PM Modi UAE Visit: ಪ್ರಧಾನಿ ಮೋದಿಗೆ ಫ್ರೆಂಡ್​ಶಿಪ್ ಬ್ಯಾಂಡ್ ತೊಡಿಸಿದ ಯುಎಇ ಅಧ್ಯಕ್ಷ - Vistara News

ದೇಶ

PM Modi UAE Visit: ಪ್ರಧಾನಿ ಮೋದಿಗೆ ಫ್ರೆಂಡ್​ಶಿಪ್ ಬ್ಯಾಂಡ್ ತೊಡಿಸಿದ ಯುಎಇ ಅಧ್ಯಕ್ಷ

ನಾನು ಇಂದು ಅಬುಧಾಬಿಗೆ ಬಂದಿದ್ದಕ್ಕೆ ಮತ್ತು ನಿಮ್ಮನ್ನು ಭೇಟಿಯಾಗುತ್ತಿರುವುದಕ್ಕೆ ಸಂತೋಷವಾಗುತ್ತಿದೆ ಎಂದು ಪ್ರಧಾನಿ ಮೋದಿಯವರು ಯುಎಇ ಅಧ್ಯಕ್ಷರ ಬಳಿ ಹೇಳಿದ್ದಾರೆ.

VISTARANEWS.COM


on

Narendra Modi Sheikh Mohamed Bin Zayed Al Nahyan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪ್ರಧಾನಿ ನರೇಂದ್ರ ಮೋದಿ (PM Modi)ಯವರು 2 ದಿನಗಳ ಫ್ರಾನ್ಸ್ ಪ್ರವಾಸ ಮುಗಿಸಿ, ಇಂದು ಅಬುಧಾಬಿಗೆ ಹೋಗಿದ್ದಾರೆ. ಅಲ್ಲಿ ಅವರನ್ನು ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಸ್ವಾಗತ ಮಾಡಿದ್ದಾರೆ. ಇಬ್ಬರೂ ನಾಯಕರು ಪರಸ್ಪರ ಸೌಹಾರ್ದವಾಗಿ ಮಾತುಕತೆ ನಡೆಸಿದರು (PM Modi UAE Visit). ಇದೇ ವೇಳೆ ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಪ್ರಧಾನಿ ನರೇಂದ್ರ ಮೋದಿ ಕೈಯಿಗೆ ಫ್ರೆಂಡ್​ಶಿಪ್​ ಬ್ಯಾಂಡ್​ ತೊಡಿಸಿದ್ದಾರೆ. ಹಾಗೇ, ಇನ್ನೊಂದು ಬ್ಯಾಂಡ್​ನ್ನು ತಮಗೇ ತಾವೇ ಕೈಯಿಗೆ ಹಾಕಿಕೊಂಡಿದ್ದಾರೆ. ಬಳಿಕ ಇಬ್ಬರೂ ಪರಸ್ಪರ ಹಸ್ತಲಾಘವ ಮಾಡಿಕೊಂಡಿದ್ದಾರೆ.

ಇಂದು ಅಬುಧಾಬಿಗೆ ಪ್ರಧಾನಿ ಮೋದಿ ಕಾಲಿಟ್ಟ ಬಳಿಕ ಪ್ರಧಾನಿ ಮೋದಿ ‘ನಾನು ಇಂದು ಅಬುಧಾಬಿಗೆ ಬಂದಿದ್ದಕ್ಕೆ ಮತ್ತು ನಿಮ್ಮನ್ನು ಭೇಟಿಯಾಗುತ್ತಿರುವುದಕ್ಕೆ ಸಂತೋಷವಾಗುತ್ತಿದೆ. ನೀವು ನೀಡಿದ ಆತ್ಮೀಯ ಸ್ವಾಗತಕ್ಕೆ ಧನ್ಯವಾದ. ನೀವು ಭಾರತದ ಆತ್ಮೀಯ ಸ್ನೇಹಿತ ಎಂದು ಪ್ರತಿಯೊಬ್ಬ ಭಾರತೀಯನೂ ನಂಬುತ್ತಾನೆ’ ಎಂದು ಅಧ್ಯಕ್ಷ ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಬಳಿ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Monsoon : ಮಳೆ ವರದಿ; ಕರ್ನಾಟಕದಲ್ಲಿ ಜೂನ್ 1ರಂದೇ ಮಾನ್ಸೂನ್ ಮಳೆ ಆರಂಭ

Monsoon: ಜೂನ್ ಮೊದಲ ವಾರದವರೆಗೂ ಬೆಂಗಳೂರಿನಲ್ಲಿ ಮುಂಗಾರು ಪೂರ್ವ ಮಳೆಯಾಗಲಿದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಮಳೆ ನಿಂತಿದ್ದರೂ, ಈ ತಿಂಗಳ ಅಂತ್ಯದ ವೇಳೆಗೆ ನಗರಕ್ಕೆ ಮತ್ತೆ ಮಳೆ ಮರಳಲಿದೆ. ಜೂನ್ ಎರಡನೇ ವಾರದಲ್ಲಿ ಮುಂಗಾರು ನಗರಕ್ಕೆ ಆಗಮಿಸಲಿದೆ.

