Bangalore Double Murder : ಫಣೀಂದ್ರ ಸುಬ್ರಹ್ಮಣ್ಯ ಕೊಲೆ ಹಿಂದೆ ಹೆಣ್ಣಿನ ನೆರಳು? ಯಾರವಳು? - Vistara News

ಕರ್ನಾಟಕ

Bangalore Double Murder : ಫಣೀಂದ್ರ ಸುಬ್ರಹ್ಮಣ್ಯ ಕೊಲೆ ಹಿಂದೆ ಹೆಣ್ಣಿನ ನೆರಳು? ಯಾರವಳು?

Bangalore Double Murder : ಏರೋನಿಕ್ಸ್‌ ಮೀಡಿಯಾ ಪ್ರೈವೆಟ್‌ ಲಿಮಿಟೆಡ್‌ ಕಂಪನಿ ಎಂ.ಡಿ. ಫಣೀಂದ್ರ ಸುಬ್ರಹ್ಮಣ್ಯ ಅವರ ಕೊಲೆಯ ಹಿಂದೆ ಹೆಣ್ಣಿನ ನೆರಳಿದೆಯಾ ಎಂಬ ಸಂಶಯ ಹುಟ್ಟಿಕೊಂಡಿದೆ.

VISTARANEWS.COM


on

Phanindra Murder Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಏರೋನಿಕ್ಸ್ ಮೀಡಿಯಾ ಪ್ರೈವೆಟ್‌ ಲಿಮಿಟೆಡ್‌ (Aironics Media pvt ltd) ಎಂಬ ಫೈಬರ್‌ನೆಟ್‌ ಕಂಪನಿಯ ಆಡಳಿತ ನಿರ್ದೇಶಕ (Managing Director-MD) ಫಣೀಂದ್ರ ಸುಬ್ರಹ್ಮಣ್ಯ (Phanindra subrahmanya) ಮತ್ತು ಸಿಇಒ ವಿನು ಕುಮಾರ್‌ ಅವರ ಬರ್ಬರ ಕೊಲೆಯ (Bangalore Double Murder) ತನಿಖೆ ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ. ಒಂದು ಕಡೆ ಈ ಕೊಲೆಗೆ ಜಿ-ನೆಟ್‌ ಬ್ರಾಡ್‌ ಬ್ಯಾಂಡ್‌ ಕಂಪನಿಯ (Gnet Broadband Company) ಮಾಲೀಕ ಅರುಣ್‌ ಕುಮಾರ್‌ ಆಜಾದ್‌ (Arun kumar Azad) ಸುಪಾರಿ ಕೊಟ್ಟಿದ್ದಾರೆ ಎಂಬ ಆರೋಪ ಕೇಳಿಬಂದರೆ ಇನ್ನೊಂದು ಕಡೆ ಹೆಣ್ಣಿನ ನೆರಳು ಕಾಣಿಸಿಕೊಂಡಿದೆ.

ಏರೋನಿಕ್ಸ್‌ ಸಂಸ್ಥೆಯಲ್ಲಿ ಈ ಹಿಂದೆ ಉದ್ಯೋಗಿಯಾಗಿದ್ದ ಇನ್‌ಸ್ಟಾಗ್ರಾಂ ಇನ್‌ಫ್ಲುಯೆನ್ಸರ್‌, ಜೋಕರ್‌ ಎಂದು ಕರೆಸಿಕೊಳ್ಳುವ ಶಬರೀಷ ಅಲಿಯಾಸ್‌ ಫೆಲಿಕ್ಸ್‌ (joker Felix) ಮಂಗಳವಾರ ಸಂಜೆ 3.35ರ ಹೊತ್ತಿಗೆ ವಿನಯ ರೆಡ್ಡಿ ಮತ್ತು ಸಂತೋಷ್‌ ಎಂಬಿಬ್ಬರ ಜತೆಗೆ ಅಮೃತಹಳ್ಳಿಯ ಪಂಪಾ ಬಡಾವಣೆಯಲ್ಲಿರುವ ಕಚೇರಿಗೆ ನುಗ್ಗಿ ಫಣೀಂದ್ರ ಸುಬ್ರಹ್ಮಣ್ಯ ಮತ್ತು ವಿನುಕುಮಾರ್‌ ಅವರನ್ನು ತಲವಾರಿನಿಂದ ಕಡಿದು ಕೊಲೆ ಮಾಡಿದ್ದ. ಈ ಮೂವರು ಕೊಲೆ ಮಾಡಿದ ಬಳಿಕ ಕಾರಿನಲ್ಲಿ ಮೆಜೆಸ್ಟಿಕ್‌ಗೆ ಬಂದು ರೈಲು ಹತ್ತಿ ಹೋಗುತ್ತಿದ್ದಾಗ ಕುಣಿಗಲ್‌ನಲ್ಲಿ ಬಂಧಿಸಲಾಗಿದೆ.

ಅವರ ವಿಚಾರಣೆಯ ಸಂದರ್ಭದಲ್ಲಿ ಸಿಕ್ಕಿದ ಕೆಲವು ಸುಳಿವುಗಳನ್ನು ಆಧರಿಸಿ ಪೊಲೀಸರು ಜಿ-ನೆಟ್‌ ಬ್ರಾಡ್‌ಬ್ಯಾಂಡ್‌ ಕಂಪನಿಯ ಮಾಲೀಕ ಅರುಣ್‌ ಕುಮಾರ್‌ ಆಜಾದ್‌ ಅವರನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದರು. ಅರುಣ್‌ ಕುಮಾರ್‌ ಆಜಾದ್‌ ದಿಲ್ಲಿಯಿಂದ ವಿಮಾನದಲ್ಲಿ ಮರಳಿ ಬರುತ್ತಿದ್ದ ವೇಳೆ ವಿಮಾನ ನಿಲ್ದಾಣದಲ್ಲೇ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗಿದೆ.

ಫಣೀಂದ್ರ ಸುಬ್ರಹ್ಮಣ್ಯ ಮತ್ತು ವಿನುಕುಮಾರ್‌ ಅವರಿಬ್ಬರೂ ಈ ಹಿಂದೆ ಜಿ-ನೆಟ್‌ ಬ್ರಾಡ್‌ ಬ್ಯಾಂಡ್‌ ಕಂಪನಿಯಲ್ಲಿ ಉದ್ಯೋಗದಲ್ಲಿದ್ದು, ಅದನ್ನು ಬಿಟ್ಟು ಏರೋನಿಕ್ಸ್‌ ಸಂಸ್ಥೆಯನ್ನು ಕಟ್ಟಿದ್ದರು. ಈ ಉದ್ಯಮ ದ್ವೇಷದಿಂದ ಅರುಣ್‌ ಕುಮಾರ್‌ ಆಜಾದ್‌ ಇವರಿಬ್ಬರ ಕೊಲೆಗೆ ಜೋಕರ್‌ ಫೆಲಿಕ್ಸ್‌ಗೆ ಸುಪಾರಿ ಕೊಟ್ಟಿದ್ದರು ಎಂಬ ನೆಲೆಯಲ್ಲಿ ತನಿಖೆ ಸಾಗುತ್ತಿದೆ.

ಅರೋಪಿ ಸಂತೋಷ್‌ ಕೂಡಾ ಜಿ ನೆಟ್‌ನಲ್ಲಿದ್ದ

ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಎರಡನೇ ಆರೋಪಿ ಸಂತೋಷ್‌ ಕೂಡಾ ಜಿನೆಟ್‌ ಕಂಪನಿಯಲ್ಲಿ ಕೆಲಸಕ್ಕಿದ್ದ. ಫೆಲಿಕ್ಸ್‌ ಮತ್ತು ಸಂತೋಷ್‌ ಜಿ ನೆಟ್ ಇಂದ ನಿಮ್ಮ ಟೀಂಗೆ ಶಿಫ್ಟ್ ಆಗುತ್ತೇವೆ ಎಂಬ ವಿಚಾರದಲ್ಲಿ ಮಾತನಾಡಲು ಬಂದಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕಾಗಿ ಅವರನ್ನು ಏರೋನಿಕ್ಸ್‌ ಕಚೇರಿಗೆ ಬಿಟ್ಟುಕೊಳ್ಳಲಾಗಿತ್ತು ಎನ್ನಲಾಗಿದೆ.

ಇದರ ನಡುವೆಯೇ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ನೀಡಬಲ್ಲ ಮತ್ತೊಂದು ಸುದ್ದಿ ಹರಿದಾಡುತ್ತಿದೆ. ಅದುವೇ ಹೆಣ್ಣಿನ ನೆರಳು.

ಹೆಣ್ಣಿನ ವಿಷಯದಲ್ಲಿ ನಡೆಯಿತಾ ಅಮೃತಹಳ್ಳಿಯ ಡಬಲ್‌ ಮರ್ಡರ್‌?

