ATM Machine : ಎಟಿಎಂ ಮಷಿನ್‌ನಲ್ಲಿ ಹಣ ಕಂಡಿತೆಂದು ತೆಗೆದೊಯ್ದರೆ ಹುಷಾರ್; ಹೀಗೆ ಸಿಕ್ಕಿ ಬೀಳ್ತೀರ! - Vistara News

ಕರ್ನಾಟಕ

ATM Machine : ಎಟಿಎಂ ಮಷಿನ್‌ನಲ್ಲಿ ಹಣ ಕಂಡಿತೆಂದು ತೆಗೆದೊಯ್ದರೆ ಹುಷಾರ್; ಹೀಗೆ ಸಿಕ್ಕಿ ಬೀಳ್ತೀರ!

ATM Machine : ದಾವಣಗೆರೆಯಲ್ಲಿ ಎಟಿಎಂ ಕೇಂದ್ರಕ್ಕೆ ಹೋದವನಿಗೆ ಡೆಪಾಸಿಟ್‌ ಮಷಿನ್‌ನಲ್ಲಿ ಹಣ ಕಂಡಿದೆ. ಆತ ಅದನ್ನು ಹಾಗೇ ಎತ್ತಿಕೊಂಡು ಪರಾರಿಯಾಗಿದ್ದಾನೆ. ಈ ಎಲ್ಲ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸ್‌ ಕಂಪ್ಲೇಂಟ್‌ ಆಗಿದೆ.

VISTARANEWS.COM


on

ATM theft in davanagere
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಾವಣಗೆರೆ: ಎಟಿಎಂ ಮಷಿನ್‌ನಲ್ಲಿ (ATM Machine) ಹಣ ಡೆಪಾಸಿಟ್‌ (Money Deposit) ಮಾಡುವಾಗ ಬಹಳ ಎಚ್ಚರಿಕೆ ವಹಿಸಬೇಕು. ಅಲ್ಲದೆ, ಈ ವೇಳೆ ಒಂದು ಸಣ್ಣ ತಪ್ಪು ಮಾಡಿದರೂ ಕೊನೆಗೆ ಪರಿತಪಿಸಬೇಕಾಗುತ್ತದೆ. ಅದನ್ನು ಸರಿ ಮಾಡಿಕೊಳ್ಳಲು ನೂರೆಂಟು ಪ್ರಕ್ರಿಯೆಗಳನ್ನು ನಡೆಸಬೇಕಾಗುತ್ತದೆ. ಇನ್ನು ಅಲ್ಲಿಗೆ ಹಣ ಡೆಪಾಸಿಟ್‌ ಮಾಡಲೆಂದೋ, ವಿಥ್‌ ಡ್ರಾ (Money Withdrawn) ಮಾಡಲೆಂದೋ ಹೋಗುವವರು ಸಹ ಎಚ್ಚರಿಕೆ ವಹಿಸಬೇಕು. ಒಂದು ವೇಳೆ ಡೆಪಾಸಿಟ್‌ ಮಷಿನ್‌ನಲ್ಲಿ ಹಣ ಕಂಡಿದೆ ಎಂದು ಅದನ್ನು ಹಾಗೆಯೇ ಎತ್ತಿಕೊಂಡು ಹೋದಿರೋ? ಮುಂದೆ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ. ಇಲ್ಲಾಗಿದ್ದೂ ಅದೇ. ವ್ಯಕ್ತಿಯೊಬ್ಬ ಎಟಿಎಂ ಕೇಂದ್ರಕ್ಕೆ ಹೋದಾಗ ಮಷಿನ್‌ ಒಳಗೆ 52 ಸಾವಿರ ರೂಪಾಯಿ ಕಂಡಿದೆ. ಅದನ್ನು ಆತ ಎತ್ತಿಕೊಂಡು ಹೋಗಿದ್ದಾನೆ. ಇದೇ ಈಗ ಆತನಿಗೆ ಮುಳುವಾಗಿದೆ.

ದಾವಣಗೆರೆ ಪಿ.ಬಿ.ರೋಡ್ ರಿಲಾಯನ್ಸ್ ಮಾರ್ಟ್ ಎದುರಿಗಿರುವ ಐಸಿಐಸಿಐ ಬ್ಯಾಂಕ್‌ನ ಎಟಿಎಂಗೆ (ICICI Bank ATM) ವಿಜಯ್ ಎಂಬುವವರು 52 ಸಾವಿರ ರೂಪಾಯಿಯನ್ನು ಡೆಪಾಸಿಟ್ ಮಾಡಲು ಬ್ಯಾಂಕ್‌ಗೆ ಬಂದಿದ್ದರು. ಡೆಪಾಸಿಟ್ ಮಿಷನ್ ಮೂಲಕ ಹಣ ಹಾಕಲು ಅವರಿಗೆ ಬಾರದ ಕಾರಣ ಅಂಗಡಿ ಸಹಾಯಕನ ಸಹಾಯ ಪಡೆದುಕೊಂಡಿದ್ದರು.

