Best of Chitradurga : ಚಿತ್ರದುರ್ಗದ ಪ್ರವಾಸವೆಂದರೆ ಈ ಎಲ್ಲ ಸ್ಥಳಗಳನ್ನು ನೋಡಲೇಬೇಕು - Vistara News

ಚಿತ್ರದುರ್ಗ

Best of Chitradurga : ಚಿತ್ರದುರ್ಗದ ಪ್ರವಾಸವೆಂದರೆ ಈ ಎಲ್ಲ ಸ್ಥಳಗಳನ್ನು ನೋಡಲೇಬೇಕು

ಚಿತ್ರದುರ್ಗ ( Best of Chitradurga) ಇತಿಹಾಸ ಪ್ರಸಿದ್ಧ ಜಿಲ್ಲೆಯಾಗಿದೆ. ಇಲ್ಲಿಗೆ ಪ್ರವಾಸ ನೀಡುವವರ ನೋಡಲೇಬೇಕಾದ ಕೆಲವು ಸ್ಥಳಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

chitradurga tourist places
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ ಕೋಟೆಯ ನಾಡು. ವೇದಾವತಿ ನದಿ ಕಣಿವೆಯಲ್ಲಿರುವ ಈ ಜಿಲ್ಲೆಯ ಐತಿಹಾಸಿಕ ಮಹತ್ವವನ್ನೂ ಹೊಂದಿರುವ ಜಿಲ್ಲೆ. ಈ ಜಿಲ್ಲೆಯಲ್ಲಿ ಹಲವಾರು ಪ್ರವಾಸಿ ತಾಣಗಳಿದ್ದು(Best of Chitradurga), ಅವು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತವೆ. ಒಂದು ವೇಳೆ ನೀವು ಕೂಡ ಚಿತ್ರದುರ್ಗದ ಪ್ರವಾಸಕ್ಕೆ ಹೋಗಬೇಕೆನ್ನುವ ಯೋಚನೆಯಲ್ಲಿದ್ದರೆ, ನಿಮಗೆಂದೇ ಅಲ್ಲಿನ ಸ್ಥಳಗಳ ಕುರಿತಾಗಿ ಸಂಪೂರ್ಣ ಮಾಹಿತಿಯನ್ನು ನಾವಿಲ್ಲಿ ಕೊಡುತ್ತಿದ್ದೇವೆ.

ಚಿತ್ರದುರ್ಗದ ಪ್ರವಾಸಿ ಸ್ಥಳಗಳು:

ನಾಯಕನಹಟ್ಟಿ ದೇವಸ್ಥಾನ

Nayakanahatti Thipperudra Swamy temple
Adumalleshwara Temple and zoo


ಚಿತ್ರದುರ್ಗದ ಸೌಂದರ್ಯವನ್ನು ಸವಿಯಲು ನಾಯಕನಹಟ್ಟಿ ದೇವಸ್ಥಾನ ಒಂದು ಸೂಕ್ತ ಸ್ಥಳ ಎನ್ನಬಹುದು. ಇಲ್ಲಿ ಪ್ರಸಿದ್ಧ ಋಷಿ ತಿಪ್ಪೇರುದ್ರಸ್ವಾಮಿಯನ್ನು ಪೂಜಿಸಲಾಗುತ್ತದೆ. ಈ ದೇವಾಲಯವು ಚಿತ್ರದುರ್ಗ ನಗರದಿಂದ ಸುಮಾರು 35ಕಿ.ಮೀ. ದೂರದಲ್ಲಿದೆ. ಇದೇ ಸ್ಥಳದಲ್ಲಿ ತಿಪ್ಪೇರುದ್ರಸ್ವಾಮಿ ಅವರ ಸಮಾಧಿಯೂ ಇದೆ ಎಂದು ಹೇಳಲಾಗುತ್ತದೆ.

ದಶರಥ ರಾಮೇಶ್ವರ ದೇವಸ್ಥಾನ

Sri Dasharatha Rameshwara Vajra temple
Adumalleshwara Temple and zoo


ದಶರಥ ರಾಮೇಶ್ವರ ದೇವಸ್ಥಾನವನ್ನು ಸ್ಥಳೀಯವಾಗಿ ವರ್ಜ್ರ ದೇವಾಲಯ ಎನ್ನುವ ಹೆಸರಿನಿಂದಲೂ ಕರೆಯಲಾಗುತ್ತದೆ. ದಶರಥ ರಾಜನು ತನ್ನ ಮಗ ಸಂತ ಶ್ರವಣನ ಹತ್ಯೆಗೆ ಪ್ರಾಯಶ್ಚಿತ್ತವಾಗಿ ಈ ದೇವಾಲಯವನ್ನು ನಿರ್ಮಿಸಿದನೆಂದು ಹೇಳಲಾಗುತ್ತದೆ. ದಶರಥ ರಾಜ ಮತ್ತು ಅವನ ಮಗ ರಾಮ ಇಲ್ಲಿ ಶಿವಲಿಂಗವನ್ನು ಪ್ರತಿಷ್ಠಾಪಿಸಿದರು ಎಂದು ಪುರಾಣ ಹೇಳುತ್ತದೆ.

