Ravindra Mahajani: ಶವವಾಗಿ ಪತ್ತೆಯಾದ ನಟ, ನಿರ್ದೇಶಕ ರವೀಂದ್ರ ಮಹಾಜನಿ! - Vistara News

ಸಿನಿಮಾ

Ravindra Mahajani: ಶವವಾಗಿ ಪತ್ತೆಯಾದ ನಟ, ನಿರ್ದೇಶಕ ರವೀಂದ್ರ ಮಹಾಜನಿ!

Ravindra Mahajani: ಏಕಾಂಗಿಯಾಗಿ ವಾಸಿಸುತ್ತಿದ್ದ ಕಾರಣ ಖಿನ್ನತೆಗೆ ಜಾರಿದ್ದರು ಎನ್ನಲಾಗಿದೆ. ಜುಲೈ 14ರ ಸಂಜೆ 4.30ರ ಸುಮಾರಿಗೆ ಅಪಾರ್ಟ್‌ಮೆಂಟ್‌ನಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ನೆರೆಹೊರೆಯವರು ಪೊಲೀಸರನ್ನು ಸಂಪರ್ಕಿಸಿದ್ದಾರೆ.

VISTARANEWS.COM


on

Ravindra Mahajani
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮರಾಠಿ ಸಿನಿಮಾರಂಗದ ಖ್ಯಾತ ನಟ, ನಿರ್ದೇಶಕ ರವೀಂದ್ರ ಮಹಾಜನಿ (Ravindra Mahajani) ಅವರು ಪುಣೆಯ ತಾಲೇಗಾಂವ್ ದಭಾಡೆಯಲ್ಲಿರುವ Xrbia ಸೊಸೈಟಿಯ ಅಪಾರ್ಟ್‌ಮೆಂಟ್‌ನಲ್ಲಿ ಜುಲೈ 14ರಂದು ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರ ಪ್ರಕಾರ, ಮುಂಬೈ ನಿವಾಸಿ ರವೀಂದ್ರ ಮಹಾಜನಿ (gashmeer mahajani) ಸುಮಾರು ಎಂಟು ತಿಂಗಳಿಂದ ಅಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದರು ಎನ್ನಲಾಗಿದೆ. ಏಕಾಂಗಿ ಇದ್ದ ಕಾರಣ ಖಿನ್ನತೆ ಜಾರಿದ್ದರು ಎನ್ನಲಾಗಿದೆ. ಜುಲೈ 14ರ ಸಂಜೆ 4.30ರ ಸುಮಾರಿಗೆ ಅಪಾರ್ಟ್‌ಮೆಂಟ್‌ನಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ನೆರೆಹೊರೆಯವರು ಪೊಲೀಸರನ್ನು ಸಂಪರ್ಕಿಸಿದ್ದಾರೆ. ಇವರು ಮರಾಠಿ ಖ್ಯಾತ ಮಟ ಗಶ್ಮೀರ್ (ravindra mahajani son) ಮಹಾಜನಿ ತಂದೆ.

ಕೂಡಲೇ, ತಾಳೆಗಾಂವ್ ಎಂಐಡಿಸಿ ಪೊಲೀಸ್ ಠಾಣೆಯ ತಂಡವು ಸ್ಥಳಕ್ಕೆ ಆಗಮಿಸಿದ್ದಾರೆ. ಅಪಾರ್ಟ್‌ಮೆಂಟ್ ಒಳಗಿನಿಂದ ಬೀಗ ಹಾಕಿರುವುದು ಕಂಡುಬಂದಿದೆ. ಸ್ಥಳೀಯರ ಸಮ್ಮುಖದಲ್ಲಿ ಪೊಲೀಸರು ಬಾಗಿಲು ಒಡೆದು ಒಳ ನುಗ್ಗಿ ನೋಡಿದಾಗ ಮಹಜನಿಯ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಮಹಾಜನಿ ಎಂದು ಅಪಾರ್ಟ್‌ಮೆಂಟ್ ಮಾಲೀಕರು ಗುರುತಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶವನೋಡಿದ ಪೊಲೀಸರು ಎರಡು ಮೂರು ದಿನಗಳ ಮೊದಲೇ ನಿಧನರಾಗಿದ್ದಾರೆ ಎಂದು ಶಂಕಿಸಲಾಗಿದೆ.

ಬಳಿಕ ನಟನ ನಿಧನದ ಸುದ್ದಿಯನ್ನು ಪೊಲೀಸರು ಅವರ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ. ಸಾವಿನ ಕಾರಣವನ್ನು ಖಚಿತಪಡಿಸಲು ಅವರ ಪಾರ್ಥಿವ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ.

ಇದನ್ನೂ ಓದಿ: Actor Aditya Singh Rajput: ನಟ, ಮಾಡೆಲ್‌ ಆದಿತ್ಯ ಸಿಂಗ್ ರಜಪೂತ್‌ ಶವವಾಗಿ ಪತ್ತೆ

ಮುಂಬೈಚಾ ಫೌಜ್ದರ್ (Mumbaicha Fauzdar) (1984) ಮತ್ತು ಕಲಾತ್ ನಕಲತ್ (Kalat Nakalat) (1990) ನಂತಹ ಸಿನಿಮಾಗಳಿಗೆ ಹೆಸರುವಾಸಿಯಾಗಿದ್ದರು. 1970 ರ ದಶಕದಿಂದ ಅನೇಕ ವರ್ಷಗಳ ಕಾಲ ಮರಾಠಿ ಚಲನಚಿತ್ರೋದ್ಯಮದಲ್ಲಿ ಸಕ್ರಿಯರಾಗಿದ್ದರು. ಕೊನೆಯದಾಗಿ ಹಿಂದಿಯಲ್ಲಿ ಪಾಣಿಪತ್ ((2019)) ಸಿನಿಮಾದಲ್ಲಿ ನಟಿಸಿದ್ದರು. ಮಗ ಗಶ್ಮೀರ್ (ravindra mahajani son) ಮಹಾಜನಿ ಕೂಡ ನಟರಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Amy Jackson: ಮದುವೆಗೂ ಮುನ್ನ ತಾಯಿಯಾಗಿದ್ದ ಆ್ಯಮಿ ಜಾಕ್ಸನ್‌ ಮತ್ತೆ ಸಪ್ತಪದಿ ತುಳಿಯಲು ರೆಡಿ!