ATM Machine money theft in davanagere
ATM theft in davanagere

ಇದನ್ನೂ ಓದಿ: Weather Report : ಕರಾವಳಿ, ಮಲೆನಾಡಿನಲ್ಲಿ ಬಿರುಸಾಗಿ ಸುರಿಯಲಿದೆ ಮಳೆ

ಸಹಾಯಕ ರಾಘವೇಂದ್ರ, ವಿಜಯ್ ಅವರು 52 ಸಾವಿರ ರೂಪಾಯಿಯನ್ನು ಡೆಪಾಸಿಟ್‌ ಮಾಡಿದ್ದರು. ಡೆಪಾಸಿಟ್ ಮಿಷನ್‌ನಲ್ಲಿ ಮಾಹಿತಿ ಭರ್ತಿ ಮಾಡಿದ್ದರು. ಆದರೆ, ಕೊನೆಯಲ್ಲಿ ಡೆಪಾಸಿಟ್ ಬಟನ್‌ (Deposit Button) ಅನ್ನು ಒತ್ತುವುದಕ್ಕೆ ಗೊತ್ತಾಗದೆಯೋ, ಮರೆತೋ ಅಲ್ಲಿಂದ ನಿರ್ಗಮಿಸಿದ್ದಾರೆ.

ಬಟನ್‌ ಒತ್ತುವುದನ್ನು ಮರೆತರು!

ಡೆಪಾಸಿಟ್ ಬಟನ್ ಒತ್ತದ ಕಾರಣ ಮಿಷನ್‌ನಲ್ಲಿಯೇ 52 ಸಾವಿರ ರೂಪಾಯಿ ಹಣ ಉಳಿಕೆಯಾಗಿದೆ. ಹಣ ಡೆಪಾಸಿಟ್ ಆಗಿದೆ ಎಂದು ವಿಜಯ್, ರಾಘವೇಂದ್ರ ಹೊರಗೆ ಬಂದಿದ್ದಾರೆ. ಅದೇ ವೇಳೆಗೆ ಹಣ ಡ್ರಾ ಮಾಡಲು ಹೋದ ವ್ಯಕ್ತಿ ಕಣ್ಣಿಗೆ ಆ 52 ಸಾವಿರ ರೂಪಾಯಿ ಕಂಡಿದೆ. ಯಾರೂ ಇಲ್ಲದ್ದನ್ನು ನೋಡಿದ ಆ ವ್ಯಕ್ತಿ 52 ಸಾವಿರ ರೂಪಾಯಿಯನ್ನು ತೆಗೆದುಕೊಂಡು ಹೋಗಿದ್ದಾನೆ.

ATM theft in davanagere
ATM theft in davanagere

ಇದನ್ನೂ ಓದಿ: Shakti Scheme : ಬಸ್‌ ನಿಲ್ಲಿಸದ್ದಕ್ಕೆ ಕಲ್ಲೆಸೆದ ವಿದ್ಯಾರ್ಥಿಗಳು; ಗಾಜು ಪೀಸ್‌ ಪೀಸ್!

ಆರೋಪಿಯ ಹುಡುಕಾಟ

ಈ ಎಲ್ಲ ದೃಶ್ಯಗಳೂ ಸಿಸಿ ಕ್ಯಾಮೆರಾದಲ್ಲಿ (CC Camera) ಸೆರೆಯಾಗಿದೆ. ಆ ವ್ಯಕ್ತಿ ಎಟಿಎಂ ಕೇಂದ್ರದೊಳಗೆ ಬಂದಿರುವುದು, ಡೆಪಾಸಿಟ್‌ ಮಷಿನ್‌ ಎದುರು ನಿಂತಿರುವುದು ಸೇರಿದಂತೆ ಆತನ ಮುಖವು ಸಹ ಕ್ಲಿಯರ್‌ ಆಗಿ ಕಾಣುವಂತೆ ಕ್ಯಾಮೆರಾ ಕ್ಯಾಪ್ಚರ್‌ ಮಾಡಿದೆ. ಈ ಬಗ್ಗೆ ಈಗ ವಿಜಯ್‌ ಅವರು ಕೆಟಿಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದ್ದು, ಹಣ ತೆಗೆದುಕೊಂಡು ಹೋದ ವ್ಯಕ್ತಿಗಾಗಿ ಹುಡುಕಾಟ ನಡೆಯುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಮಳೆ

Karnataka Weather : ಮಲೆನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ; ಬೆಂಗಳೂರಿಗೂ ಅಲರ್ಟ್‌

Karnataka Weather Forecast : ಮಲೆನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇದ್ದು, ಬೆಂಗಳೂರಿಗೂ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

moderate rains and at isolated to scattered heavy to very heavy rains associated with thunderstorm
Koo

ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಮಲೆನಾಡಿನಲ್ಲಿ ವ್ಯಾಪಕ ಮಳೆಯಾದರೆ, ಕರಾವಳಿಯಲ್ಲಿ ಸಾಧಾರಣವಾಗಿರಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ. ಕೆಲವೊಮ್ಮೆ ಮಧ್ಯಮದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

moderate rains and at isolated to scattered heavy to very heavy rains associated with thunderstorm
moderate rains and at isolated to scattered heavy to very heavy rains associated with thunderstorm