VISTARANEWS.COM


on

Mansoon
Koo

ಬೆಂಗಳೂರು: ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸಲಿದ್ದು, ಜೂನ್ 13 ಅಥವಾ 14ರಂದು ಬೆಂಗಳೂರಿನಲ್ಲಿ ಮಾನ್ಸೂನ್​ ಮಳೆಗಾಲ (Monsoon) ಆರಂಭವಾಲಿದೆ ಎಂದು ಹವಾಮಾನ ಇಲಾಖೆ (Weather Forcast) ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಕಾಣಿಸಿಕೊಂಡರೆ ಮಾನ್ಸೂನ್ ಆಗಮನವನ್ನು ತಡವಾಗಬಹುದು ಎಂಬುದಾಗಿ ಎಂದು ಅಧಿಕಾರಿಗಳು ಒತ್ತಿ ಹೇಳಿದರು. ವರದಿಯ ಪ್ರಕಾರ, ನೈಋತ್ಯ ಮಾನ್ಸೂನ್ ಈಗಾಗಲೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕ್ರೊಡೀಕರಣಗೊಂಡಿದೆ. ನೈಋತ್ಯ ಮುಂಗಾರು ಜೂನ್ 1 ಅಥವಾ 2ರಂದು ಕೇರಳ ಕರಾವಳಿಗೆ ತಲುಪುವ ಸಾಧ್ಯತೆ ಇದೆ. ಇದು ಜೂನ್ 6 ಅಥವಾ 7 ರಂದು ದಕ್ಷಿಣ ಕನ್ನಡದ ಮೂಲಕ ಕರ್ನಾಟಕ ಕರಾವಳಿಯನ್ನು ಪ್ರವೇಶಿಸಲಿದ್ದು, ಜೂನ್ 14 ರ ವೇಳೆಗೆ ಕ್ರಮೇಣ ದಕ್ಷಿಣ ಒಳನಾಡಿನ ಪ್ರದೇಶಗಳಿಗೆ ಹರಡಲಿದೆ ಎಂದು ಹಿರಿಯ ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ.

ಜೂನ್ ಮೊದಲ ವಾರದವರೆಗೂ ಬೆಂಗಳೂರಿನಲ್ಲಿ ಮುಂಗಾರು ಪೂರ್ವ ಮಳೆಯಾಗಲಿದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಮಳೆ ನಿಂತಿದ್ದರೂ, ಈ ತಿಂಗಳ ಅಂತ್ಯದ ವೇಳೆಗೆ ನಗರಕ್ಕೆ ಮತ್ತೆ ಮಳೆ ಮರಳಲಿದೆ. ಜೂನ್ ಎರಡನೇ ವಾರದಲ್ಲಿ ಮುಂಗಾರು ನಗರಕ್ಕೆ ಆಗಮಿಸಲಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಈಗಾಗಲೇ ಮಳೆಗಾಲವನ್ನು ಎದುರಿಸಲು ಸಜ್ಜಾಗುತ್ತಿದೆ, ಏಕೆಂದರೆ ನಗರವು ಪ್ರವಾಹ ಮತ್ತು ಜಲಾವೃತತೆಗೆ ಸಾಕ್ಷಿಯಾಗುವ ಸಾಧ್ಯತೆಯಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಬುಧವಾರ ನಗರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಮತ್ತು ಮಳೆಗಾಲದಲ್ಲಿ ಯಾವುದೇ ರೀತಿಯ ಪರಿಸ್ಥಿತಿಯನ್ನು ಎದುರಿಸಲು ಸಿದ್ಧರಾಗುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕರಾವಳಿಯಲ್ಲಿ ಬಿರುಗಾಳಿ ಮಳೆ; ಕಡಲಿಗಿಳಿಯದಂತೆ ಮೀನುಗಾರರಿಗೆ ಅಲರ್ಟ್!

ಬೆಂಗಳೂರು: ರಾಜ್ಯಾದ್ಯಂತ ವರುಣಾರ್ಭಟ ಮುಂದುವರಿದಿದ್ದು, ಗುಡುಗು, ಮಿಂಚು ಸಹಿತ (Rain News) ಬಿರುಗಾಳಿಯೊಂದಿಗೆ ಮಳೆಯಾಗಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಾಳಿ ವೇಗವು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ (Karnataka Weather Forecast) ಬೀಸಲಿದೆ.

ಇದನ್ನೂ ಓದಿ: Superstar Rajinikanth : ನಟ ರಜನಿಕಾಂತ್​​ಗೆ ವಿಶೇಷ ಗಿಫ್ಟ್​ ಕೊಟ್ಟ ಲುಲು ಮಾಲ್​ನ ಮಾಲೀಕ ಯೂಸುಫ್​​ ಅಲಿ

ಇನ್ನೂ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ ಮತ್ತು ಶಿವಮೊಗ್ಗದಲ್ಲೂ ವ್ಯಾಪಕ ಮಳೆಯಾಗಲಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 ಕಿಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬಳ್ಳಾರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರದ ಹಲವು ಕಡೆಗಳಲ್ಲಿ ಗಾಳಿಯು ರಭಸವಾಗಿ ಬೀಸಲಿದ್ದು, ಗುಡುಗು ಸಹಿತ ಮಳೆ ಲಘು ಮಳೆಯಾಗಲಿದೆ. ತುಮಕೂರು ಮತ್ತು ವಿಜಯನಗರ ಸೇರಿದಂತೆ ಬೀದರ್, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಯಲ್ಲೂ ಗಾಳಿ ಸಹಿತ ಭಾರಿ ಮಳೆಯಾಗಲಿದೆ.

