Kichcha Sudeep: ಕಿಚ್ಚ ಸುದೀಪ್ ಷಡ್ಯಂತ್ರದ ಹಿಂದಿರೋ ವ್ಯಕ್ತಿ ಸೂರಪ್ಪ ಬಾಬು; ಹೊಸ ಬಾಂಬ್ ಸಿಡಿಸಿದ ವೀರಕಪುತ್ರ ಶ್ರೀನಿವಾಸ! - Vistara News

South Cinema

Kichcha Sudeep: ಕಿಚ್ಚ ಸುದೀಪ್ ಷಡ್ಯಂತ್ರದ ಹಿಂದಿರೋ ವ್ಯಕ್ತಿ ಸೂರಪ್ಪ ಬಾಬು; ಹೊಸ ಬಾಂಬ್ ಸಿಡಿಸಿದ ವೀರಕಪುತ್ರ ಶ್ರೀನಿವಾಸ!

Kichcha Sudeep: ಕಿಚ್ಚ ಸುದೀಪ್ ನಟನೆಯ ‘ಕೋಟಿಗೊಬ್ಬ 2’ ಹಾಗೂ ‘ಕೋಟಿಗೊಬ್ಬ 3’ ಚಿತ್ರಕ್ಕೆ ಸೂರಪ್ಪ ಬಾಬು ಬಂಡವಾಳ ಹೂಡಿದ್ದರು. ಈಗ ಸೂರಪ್ಪ ಬಾಬು ವಿರುದ್ಧ ವಿಷ್ಣು ಸೇನಾ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ (Veerakaputra Srinivas) ಪೋಸ್ಟ್‌ ಮೂಲಕ ಹೊಸ ಬಾಂಬ್‌ ಸಿಡಿಸಿದ್ದಾರೆ.

VISTARANEWS.COM


on

Veerakaputra Srinivasa Kichcha Sudeep
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಿಚ್ಚ ಸುದೀಪ್ (Kichcha Sudeep) ವಿರುದ್ಧ ನಿರ್ಮಾಪಕರಾದ ಎಂ. ಎನ್​ ಕುಮಾರ್, ರೆಹಮಾನ್​ ಸಿಡಿದೇಳಲು ಸೂರಪ್ಪ ಬಾಬು ಕಾರಣ ಎಂದು ವಿಷ್ಣು ಸೇನಾ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ (Veerakaputra Srinivas) ಪೋಸ್ಟ್‌ ಮೂಲಕ ಹೊಸ ಬಾಂಬ್‌ ಸಿಡಿಸಿದ್ದಾರೆ. ತಮ್ಮ ಫೇಸ್‌ಬುಕ್‌ ಖಾತೆಯಯಲ್ಲಿ ಈ ಬಗ್ಗೆ ಹೇಳಿಕೊಂಡಿದ್ದಾರೆ.

ವೀರಕಪುತ್ರ ಶ್ರೀನಿವಾಸ ಹೇಳಿದ್ದೇನು?

ಕಿಚ್ಚ ಸುದೀಪ್ ನಟನೆಯ ‘ಕೋಟಿಗೊಬ್ಬ 2’ ಹಾಗೂ ‘ಕೋಟಿಗೊಬ್ಬ 3’ ಚಿತ್ರಕ್ಕೆ ಸೂರಪ್ಪ ಬಾಬು ಬಂಡವಾಳ ಹೂಡಿದ್ದರು. “ಇತ್ತೀಚೆಗೆ ಕಿಚ್ಚ ಸುದೀಪ್‌ ಅವರ ಕುರಿತಾಗಿ ತುಂಬ ಮಾತುಗಳು ಕೇಳಿಬರ್ತಿವೆ. ಅವರು ನಿರ್ಮಾಪಕರಿಗೆ ಹಣ ಕೊಡ್ಬೇಕಂತೆ, ಕಾಲ್ ಶೀಟ್‌ ಕೊಡಬೇಕಂತೆ, ಆದರೆ ಸಾಕ್ಷಿಗಳಿಲ್ಲವಂತೆ… ಅದಂತೆ, ಇದಂತೆ… ಅನ್ನೋ ಅಂತೆ ಕಂತೆಗಳು ತುಂಬಾನೇ ಹರಿದಾಡ್ತಿವೆʼʼ ಎಂದು ವೀರಕಪುತ್ರ ಶ್ರೀನಿವಾಸ ಮಾತು ಆರಂಭಿಸಿದ್ದಾರೆ.

ʻʻಈ ಪ್ರಕರಣದ ಬೆಳವಣಿಗೆಗಳನ್ನು ಒಂದು ವಾರದಿಂದ ಗಮನಿಸುತ್ತಿದ್ದೇನೆ. ಇದೊಂದು ಹಣದ ವಿಷಯವಾಗಿ ಮಾತ್ರ ಉಳಿದಿದೆ ಎಂದು ನನಗನ್ನಿಸುತ್ತಿಲ್ಲ. ಈ ಪ್ರಕರಣ ಮಾನಹರಣಕ್ಕೆ ಮಾತ್ರ ಮೀಸಲಾಗಿರುವುದು ಸ್ಪಷ್ಟವಾಗಿದೆ. ಕನ್ನಡ ಚಿತ್ರರಂಗಕ್ಕೆ ರಾಷ್ಟ್ರಮಟ್ಟದಲ್ಲಿ ಖ್ಯಾತಿಯನ್ನು ತಂದು ಕೊಟ್ಟ ಖ್ಯಾತನಟನ ವಿರುದ್ಧವಾಗಿ ಇಷ್ಟೆಲ್ಲಾ ನಡೆಯುತ್ತಿರುವುದು ನಿಜಕ್ಕೂ ಒಳ್ಳೆಯ ಬೆಳವಣಿಗೆಯಲ್ಲ. ಹಾಗಂತ ಸುದೀಪ್‌ ಅವರು ಪ್ರಶ್ನಾತೀತರಲ್ಲ. ತಪ್ಪು ಮಾಡಿದಾಗ ಅವರನ್ನೂ ಪ್ರಶ್ನಿಸಬೇಕು. ಆದರೆ ಪ್ರಶ್ನಿಸುತ್ತಿರುವವರ ಅಸಲಿಯತ್ತು, ಪ್ರಮಾಣಿಕತೆಯನ್ನು ಒರೆಗೆ ಹಚ್ಚಬೇಕಿದೆ. ಅಂತಹ ಕೆಲವು ಸಂಗತಿಗಳನ್ನು ನಾನು ನಿಮ್ಮೊಂದಿಗೆ ಹಂಚಿಕೊಳ್ಳಬೇಕಿದೆ. ನಾನ್ಯಾಕೆ ಹಂಚಿಕೊಳ್ಳಬೇಕು. ಅಂದರೆ ಸುದೀಪ್‌ ಸರ್‌ ಅವರ ಜತೆ ಮಾತ್ರವಲ್ಲ ಈ ಆರೋಪಗಳನ್ನು ಮಾಡುತ್ತಿರುವ ಇಬ್ಬರು ನಿರ್ಮಾಪಕರ ಜತೆಗೂ ನನಗೆ ಅಷ್ಟೇ ಒಡನಾಟವಿರುವುದರಿಂದ ಈ ಮಾತುಗಳನ್ನು ನಾನು ಹೇಳಲೇಬೇಕುʼʼಎಂದಿದ್ದಾರೆ.

ಕರ್ನಾಟಕ ಚಲನಚಿತ್ರ ಇತಿಹಾಸದಲ್ಲಿ ಇದು ದಾಖಲಾಗಿ ಉಳಿಯಲಿದೆ.

ಸುದೀಪ್‌ ಅವರ ಬಗ್ಗೆ ಕುಮಾರ್‌ ಅವರು ಆರೋಪ ಮಾಡಿದ್ದರು. ಸುದೀಪ್ ನನಗೆ ಒಂಬತ್ತು ಕೋಟಿ ಹಣ ಕೊಡಬೇಕು ಎಂದು. ಆದರೆ ಅದಕ್ಕೆ ಯಾವುದೇ ಸಾಕ್ಷಿಯಿಲ್ಲ ನಮ್ಮ ಮನಸಾಕ್ಷಿಯೇ ಸಾಕ್ಷಿ ಅಂತ. ಈ ಮನಸಾಕ್ಷಿ, , ವನಜಾಕ್ಷಿ, ಮೀನಾಕ್ಷಿಯನ್ನಿಟ್ಟುಕೊಂಡು ವ್ಯವಹಾರ ಮಾಡೋದನ್ನು ಗಾಂಧಿನಗರದವರು ಎಲ್ಲಿಂದ ಕಲಿತರು ಅಂತ? ನಮ್ಮ ಹಳ್ಳಿಗಳಲ್ಲಿ ಅಂಗಡಿಗೆ ಹೋಗಿ ಕಾಫಿಪುಡಿ ಸಾಲದ ರೂಪದಲ್ಲಿ ತಂದರೂ ಅದನ್ನು ಒಂದು ಪುಸ್ತಕದಲ್ಲಿ ಬರೆದಿಟ್ಟುಕೊಳ್ಳುತ್ತಾನೆ ಆ ಅಂಗಡಿಯವರು. ಅಂತಹದರಲ್ಲಿ ಕುಮಾರ್‌ ಅವರು ಅಷ್ಟು ದೊಡ್ಡ ಮೊತ್ತವನ್ನು ಏನೂ ದಾಖಲೆಗಳಿಲ್ಲದೆ ಕೊಟ್ಟರೆಂದರೆ ಯಾರಾದರೂ ನಂಬ್ತಾರೆ? ಯಾಕಾದ್ರೂ ನಂಬಬೇಕು? ಅಂದ್ರೆ ಅವರ ಬಳಿ ಅಷ್ಟೊಂದು ಹಣ ಇದೆಯಾ? ಮುಂದುವರಿದು ಅವ್ರು ಹೇಳ್ತಾರೆ. ನನಗೆ ಹಣ ಬೇಡ ಆದ್ರೆ ಕಾಲ್ ಶೀಟ್ ಕೊಡಿ ಅಂತ. ಇತ್ತ ಕಡೆ ಆರೋಪ ಮಾಡುತ್ತಲೇ, ಅತ್ತ ಕಡೆ ಅವಕಾಶ ಕೇಳುತ್ತಿರುವ ಒಂದು ಕೆಟ್ಟ ವಿದ್ಯಮಾನವಾಗಿ ಕರ್ನಾಟಕ ಚಲನಚಿತ್ರ ಇತಿಹಾಸದಲ್ಲಿ ಇದು ದಾಖಲಾಗಿ ಉಳಿಯಲಿದೆ.

ಇದನ್ನೂ ಓದಿ: Kichcha Sudeep: ಕಿಚ್ಚ ಸುದೀಪ್‌ ಸಿನಿಮಾಗೆ ತಮಿಳು ಖ್ಯಾತ ನಿರ್ದೇಶಕ ವೆಂಕಟ್ ಪ್ರಭು ಆ್ಯಕ್ಷನ್‌ ಕಟ್‌?