ಈ ಅವಳಿ ಕೊಲೆ ನಡೆದಿರುವುದು ದುಡ್ಡಿಗಲ್ಲ, ವ್ಯವಹಾರಕ್ಕಲ್ಲ, ಬೇರೆ ದ್ವೇಷಕ್ಕೂ ಅಲ್ಲ. ಇದು ಹುಡುಗಿ ವಿಚಾರಕ್ಕೆ ಎನ್ನುವ ಅಂಶವೊಂದು ತನಿಖೆಯ ನಡುವೆ ಎದ್ದು ನಿಂತಿದೆ.

ಫಣೀಂದ್ರ, ವಿನು ಕುಮಾರ್‌ ಮತ್ತು ಫೆಲಿಕ್ಸ್‌ ಈ ಮೂವರೂ ಈ ಹಿಂದೆ ಬನ್ನೇರುಘಟ್ಟದಲ್ಲಿರುವ ಜಿ-ನೆಟ್‌ ಬ್ರಾಡ್‌ ಬ್ಯಾಂಡ್‌ ಕಂಪನಿಯಲ್ಲಿ ಜತೆಯಾಗಿ ಕೆಲಸ ಮಾಡುತ್ತಿದ್ದರು. ಬಳಿಕ ಫಣೀಂದ್ರ ಮತ್ತು ವಿನು ಕುಮಾರ್‌ ಅಲ್ಲಿಂದ ಹೊರಬಿದ್ದು ಏರೋನಿಕ್ಸ್‌ ಸಂಸ್ಥೆ ಕಟ್ಟಿದ್ದರು. ಫೆಲಿಕ್ಸ್‌ ಕೂಡಾ ಅವರ ಜತೆಗೆ ಬಂದಿದ್ದ ಎನ್ನಲಾಗಿದೆ.

ಆರೋಪಿ ಶಬರೀಶ್‌ ಅಲಿಯಾಸ್‌ ಜೋಕರ್‌ ಫೆಲಿಕ್ಸ್‌ ಜಿ ನೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ಹುಡುಗಿ ಜೊತೆ ಸಲುಗೆಯಿಂದಿದ್ದ. ಅದೇ ಹುಡುಗಿಯ ಜತೆಗೆ ಫಣೀಂದ್ರ ಅವರು ಕೂಡಾ ಸಲುಗೆ ಹೊಂದಿದ್ದರು ಎನ್ನಲಾಗಿದೆ.

ಈ ಹುಡುಗಿಯ ವಿಚಾರದಲ್ಲಿ ಫಣೀಂದ್ರ ಹಾಗೂ ಫೆಲಿಕ್ಸ್ ಮಧ್ಯೆ ಜಗಳ ನಡೆದಿತ್ತು ಎನ್ನಲಾಗಿದೆ. ಆಗ ʻʻನಮ್ಮ ಹುಡುಗಿ ವಿಚಾರಕ್ಕೆ ಬಂದ್ರೆ ನಿನ್ನ ಮುಗಿಸಿಬಿಡ್ತೀನಿʼʼ ಅಂತ ಆವಾಜ್ ಹಾಕಿದ್ದನಂತೆ ಫೆಲಿಕ್ಸ್. ಹಾಗಿದ್ದರೆ ಈ ಹುಡುಗಿಯ ವಿಚಾರವೇ ದೊಡ್ಡದಾಗಿ ಕೊಲೆಯ ಹಂತದವರೆಗೂ ಹೋಯಿತಾ ಎನ್ನುವ ಒಂದು ಅಂಶ ಪೊಲೀಸರನ್ನು ಕಾಡುತ್ತಿದೆ. ಸದ್ಯ ಈ‌ ಆಯಾಮದಲ್ಲಿ ತನಿಖೆ ಮುಂದುವರಿಸಿದ್ದಾರೆ ಅಮೃತಹಳ್ಳಿ ಪೊಲೀಸರು.

ಹೆಣ್ಣಿನ ಆಯಾಮವೇ ಪ್ರಧಾನವಾಗಲು ಇನ್ನೊಂದು ಕಾರಣವೂ ಇದೆ. ಅದೇನೆಂದರೆ ಹಂತಕರು ಪ್ರಧಾನವಾಗಿ ದಾಳಿ ಮಾಡಿದ್ದು ಫಣೀಂದ್ರ ಅವರ ಮೇಲೆಯೇ. ಫಣೀಂದ್ರ ಅವರ ಮೇಲೆ ದಾಳಿ ನಡೆಯುತ್ತಿದ್ದಾಗ ಆರೋಪಿಗಳನ್ನು ತಡೆಯಲು ವಿನುಕುಮಾರ್‌ ಕುರ್ಚಿ ಮತ್ತಿತರ ವಸ್ತುಗಳನ್ನು ಎಸೆಯುತ್ತಿದ್ದರು. ಹೀಗಾಗಿ ಅವರನ್ನೂ ಮಾರಕಾಸ್ತ್ರದಿಂದ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಹಾಗಂತ, ಈ ಕೊಲೆಯನ್ನು ಹೆಣ್ಣಿಗಾಗಿಯೇ ಮಾಡಲಾಗಿದೆ ಎಂದು ಯಾವ ಕಾರಣಕ್ಕೂ ಷರಾ ಬರೆಯಲಾಗದು. ಯಾಕೆಂದರೆ ಫಣೀಂದ್ರ ಅವರು ಸಂಸ್ಕಾರವಂತ ಜೀವನ ನಡೆಸುವವರೆಂದು ಅವರ ಮಿತ್ರರು ಹೇಳುತ್ತಾರೆ. ಇಂಥ ವಿಷಯದಲ್ಲಿ ಅವರು ತೀರಾ ವೈಷಮ್ಯ ಬೆಳೆಸಿಕೊಳ್ಳುವ ಮಟ್ಟಕ್ಕೆ ಹೋಗಿರಲಾರರು ಎಂಬ ಅಭಿಪ್ರಾಯವಿದೆ. ಆದರೆ, ಫೆಲಿಕ್ಸ್‌ ಸೈಕೋ ರೀತಿಯಲ್ಲಿ ವರ್ತಿಸುತ್ತಿರುವುದರಿಂದ ಯಾವ ಕಾರಣಕ್ಕಾಗಿ ಕೊಲೆ ಎನ್ನುವುದೇ ಈಗ ಸುಲಭದಲ್ಲಿ ಸ್ಪಷ್ಟವಾಗುತ್ತಿಲ್ಲ.

ಇದನ್ನೂ ಓದಿ: Bangalore Double Murder : ಏರೋನಿಕ್ಸ್‌ ಎಂಡಿ, ಸಿಇಒ ಕೊಲೆಗೆ ಹಳೆ ಕಂಪನಿ ಮಾಲೀಕ ಸುಪಾರಿ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಯಚೂರು

Raichur Lok Sabha Constituency: ರಾಯಚೂರಿನಲ್ಲಿ ನಾಯಕರ ನಡುವಿನ ಕಾಳಗದಲ್ಲಿ ಯಾರು ರಾಜ?

Raichur Lok Sabha Constituency: ಪರಿಶಿಷ್ಟ ಪಂಗಡ ಸಮುದಾಯಕ್ಕೆ ಮೀಸಲಾಗಿರುವ ಕ್ಷೇತ್ರದಲ್ಲಿ ಸತತ ಎರಡನೇ ಬಾರಿಗೆ ರಾಜಾ ಅಮರೇಶ್ವರ್‌ ನಾಯಕ್‌ ಅವರು ಅದೃಷ್ಟ ಪರೀಕ್ಷೆಗೆ ಇಳಿದಿದ್ದರೆ, ನಿವೃತ್ತ ಐಎಎಸ್‌ ಅಧಿಕಾರಿ ಜಿ. ಕುಮಾರ್‌ ನಾಯಕ್‌ ಅವರು ಖಾತೆ ತೆರೆಯುವ ಉತ್ಸಾಹದಲ್ಲಿದ್ದಾರೆ. ರಾಜಾ ಅಮರೇಶ್ವರ ನಾಯಕ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ನಾಮದ ಬಲ ಇದ್ದರೆ, ಕುಮಾರ್‌ ನಾಯಕ್‌ ಪರ ಯುವಕರ ಒಲವಿದೆ ಎನ್ನಲಾಗುತ್ತಿದೆ.

