Electricity load shedding : ‌ಈ ಮಳೆಗಾಲ ಮುಗಿಯುವುದರೊಳಗೇ ಲೋಡ್‌ ಶೆಡ್ಡಿಂಗ್? - Vistara News

ಕರ್ನಾಟಕ

Electricity load shedding : ‌ಈ ಮಳೆಗಾಲ ಮುಗಿಯುವುದರೊಳಗೇ ಲೋಡ್‌ ಶೆಡ್ಡಿಂಗ್?

Electricity load shedding : ರಾಜ್ಯದಲ್ಲಿ ಈ ಬಾರಿ ಅಷ್ಟಾಗಿ ಮಳೆ ಸುರಿಯುತ್ತಿಲ್ಲ. ಇದರಿಂದ ವಿದ್ಯುತ್‌ ಉತ್ಪಾದನೆ ಮೇಲೆ ತೀವ್ರ ಪರಿಣಾಮ ಬೀರಿದೆ. ಅಲ್ಲದೆ, ರಾಯಚೂರಿನ ಆರ್‌ಟಿಪಿಎಸ್‌ ಘಟಕದ ನಾಲ್ಕು ಯುನಿಟ್‌ಗಳು ಬಂದ್‌ ಆಗಿದ್ದು, ಈ ಮಳೆಗಾಲ ಮುಗಿಯುವುದರೊಳಗೇ ರಾಜ್ಯದಲ್ಲಿ ಲೋಡ್‌ ಶೆಡ್ಡಿಂಗ್‌ ಸಮಸ್ಯೆ ತಲೆದೋರಲಿದೆಯೇ ಎಂಬ ಅನುಮಾನ ಮೂಡಿದೆ.

VISTARANEWS.COM


on

Raichur RTPS
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಯಚೂರು: ರಾಜ್ಯದಲ್ಲಿ ಈ ಮಳೆಗಾಲ ಮುಗಿಯುವುದರೊಳಗೇ ವಿದ್ಯುತ್ ಲೋಡ್‌ ಶೆಡ್ಡಿಂಗ್‌ (Electricity load shedding) ಆರಂಭವಾಗಲಿದೆಯೇ? ಅಂಥದ್ದೊಂದು ಅನುಮಾನ ಈಗ ಹುಟ್ಟಿಕೊಂಡಿದೆ. ರಾಜ್ಯಕ್ಕೆ ಮುಂದಿನ ದಿನಗಳಲ್ಲಿ ಲೋಡ್ ಶೆಡ್ಡಿಂಗ್ ಭೀತಿ ಎದುರಾಗಲು ಕಾರಣ ಈಗಿನ ಮಳೆ ಅಭಾವ! ಸಮರ್ಪಕವಾಗಿ ಮಳೆಯಾಗದ ಹಿನ್ನೆಲೆಯಲ್ಲಿ ಜಲ ಮೂಲಗಳ ವಿದ್ಯುತ್ (Hydel power) ಕುಂಠಿತವಾಗಿದೆ. ಇದರ ಪರಿಣಾಮ ಈಗ ಕಲ್ಲಿದ್ದಲಿನಿಂದ ವಿದ್ಯುತ್ (Coal Power) ಉತ್ಪಾದಿಸುವ ಘಟಕಗಳ ಮೇಲಾಗುತ್ತಿದೆ. ಇವುಗಳ ಮೇಲೆ ಹೆಚ್ಚಿನ ವಿದ್ಯುತ್‌ ಉತ್ಪಾದನೆಯ (Power Generation) ತೀವ್ರ ಒತ್ತಡ ಎದುರಾಗಿದೆ.

ಈ ಎಲ್ಲ ಕಾರಣಗಳೇ ಈಗ ರಾಜ್ಯದಲ್ಲಿ ಲೋಡ್‌ ಶೆಡ್ಡಿಂಗ್‌ ಭೀತಿಯನ್ನು ಹುಟ್ಟುಹಾಕಿದೆ. ಈ ಮಧ್ಯೆ ರಾಯಚೂರು ಜಿಲ್ಲೆಯಲ್ಲಿರುವ ಆರ್‌ಟಿಪಿಎಸ್ (Raichur RTPS) ವಿದ್ಯುತ್ ಸ್ಥಾವರಗಳ (RTPS Power Plant) 4 ಯುನಿಟ್‌ಗಳು ಏಕಾಏಕಿ ಬಂದ್ ಆಗಿವೆ. ಇದು ರಾಯಚೂರಿನಲ್ಲಿ ಇರುವ ವಿದ್ಯುತ್ ಉತ್ಪಾದನಾ ಘಟಕವಾಗಿದೆ. ಇಲ್ಲಿ ಒಟ್ಟು 8 ಯುನಿಟ್‌ಗಳು ಇದ್ದು, ಅವುಗಳಲ್ಲಿ 4 ಯುನಿಟ್‌ಗಳು ಬಂದ್ ಆಗುವ ಮೂಲಕ ಕಳವಳವನ್ನು ಸೃಷ್ಟಿಸಿವೆ.

ಇದನ್ನೂ ಓದಿ: Nitin Gadkari : ನಿತಿನ್‌ ಗಡ್ಕರಿಗೆ ಜೀವ ಬೆದರಿಕೆ ಹಾಕಿದವನಿಗೆ ಉಗ್ರನ ಪ್ರಚೋದನೆ?

ತಾಂತ್ರಿಕ ದೋಷ

ತಾಂತ್ರಿಕ ದೋಷದ (Technical issue) ಹಿನ್ನೆಲೆಯಲ್ಲಿ 2ನೇ ಯುನಿಟ್ ಹಾಗೂ 3ನೇ ಯುನಿಟ್ ಬಂದ್ ಆಗಿದೆ. ಈ ಮಧ್ಯದಲ್ಲಿ ಕಲ್ಲಿದ್ದಲು ಪೂರೈಸುವ ಬಂಕರ್ ಕುಸಿದ ಪರಿಣಾಮ ಒಂದನೇ ಯುನಿಟ್ ಸಂಪೂರ್ಣವಾಗಿ ಬಂದ್ ಆಗಿತ್ತು. ಹೀಗಾಗಿ ಕೇವಲ 4 ಯುನಿಟ್‌ಗಳಿಂದ ವಿದ್ಯುತ್ ಉತ್ಪಾದನೆಯನ್ನು ಮಾಡಲಾಗುತ್ತಿದೆ.