ನಾನು ಕುಮಾರ್‌ ಅವರಿಗಾಗಲಿ, ಇತರೆ ನಿರ್ಮಾಪಕರಿಗಾಗಲಿ ಹೇಳಲು ಬಯಸುವುದೇನೆಂದರೆ, ನಿಮಗೆ ಕಾಲ್ ಶೀಟ್‌ ಯಾಕೆ ಕೊಡಬೇಕು? ಸ್ನೇಹಿತರು ಅಂತಾನ? ನಿಮ್ಮೆಲ್ಲರ ಬಹುದೊಡ್ಡ ಸಮಸ್ಯೆ ಏನೆಂದರೆ,, ಸುದೀಪ್‌ ಏನೂ ಇಲ್ಲದೇ ಇದ್ದಾಗ ನಾವು ಜೊತೆಗಿದ್ವಿ, ಈಗ ಆತ ಎತ್ತರಕ್ಕೆ ಬೆಳೆದುಬಿಟ್ಟಿದ್ದಾರೆ. ಆದ್ದರಿಂದ ನಾವು ಕಷ್ಟಕ್ಕೆ ಸಿಕ್ಕಿಕೊಂಡಾಗಲೆಲ್ಲಾ ಸುದೀಪ್‌ ಸಹಾಯ ಹಸ್ತ ಚಾಚ್ತಾ ಇರ್ಬೇಕು? ಇದೆಂತಾ ನ್ಯಾಯ ಸ್ವಾಮಿ.. ಮೋದಿಯವರು ಕೂಡ ಟೀ ಮಾರುತ್ತಿದ್ದರು ಹಾಗಂತ ಅವ್ರನ್ನು ಈಗಲೂ ಟೀ ಅಂಗಡಿಯಲ್ಲೇ ಕೂತಿರಿ ಅಂತ ಹೇಳೋಕಾಗುತ್ತಾ? ನಿಮ್ಮಂತಹ ಸ್ನೇಹಿತರನ್ನು ನಂಬಿಕೊಂಡು ಸುದೀಪ್ ಅವರು ಮಾಡಿದ ಸಿನಿಮಾಗಳೆಷ್ಟು ಅಂತ ಒಂದ್ಸಲ ಲೆಕ್ಕಮಾಡಿ ನೋಡಿ ಮತ್ತು ಅವುಗಳು ಬಿಡುಗಡೆ‌ ಸಂದರ್ಭದಲ್ಲಿ ಎದುರಿಸಿದ ಕಷ್ಟಗಳು ಎಷ್ಟು ಎಂತಹವು ಗೊತ್ತಾ..? ರನ್ನ ಸಿನಿಮಾ ಬಿಡುಗಡೆ ಮುನ್ನಾ ದಿನ ಎಂಥಾ ಇಕ್ಕಟ್ಟಿಗೆ ಸಿಕ್ಕಿಕೊಂಡಿತು? ಕೋಟಿಗೊಬ್ಬ 3 ಬಿಡುಗಡೆಯೇ ಆಗಲಿಲ್ಲ… ಇದಕ್ಕೆಲ್ಲಾ ಕಾರಣ ಯಾರು? ಅದೇ ಸ್ನೇಹಿತರಲ್ಲವೇ?

ಇದಕ್ಕೆ ಕಾರಣವಾದವರು ಯಾರು?

ಸುದೀಪ್‌ ಅವರಿಗೆ ಸಿನಿಮಾ ಮಾಡಲು ಬರುವ ಬಹುತೇಕ ನಿರ್ಮಾಪಕರ ಹತ್ತಿರ ಒಂದು ರೂಪಾಯಿ ಹಣ ಕೂಡ ಇರಲ್ಲ. ಅದಕ್ಕಿಂತ ಪ್ರಮುಖ ಸಂಗತಿ ಏನೆಂದರೆ.. ಸಿನಿಮಾ ಮಾಡದಿದ್ದರೆ, ಇವರುಗಳ ಬ್ಯಾಂಕ್ ಬ್ಯಾಲೆನ್ಸ್‌ಗಳು ನಮ್ಮ ಬ್ಯಾಂಕ್ ಬ್ಯಾಲೆನ್ಸ್‌ಗಳಷ್ಟೂ ಇರುವುದಿಲ್ಲ ಅದ್ರೂ ನಾವು ಇಂತಹ ಸಿನಿಮಾ ಮಾಡೋಕೆ ಅಗಲ್ಲ ಆದ್ರೆ ಇವ್ರು ಹೇಗೆ ಬಿಗ್ ಬಜೆಟ್ ಸಿನಿಮಾ ಮಾಡ್ತಾರೆ? ಸಿಂಪಲ್… ಸುದೀಪ್ ಅವರಂತಹ ಸ್ಟಾರ್‌ಗಳ ಕಾಲ್ ಶೀಟ್ ಇವರಿಗೆ ಕೋಟ್ಯಂತರ ರೂಪಾಯಿಗಳ ಫಂಡಿಂಗ್ ಸಿಗುವಂತೆ ಮಾಡುತ್ತದೆ. ಸುದೀಪ್‌ ಸರ್‌ ಕಾಲ್ ಶೀಟ್‌ ಗ್ಯಾರಂಟಿ ಆದ್ಮೇಲೆ, ಇವರು ಫೈನಾನ್ಸಿಯರ್‌ಗಳ ಹತ್ರ ಹೋಗಿ ಇಪ್ಪತ್ತೋ ಮೂವತ್ತೋ ಕೋಟಿ ಹಣವನ್ನು ಬಡ್ಡಿಗೆ ತರ್ತಾರೆ. ಆ ಬಡ್ಡಿ ಬ್ಯಾಂಕ್‌ ಬಡ್ಡಿ ಅಲ್ಲ ಗಾಂಧಿನಗರದ ಬಡ್ಡಿ! ಆಟೋಮೀಟರ್‌ ಸ್ಪೀಡಲ್ಲಿ ಓಡ್ತಿರುತ್ತೆ. ಆ ಬಡ್ಡಿಗೆ ತಂದ ಹಣದಲ್ಲಿ ಇವರು ಮೊದಲು ಇವರ ಸಾಲಗಳನ್ನು ತೀರಿಸಿಕೊಳ್ತಾರೆ. ಆಮೇಲೊಂದು ಮನೆ ಕಟ್ಟಿಸಿಕೊಳ್ತಾರೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಬೇಕಾದ ಅನುಕೂಲ ಮಾಡಿಕೊಳ್ತಾರೆ. ಇವರ ಶೋಕಿ, ಬಾಕಿ ಎಲ್ಲವೂ ಅದರಿಂದಲೇ ತೀರುತ್ತೆ. ಕೊನೆಗೆ… ಅವರಿಗೆ ಸಿನಿಮಾ ನೆನಪಾಗುತ್ತೆ. ಆರು ತಿಂಗಳಲ್ಲಿ ಮುಗಿಯಬೇಕಾದ ಸಿನಿಮಾ, ಎರಡು ವರ್ಷವಾಗುತ್ತೆ. ಅಷ್ಟರಲ್ಲಿ… ಇತ್ತ ಗಾಂಧಿನಗರದ ಮೂವತ್ತು ಕೋಟಿಯು ಬಡ್ಡಿಸೇರಿ ಅರವತ್ತು ಕೋಟಿಯಾಗಿರುತ್ತೆ. ಬಿಡುಗಡೆ ಹೊತ್ತಿಗೆ ಸಾಲ ತೀರಿಸಬೇಕಿರುತ್ತೆ. ಆದರೆ ತೀರಿಸುವುದಕ್ಕೆ ಇವರ ಹತ್ತಿರ ಅಷ್ಟು ಹಣ ಇರಲ್ಲ. ಆಗ ಬಿಡುಗಡೆ ನಿಂತು ಹೋಗುತ್ತೆ. ಅಯ್ಯೋ ನಮ್ಗೆ ಲಾಸ್‌ ಆಯ್ತು.. ನಾವು ಕಷ್ಟದಲ್ಲಿದ್ದೇವೆ…ಈ ಸಿನಿಮಾ ಮಾಡಿ ನಾನು ಹಾಳದೆ, ಈ ಹೀರೊ ನಂಬಿ ನಾನು ಮನೆಮಠ ಕಳೆದುಕೊಂಡೆ ಅಂತ ಊರ್‌ ತುಂಬಾ ಹೇಳ್ಕೊಂಡು ಓಡಾಡ್ತಾರೆ. ಹೀರೋ ಮರ್ಯಾದೆ ತೆಗೀತಾರೆ. ಇತ್ತ ಅಭಿಮಾನಿಗಳು ಥಿಯೇಟರ್‌ ಮುಂದೆ ಕೂತು ಅವರ ಮೆಚ್ಚಿನ ನಟನ ಸಿನಿಮಾಗೆ ಈ ರೀತಿ ಆಗ್ತಿರೋದನ್ನು ನೆನೆದು ಅಳ್ತಿರ್ತಾರೆ. ದಯವಿಟ್ಟು ನಿರ್ಮಾಪಕರನ್ನು ಬದಲಾಯಿಸಿ ಅಣ್ಣ… ಅಂತ ಕೂಗ್ತಿರ್ತಾರೆ. ಅತ್ತ ನಿರ್ಮಾಪಕನ ಅಸಹಕಾರ, ಇತ್ತ ಅಭಿಮಾನಿಗಳ ಒತ್ತಡ… ಆಗ ಹೀರೋ ಮಧ್ಯಪ್ರವೇಶ ಮಾಡಬೇಕು. ಎಲ್ಲೆಲ್ಲಿಂದಲೂ ಹಣ ತಂದುಕೊಟ್ಟು ಸಿನಿಮಾ ಬಿಡುಗಡೆಗೊಳಿಸಬೇಕು. ರನ್ನ ಸಿನಿಮಾಗೆ ಆಗಿದ್ದು ಇದೆ. ಕೋಟಿಗೊಬ್ಬ ಸಿನಿಮಾಗೆ ಆಗಿದ್ದೂ ಇದೆ. ಎರಡೂ ಸಿನಿಮಾಗಳೂ ಬಿಡುಗಡೆ ಸಂಕಷ್ಟವನ್ನು ಎದುರಿಸಿದ್ದವು. ಇದಕ್ಕೆ ಕಾರಣವಾದವರು ಯಾರು? ಅದೇ ಸೋ ಕಾಲ್ಡ್ ಹಳೇ ಸ್ನೇಹಿತರು” ಎಂದು ಸುದೀರ್ಘವಾಗಿ ವೀರಕಪುತ್ರ ಬರೆದುಕೊಂಡಿದ್ದಾರೆ.

Kichcha Sudeep

ಯಾರಿವರು ಸೂರಪ್ಪ ಬಾಬು?