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ ಸೇರಿದಂತೆ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲೂ ವ್ಯಾಪಕ ಮಳೆಯಾಗುವ ಸಂಭವವಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನದಲ್ಲಿ ಭಾರಿ ಮಳೆಯಾಗಲಿದ್ದು, ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕೆಲವೊಮ್ಮೆ ಗುಡುಗು ಇರಲಿದ್ದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಹುಬ್ಬಳ್ಳಿ

Hubballi news : ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ; ಎನ್‌ಐಎಯಿಂದ ಹಿಂಪಡೆವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಪ್ರಲ್ಹಾದ ಜೋಶಿ ಆಕ್ರೋಶ

Hubballi news : ಹಳೇ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಎನ್‌ಐಎಯಿಂದ ಹಿಂಪಡೆವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ ಹೊರಹಾಕಿದ್ದಾರೆ.

VISTARANEWS.COM


on

By

Old Hubballi riot case Union Minister Pralhad Joshi expresses displeasure over nia's decision to withdraw
Koo

ಹುಬ್ಬಳ್ಳಿ: ರಾಜ್ಯದಲ್ಲಿ ಸಿಬಿಐ ತನಿಖೆಗೆ ನಿರ್ಬಂಧ ಹೇರಿದ ಕಾಂಗ್ರೆಸ್ ಸರ್ಕಾರ ಈಗ ಭಯೋತ್ಪಾದನಾ ಪ್ರಕರಣಗಳ ಎನ್‌ಐಎ (NIA) ತನಿಖೆಗೂ ತಡೆವೊಡ್ಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಶುಕ್ರವಾರ ಮಾದ್ಯಮದೊಂದಿಗೆ ಮಾತನಾಡಿದ ಅವರು ಹಳೇ ಹುಬ್ಬಳ್ಳಿ ಗಲಭೆ ಪ್ರಕರಣವನ್ನು (Hubballi Case) ಎನ್‌ಐಎ ( NIA) ತನಿಖೆಯಿಂದ ಹಿಂಪಡೆಯುವ ರಾಜ್ಯ ಸಚಿವ ಸಂಪುಟದ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದರು.

ಹುಬ್ಬಳ್ಳಿ ಗಲಭೆ ಪ್ರಕರಣ NIA ತನಿಖೆಯಿಂದ ವಾಪಸ್‌ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಚಿವ ಸಂಪುಟ ನಿರ್ಧರಿಸಿರುವುದು ಅವರ ಮತಾಂಧತೆಯ ಪರಮಾವಧಿಯನ್ನು ಪ್ರತಿಬಿಂಬಿಸುತ್ತದೆ ಎಂದು ಆಕ್ರೋಶ ಹೊರ ಹಾಕಿದರು. ಹಳೇ ಹುಬ್ಬಳ್ಳಿ ಗಲಭೆ ಭಯೋತ್ಪಾದನಾ ಚಟುವಟಿಕೆಗೆ ಸಮಾನವಾದ ಘಟನೆಯಾಗಿದ್ದು, ಪ್ರಕರಣ ಎನ್ಐಎ ನ್ಯಾಯಾಲಯದಲ್ಲಿದೆ. ಹಾಗಿದ್ದಾಗ್ಯೂ ಸರ್ಕಾರ ಈ ನಿಲುವು ತಳೆದಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.

ಹೈಕೋರ್ಟ್, ಸುಪ್ರಿಂಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳಲ್ಲಿ ಆರೋಪಿಗಳ ಜಾಮೀನು ತಿರಸ್ಕೃತಗೊಂಡಿದೆ. ಪೊಲೀಸ್ ಮತ್ತು ನ್ಯಾಯಾಂಗ ಇಲಾಖೆಗಳು ಪ್ರಕರಣ ಹಿಂಪಡೆಯಲು ವಿರೋಧಿಸಿದರೂ ರಾಜ್ಯ ಕಾಂಗ್ರೆಸ್ ಸರ್ಕಾರದ ಈ ನಡೆ ಗಲಭೆಕೋರರಿಗೆ ಕುಮ್ಮಕ್ಕು ಕೊಡುವಂತಿದೆ ಎಂದು ಪ್ರಲ್ಹಾದ ಜೋಶಿ ಹರಿ ಹಾಯ್ದರು. ರಾಜ್ಯ ಸರ್ಕಾರ, ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗುವವರನ್ನು ಬೆಂಬಲಿಸುವಂಥ ಕಾರ್ಯ ಮಾಡುತ್ತಿದೆ ಎಂದು ಆರೋಪಿಸಿದ ಸಚಿವರು, ಹಳೇ ಹುಬ್ಬಳ್ಳಿ ಗಲಭೆ ಅತ್ಯಂತ ಗಂಭೀರ ಪ್ರಕರಣ. NIA ಯಿಂದ ಹಿಂಪಡೆಯುವುದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಹೇಳಿದರು.