Karnataka Electricity load shedding

ರಾಜ್ಯದ ಒಟ್ಟು ವಿದ್ಯುತ್ ಬೇಡಿಕೆ ಸುಮಾರು 12000 ಮೆಗಾ ವ್ಯಾಟ್ ವಿದ್ಯುತ್ ಆಗಿದೆ. ಆ ಪೈಕಿ ಬಹುಪಾಲು ವಿದ್ಯುತ್ ಅನ್ನು ಆರ್‌ಟಿಪಿಎಸ್ ಘಟಕವು ಪೂರೈಸುತ್ತಿತ್ತು. ಆರ್‌ಟಿಪಿಎಸ್‌ನಿಂದ ಒಟ್ಟು 1720 ಮೆಗಾ ವ್ಯಾಟ್ ವಿದ್ಯುತ್ ಅನ್ನು ಪೂರೈಸಲಾಗುತ್ತಿತ್ತು. ಈಗ ಯುನಿಟ್‌ಗಳು ಬಂದ್ ಆಗಿರುವ ಹಿನ್ನೆಲೆಯಲ್ಲಿ ಕೇವಲ‌ 400-500 ಮೆಗಾ ವ್ಯಾಟ್ ವಿದ್ಯುತ್ ಮಾತ್ರ ಉತ್ಪಾದನೆಯಾಗುತ್ತಿದೆ. ಯುನಿಟ್‌ಗಳ ದುರಸ್ತಿ ಕಾರ್ಯಕ್ಕೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಇದನ್ನೂ ಓದಿ: Indira Canteen : ಸಂಬಳ ನೀಡದ್ದಕ್ಕೆ ಇಂದಿರಾ ಕ್ಯಾಂಟೀನ್‌ಗೆ ಬೀಗ ಜಡಿದ ಸಿಬ್ಬಂದಿ!

ಕತ್ತಲೆಯಲ್ಲಿ ರಾಜ್ಯ?

ಪರಿಸ್ಥಿತಿ ಹೀಗೇ ಮುಂದುವರಿದರೆ ರಾಜ್ಯದಲ್ಲಿ ಬೇಡಿಕೆಗೆ ತಕ್ಕಂತೆ ವಿದ್ಯುತ್‌ ಉತ್ಪಾದನೆಯಾಗದೇ ರಾಜ್ಯವು ಬಹುಪಾಲು ಕತ್ತಲೆಯಲ್ಲಿ ಕಳೆಯುವ ಪರಿಸ್ಥಿತಿ ಎದುರಾಗಬಹುದು ಎಂದು ಅಂದಾಜಿಸಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ಸರ್ಕಾರಿ ನೌಕರರಿಗೆ ನಿರಾಸೆ; ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗದ ಬಗ್ಗೆ ಯಾವುದೇ ನಿರ್ಣಯ ಇಲ್ಲ!

ಸಿದ್ದರಾಮಯ್ಯ ಅವರ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಹಲವು ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಸಂಪುಟ ಸಭೆಯ ಬಳಿಕ ಕಾನೂನು, ನ್ಯಾಯ, ಮಾನವಹಕ್ಕುಗಳು, ಸಂಸದೀಯ ವ್ಯವಹಾರ ಮತ್ತು ಶಾಸನರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ ಅವರು ಸುದ್ದಿಗೋಷ್ಠಿ ನಡೆಸಿ, ಸಂಪುಟ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ತೀರ್ಮಾನಗಳ ಕುರಿತು ಮಾಹಿತಿ ನೀಡಿದರು. ಸಂಪುಟ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ತೀರ್ಮಾನಗಳ ಮುಖ್ಯಾಂಶಗಳು ಇಲ್ಲಿವೆ.

VISTARANEWS.COM


on

Siddaramaiah
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ನೇತೃತ್ವದಲ್ಲಿ ಗುರುವಾರ (ಜೂನ್‌ 13) ರಾಜ್ಯ ಸಚಿವ ಸಂಪುಟ ಸಭೆ ನಡೆದಿದ್ದು, ಸರ್ಕಾರಿ ನೌಕರರಿಗೆ ಮತ್ತೆ ನಿರಾಸೆಯಾಗಿದೆ. ರಾಜ್ಯದಲ್ಲಿ ಏಳನೇ ವೇತನ ಆಯೋಗದ (7th Pay Commission) ಜಾರಿ ಕುರಿತು ಸಚಿವ ಸಂಪುಟ ಸಭೆಯಲ್ಲಿ (Karnataka Cabinet Meeting) ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ. ಇದರಿಂದಾಗಿ, ಏಳನೇ ವೇತನ ಆಯೋಗದ ಜಾರಿ ಕುರಿತು ಭಾರಿ ನಿರೀಕ್ಷೆಯಲ್ಲಿದ್ದ ನೌಕರರಿಗೆ ಇದರಿಂದ ನಿರಾಸೆಯಾದಂತಾಗಿದೆ.

ಸಿದ್ದರಾಮಯ್ಯ ಅವರ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಹಲವು ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಸಂಪುಟ ಸಭೆಯ ಬಳಿಕ ಕಾನೂನು, ನ್ಯಾಯ, ಮಾನವಹಕ್ಕುಗಳು, ಸಂಸದೀಯ ವ್ಯವಹಾರ ಮತ್ತು ಶಾಸನರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ ಅವರು ಸುದ್ದಿಗೋಷ್ಠಿ ನಡೆಸಿ, ಸಂಪುಟ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ತೀರ್ಮಾನಗಳ ಕುರಿತು ಮಾಹಿತಿ ನೀಡಿದರು. ಸಂಪುಟ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ತೀರ್ಮಾನಗಳ ಮುಖ್ಯಾಂಶಗಳು ಇಲ್ಲಿವೆ.