ಸೂರಪ್ಪ ಬಾಬು ಎಂಬುವರು ಒಬ್ಬರಿದ್ದಾರೆ. ಈ ಪ್ರಕರಣದಲ್ಲಿ ಅವರು ಎಲ್ಲೂ ಕಾಣಿಸ್ತಿಲ್ಲ ಅಷ್ಟೇ, ಆದರೆ ಇದರ ಹಿಂದೆ ನಿಂತು ನಡೆಸುತ್ತಿರುವುದಲ್ಲಿ ಅವರೂ ಒಬ್ಬರು. . ಸೂರಪ್ಪ ಬಾಬು ಅವರು ನನಗೆ ಆತ್ಮೀಯರಾಗಿದ್ದವರು. ಅದೇ ಕಾರಣಕ್ಕೆ ಅವರು ನಾನು ಅನೇಕ ವಿಷಯಗಳ ಬಗ್ಗೆ ಅನೇಕ ವರ್ಷಗಳಿಂದ ಮಾತನಾಡುತ್ತ ಬಂದಿದ್ದೇವೆ. ಅವುಗಳ ಬಗ್ಗೆ ಈಗ ಹೇಳುವುದು ನನ್ನ ವ್ಯಕ್ತಿತ್ವ ಅಲ್ಲ. ಆದರೆ ಅವರ ಮನಸಲ್ಲಿ ಒಳ್ಳೇತನವಿಲ್ಲ ಎಂಬುದು ಮಾತ್ರ ಸತ್ಯ. ಅವರಿಗೆ ವಿಷ್ಣು ಸರ್‌ ಬಗ್ಗೆಯೂ ಗೌರವವರಿಲಿಲ್ಲ, ಸುದೀಪ್‌ ಸರ್‌ ಬಗ್ಗೆಯೂ ಗೌರವವಿರಲಿಲ್ಲ. ನನ್ನ ಜತೆ ಮಾತನಾಡುವಾಗಲೆಲ್ಲಾ ಅವರಿಬ್ಬರನ್ನು ಏಕವಚನದಲ್ಲಿಯೇ ಸಂಬೋಧಿಸುತ್ತಾರೆ. ಕೇವಲ ವ್ಯವಹಾರಕ್ಕೆ ಮಾತ್ರ ಇವರು ಅವರಿಬ್ಬರ ಜತೆ ಚೆನ್ನಾಗಿದ್ದರು ಅಷ್ಟೇ. ಇದೇ ಸೂರಪ್ಪಬಾಬು ಅವರು… ಬಸವೇಶ್ವರ ನಗರದ ಹೋಟೆಲ್‌ ಒಂದರಲ್ಲಿ ಅನ್ನದ ಎದುರು ಕೂತು ಹೇಳಿದ್ದ ಮಾತು “ಕೋಟಿಗೊಬ್ಬ 2ರಲ್ಲಿ ನನ್ನಿಂದ ಸುದೀಪ್‌ ಅವರಿಗೆ ಸ್ವಲ್ಪ ಬೇಸರವಾಗಿದೆ. ನನ್ನ ಸ್ವಯಂಕೃತ ಅಪರಾಧಗಳಿಂದಾಗಿ ಸಿನಿಮಾ ಹಿಟ್ ಆದರೂ ನನಗೆ ಲಾಭವಾಗಲಿಲ್ಲ. ಹೇಗೋ… ನನಗೆ ಇಬ್ಬರು ಹೆಣ್ಮಕ್ಕಳ್ಳಿರುವ ವಿಷ್ಯ ಸುದೀಪ್‌ ಅವ್ರಿಗೆ ಗೊತ್ತಾದ ಮೇಲೆ ಅವರೇ ಕರೆದು ಕೋಟಿಗೊಬ್ಬ 3 ಸಿನಿಮಾ ಮಾಡೋಕೆ ಅವಕಾಶ ಕೊಟ್ಟರು ಅಂತ ಹೇಳಿದ್ದರು. ಆದರೆ ಅದೇ ಸೂರಪ್ಪಬಾಬು ಇವತ್ತು ಈ ಷಡ್ಯಂತ್ರದ ಭಾಗವಾಗಿದ್ದಾರೆ. ಸುದೀಪ್‌ ಅವರ ತೇಜೋವಧೆಗೆ ಇಳಿದಿದ್ದಾರೆ. ಅನೇಕ ಪತ್ರಕರ್ತರಿಗೆ ಕರೆಮಾಡಿ, ನಾಳೆ ಸುದೀಪ್‌ ವಿರುದ್ಧ ಪ್ರೆಸ್‌ಮೀಟ್ ಇದೆ, ನಿಮ್ಮ ಫುಲ್‌ ಸಪೋರ್ಟ್‌ ಬೇಕು ಅಂತ ಕೇಳಿದ್ದಾರೆ. ತಪ್ಪಲ್ವಾ.. ಸೂರಪ್ಪ ಬಾಬು ಅವರೇ… ನಿಮ್ಮ ಕಷ್ಟಕ್ಕೆ ಅಂತ ಜತೆಯಾದ ವ್ಯಕ್ತಿ ಬಗ್ಗೆ ಹೀಗೆಲ್ಲಾ ಮಾಡುವುದು ತಪ್ಪಲ್ವಾ..? ಇವತ್ತು ಸುದೀಪ್‌ ಅವರು ಮತ್ತೆ ಕಾಲ್‌ಶೀಟ್‌ ಕೊಡ್ತಿಲ್ಲ ಅಂತ ನೀವು ಆರೋಪ ಮಾಡಲು ಪ್ರೆಸ್‌ಮೀಟ್ ಮಾಡಿಸ್ತೀದ್ದೀರಲ್ವಾ! ನಿಮ್ಮ ಕೋಟಿಗೊಬ್ಬ 3 ಸಿನಿಮಾ ಬಿಡುಗಡೆ ನಿಂತು ಹೋದ ದಿನ, ನಾನು ಜಾಕ್‌ ಮಂಜು ಅವರ ಮೂಲಕ ಹಣ ಕಳುಹಿಸಿಕೊಟ್ಟೆ ಅದನ್ನು ನೀವು ಎರಡೂವರೆ ವರ್ಷಗಳ ಕಾಲ ಕಾಡಿಸಿ, ಆಡಿಸಿ, ನೋಯಿಸಿ ವಾಪಸ್ಸು ಮಾಡಿದ್ದಿರಿ. ಇನ್ನೂ ಸ್ವಲ್ಪ ಹಣ ಬಂದೇ ಇಲ್ಲ! ಅದರ ಬಗ್ಗೆ ನಾನೂ ಪ್ರೆಸ್ಮೀಟ್‌ ಮಾಡ್ಲಾ? ನಿಮ್ಜೊತೆಗಿನ ಸ್ಕ್ರೀನ್‌ ಶಾಟ್‌ ಗಳನ್ನು ಶೇರ್‌ ಮಾಡ್ಲಾ? ನೀವು ಜತೆಗಿದ್ದವರಿಗೆ ಹೀಗೆ ಬೆನ್ನಿಗೆ ಚೂರಿ ಹಾಕುವುದಾದರೆ, ನಾನೂ ಹಾಕಬಹುದಿತ್ತಲ್ಲವಾ? ಆದ್ರೆ ನಾನು ಆ ಕೆಲಸ ಮಾಡಲಿಲ್ಲ ಏಕೆಂದರೆ ನನ್ನ ಯಜಮಾನ್ರು ಆ ಸಂಸ್ಕಾರ ನನಗೆ ಕಲಿಸಿಲ್ಲ. ಬಟ್‌ ಯಜಮಾನ್ರ ಗರಡಿಯಲ್ಲಿ ಪಳಗಿದ ನಿಮಗ್ಯಾಕೆ ಆ ಸಂಸ್ಕಾರ ಬರಲಿಲ್ಲ ಎಂದು ಶ್ರೀನಿವಾಸ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Kichcha Sudeep: ಎಂ ಎನ್​ ಕುಮಾರ್​ ಹೊರಿಸಿದ ಆರೋಪಕ್ಕೆ ಸುದೀರ್ಘ ಪತ್ರ ಬರೆದ ಕಿಚ್ಚ ಸುದೀಪ್‌

ರೆಹಮಾನ್‌ ಯಜಮಾನ ಎಂಬ ಮಹೋನ್ನತ ಸಿನಿಮಾದ ನಿರ್ಮಾಪಕ

ಇನ್ನು ರೆಹಮಾನ್‌ ಅವ್ರು “ಯಜಮಾನ ಎಂಬ ಮಹೋನ್ನತ ಸಿನಿಮಾದ ನಿರ್ಮಾಪಕರು”. ನೆನಪಿರಬಹುದು ನಾವು ಕಟೌಟ್‌ ಜಾತ್ರೆ ಮಾಡಿದ್ವಿ. ಅದು ಈಗ ಏಷಿಯನ್‌ ಬುಕ್‌ ಆಫ್‌ ರೆಕಾರ್ಡ್‌ನಲ್ಲಿ ದಾಖಲಾಗಿದೆ. ಆ ಕಟೌಟ್‌ ಜಾತ್ರೆಗೆ ಅಭಿಮಾನಿಗಳೆಲ್ಲರೂ ಒಂದೊಂದು ಕಟೌಟ್‌ ಮಾಡಿಸುತ್ತಿದ್ದೇವೆ, ನೀವೂ ಒಂದು ಕಟೌಟ್‌ ಕೊಡಿ ಸರ್‌ ಅಂತ ಕೇಳಿದ್ದಕ್ಕೆ ಅಯ್ಯೋ… ನಿಮ್ಮೆಜಮಾನ್ರಿಂದ ನಾನೇನು ಉದ್ದಾರವಾಗಿಲ್ಲ, ಕಟೌಟ್‌ ಕೊಡೋಕೆ ಆಗಲ್ಲ ಅಂತ ಹೇಳಿದ ದೊಡ್ಡವ್ಯಕ್ತಿ ಅವರು. ಯಜಮಾನ ಸಿನಿಮಾವನ್ನು ಮರುಬಿಡುಗಡೆ ಮಾಡೋಣವಾ ಸರ್‌ ಅಂದರೆ ನನ್ನ ಹತ್ರ ಇಪ್ಪತ್ತೈದು ಲಕ್ಷ ಕೇಳಿದ ನಿರ್ಮಾಪಕರು ಅವರು. ಅಂತಹ ರೆಹಮಾನ್‌ ಅವರು ಇವತ್ತು ಯಜಮಾನರ ಕೆಲಸಗಳಿಗಾಗಿ 365 ದಿನವೂ ಸಿದ್ಧವಾಗಿರುವ ಸುದೀಪ್‌ ಅವರ ಬಗ್ಗೆ ಮಾತನಾಡುತ್ತಿದ್ದಾರೆ. ಅದೂ ವಿಷ್ಣು ಸರ್‌ ಹೆಸರನ್ನು ತೆಗೆದುಕೊಂಡು. ಮುಜುಗರವಾಗಲ್ವಾ ಇವರಿಗೆ? ಸ್ವರ್ಗ ಸಿನಿಮಾಗೆ ವಿಷ್ಣು ಸರ್‌ ಅವರನ್ನು ಒಪ್ಪಿಸ್ತೀನಿ ಅಂತ ಹೇಳಿ ನೀವು ಸುದೀಪ್‌ ಅವ್ರ ಕಾಲ್ ಶೀಟ್ ಅನ್ನು ಪಡೆದಿದ್ದರ ಬಗ್ಗೆ ನೀವೇ ನನಗೆ ಹೇಳಿದ್ದೀರಿ. ಆಮೇಲೆ ವಿಷ್ಣು ಸರ್‌ ಆ ಸಿನಿಮಾ ಒಪ್ಪಲಿಲ್ಲ ಎಂಬ ಕಾರಣಕ್ಕೆ ಸುದೀಪ್‌ ಸರ್‌ ಕೂಡ ಅದರಲ್ಲಿ ನಟಿಸಲಿಲ್ಲ. ಏಕೆಂದರೆ ವಿಷ್ಣು ಅವರಿಲ್ಲದ ಮೇಲೆ ಆ ಸಿನಿಮಾಗೆ ಧಮ್‌ ಇಲ್ಲ ಅಂತ ಅವ್ರು ನಂಬಿದ್ದರು. ಆ ಮೂಲಕ ಅವ್ರು ಯಜಮಾನ್ರಿಗೆ ಗೌರವ ಕೊಟ್ಟಿದ್ದರು. ಆ ವಿಷ್ಯವನ್ನು ಈಗ ಅವಕಾಶ ಸಿಕ್ಕಿದೆ ಅಂತ ನೀವು ತಿರುಗಾ ಮುರುಗಾ ಮಾಡಿ ಮಾತಾಡುವುದು ತಪ್ಪಲ್ವಾ ಸರ್? ʼದೊಡ್ಮನುಷ್ಯʼ ಟೈಟಲ್‌ ಸುದೀಪ್‌ ಅವ್ರಿಗಾಗಿ ನೋಂದಾಯಿಸಿ ಇಟ್ಟುಕೊಂಡಿದ್ದೇನೆ. ನೀವೊಂದು ಮಾತು ಸುದೀಪ್‌ ಅವ್ರಿಗೆ ಹೇಳಿ ಅಂತ ನನ್ನ ಮೂಲಕ ಶಿಫಾರಸ್ಸಿಗೆ ಯತ್ನಿಸಿದ್ದು ಮರೆತಿದ್ದೀರಾ? ನಿಮ್ಗೆ ಸುದೀಪ್‌ ಅವ್ರಿಂದ ಮೋಸವಾಗಿದ್ದರೆ ಸುದೀಪ್‌ ಅವ್ರಿಗಾಗಿ ಆ ಟೈಟಲ್‌ ಯಾಕೆ ರಿಜಿಸ್ಟರ್‌ ಮಾಡಿದ್ರಿ? ಅಂದ್ರೆ ನಿಮಗೆ ಅವರ ಬಗ್ಗೆ ಗೌರವವಿತ್ತು ಆದ್ರೆ ಅದು ಅವಕಾಶ ಸಿಗಬಹುದೆನ್ನುವ ಗೌರವ. ಯಾವಾಗ ಅದು ಸಿಗುವುದಿಲ್ಲವೆಂಬುದು ಖಾತ್ರಿಯಾಯಿತೋ… ಆಗ ಎಟುಕದ ದ್ರಾಕ್ಷಿ ಹುಳಿಯಾಗಿಬಿಟ್ಟಿದೆ ಅಷ್ಟೇ. ಇನ್ಮೇಲೆ ಅವ್ರ ಸಿನಿಮಾ ಮಾಡೋಕೆ ಅಗಲ್ಲ ಅನ್ನೋ ಸತ್ಯವನ್ನು ಅರಗಿಸಿಕೊಳ್ಳಲಾಗದೆ, ಅಸಹಾಯಕತೆ ಮತ್ತು ಅಸಹನೆಯನ್ನು ಹೀಗೆ ಹೊರಹಾಕಿ, ಯಜಮಾನ ಸಿನಿಮಾದ ನಿರ್ಮಾಪಕನೆಂಬ ಘನತೆಯನ್ನು ಕಳೆದುಕೊಳ್ಳುತ್ತಿದ್ದೀರಿ” ಎಂದು ಬರೆದುಕೊಂಡಿದ್ದಾರೆ.