ಇದನ್ನೂ ಓದಿ: ಹಿಮಾಚಲ ಪ್ರವಾಹದ ಮಧ್ಯೆಯೇ ಆನ್​​ಲೈನ್​ ಮದುವೆ; ವಿಡಿಯೊ ಕಾನ್ಫರೆನ್ಸ್​​ನಲ್ಲೇ ಮುಗಿದ ಶಾಸ್ತ್ರಗಳು

ಹೊಳಲ್ಕೆರೆ

holalkere jade ganapathi temple
Adumalleshwara Temple and zoo


ಹೊಳಲ್ಕೆರೆಯು ಚಿತ್ರದುರ್ಗದ ತಾಲೂಕಾಗಿದೆ. ಇಲ್ಲಿನ ನಗರದ ಬಳಿಯೇ 9 ಅಡಿ ಎತ್ತರದ ಬಾಲ ಗಣಪತಿಯ ದೇಗುಲವಿದೆ. ಇದಕ್ಕೆ ಜಡೆ ಗಣಪತಿ ಎನ್ನುವ ಹೆಸರೂ ಇದೆ. ಚಿತ್ರದುರ್ಗ ಪಟ್ಟಣದಿಂದ ಈ ದೇಗುಲವು 35 ಕಿ.ಮೀ.ಗಳಷ್ಟು ದೂರದಲ್ಲಿದೆ. ಅದಷ್ಟೇ ಅಲ್ಲದೆ ಇದೇ ನಗರದಲ್ಲಿ 13 ಅಡಿ ಎತ್ತರದ ಶಿವನ ಪ್ರತಿಮೆಯನ್ನೂ ನೀವು ಕಾಣಬಹುದು. ಇಲ್ಲಿ ಆಣೆಕಟ್ಟೂ ಇದ್ದು, ಪ್ರವಾಸಿಗರನ್ನು ಆಕರ್ಷಿಸುವ ನಗರ ಇದಾಗಿದೆ.

ಜೋಗಿಮಟ್ಟಿ

Jogimatti Forest Area
Adumalleshwara Temple and zoo


ಚಿತ್ರದುರ್ಗದ ಸಮೀಪದಲ್ಲಿಯೇ ನೀವು ಜೋಗಿಮಟ್ಟಿ ಅರಣ್ಯ ಪ್ರದೇಶವನ್ನು ಕಾಣಬಹುದು. ಇಲ್ಲಿ ಅನೇಕ ರೀತಿಯ ಜೀವವೈವಿಧ್ಯಗಳಿವೆ. ಇಲ್ಲಿನ ಹಿಮವತ್ಕೇದ್ರಾ ಜಲಪಾತ ನಿಮ್ಮ ಕಣ್ಣುಗಳನ್ನು ಇನ್ನಷ್ಟು ತಂಪಾಗಿಸುತ್ತದೆ. ಜಲಪಾತದ ಸಮೀಪವಿರುವ ಗುಹೆಯಲ್ಲಿ ಶಿವಲಿಂಗ ಮತ್ತು ಬಸವಣ್ಣ ಮತ್ತು ವೀರಭದ್ರನ ಮೂರ್ತಿಗದ್ದು, ಇದು ಇಲ್ಲಿನ ಪ್ರಮುಖ ಆಕರ್ಷಣೆಯಾಗಿದೆ. ಈ ಅರಣ್ಯ ಪ್ರದೇಶದಲ್ಲಿ ನೀವು ವಿವಿಧ ಜಾರಿಯ ವನ್ಯಜೀವಿಗಳನ್ನೂ ನೋಡಬಹುದಾಗಿದೆ.

ಇದನ್ನೂ ಓದಿ: Sakleshpur Places To Visit : ಸ್ವರ್ಗದಂತಹ ಸಕಲೇಶಪುರದಲ್ಲಿ ಈ ಸ್ಥಳಗಳನ್ನು ಮಿಸ್‌ ಮಾಡಲೇಬಾರದು

ಹಾಲು ರಾಮೇಶ್ವರ ದೇವಸ್ಥಾನ

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನಲ್ಲಿ ಹಾಲು ರಾಮೇಶ್ವರನ ದೇವಾಲಯವಿದೆ. ಈ ದೇವಾಲಯದಲ್ಲಿ ಶ್ರೀ ರಾಮನ ಶಿವನನ್ನು ಪೂಜಿಸುತ್ತಿದ್ದ ಎಂದು ಹೇಳಲಾಗುತ್ತದೆ. ಹಾಗಾಗಿ ಇದು ರಾಮನ ಭಕ್ತರ ಜತೆ ಶಿವನ ಭಕ್ತರನ್ನೂ ಸೆಳೆಯುವ ಸ್ಥಳವಾಗಿದೆ. ದೇವಾಲಯದ ಸುತ್ತಲಿನ ಪ್ರದೇಶ ಪ್ರಶಾಂತವಾಗಿದ್ದು, ನೀವಿಲ್ಲಿ ಶಾಂತಿಯುತವಾದ ಸಮಯವನ್ನು ಕಳೆಯಬಹುದು.

