Shadow CM: ಶ್ಯಾಡೊ ಸಿಎಂ ಯತೀಂದ್ರರದ್ದು ʼಪ್ರಾಕ್ಸಿ ಕ್ಯಾಬಿನೆಟ್‌ʼ: ಬಿಜೆಪಿ ಟೀಕೆ - Vistara News

ಕರ್ನಾಟಕ

Shadow CM: ಶ್ಯಾಡೊ ಸಿಎಂ ಯತೀಂದ್ರರದ್ದು ʼಪ್ರಾಕ್ಸಿ ಕ್ಯಾಬಿನೆಟ್‌ʼ: ಬಿಜೆಪಿ ಟೀಕೆ

ಶ್ಯಾಡೊ ಸಿಎಂ ಯತೀಂದ್ರ ಸರ್ಕಾರದಲ್ಲಿರುವುದು ʼಪ್ರಾಕ್ಸಿ ಕ್ಯಾಬಿನೆಟ್‌ʼ ಎಂದು ಬಿಜೆಪಿ ಟೀಕಿಸಿದ್ದು, ಪ್ರಾಕ್ಸಿ ಕ್ಯಾಬಿನೆಟ್‌ನಲ್ಲಿ ಸಚಿವರ ಕೆಲಸಗಳನ್ನು ಪರೋಕ್ಷವಾಗಿ ಅವರ ಹಿಂದಿನ ಪ್ರತಿನಿಧಿಗಳು ಮಾಡುತ್ತಿದ್ದಾರೆ ಎಂದು ಆರೋಪಿಸಿದೆ.

VISTARANEWS.COM


on

shadow CM poster
ಬಿಜೆಪಿ ಕರ್ನಾಟಕ ಟ್ವಿಟರ್‌ ಖಾತೆಯಲ್ಲಿ ಹಾಕಿರುವ ಪೋಸ್ಟರ್‌.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಿಎಂ ಕುರ್ಚಿಯಲ್ಲಿ ಸಿದ್ದರಾಮಯ್ಯ ಇದ್ದಾರೆ. ಆದರೆ, ಅಧಿಕಾರಿಗಳ ವರ್ಗಾವಣೆ ಸೇರಿ ವಿವಿಧ ಕಾರ್ಯಗಳನ್ನು ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಮಾಡುತ್ತಿದ್ದಾರೆ ಎಂದು ಆರೋಪಿಸುವ ಮೂಲಕ ಯತೀಂದ್ರರನ್ನು ʼಶ್ಯಾಡೊ ಸಿಎಂʼ ಎಂದು ಕರೆದಿದ್ದ ರಾಜ್ಯ ಬಿಜೆಪಿ, ಕಾಂಗ್ರೆಸ್‌ ವಿರುದ್ಧ ಪೋಸ್ಟರ್‌ ವಾರ್‌ ಮುಂದುವರಿಸಿದೆ. ಶ್ಯಾಡೊ ಸಿಎಂ ಯತೀಂದ್ರ ಸರ್ಕಾರದಲ್ಲಿರುವುದು ʼಪ್ರಾಕ್ಸಿ ಕ್ಯಾಬಿನೆಟ್‌ʼ ಎಂದು ಹೇಳಿದ್ದು, ಈ ಪ್ರಾಕ್ಸಿ ಕ್ಯಾಬಿನೆಟ್‌ನಲ್ಲಿ ಸಚಿವರ ಕೆಲಸಗಳನ್ನು ಪರೋಕ್ಷವಾಗಿ ಅವರ ಹಿಂದಿನ ಬದಲಿ ಪ್ರತಿನಿಧಿಗಳು ಮಾಡುತ್ತಿದ್ದಾರೆ ಎಂದು ಬಿಜೆಪಿ ತಿಳಿಸಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ರಾಜ್ಯ ಬಿಜೆಪಿ, ಕಲೆಕ್ಷನ್ ಏಜೆಂಟ್ ಸುರ್ಜೇವಾಲಾರ ಎಟಿಎಂ ಸರ್ಕಾರದ ಶ್ಯಾಡೊ ಸಿಎಂ ಯತೀಂದ್ರರ ಸಚಿವ ಸಂಪುಟ ʼಪ್ರಾಕ್ಸಿ ಕ್ಯಾಬಿನೆಟ್‌ʼ ಆಗಿದೆ. ಸಚಿವೆ ಲಕ್ಷಿ ಹೆಬ್ಬಾಳ್ಕರ್ ಪ್ರಾಕ್ಸಿ ಮಿನಿಸ್ಟರ್ ಸಹೋದರ ಚೆನ್ನರಾಜ್ ಹಟ್ಟಿಹೊಳಿ, ಸಚಿವ ಕೆ.ಜೆ.ಜಾರ್ಜ್‌ ಪ್ರಾಕ್ಸಿ ಮಿನಿಸ್ಟರ್ ಪುತ್ರ ರಾಣಾ ಜಾರ್ಜ್, ಸಚಿವ ಡಾ.ಜಿ.ಪರಮೇಶ್ವರ ಪ್ರಾಕ್ಸಿ ಮಿನಿಸ್ಟರ್ ಪ್ರಿಯಾಂಕ್ ಖರ್ಗೆ, ಸಚಿವ ಈಶ್ವರ್‌ ಖಂಡ್ರೆ ಪ್ರಾಕ್ಸಿ ಮಿನಿಸ್ಟರ್ ಪುತ್ರ ಸಾಗರ್ ಖಂಡ್ರೆ ಆಗಿದ್ದಾರೆ. ತುಘಲಕ್ ಸರ್ಕಾರದ ಪಾಳೇಗಾರಿಕೆಯಲ್ಲಿ ಇನ್ನೂ ಹಲವು ಸಚಿವರು, ಶಾಸಕರ ಸಹೋದರರು, ಸಂಬಂಧಿಕರ ಪ್ರಾಕ್ಸಿಗಳು ಶೀಘ್ರದಲ್ಲೇ ಹೊರ ಬರಲಿವೆ ಎಂದು ಬಿಜೆಪಿ ತಿಳಿಸಿದೆ.