Continue Reading

ಪ್ರಮುಖ ಸುದ್ದಿ

Viral Video: ಚಲಿಸುವ ಬೈಕ್​ನಲ್ಲಿ ಆಲಿಂಗನ, ಬಿಸಿ ಚುಂಬನ; ಲಜ್ಜೆಯಿಲ್ಲದ ಜೋಡಿಯ ಸ್ಟಂಟ್​ ವಿಡಿಯೊ ವೈರಲ್​

Viral Video: ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಬೈಕ್ ಚಾಲನೆ ಮಾಡುತ್ತಿರುವ ಹುಡುಗನನ್ನು ಹುಡುಗಿ ಬೈಕಿನ ಪೆಟ್ರೋಲ್ ಟ್ಯಾಂಕ್ ಮೇಲೆ ಕುಳಿತು ಚುಂಬಿಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ಅಪಾಯಕಾರಿ ಸ್ಟಂಟ್ ಮಾಡುವ ವೇಲೆ ಅವರು ಸಂಚಾರ ನಿಯಮಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಿರುವುದು ಚರ್ಚೆಗೆ ಕಾರಣವಾಗಿದೆ.

VISTARANEWS.COM


on

Viral Video
Koo

ಕೋಟಾ: ಚಲಿಸುತ್ತಿದ್ದ ಬೈಕಿನಲ್ಲಿ ಯುವ ಜೋಡಿಯೊಂದು ಚುಂಬಿಸುತ್ತಾ ಸಾಗುತ್ತಿರುವ ವಿಡಿಯೊವೊಂದು ವೈರಲ್ ಆಗಿದೆ (Viral Video). ಅಪಾಯಕಾರಿ ಸ್ಟಂಟ್ (Bike Stunt) ಮಾಡುತ್ತಿರುವ ಅಶ್ಲೀಲ ವೀಡಿಯೊ ಅಂತರ್ಜಾಲದಲ್ಲಿ ಕಾಣಿಸಿಕೊಂಡಿದ್ದು, ಅವರಿಗೆ ನೆಟ್ಟಿಗರು ಶಿಸ್ತಿನ ಪಾಠ ಹೇಳಿದ್ದಾರೆ. ಚಲಿಸುತ್ತಿದ್ದ ಬೈಕ್​ ಅನ್ನೇ ಶೃಂಗಾರ ಮಂಚ ಮಾಡಿಕೊಂಡಿದ್ದ ಜೋಡಿಯ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ನೆಟ್ಟಿಗರು ವೈರಲ್ ಮಾಡಿದ್ದಾರೆ. ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಬೈಕ್ ಚಾಲನೆ ಮಾಡುತ್ತಿರುವ ಹುಡುಗನನ್ನು ಹುಡುಗಿ ಬೈಕಿನ ಪೆಟ್ರೋಲ್ ಟ್ಯಾಂಕ್ ಮೇಲೆ ಕುಳಿತು ಚುಂಬಿಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ಅಪಾಯಕಾರಿ ಸ್ಟಂಟ್ ಮಾಡುವ ವೇಲೆ ಅವರು ಸಂಚಾರ ನಿಯಮಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಿರುವುದು ಚರ್ಚೆಗೆ ಕಾರಣವಾಗಿದೆ.

ರಾಜಸ್ಥಾನದ ಕೋಟಾದ ರಾಷ್ಟ್ರೀಯ ಹೆದ್ದಾರಿ 52 (ಎನ್ಎಚ್ -52) ನಲ್ಲಿ ಈ ನಾಚಿಕೆಗೇಡಿನ ಮತ್ತು ಅಪಾಯಕಾರಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ಪ್ರದೇಶದಕ್ಕೆ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು, ಮುಖ್ಯವಾಗಿ ನೀಟ್ ನಂಥ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ದೇಶದಾದ್ಯಂತದಿಂದ ದೊಡ್ಡ ಪ್ರಮಾಣದಲ್ಲಿ ಬರುತ್ತಾರೆ. ನಾಚಿಕೆಗೇಡಿನ ಕೃತ್ಯವನ್ನು ಮಾಡುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾದ ಜೋಡಿಯೂ ವಿದ್ಯಾರ್ಥಿಗಳಾಗಿದ್ದು, ಹಾಸ್ಟೆಲ್​​ನಲ್ಲಿ ವಾಸಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ವೈರಲ್ ವಿಡಿಯೋ ಬಗ್ಗೆ ಇಲ್ಲಿದೆ ಮಾಹಿತಿ

ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಬೈಕ್​​ನ ಪೆಟ್ರೋಲ್ ಟ್ಯಾಂಕ್ ಮೇಲೆ ಕುಳಿತಿರುವ ಹುಡುಗಿಯೊಂದಿಗೆ, ಬುದ್ಧಿಗೇಡಿ ಹುಡುಗ ಅಪಾಯಕಾರಿಯಾಗಿ ಬೈಕ್ ಸವಾರಿ ಮಾಡುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ಹೆದ್ದಾರಿಯಲ್ಲಿ ಭಾರಿ ವಾಹನಗಳು ಹೆಚ್ಚಿನ ವೇಗದಲ್ಲಿ ಹಾದುಹೋಗುತ್ತಿರುವುದನ್ನು ಸಹ ಕಾಣಬಹುದು. ವೀಡಿಯೊದಲ್ಲಿ, ಹುಡುಗಿ ಪೆಟ್ರೋಲ್ ಟ್ಯಾಂಕ್ ಮೇಲೆ ಕುಳಿತು ತನ್ನ ಗೆಳೆಯನಿಗೆ ಅಂಟಿಕೊಂಡು ಭಾವೋದ್ರಿಕ್ತವಾಗಿ ಚುಂಬಿಸುತ್ತಿರುವುದೇ ವಿಶೇಷ.

ಇದನ್ನೂ ಓದಿ: Bulldozer justice : ಅಸ್ಸಾಂ ಸರ್ಕಾರಕ್ಕೆ ತಿರುಗುಬಾಣವಾದ ಬುಲ್ದೋಜರ್ ನ್ಯಾಯ! ನೆಲಸಮಗೊಳಿಸಿದ ಮನೆ ಮಾಲೀಕರಿಗೆ 30 ಲಕ್ಷ ಪರಿಹಾರ!