Reservation in outsourcing

ಸಂಪುಟ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳು

  • ಕಳೆದ ಸಚಿವ ಸಂಪುಟ ಸಭೆಯಲ್ಲಿ 147 ಟೆಂಡರ್‌ಗಳಿಗೆ ಟೆಂಡರ್ ಕರೆಯಲು ನೀಡಿರುವ ಆಡಳಿತಾತ್ಮಕ ಮಂಜೂರಾತಿಯ ಪೈಕಿ ಎಷ್ಟು ಟೆಂಡರ್ ಕರೆದು ಕೆಲಸ ಪ್ರಾರಂಭವಾಗಿದೆ ಎಂದು ಅವಲೋಕಿಸಿ, 94 ಪ್ರಸ್ತಾವಗಳಿಗೆ ಟೆಂಡರ್‌ಗಳನ್ನು ಆಹ್ವಾನಿಸಲಾಗಿದೆ. 19 ಪ್ರಸ್ತಾವನೆಗಳು ಪರಿಶೀಲನೆಯಲ್ಲಿದ್ದು, 18 ಪ್ರಸ್ತಾವನೆಗಳಿಗೆ ಕಾರ್ಯಾದೇಶ ನೀಡಲಾಗಿದೆ. 7 ಕಾಮಗಾರಿಗಳು ಮುಕ್ತಾಯವಾಗಿವೆ. 53 ಪ್ರಸ್ತಾವನೆಗಳು ಟೆಂಡರ್ ಕರೆಯಲು ಬಾಕಿ ಇವೆ. ಸಚಿವ ಸಂಪುಟ ಇವುಗಳ ಬಗ್ಗೆ ಗಂಭೀರವಾಗಿ ಪರಿಗಣಿಸಿ, ಆಡಾಳಿತಾತ್ಮಕ ಮಂಜೂರಾತಿ ನೀಡಿರುವ ಎಲ್ಲ ಟೆಂಡರ್‌ಗಳಿಗೆ ಮುಂದಿನ ಒಂದು ತಿಂಗಳೊಳಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
  • ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಡಿ 2025 ಫೆಬ್ರವರಿ 12-14ರವರೆಗೆ ಇನ್ವೆಸ್ಟ್ ಕರ್ನಾಟಕ -2025 ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲು ಸಚಿವ ಸಂಪುಟ ಅನುಮೋದಿಸಿದೆ. ಈಗಾಗಲೇ 75 ಕೋಟಿ ರೂ.ಗಳನ್ನು ಒದಗಿಸಲಾಗಿದ್ದು, ಹೆಚ್ಚುವರಿ 15 ಕೋಟಿ ರೂ.ಗಳನ್ನು ಒದಗಿಸಲು ಸಚಿವ ಸಂಪುಟ ಒಪ್ಪಿದೆ.
  • ಕಾರ್ಮಿಕ ಇಲಾಖೆಯಲ್ಲಿ ಇಎಸ್‍ಐ ನಲ್ಲಿ ಗುತ್ತಿಗೆ ವೈದ್ಯರ ವಿಲೀನ ಮಾಡುವ ಬಗ್ಗೆ ಚರ್ಚೆಯಾಗಿ ಮುಂದೂಡಲಾಗಿದೆ. ಕಾನೂನು ಸಲಹೆ ಪಡೆಯಲು ಸೂಚಿಸಲಾಗಿದೆ.
  • ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ 12 ಕೋಟಿ ರೂ. ವೆಚ್ಚದಲ್ಲಿ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ.
  • ಸಾರಿಗೆ ಇಲಾಖೆಯಲ್ಲಿ ಕರ್ನಾಟಕ ಸಾರಿಗೆ ರಸ್ತೆ ಸಾರಿಗೆ ನಿಗಮ ಮತ್ತು ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಗಳಿಗೆ ಹೊಸದಾಗಿ 112 ಪೂರ್ಣ ಕವಚ ನಿರ್ಮಿತ ಬಿಎಸ್. 4 ವೇಗದೂತ ಬಸ್ಸುಗಳನ್ನು 46.48 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಖರೀದಿ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲು ಪ್ರಸ್ತಾವನೆಯನ್ನು ಸಚಿವ ಸಂಪುಟ ಒಪ್ಪಿದೆ. 62 ಹೊಸ ಬಸ್ಸುಗಳನ್ನು ಖರೀದಿಸಲು ಹಾಗೂ 50 ಬಸ್ಸುಗಳನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ ವರ್ಗಾಯಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
  • ಗಣಿಗುತ್ತಿಗೆ ಅವಧಿ ಮುಕ್ತಾಯಗೊಂಡಿರುವ ಮೆ: ಭಾರತ್ ಚಿನ್ನದ ಗಣಿ ಸಂಸ್ಥೆ, ಕೆ.ಜಿಎಫ್ ಅವರು ಪಡೆದಿರುವ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಲಭ್ಯವಿರುವ ಟೇಲಿಂಗ್ ಡಂಪ್ಸ್ ಗಳಿಗೆ ಎಂ.ಎಂ.ಡಿ.ಆರ್ ಕಾಯ್ದೆಯ ಕಲಂ 17 ರನ್ವಯ ಕೇಂದ್ರ ಸರ್ಕಾರದಿಂದ ಗಣಿ ಚಟುವಟಿಕೆಗಳನ್ನು ಕೈಗೊಳ್ಳಲು ಪ್ರಸ್ತಾವನೆ ಇದ್ದು, ಹೆಚ್ಚಿನ ತಾಂತ್ರಿಕ ವಿವರಗಳು ಅಗತ್ಯವಿರುವುದರಿಂದ ಇದನ್ನು ಮುಂದಿನ ವಾರಕ್ಕೆ ಮುಂದೂಡಲಾಗಿದೆ.
  • ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಆಕರ್ಷಣೆಗಾಗಿ Knowledge Partner ಆಯ್ಕೆ ಮಾಡಲು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಇ-ಟೆಂಡರ್ ಕರೆದಿದ್ದು ಟೆಂಡರ್ ಪ್ರಕಾರ ಈಗಾಗಲೇ ಮೆ: ಬಾಸ್ಟನ್ ಕನ್ಸಲ್ಟಿಂಗ್ ಗ್ರೂಪ್ ಇಂಡಿಯಾ ಪ್ರೈ ಲಿ., ಇವರನ್ನು ಜಿಎಸ್‍ಟಿ ಒಳಗೊಂಡಂತೆ 21 ಕೋಟಿ ರೂ. ವೆಚ್ಚದಲ್ಲಿ Knowledge Partner ಆಗಿ ನೇಮಕ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
  • ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯಡಿ ರಾಜ್ಯದಲ್ಲಿ ಕಾನೂನು ಮತ್ತು ನೀತಿಗೆ ಅನುಮೋದನೆ ನೀಡುವ ಬಗ್ಗೆ ಎರಡು ಮೂರು ವಿಚಾರಗಳಲ್ಲಿ ಬದಲಾವಣೆ ಅಗತ್ಯವನ್ನು ಮನಗಂಡು ಮುಂದೂಡಲಾಗಿದೆ.
  • ಏಳನೇ ವೇತನ ಆಯೋಗದ ಬಗ್ಗೆ ಅಧಿಕೃತ ಪ್ರಸ್ತಾವನೆ ಬಂದಿದ್ದು ಈ ಬಗ್ಗೆ ಯಾವುದೇ ನಿರ್ಣಯಗಳಾಗಿಲ್ಲ.
  • ರಾಜ್ಯದ ಆಡಳಿತವನ್ನು ಹೆಚ್ಚು ಬಿಗಿಯಾಗಿ, ಪರಿಣಾಮಕಾರಿಯಾಗಿ, ಜನಸ್ನೇಹಿಯಾಗಿ ಮಾಡಬೇಕು, ವಿಳಂಬ ಆಗದ ಹಾಗೇ ಕೆಲಸಗಳಾಗಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರು, ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ಹಾಗೂ ಮಾರ್ಗದರ್ಶನ ನೀಡಿದ್ದಾರೆ.