Amy Jackson: ಮದುವೆ ಮುನ್ನ ತನ್ನ ಸ್ನೇಹಿತೆಯರ ಜೊತೆ ಪ್ರೈವೇಟ್ ಜೆಟ್‌ನಲ್ಲಿ ಬ್ಯಾಚುಲರ್ ಪಾರ್ಟಿಯನ್ನೂ ಮಾಡಿ ಸಂಭ್ರಮಿಸಿದ್ದಾರೆ. ಈ ಬ್ಯಾಚುಲರ್ ಪಾರ್ಟಿಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

VISTARANEWS.COM


on

Amy Jackson shares a glimpse of her Paris bachelorette
Koo

ದಿ ವಿಲನ್ ಸಿನಿಮಾದಲ್ಲಿ ನಟಿಸಿದ್ದ ಆ್ಯಮಿ ಜಾಕ್ಸನ್ (Amy Jackson) ಇದೀಗ ಮದುವೆಯಾಗಲು ಸಜ್ಜಾಗುತ್ತಿದ್ದಾರೆ. ಆ್ಯಮಿ ಜಾಕ್ಸನ್ ಮದುವೆ ಮುನ್ನವೇ ಗರ್ಭಿಣಿಯಾಗುವ ಮೂಲಕ ಅನೇಕರನ್ನು ನಿಬ್ಬೇರಗಾಗಿಸಿದ್ದರು.

2019ರಲ್ಲಿ ವ್ಯಾಪಕ ಚರ್ಚೆಗೀಡಾದರು.

ಇದನ್ನೂ ಓದಿ: Shah Rukh Khan: ʻನಾಯಕ್‌ʼ ಸಿನಿಮಾಗೆ ಶಾರುಖ್‌ ಹೀರೊ ಆಗಬೇಕಿತ್ತು! 1 ರೂ. ಅಡ್ವಾನ್ಸ್ ಪಡೆದಿದ್ದರು!

ಮದುವೆ ಮುನ್ನವೇ ಗಂಡು ಮಗುಗೆ ಜನ್ಮ ನೀಡಿದ್ದ ಆ್ಯಮಿ ಜಾಕ್ಸನ್ ಮಗನಿಗೆ ಆ್ಯಂಡ್ರಿಯಾಸ್ ಎಂದು ನಾಮಕರಣ ಮಾಡಿ, ಜಾರ್ಜ್‌ ಜೊತೆ ಸಂಬಂಧ ಕಡಿದುಕೊಂಡರು.

ಹೀಗೆ ಜಾರ್ಜ್ ಇಂದ ದೂರವಾದ ಆ್ಯಮಿ ಜಾಕ್ಸನ್ ಈಗ ಬ್ರಿಟನ್ ನಟ ಎಡ್ ವೆಸ್ಟ್ವಿಕ್ ಜತೆ ಮದುವೆಯಾಗಲು ಸಿದ್ಧರಾಗಿದ್ದಾರೆ.

ಮದುವೆ ಮುನ್ನ ತನ್ನ ಸ್ನೇಹಿತೆಯರ ಜೊತೆ ಪ್ರೈವೇಟ್ ಜೆಟ್‌ನಲ್ಲಿ ಬ್ಯಾಚುಲರ್ ಪಾರ್ಟಿಯನ್ನೂ ಮಾಡಿ ಸಂಭ್ರಮಿಸಿದ್ದಾರೆ. ಈ ಬ್ಯಾಚುಲರ್ ಪಾರ್ಟಿಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
Continue Reading

ಕ್ರೈಂ

Actor Darshan: ಅಂದು `ತಗಡು’ ಅಂದಿದ್ದ ದರ್ಶನ್‌ಗೆ ಇಂದು ಉಮಾಪತಿ ಕೌಂಟರ್!

Actor Darshan: ಈ ಹಿಂದೆ ಉಮಾಪತಿ ಅವರು ಕಾಟೇರ ಟೈಟಲ್‌ ನಾನೇ ಕೊಟ್ಟಿದ್ದು ಎಂದು ಹಲವಾರು ಸಂದರ್ಶನಗಳಲ್ಲಿ ಹೇಳಿದ್ದರು. ದರ್ಶನ್‌ ಈ ಬಗ್ಗೆ ಮಾತನಾಡಿ ʻʻತಗಡೇ, ರಾಬರ್ಟ್‌ ಕಥೆ ನಿನಗೆ ಕೊಟ್ಟಿದ್ದು ನಾವು. ಇಂಥ ಒಳ್ಳೆ ಕಥೆ ಮತ್ತೆ ಯಾಕ್‌ ಬಿಟ್ಟೆ ನೀನು?ʼʼ ಎಂದು ವೇದಿಕೆ ಮೇಲೆಯೇ ಉಮಾಪತಿಗೆ ಪ್ರಶ್ನೆ ಮಾಡಿದ್ದರು. ʻಈ ಕಥೆ ನಾನು ಮಾಡಿಸಿದೆ, ಕಥೆ ನಾನು ಕೊಟ್ಟೆ ಎಂದು ಎಂದು ಹೇಳಿಕೊಂಡು ಬಂದಿದ್ದೆಯಲ್ವಾ?ಇಂಥ ಒಳ್ಳೆ ಕಥೆ ಯಾಕೆ ಬಿಟ್ಟೆ ನೀನು. ಅಯ್ಯೋ ತಗಡೇ… ಎಲ್ಲ ಆಧಾರ ಇಟ್ಟುಕೊಂಡೇ ಮಾತನಾಡಬೇಕುʼʼ ಎಂದು ಉಮಾಪತಿಗೆ ನೇರವಾಗಿ ದರ್ಶನ್‌ ಖಡಕ್ ವಾರ್ನಿಂಗ್ ಕೊಟ್ಟಿದ್ದರು.