ಜಾಮಿಯಾ ಮಸೀದಿ

Jamia Masjid chitradurga
Adumalleshwara Temple and zoo


ಹಿಂದೂ ದೇಗುಲಗಳಂತೆ ಇಲ್ಲಿ ಮುಸ್ಲಿಮರಿಗೆ ಸಂಬಂಧಪಟ್ಟ ಅನೇಕ ಮಸೀದಿಗಳೂ ಇವೆ. ಅದರಲ್ಲಿ ಅತ್ಯಂತ ಪ್ರಮುಖವಾಗಿರುವುದು ಜಾಮಿಯಾ ಮಸೀದಿ. ಇದನ್ನು ಜಾಮಾ ಮಸೀದಿ, ಸುಲ್ತಾನ್‌-ಎ-ಜಾಮಾ ಮಸೀದಿ ಎಂದೂ ಕರೆಯಲಾಗುತ್ತದೆ. ಈ ಮಸೀದಿಯನ್ನು ಇಂಡೋ-ಸರಸೆನ್‌ ವಿನ್ಯಾಸದಲ್ಲಿ ನಿರ್ಮಾಣ ಮಾಡಲಾಗಿದೆ. ಮಸೀದಿಯ ಒಳಗೆ 13 ಸಾಲುಗಳಿದ್ದು, ಪ್ರತಿ ಸಾಲಿನಲ್ಲಿ 50 ಮಂದಿ ಕೂರುವುದಕ್ಕೆ ಸ್ಥಳಾವಕಾಶವಿದೆ.

ಮೊಳಕಾಲ್ಮೂರು

molakalmuru railway station
Adumalleshwara Temple and zoo


ಕರ್ನಾಟಕದಲ್ಲಿ ಹಲವಾರು ವಿಧದ ಬಟ್ಟೆ ತಯಾರಿಸಲಾಗುತ್ತದೆ. ಅದರಲ್ಲಿ ಮೊಳಕಾಲ್ಮೂರಿನ ಸೀರೆಯೂ ಒಂದು. ಮೊಳಕಾಲ್ಮೂರು ಚಿತ್ರದುರ್ಗ ಜಿಲ್ಲೆಯ ಪಂಚಾಯತ್‌ ಪಟ್ಟಣವಾಗಿದೆ. ಇಲ್ಲಿ ಸಾಂಪ್ರಾದಾಯಿಕವಾಗಿ ರೇಷ್ಮೆ ಸೀರೆಗಳನ್ನು ತಯಾರಿಸಲಾಗುತ್ತದೆ. ನೀವು ಈ ಗ್ರಾಮಕ್ಕೆ ಭೇಟಿ ನೀಡಿದರೆ, ಸೀರೆ ನೇಯ್ಗೆ ಮಾಡುವುದನ್ನು ನೋಡುವುದರ ಜತೆ ಅದನ್ನು ಕೊಂಡುಕೊಳ್ಳಬಹುದು ಕೂಡ. ಇಲ್ಲಿ ನುಂಕೆಮಲೆ ಸಿದ್ದೇಶ್ವರ ದೇವಸ್ಥಾನವಿದ್ದು, ಅದು ಕೂಡ ಜನಪ್ರಿಯವಾಗಿದೆ.

ಇದನ್ನೂ ಓದಿ: Top 8 Richest States: ದೇಶದ ಟಾಪ್ 8 ಶ್ರೀಮಂತ ರಾಜ್ಯಗಳು! ಕರ್ನಾಟಕಕ್ಕೆ ಯಾವ ಸ್ಥಾನ?

