Free Bus Service : ಫ್ರೀ ಬಸ್ಸಲ್ಲಿ ಬಂದ ಮಹಿಳೆಯರಿಂದ ಧರ್ಮಸ್ಥಳದಲ್ಲಿ ಸಿದ್ದರಾಮಯ್ಯ ಹೆಸರಲ್ಲಿ ಅರ್ಚನೆ! - Vistara News

ಕರ್ನಾಟಕ

Free Bus Service : ಫ್ರೀ ಬಸ್ಸಲ್ಲಿ ಬಂದ ಮಹಿಳೆಯರಿಂದ ಧರ್ಮಸ್ಥಳದಲ್ಲಿ ಸಿದ್ದರಾಮಯ್ಯ ಹೆಸರಲ್ಲಿ ಅರ್ಚನೆ!

Free Bus Service : ರಾಜ್ಯ ಸರ್ಕಾರದ ಶಕ್ತಿ ಯೋಜನೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಶ್ಲಾಘಿಸಿದ್ದಾರೆ. ಜತೆಗೆ ಕ್ಷೇತ್ರಕ್ಕೆ ಬಂದ ಕೆಲವು ಮಹಿಳೆಯರು ಸಿದ್ದರಾಮಯ್ಯರ ಹೆಸರಿನಲ್ಲಿ ಅರ್ಚನೆ ಮಾಡಿಸುತ್ತಿರುವ ವಿಚಾರವನ್ನು ತಿಳಿಸಿದ್ದಾರೆ.

VISTARANEWS.COM


on

D Veerendra heggade letter
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣದ (Free Bus Service) ಶಕ್ತಿ ಯೋಜನೆ (Shakti scheme) ದೊಡ್ಡ ಮಟ್ಟದ ಯಶಸ್ಸನ್ನು ಪಡೆದಿದೆ. ಜೂನ್‌ 11ರಂದು ಚಾಲನೆ ಪಡೆದ ಈ ಯೋಜನೆಯಡಿ ಒಂದು ತಿಂಗಳ ಅವಧಿಯಲ್ಲಿ 16.7 ಲಕ್ಷ ಮಹಿಳೆಯರು ಓಡಾಡಿದ್ದಾರೆ. ಎಲ್ಲ ಮಹಿಳೆಯರು ಈ ಯೋಜನೆಯನ್ನು ಕೊಂಡಾಡುತ್ತಿರುವ ನಡುವೆಯೇ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ಅವರಿಗೆ ವಿಶೇಷ ಸರ್ಟಿಫಿಕೇಟ್‌ ಒಂದು ದೊರೆತಿದೆ. ಅದು ಬಂದಿದ್ದು ಧರ್ಮಸ್ಥಳದಿಂದ (Sri Kshetra Dharmastala).

Shakti scheme of Karnataka Government

ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರೂ ಆದ ಡಾ. ಡಿ. ವೀರೇಂದ್ರ ಹೆಗ್ಗಡೆ (Dr. D Veerendra Heggade) ಅವರು ಶಕ್ತಿ ಯೋಜನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಸಿದ್ದರಾಮಯ್ಯ ಅವರಿಗೆ ಒಂದು ಪತ್ರ ಬರೆದಿದ್ದಾರೆ. ಸಿದ್ದರಾಮಯ್ಯ ಅವರು ಜುಲೈ 7ರಂದು ಮಂಡಿಸಿದ ಬಜೆಟ್‌ನ (Karnataka Budget 2023) ಅಂಶಗಳನ್ನು ಶ್ಲಾಘಿಸಿ ಬರೆದ ಈ ಪತ್ರದಲ್ಲಿ ಶಕ್ತಿ ಯೋಜನೆ ಮಹಿಳೆಯರಿಗೆ ಮಾಡಿಕೊಟ್ಟಿರುವ ಅನುಕೂಲಗಳನ್ನು ಉಲ್ಲೇಖಿಸಿದ್ದಾರೆ. ಜತೆಗೆ ಇನ್ನೊಂದು ವಿಶಿಷ್ಟ ಅಂಶವನ್ನು ಉಲ್ಲೇಖಿಸಿದ್ದಾರೆ. ಅದೇನೆಂದರೆ, ಶಕ್ತಿಯ ಯೋಜನೆಯ ಉಚಿತ ಬಸ್‌ ಪ್ರಯಾಣದ ಅವಕಾಶವನ್ನು ಪಡೆದು ಕ್ಷೇತ್ರಕ್ಕೆ ಬಂದ ಮಹಿಳೆಯರಲ್ಲಿ ಕೆಲವರು ಸಿಎಂ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಅರ್ಚನೆ ಮಾಡಿಸುತ್ತಿದ್ದಾರೆ ಎಂದು ವೀರೇಂದ್ರ ಹೆಗ್ಗಡೆಯವರು ಉಲ್ಲೇಖಿಸಿದ್ದಾರೆ.

Heavy rush at Dharmastala due to Shakti scheme
ಧರ್ಮಸ್ಥಳದಲ್ಲಿ ಮಹಿಳೆಯರ ಸಂದಣಿ

ಸರ್ಕಾರದ ಉಚಿತ ಬಸ್‌ ಪ್ರಯಾಣದ ಯೋಜನೆಯಿಂದಾಗಿ ಲಕ್ಷಾಂತರ ಹೆಣ್ಣು ಮಕ್ಕಳು ತಮ್ಮ ದೈನಂದಿನ ಓಡಾಟದ ಜತೆಗೆ ತೀರ್ಥ ಕ್ಷೇತ್ರ, ಪುಣ್ಯಕ್ಷೇತ್ರಗಳ ಸಂದರ್ಶನವನ್ನು ಮಾಡಿದ್ದಾರೆ. ಅದರಲ್ಲೂ ರಾಜ್ಯದ ಎಲ್ಲ ಕಡೆಯ ಹೆಣ್ಣು ಮಕ್ಕಳು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ, ನೀಡುತ್ತಿದ್ದಾರೆ. ಒಂದು ಹಂತದಲ್ಲಿ ಧರ್ಮಸ್ಥಳದಲ್ಲಿ ಮಹಿಳೆಯರ ದಟ್ಟಣೆಯನ್ನು ನಿಯಂತ್ರಿಸುವುದೇ ಕಷ್ಟವಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ವಿರೋಧ ಪಕ್ಷಗಳು ಇದು ಶಕ್ತಿ ಯೋಜನೆಯ ದುಷ್ಪರಿಣಾಮ ಎಂದು ವ್ಯಾಖ್ಯಾನಿಸಿದರೆ ಕಾಂಗ್ರೆಸ್‌ ನಾಯಕರು ಇದು ಶಕ್ತಿ ಯೋಜನೆಯ ಯಶಸ್ಸು ಎಂದು ವ್ಯಾಖ್ಯಾನಿಸಿದ್ದರು. ಕಾಂಗ್ರೆಸ್‌ ನಾಯಕ ಪ್ರಿಯಾಂಕ್‌ ಖರ್ಗೆ ಅವರಂತೂ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ʻಹಿಂದುತ್ವಕ್ಕೆ ಕೊಡುವ ನಿಜವಾದ ಬೆಂಬಲ ಇದು. ಶಕ್ತಿ ಯೋಜನೆಯ ಮೂಲಕ ಮಹಿಳೆಯರು ದೇಗುಲ ದರ್ಶನ ಮಾಡುತ್ತಿರುವುದು ಧರ್ಮ ಉದ್ಧಾರದ ಭಾಗ. ಇದುವೇ ಹಿಂದುತ್ವ ರಕ್ಷಣೆʼ ಎಂದು ಬಿಜೆಪಿಯ ಕಾಲೆಳೆದಿದ್ದರು.

ಹೀಗೆ ಪರ ವಿರೋಧದ ನಡುವೆ ಚರ್ಚೆಯಲ್ಲಿದ್ದ ಶಕ್ತಿ ಯೋಜನೆಗೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಕೊಟ್ಟಿರುವ ಸರ್ಟಿಫಿಕೇಟ್‌ ಬಲವನ್ನು ತುಂಬಿದಂತಾಗಿದೆ. ಹಾಗಿದ್ದರೆ ಏನಿದೆ ವೀರೇಂದ್ರ ಹೆಗ್ಗಡೆಯವರು ಬರೆದಿರುವ ಪತ್ರದಲ್ಲಿ?

Shakti scheme: Letter from D Veerendra heggade
ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಬರೆದ ಪತ್ರ

ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ.