ಬಾಲಕ ಹೆಲ್ಮೆಟ್ ಧರಿಸದೆ ಬೈಕ್ ಸವಾರಿ ಮಾಡುತ್ತಿರುವುದು ಕೂಡ ವೀಡಿಯೊದಲ್ಲಿ ರೆಕಾರ್ಡ್ ಅಗಿದೆ. ಹೆಚ್ಚಿನ ವೇಗದಲ್ಲಿ ಬೈಕ್ ಸವಾರಿ ಮಾಡುವಾಗ ಹುಡುಗಿ ಅವನನ್ನು ಚುಂಬಿಸುತ್ತಿರುವುದರಿಂದ ಅವನಿಗೆ ರಸ್ತೆಯೂ ಸರಿಯಾಗಿ ಕಾಣಿಸುತ್ತಿರಲಿಲ್ಲ. , ಅವರೊಂದಿಗೆ ಬೈಕ್ ಸವಾರರ ಗುಂಪು ಕೂಡ ಇತ್ತು. ವೇಗವಾಗಿ ಚಲಿಸುತ್ತಿದ್ದ ಬೈಕಿನಲ್ಲಿ ಹುಚ್ಚು ಸ್ಟಂಟ್ ಮಾಡುವಾಗ ಇತರ ಬೈಕ್ ಸವಾರರು ವಿಡಿಯೊ ರೆಕಾರ್ಡ್ ಮಾಡುತ್ತಿದ್ದರು.

ಕಾನೂನುಗಳ ಉಲ್ಲಂಘನೆ

ಜೋಡಿಯೊಂದಿಗೆ ಸವಾರಿ ಮಾಡುತ್ತಿದ್ದ ಇತರ ಸವಾರರು ಸಹ ಹೆಲ್ಮೆಟ್ ಇಲ್ಲದೆ ಮೂರು ಬೈಕುಗಳಲ್ಲಿ ಟ್ರಿಪಲ್ ಸೀಟ್ ಸವಾರಿ ಮಾಡುತ್ತಿದ್ದರು. ಅದು ಕೂಡ ಸಂಚಾರ ನಿಯಮಗಳನ್ನು ಉಲ್ಲಂಘನೆಯಾಗಿದೆ. ಅವರು ಕಾನೂನನ್ನು ಸ್ಪಷ್ಟವಾಗಿ ಉಲ್ಲಂಘಿಸುವಲ್ಲಿ ತೊಡಗಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.

Continue Reading

ಪ್ರಮುಖ ಸುದ್ದಿ

Bulldozer justice : ಅಸ್ಸಾಂ ಸರ್ಕಾರಕ್ಕೆ ತಿರುಗುಬಾಣವಾದ ಬುಲ್ದೋಜರ್ ನ್ಯಾಯ! ನೆಲಸಮಗೊಳಿಸಿದ ಮನೆ ಮಾಲೀಕರಿಗೆ 30 ಲಕ್ಷ ಪರಿಹಾರ!

bulldozer justice : ಮೇ 21, 2022 ರಂದು, ನಾಗಾವ್ ಜಿಲ್ಲೆಯ ಸಲೋನಬರಿ ಗ್ರಾಮದ ಗುಂಪೊಂದು ಮೀನು ಮಾರಾಟಗಾರ ಇಸ್ಲಾಂ ಅವರ ಸಾವಿನ ನಂತರ ಬಟದ್ರವಾ ಪೊಲೀಸ್ ಠಾಣೆಯ ಒಂದು ಭಾಗಕ್ಕೆ ಬೆಂಕಿ ಹಚ್ಚಿತ್ತು ಎನ್ನಲಾಗಿದೆ. ಮರುದಿನವೇ, ಘಟನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾದ ಐದು ಕುಟುಂಬಗಳ ಮನೆಗಳನ್ನು ಅಧಿಕಾರಿಗಳು ನೆಲಸಮಗೊಳಿಸಿದ್ದರು.

VISTARANEWS.COM


on

bulldozer justice
Koo

ಗುವಾಹಟಿ: ಅಸ್ಸಾಂ ನಾಗಾಂವ್ ಜಿಲ್ಲೆಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಆರೋಪದ ಮೇಲೆ ಎರಡು ವರ್ಷಗಳ ಹಿಂದೆ ಆರೋಪಿಗಳ ಮನೆಗಳನ್ನು ನೆಲಸಮಗೊಳಿಸಿದ ಐದು ಕುಟುಂಬಗಳಿಗೆ ಅಸ್ಸಾಂ ಸರ್ಕಾರ 30 ಲಕ್ಷ ರೂ.ಗಳ ಪರಿಹಾರವನ್ನು ನೀಡುವಂತಾಗಿದೆ. ಈ ಮೂಲಕ ಉತ್ತರ ಪ್ರದೇಶದ ಸಿಎಂ ಅವರ ‘ಬುಲ್ಡೋಜರ್​ ನ್ಯಾಯ’ (Bulldozer justice) ಹಿಮಂತ್ ಬಿಸ್ವಾ ಶರ್ಮಾ ನೇತೃತ್ವದ ಸರ್ಕಾರಕ್ಕೆ ತಿರುಗುಬಾಣವಾಗಿದೆ. ಅದೇ ರೀತಿ ಸ್ಥಳೀಯನಿವಾಸಿಗಳಾದ ಸಫಿಕುಲ್ ಇಸ್ಲಾಂ ಅವರ ಕುಟುಂಬಕ್ಕೆ ಸರ್ಕಾರ 2.5 ಲಕ್ಷ ರೂ.ಗಳ ಪರಿಹಾರ ನೀಡುವಂತಾಗಿದೆ. ಇದಕ್ಕೆಲ್ಲ ಕಾರಣ ಹೈಕೋರ್ಟ್ ಆದೇಶ. ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದ ಕೋರ್ಟ್​​ ಪರಿಹಾರ ನೀಡುವಂತೆ ಪೊಲೀಸರಿಗೆ ತಾಕೀತು ಮಾಡಿತ್ತು.