ಹಿರಿಯೂರು

Vani Vilasa Sagara, popularly known as Mari Kanive is a dam in Hiriyur
Adumalleshwara Temple and zoo


ಹಿರಿಯೂರು ತಾಲೂಕಾಗಿದ್ದು, ಇಲ್ಲಿ NH4 ಹಾದು ಹೋಗುತ್ತದೆ. ಈ ನಗರದಲ್ಲಿ ಕರ್ನಾಟಕದ ಅತ್ಯಂತ ಹಳೆಯ ಅಣೆಕಟ್ಟಿದೆ. ವೇದಾವತಿ ನದಿಯ ಮೇಲೆ ಮಾರಿ ಕಣಿವೆ(ವಾಣಿ ವಿಲಾಸ ಸಾಗರ ಎಂದೂ ಕರೆಯಲಾಗುತ್ತದೆ) ಹೆಸರಿನ ಅಣೆಕಟ್ಟನ್ನು ನಿರ್ಮಿಸಲಾಗಿದೆ. ಇಲ್ಲಿಗೆ ಬಂದರು ನೀವು ಅಣೆಕಟ್ಟಿನ ಸೌಂದರ್ಯವನ್ನು ಕಣ್ತುಂಬಿಸಿಕೊಳ್ಳಬಹುದು.

ಚಂದ್ರವಳ್ಳಿ

Chandravalli Caves Chitradurga
Adumalleshwara Temple and zoo


ಚಿತ್ರದುರ್ಗದ ಬೆಟ್ಟ, ಚೋಳಗುಡ್ಡ ಮತ್ತು ಕಿರಬನಕಲ್ಲು ಬೆಟ್ಟಗಳು ಸೇರಿಕೊಂಡು ಚಂದ್ರವಳ್ಳಿ ಕಣಿವೆಯನ್ನು ರೂಪಿಸುತ್ತದೆ. ಇಲ್ಲಿ ಪುರಾತತ್ತ್ವ ಶಾಸ್ತ್ರದ ಉತ್ಖನನ ಕ್ರಿಯೆ ನಡೆಸಲಾಗಿದೆ. ಈ ಸ್ಥಳದಲ್ಲಿ ಹೊಯ್ಸಳ, ಶಾತವಾಹನ ಮತ್ತು ವಿಜಯನಗರ ಸಾಮ್ರಾಜ್ಯಗಳ ಮಣ್ಣಿನ ಪಾತ್ರೆಗಳು, ನಾಣ್ಯಗಳು ಮತ್ತು ಬಣ್ಣದ ಬಟ್ಟಲುಗಳು ಸಿಕ್ಕಿರುವ ದಾಖಲೆಗಳಿವೆ. ಈ ಸ್ಥಳವನ್ನು ನೀವು ಕಣ್ತುಂಬಿಸಿಕೊಳ್ಳಬಹುದು.

ಚಿತ್ರದುರ್ಗ ಕೋಟೆ

Chitradurga Fort or Chitaldoorg
Adumalleshwara Temple and zoo


ಚಿತ್ರದುರ್ಗದ ಕೋಟೆಯು ಸುಂದರ ಇತಿಹಾಸವನ್ನು ಹೊಂದಿರುವ ಕೋಟೆಯಾಗಿದೆ. ಚಾಲುಕ್ಯರು, ಹೊಯ್ಸಳರು, ನಾಯಕರು ಮತ್ತು ರಾಷ್ಟ್ರಕೂಟರು, ಆ ಸಮಯದಲ್ಲಿ ಆಳ್ವಿಕೆ ನಡೆಸುತ್ತಿದ್ದ ನಾಲ್ಕು ರಾಜವಂಶಗಳು 17 ಮತ್ತು 18 ನೇ ಶತಮಾನಗಳಲ್ಲಿ ಈ ಕಲ್ಲಿನ ಕೋಟೆಯನ್ನು ನಿರ್ಮಿಸಿದರು. ಇದು ಚಿತ್ರದುರ್ಗದ ಅತ್ಯಂತ ಪ್ರಸಿದ್ಧ ಪ್ರವಾಸಿ ತಾಣವಾಗಿದೆ. ಚಿತ್ರದುರ್ಗ ಬಂದವರು ಈ ಕಲ್ಲಿನ ಕೋಟೆಗೆ ಭೇಟಿ ನೀಡಿಯೇ ನೀಡುತ್ತಾರೆ.

ಇದನ್ನೂ ಓದಿ: Best places to visit in Mandya : ಮಂಡ್ಯದ ಸುತ್ತಮುತ್ತ ನೋಡಲೇಬೇಕಾದ ಸ್ಥಳಗಳಿವು