ಇದನ್ನೂ ಓದಿ: Modi 3.0 Cabinet: ಮೊದಲ ಸಂಪುಟ ಸಭೆಯಲ್ಲೇ ಮೋದಿ ಸಿಕ್ಸರ್;‌ ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಸ್ತು

Continue Reading

ಕರ್ನಾಟಕ

Actor Darshan: ಅಪ್ಪನನ್ನು ಬೈದಿದ್ದಕ್ಕೆ ಥ್ಯಾಂಕ್ಸ್‌ ಎಂದ ದರ್ಶನ್‌ ಪುತ್ರ ವಿನೀಶ್;‌ ಪೋಸ್ಟ್‌ನಲ್ಲಿ ಇನ್ನೇನಿದೆ?

Actor Darshan: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆಯ ಪ್ರಕರಣದಲ್ಲಿ ದರ್ಶನ್‌ ಸೇರಿ ಹಲವರನ್ನು ಬಂಧಿಸಲಾಗಿದ್ದು, ಪೊಲೀಸರು ನಿರಂತರವಾಗಿ ತನಿಖೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ, ದರ್ಶನ್‌ ಅವರ ಪುತ್ರ ವಿನೀಶ್‌ ತೂಗುದೀಪ ಬೇಸರದ ಪೋಸ್ಟ್‌ ಹಂಚಿಕೊಂಡಿದ್ದಾನೆ. ನನ್ನ ತಂದೆ ಹಾಗೂ ತಾಯಿಗೆ ಇಂತಹ ಕಷ್ಟದ ಸಮಯದಲ್ಲಿ ಬೆಂಬಲದ ಅವಶ್ಯಕತೆ ಇದೆ ಎಂದು ಹೇಳಿದ್ದಾನೆ.

VISTARANEWS.COM


on

Actor Darshan
Koo

ಬೆಂಗಳೂರು: ಗೆಳತಿ ಪವಿತ್ರಾ ಗೌಡ (Pavithra Gowda) ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ರೇಣುಕಾಚಾರ್ಯ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ (Actor Darshan), ಪವಿತ್ರಾ ಗೌಡ ಸೇರಿ ಹಲವರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ಚುರುಕುಗೊಳಿಸಿದ್ದಾರೆ. ರಾಜ್ಯಾದ್ಯಂತ ನಟ ದರ್ಶನ್‌ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರತಿಭಟನೆಗಳು ನಡೆಯುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ನಟನ ವಿರುದ್ಧ ಜನ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಇದರ ಮಧ್ಯೆಯೇ, ದರ್ಶನ್‌ ಪುತ್ರ ವಿನೀಶ್‌ ತೂಗುದೀಪ (Vineesh Thoogudeepa) ಭಾವನಾತ್ಮಕ ಪೋಸ್ಟ್‌ ಮಾಡಿದ್ದಾನೆ. “ನನ್ನ ತಂದೆಯನ್ನು ಕೆಟ್ಟ ಪದಗಳಿಂದ ನಿಂದಿಸಿದ ನಿಮಗೆಲ್ಲ ಧನ್ಯವಾದʼ ಎಂಬ ಬೇಸರದ ಪೋಸ್ಟ್‌ಅನ್ನು ವಿನೀಶ್‌ ಹಂಚಿಕೊಂಡಿದ್ದಾನೆ.

“ನನ್ನ ತಂದೆಯ ಬಗ್ಗೆ ಕೆಟ್ಟ ಕಮೆಂಟ್‌ಗಳನ್ನು ಮಾಡಿ, ಅಶ್ಲೀಲ ಭಾಷೆಯಲ್ಲಿ ನಿಂದಿಸಿದ್ದಕ್ಕೆ ನಿಮಗೆಲ್ಲ ಧನ್ಯವಾದಗಳು. ನಾನು 15 ವರ್ಷದ ಬಾಲಕ, ನನಗೂ ಭಾವನೆಗಳಿವೆ ಎಂಬುದನ್ನು ನೀವು ಪರಿಗಣಿಸಲೇ ಇಲ್ಲ. ಇಂತಹ ಕೆಟ್ಟ ಸಮಯದಲ್ಲಿ ನನ್ನ ತಾಯಿ ಹಾಗೂ ತಂದೆಗೆ ನಿಮ್ಮ ಬೆಂಬಲದ ಅಗತ್ಯವಿದೆ. ನೀವು ನನಗೆ ಶಾಪ ಹಾಕುವುದರಿಂದ ಯಾವುದೇ ಬದಲಾವಣೆ ಆಗುವುದಿಲ್ಲ” ಎಂದು ತಂದೆಯ ಬಂಧನ, ಜನರ ಆಕ್ರೋಶ, ಕೆಟ್ಟ ಕಮೆಂಟ್‌ಗಳ ಬಗ್ಗೆ ವಿನೀಶ್‌ ತೂಗುದೀಪ ಬೇಸರದ ಪೋಸ್ಟ್‌ ಮಾಡಿದ್ದಾನೆ.