VISTARANEWS.COM


on

Actor Darshan tagadu word umapathy counter now
Koo

ಬೆಂಗಳೂರು: ʻಕಾಟೇರʼ ಸಿನಿಮಾದ 50ನೇ ದಿನದ ಸಂಭ್ರಮಾಚರಣೆ ಸಂದರ್ಭದಲ್ಲಿ ದರ್ಶನ್‌ (Actor Darshan) ʻರಾಬರ್ಟ್ʼ ಸಿನಿಮಾದ ನಿರ್ಮಾಪಕ ಉಮಾಪತಿಗೆ ‘ತಗಡು’ ಇನ್ನಿತರೆ ಕಠು ಪದಗಳನ್ನು ಬಳಸಿ ನಿಂದಿಸಿದ್ದರು. ಇದಾದ ಬಳಿಕ ನಿರ್ಮಾಪಕ ಉಮಾಪತಿ ಕೂಡ ಬೇಸರದಲ್ಲಿಯೇ ಪ್ರತಿಕ್ರಿಯೆ ನೀಡಿದ್ದರು. ಇದೀಗ ದರ್ಶನ್‌ ಕೊಲೆ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದಾರೆ. ಅಂದು ʻತಗಡುʼ ಅಂದಿದ್ದ ದರ್ಶನ್‌ಗೆ ಇಂದು ಉಮಾಪತಿ ಪರೋಕ್ಷವಾಗಿ ಪೋಸ್ಟ್‌ ಮೂಲಕ ತಿರುಗೇಟು ಕೊಟ್ಟಿದ್ದಾರೆ. “ತಾಳ್ಮೆ ಕೆಲವೊಮ್ಮೆ ಶಕ್ತಿ” ಎಂದು ವಿಡಿಯೊ ಪೋಸ್ಟ್ ಮಾಡಿದ್ದಾರೆ ಉಮಾಪತಿ.

ತಗಡು ಯಾರು ಗೊತಾಯ್ತಾ? ಎಂದು ಪರೋಕ್ಷವಾಗಿ ಕೌಂಟರ್ ಕೊಟ್ಟಿದ್ದಾರೆ ಉಮಾಪತಿ. ಉಮಾಪತಿ ಪರವಾಗಿ ಹಲವು ಮೀಮ್ಸ್ ವೈರಲ್ ಆಗಿದ್ದವು. ಇವುಗಳನ್ನು ರಿಪೋಸ್ಟ್‌ ಮಾಡಿಕೊಳ್ಳುತ್ತಿದ್ದಾರೆ ಉಮಾಪತಿ.

ದರ್ಶನ್‌ ಉಮಾಪತಿಗೆ ವಾರ್ನಿಂಗ್‌ ನೀಡಿದ್ದೇನು?

ಈ ಹಿಂದೆ ಉಮಾಪತಿ ಅವರು ಕಾಟೇರ ಟೈಟಲ್‌ ನಾನೇ ಕೊಟ್ಟಿದ್ದು ಎಂದು ಹಲವಾರು ಸಂದರ್ಶನಗಳಲ್ಲಿ ಹೇಳಿದ್ದರು. ದರ್ಶನ್‌ ಈ ಬಗ್ಗೆ ಮಾತನಾಡಿ ʻʻತಗಡೇ, ರಾಬರ್ಟ್‌ ಕಥೆ ನಿನಗೆ ಕೊಟ್ಟಿದ್ದು ನಾವು. ಇಂಥ ಒಳ್ಳೆ ಕಥೆ ಮತ್ತೆ ಯಾಕ್‌ ಬಿಟ್ಟೆ ನೀನು?ʼʼ ಎಂದು ವೇದಿಕೆ ಮೇಲೆಯೇ ಉಮಾಪತಿಗೆ ಪ್ರಶ್ನೆ ಮಾಡಿದ್ದರು. ʻಈ ಕಥೆ ನಾನು ಮಾಡಿಸಿದೆ, ಕಥೆ ನಾನು ಕೊಟ್ಟೆ ಎಂದು ಎಂದು ಹೇಳಿಕೊಂಡು ಬಂದಿದ್ದೆಯಲ್ವಾ?ಇಂಥ ಒಳ್ಳೆ ಕಥೆ ಯಾಕೆ ಬಿಟ್ಟೆ ನೀನು. ಅಯ್ಯೋ ತಗಡೇ… ಎಲ್ಲ ಆಧಾರ ಇಟ್ಟುಕೊಂಡೇ ಮಾತನಾಡಬೇಕುʼʼ ಎಂದು ಉಮಾಪತಿಗೆ ನೇರವಾಗಿ ದರ್ಶನ್‌ ಖಡಕ್ ವಾರ್ನಿಂಗ್ ಕೊಟ್ಟಿದ್ದರು.

ಇದನ್ನೂ ಓದಿ: Actress Nayanathara: ‘ಬಾಹುಬಲಿ’ ಸಿನಿಮಾ ದೃಶ್ಯದ ಮರುಸೃಷ್ಟಿಯಲ್ಲಿ ವಿಘ್ನೇಶ್ ಶಿವನ್ ಪುತ್ರರು!

ದೇಹ ತೂಕ ವಿದ್ದರೆ ಸಾಲದು ಮಾತು ತೂಕವಿರಬೇಕು

ನಟ ದರ್ಶನ್ ಬಳಸಿದ ಪದ ಬಳಕೆ ಬಗ್ಗೆ ಬಳಿಕ ಉಮಾಪತಿ ಮಾತನಾಡಿ ʻʻಅದು ತಪ್ಪು ಸರ್, ಸಮಸ್ಯೆಗಳು ಎಲ್ಲ ಕಡೆ ಬರುತ್ತದೆ. ಆದರೆ ಅದನ್ನು ಹ್ಯಾಂಡಲ್ ಮಾಡುವ ರೀತಿ ಗೊತ್ತಿರಬೇಕು. ಸಮಾಜದಲ್ಲಿ ತೂಕವಿರುವ ವ್ಯಕ್ತಿ ಘನತೆಯಿಂದ ನಡೆದುಕೊಳ್ಳಬೇಕು. ದೇಹ ತೂಕ ವಿದ್ದರೆ ಸಾಲದು ಮಾತು ತೂಕವಿರಬೇಕು. ನಾನು ತಪ್ಪು ಮಾಡಿದರೂ ತಪ್ಪೆ. ಬೇರೆ ಯಾರಾದರೂ ತಪ್ಪು ಮಾಡಿದರೆ ತಪ್ಪೇ. ನಾವೆಲ್ಲ ಸಿನಿಮಾ ಮುಖಾಂತರ ಮೆಸೆಜ್ ಕೊಡಬೇಕು. ಈ ವಿವಾದಿಂದ ಸಂದೇಶ ಕೊಡುವಂತದ್ದು ಏನಿಲ್ಲʼʼಎಂದಿದ್ದರು.