ಕಷ್ಟದಲ್ಲಿದ್ದಾರೆ ಅಂದ್ರೆ ಕೈ ಹಿಡಿಯೋ ಬಹುದೊಡ್ಡ ನಟ ಸುದೀಪ್

“ಯಾರಾದ್ರೂ ಕಷ್ಟದಲ್ಲಿದ್ದಾರೆ ಅಂದ್ರೆ ಕೈ ಹಿಡಿಯೋ ಇವತ್ತಿನ ತಲೆಮಾರಿನ ಬಹುದೊಡ್ಡ ನಟ ಸುದೀಪ್ ಅವರು. ಶೋ ರೂಮಿನಿಂದ ಗಾಡಿ ಖರೀದಿಸಿ, ರೋಡಿಗೆ ಇಳಿದ ತಕ್ಷಣ ಆಕ್ಸಿಡೆಂಟ್‌ ಆದ್ರೆ, ಯಾವ ಶೋರೋಮಿನವನೂ ಹಣ ವಾಪಸ್ಸು ಕೊಡುವುದಿಲ್ಲ. ಅಂತಹುದರಲ್ಲಿ ಸುದೀಪ್‌ ಸರ್‌ ಒಂದು ಸಿನಿಮಾ ನಷ್ಟವಾಯ್ತು ಅಂದ ತಕ್ಷಣ ಕರೆದು ಮತ್ತೊಂದು ಸಿನಿಮಾ ಕೊಡುವಷ್ಟು ಸಂಭಾವಿತರು. ರಾಜ್, ವಿಷ್ಣು ನಂತರದಲ್ಲಿ ಅಂತಹದೊಂದು ಪರಂಪರೆಯನ್ನು ಇಂದಿಗೂ ಮುಂದುವರಿಸಿಕೊಂಡು ಹೋಗುತ್ತಿರುವವರಲ್ಲಿ ಸುದೀಪ್ ಅವ್ರು ಮೊದಲಿಗರು. ಆದ್ದರಿಂದಲೇ ಕುಮಾರ್‌ ಅವ್ರು ನಾಲ್ಕು ಸಿನಿಮಾ ಮಾಡಲು ಸಾಧ್ಯವಾಯಿತು. ಸೂರಪ್ಪ ಬಾಬು ಅವ್ರು ಎರಡು ಸಿನಿಮಾ ಮಾಡಲು ಸಾಧ್ಯವಾಯಿತು. ರೆಹಮಾನ್‌ ಅವ್ರು ಇಷ್ಟೆಲ್ಲಾ ಮಾತನಾಡುವಂತಾಯಿತು” ಎಂದು ಪೋಸ್ಟ್‌ ಶೇರ್‌ ಮಾಡಿದ್ದಾರೆ.

“ಸುದೀಪ್‌ ಅವರ ಮಾನಹರಣ ಮಾಡಿದ್ದರೆ ಇವರಿಗೆ ಅವರ ಕಾಲ್ ಶೀಟ್ ಸಿಗಲ್ಲ ಅನ್ನೋದು ಗೊತ್ತು… ಆಗಿದ್ರೂ ಯಾಕೆ ಈ ಕೆಲಸ ಮಾಡ್ತಿದ್ದಾರೆ? ಯಾಕೆ ಅಂದ್ರೆ ನೀವು ಹೀಗೆ ಅವರ ತೇಜೋವಧೆ ಮಾಡುವದರಿಂದ ಇವರು ಕೆಲವು ಹೀರೋಗಳಿಗೆ ಹತ್ತಿರವಾಗುತ್ತಾರೆ. ಅವರ ಕಾಲ್ ಶೀಟ್ ಅದ್ರೂ ಸಿಗಬಹುದು ಎಂಬ ದೂರದೃಷ್ಟಿ ಅವರದು. ಆದ್ರೆ ಒಂದು ನೆನಪಿರಲಿ.. ಸುದೀಪ್‌ ಅವ್ರ ಮಾನಹರಣ ಮಾಡೋಕೆ ಅವರಿಗಿಂತ ಒಂದಷ್ಟು ಎತ್ತರದ ವ್ಯಕ್ತಿ ಇರಬೇಕು. ಅವರಿಗಿಂತ ಚೂರು ಹೆಚ್ಚೇ ಸಾಧನೆ ಮಾಡಿರಬೇಕು. ಇಲ್ಲವಾದರೆ ಕನ್ನಡ ಜನತೆ ಅದನ್ನು ನಂಬಲ್ಲ. ಚಿನ್ನದ ಶುದ್ದತೆಯನ್ನು ಪರೀಕ್ಷಿಸುವ ಹಾಗೆ, ನಿಮ್ಮ ಆರೋಪಗಳನ್ನೂ ಪರೀಕ್ಷಿಸುತ್ತಾರೆ. ಆಗ ಬಟಾಬಯಲಾಗೋ ಸರದಿಯಲ್ಲಿ ನೀವೂ ಇರ್ತೀರಿ” ಎಂದಿದ್ದಾರೆ.

ಇದನ್ನೂ ಓದಿ: Kiccha Sudeep : ನನ್ನ ಒಳ್ಳೆಯತನ ದುರುಪಯೋಗದ ಟೂಲ್‌ ಅಲ್ಲ! ಖಡಕ್‌ ಸಂದೇಶ ಕೊಟ್ಟ ಕಿಚ್ಚ ಸುದೀಪ್

ಸೂಪರ್‌ ಸ್ಟಾರ್‌ ವಿರುದ್ದ ಷಡ್ಯಂತ್ರ ನಡೆಸೋಕೆ ವಾಣಿಜ್ಯ ಮಂಡಳಿಯಲ್ಲಿಯೇ ಅವಕಾಶ ಕೊಡ್ತಾ ಇದೆ!

“ಇನ್ನು ಆ ವಾಣಿಜ್ಯ ಮಂಡಳಿ! ದೇವ್ರೇ… ಅದರ ಬಗ್ಗೆ ಮಾತನಾಡೋದೆ ಬೇಡ. ಒಬ್ಬ ತಾಯಿಗೆ ಹತ್ತು ಮಕ್ಕಳಿದ್ದರೆ ಹತ್ತೂ ಮಕ್ಕಳಿಗೂ ಸಮಾನ ಪ್ರೀತಿ ಹಂಚ್ತಾಳೆ… ಅದಕ್ಕೆ ಆಕೆ ತಾಯಿ! ಆದ್ರೆ ಚಿತ್ರರಂಗದ ಮಾತೃಸಂಸ್ಥೆ ಎಂದು ಕರೆಸಿಕೊಳ್ಳುವ ಇವ್ರು ಮಾತ್ರ, ಇಡೀ ದೇಶವೇ ಹೆಮ್ಮೆಪಡುವಂತಹ ಕನ್ನಡದ ಸೂಪರ್‌ ಸ್ಟಾರ್‌ ವಿರುದ್ದ ಷಡ್ಯಂತ್ರ ನಡೆಸೋಕೆ ವಾಣಿಜ್ಯ ಮಂಡಳಿಯಲ್ಲಿಯೇ ಪ್ರೆಸ್‌ಮೀಟ್ ಆಯೋಜನೆಗೆ ಅವಕಾಶ ಕೊಡ್ತಾರಂದ್ರೆ ಏನ್‌ ಹೇಳಬೇಕು. ಅಂದರೆ ಇವರ ಪಕ್ಷಪಾತ ಧೋರಣೆಗಳ ಅಧ್ಯಾಯ ಇನ್ನೂ ಮುಗಿದಿಲ್ಲವೆನಿಸುತ್ತೆ. ಅಮೃತಮಹೋತ್ಸವದಲ್ಲಿ ಪೋಷಕ ನಟರ ಸಾಲಿನಲ್ಲಿ ಕೂರಿಸಿ ಡಾ.ವಿಷ್ಣುವರ್ಧನ್‌ ಅವರಿಗೆ ಸನ್ಮಾನಿಸಿ ಅವಮಾನಿಸಿದ ಈ ತಂಡ ಇಷ್ಟು ವರ್ಷಗಳ ನಂತರವಾದರೂ ಬದಲಾಗದೇ ಹೋಗಿರುವುದು ಏಕೆ ಅಂತ? ಭಾಮಾ ಹರೀಶ್‌ ಅವರಂತಹ ವ್ಯಕ್ತಿ ಬಂದ್ಮೇಲೂ ಇಂತಹ ಪಕ್ಷಪಾತಿ ಚಟುವಟಿಕೆಗಳು ಆಗುತ್ತಿವೆ ಎಂದರೆ ಏನ್‌ ಹೇಳುವುದು? ಕನ್ನಡ ಸಿನಿಮಾ ರಂಗದಲ್ಲಿ ವರ್ಷಕ್ಕೆ ಐದು ಸಿನಿಮಾ ಕೂಡ ಹಿಟ್‌ ಆಗ್ತಿಲ್ಲ. ಥಿಯೇಟರ್‌ಗಳು ಮುಚ್ಚಿಕೊಂಡು ಹೋಗ್ತಿವೆ. ಇದನ್ನೇ ನಂಬಿದ ಜನ ಮಕ್ಕಳಿಗೆ ಸ್ಕೂಲ್‌ ಫೀಸ್‌ ಕಟ್ಟಲಾಗದ, ಮನೆ ಬಾಡಿಗೆ ಕಟ್ಟಲಾಗದ ದುಸ್ಥಿತಿಯಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಚಿತ್ರರಂಗದ ಏಳ್ಗೆಗೆ ಮಾರ್ಗೋಪಾಯಗಳನ್ನು ಹುಡುಕುವ ಕೆಲಸ ಮಾಡಬೇಕಲ್ಲವಾ? ಸುದೀಪ್ ಅವ್ರ ಆದಿಯಾಗಿ, ಎರಡು ವರ್ಷಕ್ಕೆ ಒಂದು ಸಿನಿಮಾ ಮಾಡೋ ಸ್ಟಾರ್‌ಗಳಿಗೆ ವರ್ಷಕ್ಕೆ ಎರಡು ಸಿನಿಮಾ ಮಾಡುವಂತೆ ತಾಕೀತು ಮಾಡಬೇಕಲ್ಲವಾ? ಅದನ್ನೆಲ್ಲಾ ಬಿಟ್ಟು ಇಂತಹ ಷಡ್ಯಂತ್ರಗಳ ಭಾಗವಾಗುತ್ತಿರುವುದು ನಿಜಕ್ಕೂ ನಾಚಿಕೆಗೇಡು” ಎಂದು ವೀರಕಪುತ್ರ ಶ್ರೀನಿವಾಸ ಹೇಳಿದ್ದಾರೆ.