ಮೇ 21, 2022 ರಂದು, ನಾಗಾವ್ ಜಿಲ್ಲೆಯ ಸಲೋನಬರಿ ಗ್ರಾಮದ ಗುಂಪೊಂದು ಮೀನು ಮಾರಾಟಗಾರ ಇಸ್ಲಾಂ ಅವರ ಸಾವಿನ ನಂತರ ಬಟದ್ರವಾ ಪೊಲೀಸ್ ಠಾಣೆಯ ಒಂದು ಭಾಗಕ್ಕೆ ಬೆಂಕಿ ಹಚ್ಚಿತ್ತು ಎನ್ನಲಾಗಿದೆ. ಮರುದಿನವೇ, ಘಟನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾದ ಐದು ಕುಟುಂಬಗಳ ಮನೆಗಳನ್ನು ಅಧಿಕಾರಿಗಳು ನೆಲಸಮಗೊಳಿಸಿದ್ದರು. ನೆಲಸಮಗೊಂಡ ಮನೆಗಳು “ಅಕ್ರಮವಾಗಿ ಅಥವಾ ನಕಲಿ ದಾಖಲೆಗಳೊಂದಿಗೆ” ಅಲ್ಲಿ ನೆಲೆಸಿದ ಜನರಿಗೆ ಸೇರಿದ್ದು ಎಂದು ಪೊಲೀಸರು ಆರೋಪಿಸಿದ್ದರು.

ಕಳೆದ ವರ್ಷ ನೆಲಸಮಗೊಳಿಸುವ ಕ್ರಮದ ಬಗ್ಗೆ ಸ್ವಯಂಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿದ್ದ ಆಗಿನ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಆರ್ ಎಂ ಛಾಯಾ ನೇತೃತ್ವದ ವಿಭಾಗೀಯ ಪೀಠವು “ಕಾನೂನುಬಾಹಿರ ಕ್ರಮ” ದಿಂದ ಬಾಧಿತರಾದ ಜನರಿಗೆ ರಾಜ್ಯ ಸರ್ಕಾರ ಪರಿಹಾರ ನೀಡಬೇಕು ಎಂದು ಹೇಳಿತ್ತು. ತನಿಖೆಯ ಸೋಗಿನಲ್ಲಿ ಪೊಲೀಸರು ಅನುಮತಿಯಿಲ್ಲದೆ ಯಾರ ಮನೆಯನ್ನೂ ನೆಲಸಮ ಮಾಡಲು ಸಾಧ್ಯವಿಲ್ಲ ಎಂದು ನ್ಯಾಯಾಲ ಹೇಳಿತ್ತು. ಅಲ್ಲದೆ ಅಂದಿನ ಪೊಲೀಸ್ ಅಧೀಕ್ಷಕರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು.

ಸರ್ಕಾರಕ್ಕೆ ಮನವಿ

ಈ ವರ್ಷದ ಏಪ್ರಿಲ್ 24 ರಂದು, ಪೊಲೀಸ್ ಇನ್​ಸ್ಪೆಕ್ಟರ್​​ ಜನರಲ್ (ಆಡಳಿತ) ಪರಿಹಾರ ಪ್ರಸ್ತಾಪವನ್ನು ರಾಜ್ಯ ಸರ್ಕಾರದ ಗೃಹ ಮತ್ತು ರಾಜಕೀಯ ಇಲಾಖೆಯ ಜಂಟಿ ಕಾರ್ಯದರ್ಶಿಗೆ ಸಲ್ಲಿಸಿದರು. ಪ್ರತಿ ಪಕ್ಕಾ ಮನೆಗೆ 10 ಲಕ್ಷ ರೂ ಮತ್ತು ನೆಲಸಮಗೊಂಡ ಪ್ರತಿ ಕಚ್ಚಾ ಮನೆಗೆ 2.5 ಲಕ್ಷ ರೂ. ಪರಿಹಾರ ಕೊಡಬೇಕೆಂದು ಕೋರಿತ್ತು. ಹೀಗೆ ಎರಡು ಪಕ್ಕಾ ಮನೆಗಳು ಮತ್ತು ನಾಲ್ಕು ಕಚ್ಚಾ ಮನೆಗಳ ಮಾಲೀಕರಿಗೆ ಪರಿಹಾರ ನೀಡಲಾಗಿದೆ.

ಇದನ್ನೂ ಓದಿ: Rameshwaram Cafe : ಅವಧಿ ಮುಗಿದ ವಸ್ತುಗಳಲ್ಲಿ ತಿಂಡಿ ತಯಾರಿ, ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ

ಸಂತ್ರಸ್ತರ ಮನೆಗಳನ್ನು ಅಕ್ರಮವಾಗಿ ನೆಲಸಮಗೊಳಿಸಲು ಕಾರಣರಾದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕೈಗೊಂಡ ಕ್ರಮಗಳ ಬಗ್ಗೆಯೂ ನ್ಯಾಯಾಲಯ ಮಾಹಿತಿ ಕೇಳಿದೆ. ಈ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಲು ಸರ್ಕಾರಿ ವಕೀಲ ನಾಥ್ ನಾಲ್ಕು ವಾರಗಳ ಕಾಲಾವಕಾಶ ಕೋರಿದ್ದಾರೆ.