Continue Reading

ಸ್ಯಾಂಡಲ್ ವುಡ್

Actor Darshan: ದಾನ ಧರ್ಮಗಳೇ ದರ್ಶನ್‌ರನ್ನ ಕಾಪಾಡುತ್ತೆ ಎಂದ ʻನಾಗಕನ್ನಿಕೆʼ ಸೀರಿಯಲ್‌ ನಟಿ!

Actor Darshan: ಕನ್ನಡ, ತಮಿಳು ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನಟಿಸಿ ಮಿಂಚಿದ್ದಾರೆ. ಇನ್ನು ದಮಯಂತಿ, BMW, ಮಹಾನುಬಾವರು, ಧೈರ್ಯಂ ಸರ್ವತ್ರ ಸಾಧನಂ, ಖಡಕ್ ಮತ್ತು ಇನ್ನಿತರ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇದೀಗ ನಟಿ ದರ್ಶನ್‌ ಕುರಿತಾಗಿ ಪ್ರತಿಕ್ರಿಯಿಸಿದ್ದಾರೆ. ʻʻಕಾನೂನು ಇದೆ ನೋಡಿಕೊಳ್ಳುತ್ತೆ. ತಪ್ಪು ಮಾಡಿಲ್ಲವಾದರೆ ಅವರ ದಾನಧರ್ಮಗಳೇ ಅವರನ್ನ ಕಾಪಾಡುತ್ತೆ. ಕಾನೂನಿನ ಮುಂದೆ ನಾವೆಲ್ಲರೂ ಚಿಕ್ಕವರೆ. ಸದ್ಯಕ್ಕಿನ್ನು ಆರೋಪಿಯಷ್ಟೆ ಅಪರಾಧಿಯಾಗಿಲ್ಲ…ಮುಂದೆ ಕಾದು ನೋಡೋಣʼʼಎಂದು ಬರೆದುಕೊಂಡಿದ್ದಾರೆ.

VISTARANEWS.COM


on

Actor Darshan support by Anusha Rai
Koo

ಬೆಂಗಳೂರು: ನಟಿ ಅನುಷಾ ರೈ ಅವರು ‘ನಾಗಕನ್ನಿಕೆ’ ಹಾಗೂ ‘ರಾಜಕುಮಾರಿ’ ಧಾರಾವಾಹಿಗಳ ಮೂಲಕ ಕನ್ನಡ ಕಿರುತೆರೆ ವೀಕ್ಷಕರಿಗೆ ಚಿರಪರಿಚಿತರಾಗಿದ್ದಾರೆ. ಕನ್ನಡ, ತಮಿಳು ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನಟಿಸಿ ಮಿಂಚಿದ್ದಾರೆ. ಇನ್ನು ದಮಯಂತಿ, BMW, ಮಹಾನುಬಾವರು, ಧೈರ್ಯಂ ಸರ್ವತ್ರ ಸಾಧನಂ, ಖಡಕ್ ಮತ್ತು ಇನ್ನಿತರ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇದೀಗ ನಟಿ ದರ್ಶನ್‌ ಕುರಿತಾಗಿ ಪ್ರತಿಕ್ರಿಯಿಸಿದ್ದಾರೆ. ʻʻಕಾನೂನು ಇದೆ ನೋಡಿಕೊಳ್ಳುತ್ತೆ. ತಪ್ಪು ಮಾಡಿಲ್ಲವಾದರೆ ಅವರ ದಾನಧರ್ಮಗಳೇ ಅವರನ್ನ ಕಾಪಾಡುತ್ತೆ. ಕಾನೂನಿನ ಮುಂದೆ ನಾವೆಲ್ಲರೂ ಚಿಕ್ಕವರೆ. ಸದ್ಯಕ್ಕಿನ್ನು ಆರೋಪಿಯಷ್ಟೆ ಅಪರಾಧಿಯಾಗಿಲ್ಲ…ಮುಂದೆ ಕಾದು ನೋಡೋಣʼʼಎಂದು ಬರೆದುಕೊಂಡಿದ್ದಾರೆ.

ನಟಿ ಅನುಷಾ ರೈ ಇನ್‌ಸ್ಟಾದಲ್ಲಿ ಹೀಗೆ ಬರೆದುಕೊಂಡಿದ್ದಾರೆ. ʻʻಅಭಿಮಾನಿಗಳು ನನಗೆ ವರ್ಷದ 365 ದಿನವೂ ಊಟ ಹಾಕ್ತಾರೆ. ಆದ್ರೆ ನಾನು ಹುಟ್ಟುಹಬ್ಬದ ಒಂದು ದಿನ‌ ಮಾತ್ರ ಅವರಿಗೆ ಊಟ ಹಾಕ್ತೀನಿ ಎಂದವರು ದರ್ಶನ್.. ಮೈಮೇಲೆ ಆತರ ನನ್ನ ಹೆಸರನ್ನು ಹಚ್ಚೆ ಹಾಕಿಸಿಕೊಳ್ಳಬೇಡಿ ಸಿನಿಮಾ ನೋಡಿ ಸಾಕು, ನಿಮ್ಮ ಅಪ್ಪ ಅಮ್ಮನ‌ ಹೆಸರು ಹಾಕಿಸಿಕೊಳ್ಳಿ ಎನ್ನುತ್ತಾ ತಾವೇ ಎದೆಯ ಮೇಲೆ ನನ್ನ‌ ಸೆಲೆಬ್ರಿಟೀಸ್ ಎಂದು ಹಚ್ಚೆ ಹಾಕಿಸಿಕೊಂಡ ಅಭಿಮಾನಿಗಳ ದಾಸ. .ನಾನು ಕಾರಲ್ಲಿ ಸ್ಪೀಡಾಗಿ ಹೋಗೊವಾಗ ಹಿಂದೆ ಬರಬೇಡಿ, ಅಕಸ್ಮಾತ್ ಆಕ್ಸಿಡೆಂಟ್ ಆಗಿ ಹೆಚ್ಚು ಕಮ್ಮಿ ಆದ್ರೆ ನಿಮ್ಮ ಕುಟುಂಬದ ಗತಿ ಏನು?? ಎಂದು ಅಭಿಮಾನಿಗಳಿಗೆ ಪ್ರೀತಿಯಿಂದ ಕಾಳಜಿಯಿಂದ ಬುದ್ಧಿವಾದ ಹೇಳಿದ್ದ ಈ ಮೈಸೂರಿನ ಆರಡಿಯ ತೂಗುದೀಪʼʼಎಂದು ಹೇಳಿದ್ದಾರೆ.