VISTARANEWS.COM


on

Raichur Lok Sabha Constituency
Koo

ರಾಯಚೂರು: ಭತ್ತದ ಜಿಲ್ಲೆಯಾದ ರಾಯಚೂರಿನಲ್ಲಿ ಲೋಕಸಭೆ ಚುನಾವಣೆ (Raichur Lok Sabha Constituency) ಸಮರವು ಮಹತ್ವ ಪಡೆದಿದ್ದು, ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ್‌ (Raja Amareshwara Naik) ಹಾಗೂ ಕಾಂಗ್ರೆಸ್‌ನ ಜಿ. ಕುಮಾರ್‌ ನಾಯಕ್‌ (G Kumar Nayak) ಮಧ್ಯೆ ತೀವ್ರ ಪೈಪೋಟಿ ನಡೆದಿದೆ. ಪರಿಶಿಷ್ಟ ಪಂಗಡ ಸಮುದಾಯಕ್ಕೆ ಮೀಸಲಾಗಿರುವ ಕ್ಷೇತ್ರದಲ್ಲಿ ಸತತ ಎರಡನೇ ಬಾರಿಗೆ ರಾಜಾ ಅಮರೇಶ್ವರ್‌ ನಾಯಕ್‌ ಅವರು ಅದೃಷ್ಟ ಪರೀಕ್ಷೆಗೆ ಇಳಿದಿದ್ದರೆ, ನಿವೃತ್ತ ಐಎಎಸ್‌ ಅಧಿಕಾರಿ ಜಿ. ಕುಮಾರ್‌ ನಾಯಕ್‌ ಅವರು ಖಾತೆ ತೆರೆಯುವ ಉತ್ಸಾಹದಲ್ಲಿದ್ದಾರೆ.

ರಾಜಾ ಅಮರೇಶ್ವರ ನಾಯಕ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ನಾಮದ ಬಲವಿದೆ. ಹಲವು ಅಭಿವೃದ್ಧಿ ಕಾಮಗಾರಿಗಳ ಬಲ ಇದ್ದರೂ, ಮೂಲ ಸೌಕರ್ಯ ಒದಗಿಸುವ ವಿಚಾರದಲ್ಲಿ ಸಂಸದ ಹಿಂದೆ ಬಿದ್ದಂತೆ ಕಾಣಿಸುತ್ತಿದೆ. ರೈತರ ಆಕ್ರೋಶವೂ ಅವರ ವಿರುದ್ಧ ಇದೆ. ಆದರೆ, ಲೋಕಸಭೆ ಚುನಾವಣೆಯಲ್ಲಿ ಮತದಾರರು ರಾಷ್ಟ್ರ ಮಟ್ಟದ ಚಿಂತನೆಯೊಂದಿಗೆ ವೋಟು ಹಾಕುವುದರಿಂದ ಅಮರೇಶ್ವರ ನಾಯಕ್‌ ಅವರಿಗೆ ವರದಾನವಾಗುವ ಸಾಧ್ಯತೆ ಇದೆ.

ರಾಜಾ ಅಮರೇಶ್ವರ ನಾಯಕ್

ಇನ್ನು, 1990ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿದ್ದ ಜಿ. ಕುಮಾರ್‌ ನಾಯಕ್‌ ಅವರು ನಿವೃತ್ತಿ ಹೊಂದಿದ್ದು, ಈಗ ರಾಜಕೀಯದಲ್ಲಿ ಎರಡನೇ ಇನ್ನಿಂಗ್ಸ್‌ ಆರಂಭಿಸುವ ತವಕದಲ್ಲಿದ್ದಾರೆ. 1999ರಿಂದ 2002 ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಕುಮಾರ್‌ ನಾಯಕ್‌ ಅವರಿಗೆ ಜಿಲ್ಲೆಯ ಜತೆ ಒಡನಾಟವಿದೆ. ಐಎಎಸ್‌ ಅಧಿಕಾರಿಯಾಗಿದ್ದರು ಎಂಬ ಸಾಫ್ಟ್‌ ಕಾರ್ನರ್‌, ಯುವಕರ ಬೆಂಬಲವು ಅವರ ಜತೆಗಿದೆ. ಹಾಗಾಗಿ, ಕ್ಷೇತ್ರದಲ್ಲಿ ರಾಜಾ ಅಮರೇಶ್ವರ ನಾಯಕ್‌ ಹಾಗೂ ಕುಮಾರ್‌ ನಾಯಕ್‌ ಮಧ್ಯೆ ಪೈಪೋಟಿ ಅಂತೂ ಇದೆ. ‌

ಜಿ ಕುಮಾರ್‌ ನಾಯಕ್

2019, 2014ರಲ್ಲಿ ಏನಾಗಿತ್ತು?

2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ರಾಜಾ ಅಮರೇಶ್ವರ್‌ ನಾಯಕ್‌ ಅವರು ಕಾಂಗ್ರೆಸ್‌ನ ಬಿ.ವಿ. ನಾಯಕ್‌ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದರು. ರಾಜಾ ಅಮರೇಶ್ವರ್‌ ನಾಯಕ್‌ ಅವರು 1.17 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಬಿ.ವಿ. ನಾಯಕ್‌ ಅವರು ಬಿಜೆಪಿಯ ಶಿವನಗೌಡ ನಾಯಕ್‌ ವಿರುದ್ಧ ಕೇವಲ 1,499 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. 2019ರಲ್ಲಿ ರಾಜಾ ಅಮರೇಶ್ವರ್‌ ನಾಯಕ್‌ ಅವರಿಗೆ ಮೋದಿ ಅಲೆಯು ವರದಾನವಾಗಿತ್ತು.

ಮತದಾರರ ಸಂಖ್ಯೆ

ಪುರುಷರು9.55 ಲಕ್ಷ
ಮಹಿಳೆಯರು9.71 ಲಕ್ಷ
ಲಿಂಗತ್ವ ಅಲ್ಪಸಂಖ್ಯಾತರು367
ಒಟ್ಟು19.28 ಲಕ್ಷ

1957ರಿಂದ 2019ರ ಅವಧಿಯಲ್ಲಿ ರಾಯಚೂರು ಲೋಕಸಭೆ ಕ್ಷೇತ್ರದಲ್ಲಿ 17 ಬಾರಿ ಚುನಾವಣೆ ನಡೆದಿದೆ. 17ರಲ್ಲಿ 13 ಬಾರಿ ಕಾಂಗ್ರೆಸ್‌ ಗೆಲುವು ಸಾಧಿಸಿದರೆ, ಎರಡು ಬಾರಿ ಬಿಜೆಪಿ, ಒಮ್ಮೆ ಸ್ವತಂತ್ರ ಪಕ್ಷ ಹಾಗೂ ಒಮ್ಮೆ ಜೆಡಿಎಸ್‌ ಅಭ್ಯರ್ಥಿಯು ಗೆಲುವು ಸಾಧಿಸಿದ್ದಾರೆ.

ರಾಯಚೂರು ಲೋಕಸಭೆ ಕ್ಷೇತ್ರದ ವ್ಯಾಪ್ತಿಗೆ ಯಾದಗಿರಿಯ ಮೂರು, ರಾಯಚೂರು ಜಿಲ್ಲೆಯ ಐದು ವಿಧಾನಸಭೆ ಕ್ಷೇತ್ರಗಳು ಬರುತ್ತವೆ. ಐದರಲ್ಲಿ ಕಾಂಗ್ರೆಸ್‌, ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಒಂದು ಕ್ಷೇತ್ರದಲ್ಲಿ ಜೆಡಿಎಸ್‌ ಶಾಸಕರಿದ್ದಾರೆ. ರಾಯಚೂರು ಲೋಕಸಭೆ ಕ್ಷೇತ್ರದಲ್ಲಿ ಜೆಡಿಎಸ್‌ ಪ್ರಭಾವವೂ ಇರುವುದು ಮೈತ್ರಿ ಪಕ್ಷವಾದ ಬಿಜೆಪಿಗೆ ಹೆಚ್ಚಿನ ಅನುಕೂಲ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Bidar Lok Sabha Constituency: ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಹಳೇ ಬೇರು Vs ಹೊಸ ಚಿಗುರು; ಖೂಬಾ, ಖಂಡ್ರೆ ಕದನದಲ್ಲಿ ಜಯ ಯಾರಿಗೆ?

Continue Reading

ಕ್ರೈಂ

Accident Case : ಕರೆಂಟ್‌ ಶಾಕ್‌ಗೆ ಕಂಬದಲ್ಲೇ ಕಾರ್ಮಿಕನ ನರಳಾಟ; ಭೀಕರ ಅಪಘಾತಕ್ಕೆ ಇಬ್ಬರು ಬಲಿ

Accident Case : ಭಾರಿ ಮಳೆಗೆ ಮುರಿದು ಬಿದ್ದ ಕಂಬವನ್ನು ಜೋಡಣೆ ಮಾಡುವಾಗ ವಿದ್ಯುತ್‌ ಪ್ರವಹಿಸಿ ಕಾರ್ಮಿಕನೊಬ್ಬ ಒದ್ದಾಡಿದ್ದರೆ, ಇತ್ತ ಭೀಕ ಅಪಘಾತದಲ್ಲಿ ಬೈಕ್‌ ಸವಾರರಿಬ್ಬರು ಮೃತಪಟ್ಟಿದ್ದಾರೆ.