ರೇಣುಕಾಸ್ವಾಮಿಯನ್ನ ಚಿತ್ರದುರ್ಗದಲ್ಲಿ ಜೂನ್‌ 8ರಂದು ಬೆಳಗ್ಗೆ 11 ಗಂಟೆಗೆ ರಾಘವೇಂದ್ರ, ನಂದೀಶ್ ಹಾಗೂ ಮತ್ತಿಬ್ಬರು ಕಿಡ್ನಾಪ್ ಮಾಡಿದ್ದರು. ನಂತರ ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಪಟ್ಟಣಗೆರೆ ಶೆಡ್‌ಗೆ ಕರೆದುಕೊಂಡು ಬಂದಿದ್ದರು. ಶೆಡ್‌ನಲ್ಲಿ ಪವನ್, ಕಾರ್ತಿಕ್, ಪ್ರದೋಶ್‌ ಸೇರಿ ಹಲ್ಲೆ ಮಾಡಿದ್ದರು. ರೇಣುಕಾಸ್ವಾಮಿಯ ಕಾಲನ್ನು ಅಗಲಿಸಿ ಮರ್ಮಾಂಗದ ಮೇಲೆ ಹಲ್ಲೆ ಮಾಡಲಾಗಿತ್ತು. ಮೊದಲು ನಾಲ್ಕು ಜನ ಹಲ್ಲೆ ನಡೆಸಿದಾಗಲೇ ರೇಣುಕಾಸ್ವಾಮಿ ಸ್ಥಿತಿ ಗಂಭೀರವಾಗಿತ್ತು. ಬಳಿಕ ಉಳಿದ ಆರೋಪಿಗಳು ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ.

ಕೊನೆಗೆ ನಟ ದರ್ಶನ್‌ ಸಹ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ತೀವ್ರ ರಕ್ತಸ್ರಾವವಾಗಿ ಸಂಜೆ 6.30ರ ಸುಮಾರಿಗೆ ರೇಣುಕಾಸ್ವಾಮಿ ಕೊನೆಯುಸಿರೆಳೆದಿದ್ದ. ಅದಾದ ಮೇಲೆ ರಾತ್ರಿ ಒಂದು ಗಂಟೆವರೆಗೆ ಮೃತದೇಹದೊಂದಿಗೆ ಹಂತಕರು ಇದ್ದರು. ಬಳಿಕ ದರ್ಶನ್‌ಗೆ ರಾಘವೇಂದ್ರ ಹಾಗೂ ವಿನಯ್ ಮಾಹಿತಿ ನೀಡಿದ್ದರು. ಬಳಿಕ ಶವ ಬಿಸಾಡುವುದರ ಬಗ್ಗೆ ಡೀಲ್ ನಡೆದಿದೆ. ನಂತರ ಜೂನ್‌ 9ರಂದು ಬೆಳಗ್ಗೆ ಸುಮನಹಳ್ಳಿ ರಾಜಕಾಲುವೆ ಬಳಿ ರೇಣುಕಾಸ್ವಾಮಿ ಶವ ಪತ್ತೆಯಾಗಿತ್ತು. ರೇಣುಕಾಸ್ವಾಮಿಗೆ ಒದ್ದಿರುವುದು ನಿಜ ಎಂಬುದಾಗಿ ವಿಚಾರಣೆ ವೇಳೆ ದರ್ಶನ್‌ ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Actor Darshan: ʻಡೆವಿಲ್ʼ ಸಿನಿಮಾಗೆ ದರ್ಶನ್‌ ಪಡೆದಿದ್ದು ಬರೋಬ್ಬರಿ 22 ಕೋಟಿ ರೂ.; ಶಾಕ್‌ನಲ್ಲಿ ನಿರ್ಮಾಪಕ!

Continue Reading

ಬೆಂಗಳೂರು

R Ashok: ರಾಜ್ಯದಲ್ಲಿರುವುದು ತಾಲಿಬಾನ್‌ ಸರ್ಕಾರ; ಆರ್. ಅಶೋಕ್‌ ಆರೋಪ

R Ashok: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಜನರು ಬುದ್ಧಿ ಕಲಿಸಿದ್ದಾರೆ. ಅದೇ ರೀತಿ ಮತ್ತೆ ಬುದ್ಧಿ ಕಲಿಸಲು ಬಿಜೆಪಿಯಿಂದ ದೊಡ್ಡ ಹೋರಾಟ ಮಾಡಲಾಗುವುದು. ಮತಕ್ಕಾಗಿ ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲಾಗುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ದೂರಿದ್ದಾರೆ

VISTARANEWS.COM


on

There is a Taliban government in the state Opposition party leader R Ashok alleges
Koo

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ (Congress Government) ತಾಲಿಬಾನ್‌ ಸರ್ಕಾರವಾಗಿ ಬದಲಾಗಿದ್ದು, ಹಿಂದೂಗಳಿಗೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ. ಇದರ ವಿರುದ್ಧ ಬಿಜೆಪಿ (BJP) ಹೋರಾಟ ನಡೆಸಿ ಬುದ್ಧಿ ಕಲಿಸಲಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ (R Ashok) ಎಚ್ಚರಿಕೆ ನೀಡಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಟಿಪ್ಪು ದೆವ್ವ‌ ಹಿಡಿದಿದೆ. ಇದಕ್ಕಾಗಿಯೇ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಯಾದರೂ ಕಾಂಗ್ರೆಸ್‌ ಸರ್ಕಾರ, ಕಾರ್ಯಕರ್ತರ ವಿರುದ್ಧವೇ ಪ್ರಕರಣ ದಾಖಲಿಸಿದೆ. ಪಾಕಿಸ್ತಾನದ ಕುನ್ನಿಗಳು ಎಂದು ಹೇಳಿದ್ದಾಗಿ ಪೊಲೀಸರು ಹೇಳಿದ್ದಾರೆ. ಆದರೆ ಇದಕ್ಕೆ ಯಾವುದೇ ದಾಖಲೆ ಇಲ್ಲ.‌ ಬಿಜೆಪಿ ಕಾರ್ಯಕರ್ತರು ಭಾರತ್‌ ಮಾತಾ ಕೀ ಜೈ ಎಂದಿದ್ದರು. ಆದರೂ ಮುಸ್ಲಿಮರನ್ನು ರಕ್ಷಣೆ ಮಾಡಿ ಹಿಂದೂಗಳಿಗೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: Road Accident : ಪ್ರತ್ಯೇಕ 5 ಕಡೆಗಳಲ್ಲಿ ಆ್ಯಕ್ಸಿಡೆಂಟ್‌; ಕಾರು ಡಿಕ್ಕಿಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಸವಾರ ಸಾವು