ಒಬ್ಬರ ಒಳ್ಳೇತನ ಸಮಯಸಾಧಕರಿಗೆ ಅಸ್ತ್ರವಾಗಬಾರದು.

ಸುದೀಪ್‌ ಸರ್‌ ಅವರು ಹತ್ತು ವರ್ಷಗಳ ಹಿಂದೆ ಇದ್ದ ರೀತಿ ಇಂದು ಇದ್ದಿದ್ದರೆ ಇವರುಗಳು ಹೀಗೆಲ್ಲಾ ಮಾತನಾಡಲು ಸಾಧ್ಯವೇ ಆಗುತ್ತಿರಲಿಲ್ಲ. ಆದರೆ ಅವರು ಈಗ ಬದಲಾಗಿದ್ದಾರೆ. ನಡೆ ನುಡಿಯಲ್ಲಿ ಸಂಯಮ, ಸಂಸ್ಕಾರ, ಹಿರಿಯರ ಬಗ್ಗೆ ಗೌರವ, ಕಿರಿಯರಿಗೆ ಪ್ರೋತ್ಸಾಹ ಕೊಡ್ತಾ ಸಮಸ್ತ ಚಿತ್ರರಂಗ ನನ್ನ ಕುಟುಂಬ ಎಂಬ ಭಾವ ಬಿತ್ತಿ ಬೆಳೆಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಇವರೆಲ್ಲರೂ ಅವರ ಸಂಯಮವನ್ನು ಅಣಕಿಸುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕಿರುವುದು ಬೆಂಗಳೂರಿನ ಅಭಿಮಾನಿಗಳು ಮಾತ್ರವಲ್ಲ ರಾಜ್ಯದಲ್ಲಿರುವ ಸುದೀಪ್‌ ಅವ್ರ ಅಭಿಮಾನಿಗಳೆಲ್ಲರೂ ಈ ನಿರ್ಮಾಪಕರ ಮನೆಗಳ ಎದುರು ಧರಣಿ ಕೂತು, ದಾಖಲೆ ಕೇಳಬೇಕು. ದಾಖಲೆ ಕೊಡಲಾಗದಿದ್ದರೆ ಕ್ಷಮೆ ಕೇಳುವಂತೆ ಮಾಡಬೇಕು. ಒಬ್ಬರ ಒಳ್ಳೇತನ ಸಮಯಸಾಧಕರಿಗೆ ಅಸ್ತ್ರವಾಗಬಾರದು. ಅಷ್ಟೇʼʼಎಂದು ಬರೆದುಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Ambareesh Birthday: ಸಿಹಿ ಸುದ್ದಿ ಕೊಡಲಿದ್ದಾರಾ ಅಭಿಷೇಕ್‌-ಅವಿವಾ? ಸುಮಲತಾ ಹೇಳಿದ್ದೇನು?

Ambareesh Birthday: ಇನ್ನು ರೆಬಲ್‌ ಸ್ಟಾರ್‌ ಹುಟ್ಟುಹಬ್ಬ ನಟ ದರ್ಶನ್‌ ವಿಶೇಷ ರೀತಿಯಲ್ಲಿ ಶುಭಕೋರಿದ್ದಾರೆ. ಅಂಬರೀಶ್‌ ಅವರ ವಿಶೇಷ ಪೋಸ್ಟರ್ ರಿಲೀಸ್ ಮಾಡಿ ದರ್ಶನ್‌ ಶುಭಕೋರಿದ್ದಾರೆ. ಎಕ್ಸ್‌ನಲ್ಲಿ ಸ್ಪೆಷಲ್ ಆಗಿ ಅಂಬರೀಶ್ ಅಪ್ಪಾಜಿಗೆ ದರ್ಶನ್ (Darshan) ವಿಶ್ ಮಾಡಿದ್ದಾರೆ. ಅಭಿಷೇಕ್‌ ಅಂಬರೀಶ್‌ ಕಂಠೀರವ ಸ್ಟುಡಿಯೋದಲ್ಲಿರೋ ಅಂಬರೀಶ್ ಸಮಾಧಿಗೆ ಬಂದು ಪೂಜೆ ಸಲ್ಲಿಸಲಿದ್ದಾರೆ. ಮಾಧ್ಯಮಗಳ ಬಳಿ ಅಂಬರೀಶ್ ಅವರ ನೆನಪುಗಳ ಕುರಿತಾಗಿ ಸುಮಲತಾ ಮಾತನಾಡಿದರು.

VISTARANEWS.COM


on

Ambareesh Birthday during Sumalatha Ambareesh Talks About Abhishek Ambareesh And Aviva
Koo

ಬೆಂಗಳೂರು: ಇಂದು ರೆಬೆಲ್ ಸ್ಟಾರ್ ಅಂಬರೀಶ್ ಜನ್ಮ ದಿನ (Ambareesh Birthday). ಅಂಬಿ ನಮ್ಮನ್ನಗಲಿ ಐದು ವರ್ಷಗಳು ಕಳೆದರೂ ಬದುಕಿದ್ದಾಗ ಅವರು ಅದೆಷ್ಟು ಅಭಿಮಾನಿ ಬಳಗ ಹೊಂದಿದ್ದರೋ ಅಷ್ಟೇ ಫ್ಯಾನ್‌ ಬೇಸ್‌ ಇವತ್ತಿಗೂ ಅವರಿಗಿದೆ. ಇಂದು ಅವರ 72 ನೇ ಜನ್ಮ ದಿನವಾದ ಇಂದು ಪತ್ನಿ ಸುಮಲತಾ ಅಂಬರೀಶ್‌, ಪುತ್ರ ಅಭಿಷೇಕ್‌ ಅಂಬರೀಶ್‌ ಕಂಠೀರವ ಸ್ಟುಡಿಯೋದಲ್ಲಿರೋ ಅಂಬರೀಶ್ ಸಮಾಧಿಗೆ ಬಂದು ಪೂಜೆ ಸಲ್ಲಿಸಲಿದ್ದಾರೆ. ಮಾಧ್ಯಮಗಳ ಬಳಿ ಅಂಬರೀಶ್ ಅವರ ನೆನಪುಗಳ ಕುರಿತಾಗಿ ಸುಮಲತಾ ಮಾತನಾಡಿದರು. ಈ ಸಮಯದಲ್ಲಿ ಸುಮಲತಾ ಪುತ್ರ ಅಭಿಷೇಕ್ ಅಂಬರೀಶ್ ಅಪ್ಪ ಆಗುತ್ತಿದ್ದಾರೆಯೇ? ನೀವು ಅಜ್ಜಿ ಆಗುತ್ತಿದ್ದೀರಿಯೇ? (Abhishek Ambareesh And Aviva) ಎಂಬ ಪ್ರಶ್ನೆ ಬಂತು. ಆಗ ಸಮಲತಾ ಅವರು ʻʻಸದ್ಯಕ್ಕೆ ಇಲ್ಲ. ಸಿಹಿ ಸುದ್ದಿ ಇದ್ದಾಗ ಖಂಡಿತ ಹೇಳುತ್ತೇನೆʼʼಎಂದರು.

ಈ ವೇಳೆ ಸುಮಲತಾ ಮಾತನಾಡಿ ʻʻಅಂಬಿ ಅಗಲಿ ಆರು ವರ್ಷ ಆಗಿದೆ. ಆದರೆ ಅಂಬಿ ಇದ್ದಾಗ ಎಷ್ಟು ಪ್ರೀತಿ ತೋರಿಸುತ್ತಿದ್ದರೋ ಅಷ್ಟೇ ಪ್ರೀತಿ ಈಗಲೂ ಅಭಿಮಾನಿಗಳು ತೋರಿಸುತ್ತಿದ್ದಾರೆ. ಅಂಬರೀಶ್ ಮಾಡಿದ ಸಮಾಜಮುಖಿ ಕೆಲಸಗಳನ್ನ ನೆನಪಲ್ಲಿಟ್ಕೊಂಡಿದ್ದಾರೆ ಜನ. ಕಳೆದ ವರ್ಷ ಅಂಬರೀಶ್ ಫೌಂಡೇಶನ್ ಶುರು ಮಾಡಿದ್ವಿ. ಫೌಂಡೇಶನ್ ವತಿಯಿಂದ ಸಾಧಕರನ್ನ ಗುರ್ತಿಸಿ ಸನ್ಮಾನಿಸುವ ಕೆಲಸ ಆಗ್ತಿದೆ. ಸಮಾಜಮುಖಿ ಕೆಲಸ ಮಾಡಿದವರಿಗೆ, ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಅಂಬರೀಶ್ ಫೌಂಡೇಶನ್ ವತಿಯಿಂದ ಸನ್ಮಾನ ಆಗುತ್ತಿದೆ. ಮಂಡ್ಯದಲ್ಲಿ ಇಂದು ಕಾರ್ಯಕ್ರಮ ಹಮ್ಮಿಕೊಳ್ಳಾಗಿದೆ. ಹೋದ ಕಡೆಯಲೆಲ್ಲ ಅಂಬರೀಶ್ ಅವರ ಬಗ್ಗೆ ನಮಗೆ ಗೊತ್ತಿಲ್ಲದ ಕೆಲಸಗಳ ಬಗ್ಗೆ ಹೇಳ್ತಾರೆʼʼಎಂದರು.

ಇದನ್ನೂ ಓದಿ: Ambareesh Birthday: ರೆಬಲ್‌ ಸ್ಟಾರ್‌ 72 ನೇ ಹುಟ್ಟುಹಬ್ಬ; ಅಂಬಿ ಸ್ಮರಣಾರ್ಥ ಅಭಿಮಾನಿಗಳಿಂದ ವಿವಿಧ ಕಾರ್ಯಕ್ರಮ

ಸುಮಲತಾ ಅಂಬರೀಷ್ ಅವರು ಬೆಳಿಗ್ಗೆಯೇ ಮಗ ಅಭಿಷೇಕ್ ಹಾಗೂ ಸೊಸೆ ಅವಿವಾ ಜತೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಂಬಿ ಸ್ಮಾರಕಕ್ಕೆ ಬಂದು ಪೂಜೆ ಸಲ್ಲಿಸಿದ್ದಾರೆ.

ಅಂಬರೀಶ್‌ರನ್ನು ನೆನೆದ ಡಿ ಬಾಸ್‌

ಇನ್ನು ರೆಬಲ್‌ ಸ್ಟಾರ್‌ ಹುಟ್ಟುಹಬ್ಬ ನಟ ದರ್ಶನ್‌ ವಿಶೇಷ ರೀತಿಯಲ್ಲಿ ಶುಭಕೋರಿದ್ದಾರೆ. ಅಂಬರೀಶ್‌ ಅವರ ವಿಶೇಷ ಪೋಸ್ಟರ್ ರಿಲೀಸ್ ಮಾಡಿ ದರ್ಶನ್‌ ಶುಭಕೋರಿದ್ದಾರೆ. ಎಕ್ಸ್‌ನಲ್ಲಿ ಸ್ಪೆಷಲ್ ಆಗಿ ಅಂಬರೀಶ್ ಅಪ್ಪಾಜಿಗೆ ದರ್ಶನ್ (Darshan) ವಿಶ್ ಮಾಡಿದ್ದಾರೆ.