ಇದನ್ನೂ ಓದಿ | Gruha Lakshmi Scheme : ಜು. 19ಕ್ಕೆ ಗೃಹಲಕ್ಷ್ಮಿಗೆ ಸಿಎಂ ಸಿದ್ದರಾಮಯ್ಯ ಚಾಲನೆ; ಬರಲ್ಲ ಹೈಕಮಾಂಡ್

ಕಾಂಗ್ರೆಸ್‌ನ ಪೇಸಿಎಂ ಅಭಿಯಾನಕ್ಕೆ ಬಿಜೆಪಿಯಿಂದ ಶ್ಯಾಡೊ ಸಿಎಂ ಪೋಸ್ಟರ್ ವಾರ್

ಬೆಂಗಳೂರು: ವಿಧಾನಸಭೆ ಎಲೆಕ್ಷನ್‌ಗೂ ಮುನ್ನ ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರದ ವಿರುದ್ಧ ಪೇಸಿಎಂ ಅಭಿಯಾನವನ್ನು ಕಾಂಗ್ರೆಸ್‌ ರೂಪಿಸಿತ್ತು. ಕರ್ನಾಟಕ ರಾಜ್ಯ ಕಾಂಟ್ರಾಕ್ಟರ್ಸ್‌ ಅಸೋಸಿಯೇಷನ್‌ ಮಾಡಿದ್ದ 40% ಕಮಿಷನ್‌ ಆರೋಪವನ್ನೇ ಆಧಾರವಾಗಿಸಿಕೊಂಡು ಪೆಸಿಎಂ ಪೋಸ್ಟರ್‌ಗಳನ್ನು ಬಹಿರಂಗವಾಗಿ ಅಂಟಿಸಿತ್ತು. (Shadow CM)

ಈ ಪೋಸ್ಟರ್‌ಗಳು ಸರ್ಕಾರಕ್ಕೆ ಸಾಕಷ್ಟ ಮುಜುಗರ ಉಂಟುಮಾಡಿದ್ದವು. ರಾಜ್ಯ ಸರ್ಕಾರವು ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಜನರಿಗೆ ಮನವರಿಕೆ ಮಾಡುವಲ್ಲಿ ಸಾಕಷ್ಟು ಪರಿಣಾಮಕಾರಿಯಾಗಿದ್ದವು. ಇದೀಗ ಕಾಂಗ್ರೆಸ್‌ ಸರ್ಕಾರ ರಚನೆಯಾಗಿದ್ದು, ಶ್ಯಾಡೊ ಸಿಎಂ ಅಭಿಯಾನವನ್ನು ಬಿಜೆಪಿ ಕೈಗೆತ್ತಿಕೊಂಡಿದೆ.

ಅಧಿಕಾರಿಗಳ ವರ್ಗಾವಣೆಯಿಂದ ಮೊದಲುಗೊಂಡು ಅನೇಕ ಕಾರ್ಯಗಳನ್ನು ಸಿಎಂ ಸಿದ್ದರಾಮಯ್ಯ ಪುತ್ರ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ನಡೆಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಇದೇ ಆರೋಪಕ್ಕೆ ಅನಗುಣವಾಗಿ ಶ್ಯಾಡೊ ಸಿಎಂ ಪೋಸ್ಟರ್‌ಗಳನ್ನು ರೂಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದೆ.

1. ಕಲೆಕ್ಷನ್ ಏಜೆಂಟ್ ಸುರ್ಜೇವಾಲಾರ ಕೈಗೊಂಬೆಯಾಗಿರುವ ಸಿದ್ದರಾಮಯ್ಯ, ಪುತ್ರನನ್ನು ಶ್ಯಾಡೋ ಸಿಎಂ ಮಾಡಿ ತಾಳಕ್ಕೆ ಕುಣಿಯುತ್ತಿದ್ದಾರೆ. ಸೋನಿಯಾ ಗಾಂಧಿಯವರ ತಾಳಕ್ಕೆ ರಾಜ್ಯದ ಕಾಂಗ್ರೆಸ್ ನಾಯಕರು ಕುಣಿಯುತ್ತಿದ್ದಾರೆ. 2024ರ ಕಾಂಗ್ರೆಸ್ ಚುನಾವಣಾ ಖರ್ಚಿಗೆ ರಾಜ್ಯ ಬಲಿಯಾಗುತ್ತಿದೆ.

2. ಸರಕಾರದ ಎಲ್ಲಾ ಬಗೆಯ ಡೀಲ್‌ಗಳಿಗೆ ನೇರವಾಗಿ ಸಂಪರ್ಕಿಸಿ…

3. ಹುದ್ದೆಗಳು ಮಾರಾಟಕ್ಕಿವೆ… #ShadowCM ರವರನ್ನು ನೇರವಾಗಿ ಸಂಪರ್ಕಿಸಬಹುದು.