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮತಾಂಧ ಶಕ್ತಿಗಳ, ಭಯೋತ್ಪಾದನಾ ಚಟುವಟಿಕೆಗಳ ವಿರುದ್ಧ ಹೋರಾಟ ನಡೆಸುತ್ತಿದ್ದರೆ, ರಾಜ್ಯ ಕಾಂಗ್ರೆಸ್ ಸರ್ಕಾರ ಅದಕ್ಕೆ ತದ್ವಿರುದ್ಧವಾಗಿ ಭಯೋತ್ಪಾದನೆಗೆ ಬೆಂಬಲ ನೀಡುತ್ತಿದೆ ಎಂದು ಪ್ರಲ್ಹಾದ ಜೋಶಿ ಆಕ್ರೋಶ ವ್ಯಕ್ತಪಡಿಸಿದರು. ಹಳೇ ಹುಬ್ಬಳ್ಳಿ ಗಲಭೆ ಪ್ರಕರಣವನ್ನು NIA ಯಿಂದ ವಾಪಸ್ ಪಡೆಯುವ ಮೂಲಕ ಕಾಂಗ್ರೆಸ್ ಸರ್ಕಾರ ತುಷ್ಟೀಕರಣದ ಪರಾಕಾಷ್ಟೆ ಮೆರೆಯುತ್ತಿದೆ ಎಂದು ಜೋಶಿ ವಾಗ್ದಾಳಿ ಮಾಡಿದರು. ಹಳೇ ಹುಬ್ಬಳ್ಳಿ ಗಲಾಟೆ ಪ್ರಕರಣದಲ್ಲಿ ಹಿಂದೂ-ಮುಸ್ಲಿಂ ಪ್ರಶ್ನೆಯಲ್ಲ. ದೇಶದ್ರೋಹಿ, ಸಮಾಜ ದ್ರೋಹಿಗಳ ವಿರುದ್ಧದ ಹೋರಾಟ, ಭಾರತದ ಸಂವಿಧಾನ, ಕಾನೂನು ಮಧ್ಯೆ ಆಗಿರೋ ಹೋರಾಟ ಎಂದು ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Online gambling : ರಮ್ಮಿ ಚಟಕ್ಕೆ 20 ಲಕ್ಷ ರೂ. ಸಾಲ; ಸಾಲಗಾರರ ಕಾಟಕ್ಕೆ ‘ನಾನು ಸೋತಿದ್ದೇನೆ’ ಎಂದು ಮನೆ ತೊರೆದ ಬ್ಯಾಂಕ್‌ ನೌಕರ

ಅತಿಯಾಸೆ ಗತಿಗೇಡು ಎಂಬ ಮಾತು ಈ ಪ್ರಕರಣಕ್ಕೆ ಸರಿ ಒಂದುತ್ತೆ. ರಮ್ಮಿ ಚಟಕ್ಕೆ ಬಿದ್ದ ಬ್ಯಾಂಕ್‌ ನೌಕರ ಬರೋಬ್ಬರಿ 20 ಲಕ್ಷ ರೂ. ಸಾಲ ಮಾಡಿಕೊಂಡಿದ್ದ. ಬಳಿಕ ಸಾಲಗಾರರ ಕಾಟಕ್ಕೆ ಬೇಸತ್ತ ಆತ ‘ನಾನು ಸೋತಿದ್ದೇನೆ’ ಎಂದು ಪತ್ರ ಬರೆದು ವಿಡಿಯೊ ಮಾಡಿ ಮನೆ ತೊರೆದಿದ್ದಾನೆ. ಇತ್ತ ಪತಿಗಾಗಿ ಪತ್ನಿ ಹುಡುಕಾಟ ನಡೆಸುತ್ತಿದ್ದಾಳೆ.

VISTARANEWS.COM


on

By

Online gambling Rs 20 lakh for rummy addiction debt Bank employee leaves home due to debtors
Koo

ಬೆಂಗಳೂರು: ಜೂಜು (Online gambling) ಎಷ್ಟರ ಮಟ್ಟಿಗೆ ಎಫೆಕ್ಟ್ ಕೊಡುತ್ತೆ ಎಂಬುದಕ್ಕೆ ಈ ಪ್ರಕರಣವೇ ಸಾಕ್ಷಿ. ಒಂದೊಳ್ಳೆ ಹುದ್ದೆಯಲ್ಲಿದ್ದವನು ಮಾಡುವ ಕೆಲಸ ಬಿಟ್ಟು ಜೂಜಿನ ಹಿಂದೆ ಬಿದ್ದವನು ಸಾಲಗಾರರ ಕಾಟಕ್ಕೆ ಬೇಸತ್ತು ಕಾಣೆಯಾಗಿದ್ದಾನೆ. ಭರತ್ ಎಂಬ ಬ್ಯಾಂಕ್ ಉದ್ಯೋಗಿ ಕಾಣೆಯಾಗಿದ್ದಾನೆ. ಸೆಲ್ಫಿ ವಿಡಿಯೋ ಮಾಡಿ, ತನ್ನ ಮೊಬೈಲ್‌ಗಳನ್ನು ಮನೆಯಲ್ಲಿಟ್ಟು ಮನೆ ಬಿಟ್ಟು ಹೋಗಿದ್ದಾನೆ. ಇತ್ತ ಭರತ್‌ಗಾಗಿ ಆತನ ಪತ್ನಿ ದುಃಖಿತಳಾಗಿದ್ದು ಪತಿಗಾಗಿ ಎಲ್ಲ ಕಡೆ ಹುಡುಕಾಡಿ ಸಿಗದೆ ಇದ್ದಾಗ ಕೊನೆಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.