ಸಮರ್ಪಕ ತನಿಖೆ ನಡೆಯಲಿ

ಚಿತ್ರನಟ ದರ್ಶನ್‌ ಪೊಲೀಸರಿಗೆ ದೂರು ನೀಡಿ, ರೇಣುಕಾಸ್ವಾಮಿಗೆ ತಿಳಿ ಹೇಳಿಸಬಹುದಿತ್ತು. ಅದು ಬಿಟ್ಟು ಕಾನೂನು ಕೈಗೆ ತೆಗೆದುಕೊಂಡು ಕೊಂದಿದ್ದರೆ ಅದು ದೊಡ್ಡ ತಪ್ಪು. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಈ ಘಟನೆಯನ್ನು ನಾನು ಖಂಡಿಸುತ್ತೇನೆ. ಹಾಗೆಯೇ ಪೊಲೀಸರು ಸೂಕ್ತವಾಗಿ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ ಎಂದರು.

ರಾಜ್ಯದಲ್ಲಿ ಅಪರಾಧಿ ಚಟುವಟಿಕೆ ಹೆಚ್ಚಿದೆ. ಚನ್ನಗಿರಿಯಲ್ಲಿ ಪೊಲೀಸ್‌ ಠಾಣೆಗೆ ಬೆಂಕಿ ಹಾಕಲಾಗಿದೆ. ಪೊಲೀಸರಿಗೆ ಕಪಾಳ ಮೋಕ್ಷವಾಗಿದೆ. ಕಾನೂನು ಪೊಲೀಸರ ಹಿಡಿತದಲ್ಲೇ ಇಲ್ಲ. ಆದ್ದರಿಂದ ಪೊಲೀಸ್‌ ಠಾಣೆಗೆ ಶಾಮಿಯಾನ ಹಾಕಿ ಮುಚ್ಚುಮರೆ ಮಾಡುತ್ತಿದ್ದಾರೆ. ನಾವು ಕರ್ನಾಟಕದಲ್ಲಿದ್ದೇವೆಯೇ ಹೊರತು ಜಮ್ಮು ಕಾಶ್ಮೀರದಲ್ಲಿಲ್ಲ. ಇದನ್ನು ಟಿವಿ ಮಾಧ್ಯಮಗಳು ಚಿತ್ರೀಕರಣ ಮಾಡದಂತೆ ಕ್ರಮ ವಹಿಸುವುದು ಸರಿಯಲ್ಲ ಎಂದು ತಿಳಿಸಿದರು.

ಚಲನಚಿತ್ರ ವಾಣಿಜ್ಯ ಮಂಡಳಿಯವರು ಕೂಡ ಈ ಕುರಿತು ನಿರ್ಧಾರ ತೆಗೆದುಕೊಳ್ಳಬೇಕು. ತನಿಖೆ ಸರಿಯಾಗಿ ನಡೆದು ಸತ್ಯಾಂಶ ಹೊರಬರಲಿ. ಈ ಪ್ರಕರಣದಲ್ಲಿ ಮೃತನಾದ ವ್ಯಕ್ತಿ ಯಾವುದೇ ಅಪರಾಧಿ ಹಿನ್ನೆಲೆ ಹೊಂದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಎಷ್ಟೋ ಸಂದೇಶಗಳು ಬರುತ್ತವೆ. ಅದಕ್ಕಾಗಿ ಕೊಲೆ ಮಾಡಲು ಹೋಗಬಾರದು. ಇಂತಹ ಕ್ಷುಲ್ಲಕ ವಿಚಾರಕ್ಕೆ ಕೊಲೆ ಮಾಡಿರುವುದು ಇಡೀ ಚಿತ್ರೋದ್ಯಮಕ್ಕೆ ಕಳಂಕವಾಗಿದೆ. ಸರ್ಕಾರ ಮಾನವೀಯತೆ ದೃಷ್ಟಿಯಿಂದ ಮೃತ ವ್ಯಕ್ತಿಯ ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕು ಎಂದರು.

ಇದನ್ನೂ ಓದಿ: Stock Market: ಷೇರುಪೇಟೆಯಲ್ಲಿ ಗೂಳಿ ಗುಟುರು; ಸೆನ್ಸೆಕ್ಸ್‌, ನಿಫ್ಟಿ ಏರಿಕೆ

ಮಕ್ಕಳಿಗೆ ಪುಸ್ತಕ ಇಲ್ಲ

ಶಿಕ್ಷಣ ಇಲಾಖೆ ಪಠ್ಯಪುಸ್ತಕಗಳನ್ನು ಸರಿಯಾದ ಸಮಯಕ್ಕೆ ಕೊಡದೆ ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ಗೊಂದಲದಲ್ಲಿಟ್ಟಿದೆ. ಸರ್ಕಾರಿ ಶಾಲೆಗೆ ಮಕ್ಕಳು ಬರುವುದೇ ಕಡಿಮೆಯಾಗಿರುವಾಗ ಇಂತಹ ಸಮಸ್ಯೆ ಉಂಟಾಗಿದೆ. ಒಂದು ಕಡೆ ಗ್ಯಾರಂಟಿಗಳನ್ನು ನೀಡಿ, ಮತ್ತೊಂದು ಕಡೆ ಪುಸ್ತಕಗಳನ್ನು ನೀಡಿಲ್ಲ. ಸರ್ಕಾರಿ ಖಜಾನೆ ಖಾಲಿಯಾಗಿದ್ದು, ಕಸಕ್ಕೂ ತೆರಿಗೆ ಹಾಕಲು ಮುಂದಾಗಿದ್ದಾರೆ. ಕರ್ನಾಟಕ ಮಾಡಲ್‌ ಯಾವುದು ಎಂದು ತಿಳಿಯಲು ಆರ್ಥಿಕ ಇಲಾಖೆಯ ಒಂದು ವರ್ಷದ ಪ್ರಗತಿ ಕಾರ್ಡ್‌ ಬಿಡುಗಡೆಗೊಳಿಸಲಿ ಎಂದು ಆಗ್ರಹಿಸಿದರು.