4. ಹುದ್ದೆಗಳು ಮಾರಾಟಕ್ಕಿವೆ.. #ShadowCM ರವರನ್ನು ನೇರವಾಗಿ ಸಂಪರ್ಕಿಸಬಹುದು.

5. CM ನೆರಳಿನಲ್ಲಿ #ShadowCM ಅವ್ಯವಹಾರ. ಅಂಕೆ ಮೀರಿದೆ ಇವರಿಬ್ಬರ ಭ್ರಷ್ಟಾಚಾರ.

6. Commission Master in the shadows of Chief Minister!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

KEA: ನಾಳೆ ಕನ್ನಡ ಕಡ್ಡಾಯ ಪರೀಕ್ಷೆ; ಅ.27ಕ್ಕೆ ಬಿಗಿ ಬಂದೋಬಸ್ತ್ ನಡೆಯಲಿದೆ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ

KEA : ಕನ್ನಡ ಕಡ್ಡಾಯ ಪರೀಕ್ಷೆ ಅ.26ಕ್ಕೆ, ಅ.27ಕ್ಕೆ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆಯು ಬಿಗಿ ಪೊಲೀಸ್‌ ಬಂದೋಬಸ್ತ್‌ನಲ್ಲಿ ನಡೆಯಲಿದೆ.

VISTARANEWS.COM


on

By

kea
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿಯ ಒಂದು ಸಾವಿರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅ.27ರಂದು ಮುಖ್ಯ ಪರೀಕ್ಷೆ ನಡೆಸುತ್ತಿದ್ದು ಸಕಲ ರೀತಿಯ ಬಿಗಿ ಕ್ರಮಗಳನ್ನು ಕೈಗೊಂಡಿದೆ.

ವಯೋಮಿತಿ ಸಡಿಲಿಕೆ ನಂತರ ಅರ್ಜಿ ಸಲ್ಲಿಸಿದ ಸುಮಾರು 63 ಸಾವಿರ ಮಂದಿಗೆ ಕನ್ನಡ ಕಡ್ಡಾಯ ಪರೀಕ್ಷೆ, ಅ.26ಕ್ಕೆ ರಾಜ್ಯದ 153 ಕೇಂದ್ರಗಳಲ್ಲಿ ನಡೆಯಲಿದೆ. ಇದರಲ್ಲಿ ಜಿಟಿಟಿಸಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ 2,300 ಮಂದಿಯೂ ಸೇರಿದ್ದಾರೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ತಿಳಿಸಿದ್ದಾರೆ.

ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ಮುಖ್ಯ ಪರೀಕ್ಷೆ ಅ.27ರಂದು ನಡೆಯಲಿದ್ದು, ಅದನ್ನು ಬರೆಯಲು 4.8 ಲಕ್ಷ ಅಭ್ಯರ್ಥಿಗಳು ಅರ್ಹರಾಗಿದ್ದಾರೆ. ಈ ಸಲುವಾಗಿ 1,173 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಅವರು ವಿವರಿಸಿದರು. ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ. ವಸ್ತ್ರ ಸಂಹಿತೆ ಕೂಡ ಇದ್ದು, ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಹೇಳಿದ್ದಾರೆ.

ಓಎಂಆರ್ ನೋಂದಣಿ ಎಚ್ಚರ

ಸೆ.26ರಂದು ನಡೆದ ಕಡ್ಡಾಯ ಕನ್ನಡ ಪರೀಕ್ಷೆಯ ಓಎಂಆರ್ ಶೀಟ್ ನಲ್ಲಿ ನೋಂದಣಿ ಸಂಖ್ಯೆ‌ ಮತ್ತು ವರ್ಶನ್ ಕೋಡ್ ನಮೂದಿಸುವಾಗ ಸುಮಾರು ಒಂಬತ್ತು ಸಾವಿರ ಮಂದಿ ತಪ್ಪು ಮಾಡಿದ್ದು ಪುನಃ ಆ ರೀತಿ ಆಗಬಾರದು ಎನ್ನುವ ಕಾರಣಕ್ಕೆ ಅಭ್ಯಾಸ ಸಲುವಾಗಿ ಈ ಬಾರಿ ಮಾದರಿ ಓಎಂಆರ್ ಶೀಟ್ ನೀಡಲಾಗಿತ್ತು. ಸರಿಯಾಗಿ ಅಭ್ಯಾಸ ಮಾಡಿಕೊಂಡು ಬನ್ನಿ. ಪುನಃ ತಪ್ಪು ಗಳಾದರೆ ಅದಕ್ಕೆ ಪ್ರಾಧಿಕಾರ ಜವಾಬ್ದಾರಿಯಲ್ಲ.‌ ಮಾದರಿ ಓಎಂಆರ್ ಶೀಟ್ ಅನ್ನು ಪರೀಕ್ಷಾ ಕೇಂದ್ರಕ್ಕೆ ತರುವುದು ಬೇಡ ಎಂದೂ‌ ಅವರು ಸಲಹೆ ನೀಡಿದ್ದಾರೆ.

Continue Reading

ಕೊಡಗು

Assault case: ಟ್ರಾಫಿಕ್‌ ಪೊಲೀಸ್‌ ಮೇಲೆಯೇ ಕಾರು ಹರಿಸಿ ಪರಾರಿ ಆಗಿದ್ದ ಚಾಲಕ ಅರೆಸ್ಟ್‌

Assault case: ಕರ್ತವ್ಯ ನಿರತ ಸಂಚಾರಿ ಪೊಲೀಸ್ ಮೇಲೆ ಕಾರು ಹರಿಸಲು ಮುಂದಾದ ಕಾರು ಚಾಲಕನನ್ನು ಕೊಡಗು ಪೊಲೀಸರು ಬಂಧಿಸಿ, ಜೈಲಿಗೆ ಅಟ್ಟಿದ್ದಾರೆ.