ಅಕ್ರಮ ಶಸ್ತ್ರಾಸ್ತ್ರಗಳಿಗೆ ಹುಡುಕಾಟ ಎಂದ ಪೊಲೀಸರು

ಘಟನೆ ಕುರಿತ ರಿಟ್ ಅರ್ಜಿಗೆ ಪ್ರತಿಕ್ರಿಯೆಯಾಗಿ ಪ್ರಸ್ತುತ ನಾಗಾವ್ ಎಸ್ಪಿ ಬುಧವಾರ ಅಫಿಡವಿಟ್ ಸಲ್ಲಿಸಿದ್ದಾರೆ. ಈ ನೆಲಸಮಗಳು ಮರೆಮಾಚಲಾದ “ಶಸ್ತ್ರಾಸ್ತ್ರಗಳು” ಮತ್ತು “ಮಾದಕವಸ್ತುಗಳ” ಶೋಧ ಕಾರ್ಯಾಚರಣೆ ಭಾಗವಾಗಿತ್ತು ಎಂದು ಹೇಳಿದ್ದಾರೆ.

ಕಾಲಿಯಾಬೋರ್ ಉಪವಿಭಾಗದ ಪೊಲೀಸ್ ಅಧಿಕಾರಿ ನೇತೃತ್ವದ ಶೋಧ ಕಾರ್ಯಾಚರಣೆಯ ವೇಳೆ ಸಹಕಾರದ ಕೊರತೆಯಿಂದಾಗಿ ಆರಂಭಿಕ ಶೋಧದ ನಂತರ ಆರೋಪಿಗಳ ಮನೆಗಳಲ್ಲಿ ಯಾವುದೇ ನಿಷೇಧಿತ ವಸ್ತುಗಳನ್ನು ಕಂಡುಹಿಡಿಯಲು ಸಾಧ್ಯವಾಗಲಿಲ್ಲ ಎಂದು ಅಫಿಡವಿಟ್ ನಲ್ಲಿ ತಿಳಿಸಲಾಗಿದೆ.

ಅಸ್ಸಾಂ ಸರ್ಕಾರದ ವಕೀಲರು ಬುಧವಾರ ಗುವಾಹಟಿ ಹೈಕೋರ್ಟ್​ಗೆ ಪರಿಹಾರದ ಕುರಿತು ವಿವರಗಳನ್ನು ಸಲ್ಲಿಸಿದರು. ನಾಗಾವ್ ಪೊಲೀಸ್ ವರಿಷ್ಠಾಧಿಕಾರಿ ಸೋಮವಾರ ಇತರ ಐದು ಕುಟುಂಬಗಳಿಗೆ ಪರಿಹಾರ ಪಾವತಿ ಮಾಡಿದ್ದಾರೆ ಎಂದು ಅವರು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

Continue Reading

ಪ್ರಮುಖ ಸುದ್ದಿ

Rameshwaram Cafe : ಅವಧಿ ಮುಗಿದ ವಸ್ತುಗಳಲ್ಲಿ ತಿಂಡಿ ತಯಾರಿ, ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ

Rameshwaram Cafe : ಆಹಾರ ಸುರಕ್ಷತಾ ಇಲಾಖೆಯ ಪ್ರಕಾರ, 16,000 ರೂ ಮೌಲ್ಯದ 100 ಕೆಜಿ ಉದ್ದಿನ ಬೇಳೆ, 10 ಕೆ.ಜಿ. ನಂದಿನಿ ಮೊಸರು ಮತ್ತು ಎಂಟು ಲೀಟರ್ ಹಾಲು ಅವಧಿ ಮೀರಿ ಅಡುಗೆಮನೆಯಲ್ಲಿ ಪತ್ತೆಯಾಗಿದೆ. ಅಸ್ಪಷ್ಟ ಲೇಬಲ್ ಮಾಡಿದ್ದಕ್ಕಾಗಿ ಅಧಿಕಾರಿಗಳು ಅಡುಗೆಮನೆಯಲ್ಲಿದ್ದ ಇನ್ನೂ ಕೆಲವು ಆಹಾರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

VISTARANEWS.COM


on

Rameshwaram Cafe
Koo

ಹೈದರಾಬಾದ್: ಹೈಟೆಕ್​ ರೀತಿಯಲ್ಲಿ ದೋಸೆ ಸೇರಿದಂತೆ ಆಹಾರ ಪದಾರ್ಥಗಳನ್ನು ತಯಾರಿ ಮಾಡುವ ಮತ್ತು ದಕ್ಷಿಣ ಭಾರತದ ಉಪಾಹಾರಕ್ಕೆ ಹೆಸರುವಾಸಿಯಾದ ಬೆಂಗಳೂರು ಮೂಲದ ರಾಮೇಶ್ವರಂ ಕೆಫೆ (Rameshwaram Cafe) ಮೇಲೆ ಹೈದರಾಬಾದ್​​ನ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತೆಲಂಗಾಣ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಗುರುವಾರ ರೆಸ್ಟೋರೆಂಟ್ ಅವಧಿ ಮೀರಿದ ಮತ್ತು ಲೇಬಲ್ ಮಾಡದ ಆಹಾರ ಪದಾರ್ಥಗಳನ್ನು ಬಳಸುತ್ತಿರುವುದು ಕಂಡುಬಂದಿದ್ದರಿಂದ ಅನೇಕ ಉಲ್ಲಂಘನೆಗಳನ್ನು ಕಂಡುಕೊಂಡಿದ್ದಾರೆ. ರಾಮೇಶ್ವರಂ ಕೆಫೆ ಕೆಲವು ತಿಂಗಳ ಹಿಂದೆ ರಾಷ್ಟ್ರ ಮಟ್ಟದ ಸುದ್ದಿಗೆ ಗ್ರಾಸವಾಗಿತ್ತು. ಬೆಂಗಳೂರಿನ ವೈಟ್​ಫೀಲ್ಡ್​ ಶಾಖೆಯ ಮೇಲೆ ಬಾಂಬ್​ ದಾಳಿ ನಡೆದ ಬಳಿಕ ಸಂಚಲನ ಮೂಡಿಸಿತ್ತು. ಈ ಪ್ರಕರಣದ ಬಗ್ಗೆ ಈಗಲೂ ತನಿಖೆ ನಡೆಯುತ್ತಿದೆ.