ಭರತ್‌ ಪ್ರತಿಷ್ಠಿತ ಬ್ಯಾಂಕ್‌ವೊಂದರಲ್ಲಿ ಉದ್ಯೋಗಿಯಾದರೆ, ಪತ್ನಿ ಚೈತ್ರಾ ಕೂಡ ಸಾಫ್ಟ್ ಇಂಜಿನೀಯರ್. ಇಬ್ಬರು ಸೇರಿ ಒಂದೊಳ್ಳೆ ಜೀವನ ನಡೆಸುತ್ತಿದ್ದರು. ಆದರೆ ರಮ್ಮಿ ಆಡಿ ಬಹುಮಾನ ಗೆಲ್ಲಿ ಎಂಬ ಆ್ಯಡ್‌ಗಳಿಂದ ಆಕರ್ಷಿತನಾದ ಭರತ್ ಕೊನೆಗೆ ರಮ್ಮಿ ಚಟಕ್ಕೆ ಬಿದ್ದಿದ್ದ. ಕೊನೆಗೆ ಬ್ಯಾಂಕ್ ಉದ್ಯೋಗಿಯಾಗಿ ದೊಡ್ಡ ಮಟ್ಟದ ಸಾಲಗಾರನಾಗಿದ್ದ.

ಮಧ್ಯಮ ವರ್ಗದ ಜನರಿಗೆ 20 ‌ಲಕ್ಷ ರೂ. ಎಂಬುದು ಬಹು ದೊಡ್ಡ ಮೊತ್ತವೇ. ಕೆಲವರು ಇಷ್ಟು ಹಣ ಸಿಕ್ಕರೆ ಸಾಕು ಒಂದು ಉದ್ದಿಮೆಗೆ ಹೂಡಿಕೆ ಮಾಡಿ ದುಡಿಮೆ ಮಾಡುತ್ತಾರೆ. ಆದರೆ ಈ ಬ್ಯಾಂಕ್ ಉದ್ಯೋಗಿ ಭರತ್ ಹೂಡಿಕೆ ಮಾಡಿದ್ದು ರಮ್ಮಿ ಜೂಜಿನಲ್ಲಿ. ರಮ್ಮಿ ಚಟಕ್ಕೆ ಬಿದ್ದವನಿಗೆ ತನಗೆ ಬರುತ್ತಿದ್ದ ಸಂಬಳ ಕೂಡ ಸಾಕಾಗುತ್ತಿರಲಿಲ್ಲ. ಪಡೆದುಕೊಂಡಿರುವ ಸಾಲದ ಇಎಂಐ ಕೂಡ ಕಟ್ಟಬೇಕಿತ್ತು. ಜತೆಗೆ ಫ್ಯಾಮಿಲಿ ಕಮಿಟ್ಮೆಂಟ್ ಬೇರೆ ಇತ್ತು . ಒಂದಲ್ಲ ಒಂದು ದಿನ ಕೋಟಿ ಗಳಿಸುತ್ತೀನಿ ಎಂದು ರಮ್ಮಿ ಆ್ಯಪ್‌ನಲ್ಲಿ ಜೂಜಾಟ ನಡೆಸಿದ್ದ.

ಸಂಬಳದ ಹಣ ಅಲ್ಲದೆ ಸಾಲ ಮಾಡಿ ಜೂಜಿಗೆ ಬಳಸಿದ. ಕೊನೆಗೆ ಆ ಸಾಲದ ಮೊತ್ತ ದಾಟಿದ್ದು 20 ಲಕ್ಷಕ್ಕೆ. ಆ ಸಾಲಕ್ಕೆ ಮತ್ತೆ ಬಡ್ಡಿ ಕಟ್ಟಬೇಕು. ಕೊಡದೆ ಇದ್ದಾಗ ಸಾಲಗಾರರು ಕಾಟ ಕೊಡಲು ಶುರು ಮಾಡಿದ್ದರು. ಇದರಿಂದ ಬೇಸತ್ತ ಬ್ಯಾಂಕ್ ಉದ್ಯೋಗಿ ಎರಡು ದಿನ ಮನೆ ಬಿಟ್ಟಿದ್ದ. ಪತ್ನಿ ಚೈತ್ರಾ ಜತೆ ಫೋನ್ ಸಂಪರ್ಕದಲ್ಲಿದ್ದ.