VISTARANEWS.COM


on

By

assault Case
Koo

ಕೊಡಗು: ಮಡಿಕೇರಿ ಸಮೀಪ ಎರಡು ಶಿಫ್ಟ್‌ ಕಾರುಗಳ ನಡುವೆ ಅಪಘಾತ (Road Accident) ಸಂಭವಿಸಿತ್ತು. ಈ ವೇಳೆ ಜಿಟಿ ಸರ್ಕಲ್‌ನಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ‌ ಸಂಜು ಅವರು ಸ್ಥಳಕಾಗಮಿಸಿ ಪರಿಶೀಲನೆ ನಡೆಸಲು ಮುಂದಾಗಿದ್ದರು. ಈ ವೇಳೆ ಮತ್ತೊಂದು ಶಿಫ್ಟ್‌ ಕಾರನ್ನು ಬದಿಗೆ ಸರಿಸುವಂತೆ ಸೂಚಿಸುವ ಸಂದರ್ಭದಲ್ಲಿ ಕಾರು ಚಾಲಕ ವಾಹನವನ್ನು ನಿಲ್ಲಿಸದೆ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್‌ಸ್ಟೇಬಲ್‌ ಮೇಲೆ ವಾಹನ ಹರಿಸಿ (Assault case) ತಪ್ಪಿಸಿಕೊಂಡಿದ್ದ.

ಸಂಚಾರಿ ಪೊಲೀಸ್ ಸಿಬ್ಬಂದಿ ಸಂಜು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೊಲೀಸ್ ಮೇಲೆ ಕಾರು ಹರಿಸಲು ಮುಂದಾದ ದೃಶ್ಯ ‌ಸ್ಥಳೀಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಇನ್ನು ಆತನ ಬೆನ್ನಟ್ಟಿದಾಗ ಪೊಲೀಸರ ಕಣ್ಣು ತಪ್ಪಿಸಿ ಕಾರು ಚಾಲಕ ಪರಾರಿ ಆಗಿದ್ದ.

ಪೊಲೀಸ್ ಸಿಬ್ಬಂದಿ ಮೇಲೆ ಕಾರು ಹರಿಸಿದ ಪ್ರಕರಣ ಸಂಬಂಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿ, ಪರಾರಿಯಾಗಿದ್ದ ಕಾರು ಚಾಲಕ ಬಂಟ್ವಾಳ ಮೂಲದ ನಜೀರ್ ಎಂಬಾತನನ್ನು ಬಂಧಿಸಿ, ಜೈಲಿಗೆ ಅಟ್ಟಿದ್ದಾರೆ. ಕೊಡಗು ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ನಿರ್ದೇಶನದ ಮೇರೆಗೆ, ಸಂಚಾರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶ್ರೀಧರ್ ನೇತೃತ್ವದಲ್ಲಿ ತಂಡ ರಚಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಪೊಲೀಸರ ಈ ಮಿಂಚಿನ ಕಾರ್ಯಾಚರಣೆಗೆ ಕೊಡಗು ಎಸ್ಪಿ ಕೂಡ ಶ್ಲಾಘನೆಗೆ ವ್ಯಕ್ತಪಡಿಸಿದ್ದಾರೆ‌.

Continue Reading

ಪ್ರಮುಖ ಸುದ್ದಿ

Actor Darshan : ದರ್ಶನ್‌ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌; ನ.8ರಂದು ನವಗ್ರಹ ಸಿನಿಮಾ ರೀ-ರಿಲೀಸ್‌

Actor Darshan : ನಟ ದರ್ಶನ್ ಜೈಲಿನಲ್ಲಿದ್ದರೂ ಹಳೆಯ ಸಿನಿಮಾಗಳು ಥಿಯೇಟರ್​ಗಳಲ್ಲಿ ಸೌಂಡ್ ಮಾಡುತ್ತಿವೆ. ಇತ್ತೀಚೆಗಷ್ಟೇ ದರ್ಶನ್ ಅಭಿನಯದ ಕರಿಯ, ಶಾಸ್ತ್ರಿ ಹಾಗೂ ಪೊರ್ಕಿ ಸಿನಿಮಾಗಳನ್ನು ಮರು ಬಿಡುಗಡೆಗೊಂಡಿತ್ತು. ಇದೀಗ ನವಗ್ರಹ ಸಿನಿಮಾ ರೀ ರಿಲೀಸ್‌ಗೆ ಡೇಟ್‌ ಫಿಕ್ಸ್‌ ಆಗಿದೆ.

VISTARANEWS.COM


on

By

actor darshan
Koo

ಬೆಂಗಳೂರು: ಜೈಲಿನಲ್ಲಿರುವ ನಟ ದರ್ಶನ್ ಬೆನ್ನು ನೋವಿನಿಂದ ಒದ್ದಾಡುತ್ತಿರುವುದನ್ನು ಕಂಡು ಬೇಸರದಲ್ಲಿರುವ ಅಭಿಮಾನಿಗಳಿಗೆ ಕೊನೆಗೂ ಗುಡ್‌ ನ್ಯೂಸ್‌ ಸಿಕ್ಕಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇಷ್ಟರಲ್ಲೇ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ರಿಲೀಸ್ ಆಗ್ಬೇಕಿತ್ತು. ಆದರೆ ಇದೀಗ ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಬಂಧಿಯಾಗಿದ್ದಾರೆ.