ಇದನ್ನೂ ಓದಿ: Actress Nayanathara: ‘ಬಾಹುಬಲಿ’ ಸಿನಿಮಾ ದೃಶ್ಯದ ಮರುಸೃಷ್ಟಿಯಲ್ಲಿ ವಿಘ್ನೇಶ್ ಶಿವನ್ ಪುತ್ರರು!


ʻʻಇಂತಹ ವ್ಯಕ್ತಿಯಿಂದ ಇಂತಹ ತಪ್ಪಾಯಿತೆಂದರೆ ನಂಬಲಸಾಧ್ಯ. ಅದೇನೆ ಆದರೂ ಕಾನೂನು ಇದೆ ನೋಡಿಕೊಳ್ಳುತ್ತೆ. ತಪ್ಪು ಮಾಡಿಲ್ಲವಾದರೆ ಅವರ ದಾನಧರ್ಮಗಳೇ ಅವರನ್ನ ಕಾಪಾಡುತ್ತೆ. ಕಾನೂನಿನ ಮುಂದೆ ನಾವೆಲ್ಲರೂ ಚಿಕ್ಕವರೆ. ಸದ್ಯಕ್ಕಿನ್ನು ಆರೋಪಿಯಷ್ಟೆ ಅಪರಾಧಿಯಾಗಿಲ್ಲ…ಮುಂದೆ ಕಾದು ನೋಡೋಣ. ಇನ್ನು ಈ ಅನಾಹುತಕ್ಕೆ ಬಲಿಯಾದ ರೇಣುಕಾಸ್ವಾಮಿ ಗೂ ಅವರ ಕುಟುಂಬಕ್ಕೂ ಆ ದೇವರು ದುಃಖವನ್ನು ಭರಿಸೊ ಶಕ್ತಿ ನೀಡಲಿ. ಅವರು ಮಾಡಿದ್ದು ಸಹ ತಪ್ಪೇ ಆದರೂ ಈರೀತಿಯ ಶಿಕ್ಷೆ ಸರಿಯಲ್ಲ. ಕಾನೂನಿನ ಪ್ರಕಾರವೇ ರೇಣುಕಾಸ್ವಾಮಿಗೆ ಶಿಕ್ಷೆ ಕೊಡಿಸೊ ಬದಲು ಯಾರೋ ಜೀವ ತೆಗೆದಿದ್ದು ಅಕ್ಷಮ್ಯ ಅಪರಾಧ. ತಂದೆಯಾಗುವ ಮೊದಲೇ ಕಣ್ ಮುಚ್ಚಿದ ರೇಣುಕಾಸ್ವಾಮಿ ಮತ್ತೆ ಮಗುವಾಗಿ ಹೆಂಡತಿಯ ಹೊಟ್ಟೆಯಲ್ಲಿ ಹುಟ್ಟಲಿ ಅನ್ನೋದೆ ನಮ್ಮ ಹಾರೈಕೆ….ಕ್ಷಮಿಸಿ

ಈ ಪ್ರಕರಣದಲ್ಲಿ ದರ್ಶನ್ ಕುಟುಂಬಕ್ಕೆ ಶಾಪ ಹಾಕಿದರೆ ಪ್ರಯೋಜನವೇನು ?? ನನ್ನ ತಂದೆ ಒಬ್ಬ ದೊಡ್ಡ ಸ್ಟಾರ್ ಅನ್ನೋದು ಸಹ ಗೊತ್ತಿಲ್ಲದ ಆ ಹಾಲುಗಲ್ಲದ ಮುದ್ದು ಹುಡುಗ ವಿನೀಶ್ ನೋಡಿದರೆ ಸಂಕಟವಾಗದಿರುವುದೆ? ಫಾದರ್ಸ್ ಡೇ ದಿನ ತಂದೆಯನ್ನು ನೆನೆದು ವಿನೀಶ್ ಹಾಕಿದ ಪೋಸ್ಟ್ ಗೆ ಮನಕಲಕದೆ ಇರುವುದೇ ? ಜೊತೆಗೆ ದರ್ಶನ್ ಜೀವನಕ್ಕೆ 22 ವರ್ಷದಿಂದ ವಿಜಯವೂ ಆಗಿ ಲಕ್ಷ್ಮಿಯೂ ಆಗಿರುವ ವಿಜಯಲಕ್ಷ್ಮಿ ಯವರನ್ನು ತಪ್ಪಿತಸ್ಥರಂತೆ ಕಾಣೋದು ಸರಿಯೇ?? ಇಂತಹ ಸಂದರ್ಭದಲ್ಲಿ ಅವರಿಬ್ಬರಿಗೂ ಧೈರ್ಯ ಹೇಳಬೇಕೇ ಹೊರತು ಹೀಯಾಳಿಸುವುದು ಬೇಡʼʼಎಂದು ಬರೆದುಕೊಂಡಿದ್ದಾರೆ.