ನಮ್ಮೆಲ್ಲರ ಅಚ್ಚುಮೆಚ್ಚಿನ ಸಹೃದಯಿ, ರೆಬೆಲ್ ಸ್ಟಾರ್ ಅಂಬಿ ಅಪ್ಪಾಜಿರವರ ಹುಟ್ಟುಹಬ್ಬದ (Birthday) ಪ್ರಯುಕ್ತ ಮೂಡಿಬಂದಿರುವ CDP ಬಿಡುಗಡೆ ಮಾಡಲು ಅವಕಾಶ ಮಾಡಿಕೊಟ್ಟ ಅಭಿಮಾನಿ ಸಮೂಹಕ್ಕೆ ಧನ್ಯವಾದಗಳು. ನಮ್ಮ ನಿಷ್ಠೆಯ ಕೆಲಸ-ಕಾರ್ಯಗಳಲ್ಲಿ ಸದಾ ಬೆನ್ನೆಲುಬಾಗಿ ಅಂಬಿ ಅಪ್ಪಾಜಿ ನಮ್ಮೊಂದಿಗೆ ಜೀವಂತವಾಗಿದ್ದಾರೆ ಎಂದು ದರ್ಶನ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ದರ್ಶನ್‌ ಅಂಬರೀಶ್‌ಗೆ ಶುಭಕೋರಿದ್ದಾರೆ.

Continue Reading

ಟಾಲಿವುಡ್

Pushpa 2: ʼಪುಷ್ಪ 2ʼ ಸಿನಿಮಾದ ಎರಡನೇ ಹಾಡು ರಿಲೀಸ್‌: ಅಲ್ಲು ಜತೆ ಹೆಜ್ಜೆ ಹಾಕಿದ ರಶ್ಮಿಕಾ!

Pushpa 2: ಸಾಮಿ ಹಾಡನ್ನೂ ಮೀರಿಸುವಂತಿದೆ ಹಾಡು. ಅ ದೇವಿಶ್ರೀ ಪ್ರಸಾದ್‌ ಸಂಗೀತ ನಿರ್ದೇಶನದಲ್ಲಿ ಶ್ರೇಯಾ ಘೋಷಾಲ್‌ ಈ ಹಾಡಿಗೆ ಧ್ವನಿಯಾಗಿದ್ದಾರೆ. ಹಾಡಿಗೆ ಬಾಲಿವುಡ್‌ ಗಣೇಶ್ ಆಚಾರ್ಯ ಕೊರಿಯೋಗ್ರಾಫಿ ಇದೆ.ಈ ಹಾಡು 6 ಭಾಷೆಗಳಲ್ಲಿ ಮೂಡಿ ಬಂದಿದೆ. ಎಲ್ಲ ಭಾಷೆಗಳಲ್ಲಿಯೂ ಶ್ರೇಯಾ ಘೋಷಾಲ್‌ ಹಾಡಿಗೆ ಧ್ವನಿ ನೀಡುತ್ತಿರುವುದು ವಿಶೇಷ.

VISTARANEWS.COM


on

Pushpa 2 SOOSEKI Couple Song Lyrical Video out
Koo

ಬೆಂಗಳೂರು: ಸದ್ಯ ದೇಶದ ಗಮನ ಸೆಳೆದಿರುವ ಚಿತ್ರಗಳ ಪೈಕಿ ಟಾಲಿವುಡ್‌ ಸ್ಟೈಲಿಶ್‌ ಸ್ಟಾರ್‌ ಅಲ್ಲು ಅರ್ಜುನ್‌-ರಶ್ಮಿಕಾ ಮಂದಣ್ಣ ಅಭಿನಯದ ʼಪುಷ್ಪ 2ʼ (Pushpa 2) ಕೂಡ ಒಂದು. 2021ರಲ್ಲಿ ತೆರೆಕಂಡು ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಮಾಡುದ್ದ ಪ್ಯಾನ್‌ ಇಂಡಿಯಾ ಸಿನಿಮಾ ʼಪುಷ್ಪʼದ ಮುಂದುವರಿದ ಭಾಗ ಇದು. ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಮೊದಲ ಹಾಡು ಈಗಾಗಲೇ ರಿಲೀಸ್‌ ಆಗಿ ಧೂಳೆಬ್ಬಿಸುತ್ತಿದೆ. ಅದರಲ್ಲಿಯೂ ಯೂಟ್ಯೂಬ್‌ನಲ್ಲಿ ದಾಖಲೆಯ ವೀಕ್ಷಣೆ ಕಂಡಿದೆ. ʻಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದು, ಇದರಲ್ಲಿನ ಹುಕ್ ಸ್ಟೆಪ್ ವೈರಲ್‌ ಆಗಿದೆ. ಇದೀಗ ಎರಡನೇ ಹಾಡು ಔಟ್‌ ಆಗಿದೆ. ಅಲ್ಲು ಅರ್ಜುನ್‌ ಜತೆ ರಶ್ಮಿಕಾ ಹೆಜ್ಜೆ ಹಾಕಿದ್ದಾರೆ. ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀವ್ಸ್‌ ಪಡೆದುಕೊಂಡಿದೆ.

ಸಾಮಿ ಹಾಡನ್ನೂ ಮೀರಿಸುವಂತಿದೆ ಸೂಸೇನೆ ಹಾಡು. ಅ ದೇವಿಶ್ರೀ ಪ್ರಸಾದ್‌ ಸಂಗೀತ ನಿರ್ದೇಶನದಲ್ಲಿ ಶ್ರೇಯಾ ಘೋಷಾಲ್‌ ಈ ಹಾಡಿಗೆ ಧ್ವನಿಯಾಗಿದ್ದಾರೆ. ಹಾಡಿಗೆ ಬಾಲಿವುಡ್‌ ಗಣೇಶ್ ಆಚಾರ್ಯ ಕೊರಿಯೋಗ್ರಾಫಿ ಇದೆ.

6 ಭಾಷೆಗಳಲ್ಲಿಯೂ ಶ್ರೇಯಾ ಮೋಡಿ

ಈ ಹಾಡು 6 ಭಾಷೆಗಳಲ್ಲಿ ಮೂಡಿ ಬಂದಿದೆ. ಎಲ್ಲ ಭಾಷೆಗಳಲ್ಲಿಯೂ ಶ್ರೇಯಾ ಘೋಷಾಲ್‌ ಹಾಡಿಗೆ ಧ್ವನಿ ನೀಡುತ್ತಿರುವುದು ವಿಶೇಷ. ಸೂಸೆಕಿ (ತೆಲುಗು), ನೋಡೋಕ (ಕನ್ನಡ), ಅಂಗಾರೊನ್‌ (ಹಿಂದಿ), ಸೂಡಾನ (ತಮಿಳು), ಕಂಡಾಲೋ (ಮಲಯಾಳಂ) ಮತ್ತು ಆಗುನೆರ್‌ (ಬಂಗಾಳಿ) ಎಂದು ಆರಂಭವಾಗುವ ಹಾಡನ್ನು ಶ್ರೇಯಾ ಘೋಷಾಲ್‌ ಹಾಡಿದ್ದಾರೆ.

ಇದನ್ನೂ ಓದಿ: Pushpa 2: ʼಪುಷ್ಪ 2ʼ ಸಿನಿಮಾ ತಂಡದಿಂದ ಅಲ್ಲು ಅರ್ಜುನ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌; ಎರಡನೇ ಹಾಡು ರಿಲೀಸ್‌ಗೆ ಮುಹೂರ್ತ ಫಿಕ್ಸ್‌

ಚಿತ್ರ ಬಿಡುಗಡೆ ಯಾವಾಗ?

ʼಪುಷ್ಪ 2ʼ ಸಿನಿಮಾ ಆಗಸ್ಟ್‌ 15ರಂದು ಬಿಡುಗಡೆಯಾಗಲಿದೆ. ಮೈತ್ರಿ ಮೂವೀ‌ ಮೇಕರ್ಸ್ ದುಬಾರಿ ಬಜೆಟ್‌ನಲ್ಲಿ ಚಿತ್ರ ನಿರ್ಮಿಸುತ್ತಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್‌ ಜತೆಯಾಗಿ ಶ್ರೀವಲ್ಲಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹದ್ ಫಾಸಿಲ್, ಡಾಲಿ ಧನಂಜಯ್, ಅನಸೂಯಾ ಭಾರದ್ವಾಜ್ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದಂದು ʼಪುಷ್ಪ 2ʼ ತಯಾರಕರು ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದ್ದರು. ಟೀಸರ್​ನಲ್ಲಿ ಅಲ್ಲು ಅರ್ಜುನ್ ಸೀರೆ ಉಟ್ಟು, ಮುಖವನ್ನು ನೀಲಿ ಮತ್ತು ಕೆಂಪು ಬಣ್ಣಗಳನ್ನು ಮೆತ್ತಿಕೊಂಡಿರುವುದು ಕಂಡು ಬಂದಿತ್ತು. ಭಾರವಾದ ಸಾಂಪ್ರದಾಯಿಕ ಚಿನ್ನ ಮತ್ತು ಹೂವಿನ ಆಭರಣಗಳೊಂದಿಗೆ ಮೇಕಪ್ ಧರಿಸಿ ಗೂಂಡಾಗಳನ್ನು ಹೊಡೆಯುತ್ತಿರುವುದು ಟೀಸರ್‌ ಕಂಡು ಬಂದು ವೀಕ್ಷಕರ ಕುತೂಹಲ ಕೆರಳಿಸಿತ್ತು. ಸದ್ಯ ಅಭಿಮಾನಿಗಳು ಚಿತ್ರ ಬಿಡುಗಡೆ ದಿನಾಂಕವನ್ನು ಎದುರು ನೋಡುತ್ತಿದ್ದಾರೆ.

Continue Reading

ಸ್ಯಾಂಡಲ್ ವುಡ್

Shakhahaari Movie: ಪ್ರೇಕ್ಷಕರನ್ನು ಆವರಿಸಿದ ‘ಶಾಖಾಹಾರಿ’: ಪರಭಾಷಿಕರಿಂದಲೂ ಚಿತ್ರಕ್ಕೆ ಮೆಚ್ಚುಗೆ!

Shakhahaari Movie : ಚಿತ್ರಮಂದಿರದಲ್ಲಿ ದಕ್ಕದ ಪ್ರೀತಿ ಶಾಖಾಹಾರಿ ಚಿತ್ರಕ್ಕೆ ಒಟಿಟಿಯಲ್ಲಿ ದೊರೆಯುತ್ತಿದೆ. ಅಮೇಜಾನ್ ಪ್ರೈಮ್‌ಗೆ ಎಂಟ್ರಿ ಕೊಟ್ಟ ಬರೀ 4 ದಿನದಲ್ಲಿ 10 ಮಿಲಿಯನ್ ನಿಮಿಷಗಳ ಸ್ಟ್ರೀಮಿಂಗ್ ಕಂಡಿರುವ ಸಿನಿಮಾ.. ಎಲ್ಲಾ ಜಾಲತಾಣಗಳಲ್ಲು ಬಹಳಷ್ಟು ಜನ ದಿನೇ ದಿನೇ ಮೆಚ್ಚುಗೆ ವ್ಯಕ್ತಪಡಿಸುತ್ತ ಇರುವುದು ಗಮನಾರ್ಹ.