ರಾಜ್ಯದಲ್ಲಿ 14ನೇ ಬಜೆಟ್‌ ಮಂಡಿಸಿದ ನಿಮಗೆ ಅಭಿನಂದನೆಗಳು.
ಅನೇಕ ಯೋಜನೆಗಳ ಮೂಲಕ ಜನರಿಗೆ ಉಪಯುಕ್ತ ಕಾರ್ಯಕ್ರಮ ನೀಡಿದ್ದೀರಿ. ಧರ್ಮಸ್ಥಳ ಕ್ಷೇತ್ರಕ್ಕೆ ಬರುತ್ತಿರುವ ಭಕ್ತರು, ವಿಶೇಷವಾಗಿ ಮಹಿಳೆಯರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಅನೇಕ ಮಹಿಳೆಯರು ನಿಮ್ಮ ಹೆಸರಿನಲ್ಲಿ ಶ್ರೀ ಮಂಜುನಾಥ ಸ್ವಾಮಿಗೆ ಸೇವೆ ಮತ್ತು ಕಾಣಿಕೆ ಸಲ್ಲಿಸುತ್ತಿದ್ದಾರೆ.

ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿ ಪ್ರೋತ್ಸಾಹಿಸಿರುವ ವಿಚಾರ ತಿಳಿದು ಇಡೀ ಸಮಾಜಕ್ಕೆ ಸಂತೋಷವಾಗಿದೆ. ಎಲ್ಲರ ಪರವಾಗಿ ಅಭಿನಂದನೆಗಳು.

ಮಹಿಳೆಯರ ಉಚಿತ ಪ್ರಯಾಣದಿಂದ ಆಗಿರುವ ಲಾಭಗಳು, ಕ್ಷೇತ್ರಕ್ಕೆ ಬರುತ್ತಿರುವ ಭಕ್ತರು ಮತ್ತು ಅವರ ಭಕ್ತಿ ಭಾವ, ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಅರ್ಚನೆ ಮಾಡಿಸುವವರ ಕೃತಜ್ಞತಾ ಭಾವವನ್ನು ಡಾ. ಡಿ ವೀರೇಂದ್ರ ಹೆಗ್ಗಡೆಯವರು ಉಲ್ಲೇಖಿಸಿದ್ದಾರೆ. ಇದರ ಜತೆಗೆ ಬಜೆಟ್‌ನಲ್ಲಿ ಜೈನ ಸಮುದಾಯಕ್ಕೆ ನೀಡಿದ ಪ್ರೋತ್ಸಾಹವನ್ನು ಉಲ್ಲೇಖಿಸಿದ್ದಾರೆ.

ಸಿದ್ದರಾಮಯ್ಯ ಅವರು ಈ ಹಿಂದೆ ಧರ್ಮಸ್ಥಳಕ್ಕೆ ಹೋಗಿದ್ದಾಗ.

ಧರ್ಮಸ್ಥಳಕ್ಕೆ ಬರುವಂತೆ ಆಹ್ವಾನ

ಈ ನಡುವೆ ಅವಕಾಶ ಇದ್ದಾಗ ಧರ್ಮಸ್ಥಳ ಕ್ಷೇತ್ರಕ್ಕೆ ಬಂದು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಹೋಗಬೇಕಾಗಿ ಅಪೇಕ್ಷೆ ಎಂದು ಕೂಡಾ ವೀರೇಂದ್ರ ಹೆಗ್ಗಡೆಯವರು ಹೇಳಿದ್ದಾರೆ.

ಶಕ್ತಿ ಯೋಜನೆಯಿಂದ ತುಂಬಿ ತುಳುಕಿದ್ದ ಧರ್ಮಸ್ಥಳ

Heavy rush at KSRTC Bus stand

ಜೂನ್‌ 11ರಂದು ಶಕ್ತಿ ಯೋಜನೆ ಆರಂಭವಾಗಿದ್ದು, ಆರಂಭಿಕ ದಿನಗಳಲ್ಲಿ ಮಹಿಳೆಯರು ಭಾರಿ ಉತ್ಸಾಹದಿಂದ ಓಡಾಡಿದ್ದರು. ಅದರಲ್ಲೂ ಜೂನ್‌ 17 ಮತ್ತು 18ರ ವಾರಾಂತ್ಯದ ದಿನಗಳಲ್ಲಿ ಬಸ್‌ಗಳಲ್ಲಿ ಜಾಗವೇ ಇರಲಿಲ್ಲ. ಬಸ್‌ಗಳ ಸಂಚಾರವೇ ಅಸ್ತವ್ಯಸ್ತವಾಗುವ ಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಹೆಚ್ಚುವರಿ ಬಸ್‌ಗಳನ್ನೇ ಬಿಡಬೇಕಾಯಿತು. ಅದರಲ್ಲೂ ಧರ್ಮಸ್ಥಳಕ್ಕೆ ರಾಜ್ಯದ ನಾನಾ ಭಾಗಗಳಿಂದ ಎಷ್ಟು ಬಸ್‌ ಬಿಟ್ಟರೂ ಸಾಲದು ಎಂಬಷ್ಟು ಸಂಖ್ಯೆಯಲ್ಲಿ ಭಕ್ತರು ಧಾವಿಸಿದ್ದರು. ಧರ್ಮಸ್ಥಳಕ್ಕೆ ಹೋಗುವ ಬಸ್‌ಗಳು, ಧರ್ಮಸ್ಥಳ ಬಸ್‌ ನಿಲ್ದಾಣ ತುಂಬಿ ತುಳುಕಿತ್ತು.

ಆದರೆ, ಮುಂದಿನ ವಾರ ಈ ಒತ್ತಡ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿತ್ತು. ಈಗಲೂ ಮಹಿಳಾ ಪ್ರಯಾಣಿಕರ ದೇಗುಲ ದರ್ಶನ ಉತ್ಸಾಹ ಇದೆಯಾದರೂ ಹಿಂದಿನ ಪ್ರಮಾಣದ ಒತ್ತಡ ಇಲ್ಲ.

ಹಿಂದಿನ ಸುದ್ದಿ: Free Bus Service: ಪುಣ್ಯಕ್ಷೇತ್ರಗಳಿಗೆ ದಾಳಿಯಿಟ್ಟ ಮಹಿಳೆಯರು; ಧರ್ಮಸ್ಥಳ, ಸುಬ್ರಹ್ಮಣ್ಯಗಳಲ್ಲಿ ಕಾಲಿಡಲು ಜಾಗವಿಲ್ಲ!

ಅನ್ನಭಾಗ್ಯವನ್ನು ಹೆಗ್ಗಡೆಯವರು ಹೊಗಳಿದ್ದಾರೆಂದ ಸಿದ್ದರಾಮಯ್ಯ

ಇತ್ತ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಶಕ್ತಿ ಯೋಜನೆಯ ಬಗ್ಗೆ ಮೆಚ್ಚುಗೆಯ ಪತ್ರ ಬರೆದ ನಡುವೆಯೇ, ಹೆಗ್ಗಡೆಯವರು ಅನ್ನ ಭಾಗ್ಯ ಯೋಜನೆಯ ಬಗ್ಗೆ ಪ್ರೋತ್ಸಾಹಕ ಮಾತುಗಳನ್ನು ಆಡಿದ್ದಾರೆ ಎಂದು ಸ್ವತಃ ಸಿದ್ದರಾಮಯ್ಯ ಅವರೇ ವಿಧಾನಸಭೆಯಲ್ಲಿ ಗುರುವಾರ ಹೇಳಿದರು.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡುವ ವೇಳೆ ಅನ್ನ ಭಾಗ್ಯ ಮಾಡಿರುವ ಕ್ರಾಂತಿಯ ಬಗ್ಗೆ ಉಲ್ಲೇಖಿಸುತ್ತಾ, ಬಡವರಿಗೆ ಅನ್ನ ನೀಡುವ ಸರ್ಕಾರದ ಕಾರ್ಯಕ್ರಮವನ್ನು ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರೂ ಹೊಗಳಿದ್ದರು ಎಂದು ಉಲ್ಲೇಖಿಸಿದ್ದರು.

ಇದನ್ನೂ ಓದಿ: Anna Bhagya Scheme : ಕೇಂದ್ರದ ಅಕ್ಕಿಗೂ ಬಿತ್ತಾ ಕತ್ತರಿ?; ಈ ಬಾರಿ 3 KG ಅಕ್ಕಿ ಏಕೆ? ಸ್ಪಷ್ಟನೆ ನೀಡಿದ ಸಿಎಂ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Congress Guarantee: ʼಸ್ಯಾಡಿಸ್ಟ್‌ʼ ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟವಾಗಿಲ್ಲ, ನಿಲ್ಲಿಸೋದೇ ಒಳಿತು ಎಂದ ಲಕ್ಷ್ಮಣ್‌!