ಆಡುಮಲ್ಲೇಶ್ವರ ದೇವಸ್ಥಾನ

Adumalleshwara Temple and zoo
Adumalleshwara Temple and zoo


ಚಿತ್ರದುರ್ಗದ ಇನ್ನೊಂದು ಪ್ರಸಿದ್ಧ ದೇವಸ್ಥಾನವೆಂದರೆ ಅದು ಆಡುಮಲ್ಲೇಶ್ವರ ಸ್ವಾಮಿ ದೇವಸ್ಥಾನ. ಈ ದೇವಸ್ಥಾನವು ಚಿತ್ರದುರ್ಗದ ಕೋಟೆಯಿಂದ ಸುಮಾರು ಐದು ಕಿಲೋಮೀಟರ್‌ ದೂರದಲ್ಲಿದೆ. ಇಲ್ಲಿ ಶಿವ ದೇವರನ್ನು ಆಡುಮಲ್ಲೇಶ್ವರನ ರೂಪದಲ್ಲಿ ಪೂಜಿಸಲಾಗುತ್ತದೆ. ಈ ದೇವಸ್ಥಾನಕ್ಕೆ ರಸ್ತೆ ಮೂಲಕವಾದರೂ ಹೋಗಬಹುದು ಅಥವಾ ಕಾಲುದಾರಿಯಲ್ಲಿ ನಡೆದುಕೊಂಡೂ ಹೋಗಬಹುದಾಗಿದೆ. ದೇವಸ್ಥಾನಕ್ಕೆ ತೆರಳುವ ದಾರಿ ಸುಂದರವಾಗಿದ್ದು, ಸುತ್ತಲಿನ ಬೆಟ್ಟಗಳ ಸೌಂದರ್ಯವನ್ನು ಸವಿಯುತ್ತಾ ಸಾಗಬಹುದಾಗಿದೆ. ಇದಲ್ಲದೆ ಹಲವು ದೇವಾಲಯಗಳು ಜಿಲ್ಲೆಯಲ್ಲಿವೆ.

FAQ

ಚಿತ್ರದುರ್ಗ ಏಕೆ ಪ್ರಸಿದ್ಧವಾಗಿದೆ?

ಚಿತ್ರದುರ್ಗ ಕರ್ನಾಟಕದ ಪ್ರಮುಖ ಪ್ರವಾಸಿ ಕೇಂದ್ರವಾಗಿದೆ. ಕಲ್ಲಿನ ಕೋಟೆಗೆ ಖ್ಯಾತಿ ಗಳಿಸಿದೆ.

ಚಿತ್ರದುರ್ಗದ ಪ್ರಸಿದ್ಧ ಹೆಸರೇನು?

ಚಿತ್ರದುರ್ಗದ ಪ್ರಸಿದ್ಧ ನಗರವು ಕಲ್ಲಿನ ಕೋಟೆ ಎಂದೂ ಹೆಸರುವಾಸಿಯಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಚಿತ್ರದುರ್ಗ

Murder Case : ಪ್ರಿಯಕರನಿಗಾಗಿ ಪತಿಗೆ ಚಟ್ಟ ಕಟ್ಟಿದ್ದಳು ಪಾಪಿ ಪತ್ನಿ; ಹೊಟ್ಟೆ ಉರಿಯಿಂದ ಸತ್ತ ಎಂದವಳು ಈಗ ಜೈಲುಪಾಲು

Murder Case : ಪ್ರಿಯಕರನಿಗಾಗಿ ಪಾಪಿ ಪತ್ನಿ ಪತಿಗೆ ಚಟ್ಟ ಕಟ್ಟಿದ್ದಾಳೆ. ನಿದ್ರೆ ಮಾತ್ರೆ ಕೊಟ್ಟು ಬಳಿಕ ಹಗ್ಗದಿಂದ ಕತ್ತು ಹಿಸುಕಿ ಕೊಂದಿದ್ದಳು. ಬಳಿಕ ಹೊಟ್ಟೆ ಉರಿಯಿಂದ ಪತಿ ಸತ್ತಿದ್ದಾನೆ ಎಂದು ಕಥೆ ಕಟ್ಟಿ ಈಗ ಜೈಲುಪಾಲಾಗಿದ್ದಾಳೆ.

VISTARANEWS.COM


on

By

Murder case
Koo

ಚಿತ್ರದುರ್ಗ: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪ್ರಿಯಕರನ ಜತೆ ಸೇರಿ ಪಾಪಿ ಪತ್ನಿ ಗಂಡನ (Murder Case) ಹತ್ಯೆಗೈದಿದ್ದಾಳೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಯಾದಲಗಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ. ರಾಘವೇಂದ್ರ (35) ಕೊಲೆಯಾದವನು.

ಪತ್ನಿ ದಿವ್ಯ, ಆಕೆಯ ಚಿಕ್ಕಪ್ಪ ಮಾರಣ್ಣ ಹಾಗೂ ಪ್ರಿಯಕರ ರಾಜಣ್ಣ ಜತೆ ಸೇರಿ ಪತಿ ರಾಘವೇಂದ್ರನನ್ನು ಕೊಂದಿದ್ದಾರೆ. ರಾಘವೇಂದ್ರನಿಗೆ ಮೊದಲಿಗೆ ನಿದ್ರೆ ಮಾತ್ರೆ ನೀಡಿ ಮಲಗಿಸಿದ್ದಾರೆ. ಬಳಿಕ ನಿದ್ರೆಗೆ ಜಾರುತ್ತಿದ್ದಂತೆ ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾರೆ. ಪತಿಯನ್ನು ಕೊಂದು ಹೊಟ್ಟೆ ಉರಿಯಿಂದ ಸತ್ತಿದ್ದಾನೆ ಎಂದು ದಿವ್ಯ ನಾಟಕವಾಡಿದ್ದಳು.