ಇದೀಗ ನಟಿಯ ಈ ಪೋಸ್ಟ್‌ಗೆ ಚರ್ಚೆಗಳು ಆಗುತ್ತಿವೆ. ಇನ್ನು ‘ಬೆಂಗಳೂರಿನ ಇನ್’ ಸಿನಿಮಾದಲ್ಲಿಯೂ ನಟಿಸಿದ್ದರು ಅನುಷಾ ರೈ .

Continue Reading

ಮೈಸೂರು

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Actor Darshan : ಕೊಲೆ ಕೇಸ್‌ನಲ್ಲಿ ಲಾಕ್‌ ಆಗಿರುವ ನಟ ದರ್ಶನ್‌ಗೆ ಒಂದರ ಮೇಲೊಂದು ಸಂಕಷ್ಟ ಎದುರಾಗಿದೆ. ಹಳೇ ಕೇಸ್‌ಗಳೆಲ್ಲವೂ ಇದೀಗ ತೆರೆದುಕೊಳ್ಳುತ್ತಿದ್ದು, ನಿಯಮ ಬಾಹಿರವಾಗಿ ಬಾರ್-ಹೆಡ್ ಬಾತುಕೋಳಿ ಸಾಕಿದ ಪ್ರಕರಣವನ್ನು ಅರಣ್ಯ ಇಲಾಖೆ ಚುರುಕುಗೊಳಿಸಿದೆ.

VISTARANEWS.COM


on

By

Actor Darshan
ಸಾಂದರ್ಭಿಕ ಚಿತ್ರ
Koo

ಮೈಸೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ (Actor Darshan) ಮತ್ತೊಂದು ಸಂಕಷ್ಟ ಎದುರಾಗಿದೆ. ಕಾನೂನು ಬಾಹಿರವಾಗಿ ವಿಶಿಷ್ಟ ಪ್ರಬೇಧದ ಬಾರ್ ಹೆಡ್ ಬಾತುಕೋಳಿ (bar-headed goose) ಸಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ 2 ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಸಲು ನಿರ್ಧರಿಸಿದೆ.

ಈ ಕೇಸ್‌ನಲ್ಲಿ ನಟ ದರ್ಶನ್‌ ಮಾತ್ರವಲ್ಲದೆ ಪತ್ನಿ ವಿಜಯಲಕ್ಷ್ಮಿ ಕೂಡ ಆರೋಪಿಯಾಗಿದ್ದಾರೆ. ಮೈಸೂರು ಜಿಲ್ಲೆಯ ತಿ.ನರಸೀಪುರದಲ್ಲಿರುವ ದರ್ಶನ್ ತೋಟದಲ್ಲಿ ಕಾನೂನು ಬಾಹಿರ‌ವಾಗಿ ಬಾರ್ ಹೆಡ್ ಬಾತುಕೋಳಿ ಸಾಕಲಾಗಿತ್ತು. ಈ ಸಂಬಂಧ ಎಫ್ಐಆರ್ ದಾಖಲಾಗಿತ್ತು. ದರ್ಶನ್‌ ಪತ್ನಿ ವಿಜಯಲಕ್ಷ್ಮಿ A1 ಹಾಗೂ ಪ್ರಾಪರ್ಟಿ ಮ್ಯಾನೇಜರ್ ನಾಗರಾಜ್ ಅಲಿಯಾಸ್ ನಾಗ A2 ಹಾಗೂ ನಟ ದರ್ಶನ್ A3 ಆರೋಪಿ ಆಗಿದ್ದರು. ಐದು ಬಾರಿ ನೋಟಿಸ್ ಕೊಟ್ಟರು ನಟ ದರ್ಶನ್‌ ವಿಚಾರಣೆಗೆ ಹಾಜರಾಗಿ ಇರಲಿಲ್ಲ.

ಇತ್ತ ಪ್ರಕರಣ ಸಂಬಂಧ ದರ್ಶನ್‌ನನ್ನು ಬಂಧಿಸದೆ ಅರಣ್ಯ ಇಲಾಖೆ ನಿರ್ಲಕ್ಷ್ಯ ವಹಿಸಿತ್ತು. ಸೆಲೆಬ್ರಿಟಿ ಆಗಿದ್ದರಿಂದ ತಲೆಮರೆಸಿಕೊಳ್ಳದ ಕಾರಣ ಬಲವಂತವಾಗಿ ಬಂಧಿಸದೇ, ವಿಚಾರಣೆಗೆ ಅವಕಾಶ‌‌ ಕೊಟ್ಟಿತ್ತು. ಇದೀಗ ಅರಣ್ಯ ಇಲಾಖೆಯು ಈ ಪ್ರಕರಣವನ್ನು ಚುರುಕುಗೊಳಿಸಿದೆ.

ಇದನ್ನೂ ಓದಿ: Actor Darshan: ದರ್ಶನ್ ಪ್ರಕರಣ; ಸ್ಯಾಂಡಲ್‌ವುಡ್‌ ಖ್ಯಾತ ಹಾಸ್ಯ ನಟ ಚಿಕ್ಕಣ್ಣಗೂ ನೋಟಿಸ್‌?

ಪ್ಲೀಸ್‌ ಪವಿತ್ರಾಳನ್ನು ಬಿಟ್ಟು ಬಿಡಿ ಎಂದು ಅಂಗಲಾಚುತ್ತಿರುವ ದರ್ಶನ್‌?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯ‌ (Renuka Swamy Murder) ನಂತರ ಆಸುಪಾಸಿನ ಸ್ಥಳಗಳಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ (CCTV recording) ದಾಖಲಾಗಿದ್ದ ಎಲ್ಲ ದೃಶ್ಯಗಳನ್ನು ಡಿಲೀಟ್‌ (Delete) ಮಾಡಲಾಗಿದೆ ಎಂಬ ಆಘಾತಕಾರಿ ಸಂಗತಿ ಬಯಲಾಗಿದೆ. ಇದರ ಜತೆಗೆ ದರ್ಶನ್‌ (Actor Darshan) ಅವರು ಸ್ಥಳ ಮಹಜರು ವೇಳೆ ತನಿಖಾಧಿಕಾರಿಗಳಿಗೆ ಪವಿತ್ರ ಗೌಡಳನ್ನು ಬಿಟ್ಟು ಬಿಡಿ ಎಂದು ಅಂಗಲಾಚುತ್ತಿದ್ದಾರೆ ಎನ್ನಲಾಗಿದೆ.