ದಾಸನ ಸಿನಿಮಾ ರೀ-ರಿಲೀಸ್, ಡೇಟ್ ಅನೌನ್ಸ್

ನಟ ದರ್ಶನ್ ಜೈಲಿನಲ್ಲಿದ್ದರೂ ಹಳೆಯ ಸಿನಿಮಾಗಳು ಥಿಯೇಟರ್​ಗಳಲ್ಲಿ ಸೌಂಡ್ ಮಾಡುತ್ತಿವೆ. ಈ ವರ್ಷ ‘DEVIL THE HERO’ ಸಿನಿಮಾವನ್ನು ನೋಡಬೇಕು ಎಂಬುದು ದರ್ಶನ್ ಅಭಿಮಾನಿಗಳ ಆಸೆ ಆಗಿತ್ತು. ಆದರೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ದರ್ಶನ್ ಜೈಲು ಸೇರಿದ ಬಳಿಕ ಆ ಸಿನಿಮಾದ ಕೆಲಸಕ್ಕೆ ಬ್ರೇಕ್​ ಬಿತ್ತು. ಹಾಗಾಗಿ ದೊಡ್ಡ ಪರದೆ ಮೇಲೆ ದರ್ಶನ್ ಹೊಸ ಸಿನಿಮಾ ತೆರೆಕಾಣಲಿಲ್ಲ. ಈ ಸಂದರ್ಭದಲ್ಲಿ ಅಭಿಮಾನಿಗಳು ದರ್ಶನ್​ ಅವರನ್ನು ಬಹಳ ಮಿಸ್​ ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಅವರ ಈ ಹಿಂದಿನ ಹಿಟ್ ಸಿನಿಮಾಗಳನ್ನು ಮತ್ತೆ ತೆರೆಗೆ ತರಲಾಗುತ್ತಿದೆ. ಇತ್ತೀಚೆಗಷ್ಟೇ ದರ್ಶನ್ ಅಭಿನಯದ ಕರಿಯ, ಶಾಸ್ತ್ರಿ ಹಾಗೂ ಪೊರ್ಕಿ ಸಿನಿಮಾಗಳನ್ನು ಮರು ಬಿಡುಗಡೆಗೊಂಡಿತ್ತು.

Actor darshan
Actor darshan

‘ನವಗ್ರಹ’ ಸಿನಿಮಾ ಹಿಟ್‌ ಆದ ನಂತರ ಸಿನಿಮಾದ ಸೀಕ್ವೆಲ್‌ ಬರಲಿದೆ ಅಂತ ಹೇಳಲಾಗಿತ್ತಾದರೂ ಕೊನೆವರೆಗೂ ಈ ಸಿನಿಮಾದ ಸೀಕ್ವೆಲ್‌ ಬರಲೇ ಇಲ್ಲ. ಇದೊಂದು ವಿಷಯ ಡಿ ಬಾಸ್‌ ಫ್ಯಾನ್ಸ್‌ ಅಲ್ಲಿ ನಿರಾಶೆ ಉಂಟು ಮಾಡಿತ್ತು. ಕೆಲವು ದಿನಗಳ ಹಿಂದೆ, ‘ನವಗ್ರಹ’ ಸಿನಿಮಾ ರೀ ರಿಲೀಸ್‌ ಮಾಡಬೇಕೆಂದು ಅಭಿಮಾನಿಗಳು ಸೋಶಿಯಲ್‌ ಮೀಡಿಯಾದಲ್ಲಿ ಅಭಿಯಾನವನ್ನು ಸ್ಟಾರ್ಟ್‌ ಮಾಡಿದ್ದರು. #WeWantNavagrahaReRelease ಎಂಬ ಹ್ಯಾಶ್‌ಟ್ಯಾಗ್‌ ಬಳಸುವ ಮೂಲಕ ಈ ಟ್ರೆಂಡ್‌ ಅನ್ನು ವೈರಲ್‌ ಆಗಿತ್ತು. ಇದೀಗ ಮತ್ತೆ ಈ ಸಿನಿಮಾ ನೋಡೋ ಆಸೆಯಿಂದ ಅಭಿಮಾನಿಗಳು ಚಿತ್ರದ ರೀ ರಿಲೀಸ್‌ಗಾಗಿ ಪಟ್ಟು ಹಿಡಿದಿದ್ದಾರೆ.