ಮೊದಲು ಯುಡಿಆರ್‌ ದಾಖಲಿಸಿಕೊಂಡಿದ್ದ ಪೊಲೀಸರಿಗೆ ತನಿಖೆಯಲ್ಲಿ ಕೊಲೆ ಸತ್ಯ ಬಯಲಾಗಿದೆ. ಮರಣೋತ್ತರ ಪರೀಕ್ಷೆ ವೇಳೆ ಇದು ಕೊಲೆ ಎಂದು ತಿಳಿದು ಬಂದಿದೆ. ಕುಟುಂಬಸ್ಥರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಯಲಾಗಿದೆ. ಕೂಡಲೇ ದಿವ್ಯ, ಮಾರಣ್ಣ, ರಾಜಣ್ಣನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿಪಿಐ ಹನುಮಂತಪ್ಪ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ. ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

ಇದನ್ನೂ ಓದಿ:Murder Case : ನಿದ್ದೆಗೆ ಜಾರಿದ 13 ವರ್ಷದ ಬಾಲಕಿಯನ್ನು ಕೊಂದಿದ್ಯಾರು? ನಿಗೂಢ ಸಾವಿನ ಬೆನ್ನಟ್ಟಿದ ಪೊಲೀಸರು

ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆ

ಯಾದಗಿರಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯ ಹಳ್ಳದಲ್ಲಿ ಯುವಕನ ಶವ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ರವಿ ಹಿರೇಮಠ (28) ಮೃತ ದುರ್ದೈವಿ. ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕಡಕೋಳ ಗ್ರಾಮದ ರವಿ ಬ್ಯಾಂಕ್ ಲೋನ್ ಮಾಡಿಸುವುದಾಗಿ ಮನೆಯಲ್ಲಿ ಹೇಳಿ ಬಂದಿದ್ದ. ಆದರೆ ಸಂಜೆಯಾದರೂ ಮನೆಗೆ ಬಂದಿರಲಿಲ್ಲ.

ರವಿ ಕಾಣದೆ ಇದ್ದಾಗ ಕಂಗಲಾದ ಪೋಷಕರು ನಾಪತ್ತೆ ಕೇಸ್‌ ದಾಖಲಿಸಿದ್ದರು. ತನಿಖೆಯನ್ನು ಕೈಗೆತ್ತಿಕೊಂಡ ಪೊಲೀಸರು ಆತನ ಸ್ನೇಹಿತರಿಗೆ ಫೋನ್ ಮಾಡಿ ವಿಚಾರಿಸಿದ್ದಾರೆ. ಸುನಿಲ್‌ ಎಂಬಾತ ಈ ವೇಳೆ ರವಿ ಅಲ್ಲಿದ್ದಾನೆ, ಇಲ್ಲಿದ್ದಾನೆ ಎಂದು ಸುಳ್ಳು ಹೇಳಿ ಸತಾಯಿಸಿದ್ದ. ಈ ನಡುವೆ ರವಿ ಪೋಷಕರಿಗೆ ಹಣ ಫೋನ್ ಪೇ ಮಾಡಿ ನಿಮ್ಮ ಮಗನ ತೋರಿಸುತ್ತೇನೆ ಎಂದಿದ್ದ. ಹಣ ಹಾಕಿದ ಬಳಿಕ ನಾನು‌ ನಿಮ್ಮ ಮಗನನ್ನೇ ನೋಡಿಲ್ಲ ಎಂದಿದ್ದ. ಈಗ ಹಣಕಾಸಿನ ವಿಚಾರಕ್ಕಾಗಿ ಸುನಿಲ್ ಎಂಬಾತನೆ ಕೊಲೆ ಮಾಡಿರುವ ಶಂಕೆ ಇದೆ. ತಮ್ಮ ಮಗನನ್ನು ಸುನಿಲ್ ಕೊಲೆ ಮಾಡಿರುವುದಾಗಿ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿ ಪತ್ತೆಗೆ ಕೆಂಭಾವಿ ಪೊಲೀಸರು ಜಾಲ ಬೀಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಇಂದು ಅಬ್ಬರಿಸಲಿದೆ ಗುಡುಗು ಸಹಿತ ಭಾರಿ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka Weather Forecast : ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದ್ದು , ಐಎಂಡಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾದರೆ, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ (Heavy Rain) ಸಾಧ್ಯತೆ ಇದೆ (Karnataka Weather Forecast) ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ಕೆಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯಲ್ಲೂ ವ್ಯಾಪಕ ಮಳೆಯಾಗಲಿದೆ. ಉಳಿದೆಡೆ ಚದುರಿದಂತೆ ಅಲ್ಲಲ್ಲಿ ತುಂಬಾ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉಳಿದಂತೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದ ಸುತ್ತಮುತ್ತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.ಕೆಲವೊಮ್ಮೆ ಗುಡುಗು ಸಾಥ್‌ ನೀಡಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 ಮತ್ತು 22 ಡಿ.ಸೆ ಇರಲಿದೆ.