ಆದರೆ ನಾಪತ್ತೆ ಆಗಿದ್ದ. ಎರಡು ದಿನ ಬಳಿಕ ಮನೆಯಲ್ಲಿ ಪುಸ್ತಕವೊಂದರಲ್ಲಿ ಸಾಲಗಾರರ ಕಾಟ ಜಾಸ್ತಿ ಆಗಿದೆ ನಾನು ಮನೆ ಬಿಟ್ಟು ಹೋಗುತ್ತಿದ್ದೀನಿ. ನನ್ನ ಹುಡುಕುವುದು ಬೇಡ ಎಂದು ಬರೆದಿದ್ದ. ಜತೆಗೆ ಆತನ ಮೊಬೈಲ್ ಕೂಡ ಇತ್ತು. ಅದನ್ನು ಪರಿಶೀಲನೆ ನಡೆಸಿದಾಗ ವಿಡಿಯೋ ಸಿಕ್ಕಿದೆ. ತನ್ನ ಬೈಕ್‌ನಲ್ಲಿ ಮನೆ ಬಿಟ್ಟಿರುವ ಭರತ್‌ಗಾಗಿ ಆತನ ಪತ್ನಿ ತೀವ್ರ ಹುಡುಕಾಟ ನಡೆಸಿ ಕೊನೆಗೆ ಪೊಲೀಸರಿಗೆ ದೂರು ನೀಡಿದ್ದಾಳೆ . ಈ ಸಂಬಂಧ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಗದಗ

Assault Case : ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಕಾಂತಿಲಾಲ್ ಬನ್ಸಾಲಿ ಮೇಲೆ ಹಲ್ಲೆ ನಡೆಸಿ ಹಣ ದೋಚಿ ಅಪರಿಚಿತರು ಪರಾರಿ

Assault case : ಪ್ರತ್ಯೇಕ ಕಡೆಗಳಲ್ಲಿ ಬಿಜೆಪಿ ಮುಖಂಡರ ಮೇಲೆ ಹಲ್ಲೆ ನಡೆದಿದೆ. ಗದಗದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಕಾಂತಿಲಾಲ್ ಬನ್ಸಾಲಿ ಮೇಲೆ ಹಲ್ಲೆ ನಡೆಸಿ ದುಷ್ಕರ್ಮಿಗಳು ಹಣ ದೋಚಿ ಪರಾರಿ ಆಗಿದ್ದಾರೆ. ಮತ್ತೊಂದು ಕಡೆ ಮಂಗಳೂರಿನಲ್ಲಿ ಬಿಜೆಪಿ ಮುಖಂಡನ ಮನೆಗೆ ನುಗ್ಗಿ ಯುವಕರಿಬ್ಬರು ಹಲ್ಲೆ ನಡೆಸಿದ್ದಾರೆ.

VISTARANEWS.COM


on

By

Kantilal Bhansali a close aide of former CM BS Yediyurappa attacked assaulted in gadag
Koo

ಗದಗ: ಗದಗದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಕಾಂತಿಲಾಲ್ ಬನ್ಸಾಲಿ ಮೇಲೆ ಅಪರಿಚಿತರು ಹಲ್ಲೆ (Assault Case ) ನಡೆಸಿದ್ದಾರೆ. ಮಾಜಿ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ, ಬಿಜೆಪಿ ಮುಖಂಡ, ಉದ್ಯಮಿ ಕಾಂತಿಲಾಲ್ ಬನ್ಸಾಲಿ ಎಪಿಎಂಸಿಯಿಂದ ನಿನ್ನೆ ಮಧ್ಯಾಹ್ನ 2.30 ಗಂಟೆ ಸುಮಾರಿಗೆ ಭೂಮರೆಡ್ಡಿ ಸರ್ಕಲ್ ಬಳಿ ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ಹಾಡಹಗಲೇ ಜನನಿಬಿಡ ಪ್ರದೇಶದಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ.

ಬಳಿಕ ಕಾಂತಿಲಾಲ್ ಬನ್ಸಾಲಿ ಮೇಲೆ ಹಲ್ಲೆ ಮಾಡಿ ಹಣ ದೋಚಿ ಪರಾರಿ ಆಗಿದ್ದಾರೆ. ಮನೆಗೆ ಹೋಗುವಾಗ ಕಾಂತಿಲಾಲ್ ಬೈಕ್‌ಗೆ ಡಿಕ್ಕಿ ಹೊಡೆದು, ಹಲ್ಲೆ ಮಾಡಿ ಶರ್ಟ್ ಹರಿದು 50 ಸಾವಿರ ಹಣ ದೋಚಿದ್ದಾರೆ. ಮಾತ್ರವಲ್ಲ ನಿಂದು ಬಹಳ ಆಗಿದೆ ಅಂತ ಅವಾಜ್ ಹಾಕಿದ್ದಾರೆ. ಸಾರ್ವಜನಿಕರು ಸ್ಥಳಕ್ಕೆ ಬರುತ್ತಿದ್ದಂತೆ ಅಲ್ಲಿಂದ ಕಾಲ್ಕಿತ್ತಿದ್ದಾರೆ.