ಕುತೂಹಲ ಮೂಡಿಸಿದ ದಿನಕರ್​ ಪೋಸ್ಟ್

‘ನವಗ್ರಹ’ ಕನ್ನಡ ಚಿತ್ರರಂಗದ ಸೂಪರ್ ಹಿಟ್​ ಸಿನಿಮಾ. 2008ರಲ್ಲಿ ತೆರೆಕಂಡ ನಟ ದರ್ಶನ್​​ ಮುಖ್ಯಭೂಮಿಕೆಯ ಈ ಚಿತ್ರ ಸೂಪರ್ ಹಿಟ್​ ಆಗಿತ್ತು. ಬಹುತಾರಾಗಣದ ಈ ಚಿತ್ರ ‘ಅಂಬಾರಿ’ ಕಳ್ಳತನಕ್ಕೆ ಪ್ರಯತ್ನಿಸುವ ಕಥೆಯನ್ನು ಒಳಗೊಂಡಿತ್ತು. ಈ ಸಿನಿಮಾ ರೀ-ರಿಲೀಸ್​ ಆಗುತ್ತಿರುವ ಹಿನ್ನೆಲೆಯಲ್ಲಿ ನಿರ್ದೇಶಕ ದಿನಕರ್ ತೂಗುದೀಪ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ. ‘ನನ್ನ ನಿರ್ದೇಶನದ 2ನೇ ಸಿನಿಮಾ ನವಗ್ರಹ. ಕನ್ನಡ ಚಿತ್ರರಂಗದ ಖ್ಯಾತ ಖಳನಾಯಕರ ಮಕ್ಕಳನ್ನು ಒಟ್ಟಿಗೆ ಬೆಳ್ಳಿ ತೆರೆಯ ಮೇಲೆ ತಂದ ಒಂದು ಪ್ರಾಮಾಣಿಕ ಪ್ರಯತ್ನ. 16 ವರ್ಷಗಳ ಹಿಂದೆ ಬಿಡುಗಡೆಯಾಗಿ ನಿಮ್ಮೆಲ್ಲರ ಪ್ರೀತಿ-ಪ್ರೋತ್ಸಾಹದಿಂದ ಇಂದಿಗೂ ಜನಮೆಚ್ಚುಗೆಗೆ ಪಾತ್ರವಾಗಿದೆ. ಅಭಿಮಾನಿಗಳು ಹಾಗೂ ಸಿನಿಪ್ರೇಕ್ಷಕರ ಒತ್ತಾಯದ ಫಲವಾಗಿ ಇದೇ ನವೆಂಬರ್ 8ರಂದು ಮರುಬಿಡುಗಡೆಗೆ ಸಿದ್ಧವಾಗಿದೆ. ಮತ್ತೊಮ್ಮೆ ಬೆಳ್ಳಿಪರದೆಯ ಮೇಲೆ ನೋಡಿ ಆನಂದಿಸಿ’ ಎಂದು ಅವರು ಬರೆದುಕೊಂಡಿದ್ದಾರೆ.

‘ನವಗ್ರಹ’ ಸಿನಿಮಾಗೆ ದರ್ಶನ್ ಅವರ ಸಹೋದರ ದಿನಕರ್ ತೂಗುದೀಪ ನಿರ್ದೇಶನ ಮಾಡಿದ್ದಾರೆ. ದರ್ಶನ್ ಜೊತೆ ತರುಣ್ ಸುಧೀರ್​, ಧರ್ಮ ಕೀರ್ತಿರಾಜ್, ವಿನೋದ್ ಪ್ರಭಾಕರ್​, ಸೃಜನ್ ಲೋಕೇಶ್, ಗಿರಿ ದಿನೇಶ್, ನಾಗೇಂದ್ರ ಅರಸ್​, ವರ್ಷಾ, ಶರ್ಮಿಳಾ ಮಾಂಡ್ರೆ, ಕುರಿ ಪ್ರತಾಪ್, ಡೇರಿಂಗ್ ಸ್ಟಾರ್ ಧರ್ಮ ಸೇರಿದಂತೆ ಅನೇಕರು ನಟಿಸಿದ್ದಾರೆ. ಎ.ವಿ ಕೃಷ್ಣಕುಮಾರ್​ ಕ್ಯಾಮರಾ ಕೈಳಚಕವಿರುವ ಚಿತ್ರಕ್ಕೆ ವಿ ಹರಿಕೃಷ್ಣ ಸಂಗೀತ ಒದಗಿಸಿದ್ದರು. ಟಿ ಶಶಿಕುಮಾರ್​ ಸಂಕಲನದ ಹೊಣೆ ಹೊತ್ತಿದ್ದರು. ತೂಗುದೀಪ ಪ್ರೊಡಕ್ಷನ್ಸ್ ಅಡಿ ನಿರ್ಮಾಣಗೊಂಡ ಈ ಚಿತ್ರ 2008ರ ನವೆಂಬರ್​​ 7ರಂದು ಚಿತ್ರಮಂದಿರ ಪ್ರವೇಶಿಸಿ ಯಶಸ್ವಿಯಾಗಿತ್ತು. ಇದೀಗ ಅದೇ ದಿದಂದೇ ಮರು ಬಿಡುಗಡೆಗೆ ಸನ್ನದ್ಧವಾಗಿದೆ.

Continue Reading

ಬೆಂಗಳೂರು

Bengaluru News : ಪ್ರಿಯಕರನ ಕಣ್ಮುಂದೆಯೇ ಯುವತಿ ಮೇಲೆ ಎರಗಿದ್ದ ಕಾಮುಕರಿಗೆ ಜೀವಾವಧಿ ಶಿಕ್ಷೆ

Bengaluru News : ಪ್ರಿಯಕರನ ಕಣ್ಮುಂದೆಯೇ ಯುವತಿ ಮೇಲೆ ಎರಗಿದ್ದ ಕಾಮುಕರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