Congress Guarantee: ಮತದಾರರನ್ನು ʼಸ್ಯಾಡಿಸ್ಟ್ʼ ಮನಸ್ಥಿತಿಯವರು ಎಂದು ಕರೆದಿರುವ ಮೈಸೂರು- ಕೊಡಗು ಕ್ಷೇತ್ರದ ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿ ಎಂ.ಲಕ್ಷ್ಮಣ್, ನನ್ನನ್ನು ಸೋಲಿಸಿ ಬೇಜಾರಿಲ್ಲ. ಆದರೆ ಸಿದ್ದರಾಮಯ್ಯ ಏನು ತಪ್ಪು ಮಾಡಿದ್ದಾರೆ. ತವರು ಜಿಲ್ಲೆಯಲ್ಲೇ ಎಷ್ಟು ಬಾರಿ ಅಪಮಾನ ಮಾಡುತ್ತೀರಿ ಎಂದು ಮತದಾರರನ್ನು ಪ್ರಶ್ನಿಸಿದ್ದಾರೆ.

VISTARANEWS.COM


on

Congress Guarantee
Koo

ಮೈಸೂರು: ಗ್ಯಾರಂಟಿಗಳನ್ನು ನೀಡಿದರೂ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಕಾಂಗ್ರೆಸ್‌ಗೆ ಬೆಂಬಲ ಸೂಚಿಸದ ಹಿನ್ನೆಲೆಯಲ್ಲಿ ಮತದಾರರ ವಿರುದ್ಧ ಮೈಸೂರು-ಕೊಡಗು ಕ್ಷೇತ್ರದ ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿ ಎಂ.ಲಕ್ಷ್ಮಣ್‌ (M. Lakshman) ಅಸಮಾಧಾನ ಹೊರಹಾಕಿದ್ದಾರೆ. ಜನರಿಗೆ ಕಾಂಗ್ರೆಸ್ ಗ್ಯಾರಂಟಿ (Congress Guarantee) ಇಷ್ಟ ಆಗಿಲ್ಲ. ಅದನ್ನು ಫಲಿತಾಂಶದ ಮೂಲಕ ತೋರಿಸಿದ್ದಾರೆ. ಬಿಜೆಪಿ ನಮ್ಮ ಗ್ಯಾರಂಟಿಗಳ ವಿರುದ್ಧ ಮಾತನಾಡುತ್ತಿತ್ತು. ಆದರೂ ಅವರನ್ನು ಜನ ಬೆಂಬಲಿಸಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದೇ ಒಳಿತು ಎಂದು ಪರಾಜಿತ ಕಾಂಗ್ರೆಸ್‌ ಅಭ್ಯರ್ಥಿ ಎಂ. ಲಕ್ಷ್ಮಣ್‌ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಜನರಿಗೆ ಗ್ಯಾರಂಟಿಗಳು ಇಷ್ಟವಿಲ್ಲ ಎಂಬುವುದು ಫಲಿತಾಂಶದ ಮೂಲಕ ತೋರಿಸಿದ್ದಾರೆ. ಹೀಗಾಗಿ ನಿಲ್ಲಿಸುವುದು ಒಳಿತು. ಗ್ಯಾರಂಟಿ ಯೋಜನೆಗಳ ಬಗ್ಗೆ ಮುಖ್ಯಮಂತ್ರಿಗಳು ಮರು ಪರಿಶೀಲನೆ ಮಾಡಬೇಕು ಎಂದು ಕೋರಿದ್ದಾರೆ.

ಇದನ್ನೂ ಓದಿ | Election Results 2024: ಡಿ.ಕೆ. ಸುರೇಶ್ ಸೋಲಿಗೆ ಸಿದ್ದರಾಮಯ್ಯ ಆ್ಯಂಡ್ ಟೀಮ್ ಕಾರಣ: ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ

ಶೇ.70 ರಷ್ಟು ಮೇಲ್ವರ್ಗದವರು ಈ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ಆದರೆ, ಅದನ್ನು ಜನರು ತಿರಸ್ಕಾರ ಮಾಡಿದ್ದಾರೆ. ಬೆಂಜ್ ಕಾರ್ ಹೊಂದಿರುವವನು, 25 ಸಾವಿರ ರೂ. ಸಂಬಳ ಪಡೆಯುವ ವ್ಯಕ್ತಿಗೆ ಪುಕ್ಕಟೆ ಕರೆಂಟ್ ಕೊಟ್ಟರೆ ಹೇಗೆ? ಈಗಲೂ ಗ್ಯಾರಂಟಿ ಹಣದಿಂದಲೇ ಜೀವನ ನಡೆಸುವ ಜನ ಇದ್ದಾರೆ. ಅಂತಹವರನ್ನು ನೋಡಿ ಗ್ಯಾರಂಟಿ ಮರು ಪರಿಶೀಲಿಸುವ ಮಾಡುವ ಅಗತ್ಯ ಇದೆ ಎಂದು ಹೇಳಿದ್ದಾರೆ.

ಗ್ಯಾರಂಟಿ ಅನುಕೂಲ ಪಡೆದು ವೋಟ್‌ ಹಾಕದವರಿಗೆ ಉದಾಹರಣೆ ನೀಡುತ್ತಾ, ಹುಣಸೂರಿನ ಹಲವು ಹಳ್ಳಿಗಳಲ್ಲಿ ಕೇವಲ ಒಂದೇ ಸಮುದಾಯದವರು ಇದ್ದಾರೆ. ಅಲ್ಲಿ ಬಿಜೆಪಿಗೆ 600ಕ್ಕೂ ಹೆಚ್ಚು ಮತ ನೀಡಿದ್ದಾರೆ. ನನಗೆ ಕೇವಲ ಮೂರು, ಏಳು ಮತಗಳನ್ನು ನೀಡಿದ್ದಾರೆ. ಒಕ್ಕಲಿಗರು ನನಗೆ ಮತ ಹಾಕಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಮತದಾರರು ‌ʼಸ್ಯಾಡಿಸ್ಟ್ʼ ಎಂದು ಟೀಕೆ

ಮತದಾರರನ್ನು ಸ್ಯಾಡಿಸ್ಟ್ ಎಂದು ಕರೆದಿರುವ ಎಂ.ಲಕ್ಷ್ಮಣ್, ನನ್ನನ್ನು ಸೋಲಿಸಿ ಬೇಜಾರಿಲ್ಲ. ಆದರೆ ಸಿದ್ದರಾಮಯ್ಯ ಏನು ತಪ್ಪು ಮಾಡಿದ್ದಾರೆ. ತವರು ಜಿಲ್ಲೆಯಲ್ಲೇ ಎಷ್ಟು ಬಾರಿ ಅಪಮಾನ ಮಾಡುತ್ತೀರಿ? ಇಷ್ಟರ ಮಟ್ಟಿಗೆ ಸ್ಯಾಡಿಸ್ಟಿಕ್ ನೇಚರ್ ಇದ್ದರೆ ಹೇಗೆ? ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದರು. ಐದು ರೂಪಾಯಿ ಕೊಟ್ಟಿದ್ರಾ? ಆದರೆ ಸಿದ್ದರಾಮಯ್ಯ ಎಷ್ಟು ಕೆಲಸ ಮಾಡಿದ್ದಾರೆ. ಜಯದೇವ ಆಸ್ಪತ್ರೆ ಸೇರಿ ಮೈಸೂರಿಗೆ ಎಷ್ಟು ಕೊಡುಗೆ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಅವರಂಥ ಕ್ಲೀನ್ ಇಮೇಜ್ ಇರುವ ಸಿಎಂ ದೇಶದಲ್ಲಿ ಬೇರೆ ಎಲ್ಲಾದರೂ ಇದ್ದಾರಾ? ಸಾಹೇಬರು ಯಾವುದನ್ನೂ ಹೇಳಿಕೊಳ್ಳೋದಿಲ್ಲ. ಆದರೆ ಮೈಸೂರಿನ ಜನ ಸಿದ್ದರಾಮಯ್ಯ ಅವರಿಗೆ ಎಷ್ಟೋ ಬಾರಿ ನೋವು ಕೊಡ್ತೀರಿ? ಎಂದು ಮತದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಯದುವೀರ್ ಜನರನ್ನು ಎಷ್ಟರ ಮಟ್ಟಿಗೆ ಅರಮನೆಗೆ ಬಿಟ್ಟುಕೊಳ್ಳುತ್ತಾರೋ, ಇಲ್ಲವೋ ಗೊತ್ತಿಲ್ಲ.
ನಾಳೆಯಿಂದಲೇ ನಾನು ಜನರ ಸಮಸ್ಯೆ ಪರಿಹರಿಸಲು ಮುಂದಾಗುತ್ತೇನೆ. ನನಗೆ ಮತ ಕೊಟ್ಟವರು, ಕೊಡದೇ ಇರುವವರು ಎಲ್ಲರೂ ನನ್ನ ಸಂಪರ್ಕ ಮಾಡಬಹುದು. ನಾಳೆಯೇ ನನ್ನ ಕಚೇರಿ ಸಹ ತೆರೆಯುತ್ತೇನೆ. ಆ ಕಚೇರಿಗೆ ಎಲ್ಲರಿಗೂ ಮುಕ್ತ ಅವಕಾಶ ಇದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Kangana Ranaut: ಕಾರಣ ಇದ್ದರೆ ಕೊಲೆ, ಅತ್ಯಾಚಾರ ಮಾಡಬಹುದೆ? ; ವಿರೋಧಿಗಳ ವಿರುದ್ಧ ಗುಡುಗಿದ ಕಂಗನಾ