ಆಹಾರ ಸುರಕ್ಷತಾ ಇಲಾಖೆಯ ಪ್ರಕಾರ, 16,000 ರೂ ಮೌಲ್ಯದ 100 ಕೆಜಿ ಉದ್ದಿನ ಬೇಳೆ, 10 ಕೆ.ಜಿ. ನಂದಿನಿ ಮೊಸರು ಮತ್ತು ಎಂಟು ಲೀಟರ್ ಹಾಲು ಅವಧಿ ಮೀರಿ ಅಡುಗೆಮನೆಯಲ್ಲಿ ಪತ್ತೆಯಾಗಿದೆ. ಅಸ್ಪಷ್ಟ ಲೇಬಲ್ ಮಾಡಿದ್ದಕ್ಕಾಗಿ ಅಧಿಕಾರಿಗಳು ಅಡುಗೆಮನೆಯಲ್ಲಿದ್ದ ಇನ್ನೂ ಕೆಲವು ಆಹಾರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. 450 ಕೆ.ಜಿ ಹಸಿ ಅಕ್ಕಿ, 300 ಕೆಜಿ ಲೇಬಲ್ ಮಾಡದ ಬೆಲ್ಲವನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಆಹಾರ ಸುರಕ್ಷತಾ ಇಲಾಖೆ ತಿಳಿಸಿದೆ. ಏತನ್ಮಧ್ಯೆ, ಆಹಾರ ತಯಾರಿಸುವವರಿಗೆ ವೈದ್ಯಕೀಯ ಫಿಟ್ನೆಸ್ ಪ್ರಮಾಣಪತ್ರವನ್ನು ಸಲ್ಲಿಸಲಾಗಿಲ್ಲ ಮತ್ತು ರಾಮೇಶ್ವರಂ ಕೆಫೆಯಲ್ಲಿ ಕಸದ ಬುಟ್ಟಿಗಳನ್ನು ಮುಚ್ಚಳಗಳಿಂದ ಮುಚ್ಚಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅನೇಕ ಕಡೆ ದಾಳಿ

ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಹೈದರಾಬಾದ್​ನ ಅನೇಕ ಸ್ಥಳಗಳಲ್ಲಿ ದಾಳಿ ನಡೆಸುತ್ತಿದ್ದಾರೆ ಮತ್ತು ಅನೇಕ ಜನಪ್ರಿಯ ತಿನಿಸುಗಳ ಅಂಗಡಿಗಳು ನೈರ್ಮಲ್ಯ ಮಾನದಂಡಗಳನ್ನು ಕಾಪಾಡಿಕೊಳ್ಳದಿರುವುದು ಕಂಡುಬಂದಿದೆ. ಅದೇ ದಿನ, ಬಾಹುಬಲಿ ಕಿಚನ್ ಎಂಬ ರೆಸ್ಟೋರೆಂಟ್ ಮೇಲೆ ದಾಳಿ ನಡೆಸಲಾಗಿದೆ. ಸಂಗ್ರಹಿಸಿದ ಆಹಾರ ಪದಾರ್ಥಗಳಲ್ಲಿ ಜಿರಳೆಗಳು ಕಂಡುಬಂದಿದ್ದವು. ರೆಸ್ಟೋರೆಂಟ್​ನ ಅಡುಗೆಮನೆಯ ಆವರಣವು ತುಂಬಾ ಅನೈರ್ಮಲ್ಯ ಸ್ಥಿತಿಯಲ್ಲಿ ಕಂಡುಬಂದಿದ್ದು, ರೆಸ್ಟೋರೆಂಟ್ ಮಾಲೀಕರಿಗೆ ನೋಟಿಸ್ ನೀಡಲಾಗಿದೆ.

ಇದನ್ನೂ ಓದಿ: Superstar Rajinikanth : ನಟ ರಜನಿಕಾಂತ್​​ಗೆ ವಿಶೇಷ ಗಿಫ್ಟ್​ ಕೊಟ್ಟ ಲುಲು ಮಾಲ್​ನ ಮಾಲೀಕ ಯೂಸುಫ್​​ ಅಲಿ