ಯೆಲ್ಲೋ ಅಲರ್ಟ್‌

ಗುಡುಗು, ಮಿಂಚು, ಗಾಳಿ ಸಹಿತ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಬೆಳಗಾವಿ, ಧಾರವಾಡ, ಗದಗ,ಕೊಪ್ಪಳ, ವಿಜಯಪುರ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು ಸೇರಿದಂತೆ ಚಿತ್ರದುರ್ಗ , ದಾವಣಗೆರೆ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಜತೆಗೆ ಬಿರುಗಾಳಿ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಬಿರುಗಾಳಿ ಎಚ್ಚರಿಕೆಯನ್ನು (Rain News) ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಗುರುವಾರದಂದು ಹಗುರದಿಂದ ಸಾಧಾರಣ ಮಳೆಯೊಂದಿಗೆ ಪ್ರತ್ಯೇಕ ಕಡೆಗಳಲ್ಲಿ ಭಾರೀ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ಮಂಡ್ಯ, ಮೈಸೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಉಳಿದೆಡೆ ಲಘುವಾಗಿ ಸಾಧಾರಣದೊಂದಿಗೆ ವ್ಯಾಪಕ ಮಳೆಯಾಗಲಿದೆ. ಉತ್ತರ ಒಳನಾಡಿನ ಯಾದಗಿರಿ, ರಾಯಚೂರು, ವಿಜಯನಗರ, ಕೊಪ್ಪಳ, ವಿಜಯಪುರ ಮತ್ತು ಬಾಗಲಕೋಟೆಯಲ್ಲೂ ಭರ್ಜರಿ ಮಳೆಯಾಗಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲೂ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಚದುರಿದಂತೆ ಸಾಕಷ್ಟು ವ್ಯಾಪಕವಾಗಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಚದುರಿದಂತೆ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 ಮತ್ತು 22 ಡಿ.ಸೆ ಇರಲಿದೆ.

ಭಾರಿ ಮಳೆ, ಬಿರುಗಾಳಿಗೆ ನೆಲಕ್ಕುರುಳಿದ ಭತ್ತ

ಭಾರಿ ಮಳೆ, ಬಿರುಗಾಳಿಗೆ ಭತ್ತ ನೆಲಕ್ಕುರುಳಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿಯಲ್ಲಿ ಘಟನೆ ನಡೆದಿದೆ. ಮುಂಗಾರು ಮುಗಿಯುವ ವೇಳೆಗೆ ಸುರಿಯುತ್ತಿರುವ ಮಳೆಗೆ ನೂರಾರು ಎಕರೆ ಭತ್ತ ಬೆಳೆಗೆ ಹಾನಿಯಾಗಿದೆ. ರೈತರಿಗೆ ಸಂಕಷ್ಟ ಎದುರಾಗಿದ್ದು, ಸಮೀಕ್ಷೆ ಮಾಡಿ ಪರಿಹಾರಕ್ಕೆ ಆಗ್ರಹಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲೂ ಹಲವೆಡೆ ಭಾರಿ ಮಳೆಯಾಗಿದೆ. ಮಳೆಗಾಗಿ ಕಾಯುತ್ತಿದ್ದ ಅನ್ನದಾತನ ಮೊಗದಲ್ಲಿ ಮಂದಹಾಸ ಮೂಡಿದೆ. ಶೇಂಗಾ, ಮೆಕ್ಕೆಜೋಳ ಬೆಳೆಗೆ ನೀರಿಲ್ಲದೆ ರೈತರು ಕಂಗಾಲಾಗಿದ್ದರು. ಮಳೆ ಇಲ್ಲದೆ ಬೆಂಕಿ ರೋಗಕ್ಕೆ ಶೇಂಗಾ ಬೆಳೆ ತುತ್ತಾಗಿದ್ದು, ಈಗ ವರುಣ ಆಗಮನದಿಂದ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರಿನಲ್ಲಿ ಲಘು, ಮಲೆನಾಡು ಸುತ್ತಮುತ್ತ ಭಾರಿ ಮಳೆ ಸಾಧ್ಯತೆ