VISTARANEWS.COM


on

By

Bengaluru News
Koo

ಬೆಂಗಳೂರು: ಡಿನ್ನರ್‌ ಮುಗಿಸಿ ಬರುತ್ತಿದ್ದ ಪ್ರೇಮಿಗಳಿಗೆ ಕಿರಾತಕರು ಅಡ್ಡ ಹಾಕಿ, ಬಳಿಕ ಯುವಕನ ಕುತ್ತಿಗೆ ಚಾಕು ಇಟ್ಟು ಯುವತಿ ಮೇಲೆ ಅತ್ಯಾಚಾರ ನಡೆಸಿದ್ದರು. ಇದೀಗ ಆ ಆರೋಪಿಗಳಿಗೆ 10 ವರ್ಷಗಳ ನಂತರ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. 2014ರ ಏಪ್ರಿಲ್ 11ರಂದು ಪ್ರೇಮಿಗಳಿಬ್ಬರು ಎಂ.ಜಿ ರೋಡ್‌ನಲ್ಲಿ ಡಿನ್ನರ್ ಮುಗಿಸಿ ಪುಲಕೇಶಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ (Bengaluru News) ನೇತಾಜಿ ರಸ್ತೆಯಲ್ಲಿ ಮಧ್ಯರಾತ್ರಿ 12:30ರ ಸಮಯಲ್ಲಿ ಕಾರಿನಲ್ಲಿ ಕುಳಿತಿದ್ದರು. ಈ ವೇಳೆ ಕಾಮುಕರ ದಂಡು ಅವರನ್ನು ಸುತ್ತುವರಿದು ಕಾರು ಏರಿಕೊಂಡಿದ್ದರು.

ಶೇಕ್ ಹೈದರ್, ಸೈಯದ್ ಶಫಿಕ್, ಮಹಮ್ಮಸ್ ಹಫೀಜ್, ಶೋಯಬ್ @ ಶೇಖ್ ಕಲ್ವಾನ ಕಾರಿನಲ್ಲಿ ಪ್ರೇಮಿಗಳು ಇದ್ದರೆ, ಮಹಮ್ಮದ್ ಇಸಾಕ್ ಎಂಬಾತ ಕಾಮುಕರ ಕಾರನ್ನು ಫಾಲೋ ಮಾಡಿದ್ದ. ಬಳಿಕ ರಾತ್ರಿಯಿಡಿ ಸಂತ್ರಸ್ತೆ ಕಾರಿನಲ್ಲೇ ಪುಲಕೇಶಿ ನಗರ ಸುತ್ತಾಡಿದ್ದರು. ಕಾರಿನಲ್ಲಿ ಆ ಯುವತಿಗೆ ಇನ್ನಿಲ್ಲದ ಚಿತ್ರಹಿಂಸೆ ನೀಡಿದ್ದರು. ಕೊನೆಗೆ ಕಾಮುಕರ ಗುಂಪಿನ ನಾಯಕ ಶೇಕ್ ಹೈದರ್ ಆಜ್ಞೆಯಂತೆ ಸಂತ್ರಸ್ತೆಯ ಸ್ನೇಹಿತನನ್ನು ಕಾರಿನಿಂದ ಇಳಿಸಿದ್ದರು.

ಸೈಯದ್ ಶಫಿಕ್, ಹಫಿಜ್, ಶೋಯಬ್ ಆ ಯುವಕನ ಕುತ್ತಿಗೆಗೆ ಚಾಕು ಹಿಡಿದು ಕೊಂಡಿದ್ದರು. ಕಾರಿನಲ್ಲಿದ್ದ ಶೇಕ್ ಹೈದರ್ ನಾನು ಹೇಳಿದ ಹಾಗೆ ಕೇಳದಿದ್ದರೆ ನಿನ್ನ ಹುಡುಗನನ್ನು ಕೊಲೆ ಮಾಡುತ್ತೇನೆ ಎಂದು ಯುವತಿಗೆ ಬೆದರಿಕೆ ಹಾಕಿದ್ದ. ನಂತರ ಯುವತಿ ಮೇಲೆ ಮೃಘೀಯ ರೀತಿ ವರ್ತಿಸಿದ್ದ. ತನ್ನ ಕಣ್ಣ ಮುಂದೆಯೇ ತನ್ನ ನಂಬಿ ಬಂದ ಪ್ರೇಯಸಿ ಮೇಲೆ ಕಾಮುಕರು ಪಿಶಾಚಿಗಳಂತೆ ಎಗರಿದ್ದರೂ ಏನು ಮಾಡಲು ಆಗದೆ ಅಸಯಾಕನಾಗಿದ್ದ.