ಬರ ಪರಿಹಾರ ನೀಡಿಲ್ಲ

ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಟೀಕೆ ಮಾಡಿದರೆ ಅಜ್ಞಾನ ಪ್ರದರ್ಶನ ಮಾಡುತ್ತಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಾರೆ. ಆದರೆ ನವಲಗುಂದ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಎನ್‌.ಎಚ್‌.ಕೋನರೆಡ್ಡಿ ಅವರು ತಮ್ಮ ಕ್ಷೇತ್ರದಲ್ಲಿ ಇನ್ನೂ ಕೆಲವು ರೈತರಿಗೆ ಪರಿಹಾರ ವಿತರಣೆ ಮಾಡಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ ಎಂದು ಆರ್‌.ಅಶೋಕ್‌ ದೂರಿದರು.

ರೈತರಿಗೆ ತಲುಪಬೇಕಾದ ಪರಿಹಾರದ ಹಣ ಇನ್ನೂ ತಲುಪಿಲ್ಲ ಎಂದು ಸ್ವತಃ ಕಾಂಗ್ರೆಸ್‌ ಶಾಸಕರೇ ಪತ್ರ ಬರೆದು ರಾಜ್ಯ ಸರ್ಕಾರದ ಬಂಡವಾಳ ಬಯಲು ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 3,454 ಕೋಟಿ ರೂ. ಬರ ಪರಿಹಾರವನ್ನು ನೀಡಿದೆ. ಅದನ್ನು ರೈತರಿಗೆ ವಿತರಣೆ ಮಾಡಿ ಎಂದರೂ ಸಿಎಂ ಸಿದ್ದರಾಮಯ್ಯನವರ ಕೈಯಲ್ಲಿ ಆಗುತ್ತಿಲ್ಲ. ಬರ ಪರಿಹಾರ ರೈತರ ಕೈ ಸೇರುವಂತೆ ನೋಡಿಕೊಳ್ಳಲು ಆಗದಿದ್ದರೆ ಮುಖ್ಯಮಂತ್ರಿಯವರು ರಾಜೀನಾಮೆ ಕೊಡಲಿ, ರೈತರ ಬದುಕಿನ ಜತೆ ಚೆಲ್ಲಾಟವಾಡುವುದು ಬೇಡ ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ಬೆಲೆ; ಇಂದಿನ ದರ ಚೆಕ್‌ ಮಾಡಿ

ನನಗೆ ನಿಯಮ ಪ್ರಕಾರ ಸರ್ಕಾರಿ ನಿವಾಸ ನೀಡಲು ಸರ್ಕಾರ ಬಹಳ ತಡ ಮಾಡುತ್ತಿದೆ. ನಾನು ಡಿ.ಕೆ.ಶಿವಕುಮಾರ್‌ ಅವರ ಮನೆ ಕೇಳುತ್ತಿಲ್ಲ. ನಮ್ಮ ಸರ್ಕಾರ ಇದ್ದಾಗ ಕಾಂಗ್ರೆಸ್‌ ಜತೆಗೆ ಮಾದರಿಯಾಗಿ ನಡೆದುಕೊಂಡಿತ್ತು. ಅದೇ ರೀತಿ ಈಗಲೂ ಸರ್ಕಾರ ನಡೆದುಕೊಳ್ಳಬೇಕು. ಈ ಬಗ್ಗೆ ಮೂರು ಪತ್ರ ಬರೆದರೂ ಸ್ಪಂದಿಸಿಲ್ಲ. ನಿವಾಸ ಕೊಡದಿದ್ದರೂ ಜನಸೇವೆ ಮಾಡುವ ಶಕ್ತಿ ಇದೆ ಎಂದು ತಿಳಿಸಿದರು.

Continue Reading

ಬೆಂಗಳೂರು

SSLC Examination 2 : 700ಕ್ಕೂ ಹೆಚ್ಚು ಕೇಂದ್ರಗಳಲ್ಲಿ ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಶುರು

SSLC 2024 Exam 2: ರಾಜ್ಯಾದ್ಯಂತ 724 ಪರೀಕ್ಷಾ ಕೇಂದ್ರಗಳಲ್ಲಿ ಜೂ. 14ರಿಂದ 22ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ -2 ನಡೆಯಲಿದೆ. ಸುಮಾರು 2 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ (SSLC Examination 2) ನೋಂದಾಯಿಸಿಕೊಂಡಿದ್ದಾರೆ.

VISTARANEWS.COM


on

By

SSLC examination-2 to begin from tomorrow at over 700 centres
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: 2024ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ -2 (SSLC Examination 2) ಜೂನ್‌ 14 ರಿಂದ ಶುರುವಾಗಲಿದೆ. ಈ ಮೊದಲು ಜೂನ್‌ 7ಕ್ಕೆ ನಡೆಸಲು ಯೋಜಿಸಲಾಗಿತ್ತು. ಬಳಿಕ ಜೂನ್‌ 14 ರಿಂದ 22ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧ್ಯಕ್ಷೆ ಎನ್‌.ಮಂಜುಶ್ರೀ ಸುತ್ತೋಲೆ ಹೊರಡಿಸಿದ್ದರು. ಅದರಂತೆ 2024ನೇ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷೆ-2 (SSLC 2024 Exam 2) ಶುಕ್ರವಾರದಿಂದ ನಡೆಯಲಿದ್ದು, ಸುಮಾರು 2,23,308 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 1,44,160 ಬಾಲಕರು ಹಾಗೂ 79,148 ಬಾಲಕಿಯರು ಇದ್ದಾರೆ. ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳಲ್ಲಿ 724 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.