Karnataka Weather Forecast : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ವಿಜಯನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಹಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ ಮತ್ತು ಹಾವೇರಿ ಹಾಗೂ ಬೀದರ್, ಕಲಬುರಗಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ವಿಜಯಪುರ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉಡುಪಿ, ಉತ್ತರ ಕನ್ನಡದ ಅಲ್ಲಲ್ಲಿ ಅತಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಚಿಕ್ಕಮಗಳೂರು, ಕೊಡಗಿನಲ್ಲಿ ಭಾರಿ ಮಳೆ

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಐಎಂಡಿ ಹಳದಿ ಎಚ್ಚರಿಕೆಯನ್ನು ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
navaratri
ಬೆಂಗಳೂರು5 ಗಂಟೆಗಳು ago

Navaratri : ನವರಾತ್ರಿ ಸಂಭ್ರಮದಲ್ಲಿ ಗೊಂಬೆಗಳಂತೆ ಮಿಂಚಿದ ಹೆಂಗಳೆಯರು

Mysuru News
ಮೈಸೂರು5 ಗಂಟೆಗಳು ago

Mysuru News : ಪರ್ಯಾವರಣ ಸಂರಕ್ಷಣ ಗತಿವಿಧಿಯಿಂದ ತ್ಯಾಜ್ಯ ಸಂಗ್ರಹಣ ಅಭಿಯಾನಕ್ಕೆ ಚಾಲನೆ

Kodagu News
ಕೊಡಗು6 ಗಂಟೆಗಳು ago

Kodagu News : ದಸರಾದಲ್ಲಿ ಡಿಜೆ ಬಳಕೆಗೆ ನಿರ್ಬಂಧ; ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್

Actor Darshan Renukaswamy murder case
ಬೆಂಗಳೂರು6 ಗಂಟೆಗಳು ago

Actor Darshan : ತನಿಖಾಧಿಕಾರಿಗಳ ವಿರುದ್ಧ ಬ್ಯಾಟಿಂಗ್‌ ಮಾಡಿದ ದರ್ಶನ್‌ ಪರ ವಕೀಲ; ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

Bomb threat to BMS, MS Ramayya and four other colleges in Basavanagudi Bengaluru
ಬೆಂಗಳೂರು7 ಗಂಟೆಗಳು ago

Bomb Threat : ಬೆಂಗಳೂರಿನ ಬಸವನಗುಡಿಯ ಬಿಎಂಎಸ್‌ ಸೇರಿ ನಾಲ್ಕು ಕಾಲೇಜುಗಳಿಗೆ ಬಾಂಬ್‌ ಬೆದರಿಕೆ

Medical Seat
ಬೆಂಗಳೂರು8 ಗಂಟೆಗಳು ago

Medical Seat : ಬೆಂಗಳೂರಿನಲ್ಲಿ ಮೆಡಿಕಲ್ ಸೀಟ್ ಕೊಡಿಸುವುದಾಗಿ ಉದ್ಯಮಿಗೆ 1.5 ಕೋಟಿ ರೂ. ವಂಚನೆ

Murder case
ಚಿತ್ರದುರ್ಗ9 ಗಂಟೆಗಳು ago

Murder Case : ಪ್ರಿಯಕರನಿಗಾಗಿ ಪತಿಗೆ ಚಟ್ಟ ಕಟ್ಟಿದ್ದಳು ಪಾಪಿ ಪತ್ನಿ; ಹೊಟ್ಟೆ ಉರಿಯಿಂದ ಸತ್ತ ಎಂದವಳು ಈಗ ಜೈಲುಪಾಲು

Namma metro ticket prices will be hiked soon
ಬೆಂಗಳೂರು10 ಗಂಟೆಗಳು ago

Namma Metro : ಸಿಟಿ ಮಂದಿಗೆ ಮತ್ತೊಂದು ಶಾಕ್‌; ಶೀಘ್ರದಲ್ಲೆ ನಮ್ಮ ಮೆಟ್ರೋ ಟಿಕೆಟ್‌ ದರ ಏರಿಕೆಯ ಬರೆ!

Murder case
ಬೆಂಗಳೂರು10 ಗಂಟೆಗಳು ago

Murder Case : ನಿದ್ದೆಗೆ ಜಾರಿದ 13 ವರ್ಷದ ಬಾಲಕಿಯನ್ನು ಕೊಂದಿದ್ಯಾರು? ನಿಗೂಢ ಸಾವಿನ ಬೆನ್ನಟ್ಟಿದ ಪೊಲೀಸರು

murder case
ಬೆಂಗಳೂರು11 ಗಂಟೆಗಳು ago

Murder case : ಬೆಂಗಳೂರಲ್ಲಿ ಬಿಹಾರಿ ಮೂಲದ ವ್ಯಕ್ತಿಯನ್ನು ದೊಣ್ಣೆಯಿಂದ ಹೊಡೆದು ಭೀಕರ ಹತ್ಯೆ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ1 ದಿನ ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