VISTARANEWS.COM


on

By

Accident Case
Koo

ಯಾದಗಿರಿ/ವಿಜಯಪುರ: ಭಾರಿ ಮಳೆಗೆ ವಿದ್ಯುತ್‌ ಕಂಬ ಮುರಿದು (Accident Case) ಬಿದ್ದಿತ್ತು. ಕಂಬ ಜೋಡಣೆ ಮಾಡುವಾಗ ಎಡವಟ್ಟಾಗಿದ್ದು, ಕಂಬ ಏರಿ ರಿಪೇರಿ ಕೆಲಸ ಮಾಡುವಾಗ ಕಾರ್ಮಿಕನಿಗೆ ದಿಢೀರ್‌ ವಿದ್ಯುತ್ ಪ್ರವಹಿಸಿ ಒದ್ದಾಡಿದ್ದಾನೆ. ಯಾದಗಿರಿ ಜಿಲ್ಲೆಯ ಕೆಂಭಾವಿ ಪಟ್ಟಣದಲ್ಲಿ ಘಟನೆ ನಡೆದಿದೆ. ಗಂಭೀರ ಗಾಯಗೊಂಡ ಕಾರ್ಮಿಕ ರಾಯಪ್ಪ ಎಂಬಾತನನ್ನು ಸ್ಥಳೀಯರು ರಕ್ಷಿಸಿ ಕಲಬುರಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಲೈನ್ ಬಂದ್ ಮಾಡಿ ಕೆಲಸ ಮಾಡುತ್ತಿದ್ದಾಗ ಏಕಾಎಕಿ ವಿದ್ಯುತ್‌ ಹರಿದಿದೆ. ಕಾರ್ಮಿಕ ರಾಯಪ್ಪ ನಿಯಂತ್ರಣ ತಪ್ಪಿದ್ದು ಕಂಬದಲ್ಲಿ ನೇತಾಡಿ ಸಹಾಯಕ್ಕಾಗಿ ಅಂಗಲಾಚಿದ್ದಾನೆ. ನಂತರ ವಿದ್ಯುತ್ ಬಂದ್ ಮಾಡಿಸಿ ಸ್ಥಳೀಯರೇ ವಿದ್ಯುತ್‌ ಕಂಬ ಏರಿ ಕಾರ್ಮಿಕನ‌ನ್ನು ರಕ್ಷಣೆ ಮಾಡಿದ್ದಾರೆ. ಕೆಂಭಾವಿ ವಿಭಾಗದ ಜೆಸ್ಕಾಂ ‌ಸಿಬ್ಬಂದಿ ಬೇಜವಾಬ್ದಾರಿತನ ಎಂದು ಸ್ಥಳೀಯರು ಕಿಡಿಕಾರಿದ್ದಾರೆ. ಕೆಂಭಾವಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Electric Shock: ಪಲ್ಲಕ್ಕಿ ಹೊತ್ತಿದ್ದ ಟ್ರ್ಯಾಕ್ಟರ್‌ಗೆ ಪ್ರವಹಿಸಿದ ವಿದ್ಯುತ್‌; ಕ್ಷಣಾರ್ಧದಲ್ಲೇ ಇಬ್ಬರು ಸುಟ್ಟು ಕರಕಲು

ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾಕ್ಕೆ ಇಬ್ಬರು ಬಲಿ

ವಿಜಯಪುರ ಜಿಲ್ಲೆಯ ತಿಕೋಟ ಬಳಿ ಶನಿವಾರ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಅಪಘಾತದಲ್ಲಿ ರಾಮು ರಾಥೋಡ್ ಹಾಗೂ ಕಿಟ್ಟು ಎಂಬುವವರು ಮೃತಪಟ್ಟಿದ್ದಾರೆ. ಮೃತರಿಬ್ಬರು ತೊರವಿ ತಾಂಡಾ ನಿವಾಸಿಗಳೆಂದು ತಿಳಿದುಬಂದಿದೆ. ರತ್ನಾಪುರ ಕ್ರಾಸ್ ಬಳಿ ಅಪಘಾತ ನಡೆದಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ತಿಕೋಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯನಗರದಲ್ಲಿ ಹ್ಯಾಂಡ್‌ ಬ್ರೇಕ್‌ ಹಾಕುವುದು ಮರೆತ ಚಾಲಕ

ವಿಜಯನಗರದ ಹೊಸಪೇಟೆಯ ಹೊರವಲಯದಲ್ಲಿ ಸ್ವಲ್ಪದರಲ್ಲೇ ಭಾರೀ ಅನಾಹುತ ತಪ್ಪಿದೆ. ಲಾರಿ ಹೊಸಪೇಟೆಯಿಂದ ಬೆಂಗಳೂರಿಗೆ ಹೊರಟಿತ್ತು. ಚಾಲಕ ಟೀ ಕುಡಿಯಲು ಲಾರಿ ನಿಲ್ಲಿಸಿದ್ದ ಆದರೆ ಹ್ಯಾಂಡ್ ಬ್ರೇಕ್ ಹಾಕುವುದನ್ನು ಮೆರೆತು ಹೊರಟು ಹೋಗಿದ್ದ. ಈ ವೇಳೆ ಇದ್ದಕ್ಕಿದ್ದಂತೆ ಲಾರಿ ತನ್ನಿಂದ ತಾನೇ ಮುಂದೆ ಹೋಗಿದೆ. ರಸ್ತೆಯ ಎಡಭಾಗದಲ್ಲಿ ನಿಲ್ಲಿಸಿದ ಲಾರಿ, ರಸ್ತೆಯ ಬಲಭಾಗಕ್ಕೆ ಹೋಗಿ ನಿಂತಿದೆ. ಅದೃಷ್ಟವಶಾತ್ ಯಾವುದೇ ವಾಹನಗಳಿಗೆ ಗುದ್ದಿಲ್ಲ, ಯಾರಿಗೂ ಸಮಸ್ಯೆಯೂ ಆಗಿಲ್ಲ. ಹೊಸಪೇಟೆಯ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಜಯಪುರದಲ್ಲಿ ಟ್ರಕ್‌ ಪಲ್ಟಿ

ವಿಜಯಪುರದ ಸಾರವಾಡ ಬಳಿ ಬೃಹತ್ ಟ್ರಕ್ ಪಲ್ಟಿಯಾಗಿದೆ. ತಂಪು ಪಾನೀಯ ತುಂಬಿದ್ದ ಪ್ಲಾಸ್ಟಿಕ್ ಬಾಟಲಿಗಳ ಲೋಡ್ ಕೊಂಡೊಯ್ಯುತ್ತಿದ್ದಾಗ ಚಾಲಕ ನಿಯಂತ್ರಣ ತಪ್ಪಿ ಟ್ರಕ್ ಪಲ್ಟಿಯಾಗಿದೆ. ಟ್ರಕ್‌ನಡಿ ಸಿಲುಕಿದ್ದ ಚಾಲಕನನ್ನು ಸತತ ಒಂದು ತಾಸು ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಲಾಗಿದೆ. ರಕ್ಷಣೆ ನಂತರ ಗಾಯಾಳು ಚಾಲಕನನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಗೋವಾದಿಂದ ಹೈದ್ರಾಬಾದ್ ತೆರಳುತ್ತಿದ್ದಾಗ ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Lok Sabha Election 2024: ಮೈಸೂರು ಕ್ಷೇತ್ರದಲ್ಲಿ ಗೆಲುವು ಯಾರಿಗೆ? ಶ್ವಾನದಿಂದ ಅಚ್ಚರಿಯ ಭವಿಷ್ಯ!

Lok Sabha Election 2024: ಕೇಂದ್ರದಲ್ಲಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿರುವ ಶ್ವಾನ, ಮೈಸೂರು-ಕೊಡಗು ಕ್ಷೇತ್ರದಲ್ಲಿ ಯಾರು ಜಯಭೇರಿ ಬಾರಿಸುತ್ತಾರೆ ಎಂಬುವುದರ ಬಗ್ಗೆಯೂ ಭವಿಷ್ಯ ನುಡಿದಿದೆ.