ಕಾಂಗ್ರೆಸ್ ಯಾವತ್ತೂ ಜಾತಿ ರಾಜಕಾರಣ ಮಾಡಿಲ್ಲ

ಕಾಂಗ್ರೆಸ್ ಯಾವತ್ತೂ ಜಾತಿ ರಾಜಕಾರಣ ಮಾಡಿಲ್ಲ. ಆದರೂ ಚುನಾವಣೆ ವೇಳೆ ನನ್ನನ್ನು ಒಕ್ಕಲಿಗನೇ ಅಲ್ಲ ಅಂದು ಪ್ರಚಾರ ಮಾಡಿದರು. ಹಳೇ ಮೈಸೂರು ಭಾಗದಲ್ಲಿ 8 ಜನ ಒಕ್ಕಲಿಗರಿಗೆ ಕಾಂಗ್ರೆಸ್ ಟಿಕೆಟ್ ನೀಡಿತು. ಒಬ್ಬ ಒಕ್ಕಲಿಗನನ್ನು ನೀವು ಆಯ್ಕೆ ಮಾಡಿಕೊಳ್ಳಲಿಲ್ಲ? ಮೈಸೂರಿನಲ್ಲಿ ಹಲವು ವರ್ಷಗಳ ನಂತರ ಒಕ್ಕಲಿಗೆ ಸಮುದಾಯಕ್ಕೆ ಟಿಕೆಟ್ ನೀಡಿದ್ದರು. ಈ ಅವಕಾಶವನ್ನೂ ನೀವು ಕೈ ಚೆಲ್ಲಿದ್ದೀರಿ ಎಂದು ಸಮುದಾಯದ ವಿರುದ್ಧ ಬೇಸರ ಹೊರಹಾಕಿದ್ದಾರೆ.

Continue Reading

ಮೈಸೂರು

Murder Case : ತಂಗಿಗೆ ವರದಕ್ಷಿಣೆ ಟಾರ್ಚರ್‌; ಬಾಮೈದನ ಕೊಲೆ ಮಾಡಿದ ಬಾವ

Murder Case : ತಂಗಿಗೆ ವರದಕ್ಷಿಣಿ ಕಿರುಕುಳ ಕೊಡುತ್ತಿದ್ದ ಕಾರಣಕ್ಕೆ ತವರು ಮನೆಗೆ ಕರೆದುಕೊಂಡು ಬರಲು ಹೋದ ಅಣ್ಣನ ಬರ್ಬರವಾಗಿ ಕೊಲೆಯಾಗಿ ಹೋಗಿದ್ದಾನೆ. ಮೈಸೂರಿನಲ್ಲಿ ಬಾವನೇ ಬಾಮೈದನನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ.

VISTARANEWS.COM


on

By

Murder case in Mysuru
ಕೊಲೆಯಾದ ಅಭಿಷೇಕ್‌ ಹಾಗೂ ಆರೋಪಿ ರವಿಕುಮಾರ್‌
Koo

ಮೈಸೂರು: ತಂಗಿ ಗಂಡನಿಂದಲೇ ಯುವಕನೊಬ್ಬ (Murder Case) ಕೊಲೆಯಾಗಿ ಹೋಗಿದ್ದಾನೆ. ಮೈಸೂರಿನ ಕುವೆಂಪು ನಗರದ ಐ ಬ್ಲಾಕ್‌ನಲ್ಲಿ ಘಟನೆ ನಡೆದಿದೆ. ಅಭಿಷೇಕ್ (27) ಮೃತ ದುರ್ದೈವಿ.

ಅಭಿಷೇಕ್‌ ತಂಗಿಗೆ ಆಕೆಯ ಗಂಡನ ಮನೆಯವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು. ತಂಗಿಗೆ ಹೊಡೆದು ಬಡಿದು ಮಾಡುತ್ತಿದ್ದರು. ಗಂಡನ ಮನೆಯವರ ಕಾಟಕ್ಕೆ ಬೇಸತ್ತ ತಂಗಿಗೆ ಹೆತ್ತವರಿಗೆ ತನ್ನ ಸಂಕಷ್ಟವನ್ನು ಹೇಳಿಕೊಂಡಿದ್ದಳು. ಈ ವಿಷಯ ತಿಳಿದ ಅಭಿಷೇಕ್‌ ತಂಗಿಯನ್ನು ತವರು ಮನೆಗೆ ಕರೆದುಕೊಂಡು ಬರಲು ಹೋಗಿದ್ದ.

ಈ ವೇಳೆ ಬಾವ ರವಿಕುಮಾರ್‌ ಚಾಕುವಿನಿಂದ ಬಾಮೈದ ಅಭಿಷೇಕ್‌ಗೆ ಹಲ್ಲೆ ಮಾಡಿದ್ದಾನೆ. ತೀವ್ರ ರಕ್ತಸ್ರಾವವಾದ ಅಭಿಷೇಕ್‌ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಗಂಭೀರವಾಗಿ ಗಾಯಗೊಂಡ ಅಭಿ ಮೃತಪಟ್ಟಿದ್ದಾನೆ. ಸದ್ಯ ಸ್ಥಳಕ್ಕೆ ಕುವೆಂಪು ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Bengaluru Murder : ನಾಪತ್ತೆಯಾದವನು ಅಕ್ರಮ ಸಂಬಂಧಕ್ಕೆ ಬಲಿ; ಶವವನ್ನು ತುಂಡು ತುಂಡಾಗಿ ಕತ್ತರಿಸಿ ಮೋರಿಗೆ ಬಿಸಾಡಿದ ಹಂತಕ!

ಮಗಳ ನಗ್ನ ಫೋಟೊ ತೋರಿಸಿ ಪ್ರಿಯಕರ ಬ್ಲ್ಯಾಕ್‌ಮೇಲ್‌; ಮರ್ಯಾದೆಗೆ ಅಂಜಿ ವಿಷ ಸೇವಿಸಿದ ಕುಟುಂಬಸ್ಥರು

ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದಲ್ಲಿ (MM Hills) ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ (Self Harming) ಯತ್ನಿಸಿದ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದೆ. ಚಂದಗಾಲು ಗ್ರಾಮದ ಮಹದೇವನಾಯಕ (65) ಅವರ ಪುತ್ರಿ ರಿಷಿಕಾ ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿದ್ದಳು. ಆದರೆ ಇತ್ತೀಚೆಗೆ ಆತನಿಂದ ಅಂತರ ಕಾಯ್ದುಕೊಂಡಾಗ ರಿಷಿಕಾಳ ಜತೆಗಿದ್ದ ನಗ್ನ ವಿಡಿಯೊ ಹಾಗೂ ಫೋಟೋ ಇಟ್ಟುಕೊಂಡು ಬೆದರಿಕೆ (Black mail Case) ಹಾಕುತ್ತಿದ್ದ ಎನ್ನಲಾಗಿದೆ.