ಯುವತಿ ಮೇಲೆ ಅತ್ಯಾಚಾರವೆಸಗಿದ್ದಲ್ಲದೆ 50 ಸಾವಿರ ರೂ. ಗೆ ಡಿಮ್ಯಾಂಡ್ ಮಾಡಿದ್ದರು. ಹಣ ನೀಡದಿದ್ದಾಗ ಹುಡುಗನ ಕೈಯಲ್ಲಿದ್ದ ವಾಚ್‌ನ ಕಿತ್ತುಕೊಂಡು ಹೋಗಿದ್ದರು. ಈ ಘಟನೆ ಸಂಬಂಧ ಪುಲಕೇಶಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೊದಲಿಗೆ ಅಂದಿನ ಇನ್‌ಸ್ಪೆಕ್ಟರ್‌ ಸರಿಯಾದ ಸೆಕ್ಷನ್ ಹಾಕಿಲ್ಲ ಎಂದು ಸಸ್ಪೆಂಡ್ ಕೂಡ ಆಗಿದ್ದರು. ಇದಾದ ನಂತರ ಅಂದಿನ ಪುಲಕೇಶಿ ನಗರ ಉಪವಿಭಾಗ ಎಸಿಪಿ ನೂರುಲ್ಲ ಶರೀಫ್ ತನಿಖೆ ನಡೆಸಿ ನ್ಯಾಯಲಯಕ್ಕೆ ಐವರು ಆರೋಪಿಗಳ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಕಾರಿನಲ್ಲಿ ಸಿಕ್ಕ ಆರೋಪಿಯ ತಲೆಕೂದಲು ಮತ್ತು ವೀರ್ಯದ ಕರುಹುಗಳು ಪ್ರಕರಣಕ್ಕೆ ಪ್ರಮುಖ ಸಾಕ್ಷಿಯಾಗಿತ್ತು. ಆರೋಪಿಗಳು ರಾಜಕೀಯ ಪ್ರಭಾವ ಹೊಂದಿದ್ದರು. ಆದರೆ ಇದ್ಯಾವುದಕ್ಕೂ ಮಣಿಯದ ಪೊಲೀಸರು ಆರೋಪಿಗಳಿಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾದರು. ಸದ್ಯ ಆರೋಪಿಗಳ ಪೈಕಿ ಎ1 ಆರೋಪಿ ಶೇಕ್ ಹೈದರ್‌ಗೆ ಜೀವಾವಧಿ ಶಿಕ್ಷೆ 31 ಸಾವಿರ ದಂಡ ಹಾಗೂ ಎ2 ಸೈಯದ್ ಶಫಿಕ್ 10 ವರ್ಷ ಸಜೆ 23 ಸಾವಿರ ದಂಡ, ಎ3 ಮೊಹಮ್ಮದ್ ಹಫೀಜ್‌ಗೆ 3500 ದಂಡ, ಎ4 ಶೋಯಬ್ ಗೆ 1 ವರ್ಷ ಸಜೆ ಹಾಗೂ 3500 ದಂಡ ಹಾಗೂ ಎ5 ಮಹಮ್ಮದ್ ಇಸಾಕ್‌ಗೆ 6 ತಿಂಗಳ ಸಜೆ ಹಾಗೂ 3000 ದಂಡ ವಿಧಿಸಿ 57ನೇ ಸಿಸಿಹೆಚ್ ನ್ಯಾಯಾಲಯ ಶಿಕ್ಷೆ ಪ್ರಕಟಿಸಿ ಆದೇಶ ಹೊರಡಿಸಿದೆ.

Continue Reading
Advertisement
kea
ಬೆಂಗಳೂರು1 ಗಂಟೆ ago

KEA: ನಾಳೆ ಕನ್ನಡ ಕಡ್ಡಾಯ ಪರೀಕ್ಷೆ; ಅ.27ಕ್ಕೆ ಬಿಗಿ ಬಂದೋಬಸ್ತ್ ನಡೆಯಲಿದೆ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ

assault Case
ಕೊಡಗು3 ಗಂಟೆಗಳು ago

Assault case: ಟ್ರಾಫಿಕ್‌ ಪೊಲೀಸ್‌ ಮೇಲೆಯೇ ಕಾರು ಹರಿಸಿ ಪರಾರಿ ಆಗಿದ್ದ ಚಾಲಕ ಅರೆಸ್ಟ್‌

actor darshan
ಪ್ರಮುಖ ಸುದ್ದಿ4 ಗಂಟೆಗಳು ago

Actor Darshan : ದರ್ಶನ್‌ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌; ನ.8ರಂದು ನವಗ್ರಹ ಸಿನಿಮಾ ರೀ-ರಿಲೀಸ್‌

Bengaluru News
ಬೆಂಗಳೂರು5 ಗಂಟೆಗಳು ago

Bengaluru News : ಪ್ರಿಯಕರನ ಕಣ್ಮುಂದೆಯೇ ಯುವತಿ ಮೇಲೆ ಎರಗಿದ್ದ ಕಾಮುಕರಿಗೆ ಜೀವಾವಧಿ ಶಿಕ್ಷೆ

Dina Bhavishya
ಭವಿಷ್ಯ6 ಗಂಟೆಗಳು ago

Dina Bhavishya : ಕುಟುಂಬದ ಆಪ್ತರೊಂದಿಗೆ ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರ

Dina Bhavishya
ಭವಿಷ್ಯ1 ದಿನ ago

Dina Bhavishya : ಈ ದಿನ ಹೂಡಿಕೆ ವ್ಯವಹಾರದಿಂದ ದೂರವಿರಿ

Dina bhavishya
ಭವಿಷ್ಯ2 ದಿನಗಳು ago

Dina Bhavishya: ಈ ರಾಶಿಯವರಿಗೆ ಉತ್ಸಾಹದ ವಾತಾವರಣ; ಆಪ್ತರೊಂದಿಗೆ ಪ್ರಯಾಣ ಸಾಧ್ಯತೆ

namma Metro
ಬೆಂಗಳೂರು3 ದಿನಗಳು ago

Namma Metro : ನಮ್ಮ ಮೆಟ್ರೋ ಪ್ರಯಾಣಿಕರಿಗಾಗಿ ಝೀರೋ-ಕೆವೈಸಿ ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ ಲಭ್ಯ

Murder Case
ಬೆಂಗಳೂರು ಗ್ರಾಮಾಂತರ3 ದಿನಗಳು ago

Murder Case: ಆನೇಕಲ್‌ನಲ್ಲಿ ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ

Dina bhavishya
ಭವಿಷ್ಯ3 ದಿನಗಳು ago

Dina Bhavishya: ವೈವಾಹಿಕ ಜೀವನದಲ್ಲಿ ವಿರಸ ಉಂಟಾಗುವ ಸಾಧ್ಯತೆ; ಮಾತಿನಲ್ಲಿ ಹಿಡಿತವಿರಲಿ

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ3 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