ಸ್ಥಳ ಮಹಜರು ವೇಳೆ ತನಿಖಾಧಿಕಾರಿಗೆ ದರ್ಶನ್‌ ಮನವಿ ಮಾಡಿದ್ದಲ್ಲದೇ ಪೊಲೀಸ್ ಠಾಣೆಯಲ್ಲೂ ಪವಿತ್ರಾ ಗೌಡಳನ್ನು ಕೇಸ್‌ನಿಂದ ಕೈ ಬಿಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಪವಿತ್ರಾ ಗೌಡಳಿಗೂ ಈ ಕೊಲೆ ಕೇಸ್‌ಗೂ ಸಂಬಂಧವಿಲ್ಲವೆಂದು ದರ್ಶನ್ ಪದೇ ಪದೇ ಹೇಳುತ್ತಿದ್ದು, ಪವಿತ್ರ ಗೌಡಳನ್ನು ಬಿಟ್ಟು ಬಿಡಿ ಎಂದು ಅಂಗಲಾಚುತ್ತಿದ್ದಾರೆ ಎನ್ನಲಾಗಿದೆ. ಆದರೆ ದರ್ಶನ್‌ ಎಷ್ಟೇ ಮನವಿ ಮಾಡಿಕೊಂಡರೂ ಪೊಲೀಸರು ಮಾತ್ರ ಜಗ್ಗದೇ ಇನ್ನಷ್ಟು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಿಸಿಟಿವಿ ದಾಖಲೆ ಸಂಪೂರ್ಣ ನಾಶ ಮಾಡಿದ ಪಾತಕಿಗಳು

ಕೊಲೆಯ ಬಳಿಕ, ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನ ಹಾಗೂ ಹಲ್ಲೆ ನಡೆದ ಪಟ್ಟಣಗೆರೆಯ ಶೆಡ್‌ನ ದೃಶ್ಯಗಳನ್ನು ಡಿಲೀಟ್‌ ಮಾಡಿಸಲಾಗಿದೆ. ಆರೋಪಿಗಳು ಕಳೆದ ಒಂದು ವರ್ಷದ ಸಿಸಿ ಟಿವಿ ದೃಶ್ಯಗಳನ್ನು ಡಿಲೀಟ್ ಮಾಡಿಸಿದ್ದಾರೆ. ಸಿಸಿ ಟಿವಿ ದೃಶ್ಯಗಳೇ ಕೊಲೆಯ ಪ್ರಮುಖ ಸಾಕ್ಷಿ ಆಗಲಿವೆ ಎಂಬ ಹಿನ್ನೆಲೆಯಲ್ಲಿ, ಇವುಗಳನ್ನು ಪೂರ್ತಿಯಾಗಿ ಡಿಲೀಟ್‌ ಮಾಡಲು ಆರೋಪಿಗಳು ಅಪರಾಧ ಪರಿಣಿತರ ಸಲಹೆ ಪಡೆದೇ ಈ ಕೃತ್ಯ ಎಸಗಿದ್ದಾರೆ ಎಂದು ತರ್ಕಿಸಲಾಗಿದೆ.

ಇದನ್ನೂ ಓದಿ: Actor Darshan: ಮನಸ್ಸಿಗೆ ಹತ್ತಿರವಾದವರು ಕಷ್ಟ ಅನುಭವಿಸುತ್ತಿದ್ದಾರೆ; ಬರ್ತ್‌ಡೇ ಕ್ಯಾನ್ಸಲ್ ಮಾಡಿದ ರಕ್ಷಕ್ ಬುಲೆಟ್!

ರೇಣುಕಾಸ್ವಾಮಿ ಕೊಲೆಯ ಮೊದಲಿನ ಹಾಗೂ ನಂತರದ ಎಲ್ಲಾ ಸಿಸಿ ಕ್ಯಾಮರಾ ದೃಶ್ಯಗಳನ್ನು ಡಿಲೀಟ್‌ ಮಾಡಿಸಿದ್ದಾರೆ. ತನಿಖೆಗೆ ಇವು ಅತ್ಯಂತ ಅಗತ್ಯವಾಗಿದ್ದು, ಶೆಡ್ ಹಾಗೂ ರೆಸ್ಟೋರೆಂಟ್‌ನ ಸಿಸಿ ಟಿವಿ‌ ರೆಕಾರ್ಡಿಂಗ್‌ ರಿಕವರಿ ಮಾಡಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ದರ್ಶನ್‌ ಸೇರಿದಂತೆ ಆರೋಪಿಗಳ ಬಂಧನ ಆದ ಬಳಿಕ ಈ ರೆಕಾರ್ಡಿಂಗ್‌ ಡಿಲೀಟ್‌ ಮಾಡಲಾಗಿದೆಯೇ ಅಥವಾ ಮೊದಲೇ ಮಾಡಲಾಗಿದೆಯೇ ಎಂದು ತಿಳಿದುಬರಬೇಕಿದೆ.

ಕೊಲೆಯ ಪ್ರಮುಖ ಸಾಕ್ಷಿಗಳನ್ನೇ ಖತರ್‌ನಾಕ್ ಆರೋಪಿಗಳು ಡಿಲೀಟ್ ಮಾಡಿದ್ದು, ಈ ಹಿನ್ನೆಲೆಯಲ್ಲಿ ಸಾಕ್ಷಿ ನಾಶಕ್ಕೆ ಪೊಲೀಸ್‌ ಇಲಾಖೆಯಲ್ಲಿರುವವರಿಂದಲೂ ಆರೋಪಿಗಳು ಸಲಹೆ ಪಡೆದಿದ್ದಾರೆಯೇ ಎಂಬುದು ಕೂಡ ತನಿಖಾಧಿಕಾರಿಗಳಿಗೆ ಕುತೂಹಲ ಮೂಡಿಸಿದೆ. ಈಗಾಗಲೇ ಪ್ರಶ್ನೆಗೆ ಒಳಗಾಗುತ್ತಿರುವವರ ಪಟ್ಟಿಯಲ್ಲಿ ಒಬ್ಬ ಪೊಲೀಸ್‌ ಅಧಿಕಾರಿ ಕೂಡ ಇದ್ದಾರೆ ಎಂಬುದನ್ನು ಇಲ್ಲಿ ಗಮನಿಸಬಹುದು.

ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಪಟ್ಟಣಗೆರೆಯ ಶೆಡ್‌ನಲ್ಲಿ ಕೂಡಿಹಾಕಿ ಥಳಿಸಿ ಸಾಯಿಸಲಾಗಿತ್ತು. ನಂತರ ಇದನ್ನು ಮುಚ್ಚಿಹಾಕುವುದು ಹೇಗೆ ಎಂಬ ಕುರಿತು ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನಲ್ಲಿ ನಟ ಹಾಗೂ ಆರೋಪಿಗಳು ಕೂತು ಮಾತನಾಡಿದ್ದರು. ಇಲ್ಲೇ 30 ಲಕ್ಷ ರೂಪಾಯಿಯ ಡೀಲ್‌ ಕೂಡ ನಡೆದಿತ್ತು. ಇದೀಗ ಎರಡೂ ಕಡೆಗಳ ಸಿಸಿಟಿವಿ ಹಾರ್ಡ್ ಡ್ರೈವ್‌ಗಳು ಕೂಡ ನಾಶವಾಗಿವೆ ಎಂದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನ ಮಾಲಿಕ‌ ವಿನಯ್‌ನನ್ನು ಕೂಡ ಪ್ರಶ್ನಿಸಲಾಗುತ್ತಿದೆ. ‌

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Amy Jackson shares a glimpse of her Paris bachelorette
ಸಿನಿಮಾ1 min ago

Amy Jackson: ಮದುವೆಗೂ ಮುನ್ನ ತಾಯಿಯಾಗಿದ್ದ ಆ್ಯಮಿ ಜಾಕ್ಸನ್‌ ಮತ್ತೆ ಸಪ್ತಪದಿ ತುಳಿಯಲು ರೆಡಿ!

PGCET 2024
ಶಿಕ್ಷಣ5 mins ago

PGCET 2024: ಪಿಜಿಸಿಇಟಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ; ಶುಲ್ಕ ಪಾವತಿಗೂ ಅವಕಾಶ

Euro 2024
ಕ್ರೀಡೆ10 mins ago

Euro 2024: ಇಂದು ರೊಮೇನಿಯಾ-ಉಕ್ರೇನ್ ನಡುವೆ ಕಾಲ್ಚೆಂಡಿನ ಕಾದಾಟ; ಯಾರಿಗೆ ಒಲಿಯಲಿದೆ ಗೆಲುವಿನ ಲಕ್​?

death news bhanuprakash petrol diesel price hike
ಪ್ರಮುಖ ಸುದ್ದಿ18 mins ago

Death News: “ಕಾಂಗ್ರೆಸ್‌ ಶವಯಾತ್ರೆ….” ಭಾಷಣ ಮುಗಿಸಿ ಬಿಜೆಪಿ ನಾಯಕ ಭಾನುಪ್ರಕಾಶ್ ಸ್ಥಳದಲ್ಲೇ ನಿಧನ

Petrol Diesel Price Hike
ಕರ್ನಾಟಕ26 mins ago

Petrol Diesel Price Hike: ಬಡವರ ಮೇಲೆ ತೆರಿಗೆ ಹಾಕಿ ಬೇರೆ ರಾಜ್ಯಗಳಿಗೆ ಹೋಲಿಸುವುದು ದ್ರೋಹ: ಬೊಮ್ಮಾಯಿ ಆಕ್ರೋಶ

Hunters Arrest
ಕ್ರೈಂ60 mins ago

Hunters Arrest : ಶಿವಮೊಗ್ಗದಲ್ಲಿ ಕಾಡುಕೋಣಗಳು ಬಲಿ; ಚಿಕ್ಕಬಳ್ಳಾಪುರ, ಬಾಗಲಕೋಟೆಯಲ್ಲಿ ಬೇಟೆಗಾರರು ಸೆರೆ

Petrol Diesel Price Hike
ಕರ್ನಾಟಕ1 hour ago

Petrol Diesel Price Hike: ಬಿಜೆಪಿಯವರು ಪ್ರತಿಭಟನೆ ಮಾಡಬೇಕಿರೋದು ಕೇಂದ್ರದ ವಿರುದ್ಧ: ಸಿಎಂ ತಿರುಗೇಟು

Kisan Samman Nidhi
ದೇಶ1 hour ago

Kisan Samman Nidhi: ರೈತರಿಗೆ ಗುಡ್‌ನ್ಯೂಸ್‌; ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ನಾಳೆ ನಿಮ್ಮ ಅಕೌಂಟ್‌ಗೆ; ಹೀಗೆ ಪರಿಶೀಲಿಸಿ

petrol diesel price hike bjp protest
ಪ್ರಮುಖ ಸುದ್ದಿ1 hour ago

Petrol Diesel Price Hike: ಪೆಟ್ರೋಲ್‌ ಬೆಲೆ ಏರಿಕೆ ಖಂಡಿಸಿ ಬಿಜೆಪಿ ವ್ಯಾಪಕ ಪ್ರತಿಭಟನೆ; ಎತ್ತಿನಗಾಡಿ, ಹೆಣ ಮೆರವಣಿಗೆ

Actor Darshan tagadu word umapathy counter now
ಕ್ರೈಂ1 hour ago

Actor Darshan: ಅಂದು `ತಗಡು’ ಅಂದಿದ್ದ ದರ್ಶನ್‌ಗೆ ಇಂದು ಉಮಾಪತಿ ಕೌಂಟರ್!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bakrid 2024
ಬೆಂಗಳೂರು3 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ21 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ22 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

ಟ್ರೆಂಡಿಂಗ್‌