ಈ ವಿಚಾರವಾಗಿ ಅನೇಕ ಬಾರಿ ಯುವಕನ ಹಾಗು ರಿಷಿಕಾ ಕುಟುಂಬದ ಜತೆ ಗಲಾಟೆ ಸಹ ಆಗಿದೆ. ಈತನ ಕಾಟಕ್ಕೆ ಬೇಸತ್ತ ಕುಟುಂಬ, ಮರ್ಯಾದೆಗೆ ಅಂಜಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ವಿಷ ಸೇವಿಸಿ ಅಸ್ವಸ್ಥಳಾಗಿದ್ದ ರಿಷಿಕಾಳನ್ನು ಹನೂರು ತಾಲೂಕಿನ ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ತಾಯಿ ಗೌರಮ್ಮ ಹಾಗೂ ಲೀಲಾವತಿಗೆ ಹೆಚ್ಚಿನ ಚಿಕಿತ್ಸೆಗೆಂದು ಕೊಳ್ಳೇಗಾಲದಿಂದ ಚಾಮರಾಜನಗರ ಸಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆಯಲ್ಲಿ ರಿಷಿಕಾ ತಂದೆ ಮಹದೇವನಾಯಕ ಅವರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: Love‌ Torture : ಪ್ರೀತ್ಸೆ ಅಂತ ಪ್ರಾಣ ತಿಂದ; ಒಪ್ಪದೇ ಇದ್ದಾಗ ಯುವತಿಯ ಖಾಸಗಿ ಫೋಟೋ ಹರಿಬಿಟ್ಟ ಪಾಗಲ್‌ ಪ್ರೇಮಿ

MM Hills

ಮಾದಪ್ಪನ ದರ್ಶನ ಮಾಡಿ ವಿಷ ಸೇವಿಸಿದ ಕುಟುಂಬ

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ (Self Harming) ಯತ್ನಿಸಿದ್ದಾರೆ. ನಾಲ್ವರು ವಿಷ ಸೇವಿಸಿದ್ದು, ವ್ಯಕ್ತಿಯೊಬ್ಬರು ಮೃತಪಟ್ಟರೆ, ಮೂವರು ತೀವ್ರ ಅಸ್ವಸ್ಥಗೊಂಡಿದ್ದಾರೆ. ಮಲೆಮಹದೇಶ್ವರ ಬೆಟ್ಟ (MM Hills) ವ್ಯಾಪ್ತಿಯ ತಾಳಬೆಟ್ಟದಲ್ಲಿ ಘಟನೆ ನಡೆದಿತ್ತು.

ಚಂದಗಾಲು ಗ್ರಾಮದ ಮಹದೇವನಾಯಕ (65) ಮೃತ ದುರ್ದೈವಿ. ಅಸ್ವಸ್ಥಗೊಂಡ ಮಹದೇವನಾಯಕನ ಪತ್ನಿ ಗೌರಮ್ಮ(60), ರಿಷಿತಾ (21), ಲೀಲಾವತಿ (45) ಎಂಬುವವರು ತೀವ್ರ ಅಸ್ವಸ್ಥಗೊಂಡಿದ್ದಾರೆ. ಮೈಸೂರಿನ ಕೆಆರ್‌ನಗರ ತಾಲೂಕಿನ ಚಂದಗಾಲು ಗ್ರಾಮಸ್ಥರು ಎಂದು ತಿಳಿದು ಬಂದಿದೆ.

ಮಹದೇಶ್ವರ ಬೆಟ್ಟಕ್ಕೆ ಬಂದು ದೇವರ ದರ್ಶನ ಪಡೆದು ವಾಪಸ್ ಬರುವಾಗ ತಾಳ ಬೆಟ್ಟದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಹದೇವನಾಯಕ ವಿಷ ಸೇವಿಸಿದ ಕೂಡಲೇ ಒದ್ದಾಡಿ ಮೃತಪಟ್ಟಿದ್ದಾರೆ. ಇತ್ತ ಗೌರಮ್ಮ, ಲೀಲಾವತಿ, ರಿಷಿತಾ ವಿಷ ಸೇವನೆ ಮಾಡಿದ್ದಾರೆ. ಆದರೆ ದೇಹದಲ್ಲಿ ಉರಿ ಕಾಣಿಸಿಕೊಂಡು ಜೋರಾಗಿ ಕೂಗಿಕೊಂಡು ನರಳಾಡಿದ್ದಾರೆ.

ಈ ವೇಳೆ ತಾಳ ಬೆಟ್ಟದಲ್ಲಿದ್ದ ಸ್ಥಳೀಯರು ಪರಿಶೀಲನೆ ನಡೆಸಿದಾಗ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವುದು ಕಂಡು ಬಂದಿದೆ. ಕೂಡಲೇ ಅಲ್ಲಿದ್ದವರು ನಾಲ್ವರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಮಹದೇವನಾಯಕರಿಗೆ ವಿಷ ದೇಹದೊಳಗೆ ಸೇರಿದ್ದರಿಂದ ಅದಾಗಲೇ ಉಸಿರು ಚೆಲ್ಲಿದ್ದರು. ಸದ್ಯ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Bengaluru Murder : ನಾಪತ್ತೆಯಾದವನು ಅಕ್ರಮ ಸಂಬಂಧಕ್ಕೆ ಬಲಿ; ಶವವನ್ನು ತುಂಡು ತುಂಡಾಗಿ ಕತ್ತರಿಸಿ ಮೋರಿಗೆ ಬಿಸಾಡಿದ ಹಂತಕ!

Bengaluru Murder : ಪರಿಚಿತನಿಂದಲೇ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿ ಹೋಗಿದ್ದಾನೆ. ವ್ಯಕ್ತಿಯನ್ನು ಕೊಂದು ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿದ ಹಂತಕ ಮೋರಿಗೆ ಬಿಸಾಡಿ ಪರಾರಿ ಆಗಿದ್ದ. ಇದೀಗ ಆರೋಪಿಯನ್ನು ಬಂಧಿಸಿ, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

By

Bengaluru murder
ಕೊಲೆ ಆರೋಪಿ ಮಾಧವ್‌ ರಾವ್‌ ಹಾಗೂ ತುಂಡಾರಿಸಿದ ಮೃತದೇಹವನ್ನು ಬ್ಯಾಗ್‌ನಲ್ಲಿ ಕೊಂಡೊಯ್ಯುತ್ತಿರುವ ದೃಶ್ಯ ಸೆರೆ
Koo

ಬೆಂಗಳೂರು: ರಾಜಧಾನಿ ಬೆಂಗಳೂರಿ‌ನಲ್ಲಿ (Bengaluru News) ಭಯಂಕರ ಕೊಲೆ (Bengaluru Murder) ಪ್ರಕರಣವನ್ನು ಸಂಪಿಗೇಹಳ್ಳಿ ಪೊಲೀಸರು ಬಯಲು ಮಾಡಿದ್ದಾರೆ. ಮನೆಗೆ ಬಂದಿದ್ದ ವ್ಯಕ್ತಿಗೆ ಜಾಕ್‌ ರಾಡ್‌ನಿಂದ ಹೊಡೆದು ಕೊಂದು, ನಂತರ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮೋರಿಗೆ ಎಸೆದಿದ್ದಾನೆ. ಬೆಂಗಳೂರಿನ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ (Murder case) ಈ ಕೃತ್ಯ ನಡೆದಿದೆ. ಕೆ.ವಿ.ಶ್ರೀನಾಥ್ (34) ಕೊಲೆಯಾದವನು. ಮಾಧವ ರಾವ್ ಎಂಬಾತ ಕೊಲೆ ಆರೋಪಿಯಾಗಿದ್ದಾನೆ.

ಥಣಿಸಂದ್ರದ ಅಂಜನಾದ್ರಿ ಲೇಔಟ್ ನಿವಾಸಿಯಾದ ಕೆ.ವಿ. ಶ್ರೀನಾಥ್‌ ಬೆಂಗಳೂರಿನ ಬಸವೇಶ್ವರನಗರದಲ್ಲಿರುವ ಮಾರ್ಗದರ್ಶಿ ಚಿಟ್‌ ಫಂಡ್‌ನಲ್ಲಿ ಡೆವಲಪ್ಮೆಂಟ್ ಆಫೀಸರ್ ಆಗಿದ್ದ. ಹೀಗಿರುವಾಗ ಕಳೆದ ಮೇ.28ರ ಬೆಳಗ್ಗೆ ಮನೆಯಿಂದ ಹೊರಹೋಗಿದ್ದ ಶ್ರೀನಾಥ್‌ ವಾಪಸ್ ಆಗಿರಲಿಲ್ಲ. ಇದರಿಂದ ಹೆದರಿದ ಶ್ರೀನಾಥ್‌ ಪತ್ನಿ ಮೇ.29ರಂದು ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್‌ ಕೇಸ್‌ ದಾಖಲಿಸಿದ್ದರು.