VISTARANEWS.COM


on

Lok Sabha Election 2024
Koo

ಮೈಸೂರು: 2024ರ ಲೋಕಸಭಾ ಚುನಾವಣೆಯ (Lok Sabha Election 2024) 7ನೇ ಹಂತದ ಮತದಾನ ಶನಿವಾರ ಮುಕ್ತಾಯವಾದ ಬೆನ್ನಲ್ಲೇ ಬಿಡುಗಡೆಯಾದ ಎಕ್ಸಿಟ್‌ ಪೋಲ್‌ಗಳ ಫಲಿತಾಂಶದಲ್ಲಿ ಬಹುತೇಕವು ಕೇಂದ್ರದಲ್ಲಿ ಸತತ ಮೂರನೇ ಬಾರಿ ಬಿಜೆಪಿ ನೇತೃತ್ವದ ಎನ್‌ಡಿಎ, ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂದು ತಿಳಿಸಲಾಗಿದೆ. ಈ ನಡುವೆ ಮೈಸೂರಿನಲ್ಲಿ ಶ್ವಾನವೊಂದು ಫಲಿತಾಂಶದ ಬಗ್ಗೆ ಭವಿಷ್ಯ ನುಡಿದಿದೆ. ಕೇಂದ್ರದಲ್ಲಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿರುವ ಶ್ವಾನ, ಮೈಸೂರು-ಕೊಡಗು ಕ್ಷೇತ್ರದಲ್ಲಿ ಯಾರು ಜಯಭೇರಿ ಬಾರಿಸುತ್ತಾರೆ ಎಂಬುವುದರ ಬಗ್ಗೆಯೂ ತಿಳಿಸಿದೆ.

ದೇಶಾದ್ಯಂತ ಏಳು ಹಂತಗಳಲ್ಲಿ ಮತದಾನ ಮುಗಿದಿದ್ದು, ಫಲಿತಾಂಶಕ್ಕಾಗಿ (ಜೂನ್‌ 4) ಜನರು ಕಾತರಿಂದ ಕಾಯುತ್ತಿದ್ದಾರೆ. ಇದಕ್ಕೂ ಮೊದಲು ನಗರದ ಕೆ.ಟಿ. ಸ್ಟ್ರೀಟ್‌ನ ಕಾಲಭೈರವೇಶ್ವರ ದೇಗುಲದಲ್ಲಿ ಭೈರವ ಎಂಬ 2 ವರ್ಷದ ಶ್ವಾನ ಲೋಕಸಭಾ ಚುನಾವಣೆ ಫಲಿತಾಂಶದ ಬಗ್ಗೆ ಭವಿಷ್ಯ ನುಡಿಯುವ ಮೂಲಕ ಗಮನ ಸೆಳೆದಿದೆ. ಶ್ವಾನದ ಭವಿಷ್ಯ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಇದನ್ನೂ ಓದಿ | MLC Election: ಪರಿಷತ್ ಚುನಾವಣೆ; ಯತೀಂದ್ರ ಸೇರಿ 8 ಅಭ್ಯರ್ಥಿಗಳ ಪಟ್ಟಿ ಘೋಷಿಸಿದ ಕಾಂಗ್ರೆಸ್‌

ಗೋಪಿನಾಥ್ ಎಂಬುವವರು ಸಾಕಿರುವ ಭೈರವ ಶ್ವಾನದ ಮುಂದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಅವರ ಭಾವಚಿತ್ರವಿಟ್ಟಾಗ ಶ್ವಾನ ಮೋದಿ ಅವರ ಭಾವಚಿತ್ರ ಆಯ್ಕೆ ಮಾಡುವ ಮೂಲಕ ಬಿಜೆಪಿ ಮೈತ್ರಕೂಟ ಮತ್ತೊಮ್ಮೆ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದೆ. ಇನ್ನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಎಂ. ಲಕ್ಷ್ಮಣ್ ಹಾಗೂ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಭಾವಚಿತ್ರ ತೋರಿಸಿದಾಗ ಶ್ವಾನ ಯದುವೀರ್ ಭಾವಚಿತ್ರ ಆಯ್ಕೆ ಮಾಡುವ ಮೂಲಕ ಈ ಚುನಾವಣೆಯಲ್ಲಿ ಗೆಲುವು ಯಾರಿಗೆ ಎಂಬುವುದನ್ನು ಸೂಚಿಸಿದೆ.

Exit Poll 2024 : ಕರ್ನಾಟಕದಲ್ಲಿ ಬಿಜೆಪಿಗೆ ನಷ್ಟ, ಕಾಂಗ್ರೆಸ್​ಗೆ ಲಾಭ ; ಜೆಡಿಎಸ್​ಗೆ +1

Exit poll 2024

ಬೆಂಗಳೂರು: ಲೋಕ ಸಭಾ ಚುನಾವಣೆಯಲ್ಲಿ ಈ ಬಾರಿ ಕರ್ನಾಟಕದಲ್ಲಿ ಫಲಿತಾಂಶ ಬಿಜೆಪಿಗೆ 2019ರ ಚುನಾವಣೆಯಷ್ಟು ಪೂರಕವಾಗಿಲ್ಲ (Exit Poll 2024 ) ಎಂದು ಚುನಾವಣೋತ್ತರ ಸಮೀಕ್ಷೆಗಳು ಅಂದಾಜಿಸಿವೆ. ಈ ಬಾರಿ ಕರ್ನಾಟಕದಲ್ಲಿ 18 ಸೀಟುಗಳು ಬಿಜೆಪಿಗೆ ದೊರೆಯಲಿದ್ದು, 8 ಸ್ಥಾನಗಳು ಕಾಂಗ್ರೆಸ್​ಗೆ ದೊರೆಯಲಿವೆ ಎಂದು ಪೋಲ್​​ ಸ್ಟಾಟ್ ಹೇಳಿದೆ. ಜೆಡಿಎಸ್​​ ರೀತಿ ಸ್ಪರ್ಧಿಸಿರುವ ಒಟ್ಟು 3ರಲ್ಲಿ ಎರಡು ಸ್ಥಾನಗಳನ್ನು ಜೆಡಿಎಸ್​ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳಿವೆ. ದೇಶಾದ್ಯಂತ ಬಿಜಪಿಗೆ ಹಿಂದಿಗಿಂತ ಹೆಚ್ಚು ಸೀಟುಗಳು ಸಿಗಲಿವೆ ಎಂಬ ಟ್ರೆಂಡ್ ಇರುವ ಹೊರತಾಗಿಯೂ ಕರ್ನಾಟಕದಲ್ಲಿ ಸ್ವಲ್ಪ ಮಟ್ಟಿಗೆ ಬಿಜೆಪಿಗೆ ಹಿನ್ನಡೆಯಾಗಿದೆ. 2019ರಲ್ಲಿ ಕರ್ನಾಟಕದ 28 ಕ್ಷೇತ್ರಗಳಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದಿದ್ದರೆ ಕಾಂಗ್ರೆಸ್ ಹಾಗೂ ಜೆಡಿಎಸ್​ ತಲಾ ಒಂದು ಸ್ಥಾನವನ್ನು ಹಂಚಿಕೊಂಡಿತ್ತು. ಪಕ್ಷೇತರರಾದ ಸುಮಲತಾ ಅವರು ಮಂಡ್ಯ ಕ್ಷೇತ್ರದಲ್ಲಿ ಗೆದ್ದಿದ್ದರು.

ವಿಸ್ತಾರ ನ್ಯೂಸ್​- COPS ನಡೆಸಿರುವ ಸಮೀಕ್ಷೆಯಲ್ಲಿ ಬಿಜೆಪಿಗೆ 18ರಿಂದ-22 ಸ್ಥಾನಗಳು ದೊರಕಿದೆ, ಕಾಂಗ್ರೆಸ್​ಗೆ 08ರಿಂದ 10 ಸ್ಥಾನಗಳು ಲಭಿಸಲಿವೆ. ಜೆಡಿಎಸ್​ಗೆ 2ರಿಂದ 3 ಸ್ಥಾನ ಸಿಗುವುದು ಎಂದು ಹೇಳಲಾಗಿದೆ. ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿ 20ರಿಂದ 22, ಕಾಂಗ್ರೆಸ್ 3ರಿಂದ 5 ಮತ್ತು ಜೆಡಿಎಸ್ 3 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ . ಇಂಡಿಯಾ ಟುಡೆ ಪ್ರಕಾರ ಕರ್ನಾಟದಲ್ಲಿ ಬಿಜೆಪಿಗೆ 23ರಿಂದ 25 ಹಾಗೂ ಕಾಂಗ್ರೆಸ್​ಗೆ 04ರಿಂದ 05 ಹಾಗೂ ಜೆಡಿಎಸ್​ಗೆ 1ರಿಂದ 3ಸ್ಥಾನ ಸಿಗಲಿದೆ ಎಂದು ಅಂದಾಜಿಸಿದೆ.