VISTARANEWS.COM


on

Shakhahaari Movie 1 cr minutes of streaming amazon prime
Koo

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಭಿನ್ನ-ವಿಭಿನ್ನ ಪ್ರಯತ್ನಗಳು ನಡೆಯುತ್ತಿವೆ. ಹೊಸಬರ ಜತೆಗೆ ಅನುಭವಿ ತಾರಾಬಳಗ ಕೈ ಜೋಡಿಸಿದಾಗ ಒಂದೊಳ್ಳೆ ಅದ್ಭುತ ಸಿನಿಮಾ ಹೊರಹೊಮ್ಮಲಿದೆ ಎಂಬುದಕ್ಕೆ ʻಶಾಖಾಹಾರಿʼ ಚಿತ್ರ (Shakhahaari Movie) ತಾಜಾ ಉದಾಹರಣೆ. ತನ್ನ ಒಳ್ಳೆಯ ಕಂಟೆಂಟ್‌ನಿಂದಲೇ ಭಾರೀ ಸದ್ದು ಮಾಡಿದ್ದ ಈ ಚಿತ್ರವೀಗ ಅಮೇಜಾನ್ ಪ್ರೈಮ್‌ನಲ್ಲಿ ಅಪಾರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಶಾಖಾಹಾರಿ ನೋಡಿದವರೆಲ್ಲಾ ಇಂತಹ ಸಿನಿಮಾವನ್ನು ಥಿಯೇಟರ್ ನಲ್ಲಿ ಮಿಸ್ ಮಾಡಿಕೊಂಡ್ವಲ್ಲಾ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಫೆಬ್ರವರಿ 16ರಂದು ಬೆಳ್ಳಿಪರದೆಗೆ ಎಂಟ್ರಿ ಕೊಟ್ಟಿದ್ದ ಶಾಖಾಹಾರಿ ಸಿನಿಮಾವೀಗ ಮೂರು ತಿಂಗಳ ಬಳಿಕ ಒಟಿಟಿಗೆ ಲಗ್ಗೆ ಇಟ್ಟಿದೆ. ಶುಕ್ರವಾರದಿಂದ ಅಮೇಜಾನ್ ಪ್ರೈಮ್ ನಲ್ಲಿ ಸ್ಕ್ರೀಮ್ ಆಗಿರುವ ಈ ಚಿತ್ರವನ್ನು ನೋಡಿದವರೆಲ್ಲಾ ವಾವ್ ಇಂತಹ ಪ್ರಯತ್ನಗಳು ಮಾಲಿವುಡ್‌ನಲ್ಲಿ ಮಾತ್ರವಲ್ಲ ನಮ್ಮಲ್ಲಿಯೂ ನಡೆಯುತ್ತವೆ. ಅದಕ್ಕೆ ಪ್ರೇಕ್ಷಕಪ್ರಭು ಬೆನ್ನುತಟ್ಟಬೇಕಷ್ಟೇ.

ಚಿತ್ರಮಂದಿರದಲ್ಲಿ ದಕ್ಕದ ಪ್ರೀತಿ ಶಾಖಾಹಾರಿ ಚಿತ್ರಕ್ಕೆ ಒಟಿಟಿಯಲ್ಲಿ ದೊರೆಯುತ್ತಿದೆ. ಅಮೇಜಾನ್ ಪ್ರೈಮ್‌ಗೆ ಎಂಟ್ರಿ ಕೊಟ್ಟ ಬರೀ 4 ದಿನದಲ್ಲಿ 10 ಮಿಲಿಯನ್ ನಿಮಿಷಗಳ ಸ್ಟ್ರೀಮಿಂಗ್ ಕಂಡಿರುವ ಸಿನಿಮಾ.. ಎಲ್ಲಾ ಜಾಲತಾಣಗಳಲ್ಲು ಬಹಳಷ್ಟು ಜನ ದಿನೇ ದಿನೇ ಮೆಚ್ಚುಗೆ ವ್ಯಕ್ತಪಡಿಸುತ್ತ ಇರುವುದು ಗಮನಾರ್ಹ.

ಇದನ್ನೂ ಓದಿ: Kannada New Movie: ಶಶಿಕುಮಾರ್ ಪುತ್ರನ ‘ಕಾದಾಡಿ’ ಸಿನಿಮಾದ ಲಿರಿಕಲ್ ಸಾಂಗ್ ಔಟ್‌!

ಶಾಖಾಹಾರಿಗೆ ಜೈ ಎಂದ ಸತೀಶ್

ನೀನಾಸಂ ಸತೀಶ್ ಶಾಖಾಹಾರಿ ಸಿನಿಮಾವನ್ನು ಬಾಯ್ ತುಂಬಾ ಹೊಗಳಿದ್ದಾರೆ. ಯಾವ ನೀರಿಕ್ಷೆಯು ಇಲ್ಲದೆ ಸುಮ್ಮನೆ ಸಿನಿಮಾ ನೋಡುತ್ತಾ ಹೋದಾಗ,ಸಿನಿಮಾ ನಮ್ಮನ್ನು ಒಳಗೆ ಸೆಳೆದೊಯ್ಯುತ್ತದೆ,ಸುಳಿಯಂತೆ. ಪ್ರಾಮಾಣಿಕವಾದ, ಯಾರನ್ನೂ ಮೆಚ್ಚಿಸಲು ಅಲ್ಲದೆ ತಮ್ಮಷ್ಟಕ್ಕೆ ತಂಡ ಧ್ಯಾನಿಸಿದೆ. ಸಿನಿಮಾ ಬರೀ ನಿರ್ದೇಶಕ,ಅಥವಾ ನಟರಲ್ಲದೆ ಸಮೂಹದ ಕೆಲಸ ಎಂಬುದನ್ನು ಮತ್ತೆ ಸಾಬೀತು ಮಾಡಿದೆ.ಗೆಳೆಯ ಗೋಪಿ ವಾವ್! ರಘು ಅಣ್ಣ ನಮ್ಮ ಹೆಮ್ಮೆ! ನಿರ್ದೇಶಕ ಸಂದೀಪ್ ,ಮತ್ತು ಛಾಯಾಗ್ರಹಣ, ಸಂಗೀತ ಎಲ್ಲವೂ ಅದ್ಭುತ.ನೋಡಲೇಬೇಕಾದ ನಮ್ಮ ಚಿತ್ರ ಎಂದು ಟ್ವೀಟ್ ಮಾಡಿದ್ದಾರೆ.

ಕ್ಲೈಮ್ಯಾಕ್ಸ್ ಚಿಂದಿ ಎಂದ ಪೃಥ್ವಿ

ನಟ ಪೃಥ್ವಿ ಅಂಬಾರ್ ಕೂಡ ಚಿತ್ರವನ್ನು ನೋಡಿ ಮನಸಾರೆ ಕೊಂಡಾಡಿದ್ದಾರೆ. ಶಾಖಾಹಾರಿ ಬಿಡುಗಡೆ ಸಮಯದಲ್ಲಿ ನನ್ನ ಚಿತ್ರ ಬಿಡುಗಡೆಯಾಗಿತ್ತು. ಹೀಗಾಗಿ ಇಂತಹ ಒಳ್ಳೆ ಸಿನಿಮಾವನ್ನು ಮಿಸ್ ಮಾಡಿಕೊಂಡಿದ್ದೇನೆ. ಅದಕ್ಕಾಗಿ ನನಗೆ ಬೇಸರವಿದೆ. ಚಿತ್ರದ ಕಥೆ, ಟ್ವಿಸ್ಟ್, ಕ್ಲೈಮ್ಯಾಕ್ಸ್ ಎಲ್ಲವೂ ಅದ್ಭುತ. ರಂಗಾಯಣ ರಘು ಸರ್ ಹಾಗೂ ಗೋಪಾಲ್ ದೇಶಪಾಂಡೇ ಸರ್ ಅಭಿನಯ ಸೂಪರ್ ಎಂದಿದ್ದಾರೆ.

ಸಂದೀಪ್ ಸುಂಕದ್ ನಿರ್ದೇಶನದ ‘ಶಾಖಾಹಾರಿ’ ಸಿನಿಮಾದ ಸೂತ್ರಧಾರಿ. ಕನ್ನಡ ಚಿತ್ರರಂಗದ ಹಿರಿಯ ನಟ ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದರು. ಪೊಲೀಸ್ ಅಧಿಕಾರಿಯಾಗಿ ಗೋಪಾಲಕೃಷ್ಣ ದೇಶಪಾಂಡೆ ಅತ್ಯದ್ಬುತವಾಗಿ ನಟಿಸಿದ್ದರು. ಉಳಿದಂತೆ ವಿನಯ್, ನಿಧಿ ಹೆಗಡೆ, ಸುಜಯ್ ಶಾಸ್ತ್ರೀ, ಹರಿಣಿ ಹಾಗೂ ಕಾನ್‌ಸ್ಟೇಬಲ್ ಮಮತಕ್ಕನ ಪಾತ್ರಧಾರಿಯಾಗಿ ಪ್ರತಿಭಾ ನಾಯಕ್ ತಮ್ಮ ಪಾತ್ರಗಳಿಗೆ ನ್ಯಾಯ ಸಲ್ಲಿಸಿದ್ದಾರೆ. ಕೀಲಂಬಿ ಮೀಡಿಯಾ ಲ್ಯಾಬ್ ಬ್ಯಾನರ್ ನಡಿ ರಾಜೇಶ್ ಕೀಲಾಂಬಿ, ರಂಜಿನಿ ಪ್ರಸನ್ನ ಶಾಖಾಹಾರಿಗೆ ಬಂಡವಾಳ ಹೂಡಿದ್ದಾರೆ.

ಶಿವಮೊಗ್ಗದ ತೀರ್ಥಹಳ್ಳಿಯ ಹಳ್ಳಿಯೊಂದರಲ್ಲಿ ನಡೆಯುವ ರೋಚಕ ಕಥೆಯೇ ಶಾಖಾಹಾರಿ. ಸಿನಿಮಾದಲ್ಲಿ ಮಾಸ್ತಿಕಟ್ಟೆ ಸುಬ್ರಮಣ್ಯ ಅಲಿಯಾಸ್ ಸುಬ್ಬಣ್ಣ (ರಂಗಾಯಣ ರಘು)ಗೆ ಹಿಂದೆ-ಮುಂದೆ ಯಾರೂ ಇರುವುದಿಲ್ಲ. ಹೋಟೆಲ್ ಮಾಲೀಕನಾಗಿರುವ ಸುಬ್ಬಣ್ಣ, ಬಾಣಸಿಗನಾಗಿಯೂ ಕೆಲಸ ಮಾಡಿಕೊಂಡಿರುತ್ತಾರೆ. ಇವರದ್ದು ಶುದ್ಧ ಶಾಕಾಹಾರಿ ಹೋಟೆಲ್… ಹೀಗಿರುವಾಗ, ಅಲ್ಲಿ ನಡೆಯುವ ಕೆಲ ಘಟನೆಗಳಿಂದ ಸುಬ್ಬಣ್ಣನ ಹೋಟೆಲ್ ಹೇಗೆ ‘ಶಾಖಾ’ಹಾರಿ ಆಗುತ್ತೆ ಎಂಬುದೆ ರೋಚಕ ವಿಷಯ.

Continue Reading

ಸಿನಿಮಾ

Shilpa Shetty: ಮೈಸೂರಿನ ನಂಜುಂಡೇಶ್ವರನ ಸನ್ನಿಧಿಯಲ್ಲಿ ನಟಿ ಶಿಲ್ಪಾ ಶೆಟ್ಟಿ ಧ್ಯಾನ

Shilpa Shetty: ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ (Dhruva Sarja) ಹಾಗೂ ನಿರ್ದೇಶಕ ಪ್ರೇಮ್‌ ಕಾಂಬಿನೇಶನ್‌ ಇರುವ ʻಕೆಡಿ’ ಸಿನಿಮಾದಲ್ಲಿ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಸತ್ಯವತಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ಯಾನ್-ಇಂಡಿಯಾ ಸಿನಿಮಾವಾದ ಕೆಡಿ ಸಿನಿಮಾದಲ್ಲಿ ಸತ್ಯವತಿ ಪಾತ್ರದಲ್ಲಿ ಮಿಂಚುತ್ತಿದ್ದಾರೆ .ಯುಗಾದಿ ಹಬ್ಬದಂದು ಚಿತ್ರತಂಡ, ಶಿಲ್ಪಾ ಶೆಟ್ಟಿ ಫಸ್ಟ್‌ ಲುಕ್‌ ಪೋಸ್ಟರ್‌ ಹಂಚಿಕೊಂಡಿತ್ತು.