ದೂರು ದಾಖಲಿಸಿಕೊಂಡು ಪ್ರಕರಣದ ಕುರಿತು ತನಿಖೆ ನಡೆಸಿದ ಪೊಲೀಸರಿಗೆ ಕೆ.ವಿ.ಶ್ರೀನಾಥ್ ಮೇ.28ರಂದು ಆರೋಪಿ ಮಾಧವರಾವ್ ಮನೆಗೆ ಹೋಗಿದ್ದು ಗೊತ್ತಾಗಿತ್ತು. ಕೆ.ಆರ್.ಪುರಂನ ವಿಜಿನಪುರದಲ್ಲಿರುವ ಮಾಧವರಾವ್ ಮನೆಗೆ ಶ್ರೀನಾಥ್‌ ಹೋಗುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆದರೆ ಒಳಗೆ ಹೋದವನು ಹೊರಗೆ ಬಂದಿರಲಿಲ್ಲ. ಜತೆಗೆ ಮನೆಯ ಒಳಗಡೆ ಪರಿಶೀಲನೆ ಮಾಡಿದಾಗ ರಕ್ತದ ಕಲೆಗಳು ಪತ್ತೆಯಾಗಿದ್ವು. ಇದರಿಂದ ಮಾಧವರಾವ್ ಬಗ್ಗೆ ವಿಚಾರಿಸಿದಾಗ ಆತನೂ ನಾಪತ್ತೆಯಾಗಿದ್ದ.

ಬಳಿಕ ಆತನ ಮೊಬೈಲ್‌ ಲೋಕೇಶನ್‌ ಪತ್ತೆ ಮಾಡಿದ ಪೊಲೀಸರಿಗೆ ಆರೋಪಿ ಆಂಧ್ರಪ್ರದೇಶದಲ್ಲಿಇದ್ದಾನೆ ಎಂದು ಗೊತ್ತಾಗಿತ್ತು. ನಂತರ ಮಾಧವರಾವ್‌ನನ್ನು ಕರೆತಂದು ಪೊಲೀಸರು ವಿಚಾರಣೆಯನ್ನು ನಡೆಸಿದಾಗ ಅಸಲಿ ಕಥೆಯನ್ನು ತೆರೆದಿಟ್ಟಿದ್ದ.

Bengaluru  Murder
ತುಂಡು ತುಂಡಾಗಿ ಕತ್ತರಿಸಿದ ದೇಹಕ್ಕಾಗಿ ಹುಡುಕಾಟ

ಇದನ್ನೂ ಓದಿ: Self Harming : ಮಗಳ ನಗ್ನ ಫೋಟೊ ತೋರಿಸಿ ಪ್ರಿಯಕರ ಬ್ಲ್ಯಾಕ್‌ಮೇಲ್‌; ಮರ್ಯಾದೆಗೆ ಅಂಜಿ ವಿಷ ಸೇವಿಸಿದ ಕುಟುಂಬಸ್ಥರು

ಅಕ್ರಮ ಸಂಬಂಧದ ಶಂಕೆ

ಮಾಧವರಾವ್ ಮತ್ತು ಕೆ.ವಿ.ಶ್ರೀನಾಥ್‌ ಇಬ್ಬರು ಎರಡು ವರ್ಷದಿಂದ ಪರಿಚಯಸ್ಥರಾಗಿದ್ದರು. ಕೆ.ವಿ.ಶ್ರೀನಾಥ್ ಬಳಿ ಮಾಧವರಾವ್ 5 ಲಕ್ಷ ರೂ. ಹಣದ ಚೀಟಿ ಹಾಕಿದ್ದ. ಈ ಚೀಟಿ ಹಣದ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಆಗಿತ್ತು. ಚೀಟಿ ಹಣ ವಾಪಸ್ ಕೊಡುವಂತೆ ಶ್ರೀನಾಥ್‌ ಒತ್ತಾಯ ಮಾಡುತ್ತಿದ್ದ. ಅಷ್ಟಲ್ಲದೇ ಮಾಧವರಾವ್‌ ಪತ್ನಿ ಜತೆ ಶ್ರೀನಾಥ್‌ ಅಕ್ರಮ ಸಂಬಂಧವನ್ನು ಹೊಂದಿದ್ದನಂತೆ.

ಹೀಗಿರುವಾಗ ಮೇ 28ರಂದು ಬೆಳಗ್ಗೆ ಮಾಧವರಾವ್ ಮನೆಗೆ ಶ್ರೀನಾಥ್‌ ಬಂದಿದ್ದ. ಈ ವೇಳೆ ಮನೆಯಲ್ಲಿ ಇಬ್ಬರಿಗೂ ಹಣದ ವಿಚಾರಕ್ಕೆ ಗಲಾಟೆ ಆಗಿತ್ತು. ಗಲಾಟೆ ವಿಕೋಪಕ್ಕೆ ತಿರುಗಿದ್ದು, ಸಿಟ್ಟಿನಲ್ಲಿ ಮಾಧವರಾವ್ ಮನೆಯಲ್ಲಿದ್ದ ಜಾಕ್ ರಾಡ್‌ನಿಂದ ಶ್ರೀನಾಥ್ ತಲೆಗೆ ಹೊಡೆದಿದ್ದ. ಕುಸಿದು ಬಿದ್ದ ಶ್ರೀನಾಥ್‌ನ ದೇಹವನ್ನು ಮಚ್ಚಿನಿಂದ ತುಂಡು ತುಂಡಾಗಿ ಕತ್ತರಿಸಿದ್ದ.

ಬಳಿಕ ಸಾಕ್ಷಿ ನಾಶ ಮಾಡಲು ಶ್ರೀನಾಥ್‌ನ ಮೃತದೇಹವನ್ನು ಮೂರು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿದ್ದ. ಮೊದಲಿಗೆ ಒಂದು ಬ್ಯಾಗ್ ನಂತರ ಎರಡು ಬ್ಯಾಗ್‌ಗಳಲ್ಲಿ ಮೃತದೇಹದ ತುಂಡುಗಳನ್ನು ತುಂಬಿಕೊಂಡು ಬೆಳತ್ತೂರು ಬಳಿಯ ಮೋರಿಯಲ್ಲಿ (ಪಿನಾಕಿನಿ ನದಿ) ಹಾಕಿದ್ದ. ನಂತರ ತನ್ನ ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡು ಆಂಧ್ರಪ್ರದೇಶಕ್ಕೆ ಎಸ್ಕೇಪ್ ಆಗಿದ್ದ.

ಸದ್ಯ ಕೊಲೆ ಪ್ರಕರಣವನ್ನು ರಾಮಮೂರ್ತಿನಗರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ರಾಮಮೂರ್ತಿನಗರ ಪೊಲೀಸರು ಕೊಲೆ (302) ಮತ್ತು ಸಾಕ್ಷಿ ನಾಶ(201)ರಡಿ ಕೇಸ್ ದಾಖಲು ಮಾಡಿಕೊಂಡು, ಶ್ರೀನಾಥ್‌ ಮೃತದೇಹದ ತುಂಡುಗಳಿಗೆ ಕಳೆದ ಮೂರು ದಿನದಿಂದ ಹುಡುಕಾಡುತ್ತಿದ್ದಾರೆ. ಸದ್ಯಕ್ಕೆ ಮೋರಿಯಲ್ಲಿ ಮೃತದೇಹದ ತುಂಡುಗಳು ಕೊಚ್ಚಿಕೊಂಡು ಹೋಗಿರುವ ಸಾಧ್ಯತೆ ಇದ್ದು, ಮಂಗಳೂರಿನಿಂದ ನುರಿತರನ್ನು ಕರೆಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ತಿಳಿದು ಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Prajwal Revanna Case: ಪೆನ್ ಡ್ರೈವ್ ಹಂಚಿಕೆ ಪ್ರಕರಣದ ಆರೋಪಿ ಕಾರ್ತಿಕ್ ಗೌಡ ಬಂಧನ

Prajwal Revanna Case: ಅಶ್ಲೀಲ ವಿಡಿಯೊಗಳಿದ್ದ ಪೆನ್‌ಡ್ರೈವ್‌ ಅನ್ನು ವಕೀಲ ದೇವರಾಜೇಗೌಡಗೆ ನೀಡಿದ ಆರೋಪದಲ್ಲಿ ಪ್ರಜ್ವಲ್‌ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್ ಗೌಡನನ್ನು ಬಂಧಿಸಲಾಗಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನದ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣರ ಮಾಜಿ ಕಾರು ಚಾಲಕ ಹಾಗೂ ಆರೋಪಿ ಕಾರ್ತಿಕ್‌ ಗೌಡ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಅಶ್ಲೀಲ ವಿಡಿಯೊಗಳಿದ್ದ ಪೆನ್‌ಡ್ರೈವ್‌ ಅನ್ನು ವಕೀಲ ದೇವರಾಜೇಗೌಡಗೆ ನೀಡಿದ ಆರೋಪದಲ್ಲಿ ಕಾರ್ತಿಕ್ ಗೌಡನನ್ನು ಮೈಸೂರು-ಹಾಸನ ಗಡಿಭಾಗದಲ್ಲಿ ಬಂಧಿಸಲಾಗಿದೆ. ಅಲ್ಲಿಂದ ವಿಚಾರಣೆಗಾಗಿ ಬೆಂಗಳೂರಿಗೆ ಕರೆತರಲಾಗುತ್ತಿದೆ.