ಜನ್​ಕಿ ಬಾತ್​ ಸಮೀಕ್ಷೆ ಪ್ರಕಾರ ಬಿಜೆಪಿಗೆ 17ರಿಂದ 23 ಹಾಗೂ ಕಾಂಗ್ರೆಸ್​ಗೆ 4ರಿಂದ 8 ಹಾಗೂ ಜೆಡಿಎಸ್​ಗೆ 1ರಿಂದ 2 ಸ್ಥಾನ ಸಿಗಬಹುದು ಅಂದಾಜಿಸಿದೆ. ಜಿ ನ್ಯೂಸ್ ಪ್ರಕಾರ ಬಿಜೆಪಿಗೆ 18ರಿಂದ22, ಕಾಂಗ್ರೆಸ್​ಗೆ 4ರಿಂದ 5 ಹಾಗೂ ಜೆಡಿಎಸ್​​ 01ರಿಂದ 3 ಸೀಟುಗಳು ಸಿಗಲಿವೆ.

ಇದನ್ನೂ ಓದಿ: Exit Poll 2024: ಮೋದಿ ಹ್ಯಾಟ್ರಿಕ್‌ ಖಚಿತ, ಇಂಡಿಯಾ ಒಕ್ಕೂಟಕ್ಕೆ ಸೋಲು ನಿಶ್ಚಿತ; ಇಲ್ಲಿದೆ ಎಕ್ಸಿಟ್‌ ಪೋಲ್‌ ವರದಿ

ಅಭ್ಯರ್ಥಿಗಳ ಆಯ್ಕೆ ಮತ್ತು ಕೆಲವೊಂದು ಗೊಂದಲಗಳ ಕಾರಣ ಕರ್ನಾಟಕದಲ್ಲಿ ಬಿಜೆಪಿಗೆ ಹಿನ್ನಡೆಯಾಗುವುದು ಎಂಬುದಾಗಿ ರಾಜಕೀಯ ವಿಶ್ಲೇಷಕರು ಈ ಹಿಂದೆಯೇ ಅಂದಾಜಿಸಿದ್ದರು. ಚುನಾವಣೋತ್ತರ ಸಮೀಕ್ಷೆಯಲ್ಲೂ ಅದು ಪ್ರತಿಫಲನಗೊಂಡಿದೆ. ಬಿಜೆಪಿ ಕಳೆದ ಬಾರಿಗಿಂತ 3ರಿಂದ 5 ಸ್ಥಾನಗಳನ್ನು ಕಳೆದುಕೊಳ್ಳುವ ಸಾಧ್ಯತೆಗಳು ಕಂಡಿವೆ. ಏತನ್ಮಧ್ಯೆ ಕಾಂಗ್ರೆಸ್​ ತನಗೆ ಭಾಗ್ಯಗಳು ಕೈ ಹಿಡಿಯಬಹುದು ಎಂದು ಅಂದಾಜಿಸಿತ್ತು. ಹೀಗಾಗಿ 10ಕ್ಕಿಂತಲೂ ಹೆಚ್ಚು ಸ್ಥಾನವನ್ನು ಗೆಲ್ಲಬಲ್ಲೆವು ಎಂದು ಆಂತರಿಕವಾಗಿ ಹೇಳಿಕೊಂಡಿತ್ತು. ಆದರೆ, ಅವರ ಲೆಕ್ಕಾಚಾರವೂ ತಪ್ಪಾಗಿದೆ. ಇವೆಲ್ಲದರ ನಡುವೆ ಜೆಡಿಎಸ್​ ಬಿಜೆಪಿ ಜತೆಗಿನ ಮೈತ್ರಿಯ ಸಂಪೂರ್ಣ ಲಾಭವನ್ನು ಪಡೆದುಕೊಳ್ಳುವ ಸಾಧ್ಯತೆಗಳಿವೆ. ಸಮೀಕ್ಷೆಗಳ ಪ್ರಕಾರ ಈ ಪಕ್ಷ ಕನಿಷ್ಠ2 ಸೀಟ್​ ಗೆಲ್ಲುವು ಖಾತರಿ. ಇನ್ನೊಂದು ಸೀಟ್​ ಕೂಡ ಅವರ ಪರವಾಗಬಹುದು ಎಂದು ಹೇಳಲಾಗಿದೆ.

2024 ರ ಲೋಕಸಭಾ ಚುನಾವಣೆ ಎರಡು ಪ್ರಮುಖ ಮೈತ್ರಿಕೂಟಗಳಾದ ಬಿಜೆಪಿ ನೇತೃತ್ವದ ಎನ್ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಎನ್ಡಿಎ ಬಣಗಳ ನಡುವೆ ತೀವ್ರ ಹೋರಾಟವಾಗಿ ರೂಪುಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಸತತ ಮೂರನೇ ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ನಿರ್ಧರಿಸಿದ್ದರೆ, ಬಿಜೆಪಿ ಮೈತ್ರಿಕೂಟವು ಅಸಮಾಧಾನದ ಗೆಲುವನ್ನು ಸಂಘಟಿಸಲು ದಣಿವರಿಯದೆ ಕೆಲಸ ಮಾಡುತ್ತಿದೆ. ಈ ಚುನಾವಣೆಯ ಫಲಿತಾಂಶವು ರಾಷ್ಟ್ರದ ರಾಜಕೀಯ ಭೂದೃಶ್ಯದ ಮೇಲೆ ದೂರಗಾಮಿ ಪರಿಣಾಮಗಳನ್ನು ಬೀರುತ್ತದೆ.

ಕರ್ನಾಟಕದಲ್ಲಿ ಹೀಗಿದೆ ಚುನಾವಣಾ ಫಲಿತಾಂಶ ಸಮೀಕ್ಷೆ

  • ವಿಸ್ತಾರ-COPS: ಬಿಜೆಪಿ 18-20, ಕಾಂಗ್ರೆಸ್‌ 8-10, ಜೆಡಿಎಸ್‌ 2-3
  • ಜನ್ ಕೀ ಬಾತ್: ಬಿಜೆಪಿ 17-23, ಕಾಂಗ್ರೆಸ್ 4-8, ಜೆಡಿಎಸ್ 1-2
  • ಝೀ ನ್ಯೂಸ್: ಬಿಜೆಪಿ 18-22, ಕಾಂಗ್ರೆಸ್ 4-6, ಜೆಡಿಎಸ್ 1-3
  • CNN ನ್ಯೂಸ್ 18: ಬಿಜೆಪಿ 21-23, ಕಾಂಗ್ರೆಸ್ 3-7, ಜೆಡಿಎಸ್ 2-3
  • ಪೋಲ್‌ಸ್ಟ್ರಾಟ್‌: ಬಿಜೆಪಿ 18, ಕಾಂಗ್ರೆಸ್-08, ಜೆಡಿಎಸ್-02 ಸ್ಥಾನ
  • ಇಂಡಿಯಾ ಟಿವಿ: ಬಿಜೆಪಿ 18-22, ಕಾಂಗ್ರೆಸ್‌ 4-8, ಜೆಡಿಎಸ್‌ 1-3
  • ಸಿ-ವೋಟರ್: ಬಿಜೆಪಿ 21-22, ಕಾಂಗ್ರೆಸ್ 3-5, ಜೆಡಿಎಸ್ 1-3
  • ಇಂಡಿಯಾ ಟುಡೇ: ಬಿಜೆಪಿ 20-22, ಕಾಂಗ್ರೆಸ್ 3-5, ಜೆಡಿಎಸ್ 2-3
  • ಪೋಲ್ ಆಫ್ ಪೋಲ್: ಬಿಜೆಪಿ-20, ಕಾಂಗ್ರೆಸ್-6, ಜೆಡಿಎಸ್-2
  • ಟೈಮ್ಸ್ ನೌ: ಬಿಜೆಪಿ 21-25, ಕಾಂಗ್ರೆಸ್ 3-7, ಜೆಡಿಎಸ್ 1-2
  • ಇಂಡಿಯಾ ನ್ಯೂಝ್: ಬಿಜೆಪಿ-21, ಕಾಂಗ್ರೆಸ್-5, ಜೆಡಿಎಸ್-2
  • ನ್ಯೂಸ್ ನೇಷನ್: ಬಿಜೆಪಿ-16, ಕಾಂಗ್ರೆಸ್-10, ಜೆಡಿಎಸ್-02
  • ನ್ಯೂಸ್ 24-ಟುಡೇಸ್ ಚಾಣಕ್ಯ: ಬಿಜೆಪಿ-ಜೆಡಿಎಸ್ 24, ಕಾಂಗ್ರೆಸ್-4
Continue Reading

ಬೆಂಗಳೂರು

CET Ranking : ಸಿಇಟಿ ರ‍್ಯಾಂಕಿಂಗ್‌ನಲ್ಲಿ ಎಂಜಿನಿಯರಿಂಗ್‌ನ 10 ಟಾಪರ್ಸ್‌ಗಳು ಬೆಂಗಳೂರಿನ ವಿದ್ಯಾರ್ಥಿಗಳು!