ರಾಜಕೀಯ ವಿರೋಧಿಗಳು ಮಾಡಿಸಿದ ಹಲ್ಲೆ ಇದು ಎಂಬ ಚರ್ಚೆ ಶುರುವಾಗಿದೆ. ಇತ್ತೀಚೆಗೆ ಗದಗ ಕ್ಷೇತ್ರದ ಬಿಜೆಪಿ ಬೆಳವಣಿಗೆ ಬಗ್ಗೆ ಬಹಿರಂಗವಾಗಿ ಕಾಂತಿಲಾಲ್ ಮಾತನಾಡಿದ್ದರು. ಹೀಗಾಗಿ ಯಾರಾದರೂ ಹೆದರಿಸಲು ಹಲ್ಲೆ ಮಾಡಿಸಿದ್ದಾರಾ ಅಂತ ಬಿಜೆಪಿ ವಲಯದಲ್ಲಿ ಚರ್ಚೆ ಆಗಿದೆ. ಹಣಕ್ಕಾಗಿ ದುಷ್ಕರ್ಮಿಗಳಿಂದ ಹಲ್ಲೆ ನಡೆದೆದಿಯಾ ಎಂಬ ಅನುಮಾನವಿದೆ.

ಬಿಜೆಪಿ ಮುಖಂಡನ ಮೇಲಿನ ಹಲ್ಲೆ ತೀವ್ರವಾಗಿ ಖಂಡಿಸಿದ್ದಾರೆ ಮಾಜಿ ನಿಗಮ ಮಂಡಳಿ ಅಧ್ಯಕ್ಷರಿಗೆ ರಕ್ಷಣೆ ಇಲ್ಲದಿದ್ದರೆ, ಸಾಮಾನ್ಯ ಜನರಿಗೆ ರಕ್ಷಣೆ ಎಲ್ಲಿ ಎಂದು ಆಕ್ರೋಶ ಹೊರಹಾಕಿದ್ದಾರೆ. ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿದರು. ಗದಗನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆಕ್ರೋಶ ಹೊರಹಾಕಿದರು. ಬಿಜೆಪಿ ಮುಖಂಡರೊಂದಿಗೆ ಪೊಲೀಸ್ ಠಾಣೆಗೆ ಆಗಮಿಸಿದ ಕಾಂತಿಲಾಲ್ ದೂರು ದಾಖಲಿಸಿದ್ದಾರೆ. ಗದಗ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಮಂಗಳೂರಿನಲ್ಲೂ ಬಿಜೆಪಿ ಮುಖಂಡನ ಮನೆಗೆ ನುಗ್ಗಿ ದಾಂಧಲೆ

ಮಂಗಳೂರಿನ ಪ್ರತಿಷ್ಠಿತ ಬಿಲ್ಡರ್, ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಮನೆಗೆ ನುಗ್ಗಿ ಯುವಕರು ದಾಂಧಲೆ ನಡೆಸಿದ್ದಾರೆ. ನಗರದ ಕೊಡಿಯಾಲ್ ಬೈಲ್‌ನ ಮನೆಗೆ ನುಗ್ಗಿ ಗಲಾಟೆ ಮಾಡಿ ದಾಂಧಲೆ ನಡೆಸಿದ ಇಬ್ಬರನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಎನ್ ಎಸ್ ಯುಐ ಕಾರ್ಯಕರ್ತ ಅನುಷ್ ಶೆಟ್ಟಿ ಹಾಗೂ ಅಂಕಿತ್ ಶೆಟ್ಟಿ ಬಂಧಿತರು.

ಬೆಂಗಳೂರಿನಿಂದ ಆಗಮಿಸಿದ್ದ ಮಗಳನ್ನು ಕರೆ ತರಲು ರಾತ್ರಿ ಮಂಗಳೂರು ಏರ್‌ಪೋರ್ಟ್‌ಗೆ ಜಿತೇಂದ್ರ ಕೊಟ್ಟಾರಿ ಆಗಮಿಸಿದ್ದರು. ಬಳಿಕ ಕಾರಿನಲ್ಲಿ ಮಗಳ ಜತೆ ಮಂಗಳೂರಿನ ಮನೆಯತ್ತ ತೆರಳುತ್ತಿದ್ದರು. ಈ ವೇಳೆ ಅನುಷ್ ಶೆಟ್ಟಿ ಹಾಗೂ ಅಂಕಿತ್ ಇದ್ದ ಕಾರನ್ನು ಜಿತೇಂದ್ರ ಕೊಟ್ಟಾರಿ ಓವರ್ ಟೇಕ್ ಮಾಡಿದ್ದರು. ಇದೇ ಕೋಪದಲ್ಲಿ ಕಾರನ್ನು ಹಿಂಬಾಲಿಕೊಂಡು ಜಿತೇಂದ್ರ ಕೊಟ್ಟಾರಿ ಮನೆಯ ಬಳಿಗೆ ಬಂದಿದ್ದ ಯುವಕರು, ಕುಡಿತದ ಮತ್ತಿನಲ್ಲಿ ಜಿತೇಂದ್ರ ಕೊಟ್ಟಾರಿ ಮನೆಗೆ ನುಗ್ಗಿ ಗಲಾಟೆ ಮಾಡಿದ್ದಾರೆ. ಜಿತೇಂದ್ರ ಕೊಟ್ಟಾರಿ ಮೇಲೆ ಹಲ್ಲೆ ನಡೆಸಿ ತಡೆಯಲು ಬಂದ ಪತ್ನಿ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆ.