ಪೆನ್‌ಡ್ರೈವ್‌ ಹಂಚಿಕೆ ಆರೋಪದಲ್ಲಿ ಏಪ್ರಿಲ್ 23ರಂದು ಹಾಸನ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಕಾರ್ತಿಕ್‌ ಗೌಡ, ಪುಟ್ಟಿ ಅಲಿಯಾಸ್ ಪುಟ್ಟರಾಜ್, ನವೀನ್ ಗೌಡ ಹಾಗೂ ಚೇತನ್ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಈ ಪೈಕಿ ನವೀನ್‌ ಗೌಡ ಹಾಗೂ ಚೇತನ್‌ನನ್ನು ಇತ್ತೀಚೆಗೆ ಎಸ್‌ಐಟಿ ಬಂಧಿಸಿತ್ತು. ಇದೀಗ ಕಾರ್ತಿಕ್‌ ಗೌಡನನ್ನು ಬಂಧಿಸಲಾಗಿದೆ.

ಇತ್ತೀಚೆಗೆ ಕಾರ್ತಿಕ್ ಗೌಡ ಅಜ್ಞಾತ ಸ್ಥಳದಲ್ಲಿದ್ದುಕೊಂಡು ವಿಡಿಯೊ ಮಾಡಿ, ಅಶ್ಲೀಲ ವಿಡಿಯೊ ಲೀಕ್ ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಿದ್ದ. ನಾನು ಹದಿನೈದು ವರ್ಷದಿಂದ ಪ್ರಜ್ವಲ್‌ ರೇವಣ್ಣ ಹಾಗೂ ಅವರ ಫ್ಯಾಮಿಲಿಗೆ ಕಾರು ಡ್ರೈವರ್ ಆಗಿ ಕೆಲಸ ಮಾಡಿದ್ದೇನೆ. ಒಂದು ವರ್ಷದಿಂದ ಕೆಲಸವನ್ನು ಬಿಟ್ಟಿದ್ದೇನೆ. ನನ್ನ ಜಮೀನು ಬರೆಸಿಕೊಂಡು ನನ್ನ ಪತ್ನಿ ಮೇಲೆ ಹಲ್ಲೆ ಮಾಡಿದರು. ಹಿಂಸೆ ಕೊಟ್ಟರು. ಆದ್ದರಿಂದ ಅವರ ಮನೆಯಿಂದ ಹೊರಬಂದೆ. ಆ ಸಮಯದಲ್ಲಿ ದೇವರಾಜೇಗೌಡ ಇವರ ಫ್ಯಾಮಿಲಿ ವಿರುದ್ಧ ಹೋರಾಟ ಮಾಡುತ್ತಿದ್ದರು. ಯಾರಿಂದಲೂ ನ್ಯಾಯ ಸಿಗಲ್ಲ ಅಂತ ದೇವರಾಜೇಗೌಡ ಬಳಿ ಹೋದೆ. ಯಾವುದೇ ಅಶ್ಲೀಲ ವಿಡಿಯೊ ರಿಲೀಸ್ ಮಾಡಬಾರದು ಎಂದು ಅಂದು ನನ್ನ ವಿರುದ್ಧ ಪ್ರಜ್ವಲ್‌ ರೇವಣ್ಣ ಸ್ಟೇ ತಂದಿದ್ದರು. ನಿನ್ನ ಬಳಿ ಇರುವ ವಿಡಿಯೊ, ಫೋಟೊಗಳನ್ನು ಕೊಡು. ನಾನು ಯಾರಿಗೂ ತೋರಿಸುವುದಿಲ್ಲ ಎಂದು ದೇವರಾಜೇಗೌಡ ಕೇಳಿದ್ದರು. ಅವರನ್ನು ನಂಬಿ ನನ್ನ ಬಳಿಯಿದ್ದ ವಿಡಿಯೊದ ಒಂದು ಕಾಪಿ ಕೊಟ್ಟೆ. ಅವರು ಅದನ್ನು ಸ್ವಾರ್ಥಕ್ಕೆ ಉಪಯೋಗಿಸಿಕೊಂಡರೋ ಏನೋ ಎಂಬುದು ಗೊತ್ತಿಲ್ಲ ಎಂದು ಹೇಳಿದ್ದ.

ಇದನ್ನೂ ಓದಿ | Valmiki Corporation Scam: ಸಾಕ್ಷ್ಯ ನಾಶ ಆರೋಪ; ಮೇ 24ರಂದು ನಾನು ಕಚೇರಿಗೆ ಹೋಗಿಯೇ ಇಲ್ಲ ಎಂದ ಸಚಿವ ಶರಣ ಪ್ರಕಾಶ್ ಪಾಟೀಲ್

ದೇವರಾಜೇಗೌಡರನ್ನು ಬಿಟ್ಟರೆ ಬೇರೆ ಯಾರಿಗೂ ನಾನು ವಿಡಿಯೊವನ್ನು ಕೊಟ್ಟಿಲ್ಲ. ಕಾಂಗ್ರೆಸ್‌ನವರಿಗಂತೂ ನಾನು ವಿಡಿಯೊ ಕೊಟ್ಟಿಲ್ಲ. ಕಾಂಗ್ರೆಸ್‌ನವರ ಮೇಲೆ ನಂಬಿಕೆ ಇಲ್ಲದೆ ದೇವರಾಜೇಗೌಡರ ಹತ್ತಿರ ಕೊಟ್ಟಿದ್ದೆ. ಪೆನ್‌ ಡ್ರೈವ್ ಅನ್ನು ಯಾರು ಹಂಚಿದರೋ ಗೊತ್ತಿಲ್ಲ ಎಂದು ಕಾರ್ತಿಕ್‌ ಹೇಳಿದ್ದ. ನಂತರ ವಕೀಲ ದೇವರಾಜೇಗೌಡರನ್ನು ಎಸ್‌ಐಟಿ ಬಂಧಿಸಿತ್ತು. ಇದೀಗ ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಗೌಡನನ್ನು ಬಂಧಿಸಲಾಗಿದೆ.

ಪರಾರಿಯಾಗಲು ಸಹಾಯ; ಪ್ರಜ್ವಲ್ ರೇವಣ್ಣ ಗರ್ಲ್ ಫ್ರೆಂಡ್‌ಗೆ ಎಸ್‌ಐಟಿ ನೊಟೀಸ್!

Prajwal Revanna Case

ಬೆಂಗಳೂರು: ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿ ತಲೆ ಮರೆಸಿಕೊಳ್ಳಲು ಹಣ ಸಹಾಯ ಮಾಡಿದ ಆರೋಪದಡಿ ಪ್ರಜ್ವಲ್‌ ಗರ್ಲ್ ಫ್ರೆಂಡ್‌ಗೆ ಎಸ್‌ಐಟಿ ನೊಟೀಸ್ ನೀಡಿದೆ. ಸಹಾಯ ಮಾಡುವ ಜತೆಗೆ ಇಲ್ಲಿನ ವಿದ್ಯಾಮಾನಗಳನ್ನು ಗರ್ಲ್ ಫ್ರೆಂಡ್ ಅಪ್ ಡೇಟ್ ಮಾಡುತ್ತಿದ್ದಳು ಎನ್ನಲಾಗಿದೆ. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ ಗರ್ಲ್ ಫ್ರೆಂಡ್‌ಗೆ ನೋಟಿಸ್‌ ಜಾರಿ ಮಾಡಲಾಗಿದೆ.

ಹಲವು ಬಾರಿ ನೋಟಿಸ್ ನೀಡಿದ್ದರೂ ಪ್ರಜ್ವಲ್‌ ರೇವಣ್ಣ ವಿಚಾರಣೆಗೆ ಬಂದಿರಲಿಲ್ಲ. ಆರ್ಥಿಕವಾಗಿ ಕಟ್ಟಿ ಹಾಕಲು ಅವರ ಬ್ಯಾಂಕ್ ಅಕೌಂಟ್‌ಗಳನ್ನು ಸೀಜ್‌ ಮಾಡಲು ಎಸ್ಐಟಿ ಮುಂದಾಗಿತ್ತು. ತನಿಖೆ ವೇಳೆ ಪ್ರಜ್ವಲ್‌ಗೆ ಹಣ ವರ್ಗಾವಣೆ ಮಾಡಿದ ಅಕೌಂಟ್‌ಗಳ ಮೇಲೆಯೂ ನಿಗಾ ಇಡಲಾಗಿತ್ತು. ಆದರೆ ಪ್ರಜ್ವಲ್‌ಗೆ ಗರ್ಲ್ ಫ್ರೆಂಡ್ ಹಣ ಸಹಾಯ ಮಾಡಿರುವುದು, ಆಶ್ರಯ ಕಲ್ಪಿಸಿರುವ ಬಗ್ಗೆ ಮಹತ್ವದ ಸಾಕ್ಷ್ಯ ಲಭ್ಯವಾಗಿದ್ದರಿಂದ ನೋಟಿಸ್‌ ನೀಡಲಾಗಿದೆ.