CET Ranking : ರಾಜ್ಯಾದ್ಯಂತ ನಡೆದ ಸಿಇಟಿ ಪರೀಕ್ಷೆಯ ಫಲಿತಾಂಶವು ಶನಿವಾರ ಪ್ರಕಟಗೊಂಡಿದೆ. ವಿವಿಧ ಕೋರ್ಸ್‌ಗಳಲ್ಲಿ ಹೆಚ್ಚು ರ‍್ಯಾಂಕ್‌ಗಳನ್ನು ಬೆಂಗಳೂರಿನ ಅಭ್ಯರ್ಥಿಗಳೇ ಪಡೆದಿದ್ದಾರೆ. ಎಂಜಿನಿಯರಿಂಗ್‌ನ ಟಾಪ್‌ 10ನಲ್ಲಿ ಹತ್ತು ಟಾಪರ್ಸ್‌ಗಳು ಬೆಂಗಳೂರಿಗರೇ ಆಗಿದ್ದಾರೆ.

VISTARANEWS.COM


on

By

CET Ranking
ಸಿಇಟಿ ಟಾಪರ್ಸ್‌
Koo

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳಿಗಾಗಿ ನಡೆದಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶದಲ್ಲಿ ಬೆಂಗಳೂರಿನ ವಿದ್ಯಾರ್ಥಿಗಳೇ ಹೆಚ್ಚು ರ‍್ಯಾಂಕ್‌ (CET Ranking) ಪಡೆದಿದ್ದಾರೆ. ಎಂಜಿನಿಯರಿಂಗ್‌ನಲ್ಲಿ ಹತ್ತಕ್ಕೆ ಹತ್ತು ಟಾಪರ್ಸ್‌ಗಳು ಬೆಂಗಳೂರಿನವರೇ ಆಗಿದ್ದಾರೆ. ಅದರಲ್ಲೂ ಇಂಜಿನಿಯರಿಂಗ್ ರ‍್ಯಾಂಕ್‌ನ 10ರಲ್ಲಿ ಟಾಪ್ 9 ಬಾಲಕರೇ ಇದ್ದಾರೆ. ಇನ್ನೂ ವಿವಿಧ ಕೋರ್ಸ್‌ಗಳಲ್ಲಿ 45 ಮಂದಿ ಬೆಂಗಳೂರಿನವರೇ ಟಾಪರ್ಸ್‌ ಆಗಿದ್ದಾರೆ.

ಎಂಜಿನಿಯರಿಂಗ್‌ನಲ್ಲಿ ಬೆಂಗಳೂರಿನ ಸಹಕಾರ ನಗರದ ನಾರಾಯಣ ಒಲಿಂಪಿಯಾಡ್‌ ಶಾಲೆಯ ಹರ್ಷ ಕಾರ್ತಿಕೇಯ ವುಟುಕುರಿ ಮೊದಲ ರ‍್ಯಾಂಕ್‌ ಪಡೆದಿದ್ದಾನೆ. ಜತೆಗೆ ಬಿ.ಫಾರ್ಮಾ ಹಾಗೂ ಫಾರ್ಮ್ ಡಿಯಲ್ಲೂ 2ನೇ ರ‍್ಯಾಂಕ್‌ ಪಡೆದಿದ್ದಾನೆ.

ಇವ್ರೇ ಎಂಜಿನಿಯರಿಂಗ್‌ನಲ್ಲಿ ಟಾಪರ್ಸ್‌

1) ಹರ್ಷ ಕಾರ್ತಿಕೇಯ ವುಟುಕುರಿ – ನಾರಾಯಣ ಒಲಿಂಪಿಯಾಡ್ ಶಾಲೆ
2) ಮನೋಜ್ ಸೋಹನ್ ಗಜುಲಾ- ಶ್ರೀ ಚೈತನ್ಯ ಟೆಕ್ನೋ ಸ್ಕೂಲ್
3) ಅಭಿನವ್ ಪಿ.ಜೆ -ನೆಹರು ಸ್ಮಾರಕ ವಿದ್ಯಾಲಯ’
4)ಸನಾ ತಬಸ್ಸುಮ್- ನಾರಾಯಣ ಪಿಯು ಕಾಲೇಜು
5) ಅನಿಮೇಶ್ ಸಿಂಗ್ ರಾಥೋಡ್- ಶ್ರೀ ಚೈತನ್ಯ ಟೆಕ್ನೋ ಶಾಲೆ
6)ಪ್ರಭಾವ್ ಪಿ- ಆರ್ ವಿ ಪಿಯು ಕಾಲೇಜು
7)ವಿದೀಪ್ ರೆಡ್ಡಿ ಜಲಪಲ್ಲಿ-ದೆಹಲಿ ಪಬ್ಲಿಕ್ ಸ್ಕೂಲ್
8) ಶಾನ್ ಥಾಮಸ್ ಕೋಶಿ- ಗೇರ್ ಇನ್ನೋವೇಟಿವ್‌ ಇಂಟರ್‌ನ್ಯಾಷನಲ್
9) ವಾರಣಾಸಿ ಕಾರ್ತಿಕೇಯ ಶ್ರೀರಾಮ್- ಎಚ್ಎಂಆರ್ ನ್ಯಾಷನಲ್ ಪಿಯು
ಕಾಲೇಜು
10) ಸಾಗರ್ – ಡೆಲ್ಲಿ ಪಬ್ಲಿಕ್ ಸ್ಕೂಲ್

ಇದನ್ನೂ ಓದಿ: CET Ranking : 3 ಸಾವಿರ ಅಭ್ಯರ್ಥಿಗಳಿಗೆ ಸಿಕ್ಕಿಲ್ಲ ಸಿಇಟಿ ರ‍್ಯಾಂಕ್‌! ಮುಂದೇನು ಮಾಡ್ಬೇಕು?

ಬ್ಯಾಚುಲರ್ ಆಫ್ ನ್ಯಾಚುರೋಪತಿ & ಯೋಗ ಸೈನ್ಸಸ್

ಟಾಪ್‌ 3 ಪ್ರೀತಂ ರಾವಳಪ್ಪ ಪನಸುದಕರ್- ಶೇಷಾದ್ರಿಪುರಂ ಕಾಂಪ್ ಪಿಯು
ಟಾಪ್‌ 4 ವಜ್ರಕಾಂತ್ ಮಿರಗಿ – ನಾರಾಯಣ ಪಿಯು ಕಾಲೇಜು
ಟಾಪ್‌ 5 ಸ್ನೇಹಾ ಎದಾಯತ್ -ಕೇಂದ್ರೀಯ ವಿದ್ಯಾಲಯ
ಟಾಪ್‌ 7 ನೈತಿಕ್ ಜೈನ್-ಆರ್ ವಿ ಪಿಯು ಕಾಲೇಜು
ಟಾಪ್‌ 8 ಸುಷ್ಮಾ ಅಮರೇಶ- ಜಿ ಆರ್ ಪಿ ಯು ಕಾಲೇಜು
ಟಾಪ್‌ 9 ಶಶಾಂಕ್ ಎ. ವಿದ್ಯಾಮಂದಿರ್ ಪಿಯು ಕಾಲೇಜು

ಬಿಎಸ್ಸಿ (ಕೃಷಿ)

  • ಟಾಪ್‌ 3 ಅನಿಮೇಶ್ ಸಿಂಗ್ ರಾಥೋಡ್-ಶ್ರೀ ಚೈತನ್ಯ ಟೆಕ್ನೋ ಶಾಲೆ
  • ಟಾಪ್‌ 6 ಆದಿತ್ಯ ಎ-ಶ್ರೀ ಚೈತನ್ಯ ಟೆಕ್ನೋ ಶಾಲೆ
  • ಟಾಪ್‌ 10 ಸ್ಕಂದ ಪಿ -ದೀಕ್ಷಾ ಸಿಎಫ್‌ಎಲ್ ಪಿಯು ಕಾಲೇಜು

ವೆಟರ್ನರಿ

ಟಾಪ್‌ 1 ಕಲ್ಯಾಣ್ ವಿ- ಶ್ರೀ ಚೈತನ್ಯ ಟೆಕ್ನೋ ಸ್ಕೂಲ್
ಟಾಪ್‌ 2 ಡಿ ಎನ್ ನಿತಿನ್ – ನಾರಾಯಣ ಇ ಟೆಕ್ನೋ ಶಾಲೆ
ಟಾಪ್‌ 4 ಧ್ರುವ ಅವಸ್ಥಿ- ನಾರಾಯಣ ಇ ಟೆಕ್ನೋ ಶಾಲೆ
ಟಾಪ್‌ 5 ಸ್ನೇಹಾ ಎದಾಯತ್ -ಕೇಂದ್ರೀಯ ವಿದ್ಯಾಲಯ
ಟಾಪ್‌ 7 ವಜ್ರಕಾಂತ್ ಮಿರಗಿ – ನಾರಾಯಣ ಪಿಯು ಕಾಲೇಜು
ಟಾಪ್‌ 10 ಅಕ್ಷತ್ ಮಿಶ್ರಾ- ನಾರಾಯಣ ಇ ಟೆಕ್ನೋ ಶಾಲೆ