ಬೆಂಗಳೂರು ಮೂಲದ ರಾಮೇಶ್ವರಂ ಕೆಫೆ ಇತ್ತೀಚೆಗೆ ತನ್ನ ಕ್ವಿಕ್ ಸರ್ವಿಸ್ ರೆಸ್ಟೋರೆಂಟ್ (ಕ್ಯೂಎಸ್ಆರ್) ಜಾಲವನ್ನು ಟೆಕ್ ರಾಜಧಾನಿ ಬೆಂಗಳೂರಿನಿಂದ ವಿಸ್ತರಿಸಿದೆ. ಈ ವರ್ಷದ ಜನವರಿಯಲ್ಲಿ ಹೈದರಾಬಾದ್​ನ ಮಾಧಾಪುರ ಪ್ರದೇಶದಲ್ಲಿ ಹೋಟೆಲ್​ ಪ್ರಾರಂಭಿಸಲಾಗಿತ್ತು. ಈ ಕೆಫೆಯು ತುಪ್ಪದ ಇಡ್ಲಿ ಮತ್ತು ದೋಸೆಗಳಿಗೆ ಹೆಸರುವಾಸಿಯಾಗಿದೆ. ಕಳೆದ ಕೆಲವು ವರ್ಷಗಳಲ್ಲಿ ಹೋಟೆಲ್​ನ ಆಹಾರ ಪ್ರಿಯರಲ್ಲಿ ಜನಪ್ರಿಯತೆಯನ್ನು ಗಳಿಸಿದೆ. ಸಂಪೂರ್ಣ ಜನದಟ್ಟಣೆಯ ರೆಸ್ಟೋರೆಂಟ್ ಗೆ ಅನೇಕ ಸೆಲೆಬ್ರಿಟಿಗಳು ಆಗಾಗ್ಗೆ ಭೇಟಿ ನೀಡುತ್ತಾರೆ. ಇತ್ತೀಚೆಗೆ ಬೆಂಗಳೂರಿನ ಕುಂದಲಹಳ್ಳಿ ಶಾಖೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟಕ್ಕಾಗಿ ಸುದ್ದಿಯಲ್ಲಿತ್ತು. ಮಾರ್ಚ್ 1 ರಂದು ಬೆಂಗಳೂರಿನಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 10 ಜನರು ಗಾಯಗೊಂಡಿದ್ದರು.

Continue Reading
Advertisement
Maarige Daari
ಪ್ರಮುಖ ಸುದ್ದಿ8 mins ago

Maarige Daari : ‘ಮಾರಿಗೆ ದಾರಿ” ಫಸ್ಟ್ ಲುಕ್ ಟೀಸರ್ ಬಿಡುಗಡೆ, ಇಲ್ಲಿದೆ ವಿಡಿಯೊ

Mansoon
ಪ್ರಮುಖ ಸುದ್ದಿ20 mins ago

Monsoon : ಮಳೆ ವರದಿ; ಕರ್ನಾಟಕದಲ್ಲಿ ಜೂನ್ 1ರಂದೇ ಮಾನ್ಸೂನ್ ಮಳೆ ಆರಂಭ

bbmp waste disposal
ಬೆಂಗಳೂರು36 mins ago

Waste Disposal: ಕಸ ವಿಲೇವಾರಿ ಇನ್ನು ಬಿಬಿಎಂಪಿ ಕೆಲಸ ಅಲ್ಲ! ಅದಕ್ಕಾಗಿಯೇ ಬರುತ್ತಿದೆ ಹೊಸ ಸಂಸ್ಥೆ

Aishwarya Rai
Latest41 mins ago

Aishwarya Rai : ಮುದ್ದಿನ ಮಗಳು ಆರಾಧ್ಯಳ ಜತೆ ಅಮ್ಮನ ಬರ್ತ್​​ಡೇ ಆಚರಿಸಿದ ಐಶ್ವರ್ಯಾ ರೈ; ಇಲ್ಲಿವೆ ಚಿತ್ರಗಳು

Drowned in water
ಕಲಬುರಗಿ42 mins ago

Drowned in water : ಕುಡಿದ ಮತ್ತಿನಲ್ಲಿ ಈಜಲು ಹೋದ ಯುವಕ ನೀರುಪಾಲು; ಸಾವಿನ ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ

Viral Video
ಪ್ರಮುಖ ಸುದ್ದಿ1 hour ago

Viral Video: ಚಲಿಸುವ ಬೈಕ್​ನಲ್ಲಿ ಆಲಿಂಗನ, ಬಿಸಿ ಚುಂಬನ; ಲಜ್ಜೆಯಿಲ್ಲದ ಜೋಡಿಯ ಸ್ಟಂಟ್​ ವಿಡಿಯೊ ವೈರಲ್​

suspicious death Self Harming By Hight court lawyer
ಕ್ರೈಂ2 hours ago

Suspicious Death: ವಕೀಲೆಯ ಅನುಮಾನಾಸ್ಪದ ಸಾವಿನ ಪ್ರಕರಣ; ಪೋಸ್ಟ್ ಮಾರ್ಟಮ್ ರಿಪೋರ್ಟ್ ಹೇಳಿದ್ದೇನು?

bulldozer justice
ಪ್ರಮುಖ ಸುದ್ದಿ2 hours ago

Bulldozer justice : ಅಸ್ಸಾಂ ಸರ್ಕಾರಕ್ಕೆ ತಿರುಗುಬಾಣವಾದ ಬುಲ್ದೋಜರ್ ನ್ಯಾಯ! ನೆಲಸಮಗೊಳಿಸಿದ ಮನೆ ಮಾಲೀಕರಿಗೆ 30 ಲಕ್ಷ ಪರಿಹಾರ!

assault case koratagere
ಕ್ರೈಂ2 hours ago

Assault Case: ಗೃಹ ಸಚಿವರ ಕ್ಷೇತ್ರದಲ್ಲಿ ಭೂಸೇನೆ ಯೋಧನ ಮೇಲೆಯೇ ಮಾರಣಾಂತಿಕ ಹಲ್ಲೆ; ಇಲ್ಲಿ ಕೇಳೋರೇ ಇಲ್ವಾ?

Rameshwaram Cafe
ಪ್ರಮುಖ ಸುದ್ದಿ2 hours ago

Rameshwaram Cafe : ಅವಧಿ ಮುಗಿದ ವಸ್ತುಗಳಲ್ಲಿ ತಿಂಡಿ ತಯಾರಿ, ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ1 day ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ7 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