ಘಟನೆ ಸಂಬಂಧಿಸಿದಂತೆ ಜಿತೇಂದ್ರ ಕೊಟ್ಟಾರಿ ಬರ್ಕೆ ಠಾಣೆಗೆ ದೂರು ನೀಡಿದ್ದಾರೆ. ದೂರು ಪಡೆದು ಎಫ್ಐಆರ್ ದಾಖಲಿಸಿ ಇಬ್ಬರನ್ನು ಬಂಧಿಸಿದ್ದಾರೆ. ಇನ್ನು ಬಂಧಿತರಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅಣ್ಣನ ಮಗ ಅನುಷ್ ಶೆಟ್ಟಿ ಎಂದು ತಿಳಿದಿದೆ. ಕಳೆದ ಲೋಕಸಭಾ ಚುನಾವಣೆ ವೇಳೆ ನೋಟಾ ಅಭಿಯಾನ ನಡೆಸಿದ್ದ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
moderate rains and at isolated to scattered heavy to very heavy rains associated with thunderstorm
ಮಳೆ39 ನಿಮಿಷಗಳು ago

Karnataka Weather : ಮಲೆನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ; ಬೆಂಗಳೂರಿಗೂ ಅಲರ್ಟ್‌

dina bhavishya
ಭವಿಷ್ಯ54 ನಿಮಿಷಗಳು ago

Dina Bhavishya : ಉದ್ಯೋಗಿಗಳು ಅನುಮಾನದಿಂದ ಕಾರ್ಯದಲ್ಲಿ ತೊಡಗುವುದು ಬೇಡ

Old Hubballi riot case Union Minister Pralhad Joshi expresses displeasure over nia's decision to withdraw
ಹುಬ್ಬಳ್ಳಿ12 ಗಂಟೆಗಳು ago

Hubballi news : ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ; ಎನ್‌ಐಎಯಿಂದ ಹಿಂಪಡೆವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಪ್ರಲ್ಹಾದ ಜೋಶಿ ಆಕ್ರೋಶ

Online gambling Rs 20 lakh for rummy addiction debt Bank employee leaves home due to debtors
ಬೆಂಗಳೂರು14 ಗಂಟೆಗಳು ago

Online gambling : ರಮ್ಮಿ ಚಟಕ್ಕೆ 20 ಲಕ್ಷ ರೂ. ಸಾಲ; ಸಾಲಗಾರರ ಕಾಟಕ್ಕೆ ‘ನಾನು ಸೋತಿದ್ದೇನೆ’ ಎಂದು ಮನೆ ತೊರೆದ ಬ್ಯಾಂಕ್‌ ನೌಕರ

Kantilal Bhansali a close aide of former CM BS Yediyurappa attacked assaulted in gadag
ಗದಗ15 ಗಂಟೆಗಳು ago

Assault Case : ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಕಾಂತಿಲಾಲ್ ಬನ್ಸಾಲಿ ಮೇಲೆ ಹಲ್ಲೆ ನಡೆಸಿ ಹಣ ದೋಚಿ ಅಪರಿಚಿತರು ಪರಾರಿ

Husband and wife arrested for honey-trapping in Hubballi-Dharwad
ಹುಬ್ಬಳ್ಳಿ16 ಗಂಟೆಗಳು ago

Honey Trap : ಹುಬ್ಬಳ್ಳಿ- ಧಾರವಾಡದಲ್ಲಿ ಹನಿಟ್ರ್ಯಾಪ್‌ಗೆ ಇಳಿದ ಗಂಡ-ಹೆಂಡತಿ

Heavy rains lash Yadgir Woman killed in lightning strike
ಮಳೆ16 ಗಂಟೆಗಳು ago

Karnataka Rain : ಯಾದಗಿರಿಯಲ್ಲಿ ಮಳೆಯಾರ್ಭಟ; ಸಿಡಿಲು ಬಡಿದು ಮಹಿಳೆ ಸಾವು, ಮತ್ತಿಬ್ಬರಿಗೆ ಗಾಯ

Ayudha Puja celebrations across the karnataka state Temples housefull by devotees
ಬೆಂಗಳೂರು18 ಗಂಟೆಗಳು ago

Ayudha Puja: ನಾಡಿನೆಲ್ಲೆಡೆ ಆಯುಧ ಪೂಜೆ ಸಂಭ್ರಮ; ಭಕ್ತಾಧಿಗಳಿಂದ ದೇವಸ್ಥಾನಗಳು ಹೌಸ್‌ಫುಲ್‌

karnataka Weather Forecast
ಮಳೆ1 ದಿನ ago

Karnataka Weather : ದಕ್ಷಿಣದಿಂದ ಉತ್ತರ ಒಳನಾಡಿನವರೆಗೂ ಗುಡುಗು ಸಹಿತ ವ್ಯಾಪಕ ಮಳೆ ಮುನ್ಸೂಚನೆ

Dina Bhavishya
ಭವಿಷ್ಯ1 ದಿನ ago

Dina Bhavishya : ನಂಬಿದ ವ್ಯಕ್ತಿಗಳಿಂದ ಈ ರಾಶಿಯವರು ಮೋಸ ಹೋಗುತ್ತೀರಿ

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ1 ವಾರ ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