VISTARANEWS.COM


on

Shilpa Shetty Visiting Nanjundeshwara Temple
Koo

ಬೆಂಗಳೂರು: ಮೈಸೂರಿನಲ್ಲಿ `ಕೆಡಿ’ ಸಿನಿಮಾ (KD cinema) ಚಿತ್ರೀಕರಣ ನಟಿ ಶಿಲ್ಪಾ ಶೆಟ್ಟಿ ತಂಗಿದ್ದಾರೆ. ಈ ವೇಳೆ ನಟಿ ಬಿಡುವು ಮಾಡಿಕೊಂಡು ನಂಜನಗೂಡಿನ ನಂಜುಂಡೇಶ್ವರನ ದೇವಾಲಯಕ್ಕೆ (Nanjundeshwara Temple) ಬಂದಿದ್ದಾರೆ. ಪೂಜೆ ಸಲ್ಲಿಸಿ, ದೇವಸ್ಥಾನದ ಆವರಣದಲ್ಲಿ ಶಿಲ್ಪಾ ಶೆಟ್ಟಿ ಅವರು ಧ್ಯಾನ ಮಾಡಿದ್ದಾರೆ. ಶಿಲ್ಪಾ ಶೆಟ್ಟಿ ಬಂದಿರುವ ವಿಷಯ ತಿಳಿದು, ಫ್ಯಾನ್ಸ್​ ಮುಗಿಬಿದ್ದಿದ್ದರು.

 ಈ ಮಧ್ಯೆ ಶಿಲ್ಪಾ ಶೆಟ್ಟಿ ಅವರು ಆಗಾಗ ದೇವಸ್ಥಾನಗಳಿಗೆ ತೆರಳುತ್ತಿದ್ದಾರೆ. ಇತ್ತೀಚೆಗೆ ಮಂಗಳೂರಿಗೆ ತೆರಳಿ ಭೂತ ಕೋಲ ವೀಕ್ಷಿಸಿದ್ದರು. ಈಗ ಅವರು ಮೈಸೂರಿನಲ್ಲಿ ನಂಜನಗೂಡು ನಂಜುಡೇಶ್ವರನ ಸನ್ನಿಧಾನಕ್ಕೆ ತೆರಳಿದ್ದಾರೆ. ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ (Dhruva Sarja) ಹಾಗೂ ನಿರ್ದೇಶಕ ಪ್ರೇಮ್‌ ಕಾಂಬಿನೇಶನ್‌ ಇರುವ ʻಕೆಡಿ’ ಸಿನಿಮಾದಲ್ಲಿ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಸತ್ಯವತಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ಯಾನ್-ಇಂಡಿಯಾ ಸಿನಿಮಾವಾದ ಕೆಡಿ ಸಿನಿಮಾದಲ್ಲಿ ಸತ್ಯವತಿ ಪಾತ್ರದಲ್ಲಿ ಮಿಂಚುತ್ತಿದ್ದಾರೆ .ಯುಗಾದಿ ಹಬ್ಬದಂದು ಚಿತ್ರತಂಡ, ಶಿಲ್ಪಾ ಶೆಟ್ಟಿ ಫಸ್ಟ್‌ ಲುಕ್‌ ಪೋಸ್ಟರ್‌ ಹಂಚಿಕೊಂಡಿತ್ತು. ಶಿಲ್ಪಾ ಶೆಟ್ಟಿ ಕೂಡಾ ತಮ್ಮ ಪೋಸ್ಟರನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡು ಬಹಳ ಎಕ್ಸೈಟ್‌ ಆಗಿದ್ದರು. ರೆಟ್ರೋ ಲುಕ್‌ನಲ್ಲಿ ಕಾರೊಂದರ ಮುಂದೆ ಬ್ಯಾಗ್‌ ಹಿಡಿದು ನಿಂತಿರುವ ಶಿಲ್ಪಾ ಶೆಟ್ಟಿ ಲುಕ್‌ಗೆ ಸಿನಿಪ್ರಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದರು.ಶಿಲ್ಪಾ ಶೆಟ್ಟಿ 17 ವರ್ಷಗಳ ನಂತರ ಇದೀಗ ಕೆಡಿ’ ಸಿನಿಮಾದ ಮೂಲಕ ಕನ್ನಡ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಪ್ರೀತ್ಸೋದ್ ತಪ್ಪಾ? ಆಟೋ ಶಂಕರ್, ಒಂದಾಗೋಣ ಬಾ ಸಿನಿಮಾಗಳಲ್ಲಿ ಶಿಲ್ಪಾ ಅಭಿನಯಿಸಿದ್ದಾರೆ.

ಇದನ್ನೂ ಓದಿ: Shilpa Shetty : 3.5 ಕೋಟಿ ರೂಪಾಯಿ ಬೆಲೆಯ ರೇಂಜ್​ ರೋವರ್​​ ಕಾರು ಖರೀದಿಸಿದ ಶಿಲ್ಪಾ ಶೆಟ್ಟಿ; ವಿಡಿಯೊ ನೋಡಿ

ಕೆಡಿ ಸಿನಿಮಾದಲ್ಲಿ ಬಹು ತಾರಾಗಣ ಇದೆ. ಈ ಹಿಂದೆ ಚಿತ್ರತಂಡ ರವಿಚಂದ್ರನ್ ಅವರ ಲುಕ್‌ ಹಂಚಿಕೊಂಡಿತ್ತು. ರವಿಚಂದ್ರನ್ ಅವರ ಸಿನಿಮಾ ಫಸ್ಟ್ ಲುಕ್‌ನಲ್ಲಿ ಹಣೆಯಲ್ಲಿ ವಿಭೂತಿ, ಕಪ್ಪು ಶರ್ಟ್ ಮತ್ತು ಪ್ಯಾಂಟ್‌ನಲ್ಲಿ ಖಡಕ್ ಆಗಿ ಕಾಣಿಸಿಕೊಂಡಿದ್ದರು. ತಮ್ಮ ಬಲಗಾಲಿನಲ್ಲಿ ಕಾರಿನ ಡೋರ್ ಓಪನ್ ಮಾಡಿ ಪೋಸ್ ಕೊಟ್ಟಿದ್ದರು. ಎಂದೂ ಕಾಣಿಸಿಕೊಂಡಿರದ ಲುಕ್‌ನಲ್ಲಿ ರವಿಚಂದ್ರನ್ ಮಿಂಚಿದ್ದರು. ಅಷ್ಟೇ ಅಲ್ಲದೇ ಧ್ರುವ ಸರ್ಜಾ ಅವರು 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿಕೊಂಡಿದ್ದರು.

ಈ ಚಿತ್ರದ ಕಥೆ 1970ರ ದಶಕದಲ್ಲಿ ಸಾಗಲಿದೆ ಎಂದು ಹೇಳಲಾಗುತ್ತಿದೆ. ಟೈಟಲ್‌ ಟೀಸರ್‌ನಲ್ಲಿ ಧ್ರುವ ಸರ್ಜಾ ಮಾಸ್‌ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆವಿಎನ್​ ಪ್ರೊಡಕ್ಷನ್ಸ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ. ಟೀಸರ್‌ ಪಂಚ ಭಾಷೆಯಲ್ಲಿ ಬಿಡುಗಡೆಗೊಂಡಿರುವುದು ವಿಶೇಷ.

Continue Reading
Advertisement
Virat Kohli
ಕ್ರೀಡೆ12 mins ago

Virat Kohli: ನ್ಯೂಯಾರ್ಕ್‌ನಲ್ಲಿ ಭಾರತ ತಂಡದ ಕಠಿಣ ಅಭ್ಯಾಸ; ಮುಂಬೈನಲ್ಲಿ ಪಾರ್ಟಿ ಮಾಡುತ್ತಾ ಎಂಜಾಯ್​ ಮಾಡುತ್ತಿರುವ ಕೊಹ್ಲಿ

PM Narendra Modi
ದೇಶ24 mins ago

PM Narendra Modi: ಒಡಿಶಾ ಸಿಎಂ ಆರೋಗ್ಯ ಹದಗೆಟ್ಟಿರುವ ಹಿಂದೆ ಇದ್ಯಾ ಭಾರೀ ಸಂಚು? ಏನಂದ್ರು ಪ್ರಧಾನಿ ಮೋದಿ?-ವಿಡಿಯೋ ಇದೆ

Arvind Kejriwal
ದೇಶ25 mins ago

Arvind Kejriwal: ಕಾಂಗ್ರೆಸ್‌ ಜತೆ ನಮ್ಮ ‘ಮದುವೆ’ ಶಾಶ್ವತ ಅಲ್ಲ ಎಂದ ಕೇಜ್ರಿವಾಲ್;‌ ‘ಡಿವೋರ್ಸ್‌’ ಯಾವಾಗ?

Love Jihad
ಪ್ರಮುಖ ಸುದ್ದಿ29 mins ago

Love Jihad: ಲವ್ ಜಿಹಾದ್ ತಡೆಗೆ ಹೆಲ್ಪ್‌ಲೈನ್‌ ಆರಂಭಿಸಿದ ಶ್ರೀರಾಮಸೇನೆ

Karan Bhushan Singh
ದೇಶ40 mins ago

Karan Bhushan Singh: ಬಿಜೆಪಿ ಅಭ್ಯರ್ಥಿಯ ಬೆಂಗಾವಲು ವಾಹನ ಡಿಕ್ಕಿಯಾಗಿ ಇಬ್ಬರ ಸಾವು

mlc election
ರಾಜಕೀಯ43 mins ago

MLC Election: ಒಂದಾದ ಸಿಎಂ- ಡಿಸಿಎಂ, ಪರಂ ಗರಂ; ಅಖಾಡಕ್ಕಿಳಿದ ರಮೇಶ್‌ ಕುಮಾರ್‌

Viral Run Out Video
ಕ್ರೀಡೆ49 mins ago

Viral Run Out Video: 11 ಆಟಗಾರರಿಂದ ರನೌಟ್​ ಪ್ರಯತ್ನ; ಕೊನೆಗೂ ನಾಟೌಟ್​ ಆದ ಬ್ಯಾಟರ್​

Ambareesh Birthday during Sumalatha Ambareesh Talks About Abhishek Ambareesh And Aviva
ಸ್ಯಾಂಡಲ್ ವುಡ್56 mins ago

Ambareesh Birthday: ಸಿಹಿ ಸುದ್ದಿ ಕೊಡಲಿದ್ದಾರಾ ಅಭಿಷೇಕ್‌-ಅವಿವಾ? ಸುಮಲತಾ ಹೇಳಿದ್ದೇನು?

All Eyes on Rafah
ರಾಜಕೀಯ1 hour ago

All Eyes on Rafah: 30 ಮಿಲಿಯನ್ ಜನರನ್ನು ತಲುಪಿದ ‘ಆಲ್ ಐಸ್ ಆನ್ ರಫಾ’ ಪೋಸ್ಟ್‌!

Bomb Threat
ಪ್ರಮುಖ ಸುದ್ದಿ1 hour ago

Bomb Threat: ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ ಸಂದೇಶ; ಆತಂಕ ಸೃಷ್ಟಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ21 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