ಇದನ್ನೂ ಓದಿ | Bhavani Revanna: ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾದ ಭವಾನಿ ರೇವಣ್ಣ ಹೇಳಿದ್ದೇನು?

ಹೊಳೆನರಸೀಪುರದ ನಿವಾಸದಲ್ಲಿ ಸ್ಥಳ ಮಹಜರು

ಹಾಸನ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸ್ಥಳ ಮಹಜರು ನಡೆಸಲು ಪ್ರಜ್ವಲ್‌ ರೇವಣ್ಣ ಅವರನ್ನು ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸಕ್ಕೆ ಎಸ್‌ಐಟಿ ಅಧಿಕಾರಿಗಳು ಕರೆದೊಯ್ದಿದ್ದಾರೆ. ಇದಕ್ಕಾಗಿ ಮನೆ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಕ್ಯಾಮೆರಾಗಳಿಗೂ ಕಾಣದಂತೆ ಪ್ರಜ್ವಲ್‌ ರೇವಣ್ಣ ಅವರನ್ನು ಕರೆದೊಯ್ಯಲಾಗಿದೆ.

ನಾನು ಯಾರನ್ನೂ ಕರೆದುಕೊಂಡು ಬರಲು ಹೇಳಿಲ್ಲ: ಭವಾನಿ

ಕೆ.ಆರ್‌.ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ನಾನು ಸಂತ್ರಸ್ತೆಯನ್ನು ಕರೆದುಕೊಂಡು ಬರಲು ಹೇಳಿಲ್ಲ ಎಂದು ಭವಾನಿ ರೇವಣ್ಣ ಹೇಳಿದ್ದಾರೆ. ಶುಕ್ರವಾರ ನಾಲ್ಕು ಗಂಟೆಗಳ ಕಾಲ ಭವಾನಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಪುನಃ ವಿಚಾರಣೆಗೆ ಕರೆದಾಗ ಬರುವಂತೆ ಸೂಚಿಸಲಾಗಿದೆ. ಇಂದು ಮತ್ತೆ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

ಮಗನ ರಕ್ಷಣೆಗೆ ಯತ್ನಿಸಿ ಇಕ್ಕಟ್ಟಿಗೆ ಸಿಲುಕಿದ ತಾಯಿ

ಮಗ ಪ್ರಜ್ವಲ್‌ ರೇವಣ್ಣ ರಕ್ಷಣೆಗೆ ಯತ್ನಿಸಿ ತಾಯಿ ಭವಾನಿ ರೇವಣ್ಣ ಇಕ್ಕಟ್ಟಿಗೆ ಸಿಲುಕಿದ್ದಾರೆ. ಸಿಐಡಿಯ ಎಸ್ಐಟಿ ಕಚೇರಿಯಲ್ಲಿ ತಾಯಿ-ಮಗನ ವಿಚಾರಣೆ ತೀವ್ರಗೊಂಡಿದೆ. ಎಷ್ಟೇ ವಿಚಾರಣೆ ನಡೆಸಿದರೂ ಇಬ್ಬರೂ ಸೂಕ್ತ ಉತ್ತರ ನೀಡುತ್ತಿಲ್ಲ. ಒಂದೇ ಕಡೆ ಇದ್ದರೂ ತಾಯಿ-ಮಗನ ಭೇಟಿ ಅವಕಾಶ ನೀಡಿಲ್ಲ.

ಇದನ್ನೂ ಓದಿ | Prajwal Revanna Case: ರೇವಣ್ಣ ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಜೂನ್‌ 14ಕ್ಕೆ ಮುಂದೂಡಿಕೆ

ಇಬ್ಬರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿ ಎಸ್ಐಟಿ ಅಧಿಕಾರಿಗಳು ಹೇಳಿಕೆ ದಾಖಲಿಸಿದ್ದಾರೆ. ಒಂದೂವರೆ ತಿಂಗಳಿನಿಂದ ಮಗನ ಮುಖ ತಾಯಿ ನೋಡಿಲ್ಲ. ನೆನ್ನೆ ಎಸ್ಐಟಿ ಕಚೇರಿಗೆ ಬಂದರೂ ಮಗನ ಮುಖ ನೋಡಲಾಗದ ಪರಿಸ್ಥಿತಿ ಇತ್ತು. ಹೀಗಾಗಿ ವಿಚಾರಣೆ ಮುಗಿಸಿ ಭವಾನಿ ರೇವಣ್ಣ‌ ವಾಪಸ್ ಆಗಿದ್ದರು.

Continue Reading
Advertisement
IND vs PAK
ಕ್ರೀಡೆ7 mins ago

IND vs PAK: ಭಾರತ-ಪಾಕ್​ ಪಂದ್ಯಕ್ಕೆ 4 ಹಂತದ ಭದ್ರತಾ ವ್ಯವಸ್ಥೆ; ಮೈದಾನಕ್ಕೆ ನುಗ್ಗಿದರೆ ಜೈಲೂಟ ಖಚಿತ!

Money Guide
ಮನಿ-ಗೈಡ್9 mins ago

Money Guide: ಈಗಿನ ಆರೋಗ್ಯ ವಿಮಾ ಪಾಲಿಸಿ ಬಗ್ಗೆ ಸಮಾಧಾನ ಇಲ್ಲವೆ? ಹೆಲ್ತ್ ಇನ್ಶೂರೆನ್ಸ್ ಪೋರ್ಟೆಬಿಲಿಟಿ ಬಳಸಿ

Niveditha Gowda chandan shetty age differance
ಸ್ಯಾಂಡಲ್ ವುಡ್13 mins ago

Niveditha Gowda: ಚಂದನ್‌ ಶೆಟ್ಟಿ-ನಿವೇದಿತಾ ನಡುವಿನ ವಯಸ್ಸಿನ ಅಂತರವೆಷ್ಟು?

Viral Video
ವೈರಲ್ ನ್ಯೂಸ್17 mins ago

Viral Video: ಹೊಟೇಲ್‌ ಮಾಲೀಕನನ್ನು ಮುಖಾಮೂತಿ ನೋಡದೆ ಚಚ್ಚಿದ ಶಾಸಕ; ವಿಡಿಯೋ ಫುಲ್‌ ವೈರಲ್‌

Congress Guarantee
ಕರ್ನಾಟಕ19 mins ago

Congress Guarantee: ʼಸ್ಯಾಡಿಸ್ಟ್‌ʼ ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟವಾಗಿಲ್ಲ, ನಿಲ್ಲಿಸೋದೇ ಒಳಿತು ಎಂದ ಲಕ್ಷ್ಮಣ್‌!

Food Tips Kannada
ಆರೋಗ್ಯ24 mins ago

Food Tips Kannada: ಇನ್‌ಸ್ಟಂಟ್‌ ನೂಡಲ್ಸ್‌ ತಿಂದರೆ ಆರೋಗ್ಯಕ್ಕೆ ತೊಂದರೆ ಇದೆಯೆ?

Murder case in Mysuru
ಮೈಸೂರು32 mins ago

Murder Case : ತಂಗಿಗೆ ವರದಕ್ಷಿಣೆ ಟಾರ್ಚರ್‌; ಬಾಮೈದನ ಕೊಲೆ ಮಾಡಿದ ಬಾವ

Rohit Sharma Injury
ಕ್ರೀಡೆ46 mins ago

Rohit Sharma Injury: ಪಾಕ್​ ಪಂದ್ಯಕ್ಕೂ ಮುನ್ನ ಭಾರತಕ್ಕೆ ಆತಂಕ; ಅಭ್ಯಾಸದ ವೇಳೆ ರೋಹಿತ್​ಗೆ ಗಾಯ

Niveditha Gowda Demand For Divorce Alimony
ಸ್ಯಾಂಡಲ್ ವುಡ್54 mins ago

Niveditha Gowda: ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ರಾ ನಿವೇದಿತಾ ಗೌಡ?

Kangana Ranaut
ದೇಶ1 hour ago

Kangana Ranaut: ಕಾರಣ ಇದ್ದರೆ ಕೊಲೆ, ಅತ್ಯಾಚಾರ ಮಾಡಬಹುದೆ? ; ವಿರೋಧಿಗಳ ವಿರುದ್ಧ ಗುಡುಗಿದ ಕಂಗನಾ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ22 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ1 day ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