯ ವನಂಗಳು ಇಲ್ಲಿವೆ.

ಅಮೃತ್ ಉದ್ಯಾನ್‌ನ ಸಸ್ಯವರ್ಗದ ಜೊತೆಗೆ ರಾಷ್ಟ್ರಪತಿ ಭವನವು ಚಿಟ್ಟೆ ಪಾರ್ಕ್‌, ನವಿಲು ಪಾರ್ಕ್‌, ಕೊಳ ಇತ್ಯಾದಿ ಒಳಗೊಂಡಿದೆ. ವೈವಿಧ್ಯಮಯ ಪ್ರಾಣಿಗಳಿಗೂ ನೆಲೆಯಾಗಿದೆ. ಭವನದ ಆವರಣದ ಉದ್ಯಾನವು 111 ಜಾತಿಯ ಪಕ್ಷಿಗಳನ್ನೂ ಹೊಂದಿದೆ. ಸೋಮವಾರ ಮತ್ತು ನಿರ್ದಿಷ್ಟ ರಜಾದಿನಗಳನ್ನು ಹೊರತುಪಡಿಸಿ, ಅಮೃತ್‌ ಉದ್ಯಾನವು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಸಾರ್ವಜನಿಕರಿಗೆ ತೆರೆದಿದೆ.

ಇದೀಗ ಈ ಚಿರತೆ ಎಲ್ಲಿಂದ ಬಂದಿರಬಹುದು, ಪ್ರಧಾನಿ ಹಾಗೂ ರಾಷ್ಟ್ರಪತಿಗಳ ಸೆಕ್ಯುರಿಟಿ ಅದನ್ನು ಸಮಾರಂಭ ನಡೆಯುವ ಜಾಗದವರೆಗೂ ಹೇಗೆ ಬರಲು ಬಿಟ್ಟರು, ನಿಜಕ್ಕೂ ಈ ವಿಡಿಯೋದಲ್ಲಿ ಕಾಣಿಸಿರುವುದು ನಿಜವೇ ಎಂಬಿತ್ಯಾದಿ ಚರ್ಚೆಗಳು ಆರಂಭವಾಗಿವೆ. ಒಂದು ವೇಳೆ ಇಲ್ಲಿ ಚಿರತೆ ಇರುವುದು ನಿಜವೇ ಆಗಿದ್ದರೆ, ಅದು ದೇಶವಿದೇಶದ ಗಮನ ಸೆಳೆಯುವ ದೊಡ್ಡ ಸುದ್ದಿಯೇ ಆಗಲಿದೆ.

ಇದನ್ನೂ ಓದಿ: Narendra Modi 3.0 : ಅಧಿಕಾರ ಸ್ವೀಕರಿಸಿದ ಮರುದಿನವೇ ಮೊದಲ ಫೈಲ್​ಗೆ ಸಹಿ ಹಾಕಿದ ಪ್ರಧಾನಿ ಮೋದಿ; ಯಾವ ಕಡತ ಅದು?

Continue Reading
Advertisement
K S Bhagavan
ಪ್ರಮುಖ ಸುದ್ದಿ38 seconds ago

K S Bhagavan: ರಾಮ ದಶರಥನ ಮಗನೇ ಅಲ್ಲ, ಪುರೋಹಿತನಿಗೆ ಹುಟ್ಟಿದವನು: ಪ್ರೊ. ಭಗವಾನ್ ವಿವಾದಿತ ಹೇಳಿಕೆ

Karnataka weather Forecast
ಮಳೆ19 mins ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

IND vs PAK
ಕ್ರೀಡೆ33 mins ago

IND vs PAK : ಭಾರತ ವಿರುದ್ಧ ಸೋಲುವುದಕ್ಕಾಗಿ ಮ್ಯಾಚ್ ಫಿಕ್ಸಿಂಗ್ ಮಾಡಿದ ಪಾಕ್​ ಆಟಗಾರ; ಆರೋಪ

Tshering Tobgay
ದೇಶ34 mins ago

Tshering Tobgay: ಮೋದಿ ನನ್ನ ಗುರು, ದೊಡ್ಡಣ್ಣ;‌ ಭೂತಾನ್‌ ಪ್ರಧಾನಿ ತ್ಶೆರಿಂಗ್‌ ತೋಬ್ಗೆ ಬಹುಪರಾಕ್!

Sambhavami Yuge Yuge in june 21st Release
ಸಿನಿಮಾ49 mins ago

Kannada New Movie: ಹಳ್ಳಿಗಳನ್ನು ಉಳಿಸುವ ಹುಡುಗರ ಕಥೆ ʻಸಂಭವಾಮಿ ಯುಗೇ ಯುಗೇʼ: ಇದೇ ಜೂನ್‌ 21ಕ್ಕೆ ತೆರೆಗೆ!

Prajwal Revanna Case
ಪ್ರಮುಖ ಸುದ್ದಿ1 hour ago

Prajwal Revanna Case: ಪ್ರಜ್ವಲ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌

Noor Malabika Das
ಸಿನಿಮಾ1 hour ago

Noor Malabika Das: ಕಾಜೋಲ್‌ ಜತೆ ನಟಿಸಿದ್ದ, ದಿ ಟ್ರಯಲ್‌ ಖ್ಯಾತಿಯ ಬಾಲಿವುಡ್‌ ನಟಿ ದಾಸ್‌ ಆತ್ಮಹತ್ಯೆ

Yuva Rajkumar divorce reaction by shiva Rajkumar
ಸ್ಯಾಂಡಲ್ ವುಡ್1 hour ago

Yuva Rajkumar: ಸತ್ಯವಾಗಿಯೂ ʻಯುವʼ ಡಿವೋರ್ಸ್‌ ವಿಚಾರ ನಮಗೆ ಗೊತ್ತಿಲ್ಲ ಎಂದ ಶಿವಣ್ಣ!

Self Harming
ರಾಯಚೂರು1 hour ago

Self Harming : ಮಾನಸಿಕ ಖಿನ್ನತೆ; ಮಗಳ ಜತೆ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ

Narendra Modi 3.20
ಪ್ರಮುಖ ಸುದ್ದಿ2 hours ago

Narendra Modi 3.0 : ಮೋದಿ ಅಧಿಕಾರಕ್ಕೆ ಬಾರದಿರಲಿ ಎಂದು ಕಾದು ಕೂತು, ಕೊನೆಗೂ ಅಭಿನಂದನೆ ತಿಳಿಸಿದ ಪಾಕಿಸ್ತಾನ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ19 mins ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

ಟ್ರೆಂಡಿಂಗ್‌