ಇದನ್ನೂ ಓದಿ: ನೀಟ್ ಫಲಿತಾಂಶದ ಬಳಿಕ ಎಂಜಿನಿಯರ್ ಸೀಟು ಹಂಚಿಕೆ; 1.24 ಲಕ್ಷ ಸೀಟುಗಳು ಲಭ್ಯ, ಆನ್ ಲೈನ್ ಪ್ರಕ್ರಿಯೆ

ಬಿ.ಫಾರ್ಮಾ

ಟಾಪ್‌ 1 ಕಲ್ಯಾಣ್ ವಿ- ಶ್ರೀ ಚೈತನ್ಯ ಟೆಕ್ನೋ ಸ್ಕೂಲ್
ಟಾಪ್‌ 2 ಹರ್ಷ ಕಾರ್ತಿಕೇಯ ವುಟುಕುರಿ – ನಾರಾಯಣ ಒಲಿಂಪಿಯಾಡ್ ಶಾಲೆ
ಟಾಪ್‌ 3 ಡಿ ಎನ್ ನಿತಿನ್ – ನಾರಾಯಣ ಇ ಟೆಕ್ನೋ ಶಾಲೆ
ಟಾಪ್‌ 4 ಸ್ನೇಹಾ ಎದಾಯತ್ -ಕೇಂದ್ರೀಯ ವಿದ್ಯಾಲಯ
ಟಾಪ್‌ 6 ಧ್ರುವ ಅವಸ್ಥಿ- ನಾರಾಯಣ ಇ ಟೆಕ್ನೋ ಶಾಲೆ
ಟಾಪ್‌ 7 ಮನೋಜ್ ಸೋಹನ್ ಗಜುಲಾ- ಶ್ರೀ ಚೈತನ್ಯ ಟೆಕ್ನೋ ಸ್ಕೂಲ್
ಟಾಪ್‌ 9 ವಜ್ರಕಾಂತ್ ಮಿರಗಿ – ನಾರಾಯಣ ಪಿಯು ಕಾಲೇಜು

ಫಾರ್ಮ್.ಡಿ

ಟಾಪ್‌ 1 ಕಲ್ಯಾಣ್ ವಿ- ಶ್ರೀ ಚೈತನ್ಯ ಟೆಕ್ನೋ ಸ್ಕೂಲ್
ಟಾಪ್‌ 2 ಹರ್ಷ ಕಾರ್ತಿಕೇಯ ವುಟುಕುರಿ – ನಾರಾಯಣ ಒಲಿಂಪಿಯಾಡ್ ಶಾಲೆ
ಟಾಪ್‌ 3 ಡಿ ಎನ್ ನಿತಿನ್ – ನಾರಾಯಣ ಇ ಟೆಕ್ನೋ ಶಾಲೆ
ಟಾಪ್‌ 4 ಸ್ನೇಹಾ ಎದಾಯತ್ -ಕೇಂದ್ರೀಯ ವಿದ್ಯಾಲಯ
ಟಾಪ್‌ 6 ಧ್ರುವ ಅವಸ್ಥಿ- ನಾರಾಯಣ ಇ ಟೆಕ್ನೋ ಶಾಲೆ
ಟಾಪ್‌ 7 ಮನೋಜ್ ಸೋಹನ್ ಗಜುಲಾ- ಶ್ರೀ ಚೈತನ್ಯ ಟೆಕ್ನೋ ಸ್ಕೂಲ್
ಟಾಪ್‌ 9 ವಜ್ರಕಾಂತ್ ಮಿರಗಿ – ನಾರಾಯಣ ಪಿಯು ಕಾಲೇಜು

ಬಿಎಸ್ಸಿ ನರ್ಸಿಂಗ್

ಟಾಪ್‌ 1 ಕಲ್ಯಾಣ್ ವಿ- ಶ್ರೀ ಚೈತನ್ಯ ಟೆಕ್ನೋ ಸ್ಕೂಲ್
ಟಾಪ್‌ 2 ಡಿ ಎನ್ ನಿತಿನ್ – ನಾರಾಯಣ ಇ ಟೆಕ್ನೋ ಶಾಲೆ
ಟಾಪ್‌ 4 ಧ್ರುವ ಅವಸ್ಥಿ- ನಾರಾಯಣ ಇ ಟೆಕ್ನೋ ಶಾಲೆ
ಟಾಪ್‌ 5 ಸ್ನೇಹಾ ಎದಾಯತ್ -ಕೇಂದ್ರೀಯ ವಿದ್ಯಾಲಯ
ಟಾಪ್‌ 7 ವಜ್ರಕಾಂತ್ ಮಿರಗಿ – ನಾರಾಯಣ ಪಿಯು ಕಾಲೇಜು
ಟಾಪ್‌ 10 ಅಕ್ಷತ್ ಮಿಶ್ರಾ- ನಾರಾಯಣ ಇ ಟೆಕ್ನೋ ಶಾಲೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Raichur Lok Sabha Constituency
ರಾಯಚೂರು4 mins ago

Raichur Lok Sabha Constituency: ರಾಯಚೂರಿನಲ್ಲಿ ನಾಯಕರ ನಡುವಿನ ಕಾಳಗದಲ್ಲಿ ಯಾರು ರಾಜ?

Accident Case
ಕ್ರೈಂ13 mins ago

Accident Case : ಕರೆಂಟ್‌ ಶಾಕ್‌ಗೆ ಕಂಬದಲ್ಲೇ ಕಾರ್ಮಿಕನ ನರಳಾಟ; ಭೀಕರ ಅಪಘಾತಕ್ಕೆ ಇಬ್ಬರು ಬಲಿ

Lok Sabha Election 2024
ಕರ್ನಾಟಕ28 mins ago

Lok Sabha Election 2024: ಮೈಸೂರು ಕ್ಷೇತ್ರದಲ್ಲಿ ಗೆಲುವು ಯಾರಿಗೆ? ಶ್ವಾನದಿಂದ ಅಚ್ಚರಿಯ ಭವಿಷ್ಯ!

Aam Panna Recipe
ಆಹಾರ/ಅಡುಗೆ33 mins ago

Aam Panna Recipe: ಆಮ್‌ ಪನ್ನಾ! ಮಾವಿನಕಾಯಿಯ ಅದ್ಭುತ ಪೇಯ ಇದು; ನೀವೂ ಮಾಡಿ ನೋಡಿ

Arvind Kejriwal
ದೇಶ52 mins ago

Arvind Kejriwal: ತಿಹಾರ್‌ ಜೈಲಿಗೆ ಮರಳಿದ ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌; ಜೂ. 5ರಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ

GST Collection
ವಾಣಿಜ್ಯ53 mins ago

GST Collection: ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ ನಂ. 2; ಇಲ್ಲಿ ಸಂಗ್ರಹವಾಗಿದ್ದು ಎಷ್ಟು?

Kamal Haasan gives a fiery speech at Indian 2 event
ಕಾಲಿವುಡ್53 mins ago

Kamal Haasan: ತಮಿಳಿಗನೊಬ್ಬ ದೇಶ ಆಳುವ ದಿನ ಏಕೆ ಬರಬಾರದು? ಕಮಲ್‌ ಹಾಸನ್‌ ಪ್ರಶ್ನೆ!

CET Ranking
ಬೆಂಗಳೂರು1 hour ago

CET Ranking : ಸಿಇಟಿ ರ‍್ಯಾಂಕಿಂಗ್‌ನಲ್ಲಿ ಎಂಜಿನಿಯರಿಂಗ್‌ನ 10 ಟಾಪರ್ಸ್‌ಗಳು ಬೆಂಗಳೂರಿನ ವಿದ್ಯಾರ್ಥಿಗಳು!

Bangalore Central ElectionWill PC Mohan's unbeaten run continue in Bengaluru Central Lok Sabha constituency?
ಪ್ರಮುಖ ಸುದ್ದಿ1 hour ago

Bangalore Central Election : ಮನ್ಸೂರ್ ಅಲಿ ಖಾನ್ ವಿರುದ್ಧ ಗೆದ್ದು ಅಜೇಯ ಓಟ ಮುಂದುವರಿಸುವರೇ ಪಿ. ಸಿ ಮೋಹನ್​

Denim Tube Tops Fashion
ಫ್ಯಾಷನ್1 hour ago

Denim Tube Tops Fashion: ಡೆನಿಮ್‌ನಲ್ಲೂ ಬಂತು ಟ್ಯೂಬ್‌ ಟಾಪ್ ಫ್ಯಾಷನ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ7 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 day ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