ಇನ್ನೂ ಒಟ್ಟು ನೋಂದಣಿಯಲ್ಲಿ ಫಲಿತಾಂಶ ವೃದ್ಧಿಗೆ 13,085 ವಿದ್ಯಾರ್ಥಿಗಳು ಪರೀಕ್ಷೆಯನ್ನು ತೆಗೆದುಕೊಂಡಿದ್ದಾರೆ. ವಿದ್ಯಾರ್ಥಿಗಳು ಏಳು ಮಾಧ್ಯಮದಲ್ಲಿ ಪರೀಕ್ಷೆಯನ್ನು ಬರೆಯಬಹುದಾಗಿದೆ. ಪ್ರತಿ ಕೇಂದ್ರದಲ್ಲೂ ಸಿಸಿಟಿವಿಗಳ ಮೂಲಕ ಪರೀಕ್ಷಾ ಅವ್ಯವಹಾರಗಳ ಮೇಲೆ ನಿಗಾ ಇಡಲಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷ-2ರ ವೇಳಾಪಟ್ಟಿ ಹೀಗಿದೆ

ದಿನಾಂಕ- ವಿಷಯಗಳು

14-06-2024 ಶುಕ್ರವಾರ: ಪ್ರಥಮ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್(ಎನ್‌ಸಿಇಆರ್‌ಟಿ), ಸಂಸ್ಕೃತ.

15-06-2024 ಶನಿವಾರ: ತೃತೀಯ ಭಾಷೆ – ಹಿಂದಿ (ಎನ್‌ಸಿಇಆರ್‌ಟಿ), ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.

18-06-2024 ಮಂಗಳವಾರ: ಕೋರ್ ಸಬ್ಜೆಕ್ಟ್‌ -ಗಣಿತ, ಸಮಾಜ ಶಾಸ್ತ್ರ

19-06-2024 ಬುಧವಾರ: ಅರ್ಥ ಶಾಸ್ತ್ರ

20-06-2024 ಗುರುವಾರ: ಕೋರ್ ಸಬ್ಜೆಕ್ಟ್- ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ.

21-06-2024 ಶುಕ್ರವಾರ- ದ್ವಿತೀಯ ಭಾಷೆ – ಇಂಗ್ಲಿಷ್, ಕನ್ನಡ

22-06-2024 ಶನಿವಾರ – ಕೋರ್ ಸಬ್ಜೆಕ್ಟ್- ಸಮಾಜ ವಿಜ್ಞಾನ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Siddaramaiah
ಕರ್ನಾಟಕ10 mins ago

ಸರ್ಕಾರಿ ನೌಕರರಿಗೆ ನಿರಾಸೆ; ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗದ ಬಗ್ಗೆ ಯಾವುದೇ ನಿರ್ಣಯ ಇಲ್ಲ!

NEET UG Result 2024
ಶಿಕ್ಷಣ31 mins ago

NEET UG Result 2024: ಏನಿದು ನೀಟ್‌ ವಿವಾದ? ಗ್ರೇಸ್‌ ಅಂಕ ಕೊಟ್ಟಿದ್ಯಾಕೆ? ಮರು ಪರೀಕ್ಷೆ ಮಾಡೋದ್ಯಾಕೆ?

Actor Darshan
ಕರ್ನಾಟಕ38 mins ago

Actor Darshan: ಅಪ್ಪನನ್ನು ಬೈದಿದ್ದಕ್ಕೆ ಥ್ಯಾಂಕ್ಸ್‌ ಎಂದ ದರ್ಶನ್‌ ಪುತ್ರ ವಿನೀಶ್;‌ ಪೋಸ್ಟ್‌ನಲ್ಲಿ ಇನ್ನೇನಿದೆ?

Viral Video
ವೈರಲ್ ನ್ಯೂಸ್1 hour ago

Viral Video: ಮಗನಿಗೆ ಮುಸಲ್ಮಾನರ ಕ್ಯಾಪ್‌ ಹಾಕಿದ ನಟಿ; ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆ!

Donkey Population In Pak
ವಿದೇಶ1 hour ago

Donkey Population In Pak: ಹೆಚ್ಚುಹೆಚ್ಚು ಕತ್ತೆಗಳನ್ನು ಸಾಕಿ, ಆರ್ಥಿಕ ಬಿಕ್ಕಟ್ಟಿನಿಂದ ಪಾರಾಗಿ; ಪಾಕ್‌ಗೆ ಚೀನಾ ಸಲಹೆ!

Celebrity Fashion
ಫ್ಯಾಷನ್1 hour ago

Celebrity Fashion: ಬ್ಲೇಜರ್‌ನಲ್ಲಿ ನಟ ಸುದೀಪ್‌ ಪುತ್ರಿ ಸಾನ್ವಿ ಕ್ಲಾಸಿ ಲುಕ್‌!

There is a Taliban government in the state Opposition party leader R Ashok alleges
ಬೆಂಗಳೂರು2 hours ago

R Ashok: ರಾಜ್ಯದಲ್ಲಿರುವುದು ತಾಲಿಬಾನ್‌ ಸರ್ಕಾರ; ಆರ್. ಅಶೋಕ್‌ ಆರೋಪ

Hindu Girl Kidnaping
Latest2 hours ago

Hindu Girl Kidnaping: ಪಾಕ್‌ನಲ್ಲಿ ಹಿಂದೂ ಬಾಲಕಿಯ ಅಪಹರಿಸಿ ಇಸ್ಲಾಂಗೆ ಮತಾಂತರ, ಬಲವಂತದ ಮದುವೆ

Glasses or Lenses
ಆರೋಗ್ಯ2 hours ago

Glasses or Lenses?: ಕನ್ನಡಕವೋ ಕಾಂಟ್ಯಾಕ್ಟ್‌ ಲೆನ್ಸ್‌ ಬೇಕೋ? ಇದನ್ನು ಓದಿ, ನೀವೇ ನಿರ್ಧರಿಸಿ!

SSLC examination-2 to begin from tomorrow at over 700 centres
ಬೆಂಗಳೂರು2 hours ago

SSLC Examination 2 : 700ಕ್ಕೂ ಹೆಚ್ಚು ಕೇಂದ್ರಗಳಲ್ಲಿ ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಶುರು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